Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ - Vistara News

ವಿದೇಶ

Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

Narendra Modi: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಆಗಸ್ಟ್‌ 23) ಯುದ್ಧಪೀಡಿತ ಉಕ್ರೇನ್‌ಗೆ ಭೇಟಿ ನೀಡಿದರು. ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಮೋದಿ ಉಕ್ರೇನ್‌ಗೆ ತೆರಳಿದರು. ದ್ವಿಪಕ್ಷೀಯ ಸಹಕಾರ ಸಂಬಂಧವನ್ನು ಬಲಪಡಿಸುವ ಬಗ್ಗೆ ಮತ್ತು ರಷ್ಯಾ-ಉಕ್ರೇನ್‌ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಬಗ್ಗೆ ಮೋದಿ ಮತ್ತು ವೊಲೊಡಿಮಿರ್​ ಝೆಲೆನ್ಸ್ಕಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೀವ್‌: ವಿದೇಶ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ (ಆಗಸ್ಟ್‌ 23) ಯುದ್ಧಪೀಡಿತ ಉಕ್ರೇನ್‌ಗೆ ಭೇಟಿ ನೀಡಿದರು. ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಅವರ ಆಹ್ವಾನದ ಮೇರೆಗೆ ಮೋದಿ ಉಕ್ರೇನ್‌ಗೆ ತೆರಳಿದರು. ದ್ವಿಪಕ್ಷೀಯ ಸಹಕಾರ ಸಂಬಂಧವನ್ನು ಬಲಪಡಿಸುವ ಬಗ್ಗೆ ಮತ್ತು ರಷ್ಯಾ-ಉಕ್ರೇನ್‌ ಸಂಘರ್ಷ (Russia-Ukraine War)ಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಬಗ್ಗೆ ಮೋದಿ ಮತ್ತು ವೊಲೊಡಿಮಿರ್​ ಝೆಲೆನ್ಸ್ಕಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.

ರಷ್ಯಾದ ಮಾಸ್ಕೋಗೆ ಉನ್ನತ ಮಟ್ಟದ ಪ್ರವಾಸ ಕೈಗೊಂಡ ಸುಮಾರು ಆರು ವಾರಗಳ ನಂತರ ಪ್ರಧಾನಿ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿದರು. ಮೋದಿ ಅವರ ಮಾಸ್ಕೋ ಪ್ರವಾಸ ಅಮೆರಿಕ ಮತ್ತು ಅದರ ಕೆಲವು ಮಿತ್ರರಾಷ್ಟ್ರಗಳ ಟೀಕೆಗೆ ಕಾರಣವಾಗಿತ್ತು. 1991ರಲ್ಲಿ ಸ್ವಾತಂತ್ರ್ಯ ಪಡೆದ ಬಳಿಕ ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದು ಎನ್ನುವುದು ಕೂಡ ವಿಶೇಷ.

“ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಬಗ್ಗೆ ವೊಲೊಡಿಮಿರ್​ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲು ಮತ್ತು ರಷ್ಯಾ-ಉಕ್ರೇನ್ ಸಂಘರ್ಷವನ್ನು ಕೊನೆಗಾಣಿಸಲು ಅಗತ್ಯವಾದ ಶಾಂತಿಯುತ ಪರಿಹಾರದ ದೃಷ್ಟಿಕೋನಗಳನ್ನು ಹಂಚಿಕೊಳ್ಳುವ ಅವಕಾಶವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದು ಮೋದಿ ದಿಲ್ಲಿಯಿಂದ ಹೊರಡುವ ಮೊದಲು ತಿಳಿಸಿದ್ದರು.

ಉಕ್ರೇನ್‌ ಮೇಲಿನ ರಷ್ಯಾದ ದಾಳಿಯನ್ನು ಭಾರತ ಇದುವರೆಗೆ ಖಂಡಿಸಿಲ್ಲ. ಅದಾಗ್ಯೂ ಮಾತುಕತೆ ಮತ್ತು ರಾಜತಾಂತ್ರಿಕಯ ಮೂಲಕ ಯುದ್ಧವನ್ನು ನಿಲ್ಲಿಸಬೇಕು ಎಂದು ಆಗ್ರಹಿಸುತ್ತಲೇ ಬಂದಿದೆ. ಹೀಗಾಗಿ ಮೋದಿ ಅವರ ಭೇಟಿ ವಿಶ್ವದ ಗಮನ ಸೆಳೆದಿದೆ.

ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ: ಮೋದಿ

ಇದಕ್ಕೂ ಮುನ್ನ ಪೋಲೆಂಡ್‌ ಪ್ರವಾಸ ಕೈಗೊಂಡ ಮೋದಿ ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್‌ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಘರ್ಷಣೆಗಳ ಕುರಿತು, ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದು, ನಿಜಕ್ಕೂ ಆತಂಕಕಾರಿ ವಿಚಾರ ಎಂದು ಹೇಳಿದ್ದಾರೆ. ʼʼಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತ ದೃಢವಾಗಿ ನಂಬುತ್ತದೆ. ಯಾವುದೇ ಬಿಕ್ಕಟ್ಟಿನಲ್ಲಿ ಅಮಾಯಕರ ಜೀವಗಳನ್ನು ಕಳೆದುಕೊಳ್ಳುವುದು ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ನಾವು ಸಂಭಾಷಣೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆʼʼ ಎಂದು ಅವರು ಹೇಳಿದ್ದಾರೆ. ಬುಧವಾರ ಪೋಲೆಂಡ್‌ಗೆ ಬಂದಿಳಿದಿರುವ ಪ್ರಧಾನಿ ಮೋದಿ ಇಂದು ಉಕ್ರೇನ್‌ನ ಕೈವ್‌ಗೆ ಬಂದಿಳಿದರು. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡಿದ ಮೊದಲ ಪ್ರವಾಸ ಇದು.

ಇದನ್ನೂ ಓದಿ: PM Modi Poland Visit: ಪೋಲೆಂಡ್‌ಗೆ ಬಂದಿಳಿದ ಪ್ರಧಾನಿ ಮೋದಿ- ಗುಜರಾತಿ ನೃತ್ಯದ ಮೂಲಕ ಭರ್ಜರಿ ಸ್ವಾಗತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

VISTARANEWS.COM


on

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಭೀಕರ ರೈಲು ಅಪಘಾತ ಸಂಭವಿಸಿದೆ. ದೂರದ ಊರುಗಳಿಗೆ ಸಂಚರಿಸುವ ಪ್ರಯಾಣಿಕ ರೈಲು ಮತ್ತು ಸ್ಥಳೀಯ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೊಳಗಾದ ರೈಲು ಬೋಗಿಗಳ ಒಳಗೆ ಅನೇಕರು ಸಿಲುಕಿಕೊಂಡಿದ್ದು, ರಕ್ಷಣಾ ಸಿಬ್ಬಂದಿ ಲೋಹವನ್ನು ಕತ್ತರಿಸುವ ಯಂತ್ರಗಳನ್ನು ಬಳಸಿ ಜನರನ್ನು ಹೊರತೆಗೆಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಭೀಕರ ಅಪಘಾತಕ್ಕೆ ರೈಲು ಹಳಿ ಮೇಲೆ ಬಂದ ಟ್ಯಾಕ್ಸಿಯೇ ಕಾರಣ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಹಳಿಗಳ ಮೇಲೆ ಚಲಿಸುತ್ತಿದ್ದ ಟ್ಯಾಕ್ಸಿಯೊಂದಕ್ಕೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ರೈಲು, ಪಕ್ಕದ ಹಳಿಯಲ್ಲಿ ಮಹಿಳೆಯರು ಮಾತ್ರ ಪ್ರಯಾಣಿಸುತ್ತಿದ್ದ ಮತ್ತೊಂದು ರೈಲಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಈ ಟ್ಯಾಕ್ಸಿಯು ವಿಯೆಟ್ನಾಂ ಮೂಲದ ‘ಗ್ರೀನ್ ಎಸ್‌ಎಂ’ ಎಂಬ ಸಂಸ್ಥೆಗೆ ಸೇರಿದ್ದಾಗಿದ್ದು, ಕಂಪನಿಯು ಈಗಾಗಲೇ ಅಪಘಾತದ ತನಿಖೆಗೆ ಸಹಕರಿಸುವುದಾಗಿ ಘೋಷಿಸಿದೆ.

ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ (KNKT) ಘಟನೆಯ ಬಗ್ಗೆ ಸಮಗ್ರ ತನಿಖೆ ಆರಂಭಿಸಿದೆ. ರೈಲು ಬೋಗಿಗಳ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವುದು ಈಗ ದೊಡ್ಡ ಸವಾಲಾಗಿದ್ದು, ತಜ್ಞರ ತಂಡವು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಇಂಡೋನೇಷ್ಯಾದಲ್ಲಿ ಸಾರಿಗೆ ಸುರಕ್ಷತೆಯ ಕೊರತೆಯಿಂದಾಗಿ ರೈಲು ಅಪಘಾತಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ, ಆದರೆ ಎರಡು ರೈಲುಗಳ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯು ಇತ್ತೀಚಿನ ವರ್ಷಗಳಲ್ಲೇ ನಡೆದ ಅತ್ಯಂತ ದೊಡ್ಡ ದುರಂತ ಎಂದು ಹೇಳಲಾಗುತ್ತಿದೆ.

Continue Reading

Latest

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

VISTARANEWS.COM


on

ಜಾಗತಿಕ ಆರ್ಥಿಕ ಬದಲಾವಣೆಗಳ ನಡುವೆ ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಸವಾಲು ಎದುರಾಗಿದೆ. ತಾನು ನೀಡಿದ್ದ 3.5 ಬಿಲಿಯನ್ ಡಾಲರ್ ಮೊತ್ತದ ಸಾಲವನ್ನು ಮರಳಿ ನೀಡುವಂತೆ ಸಂಯುಕ್ತ ಅರಬ್ ಸಂಸ್ಥಾನ (UAE) ಪಾಕಿಸ್ತಾನಕ್ಕೆ ತಿಳಿಸಿದೆ. ಈ ಹಿಂದೆ ಆರ್ಥಿಕ ಸ್ಥಿರತೆಗಾಗಿ ಯುಎಇ ಈ ಮೊತ್ತವನ್ನು ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್‌ನಲ್ಲಿ ಇರಿಸಿತ್ತು. ಆದರೆ ಈಗಿನ ಭೌಗೋಳಿಕ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಮೊತ್ತವನ್ನು ವಾಪಸ್ ಪಡೆದಿರುವುದು ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಪಾಕಿಸ್ತಾನವು ನೆರೆಯ ರಾಷ್ಟ್ರಗಳಾದ ಇರಾನ್ ಮತ್ತು ಅಮೆರಿಕದ ಮೇಲೆ ಆರ್ಥಿಕ ನೆರವಿಗಾಗಿ ನಿರೀಕ್ಷೆ ಇಟ್ಟುಕೊಂಡಿತ್ತು. ಇರಾನ್ ಜೊತೆಗಿನ ಗಡಿ ಸಮಸ್ಯೆಗಳು ಮತ್ತು ಆಂತರಿಕ ಸಂಘರ್ಷಗಳ ಕಾರಣದಿಂದ ಅಲ್ಲಿಂದ ಬೆಂಬಲ ಸಿಗುವುದು ಕಷ್ಟಕರವಾಗಿದೆ. ಇತ್ತ ಅಮೆರಿಕ ಕೂಡ ಸಾಲದ ಮರುಪಾವತಿಯ ಶರತ್ತುಗಳನ್ನು ಕಠಿಣಗೊಳಿಸಿರುವುದರಿಂದ, ಪಾಕಿಸ್ತಾನಕ್ಕೆ ಹೊಸ ಸಾಲ ಪಡೆಯುವ ಹಾದಿಗಳು ಮುಚ್ಚಿದಂತಾಗಿವೆ. ಇದು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಸದ್ಯಕ್ಕೆ ಪಾಕಿಸ್ತಾನ ಸರ್ಕಾರವು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ (IMF) ಜೊತೆ ಮಾತುಕತೆ ನಡೆಸಿ ಈ ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸುತ್ತಿದೆ. ಯುಎಇ ನಂತಹ ಮಿತ್ರ ರಾಷ್ಟ್ರಗಳು ಕೂಡ ಸಾಲದ ಅವಧಿಯನ್ನು ವಿಸ್ತರಿಸುವ ಬದಲು ವಾಪಸ್ ಕೇಳುತ್ತಿರುವುದು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಆರ್ಥಿಕ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನವು ತನ್ನ ಆರ್ಥಿಕ ನೀತಿಗಳಲ್ಲಿ ಭಾರಿ ಬದಲಾವಣೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.

Continue Reading

Latest

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

VISTARANEWS.COM


on

ಅಮೆರಿಕವು ಇತ್ತೀಚೆಗಷ್ಟೇ ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಇರಾನ್ ಜಾಗತಿಕ ಸಂಘರ್ಷ ಶಮನಕ್ಕೆ ಹೊಸ ತಂತ್ರ ಹೂಡಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ವಾಷಿಂಗ್ಟನ್‌ಗೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಟೆಹ್ರಾನ್, ವಿಶ್ವದ ಅತ್ಯಂತ ಪ್ರಮುಖ ವ್ಯಾಪಾರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತಾವು ಸಿದ್ಧ ಎಂಬ ಆಶಯ ವ್ಯಕ್ತಪಡಿಸಿದೆ. ಪ್ರಸ್ತುತ ನಡೆಯುತ್ತಿರುವ ಉದ್ವಿಗ್ನತೆಯನ್ನು ತಣ್ಣಗಾಗಿಸಲು ಅತ್ಯಂತ ವಿವಾದಾತ್ಮಕವಾಗಿರುವ ಪರಮಾಣು ಕಾರ್ಯಕ್ರಮದ ಚರ್ಚೆಯನ್ನು ಸದ್ಯಕ್ಕೆ ಬದಿಗಿಟ್ಟು, ಮೊದಲು ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳ ಬಗ್ಗೆ ಮಾತುಕತೆ ನಡೆಸೋಣ ಎಂಬ ಪ್ರಸ್ತಾಪವನ್ನು ಇರಾನ್ ಮುಂದಿಟ್ಟಿದೆ.

ಇರಾನ್ ವಿಧಿಸಿರುವ ಈ ಹೊಸ ಷರತ್ತುಗಳ ಪ್ರಕಾರ, ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಬೇಕಾದರೆ ಅಮೆರಿಕವು ಮೊದಲು ಇರಾನ್ ಬಂದರುಗಳ ಮೇಲೆ ಹೇರಿರುವ ನೌಕಾ ದಿಗ್ಬಂಧನವನ್ನು (Naval Blockade) ಹಿಂಪಡೆಯಬೇಕು. ಅಲ್ಲದೆ, ತನ್ನ ಮೇಲೆ ಹೇರಲಾಗಿರುವ ಕಠಿಣ ಆರ್ಥಿಕ ನಿರ್ಬಂಧಗಳನ್ನು ತೆಗೆದುಹಾಕಿ, ಜಪ್ತಿ ಮಾಡಲಾಗಿರುವ ಇರಾನ್ ಆಸ್ತಿಗಳನ್ನು ಬಿಡುಗಡೆ ಮಾಡಬೇಕೆಂದು ಟೆಹ್ರಾನ್ ಒತ್ತಾಯಿಸಿದೆ. ಸದ್ಯಕ್ಕೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ಮತ್ತು ರಷ್ಯಾದಂತಹ ಸ್ನೇಹಿ ರಾಷ್ಟ್ರಗಳ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದ್ದು, ಇತರ ರಾಷ್ಟ್ರಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಇರಾನ್‌ನ ಈ ಷರತ್ತುಬದ್ಧ ಆಫರ್ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಉನ್ನತ ಮಟ್ಟದ ಭದ್ರತಾ ಸಭೆಯನ್ನು ಕರೆದಿದ್ದಾರೆ. ಇರಾನ್‌ನ ಪರಮಾಣು ಚಟುವಟಿಕೆಗಳ ಮೇಲೆ ಸಂಪೂರ್ಣ ನಿಯಂತ್ರಣ ಹೇರದೆ ಅಮೆರಿಕ ಯಾವುದೇ ಶಾಶ್ವತ ಒಪ್ಪಂದಕ್ಕೆ ಸಹಿ ಹಾಕುವುದು ಅನುಮಾನ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೂ, ಜಾಗತಿಕ ತೈಲ ಮಾರುಕಟ್ಟೆ ಮತ್ತು ಇಂಧನ ಬೆಲೆಗಳ ದೃಷ್ಟಿಯಿಂದ ಈ ಸಂಧಾನ ಪ್ರಕ್ರಿಯೆಯು ಅತ್ಯಂತ ಮಹತ್ವ ಪಡೆದಿದ್ದು, ಟ್ರಂಪ್ ಸರ್ಕಾರದ ಮುಂದಿನ ನಡೆ ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

Continue Reading
Advertisement
Latest34 minutes ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌