Israel Palestine War:‌ ದಾಳಿ ಮಾಡಿದವರೇ ದಿವಾಳಿ; ಗಾಜಾ ಇಸ್ರೇಲ್‌ ವಶಕ್ಕೆ, 3 ಸಾವಿರ ಜನ ಸಾವು - Vistara News

ಪ್ರಮುಖ ಸುದ್ದಿ

Israel Palestine War:‌ ದಾಳಿ ಮಾಡಿದವರೇ ದಿವಾಳಿ; ಗಾಜಾ ಇಸ್ರೇಲ್‌ ವಶಕ್ಕೆ, 3 ಸಾವಿರ ಜನ ಸಾವು

Israel Palestine War: ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನ ಹಮಾಸ್‌ ಉಗ್ರರ ನಡುವಿನ ಸಮರ ತಾರಕಕ್ಕೇರಿದೆ. ಇದರ ಬೆನ್ನಲ್ಲೇ, ನಾವು ಗಾಜಾಪಟ್ಟಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಇಸ್ರೇಲ್‌ ಘೋಷಿಸಿದೆ.

VISTARANEWS.COM


on

Israel Palestine War
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರವು ದಿನೇದಿನೆ (Israel Palestine War) ಕಾವೇರುತ್ತಿದೆ. ಇಸ್ರೇಲ್‌ ಮೇಲೆ ಪ್ಯಾಲೆಸ್ತೀನ್‌ ಉಗ್ರರು, ಗಾಜಾಪಟ್ಟಿ ಮೇಲೆ ಇಸ್ರೇಲ್‌ ಸೇನೆಯು ನಿರಂತರವಾಗಿ ದಾಳಿ ನಡೆಸುತ್ತಿದೆ. ಹಮಾಸ್‌ ಉಗ್ರರನ್ನು (Hamas Terrorists) ನಿರ್ನಾಮ ಮಾಡಿಯೇ ತೀರುತ್ತೇವೆ ಎಂದು ಪಣ ತೊಟ್ಟಿರುವ ಇಸ್ರೇಲ್‌ ಈಗ ಗಾಜಾಪಟ್ಟಿಯನ್ನು ನಾವು ವಶಪಡಿಸಿಕೊಂಡಿದ್ದೇವೆ ಎಂಬುದಾಗಿ ಘೋಷಿಸಿದೆ.

ರಾತ್ರೋರಾತ್ರಿ ಸುಮಾರು 200 ಕಟ್ಟಡಗಳನ್ನು ಗುರಿಯಾಗಿಸಿ ಇಸ್ರೇಲ್‌ನ ಯುದ್ಧವಿಮಾನಗಳು ಗಾಜಾಪಟ್ಟಿ ಮೇಲೆ ದಾಳಿ ನಡೆಸಿದ್ದು, ಇಡೀ ಗಾಜಾ ನಮ್ಮ ವಶವಾಗಿದೆ ಎಂದು ಇಸ್ರೇಲ್‌ ತಿಳಿಸಿದೆ. ಹಮಾಸ್‌ ಉಗ್ರರ ಕಟ್ಟಡಗಳು ಸೇರಿ ಪ್ರಮುಖ ಕಟ್ಟಡಗಳನ್ನು ಇಸ್ರೇಲೆ ಧರೆಗುರುಳಿಸಿದೆ. ಮತ್ತೊಂದೆಡೆ, ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಡೆಸಿದ ದಾಳಿಗೆ 1.8 ಲಕ್ಷ ನಾಗರಿಕರು ನಿರಾಶ್ರಿತರಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದು ಇಸ್ರೇಲ್‌ ದಾಳಿಯ ತೀವ್ರತೆಗೆ ಸಾಕ್ಷಿಯಾಗಿದೆ.

ಇಸ್ರೇಲ್‌ ದಾಳಿ ಬಳಿಕ ಗಾಜಾ ಸ್ಥಿತಿ

3 ಸಾವಿರ ದಾಟಿದ ಸಾವಿನ ಸಂಖ್ಯೆ

ಮತ್ತೊಂದೆಡೆ, ಎರಡೂ ದೇಶಗಳಲ್ಲಿ ನಡೆಯುತ್ತಿರುವ ದಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ 3 ಸಾವಿರ ದಾಟಿದೆ ಎಂದು ತಿಳಿದುಬಂದಿದೆ. ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿರುವ ಕಾರಣ ಸಾವಿನ ಸಂಖ್ಯೆ ದಿಢೀರ್‌ ಏರಿಕೆಯಾಗಿದೆ ಎನ್ನಲಾಗಿದೆ. ಇಸ್ರೇಲ್‌ನಲ್ಲೂ ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. “ನಾವು ಯುದ್ಧ ಆರಂಭಿಸಿಲ್ಲ. ಆದರೆ ಮುಗಿಸುತ್ತೇವೆ” ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಈಗಾಗಲೇ ಘೋಷಿಸಿದ್ದಾರೆ.

ಇದನ್ನೂ ಓದಿ: ಮೋದಿಗೆ ಇಸ್ರೇಲ್ ಪಿಎಂ ಫೋನ್ ಕಾಲ್!, ಇಸ್ರೇಲ್‌ಗೇ ಬೆಂಬಲ ಎಂದ ಭಾರತ

ಏತನ್ಮಧ್ಯೆಯೇ, ಇಸ್ರೇಲ್‌ಗೆ ಭಾರತ ಬೆಂಬಲ ಘೋಷಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ, ಇಸ್ರೇಲ್ ಮತ್ತು ಹಮಾಸ್ ಮಧ್ಯೆ ನಡೆಯುತ್ತಿರುವ ಕಾಳಗದ ಕುರಿತು ವಿಸ್ತಾರ ಮಾಹಿತಿ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹಂಚಿಕೊಂಡಿದ್ದಾರೆ. ತಮ್ಮ ದೂರವಾಣಿ ಸಂಭಾಷಣೆ ವೇಳೆ, ಈ ಸಂಕಷ್ಟದ ಸ್ಥಿತಿಯ್ಲಲಿ ಭಾರತವು ಇಸ್ರೇಲ್ ಜತೆಗೆ ನಿಲ್ಲಲಿದೆ. ಭಾರತವು ಎಲ್ಲ ರೀತಿಯ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಅವರಿಗೆ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರವೂ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನಿವಾರ್ಯ ಕಾರಣದಿಂದ ಇಂದು ನಿಮ್ಮ ಸಮಯ ವ್ಯರ್ಥವಾಗುತ್ತದೆ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜತೆಗೆ ವಾದಕ್ಕೆ ಇಳಿಯಬಹುದು. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲವಿರಲಿದೆ. ಕನ್ಯಾ ರಾಶಿಯವರು ಹತಾಶೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಭರವಸೆಯ ಅವಕಾಶ ಇರಲಿದೆ. ಧನಸ್ಸು ರಾಶಿಯವರು ಒತ್ತಡದ ವಾತಾವರಣದಿಂದ ಹೊರ ಬರಲು ಧ್ಯಾನ, ಯೋಗ ಮಾಡಿ. ಇಂದು ವ್ಯಾಪಾರದಲ್ಲಿ ಲಾಭ ಗಳಿಸಲು ನಿಮಗೆ ಸಲಹೆ ನೀಡಬಹುದು. ನೀವು ಈ ಸಲಹೆಯನ್ನು ಅನುಸರಿಸಿದರೆ, ನೀವು ಖಂಡಿತವಾಗಿಯೂ ಹಣವನ್ನು ಗಳಿಸುವಿರಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಪಂಚಮಿ 26:03 ವಾರ: ಭಾನುವಾರ
ನಕ್ಷತ್ರ: ಆರಿದ್ರಾ 10:25 ಯೋಗ: ಧೃತಿ 08:32
ಕರಣ: ಭವ 13:57
ದಿನದ ವಿಶೇಷ: ಶಂಕರ ಜಯಂತಿ, ರಾಮಾನುಜಾಚಾರ್ಯ ಜಯಂತಿ, ಶೃಂಗೇರಿ ಜಯಂತೋತ್ಸವ, ಉಜ್ಜಿನಿ ರಥೋತ್ಸವ

ಸೂರ್ಯೋದಯ : 05:55   ಸೂರ್ಯಾಸ್ತ : 06:37

ರಾಹುಕಾಲ : ಸಂಜೆ 05:02 ರಿಂದ 06:37
ಗುಳಿಕಕಾಲ: ಮಧ್ಯಾಹ್ನ 03:27 ರಿಂದ 05:02
ಯಮಗಂಡಕಾಲ: ಮಧ್ಯಾಹ್ನ 12:16 ರಿಂದ 01:51

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಿವಾರ್ಯ ಕಾರಣದಿಂದ ಇಂದು ನಿಮ್ಮ ಸಮಯ ವ್ಯರ್ಥವಾಗುತ್ತದೆ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜತೆಗೆ ವಾದಕ್ಕೆ ಇಳಿಯಬಹುದು. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲವಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧರಾಗಿ, ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ವ್ಯಾಪಾರವನ್ನು ಬಲಪಡಿಸಲು ಇಂದು ನೀವು ಯಾವುದೇ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬಹುದು. ಇದಕ್ಕಾಗಿ ನಿಮ್ಮ ಆಪ್ತರು ನಿಮಗೆ ಆರ್ಥಿಕವಾಗಿ ಸಹಾಯ ಮಾಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಭರವಸೆ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ. ಯಾವುದೇ ಬದ್ಧತೆಗೊಳಗಾಗುವ ಮುನ್ನ ಸಾಧಕ ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಮಕ್ಕಳ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಆಗಲಿದೆ. ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹೇರುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಹಣದ ಅಗತ್ಯವಿರುತ್ತದೆ, ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ:ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯನ್ನು ಹೊಂದುವ ಸಾಧ್ಯತೆ ಇದೆ. ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಹತಾಶೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಭರವಸೆಯ ಅವಕಾಶ ಇರಲಿದೆ. ಆರ್ಥಿಕ ಪ್ರಗತಿ ಸಾಧರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಅನಿವಾರ್ಯ ಕಾರಣದಿಂದ ಖರ್ಚು ಹೆಚ್ಚಾಗಲಿದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಗಾತಿಯ ವರ್ತನೆ ನಿಮ್ಮ ವೃತ್ತಿಪರ ಸಂಬಂಧಗಳಿಗೆ ತೊಂದರೆ ಉಂಟು ಮಾಡಬಹುದು. ಉದ್ಯೋಗಿಗಳಿಗೆ ಒತ್ತಡದ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ:ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ನಿಜವಾಗಿಯೂ ಅದ್ಭುತ ಮತ್ತು ಸೃಜನಶೀಲವಾಗಿರುವಂತಹ ಆಲೋಚನೆಗಳು ಬರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಒತ್ತಡದ ವಾತಾವರಣದಿಂದ ಹೊರ ಬರಲು ಧ್ಯಾನ, ಯೋಗ ಮಾಡಿ. ಇಂದು ವ್ಯಾಪಾರದಲ್ಲಿ ಲಾಭ ಗಳಿಸಲು ನಿಮಗೆ ಸಲಹೆ ನೀಡಬಹುದು. ನೀವು ಈ ಸಲಹೆಯನ್ನು ಅನುಸರಿಸಿದರೆ, ನೀವು ಖಂಡಿತವಾಗಿಯೂ ಹಣವನ್ನು ಗಳಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ವಿರಾಮದ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ:ಧಾರ್ಮಿಕ ಭಾವನೆ ಉದ್ಭವಿಸಿ, ದೈವಿಕ ಜ್ಞಾನವನ್ನು ಪಡೆಯಲು ನೀವು ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಂತೆ ಮಾಡುತ್ತವೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಹಣದಿಂದ ಲಾಭ ಪಡೆಯಬಹುದು. ಉದ್ಯೋಗಿಗಳಿಗೆ ಹೊಸ ಉತ್ಸಾಹ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬರಲಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

IPL 2024: ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ ತಂಡ ಮೊಟಕುಗೊಳಿಸಲಾದ 16 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 157 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ 16 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 139 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಕೋಲ್ಕೊತಾ: ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ನ 17ನೇ ಆವೃತ್ತಿಯ (IPL 2024) 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ 18 ರನ್​ಗಳ ವಿಜಯ ಸಾಧಿಸಿತು. ಇದು ಕೆಕೆಆರ್ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿರುವ 12 ಪಂದ್ಯಗಳಲ್ಲಿ 9ನೇ ಗೆಲುವಾಗಿದೆ. ಇದರೊಂದಿಗೆ ಕೆಕೆಆರ್​ ಬಳಗ ಟೂರ್ನಿಯ ಪ್ಲೇಆಫ್ ಹಂತವನ್ನು ಪ್ರವೇಶಿಸಿತು. ಇದೇ ವೇಳೆ ಮುಂಬೈ ತಂಡ ಆಡಿರುವ 13ರಲ್ಲಿ ಕೇವಲ ನಾಲ್ಕು ವಿಜಯ ಸಾಧಿಸಿ 8 ಅಂಕಗಳನ್ನು ಹೊಂದಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ ಉಳಿದಿದೆ.

ಈ ಪಂದ್ಯವು ಮಳೆಯಿಂದಾಗಿ 16 ಓವರ್​ಗಳಿಗೆ ಮೊಟಕುಗೊಂಡಿತ್ತು. ಆದಾಗ್ಯೂ ಜಿದ್ದಾಜಿದ್ದಿನ ಹೋರಾಟದಲ್ಲಿ ಮುಂಬೈ ತಂಡ ಸೋಲಿನ ಸುಳಿಗೆ ಸಿಲುಕಿತು. ಮತ್ತೊಂದು ಬಾರಿ ಅಮೋಘ ಪ್ರದರ್ಶನ ನೀಡಿದ ಕೆಕೆಆರ್ ತಂಡ ಗೆಲುವನ್ನು ತನ್ನದಾಗಿಸಿಕೊಂಡಿತು. ಮುಂಬೈ ತಂಡ ಕೊನೆ ಎರಡು ಪಂದ್ಯಗಳನ್ನು ಗೆದ್ದು ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಅಂದಾಜಿಸಿದ್ದರೂ ಅದಕ್ಕೆ ಕೋಲ್ಕೊತಾ ಮೂಲದ ಸಂಘಟಿತ ತಂಡ ಅವಕಾಶ ನೀಡಲಿಲ್ಲ.

ಇಲ್ಲಿನ ವಿಶ್ವ ವಿಖ್ಯಾತಿಯ ಈಡನ್ ಗಾರ್ಡನ್ಸ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ ತಂಡ ಮೊಟಕುಗೊಳಿಸಲಾದ 16 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 157 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ 16 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 139 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಕೆಕೆಅರ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ಫಿಲ್​ ಸಾಲ್ಟ್​​ 6 ರನ್​ಗೆ ಔಟಾದರೆ, ಸುನೀಲ್ ನರೈನ್ ಬುಮ್ರಾ ಎಸೆಕ್ಕೆ ಕ್ಲೀನ್ ಬೌಲ್ಡ್ ಆದರು. ನಂತರದಲ್ಲಿ ವೆಂಕಟೇಶ್​ ಅಯ್ಯರ್ 21 ಎಸೆತಕ್ಕೆ 42 ರನ್ ಬಾರಿಸಿ ತಂಡಕ್ಕೆ ಮುನ್ನಡೆ ಕಲ್ಪಿಸಿದರು. ಆದರೆ, ನಾಯಕ ಶ್ರೇಯಸ್​ ಅಯ್ಯರ್​​ ಸುಲಭವಾಗಿ ಬೌಲ್ಡ್ ಆದರು. ನಂತರದಲ್ಲಿ ನಿತೀಶ್ ರಾಣಾ (33 ರನ್​) ಹಾಗೂ ಆ್ಯಂಡ್ರೆ ರಸೆಲ್​ (24 ರನ್​) ತಂಡವನ್ನು ಮೇಲಕ್ಕೆತ್ತಲು ಯತ್ನಿಸಿದರು. ರಿಂಕು ಸಿಂಗ್​ ಕೂಡ 12 ಎಸೆತಕ್ಕೆ 20 ರನ್ ಬಾರಿಸಿದರು. ರಮಣ್​ದೀಪ್​ ಸಿಂಗ್​ 17 ರನ್ ಬಾರಿಸುವ ಮೂಲಕ ಸ್ಪರ್ಧಾತ್ಮಕ ಮೊತ್ತ ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು.

ಇದನ್ನೂ ಓದಿ: Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಗುರಿ ಬೆನ್ನಟ್ಟಿದ ಮುಂಬೈ ತಂಡ ಇಶಾನ್ ಕಿಶನ್​ ಅವರ 40 ರನ್ ಮೂಲಕ ಉತ್ತಮ ಆರಂಭ ಪಡೆಯಿತು. ಆದರೆ, ರೋಹಿತ್ ಶರ್ಮಾ 19 ರನ್ ಬಾರಿಸಿ ಔಟಾದರು. ಸೂರ್ಯಕುಮಾರ್ ಯಾದವ್​ ಕೂಡ 11 ರನ್​ಗಳಿಗೆ ಸೀಮಿತಗೊಂಡರು. ಬಳಿಕ ಮುಂಬೈ ಇಂಡಿಯನ್ಸ್ ಪತನ ಅರಂಭಗೊಂಡಿತು. ನಾಯಕ ಹಾರ್ದಿಕ್ ಪಾಂಡ್ಯ 2 ರನ್ ಬಾರಿಸಿದರೆ ಟಿಮ್​ ಡೇವಿಡ್​ ಶೂನ್ಯಕ್ಕೆ ಔಟಾದರು. ನೇಹಲ್ ವದೇರಾ ಕೂಡ 3 ರನ್​ನೊಂದಿಗೆ ಮರಳಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ತಿಲಕ್ ವರ್ಮಾ 32 ರನ್ ಬಾರಿಸಿದರೆ ನಮನ್ ಧಿರ್ 6 ಎಸೆತಕ್ಕೆ 17 ರನ್ ಬಾರಿಸಿ ಪಂದ್ಯವನ್ನು ಜೀವಂತವಾಗಿಡಲು ಯತ್ನಿಸಿದರು. ಅದರೆ, ಅವರ ಪ್ರಯತ್ನಗಳು ಕೂಡಲಿಲ್ಲ. ಕೊನೇ ಓವರ್​ನಲ್ಲಿ ಹರ್ಷಿತ್ ರಾಣಾ ಎರಡು ವಿಕೆಟ್ ಪಡೆಯುವ ಮೂಲಕ ಕೆಕೆಆರ್ ತಂಡಕ್ಕೆ ಗೆಲವು ತಂದುಕೊಟ್ಟರು.

Continue Reading

ಪ್ರಮುಖ ಸುದ್ದಿ

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

Jay Shah: ದುಲೀಪ್ ಟ್ರೋಫಿ ತಂಡಗಳು ಮತ್ತು ಮಹಿಳಾ ಅಂತರ-ವಲಯ ಪಂದ್ಯಾವಳಿಗಳು ಸೇರಿದಂತೆ ತಂಡದ ಆಯ್ಕೆಯಲ್ಲಿ ರಾಷ್ಟ್ರೀಯ ಆಯ್ಕೆದಾರರ ಹೆಚ್ಚಿನ ಪಾಲ್ಗೊಳ್ಳುವಿಕೆಯ ಯೋಜನೆಗಳನ್ನು ಜಯ್ ಶಾ ಗಮಿನಿದ್ದಾರೆ. ಈ ಕ್ರಮವು ಪ್ರತಿಭೆ ಗುರುತಿಸುವಿಕೆ ಮತ್ತು ತಂಡದ ಸಂಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ವಲಯ ಆಯ್ಕೆ ಸಮಿತಿಗಳಿಂದ ನಿರ್ಗಮನ ಸೂಚಿಸುತ್ತದೆ.

VISTARANEWS.COM


on

jay Shah
Koo

ನವದೆಹಲಿ: ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಋತುವಿನಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರು ಆಟಗಾರರ ಕಲ್ಯಾಣ ಮತ್ತು ಸ್ಪರ್ಧಾತ್ಮಕ ಸಮತೋಲನಕ್ಕೆ ಒತ್ತು ನೀಡಿ ಬಿಸಿಸಿಐ ಮುಂದೆ ಪ್ರಸ್ತಾಪಗಳನ್ನು ಮಂಡಿಸಿದ್ದಾರೆ. ಹೀಗಾಗಿ ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳು ಆಗಲಿವೆ.

ದಿನದಿಂದ ದಿನಕ್ಕೆ ಪಂದ್ಯಗಳ ಹೆಚ್ಚಳದ ಬಗ್ಗೆ ಬಗ್ಗೆ ಶಾರ್ದೂಲ್ ಠಾಕೂರ್ ಅವರಂತಹ ಆಟಗಾರರು ಎತ್ತಿರುವ ಕಳವಳಗಳನ್ನು ಪರಿಹರಿಸಲು, ರಣಜಿ ಟ್ರೋಫಿ ಮುಂದಿನ ವರ್ಷ ಎರಡು ಲೆಗ್ (ಚರಣಗಳನ್ನು) ಹೊಂದಿರಲಿವೆ. ಈ ಹೊಂದಾಣಿಕೆಯು ಆಟಗಾರರ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮ ರಕ್ಷಿಸುವ ಗುರಿ ಹೊಂದಿದೆ. 23 ವರ್ಷದೊಳಗಿನವರ ಸಿಕೆ ನಾಯ್ಡು ಟ್ರೋಫಿಯಲ್ಲಿ ಕಾಯಿನ್ ಟಾಸ್ ಅನ್ನು ತೆಗೆದುಹಾಕಲು ಪ್ರಸ್ತಾಪಿಸಿದ ಬಿಸಿಸಿಐ ಕಾರ್ಯದರ್ಶಿ ಸಿಕೆ ನಾಯ್ಡು ಟ್ರೋಫಿಯಲ್ಲಿ ಟಾಸ್ ಅನ್ನು ಇನ್ನು ಮುಂದೆ ಘೋಷಿಸಲಿಲ್ಲ. ಪ್ರವಾಸಿ ತಂಡಗಳು ತಂಡಗಳು ಬ್ಯಾಟಿಂಗ್ ಅಥವಾ ಬೌಲಿಂಗ್ ಅನ್ನು ಆಯ್ಕೆ ಮಾಡಬಹುದು. ಪಂದ್ಯದ ಸಮತೋಲನಕ್ಕಾಗಿ ಪರಿಷ್ಕೃತ ಅಂಕಗಳ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತದೆ. ಯಶಸ್ವಿಯಾದರೆ ಈ ಬದಲಾವಣೆಗಳು ಭವಿಷ್ಯದಲ್ಲಿ ದೊಡ್ಡ ಹಂತದ ಸ್ಪರ್ಧೆಗಳಿಗೆ ವಿಸ್ತರಿಸಬಹುದು.

ದುಲೀಪ್ ಟ್ರೋಫಿ ತಂಡಗಳು ಮತ್ತು ಮಹಿಳಾ ಅಂತರ-ವಲಯ ಪಂದ್ಯಾವಳಿಗಳು ಸೇರಿದಂತೆ ತಂಡದ ಆಯ್ಕೆಯಲ್ಲಿ ರಾಷ್ಟ್ರೀಯ ಆಯ್ಕೆದಾರರ ಹೆಚ್ಚಿನ ಪಾಲ್ಗೊಳ್ಳುವಿಕೆಯ ಯೋಜನೆಗಳನ್ನು ಜಯ್ ಶಾ ಗಮಿನಿದ್ದಾರೆ. ಈ ಕ್ರಮವು ಪ್ರತಿಭೆ ಗುರುತಿಸುವಿಕೆ ಮತ್ತು ತಂಡದ ಸಂಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ವಲಯ ಆಯ್ಕೆ ಸಮಿತಿಗಳಿಂದ ನಿರ್ಗಮನ ಸೂಚಿಸುತ್ತದೆ.

ಮಳೆಯ ಸಮಸ್ಯೆಗೆ ಪರಿಹಾರ

ಜಯ್ ಶಾ ಹವಾಮಾನ ಸಂಬಂಧಿತ ಸವಾಲುಗಳನ್ನು ತಗ್ಗಿಸುವ ಯೋಜನೆಗಳನ್ನು ವಿವರಿಸಿದರು/ ವಿಶೇಷವಾಗಿ ಚಳಿಗಾಲದಲ್ಲಿ ಉತ್ತರ ಭಾರತದಲ್ಲಿ ಕ್ರಿಕೆಟ್​ ಋತು ಆರಂಭವಾಗಲಿದೆ. ಈ ಋತುವು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಇರಾನಿ ಕಪ್ ಮತ್ತು ರಣಜಿ ಟ್ರೋಫಿ ಎರಡು ಹಂತಗಳಲ್ಲಿ ನಡೆಯಲಿದೆ. ಸೂಕ್ತ ಆಟಗಾರರ ವಿಶ್ರಾಂತಿ ಮತ್ತು ಚೇತರಿಕೆಗಾಗಿ ವೈಟ್-ಬಾಲ್ ಪಂದ್ಯಾವಳಿಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು

ಈ ಸುಧಾರಣೆಗಳು ಸ್ಪರ್ಧಾತ್ಮಕ ಮತ್ತು ಆಟಗಾರ ಕೇಂದ್ರಿತ ದೇಶೀಯ ಕ್ರಿಕೆಟ್ ಪರಿಸರ ವ್ಯವಸ್ಥೆಯನ್ನು ಬೆಳೆಸುವ ಬಿಸಿಸಿಐನ ಬದ್ಧತೆ ಒತ್ತಿಹೇಳುತ್ತವೆ. ಪ್ರತಿಭೆಗಳನ್ನು ಪೋಷಿಸುವ ಮತ್ತು ಸಮಾನ ಅವಕಾಶಗಳನ್ನು ಖಾತ್ರಿಪಡಿಸುವ ದೃಷ್ಟಿಯಿಂದ ಈ ಬದಲಾವಣೆಗಳು ತಳಮಟ್ಟದಲ್ಲಿ ಭಾರತೀಯ ಕ್ರಿಕೆಟ್​​ನ ಹೊಸ ಯುಗವನ್ನು ಸೂಚಿಸುತ್ತವೆ.

Continue Reading

ಕ್ರಿಕೆಟ್

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

IPL 2024: ಪಂಜಾಬ್​​ನ ಗುರ್ನೂರ್ ಬ್ರಾರ್ ಕಳೆದ ಆವೃತ್ತಿಯ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಐಪಿಎಲ್ 2024 ಹರಾಜಿನಲ್ಲಿ ಮಾರಾಟವಾಗಲಿಲ್ಲ. ಐಪಿಎಲ್ 2023 ರಲ್ಲಿ ಅವರು ಪಂಜಾಬ್ ಮೂಲದ ತಂಡದ ಪರವಾಗಿ ಒಂದು ಪಂದ್ಯವನ್ನು ಆಡಿದ್ದಾರೆ. ಬ್ರಾರ್ ಈವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು ಒಂದು ಲಿಸ್ಟ್-ಎ ಪಂದ್ಯವನ್ನು ಆಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) ಉಳಿದ ಭಾಗಕ್ಕೆ ಸುಶಾಂತ್ ಮಿಶ್ರಾ ಅಲಭ್ಯರಾಗಿರುವ ಕಾರಣ ಗುಜರಾತ್ ಟೈಟಾನ್ಸ್ ಗುರ್ನೂರ್ ಬ್ರಾರ್ ಅವರನ್ನು ಆಯ್ಕೆ ಮಾಡಿದೆ. ಐಪಿಎಲ್​ನ ಅಧಿಕೃತ ಪ್ರಕಟಣೆ ಶನಿವಾರ (ಮೇ 11) ಈ ಬೆಳವಣಿಗೆಯನ್ನು ದೃಢಪಡಿಸಿದೆ. ಆದಾಗ್ಯೂ, ಸುಶಾಂತ್ ಮಿಶ್ರಾ ಪ್ರಸ್ತುತ ನಡೆಯುತ್ತಿರುವ ಟೂರ್ನಿಯಿಂದ ಹೊರಗುಳಿಯುವ ಹಿಂದಿನ ಕಾರಣವನ್ನು ಬಿಡುಗಡೆ ಬಹಿರಂಗಪಡಿಸಿಲ್ಲ. ದೇಶೀಯ ಕ್ರಿಕೆಟ್​ನಲ್ಲಿ ಜಾರ್ಖಂಡ್ ಪರ ಆಡುವ ಎಡಗೈ ವೇಗಿ, ಐಪಿಎಲ್ 2024 ರಲ್ಲಿ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಪಡೆದಿಲ್ಲ. ಅಂದ ಹಾಗೆ ಪ್ರಸ್ತುತ ಋತುವು ಅವರ ಮೊದಲ ಐಪಿಎಲ್ ಸೀಸನ್ ಆಗಿತ್ತು.

ಪಂಜಾಬ್​​ನ ಗುರ್ನೂರ್ ಬ್ರಾರ್ ಕಳೆದ ಆವೃತ್ತಿಯ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಐಪಿಎಲ್ 2024 ಹರಾಜಿನಲ್ಲಿ ಮಾರಾಟವಾಗಲಿಲ್ಲ. ಐಪಿಎಲ್ 2023 ರಲ್ಲಿ ಅವರು ಪಂಜಾಬ್ ಮೂಲದ ತಂಡದ ಪರವಾಗಿ ಒಂದು ಪಂದ್ಯವನ್ನು ಆಡಿದ್ದಾರೆ. ಬ್ರಾರ್ ಈವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು ಒಂದು ಲಿಸ್ಟ್-ಎ ಪಂದ್ಯವನ್ನು ಆಡಿದ್ದಾರೆ.

ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಉಳಿದ ಭಾಗಕ್ಕೆ ಸುಶಾಂತ್ ಮಿಶ್ರಾ ಅವರ ಬದಲಿಯಾಗಿ ಗುಜರಾತ್ ಟೈಟಾನ್ಸ್ ವೇಗದ ಬೌಲರ್ ಗುರ್ನೂರ್ ಸಿಂಗ್ ಬ್ರಾರ್ ಅವರನ್ನು ಒಪ್ಪಂದ ಮಾಡಿಕೊಂಡಿದೆ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

“ಗುರ್ನೂರ್ ದೇಶೀಯ ಕ್ರಿಕೆಟ್​​ನಲ್ಲಿ ಪಂಜಾಬ್ ತಂಡವನ್ನು ಐದು ಪ್ರಥಮ ದರ್ಜೆ ಮತ್ತು ಒಂದು ಲಿಸ್ಟ್ ಎ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. 2023ರಲ್ಲಿ ಟಾಟಾ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಏಕೈಕ ಪಂದ್ಯವನ್ನಾಡಿದ್ದರು. ಅವರು ತಮ್ಮ ಮೀಸಲು ಬೆಲೆ 50 ಲಕ್ಷ ರೂ.ಗೆ ಸಹಿ ಹಾಕುತ್ತಾರೆ” ಎಂದು ಅದು ಹೇಳಿದೆ.

ಪ್ಲೇ ಆಫ್ ಹಂತದಿಂದ ಹೊರಗುಳಿಯುವ ಸಾಧ್ಯತೆ

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಗುಜರಾತ್ ಟೈಟಾನ್ಸ್ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಅವರು ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಗುಜರಾತ್ ಮೂಲದ ತಂಡ ಇದೇ ಮೊದಲ ಬಾರಿಗೆ ಪ್ಲೇ ಆಫ್ ಹಂತದಿಂದ ಹೊರಗುಳಿಯಲಿದೆ. ಅವರು 2022 ರಲ್ಲಿ ತಮ್ಮ ಚೊಚ್ಚಲ ಋತುವಿನಲ್ಲಿ ಐಪಿಎಲ್ ಪ್ರಶಸ್ತಿ ಗೆದ್ದಿದ್ದರು. 2023 ರಲ್ಲಿ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತ್ತು.

ಹಾರ್ದಿಕ್ ಪಾಂಡ್ಯ ನಿರ್ಗಮನದ ನಂತರ ಅವರು ಶುಬ್ಮನ್ ಗಿಲ್ ಅವರನ್ನು ಹೊಸ ನಾಯಕನಾಗಿ ನೇಮಿಸಲಾಗಿದೆ. ಅವರು ಹೆಚ್ಚು ಪರಿಣಾಮ ಬೀರಿಲ್ಲ. ಟೈಟಾನ್ಸ್ ಇನ್ನೂ ಸ್ಪರ್ಧೆಯಲ್ಲಿ ಲೆಕ್ಕಾಚಾರದ ಪ್ರಕಾರ ಜೀವಂತವಾಗಿದ್ದರೂ, ಅವರ ಅವಕಾಶಗಳು ಬಹುತೇಕ ಶೂನ್ಯವಾಗಿದೆ.

ಸದ್ಯ ಆಡಿರುವ 12 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಅವರು ತಮ್ಮ ಉಳಿದ ಎರಡು ಲೀಗ್ ಪಂದ್ಯಗಳನ್ನು ಗೆದ್ದರೂ, ಸತತ ಮೂರನೇ ಬಾರಿಗೆ ಪ್ಲೇಆಫ್ಗೆ ಪ್ರವೇಶಿಸಲು ಅವರಿಗೆ ಹಲವಾರು ಫಲಿತಾಂಶಗಳು ಬೇಕಾಗುತ್ತವೆ.

Continue Reading
Advertisement
Shankara Jayanti 2024
ಧಾರ್ಮಿಕ3 mins ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ18 mins ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ18 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ5 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ6 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು6 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು7 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್7 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ9 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು14 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌