Heart Attack: ಸಂಸತ್ತಿನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತವಾಗಿ ಮೃತಪಟ್ಟ ಸಂಸದ - Vistara News

ಪ್ರಮುಖ ಸುದ್ದಿ

Heart Attack: ಸಂಸತ್ತಿನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತವಾಗಿ ಮೃತಪಟ್ಟ ಸಂಸದ

Heart Attack: ಸಾಯುವ ಮುಂಚೆ ಇಸ್ರೇಲ್ ಕುರಿತು ಟರ್ಕಿ ಅನುಸರಿಸುತ್ತಿರುವ ನಡೆಯನ್ನು ಪ್ರತಿಪಕ್ಷದ ಸಂಸದರು ಉಗ್ರವಾಗಿ ಟೀಕಿಸಿದ್ದರು.

VISTARANEWS.COM


on

Turkish MP died of heart attack while speaking in Parliament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂಕಾರಾ, ಟರ್ಕಿ: ಸಂಸತ್ತಿನಲ್ಲಿರುವಾಗಲೇ ಹೃದಯಾಘಾತವಾಗಿ (Heart Attack) ಸಂಸದರೊಬ್ಬರು (Turkish MP) ಮೃತಪಟ್ಟ ಘಟನೆ ಟರ್ಕಿಯ ರಾಜಧಾನಿ ಅಂಕಾರಾದಲ್ಲಿ (Anakara) ನಡೆದಿದೆ. ಇಸ್ರೇಲ್ ಬಗ್ಗೆ ಸರ್ಕಾರದ ನೀತಿಯನ್ನು ಟೀಕಿಸುವ ಭಾಷಣವನ್ನು ಮುಗಿಸಿದ ಬಳಿಕ ಅವರು ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಗುರುವಾರ ನಿಧನರಾದರು.

ವಿರೋಧ ಪಕ್ಷದ ಫೆಲಿಸಿಟಿ (ಸಾಡೆಟ್) ಪಕ್ಷದ, 54 ವರ್ಷದಹಸನ್ ಬಿಟ್ಮೆಜ್ ಮೃತಪಟ್ಟ ಸಂಸದರಾಗಿದ್ದಾರೆ. ಅವರನ್ನು ಅಂಕಾರಾ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು ಎಂದು ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ದೂರದರ್ಶನದಲ್ಲಿ ತಿಳಿಸಿದ್ದಾರೆ.

ಕೈರೋದ ಅಲ್ ಅಜರ್ ವಿಶ್ವವಿದ್ಯಾನಿಲಯದ ಪದವೀಧರರಾದ ಬಿಟ್ಮೆಜ್ ಅವರು ಇಸ್ಲಾಮಿಕ್ ಯೂನಿಯನ್ ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿದ್ದರು. ಈ ಹಿಂದೆ ಇಸ್ಲಾಮಿಕ್ ಸರ್ಕಾರೇತರ ಸಂಸ್ಥೆಗಳಿಗೆ ಕೆಲಸ ಮಾಡಿದ್ದರು ಎಂದು ಅವರ ಸಂಸತ್ತಿನ ಪರಿಚಯ ಪತ್ರದಲ್ಲಿ ತಿಳಿಸಲಾಗಿದೆ. ಮದುವೆಯಾಗರುವ ಬಟ್ಮೆಜ್ ಅವರಗೆ ಒಂದು ಮಗು ಕೂಡ ಇದೆ.

ಮಂಗಳವಾರ ಸಾಮಾನ್ಯ ಸಭೆಯ ಮೊದಲು ವೇದಿಕೆಯಲ್ಲಿ ನಿಂತಿದ್ದ ಬಿಟ್ಮೆಜ್ ಹಠಾತ್ ನೆಲಕ್ಕೆ ಕುಸಿದು ಬೀಳುವ ವಿಡಿಯೋವನ್ನು ಸಂಸತ್ತಿನ ಅಧಿಕೃತ ಬ್ರಾಡ್‌ಕಾಸ್ಟ್ ಪ್ರಸರಾ ಮಾಡಿದೆ. ಗಾಜಾದಲ್ಲಿ ಯುದ್ಧ ನಿರತವಾಗಿರುವ ಇಸ್ರೇಲ್ ಜತೆ ವ್ಯಾಪಾರ ವಹಿವಾಟು ಮುಂದುವರಿಸಿರುವ ಅಧ್ಯಕ್ಷ ತಯ್ಯಿಪ್ ಎರ್ಡೊಗನ್ ಅವರ ಆಡಳಿತಾರೂಢ ಎಕೆ ಪಕ್ಷವನ್ನು (ಎಕೆಪಿ) ಅವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

ನೀವು ಹಡಗುಗಳನ್ನು ಇಸ್ರೇಲ್‌ಗೆ ಹೋಗಲು ಅನುಮತಿಸುತ್ತೀರಿ ಮತ್ತು ನೀವು ಅದನ್ನು ನಾಚಿಕೆಯಿಲ್ಲದೆ ವ್ಯಾಪಾರ ಎಂದು ಕರೆಯುತ್ತೀರಿ… ನೀವು ಇಸ್ರೇಲ್‌ನ ಸಹಚರರು ಎಂದು ವೇದಿಕೆಯ ಮೇಲೆ ಕೊಲೆಗಾರ ಇಸ್ರೇಲ್; ಸಹಯೋಗಿ ಎಕೆಪಿ ಎಂಬ ಒಕ್ಕಣಿಕೆಯುಳ್ಳ ಬ್ಯಾನರ್ ಅನ್ನು ಇರಿಸಿದ ಬಿಟ್ಮೆಜ್ ಉಗ್ರ ಭಾಷಣ ಮಾಡಿದ್ದರು.

ನಿಮ್ಮ ಕೈಗೆ ಪ್ಯಾಲೆಸ್ತೀನಿಯರ ರಕ್ತ ಮೆತ್ತಿದೆ. ಅವರು ಇಸ್ರೇಲಿಗಳ ಸಹಯೋಗಿಗಳು. ಗಾಜಾದ ಮೇಲೆ ಇಸ್ರೇಲ್ ಸಿಡಿಸುವ ಪ್ರತಿ ಬಾಂಬ್‌ಗೂ ನಿಮ್ಮ ಕೊಡುಗೆ ಇದೆ ಎಂದು ಬಿಟ್ಮೇಜ್ ಅವರು, ವಿದೇಶಿ ಸಚಿವಾಲಯ 2024ರ ಬಜೆಟ್‌ ಕುರಿತಾದ ಭಾಷಣದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಭಾಷಣವನ್ನು ಮುಗಿಸಿದ ನಂತರ, ಬಿಟ್ಮೆಜ್ ಇದ್ದಕ್ಕಿದ್ದಂತೆ ನೆಲದ ಮೇಲೆ ಕುಸಿದು ಬಿದ್ದರು. ಆಗ ಇತರ ಸಂಸದರು ಸಹಾಯ ಮಾಡಲು ತಮ್ಮ ಸ್ಥಾನಗಳಿಂದ ಧಾವಿಸಿದರು. ಬಳಿಕ ಅವರಿಗೆ ಕೂಡಲೇ ಚಿಕಿತ್ಸೆ ನೀಡಲಾಯಿತು. ಆಂಜಿಯೋಗ್ರಾಫಿ ವೇಳೆ ಅವರ ಹೃದಯದ ಎರಡು ರಕ್ತ ನಾಳ ಸಂಪೂರ್ಣವಾಗಿ ಬ್ಲಾಕ್ ಆಗಿರುವುದು ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Parliament Winter Session: ಕಾಂಗ್ರೆಸ್‌ನ ಐವರು ಸಂಸದರು ಲೋಕಸಭೆ ಅಧಿವೇಶನದಿಂದ ಅಮಾನತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

ಫೈಸಲ್‌ ರಾಜಾ ಅಬಿದಿ ಎಂಬ ಪಾಕಿಸ್ತಾನದ ಮಾಜಿ ಸಂಸದನು ಭಾರತದ ಕುರಿತು ದುರಹಂಕಾರದ ಮಾತುಗಳನ್ನಾಡಿದ್ದಾನೆ. “ಭಾರತದ ಸಂಸತ್ತಿನಲ್ಲಿ ಅಖಂಡ ಭಾರತ ಕಲ್ಪನೆಯ ನಕ್ಷೆ ಹಾಕಲಾಗಿದೆ. ಈ ನಕ್ಷೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್‌ ಹಾಗೂ ಪಾಕಿಸ್ತಾನವೂ ಸೇರಿದೆ. ಆದರೆ, ಒಂದು ಮಾತು ನೆನಪಿರಲಿ. 2026ರ ನವೆಂಬರ್‌ನಲ್ಲಿ ಭಾರತವು ಚೂರು ಚೂರಾಗುತ್ತದೆ” ಎಂದು ಟಿವಿ ಸಂದರ್ಶನದ ವೇಳೆ ಹೇಳಿದ್ದಾನೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

VISTARANEWS.COM


on

Faisal Raza Abidi
Koo

ಇಸ್ಲಾಮಾಬಾದ್:‌ ಅಸಮರ್ಥ ನಾಯಕತ್ವ, ಉಗ್ರರ ಪೋಷಣೆ, ರಾಜಕೀಯ ಅರಾಜಕತೆ, ಧಾರ್ಮಿಕ ಮೂಲಭೂತವಾದ, ಸೇನೆಯ ಸರ್ವಾಡಳಿತ ಸೇರಿ ಹಲವು ಕಾರಣಗಳಿಂದಾಗಿ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನವು ಹಣಕಾಸು ನೆರವಿಗಾಗಿ ಅಂತಾರಾಷ್ಟ್ರೀಯ ಸಂಸ್ಥೆಗಳ ಎದುರು ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಇಷ್ಟಿದ್ದರೂ ಅಲ್ಲಿನ ನಾಯಕರು ಮಾತ್ರ ಅಹಂಕಾರದ ಮಾತುಗಳನ್ನಾಡುವುದು, ಭಾರತದ ವಿರುದ್ಧ ಉದ್ಧಟತನದ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, “2026ರ ನವೆಂಬರ್‌ನಲ್ಲಿ ಭಾರತವು (India) ತುಂಡು ತುಂಡಾಗುತ್ತದೆ” ಎಂಬುದಾಗಿ ಪಾಕಿಸ್ತಾನದ (Pakistan) ಮಾಜಿ ಸಂಸದನೊಬ್ಬ (Pakistan ex Senator) ನಾಲಗೆ ಹರಿಬಿಟ್ಟಿದ್ದಾನೆ.

ಸುದ್ದಿವಾಹಿನಿಯೊಂದರ ಜತೆ ಮಾತನಾಡುವ ವೇಳೆ ನಿರೂಪಕಿಯ ಪ್ರಶ್ನೆಗೆ ಉತ್ತರಿಸಿದ ಫೈಸಲ್‌ ರಾಜಾ ಅಬಿದಿ (Faisal Raza Abidi) ಎಂಬ ಮಾಜಿ ಸಂಸದನು ದುರಹಂಕಾರದ ಮಾತುಗಳನ್ನಾಡಿದ್ದಾನೆ. “ಭಾರತದ ಸಂಸತ್ತಿನಲ್ಲಿ ಅಖಂಡ ಭಾರತ ಕಲ್ಪನೆಯ ನಕ್ಷೆ ಹಾಕಲಾಗಿದೆ. ಈ ನಕ್ಷೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್‌ ಹಾಗೂ ಪಾಕಿಸ್ತಾನವೂ ಸೇರಿದೆ. ಆದರೆ, ಒಂದು ಮಾತು ನೆನಪಿರಲಿ. 2026ರ ನವೆಂಬರ್‌ನಲ್ಲಿ ಭಾರತವು ಚೂರು ಚೂರಾಗುತ್ತದೆ. ನರೇಂದ್ರ ಮೋದಿ ಅವರ ಹಿಂದುತ್ವ ಅಜೆಂಡಾ ಕೂಡ ಪತನವಾಗುತ್ತದೆ” ಎಂದು ಹೇಳಿದ್ದಾನೆ.

“ಅಖಂಡ ಭಾರತ ಕಲ್ಪನೆಯ ಕುರಿತು ಪಾಕಿಸ್ತಾನ ಮಾತನಾಡಿದರೆ ತಮಾಷೆ ಮಾಡುತ್ತಾರೆ. ಆದರೆ, 2026ರ ನವೆಂಬರ್‌ 26ರಂದು ಅಲ್ಲಾ ಪಾಕಿಸ್ತಾನದ ಪರವಾಗಿರುತ್ತಾನೆ. ಅಂದು ನಡೆಯುವ ಘಟನೆಯು ನಿಮ್ಮನ್ನು ಅಚ್ಚರಿಯ ಮಡುವಿನಲ್ಲಿ ಬೀಳಿಸುತ್ತದೆ. ಮೋದಿ ಹಿಂದುತ್ವದಿಂದ ಹೊರಗೆ ಬರಲಿರುವ ಜನ, ಪ್ರಾಣ ಉಳಿದರೆ ಸಾಕು ಎಂದು ಹೇಳುತ್ತಾರೆ. ಪಾಕಿಸ್ತಾನದ ಶಸ್ತ್ರಾಸ್ತ್ರಗಳು ಹಾಗೂ ಮಾನವ ಸಂಪನ್ಮೂಲವು ಭಾರತದ ನಾಶಕ್ಕೆ ಸಿದ್ಧವಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿಯೇ ಭಾರತ ತುಂಡು ತುಂಡಾಗುವುದೇ ಮುಖ್ಯ” ಎಂಬುದಾಗಿ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದಾನೆ.

“ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದ್ದಾರೆ. ಅವರ ಪ್ರತಿಪಾದನೆಗೆ ಜನರಿಂದ ಅಪಾರ ಬೆಂಬಲವೂ ವ್ಯಕ್ತವಾಗುತ್ತಿದೆ. ಹಾಗಾಗಿ, ಭಾರತವು ಚೂರು ಚೂರು ಆಗುವುದು ಮುಖ್ಯ” ಎಂಬುದಾಗಿ ಅಬಿದಿ ಹೇಳಿದ್ದಾನೆ. ಆ ಮೂಲಕ ಭಾರತದ ಮೇಲೆ ಪಾಕಿಸ್ತಾನವು ಶಸ್ತ್ರಾಸ್ತ್ರಗಳ ಸಮೇತ ದಾಳಿ ಮಾಡುತ್ತದೆ ಎಂಬುದರ ಮುನ್ಸೂಚನೆ ನೀಡಿದ್ದಾನೆ. ಇದುವರೆಗೆ ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧಕ್ಕಿಳಿದಿರುವ ಪಾಕಿಸ್ತಾನವು, ನಾಲ್ಕಕ್ಕೆ ನಾಲ್ಕು ಬಾರಿಯೂ ಹೀನಾಯವಾಗಿ ಸೋಲುಂಡಿದೆ. ಇನ್ನು ಮೋದಿ ಆಡಳಿತದಲ್ಲಿ 2016ರಲ್ಲಿ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, 2019ರ ಪುಲ್ವಾಮ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ವಾಯುದಾಳಿ ಮೂಲಕ ಪಾಕಿಸ್ತಾನದ ಉಗ್ರರನ್ನು ಹಿಮ್ಮೆಟ್ಟಿಸಲಾಗಿದೆ. ಹೀಗಿದ್ದರೂ, ಪಾಕಿಸ್ತಾನದ ನಾಯಕರು ಭಾರತದ ವಿಚಾರದಲ್ಲಿ ಹಗುರವಾಗಿ ಮಾತನಾಡುವುದನ್ನು ಬಿಟ್ಟಿಲ್ಲ ಎಂಬುದಕ್ಕೆ ಇದೇ ನಿದರ್ಶನವಾಗಿದೆ.

ಇದನ್ನೂ ಓದಿ: Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

Continue Reading

ಕ್ರೀಡೆ

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

IPL 2024: ಐಸಿಸಿ ವಿಶ್ವಕಪ್ 2023 ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ನಂತರ ಮೊಹಮ್ಮದ್ ಕೈಫ್ ಅವರ ಹೇಳಿಕೆಗಳು ಸಾಕಷ್ಟು ಟ್ರೋಲ್​​ಗೆ ಒಳಗಾಗಿದ್ದವು. ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದರೂ ರೋಹಿತ್ ಶರ್ಮಾ ನೇತೃತ್ವದ ತಂಡವು ಫೈನಲ್ ಪಂದ್ಯದಲ್ಲಿ ಸೋತಿತ್ತು. ಆ ಸೋಲನ್ನು ಒಪ್ಪಿಕೊಳ್ಳವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಸಿದ್ಧರಿರಲಿಲ್ಲ.

VISTARANEWS.COM


on

IPL 2024
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ(IPL 2024) ಗುರುವಾರ (ಮೇ 3) ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ ಸೋತ ನಂತರ ಭಾರತದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ (Wasim Jafar) ಅವರು ಐಸಿಸಿ ವಿಶ್ವಕಪ್ 2023 ರ ಫೈನಲ್ ಕುರಿತ ಹೇಳಿಕೆಗಳನ್ನು ಮತ್ತೊಬ್ಬ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಅವರನ್ನು ಟ್ರೋಲ್ ಮಾಡಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆದಿತ್ತು.

ಐಸಿಸಿ ವಿಶ್ವಕಪ್ 2023 ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ನಂತರ ಮೊಹಮ್ಮದ್ ಕೈಫ್ ಅವರ ಹೇಳಿಕೆಗಳು ಸಾಕಷ್ಟು ಟ್ರೋಲ್​​ಗೆ ಒಳಗಾಗಿದ್ದವು. ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದರೂ ರೋಹಿತ್ ಶರ್ಮಾ ನೇತೃತ್ವದ ತಂಡವು ಫೈನಲ್ ಪಂದ್ಯದಲ್ಲಿ ಸೋತಿತ್ತು. ಆ ಸೋಲನ್ನು ಒಪ್ಪಿಕೊಳ್ಳವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಸಿದ್ಧರಿರಲಿಲ್ಲ. ಅತ್ಯುತ್ತಮ ತಂಡ ಭಾರತದ ಸೋಲನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂದು ಮೊಹಮ್ಮದ್ ಕೈಫ್ ಹೇಳಿಕೊಂಡಿದ್ದರು.

ಕಪ್​ ಗೆದ್ದಿರುವ ಆಸ್ಟ್ರೇಲಿಯಾಕ್ಕೆ ಅಭಿನಂದನೆಗಳು. ಆದರೆ ಅತ್ಯುತ್ತಮ ತಂಡವು ವಿಶ್ವಕಪ್ ಗೆದ್ದಿದೆ ಎಂದು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ. ಈ ಭಾರತೀಯ ತಂಡವು ಅತ್ಯುತ್ತಮ ತಂಡವಾಗಿತ್ತು. ಅವರು ಇಂದು ಸೋತರು. ಇದು ಆ ಕೆಟ್ಟ ದಿನಗಳಲ್ಲಿ ಒಂದಾಗಿದೆ ಎಂದು ವಿಶ್ವ ಕಪ್​ ಬಳಿಕ ಕೈಫ್​ ಹೇಳಿಕೆ ನೀಡಿದ್ದರು.

ಇದೀಗ ಕೆಲವು ತಿಂಗಳುಗಳ ನಂತರ, ಮೊಹಮ್ಮದ್ ಕೈಫ್ ಅವರನ್ನು ಟ್ರೋಲ್ ಮಾಡಲು ವಾಸಿಮ್ ಜಾಫರ್ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡರು. ಸನ್ರೈಸರ್ಸ್​​ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 1 ರನ್ ಸೋತ ನಂತರ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಚಿತ್ರ ಪೋಸ್ಟ್ ಮಾಡಿದ್ದಾರೆ. “ಕಾಗದದ ಮೇಲಿನ ಬಲಿಷ್ಠ ತಂಡವು ಪಂದ್ಯ ಕಳೆದುಕೊಂಡಾಗ ಮೊಹಮ್ಮದ್ ಕೈಫ್” ಎಂಬ ಉಲ್ಲೇಖ ನೀಡಿ ಚಿತ್ರ ಪೋಸ್ಟ್ ಮಾಡಿದ್ದಾರೆ.

ಐಪಿಎಲ್ 2024 ರಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ನಿರಾಶಾದಾಯಕ ಸೋಲು ಅನುಭವಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೊನೆಯ ಎಸೆತದಲ್ಲಿ ಫಲಿತಾಂಶವನ್ನು ನಿರ್ಧಾರಗೊಂಡಿತು. ಇದು ಪಂದ್ಯಾವಳಿಯ ಅತ್ಯಂತ ರೋಮಾಂಚಕಾರಿ ಆಟಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

202 ರನ್ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಆರಂಭಿಕ ವಿಕೆಟ್​​ಗಳನ್ನು ಬೇ ಕಳೆದುಕೊಂಡಿತು. ಆದರೆ ಯಶಸ್ವಿ ಜೈಸ್ವಾಲ್ ಮತ್ತು ರಿಯಾನ್ ಪರಾಗ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಕೊನೆಯಲ್ಲಿ, ರೋವ್ಮನ್ ಪೊವೆಲ್ ಆಟವನ್ನು ಕೌತುಕಕ್ಕೆ ಕೊಂಡೊಯ್ದರು. ತ್ತು ಕೊನೆಯ ಎಸೆತದಲ್ಲಿ 2 ರನ್​ಗಳ ಅಗತ್ಯವಿದ್ದಾಗ ಅವರು ಔಟಾಗಿದ್ದರಿಂದ ಸನ್​ರೈಸರ್ಸ್​ ಹೈದರಾಬಾದ್ ಪಂದ್ಯವನ್ನು 1 ರನ್​ಗಳಿಂದ ಗೆದ್ದುಕೊಂಡಿತು.

ರೋಹಿತ್ ಶರ್ಮಾಗೆ ದೊಡ್ಡ ಅವಕಾಶ

ಮೊಹಮ್ಮದ್ ಕೈಫ್ ಇತ್ತೀಚೆಗೆ 2024 ರ ಟಿ 20 ವಿಶ್ವಕಪ್​​ ನಲ್ಲಿ ಭಾರತದ ಅವಕಾಶಗಳ ಬಗ್ಗೆ ಮಾತನಾಡಿದ್ದಾರೆ. ಮುಂಬರುವ ಪಂದ್ಯಾವಳಿಯು ನಾಯಕನಾಗಿ ರೋಹಿತ್ ಶರ್ಮಾಗೆ ಉತ್ತಮ ಅವಕಾಶವಾಗಿದೆ ಎಂದು ಅವರು ನುಡಿದಿದ್ದಾರೆ. ಐಸಿಸಿ ವಿಶ್ವಕಪ್ 2023 ರಲ್ಲಿ ಭಾರತವು ಅನುಭವಿಸಿದಂತಹ ಬೇಸರವನ್ನು ಎದುರಿಸುವುದಿಲ್ಲ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ರೋಹಿತ್ ಶರ್ಮಾ ಅವರು ಮುಂದಿನ 2 ರಿಂದ 3 ವರ್ಷಗಳವರೆಗೆ ಹೆಚ್ಚು ಕಾಲ ಆಡುವುದಿಲ್ಲ ಎಂದು ತಿಳಿದಿದೆ. ವಿರಾಟ್ ಕೊಹ್ಲಿ ಕೂಡ ಅದೇ ಹಾದಿಯಲ್ಲಿದ್ದಾರೆ. ನಾಯಕನಾಗಿ ರೋಹಿತ್​ಗೆ ಇದು ದೊಡ್ಡ ಅವಕಾಶ. ಪಂದ್ಯವು ಭಾರತದ ಕೈಯಲ್ಲಿದ್ದ ನಂತರ ಅವರು ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಸೋತಿದ್ದಾರೆ. 10 ಪಂದ್ಯಗಳನ್ನು ಗೆದ್ದರೂ 1 ಪಂದ್ಯವನ್ನು ಸೋತಿತು.. ಟಿ 20 ವಿಶ್ವಕಪ್​​ನಲ್ಲಿ ಪರಿಸ್ಥಿತಿ ಒಂದೇ ರೀತಿ ಇರುವುದಿಲ್ಲ ಎಂದು ನಾನು ಭಾವಿಸುತ್ತೇನೆ, “ಎಂದು ಅವರು ಹೇಳಿದರು.

Continue Reading

ದೇಶ

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

Rohith Vemula: ಹೈದರಾಬಾದ್‌ನಲ್ಲಿರುವ ಸೆಂಟ್ರಲ್‌ ಯುನಿವರ್ಸಿಟಿಯ ಹಾಸ್ಟೆಲ್‌ ಕೋಣೆಯಲ್ಲಿ ರೋಹಿತ್‌ ವೇಮುಲ 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈತ ದಲಿತ ವಿದ್ಯಾರ್ಥಿ ಎಂಬುದಾಗಿ, ವಿವಿಯಲ್ಲಿ ರಾಜಕೀಯ ನಡೆಯುತ್ತಿದೆ, ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರ ಸರ್ಕಾರದ ವಿರುದ್ಧವೂ ಆರೋಪಗಳು ಕೇಳಿಬಂದಿದ್ದವು. ಈಗ ತೆಲಂಗಾಣದ ಪೊಲೀಸರು, ಈತನು ದಲಿತನೇ ಅಲ್ಲ ಎಂಬುದಾಗಿ ವರದಿ ಸಲ್ಲಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಕ್ಲೋಸ್‌ ಮಾಡಿದ್ದಾರೆ.

VISTARANEWS.COM


on

Rohith Vemula
Koo

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ ವಿಶ್ವವಿದ್ಯಾಲಯದ ಪಿಎಚ್‌.ಡಿ ವಿದ್ಯಾರ್ಥಿ ರೋಹಿತ್‌ ವೇಮುಲ (Rohith Vemula) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರೋಹಿತ್‌ ವೇಮುಲ ದಲಿತನಲ್ಲ, ಆತನ ದಾಖಲೆಗಳು, ಪ್ರಮಾಣಪತ್ರಗಳು ನಕಲಿಯಾಗಿವೆ ಎಂದು ತೆಲಂಗಾಣ ಪೊಲೀಸರು (Telangana Police) ವರದಿ ಸಲ್ಲಿಸಿದ್ದಲ್ಲದೆ, ಪ್ರಕರಣವನ್ನು ಕ್ಲೋಸ್‌ ಮಾಡಿದ್ದಾರೆ. ಅಷ್ಟೇ ಅಲ್ಲ, ಪ್ರಕರಣದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಸೇರಿ ಹಲವರಿಗೆ ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆ.

2016ರ ಜನವರಿಯಲ್ಲಿ ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ, ಈ ಪ್ರಕರಣವನ್ನು ತೆಲಂಗಾಣ ಪೊಲೀಸರು ಈಗ ಕ್ಲೋಸ್‌ ಮಾಡಿದ್ದಾರೆ. ಈ ಕುರಿತು ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿದ್ದಾರೆ. ಆಗ ಸಿಕಂದರಾಬಾದ್‌ ಸಂಸದರಾಗಿದ್ದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್‌ ಸದಸ್ಯ ಎನ್‌. ರಾಮಚಂದರ್‌ ರಾವ್‌, ವಿವಿ ಕುಲಪತಿ ಅಪ್ಪಾ ರಾವ್‌, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಹಲವು ಎಬಿವಿಪಿ ನಾಯಕರಿಗೂ ತೆಲಂಗಾಣ ಪೊಲೀಸರು ಕ್ಲೀನ್‌ಚಿಟ್‌ ನೀಡಿದ್ದಾರೆ.

ವರದಿಯಲ್ಲಿ ಏನಿದೆ?

“ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಳ್ಳಲು ಹಲವು ಕಾರಣಗಳಿವೆ. ವಿವಿ ಕ್ಯಾಂಪಸ್‌ನಲ್ಲಿ ಆತನ ರಾಜಕೀಯ ಚಟುವಟಿಕೆಗಳು, ಅಧ್ಯಯನದಲ್ಲಿ ಹಿನ್ನಡೆ ಸೇರಿ ಹಲವು ಕಾರಣಗಳಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರೆ ಆತ ಓದಿನಲ್ಲಿ ಹಿಂದಿರುತ್ತಾನೆ. ಇಲ್ಲವೇ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ರಾಜಕೀಯ ಚಟುವಟಿಕೆಗಳು ಕಾರಣವಾಗಿರುತ್ತವೆ. ಇನ್ನು ರೋಹಿತ್‌ ವೇಮುಲ ಪಿಎಚ್‌.ಡಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ, ಎರಡು ವರ್ಷದ ಬಳಿಕ ಮತ್ತೊಂದು ಪಿಎಚ್‌.ಡಿ ಮಾಡಲು ಮುಂದಾಗಿದ್ದ. ಏಕೆಂದರೆ, ಆತ ಶಿಕ್ಷಣಕ್ಕಿಂತ ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆತ ದಲಿತನಲ್ಲ

“ರೋಹಿತ್‌ ವೇಮುಲ ದಲಿತನಲ್ಲ” ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. “ರೋಹಿತ್‌ ವೇಮುಲ ಪ್ರಮಾಣಪತ್ರಗಳು ನಕಲಿ ಆಗಿವೆ. ಆತನಿಗೆ ತಾಯಿಯು ನಕಲಿ ಪರಿಶಿಷ್ಟ ಜಾತಿ (SC) ಪ್ರಮಾಣಪತ್ರ ತಯಾರಿಸಿ ಕೊಟ್ಟಿದ್ದಾರೆ ಎಂಬುದು ಗೊತಿತ್ತು. ಇದಾದ ಬಳಿಕ ಆತನು ತನ್ನ ಘನತೆಗೆ ಧಕ್ಕೆ ಬರುತ್ತದೆ ಎಂಬುದರ ಚಿಂತೆಯಲ್ಲಿದ್ದ. ನಕಲಿ ಪ್ರಮಾಣಪತ್ರದ ಭೀತಿಯಲ್ಲಿದ್ದ ಆತನು, ಇದುವರೆಗೆ ತಾನು ಗಳಿಸಿದ ಪದವಿಗಳೆಲ್ಲ ಹಾಳಾಗುತ್ತವೆ ಎಂಬ ಚಿಂತೆ ಕಾಡುತ್ತಿತ್ತು. ಇದರಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು” ಎಂಬುದಾಗಿ ವರದಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

ಏನಿದು ಪ್ರಕರಣ?

ಹೈದರಾಬಾದ್‌ನಲ್ಲಿರುವ ಸೆಂಟ್ರಲ್‌ ಯುನಿವರ್ಸಿಟಿಯ ಹಾಸ್ಟೆಲ್‌ ಕೋಣೆಯಲ್ಲಿ ರೋಹಿತ್‌ ವೇಮುಲ 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈತನು ದಲಿತನೆಂದು, ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿಗಳು ಇವೆ ಎಂದು, ಕೇಂದ್ರದ ಮೋದಿ ಸರ್ಕಾರವು ದಲಿತ ವಿರೋಧಿ ಎಂದೂ ಪ್ರತಿಭಟನೆ ನಡೆಸಲಾಗಿತ್ತು. ದೆಹಲಿ ಸೇರಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ರೋಹಿತ್‌ ವೇಮುಲ ಆತ್ಮಹತ್ಯೆಗೂ ಮುನ್ನ ಆತನ ಮೇಲೆ ಎಬಿವಿಪಿ ಸದಸ್ಯರು ದಾಳಿ ಮಾಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ದೇಶದಲ್ಲಿ ಅಸಹಿಷ್ಣುತೆ ಇದೆ, ಬಿಜೆಪಿ ಸರ್ಕಾರದ ಬಂದ ಬಳಿಕ ಹೀಗೆಲ್ಲ ಆಗುತ್ತಿದೆ, ದಲಿತ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದೆಲ್ಲ ಹೇಳಲಾಗುತ್ತಿತ್ತು.

ಇದನ್ನೂ ಓದಿ: ಕನ್ಹಯ್ಯ ಲಾಲ್‌ ಹತ್ಯೆಯನ್ನು ಮುಸ್ಲಿಮರು ಸ್ಪಷ್ಟವಾಗಿ ಖಂಡಿಸಬೇಕು: ಆರ್‌ಎಸ್‌ಎಸ್‌

Continue Reading

Latest

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

IPL 2024: ಗಂಭೀರ್, ರೋಹಿತ್ ತಾವು ಹೆಚ್ಚು ಹೆದರುವ ಬ್ಯಾ ಟರ್​ ಎಂದು ಹೇಳಿದರು. ರೋಹಿತ್ ಒಂದು ಹೆಜ್ಜೆ ಮುಂದೆ ಇಟ್ಟರೆ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಗಂಭೀರ್ ಹೇಳಿದರು. ಆದ್ದರಿಂದ ಅವರ ದಾಳಿ ತಡೆಯಲು ತಂಡವು ಅನೇಕ ಬ್ಯಾಕಪ್ ಯೋಜನೆಗಳನ್ನು ತರುತ್ತಿದ್ದೆವು . ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಅನೇಕ ಸ್ಫೋಟಕ ಬ್ಯಾಟರ್​ಗಳ ಹೊರತಾಗಿಯೂ ಗಂಭೀರ್ ನೆಮ್ಮದಿ ಕೆಡಿಸಿದ್ದ ರೋಹಿತ್​ ಎಂಬುದು ವಿಶೇಷ.

VISTARANEWS.COM


on

IPL 2024
Koo

ಮುಂಬಯಿ: ಗೌತಮ್ ಗಂಭೀರ್ (Gautam Gambhir) ಐಪಿಎಲ್​ನಲ್ಲಿ ಕೋಲ್ಕೊತಾ ನೈಟ್​​ ರೈಡರ್ಸ್​​ ತಂಡ ನಾಯಕರಾಗಿದ್ದ ಸಮಯವನ್ನು ಇತ್ತೀಚೆಗೆ ಸ್ಮರಿಸಿಕೊಂಡಿದ್ದಾರೆ. ಈ ವೇಳೆ ಅವರು ರೋಹಿತ್ ಶರ್ಮಾ (Rohit Sharma) ತಮ್ಮ ನಿದ್ದೆಗೆಡಿಸಿದ್ದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಶುಕ್ರವಾರ ಐಪಿಎಲ್​17ನೇ ಆವೃತ್ತಿಯ (IPL 2024) ಮುಂಬೈ ಇಂಡಿಯನ್ಸ್ ವಿರುದ್ಧದ ಕೆಕೆಆರ್ ಪಂದ್ಯಕ್ಕೆ ಮುಂಚಿತವಾಗಿ ಮಾತನಾಡಿದ ಗಂಭೀರ್​ ಬೌಲರ್​ಗಳ ಮೇಲೆ ಪ್ರಾಬಲ್ಯ ಸಾಧಿಸಿರುವ ಸ್ಫೋಟಕ ಆರಂಭಿಕ ಆಟಗಾರ ರೋಹಿತ್​ ಶರ್ಮಾ ಅವರನ್ನು ಶ್ಲಾಘಿಸಿದರು.

ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ಮಾತನಾಡಿದ ಗಂಭೀರ್, ರೋಹಿತ್ ತಾವು ಹೆಚ್ಚು ಹೆದರುವ ಬ್ಯಾ ಟರ್​ ಎಂದು ಹೇಳಿದರು. ರೋಹಿತ್ ಒಂದು ಹೆಜ್ಜೆ ಮುಂದೆ ಇಟ್ಟರೆ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಗಂಭೀರ್ ಹೇಳಿದರು. ಆದ್ದರಿಂದ ಅವರ ದಾಳಿ ತಡೆಯಲು ತಂಡವು ಅನೇಕ ಬ್ಯಾಕಪ್ ಯೋಜನೆಗಳನ್ನು ತರುತ್ತಿದ್ದೆವು . ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಅನೇಕ ಸ್ಫೋಟಕ ಬ್ಯಾಟರ್​ಗಳ ಹೊರತಾಗಿಯೂ ಗಂಭೀರ್ ನೆಮ್ಮದಿ ಕೆಡಿಸಿದ್ದ ರೋಹಿತ್​ ಎಂಬುದು ವಿಶೇಷ.

“ನಾಯಕನಾಗಿ ನನ್ನ ಇಡೀ ಐಪಿಎಲ್ ವೃತ್ತಿಜೀವನದಲ್ಲಿ, ನನಗೆ ನಿದ್ರೆಯಿಲ್ಲದ ರಾತ್ರಿಗಳನ್ನು ನೀಡಿದ ಏಕೈಕ ಆಟಗಾರ ಇದ್ದರೆ ಅದು ರೋಹಿತ್ ಶರ್ಮಾ. ಐಪಿಎಲ್​ನಲ್ಲಿ ನಾನು ಹೆದರಿದ ಏಕೈಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ನನಗೆ ನಿದ್ರೆಯಿಲ್ಲದ ರಾತ್ರಿಗಳನ್ನು ಕೊಟ್ಟ ಏಕೈಕ ಆಟಗಾರ ಅವರು. ಕ್ರಿಸ್ ಗೇಲ್ ಅಲ್ಲ, ಎಬಿ ಡಿವಿಲಿಯರ್ಸ್ ಅಲ್ಲ , ಮತ್ಯಾರೂ ಇಲ್ಲ , ರೋಹಿತ್ ಶರ್ಮಾ ಮಾತ್ರ. ಏಕೆಂದರೆ ಅವರಿಗಾಗಿ ನಾನು ಪ್ಲಾನ್ ಎ ಅಥವಾ ಪ್ಲಾನ್ ಬಿ ಹೊಂದಿರಬೇಕಿತ್ತು, ಬಹುಶಃ ಪ್ಲಾನ್ ಸಿ ಕೂಡ. ಏಕೆಂದರೆ ರೋಹಿತ್ ಅವರನ್ನು ನಿಯಂತ್ರಿಸುವುದು ಕಷ್ಟ, “ಎಂದು ಗಂಭೀರ್ ಹೇಳಿದರು.

ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ 12 ವರ್ಷಗಳ ಸುದೀರ್ಘ ದಾಖಲೆಯನ್ನು ಮುರಿಯಲು ಎದುರು ನೋಡುತ್ತಿದೆ. ಕೆಕೆಆರ್ ಕೇವಲ 9 ಪಂದ್ಯಗಳನ್ನು ಗೆದ್ದಿದ್ದರೆ, ಮುಂಬೈ ಇಂಡಿಯನ್ಸ್ 23 ಪಂದ್ಯಗಳನ್ನು ಗೆದ್ದಿದೆ.

ಇದನ್ನೂ ಓದಿ: IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

ರೋಹಿತ್ ಗಾಗಿ ಸಾಕಷ್ಟು ಯೋಜನೆಗಳು ನಡೆಯುತ್ತಿದ್ದವು ಎಂದು ಗಂಭೀರ್ ಬಹಿರಂಗಪಡಿಸಿದರು. ರೋಹಿತ್ ಒಂದು ಓವರ್​​ನಲ್ಲಿ 30 ಕ್ಕೂ ಹೆಚ್ಚು ರನ್ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

ಅವರಿಗಾಗಿ ಯೋಜನೆ ರೂಪಿಸಬೇಕಿತ್ತು

“ಐಪಿಎಲ್​​ನಲ್ಲಿ ರೋಹಿತ್ ಶರ್ಮಾ ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್​ಗಾಗಿ ಹೆಚ್ಚ ಯೋಜನೆ ಹಾಕಿಕೊಂಡಿಲ್ಲ. ಪಂದ್ಯದಕ್ಕೆ ಮೊದಲ ದಿನ ರಾತ್ರಿ ನಾನು ಅವರು ಆಡುವ ದೃಶ್ಯಗಳನ್ನು ನೋಡುತ್ತಿದ್ದೆ. ಪ್ಲಾನ್ ಎ ಉತ್ತಮವಾರಿ ಸಿದ್ದಪಡಿಸುತ್ತಿದ್ದೆ. ಅದು ಕೆಲಸ ಮಾಡದಿದ್ದರೆ, ನಾನು ಮತ್ತೊಂದು ಯೋಜನೆ ಮಾಡಬೇಕಿತ್ತು. ಸುನಿಲ್ ನರೈನ್​ ತನ್ನ ನಾಲ್ಕು ಓವರ್​ಗಳನ್ನು ಎಸೆದರೆ, ಮುಂದಿನ 16 ಓವರ್​ಗಳನ್ನು ಯಾರು ಎಸೆಯುತ್ತಾರೆ? ನಾನು ಸುನಿಲ್ ಸ್ಪೆಲ್​ ಬೇಗ ಮುಗಿಸಿದರೆ ಮತ್ತು ರೋಹಿತ್ ಇದ್ದರೆ, ಅವರು ಒಂದೇ ಓವರ್​ನಲ್ಲಿ 30 ರನ್ ಗಳಿಸಬಹುದು. ಬಹುಶಃ ನಾಯಕನಾಗಿ ನಾನು ಹೆದರುತ್ತಿದ್ದ ಏಕೈಕ ಬ್ಯಾಟ್ಸ್ಮನ್,” ಎಂದು ಗಂಭೀರ್ ಹೇಳಿದರು.

ಕೆಕೆಆರ್​​ 26 ಪಂದ್ಯಗಳನ್ನಾಡಿರುವ ರೋಹಿತ್ 130.32ರ ಸ್ಟ್ರೈಕ್ ರೇಟ್​ನಲ್ಲಿ ಅಜೇಯ ಶತಕ ಸೇರಿದಂತೆ 924 ರನ್ ಗಳಿಸಿದ್ದಾರೆ.

Continue Reading
Advertisement
Faisal Raza Abidi
ದೇಶ4 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ12 mins ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ16 mins ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ30 mins ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ51 mins ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

IPL 2024
Latest56 mins ago

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

Vidyashree HS
ಬೆಂಗಳೂರು1 hour ago

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Prajwal Revanna Case
ಕರ್ನಾಟಕ2 hours ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Summer Fashion
ಫ್ಯಾಷನ್2 hours ago

Summer Fashion: ಬೇಸಿಗೆಯಲ್ಲಿ ಹುಡುಗಿಯರನ್ನು ಸವಾರಿ ಮಾಡುತ್ತಿರುವ 5 ಶೈಲಿಯ ಗ್ಲಾಮರಸ್‌ ಟಾಪ್‌ಗಳಿವು

Summer Tour
ಪ್ರವಾಸ2 hours ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ4 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ15 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌