PM Modi Russia Visit: ಭಾರತ-ರಷ್ಯಾ ಜಂಟಿ ಹೇಳಿಕೆ ಬಿಡುಗಡೆ; ಜಮ್ಮು & ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ - Vistara News

ವಿದೇಶ

PM Modi Russia Visit: ಭಾರತ-ರಷ್ಯಾ ಜಂಟಿ ಹೇಳಿಕೆ ಬಿಡುಗಡೆ; ಜಮ್ಮು & ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

PM Modi Russia Visit: ಧಾನಿ ನರೇಂದ್ರ ಮೋದಿ ಅವರು ರಷ್ಯಾ ಪ್ರವಾಸದಲ್ಲಿದ್ದಾರೆ. ಈ ವೇಳೆ ಭಾರತ ಮತ್ತು ರಷ್ಯಾ ಜಂಟಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ಜಮ್ಮು ಮತ್ತು ಕಾಶ್ಮೀರ, ರಷ್ಯಾದ ದಗೆಸ್ತಾನ್ ಮತ್ತು ಮಾಸ್ಕೋದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿವೆ. ಜತೆಗೆ 2030ರ ವೇಳೆಗೆ 100 ಬಿಲಿಯನ್ ಡಾಲರ್ (83,48,25,00,00,000 ರೂ.) ಮೊತ್ತದ ದ್ವಿಪಕ್ಷೀಯ ವ್ಯಾಪಾರದ ಗುರಿಯನ್ನು ಹೊಂದುವ ಬಗ್ಗೆಯೂ ಉಲ್ಲೇಖಿಸಲಾಗಿದೆ.

VISTARANEWS.COM


on

PM Modi Russia Visit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಪ್ರವಾಸದಲ್ಲಿದ್ದಾರೆ (PM Modi Russia Visit). ಈ ವೇಳೆ ಉಭಯ ರಾಷ್ಟ್ರಗಳ ಸಂಬಂಧದ ಬಲ ವರ್ಧನೆಗೆ ಬಹುಮುಖ್ಯ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಮಧ್ಯೆ ಭಾರತ ಮತ್ತು ರಷ್ಯಾ ಜಂಟಿ ಹೇಳಿಕೆ ಬಿಡುಗಡೆ ಮಾಡಿ, ಜಮ್ಮು ಮತ್ತು ಕಾಶ್ಮೀರ, ರಷ್ಯಾದ ದಗೆಸ್ತಾನ್ ಮತ್ತು ಮಾಸ್ಕೋದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿವೆ. ಜತೆಗೆ 2030ರ ವೇಳೆಗೆ 100 ಬಿಲಿಯನ್ ಡಾಲರ್ (83,48,25,00,00,000 ರೂ.) ಮೊತ್ತದ ದ್ವಿಪಕ್ಷೀಯ ವ್ಯಾಪಾರದ ಗುರಿಯನ್ನು ಹೊಂದುವ ಬಗ್ಗೆಯೂ ಉಲ್ಲೇಖಿಸಲಾಗಿದೆ.

ಎರಡು ಕಡೆಯವರೂ ಸಮಕಾಲೀನ, ಸಮತೋಲಿತ, ಪರಸ್ಪರ ಪ್ರಯೋಜನಕಾರಿ, ಸುಸ್ಥಿರ ಮತ್ತು ದೀರ್ಘಕಾಲೀನ ಪಾಲುದಾರಿಕೆಯನ್ನು ರೂಪಿಸಲು ಶ್ರಮಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜಂಟಿ ಹೇಳಿಕೆಯಲ್ಲಿ ಏನಿದೆ?

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಡುವಿನ ಜಂಟಿ ಹೇಳಿಕೆಯು “2024ರ ಜುಲೈ 8ರಂದು ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ, ಜೂನ್ 23ರಂದು ರಷ್ಯಾದ ದಗೆಸ್ತಾನದಲ್ಲಿ ಮತ್ತು ಮಾರ್ಚ್ 22ರಂದು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಈ ದಾಳಿಗಳು ಭಯೋತ್ಪಾದನೆಯ ವಿರುದ್ದ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ಜ್ಞಾಪಿಸುತ್ತದೆʼʼ ಎಂದು ತಿಳಿಸಿದೆ.

ಅಂತಾರಾಷ್ಟ್ರೀಯ ಭಯೋತ್ಪಾದನೆಯ ವಿರುದ್ಧ ಎಲ್ಲ ರೂಪಗಳಲ್ಲಿನ ಹೋರಾಟಕ್ಕೆ ಉಭಯ ನಾಯಕರು ಕರೆ ನೀಡಿದರು. ಅಂತಾರಾಷ್ಟ್ರೀಯ ಕಾನೂನು ಮತ್ತು ಯುಎನ್ ಚಾರ್ಟರ್‌ನ ಅಧಾರದ ಮೇಲೆ ಈ ಕ್ಷೇತ್ರದಲ್ಲಿ ಇನ್ನಷ್ಟು ಸಹಕಾರದಿಂದ ಕಾರ್ಯ ನಿರ್ವಹಿಸಬೇಕಾದ ಪ್ರಧಾನ್ಯತೆಯನ್ನು ಇಬ್ಬರು ನಾಯಕರು ಅನುಮೋದಿಸಿದರು. ಇದಲ್ಲದೆ ಯುಎನ್ ಭದ್ರತಾ ಮಂಡಳಿ, ಯುಎನ್ ಜನರಲ್ ಅಸೆಂಬ್ಲಿಯ ಭಯೋತ್ಪಾದನಾ ವಿರೋಧಿ ನಿರ್ಣಯಗಳನ್ನು ದೃಢವಾಗಿ ಜಾರಿಗೆ ತರುವ ಅಗತ್ಯವನ್ನು ಒತ್ತಿ ಹೇಳಿದರು. ಇದರಿಂದ ಪಾಕಿಸ್ತಾನ ಮೂಲದ ಭಯೋತ್ಪಾದಕರ ಪಟ್ಟಿಯನ್ನು ತಡೆಯುವ ಚೀನಾದ ಪ್ರಯತ್ನಗಳಿಗೆ ಹಿನ್ನಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ದೀರ್ಘಾವಧಿಯಲ್ಲಿ ಸಮತೋಲಿತ ಮತ್ತು ಸುಸ್ಥಿರ ದ್ವಿಪಕ್ಷೀಯ ವ್ಯಾಪಾರ ಸಂಬಂಧವನ್ನು ಸಾಧಿಸಲು ಕೈಗಾರಿಕಾ ಸಹಕಾರವನ್ನು ಬಲಪಡಿಸಲು ನಿರ್ಣಯಿಸಲಾಯಿತು. ವಿಶೇಷವಾಗಿ ಹೊಸ ತಾಂತ್ರಿಕ ಮತ್ತು ಹೂಡಿಕೆ ಪಾಲುದಾರಿಕೆಗಳನ್ನು ರೂಪಿಸಲು ರಷ್ಯಾಕ್ಕೆ ಭಾರತೀಯ ರಫ್ತು ಪ್ರಮಾಣ ಹೆಚ್ಚಿಸುವ ಅಗತ್ಯವನ್ನು ನಾಯಕರು ಒತ್ತಿ ಹೇಳಿದರು. ದ್ವಿಪಕ್ಷೀಯ ವ್ಯಾಪಾರದ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುವ ಗುರಿಯೊಂದಿಗೆ 2030ರ ವೇಳೆಗೆ 100 ಬಿಲಿಯನ್ ಡಾಲರ್ ವ್ಯವಹಾರ ನಡೆಸಲು ನಾಯಕರು ಒಪ್ಪಿಕೊಂಡರು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಉತ್ತರ-ದಕ್ಷಿಣ ಅಂತಾರಾಷ್ಟ್ರೀಯ ಸಾರಿಗೆ ಕಾರಿಡಾರ್, ಉತ್ತರ ಸಮುದ್ರ ಮಾರ್ಗ ಮತ್ತು ಚೆನ್ನೈ-ವ್ಲಾಡಿವೋಸ್ಟಾಕ್‌ ನಡುವೆ ಹೊಸ ಸಮುದ್ರ ಮಾರ್ಗಗಳನ್ನು ಪ್ರಾರಂಭಿಸುವ ಮೂಲಕ ಭಾರತದೊಂದಿಗೆ ಸರಕು ವಹಿವಾಟು ಹೆಚ್ಚಿಸಲು ರಷ್ಯಾ ಒಪ್ಪಿಕೊಂಡಿದೆ. ಮಾತ್ರವಲ್ಲ ಕೃಷಿ ಉತ್ಪನ್ನಗಳು, ಆಹಾರ ಮತ್ತು ರಸಗೊಬ್ಬರಗಳಲ್ಲಿ ದ್ವಿಪಕ್ಷೀಯ ವ್ಯಾಪಾರದ ಪ್ರಮಾಣವನ್ನು ಹೆಚ್ಚಿಸಲು ಉಭಯ ದೇಶಗಳ ನಾಯಕರು ಸಮ್ಮತಿ ಸೂಚಿಸಿದ್ದಾರೆ. ಪರಮಾಣು ಇಂಧನ, ತೈಲ ಸಂಸ್ಕರಣೆ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ಪ್ರಮುಖ ಇಂಧನ ಕ್ಷೇತ್ರಗಳಲ್ಲಿನ ಸಹಕಾರಕ್ಕೆ ಭಾರತ-ರಷ್ಯಾ ಒಪ್ಪಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Donald Trump: ಡೊನಾಲ್ಡ್‌ ಟ್ರಂಪ್‌ ಅವರು ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಜುಲೈ 13ರ ಸಂಜೆ ಆಯೋಜಿಸಿದ್ದ ರ‍್ಯಾಲಿಯ ವೇಳೆ ನಡೆದ ಗುಂಡಿನ ದಾಳಿಯಿಂದ ಪಾರಾದ ಬಳಿಕ ಡೊನಾಲ್ಡ್ ಟ್ರಂಪ್ ಅವರು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅವರು ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಬೆದರಿಕೆಗೆ ಜಗ್ಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

VISTARANEWS.COM


on

Donald Trump
Koo

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ತಿಂಗಳು ಬಾಕಿ ಉಳಿದಿವೆ. ರಿಪಬ್ಲಿಕನ್‌ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಕಣಕ್ಕಿಳಿದಿದ್ದಾರೆ. ಇನ್ನು ಜುಲೈ 23ರಂದು ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಗುಂಡಿನ ದಾಳಿ ಮೂಲಕ ಹತ್ಯೆಗೆ ಯತ್ನಿಸಿದ ಬಳಿಕ ಮಾಜಿ ಅಧ್ಯಕ್ಷರು ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಗುಂಡು ತಗುಲಿದ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡಿರುವ ಡೊನಾಲ್ಡ್‌ ಟ್ರಂಪ್‌, ಸಾರ್ವಜನಿಕವಾಗಿ ಪ್ರತ್ಯಕ್ಷರಾಗಿದ್ದಾರೆ.

ಜುಲೈ 15ರಂದು ಪಿಸರ್ವ್‌ ಫೋರಂ ಮಿಲ್ವೌಕಿಯಲ್ಲಿನಡೆದ ರಿಪಬ್ಲಿಕನ್‌ ನ್ಯಾಷನಲ್‌ ಕನ್ವೆನ್ಶನ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಅವರು ಕಾಣಿಸಿಕೊಂಡಿದ್ದು, ಸಾವಿರಾರು ಜನ ಟ್ರಂಪ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಮಾವೇಶದಲ್ಲಿ ನೆರೆದಿದ್ದ ಜನರನ್ನು ಕಂಡು, ಅವರು ಕೂಗುತ್ತಿದ್ದ ಘೋಷಣೆ ಕೇಳಿ ಡೊನಾಲ್ಡ್‌ ಟ್ರಂಪ್‌ ಅವರು ಭಾವುಕರಾಗಿದ್ದಾರೆ. ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಟ್ರಂಪ್‌ ಅವರು ಧನ್ಯವಾದ ತಿಳಿಸಿದ್ದಾರೆ. ಇದರೊಂದಿಗೆ, ಗುಂಡಿನ ದಾಳಿ ಬಳಿಕ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಅನುಕಂಪ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.

ಅಮೆರಿಕದ ಮಾಧ್ಯಮ ವರದಿಗಳು ಶೂಟರ್‌ನನ್ನು 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಿವೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನಿಂದ ಕ್ರೂಕ್ಸ್, ಬಟ್ಲರ್‌ನಲ್ಲಿ ಹೊರಾಂಗಣ ರ‍್ಯಾಲಿಯಲ್ಲಿ ಟ್ರಂಪ್ ಮೇಲೆ ಗುಂಡು ಹಾರಿಸಿದ್ದಾನೆ. ಅದರಲ್ಲಿ ಒಂದು ಬುಲೆಟ್ ಟ್ರಂಪ್ ಕಿವಿಗೆ ತಾಗಿತು. ಬಟ್ಲರ್ ಫಾರ್ಮ್ ಶೋ ಮೈದಾನದಲ್ಲಿ ವೇದಿಕೆಯಿಂದ 130 ಗಜಗಳಷ್ಟು ದೂರದಲ್ಲಿರುವ ಉತ್ಪಾದನಾ ಘಟಕದ ಚಾವಣಿಯ ಮೇಲೆ ಕ್ರೂಕ್ಸ್ ಗನ್‌ ಸಮೇತ ಇದ್ದ ಎನ್ನಲಾಗಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಅಮೆರಿಕದ ಭದ್ರತಾ ಸಿಬ್ಬಂದಿಯು ಥಾಮಸ್ ಮ್ಯಾಥ್ಯೂ ಕ್ರೂಕ್ಸ್‌ನನ್ನು ಹೊಡೆದುರುಳಿಸಿದರು.

ಡೊನಾಲ್ಡ್‌ ಟ್ರಂಪ್‌ ಅವರು ಗುಂಡಿನ ದಾಳಿ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದರು. ಟ್ರಂಪ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆ ಬಗ್ಗೆ ಪೋಸ್ಟ್‌ವೊಂದನ್ನು ಮಾಡಿದ್ದು, ನಾನು ಗುಸುಗುಸು ಶಬ್ದ, ಗುಂಡೇಟಿನ ಶಬ್ದ ಕೇಳಿದಾಗ ಏನೋ ತಪ್ಪಾಗಿದೆ ಎಂದು ನನಗೆ ತಕ್ಷಣ ತಿಳಿದಿತ್ತು ಮತ್ತು ಗುಂಡು ಚರ್ಮವನ್ನು ಸೀಳುತ್ತಿರುವುದನ್ನು ತಕ್ಷಣವೇ ಅನುಭವಿಸಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆಯುವುದು ನಂಬಲಸಾಧ್ಯ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

Continue Reading

ದೇಶ

Made In Bihar: ರಷ್ಯಾ ಸೈನ್ಯಕ್ಕೆ ಬಿಹಾರದಿಂದ ಸೇಫ್ಟಿ ಶೂ ಪೂರೈಕೆ; ವಾರ್ಷಿಕ 100 ಕೋಟಿ ರೂ. ವ್ಯವಹಾರ

Made In Bihar: ರಷ್ಯಾ ಸೈನಿಕರು ಬಿಹಾರದ ಹಾಜಿಪುರದಲ್ಲಿ ತಯಾರಿಸುವ ‘ಮೇಡ್ ಇನ್ ಬಿಹಾರ್’ ಶೂಗಳನ್ನು ಬಳಸುತ್ತಿದ್ದಾರೆ. ಹೌದು, ಬಿಹಾರದ ಹಾಜಿಪುರ ನಗರವು ರಷ್ಯಾದ ಸೈನ್ಯಕ್ಕಾಗಿ ಸೇಫ್ಟಿ ಶೂ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿದೆ. ಹಾಜಿಪುರ ಮೂಲದ ಕಾಂಪಿಟೆನ್ಸ್ ಎಕ್ಸ್‌ಪೋರ್ಟ್ಸ್‌ ಕಂಪನಿ ರಷ್ಯಾಕ್ಕೆ ಸೇಫ್ಟಿ ಬೂಟ್‌ ಮತ್ತು ಯುರೋಪಿಯನ್ ಮಾರುಕಟ್ಟೆಗಳಿಗೆ ಡಿಸೈನರ್ ಶೂಗಳನ್ನು ಪೂರೈಸುತ್ತಿದೆ.

VISTARANEWS.COM


on

Made In Bihar
Koo

ಪಟನಾ: ರಷ್ಯಾ ಸೇನೆ (Russian soldiers)ಯು ಉಕ್ರೇನ್‌ ವಿರುದ್ಧ ಯುದ್ಧ ಮುಂದುವರಿಸಿದೆ. ವಿಶೇಷ ಎಂದರೆ ಈ ಕಾರ್ಯಾಚರಣೆಗೆ ರಷ್ಯಾ ಸೈನಿಕರು ಬಿಹಾರದ ಹಾಜಿಪುರ (Hajipur)ದಲ್ಲಿ ತಯಾರಿಸುವ ‘ಮೇಡ್ ಇನ್ ಬಿಹಾರ್’ (Made In Bihar) ಶೂಗಳನ್ನು ಬಳಸುತ್ತಿದ್ದಾರೆ.

ಕೃಷಿ ಉತ್ಪಾದನೆಗೆ ಹೆಸರುವಾಸಿಯಾದ ಬಿಹಾರದ ಹಾಜಿಪುರ ನಗರವು ರಷ್ಯಾದ ಸೈನ್ಯಕ್ಕಾಗಿ ಸೇಫ್ಟಿ ಶೂ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿದೆ. ಹಾಜಿಪುರ ಮೂಲದ ಕಾಂಪಿಟೆನ್ಸ್ ಎಕ್ಸ್‌ಪೋರ್ಟ್ಸ್‌ (Competence Exports) ಖಾಸಗಿ ಕಂಪನಿಯಾಗಿದ್ದು, ರಷ್ಯಾಕ್ಕೆ ಸೇಫ್ಟಿ ಬೂಟ್‌ ಮತ್ತು ಯುರೋಪಿಯನ್ ಮಾರುಕಟ್ಟೆಗಳಿಗೆ ಡಿಸೈನರ್ ಶೂಗಳನ್ನು ಪೂರೈಸುತ್ತಿದೆ.

ಈ ಬಗ್ಗೆ ಮಾತನಾಡಿದ ಜನರಲ್ ಮ್ಯಾನೇಜರ್ ಶಿಬ್ ಕುಮಾರ್ ರಾಯ್, “ನಾವು 2018ರಲ್ಲಿ ಹಾಜಿಪುರದಲ್ಲಿ ಈ ಕಂಪನಿ ಆರಂಭಿಸಿದೆವು. ಸ್ಥಳೀಯರಿಗೆ ಉದ್ಯೋಗವನ್ನು ಸೃಷ್ಟಿಸುವುದು ನಮ್ಮ ಮುಖ್ಯ ಗುರಿ. ಹಾಜಿಪುರದಲ್ಲಿ ನಾವು ರಷ್ಯಾಕ್ಕೆ ರಫ್ತು ಮಾಡಬಹುದಾದ ಸೇಫ್ಟಿ ಶೂಗಳನ್ನು ತಯಾರಿಸುತ್ತೇವೆ. ರಷ್ಯಾದ ಜತೆಗೆ ಯುರೋಪ್‌ಗೂ ರಫ್ತು ಮಾಡುತ್ತಿದ್ದೇವೆ. ಶೀಘ್ರದಲ್ಲೇ ದೇಶೀಯ ಮಾರುಕಟ್ಟೆಯಲ್ಲಿ ವಹಿವಾಟು ಪ್ರಾರಂಭಿಸಲಿದ್ದೇವೆʼʼ ಎಂದು ತಿಳಿಸಿದ್ದಾರೆ.

ರಷ್ಯಾ ಸೈನ್ಯಕ್ಕೆ ಪೂರೈಸುವ ಸೇಫ್ಟಿ ಶೂ ವಿಶೇಷತೆಗಳ ಬಗ್ಗೆ ಮಾತನಾಡಿದ ಅವರು, “ಈ ಶೂಗಳು ಹಗುರವಾಗಿರಬೇಕು. ಜಾರದಂತಿರಬೇಕು. ಸೋಲ್‌ನಲ್ಲಿ ವೈಶಿಷ್ಟ್ಯ ಹೊಂದಿರಬೇಕು ಮತ್ತು -40 ಡಿಗ್ರಿ ಸೆಲ್ಸಿಯಸ್‌ನಂತಹ ವಾತಾವರಣಕ್ಕೂ ಹೊಂದಿಕೆಯಾಗುವಂತಿರಬೇಕು. ಈ ರೀತಿಯಲ್ಲಿ ನಾವು ಶೂ ತಯಾರಿಸುತ್ತಿದ್ದೇವೆʼʼ ಎಂದು ವಿವರಿಸಿದ್ದಾರೆ.

ಅಂತಾರಾಷ್ಟ್ರೀಯ ಗುಣಮಟ್ಟ

“ಬಿಹಾರದಲ್ಲಿ ವಿಶ್ವ ದರ್ಜೆಯ ಕಾರ್ಖಾನೆಯನ್ನು ಆರಂಭಿಸುವುದು ಮತ್ತು ರಾಜ್ಯದ ಯುವ ಜನತೆಗೆ ಉದ್ಯೋಗ ನೀಡುವುದು ಕಂಪನಿಯ ಎಂ.ಡಿ. ದಾನೇಶ್ ಪ್ರಸಾದ್ ಅವರ ಮಹತ್ವಾಕಾಂಕ್ಷೆ. ಸದ್ಯ ನಮ್ಮಲ್ಲಿರುವ 300 ಉದ್ಯೋಗಿಗಳಲ್ಲಿ ಶೇ. 70ರಷ್ಟು ಮಹಿಳೆಯರುʼʼ ಎಂದು ಶಿಬ್ ಕುಮಾರ್ ರಾಯ್ ತಿಳಿಸಿದ್ದಾರೆ.

ಕಂಪೆನಿಯುವ ಕಳೆದ ವರ್ಷ 15 ಲಕ್ಷ ಜೋಡಿ ಶೂಗಳನ್ನು ರಫ್ತು ಮಾಡಿದೆ. ಇದರ ಮೌಲ್ಯ ಸುಮಾರು 100 ಕೋಟಿ ರೂ. ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ಗುರಿಯನ್ನು ಕಂಪನಿ ಹೊಂದಿದೆ. ʼʼಬಿಹಾರ ಸರ್ಕಾರವು ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತಿದೆ. ಜತೆಗೆ ರಸ್ತೆ ಮತ್ತು ಸಂವಹನದಂತಹ ಮೂಲಸೌಕರ್ಯಗಳಲ್ಲಿ ಸುಧಾರಣೆಯ ಅಗತ್ಯವಿದೆ. ಇದರಿಂದ ಗ್ರಾಹಕರಿಗೆ ಸುಲಭವಾಗಿ ನಮ್ಮನ್ನು ತಲುಪಲು ಸಾಧ್ಯವಾಗುತ್ತದೆʼʼ ಎಂದು ಶಿಬ್ ಕುಮಾರ್ ರಾಯ್ ಅಭಿಪ್ರಾಯಪಟ್ಟಿದ್ದಾರೆ. “ತರಬೇತಿ ಸಂಸ್ಥೆಯನ್ನು ಸ್ಥಾಪಿಸುವ ಗುರಿ ಹೊಂದಿದ್ದೇವೆ. ಇದರಿಂದ ಕೌಶಲ್ಯ ಹೊಂದಿದ ಯುವ ಜನತೆಯನ್ನು ಸಿದ್ಧ ಪಡಿಸುತ್ತೇವೆʼʼ ಎಂದಿದ್ದಾರೆ.

ಸದ್ಯ ಹಾಜಿಪುರ ಘಟಕವು ಸೇಫ್ಟಿ ಶೂಗಳಲ್ಲದೆ ಐಷಾರಾಮಿ ಡಿಸೈನರ್ ಶೂಗಳನ್ನು ಯುರೋಪಿಯನ್ ಮಾರುಕಟ್ಟೆಗಳಾದ ಇಟಲಿ, ಫ್ರಾನ್ಸ್, ಸ್ಪೇನ್ ಮತ್ತು ಇಂಗ್ಲೆಂಡ್‌ಗೆ ರಫ್ತು ಮಾಡುತ್ತಿದೆ. “ಅಂತಾರಾಷ್ಟ್ರೀಯ ಬ್ರ್ಯಾಂಡ್‌ಗಳಿಗಾಗಿ ಉನ್ನತ ಮಟ್ಟದ ಶೂಗಳನ್ನು ಅಭಿವೃದ್ಧಿಪಡಿಸುವುದು ನಮ್ಮ ಗುರಿ. ನಾವು ಇತ್ತೀಚೆಗೆ ಬೆಲ್ಜಿಯಂ ಕಂಪನಿಯೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಿದ್ದೇವೆ ” ಎಂದು ಕಂಪನಿಯ ಮಾರ್ಕೆಟಿಂಗ್ ಮುಖ್ಯಸ್ಥ ಮಜರ್ ಪಲ್ಲುಮಿಯಾ ತಿಳಿಸಿದ್ದಾರೆ. ಮುಂದಿನ ತಿಂಗಳು ಕೆಲವು ವಿದೇಶಿ ಕಂಪನಿಗಳು ಕಾರ್ಖಾನೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: Israel Palestine War: ಇಸ್ರೇಲ್‌ ಪೊಲೀಸರಿಗೂ ಕೇರಳದ ಟೇಲರ್‌ಗಳಿಗೂ ಎಲ್ಲಿಂದೆಲ್ಲಿಯ ಸಂಬಂಧ!

Continue Reading

ವಿದೇಶ

Ban on PTI: ಇಮ್ರಾನ್‌ ಖಾನ್‌ಗೆ ಬಿಗ್‌ ಶಾಕ್‌! ಪಿಟಿಐ ಪಕ್ಷದ ಮೇಲೆ ನಿಷೇಧ

Ban on PTI: ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಅತ್ತಾವುಲ್ಲಾ ತರಾತ್‌ ಮಾಧ್ಯಮಗೋ‍ಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರ ಪಿಟಿಐ ಪಕ್ಷ ಮೇಲೆ ನಿಷೇಧ ಹೇರಲು ನಿರ್ಧರಿಸಿದೆ. ಪಿಟಿಐ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಹಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Ban on PTI
Koo

ಇಸ್ಲಮಾಬಾದ್‌: ಪಾಕಿಸ್ತಾನ(Pakistan)ದಲ್ಲಿ ಶೆಹಬಾಜ್‌ ಷರೀಫ್‌ ನೇತೃತ್ವದ ಸರ್ಕಾರ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌(Imran Khan) ನೇತೃತ್ವದ ಪಾಕಿಸ್ತಾನ ತೆಹ್ರಿಕ್‌ ಎ ಇನ್ಸಾಫ್‌(PTI) ಪಕ್ಷವನ್ನು ನಿಷೇಧಿಸಲು(Ban on PTI) ನಿರ್ಧರಿಸಿದೆ. ಪಾಕಿಸ್ತಾನ ಅತಿ ದೊಡ್ಡ ಪ್ರತಿಪಕ್ಷದ ಮೇಲೆ ನಿಷೇಧ ಹೇರುವ ಬಗ್ಗೆ ಅಲ್ಲಿನ ಸಚಿವರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಅತ್ತಾವುಲ್ಲಾ ತರಾತ್‌ ಮಾಧ್ಯಮಗೋ‍ಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರ ಪಿಟಿಐ ಪಕ್ಷ ಮೇಲೆ ನಿಷೇಧ ಹೇರಲು ನಿರ್ಧರಿಸಿದೆ. ಪಿಟಿಐ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಹಿಸಲಾಗಿದೆ ಎಂದು ಹೇಳಿದ್ದಾರೆ. ಇಮ್ರಾನ್ ಖಾನ್ ಅವರ ಪಕ್ಷವು ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾದ 20 ಕ್ಕೂ ಹೆಚ್ಚು ಸ್ಥಾನಗಳಿಗೆ ಅರ್ಹವಾಗಿದೆ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ಆದೇಶದ ನಂತರ ಪಿಟಿಐ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ದಾರಿ ಮಾಡಿಕೊಟ್ಟಿದೆ. ಇದಾದ ಕೆಲವು ದಿನಗಳ ನಂತರ ಪಾಕಿಸ್ತಾನ ಸರ್ಕಾರ ಈ ಘೋಷಣೆಯನ್ನು ಮಾಡಿದೆ.

ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷ ವಿದೇಶಿ ಮೂಲಗಳಿಂದ ಅಕ್ರಮವಾಗಿ ಹಣ ಸ್ವೀಕರಿಸಿರುವ ಬಗ್ಗೆ ಪುರಾವೆಗಳಿವೆ. ಅದೂ ಅಲ್ಲದೇ ಆ ಹಣವನ್ನು ಬಳಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಬಯಲಾಗಿದೆ. ವಿದೇಶಿ ನಿಧಿ ಪ್ರಕರಣ, ಮೇ 9 ರ ಗಲಭೆಗಳು, ಸೈಫರ್ ಎಪಿಸೋಡ್ ಮತ್ತು ಯುಎಸ್‌ನಲ್ಲಿ ಅಂಗೀಕರಿಸಿದ ನಿರ್ಣಯದ ದೃಷ್ಟಿಯಿಂದ, ಪಿಟಿಐ ಅನ್ನು ನಿಷೇಧಿಸಲು ಸಾಕಷ್ಟು ವಿಶ್ವಾಸಾರ್ಹ ಪುರಾವೆಗಳಿವೆ. ಹೀಗಾಗಿ ಅದನ್ನು ಬ್ಯಾನ್‌ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇಮ್ರಾನ್ ಖಾನ್, 71, ಪಾಕಿಸ್ತಾನದ ಪ್ರಬಲ ಮಿಲಿಟರಿಯೊಂದಿಗಿನ ಅಸಮಾಧಾನದ ನಂತರ ಏಪ್ರಿಲ್ 2022 ರಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ನಂತರ ಅವರ ವಿರುದ್ಧ ಅನೇಕ ಪ್ರಕರಣಗಳಲ್ಲಿ ಅರೆಸ್ಟ್‌ ಮಾಡಾಗಿತ್ತು. ಸದ್ಯ ಅವರನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇರಿಸಲಾಗಿದೆ.

ಇಮ್ರಾನ್‌ ಖಾನ್‌ ಅವರು ಪ್ರಧಾನಿಯಾಗಿದ್ದಾಗ ಪಾಕಿಸ್ತಾನಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಯೊಂದನ್ನು ಅಮೆರಿಕಕ್ಕೆ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾವಲ್ಪಿಂಡಿ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದಾದ ಬಳಿಕವೇ ಮತ್ತೊಂದು ನ್ಯಾಯಾಲಯವು 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ತೋಷಖಾನಾ (ಖಜಾನೆಗೆ ಸೇರಬೇಕಾದ ಉಡುಗೊರೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಿದ ಪ್ರಕರಣ) ಪ್ರಕರಣದಲ್ಲಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದೆ. ಈಗ ಮತ್ತೊಂದು ನ್ಯಾಯಾಲಯವು ದಂಪತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

Continue Reading

ವಿದೇಶ

KP Sharma Oli: ನೇಪಾಳದ ನೂತನ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಮೋದಿ ಅಭಿನಂದನೆ

KP Sharma Oli: ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

VISTARANEWS.COM


on

KP Sharma Oli
Koo

ಕಾಠ್ಮಂಡುನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ (KP Sharma Oli) ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದೇಶಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

ಶುಕ್ರವಾರ ನಡೆದ ವಿಶ್ವಾಸಮತ ಯಾಚನೆಯ ವೇಳೆ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಬಹುಮತ ಸಾಬೀತುಪಡಿಸಲು ವಿಫಲರಾಗಿ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದರು. ಹೀಗಾಗಿ ಸಿಪಿಎನ್‌-ಯುಎಂಎಲ್‌ (Nepal-Unified Marxist Leninist (CPN-UML) ಪಕ್ಷದ ಅಧ್ಯಕ್ಷ, 72 ವರ್ಷದ ಕೆ.ಪಿ.ಶರ್ಮ ಒಲಿ ಪ್ರಧಾನಿಯಾಗಿ ನೇಮಕಗೊಂಡರು. ಈ ಹಿಂದೆ ಅವರು 2015ರ ಅಕ್ಟೋಬರ್ 11ರಿಂದ 2016ರ ಆಗಸ್ಟ್ 3ರವರೆಗೆ, 2018ರ ಫೆಬ್ರವರಿ 5ರಿಂದ 2021ರ ಜುಲೈ 13ರವರೆಗೆ ಕೆ.ಪಿ.ಶರ್ಮಾ ಒಲಿ ನೇಪಾಳದ ಪ್ರಧಾನ ಮಂತ್ರಿಯಾಗಿದ್ದರು. ಒಲಿ ಅವರು ಚೀನಾ ಪರ ಒಲವು ಹೊಂದಿದ್ದಾರೆ.

ಇತರ ಚಿಕ್ಕ ಪುಟ್ಟ ಪಕ್ಷಗಳಾದ ರಾಷ್ಟ್ರೀಯ ಪ್ರಜಾತಂತ್ರ ಪಾರ್ಟಿ, ಜನತಾ ಸಮಾಜವಾದಿ ಪಾರ್ಟಿ ನೇಪಾಳ, ಲೋಕತಾಂತ್ರಿಕ ಸಮಾಜವಾದಿ ಪಾರ್ಟಿ, ಜನಮತ ಪಾರ್ಟಿ ಮತ್ತು ನಾಗರಿಕ ಉನ್‌ಮುಕ್ತಿ ಪಾರ್ಟಿ ಹೊಸ ಸರ್ಕಾರಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ರಾಷ್ಟ್ರಪತಿ ಭವನದ ಮುಖ್ಯ ಕಟ್ಟಡವಾದ ಶೀತಲ್ ನಿವಾಸದಲ್ಲಿ ಸೋಮವಾರ (ಜುಲೈ 15) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಪ್ರಚಂಡ ಅವರ ವಿಶ್ವಾಸಮತ ಸೋತ ಬೆನ್ನಲ್ಲೇ ಒಲಿ ಅವರು 165 ಬೆಂಬಲ ಪತ್ರವನ್ನು ಸಲ್ಲಿಸಿದ್ದರು. ಕಮ್ಯುನಿಸ್ಟ್‌ ಪಾರ್ಟಿ ಆಫ್‌ ನೇಪಾಳ್‌-ಯುನಿಫೈಡ್‌ ಮಾರ್ಕಿಸ್ಟ್‌ ಲೆನಿನಿಸ್ಟ್‌ನ 77 ಸಂಸದರು ಮತ್ತು ನೇಪಾಳಿ ಕಾಂಗ್ರೆಸ್‌ನ 88 ಸಂಸದರು ಒಲಿ ಅವರನ್ನು ಬೆಂಬಲಿಸಿದ್ದಾರೆ ಎಂದು ರಾಷ್ಟ್ರಪತಿ ರಾಮ್‌ ಚಂದ್ರ ಪೌಡೆಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: Ram Mandir: ನೇಪಾಳದ ಸೀತೆಯ ಮನೆಯಿಂದ ರಾಮಮಂದಿರಕ್ಕೆ 3 ಸಾವಿರ ಉಡುಗೊರೆ!

ಚೀನಾ ಪರ ಒಲವು

ಕೆಲವು ಮಾಧ್ಯಮಗಳ ವರದಿಯ ಪ್ರಕಾರ ನೇಪಾಳದ ಹೊಸ ಸಂವಿಧಾನದ ಬಗ್ಗೆ 2015ರಲ್ಲಿ ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆ ಭುಗಿಲೆದ್ದ ಸಮಯದಲ್ಲಿ ಒಲಿ ಭಾರತದ ವಿರುದ್ಧ ಕಠಿಣ ನಿಲುವನ್ನು ತೆಗೆದುಕೊಂಡಿದ್ದರು. ಅವರ ಸರ್ಕಾರವು ಚೀನಾದೊಂದಿಗಿನ ಸಂಬಂಧಗಳನ್ನು ಬಲಪಡಿಸಿತ್ತು ಮತ್ತು ಉತ್ತರಾಖಂಡದ ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಧುರಾವನ್ನು ನೇಪಾಳದ ಭೂಪ್ರದೇಶದ ಭಾಗವೆಂದು ಪ್ರತಿಪಾದಿಸುವ ನವೀಕರಿಸಿದ ನಕ್ಷೆಯನ್ನು ಪ್ರಕಟಿಸಿ ವಿವಾದ ಹುಟ್ಟು ಹಾಕಿತ್ತು. ಆಗಲೇ ತಿರುಗೇಟು ನೀಡಿದ ಭಾರತವು ಈ ಹೇಳಿಕೆಯನ್ನು ಏಕಪಕ್ಷೀಯ ಎಂದು ತಿರಸ್ಕರಿಸಿತ್ತು ಮತ್ತು ನಂತರ ಉಭಯ ದೇಶಗಳು ಮಾತುಕತೆಯಲ್ಲಿ ತೊಡಗಿದ್ದವು.

Continue Reading
Advertisement
Rishabh Pant
ಕ್ರಿಕೆಟ್15 seconds ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ಮಿಮ್ಮಿಂಗ್‌ ಪೂಲ್​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Karnataka Rain
ಮಳೆ36 seconds ago

Karnataka Rain : ಭಾರಿ ಮಳೆಗೆ ಕಾರಿನ ಮೇಲೆ ಬಿದ್ದ ತೆಂಗಿನ ಮರ; ಮಲಗಿದ್ದ‌ ವ್ಯಕ್ತಿ ಮೇಲೆ ಗೋಡೆ ಕುಸಿತ

2nd Puc Result
ಪ್ರಮುಖ ಸುದ್ದಿ6 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest12 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ27 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest31 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ41 mins ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest43 mins ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್49 mins ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Soldier 2
ಸಿನಿಮಾ52 mins ago

Soldier 2: ಮುಂದಿನ ವರ್ಷ ‘ಸೋಲ್ಜರ್ 2’ ಶೂಟಿಂಗ್; ಮತ್ತೆ ಒಂದಾಗಲಿದ್ದಾರೆಯೇ ಬಾಬಿ ಡಿಯೋಲ್-ಪ್ರೀತಿ ಜಿಂಟಾ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ21 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌