ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು; ಮೂವರು ದಿಗ್ಗಜರ ನಡುವೆ ತ್ರಿಕೋನ ಸ್ಪರ್ಧೆ - Vistara News

ವಿದೇಶ

ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು; ಮೂವರು ದಿಗ್ಗಜರ ನಡುವೆ ತ್ರಿಕೋನ ಸ್ಪರ್ಧೆ

ಗೊಟಬಯ ರಾಜಪಕ್ಸ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆಯಲಿದ್ದು, ಬೆಳಗ್ಗೆಯಿಂದಲೇ ಶ್ರೀಲಂಕಾ ಸಂಸತ್ತಿನಲ್ಲಿ ಮತದಾನ ಪ್ರಾರಂಭವಾಗಿದೆ. ಸಂಜೆಯೊಳಗೆ ಫಲಿತಾಂಶ ಹೊರಬೀಳಲಿದೆ.

VISTARANEWS.COM


on

Sri Lanka’s Presidential Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ಶ್ರೀಲಂಕಾದಲ್ಲಿ ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆರ್ಥಿಕವಾಗಿ ಕುಸಿದ ಶ್ರೀಲಂಕಾದಲ್ಲಿ ಈ ಹಿಂದಿನ ಅಧ್ಯಕ್ಷ ಗೊಟಬಯ ರಾಜಪಕ್ಸ ಅದೆಷ್ಟು ಕೆಟ್ಟದಾಗಿ ಅಧಿಕಾರ ಕಳೆದುಕೊಂಡರು ಎಂಬುದನ್ನು ಇಡೀ ಜಗತ್ತು ನೋಡಿದೆ. ರಾಜಪಕ್ಸ ಈಗ ಸಿಂಗಾಪುರದಲ್ಲಿದ್ದಾರೆ. ಶ್ರೀಲಂಕಾದಿಂದ ಸಿಂಗಾಪುರಕ್ಕೆ ಹಾರುತ್ತಿದ್ದಂತೆ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಸದ್ಯ ಶ್ರೀಲಂಕಾದ ಪ್ರಧಾನಮಂತ್ರಿಯಾಗಿರುವ, ಯುನೈಟೆಡ್‌ ನೇಶನ್‌ ಪಾರ್ಟಿ ನಾಯಕ ರನಿಲ್‌ ವಿಕ್ರಮ ಸಿಂಘೆ ಅವರೇ ಹಂಗಾಮಿ ಅಧ್ಯಕ್ಷರಾಗಿದ್ದಾರೆ. ಇಂದು ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಈ ರನಿಲ್‌ ವಿಕ್ರಮಸಿಂಘೆ, ಶ್ರೀಲಂಕಾ ಪೊದುಜನ ಪೆರಾಮುನಾ ಪಕ್ಷದ ಬಂಡಾಯ ನಾಯಕ ಡಲ್ಲಾಸ್‌ ಅಲಹಪ್ಪೆರುಮಾ ಮತ್ತು ಜನತಾ ವಿಮುಕ್ತಿ ಪೆರಮುನೆ ನಾಯಕ ಅನುರ ಡಿಸಾನಾಯಾಕೆ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಈ ಮೂವರಲ್ಲಿ ಮುಂದಿನ ಅಧ್ಯಕ್ಷರಾಗುವವರು ರನಿಲ್‌ ವಿಕ್ರಮಸಿಂಘೆ ಎಂದೇ ಹೇಳಲಾಗುತ್ತಿದೆ. ಇವರು ಆರು ಬಾರಿ ಶ್ರೀಲಂಕಾ ಪ್ರಧಾನಿಯಾದವರು. ಇನ್ನೊಂದು ವಿಶೇಷವೆಂದರೆ ಎಸ್‌ಎಲ್‌ಪಿಪಿ (ಶ್ರೀಲಂಕಾ ಪೊದುಜನ ಪೆರಾಮುನಾ) ಪಕ್ಷವೂ ಕೂಡ ರನಿಲ್‌ ಅವರಿಗೇ ಬೆಂಬಲ ಸೂಚಿಸಿದೆ. ಸಮಗಿ ಜನ ಬಲವೇಗಾಯ (Samagi Jana Balawegaya) ಪಕ್ಷದ ನಾಯಕ ಸಜಿತ್‌ ಪ್ರೇಮದಾಸಾ ಕೂಡ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರೇಸ್‌ನಲ್ಲಿದ್ದರು. ಆದರೆ ಮಂಗಳವಾರ ಹಿಂದೆ ಸರಿದಿದ್ದಾರೆ. ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೇಗೆ ನಡೆಯುತ್ತದೆ ಚುನಾವಣೆ?
ಶ್ರೀಲಂಕಾದಲ್ಲೂ ಕೂಡ ಅಧ್ಯಕ್ಷೀಯ ಚುನಾವಣೆಯಲ್ಲಿ ಜನಸಾಮಾನ್ಯರು ಮತದಾನ ಮಾಡುವುದಿಲ್ಲ. ಸಂಸತ್ತಿನ ಎಲ್ಲ ಸದಸ್ಯರು ರಹಸ್ಯ ಮತದಾನ ಮಾಡುತ್ತಾರೆ. ತಮ್ಮ ಆದ್ಯತೆ ಯಾರೆಂದು ಬರೆದು ಬ್ಯಾಲೆಟ್‌ ಬಾಕ್ಸ್‌ನಲ್ಲಿ ಹಾಕುತ್ತಾರೆ. ಒಟ್ಟಾರೆ ಸಂಸದರ ಸಂಖ್ಯೆಯಲ್ಲಿ ಅರ್ಧಕ್ಕಿಂತ ಹೆಚ್ಚು ಮತ ಪಡೆದವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ. ಹಾಗೊಮ್ಮೆ ಯಾರೊಬ್ಬರೂ ಬಹುಮತ ಪಡೆಯದೆ ಇದ್ದರೆ, ಮೊದಲ ಹಂತದಲ್ಲಿ ಅತ್ಯಂತ ಕಡಿಮೆ ಮತ ಪಡೆದವರನ್ನು ಸ್ಪರ್ಧೆಯಿಂದ ಹೊರಗಿಡಲಾಗುತ್ತದೆ ಮತ್ತು ಮತದಾರರ ಎರಡನೇ ಆದ್ಯತೆ ಯಾರೆಂದು ಪರಿಗಣಿಸಿ ಅವರಿಗೆ ಬಿದ್ದ ಮತವನ್ನು ಉಳಿದಿಬ್ಬರಿಗೆ ಹಂಚಿಕೆ ಮಾಡಲಾಗುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಇಬ್ಬರೇ ಸ್ಪರ್ಧಿಸಿದರೆ ಈ ಗೊಂದಲಕ್ಕೆ ಆಸ್ಪದ ಇರುವುದಿಲ್ಲ.

ಇದನ್ನೂ ಓದಿ: Asia cup T20 | ಶ್ರೀಲಂಕಾದಲ್ಲಿ ನಡೆಯುವುದು ಕಷ್ಟ, ಹಾಗಾದರೆ ಮತ್ತೆಲ್ಲಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Israel Palestine War: ಇಸ್ರೇಲ್‌ ಪ್ರತೀಕಾರದ ದಾಳಿ, 35 ಪ್ಯಾಲೆಸ್ತೀನೀಯರ ಸಾವು

ಇಸ್ರೇಲಿ ಸೈನ್ಯವು ತನ್ನ ದಾಳಿ ವಿಮಾನವು ರಫಾದಲ್ಲಿ ಹಮಾಸ್ ಆವರಣವನ್ನು ಘಾತಿಸಿದೆ ಎಂದು ವರದಿ ಮಾಡಿದೆ, ಇದರ ಪರಿಣಾಮವಾಗಿ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪಿನ ಹಿರಿಯ ಅಧಿಕಾರಿಗಳಾದ ಯಾಸಿನ್ ರಬಿಯಾ ಮತ್ತು ಖಲೀದ್ ನಗರ್ ಸಾವನ್ನಪ್ಪಿದರು.

VISTARANEWS.COM


on

israel palestine war12
Koo

ಟೆಲ್‌ ಅವಿವ್:‌ ಇಸ್ರೇಲ್‌ನ (Israel) ವಾಣಿಜ್ಯ ಕೇಂದ್ರವಾದ ಟೆಲ್ ಅವೀವ್‌ನಲ್ಲಿ (Tel Aviv) “ದೊಡ್ಡ ರಾಕೆಟ್ ದಾಳಿ” ನಡೆಸಿರುವುದಾಗಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ (hamas) ಹೇಳಿಕೊಂಡ ಗಂಟೆಗಳ ನಂತರ, ಇಸ್ರೇಲ್ ಮಿಲಿಟರಿ ದಕ್ಷಿಣ ಗಾಜಾ ಪಟ್ಟಿಯ (Gaza Strip) ರಫಾದಲ್ಲಿ ಸ್ಥಳಾಂತರಗೊಂಡ ಜನರ ಶಿಬಿರದ ಮೇಲೆ ವೈಮಾನಿಕ ದಾಳಿ (Israel Palestine War) ನಡೆಸಿತು. ಭಾನುವಾರ ತಡರಾತ್ರಿ ನಡೆಸಿದ ದಾಳಿಯಲ್ಲಿ ಕನಿಷ್ಠ 35 ಪ್ಯಾಲೆಸ್ಟೀನಿಯನ್ನರನ್ನು ಕೊಂದಿತು.

ತಿಂಗಳುಗಳಲ್ಲಿ ಮೊದಲ ಬಾರಿಗೆ ಇಂಥ ಭಾರಿ ದಾಳಿ ನಡೆಯುತ್ತಿದೆ. ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ನೀಡಿದ ಹೇಳಿಕೆಯಲ್ಲಿ, “ಇಸ್ರೇಲ್‌ ದಾಳಿ 35 ಜನರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಡಜನ್‌ಗಟ್ಟಲೆ ಜನ ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು” ಎಂದು ಹೇಳಿದೆ. ರಫಾಹ್ ಬಳಿ ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ವಿಶ್ವಸಂಸ್ಥೆ ಏಜೆನ್ಸಿ ನಿರ್ವಹಿಸುತ್ತಿದ್ದ ಕೇಂದ್ರವನ್ನು ಗುರಿಯಾಗಿಟ್ಟುಕೊಂಡು ದಾಳಿಯನ್ನು “ಭಯಾನಕ ಹತ್ಯಾಕಾಂಡ” ಎಂದು ಹಮಾಸ್ ಮೀಡಿಯಾ ಕರೆದಿದೆ.

“ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ಕಾನೂನುಬದ್ಧ ಗುರಿಗಳ ವಿರುದ್ಧ ನಿಖರವಾದ ಗುಪ್ತಚರ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಮತ್ತು ಪಶ್ಚಿಮ ದಂಡೆಯಲ್ಲಿ ಉಗ್ರ ಕಾರ್ಯಾಚರಣೆ ನಡೆಸುತ್ತಿದ್ದ ಇಬ್ಬರು ಹಿರಿಯ ಹಮಾಸ್ ಅಧಿಕಾರಿಗಳನ್ನು ಕೊಂದಿದ್ದೇವೆ” ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.

ಇಸ್ರೇಲಿ ಸೈನ್ಯವು ತನ್ನ ದಾಳಿ ವಿಮಾನವು ರಫಾದಲ್ಲಿ ಹಮಾಸ್ ಆವರಣವನ್ನು ಘಾತಿಸಿದೆ ಎಂದು ವರದಿ ಮಾಡಿದೆ, ಇದರ ಪರಿಣಾಮವಾಗಿ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪಿನ ಹಿರಿಯ ಅಧಿಕಾರಿಗಳಾದ ಯಾಸಿನ್ ರಬಿಯಾ ಮತ್ತು ಖಲೀದ್ ನಗರ್ ಸಾವನ್ನಪ್ಪಿದರು. ಇಸ್ರೇಲಿ ಸೈನ್ಯವು ದಾಳಿಯ ಪರಿಣಾಮವಾಗಿ, ಆ ಪ್ರದೇಶದಲ್ಲಿ ಹಲವಾರು ನಾಗರಿಕರಿಗೆ ಹಾನಿಯಾಗಿದೆ ಎಂದು ಸೂಚಿಸುವ ವರದಿಗಳ ಬಗ್ಗೆ ನಮಗೆ ತಿಳಿದಿದೆ ಎಂದು ಒಪ್ಪಿಕೊಂಡಿದೆ.

ಇಸ್ರೇಲಿ ಮಿಲಿಟರಿ ಮತ್ತು ಹಮಾಸ್ ನಡುವಿನ ಯುದ್ಧದ ತೀವ್ರತೆಯು ಇತ್ತೀಚೆಗೆ ರಫಾದಲ್ಲಿ ಕೇಂದ್ರೀಕೃತವಾಗಿದೆ. ಅಲ್ಲಿ ಸೇನಾಪಡೆಗಳು ಮೇ ಆರಂಭದಲ್ಲಿ ವ್ಯಾಪಕ ವಿರೋಧದ ಹೊರತಾಗಿಯೂ ಭೂಸೇನಾ ಕಾರ್ಯಾಚರಣೆಯನ್ನು ನಡೆಸಿವೆ.

ಇದನ್ನೂ ಓದಿ: Iran-Israel Conflict: “ಅಚ್ಚರಿಯ ದಾಳಿ ನಿರೀಕ್ಷಿಸಿ”- ಇಸ್ರೇಲ್‌ಗೆ ಇರಾನ್‌ನಿಂದ ವಾರ್ನಿಂಗ್‌

Continue Reading

ಪ್ರಮುಖ ಸುದ್ದಿ

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

Turbulence: ವಿಮಾನದಲ್ಲಿ ಏಕಾಏಕಿ ಪ್ರಕ್ಷುಬ್ಧತೆ ಉಂಟಾದ ಕಾರಣ ಲಗೇಜ್‌ಗಳು ಪ್ರಯಾಣಿಕರ ಮೇಲೆ ಬಿದ್ದಿವೆ. ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ 6 ಪ್ರಯಾಣಿಕರು ಹಾಗೂ 6 ಸಿಬ್ಬಂದಿಗೆ ಗಾಯಗಳಾಗಿವೆ. “ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಮಾನವು ಡಬ್ಲಿನ್‌ನಲ್ಲಿ ಲ್ಯಾಂಡ್‌ ಆಯಿತು. ಲ್ಯಾಂಡ್‌ ಆದ ಕೂಡಲೇ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನಿಸಲಾಯಿತು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

turbulence
Koo

ದೋಹಾ: ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಸಿಂಗಾಪುರ ಏರ್‌ಲೈನ್‌ ವಿಮಾನವು ಪ್ರಕ್ಷುಬ್ಧತೆಗೆ (Turbulence) ಒಬ್ಬ ವ್ಯಕ್ತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೊಂದು ವಿಮಾನವು ಟರ್ಬುಲೆನ್ಸ್‌ಗೆ ತುತ್ತಾಗಿದೆ. ಕತಾರ್‌ ರಾಜಧಾನಿ ದೋಹಾದಿಂದ (Doha) ಐರ್ಲೆಂಡ್‌ ರಾಜಧಾನಿ ಡಬ್ಲಿನ್‌ಗೆ (Dublin) ತೆರಳುತ್ತಿದ್ದ ವಿಮಾನವು ಪ್ರಕ್ಷುಬ್ಧತೆಗೆ ಸಿಲುಕಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಕತಾರ್‌ ಏರ್‌ವೇಸ್‌ ವಿಮಾನದಲ್ಲಿ ಪ್ರಕ್ಷುಬ್ಧತೆ ಉಂಟಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ದೋಹಾದಿಂದ ಡಬ್ಲಿಂಗ್‌ಗೆ ಹೊರಟಿದ್ದ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಪ್ರಕ್ಷುಬ್ಧತೆಗೆ ಸಿಲುಕಿತು. ವಿಮಾನದಲ್ಲಿ ಏಕಾಏಕಿ ಪ್ರಕ್ಷುಬ್ಧತೆ ಉಂಟಾದ ಕಾರಣ ಲಗೇಜ್‌ಗಳು ಪ್ರಯಾಣಿಕರ ಮೇಲೆ ಬಿದ್ದಿವೆ. ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ 6 ಪ್ರಯಾಣಿಕರು ಹಾಗೂ 6 ಸಿಬ್ಬಂದಿಗೆ ಗಾಯಗಳಾಗಿವೆ. “ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಮಾನವು ಡಬ್ಲಿನ್‌ನಲ್ಲಿ ಲ್ಯಾಂಡ್‌ ಆಯಿತು. ಲ್ಯಾಂಡ್‌ ಆದ ಕೂಡಲೇ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನಿಸಲಾಯಿತು” ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವರಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬ್ರಿಟನ್‌ ರಾಜಧಾನಿ ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಕ್ಷುಬ್ಧತೆ ಉಂಟಾಗಿ ಒಬ್ಬರು ಮೃತಪಟ್ಟು 30 ಜನ ಗಾಯಗೊಂಡಿರುವ ಘಟನೆ ಮಂಗಳವಾರ (ಮೇ 21) ನಡೆದಿತ್ತು. ಬಳಿಕ ಈ ಸಿಂಗಾಪುರ ಏರ್‌ಲೈನ್ಸ್‌ ವಿಮಾನವನ್ನು ಬ್ಯಾಂಕಾಕ್‌ನ ಸುವರ್ಣಭೂಮಿ ಏರ್‌ಪೋರ್ಟ್‌ನಲ್ಲಿ ತುರ್ತು ಲ್ಯಾಂಡ್‌ ಮಾಡಲಾಗಿತ್ತು. ಕೂಡಲೇ ವೈದ್ಯರು ಧಾವಿಸಿ ಪ್ರಯಾಣಿಕರಿಗೆ ಅಗತ್ಯ ನೆರವು ನೀಡಿದ್ದರು. ವಿಮಾನದೊಳಗಿನ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದ್ದವು.

ಏನಿದು ಟರ್ಬುಲೆನ್ಸ್?‌

ವಿಮಾನವು ಹಾರಾಟ ನಡೆಸುವಾಗ ಹವಾಮಾನ ವೈಪರೀತ್ಯದಿಂದಾಗಿ ಗಾಳಿಯ ಒತ್ತಡದಲ್ಲಿ ದಿಢೀರನೆ ಏರುಪೇರಾಗುತ್ತದೆ. ಇದರ ತೀವ್ರತೆಗೆ ವಿಮಾನವು ಹಾರಾಟ ನಡೆಸುವಾಗಲೇ ಏಕಾಏಕಿ ಅಲುಗಾಡುತ್ತದೆ. ಹೀಗೆ ದಿಢೀರನೆ ಅಲುಗಾಡುವುದನ್ನೇ ಟರ್ಬುಲೆನ್ಸ್‌ ಅಥವಾ ಪ್ರಕ್ಷುಬ್ಧತೆ ಎಂದು ಕರೆಯುತ್ತಾರೆ. ಸಣ್ಣಪುಟ್ಟ ಪ್ರಕ್ಷುಬ್ಧತೆ ಉಂಟಾದರೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ, ತೀವ್ರ ಪ್ರಮಾಣದಲ್ಲಿ ಉಂಟಾದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಲಗೇಜ್‌ಗಳು ಪ್ರಯಾಣಿಕರ ಮೈಮೇಲೆ ಬೀಳುತ್ತವೆ. ಇನ್ನೂ ಹಲವು ತೊಂದರೆಗಳನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ, ಟರ್ಬುಲೆನ್ಸ್‌ ಉಂಟಾದಾಗ ದಿಢೀರನೆ ವಿಮಾನ ಹಾರುವ ಎತ್ತರವನ್ನು ಕಡಿಮೆಗೊಳಿಸುವುದು ಕೂಡ ಅಪಾಯಕಾರಿ ಎನಿಸಿದೆ.

ಇದನ್ನೂ ಓದಿ: Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Continue Reading

ದೇಶ

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Wagah Border: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಭಾರತ ಹಾಗೂ ಪಾಕಿಸ್ತಾನ ನಡುವಿನ, ಅಮೃತಸರದಲ್ಲಿರುವ ವಾಘಾ ಗಡಿಯನ್ನು ಓಪನ್‌ ಮಾಡಲಾಗುವುದು ಎಂದು ಪಂಜಾಬ್‌ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಹಿರಿಯ ನಾಯಕ ಚರಣ್‌ಜೀತ್‌ ಸಿಂಗ್‌ ಚನ್ನಿ ಹೇಳಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Wagah Border
Koo

ಚಂಡೀಗಢ: ಲೋಕಸಭೆ ಚುನಾವಣೆಯ (Lok Sabha Election 2024) 6ನೇ ಹಂತದ ಮತದಾನ ಮುಗಿದು, ಚುನಾವಣೆ ಕೊನೆಯ ಹಂತಕ್ಕೆ ಬಂದರೂ ರಾಜಕೀಯ ನಾಯಕರ ಹೇಳಿಕೆಗಳು ಮಾತ್ರ ತಣ್ಣಗಾಗಿಲ್ಲ. ಜಾತಿ, ಧರ್ಮ, ಪಾಕಿಸ್ತಾನ ಸೇರಿ ಹಲವು ವಿಷಯಗಳ ಕುರಿತು ರಾಜಕೀಯ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ಇದರ ಬೆನ್ನಲ್ಲೇ, ಪಂಜಾಬ್‌ ಮಾಜಿ ಮುಖ್ಯಮಂತ್ರಿ, ಜಲಂಧರ್‌ ಕಾಂಗ್ರೆಸ್‌ ಅಭ್ಯರ್ಥಿ ಚರಣ್‌ಜೀತ್‌ ಸಿಂಗ್‌ ಚನ್ನಿ (Charanjit Singh Channi) ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. “ದೇಶದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ-ಪಾಕಿಸ್ತಾನ ನಡುವಿನ ವಾಘಾ ಗಡಿಯನ್ನು (Wagah Border) ಸಂಚಾರಕ್ಕೆ ಮುಕ್ತಗೊಳಿಸಲಾಗುವುದು” ಎಂಬುದಾಗಿ ಅವರು ಹೇಳಿದ್ದಾರೆ.

ಪಂಜಾಬ್‌ನ ಜಲಂಧರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಚರಣ್‌ಜೀತ್‌ ಸಿಂಗ್‌ ಚನ್ನಿ ಮಾತನಾಡಿದರು. “ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಾದರೆ, ವಾಘಾ ಗಡಿಯನ್ನು ಓಪನ್‌ ಮಾಡುತ್ತೇವೆ. ಇದರಿಂದ ಪಾಕಿಸ್ತಾನದ ನಾಗರಿಕರು ಪಂಜಾಬ್‌ಗೆ ಬಂದು ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡು ಹೋಗಬಹುದಾಗಿದೆ. ಇದರಿಂದ ಜಲಂಧರ್‌ ಮೆಡಿಕಲ್‌ ಟೂರಿಸಂ ತಾಣವನ್ನಾಗಿ ಬದಲಾಯಿಸಲು ಸಾಧ್ಯವಾಗುತ್ತದೆ” ಎಂಬುದಾಗಿ ಹೇಳಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಚರಣ್‌ಜೀತ್‌ ಸಿಂಗ್‌ ಚನ್ನಿ ಅವರು ಪಾಕಿಸ್ತಾನ ಗಡಿ ಕುರಿತು ಮಾತನಾಡುವ ಒಂದು ದಿನ ಮೊದಲು ಪಂಜಾಬ್‌ನಲ್ಲಿ ನರೇಂದ್ರ ಮೋದಿ ರ‍್ಯಾಲಿ ನಡೆಸಿದ್ದರು. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಗ್ರವಾದವನ್ನು ಪೋಷಣೆ ಮಾಡುವ, ಭಾರತದ ಮೇಲೆ ದಾಳಿ ನಡೆಸುವ ಪಾಕಿಸ್ತಾನಕ್ಕೆ ಸ್ನೇಹದ ಸಂದೇಶಗಳನ್ನು ರವಾನಿಸುತ್ತದೆ. ಆದರೆ, ನಾವು ಮಾತ್ರ ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ನೀಡಿದ್ದೇವೆ. ಆ ಮೂಲಕ ದೇಶದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಿದೇವೆ” ಎಂಬುದಾಗಿ ಮೋದಿ ಹೇಳಿದ್ದರು.

ಕೆಲ ದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಪ್ರತಿಕ್ರಿಯಿಸಿದ್ದ ಅವರು, “ಇದು ಬಿಜೆಪಿಯ ಚುನಾವಣಾ ಸ್ಟಂಟ್”‌ ಎಂದು ಆರೋಪಿಸಿದ್ದರು. ಮೇ 4ರಂದು ಪೂಂಚ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ವಾಯುಪಡೆಯ ಒಬ್ಬ ಯೋಧ ಹುತಾತ್ಮರಾಗಿದ್ದರು. “ಚುನಾವಣೆ ಸಮೀಪಿಸುತ್ತಲೇ ಬಿಜೆಪಿಯು ಜನರ ಜೀವನದ ಜತೆ ಆಟವಾಡುತ್ತದೆ. ಉಗ್ರರ ದಾಳಿ ಪ್ರಕರಣಗಳು ಬಿಜೆಪಿಯ ಕುತಂತ್ರದ ಭಾಗವಾಗಿವೆ” ಎಂದಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಚರಣ್‌ಜೀತ್‌ ಸಿಂಗ್‌ ಚನ್ನಿ ಅವರಿಗೆ ಚುನಾವಣೆ ಆಯೋಗವೂ ಖಡಕ್‌ ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: Parliament Flashback: 1996ರ ಬಳಿಕ ರಾಜ್ಯದ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

Continue Reading

ವೈರಲ್ ನ್ಯೂಸ್

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

ಚೀನಾದ ವ್ಯಕ್ತಿಯೊಬ್ಬ 365 ದಿನಗಳ ಅಂದರೆ ವರ್ಷಪೂರ್ತಿ ರಜೆಯನ್ನು ಪಡೆಯುವ ಅವಕಾಶ ಪಡೆದುಕೊಂಡಿದ್ದಾನೆ. ಅದು ಸಂಬಳ ಸಮೇತ. ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral News) ಆಗಿರುವ ಈ ವಿಡಿಯೋ ನೋಡಿ ಆತ ನಿಜವಾಗಲೂ ಅದೃಷ್ಟವಂತ ಎಂದು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

By

Viral News
Koo

ಕಂಪನಿಯಲ್ಲಿ ಗರಿಷ್ಠ ಎಂದರೆ ಒಂದೆರಡು ತಿಂಗಳು ರಜೆ (leave) ತೆಗೆಯಬಹುದು. ಅದೂ ಅನಾರೋಗ್ಯದ ನಿಮಿತ್ತ ಮಾತ್ರ. ಆದರೆ ಇಲ್ಲೊಬ್ಬ ಕಂಪನಿಯಿಂದ 365 ದಿನಗಳ ಪಾವತಿ ರಜೆ (Paid Leaves) ಪಡೆದಿದ್ದಾನೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral News) ಆಗಿದ್ದು, ಸಾಕಷ್ಟು ಮಂದಿ ಇಂತಹ ರಜೆ ನಮಗೆ ಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯಕರ ಕೆಲಸ ಮತ್ತು ಜೀವನದ ಸಮತೋಲನ ಕಾಪಾಡಿಕೊಳ್ಳಲು ಹೆಚ್ಚಿನ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಪಾವತಿ ರಜೆಗಳನ್ನು ಒದಗಿಸುತ್ತವೆ. ಇದು ಎಲ್ಲ ಕಂಪನಿಗಳಲ್ಲಿ ಒಂದೇ ರೀತಿ ಇರುವುದಿಲ್ಲ. ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಆದರೆ ಈ ರಜೆಯನ್ನು ಒಂದು ವರ್ಷದವರೆಗೆ ವಿಸ್ತರಿಸುವ ಅವಕಾಶ ಎಲ್ಲೂ ಇರುವುದಿಲ್ಲ.

ಆದರೆ ಇಲ್ಲೊಬ್ಬ ಮಾತ್ರ 365 ದಿನಗಳ ಅಂದರೆ ವರ್ಷಪೂರ್ತಿ ರಜೆಯನ್ನು ಪಡೆಯುವ ಅವಕಾಶ ಪಡೆದುಕೊಂಡಿದ್ದಾನೆ. ಅದು ಸಂಬಳ ಸಮೇತ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿ ಆತ ನಿಜವಾಗಲೂ ಅದೃಷ್ಟವಂತ ಎಂದು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಚೀನಾದ ಶೆನ್‌ಜೆನ್ ಪ್ರದೇಶದ ವ್ಯಕ್ತಿಯೊಬ್ಬ ಕಂಪನಿಯ ಪಾರ್ಟಿಯಲ್ಲಿ ಲಕ್ಕಿ ಡ್ರಾ ಗೆದ್ದ ಅನಂತರ 365 ದಿನಗಳ ವೇತನ ಸಹಿತ ರಜೆಯನ್ನು ಗಳಿಸಿದ್ದಾನೆ.

ಸಂಸ್ಥೆಯಲ್ಲಿ ನಡೆದ ಭಾನುವಾರದ ಭೋಜನಕೂಟದಲ್ಲಿ ಭಾಗವಹಿಸಿದ ಉದ್ಯೋಗಿ ಆ ರಾತ್ರಿ ದೊಡ್ಡ ಸೌಲಭ್ಯವನ್ನು ಪಡೆದನು. 365 ದಿನಗಳವರೆಗೆ ದೀರ್ಘ ರಜೆಯನ್ನು ನೀಡುವ ಚೆಕ್ ಅವರಿಗೆ ಸಿಕ್ಕಿತ್ತು. ಆ ಚೆಕ್‌ನಲ್ಲಿ “365 ದಿನಗಳ ಪಾವತಿಸಿದ ರಜೆ” ಎಂದು ಬರೆಯಲಾಗಿದೆ.

ಇದಕ್ಕೆ ಸಾಕಷ್ಟು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಈ ಘಟನೆ ಕಳೆದ ವರ್ಷದ್ದು. ಆದರೂ ಅದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತರ ಉದ್ಯೋಗಿಗಳು ಆತನ ಬಗ್ಗೆ ಖಂಡಿತ ಅಸೂಯೆ ಪಟ್ಟಿರುತ್ತಾರೆ ಎಂದು ಹೇಳಿದ್ದಾರೆ. ಇನ್ನು ಕೆಲವರು “ನಮಗೆ ಅದು ಬೇಕು” ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನು ಕೆಲವರು ಇಷ್ಟೊಂದು ರಜೆಯೇ ಎಂದು ಈ ಗೆಲುವಿನ ಬಗ್ಗೆ ಭಯ ವ್ಯಕ್ತಪಡಿಸಿದ್ದು, ಇದು ಅಪಾಯಕಾರಿ ಎಂದು ಹೇಳಿದ್ದಾರೆ. ಇದರಿಂದ ಉದ್ಯೋಗಿಗಳ ಉದ್ಯೋಗ ಭವಿಷ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನೊಬ್ಬರು ಕಾಮೆಂಟ್ ನಲ್ಲಿ 366 ನೇ ದಿನ: ಕ್ಷಮಿಸಿ, ಕಡಿಮೆ ಕಾರ್ಯಕ್ಷಮತೆ ಮತ್ತು ಅಸಮರ್ಥತೆಯ ಕಾರಣದಿಂದ ನಿಮ್ಮನ್ನು ವಜಾಗೊಳಿಸಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ತಂಡ ಗೆದ್ದ ಸಂತಸದಲ್ಲಿ ಬಣ್ಣದ ಚಿಟ್ಟೆಯಂತೆ ಹಾರಾಡಿ ಸಂಭ್ರಮಿಸಿದ ಹೈದರಾಬಾದ್​ ಮಾಲಕಿ ಕಾವ್ಯಾ ಮಾರನ್

365 ದಿನಗಳ ವೇತನ ಸಹಿತ ರಜೆಯ ಪ್ರಸ್ತಾಪವನ್ನು ಇದು ಹೊಂದಿರಲಿಲ್ಲ. ಇದು ಹೆಚ್ಚಿನದನ್ನು ಹೊಂದಿತ್ತು. ವರದಿಗಳ ಪ್ರಕಾರ ಕಂಪೆನಿಯ ವಿಜೇತ ಉದ್ಯೋಗಿಗೆ ಪಾವತಿಸಿದ ರಜೆ ಮತ್ತು ಇನ್ನೊಂದು ವಿಶಿಷ್ಟ ಕೊಡುಗೆಯ ಬಗ್ಗೆ ಚರ್ಚಿಸಲು ತೀರ್ಮಾನಿಸಿತ್ತು. ಆತ ದೀರ್ಘವಾದ ರಜೆಯನ್ನು ಆನಂದಿಸುತ್ತಾನೋ ಅಥವಾ ಕೆಲಸ ಮಾಡುವ ಮೂಲಕ ಹಣವನ್ನು ಎನ್‌ಕ್ಯಾಶ್ ಮಾಡಲು ಬಯಸುತ್ತಾನೋ ಎಂಬ ಲೆಕ್ಕಾಚಾರ ಇದರಲ್ಲಿತ್ತು ಎನ್ನಲಾಗಿದೆ.

Continue Reading
Advertisement
Kannada New Movie Gumti new post
ಸ್ಯಾಂಡಲ್ ವುಡ್3 mins ago

Kannada New Movie: ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಇದೀಗ `ಗುಂಮ್ಟಿ’ ಅವತಾರದಲ್ಲಿ!

Prajwal Revanna Case Will SIT team go abroad for arrest Prajwal
ಕ್ರೈಂ11 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Robert Vadra
ದೇಶ11 mins ago

Robert Vadra: “ಮಣಿಶಂಕರ್‌ ಅಯ್ಯರ್‌ ಬಾಯಿ ಬಡುಕ…ಕೇಜ್ರಿವಾಲ್‌ ಅವಕಾಶವಾದಿ”-ರಾಬರ್ಟ್‌ ವಾದ್ರಾ ಅಚ್ಚರಿಯ ಹೇಳಿಕೆ

Gautam Gambhir
ಕ್ರೀಡೆ25 mins ago

Gautam Gambhir : ಟ್ರೋಫಿ ಗೆದ್ದ ಸಂಭ್ರಮ; ಗಂಭೀರ್​ಗೆ ಖಾಲಿ ಚೆಕ್​ ಕೊಟ್ಟರೇ ಶಾರುಖ್​ ಖಾನ್​ ?

Netraa Jadhav Out From Serial perform Yakshagana on the special occasion
ಕಿರುತೆರೆ39 mins ago

Netraa Jadhav: ಸೀರಿಯಲ್‌ನಿಂದ ಔಟ್‌ ಆಗುತ್ತಿದ್ದಂತೆ ʻಯಕ್ಷಗಾನʼದಲ್ಲಿ ಶಾರ್ವರಿ ಶೈನ್‌!

Pune Porsche accident
ದೇಶ58 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

Chris Gayle
ಕ್ರಿಕೆಟ್59 mins ago

Chris Gayle : ಎಣ್ಣೆ ಹೊಡಿತಾ ಕೆಕೆಆರ್ ತಂಡಕ್ಕೆ ಶುಭಾಶಯ ತಿಳಿಸಿದ ಕ್ರಿಸ್​ ಗೇಲ್; ಇಲ್ಲಿದೆ ವಿಡಿಯೊ

Comedy Khiladigalu anchor anushree and Jaggesh Remembers Dogs
ಕಿರುತೆರೆ1 hour ago

Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

kalaburagi illegal relationship
ಕ್ರೈಂ1 hour ago

Illegal Relationship:`ಅತ್ತಿಗೆಯಿಂದ ದೂರ ಇರುʼ ಎಂದ ಮೈದುನನ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್​ ಗೆದ್ದ ಬಳಿಕ ವಿವಾದಿತ ಫ್ಲೈಯಿಂಗ್ ಕಿಸ್​ ಕೊಟ್ಟ ಶಾರುಖ್ ಖಾನ್​; ಇದಕ್ಕೂ ಒಂದು ಕಾರಣವಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು18 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌