Israel Palestine War: ಬಾಯಲ್ಲಿ ಬಿಸ್ಮಿಲ್ಲಾ, ಕೈಯಲ್ಲಿ ರೈಫಲ್‌ ಮತ್ತು ಒತ್ತೆಯಾಳು ಇಸ್ರೇಲಿ ಮಕ್ಕಳು: ಇದು ಹಮಾಸ್‌ ಉಗ್ರರ ಹೊಸ ವಿಡಿಯೋ - Vistara News

ವಿದೇಶ

Israel Palestine War: ಬಾಯಲ್ಲಿ ಬಿಸ್ಮಿಲ್ಲಾ, ಕೈಯಲ್ಲಿ ರೈಫಲ್‌ ಮತ್ತು ಒತ್ತೆಯಾಳು ಇಸ್ರೇಲಿ ಮಕ್ಕಳು: ಇದು ಹಮಾಸ್‌ ಉಗ್ರರ ಹೊಸ ವಿಡಿಯೋ

ಇತ್ತೀಚೆಗೆ ಹಮಾಸ್‌ ಉಗ್ರರು 20 ಇಸ್ರೇಲಿ ಮಕ್ಕಳ ತಲೆ ಕಡಿದಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಈ ವಿಡಿಯೋ ಹೊರಬಂದಿದೆ. ಜಗತ್ತಿನ ಸಹಾನುಭೂತಿ ಗಳಿಸಲು ಈ ವಿಡಿಯೋ ಆಚೆ ಬಿಡಲಾಗಿದೆ ಎಂದು ಊಹಿಸಲಾಗಿದೆ.

VISTARANEWS.COM


on

hamas terrorists with hostatge kids
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೆಲ್‌ ಅವಿವ್:‌ ಹಮಾಸ್‌ ಉಗ್ರರು (Hamas Terrorists) ತಾವು ಒತ್ತೆಯಾಳುಗಳಾಗಿ ಇರಿಸಿಕೊಂಡ ಇಸ್ರೇಲಿ ಮಕ್ಕಳ ಫೂಟೇಜ್‌ ಬಿಡುಗಡೆ ಮಾಡಿದ್ದಾರೆ. ಇದೇ ವಿಡಿಯೋವನ್ನು ಇಸ್ರೇಲ್‌ ಸೈನ್ಯ (Israel military) ಕೂಡ ಶೇರ್‌ ಮಾಡಿಕೊಂಡಿದ್ದು, ʼಇವರೇ ನಾವು ಯಾರ ವಿರುದ್ಧ ಹೋರಾಡುತ್ತಿದ್ದೇವೆಯೋ (Israel Palestine War) ಆ ಹಮಾಸ್‌ ಉಗ್ರರುʼ ಎಂದು ಹೇಳಿದೆ.

ಮೊದಲು ಈ ವಿಡಿಯೋ ಫೂಟೇಜನ್ನು ಹಮಾಸ್‌ ಉಗ್ರರು ಶೇರ್‌ ಮಾಡಿಕೊಂಡಿದ್ದಾರೆ. ಅದರಲ್ಲಿ ಕೈಯಲ್ಲಿ ಲೋಡೆಡ್‌ ರೈಫಲ್‌ ಹಿಡಿದುಕೊಂಡ ಹಮಾಸ್‌ ಉಗ್ರರು, ತಾವು ಒತ್ತೆಯಾಳುಗಳಾಗಿ ಇರಿಸಿಕೊಂಡ ಇಸ್ರೇಲಿ ಮಕ್ಕಳನ್ನು ನೋಡಿಕೊಳ್ಳುತ್ತಿರುವ ದೃಶ್ಯಗಳಿವೆ. ಕೆಲವು ಉಗ್ರರು ಮಗುವನ್ನು ತೊಟ್ಟಿಲ್ಲಿ ತೂಗುತ್ತಿದ್ದರೆ, ಇನ್ನು ಕೆಲವರು ನೀರು ಕುಡಿಸುವುದು, ಹಾಲು ಕುಡಿಸುವುದು, ಎತ್ತಿಕೊಂಡಿರುವುದನ್ನು ಕಾಣಬಹುದು. ಇನ್ನೊಬ್ಬ ಉಗ್ರ ಮಗುವಿನ ಕಾಲಿನ ಗಾಯಕ್ಕೆ ಬ್ಯಾಂಡೇಜ್‌ ಹಾಕುತ್ತಿದ್ದಾನೆ.

ಉಗ್ರನೊಬ್ಬ ಮಗುವಿಗೆ ನೀರು ಕುಡಿಸುವ ಮುನ್ನ ʼಬಿಸ್ಮಿಲ್ಲಾ ಎಂದು ಹೇಳುʼ ಎಂದು ಮಗುವಿಗೆ ಹೇಳುತ್ತಿರುವುದನ್ನೂ ಕಾಣಬಹುದಾಗಿದೆ. ಆದರೆ ವಿಡಿಯೋದಲ್ಲೆಲ್ಲೂ ಈ ಮಕ್ಕಳ ತಂದೆ ತಾಯಿ ಕಾಣಿಸುತ್ತಿಲ್ಲ. ಬಹುಶಃ ಮಕ್ಕಳನ್ನು ಅವರಿಂದ ಪ್ರತ್ಯೇಕಸಲಾಗಿದೆ ಅಥವಾ ಸಾಯಿಸಲಾಗಿದೆ ಎಂದು ಊಹಿಸಲಾಗಿದೆ.

ಇದೇ ವಿಡಿಯೋವನ್ನು ಇಸ್ರೇಲ್‌ ಡಿಫೆನ್ಸ್‌ ಫೋರ್ಸ್‌ ಕೂಡ ಶೇರ್‌ ಮಾಡಿಕೊಂಡಿದೆ. ʼʼನೀವು ಮಕ್ಕಳ ಗಾಯಗಳನ್ನು ಕಾಣಬಹುದು, ಅವರ ಅಳುವನ್ನು ಇಲ್ಲಿ ಕೇಳಬಹುದು. ಭಯದಿಂದ ನಡುಗುತ್ತಿರುವುದನ್ನು ಕಾಣಬಹುದಾಗಿದೆ. ತಮ್ಮದೇ ಮನೆಗಳಲ್ಲಿ ಈ ಮಕ್ಕಳು ಹಮಾಸ್‌ ಉಗ್ರರಿಗೆ ಒತ್ತೆಯಾಳುಗಳಾಗಿದ್ದಾರೆ. ಇವರ ತಂದೆ ತಾಯಿ ಆಚೆ ಕೋಣೆಯಲ್ಲಿ ಶವಗಳಾಗಿದ್ದಾರೆ. ಇವರೇ ನಾವು ಸೋಲಿಸಲು ಶಪಥ ತೊಟ್ಟಿರುವ ಭಯೋತ್ಪಾದಕರುʼʼ ಎಂದು ಇಸ್ರೇಲ್‌ ಮಿಲಿಟರಿ ಟ್ವೀಟ್‌ ಮಾಡಿದೆ.

ಇತ್ತೀಚೆಗೆ ಹಮಾಸ್‌ ಉಗ್ರರು 20 ಇಸ್ರೇಲಿ ಮಕ್ಕಳ ತಲೆ ಕಡಿದಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಈ ವಿಡಿಯೋ ಹೊರಬಂದಿದೆ. ಜಗತ್ತಿನ ಸಹಾನುಭೂತಿ ಗಳಿಸಲು ಈ ವಿಡಿಯೋ ಆಚೆ ಬಿಡಲಾಗಿದೆ ಎಂದು ಊಹಿಸಲಾಗಿದೆ.

ನೂರೈವತ್ತಕ್ಕೂ ಹೆಚ್ಚು ಇಸ್ರೇಲಿ ನಾಗರಿಕರನ್ನು ಹಮಾಸ್‌ ಉಗ್ರರು ಸೆರೆಹಿಡಿದಿಟ್ಟುಕೊಂಡಿದ್ದಾರೆ ಎಂದು ಊಹಿಸಲಾಗಿದೆ. ಗಾಜಾದ ಮೇಲೆ ರಾಕೆಟ್‌ ದಾಳಿ ನಡೆಸಿದರೆ ಒಬ್ಬೊಬ್ಬರನ್ನಾಗಿ ಸಾಯಿಸುವುದಾಗಿ ಇವರು ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಇಸ್ರೇಲ್‌ ಈ ಬೆದರಿಕೆಗೆ ಮಣಿಯದೆ ಮಿಲಿಟರಿ ಆಕ್ಷನ್‌ ಆರಂಭಿಸಿದೆ. ಇಪ್ಪತ್ತನಾಲ್ಕು ಗಂಟೆಯಲ್ಲಿ ಗಾಜಾ ತೆರವು ಮಾಡುವಂತೆ ಇಸ್ರೇಲಿ ನಾಗರಿಕರಿಗೆ ಸೂಚನೆ ನೀಡಿದೆ. ಅಮೆರಿಕದ ಯುದ್ಧ ನೆರವು ಇಸ್ರೇಲನ್ನು ತಲುಪಿದ್ದು, ಯುದ್ಧ ಟ್ಯಾಂಕ್‌ಗಳು ಹಾಗೂ ಕ್ಷಿಪಣಿಗಳು ಗಾಜಾದತ್ತ ಹೊರಟಿವೆ.

ಇದನ್ನೂ ಓದಿ: Israel Palestine War: ಅವಳಿ ಮಕ್ಕಳ ಪ್ರಾಣ ಉಳಿಸಲು ತಮ್ಮ ಜೀವವನ್ನೇ ಬಲಿ ಕೊಟ್ಟ ಇಸ್ರೇಲ್‌ ದಂಪತಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Survival Story: ಇತ್ತೀಚೆಗೆ ತರೆಕಂಡ ಮಲಯಾಳಂನ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರ ಎಲ್ಲರ ಗಮನ ಸೆಳೆದಿದೆ. ತಮಿಳುನಾಡಿನ ಗುಣ ಗುಹೆಯಲ್ಲಿ ಸಿಕ್ಕಿ ಬೀಳುವ ಗೆಳೆಯನೊಬ್ಬನನ್ನು ರಕ್ಷಿಸಲು ಯತ್ನಿಸುವ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರವನ್ನು ನೋಡುವಾಗ 2018ರಲ್ಲಿ ನಡೆದ ಥೈಲ್ಯಾಂಡ್‌ನ ಗುಹೆಯೊಂದಲ್ಲಿ ಸಿಲುಕಿದ್ದ 13 ಮಂದಿಯ ರಕ್ಷಣೆಯ ರೋಚಕ ಕಾರ್ಯಾಚರಣೆ ಕಣ್ಣ ಮುಂದೆ ಬರುತ್ತದೆ. ಅಂದಿನ ಕಾರ್ಯಾಚರಣೆ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Survival Story
Koo

ಬೆಂಗಳೂರು: ಇತ್ತೀಚೆಗೆ ತರೆಕಂಡ ಮಲಯಾಳಂನ ‘ಮಂಜುಮ್ಮೆಲ್ ಬಾಯ್ಸ್’ (Manjummel Boys) ಚಿತ್ರ ದೇಶದ ಗಮನ ಸೆಳೆದಿದೆ. ಬಾಕ್ಸ್‌ ಆಫೀಸ್‌ನಲ್ಲಿ 200 ಕೋಟಿ ರೂ.ಗಿಂತಲೂ ಅಧಿಕ ಕಲೆಕ್ಷನ್‌ ಮಾಡಿದ ಈ ಚಿತ್ರ ಒಟಿಟಿಗೆ ಲಗ್ಗೆ ಇಟ್ಟು ಅಲ್ಲೂ ಸೂಪರ್‌ ಹಿಟ್‌ ಎನಿಸಿಕೊಂಡಿದೆ. ಚಿದಂಬರಂ ನಿರ್ದೇಶನದ ಈ ಸರ್ವೈವಲ್‌ ಡ್ರಾಮ ಸಾವಿನಂಚಿನಿಂದ ಬದುಕುಳಿದ ಯುವಕನೊಬ್ಬನ ಕಥೆ ಹೇಳುತ್ತದೆ. ಆತನನ್ನು ಬದುಕಿಸಲು ಸ್ನೇಹಿತರು ಪಟ್ಟ ಶ್ರಮವನ್ನು ಕಣ್ಣ ಮುಂದೆ ತಂದಿಡುತ್ತದೆ. ಈ ಚಿತ್ರವನ್ನು ನೋಡುತ್ತಿದ್ದರೆ 2018ರಲ್ಲಿ ನಡೆದ ಥೈಲ್ಯಾಂಡ್‌ನ ಗುಹೆಯೊಂದಲ್ಲಿ ಸಿಲುಕಿದ್ದ 13 ಮಂದಿಯ ರಕ್ಷಣೆಯ ರೋಚಕ ಕಾರ್ಯಾಚರಣೆ ಕಣ್ಣ ಮುಂದೆ ಬರುತ್ತದೆ. ವಿಶ್ವಾದ್ಯಂತ ಸುದ್ದಿಯಾಗಿದ್ದ ಆ ಸಾಹಸಗಾಥೆಯ ವಿವರ ಇಲ್ಲಿದೆ (Survival Story).

ಏನಾಗಿತ್ತು?

ಅದು 2018ರ ಜೂನ್‌ 23. ಥಾಯ್ ಫುಟ್ಬಾಲ್‌ ತಂಡ ದಿ ವೈಲ್ಡ್ ಬೋರ್ಸ್‌ನ 12 ಸದಸ್ಯರು (18 ವರ್ಷದೊಳಗಿನ ಮಕ್ಕಳು) 25 ವರ್ಷದ ತಮ್ಮ ತರಬೇತುದಾರ ಏಕಫೋಲ್ ಚಾಂಟಾವೊಂಗ್ ಅವರೊಂದಿಗೆ ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿ ಬೀಳುವುದರೊಂದಿಗೆ ರೋಚಕ ಘಟನೆಗೆ ಮುನ್ನಡಿ ಬರೆಯಲಾಗುತ್ತದೆ. ಬಿರುಸಾದ ಮಳೆಗೆ ಗುಹೆಯೊಳಗೆ ಸಿಕ್ಕಿ ಬೀಳುವ ಈ 13 ಮಂದಿ ಮುಂದಿನ 17 ದಿನ ಬದುಕುಳಿಯಲು ಅಕ್ಷರಶಃ ಹೋರಾಟ ನಡೆಸುತ್ತಾರೆ.

ದುರ್ಗಮ ಪ್ರದೇಶದಲ್ಲಿರುವ ಈ ಗುಹೆ ಮಕ್ಕಳ ನೆಚ್ಚಿನ ತಾಣ. ಜತೆಗೆ ಗುಹೆ ಒಳಗೆಲ್ಲ ಓಡಾಡಿ ಅವರಿಗೆ ಅಭ್ಯಾಸವಾಗಿತ್ತು. ಅಂದು ಕೂಡ ಈ ಗುಂಪು ತಮ್ಮ ಗೆಳೆಯನೊಬ್ಬನ ಹುಟ್ಟುಹಬ್ಬ ಆಚರಿಸಲು ತಿಂಡಿಗಳ ಜತೆಗೆ ಎಂದಿನಂತೆ ಥಾಮ್ ಲುವಾಂಗ್ ಗುಹೆ ಪ್ರವೇಶಿಸಿತು. ಆದರೆ ಬಳಿಕ ಸುರಿದ ಭೀಕರ ಮಳೆ ಅವರ ಜೀವನದ ಗತಿಯನ್ನೇ ಬದಲಾಯಿಸಲಿದೆ ಎಂದು ಆ ವೇಳೆಗೆ ಅವರಿಗೆ ತಿಳಿದಿರಲಿಲ್ಲ.

ರಣ ಭೀಕರ ಮಳೆ

ಮಕ್ಕಳು ಗುಹೆ ಒಳಗೆ ಪ್ರವೇಶಿಸುತ್ತಿದ್ದಂತೆ ಆರಂಭವಾಯಿತು ರಣ ಭೀಕರ ಮಳೆ. ಎಲ್ಲೆಡೆ ನೀರು ನುಗ್ಗಿ ಬರತೊಡಗಿತು. ಇದೇ ವೇಳೆ ಮಕ್ಕಳನ್ನು ಕಾಣದೆ ಪೋಷಕರು ಗಾಬರಿಗೆ ಒಳಗಾದರು. ಕೂಡಲೇ ಮಕ್ಕಳ ಫುಟ್ಬಾಲ್‌ ಕೋಚ್‌ ಏಕಫೋಲ್ ಚಾಂಟಾವೊಂಗ್ ಮಕ್ಕಳನ್ನು ಹುಡುಕಿಕೊಂಡು ಹೊರಟರು. ಮಕ್ಕಳು ಗುಹೆ ಒಳಗೆ ಇರುವುದು ಹೊರಗೆ ನಿಲ್ಲಿಸಿದ್ದ ಸೈಕಲ್‌ ಮೂಲಕ ಅವರಿಗೆ ಗೊತ್ತಾಯಿತು. ಅದಾಗಲೇ ಗುಹೆ ಒಳಗೆ ನೆರೆ ನುಗ್ಗಿತ್ತು. ಸಿಕ್ಕಿ ಬಿದ್ದಿರುವ ಮಕ್ಕಳನ್ನು ಹೇಗಾದರೂ ಮಾಡಿ ಹೊರ ಕರೆತರಬೇಕೆಂದು ಏಕಫೋಲ್ ಚಾಂಟಾವೊಂಗ್ ಕೂಡ ಗುಹೆ ಒಳ ಹೊಕ್ಕರು. ಆದರೆ ಬಳಿಕ ಅವರೂ ಅಲ್ಲಿ ಬಂಧಿಯಾದರು. ಯಾವ ಪರಿ ಪ್ರವಾಹ ಬಂದಿತ್ತು ಎಂದರೆ ಒಬ್ಬರಿಗೂ ಹೊರ ಬರಲು ಸಾಧ್ಯವಾಗಲಿಲ್ಲ. ಬಳಿಕ ಅವರನ್ನು ರಕ್ಷಿಸಲು ಕೈಗೊಂಡ ರೋಚಕ ಕಾರ್ಯಾಚರಣೆಗೆ ಇಡೀ ಜಗತ್ತೇ ಸಾಕ್ಷಿಯಾಯ್ತು. ಈ ಕಾರ್ಯಾಚರಣೆಗೆ ಭಾರತವೂ ಕೈ ಜೋಡಿಸಿತ್ತು. ಅಲ್ಲಿ ಸಿಲುಕಿಕೊಂಡಿರುವ ಮಕ್ಕಳು ಸೇರಿದಂತೆ ಕೋಚ್‌ನ ಸುರಕ್ಷತೆಗಾಗಿ ಕೋಟ್ಯಂತರ ಮಂದಿ ಪ್ರಾರ್ಥಿಸಿದ್ದರು.

9 ದಿನಗಳ ಬಳಿಕ…

ಈ ಫುಟ್ಬಾಲ್‌ ತಂಡ ಗುಹೆಯೊಳಗೆ ಸಿಕ್ಕಿಬಿದ್ದ 9 ದಿನಗಳ ಕಾಲ ಅವರನ್ನು ಸಂಪರ್ಕಿಸಲು ರಕ್ಷಣಾ ತಂಡಕ್ಕೆ ಸಾಧ್ಯವಾಗಲಿಲ್ಲ. ಬರ್ತ್‌ಡೇ ಪಾರ್ಟಿಗಾಗಿ ತಂದಿದ್ದ ತಿಂಡಿ, ಹನಿ ನೀರು ಮತ್ತು ಧ್ಯಾನ ಅವರ ಕುಟುಕು ಜೀವವನ್ನು ಉಳಿಸಿತ್ತು. ಜತೆಗೆ ಗುಹೆಯ ಮೇಲಿನಿಂತ ತೊಟ್ಟಿಕ್ಕುವ ನೀರೇ ಅವರಿಗೆ ಅಮೃತ ಸಮಾನವಾಗಿತ್ತು. ವಿಶೇಷ ಎಂದರೆ ಮಕ್ಕಳಿಗೆ ತಿಂಡಿ ಹಂಚಿದ್ದ ಕೋಚ್‌ ಅವರಿಗೆ ಕಡಿಮೆಯಾಗಬಾರದು ಎನ್ನುವ ಉದ್ದೇಶದಿಂದ ತಾವು ಸೇವಿಸಿರಲಿಲ್ಲ.

ಕೊನೆಗೂ ಮೂಡಿತು ಭರವಸೆಯ ಬೆಳಕು

ನೂರಾರು ಸ್ವಯಂ ಕಾರ್ಯಕರ್ತರು ಮತ್ತು ಅಧಿಕಾರಿಗಳು ವಿವಿಧ ದೇಶಗಳಿಂದ ನೆರವಿಗಾಗಿ ಧಾವಿಸಿದ್ದರು. ಕೊನೆಗೆ ಘಟನೆ ನಡೆದು 9 ದಿನಗಳಾದ ಬಳಿಕ ಜುಲೈ 2ರಂದು ಬ್ರಿಟನ್‌ನ ಇಬ್ಬರು ಮುಳುಗುತಜ್ಞರು ಕತ್ತಲನ್ನು ಸೀಳಿಕೊಂಡು ಗುಹೆಯ ಮುಂದೆ ಸಾಗಿದ್ದರು. ಅವರ ಹಾಯಿಸಿದ ಬೆಳಕಿಗೆ ಕೊನೆಗೂ ಕೋಚ್ ಮತ್ತು ಬಾಲಕರು ಕಾಣಿಸಿದ್ದರು. ತಿರುವು ಮುರುವುಗಳಿಂದ ಕೂಡಿದ್ದ, ಸಪೂರ ಗುಹೆಯಲ್ಲಿ ಸುಮಾರು 4 ಗಂಟೆಗಳ ಕಾಲ ಈಜಿದ ಬಳಿಕ ರಕ್ಷಣಾ ತಂಡಕ್ಕೆ ಮಕ್ಕಳು ಕಾಣಿಸಿದ್ದರು. ಅವರು ಪತ್ತೆಯಾಗಿದ್ದರೂ ರಕ್ಷಣೆ ಸುಲಭದ್ದಾಗಿರಲಿಲ್ಲ. ಗುಹೆಯ ಬಾಗಿಲಿನಿಂದ ಸುಮಾರು 2 ಮೈಲಿ ದೂರದಲ್ಲಿರುವ ಅವರನ್ನು ಹೊರಗೆ ಕರೆತಲು ಮತ್ತೂ 8 ದಿನ ಹಿಡಿಯಿತು ಎಂದರೆ ಅಲ್ಲಿನ ಪರಿಸ್ಥಿತಿಯನ್ನೊಮ್ಮೆ ಊಹಿಸಿ.

ಬಳಿಕ ಅವರಿಗೆ ಆಮ್ಲಜನಕ ಸರಬರಾಜು ಮಾಡಲು ಆರಂಭಿಸಲಾಯಿತು. ಇದರ ಜತೆಗೆ ಕಾರ್ಯಾಚರಣೆ ತಂಡ ಗುಹೆಯಲ್ಲಿ ಸಂಗ್ರಹವಾಗಿದ್ದ ಅಪಾರ ಪ್ರಮಾಣದ ನೀರನ್ನು ಯಂತ್ರ ಬಳಸಿ ಖಾಲಿ ಮಾಡಲು ಮುಂದಾಯಿತು. ಹೀಗೆ ಸತತ ಪ್ರಯತ್ನದ ಬಳಿಕ ಕೊನೆಗೂ ಜುಲೈ 10ರಂದು ಸುಮಾರು 17 ದಿನಗಳ ಬಳಿಕ 13 ಮಂದಿ ಸುರಕ್ಷಿತರಾಗಿ ಬಂಧಮುಕ್ತರಾದಾಗ ಇಡೀ ಜಗತ್ತೇ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು. ನೋವಿನ ವಿಚಾರ ಎಂದರೆ ಕಾರ್ಯಾಚರಣೆಯ ತಂಡದಲ್ಲಿದ್ದ ಇಬ್ಬರು ಮೃತಪಟ್ಟಿದ್ದರು.

ಭಾರತದ ನೆರವು

ಗುಹೆಯಲ್ಲಿದ್ದ ನೀರನ್ನು ಖಾಲಿ ಮಾಡುವ ಕಾರ್ಯದಲ್ಲಿ ಭಾರತವು ಗಣನೀಯ ಕೊಡುಗೆ ನೀಡಿದೆ ಎನ್ನುವುದು ನಾವೆಲ್ಲ ಹೆಮ್ಮೆ ಪಡುವ ವಿಚಾರ. ಹೌದು, ಗುಹೆಯೊಳಗೆ ತುಂಬಿದ್ದ ನೀರನ್ನು ಹೊರ ಹಾಕಲು ಥಾಯ್‌ ಸರ್ಕಾರ ಪೂನಾದ ಕಿರ್ಲೋಸ್ಕರ್‌ ಬ್ರದರ್ಸ್‌ ಕಂಪನಿಯ ಪರಿಣಿತರ ಸಹಾಯ ಪಡೆದುಕೊಂಡಿತ್ತು. ಭಾರತೀಯ ರಾಯಭಾರ ಕಚೇರಿಯ ಶಿಫಾರಸ್ಸಿನ ಮೇರೆಗೆ ಕಿರ್ಲೋಸ್ಕರ್‌ ಕಂಪನಿಯ ಭಾರತ, ಥಾಯ್ಲೆಂಡ್‌ ಮತ್ತು ಇಂಗ್ಲೆಂಡ್‌ನಲ್ಲಿರುವ ಪರಿಣಿತರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಡಾಕ್ಯುಮೆಂಟ್ರಿ

ಈ ಗ್ರೇಟ್‌ ಸರ್ವೈವಲ್‌ ಘಟನೆಯ ಕುರಿತಾಗಿ ಡಾಕ್ಯುಮೆಂಟ್ರಿ ತಯಾರಾಗಿದೆ. ʼದಿ ಟ್ರ್ಯಾಪ್ಡ್‌ 13: ಹೌ ವಿ ಸರ್ವೈವ್‌ಡ್‌ ದಿ ಥೈ ಕೇವ್‌ʼ (The Trapped 13: How We Survived The Thai Cave) ಶೀರ್ಷಿಕೆಯ ಈ ಡಾಕ್ಯುಮೆಂಟ್ರಿ ನೆಟ್‌ಫ್ಲಿಕ್ಸ್‌ನಲ್ಲಿ ಲಭ್ಯ.

ಇದನ್ನೂ ಓದಿ: Success Story:‌ ಕೆಜಿಎಫ್‌ನ ‘ರಾಕಿ’ ಹಾಗೆ ಸ್ವಂತ ಹೆಲಿಕಾಪ್ಟರ್‌ನಲ್ಲಿ ತಿರುಗಾಡುವ ರೈತ; ಯಾರಿವರು?

Continue Reading

ವಿದೇಶ

Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

Ebrahim Raisi:ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಹಾಗೂ ಅವರ ಎಂಟು ಜನ ಅಧಿಕಾರಿಗಳನ್ನು ಬಲಿಪಡೆದ ಭೀಕರ ಹೆಲಿಕಾಪ್ಟರ್‌ ದುರಂತ (Helicopter Crash)ಕ್ಕೂ ಮುಂಚಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Video Viral) ಆಗಿದೆ. ಹೆಲಿಕಾಪ್ಟರ್‌ ಹಾರಾಟ ಶುರು ಮಾಡುತ್ತಿರುವ ವಿಡಿಯೋ ಸ್ಥಳೀಯ ವಾಹಿನಿಯಲ್ಲಿ ಬಿತ್ತರವಾಗಿತ್ತು. ಇದೀಗ ಈ ವಿಡಿಯೋ ನೋಡಿ ಇರಾನ್‌ ಜನತೆ ಕಣ್ಣೀರು ಮಿಡಿದಿದ್ದಾರೆ. ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿತ್ತು.

ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

ಇದೀಗ ಈ ದುರ್ಘಟನೆಗೂ ಮುನ್ನ ಚಿತ್ರೀಕರಣಗೊಂಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ರೈಸಿ ತನ್ನ ಅಧಿಕಾರಿಗಳ ಜೊತೆ ಕುಳಿತು ಮಾತುಕತೆ ನಡೆಸುತ್ತಿರುವುದನ್ನು ಕಾನಬಹುದಾಗಿದೆ. ಇದಾದ ಕೇವಲ 30ನಿಮಿಷಗಳ ನಂತರ ವಿಮಾನ ಸಂಪರ್ಕ ಕಳೆದುಕೊಂಡಿತ್ತು. ಸುಮಾರು 16ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ವಿಮಾನದ ಅವಶೇಷಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ರೈಸಿ ಮತ್ತು ಅವರ ಜೊತೆಗಿದ್ದವರು ಮೃತಪಟ್ಟಿರುವ ಬಗ್ಗೆ ಇರಾನ್‌ ದೃಢಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ರೈಸಿ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ ಅಧ್ಯಕ್ಷ ಡಾ ಸಯ್ಯದ್ ಇಬ್ರಾಹಿಂ ರೈಸಿ ಅವರ ದುರಂತಮಯ ನಿಧನದಿಂದ ತೀವ್ರ ದುಃಖ ಹಾಗೂ ಆಘಾತ ಉಂಟಾಗಿದೆ. ಭಾರತ- ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ಕೊಡುಗೆಯನ್ನು ಸದಾ ನೆನಪಿಸಿಕೊಳ್ಳಲಾಗುತ್ತದೆ. ಅವರ ಕುಟುಂಬ ಹಾಗೂ ಇರಾನ್‌ನ ಜನತೆಗೆ ನನ್ನ ಹೃದಯಪೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಭಾರತವು ಇರಾನ್ ಜತೆಗೆ ಇದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ವಿದೇಶ

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ ಸೇರಿ ಇತರರೂ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ ಸೇರಿ ಇತರರೂ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಕ್ಷಣಾ ತಂಡ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

“ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಕೂಡ ಇದ್ದರು. ಮಂಜು ಕವಿದ ವಾತಾವರಣದ ಕಾರಣ ಪೈಲೆಟ್ ತುರ್ತು ಲ್ಯಾಂಡಿಂಗ್ ಮಾಡಲು ಮುಂದಾಗಿದ್ದರು. ಆದರೆ ಲ್ಯಾಂಡಿಂಗ್ ವೇಳೆಯೇ ಹೆಲಿಕಾಪ್ಟರ್ ಅಪಘಾತವಾಗಿದೆ ಎಂದು ಇರಾನ್ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ. ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಮತ್ತು ಇತರ ಗಣ್ಯರು ಅಜರ್‌ಬೈಜಾನ್‌ಗೆ ತೆರಳಿದ್ದರು. 

ಕವಿದ ದಟ್ಟ ಮಂಜು ಮತ್ತು ಹವಾಮಾನ ವೈಪರೀತ್ಯ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ಸದ್ಯ ಅದರ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ರೆಡ್ ಕ್ರೆಸೆಂಟ್ ಸದ್ಯದಲ್ಲೇ ವಿವರವಾದ ಮಾಹಿತಿಯನ್ನು ನೀಡಲಿದೆ ಎಂದು ಹೇಳಿದೆ. ಸದ್ಯ ಇದು ಅಪಘಾತವೇ, ವಿಧ್ವಂಸಕ ಕೃತ್ಯವೇ ಎನ್ನುವ ಅನುಮಾನ ಮೂಡಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದರು. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದರು. ಜತೆಗೆ ವಿಶ್ವದ ನಾನಾ ದೇಶಗಳ ನಾಯಕರೂ ರೈಸಿ ಅವರು ಸುರಕ್ಷಿರತಾಗಿ ಪತ್ತೆಯಾಗಲಿ ಎಂದು ಪ್ರಾರ್ಥಿಸಿದ್ದರು.

ಇದನ್ನೂ ಓದಿ: Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

Continue Reading

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Ebrahim Raisi:ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಹೆಲಿಕಾಪ್ಟರ್‌ ಪತನಗೊಂಡ ಸ್ಥಳವನ್ನು ರಕ್ಷಣಾ ಕಾರ್ಯಾಚರಣೆ ಪಡೆ ಪತ್ತೆ ಹಚ್ಚಿದೆ. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ:Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

Continue Reading
Advertisement
Liquid Nitrogen Paan
ದೇಶ2 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ9 mins ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ9 mins ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ11 mins ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ23 mins ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ31 mins ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ34 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Survival Story
ವಿದೇಶ45 mins ago

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Lok Sabha Election 2024
ದೇಶ45 mins ago

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

ಲಕ್ಕೂರು ಆನಂದ lakkuru Anand
ಶ್ರದ್ಧಾಂಜಲಿ1 hour ago

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ34 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ22 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ23 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌