Jai Shankar | ಲಾಡೆನ್‌ಗೆ ಆತಿಥ್ಯ ನೀಡಿದ್ದ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಉಪದೇಶ ನೀಡುವ ಯೋಗ್ಯತೆ ಇಲ್ಲ: ಭಾರತ ಕಿಡಿ - Vistara News

ಪ್ರಮುಖ ಸುದ್ದಿ

Jai Shankar | ಲಾಡೆನ್‌ಗೆ ಆತಿಥ್ಯ ನೀಡಿದ್ದ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಉಪದೇಶ ನೀಡುವ ಯೋಗ್ಯತೆ ಇಲ್ಲ: ಭಾರತ ಕಿಡಿ

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಮತ್ತೆ ಪ್ರಸ್ತಾಪಿಸಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲ್ವಾಲ್‌ ಭುಟ್ಟೊ ಹೇಳಿಕೆಯನ್ನು ಭಾರತದ ವಿದೇಶಾಂಗ ಸಚಿವ ಎಸ್‌ ಜೈ ಶಂಕರ್‌ ತೀಕ್ಷ್ಣವಾಗಿ ಖಂಡಿಸಿದ್ದಾರೆ.

VISTARANEWS.COM


on

jai shankar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್:‌ ಒಸಾಮಾ ಬಿನ್‌ ಲಾಡೆನ್‌ನಂಥ ಅಂತಾರಾಷ್ಟ್ರೀಯ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ, ಸಂಸತ್ತಿನ ಮೇಲೆ ದಾಳಿ ನಡೆಸಿದ ಉಗ್ರರ ಅಡಗುತಾಣವಾಗಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸುವ ಯಾವುದೇ ಯೋಗ್ಯತೆ ಇಲ್ಲ ಎಂದು ವಿದೇಶಾಂಗ ಸಚಿವ ಎಸ್‌ ಜೈ ಶಂಕರ್‌ ಅವರು ( Jai Shankar ) ಪಾಕ್‌ ವಿರುದ್ಧ ಗುಡುಗಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವವನ್ನು ವಿಸ್ತರಿಸಬಾರದು. ಕಾಶ್ಮೀರ ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಲು ಪಾಕಿಸ್ತಾನ ಬಯಸುತ್ತದೆ ಎಂದು ಪಾಕ್‌ ವಿದೇಶಾಂಗ ಸಚಿವ ಬಿಲ್ವಾಲ್‌ ಭುಟ್ಟೊ ಅವರ ಹೇಳಿಕೆಯನ್ನು ಕಠಿಣ ಶಬ್ದಗಳಲ್ಲಿ ಅವರು ಖಂಡಿಸಿದ್ದಾರೆ.

” ಒಸಾಮಾ ಬಿನ್‌ ಲಾಡೆನ್‌ಗೆ ಆತಿಥ್ಯ ನೀಡಿದ್ದ ಹಾಗೂ ಭಾರತದ ಸಂಸತ್ತಿನ ಮೇಲೆ ದಾಳಿ ನಡೆಸಿದ್ದ ಭಯೋತ್ಪಾದಕರಿಗೆ ಆಶ್ರಯ, ಕುಮ್ಮಕ್ಕು ಕೊಟ್ಟಿದ್ದ ನೆರೆಯ ದೇಶಕ್ಕೆ, ವಿಶ್ವಸಂಸ್ಥೆಯಂಥ ವೇದಿಕೆಯಲ್ಲಿ ಇತರರಿಗೆ ಉಪದೇಶ ನೀಡುವ ವಿಶ್ವಾಸಾರ್ಹತೆ ಅಥವಾ ಯಾವುದೇ ಯೋಗ್ಯತೆಯೂ ಇಲ್ಲʼʼ ಎಂದು ಪಾಕಿಸ್ತಾನದ ಹೆಸರು ಹೇಳದೆಯೇ ಜೈಶಂಕರ್‌ ತರಾಟೆಗೆ ತೆಗೆದುಕೊಂಡರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಕುರಿತ ಸಂವಾದದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದೇಶಾಂಗ ಸಚಿವ ಎಸ್.‌ ಜೈಶಂಕರ್‌ ಅವರು, ಮುಂಬಯಿ ಮೇಲೆ 26/11 ರ ಉಗ್ರ ದಾಳಿಯ ಭಯೋತ್ಪಾದಕರಿಗೆ, ಸಂಚುಕೋರರಿಗೆ ಈಗಲೂ ಆಶ್ರಯ ನೀಡಲಾಗುತ್ತಿದೆ. ಅವರಿಗೆ ಇನ್ನೂ ಶಿಕ್ಷೆಯಾಗಿಲ್ಲ. ಆದ್ದರಿಂದ ನಾನಾ ಸ್ತರಗಳಲ್ಲಿ ಭಯೋತ್ಪಾದಕರಿಗೆ ಕುಮ್ಮಕ್ಕು, ಆಶ್ರಯ ನೀಡುತ್ತಿರುವುದನ್ನು ನಿಲ್ಲಿಸಲು ಹಾಗೂ ನಾನಾ ವೇದಿಕೆಗಳ ದುರ್ಬಳಕೆಯನ್ನು ತಡೆಯಲು ವಿಶ್ವ ಸಮುದಾಯ ಸಂಘಟಿತ ಉಪಕ್ರಮಗಳನ್ನು ಕೈಗೊಳ್ಳಬೇಕು ಎಂದು ಜೈ ಶಂಕರ್‌ ಹೇಳಿದರು.

ವಿಶ್ವಸಂಸ್ಥೆಯಲ್ಲಿ 15 ರಾಷ್ಟ್ರಗಳ ಮಂಡಳಿಯ ಅಧ್ಯಕ್ಷತೆಯನ್ನು ಪ್ರಸ್ತುತ ಭಾರತ ವಹಿಸಿದೆ. ಆದರೆ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಇದುವರೆಗೆ ಸಿಕ್ಕಿಲ್ಲ.

ಭಯೋತ್ಪಾದನೆಯ ವಿರುದ್ಧ ನಾವು ಅತ್ಯುತ್ತಮವಾದ ತಂತ್ರಗಳನ್ನು ಸಂಘಟಿತವಾಗಿ ಕೈಗೊಳ್ಳುವ ಕಾಲ ಸನ್ನಿಹಿತವಾಗಿದೆ. ಹೀಗಿರುವಾಗ ಭಯೋತ್ಪಾದನೆಯ ಬೆದರಿಕೆಯನ್ನು ಸಾಮಾನ್ಯ ಎಂದು ಪರಿಗಣಿಸಲು ನಡೆಸುವ ಯತ್ನಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಚೀನಾ ಮತ್ತು ಪಾಕಿಸ್ತಾನವನ್ನು ಜೈ ಶಂಕರ್‌ ಟೀಕಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

IPL 2024: ಐದು ಬಾರಿಯ ಚಾಂಪಿಯನ್ಸ್ ಮುಂಬಯಿ ಇಂಡಿಯನ್ಸ್ ತವರು ಸ್ಟೇಡಿಯಮ್​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತಾ ವಿರುದ್ಧ ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿದೆ. ಪ್ರಸ್ತುತ ಮುಂಬೈನಲ್ಲಿ ಫಾರ್ಮ್​ನಲ್ಲಿ ಇಲ್ಲ. ಆದರೂ ಗೆಲುವಿಗಾಗಿ ಪ್ರಯತ್ನಿಸಲಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) 51 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಮುಂಬೈ ಇಂಡಿಯನ್ಸ್ ತನ್ನ ಕೊನೆಯ ನಾಲ್ಕು ಪಂದ್ಯಗಳನ್ನು ತವರಿನಲ್ಲಿ ಆಡಿದೆ ಮತ್ತು ಅದರಲ್ಲಿ ಮೂರನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ತವರಿನ ಪರಿಸ್ಥಿತಿಯನ್ನು ಸದುಪಯೋಗಪಡಿಸಿಕೊಂಡು ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಮೂರು ಪಂದ್ಯಗಳ ಸೋಲಿನ ಸರಣಿಯನ್ನು ಕೊನೆಗೊಳಿಸುವ ವಿಶ್ವಾಸದಲ್ಲಿದೆ ಹಾರ್ದಿಕ್ ಪಾಂಡ್ಯ ಬಳಗ.

ಐದು ಬಾರಿಯ ಚಾಂಪಿಯನ್ಸ್ ಮುಂಬಯಿ ಇಂಡಿಯನ್ಸ್ ತವರು ಸ್ಟೇಡಿಯಮ್​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತಾ ವಿರುದ್ಧ ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿದೆ. ಪ್ರಸ್ತುತ ಮುಂಬೈನಲ್ಲಿ ಫಾರ್ಮ್​ನಲ್ಲಿ ಇಲ್ಲ. ಆದರೂ ಗೆಲುವಿಗಾಗಿ ಪ್ರಯತ್ನಿಸಲಿದೆ.

ರೋಹಿತ್ ಶರ್ಮಾಗೆ ಇಲ್ಲ ಚಾನ್ಸ್​

ಶುಕ್ರವಾರ (ಮೇ 3) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ನಂತರ ಆತಿಥೇಯರು ಆಟಕ್ಕಾಗಿ ವಿಶೇಷ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದರು. ಅಂದರೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಹೆಸರು ಆಡುವ ಹನ್ನೊಂದರಲ್ಲಿ ಕಾಣೆಯಾಗಿತ್ತು. ಆದರೆ, ಅವರು ಇಂಪ್ಯಾಕ್ಟ್​ ಪ್ಲೇಯರ್ ಆಗಿ ಆಡಿದರು. ಅವರು ಫೀಲ್ಡಿಂಗ್​ಗೆ ಬರಲಿಲ್ಲ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಸ್ಫೋಟಕ ಮಾಹಿತಿ ಬಹಿರಂಗ

ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡುತ್ತಿರುವುದರಿಂದ, ಅನುಭವಿ ಬ್ಯಾಟರ್​ ಮೈದಾನಕ್ಕೆ ಇಳಿಯಲಿಲ್ಲ. ಆದರೆ ಪಂದ್ಯದ ದ್ವಿತೀಯಾರ್ಧದಲ್ಲಿ ಬ್ಯಾಟಿಂಗ್ ಮಾಡಲು ಹೊರಬಂದರು. ಕಳೆದ ಮೂರು ಇನ್ನಿಂಗ್ಸ್​ಗಳಲ್ಲಿ ರೋಹಿತ್ ಎರಡಂಕಿಯ ಗಡಿ ತಲುಪಲು ಸಾಧ್ಯವಾಗಿಲ್ಲ. ಹೀಗಾಗಿ ಮರಳಲು ಎದುರು ನೋಡುತ್ತಿದ್ದಾರೆ.

ನಾವು ಬೌಲಿಂಗ್ ಮಾಡುತ್ತೇವೆ. ಇದು ಯಾವಾಗಲೂ ಹೆಮ್ಮೆಗಾಗಿ ಆಡುವ ಪಂದ್ಯ. ನಮಗೆ ಸಾಕಷ್ಟು ಕಠಿಣವಾಗಿ ಕಾಣುತ್ತದೆ ಆದರೆ ಅದೇ ಸಮಯದಲ್ಲಿ, ನಾವು ಉತ್ತಮ ಕ್ರಿಕೆಟ್ ಆಡಲು ಬಯಸುತ್ತೇವೆ. ತವರಿಗೆ ಮರಳಲು ಸಂತೋಷವಾಗಿದೆ. ಉತ್ತಮ ಟ್ರ್ಯಾಕ್​ನಂತೆ ಕಾಣುತ್ತದೆ. ಇದು ಹೊಸ ಪಿಚ್​ ಆದ್ದರಿಂದ ಮೊದಲು ಬೌಲಿಂಗ್ ಮಾಡುವುದು ಒಳ್ಳೆಯದು ಎಂದು ಭಾವಿಸಿದೆ. ನಬಿ ಬದಲಿಗೆ ನಮನ್ ಧೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ,” ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಪ್ಲೇಯಿಂಗ್ ಇಲೆವೆನ್ ಇಂತಿದೆ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೇಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ಸಿ), ನಮನ್ ಧೀರ್, ಟಿಮ್ ಡೇವಿಡ್, ಜೆರಾಲ್ಡ್ ಕೊಟ್ಜೆ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.

ಕೋಲ್ಕತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್​ ಕೀಪರ್), ಸುನಿಲ್ ನರೈನ್, ಆಂಗ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

Continue Reading

ದೇಶ

Darshanam Mogulaiah: 2 ವರ್ಷದ ಹಿಂದೆ ಪದ್ಮಶ್ರೀ ಪಡೆದ ಸಾಧಕ ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕ!

Darshanam Mogulaiah: ಸಂಗೀತ ವಾದನವಾದ ಕಿನ್ನೇರವನ್ನು ನುಡಿಸುವಲ್ಲಿ, ಆ ವಾದನಕ್ಕೆ ರಾಷ್ಟ್ರೀಯ ಗೌರವ ಸಿಗುವಲ್ಲಿ ದರ್ಶನಂ ಮೊಗುಳಯ್ಯ ಅವರ ಪಾತ್ರ ನಿರ್ಣಾಯಕವಾಗಿದೆ. ಇದೇ ಕಾರಣಕ್ಕಾಗಿ ಕೇಂದ್ರ ಸರ್ಕಾರವು 2022ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅದೇ ವರ್ಷ ದೇಶಾದ್ಯಂತ ಸುದ್ದಿಯಾದ ಇವರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನವೂ ದೊರೆತಿತ್ತು. ಆದರೆ, ಈಗ ದರ್ಶನಂ ಮೊಗುಳಯ್ಯ ಅವರು ಕೂಲಿ ಕಾರ್ಮಿಕರಾಗಿ ದುಡಿಯುವ ಅನಿವಾರ್ಯತೆಗೆ ಸಿಲುಕಿದ್ದಾರೆ.

VISTARANEWS.COM


on

Darshanam Mogulaiah
Koo

ಹೈದರಾಬಾದ್: ಭಾರತದಲ್ಲಿ ಕಲಾವಿದರಿಗೆ, ಸಾಧಕರಿಗೆ ಒಂದೋ ಅತಿಯಾದ ಗೌರವ ಸಿಗುತ್ತದೆ. ಇಲ್ಲದಿದ್ದರೆ, ಅವರ ಜೀವನವೇ ಸಂಕಷ್ಟಕ್ಕೆ ಸಿಲುಕಿದರೂ ಅವರು ಮುಖ್ಯವಾಹಿನಿಯಲ್ಲಿ ಇರುವುದಿಲ್ಲ. ಅವರಿಗೆ ಸಹಾಯಹಸ್ತ ಚಾಚುವುದಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಎರಡು ವರ್ಷಗಳ ಹಿಂದಷ್ಟೇ ಪದ್ಮಶ್ರೀ ಪ್ರಶಸ್ತಿ (Padma Shri Award) ಪಡೆದ ತೆಲಂಗಾಣದ (Telangana) ಸಾಧಕ ದರ್ಶನಂ ಮೊಗುಳಯ್ಯ (Darshanam Mogulaiah) ಅವರು ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಈ ಫೋಟೊಗಳು ಹಾಗೂ ವಿಡಿಯೊಗಳು (Viral News) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹೌದು, ಸಂಗೀತ ವಾದನವಾದ ಕಿನ್ನೇರವನ್ನು ನುಡಿಸುವಲ್ಲಿ, ಆ ವಾದನಕ್ಕೆ ರಾಷ್ಟ್ರೀಯ ಗೌರವ ಸಿಗುವಲ್ಲಿ ದರ್ಶನಂ ಮೊಗುಳಯ್ಯ ಅವರ ಪಾತ್ರ ನಿರ್ಣಾಯಕವಾಗಿದೆ. ಇದೇ ಕಾರಣಕ್ಕಾಗಿ ಕೇಂದ್ರ ಸರ್ಕಾರವು 2022ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಆಗ ರಾಷ್ಟ್ರಪತಿಯಾಗಿದ್ದ ರಾಮನಾಥ್‌ ಕೋವಿಂದ್‌ ಅವರು ದರ್ಶನಂ ಮೊಗುಳಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. ಇದಾದ ಬಳಿಕ ಇವರು ಭಾರತದಾದ್ಯಂತ ಸುದ್ದಿಯಾಗಿದ್ದರು. ಜನರಿಂದಲೂ ಮೆಚ್ಚುಗೆಗಳ ಮಹಾಪೂರವೇ ಹರಿದುಬಂದಿತ್ತು.

ಈಗ ದಿನಗೂಲಿ ಕಾರ್ಮಿಕ

ಪದ್ಮಶ್ರೀ ಪ್ರಶಸ್ತಿ ಪಡೆದ ದರ್ಶನಂ ಮೊಗುಳಯ್ಯ ಅವರು ಈಗ ಅಂದರೆ 73ನೇ ವಯಸ್ಸಿನಲ್ಲಿ ಹೈದರಾಬಾದ್ ಬಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕುಟುಂಬಕ್ಕೆ ಇವರೇ ಆಧಾರ ಸ್ತಂಭವಾಗಿದ್ದು, ಮೂರು ಹೊತ್ತಿನ ಊಟಕ್ಕಾಗಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಫೋಟೊಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ, ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಸಾಧಕ ಇಳಿ ವಯಸ್ಸಿನಲ್ಲಿ ಊಟಕ್ಕಾಗಿ ಕೂಲಿ ಕೆಲಸ ಮಾಡಬೇಕಾ ಎಂದು ಜನ ಪ್ರಶ್ನಿಸಿದ್ದಾರೆ.

ಸರ್ಕಾರ ಕೊಟ್ಟ ಕೋಟಿ ರೂ. ಏನಾಯ್ತು?

ದರ್ಶನಂ ಮೊಗುಳಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡುತ್ತಲೇ ತೆಲಂಗಾಣ ಸರ್ಕಾರವು ಅವರಿಗೆ ಒಂದು ಕೋಟಿ ರೂ. ಪ್ರೋತ್ಸಾಹ ಧನ ನೀಡಿತ್ತು. ಆಗ ಸಿಎಂ ಆಗಿದ್ದ ಕೆ.ಚಂದ್ರಶೇಖರ್‌ ರಾವ್‌ ಅವರು ಇವರಿಗೆ ಒಂದು ನಿವೇಶನವನ್ನೂ ಮಂಜೂರು ಮಾಡಿದ್ದರು. ಆದರೆ, ಸರ್ಕಾರ ಕೊಟ್ಟ ಪ್ರೋತ್ಸಾಹಧನದಲ್ಲಿ ಒಂದಷ್ಟು ಹಣವನ್ನು ಮಗಳ ಮದುವೆಗೆ ಖರ್ಚು ಮಾಡಿದ ಅವರು, ಉಳಿದ ಹಣವನ್ನು ಸಾಲ ತೀರಿಸಲು, ಕುಟುಂಬದ ತುರ್ತು ಸಂದರ್ಭಗಳಿಗೆ ಬಳಸಿದ್ದಾರೆ. ಹಾಗಾಗಿ, ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೂ, ಇಂತಹ ಸಾಧಕನಿಗೆ ಸರ್ಕಾರವು ನೆರವು ನೀಡಬೇಕು ಎಂದು ಜನ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Lok Sabha Election: ತರಕಾರಿ ಮಾರಿ ಪದ್ಮಶ್ರೀ ಪುರಸ್ಕೃತ ಅಭ್ಯರ್ಥಿ ಚುನಾವಣೆ ಪ್ರಚಾರ! ಯಾರಿವರು?

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

Prajwal Revanna Case: ಪೆನ್‌ಡ್ರೈವ್ ಮಾಡಿದ್ದು ಎಲ್ಲಿ? ಇದರಲ್ಲಿ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಪಾತ್ರವೇನು? ಕಾರ್ತಿಕ್ ಯಾರು ಯಾರನ್ನು ಸಂಪರ್ಕ‌ ಮಾಡಿದ್ದ? ಇದರಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪಾತ್ರವೇನು? ಮೂಲ ಪೆನ್‌ಡ್ರೈವ್ ಸೃಷ್ಟಿ ಆಗಿದ್ದು ಎಲ್ಲಿ? ಅದನ್ನು ಮೊದಲು ಯಾರ ಕೈಗೆ ಕೊಡಲಾಯಿತು? ಈ ಎಲ್ಲ ಸಂಚಿನ ಹಿಂದೆ ಇರುವ ರಾಜಕಾರಣಿ ಯಾರು? ವ್ಯೂಹ ಎಲ್ಲಿ ಸಿದ್ಧವಾಯಿತು? ಚುನಾವಣೆ ಸಮಯದಲ್ಲಿ ಏಕೆ ಹೊರಬಂತು? ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಎಚ್‌ಡಿಕೆ ಟೀಮ್ ಮುಂದಾಗಿದೆ.

VISTARANEWS.COM


on

Prajwal Revanna Case Who is the kingpin of Prajwal video pen drive HDK team is on its way
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ರಾಜ್ಯಾದ್ಯಂತ ಹಂಚಿಕೆ ಮಾಡಿದವರು ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿ ಉಳಿದುಕೊಂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮೇಲೆ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ನೇರ ಆರೋಪವನ್ನು ಈಗಾಗಲೇ ಮಾಡಿದ್ದಾರೆ. ಇದರ ಜತೆಗೆ ಎಚ್‌ಡಿಕೆ ಮತ್ತು ತಂಡ “ಪೆನ್‌ಡ್ರೈವ್ ಡಿಸ್ಟ್ರಿಬ್ಯೂಟರ್” ಬೆನ್ನು ಬಿದ್ದಿದೆ.

ಪೆನ್‌ಡ್ರೈವ್ ಮಾಡಿದ್ದು ಎಲ್ಲಿ? ಇದರಲ್ಲಿ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಪಾತ್ರವೇನು? ಕಾರ್ತಿಕ್ ಯಾರು ಯಾರನ್ನು ಸಂಪರ್ಕ‌ ಮಾಡಿದ್ದ? ಇದರಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪಾತ್ರವೇನು? ಮೂಲ ಪೆನ್‌ಡ್ರೈವ್ ಸೃಷ್ಟಿ ಆಗಿದ್ದು ಎಲ್ಲಿ? ಅದನ್ನು ಮೊದಲು ಯಾರ ಕೈಗೆ ಕೊಡಲಾಯಿತು? ಈ ಎಲ್ಲ ಸಂಚಿನ ಹಿಂದೆ ಇರುವ ರಾಜಕಾರಣಿ ಯಾರು? ವ್ಯೂಹ ಎಲ್ಲಿ ಸಿದ್ಧವಾಯಿತು? ಚುನಾವಣೆ ಸಮಯದಲ್ಲಿ ಏಕೆ ಹೊರಬಂತು? ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಎಚ್‌ಡಿಕೆ ಟೀಮ್ ಮುಂದಾಗಿದೆ.

ಇನ್ನೊಂದೇ ವಾರಕ್ಕೆ ಎಲ್ಲ ಮಾಹಿತಿ ಬಹಿರಂಗ?

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಒಂದು ವಾರದ ಒಳಗೆ ಪೆನ್‌ಡ್ರೈವ್ ಕಿಂಗ್‌ಪಿನ್ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಬಹಿರಂಗ ಮಾಡಲಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಅವರು ತಮ್ಮೆಲ್ಲ ಶಕ್ತಿ ಹಾಗೂ ಯುಕ್ತಿಯನ್ನು ಬಳಕೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಎಚ್‌ಡಿಕೆ ಸಿಟ್ಟಿಗೆದ್ದಿರುವುದು ಏಕೆ?

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊವನ್ನು ಬಿಡುಗಡೆ ಮಾಡಿದಾಗಲಿಂದಲೂ ಎಚ್‌.ಡಿ. ದೇವೇಗೌಡರ ಕುಟುಂಬ ಟಾರ್ಗೆಟ್‌ ಆಗಿದೆ. ಅಲ್ಲದೆ, ಇದನ್ನು ಎಚ್.ಡಿ. ಕುಮಾರಸ್ವಾಮಿ ಅವರೇ ಮಾಡಿಸಿದ್ದಾರೆ ಎಂದು ಡಿ.ಕೆ. ಸಹೋದರರು ಮೇಲಿಂದ ಮೇಲೆ ಆರೋಪ ಮಾಡುತ್ತಾ ಬರುತ್ತಿದ್ದಾರೆ. ಹೀಗಾಗಿ ಎಚ್‌ಡಿಕೆ ಸಿಟ್ಟಾಗಿದ್ದು, ಇದರ ಎಲ್ಲ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು ಎಂದು ಹಠ ತೊಟ್ಟಿದ್ದಾರೆ.

ಈ ಪ್ರಕರಣದಲ್ಲಿ ಅಸಲಿ, ನಕಲಿ ಏನು? ಎಂಬ ಬಗ್ಗೆ ಪೂರ್ತಿ ವಿಷಯವನ್ನು ತಿಳಿಯಲು ಮುಂದಾಗಿದ್ದಾರೆ. ಪೆನ್‌ಡ್ರೈವ್ ಸೃಷ್ಟಿ ಮಾಡಿದವರಲ್ಲಿ ಮೊದಲ ಅನುಮಾನ ಕಾರ್ತಿಕ್‌ ಮೇಲಿದ್ದರೆ, ಎರಡನೇ ಅನುಮಾನ ದೇವರಾಜೇಗೌಡ ಅವರ ಮೇಲಿದೆ. ಇವರಿಬ್ಬರ ಜಾಡು ಬೆನ್ನತ್ತಿ ಎಚ್ಡಿಕೆ ಟೀಮ್ ಹೊರಟಿದೆ.

ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟಿಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟಿಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading

ಕ್ರೀಡೆ

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

KL Rahul: ಆಯ್ಕೆದಾರರು ರಾಹುಲ್​ಗಿಂತ ಸ್ಯಾಮ್ಸನ್ ಮತ್ತು ಪಂತ್​​ಗೆ ಆದ್ಯತೆ ನೀಡಲು ಒಂದು ಕಾರಣವೆಂದರೆ ರಾಹುಲ್​ ಹೆಚ್ಚಾಗಿ ಅಗ್ರ ಕ್ರಮಾಂಕದಲ್ಲಿ ಆಡುತ್ತಾರೆ. ಟಿ20ಐನಲ್ಲಿ ರಾಹುಲ್ ಆರಂಭಿಕನಾಗಿ 54 ಇನ್ನಿಂಗ್ಸ್​ಗಳಲ್ಲಿ 3 ನೇ ಕ್ರಮಾಂಕದಲ್ಲಿ 10 ಇನ್ನಿಂಗ್ಸ್​ಗಳಲ್ಲಿ ಮತ್ತು 4 ನೇ ಕ್ರಮಾಂಕದಲ್ಲಿ ಕೇವಲ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

VISTARANEWS.COM


on

KL Rahul
Koo

ನವದೆಹಲಿ: ಮುಂಬರುವ ಟಿ20 ವಿಶ್ವ ಕಪ್​​ನಲ್ಲಿ ಕೆ. ಎಲ್​ ರಾಹುಲ್ (KL Rahul) ಸ್ಥಾನ ಪಡೆಯದಿರಲು ನಾಯಕ ರೋಹಿತ್​ ಶರ್ಮಾ ಕಾರಣ ಎಂಬ ಮಾಹಿತಿ ಬಹಿರಂಗಗೊಂಡಿದೆ. ಐಪಿಎಲ್ 2024 ಪ್ರಾರಂಭವಾಗುವ ಮೊದಲು ಲಕ್ನೊ ಸೂಪರ್ ಜೈಂಟ್ಸ್ (LSG) ನಾಯಕ ಕೆಎಲ್ ರಾಹುಲ್ ಅವರನ್ನು 2024 ರ ಟಿ 20 ವಿಶ್ವಕಪ್ ತಂಡಕ್ಕೆ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.

2024ರ ಟಿ 20 ವಿಶ್ವಕಪ್​​ಗಾಗಿ ರಾಹುಲ್ ಅವರನ್ನು ಮಂಗಳವಾರ ಭಾರತ ತಂಡದಿಂದ ಹೊರಗಿಡಲಾಗಿತ್ತು. ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷದ ಐಪಿಎಲ್​​ನಲ್ಲಿ ರಾಹುಲ್ ಅವರ ಪ್ರಭಾವಶಾಲಿ ಪ್ರದರ್ಶನವನ್ನು ಪರಿಗಣಿಸಿ ಈ ನಿರ್ಧಾರವು ಹುಬ್ಬೇರುವಂತೆ ಮಾಡಿತ್ತು. ಅಲ್ಲಿ ಅವರು ಹತ್ತು ಇನ್ನಿಂಗ್ಸ್​ಗಳಲ್ಲಿ 40.60 ಸರಾಸರಿಯಲ್ಲಿ 406 ರನ್ ಗಳಿಸಿದ್ದಾರೆ. ಎಲ್ಎಸ್ಜಿ ಪರ 142.96 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಈ ಎಲ್ಲಾ ರನ್ ಗಳನ್ನು ಅಗ್ರ ಕ್ರಮಾಂಕದಲ್ಲಿ ಸ್ಕೋರ್ ಮಾಡಲಾಗಿದೆ.

ಎಲ್ಎಸ್ಜಿ ಮೂಲದ ಮಾಹಿತಿ ಏನು?

ಆಯ್ಕೆದಾರರು ರಾಹುಲ್​ಗಿಂತ ಸ್ಯಾಮ್ಸನ್ ಮತ್ತು ಪಂತ್​​ಗೆ ಆದ್ಯತೆ ನೀಡಲು ಒಂದು ಕಾರಣವೆಂದರೆ ರಾಹುಲ್​ ಹೆಚ್ಚಾಗಿ ಅಗ್ರ ಕ್ರಮಾಂಕದಲ್ಲಿ ಆಡುತ್ತಾರೆ. ಟಿ20ಐನಲ್ಲಿ ರಾಹುಲ್ ಆರಂಭಿಕನಾಗಿ 54 ಇನ್ನಿಂಗ್ಸ್​ಗಳಲ್ಲಿ 3 ನೇ ಕ್ರಮಾಂಕದಲ್ಲಿ 10 ಇನ್ನಿಂಗ್ಸ್​ಗಳಲ್ಲಿ ಮತ್ತು 4 ನೇ ಕ್ರಮಾಂಕದಲ್ಲಿ ಕೇವಲ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಆದಾಗ್ಯೂ, ವಿಶ್ವಕಪ್ ಆಯ್ಕೆ ಸಮೀಪಿಸುತ್ತಿರುವುದರಿಂದ ಅವರು ಎಲ್ಎಸ್​​ಜಿ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ ಎಂಬ ಊಹಾಪೋಹಗಳು ಇದ್ದವು.

ಇದನ್ನೂ ಓದಿ: IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

ಎಲ್ಎಸ್​​ಜಿ ಓಪನರ್ ಆಗಿ ರಾಹುಲ್ ಬದಲಿಗೆ ಅಗ್ರ ಕ್ರಮಾಂಕದ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ಲಕ್ನೋ ಖರೀದಿಸಿತು. ಆದಾಗ್ಯೂ, ಅದು ಕೆಲಸ ಮಾಡಿಲ್ಲ. ಈಗ ಎಲ್ಎಸ್​​ಜಿ ಹತ್ತಿರದ ಮೂಲವು ರಾಹುಲ್ ತಮ್ಮ ಐಪಿಎಲ್ ಫ್ರಾಂಚೈಸಿಗಾಗಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡದಿರಲು ಕಾರಣವನ್ನು ಬಹಿರಂಗಪಡಿಸಿದೆ.

ಕೆಎಲ್ ರಾಹುಲ್ ಎಲ್ಎಸ್​ಜಿ ತಂಡ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧರಾಗಿದ್ದರು, ಅದಕ್ಕಾಗಿಯೇ ನಾವು ಪಡಿಕ್ಕಲ್ ಅವರನ್ನು ನಮ್ಮ ತಂಡಕ್ಕೆ ಕರೆತಂದಿದ್ದೆವು. ಆದರೆ ಕೆಲವು ದಿನಗಳ ಹಿಂದೆ ಕೆಎಲ್ ರೋಹಿತ್ ಅವರೊಂದಿಗೆ ಚಾಟ್ ಮಾಡಿದ್ದರು. ಅವರು ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಸೇರಿಸುವ ಸಾಧ್ಯತೆಗಳು ಇಲ್ಲ ಎಂದು ಹೇಳಿದ್ದರು. ಹೀಗಾಗಿ ಕೆಎಲ್ ಐಪಿಎಲ್​​ನಲ್ಲಿ ಓಪನರ್ ಆದರು”ಎಂದು ಎಲ್ಎಸ್ಜಿಗೆ ಹತ್ತಿರದ ಮೂಲಗಳು ತಿಳಿಸಿವೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ರಾಹುಲ್ ಅವರ ಸೀಮಿತ ಅನುಭವ ಗಮನಿಸಿದರೆ, ರಿಷಭ್ ಪಂತ್, ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಬದಲಿಗೆ ಅವರನ್ನು ಆಯ್ಕೆ ಮಾಡುವುದು ಸೂಕ್ತವಾಗಿದೆ.

Continue Reading
Advertisement
Meeting with representatives of various political parties about MLC election in Hosapete
ವಿಜಯನಗರ3 mins ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Election campaign meeting for Kalaburgi Lok Sabha constituency BJP candidate Umesh Jadav at kalaburagi
ರಾಜಕೀಯ6 mins ago

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್

Jai Shri Ram Slogan
ಕರ್ನಾಟಕ30 mins ago

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Ballari Lok Sabha constituency Congress candidate E Tukaram election campaign in Kuduthini
ಬಳ್ಳಾರಿ32 mins ago

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

IPL 2024
ಕ್ರೀಡೆ33 mins ago

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

Darshanam Mogulaiah
ದೇಶ39 mins ago

Darshanam Mogulaiah: 2 ವರ್ಷದ ಹಿಂದೆ ಪದ್ಮಶ್ರೀ ಪಡೆದ ಸಾಧಕ ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕ!

Prajwal Revanna Case Who is the kingpin of Prajwal video pen drive HDK team is on its way
ಕ್ರೈಂ44 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

KL Rahul
ಕ್ರೀಡೆ55 mins ago

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

Physical Abuse
ಕರ್ನಾಟಕ1 hour ago

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಅರೆಸ್ಟ್‌

Rachita Taneja
ದೇಶ1 hour ago

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ6 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ17 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌