Maldives Election: ಮಾಲ್ಡೀವ್ಸ್‌ನಲ್ಲಿ ಇಂದು ಚುನಾವಣೆ; ಭಾರತ ವಿರೋಧಿ ಮುಯಿಜುಗೆ ಸೋಲು? - Vistara News

ವಿದೇಶ

Maldives Election: ಮಾಲ್ಡೀವ್ಸ್‌ನಲ್ಲಿ ಇಂದು ಚುನಾವಣೆ; ಭಾರತ ವಿರೋಧಿ ಮುಯಿಜುಗೆ ಸೋಲು?

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದಕ್ಕೂ ಮಾಲ್ಡೀವ್ಸ್‌ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ಭಾರತವು ತನ್ನ ಸೈನಿಕರನ್ನು ಹಿಂಪಡೆಯಬೇಕು ಎಂಬುದಾಗಿ ಚೀನಾ ಪರ ನಿಲುವಿನ ಮೊಹಮ್ಮದ್‌ ಮುಯಿಜು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಮಾಲ್ಡೀವ್ಸ್‌ನಲ್ಲಿ ಭಾನುವಾರ ಸಂಸತ್‌ ಚುನಾವಣೆ ಆರಂಭವಾಗಿದೆ. ಹಾಗಾಗಿ, ಮಾಲ್ಡೀವ್ಸ್‌ನಲ್ಲಿ ಯಾವ ಪಕ್ಷಕ್ಕೆ ಗೆಲುವಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ. ಸೋಮವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

VISTARANEWS.COM


on

Maldives Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಲೆ: ಮಾಲ್ಡೀವ್ಸ್‌ನಲ್ಲಿ ಭಾನುವಾರ (ಏಪ್ರಿಲ್‌ 21) ಸಂಸತ್‌ ಚುನಾವಣೆ ಆರಂಭವಾಗಿದೆ. ಮೊಹಮ್ಮದ್‌ ಮುಯಿಜು ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಭಾರತ ವಿರೋಧಿ ನಿಲವು ತಾಳಿದ್ದು, ಮುಯಿಜು ವಿರುದ್ಧ ಮಾಲ್ಡೀವ್ಸ್‌ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಇದಾದ ಬಳಿಕ ನಡೆಯುತ್ತಿರುವ ಮೊದಲ ಸಂಸತ್‌ ಚುನಾವಣೆ ಇದಾಗಿದ್ದು, ಚೀನಾ ಪರ ನಿಲುವಿನ ಮೊಹಮ್ಮದ್‌ ಮುಯಿಜು (Mohamed Muizzu) ಅವರ ಪೀಪಲ್ಸ್‌ ನ್ಯಾಷನಲ್‌ ಕಾಂಗ್ರೆಸ್‌ (PNC) ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಮಾಲ್ಡೀವ್ಸ್‌ನ 93 ಸಂಸತ್‌ ಕ್ಷೇತ್ರಗಳಲ್ಲಿ ಭಾನುವಾರ ಮತದಾನ ಆರಂಭವಾಗಿದೆ. ಸುಮಾರು 368 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅದರಲ್ಲೂ, ಭಾರತದ ಪರ ನಿಲುವು ಹೊಂದಿರುವ, ಮೊಹಮ್ಮದ್‌ ಮುಯಿಜು ವಿದೇಶಾಂಗ ನೀತಿ, ಚೀನಾ ಪರ ನಿಲುವನ್ನು ಟೀಕಿಸುವ ಮಾಲ್ಡೀವಿಯನ್‌ ಡೆಮಾಕ್ರಟಿಕ್‌ ಪಕ್ಷವು (MDP) ಮುನ್ನಡೆ ಸಾಧಿಸುವ ವಿಶ್ವಾಸ ಹೊಂದಿದೆ. ಹಾಗೊಂದು ವೇಳೆ, ಎಂಡಿಪಿ ಗೆಲುವು ಸಾಧಿಸಿದರೆ ಭಾರತಕ್ಕೆ ಹೆಚ್ಚು ಅನುಕೂಲವಾಗಲಿದೆ. ಹಾಗಾಗಿ, ಸೋಮವಾರ ಪ್ರಕಟವಾಗುವ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿದೆ.

ಕೆಲ ತಿಂಗಳ ಹಿಂದೆ ಮೊಹಮ್ಮದ್‌ ಮುಯಿಜು ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಭಾರತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಚೀನಾ ಜತೆ ಮಹತ್ವದ ಒಪ್ಪಂದ ಮಾಡಿಕೊಳ್ಳುತ್ತಿರುವ ಮೊಹಮ್ಮದ್‌ ಮುಯಿಜು, ಭಾರತೀಯರ ಸೈನಿಕರನ್ನು ಮಾತ್ರ ಮಾಲ್ಡೀವ್ಸ್‌ನಿಂದ ವಾಪಸ್‌ ಕರೆಸಿಕೊಳ್ಳಿ ಎಂದು ಆಗ್ರಹಿಸಿದ್ದಾರೆ. ಚೀನಾ ನೀಡುವ ಹಣಕಾಸು ನೆರವಿನಿಂದಾಗಿ ಇವರು ಇಂತಹ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು. ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ.

ಇದನ್ನೂ ಓದಿ: Maldives Minister: ಭಾರತದ ತಿರಂಗಾಕ್ಕೆ ಅವಮಾನ; ಕ್ಷಮೆ ಕೇಳಿದ ಮಾಲ್ಡೀವ್ಸ್‌ ಸಚಿವೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Iran-Israel: ಇರಾನ್ ವಶಪಡಿಸಿಕೊಂಡ ಇಸ್ರೇಲ್‌ ಹಡಗಿನಲ್ಲಿದ್ದ 17 ಭಾರತೀಯರು ಸೇರಿ ಎಲ್ಲ ಸಿಬ್ಬಂದಿಯ ಬಿಡುಗಡೆ

Iran-Israel: ಕೆಲವು ದಿನಗಳ ಹಿಂದೆ ಯುಎಇ ಕರಾವಳಿಯಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ವಶಪಡಿಸಿಕೊಂಡ ಇಸ್ರೇಲ್‌ ಮೂಲದ ಕಂಟೈನರ್ ಹಡಗಿನಲ್ಲಿದ್ದ ಎಲ್ಲ 25 ಸಿಬ್ಬಂದಿಯನ್ನು ಇರಾನ್‌ ಬಿಡುಗಡೆ ಮಾಡಿದೆ. ಈ ಪೈಕಿ 16 ಮಂದಿ ಭಾರತೀಯರಿದ್ದಾರೆ. ಭಾರತೀಯ ಮೂಲದ ಒಬ್ಬರು ಏಪ್ರಿಲ್ 18ರಂದು ಸುರಕ್ಷಿತವಾಗಿ ಮನೆಗೆ ಮರಳಿದ್ದರು.

VISTARANEWS.COM


on

Iran-Israel
Koo

ನವದೆಹಲಿ: ಕೆಲವು ದಿನಗಳ ಹಿಂದೆ ಯುಎಇ ಕರಾವಳಿಯಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ (Iran’s Revolutionary Guards) ವಶಪಡಿಸಿಕೊಂಡ (Ship Seized) ಇಸ್ರೇಲ್‌ ಮೂಲದ ಕಂಟೈನರ್ ಹಡಗಿನಲ್ಲಿದ್ದ ಎಲ್ಲ 25 ಸಿಬ್ಬಂದಿಯನ್ನು ಇರಾನ್‌ ಬಿಡುಗಡೆ ಮಾಡಿದೆ. ಈ ಪೈಕಿ 16 ಮಂದಿ ಭಾರತೀಯರಿದ್ದಾರೆ. ಏಪ್ರಿಲ್‌ 13ರಂದು ಕಂಟೈನರ್ ಹಡಗು ಎಂಸಿಎಸ್ ಏರೀಸ್ (MCS Aries) ಅನ್ನು ಹಾರ್ಮುಜ್ ಜಲಸಂಧಿ (Strait of Hormuz)ಯ ಬಳಿ ಹೆಲಿಬೋರ್ನ್ ಕಾರ್ಯಾಚರಣೆ ನಡೆಸುವ ಮೂಲಕ ವಶಪಡಿಸಿಕೊಳ್ಳಲಾಗಿತ್ತು (Iran-Israel).

ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮಿರ್‌- ಬ್ಡೊಲ್ಲಾಹಿಯಾನ್ ಮತ್ತು ಎಸ್ಟೋನಿಯನ್‌ನ ಸಚಿವ ಮಾರ್ಗಸ್ ತ್ಸಾಹ್ಕ್ನಾ ನಡುವೆ ಶುಕ್ರವಾರ ನಡೆದ ದೂರವಾಣಿ ಸಂಭಾಷಣೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಉಭಯ ಕಡೆಯವರು ದ್ವಿಪಕ್ಷೀಯ ಸಂಬಂಧಗಳು ಮತ್ತು ಇತ್ತೀಚಿನ ಸ್ಥಿತಿ, ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿದೆ.

ಇದಕ್ಕೂ ಮೊದಲು ಇಸ್ರೇಲ್‌ನ ಸರಕು ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿ ಪೈಕಿ ಒಬ್ಬರಾದ ಕೇರಳದ ತ್ರಿಶೂರ್‌ನ ಆನ್ ಟೆಸ್ಸಾ ಜೋಸೆಫ್ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅವರು ಏಪ್ರಿಲ್ 18ರಂದು ಸುರಕ್ಷಿತವಾಗಿ ಮನೆಗೆ ಮರಳಿದ್ದರು. 17 ಭಾರತೀಯ ಸಿಬ್ಬಂದಿ ಪೈಕಿ ಒಬ್ಬರು ಭಾರತಕ್ಕೆ ಮರಳಿದ್ದಾರೆ ಮತ್ತು ಇತರರು ಸುರಕ್ಷಿತರಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಏಪ್ರಿಲ್ 25ರಂದು ಹೇಳಿತ್ತು. ಕೆಲವು ಒಪ್ಪಂದಗಳನ್ನು ಪೂರೈಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಅದರಂತೆ ಇದೀಗ ಎಲ್ಲರನ್ನೂ ಬಿಡುಗಡೆ ಮಾಡಲಾಗಿದ್ದು, ಮನೆಯವರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಂಟೈನರ್ ಹಡಗನ್ನು ವಶಪಡಿಸಿಕೊಂಡ ಕೂಡಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್‌ನ ಸಚಿವ ಹುಸೇನ್ ಅಮಿರ್‌- ಬ್ಡೊಲ್ಲಾಹಿಯಾನ್ ಅವರೊಂದಿಗೆ ಮಾತನಾಡಿ, 17 ಭಾರತೀಯ ಸಿಬ್ಬಂದಿಯನ್ನು ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದರು. ಇತ್ತ ಎಸ್ಟೋನಿಯನ್ ಕೂಡ ಸಿಬ್ಬಂದಿಯನ್ನು ರಿಲೀಸ್‌ ಮಾಡುವಂತೆ ಮನವಿ ಸಲ್ಲಿಸಿತ್ತು. “ನಮ್ಮ ಪ್ರಾದೇಶಿಕ ಜಲಪ್ರದೇಶದಲ್ಲಿ ತನ್ನ ರಾಡಾರ್ ಅನ್ನು ಆಫ್ ಮಾಡಿದ ಮತ್ತು ನೌಕಾಯಾನದ ಭದ್ರತೆಗೆ ಅಪಾಯವನ್ನುಂಟು ಮಾಡಿದ ಕಾರಣಕ್ಕೆ ಹಡಗನ್ನು ನ್ಯಾಯಾಂಗ ನಿಯಮಗಳ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ” ಎಂದು ಇರಾನ್‌ ಹೇಳಿತ್ತು.

ಎಸ್ಟೋನಿಯನ್ ಅಧಿಕಾರಿಗಳ ನಡುವಿನ ದೂರವಾಣಿ ಚರ್ಚೆಯ ಸಮಯದಲ್ಲಿ ಇರಾನ್, “ಮಾನವೀಯ ಆಧಾರದ ಮೇಲೆ ಈಗಾಗಲೇ ಹಡಗಿನ ಎಲ್ಲ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲ ದೇಶಗಳ ಸಿಬ್ಬಂದಿ ತಮ್ಮ ತಾಯ್ನಾಡಿಗೆ ತೆರಳಬಹುದು” ಎಂದು ಹೇಳಿತ್ತು. ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್‌ನ ದೂತಾವಾಸ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್ ಕ್ರಮವನ್ನು ಖಂಡಿಸಿ ಇರಾನ್ ಯುದ್ಧ ಪ್ರಾರಂಭಿಸಲು ಮುಂದಾಗಿತ್ತು. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆಯೇ ಹಡಗನ್ನು ವಶಪಡಿಸಿಕೊಂಡಿದ್ದು ಆತಂಕ ಸೃಷ್ಟಿಸಿತ್ತು. ಇದೀಗ ಆತಂಕ ನಿವಾರಣೆಯಾಗಿದೆ.

ಇದನ್ನೂ ಓದಿ: Iran-Israel: 17 ಭಾರತೀಯ ಸಿಬ್ಬಂದಿಯಿದ್ದ ಇಸ್ರೇಲ್‌ ಹಡಗು ವಶಪಡಿಸಿದ ಇರಾನ್; ಯುದ್ಧಾಂತಕದ ಕಾರ್ಮೋಡ

Continue Reading

ವೈರಲ್ ನ್ಯೂಸ್

Rahul Gandhi: ರಾಹುಲ್‌ ಗಾಂಧಿಗೆ “ಮೊದಲು ರಾಯ್‌ಬರೇಲಿಯಿಂದ ಗೆಲ್ಲಿ…” ಎಂದ ಚೆಸ್‌ ದಂತಕಥೆ ಗ್ಯಾರಿ ಕಾಸ್ಪರೋವ್!

Rahul Gandhi: ಇತ್ತೀಚೆಗಷ್ಟೇ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚೆಸ್ ಆಡುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಈ ವಿಡಿಯೋವನ್ನು ಬಳಕೆದಾರರೊಬ್ಬರು ಕಾಸ್ಪರೋವ್‌ಗೆ ಟ್ಯಾಗ್‌ ಮಾಡಿದ್ದರು. ವೀಡಿಯೊದಲ್ಲಿ ರಾಹುಲ್‌, ಕಾಸ್ಪರೋವ್ ಅವರನ್ನು ತಮ್ಮ ನೆಚ್ಚಿನ ಚೆಸ್ ಆಟಗಾರ ಎಂದು ಹೇಳಿದ್ದರು. ಚೆಸ್‌ ಆಟ ಮತ್ತು ರಾಜಕೀಯದ ನಡುವಿರುವ ಸಾಮ್ಯತೆಗಳ ಬಗ್ಗೆ ಮಾತಾಡಿದ್ದರು.

VISTARANEWS.COM


on

rahul gandhi gary Kasparov
Koo

ಹೊಸದಿಲ್ಲಿ: ಖ್ಯಾತ ಚೆಸ್ ಆಟಗಾರ (Chess legend) ಗ್ಯಾರಿ ಕಾಸ್ಪರೋವ್ (Gary Kasparov) ಅವರು “ಚೆಸ್‌ನಲ್ಲಿ ಅಗ್ರಸ್ಥಾನಕ್ಕೆ ಸವಾಲು ಹಾಕುವ ಮೊದಲು ರಾಯ್ ಬರೇಲಿಯನ್ನು *Rae Bareli) ಮೊದಲು ಗೆಲ್ಲಿರಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಹೇಳಿದ್ದಾರೆ. ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (Social Media X) ಬಳಕೆದಾರರ ಜೊತೆ ನಡೆದ ಒಂದು ಚಾಟ್‌ ವೇಳೆ ಅವರ ಈ ಮಾತು ಬಂತು.

2005ರಲ್ಲಿ ಸ್ಪರ್ಧಾತ್ಮಕ ಚೆಸ್‌ನಿಂದ ನಿವೃತ್ತರಾದ ರಷ್ಯಾದ ಚೆಸ್‌ ದಂತಕಥೆ ಎನಿಸಿದ ಕಾಸ್ಪರೋವ್‌, ಶುಕ್ರವಾರ ಎಕ್ಸ್‌ನಲ್ಲಿ ಬಳಕೆದಾರರ ಪೋಸ್ಟ್‌ಗೆ ಪ್ರತಿಕ್ರಿಯಿಸುತ್ತಿದ್ದರು. ಕಾಸ್ಪರೋವ್‌ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಟು ವಿಮರ್ಶಕರಾಗಿದ್ದು, ಇದಕ್ಕಾಗಿ ಆಡಳಿತದ ಆಕ್ರೋಶ ಎದುರಿಸಿ ದೇಶದಿಂದ ಪಲಾಯನ ಮಾಡಿ ಕ್ರೊಯೇಷಿಯಾದಲ್ಲಿ ನೆಲೆಸಿದ್ದಾರೆ.

ಇತ್ತೀಚೆಗಷ್ಟೇ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚೆಸ್ ಆಡುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಈ ವಿಡಿಯೋವನ್ನು ಬಳಕೆದಾರರೊಬ್ಬರು ಕಾಸ್ಪರೋವ್‌ಗೆ ಟ್ಯಾಗ್‌ ಮಾಡಿದ್ದರು. ವೀಡಿಯೊದಲ್ಲಿ ರಾಹುಲ್‌, ಕಾಸ್ಪರೋವ್ ಅವರನ್ನು ತಮ್ಮ ನೆಚ್ಚಿನ ಚೆಸ್ ಆಟಗಾರ ಎಂದು ಹೇಳಿದ್ದರು. ಚೆಸ್‌ ಆಟ ಮತ್ತು ರಾಜಕೀಯದ ನಡುವಿರುವ ಸಾಮ್ಯತೆಗಳ ಬಗ್ಗೆ ಮಾತಾಡಿದ್ದರು.

“…ಒಮ್ಮೆ ನೀವು ಆಟದಲ್ಲಿ ಸ್ವಲ್ಪ ಉತ್ತಮಗೊಂಡರೆ, ಎದುರಾಳಿಯ ಕಾಯಿಗಳು ವಾಸ್ತವವಾಗಿ ನಿಮ್ಮ ಇಚ್ಛೆಯಂತೆಯೇ ಕಾರ್ಯನಿರ್ವಹಿಸುತ್ತವೆ” ಎಂದು ರಾಹುಲ್‌ ಗಾಂಧಿ ಚದುರಂಗ ಮತ್ತು ರಾಜಕೀಯವನ್ನು ಹೋಲಿಸಿದ್ದರು.

ಈ ವಿಡಿಯೋಗೆ ಉತ್ತರಿಸಿದ ಕಾಸ್ಪರೋವ್, “ನೀವು ಅಗ್ರಸ್ಥಾನಕ್ಕಾಗಿ ಸವಾಲು ಹಾಕುವ ಮೊದಲು ಮೊದಲು ರಾಯ್‌ಬರೇಲಿಯಿಂದ ಗೆಲ್ಲಬೇಕು ಎಂದು ಸಾಂಪ್ರದಾಯಿಕವಾಗಿ ಅಪೇಕ್ಷಿಸಲಾಗುತ್ತದೆ” ಎಂದಿದ್ದರು. ನಂತರ ಮತ್ತೊಂದು ಪೋಸ್ಟ್‌ ಹಾಕಿ, ತಮ್ಮ ಸಣ್ಣ ಜೋಕ್‌ ರಾಜಕೀಯ ಪರಿಣತಿಯದ್ದಲ್ಲ ಎಂದಿದ್ದಾರೆ.

“ನನ್ನ ಈ ಚಿಕ್ಕ ಜೋಕ್‌, ಭಾರತೀಯ ರಾಜಕೀಯದಲ್ಲಿ ಪರಿಣತಿಯಿಂದ ಬಂದಿದ್ದಲ್ಲ. ಆದರೆ ಹಿಂದೊಮ್ಮೆ ನನ್ನನ್ನು “ಸಾವಿರ ಕಣ್ಣುಗಳ ದೈತ್ಯ” ಎಂದು ಹೆಸರಿಸಲಾಗಿತ್ತು. ಆ ಹಿನ್ನೆಲೆಯಲ್ಲಿ, ರಾಜಕಾರಣಿಯೊಬ್ಬರು ನನ್ನ ಪ್ರೀತಿಯ ಆಟದಲ್ಲಿ ತೊಡಗುವುದನ್ನು ನೋಡಲು ನನಗೆ ಸಂತೋಷವಾಗುತ್ತದೆ” ಎಂದಿದ್ದಾರೆ ಅವರು.

“@Kasparov63 ಮತ್ತು @vishy64theking ಅವರು ಬೇಗನೆ ನಿವೃತ್ತರಾದರು ಮತ್ತು ನಮ್ಮ ಕಾಲದ ಶ್ರೇಷ್ಠ ಚೆಸ್ ಪ್ರತಿಭೆಯನ್ನು ಎದುರಿಸಬೇಕಾಗಿಲ್ಲ” ಎಂದು X ಬಳಕೆದಾರರು ಋಾಹುಲ್‌ ಗಾಂಧಿಯವರ ಪೋಸ್ಟ್‌ಗೆ ಕಾಮೆಂಟ್‌ನಲ್ಲಿ ಹೇಳಿದ್ದರು.

ರಾಹುಲ್‌ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದರು. ಅವರು ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿದ್ದಾರೆ. ಮಾಜಿ ವಿಶ್ವ ನಂಬರ್ ಒನ್ ಮತ್ತು ವಿಶ್ವ ಚಾಂಪಿಯನ್ ಚೆಸ್‌ ಆಟಗಾರ ಕಾಸ್ಪರೋವ್ 1985ರಲ್ಲಿ 22ನೇ ವಯಸ್ಸಿನಲ್ಲಿ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಆದರು. ಈಗ ರಾಜಕೀಯ ಕಾರ್ಯಕರ್ತರಾಗಿದ್ದಾರೆ.

ಅಪ್ರತಿಮ ಆಟಗಾರ, ಭಾರತೀಯ ಶ್ರೇಷ್ಠ ವಿಶ್ವನಾಥನ್ ಆನಂದ್ ಅವರ ಸಮಕಾಲೀನರು. ಇತ್ತೀಚೆಗೆ, 17 ವರ್ಷದ ಡಿ. ಗುಕೇಶ್ ಅವರು ವಿಶ್ವ ಪ್ರಶಸ್ತಿಗೆ ಅತಿ ಕಿರಿಯ ಚಾಲೆಂಜರ್ ಎಂಬ ಕಾಸ್ಪರೋವ್ ಅವರ ದಾಖಲೆಯನ್ನು ಮೀರಿಸಿದರು. ಆಗ ಕಾಸ್ಪರೋವ್‌ ಅವರು Xನಲ್ಲಿ ಗುಕೇಶ್‌ಗೆ ಅಭಿನಂದನಾ ಪೋಸ್ಟ್ ಹಾಕಿದ್ದರು. ಅವರು ಗುಕೇಶನನ್ನು “ಭಾರತೀಯ ಭೂಕಂಪ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading

ವಿದೇಶ

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Nijjar Killing: 2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಾನೆ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ, ಹತ್ಯೆ ಮಾಡಿದ ಆರೋಪಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

VISTARANEWS.COM


on

Nijjar Killing
Koo

ಒಟ್ಟಾವ: ಖಲಿಸ್ತಾನಿ ಉಗ್ರರ ಪರವಾಗಿರುವ ಕೆನಡಾ ಸರ್ಕಾರವೀಗ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆಯ (Nijjar Killing) ಆರೋಪಿಗಳನ್ನು ಬಂಧಿಸಿದೆ ಎಂದು ಮಾಧ್ಯಮಗಳ ವರದಿಗಳು ತಿಳಿಸಿವೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ತಂಡದಲ್ಲಿದ್ದ ಕೆಲವು ಆರೋಪಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

ಕೆನಡಾ ಸರ‍್ರೆಯಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಹತ್ಯೆ ಮಾಡಿದವರು ಭಾರತದ ಏಜೆಂಟ್‌ಗಳು ನೇಮಿಸಿದವರೇ ಆಗಿದ್ದಾರೆ ಎಂಬುದಾಗ ಕೆನಡಾ ಆರೋಪಿಸಿದೆ. ಆದರೆ, ಹತ್ಯೆ ಮಾಡಿದ ತಂಡದ ಸದಸ್ಯರನ್ನೇ ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೊಂದವರು ಯಾರು? ಅವರು ಭಾರತದ ಮೂಲದವರಾ? ಅವರು ನೀಡಿದ ಮಾಹಿತಿ ಏನು ಎಂಬ ಮಾಹಿತಿಯು ಕೆನಡಾ ಪೊಲೀಸರಿಂದಲೇ ಹೊರಬರಬೇಕಿದೆ. ಹತ್ಯೆ ಮಾಡಿದ ತಂಡದವರು ಎನ್ನಲಾದ ಮೂವರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಾನೆ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದಾರೆ. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

ಇದನ್ನೂ ಓದಿ: Khalistan terrorist: ʼನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿಲ್ಲʼ ಎಂದ ನ್ಯೂಜಿಲ್ಯಾಂಡ್‌ ಉಪಪ್ರಧಾನಿಗೇ ಬೆದರಿಕೆ ಹಾಕಿದ ಪನ್ನುನ್!‌

Continue Reading

ವಿದೇಶ

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

ಚೀನಾದ ಶಾಂಘೈ ವಿಶ್ವವಿದ್ಯಾಲಯ ಎಸ್‌ಜೆಟಿಯು ಹಾಗೂ ಪಾಕಿಸ್ತಾನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸುಪಾರ್ಕೊ ಜತೆಗೂಡಿ ಚಂದ್ರಯಾನ ಮಿಷನ್‌ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲ, ಆರ್ಥಿಕ ಬಿಕ್ಕಟ್ಟಿನ ಮಧ್ಯೆಯೂ ಚೀನಾದ ನೆರವಿನಿಂದ ಮೊದಲ ಚಂದ್ರಯಾನ ಕೈಗೊಂಡಿರುವ ಪಾಕಿಸ್ತಾನವು ಭಾರತಕ್ಕಿಂತ 16 ವರ್ಷ ಹಿಂದಿದೆ ಎಂಬುದು ಸಾಬೀತಾಗಿದೆ.

VISTARANEWS.COM


on

Pakistan
Koo

ಇಸ್ಲಾಮಾಬಾದ್:‌ ಆರ್ಥಿಕವಾಗಿ ದಿವಾಳಿಯಾಗಿರುವ, ಉತ್ತಮ ನಾಯಕ ಸಿಗದೆ ಆಡಳಿತಾತ್ಮಕವಾಗಿಯೂ ಅರಾಜಕತೆಯಿಂದ ಕೂಡಿರುವ, ಉಗ್ರರ ಪೋಷಣೆಗಾಗಿ ಜಾಗತಿಕವಾಗಿ ಹಣಕಾಸು ನೆರವು ಸಿಗದೆ ಒದ್ಡಾಡುತ್ತಿರುವ ಪಾಕಿಸ್ತಾನವೀಗ (Pakistan) ಚೀನಾದ (China) ನೆರವಿನಿಂದ ಮೊದಲ ಚಂದ್ರಯಾನ (Pakistan Lunar Mission) ಕೈಗೊಂಡಿದೆ. ಚೀನಾದ ನೆರವಿನಿಂದ ಪಾಕಿಸ್ತಾನ ಕೈಗೊಂಡಿರುವ ಚಂದ್ರಯಾನವು ಚಂದ್ರನ ಮೇಲ್ಮೈ ಕುರಿತು ಅಧ್ಯಯನ ನಡೆಸಲಿದೆ ಎಂದು ತಿಳಿದುಬಂದಿದೆ.

ಸುಮಾರು 53 ದಿನಗಳವರೆಗೆ ಪಾಕಿಸ್ತಾನದ ಚಂದ್ರಯಾನದ ಉಪಗ್ರಹವು ಚಂದ್ರನ ಮೇಲ್ಮೈ ಕುರಿತು ಅಧ್ಯಯನ ಮಾಡಲಿದೆ. ಚಂದ್ರಯಾನದ ಉಡಾವಣೆ ಯಶಸ್ವಿಯಾಗುತ್ತಲೇ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ದೇಶದ ಜನರಿಗೆ ಹಾಗೂ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಅಣ್ವಸ್ತ್ರದಲ್ಲಿ ಹೇಗೆ ಪಾಕಿಸ್ತಾನದ ವಿಜ್ಞಾನಿಗಳು ಪಾರಮ್ಯ ಸಾಧಿಸಿದ್ದರೋ, ಅದೇ ರೀತಿ ಬಾಹ್ಯಾಕಾಶ ಕ್ಷೇತ್ರದಲ್ಲೂ ಮೈಲುಗಲ್ಲು ಸ್ಥಾಪಿಸಿದ್ದಾರೆ. ಇದು ದೇಶವೇ ಹೆಮ್ಮೆ ಪಡುವ ವಿಚಾರವಾಗಿದೆ” ಎಂಬುದಾಗಿ ನೂತನ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚೀನಾದ ಶಾಂಘೈ ವಿಶ್ವವಿದ್ಯಾಲಯ ಎಸ್‌ಜೆಟಿಯು ಹಾಗೂ ಪಾಕಿಸ್ತಾನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸುಪಾರ್ಕೊ ಜತೆಗೂಡಿ ಚಂದ್ರಯಾನ ಮಿಷನ್‌ ಕೈಗೊಳ್ಳಲಾಗಿದೆ. ಐಕ್ಯೂಬ್‌-ಕ್ಯೂ ಸ್ಯಾಟಲೈಟ್‌ (iCube-Q Satellite) ಎರಡು ಕ್ಯಾಮೆರಾಗಳನ್ನು ಒಳಗೊಂಡಿದ್ದು, ಇವು ಚಂದ್ರನ ಮೇಲ್ಮೈ ಫೋಟೊಗಳನ್ನು ಕಳುಹಿಸಲಿವೆ. ಇದು ಚೀನಾದ ಆರನೇ ಚಂದ್ರಯಾನವಾಗಿದ್ದು, ಚಂದ್ರನ ಅಂಗಳದಲ್ಲಿರುವ ಮಣ್ಣು ಹಾಗೂ ಕಲ್ಲಿನ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನ ನಡೆಸುವುದು ಪ್ರಮುಖ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.

ಭಾರತಕ್ಕಿಂತ ಪಾಕ್‌ 16 ವರ್ಷ ಹಿಂದೆ

ಆರ್ಥಿಕ ಬಿಕ್ಕಟ್ಟಿನ ಮಧ್ಯೆಯೂ ಚೀನಾದ ನೆರವಿನಿಂದ ಮೊದಲ ಚಂದ್ರಯಾನ ಕೈಗೊಂಡಿರುವ ಪಾಕಿಸ್ತಾನವು ಭಾರತಕ್ಕಿಂತ 16 ವರ್ಷ ಹಿಂದಿದೆ ಎಂಬುದು ಸಾಬೀತಾಗಿದೆ. ಭಾರತದ ಇಸ್ರೋ 2008ರಲ್ಲಿ ಮೊದಲ ಬಾರಿಗೆ ಚಂದ್ರಯಾನ ಕೈಗೊಂಡು ಯಶಸ್ವಿಯಾಗಿತ್ತು. ಈಗ ಭಾರತವು ಮೂರನೇ ಬಾರಿ ಚಂದ್ರಯಾನ ಕೈಗೊಂಡಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಜಗತ್ತಿನಲ್ಲೇ ಮೊದಲ ಬಾರಿಗೆ ಲ್ಯಾಂಡರ್‌ ಹಾಗೂ ರೋವರ್‌ಗಳನ್ನು ಸಾಫ್ಟ್‌ ಲ್ಯಾಂಡ್‌ ಮಾಡಿದ ಮೊದಲ ದೇಶ ಎಂಬ ಖ್ಯಾತಿಗೆ ಭಾಜನವಾಗಿದೆ.

ಇದನ್ನೂ ಓದಿ: Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Continue Reading
Advertisement
Ajay Devgn 'Shaitaan' to stream on OTT
ಒಟಿಟಿ18 mins ago

Ajay Devgn: ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗ್ತಾ ಇದೆ ಅಜಯ್‌ ದೇವಗನ್‌ ʻಶೈತಾನ್ʼ ಸಿನಿಮಾ

Brij Bhushan
ಕ್ರೀಡೆ19 mins ago

Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

Prajwal Revanna Case red corner notice
ಪ್ರಮುಖ ಸುದ್ದಿ24 mins ago

Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

Iran-Israel
ವಿದೇಶ31 mins ago

Iran-Israel: ಇರಾನ್ ವಶಪಡಿಸಿಕೊಂಡ ಇಸ್ರೇಲ್‌ ಹಡಗಿನಲ್ಲಿದ್ದ 17 ಭಾರತೀಯರು ಸೇರಿ ಎಲ್ಲ ಸಿಬ್ಬಂದಿಯ ಬಿಡುಗಡೆ

Kannada New Movie Rangasthala movie
ಸ್ಯಾಂಡಲ್ ವುಡ್43 mins ago

Kannada New Movie: ‘ ರಂಗಸ್ಥಳ’ ಸಿನಿಮಾಗೆ ಮಲಯಾಳಂನ ಖ್ಯಾತ ನಟ ಎಂಟ್ರಿ

Mallikarjuna Kharge
ದೇಶ50 mins ago

Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

RCB vs GT
ಕ್ರೀಡೆ51 mins ago

RCB vs GT: ಆರ್​ಸಿಬಿ ಅಭಿಮಾನಿಗಳಿಗೆ ಇಂದು ಶೇ.99ರಷ್ಟು ನಿರಾಸೆ ಖಚಿತ; ಪಂದ್ಯ ನಡೆಯುವುದೇ ಅನುಮಾನ

rahul gandhi gary Kasparov
ವೈರಲ್ ನ್ಯೂಸ್1 hour ago

Rahul Gandhi: ರಾಹುಲ್‌ ಗಾಂಧಿಗೆ “ಮೊದಲು ರಾಯ್‌ಬರೇಲಿಯಿಂದ ಗೆಲ್ಲಿ…” ಎಂದ ಚೆಸ್‌ ದಂತಕಥೆ ಗ್ಯಾರಿ ಕಾಸ್ಪರೋವ್!

Lok Sabha Election 2024
Lok Sabha Election 20242 hours ago

Lok Sabha Election 2024: ಚುನಾವಣಾ ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್‌ ಅಭ್ಯರ್ಥಿ; ವಿಡಿಯೊ ಇಲ್ಲಿದೆ

Viral News
ವೈರಲ್ ನ್ಯೂಸ್2 hours ago

Viral News: ಹೆರಿಗೆಯಾದ ಮೂರು ಗಂಟೆಗಳಲ್ಲೇ ಅಪಾರ್ಟ್‌ಮೆಂಟ್‌ ಮೇಲಿಂದ ಮಗುವನ್ನೇ ಎಸೆದ್ಳಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ17 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌