ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಾ? ಬಾಂಗ್ಲಾದೇಶ ಹೇಳಿದ್ದೇನು? - Vistara News

ವಿದೇಶ

ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಾ? ಬಾಂಗ್ಲಾದೇಶ ಹೇಳಿದ್ದೇನು?

Sheikh Hasina: ʼʼಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ಭಾರತ-ಬಾಂಗ್ಲಾದೇಶಗಳ ನಡುವಿನ ಸಂಬಂಧದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಮತ್ತು ಢಾಕಾ ಯಾವಾಗಲೂ ನವದೆಹಲಿಯೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತದೆʼʼ ಎಂದು ಬಾಂಗ್ಲಾದೇಶ ಸ್ಪಷ್ಟಪಡಿಸಿದೆ. ಅಲ್ಲಿನ ಮಧ್ಯಂತರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ತೌಹಿದ್ ಹುಸೇನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Sheikh Hasina
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಭಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, ಪ್ರತಿಭಟನಾಕಾರರ ರೊಚ್ಚಿಗೆ ಮಣಿದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್‌ ಹಸೀನಾ (Sheikh Hasina)  ಅಲ್ಲಿಂದ ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿ ನೊಬೆಲ್‌ ಶಾಂತಿ ಪುರಸ್ಕೃತ ಮೊಹಮ್ಮದ್‌ ಯೂನಸ್‌ (Muhammad Yunus) ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಈ ಮಧ್ಯೆ ಅಲ್ಲಿನ ಮಧ್ಯಂತರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ತೌಹಿದ್ ಹುಸೇನ್ (Md Touhid Hossain) ಮಹತ್ವದ ಹೇಳಿಕೆ ನೀಡಿ, ʼʼಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ಭಾರತ-ಬಾಂಗ್ಲಾದೇಶಗಳ ನಡುವಿನ ಸಂಬಂಧದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಮತ್ತು ಢಾಕಾ ಯಾವಾಗಲೂ ನವದೆಹಲಿಯೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತದೆʼʼ ಎಂದು ಸ್ಪಷ್ಟಪಡಿಸಿದ್ದಾರೆ.

ಹಸೀನಾ ಅವರ ಭಾರತ ವಾಸ್ತವ್ಯ ಮುಂದುವರಿದರೆ ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ʼʼಈ ಪ್ರಶ್ನೆ ಅಪ್ರಸ್ತುತ. ಯಾರಾದರೂ ಒಂದು ದೇಶದಲ್ಲಿ ವಾಸಿಸುತ್ತಿದ್ದರೆ ಅದು ಆ ದೇಶದೊಂದಿಗಿನ ಸಂಬಂಧಗಳ ಮೇಲೆ ಏಕೆ ಪರಿಣಾಮ ಬೀರಬೇಕು? ಈ ಆತಂಕಕ್ಕೆ ಯಾವುದೇ ಕಾರಣವಿಲ್ಲ. ದ್ವಿಪಕ್ಷೀಯ ಸಂಬಂಧಗಳು ಮುಖ್ಯʼʼ ಎಂದು ಅವರು ಒತ್ತಿ ಹೇಳಿದ್ದಾರೆ.

ʼʼಬಾಂಗ್ಲಾದೇಶ ಮತ್ತು ಭಾರತ ಪ್ರತ್ಯೇಕ ಹಿತಾಸಕ್ತಿಗಳನ್ನು ಹೊಂದಿದೆ. ಹೀಗಾಗಿ ಉಭಯ ದೇಶಗಳ ನಡುವಿನ ಸಂಬಂಧವು ಒಂದು ದೇಶದಲ್ಲಿನ ಒಬ್ಬ ವ್ಯಕ್ತಿಯ ಉಪಸ್ಥಿತಿಯಿಂದ ಪ್ರಭಾವಿತವಾಗಿಲ್ಲ. ನಾವು ಯಾವತ್ತೂ ಭಾರತದೊಂದಿಗೆ ಉತ್ತಮ ಸಂಬಂಧ ಕಾಪಾಡಲು ಯತ್ನಿಸುತ್ತೇವೆʼʼ ಎಂದು ಅವರು ವಿವರಿಸಿದ್ದಾರೆ.

ಇದಕ್ಕೂ ಮುನ್ನ ಅವರು ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಸೇರಿದಂತೆ ಢಾಕಾದಲ್ಲಿ ಬೀಡುಬಿಟ್ಟಿರುವ ರಾಜತಾಂತ್ರಿಕರಿಗೆ ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ವಿವರಿಸಿ ಎಲ್ಲರ ಬೆಂಬಲವನ್ನು ಕೋರಿದರು. “ಬಾಂಗ್ಲಾದೇಶವು ಹೊಸ ಭವಿಷ್ಯವನ್ನು ರೂಪಿಸಲು ಆರಂಭಿಸಿದೆ. ಈ ನಿರ್ಣಾಯಕ ಸಮಯದಲ್ಲಿ ಅಂತಾರಾಷ್ಟ್ರೀಯ ಸಮುದಾಯದಲ್ಲಿನ ನಮ್ಮ ಎಲ್ಲ ಸ್ನೇಹಿತರು ಮತ್ತು ಪಾಲುದಾರರು ಮಧ್ಯಂತರ ಸರ್ಕಾರ ಮತ್ತು ನಮ್ಮ ಜನರಿಗೆ ಬೆಂಬಲ ನೀಡುವುದನ್ನು ಮುಂದುವರಿಸುತ್ತಾರೆ ಎನ್ನುವ ವಿಶ್ವಾಸವಿದೆʼʼ ಎಂದು ಹುಸೇನ್ ರಾಜತಾಂತ್ರಿಕರಿಗೆ ತಿಳಿಸಿದ್ದರು.

ಬಾಂಗ್ಲಾದೇಶವು ಇತರ ದೇಶಗಳೊಂದಿಗೆ ಮಾಡಿದ ಎಲ್ಲ ಒಪ್ಪಂದಗಳನ್ನು ಮುಂದುವರಿಸಲು ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ. ಇದೇ ವೇಳೆ ಅವರು ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿ, ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳಲ್ಲಿ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ. ʼʼಅದಾಗ್ಯೂ ನಮ್ಮ ಧೈರ್ಯಶಾಲಿ ವಿದ್ಯಾರ್ಥಿಗಳ ನೇತೃತ್ವದ ಸಾಮೂಹಿಕ ದಂಗೆಯಿಂದ ಬಾಂಗ್ಲಾದೇಶವು ಕಳೆದ ವಾರ ಎರಡನೇ ವಿಮೋಚನೆ ಪಡೆದುಕೊಂಡಿದೆʼʼ ಎಂದು ಬಣ್ಣಿಸಿದ್ದಾರೆ.

ದೇಶಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಪರಿಸ್ಥಿತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಮಧ್ಯಂತರ ಸರ್ಕಾರ ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿದೆ ಹುಸೇನ್ ತಿಳಿಸಿದ್ದಾರೆ.

ಇದನ್ನೂ ಓದಿ: Muhammad Yunus: ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್‌ ಯೂನಸ್‌ ಪದಗ್ರಹಣ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

 Emmanuel Macron : ಒಲಿಂಪಿಕ್ಸ್​ಗೆ ಆತಿಥ್ಯ ವಹಿಸುವ ಭಾರತದ ಉತ್ಸಾಹಕ್ಕೆ ಬೆಂಬಲ ನೀಡಿದ ಫ್ರಾನ್ಸ್​ ಪ್ರಧಾನಿ ಎಮ್ಯಾನುಯೆಲ್ ಮ್ಯಾಕ್ರೋನ್

Emmanuel Macron : ಭಾರತ ಮತ್ತು ಈಜಿಪ್ಟ್ ಎರಡೂ ಈ ಹಿಂದೆ ಒಲಿಂಪಿಕ್ಸ್ ಅನ್ನು ಆಯೋಜಿಸಿಲ್ಲ/ ಎರಡೂ ದೇಶಗಳು ತಮ್ಮ ಕ್ರೀಡಾ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವುದರಿಂದ ಇದನ್ನು ಆದ್ಯತಾ ಕ್ರಮವೆಂದು ಲೆಕ್ಕಹಾಕಿದೆ. ಒಲಿಂಪಿಕ್ಸ್ ಆತಿಥ್ಯ ವಹಿಸುವುದು ತೀವ್ರ ಸ್ಪರ್ಧೆಯಾಗಿದೆ ಎಂದು ಒಪ್ಪಿಕೊಂಡ ಅವರು, ಭಾರತವು ತನ್ನ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದರು. 2024ರ ಒಲಿಂಪಿಕ್ಸ್​ಗೆ ಬಿಡ್ ಮಾಡುವಾಗ ಅಮೆರಿಕದೊಂದಿಗಿನ ಸ್ಪರ್ಧೆಯನ್ನು ಅವರು ನೆನಪಿಸಿಕೊಂಡರು.

VISTARANEWS.COM


on

Emmanuel Macron
Koo

ಬೆಂಗಳೂರು: ಒಲಿಂಪಿಕ್ ಕ್ರೀಡಾಕೂಟದ ಆತಿಥ್ಯ ವಹಿಸುವ ಭಾರತದ ಸಾಮರ್ಥ್ಯದ ಬಗ್ಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ನಂಬಿಕೆ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಜಾಗತಿಕ ಕ್ರೀಡಾಕೂಟ ಆಯೋಜಿಸುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ. 2036 ರಲ್ಲಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಕ್ರೀಡಾಕೂಟದ ಆತಿಥ್ಯ ವಹಿಸುವುದಕ್ಕಾಗಿ ಭಾರತ ಯತ್ನಿಸುತ್ತಿದೆ. ಈ ನಡುವೆ ಜಿಯೋ ಸಿನೆಮಾಗೆ ನೀಡಿದ ಸಂದರ್ಶನದಲ್ಲಿ, ಮ್ಯಾಕ್ರನ್ ಭಾರತದ ಸಾಮರ್ಥ್ಯದ ಬಗ್ಗೆ ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ 2026ರ ಒಲಿಂಪಿಕ್ಸ್​​ ಭಾರತ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ದೇಶಗಳು ಬಿಡ್ ಸಲ್ಲಿಸಿವೆ.

ಭಾರತ ಮತ್ತು ಈಜಿಪ್ಟ್ ಎರಡೂ ಈ ಹಿಂದೆ ಒಲಿಂಪಿಕ್ಸ್ ಅನ್ನು ಆಯೋಜಿಸಿಲ್ಲ. ಎರಡೂ ದೇಶಗಳು ತಮ್ಮ ಕ್ರೀಡಾ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವುದರಿಂದ ಇದನ್ನು ಆದ್ಯತಾ ಕ್ರಮವೆಂದು ಲೆಕ್ಕಹಾಕಿದೆ. ಒಲಿಂಪಿಕ್ಸ್ ಆತಿಥ್ಯ ವಹಿಸುವುದು ತೀವ್ರ ಸ್ಪರ್ಧೆಯಾಗಿದೆ ಎಂದು ಒಪ್ಪಿಕೊಂಡ ಅವರು, ಭಾರತವು ತನ್ನ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದರು. 2024ರ ಒಲಿಂಪಿಕ್ಸ್​ಗೆ ಬಿಡ್ ಮಾಡುವಾಗ ಅಮೆರಿಕದೊಂದಿಗಿನ ಸ್ಪರ್ಧೆಯನ್ನು ಅವರು ನೆನಪಿಸಿಕೊಂಡರು.

ನಾನು ನಿಮ್ಮ ದೇಶ ಮತ್ತು ನಿಮ್ಮ ದೇಶದ ಭವಿಷ್ಯದ ಬಗ್ಗೆ ಬಲವಾದ ನಂಬಿಕೆ ಹೊಂದಿದ್ದೇನೆ. ನಿಮಗೆ ಒಲಿಂಪಿಕ್​ನಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವಿದೆ. ಇದು ತೀವ್ರ ಸ್ಪರ್ಧೆ ವಿಚಾರ ಎಂದು ನಾನು ಭಾವಿಸುತ್ತೇನೆ. ಆ ಸಂಗತಿಯನ್ನು ಕಡಿಮೆ ಅಂದಾಜು ಮಾಡಬಾರದು. ಏಳು ವರ್ಷಗಳ ಹಿಂದೆ ನಾವು ಲೌಸಾನ್ ಗೆ ಹೋದಾಗ, ನಾವು ಆ ಸಮಯದಲ್ಲಿ ಯುಎಸ್ ನೊಂದಿಗೆ ಸ್ಪರ್ಧಿಸಿದ್ದೆವು. ಬಿಡ್​ಗಾಗಿ ಸ್ಪರ್ಧಿಸುವುದು ಉತ್ತಮ ಸಿದ್ಧತೆ” ಎಂದು ಮಾರ್ಕಾನ್ ಜಿಯೋ ಸಿನೆಮಾಗೆ ತಿಳಿಸಿದರು.

ಒಲಿಂಪಿಕ್ಸ್​​ ತಯಾರಿ ನಡೆಸುವಲ್ಲಿ ಫ್ರಾನ್ಸ್ ಮತ್ತು ಭಾರತದ ನಡುವಿನ ಸಹಯೋಗದ ಪ್ರಯತ್ನಗಳನ್ನು ಮ್ಯಾಕ್ರನ್ ಎತ್ತಿ ತೋರಿಸಿದರು. ಸಿದ್ಧತೆಗಳಲ್ಲಿ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್​​ ತಾಂತ್ರಿಕ ತಂಡವನ್ನು ವಿನಂತಿಸಿದ್ದಾರೆ. ಭಾರತೀಯ ಅಧಿಕಾರಿಗಳು ತಮ್ಮ ಅನುಭವದಿಂದ ಕಲಿಯಲು ಫ್ರೆಂಚ್ ತಂಡಗಳನ್ನು ಭೇಟಿ ಮಾಡಿದ್ದಾರೆ. ಒಲಿಂಪಿಕ್ಸ್​ಗೆ ಭಾರತದ ಸಂಭಾವ್ಯ ಬಿಡ್ ಅನ್ನು ಬೆಂಬಲಿಸಲು ತಂತ್ರಜ್ಞಾನವನ್ನು ನೀಡುವುದಾಗಿ ಹೇಳಿದರು.

ಇದಲ್ಲದೆ, ಒಲಿಂಪಿಕ್ಸ್ ಅನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಕ್ರೀಡಾ ಸಂಸ್ಥೆಗಳು, ಸ್ಥಳೀಯ ಸಮುದಾಯಗಳು ಮತ್ತು ರಾಜ್ಯ ಸೇರಿದಂತೆ ವಿವಿಧ ಮಧ್ಯಸ್ಥಗಾರರ ನಡುವೆ ಏಕತೆಯ ಮಹತ್ವವನ್ನು ಮ್ಯಾಕ್ರನ್ ಒತ್ತಿ ಹೇಳಿದರು. ಕಳೆದ ಏಳು ವರ್ಷಗಳಲ್ಲಿ ಈ ಕಾರ್ಯಕ್ರಮದಲ್ಲಿ ಫ್ರಾನ್ಸ್ ನ ಗಮನಾರ್ಹ ಹೂಡಿಕೆ ಮಾಡಿತ್ತು. ಸಿದ್ಧತೆ ಪ್ರಕ್ರಿಯೆಯಲ್ಲಿ ಉದ್ಭವಿಸುವ ಸವಾಲುಗಳನ್ನು ನಿವಾರಿಸುವಲ್ಲಿ ಸ್ಥಿರತೆ ಮತ್ತು ಬದ್ಧತೆ ನಿರ್ಣಾಯ ಎಂದು ನುಡಿದರು.

ಇದನ್ನೂ ಓದಿ: Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

ನನ್ನ ಪ್ರಕಾರ, ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಲು ಪ್ರಮುಖವಾದುದು ಸಮಗ್ರತೆ. ಸ್ಥಳೀಯ ಸಮುದಾಯಗಳು, ಸ್ಥಳೀಯ ಕ್ಷೇತ್ರಗಳು ಮತ್ತು ನಿಸ್ಸಂಶಯವಾಗಿ ರಾಜ್ಯಗಳ ನೆರವು ಬೇಕು. ಭದ್ರತೆಯಿಂದ ಸಂಘಟನೆಯವರೆಗೆ ಎಲ್ಲವೂ ವಿಶೇಷ.” ಎಂದು ಮ್ಯಾಕ್ರನ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

S Jaishankar’s Maldives visit : ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದಾಗ ಮಾಲ್ಡೀವ್ಸ್​ ಗೊಂದಲಕ್ಕೆ ಬಿದ್ದು ತಪ್ಪು ಮಾಡಿತ್ತು. ಅಲ್ಲಿನ ರಾಜಕಾರಣಿಗಳು ಭಾರತ ವಿರೋಧಿ ಹೇಳಿಕೆ ನೀಡುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾದರು. ಹೀಗಾಗಿ ಅಲ್ಲಿಗೆ ಹೋಗುವ ಭಾರತೀಯ ಪ್ರವಾಸಿಗರ ಸಂಖ್ಯೆ ಇಳಿಯಿತು. ಹೀಗಾಗಿ ಆ ದೇಶಕ್ಕೆ ಚೀನಾದ ನೆರವು ಅಗತ್ಯವಾಯಿತು. ಆದರೆ, ಇದೀಗ ಪರಿಸ್ಥಿತಿ ಬದಲಾಗಿದೆ. ದ್ವೀಪ ರಾಷ್ಟ್ರವು ತನ್ನ ಭಾರತದೊಂದಿಗೆ ಶಾಂತಿ ಸ್ಥಾಪಿಸಲು ಸಿದ್ಧವಾಗಿದೆ.

VISTARANEWS.COM


on

S Jaishankar's Maldives visit
Koo

ಬೆಂಗಳೂರು : ಭಾರತ ವಿರುದ್ಧ ಮಾಲ್ಡೀವ್ಸ್​ ಹೊಂದಿರುವ ಅಸಮಾಧಾನವನ್ನು ತಮ್ಮ ಪರ ಬಳಸಿಕೊಳ್ಳಲು ಯತ್ನಿಸುತ್ತಿದ್ದ ಚೀನಾಕ್ಕೆ ಹಿನ್ನಡೆಯಾಗಿದೆ. ದ್ವೀಪಗಳ ರಾಷ್ಟ್ರ ಮಾಲ್ಡೀವ್ಸ್​​ ತನ್ನ 28 ದ್ವೀಪಗಳ ಅಭಿವೃದ್ಧಿ ಕಾರ್ಯವನ್ನು ಭಾರತಕ್ಕೆ ವಹಿಸಿ ಕೊಡಲು ತೀರ್ಮಾನಿಸಿರುವುದಾಗಿ ಇತ್ತೀಚಿನ ವರದಿ ತಿಳಿಸಿದೆ. ಇದು ವಿದೇಶಾಂಗ ಸಚಿವ ಎಸ್​. ಜೈಶಂಕರ್ ಅವರ ಭೇಟಿಯ (S Jaishankar’s Maldives visit) ಫಲವೂ ಹೌದು. ಅಂತೆಯೇ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ದೊಡ್ಡ ಮಟ್ಟದ ರಾಜತಾಂತ್ರಿಕ ಗೆಲುವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದಾಗ ಮಾಲ್ಡೀವ್ಸ್​ ಗೊಂದಲಕ್ಕೆ ಬಿದ್ದು ತಪ್ಪು ಮಾಡಿತ್ತು. ಅಲ್ಲಿನ ರಾಜಕಾರಣಿಗಳು ಭಾರತ ವಿರೋಧಿ ಹೇಳಿಕೆ ನೀಡುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾದರು. ಹೀಗಾಗಿ ಅಲ್ಲಿಗೆ ಹೋಗುವ ಭಾರತೀಯ ಪ್ರವಾಸಿಗರ ಸಂಖ್ಯೆ ಇಳಿಯಿತು. ಹೀಗಾಗಿ ಆ ದೇಶಕ್ಕೆ ಚೀನಾದ ನೆರವು ಅಗತ್ಯವಾಯಿತು. ಆದರೆ, ಇದೀಗ ಪರಿಸ್ಥಿತಿ ಬದಲಾಗಿದೆ. ದ್ವೀಪ ರಾಷ್ಟ್ರವು ತನ್ನ ಭಾರತದೊಂದಿಗೆ ಶಾಂತಿ ಸ್ಥಾಪಿಸಲು ಸಿದ್ಧವಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಭಾನುವಾರ ಮಾಲ್ಡೀವ್ಸ್ ಭೇಟಿ ಮುಕ್ತಾಯಗೊಳಿಸಿದ್ದರು. ರಾಜಧಾನಿ ಮಾಲೆಯಲ್ಲಿದ್ದಾಗ ಜೈಶಂಕರ್ ಹಲವಾರು ಒಡಂಬಡಿಕೆಗಳಿಗೆ ಸಹಿ ಹಾಕಿದ್ದರು. ಅಧಿಕ ಪರಿಣಾಮ ಬೀರುವ ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು. ಭಾರತದಲ್ಲಿ ಹೆಚ್ಚುವರಿ 1,000 ಮಾಲ್ಡೀವ್ಸ್ ನಾಗರಿಕ ಸೇವಕರ ಸಾಮರ್ಥ್ಯ ವರ್ಧನೆ ಮತ್ತು ಮಾಲ್ಡೀವ್ಸ್ ನಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಪರಿಚಯಿಸುವ ಒಪ್ಪಂದಗಳು ನಡೆಯಿತು.

ಭಾರತಕ್ಕೆ 28 ದ್ವೀಪಗಳ ಅಭಿವೃದ್ಧಿ ಭಾರತಕ್ಕೆ

ಮಾಲ್ಡೀವ್ಸ್​​ 28 ದ್ವೀಪಗಳಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೇ ಭಾರತದ ಲೈನ್ ಆಫ್ ಕ್ರೆಡಿಟ್ (ಎಲ್ಒಸಿ) ನೆರವಿನ ಯೋಜನೆಯನ್ನು ಅಧ್ಯಕ್ಷ ಮುಯಿಝು ಅವರ ಸಮ್ಮುಖದಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಮತ್ತು ವಿದೇಶಾಂಗ ಸಚಿವರು ಜಂಟಿಯಾಗಿ ಉದ್ಘಾಟಿಸಿದರು. ಮುಯಿಝು ಈಗ 28 ದ್ವೀಪಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಭಾರತಕ್ಕೆ ಅನುಮತಿ ನೀಡಿದ್ದಾರೆ.

ಇದನ್ನೂ ಓದಿ: Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

ಮಾಲ್ಡೀವ್ಸ್ ಗೆ ಬಜೆಟ್ ನೆರವು

ಜುಲೈ 23 ರಂದು ಮಂಡಿಸಲಾದ ಕೇಂದ್ರ ಬಜೆಟ್ 2024 ಹಿಂದಿನ ವರ್ಷಕ್ಕೆ ಹೋಲಿಸಿದರೆ 2024-25ರ ಆರ್ಥಿಕ ವರ್ಷದಲ್ಲಿ ದ್ವೀಪ ರಾಷ್ಟ್ರಕ್ಕೆ ಸಹಾಯದಲ್ಲಿ ಶೇಕಡಾ 48ರಷ್ಟು ಗಮನಾರ್ಹ ಕಡಿತ ಮಾಡಲಾಗಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಮಾಲ್ಡೀವ್ಸ್​ಗೆ 400 ಕೋಟಿ ರೂ.ಗಳನ್ನು “ಅನುದಾನ” ಎಂದು ನಿಗದಿಪಡಿಸಲಾಗಿದೆ. ಇದು ಕಳೆದ ವರ್ಷ ಒದಗಿಸಲಾದ 770 ಕೋಟಿ ರೂ.ಗಿಂತ ಗಣನೀಯ ಇಳಿಕೆ.

ಭಾರತವನ್ನು ಹೊಗಳಿದ ಮುಯಿಝು

ಮಾಲ್ಡೀವ್ಸ್​ ಅಧ್ಯಕ್ಷ ಮುಹಮ್ಮದ್ ಮುಯಿಝು ಅವರು ಭಾರತದ ನಿರಂತರ ಅಭಿವೃದ್ಧಿ ನೆರವನ್ನು ಶ್ಲಾಘಿಸಿದ್ದಾರೆ. ಭಾರತ-ಮಾಲ್ಡೀವ್ಸ್ ಸಂಬಂಧವನ್ನು ಮತ್ತಷ್ಟು ಆಳಗೊಳಿಸುವ ಬದ್ಧತೆ ಪುನರುಚ್ಚರಿಸಿದ್ದಾರೆ. ಜೈಶಂಕರ್ ಅವರ ಭೇಟಿಯ ಸಮಯದಲ್ಲಿ, ಮಾಲ್ಡೀವ್ಸ್ ಕಡೆಯವರು ಸಾಮಾಜಿಕ, ಮೂಲಸೌಕರ್ಯ ಮತ್ತು ಹಣಕಾಸು ಕ್ಷೇತ್ರಗಳು ಸೇರಿದಂತೆ ಮಾಲ್ಡೀವ್ಸ್​ ನೀಡಲಾಗಿರುವ ಒಟ್ಟಾರೆ ಅಭಿವೃದ್ಧಿಗೆ ಭಾರತದ ಬೆಂಬಲವನ್ನು ಕೊಂಡಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Faiz Hameed :

VISTARANEWS.COM


on

Faiz Hameed
Koo

ಇಸ್ಲಾಮಾಬಾದ್: ವಸತಿ ಯೋಜನೆ ಹಗರಣದಲ್ಲಿ ಸಿಲುಕಿಕೊಂಡಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾಗಿರುವ ಐಎಸ್​ಐ ಮಾಜಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ (Faiz Hameed) ಅವರನ್ನು ಪಾಕ್​ನ ಮಿಲಿಟರಿ ಬಂಧಿಸಿದೆ. ಪಾಕಿಸ್ತಾನ ಸೇನೆ ಸೋಮವಾರ ಈ ಮಾಹಿತಿಯನ್ನು ಪ್ರಕಟಿಸಿದೆ. ಪಾಕ್​ ಸುಪ್ರಿಂ ಕೋರ್ಟ್​​ ಆದೇಶಗಳಿಗೆ ಅನುಸಾರವಾಗಿ ಅವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಟಾಪ್ ಸಿಟಿ ವಸತಿ ಯೋಜನೆಯಲ್ಲಿ ಮಾಜಿ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಮಾಡಲಾದ ಆರೋಪಗಳ ನಿಖರತೆ ಪತ್ತೆ ಹಚ್ಚಲು ಪಾಕಿಸ್ತಾನ ಸೇನೆಯು ವಿವರ ವಿಚಾರಣೆ ಕೈಗೊಂಡಿದೆ ಎಂದು ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪರಿಣಾಮವಾಗಿ, ಪಾಕಿಸ್ತಾನ ಸೇನಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಪ್ರಾರಂಭಿಸಲಾಗಿದೆ” ಎಂದು ಅದು ಹೇಳಿದೆ.

ನಿವೃತ್ತಿಯ ನಂತರ ಪಾಕಿಸ್ತಾನ ಸೇನಾ ಕಾಯ್ದೆಯ ಉಲ್ಲಂಘನೆಯ ಅನೇಕ ಆರೋಪಗಳು ಅವರ ಮೇಲಿವೆ. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಮತ್ತು ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಮುಖ್ಯಸ್ಥರ ವಿರುದ್ಧ ಅಧಿಕಾರ ದುರುಪಯೋಗದ ಆರೋಪದ ಬಗ್ಗೆ ತನಿಖೆ ನಡೆಸಲು ಮಿಲಿಟರಿ ಏಪ್ರಿಲ್ನಲ್ಲಿ ವಿಚಾರಣಾ ಸಮಿತಿಯನ್ನು ರಚಿಸಿದೆ.

ಫೈಜ್ ಹಮೀದ್ ಯಾರು?

ಲೆಫ್ಟಿನೆಂಟ್ ಜನರಲ್ (ನಿವೃತ್ತ) ಹಮೀದ್ ಅವರು ಜೂನ್ 2019 ರಿಂದ ಅಕ್ಟೋಬರ್2021 ರವರೆಗೆ ಗುಪ್ತಚರ ಸಂಸ್ಥೆಯ ಮಹಾನಿರ್ದೇಶಕರಾಗಿ ನೇತೃತ್ವ ವಹಿಸಿದ್ದರು. ಈ ವೇಳೆ ಅವರು ಪ್ರಭಾವಿ ಅಧಿಕಾರಿ ಎಂದು ಪರಿಗಣಿಸಲಾಗಿತ್ತು.

ಹಮೀದ್ ಅವರನ್ನು ಆಗಿನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತರೆಂದು ಪರಿಗಣಿಸಲಾಗಿದೆ. ಅವರು ಅವರನ್ನು ಮುಂದಿನ ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನಾಗಿ ನೇಮಿಸಲು ಬಯಸಿದ್ದರು.

ಹಕ್ಕಾನಿ ನೆಟ್ವರ್ಕ್​​ನ​ ಸಿರಾಜುದ್ದೀನ್ ಹಕ್ಕಾನಿ ಮತ್ತು ಮುಲ್ಲಾ ಯಾಕೂಬ್ ನೇತೃತ್ವದ ತಾಲಿಬಾನ್ ನಡುವಿನ ಸಂಧಾನ ನಡೆಸುವ ಮೂಲಕ ಫೈಜ್ ಹಮೀದ್ ಹೆಸರುವಾಸಿಯಾಗಿದ್ದರು.

ಇದನ್ನೂ ಓದಿ: Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

ಅವರ ಅಧಿಕಾರಾವಧಿಯಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡಿತ್ತು. ಆಗಸ್ಟ್ 15, 2021 ರಂದು ಯುನೈಟೆಡ್ ಸ್ಟೇಟ್ಸ್ ನಿರ್ಗಮನವನ್ನು ಕಂಡಿತು. ಅವರ ನೇತೃತ್ವದ ಐಎಸ್ಐ ಅಧಿಕಾರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ತಾಲಿಬಾನ್​​ಗೆ ಬೆಂಬಲಿಸಿದೆ ಎಂದು ನಂಬಲಾಗಿದೆ.

ತಾಲಿಬಾನ್ ಅಧಿಕಾರ ವಹಿಸಿಕೊಂಡ ಒಂದು ತಿಂಗಳ ನಂತರ ಹಮೀದ್ ಕಾಬೂಲ್​ಗೆ ಭೇಟಿ ನೀಡಿದ್ದರು. ಅಮೆರಿಕ ತೆರಳಿದ ನಂತರ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದರು. ಐಎಸ್ಐನಲ್ಲಿ ಕೆಲಸ ಮಾಡುವ ಮೊದಲು, ಅವರು ರಾವಲ್ಪಿಂಡಿಯ ಜನರಲ್ ಆರ್ಮಿ ಪ್ರಧಾನ ಕಚೇರಿಯಲ್ಲಿ ಅಡ್ಜುಟಂಟ್ ಜನರಲ್ ಆಗಿ ಸೇವೆ ಸಲ್ಲಿಸಿದರು. ನಿವೃತ್ತರಾಗುವ ಮೊದಲು ಪೇಶಾವರ ಮತ್ತು ಬಹವಾಲ್ಪುರ ಘಟಕಗಳಲ್ಲಿ ಕಾರ್ಪ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ.

    Continue Reading

    ವಿದೇಶ

    Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

    Bangladesh Unrest: ಬಾಂಗ್ಲಾದೇಶದ ವಿಮೋಚನೆಯ ನೆನಪಿಗಾಗಿ ಸ್ಥಾಪಿಸಿದ್ದ, 1971ರ ಪಾಕ್ ಸೇನೆಯ ಶರಣಾಗತಿಯನ್ನು ಪ್ರತಿಬಿಂಬಿಸುವ ಪ್ರತಿಮೆಯನ್ನು ಭಾರತ ವಿರೋಧಿ ಗಲಭೆಕೋರರು ನಾಶಪಡಿಸಿದ್ದಾರೆ. ಈ ಫೋಟೊಗಳನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

    VISTARANEWS.COM


    on

    Bangladesh Unrest
    Koo

    ಢಾಕಾ: ಶೇಖ್ ಹಸೀನಾ (Sheikh Hasina) ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರವೂ ಬಾಂಗ್ಲಾದೇಶದಲ್ಲಿ ಗಲಭೆ ಮುಂದುವರಿದಿದೆ. ಈ ಮಧ್ಯೆ ಬಾಂಗ್ಲಾದೇಶದ ವಿಮೋಚನೆಯ ನೆನಪಿಗಾಗಿ ಸ್ಥಾಪಿಸಿದ್ದ, 1971ರ ಪಾಕ್ ಸೇನೆಯ ಶರಣಾಗತಿಯನ್ನು ಪ್ರತಿಬಿಂಬಿಸುವ ಪ್ರತಿಮೆಯನ್ನು ಭಾರತ ವಿರೋಧಿ ಗಲಭೆಕೋರರು ನಾಶಪಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ (Shashi Tharoor) ಹೇಳಿದ್ದಾರೆ. 1971ರ ಯುದ್ಧದ ನಂತರ ಪಾಕಿಸ್ತಾನ ಶರಣಾದ ಕ್ಷಣವನ್ನು ಚಿತ್ರಿಸುವ ಪ್ರತಿಮೆಗಳನ್ನು ಧ್ವಂಸಗೊಳಿಸಿರುವ ಫೋಟೊಗಳನ್ನು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ (Bangladesh Unrest).

    ʼʼಮುಜೀಬ್ ನಗರದ ಶಹೀದ್ ಸ್ಮಾರಕ ಸಂಕೀರ್ಣದಲ್ಲಿ 1971ರ ಐತಿಹಾಸಿಕ ಘಟನೆಯನ್ನು ಬಿಂಬಿಸುವ ಪ್ರತಿಮೆಗಳನ್ನು ಭಾರತ ವಿರೋಧಿ ದುಷ್ಕರ್ಮಿಗಳಿಂದ ನಾಶ ಪಡಿಸಿರುವುದನ್ನು ನೋಡಿ ದುಃಖವಾಗಿದೆ” ಎಂದು ತಿರುವನಂತಪುರಂನ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಬರೆದುಕೊಂಡಿದ್ದಾರೆ.

    ʼʼಬಾಂಗ್ಲಾದಲ್ಲಿ ಹಿಂದೂ ಮನೆಗಳ ಮೇಲೆ ದಾಳಿ ಮುಂದುವರಿದಿದೆ. ಈ ಮಧ್ಯೆ ಕೆಲವು ಮುಸ್ಲಿಂ ನಾಗರಿಕರು ಅಲ್ಪಸಂಖ್ಯಾತರ ಮನೆ, ಸಾಂಸ್ಕೃತಿಕ ಕೇಂದ್ರ ಮತ್ತು ಪೂಜಾ ಸ್ಥಳಗಳನ್ನು ರಕ್ಷಿಸುತ್ತಿದ್ದಾರೆ ಎಂಬ ವರದಿಯೂ ಬರುತ್ತಿದೆʼʼ ಎಂದು ಅವರು ಹೇಳಿದ್ದಾರೆ.

    1971ರಲ್ಲಿ ಏನಾಗಿತ್ತು?

    1971ರ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಸೇನೆ ವಿರುದ್ಧ ಹೋರಾಡಿ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಿತು. ಪಾಕಿಸ್ತಾನ ಸೇನೆಯ ಮೇಜರ್ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಭಾರತೀಯ ಸೇನೆ ಮತ್ತು ಬಾಂಗ್ಲಾದೇಶದ ಮುಕ್ತಿ ಬಾಹಿನಿಯ ಶರಣಾಗತಿ ಪತ್ರಕ್ಕೆ ಸಹಿ ಹಾಕಿರುವುದನ್ನು ಈ ಪ್ರತಿಮೆ ಚಿತ್ರಿಸಿದೆ. ಮೇಜರ್ ಜನರಲ್ ನಿಯಾಜಿ ತನ್ನ 93,000 ಸೈನಿಕರೊಂದಿಗೆ ಭಾರತದ ಪೂರ್ವ ಕಮಾಂಡ್‌ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಲೆಫ್ಟಿನೆಂಟ್ ಜನರಲ್ ಜಗಜಿತ್ ಸಿಂಗ್ ಅರೋರಾ ಅವರ ಮುಂದೆ ಶರಣಾದರು. ಇದು ಎರಡನೇ ಮಹಾಯುದ್ಧದ ನಂತರದ ಅತಿದೊಡ್ಡ ಮಿಲಿಟರಿ ಶರಣಾಗತಿ ಎನಿಸಿಕೊಂಡಿತ್ತು. ಈ ಘಟನೆಯನ್ನು ಸ್ಮರಿಸಲು ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.

    ಇದನ್ನೂ ಓದಿ: Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

    ಅಲ್ಪಸಂಖ್ಯಾತರ ಮೇಲೆ ದಾಳಿ

    ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಹಲವು ಮಂದಿ ತೊಂದರೆಗೆ ಒಳಗಾಗಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

    ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸಲಾಗಿದೆ. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

    Continue Reading
    Advertisement
    Viral Video
    Latest36 mins ago

    Viral Video: ಚೀನಾದಲ್ಲಿ ಬಹಿರಂಗವಾಗಿ ಮಾರಾಟವಾಗುತ್ತದೆ ನಾಯಿ ಮಾಂಸದ ಖಾದ್ಯ; ಭಾರತೀಯ ಹುಡುಗಿ ಮಾಡಿದ ವಿಡಿಯೊ ವೈರಲ್

    fraud case tumkur
    ಕ್ರೈಂ46 mins ago

    Fraud Case: ಅಸಲಿ ಮದುವೆ, ನಕಲಿ ಹೆಣ್ಣು! 3 ವರ್ಷದಲ್ಲಿ 5 ಮದುವೆಯಾಗಿ ವಂಚನೆ; ಮದುಮಗಳು ಮತ್ತು ಗ್ಯಾಂಗ್‌ ಆರೆಸ್ಟ್

    70th National Film Awards
    ಸಿನಿಮಾ54 mins ago

    70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

    Viral News
    ಕ್ರೀಡೆ58 mins ago

    Viral News: ಒಲಿಂಪಿಕ್ಸ್​ ಚಿನ್ನ ಗೆದ್ದ ಸಾಧಕನಿಗೆ ಎಮ್ಮೆ ಉಡುಗೊರೆ ಕೊಟ್ಟ ಮಾವ!

    raichur news misbehave
    ಕ್ರೈಂ1 hour ago

    Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

    Neeraj Chopra
    ಕ್ರೀಡೆ2 hours ago

    Neeraj Chopra: ಪ್ಯಾರಿಸ್‌ನಿಂದ ಜರ್ಮನಿಗೆ ತೆರಳಿದ ಚೋಪ್ರಾ; ಭಾರತಕ್ಕೆ ಮರಳುವುದು ವಿಳಂಬ

    Intermittent Fasting
    ಆರೋಗ್ಯ2 hours ago

    Intermittent Fasting: ಇಂಟರ್‌ ಮಿಟೆಂಟ್‌ ಫಾಸ್ಟಿಂಗ್‌ ಡಯಟ್‌ ಮಾಡುವವರೇ ಹುಷಾರ್! ಈ ಸಂಗತಿ ಗೊತ್ತಿರಲಿ

    Kolkata Doctor Murder Case
    ದೇಶ2 hours ago

    Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗ; ಶಾಕಿಂಗ್‌ ಸಂಗತಿ ಬಯಲು

    tungabhadra dam 19 crest gate
    ಪ್ರಮುಖ ಸುದ್ದಿ2 hours ago

    Tungabhadra Dam: ತುಂಗಭದ್ರಾ ಜಲಾಶಯದಿಂದ 15 ಟಿಎಂಸಿ ನೀರು ವ್ಯರ್ಥ; ಇಂದು ಸಿಎಂ ಸಿದ್ದರಾಮಯ್ಯ ಭೇಟಿ

    Namma Metro
    ಪ್ರಮುಖ ಸುದ್ದಿ2 hours ago

    Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ5 days ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ5 days ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ5 days ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು7 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ7 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ1 week ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ1 week ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌