ಹಮಾಸ್‌ ಮುಖಂಡನ ಮನೆಯನ್ನೇ ಬಾಂಬಿಟ್ಟು ಧ್ವಂಸ ಮಾಡಿದ ಇಸ್ರೇಲ್;‌ ಭೀಕರ ವಿಡಿಯೊ ನೋಡಿ - Vistara News

ಪ್ರಮುಖ ಸುದ್ದಿ

ಹಮಾಸ್‌ ಮುಖಂಡನ ಮನೆಯನ್ನೇ ಬಾಂಬಿಟ್ಟು ಧ್ವಂಸ ಮಾಡಿದ ಇಸ್ರೇಲ್;‌ ಭೀಕರ ವಿಡಿಯೊ ನೋಡಿ

Israel Palestine War: ಗಾಜಾ ನಗರದ ಮೂಲೆ ಮೂಲೆಯಲ್ಲಿ ಶೋಧ ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಈಗ ಹಮಾಸ್‌ ಉಗ್ರನ ಮನೆಯನ್ನೇ ಧ್ವಂಸಗೊಳಿಸಿದ್ದಾರೆ. ಆ ವಿಡಿಯೊಗಳು ಲಭ್ಯವಾಗಿವೆ.

VISTARANEWS.COM


on

Israel Attack On Gaza
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಜಾ: ಸಾವಿರಾರು ರಾಕೆಟ್‌ಗಳ ಮೂಲಕ ದಾಳಿ ಮಾಡಿದ ಹಮಾಸ್‌ ಉಗ್ರರನ್ನು ನಿರ್ನಾಮ (Israel Palestine War) ಮಾಡುವ ಪಣತೊಟ್ಟಿರುವ ಇಸ್ರೇಲ್‌ ಸೇನೆಯು ಗಾಜಾ ನಗರದ ಪ್ರತಿಯೊಂದು ಮೂಲೆಗಳಲ್ಲೂ ಆವರಿಸಿದ್ದಾರೆ. ಸುರಂಗಗಳಲ್ಲಿ ಅಡಗಿದರೂ ಉಗ್ರರನ್ನು (Hamas Terrorists) ಬಿಡುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ಉಗ್ರನೊಬ್ಬನ ಮನೆಯನ್ನೇ ಇಸ್ರೇಲ್‌ ಬಾಂಬಿಟ್ಟು ಧ್ವಂಸಗೊಳಿಸಿದೆ. ಈ ಸಿನಿಮೀಯ ವಿಡಿಯೊಗಳು (Viral Video) ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹಮಾಸ್‌ ಪ್ರಮುಖ ಉಗ್ರ, ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್ ಹನಿಯೇಹ್‌ ಎಂಬಾತನ ಮನೆಯನ್ನು ಇಸ್ರೇಲ್‌ ಸೇನೆಯು ಬಾಂಬಿಟ್ಟು ಧ್ವಂಸಗೊಳಿಸಿದೆ. “ಇಸ್ರೇಲ್‌ ಫೈಟರ್‌ ಜೆಟ್‌ಗಳು ಇಸ್ಮಾಯಿಲ್ ಹನಿಯೇಹ್‌ ಮನೆಯನ್ನು ಧ್ವಂಸಗೊಳಿಸಿವೆ” ಎಂದು ವಿಡಿಯೊಗಳ ಸಮೇತ ಇಸ್ರೇಲ್ ಡಿಫೆನ್ಸ್‌ ಫೋರ್ಸ್‌ ಪೋಸ್ಟ್‌ ಮಾಡಿದೆ. ಮನೆ ಧ್ವಂಸಗೊಳಿಸಿದ ಬಳಿಕ ಇಸ್ರೇಲ್‌ ಸೈನಿಕರು ಆ ಮನೆಯನ್ನು ಶೋಧ ಮಾಡಿದ ವಿಡಿಯೊವನ್ನು ಕೂಡ ಹಂಚಿಕೊಳ್ಳಲಾಗಿದೆ. ಆದರೆ, ಇಸ್ಮಾಯಿಲ್ ಹನಿಯೇಹ್‌ ಹತ್ಯೆಗೀಡಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಈಗಾಗಲೇ ಹಮಾಸ್‌ ಉಗ್ರ ಸಂಘಟನೆಯ ಹಲವು ಮುಖಂಡರನ್ನು ಇಸ್ರೇಲ್‌ ಹತ್ಯೆಗೈದಿದೆ.

ವಿಡಿಯೊಗಳು ಇಲ್ಲಿವೆ

ಉಗ್ರರ ಪತ್ತೆಗೆ ಬುಲ್ಡೋಜರ್‌ ಬಳಕೆ

ಅಲ್‌-ಶಿಫಾ ಆಸ್ಪತ್ರೆಯ ಕೆಳಗೆ ಹಮಾಸ್‌ ಉಗ್ರರ ಸುರಂಗವಿದೆ. ಆಸ್ಪತ್ರೆ ಮೂಲಕ ಸುರಂಗದೊಳಗೆ ಹೋಗುವುದು, ಅಲ್ಲಿಂದ ಬರುವುದು, ಆಸ್ಪತ್ರೆಯಲ್ಲಿಯೇ ದಾಳಿಗೆ ಸಂಚು ರೂಪಿಸುವುದು ಸೇರಿ ಹಲವು ಕೃತ್ಯಗಳಲ್ಲಿ ಹಮಾಸ್‌ ಉಗ್ರರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು, ಆಸ್ಪತ್ರೆಯಲ್ಲಿ ಉಗ್ರ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಹಮಾಸ್‌ ಉಗ್ರರಿಗೆ ಇಸ್ರೇಲ್‌ ಗಡುವು ನೀಡಿತ್ತು. ಆದರೆ, ಹಮಾಸ್‌ ಉಗ್ರರು ಇದಕ್ಕೆ ಸೊಪ್ಪು ಹಾಕದ ಕಾರಣ ಭೀಕರವಾಗಿ ದಾಳಿ ನಡೆಸಲಾಗುತ್ತಿದೆ. ಆಸ್ಪತ್ರೆಯಲ್ಲಿ ಉಂಟಾಗಿರುವ ಸಾರ್ವಜನಿಕರ ಸಾವು-ನೋವಿನ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Israel Palestine War: ‌ಇಸ್ರೇಲ್‌ ಸೈನಿಕರು ಅತ್ಯಾಚಾರಿಗಳು ಎಂದ ಶಿಕ್ಷಕನ ಬಂಧನ!

12 ಸಾವಿರ ದಾಟಿದ ಸಾವಿನ ಸಂಖ್ಯೆ

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರದಲ್ಲಿ ಮೃತಪಟ್ಟವರ ಸಂಖ್ಯೆ 12 ಸಾವಿರ ದಾಟಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 11 ಸಾವಿರಕ್ಕೂ ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಇನ್ನೂ 3 ಸಾವಿರಕ್ಕೂ ಅಧಿಕ ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಇನ್ನು ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ದಕ್ಷಿಣ ಆಫ್ರಿಕಾದಲ್ಲಿ ಚಿನ್ನದ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

ರಾಜಮಾರ್ಗ ಅಂಕಣ: ಕಾರ್ಕಳ ತಾಲೂಕಿನ ಬೋಳ ಎಂಬ ಪುಟ್ಟ ಗ್ರಾಮದಿಂದ ಲಂಡನ್, ಅಮೆರಿಕ, ಆಫ್ರಿಕ, ದುಬಾಯಿ, ಕಝಾಕಿಸ್ತಾನ್ ತಲುಪಿದ ಬೋಳ ಅಕ್ಷತಾ ಪೂಜಾರಿಯ ಹೋರಾಟ ಮತ್ತು ಸಾಹಸಗಳು ಸಾವಿರಾರು ಗ್ರಾಮೀಣ ಸಾಧಕರಿಗೆ ಸ್ಫೂರ್ತಿ ಆಗಬಲ್ಲದು. ಸರಕಾರ ಆಕೆಯನ್ನು ದೊಡ್ಡದಾಗಿ ಗುರುತಿಸಬೇಕು.

VISTARANEWS.COM


on

ರಾಜಮಾರ್ಗ ಅಂಕಣ bola akshta pujari
Koo

ಪವರ್ ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ವಿಭಾಗದಲ್ಲಿ ಮತ್ತೆ ಆಕೆಯಿಂದ ವಿಶ್ವವಿಕ್ರಮ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಶನಿವಾರ ದಕ್ಷಿಣ ಆಫ್ರಿಕಾದ ಫೊಚೇಫಸ್ಟಮ್ ನಗರದಲ್ಲಿ ನಡೆದ ಏಷಿಯಾ ಪೆಸಿಫಿಕ್ ಆಫ್ರಿಕನ್ (ಅಂದರೆ ಎರಡು ಖಂಡಗಳ ಮಟ್ಟದ) ಪವರ್ ಲಿಫ್ಟಿಂಗ್ (power lifting) ಮತ್ತು ಬೆಂಚ್ ಪ್ರೆಸ್ (bench press) ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಬೋಳ ಅಕ್ಷತಾ ಪೂಜಾರಿ (Bola Akshata Pujrai ಈ ಬಾರಿಯೂ ಚಿನ್ನದ ಪದಕ (gold medal) ಗೆದ್ದಿದ್ದಾರೆ! ಆಕೆ ನನ್ನೂರು ಕಾರ್ಕಳ ತಾಲೂಕಿನ ಬೋಳ ಎಂಬ ಪುಟ್ಟ ಗ್ರಾಮದವರು ಅನ್ನೋದು ನಮಗೆಲ್ಲ ಹೆಮ್ಮೆ. ನಾನು ಬಾಲ್ಯದಿಂದಲೂ ಆಕೆಯ ಬೆಳವಣಿಗೆಯನ್ನು ಗಮನಿಸಿದ್ದೇನೆ ಅನ್ನುವುದು ನನಗೆ ಅಭಿಮಾನ.

ಈ ಬಾರಿ ಆಕೆ ಸ್ಪರ್ಧೆ ಮಾಡಿದ್ದು 52 ಕೆಜಿ ದೇಹತೂಕದ ಸೀನಿಯರ್ ವಿಭಾಗದಲ್ಲಿ. ಅಲ್ಲಿ ಸ್ಪರ್ಧೆ ತುಂಬಾ ಕಠಿಣ ಆಗಿದ್ದು 18 ಮಂದಿ ವಿದೇಶದ ಸ್ಪರ್ಧಿಗಳು ಇದ್ದರು! ಅಲ್ಲಿ ಅಕ್ಷತಾ ಪೂಜಾರಿ ಚಿನ್ನದ ಪದಕ ಗೆದ್ದು ತ್ರಿವರ್ಣ ಧ್ವಜ ಹಾರಿಸಿದ್ದಾರೆ ಅಂದರೆ ಅದು ಎಷ್ಟೊಂದು ದೊಡ್ಡ ಸಾಧನೆ!

ಆಕೆ ವಿಶ್ವಮಟ್ಟದ ಪದಕ ಗೆದ್ದಿರುವುದು ಇದೇ ಮೊದಲಲ್ಲ!

ಆಕೆಯ ಯಶೋಗಾಥೆಯು ಆರಂಭ ಆದದ್ದು 2011ರಲ್ಲಿ. ಅಂದು ಆಕೆ ಲಂಡನ್ ಕಾಮನ್ ವೆಲ್ತ್ ಕೂಟದಲ್ಲಿ ಭಾಗವಹಿಸಿ 8 ಚಿನ್ನದ ಪದಕ ಪಡೆದಿದ್ದರು! ಅದರ ಮುಂದಿನ ವರ್ಷ (2012) ಮತ್ತೆ ಏಷಿಯನ್ ಕೂಟದಲ್ಲಿ ಗೋಲ್ಡ್! ಮತ್ತೆ 2014ರಲ್ಲಿ ವರ್ಲ್ಡ್ ಚಾಂಪಿಯನಶಿಪನಲ್ಲಿ ಗೋಲ್ಡ್! 2018ರಲ್ಲಿ ಏಷಿಯನ್ ದುಬಾಯಿ ಕೂಟದ ಗೋಲ್ಡ್! 2022ರಲ್ಲಿ ಕಝಾಕ್ ಸ್ಥಾನ ಕೂಟದಲ್ಲಿ ಸಿಲ್ವರ್ ಮೆಡಲ್! ಮತ್ತು ಈ ಬಾರಿ ಸೌಥ್ ಆಫ್ರಿಕಾ ಕೂಟದಲ್ಲಿ ಗೋಲ್ಡ್ ಮೆಡಲ್!

ಒಬ್ಬಳು ಹಳ್ಳಿಯ ಸಾಮಾನ್ಯ ಕೃಷಿಕ ಕುಟುಂಬದಿಂದ ಬಂದ ಓರ್ವ ಸೀದಾಸಾದಾ ಹುಡುಗಿ ಇಷ್ಟೊಂದು ವಿದೇಶದ ಕೂಟಗಳಿಗೆ ಹೋಗಿ ಭಾರತವನ್ನು ಪ್ರತಿನಿಧಿಸುವುದೇ ದೊಡ್ಡ ಅಚ್ಚರಿ ಆಗಿರುವಾಗ ಈಕೆ ಹೋದಲ್ಲೆಲ್ಲ ಪದಕಗಳ ಗೊಂಚಲನ್ನು ಗೆದ್ದು ತರುತ್ತಿರುವುದು ನಿಜಕ್ಕೂ ವಿಸ್ಮಯವೇ ಸರಿ. ಅದರ ಜೊತೆಗೆ ಕಳೆದ 14 ವರ್ಷಗಳಲ್ಲಿ ಆಕೆ ಭಾರತದಲ್ಲಿ ಬೇರೆ ಬೇರೆ ನಗರಗಳಲ್ಲಿ ನಡೆದ ಪವರ್ ಲಿಫ್ಟಿಂಗ್ ಕೂಟಗಳಲ್ಲಿ ಭಾಗವಹಿಸಿ ಹೋದಲ್ಲೆಲ್ಲ ಪದಕಗಳನ್ನು ಗೆದ್ದಿದ್ದಾರೆ! ಆಕೆಯ ಬೋಳದ ಮನೆಯ ಶೋಕೇಸಿನಲ್ಲಿ ಮಿಂಚುತ್ತಿರುವ ಹೊಳೆಯುವ ಪದಕಗಳು ಯಾರಿಗಾದರೂ ಸ್ಫೂರ್ತಿಯ ಚಿಲುಮೆ ಆಗುವುದು ಖಂಡಿತ!

ಅಕ್ಷತಾ ಬಾಲ್ಯದಿಂದಲೂ ಗಟ್ಟಿಗಿತ್ತಿ!

ಅಕ್ಷತಾ ಬೋಳ ಗ್ರಾಮದ ಕೃಷಿ ಸಂಸ್ಕೃತಿಯ ಕೆಳಮಧ್ಯಮ ಕುಟುಂಬದಿಂದ ಬಂದವರು. ಅವರ ಮನೆಯಲ್ಲಿ ಯಾರೂ ಹೆಚ್ಚು ಓದಿದವರು ಇರಲಿಲ್ಲ. ಹೈಸ್ಕೂಲ್ ವಿದ್ಯಾಭ್ಯಾಸಕ್ಕೆ ಆಕೆ 6-7 ಕಿಮೀ ದೂರದ ಬೆಳ್ಮಣ್ ಜ್ಯೂ. ಕಾಲೇಜಿಗೆ ಬೆಳಿಗ್ಗೆ ಮತ್ತು ಸಂಜೆ ನಡೆದುಕೊಂಡು ಬರುತ್ತಿದ್ದರು! ಹಸಿವು ಆಕೆಗೆ ಅಭ್ಯಾಸ ಆಗಿತ್ತು. ಕ್ರೀಡೆಯಲ್ಲಿ ಅತೀವ ಆಸಕ್ತಿ ಆಕೆಗೆ ಹೇಗೆ ಬಂತು ಎನ್ನುವುದು ಆಕೆಗೇ ಗೊತ್ತಿಲ್ಲ. ಮುಂದೆ ಪದವಿಯ ಶಿಕ್ಷಣಕ್ಕಾಗಿ ನಿಟ್ಟೆ ವಿದ್ಯಾಸಂಸ್ಥೆಯನ್ನು ಸೇರಿದ್ದು ಆಕೆಯ ಬದುಕಿನಲ್ಲಿ ಮಹತ್ವದ ತಿರುವು ಆಯಿತು. ಅಲ್ಲಿ ಆಕೆಗೆ ಪವರ್ ಲಿಫ್ಟಿಂಗ್ ಆರಿಸಿಕೊಳ್ಳಲು ಸಲಹೆ ದೊರೆಯಿತು ಮತ್ತು ಒಳ್ಳೆಯ ಕೋಚ್ ದೊರಕಿದರು. ಅಲ್ಲಿ ಅಕ್ಷತಾ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ 4 ಘಂಟೆ ಜಿಮ್ ನಲ್ಲಿ ಬೆವರು ಬಸಿಯುತ್ತಿದ್ದರು. ಸಾಧನೆಯ ಹಸಿವು ಕಿಡಿ ಆಗಿದ್ದು ನಿಟ್ಟೆಯಲ್ಲೇ ಎಂದು ಹೇಳಬಹುದು. ʼಪವರ್ ಲಿಫ್ಟಿಂಗ್ ಇಂಡಿಯಾ’ ಎಂಬ ರಾಷ್ಟ್ರಮಟ್ಟದ ಸಂಸ್ಥೆಯು ಆಕೆಗೆ ಇಷ್ಟೊಂದು ಅವಕಾಶಗಳನ್ನು ಮಾಡಿಕೊಟ್ಟಿತು ಮತ್ತು ಇದೇ ವಿಭಾಗದಲ್ಲಿ ಮಿಂಚುತ್ತಿದ್ದ ವಿಜಯ್ ಕಾಂಚನ್ ಎಂಬ ಸಾಧಕರು ಆಕೆಗೆ ಗುರುವಾಗಿ ಸಿಕ್ಕರು.

ಮನೆಯಂಗಳದಲ್ಲಿ ಬಾವಿಯನ್ನು ಕೊರೆದರು

ಅಕ್ಷತಾ ಸಾಧನೆಯ ಹಾದಿಯು ಸುಲಭದ್ದು ಆಗಿರಲಿಲ್ಲ. ತನಗಾದ ಕಿರುಕುಳ, ಅಪಮಾನ, ನೋವು ಎಲ್ಲವೂ ಆಕೆಯನ್ನು ಗಟ್ಟಿ ಮಾಡಿತು ಎಂದು ನನ್ನ ಭಾವನೆ. ತನ್ನದೇ ಮನೆಯಂಗಳದಲ್ಲಿ ಆಕೆ ತನ್ನ ಕುಟುಂಬದ ಸದಸ್ಯರ ಜೊತೆ ಸೇರಿಕೊಂಡು ಒಂದು ಆಳವಾದ ಬಾವಿ ಕೊರೆದದ್ದು ಬಹಳ ದೊಡ್ಡ ಸುದ್ದಿ ಆಗಿತ್ತು. ಕೊರೋನಾ ಸಮಯದಲ್ಲಿ ಕೂಡ ಆಕೆ ತನ್ನ ತರಬೇತಿಯನ್ನು ನಿಲ್ಲಿಸಲಿಲ್ಲ ಅನ್ನುವುದು ನಿಜಕ್ಕೂ ಗ್ರೇಟ್!

ನನಗೆ ಅದಕ್ಕಿಂತ ಕಠಿಣ ಅನ್ನಿಸಿದ್ದು ಆಕೆ ಉದ್ಯೋಗ ಪಡೆಯಲು ಮಾಡಿದ ಸ್ವಾಭಿಮಾನಿ ಹೋರಾಟ. ತನ್ನ ಚಿನ್ನದ ಪದಕಗಳನ್ನು ಆಕೆ ತೆಗೆದುಕೊಂಡು ಕಚೇರಿಯಿಂದ ಕಚೇರಿಗೆ ಅಲೆಯುವ ದೃಶ್ಯ ನನಗೆ ಭಾರೀ ನೋವು ಕೊಡುತ್ತಿತ್ತು. ಆಗ ನಿಟ್ಟೆಯ ಒಂದು ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ (ಈಗ ಮಾಜಿ) ಬಂದಿದ್ದಾಗ ನಾನು ಆಕೆಯನ್ನು ಕರೆದುಕೊಂಡು ಫೈಲ್ ಮುಂದಿಟ್ಟು ಸರಕಾರಿ ನೌಕರಿ ನೀಡಲು ವಿನಂತಿ ಮಾಡಿದ್ದೆ. ಆಗ ಆ ಸಿಎಂ ನಿರುತ್ಸಾಹ ತೋರಿಸಿ ‘ಏನಮ್ಮಾ, ಪವರ್ ಲಿಫ್ಟಿಂಗಿಗೆ ಮಾನ್ಯತೆ ಇದೆಯಾ? ಅದು ಒಲಿಂಪಿಕ್ಸ್ ಕೂಟದಲ್ಲಿ ಬರ್ತದಾ?’ ಎಂದೆಲ್ಲ ಕೇಳಿದ್ದರು.

ಈ ಪ್ರಶ್ನೆಯನ್ನು ಅಕ್ಷತಾ ಹಲವು ಬಾರಿ ಎದುರಿಸಿದ್ದಾರೆ. ಆದರೆ ಲಂಡನ್ ಕಾಮನ್ ವೆಲ್ತ್ ಕೂಟದಲ್ಲಿ ಆಕೆ 8 ಪದಕಗಳನ್ನು ಗೆದ್ದದ್ದು, ವರ್ಲ್ಡ್ ಚಾಂಪಿಯನಶಿಪ್ ಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದದ್ದು ಭಾರತವನ್ನು ಪ್ರತಿನಿಧಿಸಿ ಎನ್ನುವುದನ್ನು ಎಲ್ಲರೂ ಮರೆಯುತ್ತಾರೆ! ಇದು ನಿಜವಾಗಿಯೂ ಕ್ರೀಡಾಲೋಕದ ದುರಂತ ಅಲ್ಲವೇ?

ಇದಕ್ಕಿಂತ ದೊಡ್ಡ ದುರಂತ ಎಂದರೆ…

ಆಕೆ ಪ್ರತೀ ಬಾರಿ ವಿದೇಶದ ಲಿಫ್ಟಿಂಗ್ ಕೂಟಗಳಿಗೆ ಹಾಜರಾಗುವಾಗ ‘ಪವರ್ ಲಿಫ್ಟಿಂಗ್ ಇಂಡಿಯಾ’ ಸಂಸ್ಥೆಯು ಅನುಮತಿ ಮತ್ತು ಮಾರ್ಗದರ್ಶನ ಮಾಡುತ್ತದೆ. ಆದರೆ ಆಕೆಯ ಪ್ರಯಾಣದ ಮತ್ತು ಇತರ ಖರ್ಚುಗಳಿಗೆ ಸರಕಾರದ ಅನುದಾನ ಇಲ್ಲ, ನೀವೇ ಹೊಂದಿಸಿಕೊಳ್ಳಬೇಕು ಎನ್ನುವ ಪತ್ರ ಬರೆಯುತ್ತದೆ. ಆಗೆಲ್ಲ ಅಕ್ಷತಾ ನೆರವಿಗೆ ಬರುವುದು ಆಕೆಯ ಅಭಿಮಾನಿಗಳು, ಗೆಳೆಯರು ಮತ್ತು ಒಂದಿಷ್ಟು ಕ್ರೀಡಾಭಿಮಾಮಾನಿ ಸಂಘಟನೆಗಳು ಅಂದರೆ ನೀವು ನಂಬಲೇಬೇಕು. ಸ್ವಾಭಿಮಾನಿ ಅಕ್ಷತಾ ಅವರಿಗೆ ಇದು ತುಂಬಾ ನೋವು ಕೊಡುವ ಸಂಗತಿ. ಈ ಬಾರಿ ಕೂಡ ಆಕೆ ತನ್ನ ಆಫ್ರಿಕಾ ಪ್ರಯಾಣಕ್ಕೆ ಒಂದು ಲಕ್ಷ ಮೂವತ್ತು ಸಾವಿರ ದುಡ್ಡು ಹೊಂದಿಸಬೇಕಾಯಿತು! ಇದನ್ನೆಲ್ಲ ಗಮನಿಸಿದಾಗ ಆಕೆಯ ಕ್ರೀಡಾ ಸಾಧನೆ ನಮಗೆ ಇನ್ನಷ್ಟು ಹೊಳೆದು ಕಾಣುತ್ತದೆ. ಸರಕಾರದ ಕ್ರೀಡಾ ಇಲಾಖೆ, ಕ್ರೀಡಾಭಿಮಾನಿ ಸಂಘಟನೆಗಳು, ಜನಪ್ರತಿನಿಧಿಗಳು ಅಕ್ಷತಾ ಅವರಂತಹ ಕ್ರೀಡಾ ಸಾಧಕರ ನೆರವಿಗೆ ನಿಲ್ಲದೆ ಹೋದರೆ ನೂರಾರು ಕ್ರೀಡಾ ಪ್ರತಿಭೆಗಳು ನಲುಗಿ ಹೋಗುವ ಅಪಾಯ ಇದೆ. ಅಂದಹಾಗೆ ಅಕ್ಷತಾಗೆ ಆಫ್ರಿಕಾದಲ್ಲಿ ಬೆಸ್ಟ್ ಲಿಫ್ಟರ್ ಆಫ್ ದ ಟೂರ್ನಿ ಪ್ರಶಸ್ತಿ ಕೂಡ ದೊರೆತಿದೆ.

ಭರತವಾಕ್ಯ

ಏನಿದ್ದರೂ ಕಾರ್ಕಳ ತಾಲೂಕಿನ ಬೋಳ ಎಂಬ ಪುಟ್ಟ ಗ್ರಾಮದಿಂದ ಲಂಡನ್, ಅಮೆರಿಕ, ಆಫ್ರಿಕ, ದುಬಾಯಿ, ಕಝಾಕಿಸ್ತಾನ್ ತಲುಪಿದ ಆಕೆಯ ಹೋರಾಟ ಮತ್ತು ಸಾಹಸಗಳು ಸಾವಿರಾರು ಗ್ರಾಮೀಣ ಸಾಧಕರಿಗೆ ಸ್ಫೂರ್ತಿ ಆಗಬಲ್ಲದು. ಸರಕಾರ ಆಕೆಯನ್ನು ದೊಡ್ಡದಾಗಿ ಗುರುತಿಸಬೇಕು. ಆಕೆಯ ಬದುಕಿನ ಕಥೆಯು ಹೈಸ್ಕೂಲಿನ ಕನ್ನಡ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆಯಬೇಕು. ಏನಂತೀರಿ?

ಅಭಿನಂದನೆಗಳು ಅಕ್ಷತಾ. ಯು ಮೇಡ್ ಅಸ್ ಪ್ರೌಡ್.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕ್ಯಾಪ್ಟನ್ ಪ್ರಾಂಜಲ್ ಪರಾಕ್ರಮಕ್ಕೆ ಒಲಿದ ಶೌರ್ಯ ಚಕ್ರ

Continue Reading

ಭವಿಷ್ಯ

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ತದಿಗೆ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ಸೋಮವಾರವೂ ಸಿಂಹ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಸಿಂಹ ರಾಶಿಯವರು ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ ಅಹೋರಾತ್ರಿ ವಾರ: ಸೋಮವಾರ
ನಕ್ಷತ್ರ: ಪುಷ್ಯಾ 06:01 ಯೋಗ: ವಜ್ರ 26:04
ಕರಣ: ತೈತುಲ 17:28 ದಿನದ ವಿಶೇಷ: ಗೆಂಜಿಗಸೂರು ಶಂಕರ ಭಾರತಿಗಳ ಆರಾಧನೆ, ಮೊಹರಂ ಆರಂಭ

ಸೂರ್ಯೋದಯ : 05:59   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00

ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವುದು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಯೋಚಿಸುವಿರಿ. ಈ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನಗತಿ ಇರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ : ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವವಿದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

School Principal: ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ.

VISTARANEWS.COM


on

School Principal
Koo

ಲಖನೌ: “ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ” ಎಂದು ಶಾಲೆಯ ಗೋಡೆ ಮೇಲೆ ಬರೆದಿರಲಾಗುತ್ತದೆ. ಜ್ಞಾನದೇಗುಲದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವ ಜತೆಗೆ ಶಿಕ್ಷಕರ ಜೀವನವೂ ಸುಂದರವಾಗುತ್ತದೆ. ಇಂತಹ ಜ್ಞಾನ ದೇಗುಲದಲ್ಲಿ ಶಿಕ್ಷಕರಾದವರು (Teachers) ಮಕ್ಕಳಿಗೆ ಬೋಧನೆ ಮಾಡುವ ಜತೆಗೆ ಮೌಲ್ಯಗಳನ್ನು ತುಂಬಬೇಕು. ಆದರೆ, ಇತ್ತೀಚೆಗೆ ಜ್ಞಾನ ದೇಗುಲಗಳಲ್ಲಿಯೇ ಶಿಕ್ಷಕರು ಅಪದ್ಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಪ್ರಾಂಶುಪಾಲ (School Principal) ಹಾಗೂ ಮಹಿಳಾ ಟೀಚರ್‌ ರೊಮ್ಯಾನ್ಸ್‌ ಮಾಡಿದ ಫೋಟೊ ಈಗ ವೈರಲ್‌ ಆಗಿದೆ.

ಹೌದು, ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಮಹಾರಾಣಾ ಪ್ರತಾಪ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ. ಖಾಸಗಿ ಶಾಲೆಯಲ್ಲಿ ಇಂತಹದ್ದೊಂದು ಅನಾಚಾರದ ಕೃತ್ಯ ನಡೆದಿದೆ. ಫೋಟೊಗಳನ್ನು ನೋಡಿದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ (ಜುಲೈ 7) ವಿಡಿಯೊ ವೈರಲ್‌ ಆಗಿದೆ. ಶಿಕ್ಷಕರ ಕುಲಕ್ಕೆ ಇವರು ಅವಮಾನ ಇದ್ದಹಾಗೆ. ಇಂತಹ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇವರನ್ನು ಅಮಾನತುಗೊಳಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತುಂಬ ದಿನಗಳಿಂದ ಸಂಬಂಧ ಹೊಂದಿದ್ದಾರೆ. ಆದರೆ, ಇವರು ಶಾಲೆಯಲ್ಲಿಯೇ ರೊಮ್ಯಾನ್ಸ್‌ ಮಾಡಿರುವುದು ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಇದು ಕಾನ್ವೆಂಟ್‌ ಶಾಲೆ ಎಂದು ತಿಳಿದುಬಂದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಕೆಲ ದಿನಗಳ ಹಿಂದೆ ಬೇತಮಂಗಲ ಪೊಲೀಸರು ಬಂಧಿಸಿದ್ದರು.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿದ್ದರು.

ಇದನ್ನೂ ಓದಿ: ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

Continue Reading

ಪ್ರಮುಖ ಸುದ್ದಿ

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

VISTARANEWS.COM


on

WCPL 2024
Koo

ಬೆಂಗಳೂರು: 2024ರ ಮಹಿಳಾ ಕೆರಿಬಿಯನ್ ಪ್ರೀಮಿಯರ್ ಲೀಗ್​​ನಲ್ಲಿ (WCPL 2024) ಟ್ರಿನ್​ಬ್ಯಾಗೊ ನೈಟ್ ರೈಡರ್ಸ್ ತಂಡವನ್ನು ಜೆಮಿಮಾ ರೊಡ್ರಿಗಸ್ ಹಾಗೂ ಶಿಖಾ ಪಾಂಡೆ ಸೇರಿಕೊಂಡಿದ್ದಾರೆ. ಈ ಋತುವಿನಲ್ಲಿ ನೈಟ್ ರೈಡರ್ಸ್ ಪರ ವಿದೇಶಿ ಆಟಗಾರರಾಗಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಸೇರಲಿದ್ದಾರೆ. 2024ರ ಸಿಪಿಎಲ್ ಆಗಸ್ಟ್ 21ರಿಂದ 29ರವರೆಗೆ ಟ್ರಿನಿಡಾಡ್​ನಲ್ಲಿ ನಡೆಯಲಿದ್ದು, ಎಲ್ಲಾ ಏಳು ಪಂದ್ಯಗಳು ಟ್ರಿನಿಡಾಡ್​​ನ ತರೂಬಾದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿವೆ.

ಇದೇ ಮೊದಲ ಬಾರಿಗೆ ನಾನು ಡಬ್ಲ್ಯುಸಿಪಿಎಲ್​​ಗೆ ಬರುತ್ತಿದ್ದೇನೆ. ನಾನು ಕೆರಿಬಿಯನ್​​ನಲ್ಲಿ ಭಾರತಕ್ಕಾಗಿ ಸಾಕಷ್ಟು ಆಡಿದ್ದೇನೆ, ಆದರೆ ನಾನು ಡಬ್ಲ್ಯುಸಿಪಿಎಲ್​​ನ ನೈಟ್ ರೈಡರ್ಸ್ ಅನ್ನು ಪ್ರತಿನಿಧಿಸಲಿದ್ದೇನೆ ಎಂದು ತಿಳಿದು ಉತ್ಸುಕನಾಗಿದ್ದೇನೆ,” ಎಂದು ರೋಡ್ರಿಗಸ್ ಹೇಳಿದ್ದಾರೆ.

ಪ್ರಪಂಚದಾದ್ಯಂತ ಅವರು ಹೊಂದಿರುವ ಪರಂಪರೆ ನಮಗೆಲ್ಲರಿಗೂ ತಿಳಿದಿದೆ. 2022ರ ಚಾಂಪಿಯನ್ ಟಿಕೆಆರ್ ಮಹಿಳಾ ತಂಡ ಕೂಡ ಹೆಮ್ಮೆಯ ತಂಡವಾಗಿದೆ. ಅಕ್ಟೋಬರ್​ನಲ್ಲಿ ನಡೆಯಲಿರುವ ಮಹಿಳಾ ವಿಶ್ವ ಟಿ20ಗೆ ಮುಂಚಿತವಾಗಿ ಈ ಪಂದ್ಯಾವಳಿಯು ನಮಗೆ ಉತ್ತಮ ಸಿದ್ಧತೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ನಾನು ನಂಬುತ್ತೇನೆ. ವಿಶ್ವದ ಕೆಲವು ಅತ್ಯುತ್ತಮ ಆಟಗಾರರು ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, “ಎಂದು ಅವರು ಹೇಳಿದರು.

ನೈಟ್ ರೈಡರ್ಸ್ 2023 ರ ಋತುವಿನಲ್ಲಿ ತಮ್ಮನ್ನು ಪ್ರತಿನಿಧಿಸಿದ ಐದು ಆಟಗಾರರನ್ನು ಉಳಿಸಿಕೊಂಡಿದೆ, ಡಿಯಾಂಡ್ರಾ ಡಾಟಿನ್, ಶಮಿಲಾ ಕಾನ್ನೆಲ್, ಕೈಸಿಯಾ ನೈಟ್, ಜೈದಾ ಜೇಮ್ಸ್ ಮತ್ತು ಸಮರಾ ರಾಮ್​​ನಾಥ್ ಮರಳಿದ್ದಾರೆ. ತಂಡದಲ್ಲಿ ಇನ್ನೂ ಆರು ಸ್ಥಾನಗಳು ಉಳಿದಿದ್ದು, ಜುಲೈನಲ್ಲಿ ನಡೆಯಲಿರುವ ಡಬ್ಲ್ಯುಸಿಪಿಎಲ್ ಡ್ರಾಫ್ಟ್​​ನಲ್ಲಿ ಈ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

ನಮ್ಮ ಸ್ಥಳೀಯ ಕೆರಿಬಿಯನ್ ಆಟಗಾರರನ್ನು ಉಳಿಸಿಕೊಳ್ಳಲು ಮತ್ತು ಈ ವರ್ಷದ ಮಹಿಳಾ ಸಿಪಿಎಲ್​​ಗೆ ನಾಲ್ಕು ವಿಶ್ವಪ್ರಸಿದ್ಧ ವಿದೇಶಿ ಆಟಗಾರರೊಂದಿಗೆ ಸಹಿ ಮಾಡಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ನೈಟ್ ರೈಡರ್ಸ್ ಗ್ರೂಪ್​​​ನ ಸಿಇಒ ವೆಂಕಿ ಮೈಸೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಯಾಂಡ್ರಾ ಡಾಟಿನ್ ಮತ್ತೊಮ್ಮೆ ತಂಡವನ್ನು ಮುನ್ನಡೆಸುತ್ತಿರುವುದು ಸಂತಸ ತಂದಿದೆ. ಉದ್ಘಾಟನಾ ವರ್ಷದಿಂದ ಅವರು ತಂಡದ ಅದ್ಭುತ ನಾಯಕಿಯಾಗಿದ್ದಾರೆ, 2022 ರಲ್ಲಿ ನಮ್ಮ ಪ್ರಶಸ್ತಿ ಗೆದ್ದಾಗಿನಿಂದ ನಾಯಕ ಮತ್ತು ಆಟಗಾರ್ತಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ “ಎಂದು ಅವರು ಹೇಳಿದರು.

ಜೆಮಿಮಾ ರೊಡ್ರಿಗಸ್ ಮತ್ತು ಶಿಖಾ ಪಾಂಡೆ ಪಂದ್ಯಾವಳಿಯ ಗುಣಮಟ್ಟ ಹೆಚ್ಚಿಸಲಿದ್ದಾರೆ. ಡಬ್ಲ್ಯುಸಿಪಿಎಲ್​​ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ನಾವು ಬಿಸಿಸಿಐಗೆ ತುಂಬಾ ಕೃತಜ್ಞರಾಗಿದ್ದೇವೆ. ಸೂಪರ್ ಸ್ಟಾರ್​ಗಳಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಅವರೊಂದಿಗೆ ಈ ಎರಡು ದೊಡ್ಡ ಭಾರತೀಯ ಹೆಸರುಗಳ ಸೇರ್ಪಡೆಯು ಕ್ರಿಕೆಟ್ ಗೆ ಕಳೆ ಹೆಚ್ಚಿಸಲಿದೆ, “ಎಂದು ಅವರು ಹೇಳಿದರು.

ಮಹಿಳಾ ತಂಡದ ಆಟಗಾರರು ಇವರು

ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಶಿಖಾ ಪಾಂಡೆ, ಕೈಸಿಯಾ ನೈಟ್, ಶಮಿಲಾ ಕಾನ್ನೆಲ್, ಜೈದಾ ಜೇಮ್ಸ್, ಸಮರಾ ರಾಮನಾಥ್.

Continue Reading
Advertisement
Ghee benefits
ಲೈಫ್‌ಸ್ಟೈಲ್14 mins ago

How to spot fake ghee: ನಾವು ಖರೀದಿಸಿದ ತುಪ್ಪ ಶುದ್ಧವೋ ಕಲಬೆರಕೆಯೋ ಪರೀಕ್ಷಿಸುವುದು ಹೇಗೆ?

ರಾಜಮಾರ್ಗ ಅಂಕಣ bola akshta pujari
ಅಂಕಣ15 mins ago

ರಾಜಮಾರ್ಗ ಅಂಕಣ: ದಕ್ಷಿಣ ಆಫ್ರಿಕಾದಲ್ಲಿ ಚಿನ್ನದ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

karnataka weather Forecast
ಮಳೆ44 mins ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ನೆಮ್ಮದಿ ನೆಲೆಸಬೇಕೆ? ಹಾಗಿದ್ದರೆ ಅಡುಗೆ ಒಲೆಯ ದಿಕ್ಕು ಸರಿಯಾಗಿರಲಿ!

dina Bhavishya
ಭವಿಷ್ಯ2 hours ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

School Principal
ದೇಶ7 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ7 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ8 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ8 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ8 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ14 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ14 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌