Canada Ram Mandir defaced: ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಕೆನಡಾ ಸರ್ಕಾರಕ್ಕೆ ಇಂಡಿಯನ್ ಕಾನ್ಸುಲೇಟ್ ಮನವಿ - Vistara News

ವಿದೇಶ

Canada Ram Mandir defaced: ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಕೆನಡಾ ಸರ್ಕಾರಕ್ಕೆ ಇಂಡಿಯನ್ ಕಾನ್ಸುಲೇಟ್ ಮನವಿ

Canada Ram Mandir: ಇತ್ತೀಚಿನ ದಿನಗಳಲ್ಲಿ ಕೆನಡಾದಲ್ಲಿ ಭಾರತ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿವೆ. ಕೆನಡಾದ ಮಿಸ್ಸಿಸೌಗಾದಲ್ಲಿರುವ ರಾಮ ಮಂದಿರವನ್ನು ಭಾರತ ವಿರೋಧಿ ಬರಹಗಳಿಂದ ವಿರೂಪಗೊಳಿಸಿದ ಘಟನೆ ನಡೆದಿದೆ.

VISTARANEWS.COM


on

Ram Mandir defaced with anti-India graffiti in Canada, India calls for action
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೆನಡಾದ ಮಿಸ್ಸಿಸೌಗಾದಲ್ಲಿರುವ ರಾಮಮಂದಿರವನ್ನು (Canada Ram Mandir) ಭಾರತ ವಿರೋಧಿ ಗೀಚುಬರಹದಿಂದ ವಿರೂಪಗೊಳಿಸಲಾಗಿದೆ. ಭಾರತ ವಿರೋಧಿ ಈ ಕೃತ್ಯವನ್ನು ಟೊರೊಂಟೊದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಅವರು ತೀವ್ರವಾಗಿ ಖಂಡಿಸಿದ್ದು, ಕೂಡಲೇ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭಾರತ ವಿರೋಧಿ ಬರಹಗಳಿಂದ ರಾಮ ಮಂದಿರವನ್ನು ವಿರೂಪಗೊಳಿಸಿದ ಕೃತ್ಯವನ್ನು ಖಂಡಿಸುತ್ತೇವೆ. ಈ ಘಟನೆಯ ಕುರಿತು ತನಿಖೆ ನಡೆಸುವಂತೆ ನಾವು ಕೆನಡಾದ ಅಧಿಕಾರಿಗಳಿಗೆ ವಿನಂತಿಸಿಕೊಳ್ಳುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭಾರತದ ಕಾನ್ಸುಲೇಟ್ ಟ್ವೀಟ್ ಮಾಡಿದೆ.

ಭಿಂದ್ರನ್‌ವಾಲಾನನ್ನು ಹೊಗಳಿಗ, ಭಾರತ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಬರಹವನ್ನು ದೇವಸ್ಥಾನದ ಗೋಡೆಗಳ ಮೇಲೆ ಗೀಚಲಾಗಿದೆ. ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಅವರು, ಇದೊಂದು ದ್ವೇಷದ ಅಪರಾಧವಾಗಿರಬಹುದು ಮತ್ತು ಈ ಕೃತ್ಯವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Temple Defaced : ಕೆನಡಾದ ದೇಗುಲವನ್ನು ವಿರೂಪಗೊಳಿಸಿದ ಖಲಿಸ್ತಾನಿ ಉಗ್ರರು

ಕೆನಡಾದಲ್ಲಿ ಹಿಂದೂ ದೇವಾಲಯಗಳನ್ನು ಗುರಿಯಾಗಿಸಿಕೊಳ್ಳುತ್ತಿರುವುದು ಇದೇ ಮೊದಲ್ಲ. ಈ ಹಿಂದೆಯೂ ಅನೇಕ ಈ ರೀತಿಯ ಘಟನೆಗಳು ನಡೆದಿವೆ. ಭಾರತ ವಿರೋಧಿ ಹೇಳಿಕೆಗಳೊಂದಿಗೆ ದೇವಾಲಯಗಳನ್ನು ವಿರೂಪಗೊಳಿಸುವ ಕೃತ್ಯಗಳು ನಡೆದಿವೆ. ಬಹುಶಃ ಖಲಿಸ್ತಾನಿ ಬಂಡುಕೋರರು ಈ ಘಟನೆಗಳ ಹಿಂದೆ ಇದ್ದಾರೆ ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Pakistani Labours: ಭಿಕ್ಷಾಟನೆ, ಅಪರಾಧ ಕೃತ್ಯ; ಪಾಕಿಸ್ತಾನಿಯರನ್ನು ಒದ್ದು ಓಡಿಸುತ್ತಿರುವ ಗಲ್ಫ್‌ ರಾಷ್ಟ್ರಗಳು!

ಪಾಕಿಸ್ತಾನದಿಂದ (Pakistani Labours) ಇರಾಕ್ ಮತ್ತು ಸೌದಿ ಅರೇಬಿಯಾಗೆ ಜಿಯಾರತ್ ಅಥವಾ ತೀರ್ಥಯಾತ್ರೆಯ ನೆಪದಲ್ಲಿ ಸಾಕಷ್ಟು ಮಂದಿ ಹೋಗುತ್ತಾರೆ. ಉಮ್ರಾ ಪರವಾನಗಿ ಹೊಂದಿರುವ ಹೆಚ್ಚಿನ ಪ್ರವಾಸಿಗರು ಸೌದಿ ಅರೇಬಿಯಾವನ್ನು ಪ್ರವೇಶಿಸುತ್ತಾರೆ. ಅನಂತರ ಭಿಕ್ಷಾಟನೆಯಲ್ಲಿ ತೊಡಗುತ್ತಾರೆ. ಅಲ್ಲಿ ಬಂಧಿಸಲ್ಪಟ್ಟ ಭಿಕ್ಷುಕರಲ್ಲಿ ಶೇ. 90ರಷ್ಟು ಮಂದಿ ಪಾಕಿಸ್ತಾನಿಗಳು ಎಂದು ಸಾಗರೋತ್ತರ ಪಾಕಿಸ್ತಾನಿಗಳ ಕಾರ್ಯದರ್ಶಿ ಡಾ. ಅರ್ಷದ್ ಮಾಹಿತಿ ನೀಡಿದ್ದಾರೆ.

VISTARANEWS.COM


on

By

Pakistani Labours
Koo

ಆರ್ಥಿಕ ಸಂಕಷ್ಟಕ್ಕೆ (bankrupt) ಸಿಲುಕಿ ದಿವಾಳಿಯಾಗಿರುವ ಪಾಕಿಸ್ತಾನಕ್ಕೆ (pakistan) ಜಾಗತಿಕ ಮಟ್ಟದಲ್ಲಿ ಮತ್ತೊಂದು ಹೊಡೆತ ಬಿದ್ದಿದೆ. ವಿಶ್ವ ಮಟ್ಟದಲ್ಲೇ ಬಹುದೊಡ್ಡ ಅವಮಾನ ಎದುರಾಗಿದೆ. ಹಲವಾರು ಗಲ್ಫ್ ರಾಷ್ಟ್ರಗಳು (Gulf countries) ಪಾಕಿಸ್ತಾನಿ ವಲಸಿಗರು ಮತ್ತು ಪಾಕಿಸ್ತಾನಿ ಕಾರ್ಮಿಕ ಬಲದ (Pakistani Labours) ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಹೊರದೇಶಗಳಲ್ಲಿ ದುಡಿಯುವ ಅನೇಕ ಪಾಕಿಸ್ತಾನಿ ನಾಗರಿಕರು (Pakistani citizens) ಇದರಿಂದ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು.

ಸಾಗರೋತ್ತರ ಪಾಕಿಸ್ತಾನಿಗಳ ಕುರಿತ ಸೆನೆಟ್ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ. ಪಾಕಿಸ್ತಾನದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಈ ವಿಷಯ ಬಹಿರಂಗವಾಗಿದೆ ಎಂದು ಸಾಗರೋತ್ತರ ಪಾಕಿಸ್ತಾನಿಗಳ ಕಾರ್ಯದರ್ಶಿ ಡಾ. ಅರ್ಷದ್ ಹೇಳಿದರು.

ಸೌದಿ ಅರೇಬಿಯಾ, ಕತಾರ್, ಕುವೈತ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿದೇಶದಲ್ಲಿ ವಾಸಿಸುವ ಪಾಕಿಸ್ತಾನಿಗಳಿಗೆ ಸಂಬಂಧಿಸಿ ಅನೇಕ ವಿಷಯಗಳ ಬಗ್ಗೆ ಆಕ್ಷೇಪ ಎತ್ತಲಾಗಿದೆ. ಪಾಕಿಸ್ತಾನದಿಂದ ಭಿಕ್ಷುಕರು ಇರಾಕ್ ಮತ್ತು ಸೌದಿ ಅರೇಬಿಯಾಗೆ ತೀರ್ಥಯಾತ್ರೆಯ ನೆಪದಲ್ಲಿ ಹೋಗುತ್ತಾರೆ. ಬಳಿಕ ಅಲ್ಲಿ ಮಾಡಬಾರದ ಕೆಲಸ ಮಾಡಲು ತೊಡಗುತ್ತಾರೆ. ಉಮ್ರಾ ಪರವಾನಗಿ ಹೊಂದಿರುವ ಹೆಚ್ಚಿನ ಪ್ರವಾಸಿಗರು ಸೌದಿ ಅರೇಬಿಯಾವನ್ನು ಪ್ರವೇಶಿಸುತ್ತಾರೆ. ಅನಂತರ ಭಿಕ್ಷಾಟನೆಯಲ್ಲಿ ತೊಡಗುತ್ತಾರೆ. ಬಂಧಿಸಲ್ಪಟ್ಟ ಭಿಕ್ಷುಕರಲ್ಲಿ ಶೇ. 90ರಷ್ಟು ಮಂದಿ ಪಾಕಿಸ್ತಾನಿಗಳಾಗಿದ್ದಾರೆ.

ಗಲ್ಫ್ ರಾಷ್ಟ್ರಗಳ ಇತ್ತೀಚಿನ ಹೇಳಿಕೆಯು ಪಾಕಿಸ್ತಾನಿಯರಿಗೆ ಹೆಚ್ಚು ಸಮಸ್ಯೆಯನ್ನು ತಂದೊಡ್ಡಬಲ್ಲದು. ಯಾಕೆಂದರೆ ಇದು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ವಾಸಿಸುವ ಪಾಕಿಸ್ತಾನಿಯರ ಸಾಕಷ್ಟು “ಅನುಚಿತ” ನಡವಳಿಕೆಯನ್ನು ಬಹಿರಂಗಪಡಿಸಿದೆ. ದುಬೈನಲ್ಲಿ ವಾರ್ಷಿಕ ಒಟ್ಟು 6 ರಿಂದ 8 ಲಕ್ಷ ಜನರಲ್ಲಿ 2- 3 ಲಕ್ಷ ಪಾಕಿಸ್ತಾನಿಗಳು ತಮ್ಮ ವಿದೇಶ ಪ್ರವಾಸವನ್ನು ಮುಗಿಸಿ ಹಿಂದಿರುಗುತ್ತಾರೆ. ಉಳಿದವರು ಅಲ್ಲಿ ಇಲ್ಲಿ ಅಡಗಿಕೊಂಡು ಅಕ್ರಮದಲ್ಲಿ ತೊಡಗುತ್ತಾರೆ.

Pakistani Labours
Pakistani Labours


ಪಾಕಿಸ್ತಾನಿಯರಿಂದ ಶೇ. 50ರಷ್ಟು ಅಪರಾಧ

ಪಾಕಿಸ್ತಾನಿಗಳು ಮಲೇಷ್ಯಾದಲ್ಲಿ ಒಂದು ವರ್ಷ ಕಳೆಯುತ್ತಾರೆ. ಅನಂತರ ತಮ್ಮ ವಾಸ್ತವ್ಯವನ್ನು ವಿಸ್ತರಿಸಿದ್ದಕ್ಕಾಗಿ ಬಂಧಿಸಲ್ಪಡುತ್ತಾರೆ. ಇರಾಕ್‌ನಲ್ಲಿಯೂ ಇವರ ನಿಖರವಾದ ಸಂಖ್ಯೆ ಎಷ್ಟಿದೆ ಎಂಬುದು ತಿಳಿದಿಲ್ಲ.

ಸೆನೆಟರ್ ನಾಸಿರ್ ಅಬ್ಬಾಸ್ ಮಾತನಾಡಿ, ಪಾಕಿಸ್ತಾನಿಗಳಿಗಿಂತ ಬಾಂಗ್ಲಾದೇಶೀಯರು ಹೆಚ್ಚಿನ ಉದ್ಯೋಗ ಪಡೆಯುತ್ತಿದ್ದಾರೆ. ಇರಾಕ್‌ನಲ್ಲಿ ಪಾಕಿಸ್ತಾನಿಗಳನ್ನು “ಅಸಹಾಯಕರು” ಎಂದು ಕರೆದ ಅವರು, ಅಗ್ಗದ ಕಾರ್ಮಿಕರಾಗಿ ಅವರನ್ನು ಬಳಸಲಾಗುತ್ತಿದೆ. ಇರಾಕ್‌ನಲ್ಲಿ ಅವರನ್ನು “ಕೈದಿಗಳು” ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು. ಇರಾಕ್‌ನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ಕಾರ್ಮಿಕರ ಅಗತ್ಯವಿದೆ. ಇರಾಕ್‌ನಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿಯರಿಗೆ ಹಲವಾರು ಸಮಸ್ಯೆಗಳಿವೆ ಎಂದು ಹೇಳಿದರು.

ಸೌದಿ ಅರೇಬಿಯಾದಲ್ಲಿ 2 ಲಕ್ಷ ಜನರು ವಾಸಿಸುತ್ತಿದ್ದು, ವಾರ್ಷಿಕವಾಗಿ 4 ಲಕ್ಷ ಪಾಕಿಸ್ತಾನಿಗಳು ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಭಿಕ್ಷುಕರು ಮತ್ತು ರೋಗಿಗಳನ್ನು ಕಳುಹಿಸದಂತೆ ಪಾಕಿಸ್ತಾನಕ್ಕೆ ಸೂಚನೆ ನೀಡಲಾಗಿದೆ. ಯುಎಇಯಲ್ಲಿ ನಡೆಯುವ ಎಲ್ಲಾ ಅಪರಾಧಗಳಲ್ಲಿ ಶೇ. 50ರಷ್ಟನ್ನು ಪಾಕಿಸ್ತಾನಿಗಳು ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Pakistani Labours
Pakistani Labours


ಪಾಕಿಸ್ತಾನಿ ಉದ್ಯೋಗಿಗಳ ಭವಿಷ್ಯ ಏನು?

ಗಲ್ಫ್ ಸರ್ಕಾರಗಳು ಈಗ ಆಫ್ರಿಕನ್ ಕಾರ್ಮಿಕರ ಕಡೆಗೆ ತಿರುಗುತ್ತಿವೆ. ಯುಎಇಯಲ್ಲಿ ಉದ್ಯೋಗವನ್ನು ಹುಡುಕುವ ನಿರೀಕ್ಷೆಯಲ್ಲಿರುವ ಪಾಕಿಸ್ತಾನಿ ಕಾರ್ಮಿಕರ ಭವಿಷ್ಯದ ಬಗ್ಗೆ ಸಚಿವಾಲಯವು ಆತಂಕ ವ್ಯಕ್ತಪಡಿಸಿದೆ. ಯಾಕೆಂದರೆ ಅವರಿಗೆ ಕೆಲಸ ಕೊಡಲು ಗಲ್ಫ್‌ ರಾಷ್ಟ್ರಗಳು ಹಿಂದೆಮುಂದೆ ನೋಡುತ್ತಿವೆ. ಮತ್ತೊಂದೆಡೆ, ಕೆಎಸ್‌ಎ ಆಯಾ ಪ್ರಾಧಿಕಾರವಾದ ರಾಷ್ಟ್ರೀಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ (ತಕಾಮುಲ್) ನಿರ್ವಹಿಸುವ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವ್ಯಕ್ತಿಗಳನ್ನು ಮಾತ್ರ ನೇಮಿಸಿಕೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

Continue Reading

ಪ್ರಮುಖ ಸುದ್ದಿ

Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

Ismail Haniyeh: ಇರಾನ್‌ನಲ್ಲಿ ಇಸ್ರೇಲ್‌ನಿಂದ ಹತ್ಯೆಗೀಡಾಗಿರುವ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಲವು ದಾಳಿಗಳನ್ನು ನಡೆಸಿದ್ದ ಉಗ್ರ ನಾಯಕ. ಮಧ್ಯಪ್ರಾಚ್ಯ ರಾಜಕೀಯ ಬಿಕ್ಕಟ್ಟಿನಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಹನಿಯೆಹ್, ಪ್ಯಾಲೆಸ್ತೀನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾಗಿದ್ದಾಗಲೂ ಒಮ್ಮೆ ಈತನ ಮೇಲೆ ದಾಳಿ ನಡೆದಿತ್ತು. ಆಗ ಈತ ಪಾರಾಗಿದ್ದ. ಆದರೆ ಈಗ ಇಸ್ರೇಲ್‌ ಈತನ ಕತೆ ಮುಗಿಸಿದೆ.

VISTARANEWS.COM


on

Ismail Haniyeh
Koo

ಟೆಹ್ರಾನ್: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ವಾಯುದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಕಳೆದ ವರ್ಷದ ಅಕ್ಟೋಬರ್‌ 7ರಂದು ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಬೀಡುಬಿಟ್ಟಿರುವ ಹಮಾಸ್‌ ಉಗ್ರರು (Israel Hamas War) ದಾಳಿ ನಡೆಸಿದಕ್ಕೆ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ಈಗ ಇಸ್ಮಾಯಿಲ್‌ ಹನಿಯೆಹ್‌ನನ್ನು ಹತ್ಯೆ ಮಾಡಿಸಿದೆ ಎಂದೇ ಹೇಳಲಾಗುತ್ತಿದೆ. ಇನ್ನು ಟೆಹ್ರಾನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಸ್ಮಾಯಿಲ್‌ ಹನಿಯೆಹ್‌ ಸಾವಿಗೀಡಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಎಂದು ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ. ಈ ವಿಡಿಯೊವನ್ನು ಈಗ ಇರಾನ್‌ ಮಾಧ್ಯಮಗಳು ಹಂಚಿಕೊಂಡಿವೆ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

Continue Reading

ವಿದೇಶ

Israel v/s Hamas: ಇಸ್ರೇಲ್‌‌ ಮುಂದಿನ ಟಾರ್ಗೆಟ್ ಯಾರು? ಇಲ್ಲಿದೆ ಹಮಾಸ್ ‘ಉಗ್ರ’ ನಾಯಕರ ಹಿಟ್‌ ಲಿಸ್ಟ್!

ಇರಾನ್‌ನ ನೂತನ ಅಧ್ಯಕ್ಷ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಹತ್ಯೆಯಾದ ಹಮಾಸ್ ಉಗ್ರ ನಾಯಕ ಇಸ್ಮಾಯಿಲ್‌ ಹನಿಯೆಹ್‌ ಬಳಿಕ ಇಸ್ರೇಲ್ (Israel v/s Hamas) ಇನ್ನು ಯಾರ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಈಗಾಗಲೇ ಇಸ್ರೇಲ್
ಹಿಟ್‌ ಲಿಸ್ಟ್‌ನಲ್ಲಿರುವ ಹಮಾಸ್ ಉಗ್ರ ನಾಯಕರು ಯಾರು ಗೊತ್ತೇ? ಇಲ್ಲಿದೆ ವಿವರ.

VISTARANEWS.COM


on

By

Israel v/s Hamas
Koo

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ (Ismail Haniyeh) ಹತ್ಯೆ ಸುದ್ದಿ ಪ್ರಪಂಚದಾದ್ಯಂತ ಸಂಚಲನ ಉಂಟು ಮಾಡಿರುವ ಬೆನ್ನಲ್ಲೇ ಇಸ್ರೇಲ್ (Israel v/s Hamas) ಮುಂದಿನ ಟಾರ್ಗೆಟ್ (israel next target) ಯಾರನ್ನು ಮಾಡಿರಬಹುದು ಎನ್ನುವ ಕುರಿತು ಚರ್ಚೆ ಶುರುವಾಗಿದೆ. ಇರಾನಿನ ಹೊಸ ಅಧ್ಯಕ್ಷ (Iran new president) ಮಸೌದ್ ಪೆಜೆಶ್ಕಿಯಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಅನಂತರ ಇರಾನ್ ರಾಜಧಾನಿಯಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹನಿಯೆಹ್ ಮತ್ತು ಅವರ ಅಂಗರಕ್ಷಕನನ್ನು ಕೊಲ್ಲಲಾಗಿದೆ.

ಇಸ್ರೇಲ್ ನಿಯಂತ್ರಿತ ಗೋಲನ್ ಹೈಟ್ಸ್‌ನಲ್ಲಿ 12 ಯುವಕರು ಕೊಲೆಯಾಗಿ ವಾರ ಕಳೆಯುವಷ್ಟರಲ್ಲಿ ನಡೆದ ರಾಕೆಟ್ ದಾಳಿ ನಡೆಸಿ ಹೆಜ್ಬೊಲ್ಲಾ ಕಮಾಂಡರ್ ಫೌದ್ ಶುಕುರ್‌ನನ್ನು ಕೊಂದಿರುವುದಾಗಿ ಇಸ್ರೇಲ್ ಹೇಳುತ್ತಿದ್ದಂತೆಯೇ, ಹನಿಯೆಹ್ ಮೇಲೂ ದಾಳಿ ನಡೆದಿದೆ. ಇಸ್ರೇಲ್ ಈಗ ಹಮಾಸ್ ಉಗ್ರರ ಹೆಡೆಮುರಿ ಕಟ್ಟಲು ಸಂಪೂರ್ಣ ಸಜ್ಜಾದಂತೆ ಕಾಣುತ್ತಿದೆ. ಹಾಗಾದರೆ ಮುಂದೆ ಇಸ್ರೇಲ್ ಯಾರನ್ನು ಟಾರ್ಗೆಟ್ ಮಾಡಿರಬಹುದು ಎನ್ನುವ ಮಾಹಿತಿ ಇಲ್ಲಿದೆ.

Israel v/s Hamas
Israel v/s Hamas


ಯಾಹ್ಯಾ ಸಿನ್ವಾರ್

ಗಾಜಾದಲ್ಲಿ ಹಮಾಸ್ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿರುವ 62 ವರ್ಷದ ಸಿನ್ವಾರ್ ಇಸ್ರೇಲ್ ಮೇಲೆ ಅಕ್ಟೋಬರ್ 7ರಂದು ನಡೆದ ದಾಳಿಯ ಪ್ರಮುಖ ರೂವಾರಿ. ಸಿನ್ವಾರ್ 1962ರ ಅಕ್ಟೋಬರ್ 29ರಂದು ಖಾನ್ ಯೂನಿಸ್ ನಿರಾಶ್ರಿತರ ಶಿಬಿರದಲ್ಲಿ ಜನಿಸಿದ್ದ. 1980ರ ದಶಕದಲ್ಲಿ ಸಿನ್ವಾರ್ ಗಾಜಾದ ಇಸ್ಲಾಮಿಕ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದ. ಬಳಿಕ ಈತ ಹಮಾಸ್‌ನ ಭದ್ರತಾ ಸೇವೆಯಾದ ಮಜ್ದ್ ಅನ್ನು ಸ್ಥಾಪಿಸಿದ.

1988ರಲ್ಲಿ ಪ್ಯಾಲೆಸ್ಟೀನಿಯಾದವರ ಹತ್ಯೆಯ ಅಪರಾಧಿ ಎಂದು ಪರಿಗಣಿಸಿ ಸಿನ್ವಾರ್‌ಗೆ ನಾಲ್ಕು ಜೀವಾವಧಿ ಶಿಕ್ಷೆಯನ್ನು ವಿಧಿಸಲಾಯಿತು. 2011ರಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಹಮಾಸ್‌ನ ಭದ್ರತಾ ಪಡೆಯ ಉನ್ನತ ಶ್ರೇಣಿಯನ್ನು ಸೇರಿಕೊಂಡ. 2015ರಲ್ಲಿ ಅಮೆರಿಕ ಈತನನ್ನು ‘ಅಂತಾರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸಿತು.

Israel v/s Hamas
Israel v/s Hamas


ಮೊಹಮ್ಮದ್ ಡೀಫ್

ಹಮಾಸ್‌ನ ಮಿಲಿಟರಿ ವಿಭಾಗ ಇಜ್ ಅಲ್-ದಿನ್ ಅಲ್-ಕಸ್ಸಾಮ್ ಬ್ರಿಗೇಡ್‌ಗಳ ಮುಖ್ಯಸ್ಥನಾಗಿರುವ ಡೀಫ್ ಮೇಲೆ ಇಸ್ರೇಲ್ ನಲ್ಲಿ ಅನೇಕ ಬಾರಿ ದಾಳಿ ನಡೆಸಲಾಗಿದ್ದರೂ ಬದುಕಿ ಉಳಿದಿದ್ದಾನೆ. ಪ್ಯಾಲೆಸ್ಟೀನಿಯರ ವಿರುದ್ಧದ ಅಪರಾಧಗಳನ್ನು ನಿಲ್ಲಿಸಲು, ನಿಂದನೆ ಮತ್ತು ಚಿತ್ರಹಿಂಸೆಗೊಳಗಾದ ಕೈದಿಗಳನ್ನು ಬಿಡುಗಡೆ ಮಾಡಲು, ಪ್ಯಾಲೇಸ್ಟಿನಿಯನ್ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಲು ಹಮಾಸ್ ಇಸ್ರೇಲ್‌ಗೆ ಪದೇಪದೇ ಎಚ್ಚರಿಸುತ್ತಿದೆ ಎಂದು ಡೀಫ್ ಇತ್ತೀಚೆಗೆ ತನ್ನ ಧ್ವನಿ ಮುದ್ರಣವನ್ನು ಬಿಡುಗಡೆ ಮಾಡಿದ್ದ.

ಹಲವು ದಾಳಿಯಲ್ಲಿ ಡೀಫ್ ಮತ್ತು ಸಿನ್ವಾರ್ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಯಾಹ್ಯಾ ಸಿನ್ವಾರ್‌ನಂತೆ ಡೀಫ್ ಖಾನ್ ಯೂನಿಸ್ ನಿರಾಶ್ರಿತರ ಶಿಬಿರದಲ್ಲಿ ಜನಿಸಿದ್ದ. ಈತನ ಮೊದಲ ಹೆಸರು ಮೊಹಮ್ಮದ್ ಮಸ್ರಿ. ಹಮಾಸ್‌ಗೆ ಸೇರಿದ ಅನಂತರ ಮೊಹಮ್ಮದ್ ಡೀಫ್ ಎಂಬ ಹೆಸರನ್ನು ಪಡೆದ. ಡೀಫ್‌ನನ್ನು 1989ರಲ್ಲಿ ಇಸ್ರೇಲ್ ಬಂಧಿಸಿತ್ತು. ಸುಮಾರು 16 ತಿಂಗಳ ಕಾಲ ಜೈಲಿನಲ್ಲಿದ್ದು ಹೊರ ಬಂದ ಬಳಿಕ ಸುರಂಗಗಳ ಜಾಲವನ್ನು ಮತ್ತು ಅದರ ಬಾಂಬ್ ತಯಾರಿಕೆಯ ಪರಿಣತಿ ಪಡೆದ. ದಶಕಗಳಿಂದ ಇಸ್ರೇಲ್‌ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ. 2000ರಲ್ಲಿ ಇಸ್ರೇಲ್‌ನಲ್ಲಿ ಬಂಧನಕ್ಕೆ ಒಳಗಾದರೂ ಬಳಿಕ ತಪ್ಪಿಸಿಕೊಂಡಿದ್ದ.

ಇಸ್ರೇಲ್‌ ನಡೆಸಿದ ಒಂದು ದಾಳಿಯಲ್ಲಿ ಆತ ಕಣ್ಣು ಕಳೆದುಕೊಂಡಿದ್ದು, ಒಂದು ಕಾಲಿಗೂ ಗಂಭೀರ ಗಾಯವಾಗಿತ್ತು ಎಂದು ಹಮಾಸ್ ಮೂಲಗಳು ತಿಳಿಸಿದ್ದವು. 2014ರ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಆತನ ಪತ್ನಿ, 7 ತಿಂಗಳ ಮಗ ಮತ್ತು 3 ವರ್ಷದ ಮಗಳು ಸಾವನ್ನಪ್ಪಿದ್ದರು.

Israel v/s Hamas
Israel v/s Hamas


ಖಲೀದ್ ಮಶಾಲ್

ಹಮಾಸ್‌ನ ಸಂಸ್ಥಾಪಕರಲ್ಲಿ ಒಬ್ಬನಾಗಿರುವ ಮಶಾಲ್, 1956ರಲ್ಲಿ ವೆಸ್ಟ್ ಬ್ಯಾಂಕ್‌ನ ಸಿಲ್ವಾಡ್‌ನಲ್ಲಿ ಜನಿಸಿದ. ಬಳಿಕ ಆತನ ಕುಟುಂಬ ಕುವೈತ್‌ಗೆ ಸ್ಥಳಾಂತರಗೊಂಡಿತು. ಮಶಾಲ್ ಪದವಿ ಪಡೆದ ಬಳಿಕ ಕುವೈತ್‌ನಲ್ಲಿಯೇ ಇದ್ದ. ಅಲ್ಲಿ ಆತ ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ ಸಾಮಾಜಿಕ ಸೇವೆಗಳನ್ನು ಆಯೋಜಿಸಲು ಹಣವನ್ನು ಸಂಗ್ರಹಿಸಿದ.

1996ರಲ್ಲಿ ಹಮಾಸ್ ರಾಜಕೀಯ ಬ್ಯೂರೋ ಮುಖ್ಯಸ್ಥನಾಗಿ ಆಯ್ಕೆಯಾದ ಮಶಾಲ್, ಹಮಾಸ್‌ನ ಆತ್ಮಹತ್ಯಾ ಬಾಂಬ್ ದಾಳಿಗೆ ಪ್ರತೀಕಾರವಾಗಿ ಪ್ರಧಾನಿ ಬೆಂಜಮಿನ್ ನೆತನ್ಯಾಹು 1997ರಲ್ಲಿ ಮಶಾಲ್‌ನ ಹತ್ಯೆ ಮಾಡಲು ಅನುಮೋದನೆ ನೀಡಿದರು. ಮಶಾಲ್ 2017ರವರೆಗೂ ಹಮಾಸ್‌ನ ಮುಖ್ಯಸ್ಥನಾಗಿದ್ದ. ಹಮಾಸ್‌ನ ಪ್ರಮುಖ ಒತ್ತೆಯಾಳು ಸಂಧಾನಕಾರರಲ್ಲಿ ಒಬ್ಬನಾಗಿರುವ ಮಶಾಲ್ ಪ್ರಸ್ತುತ ಕತಾರ್‌ನಲ್ಲಿ ವಾಸಿಸುತ್ತಿದ್ದಾನೆ.

Israel v/s Hamas
Israel v/s Hamas


ಮಹಮೂದ್ ಜಹರ್

ಹಮಾಸ್‌ನ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬನಾಗಿದ್ದಾನೆ. 1945ರಲ್ಲಿ ಗಾಜಾ ನಗರದ ಬಳಿ ಜನಿಸಿದ ಜಹರ್ ತಂದೆ ಪ್ಯಾಲೇಸ್ಟಿನಿಯನ್ ಮತ್ತು ತಾಯಿ ಈಜಿಪ್ಟಿನವನು. ಗಾಜಾದಲ್ಲಿ ವೈದ್ಯನಾಗಿದ್ದ ಆತನ ರಾಜಕೀಯ ದೃಷ್ಟಿಕೋನದಿಂದ ಕೆಲಸದಿಂದ ವಜಾಗೊಳಿಸಲಾಗಿತ್ತು. 1988ರಲ್ಲಿ ಹಮಾಸ್ ಸ್ಥಾಪನೆಯ ಅನಂತರ ಜಹರ್‌ನನ್ನು ಇಸ್ರೇಲ್ ಜೈಲಿನಲ್ಲಿರಿಸಿತ್ತು. 1992ರಲ್ಲಿ ಲೆಬನಾನ್‌ಗೆ ಗಡೀಪಾರು ಮಾಡಲಾಯಿತು. ಗಾಜಾಕ್ಕೆ ಹಿಂದಿರುಗಿದ ಬಳಿಕ ಈತನ ಮೇಲೆ ಹತ್ಯೆ ಯತ್ನವೂ ನಡೆದಿದ್ದು, ಒಂದು ಸಂದರ್ಭದಲ್ಲಿ ಆತನ ಹಿರಿಯ ಮಗ ಮೃತಪಟ್ಟಿದ್ದಾನೆ.

ಇದನ್ನೂ ಓದಿ: Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

2008ರಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಮಿಲಿಟರಿ ವಿಭಾಗದ ಸದಸ್ಯರಾದ ಈತನ ಇನ್ನೊಬ್ಬ ಮಗನೂ ಸಾವನ್ನಪ್ಪಿದ್ದಾನೆ. 2006 ರಲ್ಲಿ ಜಹರ್ ಪ್ಯಾಲೇಸ್ಟಿನಿಯನ್ ಲೆಜಿಸ್ಲೇಟಿವ್ ಕೌನ್ಸಿಲ್ (PLC) ಗೆ ಆಯ್ಕೆಯಾಗಿದ್ದು, ಬಳಿಕ ಆತನನ್ನು ವಿದೇಶಾಂಗ ಸಚಿವನನ್ನಾಗಿ ನೇಮಿಸಲಾಯಿತು.

ಹಮಾಸ್‌ನ ಇವಿಷ್ಟು ಉಗ್ರ ನಾಯಕರು ಇಸ್ರೇಲ್‌ನ ಹಿಟ್‌ ಲಿಸ್ಟ್‌ನಲ್ಲಿದ್ದಾರೆ. ಇವರ ಮೇಲೆ ಯಾವಾಗ ಬೇಕಾದರೂ ದಾಳಿ ನಡೆಯಬಹುದು.

Continue Reading

ವಿದೇಶ

Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Ismail Haniyeh: ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ನನ್ನು ಕೊಲೆ ಮಾಡಿದ್ದಾರೆ. ಇಡೀ ಕಾರ್ಯಾಚರಣೆಯ ಮಾಹಿತಿ ಇಲ್ಲಿದೆ.

VISTARANEWS.COM


on

Ismail Haniyeh
Koo

ಜೆರುಸಲೇಂ: ಅಲ್‌ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥ, ವಿಶ್ವ ವ್ಯಾಪಾರ ಕೇಂದ್ರದ ಮೇಲೆ ನಡೆದ ದಾಳಿಯ ರೂವಾರಿ ಒಸಾಮಾ ಬಿನ್‌ಲಾಡೆನ್‌ನನ್ನು 2011ರಲ್ಲಿ ಅಮೆರಿಕ ಹತ್ಯೆ ಮಾಡಿದಂತೆಯೇ ಹಮಾಸ್‌ ಉಗ್ರ ಸಂಘಟನೆಯ (Hamas Leader) ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ಇಸ್ರೇಲ್‌ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಅಮೆರಿಕದ ಸೈನಿಕರು ನುಗ್ಗಿ ಒಸಾಮಾ ಬಿನ್‌ಲಾಡೆನ್‌ನನ್ನು ಹತ್ಯೆಗೈದರೆ, ವಾಯು ದಾಳಿ ಮೂಲಕ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ಇಸ್ರೇಲ್‌ (Israel Air Strike) ಸೇನೆಯು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಹೌದು, ದೇಶಕ್ಕೆ ಅಪಾಯಕಾರಿಯಾಗುವ ವೈರಿಗಳನ್ನು ಯಾವುದೇ ದೇಶದಲ್ಲಿದ್ದರೂ ಹುಡುಕಿ ಹುಡುಕಿ ಕೊಲ್ಲುವ ಇಸ್ರೇಲ್‌ ಸೇನೆಯೇ ಇಸ್ಮಾಯಿಲ್‌ ಹನಿಯೆಹ್‌ನನ್ನು ಕೊಂದಿದೆ. ಇರಾನ್‌ನ ಟೆಹ್ರಾನ್‌ನಲ್ಲಿರುವ ಇಸ್ಮಾಯಿಲ್‌ ಹನಿಯೆಹ್‌ ನಿವಾಸದ ಮೇಲೆಯೇ ವಾಯುದಾಳಿ ನಡೆಸಿದ ಇಸ್ರೇಲ್‌ ಸೈನಿಕರು, ಕ್ಷಿಪಣಿ ದಾಳಿ ಮೂಲಕ ಹಮಾಸ್‌ ಉಗ್ರ ಸಂಘಟನೆಯ ಮುಖಂಡನನ್ನು ಹತ್ಯೆ ಮಾಡಿದೆ. 2011ರಲ್ಲಿ ಅಮೆರಿಕವೂ ಒಸಾಮಾ ಬಿನ್‌ ಲಾಡೆನ್‌ ಪಾಕಿಸ್ತಾನದಲ್ಲಿ ಅಡಗಿರುವ ಕುರಿತು ಮಾಹಿತಿ ಸಂಗ್ರಹಿಸಿ, ಆತನಿದ್ದ ಜಾಗದ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು?

ಮಧ್ಯಪ್ರಾಚ್ಯ ರಾಜಕೀಯ ವಲಯದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಇಸ್ಮಾಯಿಲ್ ಹನಿಯೆಹ್ ಗಾಜಾದ ಶತಿ ನಿರಾಶ್ರಿತರ ಶಿಬಿರದಲ್ಲಿ 1963ರಲ್ಲಿ ಜನಿಸಿದ್ದ. ವಿಶ್ವಸಂಸ್ಥೆಯ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಈತ 1987ರಲ್ಲಿ ಅರೇಬಿಕ್ ಸಾಹಿತ್ಯದಲ್ಲಿ ಗಾಜಾದ ಇಸ್ಲಾಮಿಕ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದಿದ್ದ. ವಿಶ್ವವಿದ್ಯಾನಿಲಯದಲ್ಲಿದ್ದಾಗ ಹಮಾಸ್‌ ಉಗ್ರಗಾಮಿ ಸಂಘಟನೆ ಜತೆ ಸೇರಿಕೊಂಡಿದ್ದ.

ಮೊದಲ ಬಾರಿಗೆ ಇಸ್ಮಾಯಿಲ್ ಹನಿಯೆಹ್ ಇಂತಿಫಾಡಾದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ. ಇದಕ್ಕಾಗಿ ಇಸ್ರೇಲಿ ಮಿಲಿಟರಿ ನ್ಯಾಯಾಲಯದಿಂದ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ಆಕ್ರಮಿತ ಪ್ಯಾಲೇಸ್ಟಿನಿಯನ್ ಪ್ರಾಂತ್ಯಗಳ ಇಸ್ರೇಲ್ ಮಿಲಿಟರಿ ಅಧಿಕಾರಿಗಳು ಹನಿಯೆಹ್‌ನನ್ನು ಹಿರಿಯ ಹಮಾಸ್ ನಾಯಕರಾದ ಅಬ್ದೆಲ್-ಅಜೀಜ್ ಅಲ್-ರಾಂಟಿಸ್ಸಿ, ಮಹಮೂದ್ ಜಹರ್, ಅಜೀಜ್ ದುವೈಕ್ ಮತ್ತು ಇತರ 400 ಕಾರ್ಯಕರ್ತರೊಂದಿಗೆ ಲೆಬನಾನ್‌ಗೆ ಗಡಿಪಾರು ಮಾಡಿದರು.

1997ರಲ್ಲಿ ಇಸ್ರೇಲ್ ಹಮಾಸ್ ಸಂಸ್ಥಾಪಕ ಅಹ್ಮದ್ ಯಾಸಿನ್ ಅವರನ್ನು ಬಿಡುಗಡೆ ಮಾಡಿದ ಅನಂತರ ಈತನನ್ನು ಹಮಾಸ್ ಕಚೇರಿಯ ಮುಖ್ಯಸ್ಥನನ್ನಾಗಿ ನೇಮಿಸಲಾಯಿತು. 2005ರ ಡಿಸೆಂಬರ್‌ನಲ್ಲಿ ಹನಿಯೆಹ್ ಹಮಾಸ್ ಮುಖ್ಯಸ್ಥನಾಗಿ ಆಯ್ಕೆಯಾದ. 2006ರ ಶಾಸಕಾಂಗ ಚುನಾವಣೆಯಲ್ಲಿ ಹಮಾಸ್‌ನ ಗೆಲುವಿನ ಅನಂತರ ಹನಿಯೆಹ್ ಪ್ಯಾಲೇಸ್ಟಿನಿಯನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾದ.

ಫತಾಹ್- ಹಮಾಸ್ ಘರ್ಷಣೆಯ ನಡುವೆಯೇ 2006ರಲ್ಲಿ ಪ್ರಧಾನಿಯಾಗಿದ್ದ ಹನಿಯೆಹ್ ವಿದೇಶದಲ್ಲಿ ತನ್ನ ಮೊದಲ ಅಧಿಕೃತ ಪ್ರವಾಸದಿಂದ ಹಿಂದಿರುಗುತ್ತಿದ್ದಾಗ ರಫಾ ಬಾರ್ಡರ್ ಕ್ರಾಸಿಂಗ್‌ನಲ್ಲಿ ಈಜಿಪ್ಟ್‌ನಿಂದ ಗಾಜಾಕ್ಕೆ ಪ್ರವೇಶವನ್ನು ನಿರಾಕರಿಸಲ್ಪಟ್ಟ. ಅನಂತರ ಈತ ಗಡಿ ದಾಟಲು ಪ್ರಯತ್ನಿಸಿದಾಗ, ಗುಂಡಿನ ಚಕಮಕಿ ನಡೆದು ಒಬ್ಬ ಅಂಗರಕ್ಷಕ ಮೃತಪಟ್ಟು, ಹನಿಯೆಹ್ ಹಿರಿಯ ಮಗ ಗಾಯಗೊಂಡಿದ್ದ.

2007ರಲ್ಲಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅಧಿಕಾರಕ್ಕೆ ಬಂದಾಗ ಹನಿಯೆಹ್‌ನನ್ನು ಹುದ್ದೆಯಿಂದ ವಜಾಗೊಳಿಸಿದರು. ಇದು ಫತಾಹ್ ಮತ್ತು ಹಮಾಸ್ ಬಣಗಳ ನಡುವಿನ ರಾಜಕೀಯ ಸಂಘರ್ಷವನ್ನು ಹೆಚ್ಚಿಸಿತ್ತು. 2016ರ ಚುನಾವಣೆಯಲ್ಲಿ ಈತ ಹಮಾಸ್‌ನ ಮುಖ್ಯ ನಾಯಕ ಖಲೀದ್ ಮಶಾಲ್‌ನ ಉತ್ತರಾಧಿಕಾರಿಯಾಗಿದ್ದ. ಈತ ಇಸ್ರೇಲ್‌ ಭಾರೀ ತಲೆ ನೋವಾಗಿದ್ದ. ಹಾಗಾಗಿ ಇಸ್ರೇಲ್‌ ತಂತ್ರಜ್ಞಾನಗಳನ್ನೆಲ್ಲ ಬಳಸಿ ಪ್ಲ್ಯಾನ್‌ ಮಾಡಿ ಈತನ ಕತೆ ಮುಗಿಸಿದೆ.

ಇದನ್ನೂ ಓದಿ: Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

Continue Reading
Advertisement
Kabini Dam
ಕರ್ನಾಟಕ4 hours ago

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Shiradi Ghat
ಕರ್ನಾಟಕ4 hours ago

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Road Rage
ದೇಶ5 hours ago

Road Rage: ಸ್ಕೂಟಿಗೆ ಬೈಕ್‌ ಟಚ್‌ ಆಗಿದ್ದಕ್ಕೆ ಜಗಳ; ಗುಂಡು ಹಾರಿಸಿ 2 ಮಕ್ಕಳ ತಾಯಿಯನ್ನು ಕೊಂದ ವ್ಯಕ್ತಿ

Rashid khan 600 wickets
ಕ್ರೀಡೆ5 hours ago

Rashid khan 600 wickets: ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ ರಶೀದ್​ ಖಾನ್​; ಮೊದಲ ಸ್ಪಿನ್ನರ್

Viral video
ವೈರಲ್ ನ್ಯೂಸ್5 hours ago

Viral Video: ಕೇಶ ವಿನ್ಯಾಸಕ್ಕೆ ಸಲಾಕೆ ಬಳಸಿದ ಕ್ಷೌರಿಕ!

Virat Kohli
ಕ್ರೀಡೆ5 hours ago

Virat Kohli: ಗಂಭೀರ್​ ಮಾರ್ಗದರ್ಶನದಂತೆ ಅತ್ಯಂತ ಜೋಶ್​ನಿಂದ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಕೊಹ್ಲಿ; ಫೋಟೊ ವೈರಲ್​

Infosys
ಕರ್ನಾಟಕ6 hours ago

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Paris Olympics
ಕ್ರೀಡೆ6 hours ago

Paris Olympics: ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಮುಗ್ಗರಿಸಿದ ಮಣಿಕಾ ಬಾತ್ರಾ

Indians spend 15 billion hours waiting for customer service time in 2023 ServiceNow information
ದೇಶ7 hours ago

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Former MLA Rupali Nayka appeals to DC to resolve various issues under Karwara Ankola Assembly Constituency
ಉತ್ತರ ಕನ್ನಡ7 hours ago

Uttara Kannada News: ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕರಿಂದ ಡಿಸಿಗೆ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌