ಆತ 17 ನಾಯಿ ಸಾಕಿದ್ದ; ಆತನನ್ನು ಆ ನಾಯಿಗಳೇ ತಿಂದು ಮುಗಿಸಿದವು! - Vistara News

ಪ್ರಮುಖ ಸುದ್ದಿ

ಆತ 17 ನಾಯಿ ಸಾಕಿದ್ದ; ಆತನನ್ನು ಆ ನಾಯಿಗಳೇ ತಿಂದು ಮುಗಿಸಿದವು!

Argentina: ಅರ್ಜೆಂಟೀನಾದಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ಅವರು ಸಾಕಿದ 17 ನಾಯಿಗಳು ತಿಂದಿವೆ.

VISTARANEWS.COM


on

street dog
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅರ್ಜೆಂಟೀನಾ: ವ್ಯಕ್ತಿಯೊಬ್ಬರನ್ನು ಅವರು ಸಾಕಿದ 17 ನಾಯಿಗಳೇ ತಿಂದಿರುವ ಆಘಾತಕಾರಿ ಘಟನೆ ಅರ್ಜೆಂಟೀನಾದಲ್ಲಿ (Argentina) ನಡೆದಿದೆ. ಅರ್ಜೆಂಟೀನಾದ ತನ್ನ ಮನೆಯೊಳಗೆ ವ್ಯಕ್ತಿಯೊಬ್ಬರ ಅವಶೇಷಗಳು ಪತ್ತೆಯಾಗಿದ್ದು, ಅವರನ್ನು 17 ಹಸಿದ ನಾಯಿಗಳ ಗುಂಪು ತಿಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 13ರಂದು ಮೆಂಡೋಜಾ (Mendoza) ಪ್ರಾಂತ್ಯದ ಗ್ವಾಯಿಮಲ್ಲೆನ್‌ನ (Guaymallen) ಕಾರ್ಲೋಸ್ ಟೋನಿನಿ ಅವರ ಮನೆಯಿಂದ ಅಸಹನೀಯ ದುರ್ವಾಸನೆ ಬರುತಿತ್ತು. ಈ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಮನೆಯೊಳಗೆ ಪ್ರವೇಶಿಸಿದಾಗ ನೆಲದ ಮೇಲೆ ಬಿದ್ದ ತೊಡೆಯ ಮೂಳೆಗಳು ಕಂಡು ಬಂದಿದ್ದವು. ಜತೆಗೆ ಟಿ-ಶರ್ಟ್ ಬಳಿ ಎಂಟು ಇಂಚಿನ ಎರಡು ಸಣ್ಣ ಮೂಳೆಗಳು ಪತ್ತೆಯಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ʼʼಅನಾರೋಗ್ಯದ ಕಾರಣದಿಂದ ಟೋನಿನಿ ಮೃತಪಟ್ಟಿದ್ದಾರೆ. ಅವರು ಒಂಟಿಯಾಗಿ ವಾಸಿಸುತ್ತಿದ್ದರಿಂದ ಅವರು ಸಾಕಿದ ನಾಯಿಗಳಿಗೆ ಯಾರೂ ಆಹಾರ ನೀಡಿರಲಿಲ್ಲ. ಇದರಿಂದ ಹಸಿದ ನಾಯಿಗಳು 65 ವರ್ಷದ ಟೋನಿನಿ ಅವರ ಮೃತದೇಹವನ್ನು ತಿಂದಿವೆʼʼ ಎಂದು ಪೊಲೀಸರು ಊಹಿಸಿದ್ದಾರೆ. ಎರಡು ವರ್ಷಗಳಿಂದ ತಂದೆಯೊಂದಿಗೆ ಸಂಪರ್ಕ ಇರಲಿಲ್ಲ ಎಂದು ಟೋನಿನಿ ಅವರ ಪುತ್ರಿ ಸುಸಾನಾ ಎಲಿಜಬೆತ್ ವಿಡೆಲಾ ಟೋನಿನಿ ಪೊಲೀಸರಿಗೆ ತಿಳಿಸಿದ್ದಾರೆ. ʼʼಟೋನಿನಿ ಒಂಟಿಯಾಗಿ, ತಮ್ಮ ನಾಯಿಯೊಂದಿಗೆ ವಾಸಿಸುತ್ತಿದ್ದರುʼʼ ಎಂದು ನೆರೆ ಮನೆಯವರು ಮಾಹಿತಿ ನೀಡಿದ್ದಾರೆ. ʼʼಟೋನಿನಿ ಅವರ ಸಾವಿನ ನಿಖರ ಕಾರಣವನ್ನು ಕಂಡುಹಿಡಿಯಲು ಲಭಿಸಿದ ಅಲ್ಪ ಅವಶೇಷಗಳ ಪರೀಕ್ಷೆ ನಡೆಸಲಾಗುವುದು. ಮೇಲ್ನೋಟಕ್ಕೆ ಅವರ ಮೇಲೆ ಹಿಂಸೆ ನಡೆದಿರುವ ಕುರುಹುಗಳಿಲ್ಲ. ನಾಯಿಗಳು ಅವರ ಮೇಲೆ ದಾಳಿ ನಡೆಸಿಲ್ಲ. ಮೃತಪಟ್ಟ ನಂತರವೇ ನಾಯಿಗಳ ಗುಂಪು ಅವರನ್ನು ಕಡಿದಿವೆʼʼ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ರಷ್ಯಾದಲ್ಲೂ ನಡೆದಿತ್ತು

ರಷ್ಯಾದಲ್ಲಿ ನಡೆದ ನಾಯಿಗಳ ಭಯಾನಕ ದಾಳಿಯಲ್ಲಿ ಒಂಬತ್ತು ವರ್ಷದ ಬಾಲಕಿ ಗಾಯಗೊಂಡ ಕೆಲವೇ ಗಂಟೆಗಳ ನಂತರ ಈ ಘಟನೆ ವರದಿಯಾಗಿದೆ. ಬೀದಿ ನಾಯಿಗಳೊಂದಿಗೆ ಸ್ನೇಹ ಬೆಳೆಸಲು ಪ್ರಯತ್ನಿಸಿದ ಬಾಲಕಿ ದಾರುಣವಾಗಿ ಗಾಯಗೊಂಡಿದ್ದಾಳೆ. ಬಾಲಕಿ ಮೇಲೆ ಭೀಕರ ದಾಳಿ ನಡೆಸಿ ಉಗುರುಗಳಿಂದ ಗಾಯಗೊಳಿಸಿವೆ ಎಂದು ಮೂಲಗಳು ತಿಳಿಸಿವೆ.

ಏನಾಗಿತ್ತು?

ರಷ್ಯಾದ ನೊವಿ ಉರೆಂಗೊಯ್‌ನಲ್ಲಿ ದಶಾ ಎನ್ನುವ ಶಾಲಾ ಬಾಲಕಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಳು. ಆಗ ಅವಳಿಗೆ ರಸ್ತೆ ಬದಿಯಿದ್ದ ನಾಲ್ಕು ದೊಡ್ಡ ಗಾತ್ರದ ನಾಯಿಗಳು ಕಾಣಿಸಿದವು. ಅವುಗಳ ಬಳಿ ಅವಳು ತೆರಳುತ್ತಿದ್ದಂತೆ ಆಕ್ರಮಣ ಮಾಡಿದ ಮೂರು ನಾಯಿಗಳು ಅವಳನ್ನು ನೆಲಕ್ಕೆ ಬೀಳಿಸಿ ಕಡಿದವು. ಒಂದು ನಾಯಿ ಅವಳ ತಲೆಯ ಮೇಲೆ ದಾಳಿ ಮಾಡಿದರೆ ಉಳಿದ ಮೂರು ಆಕೆಯ ದೇಹಕ್ಕೆ ಕಡಿದವು. ಕೂಡಲೇ ವ್ಯಕ್ತಿಯೊಬ್ಬರು ಧಾವಿಸಿ ನಾಯಿಗಳ ಗುಂಪನ್ನು ಓಡಿಸಿ ಬಾಲಕಿಯ ನೆರವಿಗೆ ಬಂದಿದ್ದರು. ಸದ್ಯ ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ರಷ್ಯಾದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚಿದ್ದು, ಮಕ್ಕಳನ್ನು ಬಗ್ಗೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Heart Attack: ಸಂಸತ್ತಿನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತವಾಗಿ ಮೃತಪಟ್ಟ ಸಂಸದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case: ಈ ವಿಡಿಯೊಗಳ ಬಗ್ಗೆ ಕಾರ್ತಿಕ್‌ ಹೇಳಿಕೊಂಡಿರುವ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ ಅಶ್ಲೀಲ ವಿಡಿಯೊಗಳನ್ನು ಲೀಕ್‌ ಮಾಡದಂತೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ನಿಂದ ಕಾರ್ತಿಕ್‌ ವಿರುದ್ಧ ಸ್ಟೇ ತಂದಿದ್ದರು. ಆ ಸ್ಟೇ ವೆಕೇಟ್ ಆದಲ್ಲಿ ವಿಡಿಯೊ ಪ್ಲೇ ಮಾಡಲು ಕಾರ್ತಿಕ್‌ ಚಿಂತನೆ ನಡೆಸಿದ್ದ ಎಂದು ದೇವರಾಜೇಗೌಡ ಹೇಳಿದ್ದಾರೆ. ಅಲ್ಲದೆ, 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Hassan Pen Drive Case Did Karthik offer to display Prajwal videos on LED wall in Public
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಆ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಸಾರ್ವಜನಿಕ ಪ್ರದರ್ಶನಕ್ಕಿಡುತ್ತಿದ್ದನಂತೆ ಎಂಬ ಸ್ಫೋಟಕ ಮಾಹಿತಿಯನ್ನು ವಕೀಲ ದೇವರಾಜೇಗೌಡ ಹೊರಹಾಕಿದ್ದಾರೆ.

ವಿಡಿಯೊ ಲೀಕ್‌ ಬಗ್ಗೆ ತಮ್ಮ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ ಸ್ಪಷ್ಟೀಕರಣ ನೀಡಿದ ದೇವರಾಜೇಗೌಡ, ಈ ವಿಡಿಯೊ ಬಗ್ಗೆ ಕಾರ್ತಿಕ್‌ ಹೇಳಿಕೊಂಡಿರುವ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ ಅಶ್ಲೀಲ ವಿಡಿಯೊಗಳನ್ನು ಲೀಕ್‌ ಮಾಡದಂತೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ನಿಂದ ಕಾರ್ತಿಕ್‌ ವಿರುದ್ಧ ಸ್ಟೇ ತಂದಿದ್ದರು. ಆ ಸ್ಟೇ ವೆಕೇಟ್ ಆದಲ್ಲಿ ಹಾಗೂ ವಿಡಿಯೊದಲ್ಲಿರುವ ಹೆಣ್ಣು ಮಕ್ಕಳು ಅನುಮತಿ ಕೊಟ್ಟರೆ ಎಲ್ಲ ವಿಡಿಯೊಗಳನ್ನು ಎಲ್ಇಡಿ ವಾಲ್ ಹಾಕಿ ವಿಡಿಯೊ ಪ್ಲೇ ಮಾಡುತ್ತೇನೆ ಎಂದು ಕಾರ್ತಿಕ್‌ ನನ್ನ ಬಳಿ ಹೇಳಿಕೊಂಡಿದ್ದ ಎಂದು ತಿಳಿಸಿದರು.

ಕಾಂಗ್ರೆಸ್‌ನ ಶ್ರೇಯಸ್ ಜತೆ ಇದ್ದ ಕಾರ್ತಿಕ್

2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ. ಆದರೆ, ಲೋಕಸಭೆ ಚುನಾವಣೆ ಹೊತ್ತಲ್ಲಿ ರಿಲೀಸ್ ಆಗಿದೆ. ಅದನ್ನು ದೇವರಾಜೇಗೌಡ ಮಾಡಿದ್ದಾನೆ ಎಂದು ಹೇಳುತ್ತಾರೆ. ನಾನು ಲೀಕ್ ಮಾಡಿದ್ದಲ್ಲ,‌ ಬೇರೆಯವರಿಗೆ ಈ ವಿಡಿಯೊವನ್ನು ನೋಡುವುದಕ್ಕೂ ನಾನು ಕೊಟ್ಟಿಲ್ಲ ಎಂದು ದೇವರಾಜೇಗೌಡ ಸ್ಪಷ್ಟನೆ ನೀಡಿದರು.

ಕಾರ್ತಿಕ್‌ ನನಗೆ ಪೆನ್‌ ಡ್ರೈವ್‌ ಕೊಟ್ಟಿದ್ದ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ಸ್ಪಷ್ಟೀಕರಣ ನೀಡಿದರು.

ಆದರೆ, ಅಶ್ಲೀಲ ವಿಡಿಯೊ ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಇದ್ದ ವಿಡಿಯೊಗಳು ಕಾರ್ತಿಕ್‌ಗೆ ಸಿಕ್ಕಿದ್ದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದ ದೇವರಾಜೇಗೌಡ, ದೃಶ್ಯ ಮತ್ತು ಪ್ರಿಂಟ್ ಮೀಡಿಯಾ ಮೇಲೆ ಇಂಜೆಕ್ಷನ್ ತಂದರು. ಆದರೆ, ಕಾರ್ತಿಕ್‌ನನ್ನು ಅಲ್ಲಿ ಪಾರ್ಟಿ ಮಾಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

ಕಾರ್ತಿಕ್‌ ಹೇಳಿದ್ದೆಲ್ಲವೂ ಸತ್ಯ, ಆದರೆ..!

ವಿಡಿಯೊವನ್ನು ಬಿಜೆಪಿಯವರು ಯಾಕೆ ಲೀಕ್ ಮಾಡುತ್ತಾರೆ? ಇನ್ನು ಜೆಡಿಎಸ್‌ನವರು ಅವರದ್ದನ್ನು ಲೀಕ್ ಮಾಡ್ತಾರಾ? ಇದರಿಂದ ಕಾಂಗ್ರೆಸ್‌ನವರಿಗೆ ಲಾಭ‌. ಕಾರ್ತಿಕ್ ಮೊದಲೇ ಹೇಳಿದ್ದ ಕಾಂಗ್ರೆಸ್‌ನಿಂದ ನ್ಯಾಯ ಸಿಕ್ಕಿಲ್ಲ ಅಂದಿದ್ದ. ಕಾರ್ತಿಕ್ ಹೇಳಿದ್ದು ಎಲ್ಲವೂ ಸತ್ಯ. ಆದರೆ, ನಾನು ಲೀಕ್‌ ಮಾಡಿರಬಹುದು ಎಂದು ಹೇಳಿದ್ದೊಂದು ಬಿಟ್ಟು ಎಂದು ದೇವರಾಜೇಗೌಡ ಹೇಳಿದರು.

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ. ಅವರ ಗೌರವಕ್ಕೆ ನಾನು ಧಕ್ಕೆ ತರಲ್ಲ‌. ಎಸ್ಐಟಿ ನನಗೆ ನೋಟಿಸ್ ಕೊಡಲಿ ಅಂತಾ ಕಾಯ್ತಾ ಇದ್ದೇನೆ. ನನ್ನ ಬಳಿ ಕೆಲವು ದಾಖಲೆಗಳು ಇವೆ ಕೊಡುತ್ತೇನೆ. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲಿ. ಇಲ್ಲದೇ ಇದ್ದರೆ ಹೈಕೋರ್ಟ್‌ನಲ್ಲಿ ರಿಟ್ ಹಾಕುತ್ತೇನೆ. ಸಿಬಿಐಗೆ ವಹಿಸಬೇಕು ಅಂತಾ ಕೊರುತ್ತೇನೆ ಎಂದು ದೇವರಾಜೇಗೌಡ ಹೇಳಿದರು.

Continue Reading

ರಾಜಕೀಯ

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ದೇವರಾಜೇಗೌಡ ಸ್ಪಷ್ಟೀಕರಣ ನೀಡಿದ್ದಾರೆ.

VISTARANEWS.COM


on

Hassan Pen Drive Case How did Karthik get Prajwal video Devaraje Gowda questions
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ವಕೀಲ ದೇವರಾಜೇಗೌಡ ಸ್ಪಷ್ಟೀಕರಣ ನೀಡಿದ್ದಾರೆ. ವಿಡಿಯೊ ಲೀಕ್‌ ವಿಷಯವಾಗಿ ತಮ್ಮ ಮೇಲೆ ಬಂದ ಆರೋಪವನ್ನು ಅಲ್ಲಗಳೆದಿದ್ದಾರೆ. ಆದರೆ, ಅಶ್ಲೀಲ ವಿಡಿಯೊಗಳು ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಎಂಬ ಪ್ರಶ್ನೆಯನ್ನಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ಸ್ಪಷ್ಟೀಕರಣ ನೀಡಿದರು.

ಆದರೆ, ಅಶ್ಲೀಲ ವಿಡಿಯೊ ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಇದ್ದ ವಿಡಿಯೊಗಳು ಕಾರ್ತಿಕ್‌ಗೆ ಸಿಕ್ಕಿದ್ದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದ ದೇವರಾಜೇಗೌಡ, ದೃಶ್ಯ ಮತ್ತು ಪ್ರಿಂಟ್ ಮೀಡಿಯಾ ಮೇಲೆ ಇಂಜೆಕ್ಷನ್ ತಂದರು. ಆದರೆ, ಕಾರ್ತಿಕ್‌ನನ್ನು ಅಲ್ಲಿ ಪಾರ್ಟಿ ಮಾಡಿಲ್ಲ ಎಂದು ಹೇಳಿದರು.

ಕಾರ್ತಿಕ್‌ ಹೇಳಿದ್ದೆಲ್ಲವೂ ಸತ್ಯ, ಆದರೆ..!

ವಿಡಿಯೊವನ್ನು ಬಿಜೆಪಿಯವರು ಯಾಕೆ ಲೀಕ್ ಮಾಡುತ್ತಾರೆ? ಇನ್ನು ಜೆಡಿಎಸ್‌ನವರು ಅವರದ್ದನ್ನು ಲೀಕ್ ಮಾಡ್ತಾರಾ? ಇದರಿಂದ ಕಾಂಗ್ರೆಸ್‌ನವರಿಗೆ ಲಾಭ‌. ಕಾರ್ತಿಕ್ ಮೊದಲೇ ಹೇಳಿದ್ದ ಕಾಂಗ್ರೆಸ್‌ನಿಂದ ನ್ಯಾಯ ಸಿಕ್ಕಿಲ್ಲ ಅಂದಿದ್ದ. ಕಾರ್ತಿಕ್ ಹೇಳಿದ್ದು ಎಲ್ಲವೂ ಸತ್ಯ. ಆದರೆ, ನಾನು ಲೀಕ್‌ ಮಾಡಿರಬಹುದು ಎಂದು ಹೇಳಿದ್ದೊಂದು ಬಿಟ್ಟು ಎಂದು ದೇವರಾಜೇಗೌಡ ಹೇಳಿದರು.

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ. ಅವರ ಗೌರವಕ್ಕೆ ನಾನು ಧಕ್ಕೆ ತರಲ್ಲ‌. ಎಸ್ಐಟಿ ನನಗೆ ನೋಟಿಸ್ ಕೊಡಲಿ ಅಂತಾ ಕಾಯ್ತಾ ಇದ್ದೇನೆ. ನನ್ನ ಬಳಿ ಕೆಲವು ದಾಖಲೆಗಳು ಇವೆ ಕೊಡುತ್ತೇನೆ. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲಿ. ಇಲ್ಲದೇ ಇದ್ದರೆ ಹೈಕೋರ್ಟ್‌ನಲ್ಲಿ ರಿಟ್ ಹಾಕುತ್ತೇನೆ. ಸಿಬಿಐಗೆ ವಹಿಸಬೇಕು ಅಂತಾ ಕೊರುತ್ತೇನೆ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

ಕಾರ್ತಿಕ್‌ ವಿಡಿಯೊವನ್ನು ಎಲ್‌ಇಡಿ ವಾಲ್‌ನಲ್ಲಿ ಹಾಕುತ್ತಿದ್ದನಂತೆ!

ಸ್ಟೇ ವೆಕೇಟ್ ಆದಲ್ಲಿ, ವಿಡಿಯೊದಲ್ಲಿರುವ ಹೆಣ್ಣು ಮಕ್ಕಳು ಅನುಮತಿ ಕೊಟ್ಟರೆ ಎಲ್ಇಡಿ ವಾಲ್ ಹಾಕಿ ವಿಡಿಯೊ ಪ್ಲೇ ಮಾಡುತ್ತೇನೆ ಎಂದು ಕಾರ್ತಿಕ್‌ ಹೇಳಿದ್ದ. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ. ಆದರೆ, ಲೋಕಸಭೆ ಚುನಾವಣೆ ಹೊತ್ತಲ್ಲಿ ರಿಲೀಸ್ ಆಗಿದೆ. ಅದನ್ನು ದೇವರಾಜೇಗೌಡ ಮಾಡಿದ್ದಾನೆ ಎಂದು ಹೇಳುತ್ತಾರೆ. ನಾನು ಲೀಕ್ ಮಾಡಿದ್ದಲ್ಲ,‌ ಬೇರೆಯವರಿಗೆ ಈ ವಿಡಿಯೊವನ್ನು ನೋಡುವುದಕ್ಕೂ ನಾನು ಕೊಟ್ಟಿಲ್ಲ ಎಂದು ದೇವರಾಜೇಗೌಡ ಸ್ಪಷ್ಟನೆ ನೀಡಿದರು.

Continue Reading

ಪ್ರಮುಖ ಸುದ್ದಿ

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

ಇಂಗ್ಲೆಂಡ್​ ಟಿ 20 ವಿಶ್ವಕಪ್​​ಗೆ ತೆರಳುವ ಆಟಗಾರರಾದ ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್​ಸ್ಟನ್​ , ಮೊಯೀನ್ ಅಲಿ, ಫಿಲ್ ಸಾಲ್ಟ್ ಮತ್ತು ಜಾನಿ ಬೈರ್​ಸ್ಟೋವ್​ ಪ್ರಸ್ತುತ ಐಪಿಎಲ್ 2024 ಫ್ರಾಂಚೈಸಿಗಳಿಗಾಗಿ ಆಡುತ್ತಿದ್ದಾರೆ. ಅವರೆಲ್ಲೂ ಈ ಕರ್ತವ್ಯದಿಂದ ವಿಮುಖರಾಗಬೇಕಾಗುತ್ತದೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮುಂಬರುವ ಟಿ 20 ವಿಶ್ವಕಪ್ 2024 ಗಾಗಿ (IPL 2024) 15 ಆಟಗಾರರ ಪ್ರಾಥಮಿಕ ತಂಡವನ್ನು ಪ್ರಕಟಿಸಿದೆ. 2022 ರ ಟಿ 20 ವಿಶ್ವಕಪ್ (T20 World Cup) ವಿಜೇತ ನಾಯಕ ಜೋಸ್ ಬಟ್ಲರ್ (Jos Butler) ನೇತೃತ್ವದ ತಂಡವು ಪಂದ್ಯಾವಳಿಗೆ ಒಂದು ವಾರ ಮೊದಲು ತವರಿನಲ್ಲಿ ನಾಲ್ಕು ಪಂದ್ಯಗಳ ಟಿ 20ಐ ಸರಣಿಯಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಇಂಗ್ಲೆಂಡ್​ನ ಟಿ 20 ವಿಶ್ವಕಪ್ 2024ರ ಹಲವಾರು ಆಟಗಾರರು ಪ್ರಸ್ತುತ ಐಪಿಎಲ್ 2024 ಋತುವಿಗಾಗಿ ಭಾರತದಲ್ಲಿದ್ದಾರೆ. ಹಿಗಾಗಿ ಆಯ್ಕೆಯಾದ ಆಟಗಾರರು ಪ್ಲೇಆಫ್​​ಗೆ ಮುಂಚಿತವಾಗಿ ಇಂಗ್ಲೆಂಡ್​ಗೆ ವಾಪಸ್​ ಹೋಗಬೇಕು ಎಂದು ಇಸಿಬಿ ಹೇಳಿದೆ. ಹೀಗಾಗಿ ಐಪಿಎಲ್​ ಫೈನಲ್​ಗೇರುವ ತಂಡಗಳಲ್ಲಿರುವ ಇಂಗ್ಲೆಂಡ್​ ಆಟಗಾರರು ಪ್ರಮುಖ ಹಂತದಲ್ಲಿ ಅಲಭ್ಯರಾಗುತ್ತಾರೆ.

ಏಪ್ರಿಲ್ 30 ರಂದು, ಇಸಿಬಿಯ ಆಯ್ಕೆ ಸಮಿತಿಯು ಪಾಕಿಸ್ತಾನ ವಿರುದ್ಧದ ಇಂಗ್ಲೆಂಡ್​​ ತಂಡದ ಮುಂಬರುವ ತವರು ಟಿ 20 ಐ ಸರಣಿ ಮತ್ತು ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ 2024 ಗಾಗಿ ಸಂಯೋಜಿತ ತಂಡವನ್ನು ಘೋಷಿಸಿದೆ. ವಿಶೇಷವೆಂದರೆ, ಪಾಕಿಸ್ತಾನ ವಿರುದ್ಧದ ಸರಣಿಯು ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ಋತುವಿನ ಪ್ಲೇಆಫ್ ದಿನಾಂಕದೊಂದಿಗೆ ಸಂಘರ್ಷ ಎದುರಿಸುತ್ತಿದೆ. ಹೀಗಾಗಿ ಟೂರ್ನಿಗೆ ಆಯ್ಕೆಯಾಗಿರುವ ಆಟಗಾರರು ಮರಳಬೇಕಾಗುತ್ತದೆ.

ಇಂಗ್ಲೆಂಡ್​ ಟಿ 20 ವಿಶ್ವಕಪ್​​ಗೆ ತೆರಳುವ ಆಟಗಾರರಾದ ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್​ಸ್ಟನ್​ , ಮೊಯೀನ್ ಅಲಿ, ಫಿಲ್ ಸಾಲ್ಟ್ ಮತ್ತು ಜಾನಿ ಬೈರ್​ಸ್ಟೋವ್​ ಪ್ರಸ್ತುತ ಐಪಿಎಲ್ 2024 ಫ್ರಾಂಚೈಸಿಗಳಿಗಾಗಿ ಆಡುತ್ತಿದ್ದಾರೆ. ಅವರೆಲ್ಲೂ ಈ ಕರ್ತವ್ಯದಿಂದ ವಿಮುಖರಾಗಬೇಕಾಗುತ್ತದೆ.

ಲೀಡ್ಸ್​ನಲ್ಲಿ ಮೊದಲ ಪಂದ್ಯ

ಪಾಕಿಸ್ತಾನ ವಿರುದ್ಧದ ಸರಣಿ ಮೇ 22 ರಿಂದ ಲೀಡ್ಸ್​ನಲ್ಲಿ ಪ್ರಾರಂಭವಾಗಲಿದ್ದು, ಐಪಿಎಲ್ 2024 ಪ್ಲೇಆಫ್​ಗೆ ಮೊದಲು ಇಂಗ್ಲೆಂಡ್​ಗೆ ಮರಳುವಂತೆ ಇಸಿಬಿ ತನ್ನ ಆಟಗಾರರಿಗೆ ಸೂಚನೆ ನೀಡಿದೆ. ಇಸಿಬಿಯ ಈ ಮೇಲಿನ ನಿಲುವು ರಾಜಸ್ಥಾನ್ ರಾಯಲ್ಸ್, ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಂತಹ ಫ್ರಾಂಚೈಸಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಲಿಯಾಮ್ ಲಿವಿಂಗ್​ಸ್ಟನ್​, ಜಾನಿ ಬೈರ್​​ಸ್ಟೋವ್​ ಮತ್ತು ಸ್ಟ್ಯಾಂಡ್-ಇನ್ ನಾಯಕ ಸ್ಯಾಮ್ ಕರ್ರನ್ ಅವರಂತಹ ಆಟಗಾರರ ಸೇರ್ಪಡೆಯೊಂದಿಗೆ ಪಂಜಾಬ್ ಕಿಂಗ್ಸ್ ತಂಡವೂ ಇಂಗ್ಲೆಂಡ್ ಆಟಗಾರರನ್ನು ನೆಚ್ಚಿಕೊಂಡಿದೆ.

ಇಂಗ್ಲೆಂಡ್ ಜೂನ್ 4 ರಂದು ಸ್ಕಾಟ್ಲೆಂಡ್ ವಿರುದ್ಧ ಗ್ರೂಪ್ ಬಿ ಪಂದ್ಯದೊಂದಿಗೆ ಮುಂಬರುವ 2024 ರ ಆವೃತ್ತಿಯ ಪಂದ್ಯಾವಳಿಯಲ್ಲಿ ತನ್ನ ಟಿ 20 ವಿಶ್ವಕಪ್ ಪ್ರಶಸ್ತಿಯ ಹೋರಾಟ ಪ್ರಾರಂಭಿಸಲಿದೆ.

Continue Reading

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading
Advertisement
Suhana Khan
ಬಾಲಿವುಡ್21 mins ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ25 mins ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Reliance launched a new campaign for Campa-Cola
ದೇಶ30 mins ago

Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

Hassan Pen Drive Case Did Karthik offer to display Prajwal videos on LED wall in Public
ಕ್ರೈಂ38 mins ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case How did Karthik get Prajwal video Devaraje Gowda questions
ರಾಜಕೀಯ59 mins ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ1 hour ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ1 hour ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ‘ಕನ್ನಡ ಮಾಧ್ಯಮ’ ಸಿನಿಮಾಕ್ಕೆ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಸಾಥ್; ಮೋಷನ್ ಪೋಸ್ಟರ್ ರಿಲೀಸ್

V Srinivas Prasad
ಪ್ರಮುಖ ಸುದ್ದಿ2 hours ago

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

KL Rahul
ಕ್ರೀಡೆ2 hours ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ14 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌