PM Modi Poland Visit: ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ; ರಷ್ಯಾ-ಉಕ್ರೇನ್‌ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ರಿಯಾಕ್ಟ್‌ - Vistara News

ವಿದೇಶ

PM Modi Poland Visit: ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ; ರಷ್ಯಾ-ಉಕ್ರೇನ್‌ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ರಿಯಾಕ್ಟ್‌

PM Modi Poland Visit: 2022ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

VISTARANEWS.COM


on

PM Modi Poland Visit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾರ್ಸೋ: ಪೋಲೆಂಡ್‌ ಪ್ರವಾಸ(PM Modi Poland Visit)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್‌(Russia-Ukraine War) ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

2022 ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

ಸುಂದರವಾದ ನಗರವಾದ ವಾರ್ಸಾದಲ್ಲಿ ನನಗೆ ಆತ್ಮೀಯ ಸ್ವಾಗತ ನೀಡಿದ ಪಿಎಂ ಟಸ್ಕ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ದೀರ್ಘಕಾಲದವರೆಗೆ ಭಾರತದ ಸ್ನೇಹಿತರಾಗಿದ್ದೀರಿ ಮತ್ತು ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧವನ್ನು ಹೆಚ್ಚಿಸಲು ನೀವು ದೊಡ್ಡ ಕೊಡುಗೆ ನೀಡಿದ್ದೀರಿ ಎಂದು ಅವರು ಹೇಳಿದರು.

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಘರ್ಷಣೆಗಳ ಕುರಿತು, ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದು, ನಿಜಕ್ಕೂ ಆತಂಕಕಾರಿ ವಿಚಾರ ಎಂದು ಹೇಳಿದ್ದಾರೆ. ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತ ದೃಢವಾಗಿ ನಂಬುತ್ತದೆ. ಯಾವುದೇ ಬಿಕ್ಕಟ್ಟಿನಲ್ಲಿ ಅಮಾಯಕರ ಜೀವಗಳನ್ನು ಕಳೆದುಕೊಳ್ಳುವುದು ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ನಾವು ಸಂಭಾಷಣೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು.

ಬುಧವಾರ ಪೋಲೆಂಡ್‌ಗೆ ಬಂದಿಳಿದಿರುವ ಪ್ರಧಾನಿ ಮೋದಿ, ಪ್ರಸ್ತುತ ದೇಶಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ. ಇದರ ನಂತರ, ಅವರು ಉನ್ನತ ಮಟ್ಟದ ಸಭೆಗಳಿಗಾಗಿ ಆಗಸ್ಟ್ 23 ರಂದು ಉಕ್ರೇನ್‌ನ ಕೈವ್‌ಗೆ ಪ್ರಯಾಣಿಸಲಿದ್ದಾರೆ. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಮೊದಲ ಪ್ರವಾಸ ಇದಾಗಿದೆ. ಅವರ ಭೇಟಿಯು ನವದೆಹಲಿ ಮತ್ತು ವಾರ್ಸಾ ನಡುವಿನ 70 ವರ್ಷಗಳ ಅಧಿಕೃತ ದ್ವಿಪಕ್ಷೀಯ ಸಂಬಂಧಗಳನ್ನು ಸೂಚಿಸುತ್ತದೆ.

ಇದನ್ನೂ ಓದಿ: PM Modi Poland Visit: ಪೋಲೆಂಡ್‌ಗೆ ಬಂದಿಳಿದ ಪ್ರಧಾನಿ ಮೋದಿ- ಗುಜರಾತಿ ನೃತ್ಯದ ಮೂಲಕ ಭರ್ಜರಿ ಸ್ವಾಗತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Sophia Leone: ಪೋರ್ನ್ ತಾರೆ ಸೋಫಿಯಾ ಲಿಯೋನ್ ಸಾವಿನ ರಹಸ್ಯ ಬಯಲು!

ಮಾರ್ಚ್ 1ರಂದು ಸೋಫಿಯಾ ಲಿಯೋನ್ (Sophia Leone) ನ್ಯೂ ಮೆಕ್ಸಿಕೋದಲ್ಲಿನ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಬಳಿಕ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಅಲ್ಬುಕರ್ಕ್ ಪೊಲೀಸ್, ಲಿಯೋನ್ ಅವರ ಆಕಸ್ಮಿಕ ಸಾವಿಗೆ ಮಿತಿಮೀರಿದ ಪ್ರಮಾಣದಲ್ಲಿ ಮದ್ಯ ಸೇವಿಸಿರುವುದು ಕಾರಣ ಎಂಬುದನ್ನು ದೃಢಪಡಿಸಿದ್ದಾರೆ.

VISTARANEWS.COM


on

By

Sophia Leone
Koo

ನೀಲಿ ಚಿತ್ರ ತಾರೆ (Porn star ) ಸೋಫಿಯಾ ಲಿಯೋನ್ (Sophia Leone) ಸಾವಿನ ಕಾರಣವನ್ನು ಪೊಲೀಸ್ ಅಧಿಕಾರಿಗಳು ಕೊನೆಗೂ ಬಹಿರಂಗಪಡಿಸಿದ್ದಾರೆ. ಮಿತಿಮೀರಿದ ಮದ್ಯ ಸೇವನೆಯೇ ಆಕೆಯ ಸಾವಿಗೆ ಕಾರಣ ಎನ್ನಲಾಗಿದೆ. 26 ವರ್ಷದ ಸೋಫಿಯಾ ಲಿಯೋನ್ ಮಾರ್ಚ್‌ನಲ್ಲಿ ತನ್ನ ಅಪಾರ್ಟ್‌ಮೆಂಟ್‌ನೊಳಗೆ ಶವವಾಗಿ (Sophia Leone death) ಪತ್ತೆಯಾಗಿದ್ದಳು.

ಆಕೆಯ ಸಾವಿನ ಕುರಿತು ಮಾತನಾಡಿರುವ ಆಕೆಯ ತಾಯಿ, ಸೋಫಿಯಾ ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆಯ ಯೋಚನೆಯನ್ನು ಮಾಡಿದ್ದಳು, ಅತಿಯಾಗಿ ಮಧ್ಯಪಾನ ಮಾಡುತ್ತಿದ್ದಳು ಎಂದು ತಿಳಿಸಿದ್ದಾರೆ.

ಮಾರ್ಚ್ 1 ರಂದು, ಲಿಯೋನ್ ನ್ಯೂ ಮೆಕ್ಸಿಕೋದಲ್ಲಿನ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಬಳಿಕ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು.

ಅಲ್ಬುಕರ್ಕ್ ಪೊಲೀಸ್, ಲಿಯೋನ್ ಅವರ ಆಕಸ್ಮಿಕ ಸಾವಿಗೆ ಮಿತಿಮೀರಿದ ಪ್ರಮಾಣದಲ್ಲಿ ಆಲ್ಕೋಹಾಲ್ ಸೇವಿಸಿರುವುದು ಕಾರಣ ಎಂಬುದನ್ನು ದೃಢಪಡಿಸಿದರು. ಆದರೆ ಯಾವ ರೀತಿಯ ಮದ್ಯ ಎಂಬುದು ಸ್ಪಷ್ಟವಾಗಿಲ್ಲ.
ತನ್ನ ಸಾವಿಗೆ ತಿಂಗಳುಗಳ ಮೊದಲು, ಲಿಯೋನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜೀವನದಲ್ಲಿ ಹೆಚ್ಚಿನದನ್ನು ಸಾಧಿಸುವ ಬಗ್ಗೆ ಸಕಾರಾತ್ಮಕತೆಯ ಸಂದೇಶವನ್ನು ಹಂಚಿಕೊಂಡಿದ್ದರು.


“ಹೊರಗೆ ಹೋಗಿ ಮತ್ತು ಇಂದು ಜೀವನವನ್ನು ಸ್ವಲ್ಪ ಹೆಚ್ಚು ಪ್ರಶಂಸಿಸಿ” ಎಂದು ಅವರು ಸೆಪ್ಟೆಂಬರ್ 2023 ರಲ್ಲಿ ಹೇಳಿಕೊಂಡಿದ್ದರು.

ಸೋಫಿಯಾ ಸಾವಿನ ಬಳಿಕ ಪ್ರಪಂಚದಾದ್ಯಂತ ಅನೇಕರು ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದಾರೆ.

ಸೋಫಿಯಾ ಸಾಕುಪ್ರಾಣಿಗಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದರು. ಪ್ರಯಾಣ ಮಾಡುವುದೆಂದರೆ ಅವರಿಗೆ ಇಷ್ಟವಾಗಿತ್ತು. ತಮ್ಮ ಸುತ್ತಲಿರುವ ಎಲ್ಲರನ್ನು ನಗಿಸುವ ಮಾರ್ಗಗಳನ್ನು ಹಡುಕುತ್ತಿದ್ದರು ಎಂದು ಅವರ ಬಗ್ಗೆ ರೊಮೆರೊ ನಿಧಿಸಂಗ್ರಹ ಪುಟದಲ್ಲಿ ಬರೆದಿದ್ದಾರೆ.

ಮಿಸ್ ಲಿಯೋನ್ 1997ರ ಜೂನ್ 10ರಂದು ಯುಎಸ್ ನ ಮಿಯಾಮಿಯಲ್ಲಿ ಜನಿಸಿದರು. 18 ನೇ ವಯಸ್ಸಿನಲ್ಲಿ ಪೋರ್ನ್ ಉದ್ಯಮವನ್ನು ಪ್ರವೇಶಿಸಿದರು. 1 ಮಿಲಿಯನ್ ಡಾಲರ್ ಮೌಲ್ಯದ ಸಂಪತ್ತು ಹೊಂದಿರುವ ಅವರು 80ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Anushka Sharma: ಲಂಡನ್​ ಬಿಟ್ಟು ಮಗನ ಜತೆ ಮತ್ತೆ ಮುಂಬೈಗೆ ಮರಳಲಿದ್ದಾರೆ ಕೊಹ್ಲಿ ಪತ್ನಿ ಅನುಷ್ಕಾ!

ಸಾಮಾಜಿಕ ಜಾಲತಾಣದ ಕಾಮೆಂಟ್ ನಲ್ಲಿ ಒಬ್ಬರು ನೀವು ಎಷ್ಟು ಪ್ರೀತಿಸುತ್ತಿದ್ದೀರಿ ಎಂದು ನೀವು ತಿಳಿದಿದ್ದೀರಿ ಎಂದು ನಾನು ಭಾವಿಸುತ್ತೇನೆ. ಈ ಜಗತ್ತು ತುಂಬಾ ಕ್ರೂರವಾಗಿದೆ. ಎಲ್ಲದಕ್ಕೂ ಧನ್ಯವಾದಗಳು ಎಂದು ಹೇಳಿದ್ದು, ಇನ್ನೊಬ್ಬರು ಶಾಂತಿಯಲ್ಲಿ ವಿಶ್ರಾಂತಿ ಸುಂದರ, ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ನಾವು ಕಂಡುಕೊಳ್ಳುತ್ತೇವೆ ನಿನಗೆ ನ್ಯಾಯ ಎಂದು ತಿಳಿಸಿದ್ದಾರೆ.

ಮೂರನೆಯವರು ಸಲಹೆ ನೀಡಿ, ಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗಾಗಿ ಅಶ್ಲೀಲ ಉದ್ಯಮದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Kamala Harris: ಕಮಲಾ ಹ್ಯಾರಿಸ್ ಪಕ್ಷದ ಭಾರಿ ಕಾರ್ಯಕ್ರಮದಲ್ಲಿ ಅಮೆರಿಕನ್ನರ ಮನ ಗೆದ್ದ ಉಡುಪಿಯ ಪುರೋಹಿತರ ಸಂಸ್ಕೃತ ಪ್ರಾರ್ಥನೆ!

Kamala Harris: ಡೆಮೊಕ್ರಾಟಿಕ್‌ ಪಕ್ಷದ ಭಾರಿ ಸಭೆಯಲ್ಲಿ ಸಂಸ್ಕೃತ ಪ್ರಾರ್ಥನೆ ಮಾಡಿದ ರಾಕೇಶ್ ಭಟ್ ಮೂಲತಃ ಕರ್ನಾಟಕದವರು. ಇವರು ತಮ್ಮ ಗುರುಗಳಾದ ಉಡುಪಿ ಅಷ್ಟಮಠದ ಪೇಜಾವರ ಸ್ವಾಮೀಜಿಯವರ ಬಳಿ ಋಗ್ವೇದ ಮತ್ತು ತಂತ್ರಸಾರ (ಮಾಧ್ವ) ಆಗಮದಲ್ಲಿ ತರಬೇತಿ ಪಡೆದಿದ್ದಾರೆ.

VISTARANEWS.COM


on

rakesh bhat kamala harris
Koo

ಚಿಕಾಗೋ: ಅಮೆರಿಕದ ಚಿಕಾಗೋದಲ್ಲಿ ಕಮಲಾ ಹ್ಯಾರಿಸ್‌ (Kamala Harris) ಅವರ ಡೆಮಾಕ್ರಟಿಕ್ ಪಕ್ಷದ ನ್ಯಾಷನಲ್ ಕನ್ವೆನ್ಶನ್‌ನ (Democratic National convention) 3ನೇ ದಿನದಂದು ಕರ್ನಾಟಕದ ಉಡುಪಿ ಮೂಲದ (Udupi Priest) ಅರ್ಚಕರೊಬ್ಬರು ಸಂಸ್ಕೃತ ಪ್ರಾರ್ಥನೆಯ (Sanskrit Prayer) ಮೂಲಕ ಕಲಾಪವನ್ನು ಪ್ರಾರಂಭಿಸಿದರು. ವೈದಿಕ ಪ್ರಾರ್ಥನೆ (Vedic Prayer) ಹಾಗೂ ಅದರ ಅರ್ಥವನ್ನು ಅವರು ವಿವರಿಸಿದ ಬಳಿಕ, ಸಭಾಂಗಣದಾದ್ಯಂತ “ಓಂ ಶಾಂತಿ ಶಾಂತಿ” ಘೋಷಣೆಗಳು ಪ್ರತಿಧ್ವನಿಸಿದವು.

ಮೇರಿಲ್ಯಾಂಡ್‌ನ ಶ್ರೀ ಶಿವ ವಿಷ್ಣು ದೇವಸ್ಥಾನದ ಅರ್ಚಕ ರಾಕೇಶ್ ಭಟ್ (Rakesh Bhat) ಅವರು ಅಖಂಡ ದೇಶಕ್ಕಾಗಿ ದೇವರ ಆಶೀರ್ವಾದ ಕೋರಿ ವೈದಿಕ ಪ್ರಾರ್ಥನೆ ಮಾಡಿದರು. ʼʼನಮ್ಮಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ರಾಷ್ಟ್ರದ ವಿಷಯಕ್ಕೆ ಬಂದಾಗ ನಾವು ಒಗ್ಗಟ್ಟಾಗಿರಬೇಕುʼʼ ಎಂದು ಭಟ್ ಹೇಳಿದರು. “ನಾವು ಒಗ್ಗಟ್ಟಿನಿಂದ ಇರಬೇಕು. ನಮ್ಮ ಮನಸ್ಸು ಒಟ್ಟಿಗೆ ಯೋಚಿಸಲಿ. ನಮ್ಮ ಹೃದಯಗಳು ಒಂದಾಗಿ ಮಿಡಿಯಲಿ. ಎಲ್ಲರೂ ಸಮಾಜದ ಒಳಿತಿಗಾಗಿ ದುಡಿಯಲಿ. ಇದು ನಮ್ಮನ್ನು ಶಕ್ತಿಯುತರನ್ನಾಗಿ ಮಾಡಲಿ. ನಾವು ಒಂದಾಗಬಹುದು ಮತ್ತು ನಮ್ಮ ರಾಷ್ಟ್ರದ ಬಗ್ಗೆ ಹೆಮ್ಮೆಪಡಬಹುದು” ಎಂದು ರಾಕೇಶ್‌ ಭಟ್‌ ಹೇಳಿದರು.

ಗುರುವಾರ ಕಮಲಾ ಹ್ಯಾರಿಸ್ ಅವರ ಪರ ಪಕ್ಷದ ಪ್ರಚಾರದ ಭಾರಿ ಸಭೆ ನಡೆಯಿತು. ಅಮೆರಿಕದ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್‌, ಭಾರತೀಯ ಮೂಲದವರಾಗಿದ್ದಾರೆ. ಪ್ರಾರ್ಥನೆ ಮಾಡಿದ ಭಟ್, ʼವಸುಧೈವ ಕುಟುಂಬಕಂ’ (ಇಡೀ ಜಗತ್ತು ಒಂದೇ ಕುಟುಂಬ) ಎಂಬ ವೈದಿಕ ಪರಿಕಲ್ಪನೆಯಲ್ಲಿ ನಂಬಿಕೆಯಿರುವ ನಾಯಕನನ್ನು ಆಯ್ಕೆ ಮಾಡುವಂತೆ ಅಮೆರಿಕವನ್ನು ಒತ್ತಾಯಿಸಿದರು.

“ನಾವು ಒಂದು ಸಾರ್ವತ್ರಿಕ ಕುಟುಂಬ. ಸತ್ಯವು ನಮ್ಮ ಅಡಿಪಾಯ ಮತ್ತು ಅದು ಯಾವಾಗಲೂ ಮೇಲುಗೈ ಸಾಧಿಸುತ್ತದೆ. ನಮ್ಮನ್ನು ಅವಾಸ್ತವದಿಂದ ವಾಸ್ತವಕ್ಕೆ, ಕತ್ತಲೆಯಿಂದ ಬೆಳಕಿನೆಡೆಗೆ ಮತ್ತು ಸಾವಿನಿಂದ ಅಮರತ್ವಕ್ಕೆ ಕರೆದೊಯ್ಯುತ್ತದೆ. ಓಂ ಶಾಂತಿ ಶಾಂತಿ ಶಾಂತಿ” ಎಂದು ಭಟ್ ಸಂಸ್ಕೃತದ ಶ್ಲೋಕವನ್ನು ನುಡಿದು ಅದರ ಅರ್ಥವನ್ನು ವಿವರಿಸಿದರು.

ರಾಕೇಶ್ ಭಟ್ ಮೂಲತಃ ಕರ್ನಾಟಕದವರು. ಇವರು ತಮ್ಮ ಗುರುಗಳಾದ ಉಡುಪಿ ಅಷ್ಟಮಠದ ಪೇಜಾವರ ಸ್ವಾಮೀಜಿಯವರ ಬಳಿ ಋಗ್ವೇದ ಮತ್ತು ತಂತ್ರಸಾರ (ಮಾಧ್ವ) ಆಗಮದಲ್ಲಿ ತರಬೇತಿ ಪಡೆದಿದ್ದಾರೆ. ಹಿಂದಿ, ಇಂಗ್ಲಿಷ್, ಸಂಸ್ಕೃತ, ತಮಿಳು, ತೆಲುಗು, ಕನ್ನಡ ಮತ್ತು ತುಳು ಭಾಷೆಗಳನ್ನು ನಿರರ್ಗಳವಾಗಿ ಮಾತನಾಡಬಲ್ಲರು. ಸಂಸ್ಕೃತ, ಇಂಗ್ಲಿಷ್ ಮತ್ತು ಕನ್ನಡ ಈ ಮೂರು ಭಾಷೆಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ. ಇವರು ಬೆಂಗಳೂರಿನ ಒಸ್ಟೀನ್ ಕಾಲೇಜಿನಲ್ಲಿ ಇಂಗ್ಲಿಷ್ ಮತ್ತು ಕನ್ನಡ ಪದವಿಗಳನ್ನು ಪಡೆದವರು. ಜಯಚಾಮರಾಜೇಂದ್ರ ಕಾಲೇಜಿನಲ್ಲಿ ಸಂಸ್ಕೃತ ಪದವಿ ಪಡೆದರು. ಉಡುಪಿ ಅಷ್ಟಮಠದಲ್ಲಿ ಅಲ್ಪಾವಧಿ ಸೇವೆ ಸಲ್ಲಿಸಿದ ನಂತರ ಬದರಿನಾಥ, ಸೇಲಂ ರಾಘವೇಂದ್ರ ಸ್ವಾಮಿ ದೇವಾಲಯಗಳಲ್ಲಿ ಸೇವೆ ಸಲ್ಲಿಸಿ ಬಳಿಕ 2013 ಜುಲೈಯಲ್ಲಿ ಅಮೆರಿಕಕ್ಕೆ ತೆರಳಿ ಮೇರಿಲ್ಯಾಂಡ್‌ನಲ್ಲಿ ಶ್ರೀ ವಿಷ್ಣು ದೇವಸ್ಥಾನದ ಅರ್ಚಕರಾಗಿದ್ದಾರೆ.

ಡೆಮಾಕ್ರಟಿಕ್ ಪಾರ್ಟಿಯ ಡೆಪ್ಯುಟಿ ನ್ಯಾಷನಲ್ ಫೈನಾನ್ಸ್ ಚೇರ್ ಅಜಯ್ ಭುಟೋರಿಯಾ, “ಇಂದು ಡಿಎನ್‌ಸಿಯಲ್ಲಿ ರಾಕೇಶ್ ಭಟ್ ಅವರ ಹಿಂದೂ ಪ್ರಾರ್ಥನೆಯು ಮಹತ್ವದ ಕ್ಷಣವಾಗಿದೆ. ಇದು ಡೆಮಾಕ್ರಟಿಕ್ ಪಕ್ಷದ ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯ ಬದ್ಧತೆಯನ್ನು ಪ್ರದರ್ಶಿಸುತ್ತದೆ” ಎಂದರು. “ಭಾರತೀಯ ಅಮೆರಿಕನ್ ಸಮುದಾಯದ ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಪ್ರದಾಯಗಳನ್ನು ಇಂತಹ ಪ್ರಮುಖ ವೇದಿಕೆಯಲ್ಲಿ ಗೌರವಿಸುವುದು ಆತ್ಮೀಯ ಕ್ಷಣ. ಈ ಕ್ಷಣವು ಅಮೇರಿಕನ್ ಸಮಾಜದ ವಿನ್ಯಾಸದಲ್ಲಿ ನಮ್ಮ ಸಮುದಾಯದ ಬೆಳೆಯುತ್ತಿರುವ ಪ್ರಭಾವ ಮತ್ತು ಗುರುತಿಸುವಿಕೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಭೂಟೋರಿಯಾ ಹೇಳಿದರು.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸುವ ಭರವಸೆಯೊಂದಿಗೆ ಡೆಮೋಕ್ರಾಟ್‌ ಪಕ್ಷದ 59 ವರ್ಷದ ಕಮಲಾ ಹ್ಯಾರಿಸ್‌ ಸ್ಪರ್ಧಿಸುತ್ತಿದ್ದಾರೆ. ಸ್ಪರ್ಧೆಯಲ್ಲಿ ಹ್ಯಾರಿಸ್ ಸ್ವಲ್ಪ ಮುಂದಿದ್ದಾರೆ ಎನ್ನಲಾಗುತ್ತಿದೆ. ಕೇವಲ ಒಂದು ತಿಂಗಳ ಹಿಂದೆ ಜೋ ಬೈಡೆನ್ ವಿರುದ್ಧ ಟ್ರಂಪ್‌ ಹಿಡಿತ ಸಾಧಿಸಿದ್ದರು.

ಇದನ್ನೂ ಓದಿ: Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಹೆಸರು ಅಂತಿಮ

Continue Reading

ಪ್ರಮುಖ ಸುದ್ದಿ

PM Narendra Modi Poland visit: ಉಕ್ರೇನ್‌ನ ಹಾದಿಯಲ್ಲಿ ʼಯುದ್ಧʼದ ಕುರಿತು ನಿಲುವು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi Poland visit: ಉಕ್ರೇನ್‌ಗೆ ತಮ್ಮ ಬಹು ನಿರೀಕ್ಷಿತ ಭೇಟಿಗೆ ಎರಡು ದಿನಗಳ ಮೊದಲು, ಪೋಲೆಂಡ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಲ್ಲಿ ಅವರು ರಷ್ಯಾದ ಆಕ್ರಮಣದ ಶಾಂತಿಯುತ ಪರಿಹಾರಕ್ಕಾಗಿ ಪ್ರಚಾರ ಮಾಡುವುದಾಗಿ ಶಪಥ ಮಾಡಿದ್ದಾರೆ.

VISTARANEWS.COM


on

PM Narendra Modi Poland visit
Koo

ವಾರ್ಸಾ: ಇದು ಯುದ್ಧದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪುನರುಚ್ಚರಿಸಿದ್ದಾರೆ. ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ (Vladimir Putin) ಅವರಿಗೆ ಹೇಳಿದ್ದ ಮಾತನ್ನು ಮೋದಿಯವರು ಮತ್ತೆ ಹೇಳಿದ್ದು, ಪೋಲೆಂಡ್‌ಗೆ ಭೇಟಿ ನೀಡಿರುವ ಅವರು (PM Narendra Modi Poland visit) ಈ ಮಾತನ್ನು ಹೇಳಿದ್ದಾರೆ.

ಉಕ್ರೇನ್‌ಗೆ ತಮ್ಮ ಬಹು ನಿರೀಕ್ಷಿತ ಭೇಟಿಗೆ ಎರಡು ದಿನಗಳ ಮೊದಲು, ಪೋಲೆಂಡ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಲ್ಲಿ ಅವರು ರಷ್ಯಾದ ಆಕ್ರಮಣದ ಶಾಂತಿಯುತ ಪರಿಹಾರಕ್ಕಾಗಿ ಪ್ರಚಾರ ಮಾಡುವುದಾಗಿ ಶಪಥ ಮಾಡಿದ್ದಾರೆ.

“ಭಾರತವು ಈ ಪ್ರದೇಶದಲ್ಲಿ ಶಾಶ್ವತ ಶಾಂತಿಯನ್ನು ಪ್ರತಿಪಾದಿಸುತ್ತದೆ. ನಮ್ಮ ನಿಲುವು ತುಂಬಾ ಸ್ಪಷ್ಟವಾಗಿದೆ- ಇದು ಯುದ್ಧದ ಯುಗವಲ್ಲ. ಇದು ಮಾನವೀಯತೆಗೆ ಬೆದರಿಕೆ ಹಾಕುವ ಸವಾಲುಗಳ ವಿರುದ್ಧ ಒಗ್ಗೂಡುವ ಸಮಯ. ಭಾರತವು ರಾಜತಾಂತ್ರಿಕತೆ ಮತ್ತು ಸಂವಾದಗಳಲ್ಲಿ ನಂಬಿಕೆ ಹೊಂದಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

73 ವರ್ಷ ವಯಸ್ಸಿನ ಪಿಎಂ ಮೋದಿ ಅವರು ಉಕ್ರೇನ್ ಪ್ರವಾಸ ಕೈಗೊಂಡ ಮೊದಲ ಭಾರತೀಯ ಪ್ರಧಾನಿ ಎನಿಸಿದ್ದಾರೆ. 45 ವರ್ಷಗಳಲ್ಲಿ ಪೋಲೆಂಡ್‌ಗೆ ಪ್ರಯಾಣಿಸುತ್ತಿರುವ ಮೊದಲ ಭಾರತೀಯ ಪ್ರಧಾನಿ ಕೂಡ ಹೌದು. ಪೋಲೆಂಡ್‌, ಉಕ್ರೇನ್‌ನ ನಿಕಟ ಮಿತ್ರ ಹಾಗೂ ಉಕ್ರೇನ್‌ಗೆ ತೆರಳುವ ವಿದೇಶಿ ನಾಯಕರಿಗೆ ಪೋಲೆಂಡ್‌ ಮುಖ್ಯ ಮಾರ್ಗವಾಗಿದೆ.

ಆಗಸ್ಟ್ 23ರಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಉಕ್ರೇನ್‌ಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, ನಡೆಯುತ್ತಿರುವ ಸಂಘರ್ಷದ ಶಾಂತಿಯುತ ಪರಿಹಾರದ ಕುರಿತು ಉಕ್ರೇನ್ ನಾಯಕರೊಂದಿಗೆ ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಮಾಸ್ಕೋಗೆ ಕೂಡ ಮೋದಿ ಭೇಟಿ ನೀಡಿದ್ದರು. ಇದಾಗಿ ಆರು ವಾರಗಳ ನಂತರ, ರಷ್ಯದ ವೈರಿಯಾದ ಉಕ್ರೇನ್‌ಗೆ ಭೇಟಿ ಕೊಡುತ್ತಿದ್ದಾರೆ.

ಸೆಪ್ಟೆಂಬರ್ 2022ರಲ್ಲಿ, SCO ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡುವಾಗ ಪ್ರಧಾನಿ ಮೊದಲ ಬಾರಿಗೆ “ಇದು ಯುದ್ಧದ ಯುಗವಲ್ಲ” ಎಂದಿದ್ದರು. ಸೆಪ್ಟೆಂಬರ್ 16ರಂದು ಸಮರ್‌ಕಂಡ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ “ಇಂದಿನ ಯುಗವು ಯುದ್ಧಕ್ಕೆ ಹೇಳಿಸಿದ್ದಲ್ಲ” ಎಂದು ಮೋದಿ ಹೇಳಿದ್ದರು. ಆಹಾರ, ಇಂಧನ ಭದ್ರತೆ ಮತ್ತು ರಸಗೊಬ್ಬರಗಳ ಸಮಸ್ಯೆಗಳನ್ನು ಪರಿಹರಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಪೋಲೆಂಡ್‌ಗೆ ತೆರಳುವ ಮುನ್ನ ಪ್ರಧಾನಿ ಮೋದಿ, “ಸ್ನೇಹಿತ ಮತ್ತು ಪಾಲುದಾರನಾಗಿ, ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರಳುವಿಕೆಯನ್ನು ನಾವು ಹಾರೈಸುತ್ತೇವೆ” ಎಂದು ಹೇಳಿದರು. ಎರಡು ದಿನಗಳ ಭೇಟಿಗಾಗಿ ಪೋಲೆಂಡ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧದ ಇತಿಹಾಸವನ್ನು ಸ್ಮರಿಸುವ ಎರಡು ಸ್ಥಳಗಳಾದ ವಾರ್ಸಾದಲ್ಲಿನ ನವನಗರ ಸ್ಮಾರಕ ಮತ್ತು ಕೊಲ್ಹಾಪುರ್ ಸ್ಮಾರಕ ಜಾಮ್ ಸಾಹೇಬ್‌ಗೆ ಪುಷ್ಪಾರ್ಚನೆ ಮಾಡಿದರು.

ಇದನ್ನೂ ಓದಿ: PM Narendra Modi: ಅಧಿಕಾರದಿಂದ ಕೆಳಗಿಳಿಯುತ್ತಾರಾ ಪ್ರಧಾನಿ ಮೋದಿ? ಸಂಚಲನ ಮೂಡಿಸಿದ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌

Continue Reading

ವಿದೇಶ

Honoring to the Ancestors: ಈ ಸಮುದಾಯದ ಜನ ಪ್ರತಿ ವರ್ಷ ಸಮಾಧಿಯಿಂದ ಶವ ಹೊರತೆಗೆದು ಸ್ವಚ್ಛಗೊಳಿಸುತ್ತಾರೆ!

ಇಂಡೋನೇಷಿಯಾದ ದಕ್ಷಿಣ ಸುಲವೆಸಿಯ ಟೊರಾಜಾ ಪ್ರದೇಶದಲ್ಲಿ ದತೊರಾಜಾ ಸಮುದಾಯದ ಜನರು ಮಾನೆನ್ (Honoring to the Ancestors) ಎಂಬ ಅಸಾಮಾನ್ಯ ಸಂಪ್ರದಾಯವನ್ನು ಅನೇಕ ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದಾರೆ. ಕುಟುಂಬಗಳು ತಮ್ಮ ಸತ್ತ ಸಂಬಂಧಿಕರ ಶವಗಳನ್ನು ಸಮಾಧಿಯಿಂದ ಹೊರತೆಗೆದು ಸ್ವಚ್ಛಗೊಳಿಸುತ್ತಾರೆ. ಪ್ರತಿ ವರ್ಷ ಅಥವಾ ಮೂರು ವರ್ಷ ಅಥವಾ ಐದು ವರ್ಷಗಳಿಗೊಮ್ಮೆ ಆಗಸ್ಟ್‌ನಲ್ಲಿ ಈ ಸಂಪ್ರದಾಯವನ್ನು ನಡೆಸಲಾಗುತ್ತದೆ.

VISTARANEWS.COM


on

By

Honoring to the Ancestors
Koo

ಪ್ರತಿ ವರ್ಷ ಆಗಸ್ಟ್ ನಲ್ಲಿ ಇಂಡೋನೇಷ್ಯಾ (Indonesia) ದತೊರಾಜಾ ಸಮುದಾಯದ (Datoraja community) ಜನರು ಪ್ರತಿ ವರ್ಷ ಆಗಸ್ಟ್ ನಲ್ಲಿ ತಮ್ಮ ಕುಟುಂಬ ಸದಸ್ಯರ ಶವಗಳನ್ನು ಸಮಾಧಿಯಿಂದ ಹೊರತೆಗೆದು ಅವುಗಳನ್ನು ಸ್ವಚ್ಛಗೊಳಿಸಿ, ಬಟ್ಟೆ ಬದಲಾಯಿಸಿ ನೆಚ್ಚಿನ ವಸ್ತುಗಳೊಂದಿಗೆ ಮತ್ತೆ ಸಮಾಧಿಯಲ್ಲಿ ಇರಿಸುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದು, ಇದನ್ನು ‘ಮನೆನ್’ (Honoring to the Ancestors) ಎಂದು ಕರೆಯಲಾಗುತ್ತದೆ. ಇದರಿಂದ ಅವರು ಸಮಾಧಿಯಲ್ಲಿ ನೆಮ್ಮದಿಯಾಗಿ ಇರುತ್ತಾರೆ ಎನ್ನುವುದು ನಂಬಿಕೆ.

ಇಂಡೋನೇಷಿಯಾದ ದಕ್ಷಿಣ ಸುಲವೆಸಿಯ ಟೊರಾಜಾ ಪ್ರದೇಶದಲ್ಲಿ ( Toraja region) ದತೊರಾಜಾ ಸಮುದಾಯದ ಜನರು ಮಾನೆನ್ ಎಂಬ ಅಸಾಮಾನ್ಯ ಸಂಪ್ರದಾಯವನ್ನು ಅನೇಕ ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದಾರೆ.

ಕುಟುಂಬಗಳು ತಮ್ಮ ಸತ್ತ ಸಂಬಂಧಿಕರ ಶವಗಳನ್ನು ಸಮಾಧಿಯಿಂದ ಹೊರತೆಗೆದು ಸ್ವಚ್ಛಗೊಳಿಸುತ್ತಾರೆ. ಪ್ರತಿ ವರ್ಷ ಅಥವಾ ಮೂರು ವರ್ಷ ಅಥವಾ ಐದು ವರ್ಷಗಳಿಗೊಮ್ಮೆ ಆಗಸ್ಟ್‌ನಲ್ಲಿ ಈ ಸಂಪ್ರದಾಯವನ್ನು ನಡೆಸಲಾಗುತ್ತದೆ.

ದತೊರಾಜಾ ಸಮುದಾಯದ ಜನರು ಅಂತ್ಯಕ್ರಿಯೆ ಮತ್ತು ಅನಂತರದ ವಿಧಿಗಳಿಗೆ ಹೆಚ್ಚಿನ ಸಮಯ ಮತ್ತು ಹಣವನ್ನು ವಿನಿಯೋಗಿಸುತ್ತಾರೆ. ಮರಣವು ಅಂತ್ಯವಲ್ಲ ಎಂಬುದಾಗಿ ನಂಬುತ್ತಾರೆ. ಪೂರ್ವಜರ ಆತ್ಮಗಳನ್ನು ಸಮಾಧಾನಪಡಿಸುವುದು ಅವರಿಗೆ ಮುಖ್ಯವಾಗಿದೆ. ಪೂರ್ವಜರು ಅಸಮಾಧಾನಗೊಂಡರೆ ಕಳಪೆ ಭತ್ತದ ಕೊಯ್ಲಿಗೆ ಕಾರಣವಾಗಬಹುದು ಎನ್ನುವುದು ಅವರ ನಂಬಿಕೆ.

ಕುಟುಂಬ ಸದಸ್ಯರು ಸತ್ತ ಬಳಿಕ ಅವರ ದೇಹಗಳನ್ನು ಸುದೀರ್ಘ ಕಾಲದವರೆಗೆ ಮನೆಯಲ್ಲಿ ಇರಿಸುತ್ತಾರೆ. ಅದ್ದೂರಿಯಾಗಿ ಅಂತ್ಯಕ್ರಿಯೆಗಳನ್ನು ನಡೆಸುತ್ತಾರೆ.


ಇದನ್ನೂ ಓದಿ: Worlds Oldest Office Worker: ನಿವೃತ್ತಿ ಬಗ್ಗೆ ಇನ್ನೂ ಯೋಚನೆಯನ್ನೇ ಮಾಡಿಲ್ಲವಂತೆ 94ರ ಈ ಅಜ್ಜಿ!

ದತೊರಾಜಾ ಸಮುದಾಯದ ಜನರು ನಿಧನರಾದ ಜನರ ಶವಗಳನ್ನು ಮನೆಯಲ್ಲಿಯೇ ಇರಿಸುತ್ತಾರೆ. ಕೆಲವೊಮ್ಮೆ ವರ್ಷಗಳವರೆಗೆ ಇಟ್ಟುಕೊಳ್ಳುತ್ತಾರೆ. ಕುಟುಂಬವು ಅಂತ್ಯಕ್ರಿಯೆಗೆ ಸಾಕಷ್ಟು ಹಣವನ್ನು ಹೊಂದಿಸುವವರೆಗೂ ಶವವನ್ನು ಇಟ್ಟುಕೊಳ್ಳುತ್ತಾರೆ. ಅಂತ್ಯಕ್ರಿಯೆಯ ಸಮಾರಂಭಗಳು 12 ದಿನಗಳವರೆಗೆ ನಡೆಯುತ್ತದೆ. ಇದರಲ್ಲಿ ನೂರಾರು ಎಮ್ಮೆ, ಹಂದಿಗಳ ಬಲಿಯನ್ನು ಕೊಡಲಾಗುತ್ತದೆ. ಇಂತಹ ಸಮಾರಂಭಗಳಿಗೆ ನೂರಾರು ಸಾವಿರ ಡಾಲರ್‌ಗಳಷ್ಟು ವೆಚ್ಚವಾಗುವುದು.

ದತೊರಾಜಾ ಸಮುದಾಯದ ಜನರು ಹೆಚ್ಚಾಗಿ ಕ್ರಿಶ್ಚಿಯನ್ನರು. ಅವರ ಅಂತ್ಯಕ್ರಿಯೆಯ ಆಚರಣೆಗಳು ಪುರಾತನವಾದದ್ದು.

Continue Reading
Advertisement
CM Siddaramaiah
ಕರ್ನಾಟಕ20 mins ago

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

Fixed Deposits
ಮನಿ-ಗೈಡ್22 mins ago

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

Water Price hike
ಬೆಂಗಳೂರು30 mins ago

Water Price Hike: ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

DK Shivakumar
ಬೆಂಗಳೂರು34 mins ago

DK Shivakumar: ನನಗೆ ಸಿಬಿಐಗಿಂತ ಲೋಕಾಯುಕ್ತದಿಂದಲೇ ಹೆಚ್ಚಿನ ಹಿಂಸೆ; ಡಿ.ಕೆ.ಶಿವಕುಮಾರ್ ಆರೋಪ!

kolkata Doctor murder case
ದೇಶ35 mins ago

Kolkata Doctor Murder Case: ಬರೋಬ್ಬರಿ 11ದಿನಗಳ ಬಳಿಕ ಮುಷ್ಕರ ಹಿಂಪಡೆದ ವೈದ್ಯರು

CLP Meeting
ಬೆಂಗಳೂರು1 hour ago

CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

Actor Darshan
ಕರ್ನಾಟಕ1 hour ago

Actor Darshan: ಅವರ ಋಣ ನಮ್ಮ ಕುಟುಂಬದ ಮೇಲಿದೆ… ದರ್ಶನ್‌ ಭೇಟಿ ಬಳಿಕ ರಚಿತಾ ರಾಮ್‌ ಕಣ್ಣೀರು

PM Modi Poland Visit
ವಿದೇಶ2 hours ago

PM Modi Poland Visit: ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ; ರಷ್ಯಾ-ಉಕ್ರೇನ್‌ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ರಿಯಾಕ್ಟ್‌

Viral Video
Latest2 hours ago

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

Viral Video
ಸಿನಿಮಾ2 hours ago

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌