Rishi Sunak | ಜೂನಿಯರ್ ಹುದ್ದೆಯಿಂದ ಪ್ರಧಾನಿ ಗದ್ದುಗೆಯವರೆಗೆ ಸುನಕ್ ಸಾಧನೆ - Vistara News

ಪ್ರಮುಖ ಸುದ್ದಿ

Rishi Sunak | ಜೂನಿಯರ್ ಹುದ್ದೆಯಿಂದ ಪ್ರಧಾನಿ ಗದ್ದುಗೆಯವರೆಗೆ ಸುನಕ್ ಸಾಧನೆ

ಬ್ರಿಟನ್‌ನ ನೂತನ ಪ್ರಧಾನಿ ರಿಷಿ ಸುನಕ್ (Rishi Sunak) ಅವರು ಜೂನಿಯರ್ ಹುದ್ದೆಯಿಂದ ಪ್ರಧಾನಿ ಗದ್ದುಗೆಯವರೆಗೆ ನಡೆದು ಬಂದ ರೋಚಕ ಹಾದಿ.

VISTARANEWS.COM


on

Rishi Sunak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಈಗ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ಇನ್ಫಿ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ (Rishi Sunak) ಅವರು ಹೊಸ ದಾಖಲೆ ಬರೆದಿದ್ದಾರೆ. ಬ್ರಿಟನ್‌ನ ಅತ್ಯುನ್ನತ ಹುದ್ದೆಗೇರಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ. ರಿಷಿ ಅವರ ರಾಜಕೀಯ ಜೀವನ ಹಲವು ಮಜಲುಗಳಿಂದ ಕೂಡಿದೆ. ಎಲ್ಲ ರಾಜಕಾರಣಿಗಳಂತೆ ರಿಷಿ ರಾಜಕೀಯ ಜೀವನದಲ್ಲಿ ಏಳು ಬೀಳುಗಳಿವೆ.

2014ರಲ್ಲಿ ಅವರು ಬ್ರಿಟನ್ ರಾಜಕಾರಣಕ್ಕೆ ಎಂಟ್ರಿ ಕೊಟ್ಟರು. 2015ರಲ್ಲಿ ರಿಚ್ಮಂಡ್(ಯಾರ್ಕ್ಸ್) ಕ್ಷೇತ್ರದಿಂದ ಕನ್ಸರ್ವೇಟಿವ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ವೆಂಡಿ ಮಾರ್ಟಾನ್ ಅವರ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದರು. ಈ ಹಿಂದೆ ಕ್ಷೇತ್ರವನ್ನು ವಿಲಿಯಂ ಹಾಗ್ ಪ್ರತಿನಿಧಿಸಿದ್ದರು. ಹಾಗ್ ಅವರು ಕನ್ಸರ್ವೇಟಿವ್ ಪಕ್ಷದ ನಾಯಕರೂ ಆಗಿದ್ದರು. ಈ ಕ್ಷೇತ್ರವನ್ನು 100 ವರ್ಷಗಳಿಂದಲೂ ಕನ್ಸರ್ವೇಟಿವ್ ಪಕ್ಷದವರೇ ಗೆಲ್ಲುತ್ತಾ ಬಂದಿದ್ದಾರೆ. ಇದು ಕನ್ಸರ್ವೇಟಿವ್ ಪಕ್ಷದ ಬಲಾಢ್ಯ ಕೋಟೆಯಾಗಿದೆ. ಈ ಕ್ಷೇತ್ರದಿಂದ ಆಯ್ಕೆಯಾದ ಸುನಕ್ ಶೇ.36. 2ರಷ್ಟು ಮತಗಳನ್ನು ಪಡೆದಿದ್ದರು.

ಸಂಸದರಾಗಿ ಆಯ್ಕೆಯಾದ ವರ್ಷದಲ್ಲೇ ಅವರು ಬಲಪಂಥೀಯ ಥಿಂಕ್ ಟ್ಯಾಂಕ್‌ ಪಾಲಿಸಿ ಎಕ್ಸ್‌ಚೇಂಜ್‌ನ ಅಂಗ ಸಂಸ್ಥೆಯಾಗಿರುವ ಬ್ಲ್ಯಾಕ್ ಆ್ಯಂಡ್ ಮೈನಾರಿಟಿ ಎಥಿನಿಕ್(ಬಿಎಂಡಬ್ಲ್ಯೂ) ಸಂಶೋಧನಾ ಸಂಸ್ಥೆಯ ಮುಖ್ಯಸ್ಥರೂ ಆಗಿದ್ದರು. 2015-2017ರಲ್ಲಿ ಅವರು ಸಂಸದರಾಗಿ ಅವರು ಪರಿಸರ, ಆಹಾರ ಮತ್ತು ಗ್ರಾಮೀಣ ವ್ಯವಹಾರ ಆಯ್ಕೆ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.

ಬ್ರೆಕ್ಸಿಟ್‌ಗೆ ಸಪೋರ್ಟ್
ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಪ್ರತ್ಯೇಕಗೊಳ್ಳುವ ಚಳವಳಿಯನ್ನು ಸುನಕ್ ಬೆಂಬಲಿಸಿದ್ದರು. ಅವರು ಬ್ರೆಕ್ಸಿಟ್‌ನ ಪ್ರಬಲ ಪ್ರತಿಪಾದಕರೂ ಹೌದು. ಬ್ರೆಕ್ಸಿಟ್ ನಂತರ ಬಂದರುಗಳನ್ನು ಮುಕ್ತಗೊಳಿಸುವ ಸೆಂಟರ್ ಫಾರ್ ಪಾಲಿಸಿಗಾಗಿ ಅವರೊಂದು ವರದಿ ಬರೆದಿದ್ದರು. ಆ ಬಳಿಕ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ರಿಟೇಲ್ ಬಾಂಡ್ ಮಾರ್ಕೆಟ್ ಸೃಷ್ಟಿಸುವ ಬಗ್ಗೆಯೂ ವರದಿಯನ್ನು ಪ್ರಕಟಿಸಿದ್ದರು.

2017ರಲ್ಲಿ ಮರು ಆಯ್ಕೆ
2017ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಿಷಿ ಸುನಕ್ ಅವರು ಮರು ಆಯ್ಕೆಯಾದರು. ಈ ಬಾರಿ ಅವರು ಮತ ಗಳಿಕೆ ಪ್ರಮಾಣ ಶೇ.40.5ಕ್ಕೆ ಹೆಚ್ಚಳವಾಯಿತು. 2018ರಿಂದ 2019ರ ಜುಲೈವರೆಗೆ ಅವರು ಸ್ಥಳೀಯ ಸರ್ಕಾರ ಆಡಳಿತ ಇಲಾಖೆಯ ಸಹಾಯಕ ಸಚಿವರಾಗಿ ಕೆಲಸ ಮಾಡಿದರು. ಅಂದಿನ ಪ್ರಧಾನಿ ಮದರ್ ಥೆರೆಸಾ ಅವರ ಬ್ರೆಕ್ಸಿಟ್ ಪರವಾಗಿ ಮಂಡಿಸಿದ ಎಲ್ಲ ಒಪ್ಪಂದಗಳ ಪರವಾಗಿ ಇವರು ಮತ ಚಲಾಯಿಸಿದರು.

2019ರಲ್ಲಿ ನಡೆದ ಪಕ್ಷದ ನಾಯಕತ್ವ ಚುನಾವಣೆಯಲ್ಲಿ ಸುನಕ್ ಅವರು ಬೋರಿಸ್ ಜಾನ್ಸನ್ ಅವರನ್ನು ಬೆಂಬಲಿಸಿದರು. ಅಲ್ಲದೇ ಅವರ ಪರವಾಗಿ ಪ್ರತಿಷ್ಠಿತ ಪತ್ರಿಕೆಯಲ್ಲಿ ಲೇಖನ ಕೂಡ ಬರೆದರು. ಬೋರಿಸ್ ಅವರು ಪ್ರಧಾನಿಯಾಗುತ್ತಿದ್ದಂತೆ ರಿಷಿ ಸುನಕ್ ಅವರನ್ನು ವಿತ್ತ ಸಚಿವಾಲಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದರು. ಆಗ ವಿತ್ತ ಸಚಿವಾಲಯ ಸಚಿವರಾಗಿ ಪಾಕಿಸ್ತಾನ ಮೂಲದ ಸಾಜಿದ್ ಜಾವಿದ್ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಮುಂದಿನ ವರ್ಷವೇ ಅವರು ಪ್ರೈವಿ ಕೌನ್ಸಿಲ್ ಸದಸ್ಯರಾಗಿಯೂ ಆಯ್ಕೆಯಾದರು.

2019ರಲ್ಲಿ ಮತ್ತೆ ಆಯ್ಕೆ
2019ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೆ ಸುನಕ್ ಅವರು ಶೇ.47.2 ಮತಗಳೊಂದಿಗೆ ಆಯ್ಕೆಯಾದರು. ಬಳಿಕ ಬೋರಿಸ್ ಜಾನ್ಸನ್ ಸಂಪುಟದಲ್ಲಿ ವಿತ್ತ ಸಚಿವರಾಗಿ ನೇಮಕವಾದರು. ಬೋರಿಸ್ ಅವರ ನಿಷ್ಠರಾಗಿ ಗುರುತಿಸಿಕೊಂಡಿದ್ದ ರಿಷಿ ಅವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಲು ಬೋರಿಸ್ ಹಿಂದೆ ಮುಂದೆ ನೋಡಲಿಲ್ಲ. ಅಂತೆಯೇ, ಕೋವಿಡ್ ಕಾಲದಲ್ಲಿ ಬ್ರಿಟನ್ ಅನ್ನು ಕಾಪಾಡುವಲ್ಲಿ ರಿಷಿ ಪ್ರಮುಖ ಪಾತ್ರವಹಿಸಿದರು. ಇದರಿಂದ ಅವರಿಗೆ ಜನಪ್ರಿಯತೆಯೂ ದೊರೆಯಿತು.

ವಿತ್ತ ಸಚಿವ ಸ್ಥಾನಕ್ಕೆ ರಾಜೀನಾಮೆ
ಪ್ರಧಾನಿ ಬೋರಿಸ್ ಜಾನ್ಸನ್ ಹಾಗೂ ಕೆಲವು ಸಂಸದರ ವಿರುದ್ಧ ಭ್ರಷ್ಟಾಚಾರ, ಲೈಂಗಿಕರ ಕಿರುಕುಳ ಆರೋಪಗಳ ಕೇಳಿ ಬಂದವು. ಹಗರಣಗಳ ಹಿನ್ನೆಲೆಯಲ್ಲಿ ಬೋರಿಸ್ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕೆಂಬ ಸಾರ್ವಜನಿಕ ಒತ್ತಡವೂ ಹೆಚ್ಚಾಗಿತ್ತು. ಆದರೆ, ಬೋರಿಸ್ ಅವರು ಪದತ್ಯಾಗಕ್ಕೆ ಮುಂದಾಗಲಿಲ್ಲ. ಯಾವಾಗ ಸಾರ್ವಜನಿಕರು ಸರ್ಕಾರದ ವಿರುದ್ಧ ಇದ್ದಾರೆಂಬುದು ಗೊತ್ತಾಯಿತೋ ಆಗ ರಿಷಿ ತಮ್ಮ ವಿತ್ತ ಖಾತೆಗೆ ಹಾಗೂ ಸಾಜಿದ್ ಜಾವಿದ್ ಅವರು ಆರೋಗ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಪುಟದಿಂದ ಹೊರ ಬಿದ್ದರು. ಇವರಿಬ್ಬರನ್ನು ಅನೇಕ ಸಚಿವರು ಅನುಸರಿಸಿದರು. ಇದರಿಂದಾಗಿ ಬೋರಿಸ್ ಅವರು ಅನಿವಾರ್ಯವಾಗಿ ತಮ್ಮ ಹುದ್ದೆಗೆ ರಾಜೀನಾಮೆಯನ್ನು ಘೋಷಿಸಬೇಕಾಯಿತು.

ನಾಯಕತ್ವ ಚುನಾವಣೆಯಲ್ಲಿ ಸೋಲು
ಬೋರಿಸ್ ಜಾನ್ಸನ್ ಅವರ ರಾಜೀನಾಮೆಯಿಂದ ತೆರವಾದ ಬ್ರಿಟನ್ ಪಿಎಂ ಹುದ್ದೆಗಾಗಿ ನಡೆದ ನಾಯಕತ್ವ ಚುನಾವಣೆಯಲ್ಲಿ ಕೊನೆಯ ಹಂತದವರೆಗೆ ರಿಷಿ ಅವರು ಗೆಲುವು ಸಾಧಿಸುತ್ತಾ ಬಂದರು. ಆದರೆ, ಅಂತಿಮ ಹಣಾಹಣಿಯಲ್ಲಿ ಲಿಜ್ ಟ್ರಸ್ ಅವರ ವಿರುದ್ಧ ಸೋಲು ಅನುಭವಿಸಬೇಕಾಯಿತು. ಆಗ ಸ್ವಲ್ಪದರಲ್ಲೇ ಪ್ರಧಾನಿ ಹುದ್ದೆಯಿಂದ ವಂಚಿತರಾಗಬೇಕಾಯಿತು. ಲಿಜ್ ಟ್ರಸ್ ಅವರು ಪ್ರಧಾನಿಯಾದರು.

ಸೋತು ಗೆದ್ದ ಸುನಕ್
ರಿಷಿ ಸುನಕ್ ಅವರನ್ನು ಸೋಲಿಸಿ ಲಿಜ್ ಟ್ರಸ್ ಅವರು ಬ್ರಿಟನ್ ಪ್ರಧಾನಿಯಾದರೂ ಬಹಳ ದಿನಗಳವರೆಗೆ ಆ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ. ಕೇವಲ 45 ದಿನಗಳಲ್ಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ತಾವು ಅಂದುಕೊಂಡಂತೆ ಸರ್ಕಾರವನ್ನು ನಡೆಸಲು ಸಾಧ್ಯವಾಗುತ್ತಿಲ್ಲ, ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣ ನೀಡಿ ಲಿಜ್ ಅವರು ಬ್ರಿಟನ್ ಪ್ರಧಾನಿ ಹುದ್ದೆಯನ್ನು ತೊರೆದರು. ಸಹಜವಾಗಿಯೇ ಪಿಎಂ ಹುದ್ದೆಗೆ ಸುನಕ್ ಅವರ ಹೆಸರು ಕೇಳಿ ಬಂತು. ರೆಡಿ ಫಾರ್ ರಿಷಿ ಎಂಬ ಕ್ಯಾಂಪೇನ್ ಮೂಲಕ ಸುನಕ್ ಅವರು ತಮ್ಮ ಉಮೇದುವಾರಿಕೆಯನ್ನು ಚಾಲ್ತಿಯಲ್ಲಿಟ್ಟರು. ಏತನ್ಮಧ್ಯೆ, ಬೋರಿಸ್ ಜಾನ್ಸನ್ ಕೂಡ ಪ್ರಧಾನಿ ಹುದ್ದೆ ಸ್ಪರ್ಧೆಯಲ್ಲಿ ಕಣಕ್ಕಿಳಿದರು. ಆದರೆ ಮಧ್ಯೆದಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದರು. ಕೊನೆಗೆ ಪೆನ್ನಿ ಮೋರ್ಡಾಂಟ್ ಹಾಗೂ ರಿಷಿ ನಡುವಿನ ಸ್ಪರ್ಧೆಯಲ್ಲಿ ಪೆನ್ನಿ ಅವರು 100 ಸಂಸದರ ಬೆಂಬಲ ಪಡೆಯಲು ವಿಫಲರಾದರು. 196 ಸಂಸದರ ಬೆಂಬಲ ಪಡೆದ ರಿಷಿ ಅವರನ್ನು ಪಿಎಂ ಆಗಿ ಘೋಷಿಸಲಾಯಿತು. ಆ ಮೂಲಕ ಬ್ರಿಟನ್ ಇತಿಹಾಸದಲ್ಲೇ ದಾಖಲೆ ಸೃಷ್ಟಿಯಾಯಿತು.

ಇದನ್ನೂ ಓದಿ | Rishi Sunak | ‘ಹೆಮ್ಮೆಯ ಹಿಂದೂ’ ಬ್ರಿಟನ್ ಪಿಎಂ ರಿಷಿ ಸುನಕ್ ಬಗ್ಗೆ ನಿಮಗೆಷ್ಟು ಗೊತ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

ರಫ್ತು ಮಾತ್ರವಲ್ಲ, ರಕ್ಷಣಾ ಸಾಮಗ್ರಿಗಳಲ್ಲಿ ಆತ್ಮನಿರ್ಭರತೆ ಕೂಡ ನಮ್ಮಿಂದ ಸಾಧ್ಯವಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ತುಮಕೂರಿನ ಗುಬ್ಬಿಯಲ್ಲಿ ಪ್ರಧಾನಿ ಉದ್ಘಾಟಿಸಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕ. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.

VISTARANEWS.COM


on

vistara Editorial ವಿಸ್ತಾರ ಸಂಪಾದಕೀಯ
Koo

ಫಿಲಿಪ್ಪೀನ್ಸ್‌ಗೆ (Philippines) ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ (BrahMos missiles) ಭೂ ಆವೃತ್ತಿಯ ನಾಲ್ಕನೇ ʼಬ್ಯಾಟರಿ’ಯನ್ನು ಭಾರತ ಕಳುಹಿಸುತ್ತಿದೆ. ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿರುತ್ತದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ. ಈ ಕ್ಷಿಪಣಿ ಸೂಪರ್‌ಸಾನಿಕ್ ವೇಗವನ್ನು ಹೊಂದಿರುತ್ತದೆ. ಇದನ್ನು ಭೂಮಿ ಅಥವಾ ಹಡಗು ಆಧಾರಿತ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMDs) ವ್ಯವಸ್ಥೆಗಳಿಂದಲೂ ಎದುರಿಸುವುದು ತುಂಬಾ ಕಷ್ಟ. 2022ರಲ್ಲಿ ಭಾರತ- ಫಿಲಿಪ್ಪೀನ್ಸ್‌ ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಿದು. ಸದ್ಯ ಭಾರತದ ಬ್ರಹ್ಮೋಸ್ ದಾಖಲೆ ಮಾರಾಟ ಕಂಡಿದೆ. ಮುಂದಿನ ದಿನಗಳಲ್ಲಿ ಭಾರತವು ಈ ಸೂಪರ್‌ಸಾನಿಕ್ ಕ್ಷಿಪಣಿಗಳ ಹೆಚ್ಚಿನ ಆರ್ಡರ್‌ಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಬ್ರಹ್ಮೋಸ್‌ನ ಫಿಲಿಪ್ಪೀನ್ಸ್ ಒಪ್ಪಂದದ ಮೂಲಕ, 2023-2024ರಲ್ಲಿ ಭಾರತದ ರಕ್ಷಣಾ ರಫ್ತು ₹21083 ಕೋಟಿಗಳನ್ನು ಮುಟ್ಟಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.32.5ರಷ್ಟು ರಫ್ತು ಬೃಹತ್ ಬೆಳವಣಿಗೆಯಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಕಾರ, 2026ರ ವೇಳೆಗೆ ರಕ್ಷಣಾ ರಫ್ತನ್ನು 40 ಸಾವಿರ ಕೋಟಿ ರೂ. ದಾಟಿಸುವ ಗುರಿ ಹೊಂದಲಾಗಿದೆ. ಅನೇಕ ಕಾರಣಗಳಿಂದಾಗಿ ಇದೊಂದು ಮೈಲುಗಲ್ಲು. ಬಾಹ್ಯಾಕಾಶ ಸಂಶೋಧನೆ ಹಾಗೂ ರಕ್ಷಣಾ ರಫ್ತುಗಳು ಭಾರತದ ಜಿಡಿಪಿ ಬೆಳವಣಿಗೆ, ವಿದೇಶಾಂಗ ನೀತಿಯ ವರ್ಧನೆ ಇತ್ಯಾದಿಗಳಲ್ಲಿ ಗರಿಷ್ಠತೆ ಸಾಧಿಸಲು ಕಾರಣವಾಗುತ್ತಿರುವ ಬೆಳವಣಿಗೆಗಳು. ಈ ಹಿಂದೆ ಪ್ರತಿಯೊಂದು ಶಸ್ತ್ರಕ್ಕೂ ಭಾರತ ವಿದೇಶಗಳನ್ನು ಅವಲಂಬಿಸಿತ್ತು. ಆದರೆ ಈಗ ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ದಿನೇದಿನೆ ಸ್ವಾವಲಂಬನೆ ಸಾಧಿಸುತ್ತಿದೆ. ಶಸ್ತ್ರಾಸ್ತ್ರಗಳಿಂದ ಹಿಡಿದು ಯುದ್ಧ ನೌಕೆಗಳನ್ನೂ ಭಾರತದಲ್ಲೇ ತಯಾರಿಸಲಾಗುತ್ತಿದೆ. ಪಾಕಿಸ್ತಾನ ಹೊರತುಪಡಿಸಿ ಇತರ ಹಲವು ನೆರೆದೇಶಗಳಿಗೆ ಭಾರತ ಯಥೇಚ್ಛವಾಗಿ ಶಸ್ತ್ರಾಸ್ತ್ರ ರಫ್ತು ಮಾಡುತ್ತಿದೆ. ಮಿಲಿಟರಿ ಸಾಧನಗಳಿಗಾಗಿ ಭಾರತ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಿನ ಶಸ್ತ್ರಾಸ್ತ್ರ ರಫ್ತು ದಾಖಲೆ ದೇಶದ ಪ್ರಗತಿ ಮತ್ತು ಸ್ವಾವಲಂಬನೆಯ ದೃಷ್ಟಿಯಿಂದ ಮಹತ್ವದ್ದಾಗಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಚೀನಾವನ್ನೂ ಹಿಂದಿಕ್ಕಿದ ಭಾರತದ ಆರ್ಥಿಕತೆಯ ಬೆಳವಣಿಗೆ ಐತಿಹಾಸಿಕ

ಈಗಾಗಲೇ ಭಾರತ ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌ ಕ್ಷಿಪಣಿಗಳನ್ನು, ಮಾರಿಷಸ್‌ಗೆ ಹಗುರ ಯುದ್ಧ ವಿಮಾನಗಳನ್ನು, ವಿಯೆಟ್ನಾಂಗೆ ಅತಿವೇಗದ ರಕ್ಷಣಾ ಬೋಟ್‌ಗಳನ್ನು, ಆರ್ಮೇನಿಯಾಕ್ಕೆ ಆಯುಧಶೋಧಕ ರೇಡಾರ್‌ಗಳನ್ನು, ಇಟಲಿ, ಮಾಲ್ದೀವ್ಸ್‌, ಶ್ರೀಲಂಕಾ, ಮಲೇಷಿಯಾ ಮುಂತಾದ ಹಲವು ದೇಶಗಳಿಗೆ ಪಿನಾಕ ರಾಕೆಟ್‌ ಲಾಂಚರ್‌ಗಳನ್ನು ಹಾಗೂ ಇತರ ಹಲವು ತಂತ್ರಜ್ಞಾನಗಳನ್ನು ರಫ್ತು ಮಾಡುತ್ತಿದೆ. ರಕ್ಷಣಾ ಸಾಮಗ್ರಿಗಳ ರಫ್ತು ಜತಜತೆಗೇ ನೋಡಬೇಕಾದ ಇನ್ನೊಂದು ಸಂಗತಿ ಎಂದರೆ, ಇಸ್ರೋ ಸಂಸ್ಥೆಯು ಉಡಾಯಿಸುತ್ತಿರುವ ಉಪಗ್ರಹಗಳು. ಸ್ಥಳೀಯ ತಂತ್ರಜ್ಞಾನದ ಉಪಗ್ರಹ ವಾಹಕಗಳನ್ನು (ಎಸ್‌ಎಲ್‌ವಿ) ನಾವು ತಯಾರಿಸಿದ್ದು, ಅವುಗಳ ಮೂಲಕ ಅಕ್ಕಪಕ್ಕದ ದೇಶಗಳ ಉಪಗ್ರಹಗಳನ್ನೂ ಕಕ್ಷೆಗೆ ಉಡಾಯಿಸುವ ಉದ್ಯಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ. ನಮ್ಮ ದೇಶದ ಇಂಥ ಸಾಧನೆಗೆ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), ಎಚ್‌ಎಎಲ್‌, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ಮಹತ್ವದ ಕೊಡುಗೆ ನೀಡುತ್ತಿವೆ. ಡಿಆರ್‌ಡಿಒ ಅಭಿವೃದ್ಧಿಪಡಿಸುತ್ತಿರುವ ಡ್ರೋನ್‌ಗಳು ನಮ್ಮ ಗಡಿಯನ್ನು ಕಾಯುತ್ತಿರುವ ಯೋಧರಿಗೆ ಅತ್ಯುತ್ತಮ ಜತೆಗಾರರಾಗಿವೆ.

ರಫ್ತು ಮಾತ್ರವಲ್ಲ, ರಕ್ಷಣಾ ಸಾಮಗ್ರಿಗಳಲ್ಲಿ ಆತ್ಮನಿರ್ಭರತೆ ಕೂಡ ನಮ್ಮಿಂದ ಸಾಧ್ಯವಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ತುಮಕೂರಿನ ಗುಬ್ಬಿಯಲ್ಲಿ ಪ್ರಧಾನಿ ಉದ್ಘಾಟಿಸಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕ. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, 3 ಟನ್‌ನಿಂದ 12 ಟನ್ ತೂಕದ ತನಕ ವಿವಿಧ ಶ್ರೇಣಿಗಳ ಹೆಲಿಕಾಪ್ಟರ್‌ಗಳನ್ನು ನಿರ್ಮಿಸುತ್ತದೆ. ಇಲ್ಲಿ ಉತ್ಪಾದನೆಗೊಳ್ಳಲಿರುವ ಹಗುರ ಹೆಲಿಕಾಪ್ಟರ್‌ಗಳು (ಎಲ್‌ಯುಎಚ್) ದೇಶದ ಮಿಲಿಟರಿ ಮತ್ತು ನಾಗರಿಕ ಅಗತ್ಯಗಳನ್ನು ಪೂರೈಸಲಿವೆ. ಇದರಿಂದ ಭಾರತದ ವಾಯುಪಡೆ ಹಾಗೂ ವಾಯುಸಾರಿಗೆ ಇನ್ನಷ್ಟು ಸಮೃದ್ಧವಾಗಲಿವೆ. ಇದು ಒಂದು ಉದಾಹರಣೆ ಮಾತ್ರ. ಇನ್ನೊಂದು ಉದಾಹರಣೆ ಎಂದರೆ ಇತ್ತೀಚೆಗೆ ಪ್ರಯೋಗಾರ್ಥ ಉಡಾಯಿಸಲಾದ ಅಣ್ವಸ್ತ್ರ ಸಿಡಿತಲೆಯನ್ನು 5000 ಕಿಲೋಮೀಟರ್‌ ದೂರ ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿರುವ ಅಗ್ನಿ-5 ಖಂಡಾಂತರ ಕ್ಷಿಪಣಿಯ ಅಭಿವೃದ್ಧಿ. ಈ ಕ್ಷಿಪಣಿ ಚೀನಾದ ಉತ್ತರ ತುದಿಯಿಂದ ಹಿಡಿದು ಯುರೋಪಿನ ಬಹುತೇಕ ಭಾಗಗಳಿಗೂ ಗುರಿ ಇಟ್ಟು ದಾಳಿ ಮಾಡುವ ಸಾಮರ್ಥ್ಯ ಹೊಂದಿರುವುದು ಭಾರತದ ರಕ್ಷಣಾ ದೃಷ್ಟಿಯಿಂದ ಮಹತ್ವದ್ದು. ಹಾಗೆಯೇ ಕಳೆದ ತಿಂಗಳು ಪರೀಕ್ಷಿಸಲಾದ ಮಿಷನ್‌ ದಿವ್ಯಾಸ್ತ್ರ. ಇದು ಏಕಕಾಲಕ್ಕೆ ಹಲವು ಸಿಡಿತಲೆಗಳನ್ನು ಉಡಾಯಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

ಇದೆಲ್ಲದರ ಹಿನ್ನೆಲೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಭರ ಭಾರತ ಅಭಿಯಾನ ಫಲ ಕೊಡಲಾರಂಭಿಸಿದೆ ಎನ್ನಬಹುದು. ಆದರೂ ಭಾರತ ತರಿಸಿಕೊಳ್ಳುತ್ತಿರುವ ಶಸ್ತ್ರಾಸ್ತ್ರಗಳ ಪ್ರಮಾಣ ಸಾಕಷ್ಟಿದೆ. ಅತಿ ಹೆಚ್ಚು ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಭಾರತವೂ ಒಂದು. ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಹೆಚ್ಚಿದಷ್ಟು ಆಮದು ಕಡಿಮೆಯಾಗಬಹುದು. ರಫ್ತು ಹೆಚ್ಚಾದಷ್ಟು ನಮ್ಮ ಗಣ್ಯತೆ, ಜಿಡಿಪಿ, ವಿದೇಶಾಂಗ ಸಾಮರ್ಥ್ಯವೂ ಅಧಿಕವಾಗುತ್ತದೆ.

Continue Reading

ಪ್ರಮುಖ ಸುದ್ದಿ

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

IPL 2024 : ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 210 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಕ್ನೊ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು.

VISTARANEWS.COM


on

IPL 2024
Koo

ಚೆನ್ನೈ: ಐಪಿಎಲ್​ 2024ನೇ (IPL 2024) 39ನೇ ಪಂದ್ಯದಲ್ಲಿ ತವರು ಅಭಿಮಾನಿಗಳ ಮುಂದೆಯೇ ಚೆನ್ನೈ ತಂಡವನ್ನು ಲಕ್ನೊ ಸೂಪರ್ ಜೈಂಟ್ಸ್ ತಂಡ 6 ವಿಕೆಟ್​ಗಳಿಂದ ಸೋಲಿಸಿದೆ. ಲಕ್ನೊ ತಂಡದ ಬ್ಯಾಟರ್​​ ಮಾರ್ಕಸ್​ ಸ್ಟೊಯ್ನಿಸ್​ 63 ಎಸೆತಕ್ಕೆ ಅಜೇಯ 124 ರನ್ (ಶತಕ) ಬಾರಿಸುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡರು. ಸಂಕಷ್ಟದಲ್ಲಿದ್ದ ಸಮಯದಲ್ಲಿ ತಂಡಕ್ಕೆ ಏಕಾಂಗಿಯಾಗಿ ಹೋರಾಟ ನಡೆಸಿದ ಸ್ಟೊಯ್ನಿಸ್ ಗೆಲುವು ತಂದುಕೊಟ್ಟರು. ಈ ಮೂಲಕ ಚೆನ್ನೈ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಅವರ (ಅಜೇಯ 108 ರನ್​) ಶತಕದ ಹೋರಾಟ ವ್ಯರ್ಥಗೊಂಡಿತು. ಇದು ಚೆನ್ನೈ ತಂಡಕ್ಕೆ ಆಡಿರುವ ಎಂಟು ಪಂದ್ಯಗಳಲ್ಲಿ ಐದನೇ ಸೋಲಾಗಿದ್ದು ಅಂಕಪಟ್ಟಿಯಲ್ಲಿ ಒಂದು ಸ್ಥಾನ ಕಳೆದುಕೊಂಡು 5ನೇ ಸ್ಥಾನಕ್ಕೆ ಜಾರಿದೆ. ಅತ್ತ ಲಕ್ನೊ ಸೂಪರ್ ಜೈಂಟ್ಸ್​ ತಂಡ 4ನೇ ಸ್ಥಾನಕ್ಕೇರಿದೆ. ಈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 5 ನೇ ಗೆಲುವಾಗಿದೆ. ಹೀಗಾಗಿ 10 ಅಂಕಗಳನ್ನು ಪಡೆದುಕೊಂಡಿದೆ.

ಇಲ್ಲಿನ ಎಂಎ ಚಿದಂಬರಂ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 210 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಕ್ನೊ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಲಕ್ನೊ ತಂಡ ಕ್ವಿಂಟನ್ ಡಿ ಕಾಕ್ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಎದುರಿಸಿತು. ನಾಯಕ ಕೆ. ಎಲ್ ರಾಹುಲ್ ಕೂಡ 16 ರನ್​ಗೆ ಸೀಮಿತಗೊಂಡರು. ಈ ವೇಳೆ ಆಡಲು ಇಳಿದ ಡಿ ಕಾಕ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಅವಕಾಶ ಪಡೆದ ದೇವದತ್​ ಪಡಿಕ್ಕಲ್​ ಪೇಚಾರಿ 19 ಎಸೆತಕ್ಕೆ 13 ರನ್ ಮಾಡಿ ಔಟಾದರು. ಇದು ಲಕ್ನೊ ತಂಡಕ್ಕೆ ಹಿನ್ನಡೆ ಉಂಟು ಮಾಡಿತು.

ನಿಕೋಲಸ್​- ಸ್ಟೊಯ್ನಿಸ್​ ಜತೆಯಾಟ

88 ರನ್​ಗೆ 3 ವಿಕೆಟ್​ ಕಳೆದುಕೊಂಡ ಲಕ್ನೊ ತಂಡ ಅಪಾಯಕ್ಕೆ ಸಿಲುಕಿತು. ಆದರೆ ಈ ವೇಳೆ ಆಡಲು ಬಂದ ನಿಕೋಲಸ್ ಪೂರನ್ ಹಾಗೂ ಸ್ಪೊಯ್ನಿಸ್​ 70 ರನ್​ಗಳ ಜತೆಯಾಟ ಆಡಿದರು. ಆದರೆ, 15 ಎಸೆತಕ್ಕೆ 34 ರನ್ ಬಾರಿಸಿದ ಪೂರನ್​ ಔಟಾದ ಬಳಿಕ ಮತ್ತೆ ತೊಂದರೆ ಎದುರಾಯಿತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ಸ್ಟೊಯ್ನಿಸ್​ 56 ಎಸೆತಕ್ಕೆ ಶತಕ ಪೂರೈಸಿದರು. ಕೊನೇ ತನಕ ನಿಂತು ಆಡಿ ಗೆಲ್ಲಿಸಿದರು. ಕೊನೆಯಲ್ಲಿ ದೀಪಕ್ ಹೂಡಾ 6 ಎಸೆತಕ್ಕೆ 17 ರನ್ ಬಾರಿಸಿದರು.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ಋತುರಾಜ್ ಶತಕದ ಆಟ

ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡವೂ ಉತ್ತಮವಾಗಿ ಆಡಲಿಲ್ಲ. ಅಜಿಂಕ್ಯ ರಹಾನೆ1 ರನ್​ ಗೆ ನಿರ್ಗಮಿಸಿದರು. ಆದರೆ ಮತ್ತೊಂದು ತುದಿಯಲ್ಲಿ ಋತುರಾಜ್ ಗಾಯಕ್ವಾಡ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಬಳಿಕ ಡ್ಯಾರಿಲ್ ಮಿಚೆಲ್​ 11 ಹಾಗೂ ಜಡೇಜಾ 16 ರನ್​ ಬಾರಿಸಿ ಔಟಾದರು. ಆದರೆ, 27 ಎಸೆತಕ್ಕೆ 66 ರನ್ ಬಾರಿಸಿದ ಶಿವಂ ದುಬೆ ದೊಡ್ಡ ಮೊತ್ತ ಪೇರಿಸಲು ನೆರವಾದರು.

Continue Reading

ಕರ್ನಾಟಕ

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Amit Shah: ಬೆಂಗಳೂರಿನಲ್ಲಿ ಬೊಮ್ಮನಹಳ್ಳಿಯ ಸ್ವಾಮಿ ವಿವೇಕಾನಂದ ಸರ್ಕಲ್‌ನಿಂದ ಸೇಂಟ್ ಫ್ರಾನ್ಸಿಸ್ ಸ್ಕೂಲ್‌ವರೆಗೆ ಅಮಿತ್‌ ಶಾ ಅವರ ರೋಡ್ ಶೋ ನಡೆಯಿತು. ಸುಮಾರು ‌3 ಕಿಲೋಮೀಟರ್‌ ದೂರ ರೋಡ್‌ ಶೋ ನಡೆಯಿತು.

VISTARANEWS.COM


on

Amit Shah
Koo

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಂಗಳವಾರ ರಾತ್ರಿ ಭರ್ಜರಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಿದರು.

ಬೊಮ್ಮನಹಳ್ಳಿಯ ಸ್ವಾಮಿ ವಿವೇಕಾನಂದ ಸರ್ಕಲ್‌ನಲ್ಲಿ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್‌ ಶೋಗೆ ಚಾಲನೆ ನೀಡಲಾಯಿತು. ವಿವೇಕಾನಂದ ಸರ್ಕಲ್‌ ಬಳಿಯಿಂದ ಸೇಂಟ್ ಫ್ರಾನ್ಸಿಸ್ ಸ್ಕೂಲ್‌ವರೆಗೆ ರೋಡ್ ಶೋ ನಡೆಯಿತು. ಸುಮಾರು ‌3 ಕಿಲೋಮೀಟರ್‌ ದೂರ ನಡೆದ ರೋಡ್‌ ಶೋ ವೀಕ್ಷಿಸಲು ಸಾವಿರಾರು ಜನರು ಆಗಮಿಸಿದ್ದರು. ರೋಡ್‌ ಶೋ ಹಿನ್ನೆಲೆ ಪ್ರಚಾರ ವಾಹನ ತೆರಳುವ ಮಾರ್ಗದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು.

ಅಮಿತ್‌ ಶಾ ಅವರಿಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ವಿಪಕ್ಷ ನಾಯಕ ಅಶೋಕ್, ಶಾಸಕರಾದ ಸತೀಶ್ ರೆಡ್ಡಿ, ಸಿ.ಕೆ ರಾಮಮೂರ್ತಿ ಸಾಥ್‌ ನೀಡಿದರು.

ಇದನ್ನೂ ಓದಿ | HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

ರೋಡ್‌ ಶೋ ಉದ್ದಕ್ಕೂ ಪ್ರಧಾನಿ ಮೋದಿ, ಅಮಿತ್‌ ಶಾ ಪರ ಕಾರ್ಯಕರ್ತರಿಂದ ಘೋಷಣೆಗಳು ಮೊಳಗಿದವು. ಎಲ್ಲೆಲ್ಲೂ ಕೇಸರಿಯ ಕಂಪು, ರಸ್ತೆಯುದ್ದಕ್ಕೂ ಬಿಜೆಪಿ ಪಕ್ಷದ ಬಾವುಟಗಳು ಕಂಡುಬಂದವು.

Continue Reading

ಪ್ರಮುಖ ಸುದ್ದಿ

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Public Sector Banks :ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

VISTARANEWS.COM


on

Public Sector Banks
Koo

ಮುಂಬೈ: ವಿದೇಶದಲ್ಲಿರುವ ಸುಸ್ತಿ ಸಾಲಗಾರರ ವಿರುದ್ಧ ಲುಕ್ ಔಟ್ ನೋಟಿಸ್​ (LOC) ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ (Public Sector Banks) ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹೈಕೋರ್ಟ್​ ತೀರ್ಪಿನಿಂದಾಗಿ ಸಾಲ ಕಟ್ಟದೇ ವಿದೇಶಗಳಲ್ಲಿ ವಾಸವಿರುವವರಿಗೆ ನೀಡಲಾಗಿರುವ ಎಲ್ಲ ನೋಟಿಸ್​ಗಳು ರದ್ದಾಗಲಿವೆ.

ಸುಸ್ತಿ ಸಾಲಗಾರರ ವಿರುದ್ಧ ಲುಕ್​ಔಟ್​ ನೋಟಿಸ್​ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳ ಅಧ್ಯಕ್ಷರಿಗೆ ಅಧಿಕಾರ ನೀಡುವಂಥ ಕೇಂದ್ರ ಸರ್ಕಾರ ಹೊರಡಿಸಿದ ಕಚೇರಿ ಜ್ಞಾಪಕ ಪತ್ರದ ಷರತ್ತು ಅಸಂವಿಧಾನಿಕ ಎಂದು ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲ ಆದಿತ್ಯ ಠಕ್ಕರ್ ಅವರು ಹೈಕೋರ್ಟ್ ಆದೇಶವನ್ನು ತಡೆಹಿಡಿಯಬೇಕೆಂದು ಕೋರಿದರು. ಆದರೆ ನ್ಯಾಯಪೀಠ ನಿರಾಕರಿಸಿತು.

ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಯಾವುದೇ ಸುಸ್ತಿದಾರರ ವಿರುದ್ಧ ನ್ಯಾಯಮಂಡಳಿ ಅಥವಾ ಕ್ರಿಮಿನಲ್ ನ್ಯಾಯಾಲಯವು ವಿದೇಶಕ್ಕೆ ಪ್ರಯಾಣಿಸದಂತೆ ನಿರ್ಬಂಧಿಸುವ ಆದೇಶಗಳ ಮೇಲೆ ತನ್ನ ತೀರ್ಪು ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : Diamond Smuggling : ನೂಡಲ್ಸ್​ ಪ್ಯಾaಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

ಕೇಂದ್ರವು ಹೊರಡಿಸಿದ ಕಚೇರಿ ಜ್ಞಾಪಕ ಪತ್ರವು ಸಂವಿಧಾನಕ್ಕೆ ವಿರುದ್ಧವಾಗಿಲ್ಲವಾದರೂ, ಎಲ್ಒಸಿ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕಿನ ಅಧ್ಯಕ್ಷರಿಗೆ ಅಧಿಕಾರ ನೀಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಕೇಂದ್ರದ ಕಚೇರಿ ಜ್ಞಾಪಕ ಪತ್ರವು 2018 ರಲ್ಲಿ ಮಾಡಿದ ತಿದ್ದುಪಡಿಯಲ್ಲಿ, “ಭಾರತದ ಆರ್ಥಿಕ ಹಿತದೃಷ್ಟಿಯಿಂದ” ಎಲ್ಒಸಿಗಳನ್ನು ನೀಡಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಅಧಿಕಾರ ನೀಡಿತ್ತು.

ಒಬ್ಬ ವ್ಯಕ್ತಿಯ ನಿರ್ಗಮನವು ದೇಶದ ಆರ್ಥಿಕ ಹಿತಾಸಕ್ತಿಗೆ ಹಾನಿಕಾರಕವಾಗಿದ್ದರೆ ಅವನು/ ಅವಳು ವಿದೇಶಕ್ಕೆ ಪ್ರಯಾಣಿಸುವುದನ್ನು ನಿರ್ಬಂಧಿಸುತ್ತದೆ ಎಂದು ಹೇಳಿತ್ತು “ಭಾರತದ ಆರ್ಥಿಕ ಹಿತಾಸಕ್ತಿ” ಎಂಬ ಪದಗಳನ್ನು ಯಾವುದೇ ಬ್ಯಾಂಕಿನ “ಆರ್ಥಿಕ ಹಿತಾಸಕ್ತಿಗಳೊಂದಿಗೆ” ತುಲನೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

Continue Reading
Advertisement
vistara Editorial ವಿಸ್ತಾರ ಸಂಪಾದಕೀಯ
ದೇಶ15 mins ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ20 mins ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು36 mins ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 202457 mins ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ1 hour ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ1 hour ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 20242 hours ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ2 hours ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ3 hours ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Union Minister Pralhad Joshi visit Sri Nuggikeri Anjaneya Swamy Temple in dharwad
ಕರ್ನಾಟಕ3 hours ago

Pralhad Joshi: ಸಚಿವ ಪ್ರಲ್ಹಾದ್‌ ಜೋಶಿಗೆ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ; ತಾವರೆ ಹೂ ರೂಪದಲ್ಲಿ ಪ್ರಸಾದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌