Turkey election 2023: ಭಾರತದ ವಿರುದ್ಧ ಮತ ಚಲಾಯಿಸಿದ್ದ ಎರ್ಡೊವನ್ ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆ! - Vistara News

ಪ್ರಮುಖ ಸುದ್ದಿ

Turkey election 2023: ಭಾರತದ ವಿರುದ್ಧ ಮತ ಚಲಾಯಿಸಿದ್ದ ಎರ್ಡೊವನ್ ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆ!

Turkey election 2023: ಇತ್ತೀಚೆಗಷ್ಟೇ ಭೂಕಂಪದಿಂದಾಗಿ ಭಾರೀ ಸಾವು ನೋವು ಕಂಡಿದ್ದ ಟರ್ಕಿಯಲ್ಲಿ ಭಾನುವಾರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಹಾಲಿ ಅಧ್ಯಕ್ಷ ರಿಜೆಪ್ ತಾಯಿಪ್ ಎರ್ಡೊವನ್ (Recep Tayyip Erdogan) ಅವರು ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

VISTARANEWS.COM


on

Recep Tayyip Erdogan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟರ್ಕಿಯ ಅಧ್ಯಕ್ಷರಾಗಿ ರಿಜೆಪ್ ತಾಯಿಪ್ ಎರ್ಡೊವನ್ (Recep Tayyip Erdogan) ಅವರು ಭಾನುವಾರ ಮತ್ತೊಂದು ಅವಧಿಗೆ ಮರು ಆಯ್ಕೆಯಾಗಿದ್ದಾರೆ. ಭೂಕಂಪ ತೀವ್ರ ಸಂಕಟ ಎದುರಿಸಿದ ಹಾಗೂ ಹಣದುಬ್ಬರದಿಂದ ತತ್ತರಿಸುತ್ತಿರುವ ಟರ್ಕಿಯಲ್ಲಿ ಎರ್ಡೊವನ್ ಅವರ ಸರ್ವಾಧಿಕಾರದ ಆಡಳಿತ ಮೂರನೇ ದಶಕಕ್ಕೆ ವಿಸ್ತರಣೆಯಾಗಿದೆ. ಟರ್ಕಿಯಲ್ಲಿ ಭೂಕಂಪ (Turkey Earthquake) ಸಂಭವಿಸಿದಾಗ ಮಾನವೀಯ ನೆಲೆಯಲ್ಲಿ ಭಾರತವು ಆಪರೇಷನ್ ದೋಸ್ತ್ (Operation Dost) ಪರಿಹಾರ ಕಾರ್ಯಾಚರಣೆ ಕೈಗೊಂಡು, ಹಲವು ರೀತಿಯಲ್ಲಿ ನೆರವು ಒದಗಿಸಿತ್ತು. ಹೀಗಿದ್ದಾಗ್ಯೂ, ಟರ್ಕಿಯ ಅಧ್ಯಕ್ಷ ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ಮತ ಚಲಾಯಿಸಿದ್ದರು(Turkey election 2023).

ಮೂರನೇ ಅವಧಿಯು ಧ್ರುವೀಕರಣದ ಜನಪರವಾದ ಆಯ್ಕೆಯು ಎರ್ಡೊವನ್‌ಗೆ ದೇಶೀಯವಾಗಿ ಮತ್ತು ಅಂತರಾಷ್ಟ್ರೀಯವಾಗಿ ಇನ್ನೂ ಹೆಚ್ಚಿನ ಸಾಮರ್ಥ್ಯವನ್ನು ಒದಗಿಸಿದೆ. ಭಾನುವಾರ ನಡೆದ ಚುನಾವಣಾ ಫಲಿತಾಂಶವು ರಾಜಧಾನಿ ಅಂಕಾರದಾಚೆಯೂ ಸಾಕಷ್ಟು ಪರಿಣಾಮಗಳನ್ನು ಬೀರುವ ಸಾಧ್ಯತೆ ಇದೆ. ಯುರೋಪ್ ಮತ್ತು ಏಷ್ಯಾ ನಡುವೆ ನಿಂತಿರುವ ಟರ್ಕಿ, ನ್ಯಾಟೋದಲ್ಲಿ ಅದು ಪ್ರಮುಖ ಪಾತ್ರ ನಿರ್ವಹಿಸಲಿದೆ.

ಭಾನುವಾರ ಶೇ.99ರಷ್ಟು ಮತಪೆಟ್ಟಿಗೆಗಳನ್ನು ಓಪನ್ ಮಾಡಲಾಗಿದೆ. ಈಗ ಗೊತ್ತಾಗಿರುವ ಮಾಹಿತಿಯ ಪ್ರಕಾರ ಎರ್ಡೊವನ್ ಅವರು ಶೇ.52ರಷ್ಟು ಮತಗಳನ್ನು ಪಡೆದುಕೊಂಡು ಆಯ್ಕೆಯಾಗಿದ್ದಾರೆಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಎರ್ಡೊವನ್ ಅವರ ಪ್ರತಿಸ್ಪರ್ಧಿ ಕೆಮಾಲ್ ಕುಲ್ಚದಾರೆಲೋ (Kemal Kilicdaroglu) ಶೇ.48 ಮತಗಳನ್ನು ಪಡೆದುಕೊಂಡು ಸೋಲು ಅನುಭವಿಸಿದ್ದಾರೆ. ಈ ಮಧ್ಯೆ, ಟರ್ಕಿಯ ಚುನಾವಣಾ ಸಂಸ್ಥೆಯ ಎರ್ಡೊವನ್ ಅವರ ಗೆಲುವನ್ನು ಖಚಿತಪಡಿಸಿದೆ.

ಮತ್ತೆ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕಾಗಿ ರಿಜೆಪ್ ತಾಯಿಪ್ ಎರ್ಡೊವನ್ ಅವರು ಇಸ್ತಾಂಬುಲ್ ಹಾಗೂ ಅಂಕಾರಾ ನಗರಗಳಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿ, ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಾವು 21 ವರ್ಷಗಳಿಂದ ನಿಮ್ಮ ನಂಬಿಕೆಗೆ ಅರ್ಹರಾಗಿದ್ದೇವೆ ಎಂದು ನಾವು ಭಾವಿಸುತ್ತೇವೆ ಎರ್ಡೊವನ್ ಜನರನ್ನು ಉದ್ದೇಶಿಸಿ, ಇಸ್ತಾಂಬುಲ್‌ನಲ್ಲಿರುವ ತಮ್ಮ ಮನೆಯ ಹೊರಗೆ ನೆರೆದಿದ್ದ ಜನರಿಗೆ ಹೇಳಿದರು.

ಈ ಸುದ್ದಿಯನ್ನೂ ಓದಿ: Earthquake In Turkey: ಟರ್ಕಿ ಭೂಕಂಪದಲ್ಲಿ ಬೆಂಗಳೂರು ಮೂಲದ ಟೆಕ್ಕಿ ಸಾವು, ಅವಶೇಷಗಳ ಅಡಿಯಲ್ಲಿ ಶವ ಪತ್ತೆ

ರಿಜೆಪ್ ತಾಯಿಪ್ ಎರ್ಡೊವನ್ ಅವರು ಮರು ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಬೀದಿಗಿಳಿದು ಸಂಭ್ರಮಾಚರೆ ಮಾಡಿದರು. ತುರ್ಕಿಶ್ ಪಾರ್ಟಿಯ ಧ್ವಜಗಳೊಂದಿಗೆ ಬೀದಿಗಳಲ್ಲಿ ಸುತ್ತಿತದರು. ವಾಹನಗಳ ಹಾರ್ನ್ ಮಾಡುತ್ತಾ, ಎರ್ಡೊವನ್ ಹೆಸರು ಕೂಗುತ್ತಾ ಅವರ ಬೆಂಬಲಿಗರು ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದರು. ಇಸ್ತಾಂಬುಲ್‌ನ ಕೆಲವು ಕಡೆ ಸಂಭ್ರಮಕ್ಕಾಗಿ ಗುಂಡು ಹಾರಿಸಿದ ಘಟನೆಗಳು ಕೂಡ ವರದಿಯಾಗಿವೆ ಎಂದು ತಿಳಿದು ಬಂದಿವೆ.

ವಿದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

BrahMos Missiles: ಫಿಲಿಪ್ಪೀನ್ಸ್‌ಗೆ ನಾಲ್ಕನೇ ಬ್ರಹ್ಮೋಸ್‌ ಕ್ಷಿಪಣಿ ಬ್ಯಾಟರಿ ಕಳುಹಿಸಲು ಭಾರತ ಸಜ್ಜು

BrahMos Missiles: ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. 2022ರಲ್ಲಿ ಎರಡು ಮಿತ್ರರಾಷ್ಟ್ರಗಳು ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿದೆ ಇದು. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ.

VISTARANEWS.COM


on

BrahMos Missiles
Koo

ಹೊಸದಿಲ್ಲಿ: ದಕ್ಷಿಣ ಚೀನಾ ಸಮುದ್ರದಲ್ಲಿ (South China Sea) ಚೀನಾದ ಒತ್ತಡದಿಂದಾಗಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ರಕ್ಷಣಾ ರಫ್ತಿಗೆ (defence exports) ಭಾರಿ ಉತ್ತೇಜನ ನೀಡುತ್ತಿರುವ ಭಾರತ (India), ಇಂದು ಫಿಲಿಪ್ಪೀನ್ಸ್‌ಗೆ (Philippines) ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ (BrahMos missiles, BrahMos supersonic cruise missiles) ಭೂ ಆವೃತ್ತಿಯ ನಾಲ್ಕನೇ ʼಬ್ಯಾಟರಿ’ಯನ್ನು (Battery) ಕಳುಹಿಸಲು ಮುಂದಾಗಿದೆ.

ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. 2022ರಲ್ಲಿ ಎರಡು ಮಿತ್ರರಾಷ್ಟ್ರಗಳು ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿದೆ ಇದು. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ. ಈ ಕ್ಷಿಪಣಿ ಸೂಪರ್‌ಸಾನಿಕ್ ವೇಗವನ್ನು ಹೊಂದಿದ್ದು, ಇದನ್ನು ಭೂಮಿ ಅಥವಾ ಹಡಗು ಆಧಾರಿತ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMDs) ವ್ಯವಸ್ಥೆಗಳಿಂದ ಪ್ರತಿಬಂಧಿಸುವುದು ತುಂಬಾ ಕಷ್ಟ.

ಬ್ರಹ್ಮೋಸ್‌ನ ಫಿಲಿಪೈನ್ಸ್ ಒಪ್ಪಂದದ ಮೂಲಕ, 2023-2024ರಲ್ಲಿ ಭಾರತದ ರಕ್ಷಣಾ ರಫ್ತು ₹21083 ಕೋಟಿಗಳನ್ನು ಮುಟ್ಟಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.32.5ರಷ್ಟು ಬೃಹತ್ ಬೆಳವಣಿಗೆಯಾಗಿದೆ. ಬ್ರಹ್ಮೋಸ್ ದಾಖಲೆ ಮಾರಾಟ ಕಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಭಾರತವು ಈ ಸೂಪರ್‌ಸಾನಿಕ್ ಕ್ಷಿಪಣಿಗಳ ಹೆಚ್ಚಿನ ಆರ್ಡರ್‌ಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಕ್ಷಿಪಣಿ ರಫ್ತಿನಲ್ಲಿ ಭಾರತವು ಸಂತುಷ್ಟಿಯ ಮಟ್ಟವನ್ನು ಮುಟ್ಟಿದೆ. ನರೇಂದ್ರ ಮೋದಿ ಸರ್ಕಾರ ಇದೀಗ ಮುಂಬೈನಲ್ಲಿ ಸ್ಕಾರ್ಪೀನ್-ಕ್ಲಾಸ್ ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸಲು ಮತ್ತು ಇಂಡೋನೇಷ್ಯಾ, ಮಲೇಷ್ಯಾ ಮುಂತಾದ ಮೂರನೇ ದೇಶಗಳಿಗೆ ಸರಬರಾಜು ಮಾಡಲು ಮಜಗಾಂವ್ ಡಾಕ್‌ಯಾರ್ಡ್ಸ್ ಲಿಮಿಟೆಡ್ ಮತ್ತು ಫ್ರೆಂಚ್ ನೇವಲ್ ಗ್ರೂಪ್ ನಡುವೆ ಜಂಟಿ ಉದ್ಯಮವನ್ನು ಸ್ಥಾಪಿಸಲು ಮುಂದಾಗಿದೆ.

ಪ್ರಸ್ತುತ ನಮ್ಮ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾನ್ ಅವರು ಫ್ರಾನ್ಸ್‌ ಸರ್ಕಾರದೊಂದಿಗೆ ಸಂವಹನ ನಡೆಸಲು ಫ್ರಾನ್ಸ್‌ಗೆ ಭೇಟಿ ನೀಡಿದ್ದು, ಭಾರತೀಯ ಮತ್ತು ಫ್ರೆಂಚ್ ರಕ್ಷಣಾ ವ್ಯವಹಾರ ಸರಪಳಿಯನ್ನು ಇನ್ನಷ್ಟು ಗಟ್ಟಿಗೊಳಿಸಲಿದ್ದಾರೆ. ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಗಾಢಗೊಳಿಸುವ ಪ್ರಯತ್ನದಲ್ಲಿ ಭಾರತೀಯ ಸೇನಾ ಮುಖ್ಯಸ್ಥರು ಟೌಲೌಸ್‌ನಲ್ಲಿರುವ ಫ್ರೆಂಚ್ ಜಲಾಂತರ್ಗಾಮಿ ನೆಲೆಗೆ ಭೇಟಿ ನೀಡಲಿದ್ದಾರೆ. ಭಾರತಕ್ಕೆ ಇನ್ನೂ ಮೂರು ಹೆಚ್ಚುವರಿ ಕಲ್ವೇರಿ (Kalveri- ಮಾರ್ಪಡಿಸಿದ ಸ್ಕಾರ್ಪೀನ್) ದರ್ಜೆಯ ಜಲಾಂತರ್ಗಾಮಿ ನೌಕೆಗಳ ನಿರ್ಮಾಣಕ್ಕಾಗಿ ಫ್ರೆಂಚ್ ನೇವಲ್ ಗ್ರೂಪ್ ಈಗಾಗಲೇ MDLನೊಂದಿಗೆ ಮಾತುಕತೆ ನಡೆಸುತ್ತಿದೆ.

P-5 ಶಕ್ತಿಗಳು ಪರಮಾಣು-ಚಾಲಿತ ಸಾಂಪ್ರದಾಯಿಕ ಸಶಸ್ತ್ರ ದಾಳಿ ಜಲಾಂತರ್ಗಾಮಿ ನೌಕೆಗಳನ್ನು (SSN) ವೈರಿ ಸೈನ್ಯದ ತಡೆಗಟ್ಟುವಿಕೆಗೆ ಬಳಸುತ್ತಿರುವಾಗ, ಭಾರತವು ಇನ್ನೂ ತನ್ನ ಆಯ್ಕೆಗಳನ್ನು ಮೌಲ್ಯಮಾಪನ ಮಾಡುತ್ತಿದೆ. ದೀರ್ಘಾವಧಿಯ ಕಡಲ ಭದ್ರತೆಗಾಗಿ ಎಸ್‌ಎಸ್‌ಎನ್‌ಗಳನ್ನು ತಯಾರಿಸುವುದು ಅಥವಾ ಸಾಂಪ್ರದಾಯಿಕ ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ಹೊಂದುವುದು ಆಯ್ಕೆಗಳಾಗಿವೆ.

ಇದನ್ನೂ ಓದಿ: BrahMos Missiles: ನೌಕಾಪಡೆಗೆ ಭೀಮಬಲ; 200 ಬ್ರಹ್ಮೋಸ್‌ ಕ್ಷಿಪಣಿ ಖರೀದಿಗೆ ಕೇಂದ್ರ ಅಸ್ತು

Continue Reading

ಕರ್ನಾಟಕ

CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

CM Siddaramaiah: 18172 ಕೋಟಿ ರೂಪಾಯಿಗಳನ್ನು ಕೇಂದ್ರಕ್ಕೆ ಎನ್.ಡಿ.ಆರ್.ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿ ಒತ್ತಾಯ ಮಾಡಿದ್ದೇವೆ. ಇದನ್ನು ಮಂಡಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ಹೇಳುವುದಾಗಿ ಹೇಳಿದ್ದರು. ನಂತರ ನಾನು ಕೃಷ್ಣಬೈರೇಗೌಡ ಡಿಸೆಂಬರ್ 20 ತಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಈವರೆಗೆ ಏನೂ ಮಾಡಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

CM Siddaramaiah Congress protests against Centre Go back to Modi and Amit Shah announced
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಕರ್ನಾಟಕವನ್ನು ಹಾಗೂ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನವನ್ನು ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಅವರು ಮಂಗಳವಾರ ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯವನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಧರಣಿಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸೆಪ್ಟೆಂಬರ್ 22ರಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಕೇಂದ್ರ ತಂಡ 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ಮಧ್ಯೆ ಸಚಿವ ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ್‌ ಖರ್ಗೆ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂಥ ಬರಗಾಲ ಎದುರಾಗಿದೆ. ಮನವಿ ಕೊಟ್ಟಿದ್ದರೂ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದರು ಎಂದರು.

ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ, ಬರಗಾಲಕ್ಕೆ ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಅದು ಬೇಕಾಗಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ

ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ಭರಿಸಿದ್ದೇವೆ. 36000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52009 ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48000 ಹೆಕ್ಟೇರ್ ಪ್ರದೇಶ ಮಳೆ ಇಲ್ಲದೇ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2000 ರೂ.ಗಳ ವರೆಗೆ 34 ಲಕ್ಷ ರೈತರಿಗೆ ನೀಡಲಾಗಿದೆ. 650 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಬರುತ್ತಾರೆ?

18172 ಕೋಟಿ ರೂಪಾಯಿಗಳನ್ನು ಕೇಂದ್ರಕ್ಕೆ ಎನ್.ಡಿ.ಆರ್.ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿ ಒತ್ತಾಯ ಮಾಡಿದ್ದೇವೆ. ಇದನ್ನು ಮಂಡಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ಹೇಳುವುದಾಗಿ ಹೇಳಿದ್ದರು. ನಂತರ ನಾನು ಕೃಷ್ಣಬೈರೇಗೌಡ ಡಿಸೆಂಬರ್ 20 ತಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಈವರೆಗೆ ಏನೂ ಮಾಡಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯಕ್ಕೆ ಮೇಲಿನಿಂದ ಮೇಲೆ ಬರಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗೊ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್‌ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಅಂದಿನ ಸಿಎಂ ಬಸವರಾಜ ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್ ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿ ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15 ನೆ ಹಣಕಾಸು ಆಯೋಗ 5495 ಕೋಟಿ ವಿಶೇಷ ಅನುದಾನವನ್ನು ಕೊಡಲಿಲ್ಲ. ಕೊಡದೇ ಇರಲು ಕಾರಣ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ಮೋದಿ ಅವರು. ಪೆರಿಫೆರಲ್ ರಿಂಗ್ ರೋಡ್‌ಗೆ 3000 ಕೋಟಿ ರೂ. ಹಾಗೂ ಬೆಂಗಳೂರಿನ ಅಭಿವೃದ್ಧಿಗೆ 3000 ಕೋಟಿ ರೂ. ಕೊಡಿ ಎಂದು ಶಿಫಾರಸು ಮಾಡಿದ್ದರೂ ಕೊಡಲಿಲ್ಲ. ಬರ ಪರಿಹಾರಕ್ಕೂ ಒಂದು ರೂಪಾಯಿಯನ್ನು ನೀಡಿಲ್ಲ. ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

ಅಮಿತ್ ಶಾ ಬರಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18171 ಕೋಟಿ ರೂಪಾಯಿ ಕೊಟ್ಟು ಆಮೇಲೆ ರಾಜ್ಯಕ್ಕೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Continue Reading

ದೇಶ

Arvind Kejriwal: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

Arvind Kejriwal: ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ತಮ್ಮ ವೈದ್ಯರೊಂದಿಗೆ ಪ್ರತಿದಿನ 15 ನಿಮಿಷಗಳ ವೈದ್ಯಕೀಯ ಸಮಾಲೋಚನೆಗೆ ಅವಕಾಶ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

VISTARANEWS.COM


on

arvind kejriwal in tihar jail
Koo

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿಯ (Delhi Excise policy) ಹಿನ್ನೆಲೆಯಲ್ಲಿ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal), ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ (K Kavitha) ಮತ್ತು ಆಮ್ ಆದ್ಮಿ ಪಕ್ಷದ (Aam Admi Party) ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು (Judicial custody) ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿತ್ತು. ಇದೀಗ ರದ್ದಾಗಿರುವ ಈ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 7ರವರೆಗೆ ರೋಸ್ ಅವೆನ್ಯೂ ನ್ಯಾಯಾಲಯ ವಿಸ್ತರಿಸಿದೆ. ಮೂವರೂ ಆರೋಪಿಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ತಮ್ಮ ವೈದ್ಯರೊಂದಿಗೆ ಪ್ರತಿದಿನ 15 ನಿಮಿಷಗಳ ವೈದ್ಯಕೀಯ ಸಮಾಲೋಚನೆಗೆ ಅವಕಾಶ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದಾಗಿ ಒಂದು ದಿನದ ನಂತರ ನ್ಯಾಯಾಲಯದ ಈ ನಿರ್ಧಾರವು ಬಂದಿದೆ.

ದೆಹಲಿ ನ್ಯಾಯಾಲಯವು ಕೇಜ್ರಿವಾಲ್‌ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವಂತೆ ನಿರ್ದೇಶಿಸಿದೆ ಮತ್ತು ಯಾವುದೇ ವಿಶೇಷ ಸಮಾಲೋಚನೆಯ ಅಗತ್ಯವಿದ್ದಲ್ಲಿ, ತಿಹಾರ್ ಜೈಲು ಅಧಿಕಾರಿಗಳು ಅಂತಃಸ್ರಾವಶಾಸ್ತ್ರಜ್ಞರು ಮತ್ತು ಮಧುಮೇಹಶಾಸ್ತ್ರಜ್ಞರನ್ನು ಒಳಗೊಂಡ AIIMS ನಿರ್ದೇಶಕರು ರಚಿಸಿರುವ ವೈದ್ಯಕೀಯ ಮಂಡಳಿಗೆ ತಿಳಿಸಬೇಕಿದೆ.

ಸೋಮವಾರ ಸಂಜೆ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಿದ್ದು, ನಂತರ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್ ಅನ್ನು ನೀಡಲಾಯಿತು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಹನುಮ ಜಯಂತಿಯ ಸಂದರ್ಭದಲ್ಲಿ ಬಂದಿರುವ ಈ ಸುದ್ದಿಯನ್ನು ಆಪ್ ಸ್ವಾಗತಿಸಿದ್ದು, ಈ ಬೆಳವಣಿಗೆಯು ದೇವರ ಆಶೀರ್ವಾದದ ಫಲವಾಗಿದೆ ಎಂದು ಹೇಳಿದೆ. ತಿಹಾರ್ ಅಧಿಕಾರಿಯೊಬ್ಬರ ಪ್ರಕಾರ, ಏಮ್ಸ್ ವೈದ್ಯರ ಸಲಹೆಯ ಮೇರೆಗೆ ಕೇಜ್ರಿವಾಲ್ ಅವರಿಗೆ ಸೋಮವಾರ ಸಂಜೆ ಕಡಿಮೆ ಪ್ರಮಾಣದ ಇನ್ಸುಲಿನ್ ಎರಡು ಘಟಕಗಳನ್ನು ನೀಡಲಾಯಿತು.

ಇಡಿಯ ಕಾನೂನು ಕ್ರಮದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಬಂಧಿಸಿತು. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ಇಡಿ ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ತೆಲಂಗಾಣ ಎಂಎಲ್‌ಸಿಯನ್ನು ಸಿಬಿಐ ಬಂಧಿಸಿತ್ತು.

ಮತ್ತೊಂದೆಡೆ, 2022ರ ಗೋವಾ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಹಣವನ್ನು ನಿರ್ವಹಿಸಿದ ವ್ಯಕ್ತಿ ಚನ್‌ಪ್ರೀತ್ ಸಿಂಗ್ ಅವರನ್ನು ಇಡಿ ಬಂಧಿಸಿದೆ. ದೆಹಲಿ ಅಬಕಾರಿ ನೀತಿಯಲ್ಲಿ ಲಂಚ ಸಂಗ್ರಹಿಸಿದ ಆರೋಪ ಇವರ ಮೇಲಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಹಿನ್ನಡೆ; ವಿಶೇಷ ವೈದ್ಯಕೀಯ ಸಮಾಲೋಚನೆಯ ಅರ್ಜಿ ವಜಾ

Continue Reading

Lok Sabha Election 2024

S Jaishankar: ವಿದೇಶಾಂಗ ನೀತಿಯಲ್ಲೂ ಕಾಂಗ್ರೆಸ್‌ನಿಂದ ಮುಸ್ಲಿಂ ವೋಟ್‌ಬ್ಯಾಂಕ್‌ ರಾಜಕಾರಣ: ಸಚಿವ ಜೈಶಂಕರ್‌ ಆರೋಪ

1948ರಲ್ಲಿ ಇಸ್ರೇಲ್‌ ಸ್ವತಂತ್ರ ದೇಶವಾಗಿ ಹೊರ ಹೊಮ್ಮಿತು. ಆದರೆ ಕೇಂದ್ರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ 1992ರವರೆಗೂ ಅಲ್ಲಿ ಭಾರತದ ರಾಯಭಾರಿಯನ್ನು ನೇಮಿಸಲಿಲ್ಲ. ಆ ಬಳಿಕ 1992ರಲ್ಲಿ ಇಸ್ರೇಲ್‌ನಲ್ಲಿ ತೀರ ವಿಳಂಬವಾಗಿ ರಾಯಭಾರ ಕಚೇರಿಯನ್ನು ಸ್ಥಾಪಿಸಲಾಯಿತು. ಆದರೆ 2017ರವರೆಗೂ ಯಾವೊಬ್ಬ ಪ್ರಧಾನಿಯೂ ಇಸ್ರೇಲ್‌ಗೆ ಭೇಟಿ ನೀಡಲಿಲ್ಲ. ಕಾಂಗ್ರೆಸ್‌ನ ಮುಸ್ಲಿಂ ಓಲೈಕೆ ನೀತಿಯೇ ಇದಕ್ಕೆ ಕಾರಣ ಎಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ (S Jaishankar) ಟೀಕಿಸಿದ್ದಾರೆ.

VISTARANEWS.COM


on

jaishankar
Koo

ಹೊಸದಿಲ್ಲಿ: ಈ ಹಿಂದೆ ಕೇಂದ್ರದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್‌ ಪಕ್ಷ ವಿದೇಶಾಂಗ ನೀತಿಯಲ್ಲೂ ಮುಸ್ಲಿಂ ಮತ ಬ್ಯಾಂಕ್‌ ರಾಜಕಾರಣ ನಡೆಸುವ ಮೂಲಕ ದೇಶದ ಹಿತಾಸಕ್ತಿ ಕಡೆಗಣಿಸಿತ್ತು ಎಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ (S Jaishankar) ಆಪಾದಿಸಿದ್ದಾರೆ.

ವಿಡಿಯೊ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಮುಸ್ಲಿಂ ಮತ ಬ್ಯಾಂಕ್‌ ಭದ್ರಪಡಿಸಿಕೊಳ್ಳಲು ಮತ್ತು ಮುಸ್ಲಿಮರನ್ನು ಓಲೈಸಲು ಯಾವ ರೀತಿ ಕಾಂಗ್ರೆಸ್‌ ದೇಶದ ಹಿತಾಸಕ್ತಿಯನ್ನು ಕಡೆಗಣಿಸಿತ್ತು ಎನ್ನುವುದನ್ನು ವಿವರಿಸಿದ್ದಾರೆ.

1948ರಲ್ಲಿ ಇಸ್ರೇಲ್‌ ಸ್ವತಂತ್ರ ದೇಶವಾಗಿ ಹೊರ ಹೊಮ್ಮಿತು. ಆದರೆ ಕೇಂದ್ರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ 1992ರವರೆಗೂ ಅಲ್ಲಿ ಭಾರತದ ರಾಯಭಾರಿಯನ್ನು ನೇಮಿಸಲಿಲ್ಲ. ಆ ಬಳಿಕ 1992ರಲ್ಲಿ ಇಸ್ರೇಲ್‌ನಲ್ಲಿ ತೀರ ವಿಳಂಬವಾಗಿ ರಾಯಭಾರ ಕಚೇರಿಯನ್ನು ಸ್ಥಾಪಿಸಲಾಯಿತು. ಆದರೆ 2017ರವರೆಗೂ ಯಾವೊಬ್ಬ ಪ್ರಧಾನಿಯೂ ಇಸ್ರೇಲ್‌ಗೆ ಭೇಟಿ ನೀಡಲಿಲ್ಲ. ಇಸ್ರೇಲ್‌ ಜತೆ ಬಾಂಧವ್ಯ ಹೊಂದಿದರೆ, ಆ ದೇಶದ ಜತೆ ವ್ಯವಹಾರ ನಡೆಸಿದರೆ, ಆ ದೇಶಕ್ಕೆ ಭೇಟಿ ನೀಡಿದರೆ ಭಾರತದ ಮುಸಲ್ಮಾನರು ತಮ್ಮ ಪಕ್ಷದ ವಿರುದ್ಧ ಸಿಟ್ಟಾಗುತ್ತಾರೆ ಎಂಬ ಒಂದೇ ಕಾರಣಕ್ಕೆ ಕಾಂಗ್ರೆಸ್‌ ಆಡಳಿತ ಇಸ್ರೇಲ್‌ನಂಥ ಬಲಿಷ್ಠ ದೇಶವನ್ನು ಕಡೆಗಣಿಸಿತು ಎಂದು ಜೈಶಂಕರ್‌ ಹೇಳಿದ್ದಾರೆ.

ಕೃಷಿ, ತಂತ್ರಜ್ಞಾನ, ರಕ್ಷಣೆಯಂಥ ಹಲವು ವಿಷಯಗಳಲ್ಲಿ ಇಸ್ರೇಲ್‌ ಅತ್ಯಂತ ಬಲಿಷ್ಠ ಮತ್ತು ಪ್ರಮುಖ ದೇಶ. ಇಸ್ರೇಲ್‌ ಭಾರತದ ಮಿತ್ರ ದೇಶ. ಇಸ್ರೇಲ್‌ನಿಂದ ಭಾರತದ ರಕ್ಷಣಾ ವಲಯಕ್ಕೆ ಹಲವು ಪ್ರಯೋಜನಗಳು ಇದ್ದವು. ಇಷ್ಟಾಗಿಯೂ ಕಾಂಗ್ರೆಸ್‌, ಮುಸ್ಲಿಮರನ್ನು ಓಲೈಸಲು ಇಸ್ರೇಲ್‌ ಸಂಬಂಧದಿಂದ ದೂರ ಉಳಿಯಿತು. ಇದರಿಂದ ನಮ್ಮ ದೇಶಕ್ಕೆ ತುಂಬಾ ನಷ್ಟವಾಯಿತು ಎಂದು ಜೈಶಂಕರ್‌ ವಿವರಿಸಿದ್ದಾರೆ. 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದರು. ಈ ಮೂಲಕ, ಇಸ್ರೇಲ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಪಾತ್ರರಾಗಿದ್ದರು.

ಭಾರತದ ಶತ್ರು ದೇಶ ಪಾಕಿಸ್ತಾನದ ವಿಚಾರದಲ್ಲೂ ಕಾಂಗ್ರೆಸ್‌ ಆಡಳಿತ ಮುಸ್ಲಿಂ ಓಲೈಕೆಯ ನೀತಿ ಅನುಸರಿಸಿತು. ದೇಶದ ಒಳಗಷ್ಟೇ ಅಲ್ಲ, ಹೊರಗೂ ಓಟ್‌ ಬ್ಯಾಂಕ್‌ ರಾಜಕಾರಣ ನಡೆಸಿತು ಎಂದು ಜೈಶಂಕರ್‌ ಆಪಾದಿಸಿದ್ದಾರೆ.

ಮೋದಿಯಿಂದಲೂ ಕಾಂಗ್ರೆಸ್‌ ವಿರುದ್ಧ ಮತ ಬ್ಯಾಂಕ್‌ ರಾಜಕಾರಣ ಆರೋಪ

ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ (Lok Sabha Election 2024) ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಮಂಗಳವಾರ ಬೆಳಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ಕಾಂಗ್ರೆಸ್‌ ಎಂದೂ ಅಭಿವೃದ್ಧಿ ರಾಜಕಾರಣವನ್ನು ಮಾಡಿಯೇ ಇಲ್ಲ. ಅದು ಮಾಡುತ್ತಿರುವುದು ವೋಟ್‌ ಬ್ಯಾಂಕ್‌ ಪಾಲಿಟಿಕ್ಸ್‌, ಒಂದು ಸಮುದಾಯದ ಓಲೈಕೆ ರಾಜಕಾರಣ ಎಂದೂ ಮೋದಿ ಟೀಕಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ, ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್‌ ಸಿಂಗ್‌ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ. ನಿಮ್ಮ ಕೊರಳಿನ ಮಂಗಳಸೂತ್ರವನ್ನೂ ಅವರು ಬಿಡುವುದಿಲ್ಲ ಎಂದು ಎಚ್ಚರಿಸಿದ್ದರು.

ದಲಿತರ ಮೀಸಲು ಮುಸಲ್ಮಾನರಿಗೆ

ದಲಿತರು ಮತ್ತು ಆದಿವಾಸಿಗಳ ಮೀಸಲ ಪಾಲನ್ನು ಕಿತ್ತು ಕಾಂಗ್ರೆಸ್‌ ಮುಸಲ್ಮಾನರಿಗೆ ನೀಡಲು ಸದಾ ಪ್ರಯತ್ನಿಸುತ್ತಿರುತ್ತದೆ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರ ಮೀಸಲಿನ ಪಾಲನ್ನು ಕಿತ್ತು ಮುಸಲ್ಮಾನರಿಗೆ ನೀಡಿತ್ತು. ಮುಂದೆ ಅಲ್ಲಿ ಬಿಜೆಪಿ ಸರ್ಕಾರ ಬಂದಾಗ ಅದನ್ನು ರದ್ದುಪಡಿಸಿ ಎಸ್‌ಸಿ, ಎಸ್‌ಟಿಯವರಿಗೆ ನ್ಯಾಯ ದೊರಕಿಸಲಾಯಿತು. ಆಂಧ್ರ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಕೂಡ ಎಸ್‌ಸಿ, ಎಸ್‌ಟಿ ಮೀಸಲು ಕಡಿಮೆ ಮಾಡಿ ಮುಸಲ್ಮಾನರ ಮೀಸಲು ಹೆಚ್ಚಿಸಲು ನಾಲ್ಕು ಬಾರಿ ವಿಧೇಯಕ ಮಂಡಿಸಿ ಕಾಯಿದೆ ರೂಪಿಸಿತ್ತು. ಆದರೆ ಕೋರ್ಟ್‌ ಮಧ್ಯಪ್ರವೇಶದ ಕಾರಣ ಅದು ಸಾಧ್ಯವಾಗಲಿಲ್ಲ. 2012ರಲ್ಲಿ ಕೇಂದ್ರದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಹೀಗೆಯೇ ಮಾಡಲು ಹೊರಟಿತ್ತು. ಎಸ್‌ಸಿ-ಎಸ್‌ಟಿ ಮತ್ತು ಆಸಿವಾಸಿಗಳಿಗೆ ನಾನು ಯಾವ ಕಾರಣಕ್ಕೂ ಮೀಸಲಿನಲ್ಲಿ ನಷ್ಟ ಮಾಡಲು ಬಿಡುವುದಿಲ್ಲ. ಇದು ಮೋದಿ ಗ್ಯಾರಂಟಿ ಎಂದು ಮೋದಿ ಘೋಷಿಸಿದ್ದರು.

ನುಸುಳುಕೋರರಿಗೆ ಸೌಲಭ್ಯ ಕೊಡಬೇಕೆ?

ನುಸುಳುಕೋರರಿಗೆ, ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಈ ದೇಶದ ಸಂಪತ್ತು ಹಂಚಲು ಬಯಸುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ನೆರೆಯ ದೇಶದಿಂದ ಪದೇಪದೆ ದಾಳಿಗೆ ಒಳಗಾಗುವ ನಮ್ಮ ವೀರ ಸೈನಿಕರಿಗೆ ಯಾವುದೇ ನೆರವು ನೀಡುತ್ತಿರಲಿಲ್ಲ. ಆದರೆ ನಾವು ನಮ್ಮ ಯೋಧರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದೇವೆ. ಅವರ ಆತ್ಮಸ್ಥೈರ್ಯ ಹೆಚ್ಚಿಸುತ್ತಿದ್ದೇವೆ ಎಂದಿದ್ದರು.

ಇದನ್ನೂ ಓದಿ: S Jaishankar : ಪಾಠ ಹೇಳಲು ಬರಬೇಡಿ; ಭಾರತದ ಚುನಾವಣಾ ವಿಚಾರಕ್ಕೆ ಮೂಗು ತೂರಿಸಿದ ವಿಶ್ವ ಸಂಸ್ಥೆಗೆ ಜೈಶಂಕರ್​​ ತಿರುಗೇಟು

ಕಾಂಗ್ರೆಸ್‌ ಪ್ರಣಾಳಿಕೆಯನ್ನು ನೀವು ಎಚ್ಚರಿಕೆಯಿಂದ ಓದಿ. ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಸಂಪತ್ತಿನ ಸರ್ವೆ ನಡೆಸುತ್ತಾರಂತೆ. ಆ ಬಳಿಕ ಅದನ್ನು ಅಗತ್ಯ ಇದ್ದವರಿಗೆ ಹಂಚುತ್ತಾರಂತೆ. ಆ ಅಗತ್ಯ ಇದ್ದವರು ಯಾರು ಎಂಬುದು ನಿಮಗೆ ಗೊತ್ತಿರಲಿ ಎಂದು ಮೋದಿ ಹೇಳಿದ್ದರು.

Continue Reading
Advertisement
BrahMos Missiles
ಪ್ರಮುಖ ಸುದ್ದಿ8 mins ago

BrahMos Missiles: ಫಿಲಿಪ್ಪೀನ್ಸ್‌ಗೆ ನಾಲ್ಕನೇ ಬ್ರಹ್ಮೋಸ್‌ ಕ್ಷಿಪಣಿ ಬ್ಯಾಟರಿ ಕಳುಹಿಸಲು ಭಾರತ ಸಜ್ಜು

Reliance Jio
ವಾಣಿಜ್ಯ12 mins ago

Reliance Jio: ಡಾಟಾ ಟ್ರಾಫಿಕ್‌; ವಿಶ್ವದ ಅತಿದೊಡ್ಡ ಮೊಬೈಲ್ ಆಪರೇಟರ್ ಆಗಿ ಹೊರ ಹೊಮ್ಮಿದ ರಿಲಯನ್ಸ್ ಜಿಯೊ

CM Siddaramaiah Congress protests against Centre Go back to Modi and Amit Shah announced
ಕರ್ನಾಟಕ28 mins ago

CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

Mahesh Babu
ಕ್ರಿಕೆಟ್49 mins ago

IPL 2024: ಸನ್​ರೈಸರ್ಸ್​ ತಂಡದ ಆಟಗಾರರನ್ನು ಭೇಟಿ ಮಾಡಿದ ನಟ ಮಹೇಶ್‌ ಬಾಬು

arvind kejriwal in tihar jail
ದೇಶ1 hour ago

Arvind Kejriwal: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

jaishankar
Lok Sabha Election 20241 hour ago

S Jaishankar: ವಿದೇಶಾಂಗ ನೀತಿಯಲ್ಲೂ ಕಾಂಗ್ರೆಸ್‌ನಿಂದ ಮುಸ್ಲಿಂ ವೋಟ್‌ಬ್ಯಾಂಕ್‌ ರಾಜಕಾರಣ: ಸಚಿವ ಜೈಶಂಕರ್‌ ಆರೋಪ

Road Accident
ಉಡುಪಿ2 hours ago

Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

supreme court baba ramdev IMA
ಪ್ರಮುಖ ಸುದ್ದಿ2 hours ago

Patanjali Case: ಮೊದಲು ನಿಮ್ಮನ್ನು ಸರಿಪಡಿಸಿಕೊಳ್ಳಿ: ಪತಂಜಲಿ ಪ್ರಕರಣದಲ್ಲಿ ವೈದ್ಯಕೀಯ ಸಂಘಕ್ಕೂ ಸುಪ್ರೀಂ ಚಾಟಿ

Lok Sabha Election 2024 Are you planning to visit Mysore Palace on April 26 No entry if no vote
Lok Sabha Election 20242 hours ago

Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Murder case in hublli
ಹುಬ್ಬಳ್ಳಿ2 hours ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು22 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ23 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌