Rishi Sunak : ಅಮ್ಮನೊಂದಿಗೆ ತಾವು ಕೆಲಸ ಮಾಡುತ್ತಿದ್ದ ಮೆಡಿಕಲ್‌ ಶಾಪ್‌ ಫೋಟೊ ಹಂಚಿಕೊಂಡ ಬ್ರಿಟನ್‌ ಪ್ರಧಾನಿ - Vistara News

ವಿದೇಶ

Rishi Sunak : ಅಮ್ಮನೊಂದಿಗೆ ತಾವು ಕೆಲಸ ಮಾಡುತ್ತಿದ್ದ ಮೆಡಿಕಲ್‌ ಶಾಪ್‌ ಫೋಟೊ ಹಂಚಿಕೊಂಡ ಬ್ರಿಟನ್‌ ಪ್ರಧಾನಿ

ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ (Rishi Sunak) ಅವರು ತಾವು ಬಾಲ್ಯದಲ್ಲಿ ತಾಯಿಯೊಂದಿಗೆ ಕೆಲಸ ಮಾಡಿದ ಫಾರ್ಮಸಿಯ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ ಈಗ ವೈರಲ್‌ ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ (Rishi Sunak) ಅವರು ಒಂದು ರೀತಿಯಲ್ಲಿ ಭಾರತಕ್ಕೂ ಹೆಮ್ಮೆ ತಂದುಕೊಟ್ಟವರು. ಅವರು ಭಾರತ ಮೂಲದವರು ಎನ್ನುವುದು ಒಂದು ಸಂತಸವಾದರೆ, ಅವರ ಪತ್ನಿ ನಮ್ಮ ಕರ್ನಾಟಕದ ಹೆಮ್ಮೆಯ ಇನ್ಫೋಸಿಸ್‌ನ ಸಂಸ್ಥಾಪಕರಾದ ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿ ಅವರ ಪುತ್ರಿ ಎನ್ನುವುದು ಮತ್ತೊಂದು ಸಂಭ್ರಮ. ಇದೀಗ ಇದೇ ರಿಷಿ ಅವರು ತಮ್ಮ ಬಾಲ್ಯವನ್ನು ನೆನಪಿಸುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ರಿಷಿ ಸುನಾಕ್‌ ಅವರು ಸೌತ್‌ಆಪ್ಟನ್‌ನಲ್ಲಿರುವ ತಮ್ಮ ಸುನಕ್‌ ಫಾರ್ಮಸಿಯ ಫೋಟೋವನ್ನು ಬುಧವಾರ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರೊಂದಿಗೆ ದೊಡ್ಡ ಕ್ಯಾಪ್ಶನ್‌ ಬರೆದಿರುವ ಅವರು, “ನಾನು ರಾಷ್ಟ್ರೀಯ ಆರೋಗ್ಯ ವ್ಯವಸ್ಥೆಯ ಬಗ್ಗೆ ಮಾತನಾಡಿದಾಗ ಅದು ನನ್ನ ಕುಟುಂಬದ ನಿಲುವೂ ಆಗಿರುತ್ತದೆ. ಏಕೆಂದರೆ ನನ್ನ ತಂದೆ ವೈದ್ಯರಾಗಿ ಕೆಲಸ ಮಾಡಿದವರು. ನನ್ನ ತಾಯಿ ಇದೇ ಫಾರ್ಮಸಿಯಲ್ಲಿ ಕೆಲಸ ಮಾಡಿದವರು” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Rishi Sunak : ಬ್ರಿಟನ್​ ಪ್ರಧಾನಿ ರಿಷಿ ಸುನಕ್​ ರಾಯರ ಭಕ್ತ, ಪ್ರತಿ ಗುರುವಾರ ಉಪವಾಸ ಮಾಡ್ತಾರೆ
ಹಾಗೆಯೇ ರಿಷಿ ಅವರು ಬಾಲ್ಯದಲ್ಲಿ ತಾವು ತಮ್ಮ ತಾಯಿ ಅವರೊಂದಿಗೆ ಅದೇ ಫಾರ್ಮಸಿಯಲ್ಲಿ ಕೆಲಸ ಮಾಡಿಕೊಂಡಿದ್ದಾಗಿಯೂ ಕ್ಯಾಪ್ಶನ್‌ ಮೂಲಕ ತಿಳಿಸಿದ್ದಾರೆ.

ರಿಷಿ ಅವರ ಈ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಅನೇಕರು ರಿಷಿ ಅವರ ರೀತಿಯಲ್ಲೇ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ 32 ಸಾವಿರಕ್ಕೂ ಅಧಿಕ ಮಂದಿ ಈ ಪೋಸ್ಟ್‌ಗೆ ಲೈಕ್‌ ಮಾಡಿದ್ದಾರೆ. ಅನೇಕ ಭಾರತೀಯರು ಕೂಡ ಪೋಸ್ಟ್‌ಗೆ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Sunita Williams:ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಇದೀಗ ಮತ್ತೆ ಬಾಹ್ಯಾಕಾಶಕ್ಕೆ ಹಾರಲು ರೆಡಿ ಆಗಿದ್ದಾರೆ. ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳುತ್ತಿರುವ ಸುನೀತಾ ವಿಲಿಯಮ್ಸ್‌ ನಾಳೆ ಬಾಹ್ಯಾಕಾಶಕ್ಕೆ ಹಾರಲಿದ್ದಾರೆ. ನಾಳೆ ಬೆಳಗ್ಗೆ 8.34 ಕ್ಕೆ ಕೆನೆಡಿ ಬಾಹ್ಯಕಾಶ ಕೇಂದ್ರದಿಂದ ಅವರು ನೂತನವಾಗಿ ನಿರ್ಮಿಸಿರುವ ಬಾಹ್ಯಾಕಾಶ ನೌಕೆಯಲ್ಲಿ ಗಗನಯಾತ್ರೆ ಕೈಗೊಳ್ಳಲಿದ್ದಾರೆ.

VISTARANEWS.COM


on

Sunita Williams
Koo

ನ್ಯೂಯಾರ್ಕ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌(Sunita Williams) ಇದೀಗ ಮತ್ತೆ ಬಾಹ್ಯಾಕಾಶ(Astronaut)ಕ್ಕೆ ಹಾರಲು ರೆಡಿ ಆಗಿದ್ದಾರೆ. ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳುತ್ತಿರುವ ಸುನೀತಾ ವಿಲಿಯಮ್ಸ್‌ ನಾಳೆ ಬಾಹ್ಯಾಕಾಶಕ್ಕೆ ಹಾರಲಿದ್ದಾರೆ. ನಾಳೆ ಬೆಳಗ್ಗೆ 8.34 ಕ್ಕೆ ಕೆನೆಡಿ ಬಾಹ್ಯಕಾಶ ಕೇಂದ್ರ(Kennedy Space Center)ದಿಂದ ಅವರು ನೂತನವಾಗಿ ನಿರ್ಮಿಸಿರುವ ಬಾಹ್ಯಾಕಾಶ ನೌಕೆ(spacecraft)ಯಲ್ಲಿ ಗಗನಯಾತ್ರೆ ಕೈಗೊಳ್ಳಲಿದ್ದಾರೆ. ತಮ್ಮ ಮೂರನೇ ಬಾರಿಯ ಗಗನಯಾತ್ರೆ ಬಗ್ಗೆ ಪ್ರತಿಕ್ರಿಯಿಸಿರುವ ಸುನೀತಾ, ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗೆ ಕಾಲಿಟ್ಟಾಗ ಮತ್ತೆ ಮನೆಗೆ ಮರಳಿದ ಅನುಭವಾಗುತ್ತದೆ. ಈ ಬಾರಿ ಹೊಸ ಬಾಹ್ಯಾಕಾಶ ನೌಕೆಯಲ್ಲಿ ತೆರಳುತ್ತಿರುವ ಬಗ್ಗೆ ಸ್ವಲ್ಪ ಅಂಜಿಕೆ ಇದ್ದೇ ಇರುತ್ತದೆ. ಎಂದು ಹೇಳಿದ್ದಾರೆ.

ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಅಲ್ಲಿ ಕಳೆದಿದ್ದರು. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗನನ ಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದುವರೆಗೆ ಸುನಿತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಒಟ್ಟು 50 ಗಂಟೆ 40 ನಿಮಿಷ ಕಾಲ ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ. ಇದೀಗ ಮಹತ್ವದ ಅಧ್ಯಯನಕ್ಕಾಗಿ ಬಾಹ್ಯಾಕಾಶಕ್ಕೆ ಹಾರಲಿರುವ ಸುನೀತಾ ವಿಲಿಯಮ್ಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದಾರೆ. 2006ರಲ್ಲಿ ಮೊದಲ ಬಾರಿಗೆ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಯಾತ್ರೆ ನಡೆಸಿದ್ದರು. ಸಮೋಸಾ ಪ್ರಿಯೆ ಆಗಿರುವ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಮೋಸ ಸವಿಯುವ ಮಜವೇ ಬೇರೆ ಎಂದಿದ್ದಾರೆ.

ಗಣೇಶನೇ ಶುಭ ಸಂಕೇತ ಎಂದು ಸುನೀತಾ

ಸುನೀತಾ ವಿಲಿಯಮ್ಸ್ ಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭಸಂಕೇತ ಎಂದು ಹೇಳಿದ್ದಾರೆ. ಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶನ ಎಲ್ಲಾ ಎಲ್ಲಾ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆ. ಗಣೇಶ ನನ್ನ ಎಲ್ಲಾ ಕೆಲಸಗಳಿಗೆ ಶುಭಹಾರೈಸಿದ್ದಾನೆ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದಾರೆ. ಈ ಹಿಂದೆ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ದಿದ್ದರು.

ಇದನ್ನೂ ಓದಿ:http:Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

ಪ್ರಶಸ್ತಿಗಳು ಮತ್ತು ಗೌರವಗಳು

ಅವರಿಗೆ ಅನೇಕ ಪ್ರಶಸ್ತಿಗಳು ಮತ್ತು ಗೌರವ ಸಂದಿವೆ. ಅವರು US ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿರುವ ಅವರಿಗೆ ಎರಡು ಬಾರಿ ರಕ್ಷಣಾ ಉನ್ನತ ಸೇವಾ ಪದಕ, ಲೀಜನ್ ಆಫ್ ಮೆರಿಟ್, ನೌಕಾಪಡೆಯ ಪ್ರಶಂಸಾ ಪದಕ ಎರಡು ಬಾರಿ, ನೌಕಾಪಡೆ ಮತ್ತು ಮೆರೈನ್ ಕಾರ್ಪ್ಸ್ ಸಾಧನೆ ಪದಕ ಮತ್ತು ಮಾನವೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. ಭಾರತದ ಚಂದ್ರಯಾನ ಯಶಸ್ವಿಗೆ ಸಂತಸ ವ್ಯಕ್ತಪಡಿಸಿದ್ದ ಸುನೀತಾ ವಿಲಿಯಮ್ಸ್, ಇಸ್ರೋ ಭಾಗೂ ಭಾರತ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದರು.

Continue Reading

ವೈರಲ್ ನ್ಯೂಸ್

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

Boat Capsizes: ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹಕ್ಕೆ ತುತ್ತಾಗಿ ಒಂದೇ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಈ ವೇಳೆ ಒಂದು ದೋಣಿ ಮುಗುಚಿದೆ ಎನ್ನಲಾಗಿದೆ. ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಜಲಾವೃತಗೊಂಡಿದ್ದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮಗುಚಿ ಬೀಳುತ್ತಿರುವ ಭಯಾನಕ ದೃಶ್ಯವನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Boat Capsize
Koo

ಬ್ರೆಜಿಲ್‌: ಭೀಕರ ಪ್ರವಾಹದ ರಭಸಕ್ಕೆ ದೋಣಿಯೊಂದು ಮಗುಚಿರುವ ಘಟನೆ (Boat Capsizes) ಬ್ರೆಜಿಲ್‌(Brazil)ನಲ್ಲಿ ನಡೆದಿದೆ. ಭಾರೀ ಮಳೆಯಿಂದ ಪ್ರವಾಹ ಸ್ಥಿತಿ(Flood situation) ಎದುರಿಸುತ್ತಿರುವ ಬ್ರೆಜಿಲ್‌ನಲ್ಲಿ ನೂರಾರು ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಜಲಾವೃತಗೊಂಡಿದ್ದ ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮವಾಗಿ ಮಳೆಯಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 56ಕ್ಕೆ ಏರಿಕೆಯಾಗಿದ್ದು, 74 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು 67 ಮಂದಿ ಕಣ್ಮರೆಯಾಗಿದ್ದಾರೆ ಬ್ರೆಜಿಲ್‌ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಭೀಕರ ದುರ್ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗುತ್ತಿದೆ.

ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹಕ್ಕೆ ತುತ್ತಾಗಿ ಒಂದೇ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಈ ವೇಳೆ ಒಂದು ದೋಣಿ ಮುಗುಚಿದೆ ಎನ್ನಲಾಗಿದೆ. ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಜಲಾವೃತಗೊಂಡಿದ್ದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮಗುಚಿ ಬೀಳುತ್ತಿರುವ ಭಯಾನಕ ದೃಶ್ಯವನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ರೆಜಿಲ್‌ನಲ್ಲಿ ಕಳೆದ ಅನೇಕ ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಭೂಕುಸಿತ, ಪ್ರವಾಹಕ್ಕೆ ಸಿಲುಕಿ ಜನ ತತ್ತರಿಸಿದ್ದಾರೆ.

ಇನ್ನು ನಾಲ್ಕು ತಿಂಗಳ ಹಿಂದೆ ಇಂತಹದ್ದೇ ಒಂದು ದುರಂತ ನಡೆದಿತ್ತು. ಗುಜರಾತ್‌ನ ವಡೋದಾರದ ಹರಿಣಿ ಸರೋವರದಲ್ಲಿ ಬೋಟ್ ಮಗುಚಿ 13 ಶಾಲಾ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ನಡೆದಿತ್ತು.

ಇದನ್ನೂ ಓದಿ:Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಕಳೆದ ವಾರ ಕಾರವಾರದಲ್ಲೂ ಅರಬ್ಬೀ ಸಮುದ್ರದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಒಂದು ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿತ್ತು. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಎಂಬವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿತ್ತು. ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿತ್ತು.

Continue Reading

ಪ್ರಮುಖ ಸುದ್ದಿ

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Al Jazeera: ಕತಾರ್‌ ಮೂಲದ ಸುದ್ದಿವಾನಿಯಾದ ಅಲ್‌ಜಜೀರಾ, ಹಮಾಸ್‌ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದ ಇಸ್ರೇಲ್‌ ಭದ್ರತೆಗೆ ಧಕ್ಕೆಯಾಗುತ್ತಿದೆ ಎಂಬುದು ಇಸ್ರೇಲ್‌ ವಾದವಾಗಿದೆ. ಹಾಗಾಗಿ, ಚಾನೆಲ್‌ಅನ್ನು ಸ್ಥಗಿತಗೊಳಿಸಲು ಬೆಂಜಮಿನ್‌ ನೆತನ್ಯಾಹು ಅವರು ಆದೇಶಿಸಿದ್ದಾರೆ. ಪ್ರಧಾನಿಯ ಆದೇಶದ ಬೆನ್ನಲ್ಲೇ, ಚಾನೆಲ್‌ಗೆ ತೆರಳಿದ ಪೊಲೀಸರು ವಾಹಿನಿಯ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಿದ್ದಾರೆ.

VISTARANEWS.COM


on

Al Jazeera
Koo

ಟೆಲ್‌ ಅವಿವ್:‌ 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ (Israel Hamas War) ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಇಸ್ರೇಲ್‌ ಸತತವಾಗಿ ದಾಳಿ ನಡೆಸಿ, ಉಗ್ರರನ್ನು ಸದೆಬಡಿಯುತ್ತಿದೆ. ಇಸ್ರೇಲ್‌ ದಾಳಿಯಲ್ಲಿ ನಾಗರಿಕರೂ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ, ಇಸ್ರೇಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್‌ಜಜೀರಾ ಸುದ್ದಿವಾಹಿನಿಯನ್ನು ಇಸ್ರೇಲ್‌ ಸ್ಥಗಿತಗೊಳಿಸಿದೆ. ಚಾನೆಲ್‌ ಬಂದ್‌ ಮಾಡುವ ಕುರಿತು ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಘೋಷಣೆ ಮಾಡಿದ್ದಾರೆ.

“ಅಲ್‌ಜಜೀರಾ ಚಾನೆಲ್‌ಅನ್ನು ಇಸ್ರೇಲ್‌ನಲ್ಲಿ ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹಾಗಾಗಿ, ಚಾನೆಲ್‌ಅನ್ನು ಸ್ಥಗಿತಗೊಳಿಸಲಾಗುತ್ತಿದೆ” ಎಂದು ಬೆಂಜಮಿನ್‌ ನೆತನ್ಯಾಹು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಬೆಂಜಮಿನ್‌ ನೆತನ್ಯಾಹು ವಕ್ತಾರ (ಅರಬ್‌ ವರ್ಲ್ಡ್)‌ ಒಫಿರ್‌ ಜೆಂಡಲ್‌ಮ್ಯಾನ್‌ ಕೂಡ ಮಾಹಿತಿ ನೀಡಿದ್ದಾರೆ. “ಕೂಡಲೇ ಅಲ್‌ಜಜೀರಾ ಚಾನೆಲ್‌ಅನ್ನು ಸ್ಥಗಿತಗೊಳಿಸುತ್ತೇವೆ. ಕೇಬಲ್‌ ಹಾಗೂ ಸ್ಯಾಟಲೈಟ್‌ ಟೆಲಿವಿಷನ್‌ ಕಂಪನಿಗಳಿಂದ ಚಾನೆಲ್‌ಅನ್ನು ತೆಗೆಯಲಾಗುತ್ತದೆ. ವರದಿಗಾರರು ಕೂಡ ಕೆಲಸ ಮಾಡಲು ಬಿಡುವುದಿಲ್ಲ” ಎಂದು ತಿಳಿಸಿದ್ದಾರೆ. ಇದಾದ ಬೆನ್ನಲ್ಲೇ, ಚಾನೆಲ್‌ಗೆ ತೆರಳಿದ ಪೊಲೀಸರು ಸುದ್ದಿವಾಹಿನಿಯನ್ನು ಸ್ಥಗಿತಗೊಳಿಸಿದ್ದಾರೆ. ಇದಕ್ಕೆ ಅಲ್‌ಜಜೀರಾ ಪ್ರತಿಕ್ರಿಯಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದೆ.

ಕತಾರ್‌ ಮೂಲದ ಸುದ್ದಿವಾನಿಯಾದ ಅಲ್‌ಜಜೀರಾ, ಹಮಾಸ್‌ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದ ಇಸ್ರೇಲ್‌ ಭದ್ರತೆಗೆ ಧಕ್ಕೆಯಾಗುತ್ತಿದೆ ಎಂಬುದು ಇಸ್ರೇಲ್‌ ವಾದವಾಗಿದೆ. “ಇಸ್ರೇಲ್‌ ವಿರೋಧಿ ನೀತಿಯನ್ನು ಅಲ್‌ಜಜೀರಾ ಅನುಸರಿಸುತ್ತಿದೆ. ಅದು ಹಮಾಸ್‌ ಮುಖವಾಣಿಯಂತೆ ಕಾರ್ಯನಿರ್ವಹಿಸುತ್ತಿದೆ. ಇದು ದೇಶದ ಭದ್ರತೆಗೆ ಧಕ್ಕೆ ತರುವ ವಿಷಯವಾಗಿದೆ. ಹಾಗಾಗಿ, ಚಾನೆಲ್‌ ಸ್ಥಗಿತಗೊಳಿಸಲು ಆದೇಶಿಸಲಾಗಿದೆ” ಎಂದು ಇಸ್ರೇಲ್‌ ಸಚಿವರೊಬ್ಬರು ತಿಳಿಸಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ನಾಗರಿಕರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್, ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರರನ್ನು ನಾಶ ಮಾಡುವ ಪಣತೊಟ್ಟು, ಸೇನಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನಿರಂತರ ದಾಳಿಗಳಿಂದಾಗಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿವೆ. ಇಷ್ಟಾದರೂ ಇಸ್ರೇಲ್‌ ಪ್ರತಿದಾಳಿ ನಿಲ್ಲಿಸುತ್ತಿಲ್ಲ.

ಇದಕ್ಕೂ ಮೊದಲು ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ವಿರುದ್ಧ ಮಂಡಿಸಿದ ನಿರ್ಣಯದ ಪರವಾಗಿ ಭಾರತ ಮತದಾನ ಮಾಡಿತ್ತು. ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶಗಳಲ್ಲಿ ಇಸ್ರೇಲ್‌ ಆಕ್ರಮಣಕಾರಿ ನೀತಿಯನ್ನು ಖಂಡಿಸಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಪರವಾಗಿ ಭಾರತ ಮತದಾನ ಮಾಡಿರುವುದು ವಿಶೇಷವಾಗಿತ್ತು. ಇದಾದ ನಂತರ ಇಸ್ರೇಲ್‌ ವಿರುದ್ಧ ಮಂಡಿಸಿದ ನಿರ್ಣಯದ ಮತದಾನದಿಂದ ಭಾರತ ದೂರ ಉಳಿದಿದೆ.

ಇದನ್ನೂ ಓದಿ: War and Love : ಹಮಾಸ್​ ಒತ್ತೆಯಾಳುವಾಗಿರುವ ಪ್ರಿಯತಮನಿಗಾಗಿ 6 ತಿಂಗಳಿಂದ ಕಾಯುತ್ತಿದ್ದಾಳೆ ಇಸ್ರೇಲ್​ ಯುವತಿ!

Continue Reading

ಕ್ರೈಂ

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

ಪ್ರಯಾಣಿಕನೊಬ್ಬನ ಪ್ಯಾಂಟ್ ಕಿಸೆಯಲ್ಲಿದ್ದ ಎರಡು ಹಾವುಗಳನ್ನು ಫ್ಲೋರಿಡಾದ ಮಿಯಾಮಿಯ ವಿಮಾನ ನಿಲ್ದಾಣದಲ್ಲಿ (Viral News) ಭದ್ರತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

VISTARANEWS.COM


on

By

Viral News
Koo

ಮಿಯಾಮಿ: ಪ್ರಯಾಣಿಕನೊಬ್ಬ ಪ್ಯಾಂಟ್‌ ಜೇಬಿನಲ್ಲಿ (Viral News) ಹಾವುಗಳನ್ನು (Snakes In Pant) ಸಾಗಿಸುತ್ತಿದ್ದ ಘಟನೆ ಫ್ಲೋರಿಡಾದ (Florida ) ಮಿಯಾಮಿಯ ವಿಮಾನ ನಿಲ್ದಾಣದಲ್ಲಿ (Miami Airport) ಬೆಳಕಿಗೆ ಬಂದಿದೆ. ಭದ್ರತಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ವೇಳೆ ಪ್ರಯಾಣಿಕನೊಬ್ಬ ಪ್ಯಾಂಟ್‌ನ ಜೇಬಿನಲ್ಲಿ ಹಾವುಗಳನ್ನು ಇಟ್ಟಿರುವುದನ್ನು ಪತ್ತೆ ಮಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭದ್ರತಾ ಅಧಿಕಾರಿಗಳು, ಏಪ್ರಿಲ್ 26ರಂದು ಚೆಕ್‌ಪಾಯಿಂಟ್‌ನಲ್ಲಿ ಪ್ರಯಾಣಿಕನೊಬ್ಬ ಪ್ಯಾಂಟ್‌ನಲ್ಲಿ ಹಾವುಗಳನ್ನು ಸಣ್ಣ ಚೀಲದಲ್ಲಿ ಇಟ್ಟು ಸಾಗಿಸುತ್ತಿರುವುದನ್ನು ಪತ್ತೆ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಸನ್‌ಗ್ಲಾಸ್ ಬ್ಯಾಗ್‌ನಲ್ಲಿ ಎರಡು ಸಣ್ಣ ಹಾವುಗಳನ್ನು ಪತ್ತೆ ಹಚ್ಚಿರುವ ಸಾರಿಗೆ ಭದ್ರತಾ ಆಡಳಿತದ (ಟಿಎಸ್‌ಎ) ವಕ್ತಾರರು ಹಾವುಗಳನ್ನು ಫ್ಲೋರಿಡಾ ಮೀನು ಮತ್ತು ವನ್ಯಜೀವಿ ಸಂರಕ್ಷಣಾ ಆಯೋಗಕ್ಕೆ ಒಪ್ಪಿಸಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಯಾಣಿಕನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ನಿಂತಿದ್ದಾಗ ಎಚ್ಚರಿಕೆ ಸದ್ದು ಕೇಳಿದಾಗ ಆತನೇ ತನ್ನ ಪ್ಯಾಂಟ್‌ನಲ್ಲಿ ಹಾವುಗಳಿವೆ ಎಂದು ಒಪ್ಪಿಕೊಂಡಿದ್ದಾನೆ. ಆತ ತನ್ನ ಚೀಲದಲ್ಲಿ ಈ ಹಾವುಗಳನ್ನು ಏಕೆ ಸಾಗಿಸುತ್ತಿದ್ದ ಎಂಬುದು ತಿಳಿದು ಬಂದಿಲ್ಲ. ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.



ಬೇಬಿ ಡೈಪರ್ ನಲ್ಲಿತ್ತು ಗುಂಡು

ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಲಕ್ಷಣ ಘಟನೆ ನಡೆದಿದೆ. ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಬಿಸಾಡಬಹುದಾದ ಬೇಬಿ ಡೈಪರ್‌ನಲ್ಲಿ 17 ಗುಂಡುಗಳನ್ನು ಬಚ್ಚಿಟ್ಟಿರುವುದನ್ನು ಭದ್ರತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ವಿಮಾನ ನಿಲ್ದಾಣದ ಭದ್ರತಾ ಚೆಕ್‌ಪಾಯಿಂಟ್‌ನಲ್ಲಿ ಎಕ್ಸ್-ರೇ ಯಂತ್ರದಲ್ಲಿ ಎಚ್ಚರಿಕೆ ಬಂದಿದ್ದರಿಂದ ಅಧಿಕಾರಿಗಳು ಪ್ರಯಾಣಿಕರ ಕ್ಯಾರಿ-ಆನ್ ಬ್ಯಾಗ್‌ನಿಂದ ಕ್ಲೀನ್ ಡೈಪರ್ ಅನ್ನು ತೆಗೆದು ನೋಡಿದಾಗ ಅದರಲ್ಲಿ ಬುಲೆಟ್ ತುಂಬಿದ ಡಯಾಪರ್ ಕಂಡು ಬಂದಿತ್ತು.

ಈ ಬಗ್ಗೆ ಪ್ರಯಾಣಿಕನನ್ನು ವಿಚಾರಿಸಿದಾಗ ತನಗೆ ಇದು ಗೊತ್ತೇ ಇಲ್ಲ ಎಂದು ಹೇಳಿದ್ದ. ತನ್ನ ಗೆಳತಿ ಅದನ್ನು ಇಟ್ಟುಕೊಳ್ಳುವಂತೆ ಸೂಚಿಸಿದ್ದಳು ಎಂದು ತಿಳಿಸಿದ್ದ ಎನ್ನಲಾಗಿದೆ.

ಬೆಂಗಳೂರಿನಲ್ಲೂ ಪತ್ತೆಯಾಗಿತ್ತು

ಇತ್ತೀಚೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಥಾಯ್ಲೆಂಡ್‌ನಿಂದ ಬಂದ ವ್ಯಕ್ತಿಯ ಬ್ಯಾಗ್‌ನಲ್ಲಿ 17 ಅತಿ ವಿಷಕಾರಿ ಕಾಳಿಂಗ ಸರ್ಪ , 55 ಚೆಂಡು ಹೆಬ್ಬಾವು ಮತ್ತು ಆರು ಕಾಪುಚಿನ್‌ ಕೋತಿ ಮರಿಗಳನ್ನು ಪತ್ತೆಯಾಗಿತ್ತು.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಏರ್ ಏಷಿಯಾ ವಿಮಾನದಲ್ಲಿ ಟರ್ಮಿನಲ್ 1ರಲ್ಲಿ ಬಂದಿಳಿದಿದ್ದ ವಿಮಾನದಿಂದ ಇಳಿದ ಪ್ರಯಾಣಿಕರ ವಿವರಗಳನ್ನು ಪಡೆದುಕೊಳ್ಳುತ್ತಿದ್ದಾಗ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದುದು ಕಂಡುಬಂದಿತ್ತು.

ಇದನ್ನೂ ಓದಿ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

ಕೂಡಲೇ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನ ಚೆಕ್‌ ಇನ್‌ ಲಗೇಜನ್ನು ಸ್ಕ್ಯಾನ್‌ ಮಾಡಿದರು. ಅದರಲ್ಲಿ ಹಾವು, ಕೋತಿಗಳು ಇರುವುದು ಕಂಡುಬಂತು. ಬಳಿಕ ಅವನನ್ನು ತಡೆ ಹಿಡಿದು ಹೆಚ್ಚಿನ ತಪಾಸಣೆ ನಡೆಸಿದಾಗ ಆತನ ಬಳಿ ವಿಷಕಾರಿ ಕಾಳಿಂಗ ಸರ್ಪ, ಹೆಬ್ಬಾವು ಮತ್ತು ಕೋತಿ ಮರಿಗಳನ್ನು ತಂದಿರುವುದು ಪತ್ತೆಯಾಗಿತ್ತು.

ಹಾವು ಮತ್ತು ಕೋತಿಯನ್ನು ತಂದಿರುವ ವ್ಯಕ್ತಿ ತಮಿಳುನಾಡಿನವನು ಎಂದು ತಿಳಿದು ಬಂದಿತ್ತು. ವನ್ಯ ಜೀವಿ ಕಳ್ಳಸಾಗಣೆದಾರ ಎಂದು ಗುರುತಿಸಿ ಆತನನ್ನು ಬಂಧಿಸಿ 1962ರ ಕಸ್ಟಮ್ಸ್ ಕಾಯಿದೆಯ ಸೆಕ್ಷನ್ 110ರ ಅಡಿಯಲ್ಲಿಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Continue Reading
Advertisement
Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ37 mins ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

IPL 2024
ಕ್ರೀಡೆ37 mins ago

IPL 2024 : ಪೃಥ್ವಿ ಶಾ ಗರ್ಲ್​​ ಫ್ರೆಂಡ್​​​ ನಿಧಿಯನ್ನು ತಬ್ಬಿ ಅಭಿನಂದಿಸಿದ ಶಾರುಖ್​ ಖಾನ್​​

CM Siddaramaiah
ಪ್ರಮುಖ ಸುದ್ದಿ47 mins ago

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

Arvind Kejriwal
ದೇಶ60 mins ago

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

karnataka weather forecast
ಮಳೆ1 hour ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Female foeticide
ಪ್ರಮುಖ ಸುದ್ದಿ1 hour ago

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Summer Holiday Fashion
ಫ್ಯಾಷನ್1 hour ago

Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

Woman
ಪ್ರಮುಖ ಸುದ್ದಿ2 hours ago

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಧೋನಿ ಡಕ್​ಔಟ್ ಆಗುವಾಗ ಜೋರಾಗಿ ನಕ್ಕ ಪ್ರೀತಿ ಜಿಂಟಾ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ37 mins ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 hour ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ24 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌