SRILANKA CRISIS: ಮಾಜಿ ಪ್ರಧಾನಿ ಮಹಿಂದ ರಾಜಪಕ್ಸ ನಿವಾಸಕ್ಕೆ ಬೆಂಕಿ - Vistara News

ವಿದೇಶ

SRILANKA CRISIS: ಮಾಜಿ ಪ್ರಧಾನಿ ಮಹಿಂದ ರಾಜಪಕ್ಸ ನಿವಾಸಕ್ಕೆ ಬೆಂಕಿ

ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಪ್ರಧಾನಿ ಮಹಿಂದ ರಾಜಪಕ್ಷ ರಾಜೀನಾಮೆ ನೀಡಿದ ಕೆಲ ಗಂಟೆಗಳಲ್ಲೇ ಅವರ ನಿವಾಸಕ್ಕೆ ಉದ್ರಿಕ್ತ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಹಲವು ಸಚಿವರ ಮನೆಗಳು ಅಗ್ನಿಗಾಹುತಿಯಾಗಿದೆ. ದೇಶಾದ್ಯಂತ ಕರ್ಫ್ಯೂ ಜಾರಿಯಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ಶ್ರೀಲಂಕಾದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ 8 ಬಲಿ,
  • ಸಂಸದರ ಹತ್ಯೆ
  • 200ಕ್ಕೂ ಹೆಚ್ಚು ಮಂದಿಗೆ ಗಾಯ
  • ರಾಜಪಕ್ಷ ಬೆಂಬಲಿಗರು-ಪ್ರತಿಪಕ್ಷ, ಪ್ರತಿಭಟನಾಕಾರರ ನಡುವೆ ಘರ್ಷಣೆ
  • ದೇಶಾದ್ಯಂತ ಕರ್ಫ್ಯೂ ಜಾರಿ

ಕೊಲಂಬೊ: ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಪ್ರಧಾನಿ ಮಹಿಂದ ರಾಜಪಕ್ಷ ಸೋಮವಾರ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಮಾಜಿ ಪ್ರಧಾನಿಯ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ ಮಂಗಳವಾರ 8ಕ್ಕೆ ಏರಿದೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸರಕಾರದ ಪರ ಮತ್ತು ವಿರೋಧಿಗಳ ನಡುವಣ ಹಿಂಸಾಚಾರ ತಾರಕಕ್ಕೇರಿದೆ. ನಾಗರಿಕ ದಂಗೆಯನ್ನು ಹತ್ತಿಕ್ಕಲು ದೇಶಾದ್ಯಂತ ಕರ್ಫ್ಯೂ ಜಾರಿಯಾಗಿದೆ. ಕೊಲಂಬೊದಲ್ಲಿ ಭದ್ರತೆಗೆ ಸೇನೆಯನ್ನು ನಿಯೋಜಿಸಲಾಗಿದೆ. ಹತರಾದವರಲ್ಲಿ ಒಬ್ಬ ಸಂಸದರೂ ಸೇರಿದ್ದಾರೆ. 40ಕ್ಕೂ ಹೆಚ್ಚು ರಾಜಕಾರಣಿಗಳ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
ಮಹಿಂದ ರಾಜಪಕ್ಷ ಅವರು ಹೆಚ್ಚುತ್ತಿರುವ ಒತ್ತಡಕ್ಕೆ ಮಣಿದು ಸೋಮವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಇದರೊಂದಿಗೆ ಹಿಂಸಾಚಾರ ಕೂಡ ಉಲ್ಬಣಿಸಿದೆ. ಮಹಿಂದ ರಾಜಪಕ್ಷ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಸರಕಾರದ ಪರ-ವಿರೋಧಿಗಳ ಹಿಂಸಾಚಾರ
ಪ್ರಧಾನಿಯವರ ಅಧಿಕೃತ ನಿವಾಸಕ್ಕೆ ಸಾವಿರಾರು ಸರಕಾರಿ ವಿರೋಧಿ ಪ್ರತಿಭಟನಾಕಾರರು ಸೋಮವಾರ ಮುತ್ತಿಗೆ ಹಾಕಿದ್ದರು. ಆಗ ಮಹಿಂದ ರಾಜಪಕ್ಷ ಅವರ ಉದ್ರಿಕ್ತ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವೆ ಹಿಂಸಾಚಾರ ಉಂಟಾಯಿತು. ಗೆಜೆಟ್‌ ಅಧಿಸೂಚನೆಯ ಪ್ರಕಾರ ರಾಜೀನಾಮೆ ಅಂಗೀಕಾರವಾಗಿದೆ. ಮಹಿಂದ ಅವರ ಕಿರಿಯ ಸೋದರ ಮತ್ತು ಅಧ್ಯಕ್ಷ ಗೋಟಬಯಾ ರಾಜಪಕ್ಷ ಅವರು ಪ್ರಸ್ತುತ ಆಡಳಿತದ ಸಾರಥ್ಯ ವಹಿಸಿದ್ದಾರೆ.

ಮಾಜಿ ಪ್ರಧಾನಿ ನಿವಾಸಕ್ಕೆ ಬೆಂಕಿ
ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಷ ಸೋಮವಾರ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಲಂಕಾದ ಕುರುನೇಗಲ್‌ನಲ್ಲಿರುವ ಅವರ ನಿವಾಸಕ್ಕೆ ಪ್ರತಿಭಟನಾಕಾರರು ಸೋಮವಾರ ಬೆಂಕಿ ಹಚ್ಚಿದರು.
ಮೆಡಾಮುಲನಾ ಮತ್ತು ಹಂಬನಟೊಟಾದಲ್ಲಿ ರಾಜಪಕ್ಷ ಅವರ ಪೂರ್ವಿಕರ ನಿವಾಸ, ಮ್ಯೂಸಿಯಂ ಕೂಡ ಬೆಂಕಿಗೆ ಆಹುತಿಯಾಗಿದೆ. ರಾಜಪಕ್ಷ ಅವರ ಹೆತ್ತವರ ಮೇಣದ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಮೊರಾತುವಾದ ಮೇಯರ್‌ ಸಮನ್‌ ಲಾಲ್‌ ಫನಾಂಡೊ, ಸಂಸದರಾದ ಸನತ್‌ ನಿಶಾಂತ, ರಮೇಶ್‌ ಪತಿರಣ, ಮಹಿಪಾಲ ಹೀರತ್‌, ತಿಸ್ಸಾ ಕುಟ್ಟಿರಚಿಚಿ, ನಿಮಲ್‌ ಲಾನ್ಸಾ ಅವರ ನಿವಾಸ ಹೊತ್ತಿ ಉರಿದಿದೆ. ವಿದ್ಯಾರ್ಥಿ ಸಂಘಟನೆ ಇಂಟರ್‌ ಯೂನಿವರ್ಸಿಟಿ ಸ್ಟೂಡೆಂಟ್ಸ್‌ ಫೆಡರೇಷನ್‌ (ಐಯುಎಸ್‌ಎಫ್‌) ಕಾರ್ಯಕರ್ತರು ಬೀದಿಗಿಳಿದಿದ್ದು, ಆಡಳಿತಾರೂಢ ಪಕ್ಷದ ರಾಜಕಾರಣಿಗಳು, ಸಂಸದರ ನಿವಾಸಕ್ಕೆ ದಾಳಿ ನಡೆಸಿದರು.

ಸಂಸದರ ಹತ್ಯೆ
ಶ್ರೀಲಂಕಾದ ಆಡಳಿತಾರೂಢ ಪಕ್ಷದ ಸಂಸದ ಅಮರಕೀರ್ತಿ ಅಥುಕೊರೊಲಾ ಗಲಭೆಯಲ್ಲಿ ಸೋಮವಾರ ಹತರಾಗಿದ್ದಾರೆ. ತಮ್ಮ ಕಾರಿಗೆ ಅಡ್ಡ ಬಂದ ಇಬ್ಬರು ಪ್ರತಿಭಟನಾಕಾರರ ಮೇಲೆ ಸಂಸದರು ಗುಂಡು ಹಾರಿಸಿದರು. ಇದಾದ ನಂತರ ಸಂಸದರು ಸಾವಿಗೀಡಾಗಿದ್ದಾರೆ. ಕೆಲ ವರದಿಗಳ ಪ್ರಕಾರ ಸಂಸದರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಡಳಿತ ಪಕ್ಷದ ಸಂಸದರು, ಸಚಿವರ ನಿವಾಸಗಳಿಗೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.

ಆಡಳಿತ ವಿರೋಧಿ ಅಲೆ, ಆರ್ಥಿಕ ಬಿಕ್ಕಟ್ಟು

ಲಂಕಾದ್ಯಂತ ಕಳೆದ ಹಲವಾರು ವಾರಗಳಿಂದ ಸರಕಾರಿ ವಿರೋಧಿ ಪ್ರತಿಭಟನೆಗಳು ನಡೆಯುತ್ತಿವೆ. ಆಹಾರ ಮತ್ತು ಇಂಧನ ಬಿಕ್ಕಟ್ಟು ತೀವ್ರವಾಗಿದೆ. ವಿದೇಶಿ ವಿನಿಮಯ ಸಂಗ್ರಹ ಬರಿದಾಗಿದೆ. ಕೋವಿಡ್‌ ಬಿಕ್ಕಟ್ಟಿನ ಬಳಿಕ ಪ್ರವಾಸೋದ್ಯಮ ನೆಲಕಚ್ಚಿದೆ. ರಾಜಪಕ್ಷ ಕುಟುಂಬದ ಕೌಟುಂಬಿಕ ರಾಜಕೀಯದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಭ್ರಷ್ಟಾಚಾರ ಪ್ರಕರಣಗಳ ಕಳಂಕವನ್ನು ರಾಜಪಕ್ಸ ಕುಟುಂಬ ಎದುರಿಸುತ್ತಿದೆ. ಕಳೆದ ವರ್ಷ ಶ್ರೀಲಂಕಾದಲ್ಲಿ ಸಂಪೂರ್ಣ ಸಾವಯವ ಕೃಷಿಗೋಸ್ಕರ ರಾಸಾಯನಿಕ ಗೊಬ್ಬರ ಬಳಕೆಯನ್ನು ಶೇ.100ರಷ್ಟು ನಿಷೇಧಿಸಲಾಯಿತು. ಇದು ಕೂಡ ಆಹಾರ ಬಿಕ್ಕಟ್ಟಿಗೆ ಕಾರಣ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲೆ/ಸಾಹಿತ್ಯ

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

ಸಂಸ್ಕೃತಿಗಳ ಗಮನಾರ್ಹ ಸಮ್ಮಿಲನದ ಕುರಿತಾಗಿ ಇಟಾಲಿಯನ್- ಬ್ರಿಟಿಷ್ ಪ್ರಜೆ ಗಿನೋ ಡಿ ಕ್ಲೆಮೆಂಟೆ ಅವರು ಸಂಪಾದಿಸಿ ಬರೆದಿರುವ ಕೃತಿಯನ್ನು ಕೇರಳದ ಎರ್ನಾಕುಲಂನಲ್ಲಿರುವ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು (Konkani Book Release ) ಬಿಡುಗಡೆಗೊಳಿಸಿದರು. ಕರಾವಳಿಯಲ್ಲಿ ಕೊಂಕಣಿ ಮಾತನಾಡುವ ಜಿಎಸ್‌ಬಿ ಸಮುದಾಯದವರು ಸಾಕಷ್ಟು ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಇದೊಂದು ಅಪೂರ್ವ ಕೃತಿಯಾಗಿದೆ.

VISTARANEWS.COM


on

By

Konkani Book Release
Koo

ಮಂಗಳೂರು: ಇಟಾಲಿಯನ್- ಬ್ರಿಟಿಷ್ ಲೇಖಕ (Italian-born British citizen) ಗಿನೋ ಡಿ’ಕ್ಲೆಮೆಂಟೆ ಅವರು ಸಂಪಾದಿಸಿದ ಕೃತಿ ”ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ’ ಕೃತಿಯನ್ನು (Konkani Book Release) ಕೇರಳದ (kerala) ಎರ್ನಾಕುಲಂನಲ್ಲಿರುವ (Ernakulam) ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು (Samyameendra Thirtha Swamiji ) ಬಿಡುಗಡೆಗೊಳಿಸಿದರು.

ಸಂಸ್ಕೃತಿಗಳ ಗಮನಾರ್ಹ ಸಮ್ಮಿಲನದ ಕುರಿತಾಗಿ ಇಟಾಲಿಯನ್-ಬ್ರಿಟಿಷ್ ಪ್ರಜೆ ಗಿನೋ ಡಿ ಕ್ಲೆಮೆಂಟೆ ಅವರು ಸಂಪಾದಿಸಿ ಬರೆದಿರುವ ಸಂವಾದಾತ್ಮಕ ಜಿಎಸ್‌ಬಿ (ಗೌಡ ಸಾರಸ್ವತ ಬ್ರಾಹ್ಮಣ) ಕೊಂಕಣಿ ಕೃತಿಯನ್ನು ಆಳವಾಗಿ ಅಧ್ಯಯನ ನಡೆಸಿ ರಚಿಸಿದ್ದಾರೆ.

ಕೇರಳದ ಎರ್ನಾಕುಲಂನಲ್ಲಿರುವ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಪ್ರತಿಷ್ಠಿತ ದಿಗ್ವಿಜಯ್ ಮಹೋತ್ಸವದಲ್ಲಿ ಅನಾವರಣಗೊಂಡ ಈ ಮಾರ್ಗದರ್ಶಿ ಕೃತಿ ಶ್ರೀಮಂತ ಭಾರತೀಯ ಭಾಷೆಯ ಸಂರಕ್ಷಣೆ ಮತ್ತು ಪ್ರಚಾರದಲ್ಲಿ ಮಹತ್ವದ ಮೈಲುಗಲ್ಲನ್ನು ಗುರುತಿಸುತ್ತದೆ.


Gino’s Guide for Conversational GSB Konkani ಕೃತಿಯು ಜಿ ಎಸ್ ಬಿ ಸಮುದಾಯದ ಪರಂಪರೆಯನ್ನು ಪೋಷಿಸುವ ಸಮರ್ಪಿತ ಸಂಸ್ಥೆಯಾದ ಜಿಎಸ್ ಬಿ ವರ್ಲ್ಡ್‌ವೈಡ್‌ನ ಯುವಜನರಿಂದ ಸುಗಮಗೊಳಿಸಲ್ಪಟ್ಟ ಅಡ್ಡ-ಸಾಂಸ್ಕೃತಿಕ ತಿಳುವಳಿಕೆ ಮತ್ತು ಭಾಷಾ ಸಂರಕ್ಷಣೆಗೆ ಅಸಾಧಾರಣ ಬದ್ಧತೆಯನ್ನು ಪ್ರತಿನಿಧಿಸುತ್ತದೆ.

ಕೃತಿಯ ಕುರಿತು ಮಾತನಾಡಿದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ, ಇದು ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ಸಮುದಾಯಗಳ ಮೇಲೆ ಬೀರುವ ಮಹತ್ವದ ಪರಿಣಾಮವನ್ನು ಒತ್ತಿ ಹೇಳುತ್ತದೆ ಎಂದರು.

ಗಿನೋ ಡಿ ಕ್ಲೆಮೆಂಟೆ ಅವರ ಕೆಲಸವು ಸಮರ್ಪಣಾ ಶಕ್ತಿ ಮತ್ತು ಸಾಂಸ್ಕೃತಿಕ ಮೆಚ್ಚುಗೆಗೆ ಸಾಕ್ಷಿಯಾಗಿದೆ. ನಮ್ಮ ಸಮುದಾಯದ ಹೊರಗಿನವರಿಂದ ಅಂತಹ ಆಳವಾದ ತೊಡಗಿಸಿಕೊಳ್ಳುವಿಕೆಯನ್ನು ನೋಡುವುದು ಅಪರೂಪ. ಈ ಮಾರ್ಗದರ್ಶಿ ನಮ್ಮ ಭಾಷಾ ಸಂರಕ್ಷಣೆಯ ಪ್ರಯತ್ನಗಳಲ್ಲಿ ಒಂದು ಸ್ಮಾರಕ ಸಾಧನೆಯಾಗಿದೆ ಎಂದು ಹೇಳಿದರು.

ಮಾರ್ಗದರ್ಶಿಯು ದೈನಂದಿನ ಸಂಭಾಷಣೆಗಳಿಗೆ ಪ್ರಾಯೋಗಿಕ ನುಡಿಗಟ್ಟುಗಳು ಮತ್ತು ಉದಾಹರಣೆಗಳೊಂದಿಗೆ ಉಚ್ಚಾರಣೆ, ವ್ಯಾಕರಣ ಮತ್ತು ಶಬ್ದಕೋಶದ ವಿವರವಾದ ಅವಲೋಕನವನ್ನು ನೀಡುತ್ತದೆ. ಇದು ಆರಂಭಿಕ ಮತ್ತು ಮುಂದುವರಿದ ಕಲಿಯುವವರಿಬ್ಬರನ್ನೂ ಪೂರೈಸುತ್ತದೆ, ಜಿಎಸ್ ಬಿ ಕೊಂಕಣಿಯನ್ನು ಕರಗತ ಮಾಡಿಕೊಳ್ಳಲು ಉತ್ಸುಕರಾಗಿರುವ ಯಾರಿಗಾದರೂ ಇದೊಂದು ಬಹುಮುಖ್ಯ ಸಂಪನ್ಮೂಲವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ಲೇಖಕರ ಹಿನ್ನೆಲೆ ಏನು?

ಜಿನೋ ಡಿ ಕ್ಲೆಮೆಂಟೆ ಮೂಲತಃ ಇಟಲಿಯವರಾಗಿದ್ದು, ಈಗ ಬ್ರಿಟಿಷ್ ಪ್ರಜೆಯಾಗಿದ್ದಾರೆ. ಮದುವೆಯ ಮೂಲಕ ಜಿ ಎಸ್ ಬಿ ಸಂಸ್ಕೃತಿಗೆ ಆಳವಾದ ವೈಯಕ್ತಿಕ ಸಂಪರ್ಕವನ್ನು ಹೊಂದಿದ್ದಾರೆ. ಅವರ ಸಂಗಾತಿಯು ಕರ್ನಾಟಕದ ಕಾರ್ಕಳ ತಾಲೂಕಿನ ಮೂಲದವರಾಗಿದ್ದಾರೆ. ಈ ಕೌಟುಂಬಿಕ ಬಂಧವು ಜಿನೋ ಅವರ ಜಿಎಸ್‌ಬಿ ಕೊಂಕಣಿಯ ತಲ್ಲೀನಗೊಳಿಸುವ ಅಧ್ಯಯನಕ್ಕೆ ಪ್ರೇರೇಪಿಸಿತು. ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅವರ ಉತ್ಸಾಹವು ಈ ಸಮಗ್ರ ಮಾರ್ಗದರ್ಶಿಯಲ್ಲಿ ಉತ್ತುಂಗಕ್ಕೇರಿತು. ಭಾರತೀಯ ಭಾಷೆಗಳ ದಾಖಲೀಕರಣ ಮತ್ತು ಪ್ರಚಾರಕ್ಕೆ ಮಹತ್ವದ ಕೊಡುಗೆಯನ್ನು ನೀಡಿದೆ.

Continue Reading

ವಿದೇಶ

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳನ್ನು ನೇಪಾಳ ನಿಷೇಧಿಸಿದೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

VISTARANEWS.COM


on

MDH, Everest Spices
Koo

ಕಾಠ್ಮಂಡುಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳನ್ನು ನೇಪಾಳ ನಿಷೇಧಿಸಿದೆ. ಈ ಹಿಂದೆ ಇದೇ ಕಾರಣಕ್ಕೆ ಈ ಉತ್ಪನ್ನಗಳನ್ನು ಸಿಂಗಾಪುರ, ಹಾಂಕಾಂಗ್‌ ಮುಂತಾದೆಡೆ ಬ್ಯಾನ್‌ ಮಾಡಲಾಗಿತ್ತು. ಕ್ಯಾನ್ಸರ್‌ಗೆ ಕಾರಣವಾಗಬಹುದಾದ ಎಥಿಲೀನ್ ಆಕ್ಸೈಡ್ (Ethylene Oxide) ಅಂಶ ಇದೆ ಎನ್ನುವ ದೂರು ಕೇಳಿ ಬಂದ ಕಾರಣಕ್ಕೆ ಈ ಉತ್ಪನ್ನಗಳ ಆಮದು, ಮಾರಾಟ ಮತ್ತು ಬಳಕೆಯನ್ನು ನೇಪಾಳದಲ್ಲಿ ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡು ನಿರ್ದಿಷ್ಟ ಬ್ರ್ಯಾಂಡ್‌ಗಳ ಮಸಾಲೆಗಳಲ್ಲಿನ ರಾಸಾಯನಿಕಗಳ ಬಗ್ಗೆ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

“ಹಾಂಗ್‌ಕಾಂಗ್ ಮತ್ತು ಸಿಂಗಾಪುರ್ ಈಗಾಗಲೇ ಈ ಉತ್ಪನ್ನಗಳಿಗೆ ನಿಷೇಧ ಹೇರಿವೆ. ಅಮೆರಿಕ ಹಾಗೂ ಆಸ್ಟ್ರೇಲಿಯಾ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾವು ಕೂಡ ಪರೀಕ್ಷೆ ನಡೆಸಲು ಮುಂದಾಗಿದ್ದೇವೆʼʼ ಎಂದು ಅವರು ವಿವರಿಸಿದ್ದಾರೆ. ಈ ಮಧ್ಯೆ ರಫ್ತಾಗುವ ಭಾರತೀಯ ಮಸಾಲೆಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸ್ಪೈಸ್ ಮಂಡಳಿ ಕ್ರಮ ಕೈಗೊಂಡಿದೆ. ಮಂಡಳಿ ಟೆಕ್ನೋ-ಸೈಂಟಿಫಿಕ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದಿದೆ. ಜತೆಗೆ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದೆ.

ಅಖಿಲ ಭಾರತ ಸಾಂಬಾರ ಪದಾರ್ಥಗಳ ರಫ್ತುದಾರರ ವೇದಿಕೆ ಮತ್ತು ಭಾರತೀಯ ಮಸಾಲೆ ಮತ್ತು ಆಹಾರ ಪದಾರ್ಥ ರಫ್ತುದಾರರ ಸಂಘದಂತಹ 130ಕ್ಕೂ ಹೆಚ್ಚು ಸಂಘಗಳೊಂದಿಗೆ ಭಾರತೀಯ ಸ್ಪೈಸ್ ಮಂಡಳಿ ಸಮಾಲೋಚನೆಯನ್ನೂ ನಡೆಸಿದೆ. ಮಂಡಳಿಯು ಎಲ್ಲ ರಫ್ತುದಾರರಿಗೆ ಎಥಿಲೀನ್ ಆಕ್ಸೈಡ್ ಬಳಕೆ ಬಗ್ಗೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳ ಹಿಂದೆ ಎಂಡಿಎಚ್‌, ಎವರೆಸ್ಟ್‌ ಮಸಾಲೆ ಸೇರಿದಂತೆ ಭಾರತದ ಒಟ್ಟು 527 ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದರು. ಹೀಗಾಗಿ 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ.

ಇನ್ನು ಅಪಾಯಕಾರಿ ರಾಸಾಯನಿಕಗಳು ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಕಂಡು ಬಂದಿವೆ. ಇನ್ನು ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸ ಬಳಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರು ಸಾಧ್ಯತೆ ಅತಿ ಹೆಚ್ಚಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading

ವಿದೇಶ

Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Zakir Naik: ಭಾರತದ ವಿವಾದಿತ ಮತಪ್ರಭಾಷಣಕಾರ, ಭಾಷಣಕಾರ ಜಾಕೀರ್ ನಾಯ್ಕ್‌ನನ್ನು ದೇಶದ ಚಕ್ರವರ್ತಿಯನ್ನಾಗಿ ಘೋಷಿಸಬೇಕೆಂದು ಹೇಳಿ ಪಾಕಿಸ್ತಾನದ ಮೌಲ್ವಿಯೊಬ್ಬ ವಿವಾದದ ಕಿಡಿ ಹೊತ್ತಿಸಿದ್ದಾನೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ʼʼಡಾ.ಜಾಕೀರ್ ನಾಯ್ಕ್‌ ತನ್ನ ವಿಡಿಯೊದ ಮೂಲಕ ಅನೇಕ ಹಿಂದುಗಳನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ್ದಾರೆ. ಹೀಗಾಗಿ ಅವರು ಅಲ್ಲಾಹುವಿನ ಸ್ನೇಹಿತ ಎನಿಸಿಕೊಂಡಿದ್ದಾರೆ. ಜತೆಗೆ ಭಾರತದ ಚಕ್ರವರ್ತಿ ಯಾಕಾಗಬಾರದು?ʼʼ ಎಂದು ಪ್ರಶ್ನಿಸಿಸುವ ಮೂಲಕ ನಾಲಿಗೆ ಹರಿಯಬಿಟ್ಟಿದ್ದಾನೆ.

VISTARANEWS.COM


on

Zakir Naik
Koo

ಇಸ್ಲಾಮಾಬಾದ್‌: ಪಾಕಿಸ್ತಾನದ ಮೌಲ್ವಿಯೊಬ್ಬ ಭಾರತದ ವಿವಾದಿತ ಮತಪ್ರಭಾಷಣಕಾರ, ಭಾಷಣಕಾರ ಜಾಕೀರ್ ನಾಯ್ಕ್‌ (Zakir Naik)ನನ್ನು ದೇಶದ ಚಕ್ರವರ್ತಿಯನ್ನಾಗಿ ಘೋಷಿಸಬೇಕೆಂದು ಹೇಳಿ ವಿವಾದ ಹುಟ್ಟು ಹಾಕಿದ್ದಾನೆ. ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ‘ಸಾಂಪ್ರದಾಯಿಕ ಹಿಂದೂ ಧರ್ಮ’ವನ್ನು ಉತ್ತೇಜಿಸುವ ಪಕ್ಷವು ಭಾರತವನ್ನು ಆಳುತ್ತಿರುವ ಅವಧಿಯಲ್ಲಿ ಸಾವಿರಾರು ಹಿಂದುಗಳನ್ನು ಮತಾಂತರಗೊಳಿಸಲು ಯತ್ನಿಸುವ ಜಾಕೀರ್ ನಾಯ್ಕ್‌ನ ಪಾತ್ರವನ್ನು ಮೌಲ್ವಿ ಶ್ಲಾಘಿಸಿದ್ದಾನೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಮೌಲ್ವಿ ತನ್ನ ಭಾಷಣದಲ್ಲಿ, ʼʼಡಾ.ಜಾಕೀರ್ ನಾಯ್ಕ್‌ ಇಂದು ತಮ್ಮ ಭಾಷಣ, ವಿಡಿಯೊದ ಮೂಲಕ ಸಾವಿರಾರು ಹಿಂದುಗಳ ಮತಾಂತರ ನಡೆಸಿದ್ದಾರೆ. ಸದ್ಯ ಭಾರತದಲ್ಲಿ ಆಡಳಿತ ನಡೆಸುತ್ತಿರುವ, ಮೋದಿ ನೇತೃತ್ವದ ಹಿಂದು ಪರವಾದ ಸರ್ಕಾರದ ಅವಧಿಯಲ್ಲಿ ಡಾ.ಝಾಕೀರ್‌ಗೆ ಪ್ರವಾದಿ ಇಬ್ರಾಹಿಂ ಅವರಂತೆ ಕಷ್ಟಕರ ಜೀವನ ನಡೆಸುವುದು ಅನಿವಾರ್ಯ ಎನಿಸಿಕೊಂಡಿದೆʼʼ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇಲ್ಲಿಗೆ ಮೌಲ್ವಿಯ ವಾಕ್‌ ಪ್ರವಾಹ ನಿಂತಿಲ್ಲ. ಮುಂದುವರಿದು, ʼʼಡಾ.ಜಾಕೀರ್ ನಾಯ್ಕ್‌ ತನ್ನ ವಿಡಿಯೊದ ಮೂಲಕ ಅನೇಕ ಹಿಂದುಗಳನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ್ದಾರೆ. ಹೀಗಾಗಿ ಅವರು ಅಲ್ಲಾಹುವಿನ ಸ್ನೇಹಿತ ಎನಿಸಿಕೊಂಡಿದ್ದಾರೆ. ಜತೆಗೆ ಭಾರತದ ಚಕ್ರವರ್ತಿ ಯಾಕಾಗಬಾರದು?ʼʼ ಎಂದು ಪ್ರಶ್ನಿಸಿಸುವ ಮೂಲಕ ನಾಲಿಗೆ ಹರಿಯಬಿಟ್ಟಿದ್ದಾನೆ.

ವ್ಯಾಪಕ ಆಕ್ರೋಶ

ಸದ್ಯ ಪಾಕಿಸ್ತಾನದ ಈ ಮೌಲ್ವಿಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಕಿಡಿ ಹೊತ್ತಿಸಿದೆ. ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕೆಂಬ ಮೌಲ್ವಿಯ ಆಘಾತಕಾರಿ ಘೋಷಣೆಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ʼʼಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನಿನ್ನ ಜಾಕೀರ್ ನಾಯ್ಕ್‌ ಪಲಾಯನ ಮಾಡಿದ್ದು ಯಾಕೆ ಎನ್ನುವುದಕ್ಕೆ ಮೊದಲು ಉತ್ತರಿಸುʼʼ ಎಂದು ಒಬ್ಬರು ಹೇಳಿದ್ದಾರೆ. ʼʼಜಾಕೀರ್ ʼನಾಲಾಯಕ್‌ʼ ಭಯೋತ್ಪಾದನೆಯನ್ನು ಉತ್ತೇಜಿಸುತ್ತಾನೆ. ಒಂದು ವೇಳೆ ಆತ ನಿಜವನ್ನೇ ಹೇಳಿದ್ದರೆ ಹೇಡಿಯಂತೆ ಪಲಾಯನ ಮಾಡುವ ಅಗತ್ಯ ಏನಿತ್ತು?ʼʼ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಜಾಕೀರ್ ನಾಯ್ಕ್ ಬಿಡುಗಡೆ ಮಾಡಿದ್ದ ವಿಡಿಯೊದಲ್ಲಿ ಯುಎಇಯಲ್ಲಿನ ದೇವಾಲಯ ನಿರ್ಮಾಣದ ಕೆಲಸವನ್ನು ಒಪ್ಪಿಕೊಳ್ಳದಂತೆ ಮುಸ್ಲಿಂ ಯುವಕರಿಗೆ ಸಂದೇಶ ನೀಡಿದ್ದ. ಇಂತಹ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಇಸ್ಲಾಮಿಕ್ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಇದಕ್ಕೆ ಕಾರಣ ನೀಡಿದ್ದ. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದು ಮಂದಿರ ಉದ್ಘಾಟಿಸಿದ್ದನ್ನು ಉಲ್ಲೇಖಿಸಿ ಈ ವಿಡಿಯೊವನ್ನು ಮಾಡಲಾಗಿತ್ತು.

“ಆಲ್ಕೋಹಾಲ್ ಉತ್ಪಾದಿಸುವ ಕಂಪನಿಯಲ್ಲಿ ಕೆಲಸ ಮಾಡುವುದು ಮತ್ತು ಸಾವಿರಾರು ಜನರನ್ನು ಕೊಲ್ಲಲಿರುವ ಕೊಕೇನ್ ಅಥವಾ ಗಾಂಜಾವನ್ನು ಉತ್ಪಾದಿಸುವುದು ದೊಡ್ಡ ಪಾಪ. ಆದರೆ ದೇವಾಲಯ ನಿರ್ಮಾಣಕ್ಕಾಗಿ ಕೆಲಸ ಮಾಡುವುದು ಅದಕ್ಕಿಂತಲೂ ದೊಡ್ಡ ಪಾಪ. ಇಸ್ಲಾಂ ಹೊರತುಪಡಿಸಿ ಬೇರೆ ಯಾವುದೇ ಧರ್ಮಗಳ ಪೂಜಾ ಸ್ಥಳಕ್ಕಾಗಿ ನೀವು ಕೆಲಸ ಮಾಡುವುದು ಹರಾಮ್” ಎಂದು ನಾಯ್ಕ್‌ ಹೇಳಿದ್ದ. ಜತೆಗೆ “ಸಾವಿರಾರು ಮುಗ್ಧ ಮನುಷ್ಯರನ್ನು ಕೊಲ್ಲುತ್ತಿರುವ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರಗಳನ್ನು ತಯಾರಿಸುವುದು ದೇವಾಲಯ ಅಥವಾ ಚರ್ಚ್ ನಿರ್ಮಾಣದಲ್ಲಿ ಕೆಲಸ ಮಾಡುವುದಕ್ಕಿಂತ ಉತ್ತಮ ಕಾರ್ಯʼʼ ಎಂದೂ ಅಭಿಪ್ರಾಯಪಟ್ಟಿದ್ದ.

ನಿಷೇಧ

ದ್ವೇಷವನ್ನು ಉತ್ತೇಜಿಸುವ ಭಾಷಣ ಮಾಡುವ ಕಾರಣಕ್ಕೆ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ (IRF) ಸ್ಥಾಪಕ ಜಾಕೀರ್ ನಾಯ್ಕ್‌ನನ್ನು 2016ರಲ್ಲಿ ಭಾರತದಲ್ಲಿ ನಿಷೇಧಿಸಲಾಗಿತ್ತು. ಮುಸ್ಲಿಂ ಯುವಕರನ್ನು ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಲು ಪ್ರಚೋದಿಸಿದ ಆರೋಪ ಆತನ ಮೇಲಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಮಾತ್ರವಲ್ಲ ಜಾರಿ ನಿರ್ದೇಶನಾಲಯ (ED) ಆತನ ಸಂಸ್ಥೆಯ ವಿರುದ್ಧ ಮನಿ ಲಾಂಡರಿಂಗ್ ಆರೋಪದ ಮೇಲೆ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Zakir Naik: ಒಮಾನ್‌ನಿಂದ ಜಾಕೀರ್‌ ನಾಯ್ಕ್‌ ಗಡಿಪಾರು, ಮೂಲಭೂತವಾದಿಯ ಬಂಧನಕ್ಕೆ ಭಾರತ ಮುಹೂರ್ತ ಫಿಕ್ಸ್‌?

Continue Reading

ವೈರಲ್ ನ್ಯೂಸ್

Viral News: ಅಂತ್ಯಕ್ರಿಯೆ ವೇಳೆ ಬದುಕಿ ಬಂದ ಮಗಳು; ಖುಷಿಯಾಗಿದ್ದ ಪೋಷಕರಿಗೆ ಕಾದಿತ್ತು ಮತ್ತೊಂದು ಶಾಕ್‌!

Viral News:ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಕ್ಸಿಕೋದ ಕ್ಯಾಮಿಲಾ ರೊಕ್ಸಾನಾ ಮರಿನೇಜ್‌ ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇದಾದ ಬಳಿಕ 12 ಗಂಟೆಗಳ ಬಳಿಕ ಆಕೆ ಜೀವಂತವಾಗುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾಳೆ. ಮಗಳು ಇನ್ನೇನು ಬದುಕಿದಳಲ್ಲಾ ಎಂದು ಪೋಷಕರು ಬಹಳ ಖುಷಿಯಲ್ಲಿದ್ದರು. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಕ್ಯಾಮಿಲಾ ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

Viral News
Koo

ಮೆಕ್ಸಿಕೋ: ಪ್ರೀತಿಪಾತ್ರರಾದವರನ್ನು ಕಳೆದುಕೊಳ್ಳುವಂತಹ ನೋವು ಬೇರೊಂದಿಲ್ಲ. ಅದರಲ್ಲೂ ಮನೆಯಲ್ಲಿ ನಗು ನಗುತ್ತಾ ಆಟ ಆಡುತ್ತಿದ್ದ ಮಕ್ಕಳು ಡಿಢೀರ್‌ ಸಾವನ್ನಪ್ಪಿದ್ದರೆ ಅದರ ನೋವು ಊಹಿಸೋಕೆ ಸಾಧ್ಯವಿಲ್ಲ. ಇನ್ನು ಕೆಲವೊಮ್ಮೆ ಸತ್ತಿದ್ದಾರೆಂದು ವೈದ್ಯರು ಹೇಳಿದ ಬಳಿಕ ಮತ್ತೆ ಇನ್ನೇನು ಅಂತ್ಯಕ್ರಿಯೆ ಮಾಡಬೇಕೆನ್ನುವಾಗ ಬದುಕಿ ಬಂದಿದ್ದೂ ಇದೆ. ಅಂತಹದ್ದೇ ಒಂದು ಅಪರೂಪವಾದ ಘಟನೆ(Viral News)ಯೊಂದು ಮೆಕ್ಸಿಕೋ(Mexico)ದಲ್ಲಿ ನಡೆದಿದೆ. ಆದರೆ ಸತ್ತು ಬದುಕಿದ ಬಾಲಕಿ ಮತ್ತೆ ಕೊನೆಯುಸಿರೆಳೆದಿದ್ದು, ಪೋಷಕರು ಎರಡೆರಡು ಬಾರಿ ನೋವು ಅನುಭವಿಸುವಂತಾಗಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಕ್ಸಿಕೋದ ಕ್ಯಾಮಿಲಾ ರೊಕ್ಸಾನಾ ಮರಿನೇಜ್‌ ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇದಾದ ಬಳಿಕ 12 ಗಂಟೆಗಳ ಬಳಿಕ ಆಕೆ ಜೀವಂತವಾಗುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾಳೆ. ಮಗಳು ಇನ್ನೇನು ಬದುಕಿದಳಲ್ಲಾ ಎಂದು ಪೋಷಕರು ಬಹಳ ಖುಷಿಯಲ್ಲಿದ್ದರು. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಕ್ಯಾಮಿಲಾ ಕೊನೆಯುಸಿರೆಳೆದಿದ್ದಾಳೆ.

ಏನಿದು ಘಟನೆ?

ಈ ಘಟನೆ ಕಳೆದ ವರ್ಷ ಮೆಕ್ಸಿಕೋದ ಸ್ಯಾನ್‌ ಲೂಯಿಸ್‌ ಪೋಟೋಸಿಯಲ್ಲಿ ನಡೆದಿದ್ದು, ಕ್ಯಾಮಿಲಾ ತಾಯಿ ಮೇರಿ ಜೇನ್‌ ಮೆಂಡೋಜಾ ಈ ಬಗ್ಗೆ ಮಾಹಿತಿ ನೀಡಿದ್ದಾಳೆ.ಅವರು ಹೇಳುವ ಪ್ರಕಾರ, ಹೊಟ್ಟೆ ನೋವು ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದ ಕ್ಯಾಮಿಲಾ ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಳ್ಳಲು ಶುರು ಮಾಡಿದ್ದಳು. ತಕ್ಷಣ ಆಕೆಯನ್ನು ಮಕ್ಕಳ ತಜ್ಞ ವೈದ್ಯರ ಬಳಿಗೆ ಕರೆದೊಯ್ಯಲಾಗಿತ್ತು. ಅವರ ಸಲಹೆ ಮೇರೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಕೆಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿರಲಿಲ್ಲ. ಕೇವಲ ಹಣ್ಣು ಮತ್ತು ನೀರು ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದರು.

ಆದರೆ ಅವಳ ಸ್ಥಿತಿ ದಿನೇ ದಿನೇ ಹದಗೆಡುತ್ತಲೇ ಹೋಗಿತ್ತು.ವೈದ್ಯರ ಚಿಕಿತ್ಸೆ ಯಾವುದೇ ರೀತಿಯಲ್ಲಿ ಫಲಕಾರಿಯಾಗಲೇ ಇಲ್ಲ. ಅವಳನ್ನು ವೆಂಟಿಲೇಟರ್‌ನಲ್ಲಿ ಇಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕ್ಯಾಮಿಲಾ ಕೊನೆಯುಸಿರೆಳೆದಿದ್ದಾಳೆ. ಆಕೆ ಸಾವನ್ನಪ್ಪಿರುವ ಬಗ್ಗೆ ಸ್ವತಃ ವೈದ್ಯರೇ ದೃಢಪಡಿಸಿದ್ದರು. ಡಿಹೈಡ್ರೇಶನ್‌ನಿಂದಾಗಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದರು. ಇದಾದ ಬಳಿಕ ಮಗುವಿನ ದೇಹದೊಂದಿಗೆ ಪೋಷಕರು ಮನೆಗೆ ವಾಪಾಸಾಗಿ, ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು.

ಇದನ್ನೂ ಓದಿ:Viral Video: ಅಬ್ಬಾ.. ಮದ್ವೆ ಮಂಟಪದಲ್ಲೇ ಬಿಗ್‌ ಫೈಟ್‌; ವರನಿಗಾಗಿ ಯುವತಿಯರ ಮಾರಾಮಾರಿ-ವಿಡಿಯೋ ವೈರಲ್‌

ಅಂತ್ಯಕ್ರಿಯೆ ತಯಾರಿ ನಡೆಸುತ್ತಿದ್ದ ಪೋಷಕರಿಗೆ ಮತ್ತು ಕುಟುಂಬಸ್ಥರಿಗೆ ಶಾಕ್‌ವೊಂದು ಕಾದಿತ್ತು. ಕಾಫಿನ್‌ನನ್ನು ಮಲಗಿಸಿದ್ದ ಮಗಳ ದೇಹದಲ್ಲಿ ಚಲನೆಗಳನ್ನು ಕಂಡು ಎಲ್ಲರೂ ಒಂದು ಕ್ಷಣಕ್ಕೆ ದಂಗಾಗಿದ್ದರು. ಮಗುವಿನ ನಾಡಿ ಹಿಡಿದು ಪರಿಶೀಲನೆ ನಡೆಸಿದಾಗ ಕ್ಯಾಮಿಲಾ ಬದುಕಿರುವುದು ತಿಳಿಯಿತು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರಾದೃಷ್ಟವಶಾತ್‌ ಆಕೆ ಎರಡನೇ ಬಾರಿ ಸಾವನ್ನಪ್ಪಿದ್ದಾಳೆ. ಅಂತೂ ಇಂತೂ ಮಗು ಮತ್ತ ಬದುಕಿ ಬಂದಲ್ಲ ಎಂಬ ಖುಷಿಯಲ್ಲಿದ್ದ ಪೋಷಕರ ನೋವು ಊಹಿಸಲು ಸಾಧ್ಯವಿರಲಿಲ್ಲ.

Continue Reading
Advertisement
Pension and NAREGA money credited to farmers loans CM Siddaramaiah slams bank
ರಾಜಕೀಯ3 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ6 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ11 mins ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ19 mins ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ24 mins ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

HD Revanna case Hearing in Holenarasipura sexual assault case adjourned to Monday
ಹಾಸನ60 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್1 hour ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ1 hour ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Narendra Modi
ದೇಶ1 hour ago

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌