Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌! - Vistara News

ವಿದೇಶ

Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Mohammed Deif: ಕಳೆದ ಎರಡು ದಿನಗಳಲ್ಲಿ ಇಸ್ಮಾಯಿಲ್ ಹನಿಯೆಹ್ ಮತ್ತು ಫುವಾಡ್ ಶುಕರ್ ಎಂಬ ಹಮಾಸ್‌ ಉಗ್ರ ನಾಯಕರ ಮೇಲೆ ದಾಳಿ ನಡೆಸಿ ಇಸ್ರೇಲ್ ಕೊಂದು ಹಾಕಿದೆ. ಇದರ ಬೆನ್ನಲ್ಲೇ ಇಸ್ರೇಲ್‌ ಮಿಲಿಟರಿ ಮುಖ್ಯಸ್ಥನನ್ನೂ ಹೊಡೆದುರುಳಿಸಿರುವುದಾಗಿ ಇಸ್ರೇಲ್‌ ಘೋಷಣೆ ಮಾಡಿದೆ. ಇದರೊಂದಿಗೆ ಇಸ್ರೇಲ್‌ ಮೇಲೆ ದಾಳಿ ನಡೆಸಿದ ಪ್ರಮುಖ ಉಗ್ರರನ್ನು ಇಸ್ರೇಲ್‌ ಹತ್ಯೆ ಮಾಡಿದಂತಾಗಿದೆ.

VISTARANEWS.COM


on

Mohammed Deif
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್‌ (Israel Hamas War) ಮೇಲೆ ದಾಳಿ ಮಾಡಿದ ಬಳಿಕ “ಹಮಾಸ್‌ ಉಗ್ರರು ಯುದ್ಧ ಆರಂಭಿಸಿದ್ದಾರೆ ಹಾಗೂ ನಾವು ಯುದ್ಧವನ್ನು ಅಂತ್ಯಗೊಳಿಸುತ್ತೇವೆ” ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದರು. ಈಗ ಅದರಂತೆ, ಇಸ್ರೇಲ್‌ ದಾಳಿಯನ್ನು ಚುರುಕುಗೊಳಿಸಿದ್ದು, ಇಸ್ರೇಲ್‌ ಮಿಲಿಟರಿ ಚೀಫ್‌ ಮೊಹಮ್ಮದ್‌ ಡೈಫ್‌ನನ್ನು (Mohammed Deif) ಹೊಡೆದುರುಳಿಸಿದೆ. ಈ ಕುರಿತು ಇಸ್ರೇಲ್‌ ಸೇನೆಯೇ ಅಧಿಕೃತವಾಗಿ ಘೋಷಣೆ ಮಾಡಿದೆ.

ಹೌದು, ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯ ರೂವಾರಿಯಾದ ಮೊಹಮ್ಮದ್‌ ಡೈಫ್‌ನನ್ನು ಇಸ್ರೇಲ್‌ ಸೇನೆಯು ದಾಳಿ ಮೂಲಕ ಹತ್ಯೆ ಮಾಡಿದೆ. “ಇಸ್ರೇಲ್‌ ಡಿಫೆನ್ಸ್‌ ಪಡೆಗಳು ಜುಲೈ 13ರಂದು ಖಾನ್‌ ಯುನಿಸ್‌ನಲ್ಲಿ ನಡೆಸಿದ ವಾಯುದಾಳಿಯಲ್ಲಿ ಮೊಹಮ್ಮದ್‌ ಡೈಫ್‌ ಹತ್ಯೆಗೀಡಾಗಿದ್ದಾನೆ. ಗುಪ್ತಚರ ಮಾಹಿತಿಯನ್ನು ಆಧರಿಸಿ ಐಡಿಎಫ್‌ ದಾಳಿ ನಡೆಸಿ, ಅಕ್ಟೋಬರ್‌ 7ರ ದಾಳಿಯ ಮಾಸ್ಟರ್‌ಮೈಂಡ್‌ನನ್ನು ಹತ್ಯೆ ಮಾಡಲಾಗಿದೆ” ಎಂದು ಇಸ್ರೇಲ್‌ ಮಾಹಿತಿ ನೀಡಿದೆ.

ಕಳೆದ ಎರಡು ದಿನಗಳಲ್ಲಿ ಇಸ್ಮಾಯಿಲ್ ಹನಿಯೆಹ್ ಮತ್ತು ಫುವಾಡ್ ಶುಕರ್ ಎಂಬ ಹಮಾಸ್‌ ಉಗ್ರ ನಾಯಕರ ಮೇಲೆ ದಾಳಿ ನಡೆಸಿ ಇಸ್ರೇಲ್ ಕೊಂದು ಹಾಕಿದೆ. ಈ ಮೂಲಕ ತನ್ನ ಶತ್ರುವನ್ನು ಎಲ್ಲಿ ಬೇಕಾದರೂ ಕೊಲ್ಲಬಹುದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. ಇದರ ಬೆನ್ನಲ್ಲೇ ಇಸ್ರೇಲ್‌ ಮಿಲಿಟರಿ ಮುಖ್ಯಸ್ಥನನ್ನೂ ಹೊಡೆದುರುಳಿಸಿರುವುದಾಗಿ ಇಸ್ರೇಲ್‌ ಘೋಷಣೆ ಮಾಡಿದೆ. ಇದರೊಂದಿಗೆ ಇಸ್ರೇಲ್‌ ಮೇಲೆ ದಾಳಿ ನಡೆಸಿದ ಪ್ರಮುಖ ಉಗ್ರರನ್ನು ಇಸ್ರೇಲ್‌ ಹತ್ಯೆ ಮಾಡಿದಂತಾಗಿದೆ.

ಮೊಹಮ್ಮದ್‌ ಡೈಫ್‌ ಯಾರು?

ಮೊಹಮ್ಮದ್‌ ಡೈಫ್‌ ಹಮಾಸ್‌ ಉಗ್ರ ಸಂಘಟನೆಯ ಮಿಲಿಟರಿ ವಿಭಾಗದ ಮುಖ್ಯಸ್ಥನಾಗಿದ್ದಾನೆ. ಈತ 1965ರಲ್ಲಿ ಜನಿಸಿದ್ದು, ಈತ ತನ್ನ 15ನೇ ವಯಸ್ಸಿನಲ್ಲಿಯೇ ಹಮಾಸ್‌ ಉಗ್ರ ಸಂಘಟನೆ ಸೇರಿದ್ದಾನೆ ಎಂದು ತಿಳಿದುಬಂದಿದೆ. ಮೊಹಮ್ಮದ್‌ ಡೈಫ್‌ 2021ರಲ್ಲಿ ಮಿಲಿಟರಿ ವಿಭಾಗದ ಮುಖ್ಯಸ್ಥನಾಗಿದ್ದು, ಸಾವಿರಾರು ರಾಕೆಟ್‌ಗಳು ಇಸ್ರೇಲ್‌ ಮೇಲೆ ಎರಗುವ ಯೋಜನೆಗೆ ಈತನೇ ರೂವಾರಿ ಎಂದು ತಿಳಿದುಬಂದಿದೆ. ಆದರೂ, ಈತನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Israel Attack: ಟೂತ್‌ಪೇಸ್ಟ್‌ನಲ್ಲಿ ವಿಷ ಬೆರೆಸಿದ ಇಸ್ರೇಲ್‌ ಗುಪ್ತದಳ! ಪ್ಯಾಲೆಸ್ತೀನ್‌ ಕಮಾಂಡರ್‌ ನರಳಿ ನರಳಿ ಸತ್ತ! ಸೇಡಿನ interesting story

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Israel Attack: ಟೂತ್‌ಪೇಸ್ಟ್‌ನಲ್ಲಿ ವಿಷ ಬೆರೆಸಿದ ಇಸ್ರೇಲ್‌ ಗುಪ್ತದಳ! ಪ್ಯಾಲೆಸ್ತೀನ್‌ ಕಮಾಂಡರ್‌ ನರಳಿ ನರಳಿ ಸತ್ತ! ಸೇಡಿನ interesting story

ಇಸ್ಮಾಯಿಲ್ ಹನಿಯೆಹ್ ಮತ್ತು ಫುವಾಡ್ ಶುಕರ್ ಎಂಬ ಹಮಾಸ್‌ ಉಗ್ರ ನಾಯಕರ ಮೇಲೆ ದಾಳಿ ನಡೆಸಿ ಇಸ್ರೇಲ್ (Israel Attack) ಕೊಂದು ಹಾಕಿದೆ. ಈ ಮೂಲಕ ತನ್ನ ಶತ್ರುವನ್ನು ಎಲ್ಲಿ ಬೇಕಾದರೂ ಕೊಲ್ಲಬಹುದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. 1978ರಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಸಣ್ಣ ಸುಳಿವನ್ನೂ ಬಿಟ್ಟು ಕೊಡದ ಹಾಗೆ ಇಸ್ರೇಲ್‌ ಗುಪ್ತಚರ ದಳ ʼಮೊಸಾದ್‌ʼ ಪ್ಯಾಲೆಸ್ತೀನ್‌ ಕಮಾಂಡರ್‌ನನ್ನು ಅತ್ಯಂತ ಚಾಣಾಕ್ಷತನದಿಂದ ಕೊಂದು ಹಾಕಿತ್ತು. ಈ ಕುರಿತ ರೋಚಕ ಮಾಹಿತಿ ಇಲ್ಲಿದೆ.

VISTARANEWS.COM


on

By

Israel Attack
Koo

ಇಬ್ಬರು ದೊಡ್ಡ ಶತ್ರುಗಳನ್ನು ಇಸ್ರೇಲ್ (Israel Attack) ಕೇವಲ ಹನ್ನೆರಡು ಗಂಟೆಗಳ ಅವಧಿಯಲ್ಲಿ ಕೊಂದು ಹಾಕಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ನ ಉನ್ನತ ನಾಯಕ ಇಸ್ಮಾಯಿಲ್ ಹನಿಯೆಹ್ (Ismail Haniyeh) ಮತ್ತು ಲೆಬನಾನ್ ರಾಜಧಾನಿ ಬೈರುತ್‌ನಲ್ಲಿ ಹಿಜ್ಬುಲ್ಲಾ ಕಮಾಂಡರ್ ಫುವಾಡ್ ಶುಕರ್ (Fuad Shukar) ಮೇಲೆ ವೈಮಾನಿಕ ದಾಳಿ ನಡೆಸಿ ಕೊಂದು ಹಾಕಲಾಗಿದೆ. ಈ ಎರಡೂ ಘಟನೆಗಳ ಹಿಂದೆ ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ (Israel’s intelligence agency Mossad) ಕೈವಾಡ ಇರುವುದು ಅತ್ಯಂತ ಸ್ಪಷ್ಟವಾಗಿದೆ.

ಇಸ್ರೇಲ್ ತನ್ನ ಶತ್ರುವನ್ನು ಎಲ್ಲಿ ಬೇಕಾದರೂ ಕೊಲ್ಲಬಹುದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. 1978ರಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಸಣ್ಣ ಸುಳಿವನ್ನೂ ಬಿಟ್ಟು ಕೊಡದ ಹಾಗೆ ʼಮೊಸಾದ್‌ʼ ಪ್ಯಾಲೇಸ್ಟಿನಿಯನ್ ಕಮಾಂಡರ್ ವಾಡಿ ಹಡ್ಡಾಡ್‌ನನ್ನು (Wadie Haddad) ಟೂತ್‌ಪೇಸ್ಟ್‌ನಲ್ಲಿ ವಿಷ ಬೆರೆಸಿ ಕೊಂದು ಹಾಕಿತ್ತು!

ಪ್ಯಾಲೆಸ್ತೀನ್‌ ವಿಮೋಚನೆಗಾಗಿ ಪಾಪ್ಯುಲರ್ ಫ್ರಂಟ್ ಎಂಬ ಪ್ಯಾಲೆಸ್ತೀನ್ ಸಂಘಟನೆಯ ಮುಖ್ಯಸ್ಥನಾಗಿದ್ದ ವಾಡಿ ಹಡ್ಡಾಡ್‌ನನ್ನು 1978ರಲ್ಲಿ ಕೊಲ್ಲಲಾಯಿತು. ಬಾಗ್ದಾದ್‌ನಲ್ಲಿ ಊಟ ಸೇವಿಸಿದ ಬಳಿಕ ಆತ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸಿದ್ದ. ಅನಂತರ ಅವನಿಗೆ ಹಸಿವು ಕಡಿಮೆಯಾಗಿತ್ತು. ಸುಮಾರು 25 ಪೌಂಡ್‌ಗಳಿಗಿಂತ ಹೆಚ್ಚು ತೂಕವನ್ನು ಕಳೆದುಕೊಂಡ. ಆತನ ಸ್ಥಿತಿ ಗಂಭೀರವಾದಾಗ ಇರಾನಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈದ್ಯರು ಹೆಪಟೈಟಿಸ್ ಅನ್ನು ಶಂಕಿಸಿದರು. ಶಕ್ತಿಯುತವಾದ ಪ್ರತಿಜೀವಕಗಳನ್ನು ನೀಡಲಾಯಿತು. ಅತ್ಯುತ್ತಮ ವೈದ್ಯರು ಆತನಿಗೆ ಚಿಕಿತ್ಸೆ ನೀಡಿದರು. ಆದರೆ ಹಡ್ದಾಡ್‌ನ ಸ್ಥಿತಿ ಸುಧಾರಿಸಲಿಲ್ಲ. ಕೂದಲು ಉದುರಲಾರಂಭಿಸಿತು. ಜ್ವರ ಕಡಿಮೆಯಾಗಲೇ ಇಲ್ಲ. ವಿಷ ಉಣಿಸಿರುವ ಶಂಕೆ ವ್ಯಕ್ತವಾದರೂ ಅದು ಯಾವುದು, ಹೇಗೆ ಅದನ್ನು ನೀಡಲಾಯಿತು ಎಂಬುದನ್ನು ವೈದ್ಯರಿಗೆ ಪತ್ತೆ ಹಚ್ಚಲು ಸಾಧ್ಯವಾಗಲೇ ಇಲ್ಲ.

ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ ನಾಯಕ ಯಾಸರ್ ಅರಾಫತ್, ಪೂರ್ವ ಜರ್ಮನಿಯ ರಹಸ್ಯ ದಳವಾದ ʼಸ್ಟಾಸಿʼಯಿಂದ ಸಹಾಯ ಪಡೆಯಲು ಸಹಾಯಕರನ್ನು ಕೇಳಿದರು. ಇದು ಸೋವಿಯತ್ ರಷ್ಯಾ ಪ್ಯಾಲೆಸ್ತೀನ್‌ ಹೋರಾಟಗಾರರಿಗೆ ಸಹಾಯ ಮಾಡಿದ ಸಮಯವಾಗಿತ್ತು. ಅವರಿಗೆ ಪಾಸ್‌ಪೋರ್ಟ್‌, ಆಶ್ರಯ, ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರವನ್ನು ಒದಗಿಸಿತು.

Israel Attack
Israel Attack


ಅರಾಫತ್‌ನ ಸಹಾಯಕನು ಪೂರ್ವ ಜರ್ಮನ್ ರಹಸ್ಯ ಸೇವೆ ಅಥವಾ ಸ್ಟಾಸಿಯನ್ನು ತಲುಪಿದಾಗ ಹಡ್ಡಾಡ್‌ನನ್ನು 1978ರ ಮಾರ್ಚ್ 19ರಂದು ಇರಾಕ್‌ ರಾಜಧಾನಿ ಬಾಗ್ದಾದ್‌ನಿಂದ ಪೂರ್ವ ಬರ್ಲಿನ್‌ಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಗುಪ್ತಚರ ಮತ್ತು ರಹಸ್ಯ ಸೇವೆಯ ಸಮುದಾಯದ ಸದಸ್ಯರು ಚಿಕಿತ್ಸೆ ನೀಡಿದರು. ಅದಾಗಲೇ ಎರಡು ತಿಂಗಳ ನೋವಿನಿಂದ ಒದ್ದಾಡಿದ್ದ ಹಡ್ಡಾಡ್‌ಗೆ ಏನಾಗಿದೆ ಎಂಬುದನ್ನು ಪತ್ತೆ ಹಚ್ಚಲು ಅಲ್ಲೂ ಸಾಧ್ಯವಾಗಲಿಲ್ಲ.

ಆದರೆ ಬಾಗ್ದಾದ್‌ನಿಂದ ಏರ್‌ಲಿಫ್ಟ್‌ ಆಗುತ್ತಿರುವಾಗ ಹಡ್ಡಾಡ್‌ನ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಿದಾಗ ಅದರಲ್ಲಿ ಟೂತ್‌ಪೇಸ್ಟ್‌ನ ಟ್ಯೂಬ್ ಒಂದು ಪತ್ತೆಯಾಯಿತು. ನಲವತ್ತೊಂದು ವರ್ಷದ ಹಡ್ಡಾಡ್‌ನನ್ನು ಪೂರ್ವ ಬರ್ಲಿನ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಅದಾಗಲೇ ಆತನ ದೇಹದ ವಿವಿಧ ಭಾಗಗಳಲ್ಲಿ ರಕ್ತಸ್ರಾವವಾಗುತ್ತಿತ್ತು. ಹೃದಯದ ಸುತ್ತ ಇರುವ ಪೆರಿಕಾರ್ಡಿಯಂ, ನಾಲಿಗೆ, ಪ್ಲೆರಲ್ ಪೊರೆಗಳು, ಟಾನ್ಸಿಲ್‌, ಮೂತ್ರ, ಮಲದಲ್ಲೂ ರಕ್ತ ಸೋರಿಕೆಯಾಗಿದ್ದು ಮಾತ್ರವಲ್ಲ ಪ್ಲೇಟ್ಲೆಟ್ ಸಂಖ್ಯೆ ಅಪಾಯಕಾರಿಯಾಗಿ ಕುಸಿಯಿತು.

ವೈದ್ಯರು ಆತನಿಗೆ ಸಾಧ್ಯವಿರುವ ಎಲ್ಲಾ ಪರೀಕ್ಷೆಗಳನ್ನು ನಡೆಸಿದರು. ಆದರೆ ಏನೂ ಫಲಿತಾಂಶ ಹೊರಬರಲಿಲ್ಲ. ಆತನಿಗೆ ಇಲಿ ವಿಷ ಅಥವಾ ಥಾಲಿಯಮ್ ನೀಡಲಾಗಿದೆ ಎಂದು ಊಹಿಸಲಾಯಿತು. ಆದರೆ ಇದಕ್ಕೂ ಸ್ಪಷ್ಟತೆ ಸಿಗಲಿಲ್ಲ. ಅಲ್ಲಿ ಆತ ತೀವ್ರವಾಗಿ ನೋವಿನಿಂದ ಒದ್ದಾಡುತ್ತಿದ್ದ. ಆತನ ಕಿರುಚಾಟ, ನರಳಾಟ ಆಸ್ಪತ್ರೆಯ ತುಂಬೆಲ್ಲ ಕೇಳುತ್ತಿತ್ತು. ವೈದ್ಯರು ಹಗಲು ರಾತ್ರಿ ಆತನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಇಡಬೇಕಾಯಿತು.

ಅಲ್ಲಿ ಹತ್ತು ದಿನಗಳ ಕಾಲ ತೀವ್ರ ಸಂಕಟ ಅನುಭವಿಸಿ ಮಾರ್ಚ್ 29ರಂದು ಹಡ್ಡಾಡ್‌ ಸತ್ತೇ ಹೋದ. ಅನಂತರ ಸಂಪೂರ್ಣ ಶವಪರೀಕ್ಷೆ ನಡೆಸಲಾಯಿತು. ಗುಪ್ತಚರ ಸಂಸ್ಥೆ ʼಸ್ಟಾಸಿʼಯ ಫೋರೆನ್ಸಿಕ್ ತಜ್ಞ ಪ್ರೊಫೆಸರ್ ಒಟ್ಟೊ ಪ್ರೊಕೊಪ್ ಅವರು ಈ ಕುರಿತು ಮಾಹಿತಿ ನೀಡಿ, ಹಡ್ಡಾಡ್‌ ಮೆದುಳಿನ ರಕ್ತಸ್ರಾವ ಮತ್ತು ನ್ಯುಮೋನಿಯಾದಿಂದ ಸಾವನ್ನಪ್ಪಿದ್ದಾನೆ. ಆತನನ್ನು ಹತ್ಯೆ ಮಾಡಿರುವ ಅನುಮಾನವಿದೆ ಎಂದು ಹೇಳಿದರು.

ಇದನ್ನೂ ಓದಿ: Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು?

ಟೂತ್ ಪೇಸ್ಟ್‌ನಲ್ಲಿತ್ತು ವಿಷ!

ಹಡ್ಡಾಡ್‌ನ ಸಾವು ಸಹಜ ಎಂದು ಕಾಣುವಂತೆ ಮಾಡಲು ಆತ ಬಳಸುತ್ತಿದ್ದ ಟೂತ್ ಪೇಸ್ಟ್ ಅನ್ನೇ ಅಸ್ರ್ರವಾಗಿ ಬಳಸಲಾಗಿತ್ತು. ಹಡ್ಡಾಡ್ ನಿತ್ಯ ಬಳಸುವ ಟೂತ್ ಪೇಸ್ಟ್ ಅನ್ನು ವಿಷಕಾರಿ ಟೂತ್ ಪೇಸ್ಟ್ ನೊಂದಿಗೆ ಬದಲಾಯಿಸಲಾಗಿತ್ತು! ಆತನ ಮರಣದ ಬಳಿಕ ಪರೀಕ್ಷೆ ಮಾಡಿದ ಟೂತ್ ಪೇಸ್ಟ್ ಟ್ಯೂಬ್‌ನಲ್ಲಿ ವಿಷ ಕಂಡು ಬಂದಿತ್ತು. ಟೆಲ್ ಅವೀವ್‌ನ ಆಗ್ನೇಯ ಭಾಗದಲ್ಲಿರುವ ನೆಸ್ ಜಿಯೋನಾದಲ್ಲಿರುವ ಇಸ್ರೇಲ್ ಇನ್‌ಸ್ಟಿಟ್ಯೂಟ್ ಫಾರ್ ಬಯೋಲಾಜಿಕಲ್ ರಿಸರ್ಚ್‌ನಲ್ಲಿ ಈ ವಿಷವನ್ನು ಅಭಿವೃದ್ಧಿಪಡಿಸಲಾಗಿತ್ತು. ಹಡ್ಡಾಡ್‌ ಹಲ್ಲುಜ್ಜುತ್ತಿದ್ದಾಗ ಈ ವಿಷವು ಅವನ ದೇಹವನ್ನು ಪ್ರವೇಶಿಸುತ್ತಿತ್ತು. ಇದು ನಿಧಾನವಾಗಿ ನಿರ್ಣಾಯಕ ಮಟ್ಟ ತಲುಪಿದಾಗ ಆತನ ಜೀವಕ್ಕೆ ಮಾರಕವಾಯಿತು. ಹೀಗೆ ಅತ್ಯಂತ ಚಾಣಾಕ್ಷತನದಿಂದ ಇಸ್ರೇಲ್‌ ಗುಪ್ತಚರ ದಳವು ತನ್ನ ವೈರಿ ʼಉಗ್ರ ನಾಯಕʼನನ್ನು ಕೊಂದು ಹಾಕಿತ್ತು!

Continue Reading

ವಿದೇಶ

Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು?

Ismail Haniyeh Killing: ಹಮಾಸ್‌ನ ಸಂಸ್ಥಾಪಕರಲ್ಲಿ ಒಬ್ಬನಾಗಿರುವ ಮಶಾಲ್, 1956ರಲ್ಲಿ ವೆಸ್ಟ್ ಬ್ಯಾಂಕ್‌ನ ಸಿಲ್ವಾಡ್‌ನಲ್ಲಿ ಜನಿಸಿದ. ಬಳಿಕ ಆತನ ಕುಟುಂಬ ಕುವೈತ್‌ಗೆ ಸ್ಥಳಾಂತರಗೊಂಡಿತು. ಮಶಾಲ್ ಪದವಿ ಪಡೆದ ಬಳಿಕ ಕುವೈತ್‌ನಲ್ಲಿಯೇ ಇದ್ದ. ಅಲ್ಲಿ ಆತ ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ ಸಾಮಾಜಿಕ ಸೇವೆಗಳನ್ನು ಆಯೋಜಿಸಲು ಹಣವನ್ನು ಸಂಗ್ರಹಿಸಿದ.

VISTARANEWS.COM


on

Khaled Meshaal
Koo

ಟೆಹ್ರಾನ್‌: ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ (Ismail Haniyeh Killing) ಹತ್ಯೆ ಸುದ್ದಿ ಪ್ರಪಂಚದಾದ್ಯಂತ ಸಂಚಲನ ಉಂಟು ಮಾಡಿರುವ ಬೆನ್ನಲ್ಲೇ ಹಮಾಸ್‌ನ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಭುಗಿಲೆದ್ದಿದೆ. ಹನಿಯೆನ್‌ ಸ್ಥಾನವನ್ನು ಹಮಾಸ್‌ನ ಯಾವ ನಾಯಕ ವಹಿಸಿಕೊಳ್ಳಲಿದ್ದಾನೆ ಎಂಬ ಬಗ್ಗೆ ಇಡೀ ಪ್ರಪಂಚದ ಕಣ್ಣು ನೆಟ್ಟಿದೆ. ಹೀಗಿರುವಾಗ ಹಮಾಸ್‌ನ ಹಿರಿಯ ನಾಯಕ ಖಲೀದ್‌ ಮೆಶಾಕ್‌(Khaled Meshaal) ಹಮಾಸ್‌ ಮುಖ್ಯಸ್ಥನಾಗಿ ಅಧಿಕಾರ ಸ್ವೀಕರಿಸಲಿದ್ದಾನೆ ಎಂಬುದು ಬಹುತೇಕ ಖಚಿತವಾಗಿದೆ.

ಹಮಾಸ್‌ನ ಸಂಸ್ಥಾಪಕರಲ್ಲಿ ಒಬ್ಬನಾಗಿರುವ ಮಶಾಲ್, 1956ರಲ್ಲಿ ವೆಸ್ಟ್ ಬ್ಯಾಂಕ್‌ನ ಸಿಲ್ವಾಡ್‌ನಲ್ಲಿ ಜನಿಸಿದ. ಬಳಿಕ ಆತನ ಕುಟುಂಬ ಕುವೈತ್‌ಗೆ ಸ್ಥಳಾಂತರಗೊಂಡಿತು. ಮಶಾಲ್ ಪದವಿ ಪಡೆದ ಬಳಿಕ ಕುವೈತ್‌ನಲ್ಲಿಯೇ ಇದ್ದ. ಅಲ್ಲಿ ಆತ ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ ಸಾಮಾಜಿಕ ಸೇವೆಗಳನ್ನು ಆಯೋಜಿಸಲು ಹಣವನ್ನು ಸಂಗ್ರಹಿಸಿದ.

1996ರಲ್ಲಿ ಹಮಾಸ್ ರಾಜಕೀಯ ಬ್ಯೂರೋ ಮುಖ್ಯಸ್ಥನಾಗಿ ಆಯ್ಕೆಯಾದ ಮಶಾಲ್, ಹಮಾಸ್‌ನ ಆತ್ಮಹತ್ಯಾ ಬಾಂಬ್ ದಾಳಿಗೆ ಪ್ರತೀಕಾರವಾಗಿ ಪ್ರಧಾನಿ ಬೆಂಜಮಿನ್ ನೆತನ್ಯಾಹು 1997ರಲ್ಲಿ ಮಶಾಲ್‌ನ ಹತ್ಯೆ ಮಾಡಲು ಅನುಮೋದನೆ ನೀಡಿದರು. ಮಶಾಲ್ 2017ರವರೆಗೂ ಹಮಾಸ್‌ನ ಮುಖ್ಯಸ್ಥನಾಗಿದ್ದ. ಹಮಾಸ್‌ನ ಪ್ರಮುಖ ಒತ್ತೆಯಾಳು ಸಂಧಾನಕಾರರಲ್ಲಿ ಒಬ್ಬನಾಗಿರುವ ಮಶಾಲ್ ಪ್ರಸ್ತುತ ಕತಾರ್‌ನಲ್ಲಿ ವಾಸಿಸುತ್ತಿದ್ದಾನೆ.

15 ನೇ ವಯಸ್ಸಿನಲ್ಲಿ, ಅವರು ಈಜಿಪ್ಟ್ ಮೂಲದ ಸುನ್ನಿ ಇಸ್ಲಾಮಿಸ್ಟ್ ಸಂಘಟನೆಯಾದ ಮುಸ್ಲಿಂ ಬ್ರದರ್‌ಹುಡ್‌ಗೆ ಸೇರಿದ್ದ. ಈ ಸಂಘಟನರ 1987 ರ ಹಮಾಸ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿತು. 1992 ರಲ್ಲಿ ಉಗ್ರಗಾಮಿ ಗುಂಪಿನ ಪಾಲಿಟ್‌ಬ್ಯೂರೋದ ಸ್ಥಾಪಕ ಸದಸ್ಯರನಾಗಿದ್ದ. 2017ರಲ್ಲಿ ಅಧಿಕಾರದಿಂದ ಕೆಳಗಿಳಿದರು ಮತ್ತು ಹನಿಯೆಹ್ ಅವರು ಉತ್ತರಾಧಿಕಾರಿಯಾದ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಜಗತ್ತಿನ ಯಾರ ಪ್ರೀತಿಯೂ ಇವರ ಪ್ರೀತಿಗೆ ಸಮನಲ್ಲ!

ರಾಜಮಾರ್ಗ ಅಂಕಣ: ಇವರ ಪ್ರೀತಿಗೆ ಸಾಕ್ಷಿಯಾಗಿ ಇಟಲಿಯ ಫ್ಲಾರೆನ್ಸ್ ಎಂಬ ನಗರದಲ್ಲಿ ಇರುವ ಅವರ ನಿವಾಸದ ಪಕ್ಕದಲ್ಲಿ ಅವರಿಬ್ಬರ ಸಮಾಧಿಗಳನ್ನು ನಿರ್ಮಿಸಲಾಗಿದೆ. ಅದರ ಮೇಲೆ ಬರೆದಿರುವ ಒಂದೇ ಸಾಲಿನ ಕವಿತೆ – ಲವ್ ಈಸ್ ನಾಟ್ ಬ್ಲೈಂಡ್!

VISTARANEWS.COM


on

ರಾಜಮಾರ್ಗ ಅಂಕಣ love story
Koo

ರಾಬರ್ಟ್ ಬ್ರೌನಿಂಗ್ ಮತ್ತು ಎಲಿಜೆಬೆತ್ ಬ್ಯಾರೆಟ್ ಪರಸ್ಪರ ಭೇಟಿ ಆಗದೆ ವರ್ಷಾನುಗಟ್ಟಲೆ ಪ್ರೀತಿ ಮಾಡಿದರು!

Rajendra-Bhat-Raja-Marga-Main-logo

:: ರಾಜೇಂದ್ರ ಭಟ್‌ ಕೆ.

ರಾಜಮಾರ್ಗ ಅಂಕಣ: ಪ್ರೀತಿಗೆ ಕಣ್ಣಿಲ್ಲ (Love is blind) ಅಂತಾರೆ. ಆದರೆ ಇಟಲಿಯಲ್ಲಿ (Italy) ಇರುವ ಅವರ ಸಮಾಧಿಯ ಮೇಲೆ ʼಪ್ರೀತಿ ಕುರುಡಲ್ಲ’ ಎಂದು ಬರೆದಿರುವುದು ಯಾಕೆ? ಇದೆಲ್ಲವೂ ಅರ್ಥ ಆಗಬೇಕಾದರೆ ಈ ಪ್ರೀತಿಯ ಪರಾಕಾಷ್ಠೆಯ ಕಥೆಯನ್ನು ಒಮ್ಮೆ ಫೀಲ್ ಮಾಡಿಕೊಂಡು ಓದಿ.

ಅದು ಲಂಡನ್ ನಗರ. ಆಕೆ ಎಲಿಜೆಬೆತ್ ಬ್ಯಾರೇಟ್ (Elizabeth Barrett). ಆ ಕಾಲಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯ ಕವಯಿತ್ರಿ. ವಯಸ್ಸು 39ರ ಆಸುಪಾಸು. ಅವಿವಾಹಿತೆ. ಆಕೆಯ ತಂದೆ ಅತ್ಯಂತ ಶ್ರೀಮಂತ ಜಮೀನುದಾರರು. ಅಪ್ಪ ಅಮ್ಮನ 12 ಮಕ್ಕಳಲ್ಲಿ ಆಕೆಯೂ ಒಬ್ಬರು. ಅಪ್ಪನ ಪ್ರೀತಿಯ ಮಗಳು.

ಹದಿಹರೆಯದಿಂದಲೂ ಆಕೆಗೆ ತೀವ್ರ ಅನಾರೋಗ್ಯ ಮತ್ತು ದೇಹವೆಲ್ಲ ನೋವು. ಉಸಿರಾಟದ ತೊಂದರೆ. ಮನೆಯಿಂದಾಚೆ ಹೋಗಲು ಸಾಧ್ಯವೇ ಆಗದ ಸ್ಥಿತಿ. ಆಕೆ ಅಂತರ್ಮುಖಿ. ತನ್ನ ಸ್ಟಡಿ ರೂಮಿನಲ್ಲಿ ಕುಳಿತು ಓದುವುದು ಮತ್ತು ಬರೆಯುವುದು ಬಿಟ್ಟರೆ ಆಕೆಗೆ ಬೇರೆ ಪ್ರಪಂಚವೇ ಇರಲಿಲ್ಲ!

ಆತನು ರಾಬರ್ಟ್ ಬ್ರೌನಿಂಗ್

ಅವನೂ ಲಂಡನ್ ನಗರದವನು. ವಯಸ್ಸು 32. ಆತ ಕೂಡ ಕವಿ ಮತ್ತು ನಾಟಕಕಾರ. ಆತ ಆಕೆಯನ್ನು ಎಂದಿಗೂ ಭೇಟಿ ಮಾಡಿರಲೇ ಇಲ್ಲ. ಆಕೆಯ ಬಗ್ಗೆ ಆತನಿಗೆ ಏನೂ ಗೊತ್ತಿಲ್ಲ. ಆದರೆ ಆಕೆಯ ಕವಿತೆಗಳ ಆರಾಧಕ. ಒಂದು ದಿನ ಧೈರ್ಯ ಮಾಡಿ ಅವಳ ವಿಳಾಸವನ್ನು ಪಡೆದುಕೊಂಡು ‘ನಾನು ನಿಮ್ಮ ಕವಿತೆಗಳನ್ನು ಪ್ರೀತಿ ಮಾಡುತ್ತೇನೆ ‘ಎಂದು ಧೈರ್ಯವಾಗಿ ಪತ್ರ ಬರೆದನು. ಆಶ್ಚರ್ಯ ಪಟ್ಟ ಎಲಿಜೆಬೆತ್ ಧನ್ಯವಾದಗಳು ಎಂದು ಎರಡು ಸಾಲಿನ ಪತ್ರ ಬರೆದಳು. ಯಾರೋ ಒಬ್ಬ ಅಭಿಮಾನಿ ಎಂದು ಆಕೆ ಭಾವಿಸಿದ್ದಳು. ಆದರೆ ರಾಬರ್ಟ್ (Robert Browning) ಬಿಡಬೇಕಲ್ಲ. ಮರುದಿನವೇ ಇನ್ನೊಂದು ಪತ್ರ ಬರೆದು ಪೋಸ್ಟ್ ಮಾಡಿದನು.

ಹೀಗೆ ಮುಂದಿನ 20 ತಿಂಗಳ ಕಾಲ ಅವರಿಬ್ಬರೂ 600 ಪತ್ರಗಳನ್ನು ವಿನಿಮಯ ಮಾಡಿಕೊಂಡರು! ಒಬ್ಬರನ್ನೊಬ್ಬರು ಅಭಿನಂದಿಸಿ ಕೊಂಡರು. ಕವಿತೆಗಳ ಬಗ್ಗೆ ವಿಸ್ತಾರವಾಗಿ ಮಾತಾಡಿದರು. ಎಲ್ಲಿಯೂ ಪ್ರೀತಿಯನ್ನು ಪ್ರಪೋಸ್ ಮಾಡಲಿಲ್ಲ! ಅಥವಾ ಫೋನ್ ಮಾಡಿ ಮಾತನಾಡಲೇ ಇಲ್ಲ!

ಆ ಪತ್ರಗಳ ಪ್ರಭಾವದಿಂದ ಎಲಿಜೆಬೆತ್ ಆರೋಗ್ಯ ಸುಧಾರಣೆ ಆಯ್ತು!

ದೀರ್ಘ ಅವಧಿಗೆ ಅದೃಶ್ಯ ಅಭಿಮಾನಿಯ ಪ್ರೀತಿಪೂರ್ವಕ ಪತ್ರಗಳನ್ನು ಓದುತ್ತಾ, ಅವುಗಳಿಗೆ ಉತ್ತರ ಬರೆಯುತ್ತ ಎಲಿಜೆಬೆತ್ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಆಯ್ತು! ಆಕೆ ಅಫೀಮ್ ಮತ್ತು ಮಾರ್ಫಿನ್ ಡ್ರಗ್ಸ್ ಸೇವನೆಯಿಂದ ನಿಧಾನವಾಗಿ ಹೊರಬಂದಳು. ಒಂದು ದಿನ ಧೈರ್ಯವಾಗಿ ಆತನಿಗೆ ಪತ್ರ ಬರೆದಳು – ನನ್ನಲ್ಲಿ ತುಂಬಾ ಆರೋಗ್ಯ ಸುಧಾರಣೆ ಆಗಿದೆ. ನಾನು ಈಗ ಆರು ವರ್ಷಗಳ ಕತ್ತಲೆಯ ಕೋಣೆಯಿಂದ ಹೊರಬರಬೇಕು ಎಂದು ಆಸೆ ಪಡುತ್ತಾ ಇದ್ದೇನೆ. ನಿನ್ನನ್ನೊಮ್ಮೆ ಭೇಟಿ ಆಗಿ ಥ್ಯಾಂಕ್ಸ್ ಹೇಳಬೇಕು ಅನ್ನಿಸ್ತಿದೆ. ಸಿಗ್ತಿಯಾ?

ಆತ ಒಪ್ಪಿದನು. ಅವರಿಬ್ಬರೂ ಮೊದಲ ಬಾರಿಗೆ ಭೇಟಿ ಆದರು. ʼನಾನು ನಿಮ್ಮನ್ನು ಮದುವೆ ಆಗುತ್ತೇನೆ. ನಿಮ್ಮ ಒಪ್ಪಿಗೆ ಇದೆಯಾ? ‘ಎಂದು ಆಗ ರಾಬರ್ಟ್ ನೇರವಾಗಿ ಕೇಳಿದನು. ಅದನ್ನವಳು ನಿರೀಕ್ಷೆ ಮಾಡಿರಲಿಲ್ಲ. ಈಗ ಎಲಿಜೆಬೆತ್ ಬೆವರಲು ಆರಂಭಿಸಿದಳು.

ಆಕೆಯ ಅಪ್ಪ ಪ್ರೇಮವಿವಾಹಕ್ಕೆ ವಿರೋಧ ಇದ್ದರು

ಆಕೆಯು ಬೆವರಲು ಕಾರಣ ಆಕೆಯ ಅಪ್ಪ ಹಾಕಿದ ನಿರ್ಬಂಧ. ಅವನ ಎರಡು ಮಕ್ಕಳು ಪ್ರೀತಿ ಮಾಡಿ ಓಡಿಹೋಗಿ ಮದುವೆ ಆಗಿದ್ದರು. ಆ ಸಿಟ್ಟಿನಲ್ಲಿ ಆತನು ಎಲಿಜಬೆತ್ ಮಗಳಿಗೆ ಪ್ರೀತಿ ಮಾಡಲೇ ಬಾರದು ಎಂಬ ನಿರ್ಬಂಧವನ್ನು ಹಾಕಿದ್ದನು. ಆಕೆಯ ಸಂದಿಗ್ದವು ರಾಬರ್ಟನಿಗೆ ಅರ್ಥ ಆಯಿತು. ಅವನು ಎಷ್ಟು ಧೈರ್ಯ ತುಂಬಿಸಿದರೂ ಅಪ್ಪನ ಎದುರು ಹೋಗಿ ನಿಂತು ಮಾತಾಡುವ ಧೈರ್ಯ ಅವಳಿಗೆ ಕೊನೆಗೂ ಬರಲಿಲ್ಲ. ಕೊನೆಗೆ 1845ರ ಸೆಪ್ಟೆಂಬರ್ 12ರಂದು ಅವರಿಬ್ಬರೂ ರಹಸ್ಯವಾಗಿ ಮದುವೆ ಆದರು.

ಆಸ್ತಿಯಲ್ಲಿ ಪಾಲು ಕೊಡುವುದಿಲ್ಲ ಎಂದ ಅಪ್ಪ

ಹೇಗೋ ಮದುವೆಯ ರಹಸ್ಯವು ಅಪ್ಪನಿಗೆ ಗೊತ್ತಾಯಿತು. ನಿಮಗೆ ಆಸ್ತಿಯಲ್ಲಿ ಒಂದು ಡಾಲರ್ ಕೂಡ ಕೊಡುವುದಿಲ್ಲ. ಎಲ್ಲಿ ಬೇಕಾದರೂ ಹೋಗಿ ಎಂದು ಗರ್ಜಿಸಿದನು. ಮದುಮಕ್ಕಳನ್ನು ಮನೆಯ ಹೊರಗೆ ನಿಲ್ಲಿಸಿ ದಢಾರ್ ಎಂದು ಬಾಗಿಲು ಹಾಕಿದನು.

ರಾಬರ್ಟ್ ಮತ್ತು ಎಲಿಜಬೆತ್ ಇಬ್ಬರೂ ಬೇಸರ ಮಾಡಿಕೊಳ್ಳಲಿಲ್ಲ. ಬರವಣಿಗೆಯ ಮೂಲಕ ಬದುಕುವ ಶಕ್ತಿ ಇಬ್ಬರಿಗೂ ಇತ್ತು. ತಮ್ಮ ಪ್ರತಿಭೆಯ ಮೇಲೆ ನಂಬಿಕೆ ಇತ್ತು. ಅವರಿಬ್ಬರೂ ಉಟ್ಟ ಬಟ್ಟೆಯಲ್ಲಿ ಲಂಡನ್ ನಗರವನ್ನು ಬಿಟ್ಟು ಪ್ರೀತಿಯ ಊರಾದ ಇಟಲಿಗೆ ಬಂದರು. ಪೀಸಾದ ವಾಲುವ ಗೋಪುರದ ಮುಂದೆ ನಿಂತು ದಂಪತಿಗಳು ಮೊಟ್ಟಮೊದಲ ಬಾರಿಗೆ ಕಿಸ್ ಮಾಡಿದರು. ಪ್ರೀತಿಯ ಉತ್ಕಟತೆಯನ್ನು ಫೀಲ್ ಮಾಡಿದರು. ಅಲ್ಲಿಯೇ ಮನೆ ಮಾಡಿ ಸಾಹಿತ್ಯದ ಕೆಲಸದಲ್ಲಿ ಮುಳುಗಿದರು.

ಅಲ್ಲಿ ರಾಬರ್ಟ್ ತನ್ನ ಅದ್ಭುತ ಕವಿತೆ ‘ಸಾನೆಟ್ಸ್ ಫ್ರಮ್ ಪೋರ್ಚುಗೀಸ್ ‘ ಬರೆದು ಹೆಂಡತಿಗೆ ಪ್ರೆಸೆಂಟ್ ಮಾಡುತ್ತಾನೆ. ಅದು ಲೋಕಪ್ರಸಿದ್ಧಿ ಪಡೆಯಿತು.

ಆಕೆಯು ಅಷ್ಟೇ ಪ್ರೀತಿಯಿಂದ ʼಪೊಯೆಮ್ಸ್ ಬಿಫೋರ್ ಕಾಂಗ್ರೆಸ್’ ಕವಿತೆಯನ್ನು ಬರೆದು ಅವನಿಗೆ ಅರ್ಪಿಸುತ್ತಾಳೆ. ಗಂಡನ ಪ್ರೀತಿಯಲ್ಲಿ ಮುಳುಗಿ ʼಆರೋರಾ’ ಎಂಬ ಪ್ರೇಮಗ್ರಂಥವನ್ನು ಬರೆದು ಪ್ರಕಟಣೆ ಮಾಡುತ್ತಾಳೆ. ಅವರ ಪ್ರೀತಿಯ ಪ್ರತೀಕವಾಗಿ ಅವರಿಗೆ ವೀಡ್ಮನ್ ಬ್ಯಾರೆಟ್ ಎಂಬ ಮಗನು ಹುಟ್ಟುತ್ತಾನೆ.

1861ರಲ್ಲಿ ರಾಬರ್ಟ್ ತನ್ನ ಮಹತ್ವಾಕಾಂಕ್ಷೆಯ ಕೃತಿ ʼಮೆನ್ ಅಂಡ್ ವಿಮೆನ್’ ಪೂರ್ತಿ ಮಾಡಿ ಪತ್ನಿಯ ಕೈಯ್ಯಲ್ಲಿ ಇಟ್ಟು ಬಿಡುಗಡೆ ಮಾಡುತ್ತಾನೆ. 15 ವರ್ಷಗಳ ಶ್ರೇಷ್ಟ ದಾಂಪತ್ಯದ ಅನುಪಮ ಪ್ರೀತಿಯನ್ನು ಆಸ್ವಾದಿಸಿದ ನಂತರ 1861ರ ಜೂನ್ 29ರಂದು ಎಲಿಜೆಬೆತ್ ತನ್ನ ಗಂಡನ ತೋಳುಗಳಲ್ಲೇ ಉಸಿರು ನಿಲ್ಲಿಸುತ್ತಾಳೆ. ಕೆಲವೇ ವರ್ಷಗಳಲ್ಲಿ ರಾಬರ್ಟ್ ಕೂಡ ನಿಧನ ಹೊಂದುತ್ತಾನೆ.

ಅವರ ಪ್ರೀತಿಗೆ ಸಾಕ್ಷಿಯಾಗಿ ಇಟಲಿಯ ಫ್ಲಾರೆನ್ಸ್ ಎಂಬ ನಗರದಲ್ಲಿ ಇರುವ ಅವರ ನಿವಾಸದ ಪಕ್ಕದಲ್ಲಿ ಅವರಿಬ್ಬರ ಸಮಾಧಿಗಳನ್ನು ನಿರ್ಮಿಸಲಾಗಿದೆ. ಅದರ ಮೇಲೆ ಬರೆದಿರುವ ಒಂದೇ ಸಾಲಿನ ಕವಿತೆ – ಲವ್ ಈಸ್ ನಾಟ್ ಬ್ಲೈಂಡ್!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಸಾಧನೆಯ ಹಾದಿಯ 25 ಮೈಲಿಗಲ್ಲುಗಳು

Continue Reading

ವಿದೇಶ

Ismail Haniyeh: ಇಸ್ರೇಲ್‌ ಮೇಲೆ ನಡೆಯುತ್ತಾ ಭಾರೀ ಏರ್‌ಸ್ಟ್ರೈಕ್‌? ಹನಿಯೆಹ್‌ ಹತ್ಯೆ ಪ್ರತೀಕಾರಕ್ಕೆ ಇರಾನ್‌ ಸಜ್ಜು

Ismail Haniyeh: ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

VISTARANEWS.COM


on

Ismail Haniyeh
Koo

ಟೆಹ್ರಾನ್‌: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಇಸ್ರೇಲ್‌ ಮೇಲೆ ನೇರ ವೈಮಾನಿಕ ದಾಳಿ ನಡೆಸಿ ಹೊಡೆದುರುಳಿಸುವಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಆದೇಶ ನೀಡಿದ್ದಾರೆ. ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ನಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

Continue Reading
Advertisement
Paris Olympics: Satwik-Chirag duo Failed To Reach Semi Final, Lose In quarter Final
ಕ್ರೀಡೆ3 mins ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

MS Dhoni
ಪ್ರಮುಖ ಸುದ್ದಿ11 mins ago

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MLA Belur Gopalakrishna visits and inspects flood affected areas in hosanagara taluk
ಶಿವಮೊಗ್ಗ11 mins ago

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

State Level hasiru nairmalya shala abhyudaya Award for Hadlubailu Government School
ಶಿವಮೊಗ್ಗ12 mins ago

Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Viral Video
Latest14 mins ago

Viral Video: ಜಲಾವೃತ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಿರುಕುಳ; ವಿಡಿಯೊ ನೋಡಿ ಜನಾಕ್ರೋಶ

Viral Video
Latest22 mins ago

Viral Video: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

New Traffic Rules
ಕರ್ನಾಟಕ27 mins ago

New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

Wayanad Tragedy
Latest37 mins ago

Wayanad Tragedy: ಈ ಮುದ್ದು ವಿದ್ಯಾರ್ಥಿನಿಯರ ನಗು, ಸೈಕಲ್‌ ಸವಾರಿ ಇನ್ನೆಲ್ಲಿ? ಮಣ್ಣಿನಡಿ ಸಮಾಧಿ; ಕಣ್ಣಂಚಲಿ ನೀರು ತರಿಸುವ ವಿಡಿಯೊ

murder case
ಬೆಂಗಳೂರು41 mins ago

Murder Case : ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

Pralhad Joshi
ಕರ್ನಾಟಕ52 mins ago

BJP Padayatra: ಕುಮಾರಸ್ವಾಮಿ ಮುನಿಸು ಶಮನ, ಬಿಜೆಪಿ, ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ; ಪ್ರಲ್ಹಾದ್‌ ಜೋಶಿ ಘೋಷಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌