ಯೋಧನ ಎದೆಯಿಂದ ಸಜೀವ ಗ್ರೆನೇಡ್​ ಹೊರತೆಗೆದ ಸಾಹಸಿ ವೈದ್ಯ; ಯಾವುದೇ ಕ್ಷಣದಲ್ಲಾದರೂ ಸ್ಫೋಟಿಸುವ ಅಪಾಯವಿತ್ತು! - Vistara News

ವಿದೇಶ

ಯೋಧನ ಎದೆಯಿಂದ ಸಜೀವ ಗ್ರೆನೇಡ್​ ಹೊರತೆಗೆದ ಸಾಹಸಿ ವೈದ್ಯ; ಯಾವುದೇ ಕ್ಷಣದಲ್ಲಾದರೂ ಸ್ಫೋಟಿಸುವ ಅಪಾಯವಿತ್ತು!

ಇದೊಂದು ಅತ್ಯಂತ ಅಪಾಯಕಾರಿ ಸರ್ಜರಿ ಆಗಿದ್ದರಿಂದ, ಇನ್ನಿಬ್ಬರು ಸೈನಿಕರೂ ಅಲ್ಲಿ ಉಪಸ್ಥಿತರಿದ್ದರು. ಗ್ರೆನೇಡ್​ ಹೊರತೆಗೆದು ಅದನ್ನು ನಿಷ್ಕ್ರಿಯಗೊಳಿಸಲಾಗಿದೆ.

VISTARANEWS.COM


on

Ukraine Grenade
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಕ್ರೇನ್​​ನಲ್ಲಿ ಸೈನಿಕನೊಬ್ಬನ ಎದೆಯಿಂದ ಜೀವಂತ ಗ್ರೆನೇಡ್​​ನ್ನು ಹೊರತೆಗೆಯುವ ಮೂಲಕ ಮಿಲಿಟರಿ ವೈದ್ಯರೊಬ್ಬರು (Ukrainian Surgeon) ಈಗ ಹೀರೋ ಎನ್ನಿಸಿಕೊಂಡಿದ್ದಾರೆ. ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದಾಗಿನಿಂದಲೂ ಅಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ದಾಳಿ-ಪ್ರತಿದಾಳಿ ನಡೆಯುತ್ತಿದೆ. ಈ ಯೋಧ ಉಕ್ರೇನ್​ನ ಬಖ್ಮುತ್ ಎಂಬಲ್ಲಿ ರಷ್ಯಾ ಪಡೆ ವಿರುದ್ಧ ಹೋರಾಡುವಾಗ ದೇಹದೊಳಗೆ ಗ್ರೆನೇಡ್​ ಹೊಕ್ಕಿ ಗಂಭೀರವಾಗಿ ಗಾಯಗೊಂಡಿದ್ದರು. ರಷ್ಯಾ ಸೈನಿಕರು ಗ್ರೆನೇಡ್​ ಲಾಂಚರ್​​ನಿಂದ ಹಾರಿಸಿದ ಗ್ರೆನೇಡ್​​ ಸೀದಾ ಬಂದು ಇವರ ಎದೆಯನ್ನು ಸೀಳಿಕೊಂಡು ಹೋಗಿ ಕುಳಿತಿತ್ತು.

ಆ ಸೈನಿಕನ ದೇಹದೊಳಗೆ ಇದ್ದುದ್ದು ಜೀವಂತ ಗ್ರೆನೇಡ್​ ಆಗಿದ್ದರಿಂದ ಅದು ಯಾವುದೇ ಕ್ಷಣದಲ್ಲೂ ಸಿಡಿಯಬಹುದಿತ್ತು. ಸರ್ಜರಿ ಮಾಡುವಾಗಲೂ ಅದು ಸ್ಫೋಟಗೊಳ್ಳುವ ಅಪಾಯ ಇದ್ದೇ ಇತ್ತು. ಆದರೆ ಮಿಲಿಟರಿ ಆಸ್ಪತ್ರೆಯಲ್ಲಿ ಸರ್ಜನ್​ ಆಗಿರುವ ಮೇಜರ್​ ಜನರಲ್​ ಆ್ಯಂಡ್ರಿ ವರ್ಬಾ ಅವರು ಧೈರ್ಯವಾಗಿ ಆಪರೇಶನ್​ ಮಾಡಿ ಜೀವಂತ ಗ್ರೆನೇಡ್​ ಹೊರತೆಗೆದಿದ್ದಾರೆ. ಇದೊಂದು ಅತ್ಯಂತ ಅಪಾಯಕಾರಿ ಸರ್ಜರಿ ಆಗಿದ್ದರಿಂದ, ಇನ್ನಿಬ್ಬರು ಸೈನಿಕರೂ ಅಲ್ಲಿ ಉಪಸ್ಥಿತರಿದ್ದರು. ನಿಧಾನವಾಗಿ ಗ್ರೆನೇಡ್ ಹೊರತೆಗೆದು ಬಳಿಕ ಅದನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ಬಗ್ಗೆ ಉಕ್ರೇನ್​ ಮಿಲಿಟರಿ ಆಸ್ಪತ್ರೆಯೇ ಹೇಳಿಕೆ ಬಿಡುಗಡೆ ಮಾಡಿದೆ.

ಹಾಗೇ, ಯೋಧನ ಎದೆಯಲ್ಲಿ ಗ್ರೆನೇಡ್​ ಸೇರಿಕೊಂಡಿರುವುದನ್ನು ತೋರಿಸುವ ಎಕ್ಸ್​ ರೇ ಚಿತ್ರವನ್ನೂ ಉಕ್ರೇನ್​ ಮಿಲಿಟರಿ ಆಸ್ಪತ್ರೆ ಬಿಡುಗಡೆ ಮಾಡಿದೆ. ಹಾಗೇ, ಗಾಯಗೊಂಡ ಯೋಧನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗಿದೆ. ವೈದ್ಯ ತನ್ನ ಪ್ರಾಣವನ್ನೂ ಒತ್ತೆಯಿಟ್ಟು ಆ ಗ್ರೆನೇಡ್​ ಹೊರತೆಗೆದಿದ್ದನ್ನು ಅನೇಕರು ಶ್ಲಾಘಿಸಿದ್ದಾರೆ. ನೀವೇ ನಿಜವಾದ ಹೀರೋ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral News | 1987ರಲ್ಲಿ ಗೋಧಿ ಬೆಲೆ ಎಷ್ಟಿತ್ತು ಗೊತ್ತಾ? ಹಳೆ ದಾಖಲೆಯ ಫೋಟೊ ವೈರಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪರಿಸರ

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

Chocolate industry: ಪಶ್ಚಿಮ ಆಫ್ರಿಕಾದ ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ.

VISTARANEWS.COM


on

By

Chocolate industry
Koo

ನವದೆಹಲಿ: ಚಾಕೊಲೇಟ್‌ನಲ್ಲಿ ಬಳಸುವ ಪ್ರಮುಖ ಸಾಮಗ್ರಿಯಾದ ಕೋಕೋ (cacao) ಮರಗಳಲ್ಲಿ ವೈರಸ್ (virus) ಕಾಣಿಸಿಕೊಂಡಿದ್ದು, ಇದು ಚಾಕೊಲೇಟ್ ಉತ್ಪಾದನೆ ಮೇಲೆ ಬಹುದೊಡ್ದ ಹೊಡೆತ ಬೀಳುವ ಸಾಧ್ಯತೆ ಇದೆ. ಇದರಿಂದ ಚಾಕೊಲೇಟ್‌ಗಳು ಮತ್ತಷ್ಟು ದುಬಾರಿಯಾಗಬಹುದು.

ಪ್ರಸ್ತುತ ಪಶ್ಚಿಮ ಆಫ್ರಿಕಾದ (West Africa) ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ (mealybugs) ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ. ಇದು ಬಿಸಿ ವಾತಾವರಣದಲ್ಲಿ ಹೆಚ್ಚು ತೀವ್ರವಾಗಿ ಬೆಳೆಯುತ್ತಿದೆ.

ಈ ವೈರಸ್ ಭೂಮಿಯ ಮೇಲಿರುವ ಪರಿಸರ ವಿನಾಶಕಾರಿ ಜೀವಿ ಎನ್ನಲಾಗುತ್ತದೆ. ಇದು ಘಾನಾದಲ್ಲಿ 50,000 ಹೆಕ್ಟೇರ್ ಕೋಕೋ ಫಾರ್ಮ್‌ಗಳನ್ನು ನಾಶಪಡಿಸಿದೆ. ಇದು ವಿಶ್ವದ ಎರಡನೇ ಅತಿದೊಡ್ಡ ಚಾಕೊಲೇಟ್ ಉತ್ಪಾದಕ ದೇಶ. ಇದು ಜಾಗತಿಕ ಚಾಕೊಲೇಟ್ ಪೂರೈಕೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಯುಎಸ್ ಮತ್ತು ಘಾನಾದ ವಿಶ್ವವಿದ್ಯಾನಿಲಯಗಳ ವಿಜ್ಞಾನಿಗಳು ವೈರಸ್ ಹರಡುವುದನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರಪಂಚದ ಚಾಕೊಲೇಟ್‌ಗಳನ್ನು ಉಳಿಸಲು ಹೊಸ ಮಾರ್ಗವನ್ನು ಈಗಾಗಲೇ ಕಂಡುಹಿಡಿದಿದ್ದರೂ ಇದು ಚಾಕೊಲೇಟ್ ನ ಜಾಗತಿಕ ಪೂರೈಕೆ ಸರಪಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ.


ಚಾಕೊಲೇಟ್ ಪೂರೈಕೆ ಮೇಲೆ ಪರಿಣಾಮ

ಪ್ರಪಂಚದ ಶೇ. 50ರಷ್ಟು ಚಾಕೊಲೇಟ್‌ಗಳು ಘಾನಾ ಮತ್ತು ಐವರಿ ಕೋಸ್ಟ್‌ನಿಂದ ಬರುತ್ತವೆ. ಈ ಪ್ರದೇಶಗಳಲ್ಲಿನ ಕೋಕೋ ಮರಗಳ ಚಿಗುರು ವೈರಸ್ ನಿಂದ ನಾಶವಾಗಿವೆ. ಕೊಲಂಬಿಯಾದಲ್ಲಿ ರೈತರು ಒಡೆದು ಸಿಪ್ಪೆ ಸುಲಿದಿದ್ದರೂ ಕೋಕೋ ಮರಗಳ ಎಲೆ, ಮೊಗ್ಗು ಮತ್ತು ಹೂವುಗಳನ್ನು ತಿನ್ನುವ ಮೀಲಿಬಗ್ಸ್ ಎಂದು ಕರೆಯಲ್ಪಡುವ ಸಣ್ಣ ಕೀಟಗಳಿಂದ ವೈರಸ್ ಹರಡುತ್ತದೆ. ಘಾನಾವು 254 ಮಿಲಿಯನ್ ಮರಗಳನ್ನು ಹೊಂದಿದೆ ಮತ್ತು ಐವರಿ ಕೋಸ್ಟ್‌ನಲ್ಲಿ ಶೇ. 20ರಷ್ಟು ಬೆಳೆ ಸೋಂಕಿಗೆ ಒಳಗಾಗಿದೆ.

ಚಾಕೊಲೇಟ್‌ ಹೇಗೆ ತಯಾರಿಸಲಾಗುತ್ತದೆ?

ಉಷ್ಣವಲಯದ ಹವಾಮಾನದಲ್ಲಿ ಬೆಳೆಯುವ ಕೋಕೋ ಬೀನ್ಸ್‌ನಿಂದ ಚಾಕೊಲೇಟ್‌ಗಳನ್ನು ತಯಾರಿಸಲಾಗುತ್ತದೆ. ಅವುಗಳನ್ನು ಹುದುಗಿಸಿ, ಒಣಗಿಸಿ ಮತ್ತು ಹುರಿದು ಮಾಡಿದ ಪುಡಿಯನ್ನು ಹಾಲು ಮತ್ತು ಸಕ್ಕರೆಯೊಂದಿಗೆ ಬೆರೆಸಿ ಚಾಕೊಲೇಟ್ ತಯಾರಿಸಲಾಗುತ್ತದೆ.

2022ರಲ್ಲಿ ಐವರಿ ಕೋಸ್ಟ್ 2.2 ಮಿಲಿಯನ್ ಟನ್ ಕೋಕೋವನ್ನು ಉತ್ಪಾದಿಸಿತು ಮತ್ತು ಘಾನಾ 1.1 ಮಿಲಿಯನ್ ಉತ್ಪಾದಿಸಿತು. ಪ್ರಪಂಚದ ಅತಿದೊಡ್ಡ ಉತ್ಪಾದಕ ಇಂಡೋನೇಷ್ಯಾವು 2022 ರಲ್ಲಿ 6,67,000 ಟನ್‌ಗಳನ್ನು ಉತ್ಪಾದಿಸಿದೆ.

ಬೆಚ್ಚಗಿನ ತಾಪಮಾನವು ಮೀಲಿಬಗ್ ಗೆ ಹೆಚ್ಚು ಪೂರಕವಾಗಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ. ಆರ್ಲಿಂಗ್ಟನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾನಿಲಯದ ತಜ್ಞರ ಪ್ರಕಾರ, ಈ ವೈರಸ್ ಪ್ರಪಂಚದ ಚಾಕೊಲೇಟ್ ಪೂರೈಕೆಗೆ ಅಪಾಯವನ್ನುಂಟು ಮಾಡುತ್ತದೆ.

ವೈರಸ್ ಅನ್ನು ನಿಲ್ಲಿಸಬಹುದೇ?

ಕೀಟನಾಶಕಗಳಿಂದ ಮೀಲಿಬಗ್‌ಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಸೋಂಕಿತ ಮರಗಳನ್ನು ಕಡಿಯುವುದು ಮತ್ತು ನಿರೋಧಕ ಮರಗಳನ್ನು ನೆಡುವುದು ಸುಲಭ ಮತ್ತು ಅಗ್ಗದ ಮಾರ್ಗವಾಗಿದೆ. ರೈತರು ಮರಗಳಿಗೆ ಲಸಿಕೆಯನ್ನೂ ನೀಡಬಹುದು. ಆದರೆ ಇದು ದುಬಾರಿಯಾಗಿರುವುದರಿಂದ ಇದು ಮರಗಳಿಂದ ಉತ್ಪತ್ತಿಯಾಗುವ ಕೋಕೋ ಮೇಲೆ ಪರಿಣಾಮವನ್ನು ಬೀರುತ್ತದೆ.

ದೂರದೂರ ಮರಗಳನ್ನು ನೆಡುವುದರಿಂದ ವೈರಸ್ ಹರಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಸಂಶೋಧಕರು. ಆದರೆ ಇದು ಇನ್ನೂ ಪ್ರಯೋಗ ಹಂತದಲ್ಲಿದೆ. ಇದು ರೈತರಿಗೆ ತಮ್ಮ ಬೆಳೆಯನ್ನು ರಕ್ಷಿಸಲು ಸಹಾಯ ಮಾಡುವ ಸಾಧ್ಯತೆಯಿದೆ.


ಮೀಲಿಬಗ್‌ನಿಂದ ಮಾತ್ರ ತೊಂದರೆಯೇ?

ಈ ಹಿಂದೆ ಕಪ್ಪು ಪಾಡ್ ರೋಗವು ಚಾಕೊಲೇಟ್ ಉತ್ಪನ್ನಗಳ ಮೇಲೆ ಪರಿಣಾಮ ಬೀರಿತ್ತು. ಈ ರೋಗವು ಕೋಕೋ ಬೀಜಗಳನ್ನು ಕಪ್ಪು ಅಥವಾ ಕಂದು ಬಣ್ಣಕ್ಕೆ ತಿರುಗಿಸುತ್ತದೆ. ಇದು 2022 ರಲ್ಲಿ ವಿಶ್ವದ ವಾರ್ಷಿಕ ಕೋಕೋ ಬೆಳೆಗಳಲ್ಲಿ ಶೇ. 30ರಷ್ಟನ್ನು ನಾಶಪಡಿಸಿತು. ಈ ಪ್ರದೇಶದಲ್ಲಿ ಉಂಟಾದ ಭಾರೀ ಮಳೆಯಿಂದಾಗಿ ರೋಗವನ್ನು ಮತ್ತಷ್ಟು ಉಲ್ಬಣವಾಗಿತ್ತು. ಏಕೆಂದರೆ ಸೋಂಕು ತೇವಾಂಶವುಳ್ಳ ಸ್ಥಿತಿಯಲ್ಲಿ ಹೆಚ್ಚು ವೇಗವಾಗಿ ಬೆಳೆಯುತ್ತದೆ ಮತ್ತು ಹರಡುತ್ತದೆ.

Continue Reading

ವಿದೇಶ

Indian origin man: ಹಲ್ಲೆ ನಡೆಸಿ ಪರಾರಿಯಾಗಿದ್ದ ಭಾರತೀಯ ಅಮೆರಿಕದಲ್ಲಿ ಎನ್‌ಕೌಂಟರ್‌ಗೆ ಬಲಿ

Indian origin man: ಪೊಲೀಸರ ಮೇಲೆ ಕಾರು ಹರಿಸಿದ ಉತ್ತರಪ್ರದೇಶ ಮೂಲದ ಸಚಿನ್‌ ಸಾಹೂ ಎಂಬಾತ ನ್ಯೂಯಾರ್ಕ್‌ನ ಪೊಲೀಸರು ಗುಂಡೇಟಿಗೆ ಬಲಿಯಾಗಿದ್ದಾನೆ. ಹಲ್ಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಈತನನ್ನು ಬಂಧಿಸಲು ಮುಂದಾದಾಗ ಈ ಘಟನೆ ನಡೆದಿದೆ.

VISTARANEWS.COM


on

By

Koo

ನ್ಯೂಯಾರ್ಕ್‌: ಹಲ್ಲೆ ಪ್ರಕರಣದಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದ ಭಾರತೀಯ ಮೂಲದ ವ್ಯಕ್ತಿ (Indian origin man) ನ್ಯೂಯಾರ್ಕ್‌ನ ಸ್ಯಾನ್‌ ಆಂಟೋನಿಯೋ (San Antonio)  ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. 42 ವರ್ಷದ ಸಚಿನ್‌ ಸಾಹೂ (Sachin Sahoo) ಎಂಬಾತ ಏ.21ರಂದು ಪೊಲೀಸ್‌ ಅಧಿಕಾರಿಗಳ ಗುಂಡೇಟಿ (Shot Dead) ಗೆ ಬಲಿಯಾಗಿದ್ದಾನೆ. ಮೂಲತಃ ಉತ್ತರಪ್ರದೇಶದವನಾಗಿರುವ ಸಾಹೂ ಅಮೆರಿಕದ ಪೌರತ್ವ (US citizenship) ಪಡೆದು ಅಲ್ಲೇ ವಾಸವಾಗಿದ್ದ ಎನ್ನಲಾಗಿದೆ.

ಪೊಲೀಸ್‌ ಪ್ರಾಥಮಿಕ ತನಿಖೆ ವರದಿ ಪ್ರಕಾರ, ಏ.21, ಸಂಜೆ 6.30ರ ವೇಳೆ ಸ್ಯಾನ್‌ ಆಂಟೋನಿಯೋದಲ್ಲಿ ಯಾವುದೋ ಒಂದು ಮನೆಯಲ್ಲಿ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಗೆಂದು ಪೊಲೀಸರು ತೆರಳಿದ್ದಾಗ ವಾಹನ ಡಿಕ್ಕಿಯಾಗಿ 51 ಮಹಿಳೆ ಗಂಭೀರವಾಗಿ ಗಾಯಗೊಂಡಿರುವುದು ಕಂಡು ಬಂದಿತ್ತು. ಈ ಅಪಘಾತವನ್ನು ಸಾಹೂ ಉದ್ದೇಶಪೂರ್ವಕವಾಗಿ ಮಾಡಿದ್ದ ಹಾಗೂ ಪೊಲೀಸರನ್ನು ಕಂಡ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ಸಾಹೂ ಹುಡುಕಾಟಕ್ಕೆ ಮುಂದಾದರು.

ಈ ಪ್ರಕರಣದಲ್ಲಿ ಸ್ಯಾನ್‌ ಆಂಟೋನಿಯೋ ಪೊಲೀಸರು ಸಾಹೂ ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿಗೊಳಿಸಿದ್ದರು. ಸುಮಾರು ಗಂಟೆಗಳ ಬಳಿಕ ಸಾಹೂ ತನ್ನ ಮನೆಗೆ ಮರಳಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್‌ ಅಧಿಕಾರಿಗಳು ಸಾಹೂವನ್ನು ಹಿಡಿಯಲು ಬರುತ್ತಿದ್ದಂತೆ ಆತ ತನ್ನ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದ. ಆಗ ಕಾರನ್ನು ತಡೆಯಲು ಯತ್ನಿಸಿದ ಪೊಲೀಸರಿಗೆ ಡಿಕ್ಕಿ ಹೊಡೆದಿದ್ದಾನೆ. ತಮ್ಮ ಪ್ರಾಣ ರಕ್ಷಣೆಗೆ ಮುಂದಾದ ಪೊಲೀಸರು ಸಾಹೂ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡು ತಗುಲುತ್ತಿದ್ದಂತೆ ಸಾಹೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮತ್ತೊಂದೆಡೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್‌ ಅಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಹಿರಿಯ ಅಧಿಕಾರಿ ಬಿಲ್‌ ಮ್ಯಾಕ್‌ ಮ್ಯಾನಸ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

ಇನ್ನು ಸಾಹೂ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದ ಮಹಿಳೆ ಆತನ ರೂಮೇಟ್‌ ಆಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಈಗಾಗಲೇ ಹಲವು ಆಪರೇಷನ್‌ಗಳನ್ನು ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮತ್ತೊಂದೆಡೆ ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸಾಹೂ ಮಾಜಿ ಪತ್ನಿ ಲೀ ಗೋಲ್ಡ್‌ಸ್ಟೀನ್‌ ಪ್ರತಿಕ್ರಿಯಿಸಿದ್ದು, ಸಾಹೂ ಸುಮಾರು 10 ವರ್ಷಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ. ಕೆಲವೊಮ್ಮೆ ತಾನು ಏನು ಮಾಡುತ್ತಿದ್ದೇನೆ ಎಂಬುದೇ ಆತನಿಗೆ ಅರಿವಿರಲಿಲ್ಲ. ಹೀಗಾಗಿಯೇ ನಾವು ಬೇರೆಯಾಗಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಘಟನೆ ಬಗ್ಗೆ ಮತ್ತಷ್ಟು ಮಾಹಿತಿ ಸಂಗ್ರಹಿಸಲು ಪೊಲೀಸ್‌ ಬಾಡಿ ಕ್ಯಾಮ್‌ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

Continue Reading

ದೇಶ

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

China Road: ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

VISTARANEWS.COM


on

China Road
Koo

ನವದೆಹಲಿ: ಕಾಶ್ಮೀರದ ಲಡಾಕ್‌ ಬಳಿಯ ವಾಸ್ತವ ನಿಯಂತ್ರಣ ರೇಖೆ (LoC) ಬಳಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿ ಬಿಕ್ಕಟ್ಟು ಸೃಷ್ಟಿಸಿದ್ದ ಚೀನಾ ಈಗ ಮತ್ತೊಂದು ಉದ್ಧಟತನ ತೋರಿದೆ. ಹೌದು, ಪಾಕ್‌ ಆಕ್ರಮಿತ ಕಾಶ್ಮೀರದ (Pak Occupied Kashmir) ಬಳಿ ನೂತನವಾಗಿ ರಸ್ತೆ ನಿರ್ಮಿಸುವ (China Road) ಮೂಲಕ ಚೀನಾ ಗಡಿ ನಿಯಮಗಳನ್ನು ಗಾಳಿಗೆ ತೂರಿದೆ. ಇದು ಭಾರತದ ಜತೆ ಮತ್ತೊಂದು ಬಿಕ್ಕಟ್ಟು ಸೃಷ್ಟಿಸುವ ಹುನ್ನಾರ ಎಂದು ಹೇಳಲಾಗುತ್ತಿದೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. 1963ರಲ್ಲಿ ಚೀನಾಗೆ ಬಿಟ್ಟುಕೊಟ್ಟಿರುವ, ಪಾಕ್‌ ಆಕ್ರಮಿತ ಕಾಶ್ಮೀರದ ಭಾಗವಾಗಿದ್ದ ಶಾಕ್ಸ್‌ಗಾಮ್‌ ಕಣಿವೆಯಲ್ಲಿ ಚೀನಾ ರಸ್ತೆ ನಿರ್ಮಿಸಿದೆ. ಇದು ಭಾರತದ ಇಂದಿರಾ ಕೋಲ್ ಪ್ರದೇಶದಿಂದ ಕೇವಲ 50 ಕಿಲೋ ಮೀಟರ್‌ ದೂರದಲ್ಲಿರುವುದರಿಂದ ಆತಂಕ ಹೆಚ್ಚಾಗಿದೆ.

ಇಂದಿರಾ ಕೋಲ್‌ ಪ್ರದೇಶಕ್ಕೆ ಕಳೆದ ಮಾರ್ಚ್‌ನಿಂದ ಇದುವರೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಎರಡು ಬಾರಿ ಭೇಟಿ ನೀಡಿದ್ದರು. ಇದರಿಂದ ಕೇವಲ 50 ಕಿಲೋಮೀಟರ್‌ ದೂರದಲ್ಲಿ ಚೀನಾ ರಸ್ತೆ ನಿರ್ಮಿಸಿದ ಕಾರಣ ಮುಂದಿನ ದಿನಗಳಲ್ಲಿ ಭಾರತದ ಜತೆಗಿನ ಬಿಕ್ಕಟ್ಟನ್ನು ಉಲ್ಬಣಿಸುವ ಸಾಧ್ಯತೆ ಇದೆ. ಇದೇ ಸಂಚಿನಿಂದಾಗಿಯೇ ಚೀನಾ ರಸ್ತೆ ನಿರ್ಮಾಣ ಮಾಡಿದೆ ಎಂದು ಹೇಳಲಾಗುತ್ತಿದೆ.

ಭಾರತಕ್ಕೆ ಏಕೆ ಆತಂಕಕಾರಿ?

ಸಿಯಾಚಿನ್‌ ಹಿಮಪ್ರದೇಶದಲ್ಲಿ ಚೀನಾ ರಸ್ತೆ ನಿರ್ಮಿಸಿರುವುದು ಭಾರತಕ್ಕೆ ಹಲವು ರೀತಿಯಲ್ಲಿ ಆತಂಕ ಎನಿಸಿದೆ. ಗಡಿಯಲ್ಲಿ ರಸ್ತೆ ನಿರ್ಮಿಸಿದರೆ ಚೀನಾ ಸುಲಭವಾಗಿ ಮಿಲಿಟರಿ ಸಲಕರಣೆಗಳನ್ನು, ಸೈನಿಕರನ್ನು ಗಡಿಗೆ ನಿಯೋಜಿಸಬಹುದು. ಇದಾದ ಬಳಿಕ ಭಾರತದ ಜತೆ ತಗಾದೆ ತೆಗೆಯಲು ಚೀನಾಗೆ ಅನುಕೂಲವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೆ, ಇದಕ್ಕೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

Continue Reading

ದೇಶ

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Narendra Modi: ಜೂನ್‌ನಲ್ಲಿ ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಗುರುವಾರ ಆಹ್ವಾನ ನೀಡಿದ್ದಾರೆ. ಇಟಲಿಯ ವಿಮೋಚನಾ ದಿನದ 79ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆದ ದೂರವಾಣಿ ಸಂಭಾಷಣೆಯ ವೇಳೆ ಮೋದಿ ಈ ಆಹ್ವಾನ ಸ್ವೀಕರಿಸಿದ್ದಾರೆ. ಮಾತುಕತೆ ವೇಳೆ ಪ್ರಧಾನಮಂತ್ರಿ ಮೋದಿ ಅವರು ಮೆಲೋನಿ ಮತ್ತು ಇಟಲಿಯ ಜನತೆಗೆ ಶುಭಾಶಯಗಳನ್ನು ತಿಳಿಸಿದರು.

VISTARANEWS.COM


on

Narendra Modi
Koo

ನವದೆಹಲಿ: ಜೂನ್‌ನಲ್ಲಿ ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನ (G7 Summit Outreach Sessions)ಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಗುರುವಾರ ಆಹ್ವಾನ ನೀಡಿದ್ದಾರೆ.

ಇಟಲಿಯ ವಿಮೋಚನಾ ದಿನದ 79ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆದ ದೂರವಾಣಿ ಸಂಭಾಷಣೆಯ ವೇಳೆ ಮೋದಿ ಈ ಆಹ್ವಾನ ಸ್ವೀಕರಿಸಿದರು. ಮಾತುಕತೆ ವೇಳೆ ಪ್ರಧಾನಮಂತ್ರಿ ಮೋದಿ ಅವರು ಮೆಲೋನಿ ಮತ್ತು ಇಟಲಿಯ ಜನತೆಗೆ ಶುಭಾಶಯಗಳನ್ನು ತಿಳಿಸಿದರು. ಜತೆಗೆ ಜಿ 7 ಆಹ್ವಾನವನ್ನು ನೀಡಿದ್ದಕ್ಕಾಗಿ ಅವರು ಮೆಲೋನಿಗೆ ಕೃತಜ್ಞತೆ ಸಲ್ಲಿಸಿದರು.

“ಇಟಲಿ ಇಂದು ತನ್ನ ವಿಮೋಚನಾ ದಿನವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತನಾಡಿದೆ. ಜತೆಗೆ ಶುಭಾಶಯಗಳನ್ನು ಕೋರಿದ್ದೇನೆ. ಜೂನ್‌ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಜಿ 7ನಲ್ಲಿ G20India ವಿಚಾರದ ಬಗ್ಗೆ ಚರ್ಚಿಸಲಾಯಿತು. ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ವಿಸ್ತರಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೋದಿ ಬರೆದುಕೊಂಡಿದ್ದಾರೆ.

ಭಾರತದ ಜಿ 20 ಅಧ್ಯಕ್ಷತೆಯ ಅವಧಿಯಲ್ಲಿ ಸಾಧಿಸಿದ ಗಮನಾರ್ಹ ಫಲಿತಾಂಶಗಳನ್ನು, ವಿಶೇಷವಾಗಿ ಇಟಲಿಯ ಅಧ್ಯಕ್ಷತೆಯಲ್ಲಿ ಜರಗಲಿರುವ ಮುಂಬರುವ ಜಿ 7 ಶೃಂಗಸಭೆಯ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದರು. ಇಬ್ಬರೂ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೆಚ್ಚಿಸುವ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಪರಸ್ಪರ ಹಿತಾಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ.

ಗ್ರೂಪ್ ಆಫ್ ಸೆವೆನ್ (ಜಿ 7) ಏಳು ಪ್ರಮುಖ ದೇಶಗಳನ್ನು ಒಳಗೊಂಡಿರುವ ಅಂತರ್ ಸರ್ಕಾರಿ ಸಂಸ್ಥೆಯಾಗಿದೆ. ಆರ್ಥಿಕ ನೀತಿ, ಜಾಗತಿಕ ಭದ್ರತೆ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಸಮನ್ವಯಗೊಳಿಸಲು ಈ ದೇಶಗಳು ವಾರ್ಷಿಕವಾಗಿ ಸಭೆ ಸೇರುತ್ತವೆ. ಕಳೆದ ವರ್ಷ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಜಪಾನ್ ಅಧ್ಯಕ್ಷತರಯಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಪಿಎಂ ಮೋದಿ ಜಪಾನ್‌ನ ಹಿರೋಷಿಮಾಗೆ ಭೇಟಿ ನೀಡಿದ್ದರು. ಭೇಟಿಯ ಸಮಯದಲ್ಲಿ ಕೆಲವು ನಾಯಕರೊಂದಿಗೆ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದರು.

ಇದನ್ನೂ ಓದಿ: Giorgia Meloni: ಯುರೋಪ್‌ನಲ್ಲಿ ಇಸ್ಲಾಮ್‌ಗೆ ಜಾಗವಿಲ್ಲ: ಇಟಲಿ ಪ್ರಧಾನಿ ಬೋಲ್ಡ್‌ ಮಾತು

ಮೋದಿಯನ್ನು ಹಾಡಿ ಹೊಗಳಿದ್ದ ಮೆಲೋನಿ

ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಜಾರ್ಜಿಯಾ ಮೆಲೋನಿ, “ನರೇಂದ್ರ ಮೋದಿ ಅವರು ವಿಶ್ವದ ನಾಯಕರಲ್ಲಿಯೇ ಹೆಚ್ಚು ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ಧೀಮಂತ ನಾಯಕರು ಎಂಬುದು ಸಾಬೀತಾಗಿದೆ. ಇದಕ್ಕಾಗಿ ಮೋದಿ ಅವರಿಗೆ ಅಭಿನಂದನೆಗಳು” ಎಂದಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ತಿಳಿಸಿದ್ದರು.

Continue Reading
Advertisement
Mohammad Shami
ಪ್ರಮುಖ ಸುದ್ದಿ28 mins ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ55 mins ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ1 hour ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ1 hour ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ2 hours ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 20242 hours ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ2 hours ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ3 hours ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 20243 hours ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

lok sabha election
ಪ್ರಮುಖ ಸುದ್ದಿ3 hours ago

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ10 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202410 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202411 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ17 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌