KP Sharma Oli: ನೇಪಾಳದ ನೂತನ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಮೋದಿ ಅಭಿನಂದನೆ - Vistara News

ವಿದೇಶ

KP Sharma Oli: ನೇಪಾಳದ ನೂತನ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಮೋದಿ ಅಭಿನಂದನೆ

KP Sharma Oli: ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

VISTARANEWS.COM


on

KP Sharma Oli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಠ್ಮಂಡುನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ (KP Sharma Oli) ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದೇಶಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

ಶುಕ್ರವಾರ ನಡೆದ ವಿಶ್ವಾಸಮತ ಯಾಚನೆಯ ವೇಳೆ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಬಹುಮತ ಸಾಬೀತುಪಡಿಸಲು ವಿಫಲರಾಗಿ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದರು. ಹೀಗಾಗಿ ಸಿಪಿಎನ್‌-ಯುಎಂಎಲ್‌ (Nepal-Unified Marxist Leninist (CPN-UML) ಪಕ್ಷದ ಅಧ್ಯಕ್ಷ, 72 ವರ್ಷದ ಕೆ.ಪಿ.ಶರ್ಮ ಒಲಿ ಪ್ರಧಾನಿಯಾಗಿ ನೇಮಕಗೊಂಡರು. ಈ ಹಿಂದೆ ಅವರು 2015ರ ಅಕ್ಟೋಬರ್ 11ರಿಂದ 2016ರ ಆಗಸ್ಟ್ 3ರವರೆಗೆ, 2018ರ ಫೆಬ್ರವರಿ 5ರಿಂದ 2021ರ ಜುಲೈ 13ರವರೆಗೆ ಕೆ.ಪಿ.ಶರ್ಮಾ ಒಲಿ ನೇಪಾಳದ ಪ್ರಧಾನ ಮಂತ್ರಿಯಾಗಿದ್ದರು. ಒಲಿ ಅವರು ಚೀನಾ ಪರ ಒಲವು ಹೊಂದಿದ್ದಾರೆ.

ಇತರ ಚಿಕ್ಕ ಪುಟ್ಟ ಪಕ್ಷಗಳಾದ ರಾಷ್ಟ್ರೀಯ ಪ್ರಜಾತಂತ್ರ ಪಾರ್ಟಿ, ಜನತಾ ಸಮಾಜವಾದಿ ಪಾರ್ಟಿ ನೇಪಾಳ, ಲೋಕತಾಂತ್ರಿಕ ಸಮಾಜವಾದಿ ಪಾರ್ಟಿ, ಜನಮತ ಪಾರ್ಟಿ ಮತ್ತು ನಾಗರಿಕ ಉನ್‌ಮುಕ್ತಿ ಪಾರ್ಟಿ ಹೊಸ ಸರ್ಕಾರಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ರಾಷ್ಟ್ರಪತಿ ಭವನದ ಮುಖ್ಯ ಕಟ್ಟಡವಾದ ಶೀತಲ್ ನಿವಾಸದಲ್ಲಿ ಸೋಮವಾರ (ಜುಲೈ 15) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಪ್ರಚಂಡ ಅವರ ವಿಶ್ವಾಸಮತ ಸೋತ ಬೆನ್ನಲ್ಲೇ ಒಲಿ ಅವರು 165 ಬೆಂಬಲ ಪತ್ರವನ್ನು ಸಲ್ಲಿಸಿದ್ದರು. ಕಮ್ಯುನಿಸ್ಟ್‌ ಪಾರ್ಟಿ ಆಫ್‌ ನೇಪಾಳ್‌-ಯುನಿಫೈಡ್‌ ಮಾರ್ಕಿಸ್ಟ್‌ ಲೆನಿನಿಸ್ಟ್‌ನ 77 ಸಂಸದರು ಮತ್ತು ನೇಪಾಳಿ ಕಾಂಗ್ರೆಸ್‌ನ 88 ಸಂಸದರು ಒಲಿ ಅವರನ್ನು ಬೆಂಬಲಿಸಿದ್ದಾರೆ ಎಂದು ರಾಷ್ಟ್ರಪತಿ ರಾಮ್‌ ಚಂದ್ರ ಪೌಡೆಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: Ram Mandir: ನೇಪಾಳದ ಸೀತೆಯ ಮನೆಯಿಂದ ರಾಮಮಂದಿರಕ್ಕೆ 3 ಸಾವಿರ ಉಡುಗೊರೆ!

ಚೀನಾ ಪರ ಒಲವು

ಕೆಲವು ಮಾಧ್ಯಮಗಳ ವರದಿಯ ಪ್ರಕಾರ ನೇಪಾಳದ ಹೊಸ ಸಂವಿಧಾನದ ಬಗ್ಗೆ 2015ರಲ್ಲಿ ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆ ಭುಗಿಲೆದ್ದ ಸಮಯದಲ್ಲಿ ಒಲಿ ಭಾರತದ ವಿರುದ್ಧ ಕಠಿಣ ನಿಲುವನ್ನು ತೆಗೆದುಕೊಂಡಿದ್ದರು. ಅವರ ಸರ್ಕಾರವು ಚೀನಾದೊಂದಿಗಿನ ಸಂಬಂಧಗಳನ್ನು ಬಲಪಡಿಸಿತ್ತು ಮತ್ತು ಉತ್ತರಾಖಂಡದ ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಧುರಾವನ್ನು ನೇಪಾಳದ ಭೂಪ್ರದೇಶದ ಭಾಗವೆಂದು ಪ್ರತಿಪಾದಿಸುವ ನವೀಕರಿಸಿದ ನಕ್ಷೆಯನ್ನು ಪ್ರಕಟಿಸಿ ವಿವಾದ ಹುಟ್ಟು ಹಾಕಿತ್ತು. ಆಗಲೇ ತಿರುಗೇಟು ನೀಡಿದ ಭಾರತವು ಈ ಹೇಳಿಕೆಯನ್ನು ಏಕಪಕ್ಷೀಯ ಎಂದು ತಿರಸ್ಕರಿಸಿತ್ತು ಮತ್ತು ನಂತರ ಉಭಯ ದೇಶಗಳು ಮಾತುಕತೆಯಲ್ಲಿ ತೊಡಗಿದ್ದವು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Made In Bihar: ರಷ್ಯಾ ಸೈನ್ಯಕ್ಕೆ ಬಿಹಾರದಿಂದ ಸೇಫ್ಟಿ ಶೂ ಪೂರೈಕೆ; ವಾರ್ಷಿಕ 100 ಕೋಟಿ ರೂ. ವ್ಯವಹಾರ

Made In Bihar: ರಷ್ಯಾ ಸೈನಿಕರು ಬಿಹಾರದ ಹಾಜಿಪುರದಲ್ಲಿ ತಯಾರಿಸುವ ‘ಮೇಡ್ ಇನ್ ಬಿಹಾರ್’ ಶೂಗಳನ್ನು ಬಳಸುತ್ತಿದ್ದಾರೆ. ಹೌದು, ಬಿಹಾರದ ಹಾಜಿಪುರ ನಗರವು ರಷ್ಯಾದ ಸೈನ್ಯಕ್ಕಾಗಿ ಸೇಫ್ಟಿ ಶೂ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿದೆ. ಹಾಜಿಪುರ ಮೂಲದ ಕಾಂಪಿಟೆನ್ಸ್ ಎಕ್ಸ್‌ಪೋರ್ಟ್ಸ್‌ ಕಂಪನಿ ರಷ್ಯಾಕ್ಕೆ ಸೇಫ್ಟಿ ಬೂಟ್‌ ಮತ್ತು ಯುರೋಪಿಯನ್ ಮಾರುಕಟ್ಟೆಗಳಿಗೆ ಡಿಸೈನರ್ ಶೂಗಳನ್ನು ಪೂರೈಸುತ್ತಿದೆ.

VISTARANEWS.COM


on

Made In Bihar
Koo

ಪಟನಾ: ರಷ್ಯಾ ಸೇನೆ (Russian soldiers)ಯು ಉಕ್ರೇನ್‌ ವಿರುದ್ಧ ಯುದ್ಧ ಮುಂದುವರಿಸಿದೆ. ವಿಶೇಷ ಎಂದರೆ ಈ ಕಾರ್ಯಾಚರಣೆಗೆ ರಷ್ಯಾ ಸೈನಿಕರು ಬಿಹಾರದ ಹಾಜಿಪುರ (Hajipur)ದಲ್ಲಿ ತಯಾರಿಸುವ ‘ಮೇಡ್ ಇನ್ ಬಿಹಾರ್’ (Made In Bihar) ಶೂಗಳನ್ನು ಬಳಸುತ್ತಿದ್ದಾರೆ.

ಕೃಷಿ ಉತ್ಪಾದನೆಗೆ ಹೆಸರುವಾಸಿಯಾದ ಬಿಹಾರದ ಹಾಜಿಪುರ ನಗರವು ರಷ್ಯಾದ ಸೈನ್ಯಕ್ಕಾಗಿ ಸೇಫ್ಟಿ ಶೂ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿದೆ. ಹಾಜಿಪುರ ಮೂಲದ ಕಾಂಪಿಟೆನ್ಸ್ ಎಕ್ಸ್‌ಪೋರ್ಟ್ಸ್‌ (Competence Exports) ಖಾಸಗಿ ಕಂಪನಿಯಾಗಿದ್ದು, ರಷ್ಯಾಕ್ಕೆ ಸೇಫ್ಟಿ ಬೂಟ್‌ ಮತ್ತು ಯುರೋಪಿಯನ್ ಮಾರುಕಟ್ಟೆಗಳಿಗೆ ಡಿಸೈನರ್ ಶೂಗಳನ್ನು ಪೂರೈಸುತ್ತಿದೆ.

ಈ ಬಗ್ಗೆ ಮಾತನಾಡಿದ ಜನರಲ್ ಮ್ಯಾನೇಜರ್ ಶಿಬ್ ಕುಮಾರ್ ರಾಯ್, “ನಾವು 2018ರಲ್ಲಿ ಹಾಜಿಪುರದಲ್ಲಿ ಈ ಕಂಪನಿ ಆರಂಭಿಸಿದೆವು. ಸ್ಥಳೀಯರಿಗೆ ಉದ್ಯೋಗವನ್ನು ಸೃಷ್ಟಿಸುವುದು ನಮ್ಮ ಮುಖ್ಯ ಗುರಿ. ಹಾಜಿಪುರದಲ್ಲಿ ನಾವು ರಷ್ಯಾಕ್ಕೆ ರಫ್ತು ಮಾಡಬಹುದಾದ ಸೇಫ್ಟಿ ಶೂಗಳನ್ನು ತಯಾರಿಸುತ್ತೇವೆ. ರಷ್ಯಾದ ಜತೆಗೆ ಯುರೋಪ್‌ಗೂ ರಫ್ತು ಮಾಡುತ್ತಿದ್ದೇವೆ. ಶೀಘ್ರದಲ್ಲೇ ದೇಶೀಯ ಮಾರುಕಟ್ಟೆಯಲ್ಲಿ ವಹಿವಾಟು ಪ್ರಾರಂಭಿಸಲಿದ್ದೇವೆʼʼ ಎಂದು ತಿಳಿಸಿದ್ದಾರೆ.

ರಷ್ಯಾ ಸೈನ್ಯಕ್ಕೆ ಪೂರೈಸುವ ಸೇಫ್ಟಿ ಶೂ ವಿಶೇಷತೆಗಳ ಬಗ್ಗೆ ಮಾತನಾಡಿದ ಅವರು, “ಈ ಶೂಗಳು ಹಗುರವಾಗಿರಬೇಕು. ಜಾರದಂತಿರಬೇಕು. ಸೋಲ್‌ನಲ್ಲಿ ವೈಶಿಷ್ಟ್ಯ ಹೊಂದಿರಬೇಕು ಮತ್ತು -40 ಡಿಗ್ರಿ ಸೆಲ್ಸಿಯಸ್‌ನಂತಹ ವಾತಾವರಣಕ್ಕೂ ಹೊಂದಿಕೆಯಾಗುವಂತಿರಬೇಕು. ಈ ರೀತಿಯಲ್ಲಿ ನಾವು ಶೂ ತಯಾರಿಸುತ್ತಿದ್ದೇವೆʼʼ ಎಂದು ವಿವರಿಸಿದ್ದಾರೆ.

ಅಂತಾರಾಷ್ಟ್ರೀಯ ಗುಣಮಟ್ಟ

“ಬಿಹಾರದಲ್ಲಿ ವಿಶ್ವ ದರ್ಜೆಯ ಕಾರ್ಖಾನೆಯನ್ನು ಆರಂಭಿಸುವುದು ಮತ್ತು ರಾಜ್ಯದ ಯುವ ಜನತೆಗೆ ಉದ್ಯೋಗ ನೀಡುವುದು ಕಂಪನಿಯ ಎಂ.ಡಿ. ದಾನೇಶ್ ಪ್ರಸಾದ್ ಅವರ ಮಹತ್ವಾಕಾಂಕ್ಷೆ. ಸದ್ಯ ನಮ್ಮಲ್ಲಿರುವ 300 ಉದ್ಯೋಗಿಗಳಲ್ಲಿ ಶೇ. 70ರಷ್ಟು ಮಹಿಳೆಯರುʼʼ ಎಂದು ಶಿಬ್ ಕುಮಾರ್ ರಾಯ್ ತಿಳಿಸಿದ್ದಾರೆ.

ಕಂಪೆನಿಯುವ ಕಳೆದ ವರ್ಷ 15 ಲಕ್ಷ ಜೋಡಿ ಶೂಗಳನ್ನು ರಫ್ತು ಮಾಡಿದೆ. ಇದರ ಮೌಲ್ಯ ಸುಮಾರು 100 ಕೋಟಿ ರೂ. ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ಗುರಿಯನ್ನು ಕಂಪನಿ ಹೊಂದಿದೆ. ʼʼಬಿಹಾರ ಸರ್ಕಾರವು ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತಿದೆ. ಜತೆಗೆ ರಸ್ತೆ ಮತ್ತು ಸಂವಹನದಂತಹ ಮೂಲಸೌಕರ್ಯಗಳಲ್ಲಿ ಸುಧಾರಣೆಯ ಅಗತ್ಯವಿದೆ. ಇದರಿಂದ ಗ್ರಾಹಕರಿಗೆ ಸುಲಭವಾಗಿ ನಮ್ಮನ್ನು ತಲುಪಲು ಸಾಧ್ಯವಾಗುತ್ತದೆʼʼ ಎಂದು ಶಿಬ್ ಕುಮಾರ್ ರಾಯ್ ಅಭಿಪ್ರಾಯಪಟ್ಟಿದ್ದಾರೆ. “ತರಬೇತಿ ಸಂಸ್ಥೆಯನ್ನು ಸ್ಥಾಪಿಸುವ ಗುರಿ ಹೊಂದಿದ್ದೇವೆ. ಇದರಿಂದ ಕೌಶಲ್ಯ ಹೊಂದಿದ ಯುವ ಜನತೆಯನ್ನು ಸಿದ್ಧ ಪಡಿಸುತ್ತೇವೆʼʼ ಎಂದಿದ್ದಾರೆ.

ಸದ್ಯ ಹಾಜಿಪುರ ಘಟಕವು ಸೇಫ್ಟಿ ಶೂಗಳಲ್ಲದೆ ಐಷಾರಾಮಿ ಡಿಸೈನರ್ ಶೂಗಳನ್ನು ಯುರೋಪಿಯನ್ ಮಾರುಕಟ್ಟೆಗಳಾದ ಇಟಲಿ, ಫ್ರಾನ್ಸ್, ಸ್ಪೇನ್ ಮತ್ತು ಇಂಗ್ಲೆಂಡ್‌ಗೆ ರಫ್ತು ಮಾಡುತ್ತಿದೆ. “ಅಂತಾರಾಷ್ಟ್ರೀಯ ಬ್ರ್ಯಾಂಡ್‌ಗಳಿಗಾಗಿ ಉನ್ನತ ಮಟ್ಟದ ಶೂಗಳನ್ನು ಅಭಿವೃದ್ಧಿಪಡಿಸುವುದು ನಮ್ಮ ಗುರಿ. ನಾವು ಇತ್ತೀಚೆಗೆ ಬೆಲ್ಜಿಯಂ ಕಂಪನಿಯೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಿದ್ದೇವೆ ” ಎಂದು ಕಂಪನಿಯ ಮಾರ್ಕೆಟಿಂಗ್ ಮುಖ್ಯಸ್ಥ ಮಜರ್ ಪಲ್ಲುಮಿಯಾ ತಿಳಿಸಿದ್ದಾರೆ. ಮುಂದಿನ ತಿಂಗಳು ಕೆಲವು ವಿದೇಶಿ ಕಂಪನಿಗಳು ಕಾರ್ಖಾನೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: Israel Palestine War: ಇಸ್ರೇಲ್‌ ಪೊಲೀಸರಿಗೂ ಕೇರಳದ ಟೇಲರ್‌ಗಳಿಗೂ ಎಲ್ಲಿಂದೆಲ್ಲಿಯ ಸಂಬಂಧ!

Continue Reading

ವಿದೇಶ

Ban on PTI: ಇಮ್ರಾನ್‌ ಖಾನ್‌ಗೆ ಬಿಗ್‌ ಶಾಕ್‌! ಪಿಟಿಐ ಪಕ್ಷದ ಮೇಲೆ ನಿಷೇಧ

Ban on PTI: ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಅತ್ತಾವುಲ್ಲಾ ತರಾತ್‌ ಮಾಧ್ಯಮಗೋ‍ಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರ ಪಿಟಿಐ ಪಕ್ಷ ಮೇಲೆ ನಿಷೇಧ ಹೇರಲು ನಿರ್ಧರಿಸಿದೆ. ಪಿಟಿಐ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಹಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Ban on PTI
Koo

ಇಸ್ಲಮಾಬಾದ್‌: ಪಾಕಿಸ್ತಾನ(Pakistan)ದಲ್ಲಿ ಶೆಹಬಾಜ್‌ ಷರೀಫ್‌ ನೇತೃತ್ವದ ಸರ್ಕಾರ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌(Imran Khan) ನೇತೃತ್ವದ ಪಾಕಿಸ್ತಾನ ತೆಹ್ರಿಕ್‌ ಎ ಇನ್ಸಾಫ್‌(PTI) ಪಕ್ಷವನ್ನು ನಿಷೇಧಿಸಲು(Ban on PTI) ನಿರ್ಧರಿಸಿದೆ. ಪಾಕಿಸ್ತಾನ ಅತಿ ದೊಡ್ಡ ಪ್ರತಿಪಕ್ಷದ ಮೇಲೆ ನಿಷೇಧ ಹೇರುವ ಬಗ್ಗೆ ಅಲ್ಲಿನ ಸಚಿವರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಅತ್ತಾವುಲ್ಲಾ ತರಾತ್‌ ಮಾಧ್ಯಮಗೋ‍ಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರ ಪಿಟಿಐ ಪಕ್ಷ ಮೇಲೆ ನಿಷೇಧ ಹೇರಲು ನಿರ್ಧರಿಸಿದೆ. ಪಿಟಿಐ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಹಿಸಲಾಗಿದೆ ಎಂದು ಹೇಳಿದ್ದಾರೆ. ಇಮ್ರಾನ್ ಖಾನ್ ಅವರ ಪಕ್ಷವು ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾದ 20 ಕ್ಕೂ ಹೆಚ್ಚು ಸ್ಥಾನಗಳಿಗೆ ಅರ್ಹವಾಗಿದೆ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ಆದೇಶದ ನಂತರ ಪಿಟಿಐ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ದಾರಿ ಮಾಡಿಕೊಟ್ಟಿದೆ. ಇದಾದ ಕೆಲವು ದಿನಗಳ ನಂತರ ಪಾಕಿಸ್ತಾನ ಸರ್ಕಾರ ಈ ಘೋಷಣೆಯನ್ನು ಮಾಡಿದೆ.

ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷ ವಿದೇಶಿ ಮೂಲಗಳಿಂದ ಅಕ್ರಮವಾಗಿ ಹಣ ಸ್ವೀಕರಿಸಿರುವ ಬಗ್ಗೆ ಪುರಾವೆಗಳಿವೆ. ಅದೂ ಅಲ್ಲದೇ ಆ ಹಣವನ್ನು ಬಳಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಬಯಲಾಗಿದೆ. ವಿದೇಶಿ ನಿಧಿ ಪ್ರಕರಣ, ಮೇ 9 ರ ಗಲಭೆಗಳು, ಸೈಫರ್ ಎಪಿಸೋಡ್ ಮತ್ತು ಯುಎಸ್‌ನಲ್ಲಿ ಅಂಗೀಕರಿಸಿದ ನಿರ್ಣಯದ ದೃಷ್ಟಿಯಿಂದ, ಪಿಟಿಐ ಅನ್ನು ನಿಷೇಧಿಸಲು ಸಾಕಷ್ಟು ವಿಶ್ವಾಸಾರ್ಹ ಪುರಾವೆಗಳಿವೆ. ಹೀಗಾಗಿ ಅದನ್ನು ಬ್ಯಾನ್‌ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇಮ್ರಾನ್ ಖಾನ್, 71, ಪಾಕಿಸ್ತಾನದ ಪ್ರಬಲ ಮಿಲಿಟರಿಯೊಂದಿಗಿನ ಅಸಮಾಧಾನದ ನಂತರ ಏಪ್ರಿಲ್ 2022 ರಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ನಂತರ ಅವರ ವಿರುದ್ಧ ಅನೇಕ ಪ್ರಕರಣಗಳಲ್ಲಿ ಅರೆಸ್ಟ್‌ ಮಾಡಾಗಿತ್ತು. ಸದ್ಯ ಅವರನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇರಿಸಲಾಗಿದೆ.

ಇಮ್ರಾನ್‌ ಖಾನ್‌ ಅವರು ಪ್ರಧಾನಿಯಾಗಿದ್ದಾಗ ಪಾಕಿಸ್ತಾನಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಯೊಂದನ್ನು ಅಮೆರಿಕಕ್ಕೆ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾವಲ್ಪಿಂಡಿ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದಾದ ಬಳಿಕವೇ ಮತ್ತೊಂದು ನ್ಯಾಯಾಲಯವು 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ತೋಷಖಾನಾ (ಖಜಾನೆಗೆ ಸೇರಬೇಕಾದ ಉಡುಗೊರೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಿದ ಪ್ರಕರಣ) ಪ್ರಕರಣದಲ್ಲಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದೆ. ಈಗ ಮತ್ತೊಂದು ನ್ಯಾಯಾಲಯವು ದಂಪತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

Continue Reading

ವಿದೇಶ

Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

Trump Assassination Bid: ಥಾಮಸ್‌ ಮ್ಯಾಥ್ಯೂ ಕ್ರೂಕ್ಸ್‌ ಬಗ್ಗೆ ಹಲವು ಸಂತಿಗಳು ಬಯಲಾಗಿವೆ. ಕ್ರೂಕ್ಸ್‌ ಬಗ್ಗೆ ಆತನ ಸಹಪಾಠಿ ಜೇಸನ್‌ ಖೆಹ್ಲರ್‌ ಮಾಹಿತಿ ನೀಡಿದ್ದು, ಕ್ರೂಕ್‌ ವಿದ್ಯಾರ್ಥಿಯಾಗಿದ್ದ ಅತ್ಯಂತ ಸೌಮ್ಯ ಸ್ವಭಾವದ ಹುಡುಗನಾಗಿದ್ದ. ಯಾವಾಗಲೂ ಒಬ್ಬಂಟಿಯಾಗಿಯೇ ಇರುತ್ತಿದ್ದ. ಆತನ ಯಾವತ್ತೂ ಟ್ರಂಪ್‌ ಬಗ್ಗೆಯಾಗಲೀ ರಾಜಕೀಯದ ಬಗ್ಗೆಯಾಗಲೀ ಚರ್ಚಿಸಿದ್ದನ್ನೇ ನಾವು ನೋಡಿಲ್ಲ ಎಂದಿದ್ದಾರೆ.

VISTARANEWS.COM


on

Trump Assassination Bid
Koo

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ(US Presidential Election) ಪ್ರಚಾರದಲ್ಲಿ ಭಾಗಿಯಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌(Trump Assassination Bid) ಮೇಲಿನ ಗುಂಡಿನ ದಾಳಿ(Shootout) ಬಗ್ಗೆ ಕೂಲಂಕುಷ ತನಿಖೆ ಕೈಗೆತ್ತಿಕೊಂಡಿರುವ ಅಮೆರಿಕದ ಗುಪ್ತಚರ ಇಲಾಖೆ FBI ಶೂಟರ್‌ ಗುರುತು ಪತ್ತೆ ಮಾಡಿತ್ತು. ಇದೀಗ ಆತನ ಫೊಟೋವನ್ನೂ ಬಿಡುಗಡೆ ಮಾಡಿದೆ. ಯುಎಸ್ ಮಾಧ್ಯಮ ವರದಿಗಳು ಶೂಟರ್ ಅನ್ನು 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಿವೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನಿಂದ ಕ್ರೂಕ್ಸ್, ಬಟ್ಲರ್‌ನಲ್ಲಿ ಹೊರಾಂಗಣ ರ್ಯಾಲಿಯಲ್ಲಿ ಟ್ರಂಪ್ ಮೇಲೆ ಗುಂಡು ಹಾರಿಸಿದ್ದಾನೆ.

ಇದೀಗ ಥಾಮಸ್‌ ಮ್ಯಾಥ್ಯೂ ಕ್ರೂಕ್ಸ್‌ ಬಗ್ಗೆ ಹಲವು ಸಂತಿಗಳು ಬಯಲಾಗಿವೆ. ಕ್ರೂಕ್ಸ್‌ ಬಗ್ಗೆ ಆತನ ಸಹಪಾಠಿ ಜೇಸನ್‌ ಖೆಹ್ಲರ್‌ ಮಾಹಿತಿ ನೀಡಿದ್ದು, ಕ್ರೂಕ್‌ ವಿದ್ಯಾರ್ಥಿಯಾಗಿದ್ದ ಅತ್ಯಂತ ಸೌಮ್ಯ ಸ್ವಭಾವದ ಹುಡುಗನಾಗಿದ್ದ. ಯಾವಾಗಲೂ ಒಬ್ಬಂಟಿಯಾಗಿಯೇ ಇರುತ್ತಿದ್ದ. ಆತನ ಯಾವತ್ತೂ ಟ್ರಂಪ್‌ ಬಗ್ಗೆಯಾಗಲೀ ರಾಜಕೀಯದ ಬಗ್ಗೆಯಾಗಲೀ ಚರ್ಚಿಸಿದ್ದನ್ನೇ ನಾವು ನೋಡಿಲ್ಲ.

ಶಾಲೆಯಲ್ಲಿ ಸದಾ ಆತನನ್ನು ಇತರೆ ವಿದ್ಯಾರ್ಥಿಗಳು ರೇಗಿಸುತ್ತಿದ್ದರು. ಆತನ ಧರಿಸುತ್ತಿದ್ದ ಬಟ್ಟೆಯ ಬಗ್ಗೆ ವಿದ್ಯಾರ್ಥಿಗಳು ತಮಾಶೆ ಮಾಡುತ್ತಿದ್ದರು. ಆದರೂ ಆತ ಸುಮ್ಮನೇ ಇರುತ್ತಿದ್ದ ಎಂದು ಹೇಳಿದ್ದಾರೆ. ಇನ್ನು ಆತನ ನೆರೆಮೆರೆಯವರೂ ಪ್ರತಿಕ್ರಿಯಿಸಿದ್ದು, ಕ್ರೂಕ್‌ ಅನುಕೂಲಸ್ಥ ಕುಟಂಬಸ್ಥದಲ್ಲಿ ಬೆಳೆದವನು. ಅವರು ಒಂದು ನರ್ಸಿಂಗ್‌ ಹೋಂನಲ್ಲಿ ಕೆಲಸ ಮಾಡುತ್ತಿದ್ದ ಎಂದಿದ್ದಾರೆ.

ಕಾರಿನಲ್ಲಿ ಅನುಮಾನಾಸ್ಪದ ಸಾಧನ ಪತ್ತೆ

ಇನ್ನು ಕ್ರೂಕ್‌ನ ಕಾರಿನಲ್ಲಿ ಅನುಮಾನಾಸ್ಪದ ಸಾಧನ ಪತ್ತೆಯಾಗಿದೆ. ಇದು ಮೇಲ್ನೋಟಕ್ಕೆ ಸ್ಫೋಟಕ ವಸ್ತುವಿನಂತೆ ಕಾಣುತ್ತಿದ್ದು, ಬಾಂಬ್‌ ನಿಷ್ಕ್ರೀಯ ದಳ ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದೆ. ಇನ್ನು ಆತನ ಫೋನ್‌ ಅನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇನ್ನು ಟ್ರಂಪ್‌ ಮೇಲಿನ ದಾಳಿಗೆ ಕ್ರೂಕ್‌ ಬಳಸಿದ್ದ ಬಂದೂಕು AR ಸೆಮಿ ಅಟೋಮ್ಯಾಟಿಕ್‌ ಬಂದೂಕ್‌ ಆಗಿದ್ದು, ಇದನ್ನು ಕ್ರೂಕ್‌ನ ತಂದೆ ಕಾನೂನು ಪ್ರಕಾರ ಖರೀದಿಸಿದ್ದ ಎನ್ನಲಾಗಿದೆ.

ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನಿಂದ ಕ್ರೂಕ್ಸ್, ಬಟ್ಲರ್‌ನಲ್ಲಿ ಹೊರಾಂಗಣ ರ್ಯಾಲಿಯಲ್ಲಿ ಟ್ರಂಪ್ ಮೇಲೆ ಗುಂಡು ಹಾರಿಸಿದ್ದಾನೆ. ಅದರಲ್ಲಿ ಒಂದು ಬುಲೆಟ್ ಟ್ರಂಪ್ ಕಿವಿಗೆ ತಾಗಿತು. ಬಟ್ಲರ್ ಫಾರ್ಮ್ ಶೋ ಮೈದಾನದಲ್ಲಿ ವೇದಿಕೆಯಿಂದ 130 ಗಜಗಳಷ್ಟು ದೂರದಲ್ಲಿರುವ ಉತ್ಪಾದನಾ ಘಟಕದ ಛಾವಣಿಯ ಮೇಲೆ ಕ್ರೂಕ್ಸ್ ಗನ್‌ ಸಮೇತ ಇದ್ದ ಎನ್ನಲಾಗಿದೆ. ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿ ಆಯೋಜಿಸಲಾಗಿತ್ತು. ಈ ವೇಳೆ ಈ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು. ಕ್ರೂಕ್‌ನನ್ನು ಸೀಕ್ರೆಟ್‌ ಸರ್ವಿಸ್‌ ಏಜೆಂಟ್‌ ಹೊಡೆದುರುಳಿಸಿತ್ತು.

ಇದನ್ನೂ ಓದಿ: Donald Trump Assassination Bid: “ಮೋದಿ ವಿರುದ್ಧದ ಹಿಂಸಾಚಾರಕ್ಕೆ ಬೆಂಬಲ”- ಟ್ರಂಪ್‌ ಮೇಲೆ ದಾಳಿ ಬೆನ್ನಲ್ಲೇ ರಾಹುಲ್‌ ವಿರುದ್ಧ ಬಿಜೆಪಿ ಕಿಡಿ

Continue Reading

ವೈರಲ್ ನ್ಯೂಸ್

Donald Trump: ಜಗನ್ನಾಥನ ಕೃಪೆಯಿಂದ ಡೊನಾಲ್ಡ್‌ ಟ್ರಂಪ್‌ ಪಾರು; ಏನಿದು ದೈವಿಕ ಪವಾಡ? ವೈರಲ್‌ ಪೋಸ್ಟ್‌ ಇಲ್ಲಿದೆ

Donald Trump: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಜುಲೈ 13ರ ಸಂಜೆ ಆಯೋಜಿಸಿದ್ದ ರ‍್ಯಾಲಿಯ ವೇಳೆ ನಡೆದ ಗುಂಡಿನ ದಾಳಿಯಿಂದ ಪಾರಾದ ಬಳಿಕ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ “ಊಹಿಸಲಾಗದ ಘಟನೆ ಸಂಭವಿಸದಂತೆ ದೇವರು ತಡೆದಿದ್ದಾನೆ” ಎಂದು ಹೇಳಿದ್ದಾರೆ. ಈ ಮಧ್ಯೆ ದಶಕಗಳ ಹಿಂದೆ ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ ಜಗನ್ನಾಥ ರಥಯಾತ್ರೆಗೆ ಟ್ರಂಪ್‌ ನೀಡಿದ ಕೊಡುಗೆಯಿಂದಾಗಿ ಜುಲೈ 13ರ ಹತ್ಯೆ ಪ್ರಯತ್ನದಿಂದ ಅವರು ಬದುಕುಳಿದಿದ್ದಾರೆ ಎಂಬ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Donald Trump
Koo

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲೇ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೆ ಯತ್ನಿಸಿದ ಪ್ರಕರಣವು ಜಗತ್ತನ್ನೇ ಬೀಳಿಸಿದೆ. ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಜುಲೈ 13ರ ಸಂಜೆ ಆಯೋಜಿಸಿದ್ದ ರ‍್ಯಾಲಿಯ ವೇಳೆ ನಡೆದ ಗುಂಡಿನ ದಾಳಿಯಿಂದ ಪಾರಾದ ಬಳಿಕ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ “ಊಹಿಸಲಾಗದ ಘಟನೆ ಸಂಭವಿಸದಂತೆ ದೇವರು ತಡೆದಿದ್ದಾನೆ” ಎಂದು ಹೇಳಿದ್ದಾರೆ. ಈ ಮಧ್ಯೆ ದಶಕಗಳ ಹಿಂದೆ ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ ಜಗನ್ನಾಥ ರಥಯಾತ್ರೆ (Jagannath Rath Yatra)ಗೆ ಟ್ರಂಪ್‌ ನೀಡಿದ ಕೊಡುಗೆಯಿಂದಾಗಿ ಜುಲೈ 13ರ ಹತ್ಯೆ ಪ್ರಯತ್ನದಿಂದ ಅವರು ಬದುಕುಳಿದಿದ್ದಾರೆ ಎಂಬ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ಒಡಿಶಾದ ಪುರಿ ನಗರದಲ್ಲಿ ನಡೆಯುವ ಜಗನ್ನಾಥ ರಥಯಾತ್ರೆಯು ಭಾರತದ ಅತ್ಯಂತ ಪುರಾತನ ಮತ್ತು ಅತಿದೊಡ್ಡ ರಥೋತ್ಸವ ಎಂದು ಪರಿಗಣಿಸಲಾಗಿದೆ. ಮೂರು ದೇವತೆಗಳಾದ ಭಗವಾನ್ ಜಗನ್ನಾಥ, ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರಾ ಅವರನ್ನೊಳಗೊಂಡ ಈ ರಥಯಾತ್ರೆ ವಿಶ್ವ ಪ್ರಸಿದ್ಧ. ಇನ್ನು 1976ರಲ್ಲಿ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ ಸಾಂಕೇತಿಕ ಜಗನ್ನಾಥ ರಥಯಾತ್ರೆಗೆ ಟ್ರಂಪ್‌ ನೀಡಿದ್ದ ಸಹಕಾರವನ್ನು ನೆನಪಿಸಿಕೊಂಡ ಇಸ್ಕಾನ್‌ (ISKCON) ಅಧಿಕಾರಿಗಳು ಇದೇ ಕಾರಣಕ್ಕೆ ಅಮೆರಿಕದ ಮಾಜಿ ಅಧ್ಯಕ್ಷರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದೆ.

ಇಸ್ಕಾನ್‌ ಅಧಿಕಾರಿ ಹೇಳಿದ್ದೇನು?

ದೈವಿಕ ಹಸ್ತಕ್ಷೇಪದಿಂದ ತಾವು ಪಾರಾಗಿದ್ದಾಗಿ ಹೇಳಿರುವ ಟ್ರಂಪ್‌ ಅವರ ಪೋಸ್ಟ್‌ಗೆ ಇಸ್ಕಾನ್ ಕೋಲ್ಕತಾ ಮುಖ್ಯಸ್ಥ ರಾಧಾರಾಮ್ ದಾಸ್ ಪ್ರತಿಕ್ರಿಯಿಸಿ, “ಹೌದು, ಖಂಡಿತವಾಗಿಯೂ ಇದು ದೈವಿಕ ಹಸ್ತಕ್ಷೇಪವಾಗಿದೆ” ಎಂದು ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಬರೆದುಕೊಂಡ ಅವರು, ʼʼ1976ರ ಜುಲೈಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಇಸ್ಕಾನ್ ಭಕ್ತರಿಗೆ ನ್ಯೂಯಾರ್ಕ್‌ನಲ್ಲಿ ರಥಯಾತ್ರೆಯನ್ನು ಆಯೋಜಿಸಲು ಸಹಾಯ ಮಾಡಿದ್ದರು. ಹೀಗಾಗಿ ಜಗನ್ನಾಥನು ಈ ಭಯಾನಕ ದಾಳಿಯಿಂದ ಅವರನ್ನು ಪಾರು ಮಾಡಿದ್ದಾರೆʼʼ ಎಂದಿದ್ದಾರೆ.

ನ್ಯೂಯಾರ್ಕ್‌ನಲ್ಲಿ ಮೊದಲ ಜಗನ್ನಾಥ ರಥಯಾತ್ರೆ

ನ್ಯೂಯಾರ್ಕ್‌ನಲ್ಲಿ ಭಗವಾನ್ ಜಗನ್ನಾಥನ ಮೊದಲ ರಥಯಾತ್ರೆ 1976ರಲ್ಲಿ ಪ್ರಾರಂಭವಾಯಿತು. ಅಂದಿನ 30 ವರ್ಷದ ಉದಯೋನ್ಮುಖ ರಿಯಲ್ ಎಸ್ಟೇಟ್ ಉದ್ಯಮಿ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಕಾರ್ಯಕ್ಕೆ ಸಹಾಯ ಮಾಡಿದ್ದರು. ಅಂದು ಅಂದರೆ ಸುಮಾರು 48 ವರ್ಷಗಳ ಹಿಂದೆ ಇಸ್ಕಾನ್ ನ್ಯೂಯಾರ್ಕ್ ನಗರದಲ್ಲಿ ಮೊದಲ ರಥಯಾತ್ರೆಯನ್ನು ಆಯೋಜಿಸಲು ಚಿಂತನೆ ನಡೆಸುತ್ತಿದ್ದಾಗ ಹಲವು ಸವಾಲುಗಳಿದ್ದವು ಎಂದು ಅಂದಿನ ದಿನಗಳನ್ನು ರಾಧಾರಾಮ್ ದಾಸ್ ನೆನಪಿಸಿಕೊಂಡಿದ್ದಾರೆ.

“ಫಿಫ್ತ್ ಅವೆನ್ಯೂನಲ್ಲಿ ಮೆರವಣಿಗೆಗೆ ಪರವಾನಗಿ ಲಭಿಸುವುದು ಕಷ್ಟವಾಗಲಿಲ್ಲ. ಆದರೆ ರಥಗಳನ್ನು ನಿರ್ಮಿಸಬಹುದಾದ ದೊಡ್ಡ ಖಾಲಿ ಸ್ಥಳವನ್ನು ಕಂಡುಹಿಡಿಯುವುದೇ ಬಹುದೊಡ್ಡ ಸವಾಲಾಗಿತ್ತು. ನಾವು ಕೈಗೊಂಡ ಪ್ರಯತ್ನಗಳೆಲ್ಲ ವ್ತರ್ಥವಾಗಿತ್ತು. ಈ ವೇಳೆ ಡೊನಾಲ್ಡ್ ಟ್ರಂಪ್ ಕೃಷ್ಣ ಭಕ್ತರಿಗೆ ಭರವಸೆಯ ಕಿರಣವಾಗಿ ಹೊರಹೊಮ್ಮಿದರು” ಎಂದು ದಾಸ್ ಹೇಳಿದ್ದಾರೆ.

ಇದನ್ನೂ ಓದಿ: Donald Trump: ಡೊನಾಲ್ಡ್‌ ಟ್ರಂಪ್‌ ಕಿವಿಗೆ ತಾಗಿದ್ದು ಬುಲೆಟ್‌ ಅಲ್ಲ? ಹಾಗಾದ್ರೆ ಏನದು? ಹುಸಿ ದಾಳಿಯ ಅನುಮಾನ ಏಕೆ?

ʼʼನ್ಯೂಯಾರ್ಕ್ ರಥಯಾತ್ರೆಯ ಸಂಘಟಕರು ಪ್ರಸಾದ ಮತ್ತು ವಿನಂತಿ ಪತ್ರದೊಂದಿಗೆ ಕಚೇರಿಗೆ ತೆರಳಿ ಟ್ರಂಪ್ ಆಗಷ್ಟೇ ಖರೀದಿಸಿದ ಹಳೆಯ ರೈಲ್ವೆ ಯಾರ್ಡ್‌ನಲ್ಲಿ ರಥವನ್ನು ನಿರ್ಮಿಸಲು ಅನುಮತಿ ನೀಡುವಂತೆ ಕೋರಿದ್ದರು. ಮೂರು ದಿನಗಳ ನಂತರ ಟ್ರಂಪ್ ಅವರ ಕಾರ್ಯದರ್ಶಿ ಕರೆ ಮಾಡಿ ಅನುಮತಿ ನೀಡಿರುವ ಸಂಗತಿಯನ್ನು ತಿಳಿಸಿದ್ದರು. ಇದರಿಂದ ರಥಯಾತ್ರೆ ಸುಸೂತ್ರವಾಗಿ ನಡೆಯಿತುʼʼ ಎಂದು ರಾಧಾರಾಮ್ ದಾಸ್ ತಿಳಿಸಿದ್ದಾರೆ. ಸದ್ಯ ಅವರ ಈ ಪೋಸ್ಟ್‌ ವೈರಲ್‌ ಆಗಿದೆ.

Continue Reading
Advertisement
Rishabh Pant
ಕ್ರೀಡೆ9 mins ago

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Job Alert
ಉದ್ಯೋಗ19 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest34 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ42 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ1 hour ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ1 hour ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ2 hours ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ2 hours ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ24 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌