ಪತ್ನಿಯನ್ನು ಕೊಂದು 40ವರ್ಷ ಆರಾಮಾಗಿದ್ದವ ಸಿಕ್ಕಿಬಿದ್ದಿದ್ದು ಕ್ರೈಂ ಪಾಡ್​ಕಾಸ್ಟ್​​ನಿಂದ; ವಿದ್ಯಾರ್ಥಿನಿ ಮೇಲಿದ್ದ ಮೋಹವೇ ಪಾಶವಾಯ್ತು! - Vistara News

ವಿದೇಶ

ಪತ್ನಿಯನ್ನು ಕೊಂದು 40ವರ್ಷ ಆರಾಮಾಗಿದ್ದವ ಸಿಕ್ಕಿಬಿದ್ದಿದ್ದು ಕ್ರೈಂ ಪಾಡ್​ಕಾಸ್ಟ್​​ನಿಂದ; ವಿದ್ಯಾರ್ಥಿನಿ ಮೇಲಿದ್ದ ಮೋಹವೇ ಪಾಶವಾಯ್ತು!

ಕ್ರಿಸ್ಟೋಫರ್​ ಡಾಸನ್​ ಎಂಬಾತ ವೃತ್ತಿಯಲ್ಲಿ ಶಿಕ್ಷಕ. ಈತ ವೃತ್ತಿಪರ ರಗ್ಬಿ ಲೀಗ್ ಫುಟ್ಬಾಲ್ ಆಟಗಾರನಾಗಿದ್ದವ. ವೃತ್ತಿಯಲ್ಲಿ ನರ್ಸ್​ ಆಗಿದ್ದ ಲಿನೆಟ್ ಸಿಮ್ಸ್ ಎಂಬಾಕೆಯನ್ನು 1965ರಲ್ಲಿ, ಹೈಸ್ಕೂಲ್​ ಕಾರ್ಯಕ್ರಮವೊಂದಲ್ಲಿ ಭೇಟಿಯಾಗುತ್ತಾನೆ. ನಂತರ ಅವರಿಬ್ಬರೂ ಮದುವೆಯಾಗುತ್ತಾರೆ.

VISTARANEWS.COM


on

Man who Murdered Wife Convicts after 40 years
ಪತಿಯಿಂದ ಹತ್ಯೆಯಾದವಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪತ್ನಿಯನ್ನು ಕೊಂದು 40 ವರ್ಷ ಆರಾಮಾಗಿ ಇದ್ದವನಿಗೆ ಜೈಲು ಶಿಕ್ಷೆ ಲಭಿಸುವಂತೆ ಮಾಡಿದ್ದು ಒಂದು ‘ಕ್ರೈಂ ಪಾಡ್​ಕಾಸ್ಟ್​’. ಈ ಕತೆ ಶುರುವಾಗುವುದು 1965ರಿಂದ. ಈಗ 2022ರವರೆಗೆ ಬಂದು ನಿಂತಿದೆ ಮತ್ತು ಅಂತ್ಯ ಕಂಡಿದೆ. 74 ವರ್ಷದ ಆರೋಪಿ ಜೈಲುಪಾಲಾಗಿದ್ದಾನೆ. ಅಂದಹಾಗೇ, ಇದು ಆಸ್ಟ್ರೇಲಿಯಾದ ಒಂದು ವಿಚಿತ್ರ ಕ್ರೈಂ ಕೇಸ್​ ಸ್ಟೋರಿ.

ಆಸ್ಟ್ರೇಲಿಯಾದ ಸಿಡ್ನಿಯ ಕ್ರಿಸ್ಟೋಫರ್​ ಡಾಸನ್​ ಎಂಬಾತ ವೃತ್ತಿಯಲ್ಲಿ ಶಿಕ್ಷಕ. ಈತ ವೃತ್ತಿಪರ ರಗ್ಬಿ ಲೀಗ್ ಫುಟ್ಬಾಲ್ ಆಟಗಾರನಾಗಿದ್ದವ. ವೃತ್ತಿಯಲ್ಲಿ ನರ್ಸ್​ ಆಗಿದ್ದ ಲಿನೆಟ್ ಸಿಮ್ಸ್ ಎಂಬಾಕೆಯನ್ನು 1965ರಲ್ಲಿ, ಹೈಸ್ಕೂಲ್​ ಕಾರ್ಯಕ್ರಮವೊಂದಲ್ಲಿ ಭೇಟಿಯಾಗುತ್ತಾನೆ. ಆಗ ಇವರಿಬ್ಬರಿಗೂ 16ರ ವಯಸ್ಸಿನ ಆಸುಪಾಸು. ಪರಸ್ಪರ ಮೆಚ್ಚಿಕೊಂಡು, ಪ್ರೀತಿಸಿ 1970ರಲ್ಲಿ ಮದುವೆಯಾಗುತ್ತಾರೆ. ಇಬ್ಬರು ಮಕ್ಕಳೂ ಆಗುತ್ತಾರೆ. 1970ರಿಂದ 1982ರವರೆಗೆ ಎಲ್ಲವೂ ಸರಿಯಾಗಿಯೇ ಇರುತ್ತದೆ. ಆದರೆ 1982ರಲ್ಲಿ ಲಿನೆಟ್ ಸಿಮ್ಸ್ ನಿಗೂಢವಾಗಿ ನಾಪತ್ತೆಯಾಗುತ್ತಾಳೆ. ಆಕೆ ನಾಪತ್ತೆಯಾದ ಎರಡೇ ದಿನಕ್ಕೆ, ಡಾನಸ್​ ಅಚ್ಚರಿಯ ಕೆಲಸವೊಂದನ್ನು ಮಾಡುತ್ತಾನೆ. ತನ್ನ ವಿದ್ಯಾರ್ಥಿನಿಯಾಗಿದ್ದ 16 ವರ್ಷದ ಜೋನ್ನೆ ಕರ್ಟಿಸ್ ಎಂಬುವಳನ್ನು ಮನೆಗೆ ಕರೆದುಕೊಂಡು ಬರುತ್ತಾನೆ. ಈಕೆ ಡಾನಸ್​ ವಿದ್ಯಾರ್ಥಿನಿಯೂ ಆಗಿದ್ದಳು ಮತ್ತು ಡಾನಸ್​-ಲಿನೆಟ್​ ದಂಪತಿಯ ಮಕ್ಕಳನ್ನು ನೋಡಿಕೊಳ್ಳಲು ಇವರ ಮನೆಗೆ ಬರುತ್ತಿದ್ದಳು. ಇವಳೊಂದಿಗೆ ಡಾನಸ್​​ಗೆ ಅಫೇರ್​ ಶುರುವಾಗಿತ್ತು. ಪತ್ನಿ ಕಾಣೆಯಾದ ಬೆನ್ನಲ್ಲೇ, ಶಾಶ್ವತವಾಗಿ ತಮ್ಮ ಮನೆಯಲ್ಲೇ ಇರುವಂತೆ ಜೋನ್ನೆಗೆ ಆತ ಹೇಳಿದ್ದ. ‘ನನ್ನ ಪತ್ನಿ ಬಿಟ್ಟು ಹೋಗಿದ್ದಾಳೆ’ ಎಂದೇ ಆತ ಪ್ರತಿಪಾದಿಸಿದ್ದ.

ಪತ್ನಿ ನಾಪತ್ತೆಯಾದ ಆರು ವಾರಗಳ ಬಳಿಕ ಪೊಲೀಸರಿಗೆ ಆಕೆಯ ಸಂಪೂರ್ಣ ವಿವರವನ್ನು ನೀಡಿ ‘ಆಕೆ ನನ್ನೊಂದಿಗೆ ಬದುಕಲು ಸಾಧ್ಯವಿಲ್ಲ ಎಂದೇ ತೊರೆದು ಹೋಗಿದ್ದಾಳೆ. ಮದುವೆಯನ್ನೂ ಮುರಿದುಕೊಂಡಿದ್ದಾಳೆ. ತನ್ನ ಸಮಾನ ಮನಸ್ಕರ ಗುಂಪು ಸೇರಿಕೊಂಡಿದ್ದಾಳೆ. ನಾನೆಷ್ಟು ಬಾರಿ ಕರೆ ಮಾಡಿದರೂ ವಾಪಸ್​ ಬರಲು ಒಪ್ಪುತ್ತಿಲ್ಲ’ ಎಂದು ನ್ಯಾಯಾಲಯಕ್ಕೂ ವರದಿಕೊಟ್ಟ. ಅದೆಲ್ಲದರ ಪರಿಣಾಮವಾಗಿ ಪೊಲೀಸರು ಈತನ ವಿರುದ್ಧದ ತನಿಖೆ ಕೈಬಿಟ್ಟರು ಮತ್ತು 1983ರಲ್ಲಿ ಕಾನೂನು ಪ್ರಕಾರ ವಿಚ್ಛೇದನವನ್ನೂ ಪಡೆದ. ಅಲ್ಲಿಗೆ ಜೋನ್ನೆ ಕರ್ಟಿಸ್ ಜತೆ ಮದುವೆಯಾಗಲು ದಾರಿ ಸುಗಮವಾಗಿಸಿಕೊಂಡಿದ್ದ. ಆಮೇಲೆ 1984ರಲ್ಲಿ ಆಕೆಯನ್ನು ಮದುವೆಯನ್ನೂ ಆಗಿದ್ದ. (1993ರಲ್ಲಿ ಜೋನ್ನೆ ಜತೆಯೂ ಡಿವೋರ್ಸ್​ ಆಗಿದೆ).

ಇಷ್ಟೆಲ್ಲ ಆದ ಮೇಲೆಯೂ ಲಿನೆಟ್​ಗಾಗಿ ಪೊಲೀಸರ ಹುಡುಕಾಟ ಮುಂದುವರಿದಿತ್ತು. 1982ರಿಂದ ಆಕೆಯ ಕೇಸ್​ ತನಿಖೆ ಮಾಡಿದ್ದ ಇಬ್ಬರು ತನಿಖಾಧಿಕಾರಿಗಳ ವಿಚಾರಣೆಯನ್ನು 2001ರಲ್ಲಿ ಮತ್ತು 2003ರಲ್ಲಿ ಪ್ರತ್ಯೇಕವಾಗಿ ಮಾಡಲಾಗಿತ್ತು. 2001ರಲ್ಲಿ ವಿಚಾರಣೆಗೆ ಒಳಪಟ್ಟಿದ್ದ ಅಧಿಕಾರಿ ‘ಲಿನೆಟ್​ಳ ಮೃತದೇಹ ಪತ್ತೆಯಾಗಿಲ್ಲ. ಆದರೆ ಅವಳು ಬದುಕಿಲ್ಲ, ಆಕೆಯನ್ನು ಅದ್ಯಾರೋ ಪರಿಚಿತರೇ ಕೊಲೆ ಮಾಡಿದ್ದಾರೆ ಎನ್ನಿಸುತ್ತದೆ’ ಎಂದು ಹೇಳಿದ್ದ. ಹಾಗೇ, 2003ರಲ್ಲಿ ವಿಚಾರಣೆಗೆ ಒಳಪಟ್ಟಿದ್ದ ತನಿಖಾಧಿಕಾರಿ ‘ ಪತಿ ಡಾಸನ್​​ನನ್ನು ಇನ್ನಷ್ಟು ತೀವ್ರವಾಗಿ ವಿಚಾರಣೆ ನಡೆಸಬೇಕು’ ಎಂದು ಹೇಳಿದ್ದ. ಆದರೆ ಏನೂ ಕುರುಹು, ಸಾಕ್ಷಿಗಳಿಲ್ಲದೆ ಕೇಸ್ ಮುಂದೋಡಲಿಲ್ಲ.

ಎಲ್ಲವೂ ತಣ್ಣಗಿದ್ದಾಗ ಪ್ರಸಾರವಾಯ್ತು ಪಾಡ್​ಕಾಸ್ಟ್​
ಆಸ್ಟ್ರೇಲಿಯಾದ ಪ್ರಸಿದ್ಧ ತನಿಖಾ ಪತ್ರಕರ್ತ ಹೆಡ್ಲಿ ಥಾಮಸ್ ಅವರು 2018ರ ಮೇ ತಿಂಗಳಲ್ಲಿ The Teacher’s Pet ಎಂಬ ಕ್ರೈಂ ಪಾಡ್​ಕಾಸ್ಟ್​ ನಡೆಸಿದ್ದರು. ಮತ್ತೇನೂ ಅಲ್ಲ, ಇದೇ ಡಾಸನ್​-ಲಿನೆಟ್​ ಮತ್ತು ಜೋನ್ನೆ ಕಥೆಯನ್ನೇ ಒಳಗೊಂಡ ಪಾಡ್​ಕಾಸ್ಟ್​ ಅದು. ಸ್ಲೇಡ್ ಗಿಬ್ಸನ್ ಎಂಬುವರು ಅದರ ನಿರ್ಮಾಪಕರು. ಒಟ್ಟು 17 ಕಂತುಗಳಲ್ಲಿ ಪ್ರಸಾರವಾಗಿತ್ತು. ಹೆಡ್ಲಿ ಥಾಮಸ್​ ಮತ್ತು ಅವರ ತಂಡ ಸ್ವತಃ ತನಿಖೆ ನಡೆಸಿದ ವಿಷಯಗಳನ್ನೆಲ್ಲ ಸೇರಿಸಿ ಅದ್ಭುತವಾಗಿ ಪಾಡ್​ಕಾಸ್ಟ್​ ರೂಪಿಸಲಾಗಿತ್ತು. ಡಾಸನ್​ ಅಫೇರ್​ ವಿಷಯಗಳನ್ನೆಲ್ಲ ಅದರಲ್ಲಿ ಎಳೆಎಳೆಯಾಗಿ ಬಿಚ್ಚಿಡಲಾಗಿತ್ತು. ಈತನ ಅಫೇರ್​ ಗೊತ್ತಾದ ನಂತರ ಲಿನೆಟ್​ ತಿರುಗಿಬಿದ್ದಿದ್ದರು ಎಂಬ ವಿಷಯಗಳನ್ನೂ ಪಾಡ್​ಕಾಸ್ಟ್​​ನಲ್ಲಿ ಹೇಳಲಾಗಿತ್ತು. ಹಾಗೇ, ಪ್ರಸ್ತುತ ಕೇಸ್​​ ತನಿಖೆಯಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ, ಆತನಿಗೆ ಅತ್ಯಂತ ಸುಲಭವಾಗಿ ವಿಚ್ಛೇದನ ಮಂಜೂರು ಮಾಡಲಾಗಿದೆ ಎಂಬಿತ್ಯಾದಿ ವಿಷಯಗಳನ್ನು ಪಾಡ್​ಕಾಸ್ಟ್​​ನಲ್ಲಿ ಅತ್ಯಂತ ಕಟುವಾಗಿ ಟೀಕಿಸಲಾಗಿತ್ತು.

2018ರಲ್ಲಿ ಪಾಡ್​ಕಾಸ್ಟ್​ ಪ್ರಸಾರವಾಗುತ್ತಿದ್ದಂತೆ ಪೊಲೀಸರು ಮತ್ತೆ ಅಲರ್ಟ್​ ಆದರು. ಲಿನೆಟ್​ ಕೇಸ್​​ನ್ನು ಮತ್ತೆ ಮರು ತನಿಖೆ ಪ್ರಾರಂಭ ಮಾಡಿದರು. ಡಾನಸ್​ ವಿಚಾರಣೆ ಮತ್ತೆ ಹೊಸದಾಗಿ ಶುರುವಾಯಿತು. ಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ಅಂತಿಮವಾಗಿ ಡಾನಸ್​​ನೇ ಪತ್ನಿಯನ್ನು ಕೊಂದಿದ್ದಾಗಿ ಸಾಬೀತಾಗಿದೆ. ಲಿನೆಟ್​ ಎಲ್ಲ ತರ ಹೇಳಿ ನೋಡಿ, ಕೊನೆಗೆ ರಾಜಿಯಾಗಲೂ ಸಿದ್ಧ ಇದ್ದಿದ್ದಾಗ್ಯೂ ಆಕೆಯನ್ನು ಡಾನಸ್​ ಕೊಂದಿದ್ದಾನೆ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಟೀಚರ್ಸ್ ಪೆಟ್​ ಪಾಡ್​ಕಾಸ್ಟ್​ ಸಿಕ್ಕಾಪಟೆ ಖ್ಯಾತಿಯಾಗಿತ್ತು. ಲಕ್ಷಾಂತರ ಜನ ಇದರ ಎಪಿಸೋಡ್​ಗಳನ್ನು ಡೌನ್​ಲೋಡ್ ಮಾಡಿಕೊಂಡು ವೀಕ್ಷಿಸಿದ್ದರು. ಆದರೆ ತನಿಖೆ ಕಾರಣಕ್ಕೆ 2019ರಲ್ಲಿ ಎಲ್ಲಿಯೂ ಪ್ರಸಾರ ಮಾಡದೆ ನಿರ್ಬಂಧಿಸಲಾಗಿತ್ತು. ಈ ವರ್ಷ ಆರೋಪಿ ಡಾನಸ್​ ಸಿಕ್ಕಿಬಿದ್ದ ಬೆನ್ನಲ್ಲೇ ಮತ್ತೆ ಪಾಡ್​ಕಾಸ್ಟ್​ ಎಪಿಸೋಡ್​ಗಳು ಪ್ರಸಾರಗೊಂಡಿವೆ.

ಇದನ್ನೂ ಓದಿ: Teacher Assaulted | ಪೋಷಕರಿಗೆ ದೂರು ಹೇಳಿದ್ದಕ್ಕೆ 5 ತಿಂಗಳು ಗರ್ಭಿಣಿ ಶಿಕ್ಷಕಿಯನ್ನೇ ತಳ್ಳಾಡಿದ ವಿದ್ಯಾರ್ಥಿಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

POK: ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ(POK) ತನ್ನ ಭಾಗವಲ್ಲ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ಪಿಒಕೆಯನ್ನು ಆಜಾದ್ ಕಾಶ್ಮೀರ ಅಥವಾ ಎಜೆಕೆ ಎಂದು ಉಲ್ಲೇಖಿಸಿರುವ ಪಾಕಿಸ್ತಾನ, ವಿವಾದಿತ ಭೂಮಿಗೆ ಸಂಬಂಧಿಸಿದಂತೆ ತನ್ನದೇ ಆದ ಸಂದಿಗ್ಧತೆ ಇದೆ ಎಂದು ಹೇಳಿದೆ. ಪಾಕ್ ಆಕ್ರಮಿತ ಕಾಶ್ಮೀರವು ವಿದೇಶಿ ಭೂ ಪ್ರದೇಶ ಎಂದು ಪಾಕಿಸ್ತಾನದ ಸರ್ಕಾರಿ ವಕೀಲರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

VISTARANEWS.COM


on

POK
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ(POK) ತನ್ನ ಭಾಗವಲ್ಲ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ಪಿಒಕೆಯನ್ನು ಆಜಾದ್ ಕಾಶ್ಮೀರ ಅಥವಾ ಎಜೆಕೆ ಎಂದು ಉಲ್ಲೇಖಿಸಿರುವ ಪಾಕಿಸ್ತಾನ, ವಿವಾದಿತ ಭೂಮಿಗೆ ಸಂಬಂಧಿಸಿದಂತೆ ತನ್ನದೇ ಆದ ಸಂದಿಗ್ಧತೆ ಇದೆ ಎಂದು ಹೇಳಿದೆ. ಪಾಕ್ ಆಕ್ರಮಿತ ಕಾಶ್ಮೀರವು ವಿದೇಶಿ ಭೂ ಪ್ರದೇಶ ಎಂದು ಪಾಕಿಸ್ತಾನದ ಸರ್ಕಾರಿ ವಕೀಲರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಪಿಒಕೆ ಭಾರತದ ಅವಿಭಾಜ್ಯ ಭೂ ಭಾಗ ಎನಿಸಿಕೊಂಡಿದೆ. ಆದರೆ ಪಾಕಿಸ್ತಾನ ಈ ಪ್ರದೇಶವನ್ನು ಅತಿಕ್ರಮಿಸಲು ಯತ್ನಿಸುತ್ತಿದ್ದು, ಅದನ್ನು ಆಜಾದ್ ಕಾಶ್ಮೀರ ಎಂದು ಹೇಳಿಕೊಂಡಿದೆ. ಇದೀಗ ಪಿಒಕೆ ವಿದೇಶಿ ಭೂ ಪ್ರದೇಶವಾಗಿದೆ ಮತ್ತು ಅದರ ಮೇಲೆ ಪಾಕಿಸ್ತಾನಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಪಾಕಿಸ್ತಾನ ಸರ್ಕಾರ ಇಸ್ಲಾಮಾಬಾದ್ ಹೈಕೋರ್ಟ್ ಮುಂದೆ ಒಪ್ಪಿಕೊಂಡಿದೆ.

ಪ್ರಕರಣದ ಹಿನ್ನೆಲೆ

ಸದ್ಯ ಕಾಶ್ಮೀರಿ ಕವಿ ಮತ್ತು ಪತ್ರಕರ್ತ ಅಹ್ಮದ್ ಫರ್ಹಾದ್ ಶಾ ಜೂನ್‌ 2ರ ತನಕ ಆಜಾದ್‌ ಕಾಶ್ಮೀರದಲ್ಲಿ ಬಂಧನದಲ್ಲಿದ್ದಾರೆ ಎಂದು ಫೆಡರಲ್‌ ಪ್ರಾಸಿಕ್ಯೂಟರ್‌ ಜನರಲ್‌ ಶುಕ್ರವಾರ ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ಮಾಹಿತಿ ನೀಡಿದರು. ಈ ವೇಳೆ ಆಜಾದ್‌ ಕಾಶ್ಮೀರ ವಿದೇಶಿ ಪ್ರದೇಶವಾಗಿರುವುದರಿಂದ ಅಹ್ಮದ್ ಫರ್ಹಾದ್ ಶಾ ಅವರನ್ನು ಇಸ್ಲಾಮಾಬಾದ್‌ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮೇ 15ರಂದು ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ರಾವಲ್ಪಿಂಡಿಯಿಂದ ಅಹ್ಮದ್ ಫರ್ಹಾದ್ ಶಾ ಅವರನ್ನು ಅಪಹರಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಇಸ್ಲಾಮಾಬಾದ್ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವಕೀಲರ ವಾದವನ್ನು ಆಲಿಸಿದ ಇಸ್ಲಾಮಾಬಾದ್‌ ಹೈಕೋರ್ಟ್‌, ಆಜಾದ್‌ ಕಾಶ್ಮೀರವು ವಿದೇಶಿ ಭೂಪ್ರದೇಶವಾಗಿದ್ದರೆ ಮತ್ತು ಪಾಕಿಸ್ತಾನದ ಅವಿಭಾಜ್ಯ ಅಂಗವಲ್ಲದಿದ್ದರೆ, ಪಾಕಿಸ್ತಾನಿ ಮಿಲಿಟರಿ ಮತ್ತು ಪಾಕಿಸ್ತಾನಿ ರೇಂಜರ್‌ಗಳು ಪಾಕಿಸ್ತಾನದಿಂದ ಇಲ್ಲಿಗೆ ಹೇಗೆ ಪ್ರವೇಶಿಸಿದರು? ಎಂದು ಪ್ರಶ್ನಿಸಿತು. ವಿಚಾರಣೆಯ ವೇಳೆ ಕೋರ್ಟ್‌, ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಜನರನ್ನು ಬಲವಂತವಾಗಿ ಅಪಹರಿಸುವ ಅಭ್ಯಾಸವನ್ನು ಮುಂದುವರಿಸಿವೆ ಎಂದು ಚಾಟಿ ಬೀಸಿದೆ.

ಅಹ್ಮದ್ ಫರ್ಹಾದ್ ಶಾ ಅವರನ್ನು ಧೀರ್ಕೋಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ವಿಚಾರ ನ್ಯಾಯಾಲಯದ ವಾದದ ಸಮಯದಲ್ಲಿ ಬೆಳಕಿಗೆ ಬಂದಿತ್ತು. ಪಿಒಕೆಯಲ್ಲಿ ಅಹ್ಮದ್ ಫರ್ಹಾದ್ ಶಾ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ರಾವಲ್ಪಿಂಡಿಯಲ್ಲಿರುವ ತಮ್ಮ ನಿವಾಸದಿಂದ ಫರ್ಹಾದ್ ಶಾ ಅವರನ್ನು ಅಪಹರಿಸಿದ ಬಗ್ಗೆ ಅವರ ಪತ್ನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading

ವಿದೇಶ

Anti Islam Rally: ಇಸ್ಲಾಂ ಹಿಂಸಾಚಾರ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದ ಮತಾಂಧ; ಗುಂಡಿಕ್ಕಿದ ಪೊಲೀಸರು

Anti Islam Rally: ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಇನ್ನು, ರ‍್ಯಾಲಿ ನಡೆಯುವಾಗಲೇ ದುಷ್ಕರ್ಮಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದಾನೆ.

VISTARANEWS.COM


on

Anti Islam Rally
Koo

ಬರ್ಲಿನ್:‌ ಜರ್ಮನಿಯ ಮ್ಯಾನ್‌ಹೆಮ್‌ನಲ್ಲಿ ನಡೆದ ಇಸ್ಲಾಂ ಹಿಂಸಾಚಾರ ವಿರೋಧಿ ರ‍್ಯಾಲಿಯಲ್ಲಿ (Anti Islam Rally) ದುಷ್ಕರ್ಮಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ರ‍್ಯಾಲಿಯ ಮಧ್ಯೆ ಏಕಾಏಕಿ ನುಗ್ಗಿ, ಚಾಕು ಇರಿದ ಕಾರಣ ಒಬ್ಬ ಪೊಲೀಸ್‌ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ಮಾರ್ಕ್ಟ್‌ಪ್ಲಾಟ್ಜ್‌ ಪ್ರದೇಶದ ಬಳಿ ಇಸ್ಲಾಂ ಹಿಂಸಾಚಾರ ವಿರೋಧಿಸಿ ರ‍್ಯಾಲಿ ನಡೆಯುತ್ತಿರುವಾಗ ದುಷ್ಕರ್ಮಿಯು ದಾಳಿ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ವ್ಯಕ್ತಿಯೊಬ್ಬರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುವವರಿದ್ದರು. ಇಸ್ಲಾಮಿಕ್‌ ಹಿಂಸಾಚಾರ ಖಂಡಿಸಿ ಅವರು ಭಾಷಣ ಮಾಡುವವರಿದ್ದರು. ಆದರೆ, ಇದೇ ವೇಳೆ ವ್ಯಕ್ತಿಯು ದಾಳಿ ಮಾಡಿದ್ದಾನೆ. ಆತನನ್ನು ಹಿಡಿಯಲು ಹೋದ ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಇನ್ನು, ಮತ್ತೊಬ್ಬ ಪೊಲೀಸ್‌ ಅಧಿಕಾರಿಯು ದುಷ್ಕರ್ಮಿಯ ಮೇಲೆ ಗುಂಡು ಹಾರಿಸುವ ಮೂಲಕ ಆತನನ್ನು ಹಿಡಿದಿದ್ದಾರೆ. ಪೊಲೀಸ್‌ ಗುಂಡಿನ ದಾಳಿಗೆ ಗಾಯಗೊಂಡಿರುವ ದುಷ್ಕರ್ಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

“ಇಸ್ಲಾಂ ವಿರೋಧಿ ರ‍್ಯಾಲಿಯ ವೇಳೆ ವ್ಯಕ್ತಿಯೊಬ್ಬ ಪೊಲೀಸ್‌ ಅಧಿಕಾರಿ ಸೇರಿ ಹಲವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಹಾಗೊಂದು ವೇಳೆ, ದಾಳಿಯ ಹಿಂದೆ ಇಸ್ಲಾಮಿಕ್‌ ಕೈವಾಡ ಇದೆ ಎಂಬುದು ಗೊತ್ತಾದರೆ ದೇಶದಲ್ಲಿ ಮತ್ತೊಂದು ಇಸ್ಲಾಮಿಕ್‌ ಹಿಂಸಾಚಾರ ನಡೆಯಲಿದೆ. ಇಂತಹ ಹಿಂಸಾಚಾರದ ಬಗ್ಗೆ ನಾವು ಮೊದಲಿನಿಂದಲೂ ಎಚ್ಚರಿಕೆ ನೀಡುತ್ತಲೇ ಬಂದಿದ್ದೇವೆ” ಎಂಬುದಾಗಿ ಜರ್ಮನಿ ಗೃಹ ಸಚಿವ ನ್ಯಾನ್ಸಿ ಫೇಸರ್‌ ಪ್ರಕಟಣೆ ಹೊರಡಿಸಿದ್ದಾರೆ.

ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಪೂರ್ವ ಜರ್ಮನಿಯಲ್ಲಿ ಇಸ್ಲಾಂ ಧರ್ಮೀಯರ ಉಪಟಳ ಖಂಡಿಸಿ ಪೆಜಿಡಾ (PEGIDA) ಎಂಬ ಸಂಘಟನೆಯು ನಿಯಮಿತವಾಗಿ ಇಸ್ಲಾಂ ವಿರುದ್ಧ ರ‍್ಯಾಲಿಗಳನ್ನು ನಡೆಸುತ್ತಲೇ ಇರುತ್ತದೆ. ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಈ ಸಂಘಟನೆಯ ಸದಸ್ಯರೂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Continue Reading

ವಿದೇಶ

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Spelling Bee:ಫೈಜಾನ್‌ ಜಾಕಿಯನ್ನು ಸೋಲಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿರುವ ಬೃಹತ್‌, 50,000 ಡಾಲರ್‌ ನಗದು ಬಹುಮಾನವನ್ನೂ ಪಡೆದಿದ್ದಾನೆ. ಇನ್ನು ಈ ಸ್ಪೆಲ್ಲಿಂಗ್ ಬೀ ಇಂಗ್ಲೀಷ್‌ ಭಾಷೆಯ ಅತ್ಯಂತ ಪ್ರತಿಷ್ಠೆಯ ಸ್ಪರ್ಧೆ ಇದಾಗಿದ್ದು, ಈ ಬಾರಿ ವಾಷಿಂಗ್ಟನ್‌ನಲ್ಲಿ ಆಯೋಜನೆಗೊಂಡಿತ್ತು. ಇನ್ನು ಏಳನೇ ತರಗತಿಯಲ್ಲಿ ಓದುತ್ತಿರುವ ಬೃಹತ್‌, ಇದಕ್ಕೂ ಮುನ್ನ ನಡೆದ ಮೂರು ಸ್ಪೆಲ್ಲಿಂಗ್‌ ಬೀ ಸ್ಪರ್ಧೆಗಳನ್ನು ಗೆದ್ದ ಬಳಿಕ ಅಂತಿಮ ಘಟ್ಟಕ್ಕೆ ತಲುಪಿದ್ದ.

VISTARANEWS.COM


on

Spelling Bee
Koo

ಅಮೆರಿಕ: ಭಾರತ ಮೂಲದ 12 ವರ್ಷದ ಬಾಲಕ ಸ್ಕ್ರಿಪ್ಸ್‌ ನ್ಯಾಷನಲ್‌ ಸ್ಪೆಲ್ಲಿಂಗ್‌ ಬೀ(Spelling Bee) ಚಾಂಪಿಯನ್‌ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತೀಯ ಮೂಲದ ಅಮೆರಿಕನ್‌ ಬಾಲಕ ಬೃಹತ್‌ ಸೋಮ(Bruhat Soma) 29 ಪದಗಳ ಸ್ಪೆಲ್ಲಿಂಗ್‌ ಅನ್ನು ಸರಿಯಾಗಿ ಹೇಳುವ ಮೂಲಕ ಚಾಂಪಿಯನ್‌ ಆಗಿ ಹೊರ ಹೊಮ್ಮುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾನೆ.

ಇನ್ನು ಫೈಜಾನ್‌ ಜಾಕಿಯನ್ನು ಸೋಲಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿರುವ ಬೃಹತ್‌, 50,000 ಡಾಲರ್‌ ನಗದು ಬಹುಮಾನವನ್ನೂ ಪಡೆದಿದ್ದಾನೆ. ಇನ್ನು ಈ ಸ್ಪೆಲ್ಲಿಂಗ್ ಬೀ ಇಂಗ್ಲೀಷ್‌ ಭಾಷೆಯ ಅತ್ಯಂತ ಪ್ರತಿಷ್ಠೆಯ ಸ್ಪರ್ಧೆ ಇದಾಗಿದ್ದು, ಈ ಬಾರಿ ವಾಷಿಂಗ್ಟನ್‌ನಲ್ಲಿ ಆಯೋಜನೆಗೊಂಡಿತ್ತು. ಇನ್ನು ಏಳನೇ ತರಗತಿಯಲ್ಲಿ ಓದುತ್ತಿರುವ ಬೃಹತ್‌, ಇದಕ್ಕೂ ಮುನ್ನ ನಡೆದ ಮೂರು ಸ್ಪೆಲ್ಲಿಂಗ್‌ ಬೀ ಸ್ಪರ್ಧೆಗಳನ್ನು ಗೆದ್ದ ಬಳಿಕ ಅಂತಿಮ ಘಟ್ಟಕ್ಕೆ ತಲುಪಿದ್ದ.

ಇನ್ನು ತನ್ನ‌ ಗೆಲುವಿನ ಬಗ್ಗೆ ಮಾತನಾಡಿದ ಬೃಹತ್‌, ಕಳೆದ ಮೂರು ಸ್ಪೆಲ್ಲಿಂಗ್‌ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿರುವುದ ದೊಡ್ಡ ವಿಚಾರವೇನಲ್ಲ. ನನ್ನ ಅಂತಿಮ ಗುರಿ ಇದಾಗಿತ್ತು. ಈ ಸ್ಪರ್ಧೆಯನ್ನು ನಾನು ಗೆದ್ದಿದ್ದೇನೆ. ಆ ಬಗ್ಗೆ ನನಗೆ ಬಹಳಷ್ಟು ಸಂತೋಷವಿದೆ ಎಂದು ಹೇಳಿದ್ದಾರೆ. ಇನ್ನು ಕಳೆದ 35 ವರ್ಷಗಳಲ್ಲಿ 29 ನೇ ಬಾರಿ ಭಾರತೀಯ ಮೂಲದ ಅಮೆರಿಕನ್‌ ಬಾಲಕ ಈ ಸ್ಪರ್ಧೆಯಲ್ಲಿ ಗೆಲುವು ಸಾಧಿಸುತ್ತಿರುವುದು.

ಇದನ್ನೂ ಓದಿ:Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

ಕಳೆದ ವರ್ಷ ಇದೇ ಸ್ಪರ್ಧೆಯಲ್ಲಿ ಭಾರತೀಯ ಮೂಲದ ದೇವ್‌ ಶಾ ಎಂಬ 14 ವರ್ಷದ ಬಾಲಕ ಪ್ರತಿಷ್ಠಿತ ‘ಸ್ಕ್ರಿಫ್ಸ್‌ ನ್ಯಾಷನಲ್‌ ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತನಾಗಿದ್ದಾನೆ. ಅಮೆರಿಕದ ಮಾರ್ಯಾಲ್ಯಾಂಡ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಕೊನೆಯ ಸುತ್ತಿನಲ್ಲಿPsammophilus (ಪ್ಸಾಮ್ಮೊಫೈಲ್‌) ಎಂಬ ಇಂಗ್ಲಿಷ್‌ನ 11 ಸ್ಪೆಲ್ಲಿಂಗ್‌ ಅನ್ನು ದೇವ್‌ ಸರಿಯಾಗಿ ಉಚ್ಚರಿಸಿ ವಿಜೇತನಾಗಿದ್ದು, 41 ಲಕ್ಷ ರು. ನಗದು ಬಹುಮಾನ ಸ್ವೀಕರಿಸಿದ್ದ.

Continue Reading

ವಿದೇಶ

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Donald Trump: ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ.

VISTARANEWS.COM


on

Donald Trump
Koo

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾರ್ಕ್‌ನ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾ (Trump Media)ದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ. ಈ ಕಂಪನಿಯು ಟ್ರೂತ್ ಸೋಷಿಯಲ್ ಪ್ಲಾಟ್ ಫಾರ್ಮ್‌ (Truth Social platform)ನ ಮಾತೃ ಸಂಸ್ಥೆಯಾಗಿದೆ.

ಟ್ರಂಪ್‌ ಈ ಕಂಪನಿಯಲ್ಲಿ ಶೇ. 65ರಷ್ಟು ಪಾಲು ಹೊಂದಿದ್ದಾರೆ. ಸುಮಾರು ಶೇ. 10ರಷ್ಟು ಕುಸಿತವು ಮಾಜಿ ಅಧ್ಯಕ್ಷರ ಷೇರುಗಳ ಮೌಲ್ಯದಲ್ಲಿ 532 ಮಿಲಿಯನ್ ಡಾಲರ್ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಫೋರ್ಬ್ಸ್ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. ಫೇಸ್‌ಬುಕ್‌ (Facebook) ಮತ್ತು ಎಕ್ಸ್‌ (ಹಿಂದಿನ ಟ್ವಿಟ್ಟರ್‌)ಗೆ ಸವಾಲು ಸ್ಪರ್ಧೆ ಒಡ್ಡಲು ಡೊನಾಲ್ಡ್ ಟ್ರಂಪ್ ತಮ್ಮದೇ ಹೊಸ ಸೋಷಿಯಲ್ ಮೀಡಿಯಾ ಆದ ಟ್ರೂತ್ ಸೋಷಿಯಲ್ (Truth Social) ಆರಂಭಿಸಿದ್ದರು.

2021ರಲ್ಲಿ ಅಮೆರಿಕ ಸಂಸತ್‌ ಭವನದಲ್ಲಿ ಟ್ರಂಪ್‌ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರಿಗೆ ಎಲ್ಲ ಸಾಮಾಜಿಕ ಜಾಲತಾಣಗಳು ನಿಷೇಧ ಹೇರಿದ್ದವು. ಹೀಗಾಗಿ ಅವರು 2021ರ ಅಕ್ಟೋಬರ್‌ನಲ್ಲಿ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ಘೋಷಿಸಿದ್ದರು. ಅದಂತೆ 2022ರಲ್ಲಿ ಟ್ರೂತ್ ಸೋಷಿಯಲ್ ಅಪ್ಲಿಕೇಷನ್‌ ಆರಂಭಿಸಿದ್ದರು. ಟ್ರಂಪ್‌ ಮೀಡಿಯಾ ಆ್ಯಂಡ್‌ ಟೆಕ್ನಾಲಜಿ ಗ್ರೂಪ್‌ನ ಮಾಲಿಕತ್ವದಲ್ಲಿ ಈ ಅಪ್ಲಿಕೇಷನ್‌ ಅನ್ನು ಆರಂಭಿಸಲಾಗಿತ್ತು.

ಇದನ್ನೂ ಓದಿ: Worst President: ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್‌ ಟ್ರಂಪ್‌ ಕೆಟ್ಟ ಅಧ್ಯಕ್ಷ; ಬೆಸ್ಟ್‌ ಯಾರು?

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್‌ ಸ್ಪರ್ಧಿಸಲಿದ್ದಾರೆ.

Continue Reading
Advertisement
Karnataka Weather Forecast
ಮಳೆ4 mins ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್8 mins ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Arvind Kejriwal
ಪ್ರಮುಖ ಸುದ್ದಿ20 mins ago

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

World Milk Day
ಆರೋಗ್ಯ36 mins ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Narendra Modi
ಪ್ರಮುಖ ಸುದ್ದಿ44 mins ago

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

KCET Result 2024
ಕರ್ನಾಟಕ50 mins ago

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

Exit Poll Live 2024
Live News55 mins ago

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Shah Rukh Khan shooting for King in Spain
ಬಾಲಿವುಡ್1 hour ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Liquor ban
ಬೆಂಗಳೂರು1 hour ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ1 hour ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು1 hour ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌