ಗಾಜಾ ಆಸ್ಪತ್ರೆಯನ್ನೇ ಒತ್ತೆಯಾಳುಗಳ ಕೇಂದ್ರವಾಗಿಸಿದ ಹಮಾಸ್;‌ ‘ವಿಡಿಯೊ’ ಸಾಕ್ಷಿ ಕೊಟ್ಟ ಇಸ್ರೇಲ್ Vistara News

ಪ್ರಮುಖ ಸುದ್ದಿ

ಗಾಜಾ ಆಸ್ಪತ್ರೆಯನ್ನೇ ಒತ್ತೆಯಾಳುಗಳ ಕೇಂದ್ರವಾಗಿಸಿದ ಹಮಾಸ್;‌ ‘ವಿಡಿಯೊ’ ಸಾಕ್ಷಿ ಕೊಟ್ಟ ಇಸ್ರೇಲ್

ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ದಾಳಿ ನಡೆಸಿದ ಹಮಾಸ್‌ ಉಗ್ರರು, ಒತ್ತೆಯಾಳುಗಳನ್ನು ಕರೆದುಕೊಂಡು ಬಂದು ಗಾಜಾ ಆಸ್ಪತ್ರೆಯಲ್ಲಿಯೇ ಇರಿಸಿದ್ದಾರೆ. ಇದಕ್ಕೆ ಇಸ್ರೇಲ್‌ ವಿಡಿಯೊ ಸಾಕ್ಷಿ ಕೊಟ್ಟಿದೆ.

VISTARANEWS.COM


on

Israel Hostages In Gaza Hospital
ಗಾಜಾ ನಗರದ ಆಸ್ಪತ್ರೆಯಲ್ಲಿ ಒತ್ತೆಯಾಳುಗಳು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಜಾ ನಗರ: ಗಾಜಾ ನಗರದ ಮೇಲೆ ಸಂಪೂರ್ಣವಾಗಿ ಹಿಡಿತ ಸಾಧಿಸಿರುವ ಇಸ್ರೇಲ್‌ ಸೇನೆಯು ಹಮಾಸ್‌ ಉಗ್ರರನ್ನು ಹುಡುಕಿ ಹುಡುಕಿ (Israel Palestine War) ಕೊಲ್ಲುತ್ತಿದೆ. ಅದರಲ್ಲೂ, ಗಾಜಾ ನಗರದಲ್ಲಿರುವ (Gaza City) ಅಲ್‌ ಶಿಫಾ ಆಸ್ಪತ್ರೆಯನ್ನು ಹಮಾಸ್‌ ಉಗ್ರರು (Hamas Terrorists) ಉಗ್ರ ಚಟುವಟಿಕೆಗಳ ತಾಣವಾಗಿ ಬಳಸುತ್ತಿರುವ, ಅಲ್ಲಿಯೇ ಇಸ್ರೇಲ್‌ ಸೇರಿ ಹಲವು ದೇಶಗಳ ಒತ್ತೆಯಾಳುಗಳನ್ನು ಇಟ್ಟುಕೊಂಡಿರುವುದನ್ನು ಕೂಡ ಇಸ್ರೇಲ್‌ ಜಗತ್ತಿಗೆ ತಿಳಿಸುತ್ತಿದೆ. ಅಲ್‌ ಶಿಫಾ ಆಸ್ಪತ್ರೆಯಲ್ಲಿ (Al Shifa Hospital) ಒತ್ತೆಯಾಳುಗಳನ್ನು ಇಟ್ಟಿರುವ ವಿಡಿಯೊ ಒಂದನ್ನು ಇಸ್ರೇಲ್‌ ಬಿಡುಗಡೆಗೊಳಿಸಿದೆ.

“ಹಮಾಸ್‌ ಉಗ್ರರ ಮತ್ತೊಂದು ಮುಖ ಬಯಲಾಗಿದೆ. ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ದಾಳಿ ಮಾಡಿದ ಹಮಾಸ್‌ ಉಗ್ರರು, ನೇಪಾಳ, ಥಾಯ್ಲೆಂಡ್‌ ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದೆ. ಆ ಒತ್ತೆಯಾಳುಗಳನ್ನು ಅಲ್‌ ಶಿಫಾ ಆಸ್ಪತ್ರೆಯಲ್ಲಿಯೇ ಇರಿಸಿದೆ. ಇಸ್ರೇಲ್‌ನಲ್ಲಿದ್ದ ಇವರನ್ನು ಹಮಾಸ್‌ ಉಗ್ರರು ಅಪಹರಣ ಮಾಡಿ, ಅವರ ಮೇಲೆ ಹಲ್ಲೆ ನಡೆಸಿ, ಗಾಜಾ ಆಸ್ಪತ್ರೆಯಲ್ಲಿ ಇರಿಸಿದೆ” ಎಂದು ವಿಡಿಯೊ ಸಮೇತ ಇಸ್ರೇಲ್‌ ಸೇನೆಯು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದೆ. ಹಾಗೆಯೇ, ಅಲ್‌ ಶಿಫಾ ಆಸ್ಪತ್ರೆಯಲ್ಲಿಯೇ ಇಸ್ರೇಲ್‌ ಸೇನೆಯು ಮತ್ತೊಂದು ಸುರಂಗವನ್ನು ಪತ್ತೆಹಚ್ಚಿದೆ.

ಆಸ್ಪತ್ರೆಗೆ ಬುಲ್ಡೋಜರ್‌ ನುಗ್ಗಿಸಿದ ಇಸ್ರೇಲ್‌

ಇಸ್ರೇಲ್‌ ಸೈನಿಕರು ಗಾಜಾ ನಗರದಲ್ಲಿರುವ ಅಲ್‌ ಶಿಫಾ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಅಲ್‌ ಶಿಫಾ ಆಸ್ಪತ್ರೆಯ ಕೆಳಗಡೆಯೇ ಹಮಾಸ್‌ ಉಗ್ರರ ಸುರಂಗಗಳಿವೆ. ಸುಮಾರು 2,500 ಜನ ಇರುವ ಆಸ್ಪತ್ರೆ ಮೇಲೆ ದಾಳಿ ನಡೆಸಿರುವ ಇಸ್ರೇಲ್‌ ಸೇನೆಯು ಈಗ ಸುರಂಗಗಳನ್ನು ಪತ್ತೆಹಚ್ಚಲು ಬುಲ್ಡೋಜರ್‌ಗಳನ್ನು ನುಗ್ಗಿಸಿದೆ. “ಇಸ್ರೇಲ್‌ ಸೇನೆಯ ಬುಲ್ಡೋಜರ್‌ಗಳು ಅಲ್‌ ಶಿಫಾ ಆಸ್ಪತ್ರೆಗೆ ನುಗ್ಗಿವೆ. ದಕ್ಷಿಣ ಭಾಗದಲ್ಲಿರುವ ಗೇಟ್‌ ಒಂದನ್ನು ಧ್ವಂಸಗೊಳಿಸಿವೆ” ಎಂದು ಹಮಾಸ್‌ ತಿಳಿಸಿದೆ. ಇಸ್ರೇಲ್‌ ಸೇನೆಯೂ ಬುಲ್ಡೋಜರ್‌ಗಳನ್ನು ನುಗ್ಗಿಸಿರುವುದನ್ನು ದೃಢಪಡಿಸಿದೆ.

ಗಾಜಾ ಆಸ್ಪತ್ರೆಯಲ್ಲಿ ಉಗ್ರರ ಮತ್ತೊಂದು ಸುರಂಗ ಪತ್ತೆ

ಇದನ್ನೂ ಓದಿ: ಪ್ರತಿದಾಳಿಗೆ ಮಣಿದು ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ? ಇಸ್ರೇಲ್‌ ಹೇಳುವುದಿಷ್ಟು…

12 ಸಾವಿರ ದಾಟಿದ ಸಾವಿನ ಸಂಖ್ಯೆ

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರದಲ್ಲಿ ಮೃತಪಟ್ಟವರ ಸಂಖ್ಯೆ 12 ಸಾವಿರ ದಾಟಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 11 ಸಾವಿರಕ್ಕೂ ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಇನ್ನೂ 3 ಸಾವಿರಕ್ಕೂ ಅಧಿಕ ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಇನ್ನು ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

ಮೂರು ದಿನಗಳ ಸಭೆ (RBI monetary policy meeting) ಇಂದು ಪೂರ್ಣಗೊಂಡ ನಂತರ ಪ್ರಮುಖ ಬಡ್ಡಿದರಗಳು, ಜಿಡಿಪಿ ಮತ್ತು ಹಣದುಬ್ಬರ ಮುನ್ಸೂಚನೆಗೆ ಸಂಬಂಧಿಸಿದಂತೆ ದಾಸ್ (RBI Governor Shaktikanta Das) ಎಂಪಿಸಿಯ ನಿರ್ಧಾರವನ್ನು ಪ್ರಕಟಿಸುತ್ತಾರೆ.

VISTARANEWS.COM


on

RBI governor Shaktikanta Das
Koo

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆ (RBI monetary policy meeting) ಇಂದು ಅಂತಿಮಗೊಳ್ಳಲಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ (RBI Governor Shaktikanta Das) ಅವರು ಮುಂದಿನ ದ್ವೈಮಾಸಿಕದ ಹಣಕಾಸು ನಿರ್ಧಾರಗಳನ್ನು ಬಹಿರಂಗಪಡಿಸಲಿದ್ದಾರೆ.

ಮೂರು ದಿನಗಳ ಸಭೆ ಇಂದು ಪೂರ್ಣಗೊಂಡ ನಂತರ ಪ್ರಮುಖ ಬಡ್ಡಿದರಗಳು, ಜಿಡಿಪಿ ಮತ್ತು ಹಣದುಬ್ಬರ ಮುನ್ಸೂಚನೆಗೆ ಸಂಬಂಧಿಸಿದಂತೆ ದಾಸ್ ಎಂಪಿಸಿಯ ನಿರ್ಧಾರವನ್ನು ಪ್ರಕಟಿಸುತ್ತಾರೆ. ಕಳೆದ ಫೆಬ್ರವರಿ 23ರಂದು ಆರ್‌ಬಿಐ ರೆಪೊ ದರವನ್ನು (Repo rates) ಶೇ.6.5ಕ್ಕೆ ಏರಿಸಿತ್ತು.

ಏನು ನಿರೀಕ್ಷಿಸಬಹುದು?

1) ತಜ್ಞರ ಪ್ರಕಾರ ಬಡ್ಡಿದರ ಈಗಾಗಲೇ ಉತ್ತುಂಗಕ್ಕೇರಿದೆ. ಆರ್‌ಬಿಐ ಅನಿವಾರ್ಯತೆ ಇಲ್ಲದಿದ್ದಲ್ಲಿ ಬಡ್ಡಿದರ ಹೆಚ್ಚಳಕ್ಕೆ ಹೋಗುವ ಸಾಧ್ಯತೆಯಿಲ್ಲ. ಜೂನ್‌ನಲ್ಲಿ ದರ ಇಳಿಕೆಯಾಗುವ ಸಾಧ್ಯತೆ ಇದೆ. ಈ ಎಂಪಿಸಿ ಸಭೆಯಲ್ಲಿ ಆರ್‌ಬಿಐ ಬಡ್ಡಿದರಗಳನ್ನು ಕಡಿಮೆ ಮಾಡುವ ಸಾಧ್ಯತೆಯಿಲ್ಲ ಎಂದು ಹೆಚ್ಚಿನ ತಜ್ಞರು ಒಪ್ಪುತ್ತಾರೆ.

2) ರೆಪೋ ದರವನ್ನು 6.5 ಪ್ರತಿಶತದಲ್ಲಿ ತಡೆಹಿಡಿಯಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ. ಲಿಕ್ವಿಡಿಟಿ ಬಿಗಿಯಾಗಿ ಉಳಿದುಕೊಂಡಿರುವುದರಿಂದ ಬಡ್ಡಿದರ ಬದಲಾಗದೆ ಉಳಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಎಂದು HSBCಯ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ ತಿಳಿಸಿದ್ದಾರೆ.

3) ಆರ್‌ಬಿಐ ಬಿಗಿಯಾದ ಲಿಕ್ವಿಡಿಟಿ ಕಾಯ್ದುಕೊಳ್ಳುವುದರೊಂದಿಗೆ, ಅಲ್ಪಾವಧಿಯ ದರಗಳು ಶೇಕಡಾ 6.85- 6.9ರ ಆಸುಪಾಸಿನಲ್ಲಿವೆ. ಇದು ರೆಪೋ ದರಕ್ಕಿಂತ 35-40 ಬಿಪಿಎಸ್ ಹೆಚ್ಚಾಗಿದೆ.

4) ರಾಯಿಟರ್ಸ್ ಸಮೀಕ್ಷೆಯ ಪ್ರಕಾರ ಆರ್‌ಬಿಐ ಸತತ ಐದನೇ ಸಭೆಗೆ ಪ್ರಮುಖ ನೀತಿ ದರವನ್ನು ಶೇಕಡಾ 6.50ಕ್ಕೆ ಹಿಡಿದಿಟ್ಟುಕೊಳ್ಳಲಿದೆ.

5) ಮೃದುವಾದ ಹಣದುಬ್ಬರದ ಪರಿಣಾಮ 2024ರ ಮೊದಲಾರ್ಧದಲ್ಲಿ RBI ಬಡ್ಡಿದರಗಳನ್ನು ಕಡಿತಗೊಳಿಸಲು ಪ್ರಾರಂಭಿಸಬಹುದು ಎಂದು ನಿರೀಕ್ಷಿಸಲಾಗಿದೆ.

6) ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ನವೆಂಬರ್‌ನಲ್ಲಿ ಏರಿಕೆಯಾಗಿದೆ. ಹಣದುಬ್ಬರವು ನವೆಂಬರ್‌ನಲ್ಲಿ 5.70 ಶೇಕಡಾ ವಾರ್ಷಿಕ ದರದಲ್ಲಿ ಏರಿದೆ. ಅಕ್ಟೋಬರ್‌ನಲ್ಲಿ ಶೇಕಡಾ 4.87ಕ್ಕಿಂತ ಹೆಚ್ಚು ಏರಿದೆ.

7) ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಮುಂದುವರೆಸಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ 7.6 ಶೇಕಡಾ ದರದಲ್ಲಿ ವಿಸ್ತರಿಸಿದೆ. ನಿರೀಕ್ಷೆಗಳನ್ನು ಮೀರಿದೆ. ಈ ಬೆಳವಣಿಗೆಯು ಹೆಚ್ಚಿದ ಸರ್ಕಾರಿ ಖರ್ಚು ಮತ್ತು ಉತ್ಪಾದನಾ ವಲಯದಲ್ಲಿನ ಪ್ರಗತಿಯಿಂದ ಉತ್ತೇಜಿತವಾಯಿತು.

ಇದನ್ನೂ ಓದಿ: RBI News: ಬಡ್ಡಿ ದರ 6.50%ರಲ್ಲಿಯೇ ಉಳಿಕೆ: ತಜ್ಞರ ಮುನ್ಸೂಚನೆ

Continue Reading

ಕರ್ನಾಟಕ

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

Assembly Session: ಆರ್ಥಿಕ ಸಂಪನ್ಮೂಲಗಳ ಕ್ರೋಡೀಕರಣ ಮಾಡುವ ಉದ್ದೇಶದಿಂದ ಮುದ್ರಾಂಕ ಶುಲ್ಕವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ.

VISTARANEWS.COM


on

Stamp duty
Koo

ಬೆಳಗಾವಿ : ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ (Karnataka Government) ಮುದ್ರಾಂಕ ಶುಲ್ಕವನ್ನು (Stamp Duty) ಹೆಚ್ಚಿಸುವ ವಿಧೇಯಕವನ್ನು ಗುರುವಾರ ವಿಧಾನಸಭೆಯ ಅಧಿವೇಶನದ ವೇಳೆ (Assembly Session)ಮಂಡಿಸಿದೆ. ಪವರ್ ಆಫ್ ಅಟಾರ್ನಿ, ಡೀಡ್ಸ್​​ ಆ್ಯಂಡ್ ಅಫಿಡವಿಟ್‌ ಹಾಗೂ ಇತರ ಕಾನೂನು ದಾಖಲೆಗಳಿಗೆ ಸಂಬಂಧಿಸಿದ ಮುದ್ರಾಂಕ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಗ್ಯಾರಂಟಿಗಳ ಘೋಷಣೆ ಬಳಿಕ ಉಂಟಾಗುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ ಮಾರ್ಗಸೂಚಿ ದರವನ್ನು ಹೆಚ್ಚಳ ಮಾಡಿತ್ತು. ಇದೀಗ ಮುದ್ರಾಂಕ ಶುಲ್ಕವನ್ನೂ ಏರಿಕೆ ಮಾಡಿದೆ. ಕರ್ನಾಟಕ ಮುದ್ರಾಂಕ (ತಿದ್ದುಪಡಿ) ವಿಧೇಯಕ ಮೂಲಕ ಎಲ್ಲಾ ಮುದ್ರಾಂಕ ಶುಲ್ಕಗಳನ್ನು ಹೆಚ್ಚಿಸಲು ಮತ್ತು ಕೆಲವು ಮುದ್ರಾಂಕ ಶುಲ್ಕಗಳನ್ನು ದುಪ್ಪಟ್ಟು ಮಾಡುವುದು ಸರ್ಕಾರದ ಯೋಜನೆಯಾಗಿದೆ.

ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳು ರಾಜ್ಯ ಸರ್ಕಾರಕ್ಕೆ ದೊಡ್ಡ ಮಟ್ಟಿನ ಆದಾಯ ತಂದುಕೊಡುತ್ತದೆ. ಅಬಕಾರಿ ಆದಾಯವನ್ನು ಮೀರಿ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ನೆರವಾಗುತ್ತದೆ. ಹೀಗಾಗಿ ಹಾಲಿ ಹಣಕಾಸು ವರ್ಷದಲ್ಲಿ 25,000 ರೂ. ಕೋಟಿ ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ತಿದ್ದುಪಡಿ ವಿಧೇಯಕ ಮಂಡನೆ ಮಾಡಿದೆ. ಕಂದಾಯ ಸಚಿವರ ಪರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ವಿಧೇಯ ಮಂಡಿಸಿದ್ದಾರೆ.

ಇದನ್ನೂ ಓದಿ : Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

ಬಾಡಿಗೆ ಒಪ್ಪಂದ, ಭೂಮಿ ಶುದ್ಧ ಕ್ರಯಪತ್ರ, ಸಾಲದ ಒಪ್ಪಂದ, ಬ್ಯಾಂಕ್ ಗ್ಯಾರಂಟಿ ದಾಖಲೆಗಳ ನೋಂದಣಿ ಹಾಗು ಮನೆಗಳ ಬಾಡಿಗೆ ಕರಾರು, ಗುತ್ತಿಗೆ ಕರಾರು ಬ್ಯಾಂಕ್​ ಸಾಲದ ದಾಖಲೆಗಳು, ಪವರ್​ ಆಫ್​​ ಅಟಾರ್ನಗಳ ಮುದ್ರಾಂಕ ಶುಲ್ಕ ಏರಿಕೆಯಾಗಲಿದೆ.

ಎಷ್ಟು ಏರಿಕೆ?

ಹೊಸ ವಿಧೇಯಕ ಪ್ರಕಾರ ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರಿಂದ 1,000 ರೂ.ಗೆ ಏರಿಕೆಯಾಗಲಿದೆ. ಸದ್ಯ 20 ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಹೊಂದಿರುವ ಅಫಿಡವಿಟ್​​ಗಳಿಗೆ ಮುಂದೆ ಐದು ಪಟ್ಟು ಹೆಚ್ಚಳ ಅಂದರೆ 100 ರೂಪಾಯಿ ವರೆಗೆ ಏರಿಕೆಯಾಗಲಿದೆ.

ಪವರ್ ಆಫ್ ಅಟಾರ್ನಿ ಮೇಲಿನ ಮುದ್ರಾಂಕ ಶುಲ್ಕವನ್ನು 100 ರೂ.ನಿಂದ 500 ರೂ.ಗೆ ಅಧಿಕಗೊಳಿಸಲಾಗಿದೆ. ಐದಕ್ಕಿಂತ ಹೆಚ್ಚು ಮಂದಿ, ಆದರೆ 10 ಕ್ಕಿಂತ ಕಡಿಮೆ ವ್ಯಕ್ತಿಗಳು ಜಂಟಿಯಾಗಿ ಪವರ್ ಆಫ್ ಅಟಾರ್ನಿ ನೀಡುವುದಾದರೆ ಅದರ ಮೇಲಿನ ಮುದ್ರಾಂಕ ಶುಲ್ಕ ಪ್ರಸ್ತುತ ಇರುವ 200 ರೂ.ನಿಂದ 1,000 ರೂ.ಗೆ ಹೆಚ್ಚಳವಾಗಲಿದೆ.

ನಗರ ಪ್ರದೇಶಗಳಲ್ಲಿರುವ ಆಸ್ತಿ ವಿಭಜನಾ ಪತ್ರಗಳಿಗೆ ಮುದ್ರಾಂಕ ಶುಲ್ಕವನ್ನು ಪ್ರತಿ ಷೇರಿಗೆ 1,000 ರೂ.ನಿಂದ 5,000 ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ನಗರ ಮಿತಿಯಿಂದ ಹೊರಗಿರುವ ಆಸ್ತಿಗಳಿಗೆ, ಪ್ರಸ್ತುತ 500 ರೂ. ಬದಲಾಗಿ ಪ್ರತಿ ಷೇರಿಗೆ 3,000 ರೂ. ಮಾಡಲು ಪ್ರಸ್ತಾವಿಸಲಾಗಿದೆ. ಕೃಷಿ ಆಸ್ತಿಗಳನ್ನು ವಿಭಜಿಸಲು ಪ್ರತಿ ಷೇರಿಗೆ 250 ರೂ. ಬದಲಾಗಿ 1,000 ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ವಿಚ್ಛೇದನ ಪತ್ರಗಳ ಮೇಲಿನ ಸ್ಟ್ಯಾಂಪ್ ಡ್ಯೂಟಿ ಕೂಡ 100 ರಿಂದ 500 ರೂ.ಗೆ ಹೆಚ್ಚಾಗಲಿದೆ. ಪ್ರಮಾಣೀಕೃತ ಪ್ರತಿಗಳಿಗೆ, ಸ್ಟ್ಯಾಂಪ್ ಸುಂಕವನ್ನು 5 ರಿಂದ 20 ಕ್ಕೆ ಹೆಚ್ಚಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರವು ಮುದ್ರಾಂಕ ಶುಲ್ಕಗಳನ್ನು ಹೆಚ್ಚಿಸಲು ಮುಂದಾಗಿರುವುದರಿಂದ ಟ್ರಸ್ಟ್‌ಗಳನ್ನು ನೋಂದಾಯಿಸುವುದು ಸಹ ದುಬಾರಿಯಾಗಲಿದೆ. ಕಂಪನಿಗಳ ವಿಲೀನ ಮತ್ತಿತರ ಪ್ರಕ್ರಿಯೆಗಳೂ ದುಬಾರಿಯಾಗಲಿವೆ.

Continue Reading

ಆರೋಗ್ಯ

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

ರಾಜ್ಯದಲ್ಲಿ ಡೆಂಗ್ಯು ಜ್ವರ (Dengue fever) ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಸೊಳ್ಳೆಗಳಿಂದ ದೂರವಿರುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

VISTARANEWS.COM


on

dengue flue
Koo

ಬೆಂಗಳೂರು: ಬದಲಾದ ವಾತಾವರಣದ ಪರಿಣಾಮ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಾಗಿ ವರದಿಯಾಗುತ್ತಿದೆ. 15 ಸಾವಿರದ ಗಡಿಯತ್ತ ಸಾಗುತ್ತಿದ್ದು, ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆ (Health department) ಈ ವಿಚಾರದಲ್ಲಿ ಅಲರ್ಟ್‌ ಆಗಿದೆ.

ರಾಜ್ಯದಲ್ಲಿ ಡೆಂಗ್ಯೂ 14,955 ಪ್ರಕರಣಗಳು ದಾಖಲಾಗಿವೆ. ಒಂದು ತಿಂಗಳ ಅವಧಿಯಲ್ಲಿ 1,829 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ರಾಜ್ಯದ 31 ಜಿಲ್ಲೆಗಳಿಂದ 7,282 ಪ್ರಕರಣಗಳು ದೃಢಪಟ್ಟಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 7,673 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ಡೆಂಗ್ಯೂ ಜ್ವರ ಶಂಕಿತರ ತಪಾಸಣೆ ಮಾಡಲಾಗಿದೆ. ಕಳೆದ ವರ್ಷ ರಾಜ್ಯದಲ್ಲಿ 9,620 ಮಂದಿ ಡೆಂಗ್ಯೂ ಜ್ವರದಿಂದ ಬಳಲಿದ್ದರು. ಕಳೆದ ವರ್ಷ ಡೆಂಗ್ಯೂನಿಂದ 9 ಮಂದಿ ಬಲಿಯಾಗಿದ್ದರು ಕೂಡ. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಲ್ಕು ಸೇರಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 52,721 ಡೆಂಗ್ಯು ಶಂಕಿತರನ್ನು ತಪಾಸಣೆ ಮಾಡಲಾಗಿದೆ. ಅವರಲ್ಲಿ 33,326 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ 839 ಮಂದಿಯಲ್ಲಿ ಡೆಂಗ್ಯು ದೃಢಪಟ್ಟಿದೆ. ಡೆಂಗ್ಯೂ ಜೊತೆಗೆ 28 ಜಿಲ್ಲೆಗಳಲ್ಲಿ ಚಿಕೂನ್‌ ಗುನ್ಯಾ ಪ್ರಕರಣಗಳೂ ಪತ್ತೆಯಾಗಿದ್ದು, ತಲೆನೋವು ಮೂಡಿಸಿದೆ. 60 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ ಗುನ್ಯಾ ಶಂಕಿತರ ತಪಾಸಣೆ ಮಾಡಲಾಗಿದೆ.

ಸೊಳ್ಳೆಗಳನ್ನು ಆದಷ್ಟು ತಡೆಗಟ್ಟಲು ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಹುಟ್ಟುತ್ತಿವೆ. ಇವುಗಳನ್ನು ನಿವಾರಿಸಬೇಕು. ಮನೆಗೆ ಹಾಗೂ ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸುವುದು, ಮಾಸ್ಕಿಟೋ ರಿಪೆಲ್ಲೆಂಟ್‌ಗಳನ್ನು ಬಳಸಲು ಸೂಚಿಸಲಾಗಿದೆ.

ಜಿಲ್ಲೆ- ಪ್ರಕರಣಗಳು
ಕಲಬುರಗಿ- 662
ಮೈಸೂರು – 646
ಉಡುಪಿ – 635
ದಕ್ಷಿಣ ಕನ್ನಡ – 492
ಶಿವಮೊಗ್ಗ – 404
ತುಮಕೂರು – 315
ಚಿತ್ರದುರ್ಗ – 300

ಚಿಕೂನ್ ಗುನ್ಯಾ ಪ್ರಕರಣಗಳು
ಮೈಸೂರು – 196
ವಿಜಯಪುರ – 163
ಕಲಬುರಗಿ – 132
ಶಿವಮೊಗ್ಗದಲ್ಲಿ 125
ಒಟ್ಟು 1,481 ಮಂದಿ

Continue Reading

ಕರ್ನಾಟಕ

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ (Karnataka Cabinet meeting) ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Vistara Editorial, Government should conduct exam without any lapse
Koo

ಬೆಂಗಳೂರು: ಬಿಜೆಪಿ ಸರ್ಕಾರ ಸಮಯದಲ್ಲಿ ಜಾರಿಗೆ ತರಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ (Karnataka Cabinet meeting) ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಮೊದಲು ಕೃಷಿ ಭೂಮಿ‌ ಹೊಂದಿದವರು ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶ ಇತ್ತು. 2022ರಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ತಂದು, ಆ ಮೂಲಕ ಯಾರು ಬೇಕಾದರೂ ಭೂಮಿ ಖರೀದಿಗೆ ಅವಕಾಶ ಮಾಡಿ ಕೊಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯ ಈ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೆಲವೊಂದು ಹೊಸ ತಿದ್ದುಪಡಿಗಳೊಂದಿಗೆ ನೂತನ ವಿಧೇಯಕವನ್ನು ಈ ಬಾರಿಯ ಅಧೀವೇಶನದಲ್ಲೇ ಮಂಡಿಸಲು ತೀರ್ಮಾನಿಸಲಾಗಿದೆ.

ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಬಹುದೆನ್ನುವ ಕಾನೂನು ಈ ಮೂಲಕ ರದ್ದಾಗಲಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಈ ಕಾನೂನಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೋರಾಟಕ್ಕೆ ಬಿಜೆಪಿ ಸರ್ಕಾರ ಮಣಿಯದೆ ಕಾಯ್ದೆ ಜಾರಿ‌ ಮಾಡಿತ್ತು. ಈ ಮೂಲಕ ನಗರವಾಸಿ ಶ್ರೀಮಂತರು ರೈತರಿಂದ ಕೃಷಿ ಭೂಮಿ ಖರೀದಿ ಮಾಡುವುದು ಸುಲಭವಾಗಿತ್ತು. ಇದನ್ನು ತಡೆಗಟ್ಟಲು ಹೊಸ ವಿಧೇಯಕ ತರಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೆಲವು ಕಾನೂನುಗಳನ್ನು ರದ್ದುಗೊಳಿಸುವ ತೀರ್ಮಾನಗಳನ್ನು ಹಾಲಿ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಈಗಾಗಲೇ ಕೈಗೊಂಡಿದೆ. ಇದನ್ನು ಬಿಜೆಪಿ ವಿರೋಧಿಸಿದೆ.

ಇದನ್ನೂ ಓದಿ: Cabinet Meeting: ಸಮವಸ್ತ್ರ ಪೂರೈಕೆಗೆ ತಡೆಹಿಡಿದಿದ್ದ ಹಣ ಬಿಡುಗಡೆಗೆ ಸಚಿವ ಸಂಪುಟ ಸಮ್ಮತಿ

Continue Reading
Advertisement
Karthik threw the sandal to vinay Ugly Fight
ಬಿಗ್ ಬಾಸ್2 mins ago

BBK SEASON 10: ಚಪ್ಪಲಿ ಎಸೆದೆ ಕಾರ್ತಿಕ್‌; ನನಗೆ ಮರ್ಯಾದೆ ಇಲ್ವಾ? ಆಚೆ ಹೋಗ್ಬೇಕು ಎಂದ ವಿನಯ್‌!

RBI governor Shaktikanta Das
ದೇಶ27 mins ago

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

Stamp duty
ಕರ್ನಾಟಕ35 mins ago

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

dengue flue
ಆರೋಗ್ಯ1 hour ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ1 hour ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ2 hours ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Hair Care Tips
ಆರೋಗ್ಯ2 hours ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ2 hours ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Vistara editorial, Let's take precautions for pneumonia infection
ಆರೋಗ್ಯ3 hours ago

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

How To Remove Tea Stains From Clothes
ಲೈಫ್‌ಸ್ಟೈಲ್3 hours ago

How To Remove Tea Stains From Clothes: ಬಟ್ಟೆಯ ಮೇಲಿನ ಚಹಾ ಕಲೆಯನ್ನು ತೆಗೆಯುವ ಸುಲಭದ ಉಪಾಯ ಇದು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ14 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ15 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ21 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌