19 ಇಂಚು ಉದ್ದದ ಕಿವಿ ಹೊಂದಿರುವ ಮೇಕೆ ಮರಿಯ ಬಗ್ಗೆ ನಿಮಗೆಷ್ಟು ಗೊತ್ತು? - Vistara News

ವಿದೇಶ

19 ಇಂಚು ಉದ್ದದ ಕಿವಿ ಹೊಂದಿರುವ ಮೇಕೆ ಮರಿಯ ಬಗ್ಗೆ ನಿಮಗೆಷ್ಟು ಗೊತ್ತು?

ಪಾಕಿಸ್ತಾನದ ಕರಾಚಿಯಲ್ಲಿ ಮೇಕೆ ಮರಿಗೆ 19 ಇಂಚು ಉದ್ದದ ಕಿವಿಯಿದ್ದು, ಸಾಮಾಜಿಕ ಜಾಲತಾಣದಲ್ಲಿಇದು ಸಖತ್ ವೈರಲ್ ಆಗುತ್ತಿದೆ.

VISTARANEWS.COM


on

pakistan goat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕರಾಚಿ: ಇತ್ತೀಚಿಗೆ ಪಾಕಿಸ್ತಾನದ ಕರಾಚಿಯಲ್ಲಿ ಮೇಕೆ ಮರಿಯೊಂದು ಭಾರೀ ಫೇಮಸ್​ ಆಗಿದ್ದು, ಇದನ್ನು ನೋಡಲು ಜನ ಮುಗಿ ಬೀಳುತ್ತಿದ್ದಾರೆ. ಈ ಮೇಕೆ ಮರಿಯ ವಿಶೇಷತೆ ಏನೆಂದರೆ ಇದರ ಕಿವಿಗಳು ಸುಮಾರು 19 ಇಂಚು ಉದ್ದವಿದೆ!

ನ್ಯೂಬಿನ್​ ತಳಿಯ ಮೇಕೆ ಮರಿ ಇದಾಗಿದ್ದು, ಈ ಮೇಕೆ ಮರಿಗೆ “ಸಿಂಬಾʼ ಎಂದು ಹೆಸರಿಡಲಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಇದರ ಮಾಲೀಕ ಮೊಹಮ್ಮದ್ ಹಾಸನ್ ನರೇಜೋ “”ಮೊದಮೊದಲು ಈ ಮೇಕೆ ಮರಿಯನ್ನು ಕಂಡು ನಾವು ದಿಗ್ವ್ರಾಂತರಾಗಿದ್ದೇವು. ನಂತರ ಈ ಮೇಕೆ ಮರಿ ಸ್ಥಳೀಯವಾಗಿ ಭಾರೀ ಫೇಮಸ್​ ಆಯಿತು. ಇದನ್ನು ನೋಡುವುದಕ್ಕಾಗಿ ಸಾಕಷ್ಟು ಜನ ಮನೆ ಮುಂದೆ ಬರುತ್ತಾರೆʼʼ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ| ಉದ್ಯೋಗಿಯೊಬ್ಬ ರಜೆ ಕೇಳಿ ಬಾಸ್‌ಗೆ ಕಳಿಸಿದ ಇ-ಮೇಲ್‌ ವೈರಲ್‌; ಪ್ರಾಮಾಣಿಕತೆ ಮೆಚ್ಚುವಂಥದ್ದು !

ಸದ್ಯ ಮೇಕೆ ಮರಿಗೆ ಉದ್ದವಾದ ಕಿವಿಗಳಿಂದ ಯಾವುದೇ ತೊಂದರೆಯಾಗುತ್ತಿಲ್ಲ. ಇದು ಅನುವಂಶಿಕವಾಗಿ ಬಂದಿದ್ದು, ಮೇಕೆ ಮರಿ ನಡೆಯುವಾಗ ನೆಲಕ್ಕೆ ತಾಗುತ್ತದೆ. ಆದರೆ, ಇದರಿಂದ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ ಮೊಹಮ್ಮದ್. ಈ ಮೇಕೆ ಮರಿಯು ಗಿನ್ನಿಸ್ ದಾಖಲೆ ಬರೆಯುವುದರಲ್ಲಿ ಅನುಮಾನವಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಅದು ಕೂಡ ಆಗಬಹುದು ಎಂಬ ವಿಶ್ವಾಸ ಅವರದು.

ಸಾಮಾನ್ಯವಾಗಿ “ಸಿಂಬಾʼದಂತಹ ಮೇಕೆ ತಳಿಗಳು ಉದ್ದವಾದ ಕಿವಿಗಳಿಗೆ ಹೆಸರುವಾಸಿಯಾಗಿವೆ. ಉದ್ದ ಕಿವಿಗಳು ಬಿಸಿ ವಾತಾವರಣದಲ್ಲಿ ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತವೆ. ಈ ಮೇಕೆಮರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೇಕೆ ಮರಿಯ ಕಿವಿಯನ್ನ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

VISTARANEWS.COM


on

ಜಾಗತಿಕ ಆರ್ಥಿಕ ಬದಲಾವಣೆಗಳ ನಡುವೆ ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಸವಾಲು ಎದುರಾಗಿದೆ. ತಾನು ನೀಡಿದ್ದ 3.5 ಬಿಲಿಯನ್ ಡಾಲರ್ ಮೊತ್ತದ ಸಾಲವನ್ನು ಮರಳಿ ನೀಡುವಂತೆ ಸಂಯುಕ್ತ ಅರಬ್ ಸಂಸ್ಥಾನ (UAE) ಪಾಕಿಸ್ತಾನಕ್ಕೆ ತಿಳಿಸಿದೆ. ಈ ಹಿಂದೆ ಆರ್ಥಿಕ ಸ್ಥಿರತೆಗಾಗಿ ಯುಎಇ ಈ ಮೊತ್ತವನ್ನು ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್‌ನಲ್ಲಿ ಇರಿಸಿತ್ತು. ಆದರೆ ಈಗಿನ ಭೌಗೋಳಿಕ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಮೊತ್ತವನ್ನು ವಾಪಸ್ ಪಡೆದಿರುವುದು ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಪಾಕಿಸ್ತಾನವು ನೆರೆಯ ರಾಷ್ಟ್ರಗಳಾದ ಇರಾನ್ ಮತ್ತು ಅಮೆರಿಕದ ಮೇಲೆ ಆರ್ಥಿಕ ನೆರವಿಗಾಗಿ ನಿರೀಕ್ಷೆ ಇಟ್ಟುಕೊಂಡಿತ್ತು. ಇರಾನ್ ಜೊತೆಗಿನ ಗಡಿ ಸಮಸ್ಯೆಗಳು ಮತ್ತು ಆಂತರಿಕ ಸಂಘರ್ಷಗಳ ಕಾರಣದಿಂದ ಅಲ್ಲಿಂದ ಬೆಂಬಲ ಸಿಗುವುದು ಕಷ್ಟಕರವಾಗಿದೆ. ಇತ್ತ ಅಮೆರಿಕ ಕೂಡ ಸಾಲದ ಮರುಪಾವತಿಯ ಶರತ್ತುಗಳನ್ನು ಕಠಿಣಗೊಳಿಸಿರುವುದರಿಂದ, ಪಾಕಿಸ್ತಾನಕ್ಕೆ ಹೊಸ ಸಾಲ ಪಡೆಯುವ ಹಾದಿಗಳು ಮುಚ್ಚಿದಂತಾಗಿವೆ. ಇದು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಸದ್ಯಕ್ಕೆ ಪಾಕಿಸ್ತಾನ ಸರ್ಕಾರವು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ (IMF) ಜೊತೆ ಮಾತುಕತೆ ನಡೆಸಿ ಈ ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸುತ್ತಿದೆ. ಯುಎಇ ನಂತಹ ಮಿತ್ರ ರಾಷ್ಟ್ರಗಳು ಕೂಡ ಸಾಲದ ಅವಧಿಯನ್ನು ವಿಸ್ತರಿಸುವ ಬದಲು ವಾಪಸ್ ಕೇಳುತ್ತಿರುವುದು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಆರ್ಥಿಕ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನವು ತನ್ನ ಆರ್ಥಿಕ ನೀತಿಗಳಲ್ಲಿ ಭಾರಿ ಬದಲಾವಣೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.

Continue Reading

Latest

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

VISTARANEWS.COM


on

ಅಮೆರಿಕವು ಇತ್ತೀಚೆಗಷ್ಟೇ ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಇರಾನ್ ಜಾಗತಿಕ ಸಂಘರ್ಷ ಶಮನಕ್ಕೆ ಹೊಸ ತಂತ್ರ ಹೂಡಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ವಾಷಿಂಗ್ಟನ್‌ಗೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಟೆಹ್ರಾನ್, ವಿಶ್ವದ ಅತ್ಯಂತ ಪ್ರಮುಖ ವ್ಯಾಪಾರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತಾವು ಸಿದ್ಧ ಎಂಬ ಆಶಯ ವ್ಯಕ್ತಪಡಿಸಿದೆ. ಪ್ರಸ್ತುತ ನಡೆಯುತ್ತಿರುವ ಉದ್ವಿಗ್ನತೆಯನ್ನು ತಣ್ಣಗಾಗಿಸಲು ಅತ್ಯಂತ ವಿವಾದಾತ್ಮಕವಾಗಿರುವ ಪರಮಾಣು ಕಾರ್ಯಕ್ರಮದ ಚರ್ಚೆಯನ್ನು ಸದ್ಯಕ್ಕೆ ಬದಿಗಿಟ್ಟು, ಮೊದಲು ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳ ಬಗ್ಗೆ ಮಾತುಕತೆ ನಡೆಸೋಣ ಎಂಬ ಪ್ರಸ್ತಾಪವನ್ನು ಇರಾನ್ ಮುಂದಿಟ್ಟಿದೆ.

ಇರಾನ್ ವಿಧಿಸಿರುವ ಈ ಹೊಸ ಷರತ್ತುಗಳ ಪ್ರಕಾರ, ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಬೇಕಾದರೆ ಅಮೆರಿಕವು ಮೊದಲು ಇರಾನ್ ಬಂದರುಗಳ ಮೇಲೆ ಹೇರಿರುವ ನೌಕಾ ದಿಗ್ಬಂಧನವನ್ನು (Naval Blockade) ಹಿಂಪಡೆಯಬೇಕು. ಅಲ್ಲದೆ, ತನ್ನ ಮೇಲೆ ಹೇರಲಾಗಿರುವ ಕಠಿಣ ಆರ್ಥಿಕ ನಿರ್ಬಂಧಗಳನ್ನು ತೆಗೆದುಹಾಕಿ, ಜಪ್ತಿ ಮಾಡಲಾಗಿರುವ ಇರಾನ್ ಆಸ್ತಿಗಳನ್ನು ಬಿಡುಗಡೆ ಮಾಡಬೇಕೆಂದು ಟೆಹ್ರಾನ್ ಒತ್ತಾಯಿಸಿದೆ. ಸದ್ಯಕ್ಕೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ಮತ್ತು ರಷ್ಯಾದಂತಹ ಸ್ನೇಹಿ ರಾಷ್ಟ್ರಗಳ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದ್ದು, ಇತರ ರಾಷ್ಟ್ರಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಇರಾನ್‌ನ ಈ ಷರತ್ತುಬದ್ಧ ಆಫರ್ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಉನ್ನತ ಮಟ್ಟದ ಭದ್ರತಾ ಸಭೆಯನ್ನು ಕರೆದಿದ್ದಾರೆ. ಇರಾನ್‌ನ ಪರಮಾಣು ಚಟುವಟಿಕೆಗಳ ಮೇಲೆ ಸಂಪೂರ್ಣ ನಿಯಂತ್ರಣ ಹೇರದೆ ಅಮೆರಿಕ ಯಾವುದೇ ಶಾಶ್ವತ ಒಪ್ಪಂದಕ್ಕೆ ಸಹಿ ಹಾಕುವುದು ಅನುಮಾನ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೂ, ಜಾಗತಿಕ ತೈಲ ಮಾರುಕಟ್ಟೆ ಮತ್ತು ಇಂಧನ ಬೆಲೆಗಳ ದೃಷ್ಟಿಯಿಂದ ಈ ಸಂಧಾನ ಪ್ರಕ್ರಿಯೆಯು ಅತ್ಯಂತ ಮಹತ್ವ ಪಡೆದಿದ್ದು, ಟ್ರಂಪ್ ಸರ್ಕಾರದ ಮುಂದಿನ ನಡೆ ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

Continue Reading

Latest

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

VISTARANEWS.COM


on

ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ವಾರ್ಷಿಕ ‘ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್’ ವೇಳೆ ಸಂಭವಿಸಿದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಘಟನೆಯ ನಂತರ ಮಾಧ್ಯಮಗಳ ಮುಂದೆ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ಅಧ್ಯಕ್ಷ ವೃತ್ತಿ ಇಷ್ಟೊಂದು ಅಪಾಯಕಾರಿ ಎಂದು ಯಾರೂ ನನಗೆ ಎಚ್ಚರಿಸಿರಲಿಲ್ಲ. ಒಂದು ವೇಳೆ ನನ್ನ ಮಿತ್ರ ಮಾರ್ಕೊ ರೂಬಿಯೋ ಈ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೆ, ಬಹುಶಃ ನಾನು ಚುನಾವಣೆಗೆ ಸ್ಪರ್ಧಿಸುವ ಮುನ್ನ ಎರಡು ಬಾರಿ ಯೋಚಿಸುತ್ತಿದ್ದೆ” ಎಂದು ಹಾಸ್ಯ ಚಟಾಕಿ ಹಾರಿಸುವ ಮೂಲಕ ಭದ್ರತಾ ಲೋಪವನ್ನು ವ್ಯಂಗ್ಯವಾಡಿದ್ದಾರೆ.

ಅಮೆರಿಕದ ಇತಿಹಾಸವನ್ನು ಉಲ್ಲೇಖಿಸಿದ ಟ್ರಂಪ್, ಅಂಕಿಅಂಶಗಳ ಪ್ರಕಾರ ಸುಮಾರು 8% ಅಧ್ಯಕ್ಷರ ಮೇಲೆ ಗುಂಡಿನ ದಾಳಿ ನಡೆದಿದೆ ಮತ್ತು 5.8% ಅಧ್ಯಕ್ಷರು ಹತ್ಯೆಗೀಡಾಗಿದ್ದಾರೆ ಎಂಬ ಆಘಾತಕಾರಿ ಸತ್ಯವನ್ನು ಬಿಚ್ಚಿಟ್ಟರು. ಇದು ಜಗತ್ತಿನ ಅತ್ಯಂತ ಅಪಾಯಕಾರಿ ಉದ್ಯೋಗಗಳಲ್ಲಿ ಒಂದು ಎಂದು ಗಂಭೀರವಾಗಿ ನುಡಿದ ಅವರು, ಎಷ್ಟೇ ಅಪಾಯವಿದ್ದರೂ ಅಮೆರಿಕದ ಜನರ ಸೇವೆ ಮಾಡುವುದರಲ್ಲಿ ನನಗೆ ಹೆಮ್ಮೆ ಇದೆ ಎಂದು ತಮ್ಮ ದೇಶಪ್ರೇಮ ಮತ್ತು ಬದ್ಧತೆಯನ್ನು ಪುನರುಚ್ಚರಿಸಿದರು.

ಶನಿವಾರ ರಾತ್ರಿ ಭೋಜನಕೂಟದ ವೇಳೆ ಶಂಕಿತ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರೂ, ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಟ್ರಂಪ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರು. ಈ ಹಿಂದೆ ಅಬ್ರಹಾಂ ಲಿಂಕನ್ ಮತ್ತು ಜಾನ್ ಎಫ್ ಕೆನಡಿ ಸೇರಿದಂತೆ ನಾಲ್ವರು ಅಧ್ಯಕ್ಷರು ಇಂತಹ ದಾಳಿಗಳಿಗೆ ಬಲಿಯಾಗಿದ್ದ ಇತಿಹಾಸವಿದ್ದು, ಸದ್ಯ ಟ್ರಂಪ್ ಮೇಲಿನ ದಾಳಿಕೋರನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Continue Reading

Latest

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

VISTARANEWS.COM


on

ವಾಷಿಂಗ್ಟನ್‌: ಶ್ವೇತಭವನದ ವರದಿಗಾರರ ಔತಣಕೂಟದಲ್ಲಿ (White House Correspondents’ Dinner) ನಡೆದ ಗುಂಡಿನ ದಾಳಿಯ ತನಿಖೆಯಲ್ಲಿ ದಿಗಿಲುಗೊಳಿಸುವ ಮಾಹಿತಿಗಳು ಹೊರಬಂದಿವೆ. ಭದ್ರತಾ ಪಡೆಗಳಿಂದ ಬಂಧಿಸಲ್ಪಟ್ಟ ದಾಳಿಕೋರ, 31 ವರ್ಷದ ಕೋಲ್ ಅಲೆನ್ ಒಬ್ಬ ಸಾಮಾನ್ಯ ಅತಿಥಿಯಂತೆ ಹೋಟೆಲ್ ಪ್ರವೇಶಿಸಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕ್ಯಾಲಿಫೋರ್ನಿಯಾ ಮೂಲದ ಈತ ವೃತ್ತಿಯಲ್ಲಿ ಶಿಕ್ಷಕ ಮತ್ತು ವಿಡಿಯೋ ಗೇಮ್ ಡೆವಲಪರ್ ಆಗಿದ್ದು, ನಾಸಾದಲ್ಲಿ ಇಂಟರ್ನ್‌ಶಿಪ್ ಮಾಡಿದ ಹಾಗೂ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಪಡೆದ ಉನ್ನತ ಶಿಕ್ಷಣವಂತ ಎಂಬುದು ಭದ್ರತಾ ಸಂಸ್ಥೆಗಳಿಗೆ ದೊಡ್ಡ ಶಾಕ್ ನೀಡಿದೆ. ಈತ ಡೆಮೋಕ್ರಾಟ್ ಬೆಂಬಲಿಗನಾಗಿದ್ದು, ಕಮಲ ಹ್ಯಾರಿಸ್ ಪ್ರಚಾರಕ್ಕೂ ದೇಣಿಗೆ ನೀಡಿದ್ದ ಎನ್ನಲಾಗಿದೆ.

ದಾಳಿಕೋರ ಕೋಲ್ ಅಲೆನ್ ಹೋಟೆಲ್‌ಗೆ ನುಗ್ಗಲು ಅತೀ ಚಾಣಾಕ್ಷತನದ ಪ್ಲ್ಯಾನ್ ಹೂಡಿದ್ದ. ಡಿನ್ನರ್ ಕಾರ್ಯಕ್ರಮ ಆರಂಭವಾಗುವ ಮೊದಲೇ ಆತ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿ ಅತಿಥಿಯಾಗಿ ಒಳಪ್ರವೇಶಿಸಿದ್ದ. ಸಾಮಾನ್ಯ ಅತಿಥಿಗಳು ಹೋಟೆಲ್ ಪ್ರವೇಶಿಸುವಾಗ ಅಲ್ಲಿ ಬಿಗಿಯಾದ ಭದ್ರತಾ ತಪಾಸಣೆ ಇಲ್ಲದಿದ್ದನ್ನು ಬಳಸಿಕೊಂಡ ಅಲೆನ್, ಮೆಷಿನ್ ಗನ್, ಹ್ಯಾಂಡ್ ಗನ್ ಮತ್ತು ಚಾಕುಗಳನ್ನು ಸುಲಭವಾಗಿ ತನ್ನ ಕೋಣೆಗೆ ತಂದಿದ್ದ. ಹೋಟೆಲ್‌ನ ಲಾಬಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಕಠಿಣ ತಪಾಸಣೆ ಇರದ ಕಾರಣ, ಆತ ಶಸ್ತ್ರಸಜ್ಜಿತನಾಗಿ ಗಣ್ಯರು ಸೇರಿದ್ದ ಬಾಲ್‌ರೂಮ್ ಕಡೆಗೆ ನುಗ್ಗಲು ಸಾಧ್ಯವಾಯಿತು.

ಹೋಟೆಲ್‌ನಿಂದ ಬಾಲ್‌ರೂಮ್‌ಗೆ ಹೋಗುವ ದಾರಿಯಲ್ಲಿ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ನಿರ್ಮಿಸಿದ್ದ ಮ್ಯಾಗ್ನೆಟೋಮೀಟರ್ ತಪಾಸಣಾ ಕೇಂದ್ರದ ಬಳಿ ಅಲೆನ್ ಏಕಾಏಕಿ ಏಳೆಂಟು ಬಾರಿ ಗುಂಡು ಹಾರಿಸಿದ್ದಾನೆ. ಈ ವೇಳೆ ಜಾಗೃತರಾದ ಅಧಿಕಾರಿಗಳು ಪ್ರಾಣದ ಹಂಗು ತೊರೆದು ಆತನನ್ನು ಎದುರಿಸಿ, ಆತ ಮತ್ತಷ್ಟು ಗುಂಡು ಹಾರಿಸದಂತೆ ಕೆಳಕ್ಕೆ ತಳ್ಳಿದ್ದಾರೆ. ಈ ಸಂಘರ್ಷದಲ್ಲಿ ಒಬ್ಬ ಏಜೆಂಟ್‌ಗೆ ಗುಂಡು ತಗುಲಿತಾದರೂ ಬುಲೆಟ್ ಪ್ರೂಫ್ ಜಾಕೆಟ್ ಅವರನ್ನು ರಕ್ಷಿಸಿದೆ. ಭದ್ರತಾ ಪಡೆಗಳು ದಾಳಿಕೋರನನ್ನು ಹತ್ತಿಕ್ಕುತ್ತಿದ್ದಂತೆಯೇ, ಮತ್ತೊಂದು ತಂಡ ಅಧ್ಯಕ್ಷ ಟ್ರಂಪ್ ಅವರನ್ನು ಸುರಕ್ಷಿತವಾಗಿ ಶ್ವೇತಭವನಕ್ಕೆ ಕರೆದೊಯ್ದಿದೆ. ಈ ಘಟನೆಯು ಅಮೆರಿಕದ ಅತ್ಯುನ್ನತ ಭದ್ರತಾ ವ್ಯವಸ್ಥೆಯ ಲೋಪಗಳನ್ನು ಎತ್ತಿ ತೋರಿಸಿದೆ.

Continue Reading
Advertisement
Latest7 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest7 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest8 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ9 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest9 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest10 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest11 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest13 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ14 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest14 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌