Worst President: ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್‌ ಟ್ರಂಪ್‌ ಕೆಟ್ಟ ಅಧ್ಯಕ್ಷ; ಬೆಸ್ಟ್‌ ಯಾರು? - Vistara News

ವಿದೇಶ

Worst President: ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್‌ ಟ್ರಂಪ್‌ ಕೆಟ್ಟ ಅಧ್ಯಕ್ಷ; ಬೆಸ್ಟ್‌ ಯಾರು?

Worst President: ಅಮೆರಿಕದಲ್ಲಿ ಬೆಸ್ಟ್‌ ಹಾಗೂ ವರ್ಸ್ಟ್‌ ಅಧ್ಯಕ್ಷರು ಯಾರು ಎಂಬ ಕುರಿತು ಸಮೀಕ್ಷೆ ನಡೆದಿದೆ. ಇದರಲ್ಲಿ ಡೊನಾಲ್ಟ್‌ ಟ್ರಂಪ್‌ ಅವರು ಅಮೆರಿಕದ ಅತಿ ಕೆಟ್ಟ ಅಥವಾ ಕಳಪೆ ಆಡಳಿತ ನಡೆಸಿದ ಅಧ್ಯಕ್ಷ ಎನಿಸಿದ್ದಾರೆ. ಹಾಗಾದರೆ, ಬೆಸ್ಟ್‌ ಪ್ರೆಸಿಡೆಂಟ್‌ ಯಾರು? ಇಲ್ಲಿದೆ ಮಾಹಿತಿ.

VISTARANEWS.COM


on

Donald trump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಧಿಕಾರದಲ್ಲಿದಷ್ಟು ದಿನ ವಿವಾದಾತ್ಮಕ ಹೇಳಿಕೆ, ಅಚ್ಚರಿಯ ತೀರ್ಮಾನ, ಮಾಧ್ಯಮದವರ ಮೇಲೆ ನಿಯಂತ್ರಣ ಸೇರಿ ಹಲವು ರೀತಿಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಅಧ್ಯಕ್ಷ (Worst President) ಎಂಬ ಕುಖ್ಯಾತಿಗೆ ಭಾಜನರಾಗಿದ್ದಾರೆ. ಅಮೆರಿಕ ಕಂಡ 45 ಅಧ್ಯಕ್ಷರಲ್ಲಿ ಯಾರು ಬೆಸ್ಟ್‌, ಯಾರು ವರ್ಸ್ಟ್‌ ಅಧ್ಯಕ್ಷ ಎಂಬ ಕುರಿತು ಸಮೀಕ್ಷೆ (Survey) ನಡೆಸಲಾಗಿದ್ದು, ಡೊನಾಲ್ಡ್‌ ಟ್ರಂಪ್‌ ಅವರು 45ನೇ ಸ್ಥಾನ ಪಡೆಯುವ ಮೂಲಕ ಕುಖ್ಯಾತಿ ಗಳಿಸಿದ್ದಾರೆ.

ರಾಜಕೀಯ ಪರಿಣತರಾದ ಜಸ್ಟಿನ್‌ ವಾನ್‌ ಹಾಗೂ ಬ್ರೆಂಡನ್‌ ರೊಟ್ಟಿಂಘಾಸ್‌ ಅವರು 525 ತಜ್ಞರ ಅಭಿಪ್ರಾಯವನ್ನು ಸಂಗ್ರಹಿಸಿ ಪ್ರೆಸಿಡೆನ್ಶಿಯಲ್‌ ಗ್ರೇಟ್‌ನೆಸ್‌ ಪ್ರಾಜೆಕ್ಟ್‌ ಎಕ್ಸ್‌ಪರ್ಟ್‌ ಸರ್ವೇ (2024 Presidential Greatness Project Expert Survey) ಎಂಬ ಸಮೀಕ್ಷೆ ಪ್ರಕಟಿಸಿದ್ದಾರೆ. ಸಮೀಕ್ಷೆ ವರದಿ ಪ್ರಕಾರ ಡೊನಾಲ್ಡ್‌ ಟ್ರಂಪ್‌ ಅವರು ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದಾರೆ. ಹಾಲಿ ಅಧ್ಯಕ್ಷ ಜೋ ಬೈಡೆನ್‌ ಅವರು 14ನೇ ಸ್ಥಾನ ಪಡೆದರೆ, ಅಬ್ರಾಹಂ ಲಿಂಕನ್‌ ಅವರು ಮೊದಲ ಸ್ಥಾನ ಪಡೆಯುವ ಮೂಲಕ ಬೆಸ್ಟ್‌ ಅಧ್ಯಕ್ಷ ಎನಿಸಿದ್ದಾರೆ.

ರಾಜಕೀಯ ಸೇರಿ ಹಲವು ಕ್ಷೇತ್ರಗಳ ತಜ್ಞರ ಅಭಿಪ್ರಾಯವನ್ನು ಸಂಗ್ರಹಿಸಿ ವರದಿ ಪ್ರಕಟಿಸಲಾಗಿದೆ. “ಡೊನಾಲ್ಡ್‌ ಟ್ರಂಪ್‌ ಅವರು ತುಂಬ ಸಾಂಪ್ರದಾಯಿಕ ನಾಯಕತ್ವ ವಿಧಾನ ಅನುಸರಿಸಿದರು. ಅವರ ಅವಧಿಯಲ್ಲಿ ಅತಿ ಕೆಟ್ಟ ಆಡಳಿತ ನೀಡಲಾಯಿತು. ಇದರಿಂದ ಅಮೆರಿಕದ ಘನತೆಗೆ ಧಕ್ಕೆಯಾಯಿತು” ಎಂಬುದಾಗಿ ತಜ್ಞರು ಡೊನಾಲ್ಡ್‌ ಟ್ರಂಪ್‌ ಬಗ್ಗೆ ಸಮೀಕ್ಷೆ ವೇಳೆ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಮೆರಿಕ ಅಧ್ಯಕ್ಷರಿಗೆ 100ಕ್ಕೆ ಎಷ್ಟು ಅಂಕ ಕೊಡುತ್ತೀರಿ ಎಂದು ಸಮೀಕ್ಷೆ ನಡೆಸಲಾಗಿದೆ. 0 ಅಂಕ ಕೊಟ್ಟರೆ ವಿಫಲ ಅಧ್ಯಕ್ಷ, 50 ಅಂಕ ನೀಡಿದರೆ ಸಾಧಾರಣ ಹಾಗೂ 100 ಅಂಕ ಕೊಟ್ಟರೆ ಅತ್ಯುತ್ತಮ ಅಧ್ಯಕ್ಷ ಎಂಬುದಾಗಿ ಪರಿಗಣಿಸುವುದು ಸಮೀಕ್ಷೆಯ ವಿಧಾನವಾಗಿತ್ತು.

ಇದನ್ನೂ ಓದಿ: Donald Trump: ದಂಗೆಗೆ ಪ್ರಚೋದನೆ; ಅಧ್ಯಕ್ಷ ಚುನಾವಣೆ ಮತದಾನದಿಂದ ಡೊನಾಲ್ಡ್‌ ಟ್ರಂಪ್‌ ಅನರ್ಹ

ಸಮೀಕ್ಷೆ ವೇಳೆ ಅಬ್ರಾಹಂ ಲಿಂಕನ್‌ ಅವರಿಗೆ 95.03 ಅಂಕ ಸಿಕ್ಕವು. ಇನ್ನು ಡೊನಾಲ್ಡ್‌ ಟ್ರಂಪ್‌ ಅವರು ಕೇವಲ 10.92 ಅಂಕಗಳನ್ನು ಗಳಿಸಿ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದರು. ಬೆಸ್ಟ್‌ ಅಧ್ಯಕ್ಷರಲ್ಲಿ ನಂತರದ ಸ್ಥಾನವು ಫ್ರಾಂಕ್ಲಿನ್‌ ರೂಸ್‌ವೆಲ್ಟ್‌, ಜಾರ್ಜ್‌ ವಾಷಿಂಗ್ಟನ್‌, ಟೆಡ್ಡಿ ರೂಸ್‌ವೆಲ್ಟ್‌, ಥಾಮಸ್‌ ಜೆಫರ್‌ಸನ್‌, ಹ್ಯಾರಿ ಟ್ರುಮನ್‌, ಬರಾಕ್‌ ಒಬಾಮ ಇದ್ದಾರೆ. ಇನ್ನು ಜೇಮ್ಸ್‌ ಬುಚಾನನ್‌, ಆಂಡ್ರ್ಯೂ ಜಾನ್ಸನ್‌, ಫ್ರಾಂಕ್ಲಿನ್‌ ಪೀಯರ್ಸ್‌, ವಿಲಿಯಂ ಹೆನ್ರಿ ಹ್ಯಾರಿಸನ್‌ ಹಾಗೂ ವಾರೆನ್‌ ಹಾರ್ಡಿಂಗ್‌ ಅವರು ಪಟ್ಟಿಯಲ್ಲಿ ಡೊನಾಲ್ಡ್‌ ಟ್ರಂಪ್‌ ಅವರಿಗಿಂತ ಮೇಲಿನ ಸ್ಥಾನದಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

Labour Day 2024: ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು ಆಚರಿಸಲಾಗುತ್ತದೆ. ಇದು ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

International Labor Day-2024
Koo

ಬದುಕಿನ ಬಹುಪಾಲು ದಿನಗಳನ್ನು ದುಡಿಮೆಯಲ್ಲೇ ಕಳೆಯುವವರು ಕಾರ್ಮಿಕರು (Labour Day 2024). ಇವರಲ್ಲಿ ಕೆಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ಅವರ ಬದುಕು ನಿತ್ಯವೂ ಹೋರಾಟದಲ್ಲೇ ಕಳೆಯುತ್ತದೆ. ನಿತ್ಯದ ಕೆಲಸದ ಕೂಲಿಗಾಗಿ ಯಾವುದೇ ವಿಶೇಷ ಸವಲತ್ತುಗಳಿಲ್ಲದೆ ಹಗಲು, ರಾತ್ರಿ ಎನ್ನದೆ ದುಡಿಯುವ ಜೀವಗಳು ಲಕ್ಷಾಂತರ. ಇವರ ಹೋರಾಟ, ತ್ಯಾಗಗಳನ್ನು ಸ್ಮರಿಸಲು ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು (International Labour Day-2024) ಆಚರಿಸಲಾಗುತ್ತದೆ. ಇದನ್ನು ಮೇ ದಿನ (may day) ಎಂದೂ ಕರೆಯಲಾಗುತ್ತದೆ.

ಕಾರ್ಮಿಕರ ದಿನಾಚರಣೆಯ ಮೂಲ 19ನೇ ಶತಮಾನದ ಉತ್ತರಾರ್ಧ ಎಂದು ಹೇಳಬಹುದು. ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಕಾರ್ಮಿಕರು ಉತ್ತಮ ಕೆಲಸದ ಪರಿಸ್ಥಿತಿಗಳು, ನ್ಯಾಯಯುತ ವೇತನ ಮತ್ತು ಕಡಿಮೆ ಕೆಲಸದ ಸಮಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಿದರು.

ಭಾರತ (india), ಕ್ಯೂಬಾ (cuba) ಮತ್ತು ಚೀನಾ (china) ಸೇರಿದಂತೆ 80ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ದುಡಿಯುವ ವರ್ಗದ ಜನರ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದ ವಿವಿಧ ಭಾಗಗಳಲ್ಲಿನ ಜನರು ಈ ದಿನದಂದು ಮೆರವಣಿಗೆಗಳನ್ನು ನಡೆಸುತ್ತಾರೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ನಿತ್ಯದ ಕೆಲಸದಲ್ಲಿ ಸಾಧನೆ ಮಾಡಿರುವ ಕೆಲವು ಕಾರ್ಮಿಕರನ್ನು ಗುರುತಿಸಿ ಸಮ್ಮಾನವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಇದರ ಇತಿಹಾಸ ಹೀಗಿದೆ

19ನೇ ಶತಮಾನದಲ್ಲಿ ಕಾರ್ಮಿಕ ದಿನಾಚರಣೆಯ ಪ್ರಾರಂಭವಾಯಿತು. ಅಮೆರಿಕದ ಚಿಕಾಗೋದಲ್ಲಿ 1886ರ ಮೇ 1 ರಂದು ಕಾರ್ಮಿಕರು ಕೆಲಸದ ದಿನವನ್ನು ಎಂಟು ಗಂಟೆಗೆ ನಿಗದಿ ಪಡಿಸುವಂತೆ ಒತ್ತಾಯಿಸಿ ಮುಷ್ಕರವನ್ನು ಆಯೋಜಿಸಿದ್ದರು. ಹೇಮಾರ್ಕೆಟ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಮಿಕ ರ್ಯಾಲಿಯ ವೇಳೆ ಬಾಂಬ್ ಸ್ಫೋಟಗೊಂಡ ಅನಂತರ ಅಮೆರಿಕದಾದ್ಯಂತ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗಾಗಿ ಹೋರಾಡಲು ಒಗ್ಗೂಡಿದರು.

1889ರಲ್ಲಿ ಸಮಾಜವಾದಿ ಪಕ್ಷಗಳ ಅಂತಾರಾಷ್ಟ್ರೀಯ ಕಾಂಗ್ರೆಸ್ ಪ್ಯಾರಿಸ್ ನಲ್ಲಿ ಸಭೆ ಸೇರಿತು. ಮೇ 1ರಂದು ಕಾರ್ಮಿಕರ ದಿನ ಅಥವಾ ಕಾರ್ಮಿಕರ ದಿನವನ್ನು ಆಚರಿಸಲು ನಿರ್ಧಾರ ಕೈಗೊಂಡಿತು.


ಚೆನ್ನೈನಲ್ಲಿ ಮೊದಲ ಕಾರ್ಯಕ್ರಮ

ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕ ದಿನವನ್ನು 1923ರ ಮೇ 1ರಂದು ಚೆನ್ನೈನಲ್ಲಿ ಆಚರಿಸಲಾಯಿತು. ಮೊದಲ ಮೇ ದಿನಾಚರಣೆಯನ್ನು ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆಯೋಜಿಸಿತ್ತು. ಪಕ್ಷದ ನಾಯಕ ಕಾಮ್ರೇಡ್ ಸಿಂಗರವೇಲರ್ ಈ ಕಾರ್ಯಕ್ರಮವನ್ನು ಆಚರಿಸಲು ಎರಡು ಸಭೆಗಳನ್ನು ಆಯೋಜಿಸಿದ್ದರು.
ಕಾರ್ಮಿಕರ ದಿನವನ್ನು ವಿವಿಧ ಭಾರತೀಯ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಅತ್ಯಂತ ಜನಪ್ರಿಯ ಹೆಸರು ಮೇ ದಿನವಾಗಿದೆ.

ಕಾರ್ಮಿಕರ ದಿನವನ್ನು ಹಿಂದಿಯಲ್ಲಿ ಕಾಮ್‌ಗರ್ ದಿನ್, ಕನ್ನಡದಲ್ಲಿ ಕಾರ್ಮಿಕ ದಿನಚರಣೆ, ತೆಲುಗಿನಲ್ಲಿ ಕಾರ್ಮಿಕ ದಿನೋತ್ಸವ, ಮರಾಠಿಯಲ್ಲಿ ಕಾಮ್‌ಗರ್ ದಿವಸ್, ತಮಿಳಿನಲ್ಲಿ ಉಜೈಪಾಲರ್ ದೀನಂ, ಮಲಯಾಳಂನಲ್ಲಿ ಥೋಝಿಲಾಲಿ ದಿನಂ ಮತ್ತು ಬಂಗಾಳಿಯಲ್ಲಿ ಶ್ರೋಮಿಕ್ ದಿಬೋಶ್ ಎಂದು ಕರೆಯಲಾಗುತ್ತದೆ.

ಈ ದಿನದ ಉದ್ದೇಶ ಏನು?

ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಕಾರ್ಮಿಕರ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಕಾರ್ಮಿಕರ ಶ್ರಮವನ್ನು ಗೌರವಿಸುವುದು ಮತ್ತು ಅವರ ಘನತೆಯನ್ನು ಎತ್ತಿ ಹಿಡಿಯುವುದು ಈ ದಿನದ ವಿಶೇಷವಾಗಿದೆ.

Continue Reading

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Latest

Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

Pro-Khalistan slogan :

VISTARANEWS.COM


on

Pro-Khalistan slogan
Koo

ಟೊರೊಂಟೊ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಜನಸಮೂಹವನ್ನುದ್ದೇಶಿಸಿ ಮಾತನಾಡಿದ್ದ ಕಾರ್ಯಕ್ರಮವೊಂದರಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು (Pro-Khalistan slogan) ಕೂಗಿದ ಪ್ರಸಂಗ ನಡೆದಿದೆ. ಭಾನುವಾರ ಅಲ್ಲಿನ ಸಿಖ್​ ಸಮುದಾಯದವರು ಖಾಲ್ಸಾ ದಿನಾಚರಣೆ ಆಯೋಜಿಸಿದ್ದರು. ಅಲ್ಲಿ ಟ್ರುಡೊ ಮಾತನಾಡುತ್ತಿದ್ದ ವೇಳೆ ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗಲಾಗಿದೆ. ಕೆನಡಾ ಸರ್ಕಾರವು ಸಿಖ್ ಸಮುದಾಯದ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಯಾವುದೇ ವೆಚ್ಚದಲ್ಲಿ ರಕ್ಷಿಸುತ್ತದೆ ಎಂಬುದಾಗಿಯೂ ಟ್ರುಡೊ ತಮ್ಮ ಭಾಷಣದಲ್ಲಿ ಭರವಸೆ ನೀಡಿದ್ದಾರೆ.

ಕನ್ಸರ್ವೇಟಿವ್ ನಾಯಕ ಪಿಯರೆ ಪೊಯಿಲಿವ್ರೆ, ನ್ಯೂ ಡೆಮಾಕ್ರಟಿಕ್ ಪಾರ್ಟಿ (ಎನ್ಡಿಪಿ) ನಾಯಕ ಜಗ್ಮೀತ್ ಸಿಂಗ್ ಮತ್ತು ಟೊರೊಂಟೊ ಮೇಯರ್ ಒಲಿವಿಯಾ ಚೌ ಟೊರೊಂಟೊದಲ್ಲಿ ಖಾಲ್ಸಾ ದಿನಾಚರಣೆಯಲ್ಲಿ ಭಾಗಿಯಾಗಿದ್ದರು. ಖಾಲ್ಸಾ ದಿನವನ್ನು ವೈಸಾಕಿ ಎಂದು ಕರೆಯಲಾಗುತ್ತದೆ. ಇದು ಸಿಖ್ ಹೊಸ ವರ್ಷದ ಹಬ್ಬವಾಗಿದೆ.

ಖಾಲ್ಸಾ ಡೇ ಕಾರ್ಯಕ್ರಮದಲ್ಲಿ ಟ್ರುಡೊ ಜನರನ್ನುದ್ದೇಶಿಸಿ ಮಾತನಾಡಲು ನಡೆದಾಗ ಖಲಿಸ್ತಾನ್ ಪರ ಘೋಷಣೆಗಳು ಪ್ರಾರಂಭವಾಗಿದ್ದವು.

ಕೆನಡಾದ ಅತಿದೊಡ್ಡ ಶಕ್ತಿಗಳಲ್ಲಿ ಒಂದಾಗಿರುವ ಸಿಖ್ ಸಮುದಾಯದ ವೈವಿಧ್ಯತೆ ಎಂದು ನೆನಪಿಟ್ಟುಕೊಳ್ಳಲು ನಾವು ಇಂದು ಇಲ್ಲಿ ಸೇರಿದ್ದೇವೆ. ನಮ್ಮ ಭಿನ್ನಾಭಿಪ್ರಾಯಗಳ ಹೊರತಾಗಿಯೂ ನಾವು ಬಲಶಾಲಿಯಾಗಿದ್ದೇವೆ. ಸಿಖ್ ಸಮುದಾಯದ ಮೌಲ್ಯಗಳು ಕೆನಡಾದ ಮೌಲ್ಯಗಳಾಗಿವೆ ಎಂದು ನಾವು ನೆನಪಿಟ್ಟುಕೊಳ್ಳಬೇಕು” ಎಂದು ಟೊರೊಂಟೊದಲ್ಲಿ ನಡೆದ ಖಾಲ್ಸಾ ದಿನದ ಆಚರಣೆಯಲ್ಲಿ ಜಸ್ಟಿನ್ ಟ್ರುಡೊ ಹೇಳಿದರು.

ನಗರದ ಅತಿದೊಡ್ಡ ವಾರ್ಷಿಕ ಕೂಟಗಳಲ್ಲಿ ಒಂದಾದ ಟೊರೊಂಟೊ ಡೌನ್​ಟೌನ್​ನಲ್ಲಿ ಭಾನುವಾರ ಸಾವಿರಾರು ಜನರು ಜಮಾಯಿಸಿದ್ದರು.

ಇದನ್ನೂ ಓದಿ: Lok Sabha Election: ಇಂದೋರ್​ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಚುನಾವಣೆಗೆ ಮೊದಲೇ ಬಿಜೆಪಿಗೆ ಮತ್ತೊಂದು ಸೀಟು!

ಈ ದೇಶಾದ್ಯಂತದ ಸಿಖ್ ಪರಂಪರೆಯ ಸುಮಾರು 800,000 ಕೆನಡಿಯನ್ನರಿಗೆ, ನಿಮ್ಮ ಹಕ್ಕುಗಳು ಮತ್ತು ನಿಮ್ಮ ಸ್ವಾತಂತ್ರ್ಯಗಳನ್ನು ರಕ್ಷಿಸಲು ನಾವು ಯಾವಾಗಲೂ ಇರುತ್ತೇವೆ. ದ್ವೇಷ ಮತ್ತು ತಾರತಮ್ಯದ ವಿರುದ್ಧ ನಿಮ್ಮ ಸಮುದಾಯವನ್ನು ನಾವು ಯಾವಾಗಲೂ ರಕ್ಷಿಸುತ್ತೇವೆ ಎಂದು ಟ್ರುಡೊ ಹೇಳಿದರು.

ಸಮುದಾಯ ಕೇಂದ್ರಗಳು ಮತ್ತು ಗುರುದ್ವಾರಗಳಂತಹ ಪೂಜಾ ಸ್ಥಳಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗುತ್ತದೆ. ಭದ್ರತೆ ಮತ್ತು ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ ಎಂದು ಕೆನಡಾದ ಪ್ರಧಾನಿ ಉಲ್ಲೇಖಿಸಿದರು.

ನಿಮ್ಮ ಧರ್ಮವನ್ನು ಮುಕ್ತವಾಗಿ ಮತ್ತು ಬೆದರಿಕೆಯಿಲ್ಲದೆ ಆಚರಿಸುವ ನಿಮ್ಮ ಹಕ್ಕು ಕೆನಡಾದಲ್ಲಿ ಖಾತ್ರಿಯಿದೆ. ನಿಮ್ಮ ಮೂಲಭೂತ ಹಕ್ಕುಗಳನ್ನು ನಾವು ರಕ್ಷಿಸುತ್ತೇವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಹ್ಯಾಪಿ ಬೈಸಾಖಿ! ವಹೇಗುರು ಜಿ ಕಾ ಖಾಲ್ಸಾ ವಹೇಗುರು ಜಿ ಕಿ ಫತೇಹ್” ಎಂದು ಟ್ರುಡೊ ಹೇಳಿದ್ದಾರೆ.

Continue Reading

ವಿದೇಶ

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Stab wound: ಕೊಲೆ ಮಾಡುವ ಮುನ್ನ ಚಾಕುವಿನಿಂದ ಕೊಲೆ ಮಾಡುವುದು ಹೇಗೆ? ಲಂಡನ್‌ನಲ್ಲಿ ವಿದೇಶಿಗರು ಕೊಲೆ ಮಾಡಿದರೆ ಯಾವ ರೀತಿಯ ಶಿಕ್ಷೆ ಆಗುತ್ತದೆ ಎಂಬುದನ್ನು ಸರ್ಚ್‌ ಮಾಡಿದ್ದಾಗಿ ಕೋರ್ಟ್‌ ವಿಚಾರಣೆ ವೇಳೆ ಹೇಳಿದ್ದ.

VISTARANEWS.COM


on

Koo

ಲಂಡನ್‌: ತನ್ನ ಪ್ರೇಯಸಿಗೆ ಒಂಬತ್ತು ಬಾರಿ ಚುಚ್ಚಿ ಬಳಿಕ ಕತ್ತು ಕೊಯ್ದು ಬರ್ಬರವಾಗಿ ಕೊಲೆ (Stab wound)  ಮಾಡಿದ್ದ ಹೈದರಾಬಾದ್‌ ಮೂಲದ ವ್ಯಕ್ತಿಯೊಬ್ಬ ಹೈದರಾಬಾದ್‌ ಮೂಲದ ವ್ಯಕ್ತಿ ಕೃತ್ಯಕ್ಕೂ ಮುನ್ನ ಚಾಕುವಿನಿಂದ ತಕ್ಷಣ ಕೊಲೆ ಮಾಡುವುದು ಹೇಗೆ ಎಂಬುದನ್ನು ಗೂಗಲ್‌ನಲ್ಲಿ ಸರ್ಚ್‌(Google Search) ಮಾಡಿದ್ದ. 2022ರಲ್ಲಿ ಲಂಡನ್‌ ರೆಸ್ಟೋರೆಂಟ್‌(London restaurant)ನಲ್ಲಿ ಹೈದರಾಬಾದ್‌ ಮೂಲದ 25 ವರ್ಷದ ಶ್ರೀರಾಮ್‌ ಎಂಬಾತ ತನ್ನ 23ವರ್ಷದ ಪ್ರೇಯಸಿ ಸೋನಾ ಬಿಜು ಎಂಬಾಕೆಯನ್ನು ಮದುವೆಗೆ ನಿರಾಕರಿಸಿದಳೆಂಬ ಕೋಪದಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದ.

ಸೋನಾ ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಮದುವೆ ಆಗುವಂತೆ ಶ್ರೀರಾಮ್‌ ಅಗಾಗ ಪೀಡಿಸುತ್ತಿದ್ದನಂತೆ. ಮದುವೆಗೆ ಒಪ್ಪದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಆಕೆಗೆ ಬೆದರಿಕೆಯನ್ನೂ ಹಾಕಿದ್ದ. ಆದರೆ ಶ್ರೀರಾಮ್‌ನ ವರ್ತನೆಯಿಂದ ಬೇಸತ್ತಿದ್ದ ಆಕೆ ಮದುವೆಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡಿದ್ದ ಶ್ರೀರಾಮ್‌, ಆಕೆಯನ್ನು ರೆಸ್ಟೋರೆಂಟ್‌ನಿಂದ ಕತ್ತು ಹಿಡಿದು ಹೊರಗೆಳೆದು ತಂದು ಚಾಕುವಿನಿಂದ ಚುಚ್ಚಲು ಶುರು ಮಾಡಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೋನಾಗೆ, ಒಂದು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಳು. ಪ್ರಕರಣದಲ್ಲಿ ಶ್ರೀರಾಮ್‌ಗೆ ಲಂಡನ್‌ ಕೋರ್ಟ್‌ 16ವರ್ಷ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನು ಕೋರ್ಟ್‌ ವಿಚಾರಣೆ ವೇಳೆ ಕೊಲೆ ಮಾಡುವ ಮುನ್ನ ಚಾಕುವಿನಿಂದ ಕೊಲೆ ಮಾಡುವುದು ಹೇಗೆ? ಲಂಡನ್‌ನಲ್ಲಿ ವಿದೇಶಿಗರು ಕೊಲೆ ಮಾಡಿದರೆ ಯಾವ ರೀತಿಯ ಶಿಕ್ಷೆ ಆಗುತ್ತದೆ ಎಂಬುದನ್ನು ಸರ್ಚ್‌ ಮಾಡಿದ್ದಾಗಿ ಹೇಳಿದ್ದ.

2017ರಿಂದ ಹೈದರಾಬಾದ್‌ ಕಾಲೇಜಿನಲ್ಲಿ ಪರಿಚಯಸ್ಥರಾಗಿದ್ದ ಸೋನಾ ಮತ್ತು ಶ್ರೀರಾಮ್‌ ಪರಸ್ಪರ ಡೇಟ್‌ ಮಾಡುತ್ತಿದ್ದರು. 2022ರಲ್ಲಿ ಇವರಿಬ್ಬರೂ ಲಂಡನ್‌ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆಂದು ತೆರಳಿದ್ದರು. ಅಲ್ಲಿ ರೆಸ್ಟೋರೆಂಟ್‌ವೊಂದರಲ್ಲಿ ಪಾರ್ಟ್‌ಟೈಂ ಕೆಲಸ ಮಾಡುತ್ತಿದ್ದ ಸೋನಾಳನ್ನು ಭೇಟಿಯಾಗಲು ಆಗಾಗ ಶ್ರೀರಾಮ್‌ ಹೋಗುತ್ತಿದ್ದ. ಆರಂಭದಲ್ಲಿ ಚೆನ್ನಾಗಿಯೇ ಇದ್ದ ಈ ಜೋಡಿ ನಡುವೆ ಬಳಿಕ ಮನಸ್ತಾಪ ಉಂಟಾಗಿತ್ತು. ಶ್ರೀರಾಮ್‌ ಸೋನಾಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲು ಶುರು ಮಾಡಿದ್ದ. ಇದರಿಂದ ಬೇಸತ್ತ ಸೋನಾ ಆತನಿಂದ ದೂರ ಉಳಿಯಲು ನಿರ್ಧರಿಸಿದ್ದಳು.

ಇದನ್ನೂ ಓದಿ: Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

ಕೆಲವು ದಿನಗಳ ಹಿಂದೆ ರಾಜ್ಯದಲ್ಲೂ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿತ್ತು. ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳು ನೇಹಾ ಎಂಬ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿದ್ದ. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಬಹಳ ಚರ್ಚೆ ಆಗಿತ್ತು. ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳೂ ಕೂಡ ನಡೆದವು. ನೇಹಾಳನ್ನು ಕೊಂದ ಆರೋಪಿ ಫಯಾಜ್‌ ವಿರುದ್ಧ ಶೂಟೌಟ್ ಆರ್ಡರ್‌ ಮಾಡಿ, ಎನ್‌ಕೌಂಟರ್ ಮಾಡಿ ಬಿಸಾಕಿ ಎಂಬ ಆಗ್ರಹ ಕೇಳಿಬಂದಿತ್ತು.

Continue Reading
Advertisement
Chandrayaan 3
ದೇಶ12 mins ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ28 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ1 hour ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ1 hour ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ2 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ2 hours ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ2 hours ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ3 hours ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು3 hours ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20249 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202410 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌