ಪಾಕಿಸ್ತಾನದಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ಒಂದೇ ವರ್ಷದಲ್ಲಿ 643 ಜನರು ಬಲಿ - Vistara News

ವಿದೇಶ

ಪಾಕಿಸ್ತಾನದಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ಒಂದೇ ವರ್ಷದಲ್ಲಿ 643 ಜನರು ಬಲಿ

2022ರಲ್ಲಿ ವಿಶ್ವಾದ್ಯಂತ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಪಾಕಿಸ್ತಾನವು (Pakistan Terrorism) ಎರಡನೇ ಅತಿದೊಡ್ಡ ಹೆಚ್ಚಳ ದಾಖಲಿಸಿದೆ ಎಂದು ಆಸ್ಟ್ರೇಲಿಯಾ ಮೂಲದ ಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಭಯೋತ್ಪಾದನಾ ಸೂಚ್ಯಂಕ ವರದಿಯಲ್ಲಿ ಹೇಳಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2022ರಲ್ಲಿ ವಿಶ್ವಾದ್ಯಂತ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಪಾಕಿಸ್ತಾನವು (Pakistan Terrorism) ಎರಡನೇ ಅತಿದೊಡ್ಡ ಹೆಚ್ಚಳವನ್ನು ದಾಖಲಿಸಿದೆ. 2021ರಲ್ಲಿ 292 ಇದ್ದ ಸಾವಿನ ಸಂಖ್ಯೆ ಕಳೆದ ವರ್ಷದ ಶೇ.120 ಏರಿಕೆ ದಾಖಲಿಸಿದ್ದು, ಒಟ್ಟು 643 ಸಾವು ವರದಿಯಾಗಿದೆ.

ಇದನ್ನೂ ಓದಿ: Asia Cup: ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲೇ ನಡೆಯಲಿದೆ; ಬಿಸಿಸಿಐಗೆ ಎಚ್ಚರಿಕೆ ನೀಡಿದ ​ನಜಮ್ ಸೇಥಿ
ಆಸ್ಟ್ರೇಲಿಯಾ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ ಅಂಡ್ ಪೀಸ್ ಈ ವಾರ್ಷಿಕ ಜಾಗತಿಕ ಭಯೋತ್ಪಾದನಾ ಸೂಚ್ಯಂಕ(ಜಿಟಿಐ)ವನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ ಭಯೋತ್ಪಾದಕ ದಾಳಿಯಿಂದ ಅತಿ ಹೆಚ್ಚು ಸಾವಾಗುತ್ತಿರುವುದು ಪಾಕಿಸ್ತಾನದಲ್ಲಾಗಿದೆ.

ಪಾಕಿಸ್ತಾನದಲ್ಲಿ ಸಾವಿನ ಸಂಖ್ಯೆಯು ಕಳೆದ ದಶಕದಲ್ಲಿ ವರ್ಷದಿಂದ ವರ್ಷಕ್ಕೆ ಅತಿದೊಡ್ಡ ಹೆಚ್ಚಳವನ್ನು ಕಾಣುತ್ತಿದೆ. ಅದರಲ್ಲೂ ಭಯೋತ್ಪಾದನೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಶೇ.55 ಮಂದಿ ಸೇನೆಯ ಸಿಬ್ಬಂದಿಗಳಾಗಿದ್ದಾರೆ. ಭಯೋತ್ಪಾದನೆ ಸಂಬಂಧಿತವಾಗಿ ಜನರು ಸಾವನ್ನಪ್ಪುತ್ತಿರುವ ಪಟ್ಟಿಯಲ್ಲಿ ಪಾಕಿಸ್ತಾನ ನಾಲ್ಕು ಸ್ಥಾನ ಮೇಲಕ್ಕೆ ಹೋಗಿದ್ದು ಸದ್ಯ ಆರನೇ ಸ್ಥಾನದಲ್ಲಿದೆ.

ಪಾಕಿಸ್ತಾನದಲ್ಲಿ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಅತಿ ದೊಡ್ಡ ಕಾರಣವಾಗಿರುವುದು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ). ಕಳೆದ ವರ್ಷ ಪಾಕ್‌ನಲ್ಲಿ ಭಯೋತ್ಪಾದನೆ ಸಂಬಂಧಿಸಿ ಆದ ಸಾವುಗಳಲ್ಲಿ ಶೇ. 36 ಪಾಲು ಈ ಉಗ್ರ ಸಂಘಟನೆಯದ್ದಿದೆ. 2021ಕ್ಕೆ ಹೋಲಿಸಿದರೆ ಇದು 9 ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: SCO Meet: ದೆಹಲಿಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ ಸಭೆಗೆ ಪಾಕ್​​ ರಕ್ಷಣಾ ಸಚಿವರನ್ನು ಆಹ್ವಾನಿಸಿದ ಭಾರತ
ಅಫ್ಘಾನಿಸ್ತಾನ ಮತ್ತು ಇರಾನ್‌ನ ಗಡಿಯಲ್ಲಿರುವ ಬಲೂಚಿಸ್ತಾನ್ ಪ್ರಾಂತ್ಯದ ಸ್ವಾತಂತ್ರ್ಯಕ್ಕಾಗಿ ಬಿಎಲ್‌ಎ ಹೋರಾಡುತ್ತಿರುವುದಾಗಿ ಹೇಳಿಕೊಂಡಿದೆ. ಈ ಪ್ರದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ಪಾಕಿಸ್ತಾನಿ ಸರ್ಕಾರವು ಸುಲಿಗೆ ಮಾಡಿದೆ ಮತ್ತು ಅಲ್ಲಿನ ಬಲೂಚ್ ಜನಸಂಖ್ಯೆಯ ವಿರುದ್ಧ ತಾರತಮ್ಯವನ್ನು ಮಾಡುತ್ತಿದೆ ಎನ್ನುವುದು ಬಿಎಲ್‌ಎ ಆರೋಪ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Dolly Chaiwala: ತಮ್ಮ ವಿಶಿಷ್ಟ ಶೈಲಿಯಿಂದಲೇ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿರುವ ನಾಗ್ಪುರದ ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಸ್ಥಳೀಯರೊಂದಿಗೆ ಪೋಸ್‌ ನೀಡುತ್ತಿರುವ ಫೋಟೊ ವೈರಲ್‌ ಆಗಿದೆ.

VISTARANEWS.COM


on

Dolly Chaiwala
Koo

ನವದೆಹಲಿ: ಅದೃಷ್ಟ ಯಾವಾಗ ಯಾರಿಗೆ ಒಲಿಯುತ್ತದೆ ಎನ್ನುವುದನ್ನು ಹೇಳಲು ಸಾಧ್ಯವಿಲ್ಲ. ತನ್ನ ವಿಶಿಷ್ಟ ಉಡುಗೆ, ಹೇರ್‌ ಸ್ಟೈಲ್‌, ಚಹಾ ಮಾಡುವ ರೀತಿಯಿಂದಲೇ ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ನಾಗ್ಪುರದ ಡಾಲಿ ಚಾಯ್‌ವಾಲಾ (Dolly Chaiwalla) ಅವರನ್ನು ಇತ್ತೀಚೆಗೆ ಮೈಕ್ರೋಸಾಫ್ಟ್‌ನ (Microsoft) ಸಹ-ಸಂಸ್ಥಾಪಕ, ಕೋಟ್ಯಧಿಪತಿ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ (Bill Gates) ಭೇಟಿಯಾಗಿದ್ದರು. ಡಾಲಿ ಚಾಯ್‌ವಾಲಾ ಅವರ ಚಹಾ ಅಂಗಡಿಗೆ ಬಿಲ್‌ ಗೇಟ್ಸ್‌ ಆಗಮಿಸಿದ ವಿಡಿಯೊ ಭಾರೀ ವೈರಲ್‌ ಆಗಿತ್ತು. ಆ ಮೂಲಕ ಡಾಲಿ ಚಾಯ್‌ವಾಲಾ ಹೆಸರು ಮತ್ತಷ್ಟು ಜನಪ್ರಿಯವಾಗಿತ್ತು. ಇದೀಗ ಅವರ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಬಾಲಿವುಡ್ ನಟ ಸೊಹೈಲ್ ಖಾನ್ ಅವರೊಂದಿಗೆ ಫೋಟೊಕ್ಕೆ ಪೋಸ್‌ ನೀಡಿದ್ದು, ಮತ್ತೊಮ್ಮೆ ವೈರಲ್‌ ಆಗಿದ್ದಾರೆ (Viral News).

ಪ್ರವಾಸಿಗರೊಂದಿಗೆ ಪೋಸ್‌

ಇದರ ಜತೆಗೆ ಡಾಲಿ ಚಾಯ್‌ವಾಲಾ ದ್ವೀಪ ರಾಷ್ಟ್ರದ ನಿವಾಸಿಗಳೊಂದಿಗೆ ಪೋಸ್‌ ನೀಡುತ್ತಿರುವ ಫೋಟೊಗಳು ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ. ಅನೇಕರು ಈ ಪೋಟೊಗಳಿಗೆ ಕಮೆಂಟ್‌ ಕೂಡ ಮಾಡಿದ್ದಾರೆ. ಕೆಲವರು ಡಾಲಿಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದರೆ, ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಡಾಲಿ ಸದ್ಯದಲ್ಲೇ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ” ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು “ಡಾಲಿ ಚಾಯ್‌ವಾಲಾ ಮತ್ತು ಬಿಲ್ ಗೇಟ್ಸ್ ಸ್ನೇಹಿತರು” ಎಂದು ಬರೆದಿದ್ದಾರೆ.

“ದೇವರು ನಿಮಗೆ ಹೆಚ್ಚಿನ ಯಶಸ್ಸನ್ನು ನೀಡಲಿ, ಸಹೋದರ” ಎಂದು ನೆಟ್ಟಿಗರೊಬ್ಬರು ಹಾರೈಸಿದ್ದಾರೆ. “ಡಾಲಿಯ ಯಶಸ್ಸು ನನಗೆ ಖುಷಿ ತಂದುಕೊಟ್ಟಿದೆ. ಸಣ್ಣ ವ್ಯಾಪಾರಿಯೊಬ್ಬ ಈ ಮಟ್ಟಕ್ಕೆ ಬೆಳೆದಾಗ ಅದನ್ನು ನೋಡಲು ನನಗೆ ತುಂಬಾ ಸಂತೋಷವಾಗುತ್ತದೆʼʼ ಎಂದು ಮತ್ತೊಬ್ಬರು ತಿಳಿಸಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದು ಮಗದೊಬ್ಬರು ಹೇಳಿದ್ದಾರೆ. ʼʼಡಾಲಿ ಚಾಯ್‌ವಾಲಾ ಅಸಾಧಾರಣ ಪ್ರತಿಭೆ ಹೊಂದಿದ್ದಾರೆ. ಆದ್ದರಿಂದ ಅವರು ಈಗ ಇಲ್ಲಿದ್ದಾರೆ. ಚಹಾದಿಂದಾಗಿ ಅಲ್ಲ, ತಮ್ಮ ವಿಶಿಷ್ಟ ಶೈಲಿಯಿಂದಾಗಿ ಅವರು ಇಷ್ಟು ಯಶಸ್ಸು ದಾಖಲಿಸಿದ್ದಾರೆ” ಎಂದು ನೆಟ್ಟಿಗರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಡಾಲಿ ಚಾಯ್‌ವಾಲಾ ಹಿನ್ನೆಲೆ

ಮಹಾರಾಷ್ಟ್ರ ನಾಗಪುರದ ಸರ್ದಾರ್‌ ಏರಿಯಾದ ಹಳೆ ವಿಸಿಎ ಮೈದಾನ (Old VCA stadium)ದ ಬಳಿ ಬೀದಿ ಬದಿಯ ಚಹಾ ಗಾಡಿ ಇಟ್ಟುಕೊಂಡಿರುವ ಡಾಲಿ ಚಾಯ್‌ವಾಲಾ ತಮ್ಮ ವಿಶಿಷ್ಟ ಶೈಲಿಯ ಚಹಾ ತಯಾರಿಯ ಮೂಲಕವೇ ಜನಪ್ರಿಯರಾಗಿದ್ದಾರೆ. ಅವರ ನಿಜ ಹೆಸರು ಯಾರಿಗೂ ತಿಳಿದಿಲ್ಲ. ಆದರೆ ಅವರ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಲಕ್ಷಗಟ್ಟಲೆ ಮಂದಿ ವೀಕ್ಷಿಸುತ್ತಾರೆ. ತಮ್ಮದೇ ಅನನ್ಯ ಶೈಲಿಯಲ್ಲಿ ಚಹಾ ಮಾಡುವ ವಿಡಿಯೊಗಳನ್ನು ಅವರು ಆಗಾಗ ಅಪ್‌ಲೋಡ್‌ ಮಾಡುತ್ತಿರುತ್ತಾರೆ. ಚಹಾ ಮಾತ್ರವಲ್ಲ ಡಾಲಿ ಚಾಯ್‌ವಾಲಾ ಅಂಗಡಿಯಲ್ಲಿ ಸಿಗರೇಟ್‌ ಕೂಡ ಲಭ್ಯ. ಹೀಗಾಗಿಯೇ ಅವರ ಅಂಗಡಿ ಮುಂದೆ ಯಾವಾಗಲೂ ಜನ ಸಂದಣಿ ಕಂಡು ಬರುತ್ತದೆ. ಇತ್ತೀಚೆಗೆ ಭಾರತದ ಪ್ರವಾಸ ಕೈಗೊಂಡಿದ್ದ ಬಿಲ್ ಗೇಟ್ಸ್ ಅವರು ಬೀದಿ ಬದಿಯ ಡಾಲಿ ಚಾಯ್‌ವಾಲಾ ಅವರ ಚಹಾ ಗಾಡಿ ಬಳಿ ಚಹಾ ಮಾಡಿಸಿಕೊಂಡು ಸವಿಯುತ್ತಿರುವ ವಿಡಿಯೊ ಎಲ್ಲೆಡೆ ಹರಿದಾಡಿ ಸಂಚಲನ ಸೃಷ್ಟಿಸಿತ್ತು. ಅಂದಿನಿಂದ ಅವರ ಅದೃಷ್ಟ ಖುಲಾಯಿಸಿತ್ತು.

ಇದನ್ನೂ ಓದಿ: Viral News: ಬಿಲ್‌ ಗೇಟ್ಸ್ ಮನಗೆದ್ದ ಈ ಡಾಲಿ ಚಾಯ್‌ವಾಲಾ ಯಾರು? ಏನಿವರ ಕಥೆ?

Continue Reading

ಪ್ರಮುಖ ಸುದ್ದಿ

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

Xiaomi Car: ಶಿಯೋಮಿ ತನ್ನ ಕೈಗೆಟುಕುವ ಸ್ಮಾರ್ಟ್​ಫೋನ್​ಗಳು ಮತ್ತು ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾಗಿದೆ. ಇದೀಗ MI SU 7 ಇವಿಯೊಂದಿಗೆ ತನ್ನ ಖ್ಯಾತಿಯನ್ನು ಹೆಚ್ಚಿಸಲು ಮುಂದಾಗಿದೆ.

VISTARANEWS.COM


on

Xiaomi Car in China
Koo

ಬೀಜಿಂಗ್: ಕಡಿಮೆ ಬೆಲೆಯಲ್ಲಿ ಸ್ಮಾರ್ಟ್​ಫೋನ್​​​ಗಳನ್ನು ಮಾರಾಟ ಮಾಡುವ ಮೂಲಕ ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದ ಶಿಯೋಮಿ (Xiaomi Car) ತನ್ನ ಮೊಟ್ಟ ಮೊದಲ ಎಲೆಕ್ಟ್ರಿಕ್​ ಕಾರನ್ನು (EV Car) ಮಾರುಕಟ್ಟೆಗೆ ಇಳಿಸಿದೆ. ಇದು ಮೊಬೈಲ್​ನಂತೆಯೇ (Smart Phoni) ಹಲವಾರು ಫ್ಯಾನ್ಸಿ ಫೀಚರ್​ಗಳನ್ನು ಹೊಂದಿರುವ ಕಾರು ಎಂದು ಹೇಳಲಾಗಿದೆ. ಆದರೆ, ಈ ಕಾರು ಸದ್ಯ ಬಿಡುಗಡೆಗೊಂಡಿರುವುದು ಚೀನಾದಲ್ಲಿ. ಭಾರತಕ್ಕೆ ಬರುವುದೇ ಎಂದು ಗೊತ್ತಿಲ್ಲ.

ಚೀನಾದ ಗ್ರಾಹಕ ಟೆಕ್ ದೈತ್ಯ ಶಿಯೋಮಿ ಗುರುವಾರ ಬೀಜಿಂಗ್ ನಲ್ಲಿ ಈ ಕಾರನ್ನು ಬಿಡುಗಡೆ ಮಾಡಿದೆ. ಅಲ್ಲದೆ ವಿಶ್ವದ ಅತಿದೊಡ್ಡ ಕಾರು ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆಗೆ ಇಳಿದಿದೆ. ಚೀನಾದ ಇವಿ ವಲಯವು ಇತ್ತೀಚಿನ ವರ್ಷಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಆ ಕ್ಷೇತ್ರಕ್ಕೆ ಎಂಟ್ರಿ ಪಡೆದಿದೆ. ಶಿಯೋಮಿ ತನ್ನ ಕೈಗೆಟುಕುವ ಸ್ಮಾರ್ಟ್​ಫೋನ್​ಗಳು ಮತ್ತು ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾಗಿದೆ. ಇದೀಗ MI SU 7 ಇವಿಯೊಂದಿಗೆ ತನ್ನ ಖ್ಯಾತಿಯನ್ನು ಹೆಚ್ಚಿಸಲು ಮುಂದಾಗಿದೆ. ಚೀನಾದ ಕಾರು ಮಾರುಕಟ್ಟೆಯ ದೈತ್ಯ ಬಿವೈಡಿ ಮತ್ತು ಎಲೋನ್ ಮಸ್ಕ್ ಅವರ ಟೆಸ್ಲಾಗೆ ಸವಾಲು ಹಾಕುವುದು ಪಕ್ಕಾ.

ಮೂಲ ಎಸ್ ಯು 7 ಮಾದರಿಯ ಬೆಲೆ 215,900 ಯುವಾನ್ (24,90,198 ರೂಪಾಯಿ) ಎಂದು ಲೀ ಜುನ್ ಗುರುವಾರ ಸಂಜೆ ಬೀಜಿಂಗ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಸ್ಪೋರ್ಟಿ ಎಸ್ ಯು 7 ಒಂಬತ್ತು ಬಣ್ಣಗಳಲ್ಲಿ ಲಭ್ಯವಿರುತ್ತದೆ ಮತ್ತು “ಸೌಂಡ್ ಸಿಮ್ಯುಲೇಶನ್” ಅನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

ಇದು ಕರೋಕೆ ಉಪಕರಣಗಳು ಮತ್ತು ಮಿನಿ-ಫ್ರಿಜ್ ನಂತಹ ಸಾಕಷ್ಟು ಇತರ ಆಕರ್ಷಕ ಫೀಚರ್​ಗಳನ್ನು ಹೊಂದಿದೆ. 500,000 ಯುವಾನ್ ಗಿಂತ ಕಡಿಮೆ ಬೆಲೆಯ “ಅತ್ಯುತ್ತಮವಾಗಿ ಕಾಣುವ, ಅತ್ಯುತ್ತಮವಾಗಿ ಚಲಿಸುವ ಮತ್ತು ಸ್ಮಾರ್ಟ್ ಕಾರು” ಎಂದು ಶಿಯೋಮಿ ಹೇಳಿದೆ. ಈ ಕಾರಿನ ಬೆಲೆಯು ಉಳಿದ ಕಾರಿಗಿಂತ ಹೆಚ್ಚು ಸ್ಪರ್ಧಾತ್ಮಕವಾಗಿದೆ.

ಟೆಸ್ಲಾಗೆ ಹೋಲಿಕೆ

ಲೀ ಜುನ್ ಗುರುವಾರದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಕಂಪನಿಯ ಚೊಚ್ಚಲ ವಾಹನವನ್ನು ಟೆಸ್ಲಾದ ಮಾಡೆಲ್ 3 ಗೆ ಹೋಲಿಸಬಹುದು ಮತ್ತು ಕೆಲವು ಅಂಶಗಳಲ್ಲಿ ಅಮೇರಿಕನ್ ತಯಾರಕರ ಸೆಡಾನ್ ಅನ್ನು ಮೀರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಶಿಯೋಮಿ ವಿಶ್ವದ ಮೂರನೇ ಅತಿದೊಡ್ಡ ಸ್ಮಾರ್ಟ್​ಫೋನ್ ತಯಾರಕ ಕಂಪನಿಯಾಗಿದ್ದು, ಆ ವಲಯದಲ್ಲಿ ಅದರ ಅನುಭವವು ಅದರ ಇವಿ ಕಾರ್ಯತಂತ್ರವನ್ನು ರೂಪಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಕಟುವಾದ ಮಾರುಕಟ್ಟೆ

“ಪ್ರೀಮಿಯಂ ವಿಭಾಗವನ್ನು ಪ್ರವೇಶಿಸುವ ಮೂಲಕ, ಶಿಯೋಮಿ ಟೆಸ್ಲಾ ಮತ್ತು ನಿಯೋದಂತಹ ಸ್ಥಾಪಿತ ಬ್ರಾಂಡ್​ಗ ಳಿಗೆ ಪೈಪೋಟಿ ನೀಡಬಹುದು” ಎಂದು ರೈಸ್ಟಾಡ್ ಎನರ್ಜಿಯ ಹಿರಿಯ ಎಲೆಕ್ಟ್ರಿಕ್ ವಾಹನ ವಿಶ್ಲೇಷಕ ಅಭಿಷೇಕ್ ಮುರಳಿ ಎಎಫ್ಪಿಗೆ ತಿಳಿಸಿದರು.

ಚೀನಾ ವಿಶ್ವದಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದೇಶ. ಹೀಗಾಗಿ 2035 ರ ವೇಳೆಗೆ ಹೆಚ್ಚಿನ ದೇಶೀಯ ಕಾರು ಮಾರಾಟವನ್ನು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಮಾದರಿಗಳಿಂದ ತಯಾರಿಸಲು ಯೋಜಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ವಿಶ್ವದ ಅಗ್ರ ಮಾರಾಟಗಾರ ಬಿವೈಡಿ ದಾಖಲೆಯ ವಾರ್ಷಿಕ ಲಾಭವನ್ನು ದಾಖಲಿಸಿದ ಕೆಲವೇ ದಿನಗಳ ನಂತರ ಎಸ್ ಯು 7 ಬಿಡುಗಡೆಯಾಗಿದೆ, ಏಕೆಂದರೆ ಇದು ಆಗ್ನೇಯ ಏಷ್ಯಾದ ದೇಶಗಳಿಗೆ ಮತ್ತು ಲ್ಯಾಟಿನ್ ಅಮೆರಿಕ ಮತ್ತು ಯುರೋಪ್ ಗೆ ವಿಸ್ತರಣೆಗೊಳ್ಳಬಹುದು.

Continue Reading

ಪ್ರಮುಖ ಸುದ್ದಿ

Arvind Kejriwal: ಕೇಜ್ರಿವಾಲ್‌ ಬಂಧನ: ಮತ್ತೆ ಅಮೆರಿಕ ಕ್ಯಾತೆ; ಕಾಂಗ್ರೆಸ್‌ ಬ್ಯಾಂಕ್‌ ಅಕೌಂಟ್‌ ನಿರ್ಬಂಧ ಕುರಿತೂ ಕಿರಿಕ್

Arvind Kejriwal: ಅರವಿಂದ ಕೇಜ್ರಿವಾಲ್‌ ಬಂಧನದ ಜೊತೆಗೆ, ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಅಕೌಂಟ್‌ ನಿರ್ಬಂಧದ ಬಗ್ಗೆಯೂ ಅಮೆರಿಕ ಅಡ್ಡಮಾತು ಆಡಿದೆ.

VISTARANEWS.COM


on

arvind kejriwal & Matthew Miller
Koo

ನ್ಯೂಯಾರ್ಕ್‌: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ಬಂಧನ ಕುರಿತ ಮಾಡಿದ ಟೀಕೆಗಾಗಿ ಭಾರತವು (MEA) ನಿನ್ನೆ ಅಮೆರಿಕದ ಹಿರಿಯ ರಾಜತಾಂತ್ರಿಕರನ್ನು (US Diplomat) ಕರೆಸಿ ಪ್ರತಿಭಟಿಸಿದ್ದು, ಇಂದು ಮತ್ತೆ ಅಮೆರಿಕ ಈ ಬಗ್ಗೆ ಪ್ರತಿಹೇಳಿಕೆ ನೀಡಿದೆ. ಈ ಬಾರಿ ಕೇಜ್ರಿವಾಲ್‌ ಬಂಧನದ ಜೊತೆಗೆ, ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಅಕೌಂಟ್‌ ನಿರ್ಬಂಧದ (Congress bank account seizure) ಬಗ್ಗೆಯೂ ಅಡ್ಡಮಾತು ಆಡಿದೆ.

“ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ ಸೇರಿದಂತೆ ನಡೆದಿರುವ ಕ್ರಮಗಳನ್ನು ನಾವು ನಿಕಟವಾಗಿ ಅನುಸರಿಸುತ್ತಿದ್ದೇವೆ” ಎಂದು ಯುಎಸ್ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ. “ಅಮೆರಿಕ ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಉತ್ತೇಜಿಸುತ್ತದೆ. ಮತ್ತು ಯಾರೂ ಈ ಕ್ರಮಗಳನ್ನು ಆಕ್ಷೇಪಿಸಬಾರದು ಎಂದು ನಾವು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವ ಬಗ್ಗೆ ಮತ್ತು ದೆಹಲಿಯಲ್ಲಿ ಅಮೆರಿಕದ ಹಂಗಾಮಿ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ಕರೆಸಿ ವಿದೇಶಾಂಗ ಇಲಾಖೆ ಮಾತನಾಡಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಮಿಲ್ಲರ್ ಅವರು ಪ್ರತಿಕ್ರಿಯಿಸಿದರು.

“ಮುಂಬರುವ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಸವಾಲಾಗುವ ರೀತಿಯಲ್ಲಿ ತೆರಿಗೆ ಅಧಿಕಾರಿಗಳು ಅವರ ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆ ನಮಗೆ ಮಾಹಿತಿ ಇದೆ. ಇವುಗಳಲ್ಲಿ ಪ್ರತಿಯೊಂದಕ್ಕೂ ನಾವು ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ” ಎಂದಿದ್ದಾರೆ.

“ರಾಯಭಾರಿಯನ್ನು ಕರೆಸಿರುವ ಬಗ್ಗೆ, ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಆದರೆ ನಾವು ಸಾರ್ವಜನಿಕವಾಗಿ ಹೇಳಬಹುದಾದದ್ದು ನಾನು ಇಲ್ಲಿಂದ ಹೇಳಿದ್ದೇನೆ. ನಾವು ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ. ಯಾರೂ ಅದನ್ನು ಆಕ್ಷೇಪಿಸಬಾರದು ಎಂದು ಭಾವಿಸಬೇಡಿ. ನಾವು ಅದೇ ವಿಷಯವನ್ನು ಖಾಸಗಿಯಾಗಿಯೂ ಸ್ಪಷ್ಟಪಡಿಸುತ್ತೇವೆ,” ಎಂದು ಮಿಲ್ಲರ್ ಹೇಳಿದರು.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅಮೆರಿಕದ ಹಂಗಾಮಿ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ಕಚೇರಿಗೆ ನಿನ್ನೆ ಕರೆಸಿದ್ದರು. ಕೇಜ್ರಿವಾಲ್ ಅವರ ಬಂಧನದ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಅಧಿಕಾರಿಯ ಹೇಳಿಕೆಗಳ ವಿರುದ್ಧ ತೀವ್ರ ಪ್ರತಿಭಟನೆಯನ್ನು ಸಲ್ಲಿಸಿದ್ದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಸಭೆ ನಡೆದಿತ್ತು.

ದಿಲ್ಲಿಯ ಅಬಕಾರಿ ನೀತಿ ಜಾರಿ ಸಂದರ್ಭದಲ್ಲಿ ನಡೆದಿರುವ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆಗೆ ಇತ್ಯಾದಿಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಕೇಜ್ರಿವಾಲ್‌ ಒಂಬತ್ತು ಬಾರಿ ಇಡಿ ಸಮನ್ಸ್‌ಗಳನ್ನು ತಿರಸ್ಕರಿಸಿದ್ದರು. ಆದ್ದರಿಂದ, ಕೇಜ್ರಿವಾಲ್‌ ಅವರಿಗೆ ಯಾವುದೇ ಜಾಮೀನು ರಕ್ಷಣೆ ನೀಡಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿತ್ತು.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ನೀತಿಯನ್ನು ನಂತರ ರದ್ದುಗೊಳಿಸಲಾಯಿತು.

ನಿನ್ನೆ ಅಮೆರಿಕದ ಟೀಕೆಗೆ ಉತ್ತರಿಸಿದ್ದ ಭಾರತ ವಿದೇಶಾಂಗ ಇಲಾಖೆ, “ನಮ್ಮಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್‌ನ ವಕ್ತಾರರ ಹೇಳಿಕೆಗಳಿಗೆ ದೆಹಲಿ ತೀವ್ರ ಆಕ್ಷೇಪಣೆಯನ್ನು ಹೊಂದಿದೆ” ಎಂದು ಹೇಳಿದೆ.

“ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸಬೇಕು ಎಂದು ನಿರೀಕ್ಷಿಸಲಾಗಿದೆ. ಈ ಜವಾಬ್ದಾರಿಯು ಪ್ರಜಾಪ್ರಭುತ್ವಗಳ ವಿಷಯದಲ್ಲಿ ಇನ್ನೂ ಹೆಚ್ಚಾಗಿರುತ್ತದೆ. ಇಲ್ಲದಿದ್ದರೆ ಅನಾರೋಗ್ಯಕರ ಪೂರ್ವನಿದರ್ಶನಗಳು ಸೃಷ್ಟಿಯಾಗಬಹುದು” ಎಂದು ಸಚಿವಾಲಯ ಹೇಳಿದೆ.

“ಭಾರತದ ಕಾನೂನು ಪ್ರಕ್ರಿಯೆಗಳು ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿದೆ. ಅದರ ಮೇಲೆ ನಮ್ಮ ನಿರೀಕ್ಷೆಗಳನ್ನು ಹೇರುವುದು ಅನಗತ್ಯ” ಎಂದು MEA ಹೇಳಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗಿಲ್ಲ ಮಧ್ಯಂತರ ರಿಲೀಫ್‌; ಇನ್ನೂ 7 ದಿನ ಜೈಲೇ ಗತಿ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭಾರತದ ನ್ಯಾಯಪ್ರಕ್ರಿಯೆಯಲ್ಲಿ ಅಮೆರಿಕದ ಹಸ್ತಕ್ಷೇಪ ಅಧಿಕ ಪ್ರಸಂಗತನ

ಅಮೆರಿಕದ ಈ ನಡೆ ಆ ದೇಶದ ತಿಕ್ಕಲುತನವನ್ನು ತೋರಿಸುತ್ತದಲ್ಲದೇ ಇನ್ನೇನೂ ಅಲ್ಲ. ಭಾರತವು ಕಾನೂನಿನ ಆಳ್ವಿಕೆಯನ್ನು ಹೊಂದಿರುವ ದೃಢವಾದ ಪ್ರಜಾಪ್ರಭುತ್ವ ಎಂಬುದರಲ್ಲಿ ಸಂಶಯವಿಲ್ಲ. ಭಾರತದ ನ್ಯಾಯಾಂಗ ಬೇರೆ ದೇಶಗಳಿಗಿಂತ ಎಷ್ಟೋ ಪಕ್ವವಾಗಿದೆ; ಪಾರದರ್ಶಕವಾಗಿದೆ.

VISTARANEWS.COM


on

Joe Biden And Arvind Kejriwal
Koo

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಸಂಬಂಧಿಸಿರುವ ಕುರಿತು ಅಮೆರಿಕದ ವಿದೇಶಾಂಗ ಇಲಾಖೆ ನೀಡಿರುವ ಅನಗತ್ಯ ಪ್ರತಿಕ್ರಿಯೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತೀವ್ರ ಆಕ್ಷೇಪಣೆ, ಕಳವಳ ವ್ಯಕ್ತಪಡಿಸಿದೆ. ಇದನ್ನು ತಿಳಿಸಲು ಅಮೆರಿಕದ ಹಂಗಾಮಿ ಉಪ ರಾಯಭಾರಿ ಗ್ಲೋರಿಯಾ ಬರ್ಬೆನಾ ಅವರನ್ನು ಬುಧವಾರ ಕರೆಸಿ, ಭಾರತದ ನಿಲುವನ್ನು ಅವರಿಗೆ ವಿವರಿಸಲಾಗಿದೆ. “ರಾಜತಾಂತ್ರಿಕತೆಯಲ್ಲಿ, ದೇಶಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಸಹವರ್ತಿ ಪ್ರಜಾಪ್ರಭುತ್ವಗಳಲ್ಲಿ ಈ ಜವಾಬ್ದಾರಿ ಇನ್ನೂ ಹೆಚ್ಚು. ಇದು ಇಲ್ಲದಿದ್ದರೆ ಅನಾರೋಗ್ಯಕರ ಪೂರ್ವನಿದರ್ಶನಗಳು ಸೃಷ್ಟಿಯಾಗಬಹುದು. ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠವಾದ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ಅದರ ಮೇಲೆ ನಮ್ಮ ಹೇರಿಕೆ ಅನಗತ್ಯ” ಎಂದು ಎಂಇಎ ಅಮೆರಿಕಕ್ಕೆ ತಿಳಿಸಿದೆ.

ಅರವಿಂದ್ ಕೇಜ್ರಿವಾಲ್ ಬಂಧನ ಕುರಿತಾದ ವರದಿಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಮಂಗಳವಾರ ಅಮೆರಿಕ ವಿದೇಶಾಂಗ ಇಲಾಖೆ ಹೇಳಿದ್ದು, ನ್ಯಾಯಸಮ್ಮತ ಹಾಗೂ ಸಕಾಲಿಕ ಕಾನೂನು ಪ್ರಕ್ರಿಯೆಯನ್ನು ಖಾತರಿಪಡಿಸುವಂತೆ ಭಾರತಕ್ಕೆ ಸಲಹೆ ನೀಡಿತ್ತು. ಆರೋಪ ಎದುರಿಸುವ ಭಾರತದ ಇತರೆ ಯಾವುದೇ ಪ್ರಜೆಯಂತೆ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತಿ ವಿಚಾರಣೆಗೆ ಅರ್ಹರಾಗಿದ್ದಾರೆ ಎಂದು ಜರ್ಮನಿಯ ವಿದೇಶಾಂಗ ಕಚೇರಿ ಕೂಡ ಕೆಲವು ದಿನಗಳ ಹಿಂದೆ ಹೇಳಿತ್ತು. ಜರ್ಮನಿಯ ರಾಯಭಾರಿಗೂ ಸಮನ್ಸ್ ನೀಡಿ ಭಾರತ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿತ್ತು.

ಅಮೆರಿಕದ ಈ ನಡೆ ಆ ದೇಶದ ತಿಕ್ಕಲುತನವನ್ನು ತೋರಿಸುತ್ತದಲ್ಲದೇ ಇನ್ನೇನೂ ಅಲ್ಲ. ಭಾರತವು ಕಾನೂನಿನ ಆಳ್ವಿಕೆಯನ್ನು ಹೊಂದಿರುವ ದೃಢವಾದ ಪ್ರಜಾಪ್ರಭುತ್ವ ಎಂಬುದರಲ್ಲಿ ಸಂಶಯವಿಲ್ಲ. ಭಾರತದ ನ್ಯಾಯಾಂಗ ಬೇರೆ ದೇಶಗಳಿಗಿಂತ ಎಷ್ಟೋ ಪಕ್ವವಾಗಿದೆ; ಪಾರದರ್ಶಕವಾಗಿದೆ. ಇಲ್ಲಿನ ನ್ಯಾಯಾಧೀಶರು ಆಳುವವರ ಕೈಗೊಂಬೆಗಳಲ್ಲ. ಪ್ರಕರಣ ಸತ್ಯಾಸತ್ಯತೆಗಳನ್ನು ಪರಿಗಣಿಸಿ ನ್ಯಾಯ ನೀಡಬಲ್ಲ ಸಮರ್ಥರು. ಆರೋಪಿಯು ತನ್ನ ಪರವಾಗಿ ವಾದವನ್ನು ಮಂಡಿಸಲು, ಸಾಕ್ಷಿಗಳನ್ನು ಒದಗಿಸಲು, ಕಟಕಟೆಯಿಂದ ಪಾರಾಗಲು ಇಲ್ಲಿ ಸಾಕಷ್ಟು ಕಾನೂನಾತ್ಮಕ ಅವಕಾಶಗಳಿವೆ. ಇಡಿ ವಿಚಾರಣೆಯನ್ನು ಎದುರಿಸುತ್ತಿದ್ದರು ಎಲ್ಲರೂ ಅಪರಾಧಿಗಳಾಗಿರಲಾರರು. ವಿಚಾರಣೆ ಎದುರಿಸಿ ಬಳಿದ ಖುಲಾಸೆ ಆದವರೂ ಇದ್ದಾರೆ. ಕೇಜ್ರಿವಾಲ್‌ ನಿರ್ದೋಷಿಯಾಗಿದ್ದರೆ ಅವರು ಮತ್ತು ಅವರ ಪರ ಸಹಾನುಭೂತಿ ವ್ಯಕ್ತಡಿಸುವವರು ಅಂಜುವ ಅಗತ್ಯವಿಲ್ಲ. ಎಲ್ಲಾ ಪ್ರಜಾಪ್ರಭುತ್ವಗಳಂತೆ ಭಾರತ ದೇಶದ ಎಲ್ಲಾ ಕಾನೂನು ಪ್ರಕರಣಗಳಲ್ಲಿ ತ್ವರಿತ ವಿಷಯಗಳಲ್ಲಿ ಕಾನೂನು ತನ್ನದೇ ಆದ ಕ್ರಮವನ್ನು ಕೈಗೊಳ್ಳುತ್ತದೆ. ಈ ವಿಚಾರದಲ್ಲಿ ಅಮೆರಿಕ ಮಾಡಿರುವ ಊಹೆಗಳು ಅನಗತ್ಯವಾಗಿವೆ.

ಇಷ್ಟಕ್ಕೂ ಕೇಜ್ರಿವಾಲ್‌ ಅವರ ಬಂಧನ ಆಗಿರುವುದು ಸತತ ಒಂಬತ್ತನೇ ಬಾರಿ ಅವರು ಇಡಿ ಸಮನ್ಸ್‌ ಅನ್ನು ತಿರಸ್ಕರಿಸಿದ ನಂತರ. ಸಮನ್ಸ್‌ ನಿರಾಕರಿಸಿ ಕೋರ್ಟ್‌ಗೂ ಹಾಜರಾಗದೆ ಇದ್ದ ಕೇಜ್ರಿವಾಲ್‌ ಅವರನ್ನು ಹೈಕೋರ್ಟ್ ನಿರ್ದೇಶನದಂತೆ ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿ ಜಾರಿ ಸಂದರ್ಭದ ಅಕ್ರಮ, ಭ್ರಷ್ಟಾಚಾರಕ್ಕೆ ಸಂಬಂಧಿಸಿದೆ. ಇದರಲ್ಲಿ ಕೇಜ್ರಿವಾಲ್‌ ವಿರುದ್ಧ ಬಲಿಷ್ಠವಾದ ಸಾಕ್ಷಿಗಳು, ಮಾಫಿ ಸಾಕ್ಷಿಗಳು ಕೂಡ ಇವೆ. ಕಾನೂನು ತನ್ನದೇ ಆದ ರೀತಿಯ ನಡೆಯನ್ನು ಹೊಂದಿದ್ದು, ಅದಕ್ಕೆ ತಕ್ಕಂತೆ ಕ್ರಮವನ್ನು ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗಿಲ್ಲ ಮಧ್ಯಂತರ ರಿಲೀಫ್‌; ಇನ್ನೂ 7 ದಿನ ಜೈಲೇ ಗತಿ

ಇನ್ನು ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಅಮೆರಿಕ, ಜಗತ್ತಿನಾದ್ಯಂತ ಪ್ರಜಾಪ್ರಭುತ್ವವನ್ನು ಸ್ಥಾಪಿಸುವ ನೆಪದಲ್ಲಿ ಮಾಡಿರುವ ಸೇನಾ ದಾಳಿಗಳು ಕಡಿಮೆಯಲ್ಲ. ಅಫಘಾನಿಸ್ತಾನ, ವಿಯೆಟ್ನಾಂ, ಇರಾಕ್‌, ಹೀಗೆ ಎಲ್ಲಾ ಕಡೆ ಅದು ಸೈನ್ಯ ಕಳುಹಿಸಿ ಪರೋಕ್ಷವಾಗಿ ತನ್ನ ಆಡಳಿತವನ್ನು ಬಿತ್ತಿದೆ. ನ್ಯಾಟೋ ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಹೆಸರಿನಲ್ಲಿ ತನ್ನದೇ ಅಜೆಂಡಾ ಜಾರಿ ಮಾಡುವುದರಲ್ಲಿ ಅದು ಸಿದ್ಧಹಸ್ತವಾಗಿದೆ. ತನ್ನ ಮೇಲೆ 9/11 ದಾಳಿ ನಡೆಸಿದ ಇಸ್ಲಾಮಿಕ್‌ ಉಗ್ರರನ್ನು ಹುಡುಕುವ ನೆವದಲ್ಲಿ ಅಮೆರಿಕ ಅಫಘಾನಿಸ್ತಾನ ಹಾಗೂ ಪಾಕಿಸ್ತಾನದಲ್ಲಿ ಎಷ್ಟು ಮಂದಿಯನ್ನು ಕೊಂದಿದೆಯೋ, ಅವರೆಲ್ಲರಿಗೂ ನಿಷ್ಪಕ್ಷಪಾತ ನ್ಯಾಯದ ಹಸ್ತವನ್ನು ಅದು ಚಾಚಿದೆಯೋ? ಅಥವಾ ತಾನು ನ್ಯಾಯ ಎಂದು ಏನನ್ನು ಭಾವಿಸಿದೆಯೋ ಅದನ್ನು ಜಾರಿ ಮಾಡಿದೆಯೋ? ಇಂಥ ದೇಶ ಭಾರತಕ್ಕೆ ಬುದ್ಧಿವಾದ ಹೇಳುವ ನೈತಿಕ ಹಕ್ಕನ್ನು ಹೊಂದಿದೆ ಎಂಬುದರಲ್ಲಿ ಅನುಮಾನವಿದೆ. ಹೀಗಾಗಿ, ಭಾರತದ ನ್ಯಾಯವ್ಯವಸ್ಥೆಯ ಬಗ್ಗೆ ನಂಬಿಕೆಯಿಟ್ಟು ಅದು ಸುಮ್ಮನಿರುವುದು ಒಳಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
kea
ಕರ್ನಾಟಕ51 mins ago

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

Viral News: Holi at delhi metro
ದೇಶ2 hours ago

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Water Crisis
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

IPL 2024- Riyan Parag
ಪ್ರಮುಖ ಸುದ್ದಿ2 hours ago

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

Dolly Chaiwala
ವೈರಲ್ ನ್ಯೂಸ್3 hours ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ3 hours ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು3 hours ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ3 hours ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ3 hours ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ3 hours ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202412 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202413 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ21 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌