Medical Miracle: ಈ ಅಜ್ಜಿ 50 ವರ್ಷದಿಂದ ಬರೀ ಕೋಲ್ಡ್‌ ಡ್ರಿಂಕ್ಸ್‌ ಕುಡಿದೇ ಬದುಕ್ತಿದ್ದಾರೆ! - Vistara News

ವಿದೇಶ

Medical Miracle: ಈ ಅಜ್ಜಿ 50 ವರ್ಷದಿಂದ ಬರೀ ಕೋಲ್ಡ್‌ ಡ್ರಿಂಕ್ಸ್‌ ಕುಡಿದೇ ಬದುಕ್ತಿದ್ದಾರೆ!

Medical Miracle: ವಿಯೆಟ್ನಾಂನ ವೃದ್ಧೆಯೊಬ್ಬರು 50 ವರ್ಷಗಳಿಂದ ಕೇವಲ ತಂಪು ಪಾನೀಯ, ನೀರು ಕುಡಿದೇ ಜೀವಿಸುತ್ತಿದ್ದಾರೆ. ಇದಕ್ಕಿರುವ ಕಾರಣ ಇಲ್ಲಿದೆ.

VISTARANEWS.COM


on

water drinking
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಯೆಟ್ನಾಂ: ಉತ್ತಮ ಆರೋಗ್ಯಕ್ಕೆ ಸರಿಯಾದ, ಪೋಷಕಾಂಶಯುಕ್ತ ಆಹಾರ ಮುಖ್ಯ ಎನ್ನುತ್ತದೆ ವೈದ್ಯ ಲೋಕ. ಅದಕ್ಕಾಗಿ ದ್ರವ ರೂಪದ ಆಹಾರದ ಜತೆಗೆ ಘನ ಆಹಾರವನ್ನೂ ಸೇವಿಸಬೇಕು ಎಂದು ಸಲಹೆ ನೀಡಲಾಗುತ್ತದೆ. ಆದರೆ ವೈದ್ಯಲೋಕವನ್ನೇ ಅಚ್ಚರಿಗೆ ದೂಡಿ ಇಲ್ಲೊಬ್ಬರು ಸುಮಾರು 50 ವರ್ಷಗಳಿಂದ ಕೇವಲ ನೀರು ಮತ್ತು ತಂಪು ಪಾನೀಯ (Cold drinks) ಕುಡಿದೇ ಬದುಕುತ್ತಿದ್ದಾರೆ. ಅದೂ ಅವರು ಈ 75ರ ಇಳಿವಯಸ್ಸಿನಲ್ಲೂ ಆರೋಗ್ಯವಂತರಾಗಿದ್ದಾರೆ ಎನ್ನುವುದು ವಿಶೇಷ (Medical Miracle). ಯಾರು ಈ ವೃದ್ಧೆ? ಏನಿವರ ಹಿನ್ನೆಲೆ ಎನ್ನುವುದರ ವಿವರ ಇಲ್ಲಿದೆ.

ವಿಯಟ್ನಾಂನ ಬುಯಿ ಲೋಯಿ ಎಂಬ 75ರ ಹರೆಯದ ಅಜ್ಜಿಯೇ ವೈದ್ಯ ಲೋಕಕ್ಕೆ ಸವಾಲಾಗಿರುವವರು. ಅವರಿಗೆ ಯಾವುದೇ ಘನ ಆಹಾರ ತಿನ್ನಬೇಕೆಂದು ಅನಿಸುವುದೇ ಇಲ್ಲವಂತೆ. ಬರೀ ನೀರು, ಸಕ್ಕರೆಯಂಶವಿರುವ ತಂಪು ಪಾನೀಯವಷ್ಟೇ ಅವರ ಆಹಾರ.

ಕಾರಣವೇನು?

ಬುಯಿ ಲೋಯಿ ಅವರ ಈ ವಿಚಿತ್ರ ವರ್ತನೆಯ ಹಿಂದೆ ಬಲವಾದ ಕಾರಣವಿದೆ. ಆಗ ಬುಯಿ ಲೋಯಿ ಅವರಿಗೆ ಸುಮಾರು 25 ವರ್ಷವಾಗಿತ್ತು. 50 ವರ್ಷಗಳ ಹಿಂದೆ ಅವರು ಹಾಗೂ ಮತ್ತೊಬ್ಬ ಮಹಿಳೆ ಗಾಯವಾದ ಸೈನಿಕರಿಗೆ ಚಿಕಿತ್ಸೆ ನೀಡಲು ಬೆಟ್ಟ ಹತ್ತುತ್ತಿದ್ದರು. ಆಗ ಸಿಡಿಲು ಬಡಿದು ಬುಯಿ ಲೋಯಿ ಪ್ರಜ್ಞೆ ತಪ್ಪಿತ್ತು. ಕೆಲವು ಸಮಯದ ಬಳಿಕ ಎಚ್ಚರವಾದ ಮೇಲೆ ಗೆಳತಿ ಜ್ಯೂಸ್ ಕುಡಿಸಿದ್ದರು. ಆ ಬಳಿಕ ಬುಯಿ ಲೋಯಿ ಅವರ ಜೀವನ ಶೈಲಿಯೇ ಬದಲಾಯಿತು. ನಂತರ ಅವರಿಗೆ ಯಾವುದೇ ಘನ ಆಹಾರ ತಿನ್ನಲು ಅಷ್ಟು ಇಷ್ಟವಾಗುತ್ತಿರಲಿಲ್ಲವಂತೆ. ಸ್ವಲ್ಪ ಸಮಯ ಹಣ್ಣು, ಮತ್ತಿತರ ಆಹಾರ ಸೇವಿಸಿದರು. ಆದರೆ 1970ರಿಂದ ಹಣ್ಣು ಹಾಗೂ ಇತರ ಘನ ಆಹಾರ ಸೇವಿಸುವುದನ್ನು ಸಹ ಸಂಪೂರ್ಣ ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೀಗ ಅವರ ಮನೆಯ ಫ್ರಿಡ್ಜ್‌ ತುಂಬಾ ಬರೀ ನೀರು ಹಾಗೂ ಜ್ಯೂಸ್‌ಗಳಿವೆ. ಅದರಲ್ಲೂ ತಂಪು ಪಾನೀಯಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಈ ಡಯಟ್‌ನಿಂದಾಗಿ ಹೆರಿಗೆಯಾದಾಗ ಮಕ್ಕಳಿಗೆ ಹಾಲುಣಿಸಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ ಎಂದು ಅವರ ಆಪ್ತರು ಹೇಳಿದ್ದಾರೆ. ಸದ್ಯ ಈ ಬಗ್ಗೆ ವೈದ್ಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೇವಲ ದ್ರವ ಆಹಾರದಿಂದಲೇ ಆರೋಗ್ಯವಾಗಿರುವುದು ಹೇಗೆ ಎನ್ನುವುದು ಬಹು ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.

ಇದನ್ನೂ ಓದಿ: Viral video : ಶಾಲೆಗೆ ಹೊರಟಿದ್ದ ಟೀಚರ್‌ ಸಿನಿಮಾ ಸ್ಟೈಲ್‌ನಲ್ಲಿ ಕಿಡ್ನಾಪ್‌

ಕೇವಲ ಬೆಲ್ಲ, ಹಾಲು, ನೀರು ಸೇವಿಸುವ ಬಾಲಕಿ

ಇದೇ ಮಾದರಿಯ ಘಟನೆಯೊಂದು ಇತ್ತೀಚೆಗೆ ನಮ್ಮ ರಾಜ್ಯದಲ್ಲೂ ವರದಿಯಾಗಿತ್ತು. ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ರಂಗಂಪೇಟೆಯ ರೇಣುಕಮ್ಮ ಎಂಬ ಬಾಲಕಿ 14 ವರ್ಷಗಳಿಂದ ಕೇವಲ ಬೆಲ್ಲ, ಹಾಲು ಹಾಗೂ ನೀರು ಸೇವಿಸುತ್ತಿದ್ದಾಳೆ. ಮನೆಯಲ್ಲಿ ಅವಳ ತಂದೆ-ತಾಯಿ, ಸಹೋದರರು ಹಾಗೂ ಸಹಪಾಠಿಗಳು ಎಷ್ಟೇ ಒತ್ತಾಯ ಮಾಡಿದರೂ ಊಟ ಮಾತ್ರ ಮಾಡೋದಿಲ್ಲ. ಊಟ ಮಾಡಿದರೆ ವಾಂತಿ ಆಗುತ್ತದೆಯಂತೆ. ಹೀಗಾಗಿ ಈ 14 ವರ್ಷದ ಬಾಲಕಿ ರೇಣುಕಮ್ಮ ಹುಟ್ಟಿದಾಗಿನಿಂದಲೂ ಕೇವಲ ಬೆಲ್ಲ, ಹಾಲು ಮಾತ್ರ ಸೇವಿಸುತ್ತಾ ಬಂದಿದ್ದಾಳೆ. ವೈದ್ಯರು ತಪಾಸಣೆ ಮಾಡಿದ್ದರೂ ಪರಿಹಾರ ಹುಡುಕುವುದು ಸಾಧ್ಯವಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

ದೇಶ

Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Narendra Modi: ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು.

VISTARANEWS.COM


on

Narendra Modi
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನೀಡದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) ಎಚ್ಚರಿಕೆ ನೀಡಿದ ಬೆನ್ನಲ್ಲೇ ನೆರೆ ರಾಷ್ಟ್ರವು ಥಂಡಾ ಹೊಡೆದಿದೆ. ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ ಬಳಿಕ ಪಾಕಿಸ್ತಾನ ಸೇನೆಯು ಗಲಿಬಿಲಿಗೊಂಡಿದ್ದು, ಗಡಿಯಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದೆ.

ಹೌದು, ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರ (Paris Olympics 2024) ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​​ನ ಹೈಸ್ಪೀಡ್ ಟಿಜಿವಿ ರೈಲು ಜಾಲದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿದೆ. ಶುಕ್ರವಾರ ರೈಲಿನ ತಾಂತ್ರಿಕ ನಿರ್ವಹಣಾ ಕೇಂದ್ರಗಳಿಗೆ ಬೆಂಕಿ ಹಚ್ಚವಲಾಗಿದೆ. ದುರುದ್ದೇಶದ ಕೃತ್ಯಗಳಿಂದಾಗಿ ರೈಲು ಸಂಪರ್ಕ ಜಾಲಕ್ಕೆ ಹಾನಿಯಾಗಿದೆ. ಇದು ದೇಶದ ಜನನಿಬಿಡ ರೈಲು ಮಾರ್ಗಗಳಿಗೆ ಅಡ್ಡಿಯಾಗಿದ್ದು, ಪ್ರಯಾಣಿಕರು ಅರ್ಧ ದಾರಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಕ್ರೀಡಾಕೂಟಕ್ಕೆ ಮುಂಚಿತವಾಗಿ ಪ್ರಯಾಣಕ್ಕೆ ಅಡ್ಡಿಪಡಿಸಲು ಈ ದಾಳಿ ನಡೆಸಲಾಗಿದ್ದು ಇದು ಸಂಘಟಿತ ವಿಧ್ವಂಸಕ ಕೃತ್ಯ ಎಂದು ಹೇಳಲಾಗಿದೆ.

ಪ್ಯಾರಿಸ್ ಅನ್ನು ಪಶ್ಚಿಮ, ಉತ್ತರ ಮತ್ತು ಪೂರ್ವ ಪ್ರದೇಶಗಳೊಂದಿಗೆ ಸಂಪರ್ಕಿಸುವ ಮಾರ್ಗಗಳಲ್ಲಿನ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಎಸ್ಎನ್​ಸಿಎಫ್ ತಿಳಿಸಿದೆ. ಇಂಗ್ಲಿಷ್ ಕಾಲುವೆಯ ಕೆಳಗಿರುವ ಲಂಡನ್ ಮತ್ತು ನೆರೆಯ ಬೆಲ್ಜಿಯಂಗೆ ಪ್ರಯಾಣದ ಮೇಲೂ ಇದು ಪರಿಣಾಮ ಬೀರಿದೆ ಎಂದು ವರದಿಗಳು ತಿಳಿಸಿವೆ.

ಅಲ್ಲಿ ರೈಲು ವಿಭಾಗ ಹಲವಾರು ರೈಲುಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಯಿತು ಮತ್ತು ರದ್ದುಗೊಳಿಸಬೇಕಾಯಿತು ಎಂದು ಹೇಳಲಾಗಿದೆ. ದುರಸ್ತಿಯ ಮೇಲ್ವಿಚಾರಣೆಗಾಗಿ ಸುರಕ್ಷತಾ ತಂಡ ಸ್ಥಳದಲ್ಲಿದೆ ಎಂದು ಹೇಳಿದ್ದಾರೆ. ವಾರಾಂತ್ಯದಲ್ಲಿ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ.

“ಅಟ್ಲಾಂಟಿಕ್, ಉತ್ತರ ಮತ್ತು ಪೂರ್ವ ಹೈಸ್ಪೀಡ್ ಮಾರ್ಗಗಳಲ್ಲಿ ಹಲವೆಡೆ ಬೆಂಕಿ ಹಚ್ಚಲಾಗಿದೆ. ನಮ್ಮ ರೈಲ್ವೆ ವ್ಯವಸ್ಥೆಗಳನ್ನು ಹಾನಿಗೊಳಿಸಲು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ನಡೆದ ದಾಳಿಗಳನ್ನು ಸರ್ಕಾರಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ, ಈ ಘಟನೆಗಳಿಂದ ಕ್ರೀಡಾಕೂಟಗಳ ತಾಣಕ್ಕೆ ಯಾವುದೇ ಸಂಪರ್ಕ ಕಡಿತಗೊಂಡಿಲ್ಲ.

ಸಾರಿಗೆ ಸಚಿವ ಪ್ಯಾಟ್ರಿಸ್ ವೆರ್ಗ್ರೀಟ್ ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ “ಕ್ರಿಮಿನಲ್ ಘಟನೆಗಳನ್ನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ರೈಲ್ವೆ ಸಂಚಾರವನ್ನು ಪುನಃಸ್ಥಾಪಿಸಲು ಎಸ್ ಎನ್ ಸಿಎಫ್ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.ದುರಸ್ತಿ ಕಾರ್ಯಗಳು ನಡೆಯುತ್ತಿದೆ. ರೈಲುಗಳನ್ನು ತಮ್ಮ ನಿರ್ಗಮನ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಆದಾಗ್ಯೂ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಪ್ರಯಾಣಿಕರಿಗೆ ಕೋಲಾಗಿದೆ.

ಇಷ್ಟು ದೊಡ್ಡ ಪ್ರಮಾಣದ ದಾಳಿಯು “ಟಿಜಿವಿ ನೆಟ್ವರ್ಕ್ ಅನ್ನು ನಿಷ್ಕ್ರಿಯಗೊಳಿಸುವ” ಗುರಿ ಹೊಂದಿತ್ತು ರೈಲ್ವೆ ಕಂಪನಿ ಹೇಳಿದೆ. ಸುಮಾರು 800,000 ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ ಎಂದು ಅದು ಹೇಳಿದೆ.

ವಿಧ್ವಂಸಕ ಕೃತ್ಯದಿಂದ ಲಂಡನ್ ಮತ್ತು ಪ್ಯಾರಿಸ್ ನಡುವಿನ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.

Continue Reading

ವಿದೇಶ

Kamala Harris: ಅಮೆರಿಕ ಅಧ್ಯಕ್ಷೀಯ ಚುನಾವಣೆ; ಕಮಲಾ ಹ್ಯಾರಿಸ್‌ ಪರ ನಿಂತ ಬರಾಕ್‌ ಒಬಾಮಾ

Kamala Harris: ಬರಾಕ್‌ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದಾರೆ. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದೆವು. ದೇಶವು ಮಹತ್ವದ ಘಟ್ಟದಲ್ಲಿರುವ ಇಂತಹ ಹೊತ್ತಿನಲ್ಲಿ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಲು ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ ಎಂಬುದಾಗಿ ದಂಪತಿಯು ತಿಳಿಸಿದ್ದಾರೆ.

VISTARANEWS.COM


on

Kamala Harris
Koo

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಗಣನೆ ಆರಂಭವಾಗಿದೆ. ಅದರಲ್ಲೂ, ಹಾಲಿ ಅಧ್ಯಕ್ಷ ಜೋ ಬೈಡೆನ್‌ (Joe Biden) ಅವರು ಚುನಾವಣೆ ಕಣದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆ, ಭಾರತ ಮೂಲದ ಕಮಲಾ ಹ್ಯಾರಿಸ್‌ (Kamala Harris) ಅವರೇ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಕಮಲಾ ಹ್ಯಾರಿಸ್‌ ಅವರಿಗೇ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ (Barack Obama) ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಬೆಂಬಲ ಸೂಚಿಸಿದ್ದಾರೆ. ಇದರೊಂದಿಗೆ ಕಮಲಾ ಹ್ಯಾರಿಸ್‌ ಅವರೇ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗುವುದು ಬಹುತೇಕ ನಿಶ್ಚಿತವಾಗಿದೆ.

ಚುನಾವಣೆ ರೇಸ್‌ನಿಂದ ಹಿಂದೆ ಸರಿದ ಬಳಿಕ ಜೋ ಬೈಡೆನ್‌ ಅವರು ಅಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್‌ ಅವರ ಹೆಸರನ್ನು ಸೂಚಿಸಿದ್ದರು. ಆದರೆ, ಬರಾಕ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಬೆಂಬಲ ಸೂಚಿಸುತ್ತಾರೋ, ಇಲ್ಲವೋ ಎಂಬ ಗೊಂದಲ ಮನೆಮಾಡಿತ್ತು. ಈಗ ಬರಾಕ್‌ ಒಬಾಮಾ ಅವರು ಕೂಡ ಕಮಲಾ ಹ್ಯಾರಿಸ್‌ ಅವರಿಗೆ ಬೆಂಬಲ ಘೋಷಿಸಿರುವುದು ಪ್ರಮುಖ ಸಂಗತಿಯಾಗಿದೆ.

ಬರಾಕ್‌ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದಾರೆ. “ಕೆಲ ದಿನಗಳ ಹಿಂದೆ ನಾನು ಹಾಗೂ ಮಿಚೆಲ್‌ ಅವರು ಗೆಳತಿ ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿದ್ದೆವು. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದೆವು. ದೇಶವು ಮಹತ್ವದ ಘಟ್ಟದಲ್ಲಿರುವ ಇಂತಹ ಹೊತ್ತಿನಲ್ಲಿ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಲು ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ನೀವು ಕೂಡ ನಮ್ಮ ಜತೆಗೂಡಿ” ಎಂಬುದಾಗಿ ಬರಾಕ್‌ ಒಬಾಮಾ ಪೋಸ್ಟ್‌ ಮಾಡಿದ್ದಾರೆ.

ಕಮಲಾ ಹ್ಯಾರಿಸ್​ ಮೂಲತಃ ಭಾರತದವರು. ಅವರ ತಾಯಿ ಹುಟ್ಟಿದ್ದು ತಮಿಳುನಾಡಿನ ಚೆನ್ನೈನಲ್ಲಿ. ಬಳಿಕ ಯುಎಸ್​ಗೆ ತೆರಳಿ, ಅಲ್ಲಿನವರನ್ನೇ ಮದುವೆಯಾಗಿ ನೆಲೆಸಿದ್ದರು. ಯುಎಸ್​ ಉಪಾಧ್ಯಕ್ಷೆ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೂ ಕಮಲಾ ಹ್ಯಾರಿಸ್​ ಪಾತ್ರರಾಗಿದ್ದಾರೆ. ಅವರು ಯುಎಸ್​ ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದಾಗ ಚೆನ್ನೈನಲ್ಲಿರುವ ಅವರ ಪೂರ್ವಜರ ಊರಿನಲ್ಲಿ ಭರ್ಜರಿ ಸಂಭ್ರಮ ಏರ್ಪಟ್ಟಿತ್ತು. ಸಿಹಿ ವಿತರಣೆಯೂ ನಡೆದಿತ್ತು.

ಅಮೆರಿಕದ ಉಪಾಧ್ಯಕ್ಷ ಸ್ಥಾನದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾದೇವಿ ಹ್ಯಾರಿಸ್ ಅವರ ತಂದೆ ಜಮೈಕಾ ಮೂಲದವರಾದರೆ ತಾಯಿ ಭಾರತೀಯ ಮೂಲದವರು. ಉನ್ನತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಕಮಲಾ, ಪೊಲೀಸ್ ವ್ಯವಸ್ಥೆಯಲ್ಲಿ ಗಮನಾರ್ಹ ಸುಧಾರಣೆ ತಂದು ಗಮನ ಸೆಳೆದರು. ನಂತರ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ ಕಮಲಾದೇವಿ ಹ್ಯಾರಿಸ್, 2020ರಲ್ಲಿ ಅಮೆರಿಕದ ಉಪಾಧ್ಯಕ್ಷ ಚುನಾವಣೆಯಲ್ಲಿ ರಿಪಬ್ಲಿಕ್ ಪಕ್ಷದ ಮೈಕ್ ಪೆನ್ಸೆ ಅವರ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: US Presidential Election: ಚುನಾವಣಾ ಪೂರ್ಣ ಸಮೀಕ್ಷೆ ಔಟ್‌; ಕಮಲಾ ಹ್ಯಾರಿಸ್‌ಗೆ ಮುನ್ನಡೆ

Continue Reading
Advertisement
Michel Phelps ರಾಜಮಾರ್ಗ ಅಂಕಣ
ಅಂಕಣ14 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ28 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ43 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌