#BoycottCNN | ಜೋರಾಯಿತು ಸಿಎನ್ಎನ್ ನ್ಯೂಸ್ ಚಾನೆಲ್ ಬಹಿಷ್ಕಾರ ಅಭಿಯಾನ, ಕಾರಣ ಏನು? - Vistara News

ಪ್ರಮುಖ ಸುದ್ದಿ

#BoycottCNN | ಜೋರಾಯಿತು ಸಿಎನ್ಎನ್ ನ್ಯೂಸ್ ಚಾನೆಲ್ ಬಹಿಷ್ಕಾರ ಅಭಿಯಾನ, ಕಾರಣ ಏನು?

ಅಮೆರಿಕದ ಪ್ರಮುಖ ನ್ಯೂಸ್ ಚಾನೆಲ್ ಸಿಎನ್ಎನ್‌ ಅನ್ನು ಬಹಿಷ್ಕರಿಸುವ (#BoycottCNN) ಅಭಿಯಾನ ಜೋರಾಗಿದೆ. ಮಾಲೀಕತ್ವವು ಬದಲಾಗುತ್ತಿದ್ದಂತೆ ಚಾನೆಲ್‌ನ ಧೋರಣೆ ಕೂಡ ಬದಲಾಗಿರುವುದನ್ನು ವೀಕ್ಷಕರು ಖಂಡಿಸುತ್ತಿದ್ದಾರೆ.

VISTARANEWS.COM


on

CNN
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ಅಮೆರಿಕದ ಪ್ರಮುಖ ಚಾನೆಲ್ ಆಗಿರುವ ಸಿಎನ್ಎನ್ ವಿರುದ್ಧ ವೀಕ್ಷಕರು ತಿರುಗಿ ಬಿದ್ದಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ#BoycottCNN ಎಂದು ಅಭಿಯಾನ ಮಾಡುತ್ತಿದ್ದಾರೆ. ಅವರ ಈ ಆಕ್ರೋಶಕ್ಕೆ ಕಾರಣವೇನು? ಸಿಎನ್ಎನ್ ಇತ್ತೀಚಿನ ದಿನಗಳಲ್ಲಿ ನಿಧಾನವಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಪರವಾಗಿ ಇರುವಂತೆ ತೋರುತ್ತಿದೆ. ರಷ್ಯಾ ಹಾಗೂ ಫ್ಯಾಸಿಸ್ಟ್ ಶಕ್ತಿಗಳಿಗೆ ಇಂಬು ನೀಡುತ್ತಿದೆ ಎಂದು ನೆಟ್ಟಿಗರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಸಿಎನ್ಎನ್ ಮಾಲೀಕತ್ವ ಬದಲಾಗಿದ್ದು, ಅದರ ಕಾರ್ಯವೈಖರಿಯಲ್ಲಿ ಎದ್ದು ಕಾಣುತ್ತಿದೆ. ಪರಿಣಾಮವಾಗಿ ಕಳೆದ ಒಂದು ತಿಂಗಳಲ್ಲಿ ಸಿಎನ್ಎನ್ ಜನಪ್ರಿಯ ಇಬ್ಬರು ಪತ್ರಕರ್ತರು ಸಂಸ್ಥೆಯನ್ನು ತೊರೆದಿದ್ದಾರೆ. ಸೆಂಟರಿಕ್ ಆಗಿದ್ದ ಚಾನೆಲ್ ನಿಧಾನವಾಗಿ ರೈಟಿಸ್ಟ್ ಧೋರಣೆಯನ್ನು ತಳೆಯುತ್ತಿದೆ ಎಂಬ ಆರೋಪವು ಕೇಳಿ ಬರುತ್ತಿದ್ದು, ಕೆಲವು ಪ್ರೋಗ್ರಾಮ್‌ಗಳನ್ನು ಕೂಡ ರದ್ದು ಮಾಡಲಾಗಿದೆ. ಈ ಘಟನೆಗಳು, ನಿರ್ಧಾರಗಳು ವೀಕ್ಷಕರಿಗೆ ಅರಿವಿಗೆ ಬರುತ್ತಿದ್ದಂತೆ ಸೋಷಿಯಲ್ ಮೀಡಿಯಾಗಳಲ್ಲಿ #BoycottCNN ಎಂಬ ಅಭಿಯಾನ ಜೋರಾಗಿದೆ.

ಸಿಎನ್ಎನ್ ಜನಪ್ರಿಯ ಕಾರ್ಯಕ್ರಮವಾಗಿದ್ದ ಬ್ರೈನ್ ಸ್ಟೆಲ್ಟರ್ ಅವರ ರಿಲಾಯಬಲ್ ಸೋರ್ಸಸ್ ಪ್ರಸಾರವನ್ನು ರದ್ದುಪಡಿಸಲಾಗಿದೆ. ಇದಕ್ಕೆ ಸಂಸ್ಥೆಯ ಬದಲಾದ ನಾಯಕತ್ವ ಕಾರಣ ಎಂದು ಆರೋಪಿಸಲಾಗಿದೆ. ಇದಾದ ಬಳಿಕ ಮತ್ತೊಬ್ಬ ಜನಪ್ರಿಯ ಪತ್ರಕರ್ತ, ವೈಟ್ ಹೌಸ್ ರಿಪೋರ್ಟಿಂಗ್ ಮಾಡುತ್ತಿದ್ದ ಜಾನ್ ಹಾರ್ವುಡ್ ಕೂಡ ಸಿಎನ್ಎನ್ ತೊರೆದಿದ್ದಾರೆ.

ಅಮೆರಿಕದ ಮೊದಲ ನ್ಯೂಸ್ ಚಾನೆಲ್ ಎನಿಸಿರುವ ಸಿಎನ್ಎನ್‌ನಲ್ಲಿ ಸಿಕ್ಕಾಪಟ್ಟೆ ಬದಲಾವಣೆಗಳಾಗುತ್ತಿವೆ. ಸಾಕಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಜತೆಗೆ ಸೈದ್ಧಾಂತಿಕವಾಗಿ ಸಿಎನ್ಎನ್ ಸೆಂಟರಿಕ್ ಪಾಲಿಸಿಯಿಂದ ಪ್ರಪಗಂಡಾ ಜರ್ನಲಿಸಮ್ ಕಡೆ ವಾಲುತ್ತಿದೆ ಎಂಬ ಆರೋಪವು ಕೇಳಿ ಬರುತ್ತಿದೆ.

ಬದಲಾದ ಕಂಪನಿಯ ನಾಯಕತ್ವ
ಈಗ ಸಿಎನ್ಎನ್ ಮಾಲೀಕತ್ವ ಬದಲಾಗಿದೆ. ಸಿಎನ್ಎನ್ ಚಾನೆಲ್ ಒಡೆತನವನ್ನು ಹೊಂದಿರುವ ಸಿಎನ್ಎನ್ ಗ್ಲೋಬಲ್ ಕಂಪನಿಯು ಈ ಮೊದಲು ಎಟಿ ಆ್ಯಂಡ್ ಟಿ ಒಡೆತನದಲ್ಲಿತ್ತು. ಈ ಕಂಪನಿಯನ್ನು ಇದೀಗ ವಾರ್ನರ್ ಬ್ರದರ್ಸ್. ಡಿಸ್ಕವರಿ ಕಂಪನಿ ಖರೀದಿಸಿದೆ. ವಾರ್ನರ್ ಬ್ರದರ್ಸ್ ಕಂಪನಿಯಲ್ಲಿ ಹೆಚ್ಚಿನ ಷೇರುಗಳನ್ನು ಹೊಂದಿರುವ ಮಿಲಿಯೇನರ್ ಹಾಗೂ ಮಾಧ್ಯಮ ದೈತ್ಯ ಜಾನ್ ಮಲೋನ್ ಅವರು ಟ್ರಂಪ್ ಅವರನ್ನು ಬೆಂಬಲಿಸಿದ್ದರು. ಹಾಗಾಗಿ, ಸಿಎನ್ಎನ್ ಕಾರ್ಯವೈಖರಿಯಲ್ಲಿ ಬದಲಾವಣೆ ಕಂಡು ಬರುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ | ಅಮೆರಿಕದ ಡ್ರೋನ್‌ ದಾಳಿಗೆ ಅಲ್‌ ಖೈದಾ ನಾಯಕ ಜವಾಹಿರಿ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vinesh Phogat: ವಿನೇಶ್‌ ಪೋಗಟ್‌ಗೆ ಭಾರೀ ಹಿನ್ನಡೆ; ಬೆಳ್ಳಿ ಪದಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Vinesh Phogat: ಪ್ಯಾರಿಸ್​ ಒಲಿಂಪಿಕ್ಸ್​ ಕುಸ್ತಿ ಫೈನಲ್​ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು. ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics 2024)ನಲ್ಲಿ ಕೇವಲ 100ಗ್ರಾಂ ಹೆಚ್ಚು ತೂಕದಿಂದಾಗಿ ಫೈನಲ್‌ ಪಂದ್ಯಾಟದಿಂದ ಅನರ್ಹತೆಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರಿಗೆ ಭಾರೀ ಹಿನ್ನಡೆಯಾಗಿದೆ. ತಮ್ಮ ಅನರ್ಹತೆ ಪ್ರಶ್ನಿಸಿ ಬೆಳ್ಳಿ ಪದಕ ನೀಡುವಂತೆ ಕೋರಿ ವಿನೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ತಿರಸ್ಕರಿಸಿದೆ. ಆಮೂಲಕ ರಜತ ಪದಕ(Silver Medal)ವೂ ವಿನೇಶ್‌ ಪೋಗಟ್‌ ಕೈತಪ್ಪಿದೆ.

ಪ್ಯಾರಿಸ್​ ಒಲಿಂಪಿಕ್ಸ್​ ಕುಸ್ತಿ ಫೈನಲ್​ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು. ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಒಲಿಂಪಿಕ್ಸ್‌ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿ ಒಲಿಂಪಿಕ್ಸ್​ ಮುಕ್ತಾಯಕ್ಕೂ ಮುನ್ನ ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ 2 ಬಾರಿ ಈ ತೀರ್ಪು ಪ್ರಕಟ ಮುಂದೂಡಿಕೆಯಾಗಿತ್ತು. ಇದೀಗ ಇಂದು ತೀರ್ಪು ಪ್ರಕಟಿಸಿರವ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ಪೋಗಟ್‌ ಅರ್ಜಿ ವಜಾಗೊಳಿಸಿದೆ.

ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಶ್ಪತ್ ಸಿಂಘಾನಿಯಾ ಸೇರಿದಂತೆ ವಿನೇಶ್ ಅವರ ವಕೀಲರು ವಿನೇಶ್​ ಪರ ವಾದ ಮಾಡಿದ್ದಾರೆ. ತೂಕ ಹೆಚ್ಚಳವು ದೇಹದ ನೈಸರ್ಗಿಕ ಚೇತರಿಕೆ ಪ್ರಕ್ರಿಯೆಯಿಂದಾಗಿ ಮತ್ತು ದೇಹ ನೋಡಿಕೊಳ್ಳುವುದು ಕ್ರೀಡಾಪಟುವಿನ ಮೂಲಭೂತ ಹಕ್ಕು ಎಂದು ವಾದಿಸಿದ್ದಾರೆ. ಸ್ಪರ್ಧೆಯ 1ನೇ ದಿನದಂದು ಆಕೆಯ ದೇಹದ ತೂಕವು ನಿಗದಿತ ಮಿತಿಗಿಂತ ಕಡಿಮೆಯಾಗಿತ್ತು. ಬಳಿಕ ಏಕಾಏಕಿ ಏರಿಕೆಯಾಗಿದೆ. ಅದು ವಂಚನೆಯಲ್ಲ ಎಂದು ಅವರು ವಾದಿಸಿದ್ದಾರೆ.

ಸೆಮಿಫೈನಲ್​ ವೇಳೆ ವಿನೇಶ್​ 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ವಿಶ್ವ ಕುಸ್ತಿ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಮ್ಮ ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ತೂಕದ ನಿಯಮಗಳು ಸಂಪೂರ್ಣವಾಗಿ ಬದಲಾಗುವ ಸಾಧ್ಯತೆಯಿಲ್ಲವಾದರೂ, ಕ್ರೀಡಾಪಟುಗಳ ಸುರಕ್ಷತೆ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಸಣ್ಣ ಮಾರ್ಪಾಡುಗಳನ್ನು ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

Continue Reading

ಕ್ರೀಡೆ

Duleep Trophy: ದುಲೀಪ್‌ ಟ್ರೋಫಿ ತಂಡ ಪ್ರಕಟ; ಪಟ್ಟಿಯಲ್ಲಿಲ್ಲ ಕೊಹ್ಲಿ, ಶರ್ಮಾ ಹೆಸರು- ನಾಲ್ಕು ಟೀಮ್‌ಗಳ ನಾಯಕರು ಇವರೇ!

Duleep Trophy: ಸೆಪ್ಟಂಬರ್ 5 ರಿಂದ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಟೀಮ್ ಇಂಡಿಯಾದ ನಾಯಕ ರೋಹಿತ್‌ ಶರ್ಮಾ(Rohit Sharma) ಹಾಗೂ ವಿರಾಟ್‌ ಕೊಹ್ಲಿ(Virat Kohli) ದುಲೀಪ್‌ ಟ್ರೋಫಿಯಲ್ಲಿ ಆಡುವುದಿಲ್ಲ. ಇವರು ಈ ಹಿಂದೆಯೇ ಆಟ ಆಡುವುದಿಲ್ಲ ಎಂದು ಘೋಷಿಸಿದ್ದರು. ಇನ್ನು ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಮತ್ತು ರಿಂಕು ಸಿಂಗ್ ಕೂಡ ಆಯ್ಕೆಯಾಗಲಿಲ್ಲ.

VISTARANEWS.COM


on

duleep trophy
Koo

ನವದೆಹಲಿ: ಮುಂದಿನ ತಿಂಗಳು ಸೆಪ್ಟೆಂಬರ್ 5ನೇ ತಾರೀಕಿನಿಂದ ದುಲೀಪ್ ಟ್ರೋಫಿ ಶುರುವಾಗಲಿದ್ದು, ಇಂದು ತಂಡಗಳನ್ನು ಪ್ರಕಟಿಸಲಾಗಿದೆ. ದುಲೀಪ್​​ ಟ್ರೋಫಿ(Duleep Trophy)ಯ ಎ ತಂಡಕ್ಕೆ ಶುಭಮನ್ ಗಿಲ್(Shubman Gill), ಬಿ ತಂಡಕ್ಕೆ ಅಭಿಮನ್ಯು ಈಶ್ವರನ್(Abhimanyu Easwaran), ಸಿ ತಂಡಕ್ಕೆ ರುತುರಾಜ್ ಗಾಯಕ್‌ವಾಡ್(Ruturaj Gaikwad) ಮತ್ತು ಡಿ ತಂಡಕ್ಕೆ ಶ್ರೇಯಸ್ ಅಯ್ಯರ್(Shreyas Iyer) ನಾಯಕರಾಗಿ ನೇಮಕಗೊಂಡಿದ್ದಾರೆ. ದುಲೀಪ್​​ ಟ್ರೋಫಿ ಸೆ.5ನೇ ತಾರೀಕಿನಿಂದ ಸೆ. 22ರ ತನಕ ನಡೆಯಲಿದೆ.

ಸೆಪ್ಟಂಬರ್ 5 ರಿಂದ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಟೀಮ್ ಇಂಡಿಯಾದ ನಾಯಕ ರೋಹಿತ್‌ ಶರ್ಮಾ(Rohit Sharma) ಹಾಗೂ ವಿರಾಟ್‌ ಕೊಹ್ಲಿ(Virat Kohli) ದುಲೀಪ್‌ ಟ್ರೋಫಿಯಲ್ಲಿ ಆಡುವುದಿಲ್ಲ. ಇವರು ಈ ಹಿಂದೆಯೇ ಆಟ ಆಡುವುದಿಲ್ಲ ಎಂದು ಘೋಷಿಸಿದ್ದರು. ಇನ್ನು ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಮತ್ತು ರಿಂಕು ಸಿಂಗ್ ಕೂಡ ಆಯ್ಕೆಯಾಗಲಿಲ್ಲ.

ತಂಡಗಳು ಹೀಗಿವೆ

ತಂಡ ಎ: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ತಂಡ ಬಿ: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಾಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ , ಎನ್ ಜಗದೀಸನ್ (ವಿಕೆಟ್‌ ಕೀಪರ್).

ತಂಡ ಸಿ: ರುತುರಾಜ್ ಗಾಯಕ್‌ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಉಮ್ರಾನ್ ಮಲಿಕ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮರ್ಕಂಡೆ (ವಿಕೆಟ್‌ ಕೀಪರ್), ಸಂದೀಪ್ ವಾರಿಯರ್.

ತಂಡ ಡಿ: ಶ್ರೇಯಸ್ ಲೈಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

ಈ ಬಾರಿ ಯಾವೆಲ್ಲಾ ಆಟಗಾರರು ಮಿಸ್?

ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್, ಸಂಜು ಸಾಸ್ಮಾನ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ದುಲೀಪ್‌ ಟ್ರೋಫಿಯಲ್ಲಿ ಆಡುವುದನ್ನು ಕಾಣುವುದಿಲ್ಲ. ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಕೂಡ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲ.

ಇದನ್ನೂ ಓದಿ: Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Continue Reading

ದೇಶ

Droupadi Murmu: ಹೊಸ ಕ್ರಿಮಿನಲ್‌ ಕಾನೂನು ಸ್ವಾತಂತ್ರ್ಯ ಹೋರಾಟಗಾರರಿಗೆ ಸಂದ ಗೌರವ; ರಾಷ್ಟ್ರಪತಿ ಮುರ್ಮು

Droupadi Murmu: ಭಾರತ ವಿಭಜನೆಯ ಕರಾಳ ದಿನದ ಬಗ್ಗೆ ಪ್ರಸ್ತಾಪಿಸಿದ ಅವರು, ಇಂದು, ಆಗಸ್ಟ್ 14, ನಮ್ಮ ದೇಶವು ವಿಭಜನೆಯ ಭಯಾನಕ ಕರಾಳ ದಿನವನ್ನು ಆಚರಿಸುತ್ತಿದೆ. ವಿಭಜನೆಯ ಭೀಕರತೆಯನ್ನು ನೆನಪಿಸಿಕೊಳ್ಳುವ ದಿನವಿದು. ನಮ್ಮ ರಾಷ್ಟ್ರವು ವಿಭಜನೆಯಾದಾಗ, ಲಕ್ಷಾಂತರ ಜನರು ಪಲಾಯನ ಮಾಡಲು ಒತ್ತಾಯಿಸಲ್ಪಟ್ಟರು ಮತ್ತು ಲೆಕ್ಕವಿಲ್ಲದಷ್ಟು ಜೀವಗಳನ್ನು ಕಳೆದುಕೊಂಡರು.

VISTARANEWS.COM


on

Droupadi Murmu
Koo

ನವದೆಹಲಿ: ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಮನ್ನ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಶುಭಕೋರುತ್ತಾ ಭಾಷಣ ಆರಂಭಿಸಿದ ರಾಷ್ಟ್ರಪತಿ ಇಂದು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

ಭಾರತ ವಿಭಜನೆಯ ಕರಾಳ ದಿನದ ಬಗ್ಗೆ ಪ್ರಸ್ತಾಪಿಸಿದ ಅವರು, ಇಂದು, ಆಗಸ್ಟ್ 14, ನಮ್ಮ ದೇಶವು ವಿಭಜನೆಯ ಭಯಾನಕ ಕರಾಳ ದಿನವನ್ನು ಆಚರಿಸುತ್ತಿದೆ. ವಿಭಜನೆಯ ಭೀಕರತೆಯನ್ನು ನೆನಪಿಸಿಕೊಳ್ಳುವ ದಿನವಿದು. ನಮ್ಮ ರಾಷ್ಟ್ರವು ವಿಭಜನೆಯಾದಾಗ, ಲಕ್ಷಾಂತರ ಜನರು ಪಲಾಯನ ಮಾಡಲು ಒತ್ತಾಯಿಸಲ್ಪಟ್ಟರು ಮತ್ತು ಲೆಕ್ಕವಿಲ್ಲದಷ್ಟು ಜೀವಗಳನ್ನು ಕಳೆದುಕೊಂಡರು. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ನಾವು ಈ ದುರಂತ ಘಟನೆಯನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ನೋವು ಸಂಕಷ್ಟಕ್ಕೀಡಾಗಿದ್ದ ಕುಟುಂಬಗಳ ಜೊತೆ ನಾವಿದ್ದೇವೆ ಎಂದರು.

ರಾಷ್ಟ್ರಪತಿ ಭಾಷಣದ ಪ್ರಮುಖಾಂಶ

  1. ಅಧ್ಯಕ್ಷ ದ್ರೌಪದಿ ಮುರ್ಮು ಅವರು 2024 ರ ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಹಾಯ ಮಾಡಿದ EC, ಎಲ್ಲಾ ಅಧಿಕಾರಿಗಳು, ಭದ್ರತಾ ಸಿಬ್ಬಂದಿಯನ್ನು ಶ್ಲಾಘನೆ
  2. ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ ಮತ್ತು ದೇಶಾದ್ಯಂತ ‘ನಾರಿ ಶಕ್ತಿ’ ವಿಸ್ತರಿಸಲು ಕೆಲಸ ಮಾಡಿದೆ.
  3. ಪ್ರಧಾನ ಮಂತ್ರಿಯವರ ಇಂಟರ್ನ್‌ಶಿಪ್ ಯೋಜನೆಯನ್ನು ಶ್ಲಾಘನೆ. ಇದು ದೇಶಾದ್ಯಂತ 1 ಕೋಟಿಗೂ ಹೆಚ್ಚು ಯುವಕರಿಗೆ ಕೆಲಸದ ಅನುಭವ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಒದಗಿಸುವ ಗುರಿಯನ್ನು ಹೊಂದಿದೆ.
  4. ಪ್ಯಾರಿಸ್ ಒಲಂಪಿಕ್‌ನಲ್ಲಿ ಭಾಗವಹಿಸಿ ಹೆಮ್ಮೆ ತಂದಿರುವ ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟಿ 20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಗೆಲುವಿಗಾಗಿ ಅಭಿನಂದನೆ
  5. 2021 ಮತ್ತು 2024 ರ ನಡುವೆ ಸರಾಸರಿ ವಾರ್ಷಿಕ 8% ಬೆಳವಣಿಗೆಯೊಂದಿಗೆ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇದು ಜನರ ಕೈಗೆ ಹೆಚ್ಚಿನ ಹಣವನ್ನು ನೀಡಿದೆ ಮಾತ್ರವಲ್ಲ, ಆದರೆ ಒಂದು ಬಡತನ ರೇಖೆಗಿಂತ ಕೆಳಗಿರುವ ಜನರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ.
  6. ರಾಷ್ಟ್ರದಾದ್ಯಂತ ಜಾರಿಗೊಳಿಸಲಾದ ಹೊಸ ಕ್ರಿಮಿನಲ್ ಕಾನೂನುಗಳು “ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ”
  7. ಭಾರತವು ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಲು ಸಿದ್ಧವಾಗಿದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ.
  8. ಸ್ವಾತಂತ್ರ್ಯ ಹೋರಾಟದಲ್ಲಿ ಬುಡಕಟ್ಟು ಜನಾಂಗದ ತಿಲ್ಕಾ ಮಾಂಝಿ, ಬಿರ್ಸಾ ಮುಂಡಾ, ಲಕ್ಷ್ಮಣ್ ನಾಯ್ಕ್ ಮತ್ತು ಫುಲೋ-ಝಾನೋ ಅವರ ತ್ಯಾಗ ಬಲಿದಾನ ಮರೆಯುವಂತಿಲ್ಲ. ನಾವು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಜಂಜಾಟಿಯ ಗೌರವ್ ದಿವಸ್ ಎಂದು ಆಚರಿಸಲು ಪ್ರಾರಂಭಿಸಿದ್ದೇವೆ

ಇದನ್ನೂ ಓದಿ: Independence day 2024: ಆಗಸ್ಟ್ 15ರ ಕುರಿತ 8 ಪ್ರಶ್ನೆಗಳಿಗೆ ಇಲ್ಲಿದೆ ಕುತೂಹಲಕರ ಉತ್ತರ!

Continue Reading

ಕರ್ನಾಟಕ

Cooker Blast: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿ ಯುವಕ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

Cooker Blast: ಬೆಂಗಳೂರಿನ ಜೆ.ಪಿ.ನಗರದ ಆರನೇ ಹಂತದಲ್ಲಿ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

VISTARANEWS.COM


on

Cooker Blast
Koo

ಬೆಂಗಳೂರು: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು (Cooker Blast) ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತ ಹಾಗೂ ಗಾಯಗೊಂಡ ಯುವಕ ಇಬ್ಬರೂ ಉತ್ತರ ಪ್ರದೇಶ ಮೂಲದವರಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಮೋಸಿನ್ ಮೃತ. ಸಮೀರ್‌ ಗಾಯಾಳು. ಜೆ.ಪಿ.ನಗರದ ಆರನೇ ಹಂತದಲ್ಲಿ ಘಟನೆ ನಡೆದಿದ್ದು, ಕುಕ್ಕರ್‌ನ ಪ್ರೆಷರ್ ಹೆಚ್ಚಾಗಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೆ ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ವಿಕ್ಟೋರಿಯಾ ಸುಟ್ಟಗಾಯ ವಿಭಾಗದಲ್ಲಿ ಸಮೀರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಚಿಕಿತ್ಸೆ ಫಲಿಸದೇ ಮೋಸಿನ್ ಎಂಬಾತ ಮೃತಪಟ್ಟಿದ್ದಾನೆ. ಈತನಿಗೆ ಸುಮಾರು ಶೇ.60 ಸುಟ್ಟಗಾಯಗಳಾಗಿದ್ದವು.

ಕುಕ್ಕರ್ ಸ್ಫೋಟಗೊಂಡ ಬೆನ್ನಲ್ಲೇ ದೊಡ್ಡ ಪ್ರಮಾಣದ ಶಬ್ದ ಬಂದಿದ್ದು, ಮನೆಯಲ್ಲಿ ಇದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ.

ಇದನ್ನೂ ಓದಿ | Sexual Abuse: ದಲಿತ ಬಾಲಕಿಯನ್ನು ಅಪಹರಿಸಿ ಇಸ್ಲಾಂಗೆ ಮತಾಂತರ; ಮುಸ್ಲಿಂ ಧರ್ಮಗುರು ಬಂಧನ

ಜೋರಾಗಿ ಶಬ್ದ ಬಂತು, ಪಕ್ಕದ ಬಿಲ್ಡಿಂಗ್‌ನಲ್ಲಿದ್ದ ನಾವೆಲ್ಲಾ ಓಡುತ್ತಾ ಹೊರಗೆ ಬಂದೆವು. ಅವರಿಗೆ ಮೈಯೆಲ್ಲಾ ಸುಟ್ಟ ಗಾಯ ಆಗಿತ್ತು. ಇಬ್ಬರನ್ನೂ ಆಟೋದಲ್ಲಿ ಆಸ್ಪತ್ರೆಗೆ ಕಳಿಸಿದೆವು. ಇಬ್ಬರೂ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರಂತೆ. ಇಬ್ಬರೇ ರೂಮ್‌ನಲ್ಲಿ ಇದ್ದರು ಎಂದು ಗೊತ್ತಿದೆ. ಅವರು ಮಾತನಾಡೋ ಪರಿಸ್ಥಿತಿಯಲ್ಲಿ ಇರಲಿಲ್ಲ ಎಂದು ಸ್ಥಳೀಯ ಮಂಜು ಹೇಳಿದ್ದಾರೆ.

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

Vidhana Soudha
Vidhana Soudha

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ (Vidhana Soudha) ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.

ಇದನ್ನೂ ಓದಿ | ಇದನ್ನೂ ಓದಿ: Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Continue Reading
Advertisement
Vinesh Phogat
ಪ್ರಮುಖ ಸುದ್ದಿ46 mins ago

Vinesh Phogat: ವಿನೇಶ್‌ ಪೋಗಟ್‌ಗೆ ಭಾರೀ ಹಿನ್ನಡೆ; ಬೆಳ್ಳಿ ಪದಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

duleep trophy
ಕ್ರೀಡೆ1 hour ago

Duleep Trophy: ದುಲೀಪ್‌ ಟ್ರೋಫಿ ತಂಡ ಪ್ರಕಟ; ಪಟ್ಟಿಯಲ್ಲಿಲ್ಲ ಕೊಹ್ಲಿ, ಶರ್ಮಾ ಹೆಸರು- ನಾಲ್ಕು ಟೀಮ್‌ಗಳ ನಾಯಕರು ಇವರೇ!

Reliance Foundation
ದೇಶ2 hours ago

Reliance Foundation: ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ

Bank FD Rates
ಮನಿ-ಗೈಡ್2 hours ago

Bank FD Rates: ಪರಿಷ್ಕೃತ ಲೆಕ್ಕಾಚಾರದ ಪ್ರಕಾರ ಎಫ್‌ಡಿ ಬಡ್ಡಿ ದರ ಯಾವ ಬ್ಯಾಂಕ್‌ನಲ್ಲಿ ಎಷ್ಟಿದೆ?

Banking Recruitment 2024
ಉದ್ಯೋಗ2 hours ago

Banking Recruitment 2024: 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4455 ಹುದ್ದೆ; ಐಬಿಪಿಎಸ್‌ನಿಂದ ಮತ್ತೆ ನೇಮಕ; complete details

Necklace Mangalya Fashion
ಫ್ಯಾಷನ್2 hours ago

Necklace Mangalya Fashion: ವಿವಾಹಿತರ ಮಾಂಗಲ್ಯಕ್ಕೂ ಸಿಕ್ತು ವೈವಿಧ್ಯಮಯ ನೆಕ್ಲೇಸ್‌ ರೂಪ!

Arun Yogiraj
ಬೆಂಗಳೂರು2 hours ago

Arun Yogiraj: ʼವಿಶ್ವ ಶ್ರೇಷ್ಠ ಕನ್ನಡಿಗ 2024ʼ ಪ್ರಶಸ್ತಿಗೆ ಶ್ರೀರಾಮ ವಿಗ್ರಹದ ರೂವಾರಿ ಅರುಣ್ ಯೋಗಿರಾಜ್‌ ಆಯ್ಕೆ

Shira News
ತುಮಕೂರು2 hours ago

Shira News: ಉದ್ಯೋಗ ಕೌಶಲಕ್ಕಾಗಿ ಶಿರಾದಲ್ಲಿ ಸ್ಕಿಲ್ ಯುನಿವರ್ಸಿಟಿ ಸ್ಥಾಪನೆ; ಟಿ.ಬಿ. ಜಯಚಂದ್ರ

Murder Case
ಕರ್ನಾಟಕ2 hours ago

Murder Case: ಪತ್ನಿಯನ್ನು ಸ್ಮಶಾನಕ್ಕೆ ಕರೆದೊಯ್ದು ಕೊಲೆಗೈದ ಪತಿ!

Multivitamins
ಆರೋಗ್ಯ2 hours ago

Multivitamins: ನಮಗೆ ವಿಟಮಿನ್‌ ಪೂರಕಗಳು ಅಗತ್ಯವೆಂದು ತಿಳಿಯುವುದು ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌