ಬ್ರಿಟನ್‌ ಪ್ರಧಾನಿ ಚುನಾವಣೆಯ ನಾಲ್ಕನೇ ರೌಂಡ್‌ನಲ್ಲೂ ರಿಷಿ ಸುನಕ್ ಮುಂದು - Vistara News

ಪ್ರಮುಖ ಸುದ್ದಿ

ಬ್ರಿಟನ್‌ ಪ್ರಧಾನಿ ಚುನಾವಣೆಯ ನಾಲ್ಕನೇ ರೌಂಡ್‌ನಲ್ಲೂ ರಿಷಿ ಸುನಕ್ ಮುಂದು

ಬ್ರಿಟನ್‌ ಪ್ರಧಾನಿಯಾಗುವತ್ತ ರಿಷಿ ಸುನಕ್ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ಮೂವರು ಪ್ರತಿಸ್ಪರ್ಧಿಗಳ ಮುಂದೆ ಮುನ್ನಡೆ ಸಾಧಿಸಿದ್ದಾರೆ.

VISTARANEWS.COM


on

rishi sunak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಬ್ರಿಟನ್‌ ಪ್ರಧಾನಿ ಪದವಿಗೆ ಕನ್ಸರ್ವೇಟಿವ್‌ ಪಕ್ಷದ ಹುದ್ದರಿಗಳ ನಡುವೆ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳವಾರ ನಡೆದ ನಾಲ್ಕನೇ ಸುತ್ತಿನ ಮತದಾನದಲ್ಲೂ ರಿಷಿ ಸುನಕ್‌ ಮುನ್ನಡೆ ಸಾಧಿಸಿದ್ದಾರೆ.

118 ಮತಗಳೊಂದಿಗೆ ರಿಷಿ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮುನ್ನಡೆ ದಾಖಲಿಸಿದರು. ಕಳೆದ ವಾರ ವೋಟಿಂಗ್‌ ಆರಂಭವಾದ ಬಳಿಕ ಪ್ರತಿಯೊಂದು ಹಂತದಲ್ಲೂ ರಿಷಿ ಮುಂದಿದ್ದಾರೆ. ಮಾಜಿ ರಕ್ಷಣಾ ಸಚಿವೆ ಪೆನ್ನಿ ಮೋರ್ಡಾಂಟ್‌, ಮಾಜಿ ವಿದೇಶಾಂಗ ಸಚಿವೆ ಲಿಜ್‌ ಟ್ರಸ್‌ ಹಾಗೂ ಶಾಸಕಿ ಕೆಮಿ ಬಡೆನೋಚ್‌ ಅವರು ರಿಷಿಗಿಂತ ಹಿಂದಿದ್ದಾರೆ. ಮೂವರೂ ಕ್ರಮವಾಗಿ 92, 86, 59 ಮತಗಳನ್ನು ಗಳಿಸಿದ್ದಾರೆ.

ಐದನೇ ಸುತ್ತಿನ ಮತದಾನ ಬುಧವಾರ ನಡೆಯಲಿದೆ. ಈ ರೌಂಡ್‌ನಲ್ಲಿ ಬಡೆನೋಚ್‌ ಹೊರಹೋಗಲಿದ್ದು, ಇತರ ಇಬ್ಬರು ರಿಷಿಗೆ ಸ್ಪರ್ಧೆ ನೀಡಲಿದ್ದಾರೆ. ಆರನೇ ಸುತ್ತಿನ ಮತದಾನದ ಬಳಿಕ ಇಬ್ಬರು ಸ್ಪರ್ಧಿಗಳು ಉಳಿಯುತ್ತಾರೆ. ಆ ಇಬ್ಬರು ಸ್ಪರ್ಧಿಗಳು ಟೋರಿ ಪಕ್ಷದ 1,18,000 ಸದಸ್ಯರ ಮುಂದೆ ಸ್ಪರ್ಧೆಗೆ ಇಳಿಯಲಿದ್ದಾರೆ. ಸೆಪ್ಟೆಂಬರ್‌ 5ರಂದು ಅಂತಿಮ ಮತದಾನ ನಡೆದು ಫಲಿತಾಂಶ ಗೊತ್ತಾಗಲಿದೆ.

ಈ ನಡುವೆ ಮಾಜಿ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು, ತಾವು ಪ್ರಧಾನಿ ಪಟ್ಟ ತ್ಯಜಿಸುವುದನ್ನು ಅನಿವಾರ್ಯವಾಗಿಸಿದ ರಿಷಿ ಸುನಕ್‌ ವಿರುದ್ಧ ಪ್ರಚಾರದಲ್ಲಿ ನಿರತರಾಗಿದ್ದಾರೆ.

ರಿಷಿ ಸುನಕ್‌ ಅವರು ಜನಪ್ರತಿನಿಧಿಗಳ ನಡುವೆ ಹೆಚ್ಚಿನ ಮತಗಳನ್ನು ಗಳಿಸಲು ಶಕ್ತರಾಗಿದ್ದರೂ, ಪಕ್ಷದ ಸರ್ವ ಸದಸ್ಯರ ಚುನಾವಣೆಯಲ್ಲಿ ಸೋಲಲಿದ್ದಾರೆ ಎಂದು ಒಂದು ಸಮೀಕ್ಷೆ ಹೇಳಿದೆ. ಪಕ್ಷದ ಒಟ್ಟಾರೆ ಸದಸ್ಯರಲ್ಲಿ ಹೆಚ್ಚಿನವರು ರಿಷಿ ವಿರುದ್ಧ ಅಭಿಪ್ರಾಯ ಹೊಂದಿದ್ದು, ಅಂತಿಮ ಮತದಾನದಲ್ಲಿ ಅವರ ವಿರುದ್ಧ ಫಲಿತಾಂಶ ಬರಲಿದೆ ಎಂದು YouGov ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ರಿಷಿ ಸುನಕ್‌ರನ್ನು ಪ್ರಧಾನಿಯಾಗಿ ಆರಿಸಲೇಬೇಡಿ: ಬೋರಿಸ್‌ ಜಾನ್ಸನ್‌ ಪ್ರಚಾರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Prajwal Revanna Case: ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

VISTARANEWS.COM


on

Prajwal revanna case
Koo

ಬೆಂಗಳೂರು: ಇಂದು ಹಾಸನ (Hassan Ex MP) ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ (Prajwal Revanna Case) ಅವರ ವಿರುದ್ಧದ ಒಂದು ಅತ್ಯಾಚಾರ ಪ್ರಕರಣದಲ್ಲಿ (physical Abuse) ಪೊಲೀಸ್‌ ಕಸ್ಟಡಿ (Police Custody) ಮುಕ್ತಾಯವಾಗುತ್ತಿದ್ದು, ಕೋರ್ಟ್‌ಗೆ (court) ಹಾಜರುಪಡಿಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಅವರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ (SIT) ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ಎರಡೆರಡು ಬಾರಿ ಪ್ರಜ್ವಲ್‌ ರೇವಣ್ಣ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದಾರೆ. ಕೋರ್ಟ್‌ಗೆ ಮನವರಿಕೆ ಮಾಡಿ, ಪ್ರಜ್ವಲ್ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಎಸ್ಐಟಿ ಮುಗಿಸಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣವಾಗಿದೆ.

ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣನನ್ನು ಕೋರ್ಟ್‌ಗೆ ಎಸ್ಐಟಿ ಹಾಜರುಪಡಿಸಲಿದೆ. ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

ಪ್ರತಿಯೊಂದು ಪ್ರಕರಣದಲ್ಲಿಯೂ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಒಟ್ಟು ಮೂರು ಪ್ರಕರಣಗಳಿದ್ದು, ಒಂದು ಪ್ರಕರಣ ಮುಗಿದ ಬೆನ್ನಲ್ಲೆ ಮತ್ತೊಂದು ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ‌ ವಿರುದ್ಧ ಪ್ರಬಲ ಸಾಕ್ಷ್ಯಗಳ ಸಂಗ್ರಹಕ್ಕೆ ಎಸ್ಐಟಿ ಹರಸಾಹಸ ಪಡುತ್ತಿದೆಯಾದರೂ, ಅದು ಸಾಧ್ಯವಾಗಿಲ್ಲ. ಎಸ್‌ಐಟಿ ವಶದಲ್ಲಿರುವ ಅಶ್ಲೀಲ ವಿಡಿಯೋಗಳಲ್ಲಿ ಪ್ರಜ್ವಲ್‌ ಮುಖ ಕಾಣಿಸುತ್ತಿಲ್ಲ. ಹಲವಾರು ಮಹಿಳೆಯರ ಜೊತೆಗಿನ ಲೈಂಗಿಕ ಕ್ರಿಯೆಗಳು ದಾಖಲಾಗಿವೆಯಾದರೂ, ಅವರಲ್ಲಿ ಯಾರೂ ದೂರು ನೀಡಿಲ್ಲ. ಪ್ರಜ್ವಲ್‌ ಮನೆಯಲ್ಲಿ ನಡೆದ ಮಹಜರು ವೇಲೆ ವಶಪಡಿಸಿಕೊಳ್ಳಲಾದ ವಸ್ತುಗಳಲ್ಲಿ ಸಂಸದರ ವಿರುದ್ಧ ನಿಲ್ಲಬಹುದಾದ ಮಹತ್ವದ ಸಾಕ್ಷಿಗಳು ದೊರೆತಿಲ್ಲ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆದಿದ್ದಾರೆ. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Continue Reading

ಪ್ರಮುಖ ಸುದ್ದಿ

Actor Darshan: ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

Actor Darshan: ನಟ ಯಶಸ್‌ ಸೂರ್ಯ ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು.

VISTARANEWS.COM


on

actor darshan yashas surya
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkanna) ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್‌ ವಿಚಾರಣೆ ನೋಟೀಸ್‌ (police notice) ಹೋಗಿದೆ.

ನಟ ಯಶಸ್‌ ಸೂರ್ಯ (Yashas Surya) ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್‌ಗೂ ನೋಟೀಸ್‌ ನೀಡಲಾಗಿದೆ.

ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್‌ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್‌ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್‌, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.

actor darshan yashas surya

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌

ನಟ ದರ್ಶನ್ (Actor Darshan) ಜೊತೆ ಕೊಲೆಯ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸ್‌ ತನಿಖೆಯ ಉರುಳು ಸುತ್ತಿಕೊಂಡಿದ್ದು, ನಿನ್ನೆ ಮೂರು ಗಂಟೆಗಳ ಕಾಲ ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ.

“ಇಬ್ಬರೂ ಪಾರ್ಟಿ ಮುಗಿಸಿ ಒಟ್ಟಿಗೆ ಪಬ್‌ನಿಂದ ಹೋದೆವು ಎಂದು ಚಿಕ್ಕಣ್ಣ ಹೇಳಿದ್ದಾರೆ. 8ನೇ ತಾರೀಕು ಆರ್‌ಆರ್ ನಗರದ ಸ್ಟೋನಿ ಬ್ರೋಕ್ ಪಬ್‌ಗೆ ನಾನು ಬಂದಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಬಂದಿದ್ದೆ. ದರ್ಶನ್ ಮತ್ತು ನಾನು ಒಂದೇ ಟೇಬಲ್ ನಲ್ಲಿ ಪಾರ್ಟಿ ಮಾಡಿದೆವು. ಸುಮಾರು 4:30ರ ಹೊತ್ತಿಗೆ ಅವರು ಹೊರಟರು. ಅವರ ಜೊತೆಗೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ‌ ಮನೆಗೆ ಹೋದೆ, ದರ್ಶನ್ ಎಲ್ಲಿಗೆ ಹೋದ್ರೋ ನನಗೆ ಗೊತ್ತಿಲ್ಲ” ಎಂದು ಚಿಕ್ಕಣ್ಣ ಹೇಳಿದ್ದಾರೆ.

ʼನಾವು ಸೇರಿದ್ದು ಸಿನಿಮಾ ವಿಚಾರ ಮಾತಾನಾಡೋಕೆ. ಅದನ್ನಷ್ಟೇ ಮಾತಾಡಿ ಅಲ್ಲಿಂದ ಹೊರಟೆʼ ಎಂದು ಚಿಕ್ಕಣ್ಣ ತಿಳಿಸಿದ್ದಾರೆ. ವಕೀಲರ ಜೊತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ ಅವರ ಬಳಿ ಪೊಲೀಸರು ನೂರಾರು ಪ್ರಶ್ನೆಗಳನ್ನು ಹಾಕಿ ವಿಷಯ ಸಂಗ್ರಹಿಸಿದರು. 1.30ರಿಂದ 4.30ರವರೆಗೆ ಏನೆಲ್ಲಾ ಆಯ್ತು? ಮತ್ತೋರ್ವ ನಟ ಹಾಗೂ ನಿರ್ಮಾಪಕ ಇದ್ರಾ? ಯಾವ ಸಿನಿಮಾ ವಿಚಾರಕ್ಕೆ ಮಾತು ಕತೆ ನಡೀತಿತ್ತು? ಬರೀ ಸಿನಿಮಾ‌ ವಿಚಾರವಾ ಅಥವಾ ಬೇರೆ ಏನಾದ್ರೂ ಮಾತು ಕತೆ ನಡೆದಿತ್ತಾ? ಅವತ್ತು ದರ್ಶನ್ ವರ್ತನೆ ಹೇಗಿತ್ತು? ಪಾರ್ಟಿ ವೇಳೆ ದರ್ಶನ್‌ಗೆ ಕರೆಗಳು ಬರ್ತಿದ್ವಾ?ರೇಣುಕಾಸ್ವಾಮಿ ಬಗ್ಗೆ ಅವತ್ತು ಚರ್ಚೆ ಏನಾದ್ರು ಆಗಿತ್ತಾ? ಹೀಗೆ ಹಲವು ವಿಚಾರಗಳ ಬಗ್ಗೆ ಚಿಕ್ಕಣ್ಣನನ್ನು ಪ್ರಶ್ನೆ ಮಾಡಲಾಗಿದೆ.

ಪೊಲೀಸ್‌ ವಿಚಾರಣೆ ಬಳಿಕ ಹೊರಗೆ ಬಂದ ಚಿಕ್ಕಣ್ಣ, “ಇವತ್ತು ಪೊಲೀಸರು ವಿಚಾರಣೆಗೆ ಕರೆದಿದ್ರು, ಹೋಗಿದ್ದೆ. ಅವತ್ತು ಊಟಕ್ಕೆ ಹೋಗಿದ್ದೆ ಅದನ್ನು ಹೇಳಿದೆ. ತನಿಖೆಯಲ್ಲಿರುವ ಕಾರಣ ಬೇರೆ ಏನೂ ಹೇಳುವುದಕ್ಕೆ ಆಗದು. ಅವರು ಕೇಳಿದ್ದಕ್ಕೆ ಉತ್ತರ ಕೊಟ್ಟಿದೀನಿ” ಎಂದು ತಿಳಿಸಿದರು.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading

Latest

Viral News: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

Viral News: ಆಹಾರವನ್ನು ಅನ್ನಪೂರ್ಣೆ ಎಂದು ಕಣ್ಣಿಗೊತ್ತಿ ಸೇವಿಸುವ ನಂಬಿಕೆಯುಳ್ಳ ಈ ದೇಶದಲ್ಲಿ ಇಂದು ತಿನ್ನುವ ಆಹಾರವನ್ನು ಅನುಮಾನದಿಂದ ನೋಡುವ ಕಾಲ ಬಂದಿದೆ. ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ.

VISTARANEWS.COM


on

Viral News
Koo

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಇದನ್ನೂ ಓದಿ: Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಪ್ರಮುಖ ಸುದ್ದಿ

Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Actor Darshan: ಅವತ್ತು ದರ್ಶನ್ ವರ್ತನೆ ಹೇಗಿತ್ತು? ಪಾರ್ಟಿ ವೇಳೆ ದರ್ಶನ್‌ಗೆ ಕರೆಗಳು ಬರ್ತಿದ್ವಾ?ರೇಣುಕಾಸ್ವಾಮಿ ಬಗ್ಗೆ ಅವತ್ತು ಚರ್ಚೆ ಏನಾದ್ರು ಆಗಿತ್ತಾ? ಹೀಗೆ ಹಲವು ವಿಚಾರಗಳ ಬಗ್ಗೆ ಚಿಕ್ಕಣ್ಣನನ್ನು ಪ್ರಶ್ನೆ ಮಾಡಲಾಗಿದೆ.

VISTARANEWS.COM


on

actor darshan Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkana) ಅವರನ್ನು ಪೊಲೀಸ್‌ ತನಿಖೆಯ (police investigation) ಉರುಳು ಸುತ್ತಿಕೊಂಡಿದ್ದು, ನಿನ್ನೆ ಮೂರು ಗಂಟೆಗಳ ಕಾಲ ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸಿದೆ.

ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. “ಇಬ್ಬರೂ ಪಾರ್ಟಿ ಮುಗಿಸಿ ಒಟ್ಟಿಗೆ ಪಬ್‌ನಿಂದ ಹೋದೆವು ಎಂದು ಚಿಕ್ಕಣ್ಣ ಹೇಳಿದ್ದಾರೆ. 8ನೇ ತಾರೀಕು ಆರ್‌ಆರ್ ನಗರದ ಸ್ಟೋನಿ ಬ್ರೋಕ್ ಪಬ್‌ಗೆ ನಾನು ಬಂದಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಬಂದಿದ್ದೆ. ದರ್ಶನ್ ಮತ್ತು ನಾನು ಒಂದೇ ಟೇಬಲ್ ನಲ್ಲಿ ಪಾರ್ಟಿ ಮಾಡಿದೆವು. ಸುಮಾರು 4:30ರ ಹೊತ್ತಿಗೆ ಅವರು ಹೊರಟರು. ಅವರ ಜೊತೆಗೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ‌ ಮನೆಗೆ ಹೋದೆ, ದರ್ಶನ್ ಎಲ್ಲಿಗೆ ಹೋದ್ರೋ ನನಗೆ ಗೊತ್ತಿಲ್ಲ” ಎಂದು ಚಿಕ್ಕಣ್ಣ ಹೇಳಿದ್ದಾರೆ.

ʼನಾವು ಸೇರಿದ್ದು ಸಿನಿಮಾ ವಿಚಾರ ಮಾತಾನಾಡೋಕೆ. ಅದನ್ನಷ್ಟೇ ಮಾತಾಡಿ ಅಲ್ಲಿಂದ ಹೊರಟೆʼ ಎಂದು ಚಿಕ್ಕಣ್ಣ ತಿಳಿಸಿದ್ದಾರೆ. ವಕೀಲರ ಜೊತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ ಅವರ ಬಳಿ ಪೊಲೀಸರು ನೂರಾರು ಪ್ರಶ್ನೆಗಳನ್ನು ಹಾಕಿ ವಿಷಯ ಸಂಗ್ರಹಿಸಿದರು. 1.30ರಿಂದ 4.30ರವರೆಗೆ ಏನೆಲ್ಲಾ ಆಯ್ತು? ಮತ್ತೋರ್ವ ನಟ ಹಾಗೂ ನಿರ್ಮಾಪಕ ಇದ್ರಾ? ಯಾವ ಸಿನಿಮಾ ವಿಚಾರಕ್ಕೆ ಮಾತು ಕತೆ ನಡೀತಿತ್ತು? ಬರೀ ಸಿನಿಮಾ‌ ವಿಚಾರವಾ ಅಥವಾ ಬೇರೆ ಏನಾದ್ರೂ ಮಾತು ಕತೆ ನಡೆದಿತ್ತಾ? ಅವತ್ತು ದರ್ಶನ್ ವರ್ತನೆ ಹೇಗಿತ್ತು? ಪಾರ್ಟಿ ವೇಳೆ ದರ್ಶನ್‌ಗೆ ಕರೆಗಳು ಬರ್ತಿದ್ವಾ?ರೇಣುಕಾಸ್ವಾಮಿ ಬಗ್ಗೆ ಅವತ್ತು ಚರ್ಚೆ ಏನಾದ್ರು ಆಗಿತ್ತಾ? ಹೀಗೆ ಹಲವು ವಿಚಾರಗಳ ಬಗ್ಗೆ ಚಿಕ್ಕಣ್ಣನನ್ನು ಪ್ರಶ್ನೆ ಮಾಡಲಾಗಿದೆ.

ಪೊಲೀಸ್‌ ವಿಚಾರಣೆ ಬಳಿಕ ಹೊರಗೆ ಬಂದ ಚಿಕ್ಕಣ್ಣ, “ಇವತ್ತು ಪೊಲೀಸರು ವಿಚಾರಣೆಗೆ ಕರೆದಿದ್ರು, ಹೋಗಿದ್ದೆ. ಅವತ್ತು ಊಟಕ್ಕೆ ಹೋಗಿದ್ದೆ ಅದನ್ನು ಹೇಳಿದೆ. ತನಿಖೆಯಲ್ಲಿರುವ ಕಾರಣ ಬೇರೆ ಏನೂ ಹೇಳುವುದಕ್ಕೆ ಆಗದು. ಅವರು ಕೇಳಿದ್ದಕ್ಕೆ ಉತ್ತರ ಕೊಟ್ಟಿದೀನಿ” ಎಂದು ತಿಳಿಸಿದರು.

ಆ ಭಯಾನಕ ಶೆಡ್!‌

ರೇಣುಕಾಸ್ವಾಮಿ ಕೊಲೆಯಾದ ಪಟ್ಟಣಗೆರೆಯ ಆ ಶೆಡ್ ಬಗ್ಗೆ ಇದೀಗ ಇನ್ನಿತರ ಕೆಲವು ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಇಲ್ಲಿ ಅದೆಷ್ಟೋ ಕನ್ನಡ ಚಿತ್ರ ನಿರ್ಮಾಪಕರು ಕೂಡ ಗೂಸಾ ತಿಂದಿದ್ದಾರೆ ಎಂಬುದು ಬಯಲಾಗಿದೆ. ತನಗೆ ಆಗದವರು, ತನ್ನ ವಿರೋಧಿಗಳು ಹಾಗೂ ಪೇಮೆಂಟ್‌ ಮಾಡದ ನಿರ್ಮಾಪಕರನ್ನು ಅಟ್ಯಾಕ್ ಮಾಡಲು ದರ್ಶನ್‌ ಬಳಸುತ್ತಿದ್ದ ಜಾಗವೇ ಈ ಶೆಡ್ ಎನ್ನಲಾಗಿದೆ.

ನಟ ದರ್ಶನ್ ಎಷ್ಟೋ ಮಂದಿಗೆ ಇಲ್ಲೇ ಹಲ್ಲೆ ಮಾಡಿ, 2ರಿಂದ 3 ದಿನಗಳ ಕಾಲ ಇಲ್ಲೇ ಇರಿಸಿಕೊಳ್ಳುತ್ತಿದ್ದ. ಕಳಿಸಿಕೊಡುವಾಗ ಬ್ಯಾಂಡೇಜ್ ಹಾಕಿಸಿ ಕೈಗೆ ಹಣ ಕೊಟ್ಟು ಕಳುಹಿಸುತ್ತಿದ್ದ ಎಂದು ಕೆಲವರು ಇದೀಗ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ದರ್ಶನ್‌ ಕಾರು ಇಲ್ಲಿಗೆ ಆಗಾಗ ಬಂದು ಹೋಗುತ್ತಿದ್ದುದನ್ನು ಕೆಲವು ಸ್ಥಳೀಯರು ಗಮನಿಸಿದ್ದಾರೆ. ದರ್ಶನ್‌ಗೆ ಇನ್ನೆಷ್ಟು ಕರಾಳ ಮುಖಗಳಿವೆ ಎಂದು ಪೊಲೀಸರೇ ಇದೀಗ ಬೆಚ್ಚಿ ಬೀಳುವಂತಾಗಿದೆ.

ಇದನ್ನೂ ಓದಿ: Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Continue Reading
Advertisement
Prajwal revanna case
ಪ್ರಮುಖ ಸುದ್ದಿ6 mins ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Team India Coach
ಕ್ರೀಡೆ17 mins ago

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

pattanagere shed actor darshan renuka swamy murder
ಕ್ರೈಂ41 mins ago

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Beer Side Effect
ಆರೋಗ್ಯ44 mins ago

Beer Side Effect: ಬಿಯರ್‌ ಕುಡಿದರೆ ತೂಕ ಹೆಚ್ಚುತ್ತದೆ ಎನ್ನುವುದು ನಿಜವೇ?

Nuclear Weapon
ದೇಶ49 mins ago

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Neeraj Chopra
ಕ್ರೀಡೆ55 mins ago

Neeraj Chopra: ಇಂದು ಪಾವೊ ನೂರ್ಮಿ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ

Euro 2024
ಕ್ರೀಡೆ1 hour ago

Euro 2024: ಉಕ್ರೇನ್​ಗೆ ಆಘಾತವಿಕ್ಕಿದ ರೊಮೇನಿಯಾ; 3-0 ಗೋಲ್​ ಅಂತರದ ಗೆಲುವು

actor darshan yashas surya
ಪ್ರಮುಖ ಸುದ್ದಿ1 hour ago

Actor Darshan: ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

Leader of the Opposition
ರಾಜಕೀಯ2 hours ago

Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

Sonakshi Sinha
ಬಾಲಿವುಡ್2 hours ago

Sonakshi Sinha: ಮುಸ್ಲಿಂ ಹುಡುಗನ ಜತೆ ಮಗಳು ಸೋನಾಕ್ಷಿ ಮದುವೆ; ಶತ್ರುಘ್ನ ಸಿನ್ಹಾ ಮುನಿಸು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು21 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು22 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌