Most Expensive Coin: ಬ್ರಿಟನ್‌ನ ದಿವಂಗತ ರಾಣಿಯ ಗೌರವಾರ್ಥ ಜಗತ್ತಿನ ದುಬಾರಿ ನಾಣ್ಯ ಅನಾವರಣ! ಬೆಲೆ ಎಷ್ಟು? - Vistara News

ಪ್ರಮುಖ ಸುದ್ದಿ

Most Expensive Coin: ಬ್ರಿಟನ್‌ನ ದಿವಂಗತ ರಾಣಿಯ ಗೌರವಾರ್ಥ ಜಗತ್ತಿನ ದುಬಾರಿ ನಾಣ್ಯ ಅನಾವರಣ! ಬೆಲೆ ಎಷ್ಟು?

Most Expensive Coin: ಬ್ರಿಟನ್ ರಾಣಿಯಾಗಿದ್ದ ಎರಡನೇ ಎಲಿಜಬೆತ್ ಅವರು ಕಳೆದ ವರ್ಷ ಸೆಪ್ಟೆಂಬರ್ 8ರಂದು ನಿಧನರಾಗಿದ್ದಾರೆ.

VISTARANEWS.COM


on

Sanjiv Mehta With World's most Expensive Coin
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬ್ರಿಟನ್‌ನ (Britain) ದಿವಂಗತ ರಾಣಿ ಎಲಿಜಬೆತ್ (late Queen Elizabeth) ಅವರ ಗೌರವಾರ್ಥವಾಗಿ ಸುಮಾರು 4 ಕೆಜಿ ಚಿನ್ನ ಮತ್ತು 6,426ಕ್ಕೂ ಹೆಚ್ಚು ವಜ್ರಗಳಿಂದ ಮಾಡಿದ ನಾಣ್ಯ(Most Expensive coin)ವನ್ನು ಅನಾವರಣಗೊಳಿಸಲಾಯಿತು. ಈ ನಾಣ್ಯವನ್ನು ಸಾರ್ವಕಾಲಿಕ ಅತ್ಯಮೂಲ್ಯವಾದ ನಾಣ್ಯ ಎಂದು ಪರಿಗಣಿಸಲಾಗಿದೆ. ಇದಕ್ಕಾಗಿ ಸುಮಾರು 18.47 ಮಿಲಿಯನ್ ಪೌಂಡ್ ವೆಚ್ಚ ಮಾಡಲಾಗಿದೆ(ಅಂದಾಜು 1,91,31,00,286 ರೂ.) ಕ್ವಿನ್ ಎಲಿಜಬೆತ್ ಅವರು ಕಳೆದ ವರ್ಷ ಸೆಪ್ಟೆಂಬರ್ 8ರಂದು ನಿಧನರಾಗಿದ್ದರು. ಈ ನಾಣ್ಯಕ್ಕೆ ದಿ ಕ್ರೌನ್ (The Crown) ಎಂದು ನಾಮಕರಣ ಮಾಡಲಾಗಿದೆ.

The Crown- World's Most Expensive coin

ಈ ದುಬಾರಿ ನಾಣ್ಯವನ್ನು ಈಸ್ಟ್ ಇಂಡಿಯಾ ಕಂಪನಿ ವಿನ್ಯಾಸ ಮಾಡಿದೆ. ಕಂಪನಿಯು ಈ ನಾಣ್ಯಕ್ಕೆ ‘ದಿ ಕ್ರೌನ್’ ಎಂದು ಕರೆದಿದ್ದು, ಇದಕ್ಕಾಗಿ ಸುಮಾರು 18.47 ಮಿಲಿಯನ್ ಪೌಂಡ್ ಹಣವನ್ನು ವೆಚ್ಚ ಮಾಡಲಾಗಿದೆ. ಈ ದುಬಾರಿ ನಾಣ್ಯವನ್ನು ಕಾಮನ್‌ವೆಲ್ತ್‌ ರಾಷ್ಟ್ರಗಳ ಕುಶಲಕರ್ಮಿಗಳು ಸುಮಾರು 16 ತಿಂಗಳ ಪ್ರೀತಿಯ ಶ್ರಮದ ಮೂಲಕ ತಯಾರಿಸಿದ್ದಾರೆ. ಈ ವಿಶಿಷ್ಟ ನಾಣ್ಯ ಪ್ರಾಜೆಕ್ಟ್ ಪೂರ್ಣಗೊಳ್ಳಲಾರದು ಎಂದು ಹಲವರು ಭಾವಿಸಿದ್ದರು. ಕೊರೋನಾ ಸಾಂಕ್ರಾಮಿಕ ಪರಿಣಾಮ ವಜ್ರಗಳ ಪೂರೈಕೆ ಕೊರತೆಯಾಗಿತ್ತು. ಅಲ್ಲದೇ ಇಷ್ಟೊಂದು ದೊಡ್ಡ ಯೋಜನೆಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವುದು ಕಷ್ಟ ಎಂಬ ಮಾತುಗಳು ಕೇಳಿ ಬಂದಿದ್ದವು. ಈಗ ಆ ಎಲ್ಲ ಅಡ್ಡ ಮಾತುಗಳನ್ನು ಮೀರಿ ಈಸ್ಟ್ ಇಂಡಿಯಾ ಕಂಪನಿಯು ಬ್ರಿಟನ್‌ನ ದಿವಂಗತ ರಾಣಿ ಎಲಿಜಬೆತ್ ಅವರ ಗೌರವಾರ್ಥ ನಾಣ್ಯವನ್ನು ಅನಾವರಣ ಮಾಡಿದೆ.

ಸದ್ಯ ಅತಿ ದುಬಾರಿ ನಾಣ್ಯ ಎಂಬ ಕೀರ್ತಿ ಡಬಲ್ ಈಗಲ್ ಹೆಸರಿನಲ್ಲಿದೆ. ಈ ನಾಣ್ಯದ ಬೆಲೆ ಅಂದಾಜು 15.17 ಮಿಲಿಯನ್ ಪೌಂಡ್ ಆಗಿದೆ. ಈಗ ಡಬಲ್ ಈಗಲ್ ಖ್ಯಾತಿಯನ್ನು ದಿ ಕ್ರೌನ್ ನಾಣ್ಯವು ಕಸಿದುಕೊಂಡಿದೆ. ಈ ನಾಣ್ಯದ ಬೆಲೆ ಅಂದಾಜು 18.47 ಮಿಲಿಯನ್ ಪೌಂಡ್ ಆಗಿದೆ. ಈ ಮಧ್ಯೆ, ಕ್ರೌನ್ ನಾಣ್ಯ ಮಾರಾಟಕ್ಕೆ ಹೋಗಲಿದೆಯೇ ಅಥವಾ ಇಲ್ಲವೋ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಾಸ್ಕೆಟ್‌ ಬಾಲ್‌ನಷ್ಟು ದೊಡ್ಡ ನಾಣ್ಯ

ದುಬಾರಿ ದಿ ಕ್ರೌನ್ ನಾಣ್ಯವು ಬಾಸೆಕ್ಟ್‌ ಬಾಲ್‌ನಷ್ಟು ದೊಡ್ಡದಾಗಿದೆ. ಕಲಾವಿದರಾದ ಮೇರಿ ಗಿಲಿಕ್, ಅರ್ನಾಲ್ಡ್ ಮಚಿನ್, ರಾಫೆಲ್ ಮಕ್ಲೌಫ್ ಮತ್ತು ಇಯಾನ್ ರ್ಯಾಂಕ್-ಬ್ರಾಡ್ಲಿ ರಚಿಸಿದ ದಿವಂಗತ ರಾಜಾಡಳಿತದ ಹಲವಾರು ಭಾವಚಿತ್ರಗಳನ್ನು ಒಳಗೊಂಡಿದೆ. ಅಲ್ಲದೇ, ಜೋಡಿ ಕ್ಲಾರ್ಕ್ ಅವರ ಭಾವಚಿತ್ರವನ್ನು ಮತ್ತಷ್ಟು ಮಧ್ಯಭಾಗದ ನಾಣ್ಯದ ಹಿಮ್ಮುಖ ಭಾಗದಲ್ಲಿ ಬಳಸಲಾಗಿದೆ.

Queen Elizabeth

ಈ ಸುದ್ದಿಯನ್ನೂ ಓದಿ: ಮೆಚ್ಚಿನ ಜನತೆಗೆ ಮುಗಿಲಿನಿಂದ ದರ್ಶನ ನೀಡಿದಳೇ ರಾಣಿ ಎಲಿಜಬೆತ್!

ದಿ ಕ್ರೌನ್ ನಾಣ್ಯವನ್ನು ಕರಕುಶಲಗೊಳಿಸಲಾಗಿದೆ. ವಜ್ರಗಳನ್ನು ನಿಖರವಾಗಿ ಕತ್ತರಿಸಿ ವಿನ್ಯಾಸದೊಳಗೆ ನಿಖರವಾಗಿ ಹೊಂದುವಂತೆ ಮತ್ತು ಪ್ರತ್ಯೇಕವಾಗಿ ಅಳವಡಿಸಲಾಗಿದೆ. ಆದರೆ ಬ್ರಿಟಿಷ್ ಯೂನಿಯನ್ ಧ್ವಜವನ್ನು ಪ್ರತಿಬಿಂಬಿಸಲು ಎರಡು ವಿಭಿನ್ನ ಸೆಟ್ಟಿಂಗ್‌ಗಳನ್ನು ಬಳಸಲಾಗಿದೆ ಎಂದು ಈಸ್ಟ್ ಇಂಡಿಯಾ ಕಂಪನಿ ಹೇಳಿದೆ. ಅಂದ ಹಾಗೆ, 2005ರಲ್ಲಿ ಭಾರತೀಯ ಬಿಸಿನೆಸ್ ಮನ್ ಸಂಜೀವ್ ಮೆಹ್ತಾ ಅವರು ಈಸ್ಟ್ ಇಂಡಿಯಾ ಕಂಪನಿಯನ್ನು ತಮ್ಮ ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಇದೇ ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಭಾರತಕ್ಕೆ ಕಾಲಿಟ್ಟು, ಸುಮಾರು 200 ವರ್ಷಗಳ ಕಾಲ ಭಾರತದ ಮೇಲೆ ಆಡಳಿತ ನಡೆಸಿದ್ದ ಬ್ರಿಟಿಷರ್ ಕಂಪನಿಗೆ ಈಗ ಭಾರತೀಯನೇ ಒಡೆಯರಾಗಿದ್ದಾರೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

HD Kumaraswamy: ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಕುಮಾರಸ್ವಾಮಿ ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DK Shivakumar hits back at HD Kumaraswamy
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಕೀಯ ನಾಯಕರ ವಾಕ್ಸಮರ ಜೋರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಕಿಡ್ನ್ಯಾಪ್‌ ಆರೋಪದ ಮೇಲೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿರುವುದು ರಾಜಕೀಯ ಪಿತೂರಿಯಿಂದ ಕೂಡಿದೆ. ಇದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಡಿಕೆಶಿ ವಿರುದ್ಧ ಪರೋಕ್ಷ ಚಾಟಿ ಬೀಸಿದ್ದರು. ಇದಕ್ಕೆ ಈಗ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar), ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದು ಮಾರ್ಮಿಕವಾಗಿ ಹೇಳಿದರು.

ನನ್ನ ಹಸ್ತಕ್ಷೇಪವಿದ್ದರೆ ಬೆಲೆ ತೆರಲು ಸಿದ್ಧ

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಎಚ್‌.ಡಿ. ಕುಮಾರಸ್ವಾಮಿ ಅವರ ಪರೋಕ್ಷ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳಿದರು.

ರೇವಣ್ಣ ಸ್ಥಿತಿ ನೋಡಿ ಬೇಸರವಾಗುತ್ತದೆ

ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಎಚ್‌.ಡಿ. ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದರೂ ಬಯಸಲಿ. ಆದರೆ, ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ. ಜತೆಗೆ ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ, ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.

ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಜಾಮೀನು ಸಿಕ್ಕಿದೆ ನಿಜ. ಆದರೆ, ಇದಕ್ಕೆ ನಾನು ಸಂತೋಷ ಪಡಲಾರೆ. ಪಟಾಕಿ ಸಿಡಿಸಿ ಸಂಭ್ರಮಿಸುವ ಸಮಯವೂ ಇದಲ್ಲ ಎಂದು ಕಾರ್ಯಕರ್ತರಿಗೆ ಹೇಳಬಯಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮ ಪಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊ ಲೀಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಸರಿಯಾದ ತನಿಖೆಯನ್ನು ನಡೆಸುತ್ತಿಲ್ಲ. ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೂಡ ಎಸ್‌ಐಟಿಯಿಂದ ಆರೋಪ ಎದುರಿಸಬೇಕಾಯಿತು. ಅವರಿಗೆ ನಿನ್ನೆ (ಸೋಮವಾರ – ಮೇ 13) ಜಾಮೀನು ಸಿಕ್ಕಿದೆ. ಅದಕ್ಕೆ ನಾನು ಸಂತೋಷವನ್ನು ಪಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮವನ್ನು ಪಡೋಣ. ಈಗ ನಡೆದಿರುವುದು ರಾಜ್ಯವೇ ತಲೆ ತಗ್ಗಿಸುವ ವಿಚಾರವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ? ಎಸ್‌ಐಟಿ ಅಧಿಕಾರಿಗಳೇ ನಿಮಗೂ ಅಕ್ಕ – ತಂಗಿ, ತಂದೆ – ತಾಯಿ ಇರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾರು ಪೆನ್ ಡ್ರೈವ್ ಹಂಚಿದರೋ ಅವರನ್ನು ಇದುವರೆಗೂ ಮುಟ್ಟಿಲ್ಲ. ಹಾಸನ ಜಿಲ್ಲಾದ್ಯಂತ ಪೆನ್‌ ಡ್ರೈವ್‌ ಅನ್ನು ರಿಲೀಸ್‌ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ನವೀನ್‌ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುತ್ತಾನೆ. ಆದರೆ, ಇಲ್ಲಿಯವರೆಗೆ ಆತನನ್ನು ಮುಟ್ಟಿಲ್ಲ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಸರ್ಕಾರದ ಜವಾಬ್ದಾರಿ ಅದು

ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲಗಳನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯ ವಾದವರನ್ನು ಹಿಡಿಯಲಾಗುತ್ತೆ ಅಂದಿದ್ದಾರೆ. ಹಾಗಾದರೆ ಎಸ್ಐಟಿ ತನಿಖೆ ಹೇಗೆ ಸೋರಿಕೆ ಆಗ್ತಾ ಇದೆ? ಎಫ್‌ಐಆರ್ ಆಗಿರುವ ಒಬ್ಬ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಖಾಸಗಿ ಚಾನಲ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂದರ್ಶನ ಕೊಡುತ್ತಾರೆ. ನವೀನ್ ಗೌಡ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ. ಕೆಲವೇ ಕ್ಷಣಗಳಲ್ಲಿ ಪೆನ್ ಡ್ರೈವ್ ಬರುತ್ತದೆ ಅಂತಾ ಪೋಸ್ಟ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದ ಆತನನ್ನು ಹಿಡಿದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ವಿಡಿಯೊದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ‌ ಇದೆಯಾ? ಇದರಲ್ಲಿ ಯಾವುದನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಿನ ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ, ನಿರಪರಾಧಿ ಅಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ನನ್ನ ಮೇಲೂ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಎಚ್.ಡಿ. ರೇವಣ್ಣ ಅವರ ಕುಟುಂಬವನ್ನು ಮುಗಿಸಲು ನಾನು ಪ್ರಯತ್ನ ಪಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ.

ನಾನು ನ್ಯಾಯದ ಪರ, ಮಹಿಳೆಯರ ಪರ ಇದ್ದೇನೆ. ಈ ವಿಡಿಯೊದಲ್ಲಿ ಆ ವ್ಯಕ್ತಿಯ ಯಾವುದೇ ಚಿತ್ರಣ ಇಲ್ಲ ಅಂತ ಪತ್ರಿಕೆಯೊಂದು ಬರೆದಿದೆ. ಅಲ್ಲಿಗೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ? ಎಂದು ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಹೆದರಿಸಿ ದೂರು ಪಡೆಯಲು ಯತ್ನ

ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆಕ್ರೋಶವನ್ನು ಹೊರಹಾಕಿದರು. ಅಲ್ಲದೆ, ದೊಡ್ಡ ತಿಮಿಂಗಿಲವು ಸರ್ಕಾರದಲ್ಲಿದೆ. ಆ ದೊಡ್ಡ ತಿಮಿಂಗಲವನ್ನು ಹಿಡಿಯಲಾಗದೇ ಇದ್ದರೆ ಸಣ್ಣ ತಿಮಿಂಗಲಗಳನ್ನು ಹಿಡಿಯಲಾಗುತ್ತದೆಯೇ? ಈ ಸರ್ಕಾರದಲ್ಲಿ ಹಲವಾರು ತಪ್ಪುಗಳು ನಡೆದಿವೆ. ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಿಡಿಕಾರಿದರು.

ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಒಂದು ಮಹಿಳೆ ದೂರು ಕೊಟ್ಟಿದ್ದು, ಆ ಹೆಣ್ಣುಮಕ್ಕಳಿಗೆ ಹೆದರಿಸಿ‌ ದೂರು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದೆಲ್ಲ ಕೆಲವೇ ದಿನಗಳಲ್ಲಿ ಹೊರಗೆ ಬರಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗೃಹ ಸಚಿವರಿಗೆ ನೇರ ಪ್ರಶ್ನೆ

ಈ ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಟ್ಟರೆ ಅಂಥವರನ್ನು ವಿಚಾರಣೆಗೆ ಕರೆಸಬೇಕಾಗುತ್ತದೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ತಿರುಗೇಟು ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದ ಬಗ್ಗೆ, ವಿಡಿಯೊ ಬಗ್ಗೆ ಹೇಳಿಕೆ ನೀಡಿದ್ದ ನವೀನ್‌ ಗೌಡ ಸೇರಿ ಉಳಿದವರ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಅವರನ್ನು ಏಕೆ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ನನಗೆ ಅಣ್ಣನ ಮಗನೇ ಇರಬಹುದು. ಆದರೆ, ಅವನು ಹೋಗುವಾಗ ನನ್ನನ್ನು ಕೇಳಿ ಹೋಗುತ್ತಿದ್ದನಾ? ಬೆಳೆದ ಮಕ್ಕಳು ನಮ್ಮನ್ನು ಕೇಳಿ ಹೋಗ್ತಾರಾ.? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

ಇನ್ನೆರಡು ದಿನದಲ್ಲಿ ಪರಿಷತ್‌ ಅಭ್ಯರ್ಥಿ ಆಯ್ಕೆ

ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿ ಒಪ್ಪಂದದ ಪ್ರಕಾರ ಜೆಡಿಎಸ್‌ಗೆ ಇನ್ನೊಂದು ಸೀಟ್‌ ಅನ್ನು ಬಿಟ್ಟುಕೊಡಲಾಗಿದೆ. ಅದಕ್ಕೆ ಸೂಕ್ತ ಅಭ್ಯರ್ಥಿಯ ಆಯ್ಕೆ ಆಗಬೇಕಿದೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading

ಕ್ರೈಂ

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

HD Revanna Released: ಕೊನೆಗೂ ಎಚ್‌.ಡಿ. ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು 11 ದಿನಗಳ ವನವಾಸದಿಂದ ಎಚ್.ಡಿ. ರೇವಣ್ಣ ಮುಕ್ತರಾದರು. ಈ ವೇಳೆ ರೇವಣ್ಣ ಪರ ವಕೀಲರು ಜಾಮೀನು ಷರತ್ತುಗಳನ್ನು ಪೂರೈಸಿದರು. ರೇವಣ್ಣ ಪಾಸ್ ಪೋರ್ಟ್, ಇಬ್ಬರು ಶ್ಯೂರಿಟಿ, ಐದು ಲಕ್ಷ ರೂಪಾಯಿ ಬಾಂಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ವಕೀಲರು ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಬೆಂಬಲಿಗರು ಎಚ್‌.ಡಿ. ರೇವಣ್ಣ ಅವರಿಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

VISTARANEWS.COM


on

HD Revanna released from jail Revanna Go straight to HD Deve Gowda house
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಸೋಮವಾರ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಂಗಳವಾರ (ಮೇ 14) ಬಿಡುಗಡೆ (HD Revanna Released) ಮಾಡಲಾಗಿದೆ.

ಇದರಿಂದಾಗಿ ಒಟ್ಟು 11 ದಿನಗಳ ವನವಾಸದಿಂದ ಎಚ್.ಡಿ. ರೇವಣ್ಣ ಮುಕ್ತರಾದರು. ಈ ವೇಳೆ ರೇವಣ್ಣ ಪರ ವಕೀಲರು ಜಾಮೀನು ಷರತ್ತುಗಳನ್ನು ಪೂರೈಸಿದರು. ರೇವಣ್ಣ ಪಾಸ್ ಪೋರ್ಟ್, ಇಬ್ಬರು ಶ್ಯೂರಿಟಿ, ಐದು ಲಕ್ಷ ರೂಪಾಯಿ ಬಾಂಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ವಕೀಲರು ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಯಿತು.

HD Revanna released from jail Revanna Go straight to HD Deve Gowda house

ಗುಳಿಕ ಕಾಲದಲ್ಲಿಯೇ ರೇವಣ್ಣ ಜೈಲಿನಿಂದ ರಿಲೀಸ್

ಮಧ್ಯಾಹ್ನ 3:22 ರಿಂದ 5 ಗಂಟೆಯವರೆಗೆ ರಾಹುಕಾಲ ಇರುವ ಹಿನ್ನೆಲೆಯಲ್ಲಿ ಬಿಡುಗಡೆ ಪ್ರಕ್ರಿಯೆಯನ್ನು ಬೇಗ ಮಾಡಲಾಗಿದೆ. ಮಧ್ಯಾಹ್ನ 12.5 ರಿಂದ 1:39ರವರೆಗೆ ಗುಳಿಕ ಕಾಲ ಇದ್ದರಿಂದ 1.30ಕ್ಕೆ ರೇವಣ್ಣ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ರೇವಣ್ಣ ಜೈಲಿನಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಆದರೆ, ಅಲ್ಲಿ ಕ್ಷಣವೂ ನಿಲ್ಲದ ಎಚ್‌.ಡಿ. ರೇವಣ್ಣ ಸೀದಾ ಪದ್ಮನಾಭನಗರದಲ್ಲಿರುವ ಎಚ್‌.ಡಿ.ದ ದೇವೇಗೌಡ ಅವರ ನಿವಾಸಕ್ಕೆ ಹೊರಟಿದ್ದಾರೆ.

ಎಚ್.ಡಿ. ರೇವಣ್ಣಗೆ ಜಾಮೀನು ಸಿಗುವುದಕ್ಕೆ ಕಾರಣಗಳೇನು?

  • ರೇವಣ್ಣ ಅವರೇ ಕಿಡ್ನ್ಯಾಪ್ ಮಾಡಿಸಿದ್ದು ಎನ್ನುವುದಕ್ಕೆ ಸಾಕ್ಷಿ ಇಲ್ಲ.
  • ಸಿಆರ್‌ಪಿಸಿ ಅಡಿ ಸಂತ್ರಸ್ತೆ ನೀಡಿದ್ದ ಹೇಳಿಕೆಯಲ್ಲೂ ಪ್ರಸ್ತಾಪ ಇಲ್ಲ.
  • ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಸಾಕ್ಷಿ ಒದಗಿಸಲು ಎಸ್‌ಐಟಿ ವಿಫಲವಾಗಿದೆ.
  • ಎಚ್‌.ಡಿ. ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್ ಅನ್ನಲು ಸಾಕ್ಷಿ ಇಲ್ಲ.

ರೇವಣ್ಣ ಅವರಿಗೆ ಏಕೆ ಜಾಮೀನು ಕೊಡಲಾಗುತ್ತಿದೆ ಎಂಬುದಾಗಿ ಈ ಮೇಲಿನ ಕಾರಣಗಳನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ಪಷ್ಟವಾಗಿ ಆದೇಶಿಸಿದ್ದಾರೆ. ಆದರೆ, ಕೆಲವು ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

8 ಷರತ್ತುಗಳನ್ನು ವಿಧಿಸಿ ಬೇಲ್ ಕೊಟ್ಟ ಕೋರ್ಟ್!

  1. 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಕೊಡಬೇಕು
  2. ಇಬ್ಬರ ಶ್ಯೂರಿಟಿಯನ್ನು ಒದಗಿಸಿಕೊಡಬೇಕು
  3. ಯಾವ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದು
  4. ಕೇಸ್ ಆಗಿರುವ ಕೆ.ಆರ್.ನಗರಕ್ಕೆ ಹೋಗಬಾರದು
  5. ಎಸ್‌ಐಟಿ ತನಿಖೆಗೆ ಸೂಕ್ತ ಸಹಕಾರ ನೀಡಲೇಬೇಕು
  6. ಯಾವುದೇ ರೀತಿಯ ಸಾಕ್ಷ್ಯ ನಾಶ ಮಾಡಬಾರದು
  7. ಪಾಸ್ ಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು.
  8. ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯದಿಂದ ಹೊರಹೋಗುವಂತಿಲ್ಲ.

ಸೋಮವಾರ ಕುತೂಹಲ ಮೂಡಿಸಿದ್ದ ಕೋರ್ಟ್‌ ಕಲಾಪ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಸತತ ನಾಲ್ಕು ಗಂಟೆಗಳ ಕಾಲ ವಾದ – ಪ್ರತಿವಾದಗಳು ನಡೆದಿವು. ಕಲಾಪ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, 2 ವಿಚಾರಗಳಿಗೆ ಸಂಬಂಧಿಸಿ ಆರೋಪಿಗೆ ಜಾಮೀನು ಕೊಡಬೇಡಿ. ಒಂದು ಪ್ರಕರಣದ ಗಂಭೀರತೆಯನ್ನು ನೋಡಬೇಕಿದ್ದು, ಇದರಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಕಿಡ್ನ್ಯಾಪ್ ಕೇಸಲ್ಲೂ ಈಗಾಗಲೇ 2ನೇ ಆರೋಪಿ ಹೇಳಿಕೆಯನ್ನು ಪಡೆಯಲಾಗಿದೆ. ಈ ನಡುವೆ ಸಂತ್ರಸ್ತೆಯ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಂತ್ರಸ್ತೆ ಸ್ಪಷ್ಟನೆ ನೀಡಿದ್ದಾರೆ ಎಂಬುದಾಗಿ ವಿಡಿಯೊ ವೈರಲ್ ಬಗ್ಗೆ ಕೋರ್ಟ್‌ಗೆ ಮಾಹಿತಿಯನ್ನು ನೀಡಿದ್ದರು.

ಮೊದಲು ತನಿಖಾ ವರದಿ ಕೊಡಿ ಎಂದ ನ್ಯಾಯಾಧೀಶರು

ಈ ವೇಳೆ ಮಧ್ಯಪ್ರವೇಶ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ತನಿಖಾಧಿಕಾರಿಯ ಇನ್‌ವೆಸ್ಟಿಗೇಷನ್‌ ರಿಪೋರ್ಟ್ ಅನ್ನು ಮೊದಲು ಸಲ್ಲಿಸಿ. ಕಿಡ್ನ್ಯಾಪ್ ಕೇಸ್‌ ಸಂಬಂಧ ಏನೇನು ವಿಚಾರಗಳು ನಡೆದಿವೆ ಎಂಬುದನ್ನು ತಿಳಿಯಬೇಕು ಎಂದು ಎಸ್‌ಪಿಪಿಗೆ ಸೂಚಿಸಿದರು. ಆಗ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್‌, ತನಿಖಾ ವರದಿಯನ್ನು ನಮಗೂ ಕೊಟ್ಟಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ಇನ್‌ವೆಸ್ಟಿಗೇಷನ್ ರಿಪೋರ್ಟ್‌ ಅನ್ನು ಸಲ್ಲಿಸಲಾಯಿತು. ಇದಕ್ಕೆ ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ರಿಂದ ಆಕ್ಷೇಪ ವ್ಯಕ್ತವಾಯಿತು. ಬಳಿಕ ತಮಗೂ ಒಂದು ಕಾಪಿ ನೀಡಲು ಕೇಳಿದ್ದು, ಅವರಿಗೂ ಒಂದು ಪ್ರತಿಯನ್ನು ನೀಡಲಾಯಿತು.

ಇದನ್ನೂ ಓದಿ: Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲೇಖಿಸಿದ ಎಸ್‌ಪಿಪಿ

ಈ ವೇಳೆ ವಾದ ಮುಂದುವರಿಸಿದ ಜಯ್ನಾ ಕೊಠಾರಿ ಅವರು ಸುಪ್ರೀಂಕೋರ್ಟ್‌ ಕೇಸ್‌ ಸ್ಟಡಿಗಳನ್ನು ಉಲ್ಲೇಖಿಸಿದರು. ಕೆಲವು ತೀರ್ಪುಗಳನ್ನು ಓದಿ ಹೇಳಿದರು. ಕಿಡ್ನ್ಯಾಪ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಹಿಂದಿನ ತೀರ್ಪುಗಳನ್ನು ಕೋರ್ಟ್‌ ಗಮನಕ್ಕೆ ತಂದರು. ಕಿಡ್ನ್ಯಾಪ್‌ ಪ್ರಕರಣದಲ್ಲಿ ಸೆಕ್ಷನ್‌ 364ಎ ಅಂದ್ರೆ ಜೀವಾವಧಿ ಶಿಕ್ಷೆ ಇದೆ. ಐಪಿಸಿ ಸೆಕ್ಷನ್‌ 364ಎ ಅಡಿಯಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಹೀಗಾಗಿ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಕೊಡಬಾರದು ಎಂದು ವಾದ ಮಂಡಿಸಿದರು. ಶಿಕ್ಷೆಯ ಪ್ರಮಾಣದ ಗಂಭೀರತೆಯನ್ನು ಪರಿಗಣಿಸಿ ಬೇಲ್ ಅನ್ನು ಕೊಡಲೇಬಾರದು ಎಂದು ಮನವಿ ಮಾಡಿದರು.

ದೆಹಲಿ ಕೋರ್ಟ್‌ನ ಗುರುಚರಣ್ ಸಿಂಗ್‌ ಪ್ರಕರಣದ ಬಗ್ಗೆ ಉಲ್ಲೇಖ

ಗುರುಚರಣ್ ಸಿಂಗ್‌ ಪ್ರಕರಣದಲ್ಲಿ ಕೋರ್ಟ್‌ ಬೇಲ್ ತಿರಸ್ಕರಿಸಿತ್ತು. ಈಗ ರೇವಣ್ಣ ಪರ ದಾಖಲಾಗಿರುವ ಕೆ.ಆರ್.ನಗರ ಅಪಹರಣ ಪ್ರಕರಣವು ಒಂದು ಸೀರಿಯಸ್ ಕ್ರಿಮಿನಲ್ ಕೇಸ್ ಆಗಿದೆ ಎಂದು ವಾದ ಮಂಡಿಸಿ ಕೆಲವು ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ ತೀರ್ಪುಗಳನ್ನು ಉಲ್ಲೇಖಿಸಿದರು.

ಆರೋಪಿ ಎಚ್‌.ಡಿ. ರೇವಣ್ಣ ಅವರ ಮಗ ಪ್ರಜ್ವಲ್‌ ರೇವಣ್ಣ ಕೂಡ ಬೇರೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮಾಹಿತಿಯನ್ನು ಗೌಪ್ಯವಾಗಿಡಬೇಕು. ಕೆಲವು ಪ್ರಕರಣದಲ್ಲಿ ಮಾತ್ರ ಅಲ್ಲ, ಬೇರೆ ಪ್ರಕರಣಗಳಲ್ಲಿಯೂ ಈ ರೀತಿ ಸಂದರ್ಭದಲ್ಲಿ ಜಾಮೀನು ಕೊಟ್ಟರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಗಂಭೀರತೆ ಹೆಚ್ಚಿರುವ ಪ್ರಕರಣಗಳಲ್ಲಿ ಜಾಮೀನು ಕೊಡಬಾರದು. ಜಾಮೀನು ಕೊಡಬಾರದೆಂದು ಹಲವು ಕೋರ್ಟ್‌ಗಳ ತೀರ್ಪಿದೆ. ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪುಗಳನ್ನು ಕೊಠಾರಿ ಉಲ್ಲೇಖಿಸಿದರು.

ಜಾಮೀನು ನೀಡಿದರೆ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇರುತ್ತದೆ. ಸಂತ್ರಸ್ತೆ ಮತ್ತು ಆಕೆಯ ಪುತ್ರನಿಗೆ ಜೀವ ಬೆದರಿಕೆಯೂ ಇದೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ ಮಾಹಿತಿ ಗೌಪ್ಯವಾಗಿ ಇಡಬೇಕು. ಈ ಸಂದರ್ಭದಲ್ಲಿ ಸಂತ್ರಸ್ತೆ ಮಾಹಿತಿ ಗೌಪ್ಯವಾಗಿ ಇಡಲಿಲ್ಲ ಅಂದರೆ ಬೇರೆ ಯಾವ ಸಂತ್ರಸ್ತೆಯರು ಮುಂದೆ ಬಂದು ದೂರು ನೀಡುತ್ತಾರೆ? ರೇವಣ್ಣಗೆ ಜಾಮೀನು ನೀಡಲೇಬಾರದು. ಈ ಪರಿಸ್ಥಿತಿಯಲ್ಲಿ ರೇವಣ್ಣಗೆ ಜಾಮೀನು ನೀಡಿದರೆ ನ್ಯಾಯಾಂಗ ಹಾದಿಗೇ ಅಡಚಣೆಯಾಗುತ್ತದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಈ ಕಾರಣಕ್ಕಾಗಿ ಜಾಮೀನು ನೀಡಬಾರದು

ರೇವಣ್ಣ ಪ್ರಭಾವಿಯಾಗಿದ್ದು, ಅವರ ಪುತ್ರ ಸಂಸದ ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ಇದು ಕೇವಲ ಅಪಹರಣ ಪ್ರಕರಣ ಅಲ್ಲ, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕಿಡ್ನ್ಯಾಪ್ ಆಗಿದೆ. ಪ್ರಕರಣದಲ್ಲಿ ಯಾವುದೇ ಮಹಿಳೆಯರು ದೂರು ನೀಡದಂತೆ ತಡೆಯುವ ಯತ್ನ ಇದಾಗಿದೆ. ಎಚ್.ಡಿ. ರೇವಣ್ಣಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಕಿಡ್ನ್ಯಾಪ್ ಪ್ರಕರಣದಲ್ಲಿ ಕೆಲವರ ಹೇಳಿಕೆ ಸಿಆರ್‌ಪಿಸಿ 164 ಅಡಿಯಲ್ಲಿ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ಹೇಳಿಕೆ ದಾಖಲಿಸಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡನೆ ಮಾಡಿ ಮುಗಿಸಿದರು.

ಜಯ್ನಾ ಕೊಠಾರಿ ಬಳಿಕ ಹೆಚ್ಚುವರಿ ಎಸ್‌ಪಿಪಿ ಅಶೋಕ್ ನಾಯ್ಕ್ ವಾದ ಮಂಡನೆಯನ್ನು ಪ್ರಾರಂಭಿಸಿದರು. ಒಬ್ಬರು ವಾದ ಮಂಡಿಸಿದ್ರೆ ಸಾಕು ಎಂದು ವಕೀಲ ಸಿ.ವಿ.ನಾಗೇಶ್ ಆಕ್ಷೇಪಣೆ ವ್ಯಕ್ತಪಡಿಸಿದರು. ಒಂದೇ ಕೇಸ್‌ಗೆ ಇಬ್ಬರು ಎಸ್‌ಪಿಪಿಗಳ ವಾದದ ಬಗ್ಗೆ ಜಡ್ಜ್ ನಿರ್ಧಾರ ಮಾಡಬೇಕು ಎಂದು ನ್ಯಾಯಾಧೀಶರನ್ನು ಇದೇ ವೇಳೆ ಸಿ.ವಿ. ನಾಗೇಶ್ ಕೇಳಿದರು. ಅದಕ್ಕೆ ಅಶೋಕ್‌ ನಾಯ್ಕ್‌, ಎಷ್ಟು ಜನ ಬೇಕಾದರೂ ವಾದ ಮಾಡಿ ಅಂತಾ ನೀವೇ ಹೇಳಿದ್ದಿರಲ್ಲವೇ ಎಂದು ಸಿ.ಪಿ. ನಾಗೇಶ್‌ಗೆ ಪ್ರಶ್ನೆ ಮಾಡಿದರು.

ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂತ್ರಸ್ತೆಯರು ಇದ್ದಾರೆ. ಆದ್ದರಿಂದಲೇ ಎಸ್‌ಐಟಿ ಪರವಾಗಿ ಇಬ್ಬರು ಎಸ್‌ಪಿಪಿಗಳನ್ನು ನೇಮಿಸಲಾಗಿದೆ. ನಾನು ವಾದ ಮಾಡಿದರೆ ನಿಮಗೇನು ತೊಂದರೆ? ಎಂದು ಕೇಳಿ ಅಶೋಕ್ ನಾಯ್ಕ್ ವಾದ ಮುಂದುವರಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

ರೇವಣ್ಣಗೆ ಜಾಮೀನು ಕೊಡಬಾರದು. ಕಿಡ್ನ್ಯಾಪ್ ಪ್ರಕರಣದ ಸಂತ್ರಸ್ತೆಯ ಮನೆಯಲ್ಲಿ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ. ಆ ವೇಳೆ ಬರಲು ಆಗಲ್ಲ ಅಂದರೂ ಬಲವಂತವಾಗಿ ಕರೆದೊಯ್ದಿದ್ದಾರೆ. ಸಂತ್ರಸ್ತೆ ಅಪಹರಿಸಿ ರೇವಣ್ಣ ಆಪ್ತರ ತೋಟದ ಮನೆಯಲ್ಲಿ ಕೂಡಿ ಹಾಕಿದ್ದಾರೆ. ಚುನಾವಣೆಗೆ ನಾಲ್ಕೈದು ದಿನ ಮುಂಚೆಯೇ ಸಂತ್ರಸ್ತೆಯನ್ನು ಕರೆದೊಯ್ದಿದ್ದಾರೆ. ಆನಂತರ ಕರೆದುಕೊಂಡು ಬಂದಿದ್ದಾರೆ ಎಂದು ಅಶೋಕ್ ನಾಯ್ಕ್ ವಾದಿಸಿದರು.

ರೇವಣ್ಣ ಪುತ್ರ ಪ್ರಜ್ವಲ್ ಯಾವ ಕಾರಣಕ್ಕಾಗಿ ದೇಶ ಬಿಟ್ಟು ಹೋಗಿದ್ದಾನೆ? ಇಲ್ಲಿ ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ಹೊಂದಿದ್ದಾರೆ. ಅವರ ತಂದೆ – ತಾಯಿಗೆ ಯಾವ ಕಾರಣ ಹೇಳಿ ಹೋಗಿದ್ದಾರೆ? ದೇಶದ ಬಗ್ಗೆ ಚರ್ಚೆ ಮಾಡುವುದಕ್ಕೆ ಏನಾದರೂ ಹೋಗಿದ್ದಾರಾ? ಎಂದು ಅಶೋಕ್‌ ನಾಯ್ಕ್‌ ಪ್ರಶ್ನೆ ಮಾಡಿದರು.

ತಾಯಿಯ ಮೇಲೆ ನಡೆದ ಅತ್ಯಾಚಾರ ದೃಶ್ಯವನ್ನು ದೂರುದಾರ ನೋಡಿದ್ದಾರೆ. ತನ್ನ ಸ್ನೇಹಿತರ ಮೊಬೈಲ್‌ನಲ್ಲಿ ತಾಯಿ ಮೇಲಿನ ದೌರ್ಜನ್ಯದ ವಿಡಿಯೊವನ್ನು ನೋಡಿದ್ದಾರೆ. ಅದಕ್ಕಿಂತ ದುರ್ದೈವದ ಸಂಗತಿ ಇನ್ನೇನಿದೆ ಹೇಳಿ? ನಾಲ್ಕು ದಿನಗಳ ಕಾಲ ಅನುಭವಿಸಿದ್ದ ಯಾತನೆಯನ್ನು ಸಂತ್ರಸ್ತೆ ಹೇಳಿಕೊಂಡಿದ್ದಾರೆ ಎಂದು ಅಶೋಕ್‌ ನಾಯ್ಕ್‌ ಹೇಳಿದರು.

ಭಾನುವಾರ ವೈರಲ್ ಆಗಿರುವ ಸಂತ್ರಸ್ತೆಯ ಸ್ಪಷ್ಟನೆಯುಳ್ಳ ವಿಡಿಯೊ ಬಗ್ಗೆ ಪ್ರಸ್ತಾಪಿಸಿದ ಎಸ್‌ಪಿಪಿ ಅಶೋಕ್‌ ನಾಯ್ಕ್‌, ವೈರಲ್ ಆಗಿರುವ ವಿಡಿಯೊದಲ್ಲಿ ರೇವಣ್ಣ ಕಿಡ್ನ್ಯಾಪ್ ಮಾಡಿಲ್ಲ ಅಂದಿದ್ದಾರೆ. ಈ ಮೂಲಕ ನ್ಯಾಯಾಲಯದ ದಾರಿಯನ್ನೇ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಆ ವಿಡಿಯೊದಲ್ಲಿ ಸಂತ್ರಸ್ತೆಯೇ ಕೆಲವು ವಿಚಾರವನ್ನು ಹೇಳಿಕೊಂಡಿದ್ದಾರೆ. ಯಾವ ರೀತಿ ಕಿಡ್ನ್ಯಾಪ್ ಮಾಡಲಾಗಿದೆ ಅಂತಾ ಎಸ್‌ಐಟಿ ಅವರಿಂದ ಸಮಗ್ರ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ನ್ಯಾಯಾಲಯಕ್ಕೆ ಎಸ್‌ಐಟಿ ತನಿಖೆ ಬಗ್ಗೆ ಮಾಹಿತಿ ನೀಡಿದ ಅಶೋಕ್ ನಾಯ್ಕ್, ಎಷ್ಟು ಜನ ಕಿಡ್ನ್ಯಾಪ್ ಮಾಡಿದರು? ಎಷ್ಟು ವಾಹನಗಳಲ್ಲಿ ಅಪಹರಣ ಮಾಡಿದರು? ಮಾರ್ಗ ಮಧ್ಯೆ ವಾಹನಗಳ ಬದಲಾವಣೆ ಮಾಡಲಾಗಿದೆಯಾ ಅಂತಲೂ ತನಿಖೆ ನಡೆದಿದೆ. ಕಿಡ್ನ್ಯಾಪ್ ಹೇಗೆ ಮಾಡಲಾಗಿದೆ ಎಂಬ ಬಗ್ಗೆ ಸಮಗ್ರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ವಿವರಿಸಿದರು.

ಕಸ್ಟಡಿ ಹಾಗೂ ಜಾಮೀನು ಸಂಬಂಧ ರೇವಣ್ಣ ಪರ ವಕೀಲರು ವಾದ ಮಾಡಿದ್ದಾರೆ. ಆದರೆ ಇಲ್ಲಿ ಜಾಮೀನು ಕೊಟ್ಟರೆ ಏನು ಆಗುತ್ತೆ ಅಂತಾ, ಮುಂದೆ ಏನು ಆಗುತ್ತದೆ..? ಎರಡು ರೀತಿಯಲ್ಲಿ ನಾನು ವಾದ ಮಂಡಿಸುತ್ತೇನೆ. ಜಾಮೀನು ಕೊಟ್ಟರೆ ಏನಾಗುತ್ತದೆ? ಜಾಮೀನು ಕೊಡದಿದ್ದರೆ ಏನಾಗುತ್ತೆ ಎಂಬುದನ್ನು ಹೇಳುತ್ತೇನೆ. ನಿಮ್ಮ ವಾದದ ಅಂಶಗಳ ಕಾಪಿಯನ್ನು ಕೊಟ್ಟು ವಾದವನ್ನು ಮುಂದುವರಿಸಿ ಎಂದು ಈ ವೇಳೆ ನ್ಯಾಯಾಧೀಶರು ಹೇಳಿದರು.

ಎಚ್.ಡಿ.ರೇವಣ್ಣ ಸಲ್ಲಿಸಿರುವ ಜಾಮೀನಿಗೆ ಮಾನ್ಯತೆಯೇ ಕೊಡಬಾರದು ಎಂದು ಎಸ್‌ಐಟಿ ಪರ ಹೆಚ್ಚುವರಿ ಎಸ್‌ಪಿಪಿ ಅಶೋಕ್ ನಾಯ್ಕ್ ವಾದ ಮಂಡಿಸಿದಾಗ ಮಧ್ಯಪ್ರವೇಶ ಮಾಡಿದ ನ್ಯಾಯಾಧೀಶರು, ಬೇಲ್ ಅರ್ಜಿ ಮಾನ್ಯತೆ ವಿಚಾರ ಏಕೆ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಉತ್ತರಿಸಿದ ಅಶೋಕ್‌ ನಾಯ್ಕ್, ಬೇಲ್ ಅರ್ಜಿ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದರು. ಆಗ ಅಸಮಾಧಾನಗೊಂಡ ನ್ಯಾಯಾಧೀಶರು, ಈಗ ನಡೆಯುತ್ತಿರುವುದು ಬೇಲ್ ಅರ್ಜಿ ವಿಚಾರಣೆಯಾಗಿದೆ. ಅದರ ಸಂಬಂಧ ವಾದ ಮಾಡಿ ಎಂದು ಅಶೋಕ್‌ ನಾಯ್ಕ್‌ಗೆ ನ್ಯಾಯಾಧೀಶರು ಸೂಚನೆ ನೀಡಿದರು. ಅದು ಬಿಟ್ಟು ಪೊಲೀಸ್ ಕಸ್ಟಡಿ, ಜ್ಯುಡಿಷಿಯಲ್ ಕಸ್ಟಡಿ ಬಗ್ಗೆ ವಾದ ಏಕೆ? ಎಂದು ಕೇಳಿದರು.

ಆದರೆ, ಆಗ ವಾದ ಮಂಡಿಸಿದ ಅಶೋಕ್‌ ನಾಯ್ಕ್‌, ಹೀಗೆಯೇ ಆದರೆ ಈ ಕಿಡ್ನ್ಯಾಪ್ ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋಗಬೇಕು ಎಂದು ಹೇಳಿದರು. ಇದಕ್ಕೆ ಸಿ.ವಿ.ನಾಗೇಶ್ ಆಕ್ಷೇಪ ವ್ಯಕ್ತಪಡಿಸಿ, ನ್ಯಾಯಾಲಯಕ್ಕೇ ನೀವು ಬೆದರಿಕೆ ಹಾಕುತ್ತಿದ್ದೀರಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಅಶೋಕ್‌ ನಾಯ್ಕ್‌, ಈ ವಿಚಾರಗಳನ್ನು ಮಾತ್ರ ನಾನು ಹೇಳುತ್ತಿದ್ದೇನೆಯೇ ಹೊರತು, ಬೆದರಿಕೆಯ ಪ್ರಶ್ನೆಯೇ ಇಲ್ಲ. ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಬೇಡಿ ಎಂದು ಸಿ.ವಿ. ನಾಗೇಶ್‌ಗೆ ಹೇಳಿದರು.

ಯಾವ ಕಾರಣಕ್ಕೆ ರೇವಣ್ಣಗೆ ಜಾಮೀನು ನೀಡಬಾರದು?

ಯಾವ ಕಾರಣಕ್ಕೆ ರೇವಣ್ಣಗೆ ಜಾಮೀನು ನೀಡಬಾರದು ಅಂತಾ ಹೇಳುತ್ತೇನೆ ಎಂದು ವಾದವನ್ನು ಮುಂದುವರಿಸಿದ ಎಸ್‌ಪಿಪಿ ಅಶೋಕ್ ನಾಯ್ಕ್, ವೋಟ್ ಹಾಕಿ.. ವೋಟ್‌ ಹಾಕಿ.. ಅಂತಾ ಜನರನ್ನೇ ಬೆದರಿಸುತ್ತಾರೆ. ಈ ರೇವಣ್ಣ ಅವರಿಗೆ ಜಾಮೀನು ಕೊಟ್ಟರೆ ಕಥೆ ಏನು ಸ್ವಾಮಿ? ವೋಟ್ ಹಾಕಲು ಸರತಿ ಸಾಲಲ್ಲಿ ನಿಂತಿದ್ದಾಗ ಮತದಾರರಿಗೆ ಬೆದರಿಕೆ ಹಾಕುತ್ತಾರೆ. 2019ರ ಚುನಾವಣೆ ವೇಳೆ ಮತ ಹಾಕುವ ವೇಳೆ ರೇವಣ್ಣ ಅವರೇ ಬೆದರಿಕೆ ಹಾಕಿದ್ದಾರೆ. ಅಲ್ಲಿ ಯಾರೂ ರೇವಣ್ಣ ಅವರನ್ನು ಕೇಳುವಂತಿಲ್ಲ. ಈಗ ಜಾಮೀನು ಕೊಟ್ಟರೆ ಕಥೆ ಏನ್‌ ಸ್ವಾಮಿ? ಅಧಿಕಾರಿಗಳು ಹಾಗೂ ಸರ್ಕಾರಿ ವಾಹನಗಳನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ. ಎಲೆಕ್ಷನ್‌ ಟೈಮ್‌ನಲ್ಲಿ ಇವರು ಸರ್ಕಾರಿ ವಾಹನಗಳಲ್ಲಿಯೇ ಹಣ ಸಾಗಿಸುತ್ತಿದ್ದರು. ಈ ಎಲ್ಲ ಆರೋಪಗಳಿಗೆ ಸಂಬಂಧಿಸಿದಂತೆ ಬೇಕಾದ ಎಲ್ಲ ದಾಖಲೆಗಳು ಇವೆ. ಆದ್ದರಿಂದ ರೇವಣ್ಣ ಅವರಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂದು ಅಶೋಕ್‌ ನಾಯ್ಕ್‌ ವಾದ ಮಂಡಿಸಿದರು.

ಎಲೆಕ್ಷನ್‌ ಮುಗಿಯುವ ವಾರಕ್ಕೆ ಮುಂಚೆಯೇ ಫ್ಲೈಟ್‌ ಟಿಕೆಟ್‌ ಬುಕ್‌

ಒಂದು ಕಡೆ ಸಂತ್ರಸ್ತೆಯನ್ನು ಚುನಾವಣೆಗೆ ಮುಂಚೆಯೇ ಕರೆದೊಯ್ದಿರುತ್ತಾರೆ. ಇನ್ನೊಂದೆಡೆ ಎಲೆಕ್ಷನ್ ಮುಗಿಯೋದಕ್ಕೆ ಮುಂಚೆಯೇ ಫ್ಲೈಟ್ ಟಿಕೆಟ್‌ ಬುಕ್ ಆಗಿರುತ್ತದೆ. ಎಲೆಕ್ಷನ್ ಮುಗಿಯುವ ಒಂದು ವಾರ ಮೊದಲೇ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ದೆಹಲಿಯ ಕಂಪನಿ ಮೂಲಕ ಫ್ಲೈಟ್ ಟಿಕೆಟ್ ಬುಕಿಂಗ್ ಆಗಿದೆ ಎಂದು ಅಶೋಕ್‌ ನಾಯ್ಕ್‌ ಹೇಳಿದರು.

ಕಿಡ್ನ್ಯಾಪ್ ಮಾಡಿದ ಬಳಿಕ ಸಂತ್ರಸ್ತೆಯನ್ನು ಅನೇಕ ಕಡೆಗೆ ಕರೆದೊಯ್ದಿದ್ದಾರೆ. ಈಗ ಆಕೆಯಿಂದ ಬಲವಂತವಾಗಿ ವಿಡಿಯೊ ಮೂಲಕ ಸ್ಪಷ್ಟನೆ ನೀಡಲಾಗಿದೆ. ಯಾರೂ ಕಿಡ್ನ್ಯಾಪ್ ಮಾಡಿಲ್ಲ ಅಂತ ಹೇಳಿಕೆಯ ಕೊಡಿಸಲು ಯತ್ನಿಸಿದ್ದಾರೆ. ಸಂತ್ರಸ್ತೆ ಮಹಿಳೆಯ ವಿಡಿಯೊ ಸ್ಪಷ್ಟನೆಯ ಸತ್ಯಾಸತ್ಯತೆ ಕುರಿತು ಪತ್ತೆ ಆಗಬೇಕು. ಕಿಡ್ನ್ಯಾಪ್ ಪ್ರಕರಣ ಸೇರಿದಂತೆ ಈ ಹಗರಣದಲ್ಲಿ ಹಲವು ಜನರು ಇದ್ದಾರೆ. ಎರಡು ದಿನಗಳಿಂದ ಕೆಲವರ ಬಂಧನ ಆಗಿದೆ. ಎಲ್ಲರೂ ಪ್ರಜ್ವಲ್‌ ರೇವಣ್ಣಗೆ ಗೊತ್ತಿರಬೇಕು ಅಂತ ಏನಿಲ್ಲ. ಬಂಧಿತ ಆರೋಪಿಗಳಿಂದ ಸಮಗ್ರ ಮಾಹಿತಿಯನ್ನು ಎಸ್‌ಐಟಿ ಕಲೆ ಹಾಕುತ್ತಿದೆ ಎಂದು ಅಶೋಕ್‌ ನಾಯ್ಕ್‌ ಹೇಳಿದರು.

ಸಮನ್ಸ್‌ ನೀಡಿದವರಿಗೆ ರೇವಣ್ಣರಿಂದ ಬೆದರಿಕೆ

ಮಾಜಿ ಸಚಿವ ಎಚ್.ಡಿ. ರೇವಣ್ಣ ಕುಟುಂಬಸ್ಥರು ಪ್ರಭಾವಸ್ಥರು, ಸಮನ್ಸ್ ನೀಡಿರುವ ತನಿಖಾಧಿಕಾರಿಗಳಿಗೇ ಎಚ್‌.ಡಿ. ರೇವಣ್ಣ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಬೇಲ್ ಕೊಡಬಾರದು ಎಂದು ಎಸ್‌ಪಿಪಿ ಅಶೋಕ್ ನಾಯ್ಕ್‌ ವಾದ ಮಂಡಿಸಿದರು.

ಸಂತ್ರಸ್ತೆ ಹೇಳಿಕೆಯ ವಿಡಿಯೊ ವೈರಲ್‌ ಪ್ರಸ್ತಾಪ

ಸಂತ್ರಸ್ತೆ ವಿಡಿಯೊ ಹೇಳಿಕೆ ಭಾನುವಾರದಿಂದ ವೈರಲ್‌ ಆಗಿದೆ. ಈ ವಿಡಿಯೊವನ್ನು ಸಂತ್ರಸ್ತೆಗೆ ಹೆದರಿಸಿ ಮಾಡಲಾಗಿದೆ. ಈ ಬಗ್ಗೆ ಎಸ್ಐಟಿ ವಿಚಾರಣೆ ವೇಳೆ ಸಂತ್ರಸ್ತೆ ಹೇಳಿದ್ದಾರೆ. ತೋಟದ ಮನೆಯಲ್ಲಿ ಕೂಡಿ ಹಾಕಿದ್ದಾಗ ಸಂತ್ರಸ್ತೆಯ ವಿಡಿಯೊ ರೆಕಾರ್ಡ್ ಮಾಡಲಾಗಿದೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲವೆಂದು ಅವರಿಂದ ಹೇಳಿಸಿದ್ದಾರೆ ಎಂದು ಅಶೋಕ್‌ ನಾಯ್ಕ್‌ ಹೇಳಿದರು.

ಸಿ.ವಿ.ನಾಗೇಶ್ ವಾದ

ಇಬ್ಬರೂ ಎಸ್‌ಪಿಪಿಗಳ ವಾದ ಮಂಡನೆ ನಂತರ ಮತ್ತೆ ಸಿ.ವಿ. ನಾಗೇಶ್ ವಾದವನ್ನು ಆರಂಭಿಸಿದರು. ಏಪ್ರಿಲ್ 29ಕ್ಕೆ ಕಿಡ್ನ್ಯಾಪ್ ಮಾಡಿದರೆ, ದೂರು ಕೊಡಲು ತಡ ಯಾಕೆ ಮಾಡಿದರು? ಸಂತ್ರಸ್ತ ಮಹಿಳೆ ಎಚ್.ಡಿ.ರೇವಣ್ಣ ಅವರ ಸಂಬಂಧಿಯಾಗಿದ್ದಾರೆ. ಸುಮಾರು ವರ್ಷ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಕೆಲಸ ಮಾಡಿದ್ದವರನ್ನು ಯಾಕೆ ಕಿಡ್ನ್ಯಾಪ್ ಮಾಡಬೇಕು? ಮನೆ ಕೆಲಸ ಮಾಡುತ್ತಿದ್ದರಲ್ಲ, ಕರೆದುಕೊಂಡು ಬನ್ನಿ ಅಂದಿರಬಹುದು. ಇಲ್ಲಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರೇವಣ್ಣ ಅರೆಸ್ಟ್ ಆದ ದಿನವೇ ಸಂತ್ರಸ್ತೆ ಮಹಿಳೆ ಹುಣಸೂರಿನಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಹುಣಸೂರು ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಪತ್ತೆ ಆಗಿದ್ದರು. ಸಂತ್ರಸ್ತ ಮಹಿಳೆ ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರ ಆರೋಪಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆ ಮಹಿಳೆ ಯಾವುದೇ ಆರೋಪವನ್ನು ಮಾಡಿಲ್ಲ ಎಂದು ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಸಂತ್ರಸ್ತ ಮಹಿಳೆಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಆರೋಪದ ಬಗ್ಗೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯು ಸಿಆರ್‌ಪಿಸಿ 161 ಅಡಿಯಲ್ಲಿ ಹೇಳಿಕೆ ನೀಡುವಾಗ, ಕೇವಲ ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಅಂತಾ ಆರೋಪ ಮಾಡಿದ್ದಾಳೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಎರಡು ರಿಮ್ಯಾಂಡ್‌ ಅರ್ಜಿ ಸಲ್ಲಿಕೆಯಾಗಿದೆ. ಕಿಡ್ನ್ಯಾಪ್ ಮಾಡಿದ್ದಾರೆ ಅಂತಾ ಮಹಿಳೆಯ ಮಗನಿಗೆ ಹೇಗೆ ಗೊತ್ತಾಯ್ತು? ಅದು ಊಹೆಯಷ್ಟೇ. ಸಂತ್ರಸ್ತೆಯ ಮಗನಿಗೆ ಯಾರೂ ಕಾಲ್ ಮಾಡಿ ಡಿಮ್ಯಾಂಡ್ ಮಾಡಿಲ್ಲ. ಇನ್ನು ಸಂತ್ರಸ್ತ ಮಹಿಳೆಯನ್ನು ಅಂದು ಹುಣಸೂರಿನ ಬಳಿ ರಕ್ಷಣೆ ಮಾಡಲಾಗಿದೆ. ಆಪ್ತ ಸಮಾಲೋಚನೆ ಮಾಡಿ, ಆಕೆಯನ್ನು ಸುರಕ್ಷಿತ ಕೊಠಡಿಯಲ್ಲಿಡಲಾಗಿದೆ. ಈ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಲ್ಲ ಏಕೆ? ಇಲ್ಲಿಯ ತನಕ ರೇವಣ್ಣ ವಿರುದ್ಧ ಯಾವುದೇ ಸಾಕ್ಷಿಯನ್ನೂ ಸಂಗ್ರಹಿಸಿಲ್ಲ, ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿಲ್ಲ. ಸಂತ್ರಸ್ತ ಮಹಿಳೆಯನ್ನು ಕೇವಲ ಆಪ್ತ ಸಮಾಲೋಚನೆಯಲ್ಲಿ ಇರಿಸಿದ್ದಾರೆ ಎಂದು ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಸಂತ್ರಸ್ತ ಮಹಿಳೆಯನ್ನು ಹುಣಸೂರಿನ ತೋಟದಿಂದ ರಕ್ಷಣೆ ಮಾಡಿದರಾ? ಎಸ್‌ಐಟಿ ಎಲ್ಲಿಂದ ಮಹಿಳೆಯನ್ನು ಕರೆತಂದರು? ಅವರ ಸಂಬಂಧಿಕರ ಮನೆಯಿಂದ ಸಂತ್ರಸ್ತೆಯನ್ನು ಕರೆ ತಂದಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಎರಡು ಕಡೆ ರೆಕಾರ್ಡ್ ಆಗಿದೆ. ಒಂದು ಕಡೆ ಫೋಟೋ ಶಾಪ್‌ವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ತರಕಾರಿ ಅಂಗಡಿ ಸಿಸಿ ಕ್ಯಾಮರಾದಲ್ಲಿ ಇದು ಸೆರೆಯಾಗಿದೆ. ಅನುಮತಿ ನೀಡಿದರೆ ಸೆರೆಯಾಗಿರುವ ದೃಶ್ಯವನ್ನು ತೋರಿಸಲು ನಾವು ಸಿದ್ಧ. ಈಗ ನ್ಯಾಯಾಲಯದಲ್ಲಿಯೇ ಪ್ಲೇ ಮಾಡುತ್ತೇವೆ. ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ ವಿರುದ್ಧವೇ ಸಿ.ವಿ. ನಾಗೇಶ್ ಆರೋಪಿಸಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್‌ಐಟಿಯವರೇ ಟ್ಯಾಂಪರಿಂಗ್ ಮಾಡುತ್ತಿದ್ದಾರೆ. ಆದರೆ, ಎಸ್‌ಪಿಪಿಯವರು ಸಂತ್ರಸ್ತೆ ಹೇಳಿಕೆಯನ್ನು ಟ್ಯಾಂಪರಿಂಗ್ ಆಗಿದೆ ಎಂದು ಹೇಳಿದ್ದಾರೆ. ವೈರಲ್ ಆದ ಸ್ಪಷ್ಟನೆ ವಿಡಿಯೊದಲ್ಲಿ ಸಂತ್ರಸ್ತೆಯೇ ಹೇಳಿಕೊಂಡಿದ್ದಾರೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲವೆಂದಿದ್ದಾರೆ. ನಮ್ಮ ಕುಟುಂಬಕ್ಕೆ ತೊಂದರೆಯಾದರೆ ಅವರೇ ಹೊಣೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸಂಬಂಧಿಕರ ಮನೆಯಲ್ಲಿದ್ದೇನೆ. ಬೇಗ ಬರುತ್ತೇನೆ ಎಂದೂ ಹೇಳಿದ್ದಾರೆ. ಯಾರೂ ಬೆದರಿಕೆ ಹಾಕಿಲ್ಲ, ಬಲವಂತವಾಗಿಯೂ ಕರೆದೊಯ್ದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೀಗೆಲ್ಲಾ ಸಂತ್ರಸ್ತೆಯೇ ವಿಡಿಯೊ ಮೂಲಕ ಹೇಳಿದ್ದಾರೆ. ಹಾಗಾಗಿ ಕಿಡ್ನ್ಯಾಪ್ ಹೇಗೆ ಆಗುತ್ತದೆ. ಈ ಕಾರಣಕ್ಕಾಗಿ ರೇವಣ್ಣ ಅವರಿಗೆ ಜಾಮೀನು ನೀಡಬೇಕು ಎಂದು ಸಿ.ವಿ. ನಾಗೇಶ್‌ ಕೋರಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಚುನಾವಣಾ ತಕರಾರು ಅರ್ಜಿ ತರುವುದು ಬೇಡ. ಎಸ್‌ಪಿಪಿ ವಾದದ ಅಂಶಗಳನ್ನು ಆಕ್ಷೇಪಿಸಿ ರೇವಣ್ಣ ಪರ ವಕೀಲರು ವಾದ ಮಂಡಿಸಿದರು. ಎಚ್.ಡಿ.ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಸಾಬೀತಾಗಿಲ್ಲ. ಹಿಂದಿನ ಕೇಸ್‌ಗಳು ಸಾಬೀತಾಗಿದ್ದರೆ ಯಾಕೆ ಎಲ್ಲವೂ ಬಿ ರಿಪೋರ್ಟ್ ಆಗುತ್ತಿತ್ತು? ಎಂದು ಪ್ರಶ್ನೆ ಮಾಡಿದರು.

ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಎಸ್‌ಐಟಿ ಲೋಪವೆಸಗಿದೆ. ಅದರಲ್ಲಿ ಸಂತ್ರಸ್ತೆಯ ಹೇಳಿಕೆ ಒಂದು ಪ್ಯಾರಾ ಇದೆ. ಅದು ಬಿಟ್ಟು ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಆರೋಪಿ ಹೇಳಿಕೆಯೇ ಇದೆ. ಸಂತ್ರಸ್ತ ಮಹಿಳೆಯ ಹೇಳಿಕೆ ಒಂದು ಪ್ಯಾರಾ ಬಿಟ್ಟರೆ ಬೇರೆ ಇಲ್ಲವೇ ಇಲ್ಲ. ಯಾವಾಗಲೂ ಹೇಳಿಕೆ ದಾಖಲು ಮಾಡಿಕೊಳ್ಳುವುದೇ ಎಸ್‌ಐಟಿ ಕೆಲಸನಾ? ಸಂತ್ರಸ್ತೆ ಏನು ಹೇಳ್ತಾರೆ? ಏನು ಹೇಳಲ್ಲ ಅಂತಾ ಹೇಳಿಕೆ ದಾಖಲಾಗಬೇಕು. ಆಕೆ ಎಸ್‌ಐಟಿ ಸುಪರ್ದಿಯಲ್ಲಿರುವಾಗ ಏನನ್ನೂ ಮಾಡಿಲ್ಲ. ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿರುವಂತೆ ಯಾವುದೇ ಸಾಕ್ಷಿ ಸಂಗ್ರಹಿಸಿಲ್ಲ. ಆದರೆ, ನ್ಯಾಯಾಲಯಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಿದ್ದಾರೆ ಎಂದು ನಾಗೇಶ್ ಹೇಳಿದರು.

ಕಾಯ್ದೆ ಬಗ್ಗೆ ವಕೀಲರ ಆಕ್ಷೇಪ

ಸಂತ್ರಸ್ತೆ ಮೇಲೆ ಯಾವುದಾದರೂ ರೀತಿ ಹಲ್ಲೆ, ಬೆದರಿಕೆ ಇರಬೇಕು. ಆಗ ಮಾತ್ರ ಐಪಿಸಿ ಸೆಕ್ಷನ್‌ 364ಎ ಕಾಯ್ದೆ ಅನ್ವಯ ಆಗುತ್ತದಲ್ಲವೇ? ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಹಾಗಾದರೆ ರೇವಣ್ಣ ವಿರುದ್ಧ ಸೆಕ್ಷನ್‌ 364ಎ ಹೇಗೆ ಅನ್ವಯ ಆಗುತ್ತದೆ? ಎಂದು ಸರ್ಕಾರದ ವಿಶೇಷ ಅಭಿಯೋಜಕರ (SPP) ವಾದಕ್ಕೆ ವಕೀಲ ಸಿ.ವಿ. ನಾಗೇಶ್ ಪ್ರತಿವಾದವನ್ನು ಮಂಡಿಸಿದರು.

ಕೊನೇ ಪಕ್ಷ ಸಂತ್ರಸ್ತೆಯ ಕುಟುಂಬದವರ ಮೇಲೂ ಹಲ್ಲೆ ನಡೆದಿಲ್ಲ. ಆರೋಪಿ ಸ್ಥಾನದಲ್ಲಿರುವ ರೇವಣ್ಣ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ಆದರೂ ಕಿಡ್ನ್ಯಾಪ್ ಪ್ರಕರಣದಲ್ಲಿ ಸೆಕ್ಷನ್‌ 364ಎ ಹಾಕಿದ್ದು ಯಾಕೆ? ಈ ಸೆಕ್ಷನ್ ಹಾಕುವ ಪ್ರಮೇಯವೇ ಕಾಣುತ್ತಿಲ್ಲ. ಘಟನೆ ನಡೆದ ದಿನಕ್ಕೂ ಕೇಸ್ ದಾಖಲಾದ ದಿನಕ್ಕೂ ಅಂತರ ಇದೆ. ನಿಜವಾಗಿಯೂ ಕಿಡ್ನ್ಯಾಪ್ ಆಗಿದ್ದರೆ ಅಲ್ಲಿ ಡಿಮ್ಯಾಂಡ್ ಇರಬೇಕು. ಆದರೆ, ಬಲವಂತದ ಕಿಡ್ನ್ಯಾಪ್ ಆಗಿಲ್ಲ, ಯಾವುದೇ ಬೇಡಿಕೆ ಇಲ್ಲ ಎಂದು ವಾದಿಸಿದ ನಾಗೇಶ್‌, 364 ಎ ಸಂಬಂಧ ಹಲವು ಕೇಸ್‌ ಸ್ಟಡಿಗಳನ್ನು ಉಲ್ಲೇಖಿಸಿದರು. ಜಾರ್ಖಂಡ್ ಹೈಕೋರ್ಟ್‌ನ ರೋಹಿಣಿ ದೇವಿ ಪ್ರಕರಣವನ್ನು ಉಲ್ಲೇಖಿಸಿದರು.

ಈ ವೇಳೆ ತಮ್ಮ ಹಿಂದಿನ ವಾದಕ್ಕೆ ಕರೆಕ್ಷನ್ ಮಾಡಿಕೊಂಡ ವಕೀಲ ನಾಗೇಶ್, ಕಿಡ್ನ್ಯಾಪ್ ಸಂತ್ರಸ್ತೆ ರೇವಣ್ಣ ಅವರ ಸಂಬಂಧಿ ಅಲ್ಲ. ಮೊದಲು ಕೇಸ್ ದಾಖಲಿಸಿದ್ದ ಮಹಿಳೆ ಮಾತ್ರ ರೇವಣ್ಣರ ಸಂಬಂಧಿ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್‌ನಲ್ಲಿನ ಸಂತ್ರಸ್ತೆ ಅಲ್ಲ. ಯಾರನ್ನಾದರೂ ಅಪಹರಿಸಿ, ಒತ್ತೆಯಾಳಾಗಿಟ್ಟುಕೊಂಡಲ್ಲಿ ಮಾತ್ರ ಸೆಕ್ಷನ್‌ 364ಎ ಆಗಬೇಕು. ಇಲ್ಲವಾದಲ್ಲಿ ಈ ರೀತಿ ಪ್ರಕರಣದಲ್ಲಿ ಸೆಕ್ಷನ್ 364ಎ ಸೆಕ್ಷನ್‌ ಹಾಕುವ ಅಗತ್ಯ ಇರಲ್ಲ. ಒತ್ತೆಯಾಳಾಗಿ ಇರಿಸಿಕೊಂಡು ದೌರ್ಜನ್ಯ ನಡೆಸಿ, ಕಿರುಕುಳ ನೀಡಿದರೆ ಅಪರಾಧ. ಪ್ರಾಣ ಹಾನಿ ಆಗುವಂತೆ ಹಲ್ಲೆ ಮಾಡುವುದು ಮಾತ್ರ ಅಪರಾಧ. ಇನ್ನು ವಿದೇಶದಲ್ಲಿರುವ ವ್ಯಕ್ತಿ ಕಿಡ್ನ್ಯಾಪ್ ಮಾಡಿಸಿದರೆ ಆಗ ಸೆಕ್ಷನ್‌ 365ಎ ಅನ್ವಯ ಆಗುತ್ತದೆ.
ಆದರೆ, ಈ ಕೆ.ಆರ್.ನಗರ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ 365ಎ ಅನ್ವಯ ಆಗಲ್ಲ. ಸಂತ್ರಸ್ತ ಮಹಿಳೆ ಎಚ್.ಡಿ. ರೇವಣ್ಣ ಅವರ ಮನೆಯಲ್ಲಿ 10 ವರ್ಷ ಕೆಲಸ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಈ ಪ್ರಕರಣದಲ್ಲಿ ಕಿಡ್ನ್ಯಾಪ್ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ರೇವಣ್ಣ ವಿರುದ್ಧ ಬಲವಾದ ಸಾಕ್ಷಿಗಳೇ ಇಲ್ಲ

ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಬಲವಾದ ಸಾಕ್ಷಿಗಳೇ ಇಲ್ಲ. ಆದರೂ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಶಿಕ್ಷೆಯಾಗುವ ಸೆಕ್ಷನ್‌ಗಳನ್ನು ಹಾಕಲಾಗಿದೆ. ಏನೇ ಆದರೂ ಈ ರೀತಿ ಪ್ರಕರಣದಲ್ಲಿ ಬೇಲ್ ಯಾಕೆ ನೀಡಬಾರದು? ಎಂದು ಕೆಲವು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೇಸ್ ಸ್ಟಡಿಗಳನ್ನು ಉಲ್ಲೇಖಿಸಿದರು. ಇನ್ನು ರೇವಣ್ಣ ವಿರುದ್ಧ ಪ್ರೈಮಾಫೇಸಿ ಸಾಬೀತಾಗುವ ಯಾವುದೇ ಆರೋಪವೂ ಇಲ್ಲ. ತಮಗೆ ಗೊತ್ತಿರುವವರನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡರೆ ತಪ್ಪೇನು? ಸಂತ್ರಸ್ತೆಯನ್ನು ಭವಾನಿ ರೇವಣ್ಣ ಮನೆಗೆ ಕರೆಸಿಕೊಂಡ ಕ್ರಮಕ್ಕೆ ಸಮರ್ಥನೆ ಮಾಡಿದರು.

ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ 6 ದಿನವಾದರೂ ಸೂಕ್ತ ರೀತಿ ಹೇಳಿಕೆ ಪಡೆದಿಲ್ಲ. ಟ್ಯೂಷನ್‌ಗೆ ಹೋಗಿದ್ದ ಬಾಲಕನ ಕಿಡ್ನ್ಯಾಪ್ ಪ್ರಕರಣವನ್ನು ಇದೇ ವೇಳೆ ಉಲ್ಲೇಖಿಸಿದರು. ನಿಮ್ಮ ತಂದೆಗೆ ಅಪಘಾತವಾಗಿದೆ, ಆಸ್ಪತ್ರೆಯಲ್ಲಿದ್ದಾರೆಂದು ಹೇಳಿ ಅಪಹರಿಸಿದ್ದಾರೆ. ಬಾಲಕನನ್ನು ಅಪಹರಿಸಿದ ಬಳಿಕ ತಂದೆಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸರಿಗೆ ಎಲ್ಲಿಯೂ ಹೇಳದಂತೆ ಬೆದರಿಕೆಯನ್ನು ಹಾಕಿದ್ದರು. ಆದರೆ, ಎಚ್.ಡಿ.ರೇವಣ್ಣ ಪ್ರಕರಣದಲ್ಲಿ ಯಾವುದೇ ರೀತಿ ಬೆದರಿಕೆ, ಬೇಡಿಕೆ ಇಲ್ಲ. ಹಾಗಾಗಿ ಎಚ್.ಡಿ.ರೇವಣ್ಣ ಅವರಿಗೆ ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ ಎಂದು ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು.

ತುಮಕೂರು ಕಿಡ್ನ್ಯಾಪ್‌ ಕೇಸ್‌ ಉಲ್ಲೇಖ

ಇದೇ ವೇಳೆ ತುಮಕೂರಿನ ಕಿಡ್ನ್ಯಾಪ್ ಪ್ರಕರಣವೊಂದನ್ನು ಉಲ್ಲೇಖಿಸಿ ನಾಗೇಶ್ ವಾದ ಮಾಡಿದ್ದಾರೆ. ಎಸ್‌. ರಮೇಶ್ ವರ್ಸಸ್‌ ಸ್ಟೇಟ್ ಆಫ್ ಕರ್ನಾಟಕ ಪ್ರಕರಣದ ತೀರ್ಪು ಉಲ್ಲೇಖ ಮಾಡಿದ ನಾಗೇಶ್‌, ಕಾನೂನುಬಾಹಿರವಾಗಿ ಒತ್ತೆಯಾಳಾಗಿ ಇರಿಸಿಕೊಂಡರೇ ಮಾತ್ರ ಅಪರಾಧ. ಆದರೆ, ಕೆ.ಆರ್.ನಗರ ಕಿಡ್ನ್ಯಾಪ್ ಪ್ರಕರಣದಲ್ಲಿ ಈ ರೀತಿ ಬೆದರಿಕೆ ಪ್ರಶ್ನೆ ಇಲ್ಲ. ಆರೋಪಿ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಬೇಲ್‌ ಬೇಡ. ಆಗ ಮಾತ್ರ ನ್ಯಾಯಾಲಯ ರೇವಣ್ಣರಿಗೆ ಜಾಮೀನು ತಿರಸ್ಕರಿಸುವ ಅವಕಾಶ ಇದೆ. ಆದರೆ, ಇಲ್ಲಿ ರೇವಣ್ಣ ವಿರುದ್ಧ ಯಾವುದೇ ರೀತಿಯ ಸಾಕ್ಷಿಗಳೇ ಕಾಣುತ್ತಿಲ್ಲ. ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಕಾಣುತ್ತಿಲ್ಲ. ಎಸ್‌ಐಟಿ ಸಲ್ಲಿಸಿದ ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ಸಿಆರ್‌ಪಿಸಿ 164 ಹೇಳಿಕೆ ದಾಖಲಿಸಿಲ್ಲ. ಆದರೂ ಜೀವಾವಧಿ ಶಿಕ್ಷೆ ನೀಡುವ ಅವಕಾಶ ಇರುವ ಸೆಕ್ಷನ್‌ 364ಎ ಹಾಕಿದ್ದಾರೆ. ಆರೋಪಿತ ರೇವಣ್ಣ ವಿರುದ್ಧ ಸಾಕ್ಷಿಗಳೂ ಇಲ್ಲ, ಸಾಂದರ್ಭಿಕ ಸಾಕ್ಷ್ಯವೂ ಇಲ್ಲ ಎಂದು ನಾಗೇಶ್‌ ಮಾಹಿತಿ ನೀಡಿದರು.

ತೀರ್ಪಿನ ಪ್ರತಿಗಾಗಿ ವಾದ – ಪ್ರತಿವಾದ

ಎಸ್‌ಐಟಿ ಉಲ್ಲೇಖಿಸಿದ ತೀರ್ಪುಗಳಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಲಾಗಿತ್ತು ಆದರೆ ರೇವಣ್ಣ ಪ್ರಕರಣದಲ್ಲಿ ಬೆದರಿಕೆ ಎಲ್ಲಿ ಹಾಕಿದ್ದಾರೆ? ಯಾವ ಬೇಡಿಕೆ ಇದೆ..? ಎಸ್‌ಐಟಿ ಕೇಸ್‌ ಸ್ಟಡಿಗೆ ಕೌಂಟರ್ ಕೊಟ್ಟು ರೇವಣ್ಣ ಪರ ವಕೀಲ ನಾಗೇಶ್ ವಾದ ಮಂಡಿಸುತ್ತಾ, ಕೆ.ಆರ್.ನಗರ ಕಿಡ್ನ್ಯಾಪ್ ಕೇಸಲ್ಲಿ 364ಎ ಹಾಕಲು ಬೇಕಾದ ಬೇಸಿಕ್ ಅಂಶಗಳಿಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪುಗಳನ್ನು ಉಲ್ಲೇಖಿಸಿದರು. ಆದರೆ ಆ ಎಲ್ಲಾ ಪ್ರಕರಣಗಳಲ್ಲಿ ಬೆದರಿಕೆವೊಡ್ಡಿ ಹಣಕ್ಕಾಗಿ ಬೇಡಿಕೆ ಇರಿಸಲಾಗಿತ್ತು. ಇಲ್ಲಿ ದಾಖಲಾದ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಆ ಆರೋಪಗಳಿಲ್ಲ ಎಂದು ವಾದಿಸಿದರು.

ಆಗ ಮಧ್ಯ ಪ್ರವೇಶ ಮಾಡಿದ ಜಯ್ನಾ ಕೊಠಾರಿ, ನೀವು ಉಲ್ಲೇಖಿಸುತ್ತಿರುವ ಪ್ರಕರಣಗಳ ತೀರ್ಪಿನ ಪ್ರತಿ ಕೊಡಿ ಎಂದು ಕೋರಿದರು. ಈ ನಡುವೆ ಎಸ್‌ಪಿಪಿ ಜಯ್ನಾ ಕೊಠಾರಿ ಹಾಗೂ ರೇವಣ್ಣ ವಕೀಲರ ಮಧ್ಯೆ ವಾದ ಪ್ರತಿವಾದ ನಡೆಯಿತು. ನೀವು ಕೇಳಿದ ಕೂಡಲೇ ಕೊಡಬೇಕು ಅಂತೇನಿಲ್ಲ ಎಂದು ಸಿ.ವಿ.ನಾಗೇಶ್ ಹೇಳಿದರು. ವರದಿಯಾಗಿರುವ ಪ್ರಕರಣಗಳನ್ನು ನೀವು ಓದಿಕೊಂಡಿರಬೇಕು ಎಂದು ನಾಗೇಶ್ ಕುಟುಕಿದರು. ಆದರೆ, ಯಾವ ಕೇಸ್ ಸ್ಟಡಿ ಉಲ್ಲೇಖಿಸುತ್ತೀರೋ ಅದರ ಪ್ರತಿಯನ್ನು ಕೊಡಿ ಎಂದು ಒತ್ತಾಯಿಸಿದರು.

ರೇವಣ್ಣ ವಿರುದ್ಧ ಆರೋಪಗಳೆಲ್ಲಾ ಊಹಾಪೋಹ, ರಾಜಕೀಯ ಪ್ರೇರಿತ. ಈ ರೀತಿಯಲ್ಲಿ ಆಧಾರರಹಿತ ಆರೋಪಗಳನ್ನು ಪರಿಗಣಿಸಬಾರದು. ರೇವಣ್ಣ 6 ಸಲ ಎಂಎಲ್‌ಎ ಆಗಿದ್ದವರು, ಕಾನೂನಿಗೆ ಸದಾ ತಲೆಬಾಗುತ್ತಾರೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಿ ಎಂದು ವಾದವನ್ನು ನಾಗೇಶ್‌ ಮುಕ್ತಾಯಗೊಳಿಸಿದರು.

ಇದನ್ನೂ ಓದಿ: Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಮತ್ತೆ ಎಸ್‌ಪಿಪಿ ವಾದಕ್ಕೆ ಜಡ್ಜ್‌ ಅವಕಾಶ

ಸಿ.ವಿ.ನಾಗೇಶ್ ಪ್ರತಿವಾದಕ್ಕೆ ಮತ್ತೆ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಪ್ರಾರಂಭ ಮಾಡಿದರು. ಆಗ ಮಧ್ಯ ಪ್ರವೇಶ ಮಾಡಿದ ನ್ಯಾಯಾಧೀಶರು, ಮತ್ತೆ ಪ್ರತಿವಾದಕ್ಕೆ ಅವಕಾಶ ಇದೆಯೇ ಎಂದು ಪ್ರಶ್ನೆ ಮಾಡಿದರು. ಆಗ ಜಯ್ನಾ ಕೊಠಾರಿ, ಅವಕಾಶ ಇಲ್ಲ. ಆದರೆ, 5 ನಿಮಿಷ ಕಾಲಾವಕಾಶ ಕೊಡಿ ಎಂದು ಕೇಳಿಕೊಂಡರು. ಜಯ್ನಾ ಕೊಠಾರಿ ಮತ್ತೆ ವಾದ ಮಾಡಲು ನಾಗೇಶ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ, ಮತ್ತೆ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಜಡ್ಜ್‌ ಅವಕಾಶ ನೀಡಿದರು. ಅಲ್ಲದೆ, ಎರಡೂ ರಿಮ್ಯಾಂಡ್ ಅಪ್ಲಿಕೇಷನ್ ಓದಲು ಹೇಳಿದರು.

ಮೇ 4ರಂದು ಸಂತ್ರಸ್ತೆ ರಕ್ಷಣೆ ಹಾಗೂ ಮೇ 5ರಂದೇ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಮೇ 5ರಂದೇ ಸಿಆರ್‌ಪಿಸಿ 161 ಅಡಿಯಲ್ಲಿ ಎಸ್‌ಐಟಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಜಯ್ನಾ ಕೊಠಾರಿ ಹೇಳಿದರು. ಆಗ ಮಧ್ಯಪ್ರವೇಶ ಮಾಡಿದ ನ್ಯಾಯಾಧೀಶರು, ಹೇಳಿಕೆ ದಾಖಲಿಸಿಕೊಂಡ ಬಗ್ಗೆ ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ಇದೆಯಾ? ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ಎಲ್ಲಿ ಇದೆ ಓದಿ ಹೇಳಿ ಎಂದು ಕೇಳಿದರು. ಈ ವೇಳೆ ಎಸ್‌ಪಿಪಿಗೆ ಮಾಹಿತಿ ನೀಡುತ್ತಿದ್ದ ಎಸ್‌ಐಟಿ ಪೊಲೀಸರ ವಿರುದ್ಧ ಜಡ್ಜ್ ಗರಂ ಆದರು. ನಿಮಗೆ ಎಲ್ಲಿ ಬಂದು ಇನ್ಸ್‌ಟ್ರಕ್ಷನ್‌ ಕೊಡಬೇಕು ಅಂತಾ ಗೊತ್ತಾಗಲ್ವಾ? ಕೋರ್ಟ್‌ನಲ್ಲಾ ಬಂದು ಇನ್ಸ್‌ಟ್ರಕ್ಷನ್‌ ಕೊಡೋದು? ಎಂದು ಕೇಳಿದರು.

ಮತ್ತೆ ಲಿಖಿತ ವಾದ ಮಂಡಿಸಲು ಎಸ್‌ಪಿಪಿ ಜಯ್ನಾ ಕೊಠಾರಿ ಮನವಿ ಮಾಡಿದರು. ಆದಕ್ಕೆ ಪ್ರತಿಕ್ರಿಯಿಸಿದ ಜಡ್ಜ್ ಲಿಖಿತ ವಾದ ಇನ್ಯಾವಾಗ ಮಾಡ್ತೀರಾ? ನಾನು ಆದೇಶ ಪ್ರಕಟಿಸಲಿದ್ದೇನೆ ಎಂದು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಹೇಳಿದರು.

Continue Reading
Advertisement
DK Shivakumar hits back at HD Kumaraswamy
ರಾಜಕೀಯ4 mins ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು11 mins ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

America
ವಿದೇಶ11 mins ago

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

KL Rahul
ಕ್ರೀಡೆ29 mins ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ32 mins ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ36 mins ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ37 mins ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ53 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ1 hour ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ2 hours ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ11 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ21 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ22 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ23 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌