Turkey Syria Earthquake : ಭೂಕಂಪನಕ್ಕೆ ಸಾವನ್ನಪ್ಪಿದವರ ಸಂಖ್ಯೆ 45,000ಕ್ಕೆ ಏರಿಕೆ; ಇನ್ನೂ ಪತ್ತೆಯಾಗಿಲ್ಲ ಸಾವಿರಾರು ಮಂದಿ - Vistara News

ವಿದೇಶ

Turkey Syria Earthquake : ಭೂಕಂಪನಕ್ಕೆ ಸಾವನ್ನಪ್ಪಿದವರ ಸಂಖ್ಯೆ 45,000ಕ್ಕೆ ಏರಿಕೆ; ಇನ್ನೂ ಪತ್ತೆಯಾಗಿಲ್ಲ ಸಾವಿರಾರು ಮಂದಿ

ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪನದಿಂದಾಗಿ (Turkey Syria Earthquake) ಸಾವನ್ನಪ್ಪಿದವರ ಸಂಖ್ಯೆ 45 ಸಾವಿರಕ್ಕೆ ಏರಿಕೆಯಾಗಿದೆ. ಇನ್ನೂ ಸಾವಿರಾರು ಮಂದಿಗಾಗಿ ಹುಡುಕಾಟ ಜಾರಿಯಲ್ಲಿದೆ.

VISTARANEWS.COM


on

6.3 Magnitude Earthquake Strikes Near Turkey-Syria Border Region
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟರ್ಕಿ: ಟರ್ಕಿ ಮತ್ತು ಸಿರಿಯಾ ಭಾಗದಲ್ಲಿ ಭೂಕಂಪನವಾಗಿ (Turkey Syria Earthquake) 12 ದಿನಗಳಾಗಿವೆ. ಈಗಲೂ ನಾಪತ್ತೆಯಾವದರಿಗಾಗಿ ಹುಡುಕಾಟ ಮುಂದುವರಿದಿದ್ದು, ಎರಡೂ ದೇಶಗಳಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 45,000ಕ್ಕೆ ಏರಿಕೆಯಾಗಿದೆ. ಇನ್ನೂ ಸಾವಿರಾರು ಮಂದಿ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ.

ಇದನ್ನೂ ಓದಿ: Turkey Earthquake: ಟರ್ಕಿ ಕಳಿಸಿದ್ದನ್ನೇ ಬಾಕ್ಸ್​ ಬದಲಿಸಿ ವಾಪಸ್​ ಕೊಟ್ಟ ಪಾಕಿಸ್ತಾನ; ಪತ್ರಕರ್ತನೇ ಬಾಯ್ಬಿಟ್ಟ ಮುಜುಗರದ ಸಂಗತಿ
ಶನಿವಾರದಂದು ಒಂದು ಮಗು ಸೇರಿದಂತೆ ಒಟ್ಟು ಮೂವರನ್ನು ರಕ್ಷಿಸಲಾಗಿದೆ ಎಂದು ವರdiಯಾಗಿದೆ. ಅದರಲ್ಲಿ ತಂದೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, “ನನ್ನ ಮಗ ಬದುಕಿರುವುದಕ್ಕೆ ಸಾಧ್ಯವೇ ಇಲ್ಲ ಎಂದು ನಾವೆಂದುಕೊಂಡಿದ್ದೆವು. ಆದರೆ ಪವಾಡವೆನ್ನುವಂತೆ ಇಷ್ಟು ದಿನವಾದ ಮೇಲೂ ನನ್ನ ಮಗ ಜೀವಂತವಾಗಿಯೇ ಸಿಕ್ಕಿದ್ದಾನೆ. ಎಲ್ಲವೂ ದೇವರ ಕೃಪೆ” ಎಂದು ಹೇಳಿದ್ದಾರೆ.

ಟರ್ಕಿ ಭೂ ಪ್ರದೇಶದಲ್ಲಿ 39,672 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಹಾಗೆಯೇ ಸಿರಿಯಾ ಪ್ರದೇಶದಲ್ಲಿ 5,800 ಮಂದಿಯ ಸಾವಿನ ವರದಿಯಿದೆ. ಹಲವು ದಿನಗಳಿಂದ ಸಿರಿಯಾ ವರದಿ ಅಷ್ಟರಲ್ಲೇ ಇದ್ದು, ಒಮ್ಮೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭೂಕಂಪನವಾದ ಸ್ಥಳಕ್ಕೆ ರಕ್ಷಣೆಗೆಂದು ತೆರಳಿದ್ದ ಅಂತಾರಾಷ್ಟ್ರೀಯ ರಕ್ಷಣಾ ತಂಡಗಳು ಈಗಾಗಲೇ ವಾಪಸು ತೆರಳಿವೆ. ಸದ್ಯ ಸ್ಥಳೀಯ ಸರ್ಕಾರದ ರಕ್ಷಣಾ ತಂಡಗಳು ಕಟ್ಟಡದ ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಸುತ್ತಿವೆ. ಅವುಗಳೊಂದಿಗೆ ಸಾರ್ವಜನಿಕರೂ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

America v/s Russia:ಅಮೆರಿಕವು ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ ಎಂದು ರಷ್ಯಾ ಹೇಳಿತ್ತು. ಇದೀಗ ರಷ್ಯಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅಮೆರಿಕ ಎಂದಿಗೂ ಬಯಸುವುದಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಅಮೆರಿಕ ಮೂಗು ತೂರಿಸುವುದಿಲ್ಲ ಎಂದು ಖಡಕ್‌ ಆಗಿ ಹೇಳಿದೆ.

VISTARANEWS.COM


on

America v/s Russia
Koo

ವಾಷಿಂಗ್ಟನ್‌: ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (Murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ಅಮೆರಿಕ(America)ದ ಆರೋಪಕ್ಕೆ ತಿರುಗೇಟು ನೀಡಿದ್ದ ರಷ್ಯಾ(America v/s Russia), ಅಮೆರಿಕವು ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ ಎಂದು ಹೇಳಿತ್ತು. ಇದೀಗ ರಷ್ಯಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅಮೆರಿಕ ಎಂದಿಗೂ ಬಯಸುವುದಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಅಮೆರಿಕ ಮೂಗು ತೂರಿಸುವುದಿಲ್ಲ ಎಂದು ಖಡಕ್‌ ಆಗಿ ಹೇಳಿದೆ.

ಅಮೆರಿಕ ಸ್ಟೇಟ್‌ ಡಿಪಾರ್ಟ್‌ಮೆಂಟ್‌ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಈ ಬಗ್ಗೆ ಮಾತನಾಡಿದ್ದು, ಭಾರತದ ಚುನಾವಣೆ ಬಗ್ಗೆ ಅಲ್ಲಿನ ಜನ ನಿರ್ಧಾರ ತೆಗೆದುಕೊಳ್ಳುತ್ತಾರೆಯೇ ಹೊರತು ನಾವಲ್ಲ. ಅಮೆರಿಕದಲ್ಲಿ ಭಾರತ ಕೆಲವೊಂದು ಕಾನೂನು ಕಾಯ್ದೆಗಳನ್ನು ಉಲ್ಲಂಘನೆಯಾದಾಗ ಇಂತಹ ಆರೋಪಗಳು ಸಹಜ ಎಂದು ಹೇಳಿದ್ದಾರೆ.

ರಷ್ಯಾ ಹೇಳಿದ್ದೇನು?

ಪನ್ನುನು ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದ ಅಮೆರಿಕಕ್ಕೆ ಟಾಂಗ್‌ ನೀಡಿದ್ದ ರಷ್ಯಾ, ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾ ಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಭಾರತವನ್ನು ಗೌರವಿಸುವ ಮನಸ್ಸು ಅಮೆರಿಕಕ್ಕೆ ಇಲ್ಲ. ಅಮೆರಿಕದ ಆರೋಪಗಳು ಸುಳ್ಳು ಮತ್ತು ನಿರಾಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ಹೇಳಿದೆ.

ಇದನ್ನೂ ಓದಿ:Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

ವಿಕ್ರಮ್ ಯಾದವ್ ಎಂದು ಗುರುತಿಸಲಾದ ರಾ ಅಧಿಕಾರಿಯು ಯುಎಸ್‌ನಲ್ಲಿ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್‌ನ “ತನಿಖಾ” ವರದಿ ಮಾಡಿತ್ತು. ಆ ಸಂದರ್ಭದಲ್ಲಿ ಬೇಹುಗಾರಿಕಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಆಗಿದ್ದರು ಎಂದು ವರದಿ ತಿಳಿಸಿದೆ. ಖಲಿಸ್ತಾನ್ ಚಳವಳಿಯ ಪ್ರಮುಖ ಉಗ್ರರಲ್ಲಿ ಒಬ್ಬನಾದ ಗುರುಪತ್ವಂತ್ ಸಿಂಗ್ ಪನ್ನುನ್, ಸಿಖ್ಸ್ ಫಾರ್ ಜಸ್ಟಿಸ್‌ನ ಕಾನೂನು ಸಲಹೆಗಾರ ಮತ್ತು ವಕ್ತಾರನಾಗಿದ್ದಾನೆ. ಇದು ಪ್ರತ್ಯೇಕ ಸಿಖ್ ದೇಶದ ಕಲ್ಪನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಭಾರತ ಸರ್ಕಾರ ಗುರುಪತ್ವಂತ್ ಸಿಂಗ್ ಪನ್ನೂನ್‌ನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ಹಿಂದೂ ಮುಖಂಡನೊಬ್ಬನನ್ನು ಹತ್ಯೆ ಮಾಡಿದ್ದ ಆರೋಪವೂ ಈತನ ಮೇಲಿತ್ತು. ಹೀಗಾಗಿ 2007ರಲ್ಲಿ ಅಮೆರಿಕಕ್ಕೆ ಪರಾರಿಯಾಗಿದ್ದ. ಮತ್ತೊಂದೆಡೆ ಕೆನಡಾ ಕೂಡ ಪನ್ನುನ್‌ ಬೆಂಬಲಕ್ಕೆ ನಿಂತಿದೆ. ಕೆನಡಾದಲ್ಲಿ ಸಿಕ್ಖರು ಹೆಚ್ಚಿನ ಪ್ರಮಾಣದಲ್ಲೇ ಇದ್ದು, ಹೀಗಾಗಿ ಅಲ್ಲಿನ ಪ್ರಧಾನಿ ಜಸ್ಟಿನ್‌ ಟ್ರಾಡೊ ಖಲಿಸ್ಥಾನಿ ಉಗ್ರರ ಜತೆಗೆ ನಿಂತಿದ್ದಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Maldives anti-India stance: ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

VISTARANEWS.COM


on

Maldives anti-India stance
Koo

ನವ ದೆಹಲಿ: ಭಾರತದ ವಿರುದ್ಧ ನೀಡಿರುವ ಹೇಳಿಕೆ ಬಗ್ಗೆ ಮಾಲ್ಡೀವ್ಸ್ ಪಶ್ಚಾತಾಪ ವ್ಯಕ್ತಪಡಿಸಿದೆ. ಅವಹೇಳನಕಾರಿ ಹೇಳಿಕೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದಾಗಿ ದ್ವೀಪ ರಾಷ್ಟ್ರ ವಿದೇಶಾಂಗ ಸಚಿವ ಮೂಸಾ ಜಮೀರ್ ಗುರುವಾರ ಭರವಸೆ ನೀಡಿದ್ದಾರೆ. ಭಾರತ ಭೇಟಿಯಲ್ಲಿರುವ ಜಮೀರ್, ಮಾಲ್ಡೀವ್ಸ್ ಮತ್ತು ಭಾರತ ಸರ್ಕಾರಗಳು ಆಗಿರುವ ವಿಷಯಗಳನ್ನು ಅರ್ಥಮಾಡಿಕೊಂಡಿವೆ. ಆ ಹಂತವನ್ನು ದಾಟಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

ಮಾಜಿ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಮೋದಿ ಲಕ್ಷ್ಮ ದ್ವೀಪಕ್ಕೆ ಭೇಟಿ ನೀಡಿದ್ದ ಬಳಿಕ ಅವರು ಈ ಅನಪೇಕ್ಷಿತ ಹೇಳಿಕೆಗಳನ್ನು ಕೊಟ್ಟಿದ್ದರು. ನಂತರ ಉಭಯ ದೇಶಗಳ ನಡುವಿನ ಸಂಬಂಧದ ಹದಗೆಟ್ಟಿತ್ತು.

ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲ್ಡೀವ್ಸ್ ತೊರೆಯಲು ಮೊಹಮ್ಮದ್ ಮುಯಿಝು ಮೇ 10 ರ ಗಡುವನ್ನು ನಿಗದಿಪಡಿಸಿದ ನಂತರ ಸಂಬಂಧಗಳು ಮತ್ತಷ್ಟು ಹಾಳಾಗಿದ್ದವು. ಏತನ್ಮಧ್ಯೆ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮೂಸಾ ಜಮೀರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಭಾರತ-ಮಾಲ್ಡೀವ್ಸ್ ಸಂಬಂಧಗಳ ಅಭಿವೃದ್ಧಿಯು “ಪರಸ್ಪರ ಹಿತಾಸಕ್ತಿಗಳನ್ನು” ಆಧರಿಸಿದೆ ಎಂದು ಒಪ್ಪಿಕೊಂಡಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತದ ನಡುವೆ ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಸಂಬಂಧ ವೃದ್ಧಿಸುವ ಮತ್ತು ಪರಸ್ಪರ ವಿನಿಮಯ ಹೆಚ್ಚಿಸುವ ಬಗ್ಗೆ ನಾವು ನಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಎಂದು ಜಮೀರ್ ಸಭೆಯ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಪ್ರವಾಸೋದ್ಯಮ ಕುಸಿತದ ಬಗ್ಗೆ ಪ್ರತಿಕ್ರಿಯೆ

ಮಾಲ್ಡೀವ್ಸ್ ಗೆ ಪ್ರಯಾಣಿಸಲು ಬಯಸುವ ಎಲ್ಲಾ ಭಾರತೀಯರಿಗೆ ವೈಯಕ್ತಿಕವಾಗಿ ಮತ್ತು ಮಾಲ್ಡೀವ್ಸ್ ಜನರ ಪರವಾಗಿ ಆತ್ಮೀಯ ಸ್ವಾಗತ ನೀಡಲು ಬಯಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಮಾಲ್ಡೀವ್ಸ್​ಗೆ ಭೇಟಿ ನೀಡುವುದನ್ನು ಮುಂದುವರಿಸಲು ನಾವು ಎಲ್ಲಾ ಭಾರತೀಯ ಪ್ರವಾಸಿಗರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ಭಾರತೀಯ ಪ್ರಯಾಣಿಕರು ನಿಜವಾಗಿಯೂ ಮಾಲ್ಡೀವ್ಸ್​​​ಗೆ ಗಮನಾರ್ಹ ಸಂಖ್ಯೆಯಲ್ಲಿ ಆಗಮಿಸಿದರು. ಆ ಪ್ರವೃತ್ತಿ ಮುಂದುವರೆದಿದೆ. ಕಳೆದ ಎರಡು ತಿಂಗಳುಗಳಲ್ಲಿ, ನಾವು 16 ರಿಂದ 17% ಹೆಚ್ಚಳ ಕಂಡಿದ್ದೇವೆ. ಭಾರತೀಯ ಮಾರುಕಟ್ಟೆಗಳಲ್ಲಿ ಇಳಿಕೆ ಕಂಡುಬಂದಿದ್ದರೂ, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

Continue Reading

ವಿದೇಶ

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Sunita Williams:ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ. ಮೇ 7ರಂದು ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತ್ತು. ಬಳಿಕ ಈ ಗಗನಯಾತ್ರೆಯ ದಿನಾಂಕ ನಾಳೆಗೆ(ಮೇ10) ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಮತ್ತೆ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ದಿನಾಂಕವನ್ನು ಮೇ 17ಕ್ಕೆ ಮುಂದೂಡಲಾಗಿದೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಾಸಾ ಮಾಹಿತಿ ನೀಡಿದ್ದು, “ಅಟ್ಲಾಸ್ ವಿಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇಂದಿನ ಸ್ಟಾರ್‌ಲೈನರ್ ಉಡಾವಣೆಯನ್ನು ರದ್ದುಪಡಿಸಲಾಗಿದೆ. ನಮ್ಮ ಗಗನಯಾತ್ರಿಗಳು ಸ್ಟಾರ್‌ಲೈನರ್‌ನಿಂದ ನಿರ್ಗಮಿಸಿದ್ದಾರೆʼʼ ಎಂದು ಬರೆದುಕೊಂಡಿತ್ತು.

ವಿಶೇಷ ಎಂದರೆ ಈ ಮೂಲಕ ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಇಬ್ಬರು ಗಗನಯಾತ್ರಿಗಳೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ಮೇ 10ರಂದು ಉಡಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ನಾಸಾ ತಿಳಿಸಿತ್ತು. ಆದರೆ ಇನ್ನು ಒಂದೆರಡು ದಿನಗಳ ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ದಿನಾಂಕವವನ್ನು ಏ.17ಕ್ಕೆ ಮುಂದೂಡಲಾಗಿದೆ. ಏಪ್ರಿಲ್‌ 17ರಂದು ಸಂಜೆ 6.16ಕ್ಕೆ ಬಾಹ್ಯಾಕಾಶ ನೌಕೆ ಉಡಾವಣೆಯಾಗಲಿದೆ ಎಂದು ಇದೀಗ ನಾಸಾ ಮತ್ತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದನ್ನೂ ಓದಿ:Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

Continue Reading

ವಿದೇಶ

Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

Cancer-Causing Chemicals:ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು( ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನುಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

VISTARANEWS.COM


on

Cancer Causing Chemicals
Koo

ವಾಷಿಂಗ್ಟನ್‌: ಕಾರಿನಲ್ಲಿ ಲಾಂಗ್‌ ಡ್ರೈವ್‌ ಹೋಗೋದು ಬಹುತೇಕ ಎಲ್ಲರೂ ಇಷ್ಟ ಪಡುತ್ತಾರೆ. ತಣ್ಣನೇ ಎ ಸಿ ಹಾಕೊಂಡು ಕಿಲೋಮೀಟರ್‌ಗಟ್ಟಲೇ ಕಾರು ಚಲಾಯಿಸೋದೇ ಒಂದು ಕ್ರೇಜ್‌. ಕಾರು(Car) ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಕಾರು ಪ್ರಿಯರಿಗೊಂದು ಶಾಕಿಂಗ್‌ ವಿಚಾರವೊಂದು ಪತ್ತೆಯಾಗಿದೆ. ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ(Cancer) ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು(Environmental Science & Technology) ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನು(Cancer-Causing Chemicals) ಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮೆರಿಕ ರಾಷ್ಟ್ರೀಯ ಟಾಕ್ಸೋಲಾಜಿ ಕಾರ್ಯಕ್ರಮದಡಿಯಲ್ಲಿ ಸಂಶೋಧಕರು ಈ ಅಧ್ಯಯನ ನಡೆಸಿದ್ದು, ಅದಕ್ಕಾಗಿ ಅವರು 2015 ಮತ್ತು 2019ರನಡುವೆ ತಯಾರಾಗಿರುವ 101 ಎಲ್ಲಾ ರೀತಿಯ ಅಂದರೆ ಎಲೆಕ್ಟ್ರಿಕ್‌, ಗ್ಯಾಸ್‌ ಮತ್ತು ಹೈಬ್ರಿಡ್‌ ಕಾರಗಳನ್ನು ಮಾದರಿಗಳನ್ನಾಗಿ ತೆಗೆದುಕೊಂಡಿದ್ದಾರೆ. ಈ ಕಾರುಗಳು ಶೇ.99ರಷ್ಟು ಕಾರುಗಳು TCIPP ಎಂಬ ಜ್ವಾಲೆ ನಿವಾರಕ ಸಾಧನವನ್ನು ಹೊಂದಿದೆ. ಇವುಗಳು ನೇರವಾಗಿ ಮನುಷ್ಯನ ನರಗಳು, ಸಂತಾನೋತ್ಪತ್ತಿ ಶಕ್ತಿ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಕಾರುಗಳಲ್ಲಿ ಪ್ರತಿನಿತ್ಯ ಒಂದು ಗಂಟೆಗಳ ಕಾಲ ಕಳೆದರೆ ಜನ ನಿಧಾನವಾಗಿ ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಾರೆ ಎಂದು ಸಂಶೋಧಕರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಡ್ಯೂಕ್‌ ವಿಶ್ವವಿದ್ಯಾನಿಲಯದ ಪ್ರಮುಖ ಸಂಶೋಧಕರಾದ ರೆಬೆಕ್ಕಾ ಹೋಹೆನ್‌ ಮಾತನಾಡಿದ್ದು, ಪ್ರತಿನಿತ್ಯ ಕಾರಿನಲ್ಲೇ ಬಹುದೂರ ಪ್ರಯಾಣಿಸುವವರು ಮತ್ತು ಮಕ್ಕಳಲ್ಲಿ ಈ ಸಮಸ್ಯೆ ಅತಿ ಹೆಚ್ಚಾಗಿ ಕಂಡುಬರುತ್ತಿದೆ. ಬೇಸಿಗೆ ಕಾಲದಲ್ಲಿ ಕಾರಿನ ಸೀಟುಗಳಿಂದ ಈ ರಾಸಾಯನಿಕಗಳು ಅತಿ ಹೆಚ್ಚಾಗಿ ಹೊರಬರುತ್ತವೆ. ಇದು ಕ್ಯಾನ್ಸರ್‌ಗೆ ತುತ್ತು ಮಾಡುವಂತೆ ಅಪಾಯಕಾರಿ ರಾಸಾಯನಿಕಗಳಾಗಿವೆ. ಕಾರು ತಯಾರಕರು ಸೀಟಿನ ಒಳಗೆ ತುಂಬಿಸುವ ವಸ್ತುಗಳಿಗೆ(seat foam) ಮತ್ತು ಕಾರಿನ ಒಳಗಿರುವ ಇತರೇ ವಸ್ತುಗಳಿಗೆ ಬಹುಕಾಲ ಬಾಳಿಕೆ ಬರುವಂತೆ ಮಾಡುವ ಉದ್ದೇಶದಿಂದ ರಾಸಾಯನಿಕಗಳನ್ನು ಸೇರಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

ಇನ್ನು ಈ ಬಗ್ಗೆ ಆರೋಗ್ಯ ಸುರಕ್ಷತೆ ಮತ್ತು ಔಷಧಿ ವಿಭಾಗದ ನಿರ್ದೇಶಕ ಪ್ಯಾಟ್ರಿಕ್‌ ಮಾರಿಸನ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾರಿನಲ್ಲಿ ಬಳಸುವ ಫಯರ್‌ ಫ್ಲೇಮ್‌ ನಿಯಂತ್ರಕ ರಾಸಾಯನಿಕಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಮುನುಷ್ಯನನ್ನು ಕ್ಯಾನ್ಸರ್‌ಗೆ ದೂಡುತ್ತಿವೆ. ಈ ರಾಸಾಯನಿಕಗಳು ಬೆಂಕಿಯನ್ನು ಜ್ವಾಲೆಯನ್ನು ನಂದಿಸುವ ಬದಲು ಒಳಗಿದ್ದ ವ್ಯಕ್ತಿಗೆ ಉಸಿರು ಕಟ್ಟುವಂತೆ ಮಾಡುತ್ತದೆ. ಹೀಗಾಗಿ ಅಮೆರಿಕ ರಸ್ತೆ ಸುರಕ್ಷತಾ ಪ್ರಾಧಿಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದ್ದಾರೆ.


Continue Reading
Advertisement
hd revanna jailed 2
ಕ್ರೈಂ4 mins ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ36 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ46 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202449 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 202459 mins ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ1 hour ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ1 hour ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ1 hour ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ2 hours ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ13 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ20 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌