Rishi Sunak: ಮತ್ತೆ ನಿಯಮ ಮುರಿದ ಬ್ರಿಟಿಷ್‌ ಪ್ರಧಾನಿ, ವಿಡಿಯೊ ವೈರಲ್‌ - Vistara News

ವಿದೇಶ

Rishi Sunak: ಮತ್ತೆ ನಿಯಮ ಮುರಿದ ಬ್ರಿಟಿಷ್‌ ಪ್ರಧಾನಿ, ವಿಡಿಯೊ ವೈರಲ್‌

ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ (Rishi Sunak) ಅವರು ಸಾರ್ವಜನಿಕ ಸ್ಥಳದಲ್ಲಿ ನಿಯಮ ಉಲ್ಲಂಘನೆ ಮಾಡಿರುವ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅದು ವೈರಲ್‌ ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಬ್ರಿಟನ್‌ ಪ್ರಧಾನಿ, ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್‌ (Rishi Sunak) ಅವರು ಇದೀಗ ಮತ್ತೊಮ್ಮೆ ಬ್ರಿಟನ್‌ನಲ್ಲಿ ನಿಯಮ ಉಲ್ಲಂಘನೆ ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ. ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Rishika Sharma: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿಹಾಲ್​-ರಿಷಿಕಾ ಶರ್ಮಾ
ರಿಷಿ ಅವರು ಇತ್ತೀಚೆಗೆ ಲಂಡನ್‌ನ ಹೈಡ್‌ ಪಾರ್ಕ್‌ನಲ್ಲಿ ಓಡಾಡಿದ್ದರು. ಈ ವೇಳೆ ಅವರು ತಮ್ಮ ಸಾಕುನಾಯಿಯನ್ನೂ ಕರೆದುಕೊಂಡು ಹೋಗಿದ್ದರು. ಪಾರ್ಕ್‌ನಲ್ಲಿ ನಾಯಿಗಳನ್ನು ಬೆಲ್ಟ್‌ ಹಾಕದೆ ಹಾಗೆಯೇ ಓಡಾಡಿಸುವಂತಿಲ್ಲ ಎಂದು ನಿಯಮವಿದೆಯಾದರೂ ರಿಷಿ ಅವರ ನಾಯಿಗೆ ಬೆಲ್ಟ್‌ ಹಾಕಿರಲಿಲ್ಲ. ಅಲ್ಲಿನ ಸಿಬ್ಬಂದಿಯೊಬ್ಬರು ಅವರಿಗೆ ಆ ಬಗ್ಗೆ ಎಚ್ಚರಿಕೆ ಕೊಟ್ಟ ನಂತರ ಬೆಲ್ಟ್‌ ಹಾಕಿಕೊಂಡು ಕರೆದುಕೊಂಡು ಹೋಗಿರುವುದು ವಿಡಿಯೊದಲ್ಲಿ ಕಂಡುಬಂದಿದೆ.

ಈ ಹಿಂದೆ ರಿಷಿ ಅವರು ಜನವರಿ ತಿಂಗಳಲ್ಲಿ ಕಾರಿನಲ್ಲಿ ಕುಳಿತು ಸಾಮಾಜಿಕ ಜಾಲತಾಣಗಳಿಗೆ ವಿಡಿಯೊ ಮಾಡುವ ಸಲುವಾಗಿ ಕಾರಿನ ಸೀಟ್‌ ಬೆಲ್ಟ್‌ ತೆಗೆದಿದ್ದರು. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಪೊಲೀಸರ ಕಣ್ಣಿಗೂ ಬಿದ್ದಿತ್ತು. ಅದಕ್ಕೆ ಪೊಲೀಸರು ರಿಷಿ ಅವರಿಗೆ ದಂಡ ವಿಧಿಸಿದ್ದರು. ಅದಕ್ಕಿಂತ ಮೊದಲು 2022ರಲ್ಲಿ ಕೊರೊನಾ ನಿಯಮಗಳನ್ನು ಮೀರಿ ಪಾರ್ಟಿ ಮಾಡಿದ್ದಕ್ಕಾಗಿ ಅವರಿಗೆ ದಂಡ ವಿಧಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Honour Killing: ರಸ್ತೆ ಬದಿಯಲ್ಲೇ ಮಹಿಳೆಯನ್ನು ದರದರನೆ ಎಳೆದು, ತಲೆಗೆ ಹೊಡೆದು ಕೊಲೆ ಮಾಡಿದ್ರು; ಇದೇನು ಮರ್ಯಾದೆ ಹತ್ಯೆಯಾ?

Honour Killing ಸಿರಿಯಾದಲ್ಲಿ ಏಳು ಮಂದಿ ಮುಸ್ಲಿಂ ಪುರುಷರು ಸೇರಿ ಮಹಿಳೆಯೊಬ್ಬಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಪುರುಷರು ಮಹಿಳೆಯನ್ನು ಕಾಲುಗಳಲ್ಲಿ ಒದ್ದು, ಕೋಲಿನಿಂದ ಹೊಡೆದು ಅವಳ ಕೂದಲನ್ನು ಹಿಡಿದು ಎಳೆದಾಡಿದ್ದಾರೆ.

VISTARANEWS.COM


on

Siriya Crime
Koo

ನವದೆಹಲಿ: ಮಹಿಳೆಯೊಬ್ಬಳನ್ನು ರಸ್ತೆ ಬದಿಯಲ್ಲೇ ದರದರನೆ ಎಳೆದು, ಬಳಿಕ ಕಂಡ ಕಂಡವರು ಮನಸೋಇಚ್ಛೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ನೋಡಿದವರ ಮನಸ್ಸು ಖಂಡಿತವಾಗಿಯೂ ಮರುಕಪಡುತ್ತದೆ. ಯಾಕೆಂದರೆ ಮಹಿಳೆಯೊಬ್ಬಳನ್ನು ಈ ರೀತಿ ಒಬ್ಬೊಬ್ಬರಾಗಿಯೇ ಹೊಡೆದು ಕೊಲ್ಲುವುದು ನಿಜವಾಗಿಯೂ ಅಮಾನವೀಯ ಮತ್ತು ಅನಾಗರಿಕ ಸಂಸ್ಕೃತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಈ ಘಟನೆ ನಡೆದಿರುವುದು ನಮ್ಮ ದೇಶದಲ್ಲಿ ಅಲ್ಲ ಎಂಬುದೇ ಸಮಾಧಾನ. ಇದು ಇಸ್ಲಾಮಿಕ್ ರಾಷ್ಟ್ರ ಹಾಗೂ ಭಯೋತ್ಪಾದನೆಯ ತವರಾಗಿರುವ ಸಿರಿಯಾ ಎಂದು ಹೇಳಲಾಗುತ್ತಿದೆ. ಇದು ಮರ್ಯಾದೆ ಹತ್ಯೆ (Honour Killing) ಎಂದೂ ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಇಲ್ಲಿ ನಿರೀಕ್ಷಿತ. ಆದರೆ, ಇಂಥ ಘಟನೆಗಳು ಮಾನವ ಕುಲಕ್ಕೆ ಅಪಮಾನ ಎಂಬುದರಲ್ಲಿ ಎರಡು ಮಾತಿಲ್ಲ.

ಈ ಕ್ರೌರ್ಯದ ಘಟನೆ ಸಿರಿಯಾದಲ್ಲಿ ನಡೆದಿದ್ದು, ಏಳು ಮಂದಿ ಪುರುಷರು ಸೇರಿ ಮಹಿಳೆಯೊಬ್ಬಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಪುರುಷರು ಮಹಿಳೆಯನ್ನು ಕಾಲುಗಳಲ್ಲಿ ಒದ್ದು, ಕೋಲಿನಿಂದ ಹೊಡೆದು ಅವಳ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಆಕೆ ಕಿರುಚಾಡಿದರೂ ಕೂಡ ಯಾರ ಮನವೂ ಕರಗಿಲ್ಲ. ಈ ಘಟನೆ ಫೆಬ್ರವರಿಯಲ್ಲಿ ನಡೆದಿದ್ದು, ಕ್ಯಾಮರಾದಲ್ಲಿ ಸೆರೆಯಾಗಿ ಇಂದಿಗೂ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಕ್ರೌರ್ಯ ನಡೆಸಿದ ಗುಂಪಿನಲ್ಲಿ ಅಪ್ರಾಪ್ತ ಬಾಲಕ ಸೇರಿಕೊಂಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯನ್ನು ವರದಿ ಮಾಡಿದ ಸುದ್ದಿ ಮಾಧ್ಯಮ ಇದನ್ನು ಕುಟುಂಬದ ಗೌರವಕ್ಕಾಗಿ ಮಾಡಿದೆ ಎಂಬುದಾಗಿ ತಿಳಿಸಿದೆ. 20 ವರ್ಷ ವಯಸ್ಸಿನ ಆಕೆಯನ್ನು ಕುಟುಂಬಸ್ಥರು ರಸ್ತೆಬದಿಯಲ್ಲಿ ಅಟ್ಟಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅದರಲ್ಲಿ ಒಬ್ಬ ವ್ಯಕ್ತಿ ಆಕೆಯ ಕೂದಲನ್ನು ಎಳೆದುಕೊಂಡು ಕೋಲಿನಲ್ಲಿ ಹೊಡೆಯುತ್ತಿದ್ದ ದೃಶ್ಯ ವಿಡಿಯೊ ಪ್ರಾರಂಭದಲ್ಲಿ ಕಂಡುಬರುತ್ತದೆ. ಹೊಡೆತ ತಾಳಲಾರದೇ ಅವಳು ಕಿರುಚಾಡುತ್ತಿದ್ದಳು ಮತ್ತು ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಳು . ಆದರೆ ಆತ ಆಕೆಗೆ ಹಿಗ್ಗಾಮುಗ್ಗಾ ಹೊಡೆಯುತ್ತಿರುವ ದೃಶ್ಯ ಕಂಡುಬಂದಿದೆ.

ಇದನ್ನೂ ಓದಿ: Best Airport: ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳ ಪಟ್ಟಿ; ಸಿಂಗಾಪುರದ ಚಾಂಗಿಯನ್ನು ಹಿಂದಿಕ್ಕಿದ ದೋಹಾದ ಹಮದ್

ಇಸ್ಲಾಮಿಕ್​ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಕನಿಷ್ಠ ಗೌರವ ನೀಡುತ್ತಿಲ್ಲ ಎಂಬ ಆರೋಪಗಳಿವೆ. ಕಟ್ಟರ್​ ಇಸ್ಲಾಮಿಕ್ ಅನುಯಾಯಿಗಳು ಇದನ್ನು ದೇವರ ನಿರ್ಧಾರ ಎಂದು ಸಮರ್ಥಿಸುವುದುಂಟು. ಕೆಲವೊಂದು ಇಸ್ಲಾಮಿಕ್​ ದೇಶಗಳು ಈ ನಿಟ್ಟಿನಲ್ಲಿ ಸಾಕಷ್ಟು ಸುಧಾರಣೆಗಳನ್ನು ತರುತ್ತಿವೆ. ಆದರೆ, ಸಿರಿಯಾದಂಥ ದೇಶಗಳು ಸದ್ಯಕ್ಕೆ ಉದ್ಧಾರವಾಗುವಂತೆ ಕಾಣುತ್ತಿಲ್ಲ. ಅಲ್ಲಿನ ಪುರುಷರ ಕ್ರೌರ್ಯ ನಿಲ್ಲಲಿ ಎಂದು ಸಾಕಷ್ಟು ಮಂದಿ ವಿಡಿಯೊ ನೋಡಿ ಆಗ್ರಹಿಸಿದ್ದಾರೆ.

Continue Reading

ವಿದೇಶ

Safest Countries : ವಿಶ್ವದ ಎಲ್ಲೆಡೆ ನೋಡಿದರೂ ಯುದ್ಧ ಭೀತಿ; ಈ ದೇಶಗಳಷ್ಟೇ ಸುರಕ್ಷಿತ!

Safest Countries: ವಿಶ್ವದೆಲ್ಲೆಡೆ ಈಗ ಯುದ್ಧದ ಭೀತಿ ಎದುರಾಗಿದೆ. ಈ ನಡುವೆ ನಾವು ಹೆಚ್ಚು ಸುರಕ್ಷಿತವಾಗಿರುವುದು ಎಲ್ಲಿ ಎನ್ನುವ ಚಿಂತೆಯೂ ಕಾಡುತ್ತಿದೆ. ಒಂದು ವೇಳೆ ಯುದ್ಧ ನಡೆದರೆ ನಾವು ಯಾವ ದೇಶಕ್ಕೆ ಹೋಗಿ ಸುರಕ್ಷಿತವಾಗಿರಬಹುದು ಗೊತ್ತೇ ?

VISTARANEWS.COM


on

By

Safest Countries
Koo

ಒಂದೆಡೆ ರಷ್ಯಾ- ಉಕ್ರೇನ್ (Russia-Ukraine), ಇನ್ನೊಂದೆಡೆ ಹಮಾಸ್- ಇಸ್ರೇಲ್ (Hamas- Israel), ಮತ್ತೊಂದೆಡೆ ಇರಾನ್- ಇಸ್ರೇಲ್ (Iran- Israel) ಯುದ್ಧದಲ್ಲಿ ತೊಡಗಿದೆ. ಇದರಿಂದಾಗಿ ಮುಂದೆ ಮೂರನೇ ಮಹಾಯುದ್ಧದ (world war) ಭೀತಿ ವಿಶ್ವಕ್ಕೆ ಕಾಡುತ್ತಿದೆ. ಜಗತ್ತಿನಾದ್ಯಂತ ಈಗ ಯುದ್ಧದ ವಾತಾವರಣವಿದ್ದು ಎಲ್ಲರಲ್ಲೂ ಆತಂಕ ಮನೆ ಮಾಡಿದೆ. ಯುದ್ಧದ ಪರಿಸ್ಥಿತಿ ತಲೆದೋರಿದರೆ ಸುರಕ್ಷಿತವಾಗಿ ಇರಬಹುದಾದ ದೇಶ ಯಾವುದು (Safest Countries) ಎನ್ನುವ ಹುಡುಕಾಟದಲ್ಲೂ ಕೆಲವರಿದ್ದಾರೆ.

ತನ್ನ ರಾಯಭಾರಿ ಕಚೇರಿ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತಿಯಾಗಿ ಏಪ್ರಿಲ್ 13 ರಂದು ಇರಾನ್ ದೇಶವು ಇಸ್ರೇಲ್ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿತ್ತು. ಇದು ಮೂರನೇ ವಿಶ್ವ ಸಮರಕ್ಕೆ ಕಾರಣವಾಗಬಹುದು ಎನ್ನುವ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಈ ಯುದ್ಧವನ್ನು ತಡೆಗಟ್ಟಲು ಯುನೈಟೆಡ್ ಸ್ಟೇಟ್ಸ್ ಪ್ರಯತ್ನಿಸುತ್ತಿದೆ. ಇರಾನ್‌ನ ದಾಳಿಯು ವಿಶ್ವದೆಲ್ಲೆಡೆ ಸಂಘರ್ಷದ ವಾತಾವರಣವನ್ನು ಸೃಷ್ಟಿಸಿದೆ. ಅಲ್ಲದೇ ಇರಾನ್ ಗೆ ಎಚ್ಚರಿಕೆಯನ್ನೂ ನೀಡುತ್ತಿದೆ. ಹಮಾಸ್‌ ಮೇಲೆ ಇಸ್ರೇಲ್‌ ನಡೆಸಿರುವುದರಿಂದ ಮಧ್ಯಪ್ರಾಚ್ಯವು ಈಗಾಗಲೇ ಆಕ್ರೋಶದಲ್ಲಿದೆ.

ಇದನ್ನೂ ಓದಿ: Summer Tour: ಪಾಂಡಿಚೇರಿಯಲ್ಲಿ ಸುತ್ತು ಹಾಕುವಾಗ ಇವುಗಳನ್ನು ಮಿಸ್ ಮಾಡಿಕೊಳ್ಳಬೇಡಿ!

ಯುದ್ಧದ ಭೀತಿಗೆ ಕಾರಣ?

ಯುದ್ಧದ ಪರಿಸ್ಥಿತಿಯನ್ನು ಉಲ್ಬಣಗೊಳ್ಳಲು ಯುದ್ಧ ಸನ್ನದ್ಧವಾಗಿರುವ ರಾಷ್ಟ್ರಗಳಿಗೆ ಹಲವು ರಾಷ್ಟ್ರಗಳ ಬೆಂಬಲ, ಕೆಲವು ರಾಷ್ಟ್ರಗಳ ತಟಸ್ಥವಾಗಿರುವುದು ಕೂಡ ಕಾರಣವಾಗುತ್ತಿದೆ. ಇರಾನ್- ಇಸ್ರೇಲ್ ಯುದ್ಧದ ವೇಳೆ ಇರಾನ್, ಇರಾಕ್, ಸಿರಿಯಾ, ಲೆಬನಾನ್ ಮತ್ತು ಯೆಮೆನ್ ಮೊದಲಾದ ನೆರೆಯ ದೇಶಗಳಿಂದ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎನ್ನಲಾಗುತ್ತಿದೆ. ಮತ್ತೊಂದೆಡೆ, ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಲು ಯುನೈಟೆಡ್ ಸ್ಟೇಟ್ಸ್ ಮತ್ತು ಯುನೈಟೆಡ್ ಕಿಂಗ್ದಮ್ ಇಸ್ರೇಲ್ ನ ರಕ್ಷಣೆಗೆ ನಿಂತಿವೆ.

ಮೂರನೇ ವಿಶ್ವಯುದ್ಧದ ಆತಂಕ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಭದ್ರತಾ ಮಂಡಳಿಗೆ ನೀಡಿದ ಹೇಳಿಕೆಯಲ್ಲಿ ಮಧ್ಯಪ್ರಾಚ್ಯವು ಪ್ರಮುಖ ಸಂಘರ್ಷದ ಅಂಚಿನಲ್ಲಿದೆ ಎಂದು ಹೇಳಿದ್ದರು. ಈ ಪ್ರದೇಶದ ಜನರು ವಿನಾಶಕಾರಿ ಹಾಗೂ ಪೂರ್ಣ ಪ್ರಮಾಣದ ಸಂಘರ್ಷದ ಅಪಾಯವನ್ನು ಎದುರಿಸುತ್ತಿದ್ದಾರೆ. ಒಂದು ವೇಳೆ ಈಗ ಸಂಯಮ ತೆಗೆದುಕೊಳ್ಳದೇ ಇದ್ದರೆ ಮೂರನೇ ವಿಶ್ವಯುದ್ಧ ಉಂಟಾಗುವ ಸಂಪೂರ್ಣ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಯುದ್ಧ ಭೀತಿಯಲ್ಲಿರುವ ಮಧ್ಯಪ್ರಾಚ್ಯದಲ್ಲಿ ದೊಡ್ಡ ಜಾಗತಿಕ ಸಂಘರ್ಷ ಉಲ್ಬಣವಾದರೆ ಸಾಮಾನ್ಯ ಜನರಿಗೆ ಸುರಕ್ಷಿತ ಎಂದೆನಿಸುವ ಹತ್ತು ಪ್ರಮುಖ ರಾಷ್ಟ್ರಗಳಿವೆ.


ಗ್ರೀನ್‌ಲ್ಯಾಂಡ್

ಡೆನ್ಮಾರ್ಕ್‌ನ ಸ್ವಾಯತ್ತ ರಾಷ್ಟ್ರವಾಗಿರುವ ಗ್ರೀನ್ ಲ್ಯಾಂಡ್ ಯುದ್ಧ ಭೀತಿಯಿಂದ ದೂರದಲ್ಲಿದೆ ಮತ್ತು ರಾಜಕೀಯವಾಗಿ ಅಲಿಪ್ತವಾಗಿದೆ. ಇಲ್ಲಿ ಸಂಘರ್ಷ ಹರಡುವ ಸಾಧ್ಯತೆಗಳು ಕಡಿಮೆ.


ದಕ್ಷಿಣ ಆಫ್ರಿಕಾ

ಸ್ಥಿರವಾದ ವಿದೇಶಾಂಗ ನೀತಿ ಮತ್ತು ಆಧುನಿಕ ಮೂಲಸೌಕರ್ಯಕ್ಕೆ ಬದ್ಧತೆಯು ದಕ್ಷಿಣ ಆಫ್ರಿಕಾವನ್ನು ಯುದ್ಧದ ಸಂಭಾವ್ಯ ಅಪಾಯಗಳಿಂದ ರಕ್ಷಿಸುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಇಲ್ಲಿ ಜನರು ಹೆಚ್ಚು ಸುರಕ್ಷಿತವಾಗಿರಬಹುದು.


ಐಸ್ ಲ್ಯಾಂಡ್

ಹೇರಳವಾದ ತಾಜಾ ನೀರಿನ ನಿಕ್ಷೇಪಗಳು, ಸಮುದ್ರ ಸಂಪನ್ಮೂಲಗಳು ಮತ್ತು ನವೀಕರಿಸಬಹುದಾದ ಇಂಧನ ಮೂಲಗಳಿಗೆ ಹೆಸರುವಾಸಿಯಾಗಿರುವ ಐಸ್ ಲ್ಯಾಂಡ್ ಮೇಲೆ ದಾಳಿ ನಡೆಯುವ ಸಾಧ್ಯತೆ ಇಲ್ಲ. ಇಲ್ಲಿ ಸಂಘರ್ಷ ಹರಡುವ ಸಾಧ್ಯತೆ ಇಲ್ಲ. ಹೀಗಾಗಿ ಇದು ಸುರಕ್ಷಿತವೆಂದೇ ಹೇಳಬಹುದು.


ಅಂಟಾರ್ಕ್ಟಿಕಾ

ಅಂಟಾರ್ಕ್ಟಿಕಾ ಇರುವ ಸ್ಥಳವು ಅದನ್ನು ಸುರಕ್ಷಿತ ಸ್ಥಳವನ್ನಾಗಿ ಮಾಡಿದೆ. ಇದು ಯುದ್ಧ ವಲಯವಾಗಿ ಬದಲಾಗುವ ಸಾಧ್ಯತೆಯಿಲ್ಲ.


ಸ್ವಿಟ್ಜರ್ಲೆಂಡ್

ಮೊದಲ ಎರಡು ವಿಶ್ವ ಯುದ್ಧಗಳಲ್ಲಿಯೂ ಇದು ಕಠಿಣವಾದ ಪರ್ವತ ಭೂಪ್ರದೇಶದಿಂದಾಗಿ ದೂರದಲ್ಲಿ ಉಳಿದಿತ್ತು. ಇಲ್ಲಿ ದೃಢವಾದ ಸಾಂಪ್ರದಾಯಿಕ ತಟಸ್ಥತೆ ಯುದ್ಧದ ಸನ್ನಿವೇಶದಿಂದ ಎಲ್ಲರನ್ನೂ ದೂರವಿರಿಸುತ್ತದೆ.


ಇಂಡೋನೇಷ್ಯಾ

ಭೌಗೋಳಿಕ ಪ್ರತ್ಯೇಕತೆ ಮತ್ತು ಬಲವಾದ ಆರ್ಥಿಕತೆಗೆ ಹೆಸರುವಾಸಿಯಾಗಿರುವ ಇಂಡೋನೇಷ್ಯಾ “ಮುಕ್ತ ಮತ್ತು ಸಕ್ರಿಯ” ವಿದೇಶಾಂಗ ನೀತಿಯನ್ನು ನಿರ್ವಹಿಸುತ್ತಿದೆ. ಹೀಗಾಗಿ ಇಲ್ಲಿ ಯುದ್ಧದ ಭೀತಿ ಇಲ್ಲ.


ಟುವಾಲು

ಪ್ರತ್ಯೇಕತೆ ಮತ್ತು ತಟಸ್ಥತೆಯಿಂದಾಗಿ ಟುವಾಲು ಅತ್ಯಂತ ಏಕಾಂತ ಮತ್ತು ರಾಜಕೀಯವಾಗಿ ಅಲಿಪ್ತವಾಗಿರುವ ರಾಷ್ಟ್ರವಾಗಿದೆ. ಹೀಗಾಗಿ ವಿಶ್ವ ಯುದ್ಧ ನಡೆದರೆ ಇದು ಅದರಿಂದ ದೂರವೇ ಉಳಿಯುತ್ತದೆ.


ನ್ಯೂಜಿಲೆಂಡ್

ಯುದ್ಧ ಸಂಘರ್ಷಗಳ ಇತಿಹಾಸವಿಲ್ಲದ ಸ್ಥಿರವಾದ ಪ್ರಜಾಪ್ರಭುತ್ವ, ತನ್ನದೇ ಆದ ಆಹಾರವನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವ ದೇಶ ನ್ಯೂಜಿಲ್ಯಾಂಡ್. ಇಲ್ಲಿ ಯುದ್ಧದ ಸಾಧ್ಯತೆ ಕಡಿಮೆ.


ಐರ್ಲೆಂಡ್

ತಟಸ್ಥತೆ ಮತ್ತು ಶಾಂತಿಯುತ ವಿದೇಶಾಂಗ ನೀತಿಗೆ ಹೆಸರುವಾಸಿಯಾಗಿರುವ ಐಲೆಂಡ್ ನಲ್ಲಿ ಯುದ್ಧ ಸಾಧ್ಯತೆಯೂ ಇಲ್ಲವೆನ್ನಬಹುದು.


ಭೂತಾನ್

ಹಿಮಾಲಯದಿಂದ ಸುತ್ತುವರೆದಿರುವ ಭೂತಾನ್‌ನ ವಿಶಿಷ್ಟ ಸ್ಥಳವು ಅಲ್ಲಿನ ಜನರಿಗೆ ಅತ್ಯುತ್ತಮವಾದ ಆಶ್ರಯವನ್ನು ಒದಗಿಸುತ್ತದೆ. ಇಲ್ಲಿ ಯುದ್ಧದ ಭೀತಿ ಇಲ್ಲವೆನ್ನಲು ಅಡ್ಡಿಯಿಲ್ಲ.

Continue Reading

ಲೈಫ್‌ಸ್ಟೈಲ್

Senior Citizen: 2050ರ ವೇಳೆಗೆ ಭಾರತ ‘ಮುದುಕರ ದೇಶ’ವಾಗಲಿದೆ!

Senior citizen: 2050ರ ವೇಳೆಗೆ ಭಾರತವು ವಿಶ್ವದ ಶೇ. 17 ಹಿರಿಯ ನಾಗರಿಕರನ್ನು ಹೊಂದಲಿದೆ. ಇದರಿಂದ ಅವರ ಅಗತ್ಯತೆಗಳನ್ನು ಪೂರೈಸವು ಹಿರಿಯ ನಾಗರಿಕ ಕೇಂದ್ರಗಳ ಬೇಡಿಕೆಯೂ ಹೆಚ್ಚಾಗಲಿದೆ ಎನ್ನುತ್ತದೆ ವರದಿಯೊಂದು. ಈ ಬಗ್ಗೆ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Senior citizen
Koo

ನವದೆಹಲಿ: ಭಾರತವು (india) 2050ರ ವೇಳೆಗೆ 340 ಮಿಲಿಯನ್ ಹಿರಿಯ ನಾಗರಿಕರನ್ನು (Senior citizen) ಹೊಂದಲಿದೆ. ಇದು ವಿಶ್ವದ ವಯಸ್ಸಾದ ಜನಸಂಖ್ಯೆಯ (population) ಸರಿಸುಮಾರು ಶೇ. 17ರಷ್ಟು ಇರಲಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಸಿಬಿಆರ್ ಇ (CBRE) ಸೌತ್ ಏಷ್ಯಾದ ವರದಿ ಬುಧವಾರ ತಿಳಿಸಿದೆ.

ವಿಶ್ವದಲ್ಲೇ ಇತ್ತೀಚಿನ ವರ್ಷಗಳಲ್ಲಿ ವಿಶೇಷ ಆರೈಕೆ ಮತ್ತು ಜೀವನಶೈಲಿಯ ಆಯ್ಕೆಗಳನ್ನು ಬಯಸುತ್ತಿರುವ ಹಿರಿಯರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಹಿರಿಯ ಜೀವನ ಸೌಲಭ್ಯಗಳ ಬೇಡಿಕೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ವರದಿ ಹೇಳಿದೆ.

ದೇಶದಲ್ಲಿ ಪ್ರಸ್ತುತ ಹಿರಿಯರ ಆರೈಕೆ ಕೇಂದ್ರಗಳೂ ವೇಗವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ರಾಷ್ಟ್ರದಾದ್ಯಂತ 18,000 ಘಟಕಗಳಿದ್ದು, ಸಂಘಟಿತ ಹಿರಿಯ ಜೀವನ ಮತ್ತು ಆರೈಕೆ ವಿಭಾಗಗಳಲ್ಲಿ ಶೇ. 62ರಷ್ಟನ್ನು ಹೊಂದಿರುವ ದಕ್ಷಿಣ ಪ್ರದೇಶದಲ್ಲೇ ಇದು ಹೆಚ್ಚಾಗಿದೆ.

ಇದನ್ನೂ ಓದಿ: Eye Protection: ಡಿಜಿಟಲ್ ಪರದೆಗಳಿಂದ ಕಣ್ಣುಗಳನ್ನು ಕಾಪಾಡಿಕೊಳ್ಳುವುದು ಹೇಗೆ?

2024ರಲ್ಲಿ ಹಿರಿಯ ಜೀವನ ಸೌಲಭ್ಯಗಳ ಒಟ್ಟು ಅಂದಾಜು ಗುರಿ ಸುಮಾರು 1 ಮಿಲಿಯನ್ ಆಗಿದ್ದು, ಮುಂದಿನ 10 ವರ್ಷಗಳಲ್ಲಿ 2.5 ಮಿಲಿಯನ್‌ಗೆ ಹೆಚ್ಚಾಗುವ ನಿರೀಕ್ಷೆಯಿದೆ.

ವೇಗವಾಗಿ ಹೆಚ್ಚಳ

ಭಾರತದ ಹಿರಿಯ ಜನಸಂಖ್ಯೆಯು ಗಮನಾರ್ಹವಾಗಿ ಶೇ. 25.4 ಬೆಳವಣಿಗೆಯಾಗುವ ನಿರೀಕ್ಷೆಯಿದೆ. ಇದು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯಾಗಿದೆ. ಭಾರತ, ಆಗ್ನೇಯ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಲ್ಲಿ ಹಿರಿಯ ನಾಗರಿಕರ ಪ್ರಮಾಣ ವೇಗವಾಗಿ ಬೆಳೆಯುತ್ತಿದೆ ಎಂದು ಸಿಬಿಆರ್ ಇ ಯ ಅಧ್ಯಕ್ಷ ಮತ್ತು ಸಿಇಒ ಅಂಶುಮಾನ್ ಮ್ಯಾಗಜೀನ್ ತಿಳಿಸಿದ್ದಾರೆ.


ಹೆಚ್ಚುತ್ತಿದೆ ಬೇಡಿಕೆ

ಕಳೆದ ದಶಕದಲ್ಲಿ ಭಾರತವು ಹಿರಿಯ ಜೀವನ ಯೋಜನೆಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯನ್ನು ಕಂಡಿದೆ. ಈ ವಲಯದಲ್ಲಿ ಹೆಚ್ಚುತ್ತಿರುವ ಸ್ವೀಕಾರ ಮತ್ತು ಬೇಡಿಕೆಯನ್ನುಇದು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿರಿಯ ಆರೈಕೆ ಘಟಕಗಳಲ್ಲಿ ಹೆಚ್ಚಿನವು ಚೆನ್ನೈ, ಬೆಂಗಳೂರು, ಹೈದರಾಬಾದ್, ಕೊಯಮತ್ತೂರು, ಪುಣೆ ಮತ್ತು ದೆಹಲಿ- ಎನ್ ಸಿಆರ್ ನಗರಗಳಲ್ಲಿ ಕೇಂದ್ರೀಕೃತವಾಗಿದೆ.

ಹಲವು ಕ್ರಮ

ಭಾರತದಲ್ಲಿ ವರ್ಧಿತ ವಯೋಸಹಜ ಆರೈಕೆಗಾಗಿ ಹಿರಿಯರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಕಾರ್ಯಕ್ರಮ (NPHCE), ರಾಷ್ಟ್ರೀಯ ಆರೋಗ್ಯ ನೀತಿ ಮತ್ತು ಸಮುದಾಯ ಆಧಾರಿತ ಕಾರ್ಯಕ್ರಮಗಳಂತಹ ಹಲವಾರು ನೀತಿ ಉಪಕ್ರಮಗಳನ್ನು ಸರ್ಕಾರವು ಕೈಗೊಳ್ಳುತ್ತದೆ.

ವಯಸ್ಸಾದ ಜನಸಂಖ್ಯೆಯ ವಿಕಸನಗೊಳ್ಳುತ್ತಿರುವ ಆದ್ಯತೆಗಳನ್ನು ಪೂರೈಸಲು ರಚನಾತ್ಮಕ ಆರೈಕೆ ಕಾರ್ಯಕ್ರಮಗಳು, ಉದ್ದೇಶಿತ ನೀತಿಗಳು ಮತ್ತು ವಿಶೇಷ ವೈದ್ಯಕೀಯ ಸೇವೆಗಳ ಅಗತ್ಯವನ್ನು ಗುರುತಿಸಲಾಗಿದೆ. ಭಾರತ ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಲ್ಲಿ ಹಿರಿಯ ಆರೈಕೆ ಕ್ಷೇತ್ರದ ಉದ್ಯಮದ ಬಗ್ಗೆ ಜನ ನಾಯಕರು ಮಾತನಾಡುತ್ತಿದ್ದಾರೆ ಎಂದು ಕನ್ಸಲ್ಟಿಂಗ್ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಮಿ ಕೌಶಲ್ ತಿಳಿಸಿದ್ದಾರೆ.

Continue Reading

ದೇಶ

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು ಎಂದು ಕೆಲ ದಿನಗಳ ಹಿಂದಷ್ಟೇ ಎಲಾನ್‌ ಮಸ್ಕ್‌ ಅವರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ, ನಾವು ಕೂಡ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ಬಯಸುತ್ತೇವೆ ಎಂದು ಅಮೆರಿಕ ಕೂಡ ಹೇಳಿದೆ. ಆ ಮೂಲಕ ಭಾರತದ ಪರವಾಗಿ ನಿಂತಿದೆ.

VISTARANEWS.COM


on

Modi Biden
Koo

ವಾಷಿಂಗ್ಟನ್:‌ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದರೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (UNSC) ಭಾರತಕ್ಕೆ ಕಾಯಂ ಸ್ಥಾನ (UN Permanent Seat) ಸಿಗಲು ಪ್ರಯತ್ನಿಸಲಾಗುವುದು ಎಂಬುದಾಗಿ ಕೆಲ ದಿನಗಳ ಹಿಂದಷ್ಟೇ ಬಿಜೆಪಿಯು ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇನ್ನು, ಭಾರತಕ್ಕೆ ಕಾಯಂ ಸ್ಥಾನ ನೀಡಬೇಕು ಎಂದು ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್‌ ಮಸ್ಕ್‌ (Elon Musk) ಅವರೂ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಅಮೆರಿಕ ಕೂಡ ಭಾರತಕ್ಕೆ ಬೆಂಬಲ ಘೋಷಿಸಿದೆ. ಇದು ಈಗ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದೆ.

“ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಬೇಕು ಎಂಬುದರ ಕುರಿತು ಅಮೆರಿಕ ಅಧ್ಯಕ್ಷರೇ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ್ದಾರೆ. ವಿಶ್ವಸಂಸ್ಥೆ ಕಾರ್ಯದರ್ಶಿಯವರ ಅಭಿಪ್ರಾಯವೂ ಇದೇ ಆಗಿದೆ. ಆದಾಗ್ಯೂ, ಅಮೆರಿಕವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ತರಲು ಬಯಸುತ್ತದೆ. ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದು, ಸುಧಾರಣೆಯನ್ನು ಬಯಸುತ್ತೇವೆ” ಎಂದು ಅಮೆರಿಕ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯ ಉಪ ವಕ್ತಾರ ವೇದಾಂತ್‌ ಪಟೇಲ್‌ ಅವರು ಹೇಳಿದ್ದಾರೆ. ಹಾಗಾಗಿ, ಶೀಘ್ರದಲ್ಲೇ ಭಾರತಕ್ಕೆ ಕಾಯಂ ಸ್ಥಾನ ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಎಲಾನ್‌ ಮಸ್ಕ್‌ ಹೇಳಿದ್ದೇನು?

“ವಿಶ್ವಸಂಸ್ಥೆಯು ಬದಲಾವಣೆ ತರಲು ಹಿಂಜರಿಯುತ್ತಿದೆ. ವಿಶ್ವಸಂಸ್ಥೆಯ ಕಾಯಂ ಸದಸ್ಯತ್ವ ಪಡೆದಿರುವ ಬಲಿಷ್ಠ ರಾಷ್ಟ್ರಗಳು ತಾವು ಹೊಂದಿರುವ ಹೆಚ್ಚಿನ ಅಧಿಕಾರವನ್ನು ಬಳಸಿಕೊಳ್ಳಲು ಬಯಸುತ್ತಿವೆ. ಇದೇ ಕಾರಣಕ್ಕಾಗಿ ಆಫ್ರಿಕಾ ಹಾಗೂ ಭಾರತಕ್ಕೆ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಕ್ಕಿಲ್ಲ. ಹಾಗಾಗಿ, ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು” ಎಂದು ಎಲಾನ್‌ ಮಸ್ಕ್‌ ಅವರು ಕಳೆದ ಜನವರಿಯಲ್ಲಿ ಆಗ್ರಹಿಸಿದ್ದರು.

ವಿಶ್ವಸಂಸ್ಥೆ ಭದ್ರತಾ ಮಂಡಳಿಯು 5 ಕಾಯಂ ಹಾಗೂ 10 ಕಾಯಂ ಅಲ್ಲದ ಅಥವಾ ತಾತ್ಕಾಲಿಕವಾಗಿ ಸದಸ್ಯತ್ವ ಪಡೆದಿರುವ ರಾಷ್ಟ್ರಗಳನ್ನು ಹೊಂದಿದೆ. ಕಳೆದ 16 ವರ್ಷದಿಂದಲೂ ಭಾರತವು ತಾತ್ಕಾಲಿಕ ಸದಸ್ಯತ್ವ ಪಡೆದಿದೆ. ಅಮೆರಿಕ, ಬ್ರಿಟನ್‌, ರಷ್ಯಾ, ಫ್ರಾನ್ಸ್‌ ಹಾಗೂ ಚೀನಾ ಕಾಯಂ ಸದಸ್ಯತ್ವ ಪಡೆದಿವೆ. ಭಾರತಕ್ಕೆ ಕಾಯಂ ಸ್ಥಾನ ನೀಡಲು ಚೀನಾ ಮಾತ್ರ ವಿರೋಧಿಸುತ್ತಿದ್ದು, ಎಲ್ಲ ದೇಶಗಳು ಬೆಂಬಲಿಸುತ್ತಿವೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌ ಅವರೊಂದಿಗೆ ನಡೆದ ಸಭೆಯಲ್ಲಿ ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸೆರ್ಗೆಯ್‌ ಲಾವ್ರೋವ್‌ ಅವರು ಕೂಡ ಭಾರತಕ್ಕೆ ಕಾಯಂ ಸದಸ್ಯತ್ವ ನೀಡಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: PM Modi: ಅಮೆರಿಕ ಪತ್ರಿಕೆಗೆ ಮೋದಿ ಸಂದರ್ಶನ; ಮಂದಿರ, ಚೀನಾ ಸೇರಿ ಹಲವು ವಿಷಯಗಳ ಬಗ್ಗೆ ಹೇಳಿದ್ದಿಷ್ಟು!

Continue Reading
Advertisement
Minister Santosh Lad statement in Sandur Taluk
ಬಳ್ಳಾರಿ2 mins ago

Lok Sabha Election 2024: ಬೆಲೆ ಏರಿಕೆ ಮಾಡಿದ್ದೇ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ: ಸಂತೋಷ್‌ ಲಾಡ್‌

Karnataka Weather
ಮಳೆ17 mins ago

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Murder case Man stabbed to death 9 times for refusing to love
ಧಾರವಾಡ36 mins ago

Murder Case: ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

Infosys
ವಾಣಿಜ್ಯ39 mins ago

Infosys Q4 Result: ಇನ್ಫೋಸಿಸ್‌ಗೆ 7,969 ಕೋಟಿ ರೂ. ನಿವ್ವಳ ಲಾಭ; 28 ರೂ.ಗಳ ಡಿವಿಡೆಂಡ್‌ ಘೋಷಣೆ

EPF New rules
ವಾಣಿಜ್ಯ41 mins ago

Money Guide: ತುರ್ತು ಚಿಕಿತ್ಸೆಗೆ ಪಿಎಫ್​ನಿಂದ 1 ಲಕ್ಷ ರೂ. ಪಡೆಯಬಹುದು; ಹೇಗೆ ಗೊತ್ತಾ?

Siriya Crime
ಕ್ರೈಂ47 mins ago

Honour Killing: ರಸ್ತೆ ಬದಿಯಲ್ಲೇ ಮಹಿಳೆಯನ್ನು ದರದರನೆ ಎಳೆದು, ತಲೆಗೆ ಹೊಡೆದು ಕೊಲೆ ಮಾಡಿದ್ರು; ಇದೇನು ಮರ್ಯಾದೆ ಹತ್ಯೆಯಾ?

Flop Film
ಸಿನಿಮಾ1 hour ago

Flop Film: ಫ್ಲಾಪ್ ಎಂದು ಕರೆಸಿಕೊಂಡ ಈ ಚಿತ್ರದ 25 ಕೋಟಿ ಟಿಕೆಟ್ ಮಾರಾಟವಾಗಿದ್ದು ಹೇಗೆ; ಇಲ್ಲಿದೆ ರೋಚಕ ಸಿನಿ ಇತಿಹಾಸ

Summer Fashion
ಫ್ಯಾಷನ್1 hour ago

Summer Fashion: ಸಮ್ಮರ್‌ ಹೈ ಸ್ಟ್ರೀಟ್‌ ಫ್ಯಾಷನ್‌ಗೆ ಮರಳಿದ 3 ಶೈಲಿಯ ಬ್ಯಾಕ್‌ಲೆಸ್‌ ಔಟ್‌ಫಿಟ್ಸ್

Video Viral
ಪ್ರಮುಖ ಸುದ್ದಿ1 hour ago

Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

IPL Betting
ಮಂಡ್ಯ1 hour ago

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌