ಗುರುದ್ವಾರಗಳಲ್ಲಿ ಗುಂಡಿನ ದಾಳಿ; 17 ಸಿಖ್ಖರನ್ನು ಬಂಧಿಸಿದ ಅಮೆರಿಕ ಪೊಲೀಸ್ - Vistara News

ವಿದೇಶ

ಗುರುದ್ವಾರಗಳಲ್ಲಿ ಗುಂಡಿನ ದಾಳಿ; 17 ಸಿಖ್ಖರನ್ನು ಬಂಧಿಸಿದ ಅಮೆರಿಕ ಪೊಲೀಸ್

Shooting at Gurudwar: ಕಳೆದ ತಿಂಗಳು ನಡೆದ ಎರಡು ಸಿಖ್ ಗುಂಪುಗಳ ನಡುವಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮೆರಿಕದ ಭದ್ರತಾ ಸಂಸ್ಥೆಗಳು 17 ಸಿಖ್ಖರನ್ನು ಬಂಧಿಸಿವೆ. ಗುರುದ್ವಾರಗಳಲ್ಲಿ ನಡೆದ ಗುಂಡಿನ ದಾಳಿಯಲ್ಲೂ ಪಾಲ್ಗೊಂಡಿದ್ದರು.

VISTARANEWS.COM


on

Shooting at Gurudwaras; 17 sikhs arrested by US agencies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್, ಅಮೆರಿಕ: ಎರಡು ಗುರುದ್ವಾರಗಳಲ್ಲಿ ಗುಂಡಿನ ದಾಳಿಗಳು ಸೇರಿದಂತೆ ಕ್ಯಾಲಿಫೋರ್ನಿಯಾದಲ್ಲಿ ತಿಂಗಳ ಹಿಂದೆ ನಡೆದಿದ್ದ ಸಿಖ್ ಗುಂಪುಗಳ ನಡುವಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 17 ಜನರನ್ನು ಬಂಧಿಸಲಾಗಿದೆ. ಈ ಪೈಕಿ ಬಹುತೇಕರು ಸಿಖ್ಖರಾಗಿದ್ದಾರೆ. ಬಂಧಿತರಿಂದ ಅತ್ಯಾಧುನಿಕ ಆಯುಧಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಮೆರಿಕದ ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ(Shooting at Gurdwara).

ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಸಕ್ರಿಯವಾಗಿರುವ ಈ ಅಪರಾಧಿಗಳ ಸಿಂಡಿಕೇಟ್ ಕುರಿತು ಬಹು ಭದ್ರತಾ ಸಂಸ್ಥೆಗಳು ತನಿಖೆಯನ್ನು ಕೈಗೊಂಡಿದ್ದವು. ಅನೇಕ ಹಿಂಸಾಚಾರ ಅಪರಾಧಗಳು ಮತ್ತು ಶೂಟಿಂಗ್ಸ್, ಐದು ಕೊಲೆ ಯತ್ನ ಪ್ರಕರಣಗಳಲ್ಲಿ ಈ ಗುಂಪುಗಳು ಭಾಗಿಯಾಗಿದ್ದವು ಎಂದು ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ರಾಬ್ ಬೋಂತಾ ಮತ್ತು ಯುಬಾ ಸಿಟಿ ಪೊಲೀಸ್ ಮುಖ್ಯಸ್ಥ ಬ್ರೈನ್ ಬೇಕರ್ ಅವರು ತಿಳಿಸಿದ್ದಾರೆ.

ಬಂಧಿತರು, 2022ರ ಆಗಸ್ಟ್ 27ರಂದು ಸ್ಟಾಕ್ಟಾನ್ ಗುರುದ್ವಾರದಲ್ಲಿ ನಡೆದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಅಲ್ಲದೇ, 2023ರ ಮಾರ್ಚ್ 23ರಂದು ಸಂಕ್ರಾಮೆಂಟೊ ಗುರುದ್ವಾರದಲ್ಲಿ ಸಂಭವಿಸಿದ ಗುಂಡಿನ ದಾಳಿಯಲ್ಲೂ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆ ವೇಳೆ, ಸಂಭಾವ್ಯ ಎರಡು ಗುಂಡಿನ ದಾಳಿಗಳನ್ನು ತಪ್ಪಿಸಿರುವುದಾಗಿ ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಯುಬಾ ಸಿಟಿಯಲ್ಲಿ 2018ರಲ್ಲಿ ನಡೆದ ವಾರ್ಷಿಕ ಸಿಖ್ ಮೆರವಣಿಗೆ ವೇಳೆ ಹಿಂಸಾಚಾರ ಸಂಭವಿಸಿತ್ತು. ಈ ಮೆರವಣಿಗೆಯಲ್ಲಿ ಅಮೆರಿಕದಲ್ಲೇ ಅತಿ ಹೆಚ್ಚು ಸಿಖ್ಖರು ಪಾಲ್ಗೊಳ್ಳುತ್ತಾರೆ. ಅಲ್ಲದೇ, ಯುಬಾ ಸಿಟಿ ಮೇಯರ್ ಸೇರಿದಂತೆ ಹಲವು ಸ್ಥಳೀಯ ಆಡಳಿತದಲ್ಲಿ ಸಿಖ್ಖರಿದ್ದಾರೆ. ಈ ಹಿಂಸಾಚಾರಗಳು ಮೇಲಿಂದ ಮೇಲೆ ನಡೆಯ ತೊಡಗಿದವು. ಇದು 2021ರ ಮದುವೆ ಪಾರ್ಟಿಯ ಮೂಲಕ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Amritpal Singh: ಅಮೃತ್ ಪಾಲ್ ಸಿಂಗ್ ಪೊಲೀಸರಿಗೆ ಶರಣಾಗುವ ಸಾಧ್ಯತೆ! ಗುರುದ್ವಾರಗಳಲ್ಲಿ ಅಡಗಿರುವ ಶಂಕೆ

ಎರಡು ಸಿಖ್ ಗುಂಪುಗಳು ನಡುವಿನ ಈ ಹಿಂಸಾಚಾರ ಮತ್ತು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಸ್ಥಳೀಯ ನಾರ್ಕೋಟಿಕ್ ಆ್ಯಂಡ್ ಗ್ಯಾಂಗ್ ಎನ್‌ಫೋರ್ಸ್ಮೆಂಟ್ ಟಾಸ್ಕ್ ಫೋರ್ಸ್ ಎಫ್‌ಬಿಐ ನೆರವಿನೊಂದಿಗೆ ತನಿಖೆಯನ್ನು ಆರಂಭಿಸಿತ್ತು. ಡ್ರಗ್ ಎನ್‌ಫೋರ್ಸ್ಮೆಂಟ್ ಅಡ್ಮಿನಿಸ್ಟ್ರೇಷನ್ ಸೇರಿದಂತೆ ಇತರ ಸ್ಥಳೀಯ ಹಾಗೂ ರಾಜ್ಯ ಮಟ್ಟದ ತನಿಖಾ ಸಂಸ್ಥೆಗಳು ಈ ಪ್ರಕರಣದ ತನಿಖೆಗೆ ನೆರವು ಒದಗಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Reasi Terror Attack: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಹೇಳಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

VISTARANEWS.COM


on

Reasi Terror Attack
Koo

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಭಯೋತ್ಪಾದಕ ದಾಳಿ (Reasi Terror Attack)ಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಹೇಳಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದೀಗ ಈ ಕೃತ್ಯಕ್ಕೆ ಸಂಚು ರೂಪಿಸಿದವನ ವಿರುದ್ಧ ಪ್ರತಿಕಾರ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಇಬ್ಬರು ವ್ಯಕ್ತಿಗಳು ಈ ಬಗ್ಗೆ ಮಾಹಿತಿ ನೀಡುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಈ 16 ಸೆಕೆಂಡುಗಳ ಈ ಪುಟ್ಟ ವಿಡಿಯೊ ಇದೀಗ ಇಂಟರ್‌ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಇಬ್ಬರು ಕ್ಯಾಮೆರಾ ಮುಂದೆ ನಿಂತು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಚರ್ಚಿಸುತ್ತಾರೆ. ಬಳಿಕ ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಈ ಕೃತ್ಯದ ಮಾಸ್ಟರ್ ಮೈಂಡ್ ಅನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳುತ್ತಾರೆ. ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಪಾಕಿಸ್ತಾನದಲ್ಲಿ ಹೆಚ್ಚುತ್ತಿದೆ ಉಗ್ರರ ಹತ್ಯೆ

ವಿಶೇಷ ಎಂದರೆ ಪಾಕಿಸ್ತಾನದಲ್ಲಿ ಉಗ್ರರ ಹತ್ಯೆ ಹೆಚ್ಚುತ್ತಿದೆ. ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ಬೇಹುಗಾರಿಕೆ ಆರೋಪ ಹೊತ್ತು ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಅವರನ್ನು ಹತ್ಯೆ ಮಾಡಿದ್ದ ಅಮೀರ್ ಸರ್ಫರಾಜ್ ಅಲಿಯಾಸ್ ತಾಂಬಾ ಎಂಬಾತನನ್ನು ಏಪ್ರಿಲ್‌ 14ರಂದು ಪಾಕಿಸ್ತಾನದ ಲಾಹೋರ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು.

ಬಂಧಿತರ ಸಂಖ್ಯೆ 50ಕ್ಕೆ ಏರಿಕೆ

ಈತನ್ಮಧ್ಯೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 50 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 9ರಂದು ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ್ದರು. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಆಳವಾದ ಕಂದಕಕ್ಕೆ ಬಿದ್ದಿತ್ತು. ʼʼಈ ಘಟನೆ ಬಗ್ಗೆ ಕಾಂಡಾ ಪ್ರದೇಶ ಪೊಲೀಸ್ ಠಾಣೆಯ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಈವರೆಗೆ 50 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆʼʼ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಹೇಳಿದ್ದಾರೆ.

ಮತ್ತೆ ಕಣಿವೆ ರಾಜ್ಯದಲ್ಲಿ ಗುಂಡಿನ ಮೊರೆತ

ಇದುವರೆಗೆ ಶಾಂತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಆರಂಭವಾಗಿದೆ. ರಿಯಾಸಿ ಜತೆಗೆ ಭಯೋತ್ಪಾದಕರು ಇತರ ಎರಡು ಕಡೆ ದಾಳಿ ನಡೆಸಿದ್ದಾರೆ. ಕಥುವಾ ಮತ್ತು ದೋಡಾದಲ್ಲಿ ಉಗ್ರರು ದಾಂಧಲೆ ಎಬ್ಬಿಸಿದ್ದಾರೆ. ಈ ಪೈಕಿ 3 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

Continue Reading

ವಿದೇಶ

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Nikhil Gupta: ಖಲಿಸ್ತಾನ್‌ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆ ಸಂಚು ಆರೋಪದಲ್ಲಿ ಬಂಧಿತನಾಗಿರುವ ಭಾರತೀಯ ಉದ್ಯಮಿ ನಿಖಿಲ್‌ ಗುಪ್ತಾನನ್ನು ಜೆಕ್‌ ಗಣರಾಜ್ಯದಿಂದ ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ. ಅಮರಿಕದ ನ್ಯೂಯಾರ್ಕ್‌ನಲ್ಲಿರುವ ಖಲಿಸ್ತಾನ್ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನುನ್‌ನ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ವರ್ಷದ ನಿಖಿಲ್‌ ಗುಪ್ತಾನನ್ನು ಅಮೆರಿಕ ಸರ್ಕಾರದ ಕೋರಿಕೆಯ ಮೇರೆಗೆ ಕಳೆದ ವರ್ಷ ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಆತನನ್ನು ಸೋಮವಾರ (ಜೂನ್‌ 17) ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

VISTARANEWS.COM


on

Nikhil Gupta
Koo

ವಾಷಿಂಗ್ಟನ್‌: ಖಲಿಸ್ತಾನ್‌ ಉಗ್ರ (Khalistan Terrorist) ಗುರುಪತ್ವಂತ್‌ ಸಿಂಗ್‌ ಪನ್ನುನ್‌ (Gurpatwant Singh Pannun) ಹತ್ಯೆ ಸಂಚು (Murder plot) ಆರೋಪದಲ್ಲಿ ಬಂಧಿತನಾಗಿರುವ ಭಾರತೀಯ ಉದ್ಯಮಿ ನಿಖಿಲ್‌ ಗುಪ್ತಾ (Nikhil Gupta)ನನ್ನು ಜೆಕ್‌ ಗಣರಾಜ್ಯದಿಂದ ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮರಿಕದ ನ್ಯೂಯಾರ್ಕ್‌ನಲ್ಲಿರುವ ಖಲಿಸ್ತಾನ್ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನುನ್‌ನ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ವರ್ಷದ ನಿಖಿಲ್‌ ಗುಪ್ತಾನನ್ನು ಅಮೆರಿಕ ಸರ್ಕಾರದ ಕೋರಿಕೆಯ ಮೇರೆಗೆ ಕಳೆದ ವರ್ಷ ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಆತನನ್ನು ಸೋಮವಾರ (ಜೂನ್‌ 17) ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ನಿಖಿಲ್‌ ಗುಪ್ತಾನನ್ನು ಪ್ರಸ್ತುತ ಬ್ರೂಕ್ಲಿನ್‌ನ ಫೆಡರಲ್ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ಗೆ ದಾಖಲಿಸಲಾಗಿದೆ. “ಜೆಕ್ ಗಣರಾಜ್ಯದಲ್ಲಿ ಬಂಧನಕ್ಕೊಳಗಾಗಿದ್ದ ನಿಖಿಲ್‌ ಗುಪ್ತಾನನ್ನು ಭಾನುವಾರ ನ್ಯೂಯಾರ್ಕ್‌ಗೆ ಕರೆ ತರಲಾಗಿದೆ. ಸಾಮಾನ್ಯವಾಗಿ ಗಡಿಪಾರಾದ ಆರೋಪಿಗಳು ದೇಶಕ್ಕೆ ಆಗಮಿಸಿದ ಒಂದು ದಿನದೊಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕು ಎನ್ನುವ ಕಾನೂನಿದೆʼʼ ಎಂದು ವರದಿಯೊಂದು ತಿಳಿಸಿದೆ.

ಗುರುಪತ್ವಂತ್‌ ಸಿಂಗ್‌ ಪನ್ನುನ್‌ನನ್ನು ಹತ್ಯೆ ಮಾಡಲು ನಿಖಿಲ್‌ ಗುಪ್ತಾ ವ್ಯಕ್ತಿಯೊಬ್ಬರಿಗೆ ಸುಪಾರಿ ನೀಡಿದ್ದ. ಅಲ್ಲದೆ ಆತನಿಗೆ 15,000 ಡಾಲರ್ ಮುಂಗಡವನ್ನು ಪಾವತಿಸಿದ್ದ ಎಂದು ಫೆಡರಲ್ ಪ್ರಾಸಿಕ್ಯೂಟರ್‌ ಆರೋಪಿಸಿದ್ದಾರೆ. ಅನಾಮಧೇಯ ಭಾರತೀಯ ಸರ್ಕಾರಿ ಅಧಿಕಾರಿಯೊಬ್ಬರು ಇದರಲ್ಲಿ ಭಾಗಿಯಾಗಿದ್ದಾರೆ ಎಂದೂ ಅವರು ದೂರಿದ್ದಾರೆ. ಆದರೆ ಭಾರತ ಈಗಾಗಲೇ ಈ ಆರೋಪಗಳನ್ನು ತಳ್ಳಿ ಹಾಕಿದೆ. ಜತೆಗೆ ನಿಖಿಲ್‌ ಗುಪ್ತಾ ಕೂಡ ತನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ತಿಳಿಸಿದ್ದಾನೆ.

ವಾರ್ಷಿಕ ಐಸಿಇಟಿ ಮಾತುಕತೆಗಾಗಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ನವದೆಹಲಿಗೆ ಭೇಟಿ ನೀಡುವ ಮುನ್ನ ಈ ಹಸ್ತಾಂತರ ನಡೆದಿದೆ. ಈ ವಿಷಯವನ್ನು ಸುಲ್ಲಿವಾನ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Khalistan Terrorist: ನಿಖಿಲ್‌ ಗುಪ್ತಾ ಬಂಧನ ವಿಚಾರದಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ: ಸುಪ್ರೀಂ ಕೋರ್ಟ್

ಕಳೆದ ವರ್ಷ ಬಂಧನ

ದೆಹಲಿ ಮೂಲದ ಉದ್ಯಮಿ ನಿಖಿಲ್ ಗುಪ್ತಾನನ್ನು ಕಳೆದ ವರ್ಷ ಅಂದರೆ 2023ರಲ್ಲಿ ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಯಿತು. ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪವನ್ನು ಅಮೆರಿಕ ಆತನ ಮೇಲೆ ಹೊರಿಸಿದೆ. ನಿಖಿಲ್ ಗುಪ್ತಾ ಭಾರತದ ಸರ್ಕಾರಿ ಏಜೆಂಟ್‌ನೊಂದಿಗೆ ಸಂಚಿನಲ್ಲಿ ಭಾಗಿಯಾಗಿದ್ದಾನೆ ಮತ್ತು ಪನ್ನುನ್‌ನನ್ನು ಕೊಲ್ಲಲು ಒಬ್ಬ ಹಿಟ್‌ಮ್ಯಾನ್ ಅನ್ನು ನೇಮಿಸಿಕೊಂಡಿದ್ದಾನೆ ಎಂದು ಅಮೆರಿಕ ಹೇಳಿದೆ.‌

ಆರೋಪಗಳು ತುಂಬಾ ಗಂಭೀರವಾಗಿರುವುದರಿಂದ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ವಿಚಾರವನ್ನು ಪರಿಶೀಲಿಸಲಾಗುತ್ತಿದೆ ಎಂದು ನವದೆಹಲಿ ಹೇಳಿದೆ. ನಿಖಿಲ್ ಗುಪ್ತಾ ಬಂಧನದ ಬಳಿಕ ಆತನ ಕುಟುಂಬವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಗುಪ್ತಾನನ್ನು ಜೈಲಿನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ, ಹಂದಿಮಾಂಸವನ್ನು ತಿನ್ನಲು ಅವರನ್ನು ಒತ್ತಾಯಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

Continue Reading

ಆರೋಗ್ಯ

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Flesh-Eating Bacteria: ಅಪಾಯಕಾರಿ ಕಾಯಿಲೆಯೊಂದು ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ-ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ.

VISTARANEWS.COM


on

Flesh-Eating Bacteria
Koo

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ (Flesh-Eating Bacteria)ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (Streptococcal Toxic Shock Syndrome-STSS) ಎಂದು ಕರೆಯಲಾಗುತ್ತದೆ.

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ.

“ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಯಾವ ಬ್ಯಾಕ್ಟೀರಿಯಾ?

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್ (Streptococcus Pyogenes) ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣ

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Continue Reading

ಪ್ರಮುಖ ಸುದ್ದಿ

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

World War 3: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

World War 3
Koo

ನವದೆಹಲಿ: ಅಫಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಜಾರಿಗೆ ಬಂದಿದ್ದು, ಮಾನವ ಹಕ್ಕುಗಳು ಸರ್ವನಾಶಗೊಂಡಿವೆ. ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡುತ್ತಲೇ ಇದೆ. ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಲೇ ಇದೆ. ಇದೆಲ್ಲದ ಕಾರಣ ನಾಸ್ಟ್ರಾಡಾಮಸ್‌ ಹಾಗೂ ಬಾಬಾ ವಂಗಾ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. ಇದರ ಬೆನ್ನಲ್ಲೇ, ಭಾರತದ ಜ್ಯೋತಿಷಿಯೊಬ್ಬರು ಮುಂದಿನ 48 ಗಂಟೆಗಳಲ್ಲಿಯೇ ಮೂರನೇ ಮಹಾಯುದ್ಧ ಆರಂಭವಾಗಲಿದ್ದು, ಜಗತ್ತಿನ ಬಹುತೇಕ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಭವಿಷ್ಯ ನುಡಿದಿರುವುದು ಸಂಚಲನ ಮೂಡಿಸಿದೆ.

ಹೌದು, ಹರಿಯಾಣದವರಾದ ಕುಶಾಲ್‌ ಕುಮಾರ್‌ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. “2024ರ ಜೂನ್‌ 18ರಿಂದಲೇ ಅಂದರೆ, ಮುಂದಿನ 48 ಗಂಟೆಗಳಲ್ಲಿಯೇ ಜಗತ್ತಿನಾದ್ಯಂತ ಬಿಕ್ಕಟ್ಟು ಸೃಷ್ಟಿಯಾಗಲಿದೆ. ತಮ್ಮನ್ನು ತಾವು ವೈದಿಕ ಜ್ಯೋತಿಷಿ ಎಂದು ಘೋಷಿಸಿಕೊಂಡಿರುವ ಕುಶಾಲ್‌ ಕುಮಾರ್‌ ಅವರು ಇದುವರೆಗೆ ನುಡಿದ ಭವಿಷ್ಯಗಳು ನಿಜವಾಗಿವೆ. ಜೂನ್‌ 18ರಂದೇ ಜಾಗತಿಕವಾಗಿ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆಯಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಜ್ಯೋತಿಷಿ ಕುಶಾಲ್‌ ಕುಮಾರ್.‌

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಕೊರಿಯಾ ಸೈನಿಕರು ದಕ್ಷಿಣ ಕೊರಿಯಾ ಗಡಿಗಳತ್ತ ನುಗ್ಗುತ್ತಿದ್ದಾರೆ. ಇಸ್ರೇಲ್‌ ಹಾಗೂ ಗಾಜಾ ನಡುವಿನ ಸಮರವು ಭಾರಿ ಬಿಕ್ಕಟ್ಟು ಸೃಷ್ಟಿಸಿದೆ. ಉಕ್ರೇನ್‌ನಲ್ಲಿ ರಷ್ಯಾವಂತೂ ಮಾರಣಹೋಮ ನಡೆಸುತ್ತಿದೆ. ಇನ್ನು ಕಳೆದ ಜೂನ್‌ನಲ್ಲಿಯೇ ಜಮ್ಮು-ಕಾಶ್ಮೀರದಲ್ಲಿ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದೆಲ್ಲ ಕಾರಣದಿಂದಾಗಿ ಜಾಗತಿಕ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿ, ಇದು ಮಿಲಿಟರಿ ಕಾರ್ಯಾಚರಣೆಗಳಿಗೆ ಮುನ್ನುಡಿ ಬರೆಯುತ್ತದೆ. ಇದರಿಂದ ಜಾಗತಿಕ ಅಶಾಂತಿ ಸೃಷ್ಟಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: Moscow Attack: ರಷ್ಯಾದಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 150, ಏನೆಲ್ಲ ಬೆಳವಣಿಗೆ?

Continue Reading
Advertisement
MAHE Manipal 1 Day Treatment Capacity Development Training Program at KMC
ಬೆಂಗಳೂರು8 mins ago

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Job Recruitment
Latest10 mins ago

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Viral Video
Latest17 mins ago

Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

Kannada New Movie RAMARASA Hero Introduction By Kiccha Sudeepa
ಸ್ಯಾಂಡಲ್ ವುಡ್23 mins ago

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Eid Prayers
ದೇಶ24 mins ago

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Road Accident
ಬೆಳಗಾವಿ25 mins ago

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

HPCL Job Interview
ಉದ್ಯೋಗ31 mins ago

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

Team India
ಕ್ರೀಡೆ50 mins ago

Team India: ಬಾರ್ಬಡೋಸ್​ನಲ್ಲಿ ಬೀಚ್​ ವಾಲಿಬಾಲ್​ ಆಡಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

Self harming
ಕರ್ನಾಟಕ53 mins ago

Self Harming: ಆನ್‌ಲೈನ್‌ ಹೂಡಿಕೆಯಲ್ಲಿ ನಷ್ಟ; ಮಹಾರಾಣಿ ಕ್ಲಸ್ಟರ್ ವಿವಿ ವಿದ್ಯಾರ್ಥಿನಿ ನೇಣಿಗೆ ಶರಣು

Train Accident
EXPLAINER1 hour ago

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ22 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ23 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌