ಎಲಾನ್‌ ಮಸ್ಕ್‌ನ Starlink ಉಪಗ್ರಹಗಳ ಮೇಲೆ ಚೀನಾ ಮಿಲಿಟರಿ ಕಣ್ಣು - Vistara News

ವಿದೇಶ

ಎಲಾನ್‌ ಮಸ್ಕ್‌ನ Starlink ಉಪಗ್ರಹಗಳ ಮೇಲೆ ಚೀನಾ ಮಿಲಿಟರಿ ಕಣ್ಣು

ನೆಟ್ವರ್ಕ್‌ ವಿಷಯದಲ್ಲಿ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಂತೆ ಇರುವ ಚೀನಾಕ್ಕೆ ಇದೀಗ ಎಲಾನ್‌ ಮಸ್ಕ್‌ನ starlink satellites ಉಪಗ್ರಹಗಳ ಭಯ ಹುಟ್ಟಿಕೊಂಡಿದೆ. ಅವೇನಾದರೂ ಭದ್ರತೆಗೆ ಬೆದರಿಕೆ ಉಂಟು ಮಾಡಿದರೆ ನಿಷ್ಕ್ರಿಯ ಮಾಡುವ ಬಗ್ಗೆ ಚಿಂತನೆ ಶುರು ಮಾಡಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀಜಿಂಗ್: ಚೀನಾದ ಮಿಲಿಟರಿ ಸಂಶೋಧಕರು ಎಲಾನ್ ಮಸ್ಕ್‌ನ ಸ್ಟಾರ್‌ಲಿಂಕ್ ಉಪಗ್ರಹಗಳು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯೊಡ್ಡಿದರೆ ಅದನ್ನು ನಿಷ್ಕ್ರಿಯಗೊಳಿಸಬಹುದಾದ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಅಧ್ಯಯನ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಪ್ರತಿ ಸ್ಟಾರ್‌ಲಿಂಕ್ ಉಪಗ್ರಹವನ್ನು ಪತ್ತೆಹಚ್ಚಲು ಮತ್ತು ನಿಗಾ ಇಡಲು ಅಭೂತಪೂರ್ವ ಪ್ರಮಾಣದಲ್ಲಿ ಮತ್ತು ಅತಿ ಸೂಕ್ಷ್ಮ ಕಣ್ಗಾವಲು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ವಿಜ್ಞಾನಿಗಳು ಒತ್ತಿಹೇಳಿದ್ದಾರೆ.

ಬೀಜಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟ್ರ್ಯಾಕಿಂಗ್ ಮತ್ತು ಟೆಲಿಕಮ್ಯುನಿಕೇಶನ್‌ನ ಸಂಶೋಧಕ ರೆನ್ ಯುವಾನ್‌ಜೆನ್ ಅವರು ಈ ಅಧ್ಯಯನವನ್ನು ನಡೆಸಿದ್ದಾರೆ. ಇದು “ಮೃದು ಮತ್ತು ಕಠಿಣವಾದ ನಾಶಕ ವಿಧಾನಗಳ ಸಂಯೋಜನೆಯನ್ನು” ಅಳವಡಿಸಿಕೊಳ್ಳಲು ಕರೆ ನೀಡುತ್ತದೆ.

“ಕೆಲವು ಸ್ಟಾರ್‌ಲಿಂಕ್ ಉಪಗ್ರಹಗಳು ತಮ್ಮ ಕಾರ್ಯಗಳನ್ನು ಕಳೆದುಕೊಳ್ಳುವಂತೆ ಮಾಡಲು ಮತ್ತು ಅವುಗಳ ಆಪರೇಟಿಂಗ್ ಸಿಸ್ಟಮ್ ಅನ್ನು ನಾಶ ಮಾಡಲು ಸಾಫ್ಟ್‌ ಮತ್ತು ಹಾರ್ಡ್‌ ಕಿಲ್‌ ಮೆಥಡ್ಸ್‌’ ಗಳ ಸಂಯೋಜನೆಯನ್ನು ಅಳವಡಿಸಿಕೊಳ್ಳಬೇಕು” ಎಂದು ದೇಶೀಯ ಜರ್ನಲ್ ‘ಮಾಡರ್ನ್ ಡಿಫೆನ್ಸ್ ಟೆಕ್ನಾಲಜಿ’ಯಲ್ಲಿ ಪ್ರಕಟವಾದ ಲೇಖನ ತಿಳಿಸಿದೆ.

ಸ್ಟಾರ್‌ಲಿಂಕ್ ಸಂಪರ್ಕವು ಅಮೆರಿಕದ ಡ್ರೋನ್‌ಗಳು ಮತ್ತು ಸ್ಟೆಲ್ತ್ ಫೈಟರ್ ಜೆಟ್‌ಗಳ ಡೇಟಾ ಟ್ರಾನ್ಸ್‌ಮಿಷನ್ ವೇಗವನ್ನು 100 ಪಟ್ಟು ಹೆಚ್ಚಿಸುತ್ತದೆ ಎಂಬ ಅಂದಾಜಿನ ಮೇರೆಗೆ ಚೀನಾದ ಮಿಲಿಟರಿ ಸಂಶೋಧಕರು ಈ ಅಧ್ಯಯನವನ್ನು ಕೈಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಟಾರ್‌ಲಿಂಕ್ ಎಂಬುದು ಮಸ್ಕ್ ಅವರ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಅದರ ಅಡಿಯಲ್ಲಿ, ಅವರ ಕಂಪನಿ ಸ್ಪೇಸ್‌ಎಕ್ಸ್‌ ಸಣ್ಣ ಉಪಗ್ರಹಗಳನ್ನು ಕೆಳ-ಭೂ ಕಕ್ಷೆಯಲ್ಲಿ ಉಡಾವಣೆ ಮಾಡುವ ಮೂಲಕ ಉಪಗ್ರಹ ಇಂಟರ್ನೆಟ್ ನೆಟ್ವರ್ಕ್ ಅನ್ನು ಅಭಿವೃದ್ಧಿಪಡಿಸಲು ಯೋಜಿಸಿದೆ. ಈ ಉಪಗ್ರಹಗಳು ಪ್ರಪಂಚದಾದ್ಯಂತ ಲೋ ಲ್ಯಾಟೆನ್ಸಿ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಸೇವೆಗಳನ್ನು ಒದಗಿಸುತ್ತವೆ. ಪ್ರಾದೇಶಿಕ ಇಂಟರ್ನೆಟ್ ಮೂಲಸೌಕರ್ಯವು ತಲುಪದ ದುರ್ಗಮ ಪ್ರದೇಶಗಳ ಮೇಲೆ ನಿರ್ದಿಷ್ಟ ಗಮನವನ್ನು ಈ ಜಾಲವು ಹರಿಸುತ್ತದೆ.

ಸ್ಟಾರ್‌ಲಿಂಕ್ ಸಾವಿರಾರು ಸಣ್ಣ ಉಪಗ್ರಹಗಳಿಂದ ಕೂಡಿದೆ ಮತ್ತು ಅವೆಲ್ಲವನ್ನೂ ನಾಶಪಡಿಸುವುದು ಚೀನಾದ ಯೋಜನೆಯಾಗಿದೆ. ಕ್ಷಿಪಣಿಗಳನ್ನು ಬಳಸಿ ಈ ಉಪಗ್ರಹಗಳನ್ನು ನಾಶಪಡಿಸುವುದು ದುಬಾರಿ ಆಗುವುದರಿಂದ ಚೀನಾದ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಲೇಸರ್‌ಗಳು, ಮೈಕ್ರೋವೇವ್ ತಂತ್ರಜ್ಞಾನ ಅಥವಾ ಸಣ್ಣ ಉಪಗ್ರಹಗಳನ್ನು ಬಳಸುವಂತೆ ಸಂಶೋಧಕರು ಸಲಹೆ ನೀಡಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಮಿಲಿಟರಿ ಸಂವಹನಕ್ಕೆ ಸಹಾಯ ಮಾಡಲು ಉಕ್ರೇನ್‌ಗೆ ಸ್ಟಾರ್‌ಲಿಂಕ್ ತಂತ್ರಜ್ಞಾನವನ್ನು ಸರಬರಾಜು ಮಾಡಿದ ನಂತರ, ರಷ್ಯಾದ ರೋಸ್ಕೋಸ್ಮಾಸ್ ಬಾಹ್ಯಾಕಾಶ ಸಂಸ್ಥೆಯ ಮುಖ್ಯಸ್ಥ ಡಿಮಿಟ್ರಿ ರೊಗೊಜಿನ್ ಅವರು ಮಸ್ಕ್‌ಗೆ ಎಚ್ಚರಿಕೆ ನೀಡಿ, ಸಂಭವನೀಯ ಪರಿಣಾಮಗಳ ಬಗ್ಗೆ ಬೆದರಿಕೆ ಒಡ್ಡಿದರು.

ಸ್ಟಾರ್‌ಲಿಂಕ್ ಉಪಗ್ರಹವನ್ನು ಪೆಂಟಗನ್ ವಿತರಿಸಿದೆ; ಇದಕ್ಕಾಗಿ ಎಲಾನ್ ಮಸ್ಕ್‌ ಜವಾಬ್ದಾರನಾಗಬೇಕಾಗುತ್ತದೆ ಮತ್ತು ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ರೊಗೊಜಿನ್ ತಮ್ಮ ಟೆಲಿಗ್ರಾಮ್ ಚಾನೆಲ್‌ನಲ್ಲಿ ಹೇಳಿದ್ದರು.ಿ= ಇದನ್ನೂ ಓದಿ Explainer: ಎಲಾನ್‌ ಮಸ್ಕ್‌ ಟ್ವಿಟ್ಟರ್‌ ಕೊಳ್ಳೋದು ಅಂತಿಮ, ಮುಂದೇನಾಗುತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Shani Louk Photo: ಬಹುತೇಕ ಪೂರ್ಣ ಬೆತ್ತಲೆಯಾಗಿರುವ ಇಸ್ರೇಲಿ ಮಹಿಳೆ ಶಾನಿ ಲೌಕ್ ಅವರ ದೇಹವನ್ನು ಜೀಪಿನಲ್ಲಿ ಹಾಕಿ ಮೆರವಣಿಗೆ ಮಾಡುತ್ತಿರುವ ಕರುಳು ಕಿವುಚುವಂಥ ಫೋಟೋವು ಪ್ರಶಸ್ತಿ ಪಡೆದ ಚಿತ್ರಗಳಲ್ಲಿ ಒಂದಾಗಿದೆ.

VISTARANEWS.COM


on

shani louk photo hamas terrorists
Koo

ನ್ಯೂಯಾರ್ಕ್‌: ಹಮಾಸ್‌ ಉಗ್ರರಿಂದ (Hamas Terrorists) ಹತ್ಯೆಗೀಡಾದ ಯಹೂದಿ ಮಹಿಳೆ ಶಾನಿ ಲೌಕ್‌ (Shani Louk) ಬೆತ್ತಲೆ ದೇಹವನ್ನು ಗಾಜಾದ (Gaza strip) ಬೀದಿಗಳಲ್ಲಿ ಹಮಾಸ್ ಭಯೋತ್ಪಾದಕರು ಮೆರವಣಿಗೆ ಮಾಡುತ್ತಿರುವ ಚಿತ್ರಕ್ಕೆ ಫೋಟೋ-ಆಫ್-ದಿ-ಇಯರ್ ಬಹುಮಾನ (Photo Award) ನೀಡಲಾಗಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.

ಬಹುತೇಕ ಪೂರ್ಣ ಬೆತ್ತಲೆಯಾಗಿರುವ ಇಸ್ರೇಲಿ ಮಹಿಳೆ ಶಾನಿ ಲೌಕ್ ಅವರ ದೇಹವನ್ನು ಜೀಪಿನಲ್ಲಿ ಹಾಕಿ ಮೆರವಣಿಗೆ ಮಾಡುತ್ತಿರುವ ಕರುಳು ಕಿವುಚುವಂಥ ಫೋಟೋವು ಪ್ರಶಸ್ತಿ ಪಡೆದ ಚಿತ್ರಗಳಲ್ಲಿ ಒಂದಾಗಿದೆ. ಇದನ್ನು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್‌ಗಾಗಿ ತೆಗೆಯಲಾಗಿತ್ತು. ಯುಎಸ್ ಮೂಲದ ಡೊನಾಲ್ಡ್ ಡಬ್ಲ್ಯೂ. ರೆನಾಲ್ಡ್ಸ್ ಜರ್ನಲಿಸಂ ಇನ್ಸ್ಟಿಟ್ಯೂಟ್ ಈ ಸ್ಪರ್ಧೆಯನ್ನು ನಡೆಸುತ್ತಿದ್ದು, ಪ್ರಶಸ್ತಿಯನ್ನು ನೀಡುತ್ತದೆ.

ʼಪಿಕ್ಚರ್ಸ್ ಆಫ್ ದಿ ಇಯರ್ ಇಂಟರ್ನ್ಯಾಷನಲ್ʼ ಪ್ರಶಸ್ತಿ ವಿಭಾಗದಲ್ಲಿ ಇದು ಮೊದಲ ಸ್ಥಾನವನ್ನು ಪಡೆದಿದೆ. ಆದರೆ ಈ ಪ್ರಶಸ್ತಿ ಘೋಷಣೆಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ಎದುರಾಗಿದೆ. ಜನ ಲೌಕ್ ಅವರ ಫೋಟೋವನ್ನು “ಯಹೂದಿ ಮಹಿಳೆಯ ಬದುಕಿನ ಘನತೆಗೆ ಮಾಡಿದ ಅವಮಾನ” ಎಂದು ದೂಷಿಸಿದ್ದಾರೆ.

ಶಾನಿ ಲೌಕ್‌ 22 ವರ್ಷ ವಯಸ್ಸಿನ ಜರ್ಮನ್-ಇಸ್ರೇಲಿ ಮಹಿಳೆಯಾಗಿದ್ದು, ಹಮಾಸ್‌ ನಡೆಸಿದ ಕಳೆದ ವರ್ಷದ ಅಕ್ಟೋಬರ್ 7ರ ದಾಳಿಯ ಸಂದರ್ಭದಲ್ಲಿ ಉಗ್ರರ ಕೈಗೆ ಸಿಕ್ಕಿಬಿದ್ದಿದ್ದರು. ಅವರನ್ನು ಅಪಹರಿಸಿ ಗಾಜಾ ಪಟ್ಟಿಗೆ ಕರೆದೊಯ್ಯಲಾಗಿತ್ತು. ಪ್ಯಾಲೇಸ್ಟಿನಿಯನ್ ಉಗ್ರರು ಈಕೆಯನ್ನು ಗಾಯಗೊಳಿಸಿ, ತೆರೆದ ಜೀಪಿನಲ್ಲಿ ಬೋರಲು ಮಲಗಿಸಿ ಬೀದಿಯಲ್ಲಿ ಮೆರವಣಿಗೆ ಮಾಡಿದ್ದರು. ಈಕೆಯ ಮೈಯ ಮೇಲಿದ್ದ ಉಡುಪು ಬಹುತೇಕ ಹರಿದು ಆಕೆ ವಿವಸ್ತ್ರಳಾಗಿದ್ದು, ಆಕೆಯ ಮೇಲೆ ಹಮಾಸ್‌ ಉಗ್ರನೊಬ್ಬ ಕುಳಿತಿದ್ದುದು ಕಂಡುಬಂದಿತ್ತು. ಈ ಫೋಟೋಗೆ ಪ್ರಶಸ್ತಿ ದೊರೆತಿದೆ.

“ಈ ಫೋಟೋವನ್ನು ತೆಗೆದ ವ್ಯಕ್ತಿಯು ನಾಗರಿಕರನ್ನು ಹತ್ಯೆ ಮಾಡುವ, ಚಿತ್ರಹಿಂಸೆ ನೀಡುವ ಮತ್ತು ಅತ್ಯಾಚಾರ ಮಾಡುವ ಜಿಹಾದಿ ಗ್ಯಾಂಗ್‌ನ ಭಾಗವಾಗಿದ್ದಾನೆ. ಅವಳನ್ನು ಹೀಗೆ ನೆನಪಿಸಿಕೊಳ್ಳುವುದು ಆಕೆಯ ಮನೆಯವರಿಗೆ ಖಂಡಿತಕ್ಕೂ ಇಷ್ಟವಿಲ್ಲ. ಈ ಪ್ರಶಸ್ತಿಯು ಅವಳ ಘನತೆಗೆ ನಿರಂತರ ಅಪಚಾರ ಎಸಗುತ್ತದೆ” ಎಂದು ಒಬ್ಬರು ಆಕ್ರೋಶಿಸಿದ್ದಾರೆ.

“ಶಾನಿ ಲೌಕ್ ಅವರ ದೇಹವನ್ನು ಭಯೋತ್ಪಾದಕರು ಪರೇಡ್ ಮಾಡುತ್ತಿರುವ ಚಿತ್ರವನ್ನು ತೆಗೆದ ಅಸೋಸಿಯೇಟೆಡ್ ಪ್ರೆಸ್ ಹಮಾಸ್ ಫೋಟೋಗ್ರಾಫರ್ ಪ್ರತಿಷ್ಠಿತ ಛಾಯಾಗ್ರಹಣ ಪ್ರಶಸ್ತಿಯನ್ನು ಗೆದ್ದಿದ್ದಾನೆ. ಈ ಛಾಯಾಗ್ರಾಹಕರು ಹಮಾಸ್ ಭಯೋತ್ಪಾದಕರೊಂದಿಗೆ 10/7ರಂದು ಇಸ್ರೇಲ್‌ಗೆ ಬಂದರು ಮತ್ತು ದಾಳಿಯ ಬಗ್ಗೆ ತಿಳಿದಿದ್ದರು” ಎಂದು ಇನ್ನೊಬ್ಬ ಬಳಕೆದಾರರು ಎಕ್ಸ್‌ನಲ್ಲಿ ಸಿಟ್ಟಿನಿಂದ ಟ್ವೀಟ್‌ ಮಾಡಿದ್ದಾರೆ.

ಈ ಫೋಟೋವನ್ನು ಆಲಿ ಮಹಮದ್‌ ಎಂಬ ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಈತ ಎಪಿ ಸಂಸ್ಥೆಗೆ ಫೋಟೋ ಒದಗಿಸುವ ಏಜೆನ್ಸಿಗಳಲ್ಲಿ ಒಂದರಲ್ಲಿ ಕೆಲಸ ಮಾಡುತ್ತಾನೆ. “ಈ ಫೋಟೋಗ್ರಾಫರ್‌ ಹಮಾಸ್‌ ಉಗ್ರರ ಜೊತೆಗಿದ್ದ” ಎಂದು ಸೋಶಿಯಲ್‌ ಮೀಡಿಯಾದಲ್ಲಿ ಬಹಳ ಮಂದಿ ಆರೋಪಿಸಿದ್ದಾರೆ. ಆದರೆ ಈ ದಾಳಿಯ ಮಾಹಿತಿ ಮೊದಲೇ ಇತ್ತು ಎಂಬುದನ್ನು ಎಪಿ ಸಂಸ್ಥೆ ನಿರಾಕರಿಸಿದೆ.

ಇದನ್ನೂ ಓದಿ: ʼಅವನೇಕೆ ನನ್ನನ್ನು ರೇಪ್‌ ಮಾಡಲಿಲ್ಲ ಎಂದರೆ…ʼ ಹಾರರ್‌ ಸ್ಟೋರಿ ಬಿಚ್ಚಿಟ್ಟ ಹಮಾಸ್‌ ಒತ್ತೆಯಾಳು

Continue Reading

ವೈರಲ್ ನ್ಯೂಸ್

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Dolly Chaiwala: ತಮ್ಮ ವಿಶಿಷ್ಟ ಶೈಲಿಯಿಂದಲೇ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿರುವ ನಾಗ್ಪುರದ ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಸ್ಥಳೀಯರೊಂದಿಗೆ ಪೋಸ್‌ ನೀಡುತ್ತಿರುವ ಫೋಟೊ ವೈರಲ್‌ ಆಗಿದೆ.

VISTARANEWS.COM


on

Dolly Chaiwala
Koo

ನವದೆಹಲಿ: ಅದೃಷ್ಟ ಯಾವಾಗ ಯಾರಿಗೆ ಒಲಿಯುತ್ತದೆ ಎನ್ನುವುದನ್ನು ಹೇಳಲು ಸಾಧ್ಯವಿಲ್ಲ. ತನ್ನ ವಿಶಿಷ್ಟ ಉಡುಗೆ, ಹೇರ್‌ ಸ್ಟೈಲ್‌, ಚಹಾ ಮಾಡುವ ರೀತಿಯಿಂದಲೇ ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ನಾಗ್ಪುರದ ಡಾಲಿ ಚಾಯ್‌ವಾಲಾ (Dolly Chaiwalla) ಅವರನ್ನು ಇತ್ತೀಚೆಗೆ ಮೈಕ್ರೋಸಾಫ್ಟ್‌ನ (Microsoft) ಸಹ-ಸಂಸ್ಥಾಪಕ, ಕೋಟ್ಯಧಿಪತಿ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ (Bill Gates) ಭೇಟಿಯಾಗಿದ್ದರು. ಡಾಲಿ ಚಾಯ್‌ವಾಲಾ ಅವರ ಚಹಾ ಅಂಗಡಿಗೆ ಬಿಲ್‌ ಗೇಟ್ಸ್‌ ಆಗಮಿಸಿದ ವಿಡಿಯೊ ಭಾರೀ ವೈರಲ್‌ ಆಗಿತ್ತು. ಆ ಮೂಲಕ ಡಾಲಿ ಚಾಯ್‌ವಾಲಾ ಹೆಸರು ಮತ್ತಷ್ಟು ಜನಪ್ರಿಯವಾಗಿತ್ತು. ಇದೀಗ ಅವರ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಬಾಲಿವುಡ್ ನಟ ಸೊಹೈಲ್ ಖಾನ್ ಅವರೊಂದಿಗೆ ಫೋಟೊಕ್ಕೆ ಪೋಸ್‌ ನೀಡಿದ್ದು, ಮತ್ತೊಮ್ಮೆ ವೈರಲ್‌ ಆಗಿದ್ದಾರೆ (Viral News).

ಪ್ರವಾಸಿಗರೊಂದಿಗೆ ಪೋಸ್‌

ಇದರ ಜತೆಗೆ ಡಾಲಿ ಚಾಯ್‌ವಾಲಾ ದ್ವೀಪ ರಾಷ್ಟ್ರದ ನಿವಾಸಿಗಳೊಂದಿಗೆ ಪೋಸ್‌ ನೀಡುತ್ತಿರುವ ಫೋಟೊಗಳು ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ. ಅನೇಕರು ಈ ಪೋಟೊಗಳಿಗೆ ಕಮೆಂಟ್‌ ಕೂಡ ಮಾಡಿದ್ದಾರೆ. ಕೆಲವರು ಡಾಲಿಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದರೆ, ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಡಾಲಿ ಸದ್ಯದಲ್ಲೇ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ” ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು “ಡಾಲಿ ಚಾಯ್‌ವಾಲಾ ಮತ್ತು ಬಿಲ್ ಗೇಟ್ಸ್ ಸ್ನೇಹಿತರು” ಎಂದು ಬರೆದಿದ್ದಾರೆ.

“ದೇವರು ನಿಮಗೆ ಹೆಚ್ಚಿನ ಯಶಸ್ಸನ್ನು ನೀಡಲಿ, ಸಹೋದರ” ಎಂದು ನೆಟ್ಟಿಗರೊಬ್ಬರು ಹಾರೈಸಿದ್ದಾರೆ. “ಡಾಲಿಯ ಯಶಸ್ಸು ನನಗೆ ಖುಷಿ ತಂದುಕೊಟ್ಟಿದೆ. ಸಣ್ಣ ವ್ಯಾಪಾರಿಯೊಬ್ಬ ಈ ಮಟ್ಟಕ್ಕೆ ಬೆಳೆದಾಗ ಅದನ್ನು ನೋಡಲು ನನಗೆ ತುಂಬಾ ಸಂತೋಷವಾಗುತ್ತದೆʼʼ ಎಂದು ಮತ್ತೊಬ್ಬರು ತಿಳಿಸಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದು ಮಗದೊಬ್ಬರು ಹೇಳಿದ್ದಾರೆ. ʼʼಡಾಲಿ ಚಾಯ್‌ವಾಲಾ ಅಸಾಧಾರಣ ಪ್ರತಿಭೆ ಹೊಂದಿದ್ದಾರೆ. ಆದ್ದರಿಂದ ಅವರು ಈಗ ಇಲ್ಲಿದ್ದಾರೆ. ಚಹಾದಿಂದಾಗಿ ಅಲ್ಲ, ತಮ್ಮ ವಿಶಿಷ್ಟ ಶೈಲಿಯಿಂದಾಗಿ ಅವರು ಇಷ್ಟು ಯಶಸ್ಸು ದಾಖಲಿಸಿದ್ದಾರೆ” ಎಂದು ನೆಟ್ಟಿಗರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಡಾಲಿ ಚಾಯ್‌ವಾಲಾ ಹಿನ್ನೆಲೆ

ಮಹಾರಾಷ್ಟ್ರ ನಾಗಪುರದ ಸರ್ದಾರ್‌ ಏರಿಯಾದ ಹಳೆ ವಿಸಿಎ ಮೈದಾನ (Old VCA stadium)ದ ಬಳಿ ಬೀದಿ ಬದಿಯ ಚಹಾ ಗಾಡಿ ಇಟ್ಟುಕೊಂಡಿರುವ ಡಾಲಿ ಚಾಯ್‌ವಾಲಾ ತಮ್ಮ ವಿಶಿಷ್ಟ ಶೈಲಿಯ ಚಹಾ ತಯಾರಿಯ ಮೂಲಕವೇ ಜನಪ್ರಿಯರಾಗಿದ್ದಾರೆ. ಅವರ ನಿಜ ಹೆಸರು ಯಾರಿಗೂ ತಿಳಿದಿಲ್ಲ. ಆದರೆ ಅವರ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಲಕ್ಷಗಟ್ಟಲೆ ಮಂದಿ ವೀಕ್ಷಿಸುತ್ತಾರೆ. ತಮ್ಮದೇ ಅನನ್ಯ ಶೈಲಿಯಲ್ಲಿ ಚಹಾ ಮಾಡುವ ವಿಡಿಯೊಗಳನ್ನು ಅವರು ಆಗಾಗ ಅಪ್‌ಲೋಡ್‌ ಮಾಡುತ್ತಿರುತ್ತಾರೆ. ಚಹಾ ಮಾತ್ರವಲ್ಲ ಡಾಲಿ ಚಾಯ್‌ವಾಲಾ ಅಂಗಡಿಯಲ್ಲಿ ಸಿಗರೇಟ್‌ ಕೂಡ ಲಭ್ಯ. ಹೀಗಾಗಿಯೇ ಅವರ ಅಂಗಡಿ ಮುಂದೆ ಯಾವಾಗಲೂ ಜನ ಸಂದಣಿ ಕಂಡು ಬರುತ್ತದೆ. ಇತ್ತೀಚೆಗೆ ಭಾರತದ ಪ್ರವಾಸ ಕೈಗೊಂಡಿದ್ದ ಬಿಲ್ ಗೇಟ್ಸ್ ಅವರು ಬೀದಿ ಬದಿಯ ಡಾಲಿ ಚಾಯ್‌ವಾಲಾ ಅವರ ಚಹಾ ಗಾಡಿ ಬಳಿ ಚಹಾ ಮಾಡಿಸಿಕೊಂಡು ಸವಿಯುತ್ತಿರುವ ವಿಡಿಯೊ ಎಲ್ಲೆಡೆ ಹರಿದಾಡಿ ಸಂಚಲನ ಸೃಷ್ಟಿಸಿತ್ತು. ಅಂದಿನಿಂದ ಅವರ ಅದೃಷ್ಟ ಖುಲಾಯಿಸಿತ್ತು.

ಇದನ್ನೂ ಓದಿ: Viral News: ಬಿಲ್‌ ಗೇಟ್ಸ್ ಮನಗೆದ್ದ ಈ ಡಾಲಿ ಚಾಯ್‌ವಾಲಾ ಯಾರು? ಏನಿವರ ಕಥೆ?

Continue Reading

ಪ್ರಮುಖ ಸುದ್ದಿ

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

Xiaomi Car: ಶಿಯೋಮಿ ತನ್ನ ಕೈಗೆಟುಕುವ ಸ್ಮಾರ್ಟ್​ಫೋನ್​ಗಳು ಮತ್ತು ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾಗಿದೆ. ಇದೀಗ MI SU 7 ಇವಿಯೊಂದಿಗೆ ತನ್ನ ಖ್ಯಾತಿಯನ್ನು ಹೆಚ್ಚಿಸಲು ಮುಂದಾಗಿದೆ.

VISTARANEWS.COM


on

Xiaomi Car in China
Koo

ಬೀಜಿಂಗ್: ಕಡಿಮೆ ಬೆಲೆಯಲ್ಲಿ ಸ್ಮಾರ್ಟ್​ಫೋನ್​​​ಗಳನ್ನು ಮಾರಾಟ ಮಾಡುವ ಮೂಲಕ ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದ ಶಿಯೋಮಿ (Xiaomi Car) ತನ್ನ ಮೊಟ್ಟ ಮೊದಲ ಎಲೆಕ್ಟ್ರಿಕ್​ ಕಾರನ್ನು (EV Car) ಮಾರುಕಟ್ಟೆಗೆ ಇಳಿಸಿದೆ. ಇದು ಮೊಬೈಲ್​ನಂತೆಯೇ (Smart Phoni) ಹಲವಾರು ಫ್ಯಾನ್ಸಿ ಫೀಚರ್​ಗಳನ್ನು ಹೊಂದಿರುವ ಕಾರು ಎಂದು ಹೇಳಲಾಗಿದೆ. ಆದರೆ, ಈ ಕಾರು ಸದ್ಯ ಬಿಡುಗಡೆಗೊಂಡಿರುವುದು ಚೀನಾದಲ್ಲಿ. ಭಾರತಕ್ಕೆ ಬರುವುದೇ ಎಂದು ಗೊತ್ತಿಲ್ಲ.

ಚೀನಾದ ಗ್ರಾಹಕ ಟೆಕ್ ದೈತ್ಯ ಶಿಯೋಮಿ ಗುರುವಾರ ಬೀಜಿಂಗ್ ನಲ್ಲಿ ಈ ಕಾರನ್ನು ಬಿಡುಗಡೆ ಮಾಡಿದೆ. ಅಲ್ಲದೆ ವಿಶ್ವದ ಅತಿದೊಡ್ಡ ಕಾರು ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆಗೆ ಇಳಿದಿದೆ. ಚೀನಾದ ಇವಿ ವಲಯವು ಇತ್ತೀಚಿನ ವರ್ಷಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಆ ಕ್ಷೇತ್ರಕ್ಕೆ ಎಂಟ್ರಿ ಪಡೆದಿದೆ. ಶಿಯೋಮಿ ತನ್ನ ಕೈಗೆಟುಕುವ ಸ್ಮಾರ್ಟ್​ಫೋನ್​ಗಳು ಮತ್ತು ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾಗಿದೆ. ಇದೀಗ MI SU 7 ಇವಿಯೊಂದಿಗೆ ತನ್ನ ಖ್ಯಾತಿಯನ್ನು ಹೆಚ್ಚಿಸಲು ಮುಂದಾಗಿದೆ. ಚೀನಾದ ಕಾರು ಮಾರುಕಟ್ಟೆಯ ದೈತ್ಯ ಬಿವೈಡಿ ಮತ್ತು ಎಲೋನ್ ಮಸ್ಕ್ ಅವರ ಟೆಸ್ಲಾಗೆ ಸವಾಲು ಹಾಕುವುದು ಪಕ್ಕಾ.

ಮೂಲ ಎಸ್ ಯು 7 ಮಾದರಿಯ ಬೆಲೆ 215,900 ಯುವಾನ್ (24,90,198 ರೂಪಾಯಿ) ಎಂದು ಲೀ ಜುನ್ ಗುರುವಾರ ಸಂಜೆ ಬೀಜಿಂಗ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಸ್ಪೋರ್ಟಿ ಎಸ್ ಯು 7 ಒಂಬತ್ತು ಬಣ್ಣಗಳಲ್ಲಿ ಲಭ್ಯವಿರುತ್ತದೆ ಮತ್ತು “ಸೌಂಡ್ ಸಿಮ್ಯುಲೇಶನ್” ಅನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

ಇದು ಕರೋಕೆ ಉಪಕರಣಗಳು ಮತ್ತು ಮಿನಿ-ಫ್ರಿಜ್ ನಂತಹ ಸಾಕಷ್ಟು ಇತರ ಆಕರ್ಷಕ ಫೀಚರ್​ಗಳನ್ನು ಹೊಂದಿದೆ. 500,000 ಯುವಾನ್ ಗಿಂತ ಕಡಿಮೆ ಬೆಲೆಯ “ಅತ್ಯುತ್ತಮವಾಗಿ ಕಾಣುವ, ಅತ್ಯುತ್ತಮವಾಗಿ ಚಲಿಸುವ ಮತ್ತು ಸ್ಮಾರ್ಟ್ ಕಾರು” ಎಂದು ಶಿಯೋಮಿ ಹೇಳಿದೆ. ಈ ಕಾರಿನ ಬೆಲೆಯು ಉಳಿದ ಕಾರಿಗಿಂತ ಹೆಚ್ಚು ಸ್ಪರ್ಧಾತ್ಮಕವಾಗಿದೆ.

ಟೆಸ್ಲಾಗೆ ಹೋಲಿಕೆ

ಲೀ ಜುನ್ ಗುರುವಾರದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಕಂಪನಿಯ ಚೊಚ್ಚಲ ವಾಹನವನ್ನು ಟೆಸ್ಲಾದ ಮಾಡೆಲ್ 3 ಗೆ ಹೋಲಿಸಬಹುದು ಮತ್ತು ಕೆಲವು ಅಂಶಗಳಲ್ಲಿ ಅಮೇರಿಕನ್ ತಯಾರಕರ ಸೆಡಾನ್ ಅನ್ನು ಮೀರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಶಿಯೋಮಿ ವಿಶ್ವದ ಮೂರನೇ ಅತಿದೊಡ್ಡ ಸ್ಮಾರ್ಟ್​ಫೋನ್ ತಯಾರಕ ಕಂಪನಿಯಾಗಿದ್ದು, ಆ ವಲಯದಲ್ಲಿ ಅದರ ಅನುಭವವು ಅದರ ಇವಿ ಕಾರ್ಯತಂತ್ರವನ್ನು ರೂಪಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಕಟುವಾದ ಮಾರುಕಟ್ಟೆ

“ಪ್ರೀಮಿಯಂ ವಿಭಾಗವನ್ನು ಪ್ರವೇಶಿಸುವ ಮೂಲಕ, ಶಿಯೋಮಿ ಟೆಸ್ಲಾ ಮತ್ತು ನಿಯೋದಂತಹ ಸ್ಥಾಪಿತ ಬ್ರಾಂಡ್​ಗ ಳಿಗೆ ಪೈಪೋಟಿ ನೀಡಬಹುದು” ಎಂದು ರೈಸ್ಟಾಡ್ ಎನರ್ಜಿಯ ಹಿರಿಯ ಎಲೆಕ್ಟ್ರಿಕ್ ವಾಹನ ವಿಶ್ಲೇಷಕ ಅಭಿಷೇಕ್ ಮುರಳಿ ಎಎಫ್ಪಿಗೆ ತಿಳಿಸಿದರು.

ಚೀನಾ ವಿಶ್ವದಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದೇಶ. ಹೀಗಾಗಿ 2035 ರ ವೇಳೆಗೆ ಹೆಚ್ಚಿನ ದೇಶೀಯ ಕಾರು ಮಾರಾಟವನ್ನು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಮಾದರಿಗಳಿಂದ ತಯಾರಿಸಲು ಯೋಜಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ವಿಶ್ವದ ಅಗ್ರ ಮಾರಾಟಗಾರ ಬಿವೈಡಿ ದಾಖಲೆಯ ವಾರ್ಷಿಕ ಲಾಭವನ್ನು ದಾಖಲಿಸಿದ ಕೆಲವೇ ದಿನಗಳ ನಂತರ ಎಸ್ ಯು 7 ಬಿಡುಗಡೆಯಾಗಿದೆ, ಏಕೆಂದರೆ ಇದು ಆಗ್ನೇಯ ಏಷ್ಯಾದ ದೇಶಗಳಿಗೆ ಮತ್ತು ಲ್ಯಾಟಿನ್ ಅಮೆರಿಕ ಮತ್ತು ಯುರೋಪ್ ಗೆ ವಿಸ್ತರಣೆಗೊಳ್ಳಬಹುದು.

Continue Reading

ಪ್ರಮುಖ ಸುದ್ದಿ

Arvind Kejriwal: ಕೇಜ್ರಿವಾಲ್‌ ಬಂಧನ: ಮತ್ತೆ ಅಮೆರಿಕ ಕ್ಯಾತೆ; ಕಾಂಗ್ರೆಸ್‌ ಬ್ಯಾಂಕ್‌ ಅಕೌಂಟ್‌ ನಿರ್ಬಂಧ ಕುರಿತೂ ಕಿರಿಕ್

Arvind Kejriwal: ಅರವಿಂದ ಕೇಜ್ರಿವಾಲ್‌ ಬಂಧನದ ಜೊತೆಗೆ, ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಅಕೌಂಟ್‌ ನಿರ್ಬಂಧದ ಬಗ್ಗೆಯೂ ಅಮೆರಿಕ ಅಡ್ಡಮಾತು ಆಡಿದೆ.

VISTARANEWS.COM


on

arvind kejriwal & Matthew Miller
Koo

ನ್ಯೂಯಾರ್ಕ್‌: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ಬಂಧನ ಕುರಿತ ಮಾಡಿದ ಟೀಕೆಗಾಗಿ ಭಾರತವು (MEA) ನಿನ್ನೆ ಅಮೆರಿಕದ ಹಿರಿಯ ರಾಜತಾಂತ್ರಿಕರನ್ನು (US Diplomat) ಕರೆಸಿ ಪ್ರತಿಭಟಿಸಿದ್ದು, ಇಂದು ಮತ್ತೆ ಅಮೆರಿಕ ಈ ಬಗ್ಗೆ ಪ್ರತಿಹೇಳಿಕೆ ನೀಡಿದೆ. ಈ ಬಾರಿ ಕೇಜ್ರಿವಾಲ್‌ ಬಂಧನದ ಜೊತೆಗೆ, ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಅಕೌಂಟ್‌ ನಿರ್ಬಂಧದ (Congress bank account seizure) ಬಗ್ಗೆಯೂ ಅಡ್ಡಮಾತು ಆಡಿದೆ.

“ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ ಸೇರಿದಂತೆ ನಡೆದಿರುವ ಕ್ರಮಗಳನ್ನು ನಾವು ನಿಕಟವಾಗಿ ಅನುಸರಿಸುತ್ತಿದ್ದೇವೆ” ಎಂದು ಯುಎಸ್ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ. “ಅಮೆರಿಕ ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಉತ್ತೇಜಿಸುತ್ತದೆ. ಮತ್ತು ಯಾರೂ ಈ ಕ್ರಮಗಳನ್ನು ಆಕ್ಷೇಪಿಸಬಾರದು ಎಂದು ನಾವು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವ ಬಗ್ಗೆ ಮತ್ತು ದೆಹಲಿಯಲ್ಲಿ ಅಮೆರಿಕದ ಹಂಗಾಮಿ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ಕರೆಸಿ ವಿದೇಶಾಂಗ ಇಲಾಖೆ ಮಾತನಾಡಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಮಿಲ್ಲರ್ ಅವರು ಪ್ರತಿಕ್ರಿಯಿಸಿದರು.

“ಮುಂಬರುವ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಸವಾಲಾಗುವ ರೀತಿಯಲ್ಲಿ ತೆರಿಗೆ ಅಧಿಕಾರಿಗಳು ಅವರ ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆ ನಮಗೆ ಮಾಹಿತಿ ಇದೆ. ಇವುಗಳಲ್ಲಿ ಪ್ರತಿಯೊಂದಕ್ಕೂ ನಾವು ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ” ಎಂದಿದ್ದಾರೆ.

“ರಾಯಭಾರಿಯನ್ನು ಕರೆಸಿರುವ ಬಗ್ಗೆ, ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಆದರೆ ನಾವು ಸಾರ್ವಜನಿಕವಾಗಿ ಹೇಳಬಹುದಾದದ್ದು ನಾನು ಇಲ್ಲಿಂದ ಹೇಳಿದ್ದೇನೆ. ನಾವು ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ. ಯಾರೂ ಅದನ್ನು ಆಕ್ಷೇಪಿಸಬಾರದು ಎಂದು ಭಾವಿಸಬೇಡಿ. ನಾವು ಅದೇ ವಿಷಯವನ್ನು ಖಾಸಗಿಯಾಗಿಯೂ ಸ್ಪಷ್ಟಪಡಿಸುತ್ತೇವೆ,” ಎಂದು ಮಿಲ್ಲರ್ ಹೇಳಿದರು.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅಮೆರಿಕದ ಹಂಗಾಮಿ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ಕಚೇರಿಗೆ ನಿನ್ನೆ ಕರೆಸಿದ್ದರು. ಕೇಜ್ರಿವಾಲ್ ಅವರ ಬಂಧನದ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಅಧಿಕಾರಿಯ ಹೇಳಿಕೆಗಳ ವಿರುದ್ಧ ತೀವ್ರ ಪ್ರತಿಭಟನೆಯನ್ನು ಸಲ್ಲಿಸಿದ್ದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಸಭೆ ನಡೆದಿತ್ತು.

ದಿಲ್ಲಿಯ ಅಬಕಾರಿ ನೀತಿ ಜಾರಿ ಸಂದರ್ಭದಲ್ಲಿ ನಡೆದಿರುವ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆಗೆ ಇತ್ಯಾದಿಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಕೇಜ್ರಿವಾಲ್‌ ಒಂಬತ್ತು ಬಾರಿ ಇಡಿ ಸಮನ್ಸ್‌ಗಳನ್ನು ತಿರಸ್ಕರಿಸಿದ್ದರು. ಆದ್ದರಿಂದ, ಕೇಜ್ರಿವಾಲ್‌ ಅವರಿಗೆ ಯಾವುದೇ ಜಾಮೀನು ರಕ್ಷಣೆ ನೀಡಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿತ್ತು.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ನೀತಿಯನ್ನು ನಂತರ ರದ್ದುಗೊಳಿಸಲಾಯಿತು.

ನಿನ್ನೆ ಅಮೆರಿಕದ ಟೀಕೆಗೆ ಉತ್ತರಿಸಿದ್ದ ಭಾರತ ವಿದೇಶಾಂಗ ಇಲಾಖೆ, “ನಮ್ಮಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್‌ನ ವಕ್ತಾರರ ಹೇಳಿಕೆಗಳಿಗೆ ದೆಹಲಿ ತೀವ್ರ ಆಕ್ಷೇಪಣೆಯನ್ನು ಹೊಂದಿದೆ” ಎಂದು ಹೇಳಿದೆ.

“ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸಬೇಕು ಎಂದು ನಿರೀಕ್ಷಿಸಲಾಗಿದೆ. ಈ ಜವಾಬ್ದಾರಿಯು ಪ್ರಜಾಪ್ರಭುತ್ವಗಳ ವಿಷಯದಲ್ಲಿ ಇನ್ನೂ ಹೆಚ್ಚಾಗಿರುತ್ತದೆ. ಇಲ್ಲದಿದ್ದರೆ ಅನಾರೋಗ್ಯಕರ ಪೂರ್ವನಿದರ್ಶನಗಳು ಸೃಷ್ಟಿಯಾಗಬಹುದು” ಎಂದು ಸಚಿವಾಲಯ ಹೇಳಿದೆ.

“ಭಾರತದ ಕಾನೂನು ಪ್ರಕ್ರಿಯೆಗಳು ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿದೆ. ಅದರ ಮೇಲೆ ನಮ್ಮ ನಿರೀಕ್ಷೆಗಳನ್ನು ಹೇರುವುದು ಅನಗತ್ಯ” ಎಂದು MEA ಹೇಳಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗಿಲ್ಲ ಮಧ್ಯಂತರ ರಿಲೀಫ್‌; ಇನ್ನೂ 7 ದಿನ ಜೈಲೇ ಗತಿ

Continue Reading
Advertisement
Summer Nail Colours Trend
ಫ್ಯಾಷನ್15 mins ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 202420 mins ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು25 mins ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ36 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ57 mins ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 202458 mins ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು59 mins ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ1 hour ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ1 hour ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 20241 hour ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌