Le Bonnette Potato: ವರ್ಷದಲ್ಲಿ ಹತ್ತೇ ದಿನ ಮಾರಾಟಕ್ಕೆ ಸಿಗುವ ಜಗತ್ತಿನ ದುಬಾರಿ ಆಲೂಗಡ್ಡೆ! ಒಂದು ಕಿಲೋಗೆ ಎಷ್ಟು? - Vistara News

ಪ್ರಮುಖ ಸುದ್ದಿ

Le Bonnette Potato: ವರ್ಷದಲ್ಲಿ ಹತ್ತೇ ದಿನ ಮಾರಾಟಕ್ಕೆ ಸಿಗುವ ಜಗತ್ತಿನ ದುಬಾರಿ ಆಲೂಗಡ್ಡೆ! ಒಂದು ಕಿಲೋಗೆ ಎಷ್ಟು?

Le Bonnette Potato: ಫ್ರಾನ್ಸ್‌ನ ಈ ಆಲೂಗಡ್ಡೆಗಳು ವಿಶೇಷ ಆಲೂಗಡ್ಡೆಗಳಾಗಿವೆ. ಜಗತ್ತಿನ ಬೇರೆ ಯಾವುದೇ ಭಾಗದಲ್ಲಿ ಈ ಆಲೂ ಬೆಳೆಯುವುದಿಲ್ಲ. ಹಾಗಾಗಿ, ಇವು ದುಬಾರಿ ದರದಲ್ಲಿ ಮಾರಾಟವಾಗುತ್ತವೆ.

VISTARANEWS.COM


on

Le Bonnette Potato are world's most expensive potatos
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಟಾಟೆ, ಆಲೂ.. ಹೀಗೆ ನಾನಾ ಹೆಸರುಗಳಿಂದ ಕರೆಯಲಾಗುವ ಆಲೂಗಡ್ಡೆ ಜಗತ್ತಿನಾದ್ಯಂತ ಬಳಕೆಯಾಗುವ ತರಕಾರಿ. ಭಾರತದಲ್ಲಂತೂ ಯಾವುದೇ ಅಡುಗೆ ಆಲೂ ಇಲ್ಲದೇ ಪೂರ್ತಿಯಾಗುವುದಿಲ್ಲ. ಆಲೂಗಡ್ಡೆಯ ಈ ವ್ಯಾಪಕ ಬಳಕೆಗೆ ಮತ್ತೊಂದು ಕಾರಣವಿದೆ. ಏನೆಂದರೆ, ಬಹುಶಃ ಅತ್ಯಂತ ಅಗ್ಗದ ದರದಲ್ಲಿ ದೊರೆಯುವ ತರಕಾರಿ ಇದು. ಈ ಮಾತನ್ನು ಎಲ್ಲ ಒಪ್ಪುತ್ತಾರೆ. ಆದರೆ, ಬಹಳಷ್ಟು ಜನರಿಗೆ ಗೊತ್ತಿಲ್ಲದಿರುವ ಆಲೂ ಇದೆ. ಫ್ರಾನ್ಸ್‌ನಲ್ಲಿ ಬೆಳೆಯಲಾಗುವ ಈ ಆಲೂ ಕೆಜಿಗೆ ಸುಮಾರು 40 ಸಾವಿರದಿಂದ 50 ರೂ.ವರೆಗೆ ಇರುತ್ತದೆ ಮತ್ತು ವರ್ಷದಲ್ಲಿ 10 ದಿನ ಮಾತ್ರವೇ ಮಾರಾಟಕ್ಕೆ ದೊರೆಯುತ್ತದೆ! ಅಂದ ಹಾಗೆ ಈ ಆಲೂ ಹೆಸರು ಲೆ ಬೊನೆಟ್(Le Bonnette).

ಆಲೂಗೆಡ್ಡೆಯ ಈ ತಳಿಯನ್ನು ಫ್ರಾನ್ಸ್‌ನ (France) ಐಲ್ ಡಿ ನೊಯಿರ್ಮೌಟಿಯರ್ (Ile De Noirmoutier) ಎಂಬ ಹೆಸರಿನ ದ್ವೀಪದಲ್ಲಿ ಬೆಳೆಯಲಾಗುತ್ತದೆ. ಈ ಆಲೂಗೆಡ್ಡೆ ತುಂಬಾ ಅಪರೂಪವಾಗಿದ್ದು, ಇದನ್ನು 50 ಚದರ ಮೀಟರ್ ಭೂಮಿಯಲ್ಲಿ ಮಾತ್ರ ಬೆಳೆಸಲಾಗುತ್ತದೆ. ಈ ಆಲೂಗಡ್ಡೆಗಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ಅವುಗಳನ್ನು ಮರಳು ಭೂಮಿಯಲ್ಲಿ ಮಾತ್ರ ಬೆಳೆಯಲಾಗುತ್ತದೆ. ಇದಕ್ಕಾಗಿ ಕಡಲಕಳೆ ಮತ್ತು ಪಾಚಿಗಳು ಗೊಬ್ಬರಗಳಾಗಿ ಬಳಸಲಾಗುತ್ತದೆ. ಈ ಕಾರಣದಿಂದಾಗಿಯೇ ಈ ಆಲೂಗಡ್ಡೆಗಳು ಜಗತ್ತಿನ ದುಬಾರಿ ಆಲೂಗಡ್ಡೆಗಳಾಗಲು ಕಾರಣವಾಗಿದೆ. ಲೆ ಬೊನೆಟ್ ಆಲೂಗಡ್ಡೆಯ ರುಚಿಯು ಇತರ ಆಲೂಗಡ್ಡೆಗಳಿಗಿಂತಲೂ ಭಿನ್ನವಾಗಿದೆ. ಈ ಆಲೂಗಡ್ಡೆಯು ಸ್ವಲ್ಪ ಹುಳಿ, ಸ್ವಲ್ಪ ಉಪ್ಪು ರುಚಿ ಹೊಂದಿರುತ್ತದೆ. ತಿಂದ ಬಳಿಕ ನಿಮಗೆ ವಾಲ್ಟನ್ ರೀತಿ ಅನಿಸುತ್ತದೆ.

ಈ ಆಲೂಗಡ್ಡೆಗಳು ಬಹಳ ಟೊಳ್ಳಾಗಿರುತ್ತವೆ ಮತ್ತು ಸೂಕ್ಷ್ಮವಾಗಿರುತ್ತವೆ. ಹಾಗಾಗಿಯೇ, ಅವುಗಳನ್ನು ಒಂದೊಂದಾಗಿ ಕೈಯಿಂದ ಕೀಳುತ್ತಾರೆ. ವರ್ಷಕ್ಕೆ ಒಂದು ವಾರ ಮಾತ್ರವೇ ಈ ಆಲೂಗಡ್ಡೆ ಸುಗ್ಗಿಯಾಗಿರುತ್ತದೆ. ಈ ಆಲೂಗಡ್ಡೆಗಳ ಸಿಪ್ಪೆ ತೆಗೆಯದಂತೆ ಸಲಹೆ ನೀಡಲಾಗುತ್ತದೆ. ಏಕೆಂದರೆ ಈ ಆಲೂಗಡ್ಡೆಯ ಸಿಪ್ಪೆ ಮಣ್ಣಿನ ಎಲ್ಲಾ ಸುವಾಸನೆ ಮತ್ತು ಹತ್ತಿರದ ಸಮುದ್ರದ ನೀರನ್ನು ಹೀರಿಕೊಂಡಿರುತ್ತದೆ. ಒಂದೊಮ್ಮೆ ಸಿಪ್ಪೆ ತೆಗೆದರೆ ಆ ಮೂಲ ಗುಣಗಳು ಹೊರಟು ಹೋಗುತ್ತವೆ.

ಈ ದ್ವೀಪದಲ್ಲಿ ಉತ್ಪಾದಿಸಲಾಗುವ 10 ಸಾವಿರ ಟನ್ ಆಲೂಗಡ್ಡೆಗಳ ಪೈಕಿ 100 ಟನ್ ಈ ದುಬಾರಿ ಲೆ ಬಾನೆಟ್‌ ಆಲೂಗಡ್ಡೆಗಳಿರುತ್ತವೆ. ಹೆಚ್ಚು ಉತ್ಪಾದನೆಯಾಗದೇ ಕಾರಣ ಈ ಆಲೂ ಹೆಚ್ಚು ದುಬಾರಿ ಎನಿಸಿಕೊಂಡಿದೆ. ಕೈಯಿಂದಲೇ ಕೀಳುವುದರಿಂದ ಹೆಚ್ಚು ಕೂಲಿಗಳು ಬೇಕಾಗುತ್ತದೆ. ಒಂದು ವಾರ ಕಾಲ ನಡೆಯುವ ಆಲೂ ಸುಗ್ಗಿಯಲ್ಲಿ ಸುಮಾರು 2500 ಜನರು ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ: Price hike : ಇಂದಿನಿಂದ ಯಾವುದು ದುಬಾರಿ, ಯಾವುದು ಅಗ್ಗ, ಹೊಸ ಬದಲಾವಣೆ ಏನು?

ಈ ವಿಶೇಷ ಆಲೂಗಳನ್ನು ಸಲಾಡ್ ಪೂರಿ, ಸೂಪ್ ಮತ್ತು ಕ್ರೀಮ್ ತಯಾರಿಸಲು ಬಳಸಲಾಗುತ್ತದೆ. ವೈದ್ಯರ ಪ್ರಕಾರ, ಬೊನೊಟ್‌ ಆಲೂಗಳನ್ನು ತೀವ್ರವಾದ ಕಾಯಿಲೆಗಳಿಂದ ರಕ್ಷಿಸಲು ಬಳಸಲಾಗುತ್ತದೆ. ಅಲ್ಲದೆ, ಅವು ಸೂಪರ್‌ಮಾರ್ಕೆಟ್‌ಗಳಲ್ಲಿ ದೊರೆಯುವುದಿಲ್ಲ. ಒಂದೊಮ್ಮೆ ಈ ಆಲೂಗಳನ್ನು ಖರೀದಿಸಬೇಕಿದ್ದರೆ ಆನ್‌ಲೈನ್ ಸ್ಟೋರ್‌ಗಳ ಮೂಲಕವೇ ಖರೀದಿಸಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Constables: ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ವಿಶೇಷ ಸಶಸ್ತ್ರ ಪಡೆಯ (SAF) ಇಬ್ಬರು ಪೇದೆಗಳು ಬಿಯರ್‌ ಸೇವಿಸಿ ಮೃತಪಟ್ಟಿದ್ದಾರೆ ಎಂಬುದಾಗಿ ಪೊಲೀಸರೇ ಮಾಹಿತಿ ನೀಡಿದ್ದಾರೆ. ಮೃತ ಕಾನ್‌ಸ್ಟೆಬಲ್‌ಗಳನ್ನು ದನಿರಾಮ್‌ ಉಯಿಕೆ (55) ಹಾಗೂ ಪ್ರೇಮ್‌ಲಾಲ್‌ ಕಾಕೋಡಿಯಾ (50) ಎಂಬುದಾಗಿ ಗುರುತಿಸಲಾಗಿದೆ. ಇವರು ಎಸ್‌ಎಎಫ್‌ನ 8ನೇ ಬೆಟಾಲಿಯನ್‌ ಸಿಬ್ಬಂದಿ ಆಗಿದ್ದರು.

VISTARANEWS.COM


on

Constables
Koo

ಭೋಪಾಲ್‌: ಮದ್ಯಪಾನ ಮಾಡುವುದು ಆರೋಗ್ಯಕ್ಕೆ ಹಾನಿಕಾರ ಎಂದು ಮದ್ಯದ ಬಾಟಲಿ ಮೇಲೆಯೇ ಬರೆಯಲಾಗಿರುತ್ತದೆ. ಇನ್ನು ಜಾಹೀರಾತುಗಳ ಮೂಲಕವೂ ಮದ್ಯಪಾನದ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಆದರೆ, ಜಾಹೀರಾತು, ಜಾಗೃತಿ ಬಿಡಿ, ವೈದ್ಯರು ವೈಯಕ್ತಿಕವಾಗಿ ಹೇಳಿದರೂ ಮದ್ಯಪಾನ ಬಿಡದ ‘ಚಟವಾದಿ’ಗಳು ತುಂಬ ಇರುತ್ತಾರೆ. ಇನ್ನು, ಮಧ್ಯಪ್ರದೇಶದಲ್ಲಿ (Madhya Pradesh) ಇಬ್ಬರು ಪೊಲೀಸ್‌ ಪೇದೆಗಳು (Constables) ಬಿಯರ್‌ ಸೇವಿಸಿ ಮೃತಪಟ್ಟಿರುವುದೇ ಆಲ್ಕೋಹಾಲ್‌ ಹೇಗೆ ಜೀವದ ಮೇಲೆ ಪರಿಣಾಮ ಬೀರುತ್ತದೆ ಎಂಬುದಕ್ಕೆ ನಿದರ್ಶನ ಸಿಕ್ಕಿದೆ.

ಹೌದು, ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ವಿಶೇಷ ಸಶಸ್ತ್ರ ಪಡೆಯ (SAF) ಇಬ್ಬರು ಪೇದೆಗಳು ಬಿಯರ್‌ ಸೇವಿಸಿ ಮೃತಪಟ್ಟಿದ್ದಾರೆ ಎಂಬುದಾಗಿ ಪೊಲೀಸರೇ ಮಾಹಿತಿ ನೀಡಿದ್ದಾರೆ. ಮೃತ ಕಾನ್‌ಸ್ಟೆಬಲ್‌ಗಳನ್ನು ದನಿರಾಮ್‌ ಉಯಿಕೆ (55) ಹಾಗೂ ಪ್ರೇಮ್‌ಲಾಲ್‌ ಕಾಕೋಡಿಯಾ (50) ಎಂಬುದಾಗಿ ಗುರುತಿಸಲಾಗಿದೆ. ಇವರು ಎಸ್‌ಎಎಫ್‌ನ 8ನೇ ಬೆಟಾಲಿಯನ್‌ ಸಿಬ್ಬಂದಿ ಆಗಿದ್ದರು. ಶನಿವಾರ (ಮೇ 25) ರಾತ್ರಿ ಇವರು ಬಿಯರ್‌ ಸೇವಿಸಿದ್ದು, ನಂತರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Beer

ದನಿರಾಮ್‌ ಹಾಗೂ ಪ್ರೇಮ್‌ಲಾಲ್‌ ಅವರು ಆಪ್ತರಾಗಿದ್ದು, ಶನಿವಾರ ರಾತ್ರಿ ಇಬ್ಬರೂ ಬಿಯರ್‌ ಪಾರ್ಟಿ ಮಾಡಿದ್ದಾರೆ. ಇಬ್ಬರೂ ಊಟ ಮಾಡಿ ಮಲಗಿದ್ದು, ಕೆಲ ಹೊತ್ತಿನಲ್ಲಿಯೇ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು, ಇಬ್ಬರ ಸಾವಿಗೆ ಏನು ಕಾರಣ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಿಯರ್‌ ಎಷ್ಟು ಅಪಾಯಕಾರಿ ಎಂಬ ಕುರಿತು ಆಗಾಗ ವರದಿಗಳು ಬರುತ್ತಲೇ ಇರುತ್ತವೆ. ಕೆಲ ತಿಂಗಳ ಹಿಂದೆ, ಯುರೋಪಿಯನ್‌ ಯುನಿಯನ್‌ನ ಯುರೋಪಿಯನ್‌ ಫುಡ್‌ ಸೇಫ್ಟಿ ಏಜೆನ್ಸಿಯು ಅಧ್ಯಯನ ವರದಿ ಬಿಡುಗಡೆ ಮಾಡಿದ್ದು, ಬಿಯರ್‌ ಕುರಿತ ಹತ್ತಾರು ಭಯಾನಕ ಅಂಶಗಳನ್ನು ತೆರೆದಿಟ್ಟಿತ್ತು. “ಬಿಯರ್‌ ಹಾಗೂ ಮಾಂಸದಲ್ಲಿ ಆರೋಗ್ಯಕ್ಕೆ ಹಾನಿ ಉಂಟುಮಾಡುವ ರಾಸಾಯನಿಕಗಳಿವೆ. ಅದರಲ್ಲೂ, ನೈಟ್ರೋಸಮೈನ್ಸ್‌ ಎಂಬ ರಾಸಾಯನಿಕವು ಕ್ಯಾನ್ಸರ್‌ಕಾರಕವಾಗಿದೆ. ಬಿಯರ್‌ ಹಾಗೂ ಮಾಂಸದಲ್ಲಿ ಈ ಅಂಶವು ಪತ್ತೆಯಾಗಿರುವುದರಿಂದ ಸೇವಿಸುವವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ” ಎಂದು ತಿಳಿಸಿತ್ತು.

ಇದನ್ನೂ ಓದಿ: Beer Shortage: ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Continue Reading

ಕರ್ನಾಟಕ

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Karnataka Council Election: ಯಾರಿಗೆ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಗೊಂದಲ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಫಾರ್ಮುಲಾ ಕಂಡು ಹಿಡಿಯಲಾಗಿದೆ. ಎರಡು ಸ್ಥಾನ ಸಿದ್ದರಾಮಯ್ಯ ಬಣಕ್ಕೆ, ಎರಡು ಸ್ಥಾನ ಡಿಕೆಶಿ ಬಣಕ್ಕೆ, ಇನ್ನೆರಡು ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ತಿಳಿದುಬಂದಿದೆ. ಇನ್ನು ಶಾರ್ಟ್‌ ಲಿಸ್ಟ್‌ ಹಿಡಿದುಕೊಂಡು ದೆಹಲಿಗೆ ತೆರಳಲು ಸಿದ್ದರಾಮಯ್ಯ ಹಾಗೂ ಡಿಕೆಶಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Karnataka Council Election
Koo

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 11 ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯು (Karnataka Legislative Council Election) ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣಗಳ ಸೃಷ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D K Shivakumar) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿ ಹಲವು ನಾಯಕರ ಆಪ್ತರು ಲಾಬಿ ನಡೆಸುತ್ತಿದ್ದು, ಇದಕ್ಕಾಗಿ ಕಾಂಗ್ರೆಸ್‌ ನಾಯಕರು ಭಿನ್ನಮತವೇ ಬೇಡ ಎಂದು 2+2+2+1=7 ಫಾರ್ಮುಲಾ ಕಂಡು ಹಿಡಿದಿದ್ದಾರೆ ಎಂದು ತಿಳಿದಬಂದಿದೆ.

ಯಾರಿಗೆ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಗೊಂದಲ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಫಾರ್ಮುಲಾ ಕಂಡು ಹಿಡಿಯಲಾಗಿದೆ. ಎರಡು ಸ್ಥಾನ ಸಿದ್ದರಾಮಯ್ಯ ಬಣಕ್ಕೆ, ಎರಡು ಸ್ಥಾನ ಡಿಕೆಶಿ ಬಣಕ್ಕೆ, ಇನ್ನೆರಡು ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್ ತೀರ್ಮಾನಿಸುತ್ತದೆ. ಇನ್ನು ಏಳು ಸ್ಥಾನಗಳಿಗಾಗಿ 50 ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದು, ಯಾರು ಯಾವ ಬಣದಲ್ಲಿದ್ದಾರೆ ಎಂಬುದರ ಮೇಲೆ ಮಣೆ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ.

ಯಾವ ಸಮುದಾಯಕ್ಕೆ ಯಾವ ನಾಯಕ ಮಣೆ ಹಾಕುತ್ತಿದ್ದಾರೆ? ಯಾರ ಯಾರ ಪರ, ಯಾರು ಲಾಬಿ ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಹೀಗಿದೆ.

ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ( ಕುರುಬ), ಕೆ.ಗೋವಿಂದ ರಾಜು ( ಒಕ್ಕಲಿಗ), ಎಚ್.ಎಂ. ರೇವಣ್ಣ ( ಕುರುಬ), ವಿ.ಆರ್. ಸುದರ್ಶನ್ (ಗಾಣಿಗ).

foolish to link Rakesh death to Prajwal case says CM Siddaramaiah

ಡಿ.ಕೆ ಶಿವಕುಮಾರ್
ಸಿಗುವ ಎರಡು ಸ್ಥಾನಕ್ಕೆ ವಿಜಯ್ ಮುಳಗುಂದ್ ( ಬ್ರಾಹ್ಮಣ), ವಿನಯ್ ಕಾರ್ತಿಕ್ (ಒಕ್ಕಲಿಗ), ಬಿ.ಎಲ್. ಶಂಕರ್ (ಒಕ್ಕಲಿಗ) ರಮೇಶ್ ಬಾಬು (ಬಲಿಜ), ಐಶ್ವರ್ಯ ಮಹದೇವ ( ಕುರುಬ), ನಟರಾಜ ಗೌಡ ( ಒಕ್ಕಲಿಗ), ನಲಪಾಡ್ ( ಮುಸ್ಲಿಂ) ಅವರು ಲಾಬಿ ನಡೆಸುತ್ತಿದ್ದಾರೆ.

Drinking Water in Bangalore DK Shivakumar warns of disciplinary action against officials if Water causes health problem

ಮಲ್ಲಿಕಾರ್ಜುನ ಖರ್ಗೆ
ಮುದ್ದುಗಂಗಾಧರ್ (ಖರ್ಗೆ ಆಪ್ತ), ಸೂರಜ್ ಹೆಗ್ಡೆ , ಪುಷ್ಪ ಅಮರನಾಥ (ದಲಿತ), ಮುಂಡರಗಿ ನಾಗರಾಜ್ (ದಲಿತ), ವಿ.ಆರ್. ಸುದರ್ಶನ್ (ಗಾಣಿಗ), ಕರಡಿ ಸಂಗಣ್ಣ (ಲಿಂಗಾಯತ), ಹುಸೇನ್ (ಮುಸ್ಲಿಂ)

ಹೈಕಮಾಂಡ್
ಬೋಸರಾಜು (ಹಾಲಿ ಸಚಿವ)

ದೆಹಲಿಗೆ ತೆರಳಲು ಸಿದ್ದು, ಡಿಕೆಶಿ ತೀರ್ಮಾನ

ಕಾಂಗ್ರೆಸ್‌ಗೆ ಲಭಿಸುವ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಶಾರ್ಟ್‌ ಲಿಸ್ಟ್‌ ಹಿಡಿದುಕೊಂಡು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಲು ತೀರ್ಮಾನಿಸಿದ್ದಾರೆ. ಮೇ 28, 29ರಂದು ದೆಹಲಿಯಲ್ಲಿರಲಿರುವ ಇಬ್ಬರೂ ನಾಯಕರು, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಿದ್ದಾರೆ. ಇದಾದ ಬಳಿಕವೇ ಅಭ್ಯರ್ಥಿಗಳ ಆಯ್ಕೆಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading

ಕರ್ನಾಟಕ

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Krishna Water Dispute: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ತಡೆ ಹಿಡಿಯಲಾಗಿದೆ.

VISTARANEWS.COM


on

Krishna Water Dispute
Koo

ಚಿಕ್ಕೋಡಿ: ಕೃಷ್ಣಾ ನದಿ ನೀರಿನ (Krishna Water Dispute) ವಿಚಾರವಾಗಿ ಮಹಾರಾಷ್ಟ್ರ ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ಹರಿದು ಬರ್ತಿದ್ದ ನೀರನ್ನು ತಡೆ ಹಿಡಿದಿರುವ ಮಹಾರಾಷ್ಟ್ರ ಸರ್ಕಾರ, ನದಿ ನೀರಿನ ಹರಿವಿನ ಮೇಲೆ ನಿಗಾ ಇಡಲು ನಾಲ್ವರು ಸಿಬ್ಬಂದಿಯನ್ನು ನೇಮಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ತಡೆ ಹಿಡಿಯಲಾಗಿದೆ. ಇಬ್ಬರು ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಇಬ್ಬರು ನೀರಾವರಿ ಇಲಾಖೆ ಸಿಬ್ಬಂದಿ ಸೇರಿ ಎರಡು ಗಸ್ತು ತಂಡಗಳನ್ನು ನೇಮಿಸಲಾಗಿದೆ.

ಕೃಷ್ಣಾ ನದಿ ನೀರು ತಡೆದ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

ಇದನ್ನೂ ಓದಿ | Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Monsoon 2024

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಇದನ್ನೂ ಓದಿ: Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಣೆ

ಮೇ 26ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Porsche Crash: ಮೇ 19ರಂದು ಪುಣೆಯಲ್ಲಿ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರದಲ್ಲಿ ಕುಡಿದು ವೇಗವಾಗಿ ಕಾರು ಚಲಾಯಿಸಿದ ಕಾರಣ ಮಧ್ಯಪ್ರದೇಶದ ಅಶ್ವಿನಿ ಕೋಷ್ಟ ಹಾಗೂ ಅನೀಶ್‌ ಅವಾಧಿಯಾ ಎಂಬ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದಾರೆ. ವಿಶಾಲ್‌ ಅಗರ್ವಾಲ್‌ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದು, ಅವರು ಪ್ರಭಾವ ಬೀರಲು ಯತ್ನಿಸಿದ್ದರು. ಈಗ ಬಾಲಕನ ತಂದೆ ಹಾಗೂ ತಾತನನ್ನು ಬಂಧಿಸಲಾಗಿದೆ.

VISTARANEWS.COM


on

Porsche Car Crash
Koo

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕನು ಮದ್ಯಪಾನ ಮಾಡಿ ಪೋರ್ಶೆ ಕಾರು ಚಲಾಯಿಸಿ, ಅಪಘಾತದಲ್ಲಿ (Porsche Crash) ಇಬ್ಬರ ಸಾವಿಗೆ ಕಾರಣವಾದ ಪ್ರಕರಣವು (Pune Car Accident) ದೇಶಾದ್ಯಂತ ಸುದ್ದಿಯಾಗಿದೆ. ಅಪ್ರಾಪ್ತನ ಕೈಗೆ ಕಾರು ಕೊಟ್ಟ ಹಿನ್ನೆಲೆಯಲ್ಲಿ 17 ವರ್ಷದ ಬಾಲಕನ ತಂದೆ ವಿಶಾಲ್‌ ಅಗರ್ವಾಲ್‌ ಹಾಗೂ ಅವರ ತಾತ ಸುರೇಂದ್ರ ಅಗರ್ವಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ, ಬಾಲಕನು ಚಲಾಯಿಸಿದ ಪೋರ್ಶೆ ಕಾರನ್ನು (Porsche) ಆತನ ತಾತನು ಬರ್ತ್‌ಡೇ ಗಿಫ್ಟ್‌ ಆಗಿ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

ಮೇ 19ರಂದು ಪುಣೆಯಲ್ಲಿ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರದಲ್ಲಿ ಕುಡಿದು ವೇಗವಾಗಿ ಕಾರು ಚಲಾಯಿಸಿದ ಕಾರಣ ಮಧ್ಯಪ್ರದೇಶದ ಅಶ್ವಿನಿ ಕೋಷ್ಟ ಹಾಗೂ ಅನೀಶ್‌ ಅವಾಧಿಯಾ ಎಂಬ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದಾರೆ. ವಿಶಾಲ್‌ ಅಗರ್ವಾಲ್‌ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದು, ಅವರು ಪ್ರಭಾವ ಬೀರಲು ಯತ್ನಿಸಿದ್ದರು. ಅಪಘಾತಕ್ಕೆ ಕಾರಣವಾದ 17 ವರ್ಷದ ಬಾಲಕನಿಗೆ ಪೊಲೀಸ್‌ ಠಾಣೆಯಲ್ಲಿ ಪಿಜ್ಜಾ ಕೂಡ ಪೂರೈಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಶ್ರೀಮಂತ ಕುಟುಂಬದ 17 ವರ್ಷದ ಬಾಲಕನಿಗೆ ಆತನ ತಾತನು ಹುಟ್ಟುಹಬ್ಬದ ಉಡುಗೊರೆಯಾಗಿ ಪೋರ್ಶೆ ಟೇಕ್ಯಾನ್‌ (ಸುಮಾರು 2 ಕೋಟಿ ರೂ.) ಕಾರು ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ.

“ಬಾಲಕನ ಜನ್ಮದಿನದ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆ ಆತನ ತಾತನು ಐಷಾರಾಮಿ ಕಾರಿನ ಫೊಟೊವನ್ನು ವಾಟ್ಸ್ಆ್ಯಪ್‌ನಲ್ಲಿ ಶೇರ್‌ ಮಾಡಿದ್ದರು” ಎಂಬುದಾಗಿ ಬಾಲಕನ ಸ್ನೇಹಿತನು ಹೇಳಿದ್ದಾನೆ ಎಂಬುದಾಗಿ ವರದಿಗಳು ತಿಳಿಸಿವೆ. ರೆಸ್ಟೋರೆಂಟ್‌ನಲ್ಲಿ ಮದ್ಯಪಾನ ಮಾಡಿ, ಅದಕ್ಕಾಗಿ 45 ಸಾವಿರ ರೂ. ಬಿಲ್‌ ಪಾವತಿಸಿ, ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದ ಕಾರಣ ಅಪಘಾತ ಸಂಭವಿಸಿದೆ. ಕಾರು ಓಡಿಸಿದ ವೇಗ ನೋಡಿದರೆ ಭಯ ಹುಟ್ಟಿಸುವಂತಿದೆ. ಇದಾದ ಬಳಿಕ ಅಪಘಾತದ ಹೊಣೆಯನ್ನು ನೀನೇ ಹೊತ್ತುಕೊ ಎಂಬುದಾಗಿ ವಾಹನ ಚಾಲಕನಿಗೆ ಬಾಲಕನ ತಂದೆ ಒತ್ತಡ ಹೇರಿದ್ದರು ಎಂದು ತಿಳಿದುಬಂದಿದೆ.

ಪುಣೆಯಲ್ಲಿ ಮಗನು ಬೈಕ್‌ಗೆ ಕಾರು ಗುದ್ದಿಸಿ, ಇಬ್ಬರ ಸಾವಿಗೆ ಕಾರಣವಾದ ಪ್ರಕರಣ ಸುದ್ದಿಯಾಗುತ್ತಲೇ ಉದ್ಯಮಿ ವಿಶಾಲ್‌ ಅಗರ್ವಾಲ್‌ ತಲೆಮರೆಸಿಕೊಂಡಿದ್ದರು. ಮೊದಲು ಪುಣೆಯ ತಮ್ಮ ನಿವಾಸಕ್ಕೆ ತೆರಳಿದ್ದ ಅವರು, ಅಲ್ಲಿಂದ ಡೌಂಡ್‌ನಲ್ಲಿರುವ ಫಾರ್ಮ್‌ಹೌಸ್‌ಗೆ ಹೋದರು. ಅಲ್ಲಿಂದ, ಕೊಲ್ಹಾಪುರಕ್ಕೆ ಪರಾರಿಯಾದ ಅವರು ಅಲ್ಲಿ ಗೆಳೆಯನನ್ನು ಭೇಟಿಯಾದರು. ಅಲ್ಲಿ, ಪೊಲೀಸರಿಂದ ಪರಾರಿಯಾಗಲು ಮತ್ತೊಂದು ಯೋಜನೆ ರೂಪಿಸಿದರು ಎಂದು ತಿಳಿದುಬಂದಿದೆ.

ವಿಶಾಲ್‌ ಅಗರ್ವಾಲ್‌ ಇಷ್ಟೆಲ್ಲ ಯೋಜನೆ ರೂಪಿಸಿದರೂ ಪುಣೆ ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಂಭಾಜಿನಗರದಲ್ಲಿ ವಿಶಾಲ್‌ ಅಗರ್ವಾಲ್‌ ಅವರನ್ನು ಬಂಧಿಸಿದರು. ಸಿಸಿಟಿವಿ ಕ್ಯಾಮೆರಾ ಹಾಗೂ ವಿಶಾಲ್‌ ಅಗರ್ವಾಲ್‌ ಗೆಳೆಯನ ಕಾರಿನ ಜಿಪಿಎಸ್‌ ಟ್ರ್ಯಾಕ್‌ ಮಾಡಿ, ಕೊನೆಗೂ ಅವರನ್ನು ಬಂಧಿಸಿದ್ದಾರೆ. ಸಂಭಾಜಿ ನಗರದ ಲಾಡ್ಜ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವಿಶಾಲ್‌ ಅಗರ್ವಾಲ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ.

ಇದನ್ನೂ ಓದಿ: Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

Continue Reading
Advertisement
Constables
ದೇಶ21 mins ago

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Rohit Sharma
ಕ್ರೀಡೆ28 mins ago

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Karnataka Rain
ಮಳೆ45 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ50 mins ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Karnataka Council Election
ಕರ್ನಾಟಕ1 hour ago

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Krishna Water Dispute
ಕರ್ನಾಟಕ1 hour ago

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Latest1 hour ago

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Actor Darshan fans against forest officials Construction of Arjuna tomb
ಸ್ಯಾಂಡಲ್ ವುಡ್1 hour ago

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Mango Nail Art
ಫ್ಯಾಷನ್1 hour ago

Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Viral News
ವೈರಲ್ ನ್ಯೂಸ್1 hour ago

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ45 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌