Nikki Haley: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣೆ; ಭಾರತೀಯ ಮೂಲದ ನಿಕ್ಕಿ ಹ್ಯಾಲೆ ವಿರುದ್ಧ ಗೆದ್ದ ಟ್ರಂಪ್‌ - Vistara News

ವಿದೇಶ

Nikki Haley: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣೆ; ಭಾರತೀಯ ಮೂಲದ ನಿಕ್ಕಿ ಹ್ಯಾಲೆ ವಿರುದ್ಧ ಗೆದ್ದ ಟ್ರಂಪ್‌

Nikki Haley: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಕ್ಷಿಣ ಕೆರೊಲಿನಾದಲ್ಲಿ ನಡೆದ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಆಯ್ಕೆಯ ಸ್ಪರ್ಧೆಯಲ್ಲಿ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಅವರನ್ನು ಸೋಲಿಸಿದ್ದಾರೆ.

VISTARANEWS.COM


on

Nikki trump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ (United States presidential election)ಗೆ ಜಿದ್ದಾಜಿದ್ದಿನ ಹೋರಾಟ ಕಂಡು ಬರುತ್ತಿದೆ. ಈ ಚುನಾವಣೆ ನವೆಂಬರ್‌ 5ರಂದು ನಡೆಯಲಿದ್ದು, ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಇದೀಗ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ದಕ್ಷಿಣ ಕೆರೊಲಿನಾ (South Carolina)ದಲ್ಲಿ ನಡೆದ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಆಯ್ಕೆಯ ಸ್ಪರ್ಧೆಯಲ್ಲಿ ಭಾರತೀಯ ಮೂಲದ ನಿಕ್ಕಿ ಹ್ಯಾಲೆ (Nikki Haley) ಅವರನ್ನು ಸೋಲಿಸಿದ್ದಾರೆ. ಈ ಮೂಲಕ ಅಧ್ಯಕ್ಷ ಜೋ ಬೈಡನ್‌ (Joe Biden) ವಿರುದ್ಧ ಸ್ಪರ್ಧಿಸಲು ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ನಾಮ ನಿರ್ದೇಶನಕ್ಕಾಗಿ ನಿಕ್ಕಿ ಹ್ಯಾಲೆ ಕಣದಲ್ಲಿದ್ದರು. ಆದರೆ ಇದೀಗ ಮಾಜಿ ಅಧ್ಯಕ್ಷ, 77 ವರ್ಷದ ಟ್ರಂಪ್‌ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಅವರನ್ನು ಸೋಲಿಸಿದ್ದಾರೆ. ಕೆಲವು ದಿನಗಳ ಹಿಂದೆ ನೆವಡಾ ರಾಜ್ಯದಲ್ಲಿ ನಡೆದ ಸ್ಪರ್ಧೆಯಲ್ಲಿಯೂ ಟ್ರಂಪ್‌ ವಿಜಯ ಸಾಧಿಸಿದ್ದರು.

ಆರೋಪಿಸಿದ್ದ ನಿಕ್ಕಿ ಹ್ಯಾಲೆ

ನೆವಡಾದಲ್ಲಿ ನಡೆದ ಚುನಾವಣೆಯಲ್ಲಿ ನಿಕ್ಕಿ ಹ್ಯಾಲೆ ಸ್ಪರ್ಧಿಸಿರಲಿಲ್ಲ. ʼʼಚುನಾವಣೆ ನ್ಯಾಯಯುತವಾಗಿ ನಡೆದಿಲ್ಲ. ಟ್ರಂಪ್‌ ಗೆಲುವಿಗೆ ಅನುಕೂಲವಾಗುವಂತೆ ಚುವಾವಣೆಯನ್ನು ಆಯೋಜಿಸಲಾಗಿತ್ತುʼʼ ಎಂದು ಅವರು ಆರೋಪಿಸಿದ್ದರು. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮ ನಿರ್ದೇಶನಗೊಳ್ಳಲು ಟ್ರಂಪ್‌ 1,215 ಪ್ರತಿನಿಧಿಗಳ ಬೆಂಬಲ ಪಡೆಯಬೇಕು. ಮುಂದಿನ ತಿಂಗಳ ವೇಳೆಗೆ ಅವರು ಈ ಸಂಖ್ಯೆಯ ಬೆಂಬಲ ಪಡೆಯಬಹುದು ಎನ್ನುವ ನಿರೀಕ್ಷೆ ಇದೆ.

ಗವರ್ನರ್‌ ಮತ್ತು ವಿಶ್ವಸಂಸ್ಥೆಯ ರಾಯಭಾರಿಯಾಗಿದ್ದ ನಿಕ್ಕಿ ಹ್ಯಾಲೆ ದಕ್ಷಿಣ ಕೆರೊಲಿನಾದ ಜಿದ್ದಾಜಿದ್ದಿನ ಹೋರಾಟದಲ್ಲಿ ಟ್ರಂಪ್‌ ವಿರುದ್ಧ ಸೋಲೊಪ್ಪಿಕೊಂಡರು. ಇದು ಅವರ ರಾಜಕೀಯ ಆಕಾಂಕ್ಷೆಗಳಿಗೆ ಬಿದ್ದ ದೊಡ್ಡ ಹೊಡೆತ ಎಂದು ಹೇಳಲಾಗುತ್ತಿದೆ. ಆದರೆ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಮತ್ತೆ ಹೋರಾಟದ ಸೂಚನೆ ನೀಡಿದ್ದಾರೆ.

ಕಣದಿಂದ ಹಿಂದೆ ಸರಿದಿದ್ದ ವಿವೇಕ್ ರಾಮಸ್ವಾಮಿ

ವಿಶೇಷ ಎಂದರೆ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಗೆ ಮುಂದಾಗಿದ್ದ ಭಾರತೀಯ ಮೂಲದ ಬಯೋಟೆಕ್ ಉದ್ಯಮಿ ವಿವೇಕ್ ರಾಮಸ್ವಾಮಿ ಇತ್ತೀಚೆಗೆ ರೇಸ್‌ನಿಂದ ಹೊರಗೆ ಬಂದು ಟ್ರಂಪ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದರು. ಭಾರತ ಮೂಲದ ಅಮೆರಿಕನ್​ ಪ್ರಜೆ, ಆರೋಗ್ಯ ಮತ್ತು ಬಯೋಟೆಕ್​ ವಲಯದಲ್ಲಿ ಖ್ಯಾತ ಉದ್ಯಮಿ, ಲೇಖಕ ವಿವೇಕ್​ ರಾಮಸ್ವಾಮಿ ಈ ಹಿಂದೆ ತಾವು ಅಭ್ಯರ್ಥಿ ಎಂದು ಪ್ರಕಟಿಸಿದ್ದರು. ಆದರೆ ಅಯೋವಾದ ಲೀಡ್‌ ಆಫ್ ಕಾಕಸ್‌ಗಳಲ್ಲಿ ಅವರು ನಿರೀಕ್ಷಿತ ಬೆಂಬಲ ಪಡೆಯದ ಕಾರಣ ಶ್ವೇತಭವನದ ಸ್ಪರ್ಧೆಯಿಂದ ಹೊರಗುಳಿದಿದ್ದರು.

ಇದನ್ನೂ ಓದಿ: Vivek Ramaswamy: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ವಿವೇಕ್​ ರಾಮಸ್ವಾಮಿ

ಅಮೆರಿಕದ ಅತ್ಯಂತ ಹಳೇ ಪಕ್ಷವಾಗಿರುವ ರಿಪಬ್ಲಿಕನ್​ ಪಾರ್ಟಿ ಸದಸ್ಯರಾಗಿರುವ ವಿವೇಕ್​ ರಾಮಸ್ವಾಮಿ ಈ ಹಿಂದೆ ಮಾಧ್ಯಮದೊಂದಿಗೆ ಮಾತನಾಡುತ್ತ, “ಅಮೆರಿಕ ದೇಶದ ಆದರ್ಶಗಳನ್ನು ಪುನರುಜ್ಜೀವನಗೊಳಿಸುವ ಸಲುವಾಗಿ, ನಾನು ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲ್ಲಲು ಬಯಸುತ್ತೇನೆ ಎಂಬುದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದರು. ಹಾಗೇ ಬಳಿಕ ಟ್ವೀಟ್ ಮಾಡಿದ್ದ ಅವರು “ನಾವು ವೈವಿದ್ಯತೆಯನ್ನು ಪ್ರೀತಿಸಿ ಒಪ್ಪಿಕೊಳ್ಳುವ ಭರದಲ್ಲಿ 250 ವರ್ಷಗಳ ಹಿಂದಿನ, ಒಗ್ಗಟ್ಟಿನ ಸಿದ್ಧಾಂತಗಳನ್ನೇ ಮರೆತಿದ್ದೇವೆ. ಅದನ್ನು ಮತ್ತೆ ಪುನರುಜ್ಜೀವನಗೊಳಿಸಲು ನಾನು ಅಧ್ಯಕ್ಷನಾಗಲು ಬಯಸುತ್ತೇನೆ” ಎಂದಿದ್ದರು. ವಿವೇಕ್​ ರಾಮಸ್ವಾಮಿ ಅವರ ತಂದೆ-ತಾಯಿ ಮೂಲತಃ ಕೇರಳದವರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Narendra Modi: ನರೇಂದ್ರ ಮೋದಿ ಅವರು ಕೆಲ ದಿನಗಳ ಹಿಂದಷ್ಟೇ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿಯಾಗಿದ್ದರು. ಇದೇ ಫೋಟೊವನ್ನು ಇಟ್ಟುಕೊಂಡು ಮೋದಿ ಅವರನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ ಈಗ ಸೆಲ್ಫ್‌ಗೋಲ್‌ ಹೊಡೆದುಕೊಂಡಿದೆ. ಮೋದಿ ಕುರಿತ ಲೇವಡಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟ್‌ಅನ್ನು ಕೇರಳ ಕಾಂಗ್ರೆಸ್‌ ಡಿಲೀಟ್‌ ಮಾಡಿದೆ.

VISTARANEWS.COM


on

Narendra Modi
Koo

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡುವ ಭರದಲ್ಲಿ ಕೇರಳ ಕಾಂಗ್ರೆಸ್‌ (Kerala Congress) ಘಟಕವು ಪ್ರಮಾಣದ ಎಸಗಿದ್ದು, ತಪ್ಪಿನ ಅರಿವಾಗಿ ಬಳಿಕ ಕ್ಷಮೆಯಾಚಿಸಿದೆ. ಇತ್ತೀಚೆಗೆ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯ ವೇಳೆ ನರೇಂದ್ರ ಮೋದಿ (Narendra Modi) ಅವರು ಪೋಪ್‌ ಫ್ರಾನ್ಸಿಸ್‌ (Pope Francis) ಅವರನ್ನು ಭೇಟಿಯಾಗಿದ್ದರು. ಇದರ ಕುರಿತು ಲೇವಡಿ ಮಾಡಿದ ಕೇರಳ ಕಾಂಗ್ರೆಸ್‌, “ಕೊನೆಗೂ ಪೋಪ್‌ ಫ್ರಾನ್ಸಿಸ್‌ ಅವರಿಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು” ಎಂಬುದಾಗಿ ಪೋಸ್ಟ್‌ ಮಾಡಿದೆ. ಇದಾದ ನಂತರ ಜನಾಕ್ರೋಶ ವ್ಯಕ್ತವಾಗಿದ್ದು, ಬಳಿಕ ಪೋಸ್ಟ್‌ಅನ್ನು ಡಿಲೀಟ್‌ ಮಾಡಿದೆ.

ಇಟಲಿಯಲ್ಲಿ ನರೇಂದ್ರ ಮೋದಿ ಹಾಗೂ ಪೋಪ್‌ ಫ್ರಾನ್ಸಿಸ್‌ ಅವರು ಭೇಟಿಯಾಗಿರುವ ಫೋಟೊವನ್ನು ಕೇರಳ ಕಾಂಗ್ರೆಸ್‌ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿತ್ತು. ಆ ಮೂಲಕ ನರೇಂದ್ರ ಮೋದಿ ಅವರೇ ದೇವರಾಗಿದ್ದು, ಅವರನ್ನು ಭೇಟಿಯಾಗುವ ಅವಕಾಶವು ಪೋಪ್‌ ಅವರದ್ದಾಗಿದೆ ಎಂಬಂತೆ ಕಾಂಗ್ರೆಸ್‌ ಲೇವಡಿ ಮಾಡಿತ್ತು. ಚುನಾವಣೆ ಪ್ರಚಾರದ ವೇಳೆ, “ನಿಮ್ಮ ಸೇವೆ ಮಾಡಲಿ ಎಂಬುದಾಗಿ ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂಬುದಾಗಿ ಮೋದಿ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್‌ ಲೇವಡಿ ಮಾಡಿತ್ತು.

ಕೇರಳ ಕಾಂಗ್ರೆಸ್‌ ಪೋಸ್ಟ್‌ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. “ಇಸ್ಲಾಮಿಕ್‌ ಮೂಲಭೂತವಾದಿಗಳು ಹಾಗೂ ನಗರ ನಕ್ಸಲರು ಕೇರಳ ಕಾಂಗ್ರೆಸ್‌ನ ಎಕ್ಸ್‌ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ದೇಶದ ನಾಯಕರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದು ಇವರ ಕೆಲಸವೇ ಆಗಿದೆ. ಈಗ ಗೌರವಾನ್ವಿತ ಪೋಪ್‌ ಹಾಗೂ ಕ್ರೈಸ್ತ ಸಮುದಾಯದ ಕುರಿತು ಕೂಡ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದನ್ನು ಇವರು ಬಿಟ್ಟಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ರೈಸ್ತರಿಗೆ ಕಾಂಗ್ರೆಸ್‌ ಅವಮಾನ ಮಾಡಲಾಗಿದೆ ಎಂದೇ ಬಿಜೆಪಿ ನಾಯಕರು ಚಾಟಿ ಬೀಸಿದರು.

ಕೇರಳ ಕಾಂಗ್ರೆಸ್‌ನ ಪೋಸ್ಟ್‌ ವೈರಲ್‌ ಆಗಿ, ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಲೇ ಪೋಸ್ಟ್‌ಅನ್ನು ಡಿಲೀಟ್‌ ಮಾಡಲಾಗಿದೆ. ಅಷ್ಟೇ ಅಲ್ಲ, “ಯಾರ ಭಾವನೆಗಳಿಗೂ ಧಕ್ಕೆ ತರುವುದು ನಮ್ಮ ಉದ್ದೇಶವಾಗಿರಲಿಲ್ಲ. ಪೋಸ್ಟ್‌ನಿಂದ ಬೇಸರ ಆಗಿದ್ದರೆ ಕ್ಷಮೆಯಾಚಿಸುತ್ತೇವೆ” ಎಂಬುದಾಗಿ ಕೇರಳ ಕಾಂಗ್ರೆಸ್‌ ಪ್ರಕಟಣೆ ಹೊರಡಿಸಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ಜನಸಂಖ್ಯೆಯಲ್ಲಿ ಮೂರನೇ ಅತಿದೊಡ್ಡ ಸಮುದಾಯ ಎನಿಸಿದೆ. ಕೆಲವು ಕ್ರೈಸ್ತ ಸಮುದಾಯದ ಮುಖಂಡರು ಕೂಡ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Continue Reading

ಪ್ರಮುಖ ಸುದ್ದಿ

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಈ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದರೂ ಪತ್ನಿಗೆ ಕಾಣಿಸಿವೆ. ಇದರಿಂದಾಗಿ ಕಂಪನಿ ವಿರುದ್ಧವೇ ಉದ್ಯಮಿಯು ಮೊಕದ್ದಮೆ ಹೂಡಿದ್ದಾನೆ.

VISTARANEWS.COM


on

Sex Worker
Koo

ಲಂಡನ್:‌ ಸುರಕ್ಷತೆಯ ದೃಷ್ಟಿಯಿಂದ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಜನ ಹೆಚ್ಚಿನ ದುಡ್ಡು ಕೊಟ್ಟು ಖರೀದಿಸುತ್ತಾರೆ. ಐಫೋನ್‌ ಹಾಗೂ ಐಮ್ಯಾಕ್‌ಗಳನ್ನು ಇದೇ ಕಾರಣಕ್ಕಾಗಿ ಖರೀದಿಸುತ್ತಾರೆ. ಆದರೆ, ಲಂಡನ್‌ನಲ್ಲಿ ವ್ಯಕ್ತಿಯೊಬ್ಬ ಸುರಕ್ಷತೆಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ ಆ್ಯಪಲ್‌ ಕಂಪನಿ (Apple Company) ವಿರುದ್ಧವೇ ಮೊಕದ್ದಮೆ ಹೂಡಿದ್ದಾನೆ. ವ್ಯಕ್ತಿಯೊಬ್ಬ ಐಮ್ಯಾಕ್‌ನಲ್ಲಿ ಲೈಂಗಿಕ ಕಾರ್ಯಕರ್ತೆ (Sex Worker) ಜತೆ ಚಾಟ್‌ ಮಾಡಿದ್ದು, ಆ ಮೆಸೇಜ್‌ಗಳನ್ನು ಬಳಿಕ ಡಿಲೀಟ್‌ ಮಾಡಿದ್ದಾನೆ. ಆದರೆ, ಪರ್ಮನೆಂಟ್‌ ಆದ ಮೆಸೇಜ್‌ಗಳು ಹೆಂಡತಿಗೆ ಕಾಣಿಸಿದ ಕಾರಣ ವ್ಯಕ್ತಿಯು ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಐಮ್ಯಾಕ್‌ನಲ್ಲಿ ಕಳುಹಿಸಿದ ಮೆಸೇಜ್‌ಗಳನ್ನು ಆತ ತನ್ನ ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದಾನೆ. ಪರ್ಮನೆಂಟ್‌ ಆಗಿ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದ್ದಾನೆ. ಆದರೂ, ಈ ಮೆಸೇಜ್‌ಗಳನ್ನು ಪತ್ನಿಯು ಪತ್ತೆಹಚ್ಚಿದ್ದಾರೆ. ಇದು ಉದ್ಯಮಿಯ ಪಿತ್ತ ನೆತ್ತಿಗೇರುವಂತೆ ಮಾಡಿದೆ.

Hiring to Apple

ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ

ಪತಿಯು ರೆಡ್‌ಲೈಟ್‌ ಏರಿಯಾದ ಲಲನೆಯರ ಜತೆ ‘ಸರಸ’ದ ಮೆಸೇಜ್‌ಗಳನ್ನು ಮಾಡಿರುವುದು ಪತ್ತೆ ಹಚ್ಚಿದ ಪತ್ನಿಯು ಈಗ ವಿಚ್ಛೇದನ ಅರ್ಜಿ ಹಾಕಿದ್ದಾರೆ. ಅಷ್ಟೇ ಅಲ್ಲ, ಸುಮಾರು 52 ಕೋಟಿ ರೂ. (50 ಲಕ್ಷ ಪೌಂಡ್ಸ್)‌ ಜೀವನಾಂಶ ಕೊಡಬೇಕು ಎಂದು ಕೋರ್ಟ್‌ ಮೊರೆಹೋಗಿದ್ದಾರೆ. ಇದು ಈಗ ಹೆಸರು ಹೇಳಲು ಇಚ್ಛಿಸದ ಉದ್ಯಮಿಗೆ ಪೇಚಾಟ ತಂದಿದೆ. ಹೆಂಡತಿ ಇದ್ದರೂ ಬೇರೆ ಹೆಣ್ಣುಮಕ್ಕಳ ಜತೆ ಚಾಟ್‌ ಮಾಡಿದ್ದರಿಂದ ಕುಟುಂಬಸ್ಥರು ಹಾಗೂ ಗೆಳೆಯರ ಎದುರು ಅವಮಾನ ಆಗಿದೆ. ಇದರ ಮಧ್ಯೆಯೇ ಪತ್ನಿಯು ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಆ್ಯಪಲ್‌ ವಿರುದ್ಧ ಕೇಸ್‌ ಏಕೆ?

ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳನ್ನು ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದರಿಂದ ಉದ್ಯಮಿಯ ಪತ್ನಿಗೆ ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳು ಸಿಕ್ಕಿವೆ. ಹಾಗಾಗಿ, “ಲಿಂಕ್‌ ಆದ ಡಿವೈಸ್‌ಗಳ ಮೂಲಕ ಕಳುಹಿಸಿದ ಮೆಸೇಜ್‌ಗಳನ್ನು ಎಲ್ಲ ಕಡೆಯೂ ಡಿಲೀಟ್‌ ಮಾಡಬೇಕು ಎಂಬುದರ ಕುರಿತು ಆ್ಯಪಲ್‌ ಕಂಪನಿಯು ಗ್ರಾಹಕರಿಗೆ ಮಾಹಿತಿ ನೀಡಿಲ್ಲ. ಇದರಿಂದ ನಾನೀಗ ನನ್ನ ಪತ್ನಿ, ಅಪಾರ ಪ್ರಮಾಣದ ಹಣ ಕಳೆದುಕೊಳ್ಳುವಂತಾಗಿದೆ” ಎಂದು ಉದ್ಯಮಿಯು ಕೋರ್ಟ್‌ ಮೊರೆ ಹೋಗಿದ್ದಾನೆ.

ಇದನ್ನೂ ಓದಿ: Murder Case : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಚಟ್ಟ ಕಟ್ಟಿದಳು ಹೆಂಡತಿ

Continue Reading

Latest

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Viral Video: ಕಟ್ಟಿಕೊಂಡ ಗಂಡನ ಜೊತೆ ಈಗ ಬಾಳ್ವೆ ನಡೆಸುವುದೇ ಕಷ್ಟವಾಗಿರುವ ಈ ದಿನಗಳಲ್ಲಿ ಇಲ್ಲೊಬ್ಬಳು ಯುವತಿ ಏಳು ಮಂದಿ ಪುರುಷರ ಜೊತೆ ಸುಖವಾಗಿ ಇದ್ದೇನೆ ಎಂದು ಹೇಳುವ ಮೂಲಕ ಎಲ್ಲರ ಗಮನವನ್ನು ತನ್ನತ್ತ ಸೆಳೆದುಕೊಂಡಿದ್ದಾಳೆ. ಪ್ರೀತಿಸಿದ ಯುವಕ ದೂರಾದ ಬಳಿಕ ಈಕೆ ಸಂಬಂಧ ಬೆಳೆಸಿದ್ದು ವಯಸ್ಸಾದ ಪುರುಷರ ಜೊತೆಯಂತೆ. ಇನ್ನು ಈ ಸಂಬಂಧ ಹೊಂದಲು ಕಾರಣವೇನು ಎಂಬುದನ್ನು ಕೇಳಿದ್ರೆ ನೀವು ಶಾಕ್‌ ಆಗ್ತೀರಿ!

VISTARANEWS.COM


on

Viral Video
Koo

ಕೊಲಂಬಿಯಾ : ತಾಳಿ ಕಟ್ಟಿಸಿಕೊಂಡ ಒಬ್ಬನ ಜೊತೆ ಸರಿಯಾಗಿ ಬಾಳ್ವೆ ನಡೆಸದೇ ಮದುವೆಯಾಗಿ ಮಾರನೇ ದಿನಕ್ಕೆ ವಿಚ್ಛೇದನ ನೀಡುವ ಹೆಣ್ಣಿನ ಬಗ್ಗೆ, ಮನೆಯಲ್ಲಿ ಹೆಂಡತಿಯಿದ್ದರೂ, ಹೊರಗಡೆ ಸಂಬಂಧ ಇಟ್ಟುಕೊಂಡ ಗಂಡಸಿನ ಬಗ್ಗೆ ಕೇಳಿರುತ್ತೇವೆ, ನೋಡಿರುತ್ತೇವೆ. ಇನ್ನು ನಮ್ಮ ಪುರಾಣದ ಪುಟ ತಿರುವಿ ಹಾಕಿದರೆ ಮಹಾಭಾರತದಲ್ಲಿ ದ್ರೌಪದಿಗೆ ಐದು ಮಂದಿ ಪತಿಯರಿರುವುದನ್ನೂ ಕೇಳಿರುತ್ತೇವೆ. ಆದರೆ ಕಲಿಯುಗದ ಈ ಮಹಿಳೆಯೊಬ್ಬಳು 7 ಮಂದಿ ಪುರುಷರ ಜೊತೆ ಸುಖವಾಗಿ ಕಾಲ ಕಳೆಯುತ್ತಿರುವ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ (Viral Video) ಆಗಿದ್ದು, ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.

ವರದಿಯ ಪ್ರಕಾರ ಲೀನಾ ಎಂಬ ಮಹಿಳೆ ಕೊಲಂಬಿಯಾದ ಬ್ಯಾರನ್ ಕ್ವಿಲ್ಲಾ ನಗರದಲ್ಲಿ ವಾಸವಾಗಿದ್ದಳು. ಆಕೆಗೆ 7 ಮಂದಿ ಗೆಳೆಯರಿದ್ದು, ಎಲ್ಲರೂ ವಯಸ್ಸಾದ ಮುದುಕರಾಗಿದ್ದಾರೆ. ಅಲ್ಲದೇ ಅವರ ಖರ್ಚುವೆಚ್ಚವನ್ನು ಆಕೆಯೇ ನೋಡಿಕೊಳ್ಳುತ್ತಾಳೆ ಎನ್ನಲಾಗಿದೆ. ಇನ್ನು ಅವರ ಜೊತೆಗೆ ಸಂಬಂಧ ಹೊಂದಲು ಕಾರಣವೇನು ಎಂಬುದನ್ನು ಆಕೆ ಬಿಚ್ಚಿಟ್ಟಿದ್ದಾಳೆ.

ಮಹಿಳೆಯ ಸಂದರ್ಶನದ ವಿಡಿಯೊವನ್ನು ಯೂಟ್ಯೂಬ್ ಚಾನೆಲ್‌ವೊಂದು ಪೋಸ್ಟ್ ಮಾಡಿದ್ದು, ಈ ವಿಡಿಯೊದಲ್ಲಿ ಮಹಿಳೆ ತಿಳಿಸಿದಂತೆ ಆಕೆಗೆ ತನ್ನ ಪ್ರಿಯತಮನ ಜೊತೆಗಿನ ಸಂಬಂಧದಲ್ಲಿ ಸಮಸ್ಯೆಯಾದ ಕಾರಣ ಆಕೆ ತನ್ನ ಜೀವನವನ್ನು ಸಾಗಿಸಲು ಪಿಂಚಣಿ ಹೊಂದಿರುವ ವಯಸ್ಸಾದ ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಲು ಶುರುಮಾಡಿದಳಂತೆ. ಆಕೆ ಮೊದಲು ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳಂತೆ. ಆದರೆ ಅವರ ನಡುವೆ ಸಮಸ್ಯೆ ಉಂಟಾದ ಕಾರಣ ಇಬ್ಬರೂ ದೂರವಾದರು. ಹೀಗಿರುವಾಗ ಒಂದು ದಿನ ಆಕೆಯ ಪಕ್ಕದ ಮನೆಯ ವಯಸ್ಸಾದ ವ್ಯಕ್ತಿಯೊಬ್ಬ ಅವಳ ಜೊತೆ ಚೆಲ್ಲಾಟವಾಡಲು ಶುರುಮಾಡಿದನಂತೆ. ಆಕೆಗೆ ಆರ್ಥಿಕ ಸಮಸ್ಯೆ ಇರುವ ಕಾರಣ ಅವನ ಚೆಲ್ಲಾಟವನ್ನು ಸಹಿಸಿಕೊಂಡಳು. ಮುಂದೆ ಇದನ್ನೇ ದಾರಿಯಾಗಿಸಿಕೊಂಡ ಆಕೆ ಪಿಂಚಣಿ ಹಣ ಹೊಂದಿರುವ ವಯಸ್ಸಾದ ವ್ಯಕ್ತಿಯ ಜೊತೆ ಸಂಬಂಧವಿರಿಸಿಕೊಳ್ಳುವುದಕ್ಕೆ ಶುರುಮಾಡಿದ್ದಾಳೆ. ಅದಕ್ಕಾಗಿ ಅವಳು ಉದ್ಯಾನವನ ಮತ್ತು ವಯಸ್ಸಾದ ವ್ಯಕ್ತಿಗಳು ಸಮಯ ಕಳೆಯುವಂತಹ ಸ್ಥಳಗಳಿಗೆ ಭೇಟಿ ನೀಡಲು ಪ್ರಾರಂಭಿಸಿದಳು. ಹಾಗಾಗಿ ಇದೀಗ ಅವಳು 7 ಮಂದಿ ವಯಸ್ಸಾದ ಪುರುಷರ ಜೊತೆ ಸಂಬಂಧದಲ್ಲಿರುವ ಮೂಲಕ ಬಹುಪತಿತ್ವವನ್ನು ಅನುಸರಿಸುತ್ತಿದ್ದಾಳೆ.

ಇದನ್ನೂ ಓದಿ: Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

ಅಲ್ಲದೇ ಆಕೆಯ ಪ್ರಕಾರ ವಯಸ್ಸಾದ ವ್ಯಕ್ತಿಗಳ ಬಳಿ ಏನನ್ನೂ ಕೇಳಬೇಕಾಗಿಲ್ಲ, ಎಲ್ಲವನ್ನೂ ಅವರೇ ನೀಡುತ್ತಾರೆ. ಏಕೆಂದರೆ ಅವರ ವಯಸ್ಸಿನವರಿಗೆ ತನ್ನಂತಹ ಹುಡುಗಿಯು ಸಿಗುವುದಿಲ್ಲ. ಹಾಗಾಗಿ ತಾನು ಪಿಂಚಣಿ ಹೊಂದಿರುವ ಅಂತಹ ವ್ಯಕ್ತಿಯನ್ನು ಹುಡುಕಿದೆ. ಯಾಕೆಂದರೆ ಅವರು ತನ್ನನ್ನು ಸುಖವಾಗಿ ನೋಡಿಕೊಳ್ಳುತ್ತಾರೆ. ಅಂದ ಹಾಗೇ ಈಕೆಯ ಗೆಳೆಯರು ಕಾರ್ಲೋಸ್, ಸೈಮನ್, ಜೀಸಸ್, ಪಾಬ್ಲೋ, ಮ್ಯಾನುಯೆಲ್ ಹಾಗೂ ಇಬ್ಬರ ಹೆಸರನ್ನು ಬಹಿರಂಗಪಡಿಸಿಲ್ಲ. ಇವರೆಲ್ಲರೂ ಸಹ ಪಿಂಚಣಿದಾರರಾಗಿದ್ದು, ಒಬ್ಬರನೊಬ್ಬರು ಚೆನ್ನಾಗಿ ಅರಿತುಕೊಂಡಿದ್ದಾರಂತೆ. ಹಾಗೇ ಅವರು ಆಕೆಗೆ ಅಡುಗೆ ಮಾಡಲು, ಬಟ್ಟೆ ಒಗೆಯಲು, ಮನೆ ಶುಚಿ ಮಾಡುವಂತಹ ಕೆಲಸಗಳಲ್ಲಿ ಸಹಾಯ ಮಾಡುತ್ತಾರಂತೆ.

Continue Reading

ದೇಶ

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Air India Food: ಮ್ಯಾಥ್ಯೂರಸ್‌ ಪೌಲ್‌ ಎಂಬ ಪತ್ರಕರ್ತ ಬೆಂಗಳೂರಿನಿಂದ ಸ್ಯಾನ್‌ ಪ್ರಾನ್ಸಿಸ್ಕೋಗೆ ಏರ್‌ ಇಂಡಿಯಾ ವಿಮಾನದಲ್ಲಿ ತೆರಳುವಾಗ ಅವರಿಗೆ ಭೀಕರ ಅನುಭವವಾಗಿದೆ. ವಿಮಾನದಲ್ಲಿ ಅವರು ಆರ್ಡರ್‌ ಮಾಡಿದ ಆಹಾರದಲ್ಲಿ ಮೆಟಲ್‌ ಬ್ಲೇಡ್‌ ಪತ್ತೆಯಾಗಿದೆ. ಈ ಕುರಿತು ಅವರು ಪೋಸ್ಟ್‌ ಮಾಡುತ್ತಲೇ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.

VISTARANEWS.COM


on

Air India Food
Koo

ಬೆಂಗಳೂರು: ಏರ್‌ ಇಂಡಿಯಾ ಸೇರಿ ಹಲವು ಸಂಸ್ಥೆಗಳ ವಿಮಾನಗಳಲ್ಲಿ ಪ್ರಯಾಣಿಕರು ಕುಡಿದು ಗಲಾಟೆ ಮಾಡುವುದು, ಸಹ ಪ್ರಯಾಣಿಕರಿಗೆ ತೊಂದರೆ ಕೊಡುವುದು, ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸೇರಿ ಹಲವು ಕೃತ್ಯಗಳು ಇತ್ತೀಚೆಗೆ ವರದಿಯಾಗುತ್ತಲೇ ಇವೆ. ಇದರ ಬೆನ್ನಲ್ಲೇ, ಏರ್‌ ಇಂಡಿಯಾ ವಿಮಾನದಲ್ಲಿ ಆರ್ಡರ್‌ ಮಾಡಿದ ಊಟದಲ್ಲಿ (Air India Food) ಮೆಟಲ್‌ ಬ್ಲೇಡ್‌ (Metal Blade) ಒಂದು ಸಿಕ್ಕಿದ್ದು, ಊಟ ಆರ್ಡರ್‌ ಮಾಡಿದ ವ್ಯಕ್ತಿಯು ಕಂಗಾಲಾಗಿದ್ದಾರೆ. ಹಾಗೆಯೇ, ತಮಗೆ ಆದ ಭೀಕರ ಅನುಭವವನ್ನು, ಮೆಟಲ್‌ ಬ್ಲೇಡ್‌ ಫೋಟೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮ್ಯಾಥ್ಯೂರಸ್‌ ಪೌಲ್‌ ಎಂಬ ಪತ್ರಕರ್ತ ಬೆಂಗಳೂರಿನಿಂದ ಸ್ಯಾನ್‌ ಪ್ರಾನ್ಸಿಸ್ಕೋಗೆ ಏರ್‌ ಇಂಡಿಯಾ ವಿಮಾನದಲ್ಲಿ ತೆರಳುವಾಗ ಅವರಿಗೆ ಇಂತಹ ಭೀಕರ ಅನುಭವವಾಗಿದೆ. “ಏರ್‌ ಇಂಡಿಯಾ ವಿಮಾನದಲ್ಲಿ ನಾನು ಆರ್ಡರ್‌ ಮಾಡಿದ ಸ್ವೀಟ್‌ ಪೊಟ್ಯಾಟೋ ಹಾಗೂ ಫಿಗ್‌ ಚಾಟ್‌ನಲ್ಲಿ ಬ್ಲೇಡ್‌ ರೀತಿ ಇರುವ ಮೆಟಲ್‌ ತುಣುಕು ಪತ್ತೆಯಾಗಿದೆ. ಅದೃಷ್ಟವಶಾತ್‌ ಇದರಿಂದ ನನಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಏರ್‌ ಇಂಡಿಯಾ ಕೆಟರಿಂಗ್‌ ಸರ್ವಿಸ್‌ ಬಗ್ಗೆ ನನಗೆ ಇದ್ದ ಗೌರವ ಕಡಿಮೆಯಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಮ್ಯಾಥ್ಯೂರಸ್‌ ಪೌಲ್‌ ಕೂಡಲೇ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯು ಪ್ರತಿಕ್ರಿಯಿಸಿದೆ. “ನಿಮಗೆ ಇಂತಹ ಕೆಟ್ಟ ಅನುಭವ ಆಗಿದ್ದಕ್ಕೆ ಕ್ಷಮೆ ಇರಲಿ. ನಾವು ಪ್ರಯಾಣಿಕರಿಗೆ ಸೇವೆ ನೀಡಬೇಕು ಎಂಬ ನಿರ್ದಿಷ್ಟ ಗುರಿ ಹೊಂದಿದ್ದು, ಆ ಗುರಿಗೆ ಇದು ಧಕ್ಕೆ ತರುವಂತಿದೆ. ಸೇವೆಯಲ್ಲಿ ಸಮಸ್ಯೆಯಾಗಿರುವುದಕ್ಕೆ ಕ್ಷಮೆ ಇರಲಿ. ನಾವು ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ” ಎಂಬುದಾಗಿ ಏರ್‌ ಇಂಡಿಯಾ ಪ್ರತಿಕ್ರಿಯಿಸಿದೆ. ಅಷ್ಟೇ ಅಲ್ಲ, ಏರ್‌ ಇಂಡಿಯಾ ಸಂಸ್ಥೆಯು ಮ್ಯಾಥ್ಯೂರಸ್‌ ಪೌಲ್‌ ಅವರಿಗೆ ಒಂದು ವರ್ಷದಲ್ಲಿ ಒಮ್ಮೆ ಉಚಿತವಾಗಿ ಟಿಕೆಟ್‌ ನೀಡಲಾಗುವುದು ಎಂದು ಆಫರ್‌ ನೀಡಿದೆ. ಆದರೆ, ಇದನ್ನು ಪತ್ರಕರ್ತ ನಿರಾಕರಿಸಿದ್ದಾರೆ.

ವೆಜ್‌ ಊಟದಲ್ಲಿ ಮೂಳೆಗಳು ಪತ್ತೆ

ಕೆಲ ತಿಂಗಳ ಹಿಂದೆಯೂ ಏರ್‌ ಇಂಡಿಯಾ ವಿಮಾನದಲ್ಲಿ ಆರ್ಡರ್‌ ಮಾಡಿದ ಸಸ್ಯಾಹಾರದ ಬದಲಿಗೆ ಚಿಕನ್‌ ಪೀಸ್‌ಗಳು ಇರುವ ಊಟ ನೀಡಲಾಗಿದೆ ಎಂದು ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗೆಯೇ, ಫೋಟೊಗಳ ಸಮೇತ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

“ಏರ್‌ ಇಂಡಿಯಾ 582 ವಿಮಾನದಲ್ಲಿ ನಾನು ಪ್ರಯಾಣಿಸುತ್ತಿದ್ದೆ. ಇದೇ ವೇಳೆ ನನಗೆ ನೀಡಿದ ವೆಜ್‌ ಮೀಲ್‌ನಲ್ಲಿ ಚಿಕನ್‌ ಪೀಸ್‌ಗಳು ದೊರೆತಿವೆ. ನಾನು ಕಲ್ಲಿಕೋಟೆಯಿಂದ ವಿಮಾನ ಹತ್ತಿದೆ. ಈ ವಿಮಾನವು 6.40 ಹೊರಡುವ ಬದಲು 7.40ಕ್ಕೆ ಹಾರಾಟ ಆರಂಭಿಸಿದೆ. ವಿಮಾನ ಹಾರಾಟ ವಿಳಂಬ ಮಾಡುವ ಜತೆಗೆ ಮಾಂಸಾಹಾರ ನೀಡಲಾಗಿದೆ. ಇದರ ಕುರಿತು ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರೆ, ಅವರು ಒಂದು ಸಾರಿ ಕೇಳಿ ಸುಮ್ಮನಾದರು. ಹಾಗಾಗಿ, ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಆಗ್ರಹಿಸುತ್ತಿದ್ದೇನೆ” ಎಂದು ವೀರಾ ಜೈನ್‌ ಎಂಬ ಮಹಿಳೆಯು ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: Mayank Agarwal: ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್? ಐಸಿಯುನಲ್ಲಿ ಚಿಕಿತ್ಸೆ

Continue Reading
Advertisement
Pushpa 2
ಸಿನಿಮಾ28 seconds ago

Pushpa 2: ಪುಷ್ಟ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ21 mins ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ31 mins ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest38 mins ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ56 mins ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

International Yoga Day 2024
Latest1 hour ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Job Recruitment
ಉದ್ಯೋಗ1 hour ago

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

Rahul Gandhi
ದೇಶ2 hours ago

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhi
ಕರ್ನಾಟಕ2 hours ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Actor Chikkanna
ಕರ್ನಾಟಕ2 hours ago

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು8 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು9 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌