United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ - Vistara News

ವಿದೇಶ

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

United Nations: ಗಾಜಾ ಪಟ್ಟಿಯಲ್ಲಿ ತಕ್ಷಣದ ಮತ್ತು ಸಂಪೂರ್ಣ ಕದನ ವಿರಾಮ ಘೋಷಿಸಬೇಕು ಮತ್ತು ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪುನರುಚ್ಚರಿಸಿದೆ.

VISTARANEWS.COM


on

United Nations
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್:‌ ಗಾಜಾ ಪಟ್ಟಿ (Gaza Strip)ಯಲ್ಲಿ ತಕ್ಷಣದ ಮತ್ತು ಸಂಪೂರ್ಣ ಕದನ ವಿರಾಮ ಘೋಷಿಸಬೇಕು ಮತ್ತು ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ವಿಶ್ವಸಂಸ್ಥೆ (United Nations)ಯಲ್ಲಿ ಭಾರತ ಪುನರುಚ್ಚರಿಸಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ಚರ್ಚೆಯಲ್ಲಿ ಬುಧವಾರ ಮಾತನಾಡಿದ ಭಾರತದ ಉಪ ಪ್ರತಿನಿಧಿ ಆರ್.ರವೀಂದ್ರ (R Ravindra) ಅವರು, ಪ್ಯಾಲೆಸ್ತೀನ್‌ಗೆ ಭಾರತದ ವಿವಿಧ ರೂಪಗಳಲ್ಲಿ ಸುಮಾರು 120 ಮಿಲಿಯನ್ ಡಾಲರ್‌ ನೆರವು ನೀಡುತ್ತಿದೆ ಎಂದು ತಿಳಿಸಿದ್ದಾರೆ. “2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ ದೇಶಗಳಲ್ಲಿ ಭಾರತವೂ ಒಂದು. ಇಸ್ರೇಲ್-ಹಮಾಸ್ ಸಂಘರ್ಷ (Israel-Hamas conflict)ದಲ್ಲಿ ನಡೆಯುತ್ತಿರುವ ಪ್ರಾಣ ಹಾನಿಯನ್ನು ನಾವು ಶಕ್ತವಾಗಿ ಖಂಡಿಸಿದ್ದೇವೆ. ಜತೆಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತ ಕರೆ ನೀಡಿದೆ. ಅಲ್ಲದೆ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸಲು ಆಗ್ರಹಿಸಿದೆ” ಎಂದು ಅವರು ಹೇಳಿದ್ದಾರೆ.

ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡಿ

ಎಲ್ಲರೂ ಎಲ್ಲ ಸಂದರ್ಭಗಳಲ್ಲಿಯೂ ಅಂತಾರಾಷ್ಟ್ರೀಯ ಕಾನೂನು ಮತ್ತು ಅಂತಾರಾಷ್ಟ್ರೀಯ ಮಾನವೀಯ ಕಾನೂನಿಗೆ ಬದ್ಧರಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. “ತಕ್ಷಣ, ಸಂಪೂರ್ಣ ಕದನ ವಿರಾಮ ಘೋಷಣೆಯನ್ನು ನಾವು ಪುನರುಚ್ಚರಿಸುತ್ತಿದ್ದೇವೆ. ಸುರಕ್ಷಿತ, ಸಮಯೋಚಿತ ಮತ್ತು ಸುಸ್ಥಿರ ಮಾನವೀಯ ನೆರವು ಮತ್ತು ಅಗತ್ಯ ಮಾನವೀಯ ಸೇವೆಗಳಿಗೆ ಗಾಜಾ ಪಟ್ಟಿಗೆ ಅನಿರ್ಬಂಧಿತ ಪ್ರವೇಶಕ್ಕಾಗಿ ನಾವು ಆಗ್ರಹಿಸುತ್ತಿದ್ದೇವೆ. ಇದಲ್ಲದೆ ಎಲ್ಲ ಒತ್ತೆಯಾಳುಗಳನ್ನು ತಕ್ಷಣ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕು” ಎಂದು ಭಾರತದ ರಾಯಭಾರಿ ಆರ್. ರವೀಂದ್ರ ಧ್ವನಿ ಎತ್ತಿದ್ದಾರೆ.

ಇಸ್ರೇಲ್ ಮತ್ತು ಪ್ಯಾಲಸ್ತೀನ್‌ ನಾಯಕರೊಂದಿಗೆ ನಿರಂತರ ಸಂಬಂಧ ಹೊಂದಿರುವ ಕತಾರ್ ಮತ್ತು ಈಜಿಪ್ಟ್‌ನಂತಹ ರಾಷ್ಟ್ರಗಳ ಪಾತ್ರವನ್ನೂ ಅವರು ಶ್ಲಾಘಿಸಿದ್ದಾರೆ. ʼʼಇಸ್ರೇಲ್‌ನ ಭದ್ರತಾ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಳೆದ ತಿಂಗಳು ಜೋರ್ಡಾನ್‌ನಲ್ಲಿ ನಡೆದ ಗಾಜಾಕ್ಕೆ ತುರ್ತು ಮಾನವೀಯ ನೆರವು ನೀಡುವ ಅಂತಾರಾಷ್ಟ್ರೀಯ ಉನ್ನತ ಮಟ್ಟದ ಸಮ್ಮೇಳನದಲ್ಲಿ ಭಾರತವೂ ಪಾಲ್ಗೊಂಡಿತ್ತುʼʼ ಎಂದು ತಿಳಿಸಿದ್ದಾರೆ.

ಸಹಾಯಹಸ್ತ

“ಯುಎನ್ಆರ್‌ಡಬ್ಲ್ಯುಎ (United Nations Relief and Works Agency)ಗೆ 35 ಮಿಲಿಯನ್ ಡಾಲರ್ ಸೇರಿದಂತೆ ಪ್ಯಾಲೆಸ್ತೀನ್‌ಗೆ ವಿವಿಧ ರೂಪಗಳಲ್ಲಿ ಸುಮಾರು 120 ಮಿಲಿಯನ್ ಡಾಲರ್‌ ನೆರವು ನೀಡಿದ್ದೇವೆ. ಭಾರತವು 2018 ರಿಂದ ಯುಎನ್ಆರ್‌ಡಬ್ಲ್ಯುಎಗೆ ವಾರ್ಷಿಕ 5 ಮಿಲಿಯನ್ ಡಾಲರ್ ಕೊಡುಗೆಯನ್ನು ನೀಡುತ್ತಿದೆ. ನಾವು ಈಗಾಗಲೇ 2.5 ಮಿಲಿಯನ್ ಡಾಲರ್ ನೆರವನ್ನು ಘೋಷಿಸಿದ್ದೇವೆ. ಯುಎನ್ಆರ್‌ಡಬ್ಲ್ಯುಎಗೆ ನಮ್ಮ ವಾರ್ಷಿಕ ಕೊಡುಗೆಯ ಮೊದಲ ಕಂತನ್ನು ಈ ವಾರದ ಆರಂಭದಲ್ಲಿ ವರ್ಗಾಯಿಸಲಾಗಿದೆ” ಎಂದು ಅವರು ವಿವರಿಸಿದ್ದಾರೆ.

ʼʼಪಶ್ಚಿಮ ಏಷ್ಯಾದಲ್ಲಿ ಸುಸ್ಥಿರ ಶಾಂತಿ ಮತ್ತು ಸ್ಥಿರತೆಯನ್ನು ಸಾಕಾರಗೊಳಿಸುವ ದೃಢ ನಂಬಿಕೆಯೊಂದಿಗೆ ಈ ಪ್ರದೇಶದೊಂದಿಗಿನ ಸಂಬಂಧವನ್ನು ಮುಂದುವರಿಸಲು ಭಾರತ ಸಿದ್ಧವಾಗಿದೆʼʼ ಎಂದು ಹೇಳಿ ಅವರು ತಮ್ಮ ಭಾಷಣ ಕೊನೆಗೊಳಿಸಿದ್ದಾರೆ.

ಇದನ್ನೂ ಓದಿ: United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Jaahnavi Kandula: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್ ವಜಾ

Jaahnavi Kandula: ಅಮೆರಿಕದ ಸಿಯಾಟಲ್‌ನಲ್ಲಿ ಕಳೆದ ವರ್ಷ ನಡೆದ ಅಪಘಾತದಲ್ಲಿ ಮೃತಪಟ್ಟ ಭಾರತದ ಜಾಹ್ನವಿ ಕಂಡುಲಾ ಎಂಬ 23 ವರ್ಷದ ವಿದ್ಯಾರ್ಥಿನಿಯನ್ನು ಅಪಹಾಸ್ಯ ಮಾಡಿದ ಪೊಲೀಸ್ ಅಧಿಕಾರಿ ಡ್ಯಾನಿಯಲ್‌ ಆಡೆರರ್‌ನನ್ನು ವಜಾಗೊಳಿಸಲಾಗಿದೆ. ಸಿಯಾಟಲ್ ಪೊಲೀಸ್ ಇಲಾಖೆಯಿಂದ ಆಡೆರರ್ ಅವರನ್ನು ವಜಾಗೊಳಿಸಲಾಗಿದೆ ಎಂದು ಬುಧವಾರ ಸಂಜೆ ಇಲಾಖೆಗೆ ಕಳುಹಿಸಲಾದ ಆಂತರಿಕ ಇಮಲ್‌ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

VISTARANEWS.COM


on

Jaahnavi Kandula
Koo

ವಾಷಿಂಗ್ಟನ್‌: ಅಮೆರಿಕದ ಸಿಯಾಟಲ್‌ (Seattle)ನಲ್ಲಿ ಕಳೆದ ವರ್ಷ ನಡೆದ ಅಪಘಾತದಲ್ಲಿ ಮೃತಪಟ್ಟ ಭಾರತದ ಜಾಹ್ನವಿ ಕಂಡುಲಾ (Jaahnavi Kandula) ಎಂಬ 23 ವರ್ಷದ ವಿದ್ಯಾರ್ಥಿನಿಯನ್ನು ಅಪಹಾಸ್ಯ ಮಾಡಿದ ಪೊಲೀಸ್ ಅಧಿಕಾರಿ ಡ್ಯಾನಿಯಲ್‌ ಆಡೆರರ್‌ (Daniel Auderer)ನನ್ನು ವಜಾಗೊಳಿಸಲಾಗಿದೆ.

2023ರ ಜನವರಿ 26ರಂದು ಸಿಯಾಟಲ್‌ನಲ್ಲಿ ಜಾಹ್ನವಿ ಕಂಡುಲಾ ಅವರಿಗೆ ಸಿಯಾಟಲ್‌ನ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ ಚಲಾಯಿಸುತ್ತಿದ್ದ ಪೊಲೀಸ್‌ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ವಾಹನ ಗಂಟೆಗೆ ಸುಮಾರು 119 ಕಿಲೋಮೀಟರ್‌ ವೇಗದಲ್ಲಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಕಂಡುಲಾ ಅವರ ದೇಹವು ದೂರಕ್ಕೆ ಎಸೆಯಲ್ಪಟ್ಟಿತ್ತು. ಕೂಡಲೇ ಅವರನ್ನು ಹಾರ್ಬರ್ವ್ಯೂ ಮೆಡಿಕಲ್ ಸೆಂಟರ್‌ಗೆ ಕರೆದೊಯ್ಯಲಾಗಿದ್ದರೂ, ತೀವ್ರ ಗಾಯಗಳಿಂದ ಆಕೆ ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕಡಪ ಮೂಲದವರಾದ ಜಾಹ್ನವಿ ಕಂಡುಲಾ ಅವರು ಸಿಯಾಟಲ್‌ನಲ್ಲಿರುವ ನಾರ್ತ್‌ ಈಸ್ಟ್‌ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದರು. 

ಈ ವೇಳೆ ವಾಹನದಲ್ಲಿದ್ದ ಸಿಯಾಟಲ್‌ ಪೊಲೀಸ್‌ ಆಫೀಸರ್ಸ್‌ ಗಿಲ್ಡ್‌ ಉಪಾಧ್ಯಕ್ಷ ಡ್ಯಾನಿಯಲ್‌ ಆಡೆರರ್‌ ಅಪಘಾತದ ಕುರಿತು ಜೋಕ್‌ ಮಾಡಿದ್ದರು. “ಓಹ್‌ ಅವಳು ಸತ್ತೇ ಹೋದಳು. 11 ಸಾವಿರ ಡಾಲರ್‌ ಮೊತ್ತದ ಚೆಕ್‌ ಬರೆದು ಬಿಸಾಡೋಣ. ಓಹ್, ಅವಳಿಗೆ 23 ವರ್ಷ ವಯಸ್ಸಲ್ಲ, ಹಾಗಾದರೆ ಅವಳ ಜೀವಕ್ಕೆ ಹೆಚ್ಚಿನ ಬೆಲೆ ಇಲ್ಲ” ಎಂದು ನಕ್ಕಿರುವ ವಿಡಿಯೊ ವೈರಲ್‌ ಆಗಿತ್ತು. ಜಾಹ್ನವಿ ಕಂಡುಲಾ ಸಾವಿನ ಕುರಿತು ಭಾರತ ಹಾಗೂ ಅಮೆರಿಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಸಿಯಾಟಲ್ ಪೊಲೀಸ್ ಇಲಾಖೆಯಿಂದ ಆಡೆರರ್ ಅವರನ್ನು ವಜಾಗೊಳಿಸಲಾಗಿದೆ ಎಂದು ಬುಧವಾರ ಸಂಜೆ ಇಲಾಖೆಗೆ ಕಳುಹಿಸಲಾದ ಆಂತರಿಕ ಇಮಲ್‌ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಆಡರರ್ ಅವರ ಮಾತುಗಳು ಕಂಡುಲಾ ಅವರ ಕುಟುಂಬಕ್ಕೆ ಉಂಟು ಮಾಡಿದ ನೋವನ್ನು ಅಳಿಸಲು ಸಾಧ್ಯವಿಲ್ಲ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

“ಈ ವೈಯಕ್ತಿಕ ಪೊಲೀಸ್ ಅಧಿಕಾರಿಯ ನಡೆ ಸಿಯಾಟಲ್ ಪೊಲೀಸ್ ಇಲಾಖೆ ಮತ್ತು ನಮ್ಮ ಇಡೀ ವೃತ್ತಿಗೆ ಅವಮಾನವನ್ನು ತಂದಿವೆ. ಅವರ ವಿರುದ್ದ ಕ್ರಮ ಕೈಗೊಳ್ಳದೇ ಇದ್ದರೆ ಇಡೀ ಇಲಾಖೆಗೆ ಮತ್ತಷ್ಟು ಅವಮಾನ ಎಸಗಿದಂತಾಗುತ್ತದೆ. ಆ ಕಾರಣಕ್ಕಾಗಿ ನಾನು ಅವರನ್ನು ವಜಾಗೊಳಿಸಲಾಗುತ್ತದೆ” ಎಂದು ಅಧಿಕಾರಿಗಳು ಕಾರಣ ನೀಡಿದ್ದಾರೆ.

ಖಂಡನೆ

ಜಾಹ್ನವಿ ಕಂಡುಲಾ ಸಾವಿನ ಕುರಿತು ಅಪಹಾಸ್ಯ ಮಾಡಿ ನಕ್ಕ ವಿಡಿಯೊ ವೈರಲ್‌ ಆಗುತ್ತಲೇ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿರುವ ಭಾರತದ ಕಾನ್ಸುಲೇಟ್‌ ಖಂಡನೆ ವ್ಯಕ್ತಪಡಿಸಿತ್ತು. “ಇದು ಅತ್ಯಂತ ಅಪಾಯಕಾರಿ ಘಟನೆ. ಇಂತಹ ಪ್ರಕರಣಗಳನ್ನು ನಾವು ಸಹಿಸುವುದಿಲ್ಲ. ಕೂಡಲೇ ಪ್ರಕರಣದ ಕುರಿತು ಸಮಗ್ರ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿತ್ತು. ಭಾರಿ ಆಕ್ರೋಶದ ಬಳಿಕ, ಸಮಗ್ರ ತನಿಖೆ ಮಾಡಲಾಗುವುದು ಎಂದು ಸಿಯಾಟಲ್‌ ಪೊಲೀಸರು ತಿಳಿಸಿದ್ದರು. ಅಮೆರಿಕದಲ್ಲಿ ಭಾರತೀಯರ ಜೀವಕ್ಕೆ ಬೆಲೆಯೇ ಇಲ್ಲವೇ ಎನ್ನುವ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಇದನ್ನೂ ಓದಿ: Jaahnavi Kandula: ಸಾಕ್ಷಿಗಳ ಕೊರತೆ; ಭಾರತೀಯ ವಿದ್ಯಾರ್ಥಿನಿಯನ್ನು ಕೊಂದ ಪೊಲೀಸ್‌ ಅಧಿಕಾರಿ ಶಿಕ್ಷೆಯಿಂದ ಪಾರು

Continue Reading

ಪ್ರಮುಖ ಸುದ್ದಿ

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Viral Video: ಮದುವೆ ಅನ್ನುವ ಮೂರು ಅಕ್ಷರಕ್ಕೆ ಈಗ ಬೆಲೆಯೇ ಇಲ್ಲದ ಹಾಗೇ ಆಗಿದೆ. ಇನ್ಸ್ಟಾಗ್ರಾಂನಲ್ಲಿ ರೀಲ್ಸ್, ಫೋಟೊ ಅಪ್ಲೋಡ್ ಆಗುತ್ತಿತ್ತು. ಈಗ ಡಿವೋರ್ಸ್ ಕೂಡ ಇನ್ಸ್ಟಾಗ್ರಾಂನಲ್ಲಿಯೇ ನೀಡುವಂತಹ ಪರಿಸ್ಥಿತಿ ಬಂದಿದೆ. ದುಬೈ ರಾಜಕುಮಾರಿ ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಶೇಖ್ ಮಾನಾ ಅವರನ್ನು ವಿವಾಹವಾದರು. ಇದೀಗ ರಾಜಕುಮಾರಿ ಶೇಖಾ ಮಹ್ರಾ ಇನ್ಸ್ಟಾಗ್ರಾಂನಲ್ಲಿ ಆಘಾತಕಾರಿ ಪೋಸ್ಟ್ ಹಾಕಿದ್ದು, ಅದರಲ್ಲಿ ತಮ್ಮ ಪತಿಗೆ ಡಿವೋರ್ಸ್ ನೀಡುವುದಾಗಿ ಘೋಷಿಸಿದ್ದಾರೆ. ಶೇಖಾ ಮಹ್ರಾ ಮತ್ತು ಅವರ ಪತಿ ಈ ವರ್ಷದ ಮೇ ತಿಂಗಳಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು. ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ಪತಿಯಿಂದ ಡಿವೋರ್ಸ್ ಕೇಳಿದ್ದು, ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

VISTARANEWS.COM


on

Viral Video
Koo

ದುಬೈ : ಸೋಶಿಯಲ್ ಮೀಡಿಯಾಗಳನ್ನು ನಾವು ಹೆಚ್ಚಾಗಿ ಮನೋರಂಜನೆಗಾಗಿ, ಪ್ರತಿದಿನ ನಡೆಯುವ ಸುದ್ದಿಗಳನ್ನು ತಿಳಿದುಕೊಳ್ಳಲು ಬಳಸುತ್ತೇವೆ. ಪ್ರಪಂಚದ ಹಲವೆಡೆ ನಡೆಯುವಂತಹ ಘಟನೆಗಳನ್ನು ನಾವು ಸೋಶಿಯಲ್ ಮೀಡಿಯಾಗಳ ಸಹಾಯದಿಂದ ಮನೆಯಲ್ಲೇ ಕುಳಿತು ತಿಳಿಯಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾಗಳನ್ನು ಪತಿ ಪತ್ನಿಯರು ಡಿವೋರ್ಸ್ ನೀಡಲು ಬಳಸುತ್ತಿದ್ದಾರೆ ಎಂದು ಕೇಳಿದರೆ ಎಲ್ಲರಿಗೂ ಆಶ್ವರ್ಯವಾಗುವುದಂತು ಖಂಡಿತ. ಅಂತಹದೊಂದು ಘಟನೆ ಇದೀಗ ದುಬೈನಲ್ಲಿ ನಡೆದಿದೆ. ದುಬೈ ರಾಜಕುಮಾರಿ ಶೇಖಾ ಮಹ್ರಾ ಅವರು ತಮ್ಮ ಪತಿಗೆ ಇನ್‍ಸ್ಟಾಗ್ರಾಂನಲ್ಲಿ ಡಿವೋರ್ಸ್ ನೀಡಿದ್ದು, ಇದು ಸಖತ್ ವೈರಲ್ (Viral Video) ಆಗಿದೆ.

ದುಬೈ ಆಡಳಿತಗಾರನ ಮಗಳಾದ ದುಬೈ ರಾಜಕುಮಾರಿ ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಶೇಖ್ ಮಾನಾ ಅವರನ್ನು ವಿವಾಹವಾದರು. ಇದೀಗ ರಾಜಕುಮಾರಿ ಶೇಖಾ ಮಹ್ರಾ ಇನ್‍ಸ್ಟಾಗ್ರಾಂನಲ್ಲಿ ಆಘಾತಕಾರಿ ಪೋಸ್ಟ್ ಹಾಕಿದ್ದು, ಅದರಲ್ಲಿ ತಮ್ಮ ಪತಿಗೆ ಡಿವೋರ್ಸ್ ನೀಡುವುದಾಗಿ ಘೋಷಿಸಿದ್ದಾರೆ. ಶೇಖಾ ಮಹ್ರಾ ಮತ್ತು ಅವರ ಪತಿ ಈ ವರ್ಷದ ಮೇ ತಿಂಗಳಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು. ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ಪತಿಯಿಂದ ಡಿವೋರ್ಸ್ ಕೇಳಿದ್ದು, ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ, ತಮ್ಮ ಪತಿ ಬೇರೆ ಸಂಗಾತಿಯೊಂದಿಗೆ ಸಂಬಂಧ ಹೊಂದಿರುವ ಕಾರಣ ಪತಿಗೆ ಡಿವೋರ್ಸ್ ನೀಡುತ್ತಿರುವುದಾಗಿ ತಿಳಿಸಿ “ನಾನು ನಿಮಗೆ ವಿಚ್ಛೇದನ ನೀಡುತ್ತೇನೆ” ಎಂದು ಮೂರು ಬಾರಿ ಬರೆದು ಮಂಗಳವಾರ ಪೋಸ್ಟ್ ಮಾಡಿದ್ದಾರೆ. ಹಾಗೇ ಅವರು ತಮ್ಮ ಪತಿಯೊಂದಿಗಿನ ಫೋಟೋಗಳನ್ನು ಇನ್‍ಸ್ಟಾಗ್ರಾಂನಿಂದ ಡಿಲೀಟ್ ಮಾಡಿದ್ದಾರೆ.

ಶೇಖಾ ಮಹ್ರಾ ಕಳೆದ ವರ್ಷ ಮೇ ತಿಂಗಳಲ್ಲಿ ಎಮಿರೇಟ್ಸ್ ಉದ್ಯಮಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮಾನಾ ಅಲ್ ಮಕ್ತೌಮ್ ಅವರನ್ನು ವಿವಾಹವಾದರು. ಒಂದು ವರ್ಷದ ನಂತರ, ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. 20ರ ಹರೆಯದ ಶೇಖ್ ಮಾನಾ ಅನೇಕ ಬ್ಯುಸಿನೆಸ್‍ಗಳನ್ನು ಹೊಂದಿದ್ದಾರೆ. ಈ ವರ್ಷದ ಮೇ ತಿಂಗಳಲ್ಲಿ, ದುಬೈ ರಾಜಕುಮಾರಿ ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ತಮ್ಮ ಮಗಳನ್ನು ಜಗತ್ತಿಗೆ ಕರೆತಂದ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದರು.

ಹಾಗೇ ತನ್ನ ಪತಿ ಹಾಗೂ ಮಗಳ ಜೊತೆಗಿನ ಪೋಟೊವನ್ನು ಪೋಸ್ಟ್ ಮಾಡಿದ್ದರು. ಈ ಹಿಂದೆ ಅವರು ಗರ್ಭಿಣಿಯಾಗಿದ್ದಾಗ “ನಾವು ಮೂವರು” ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಜೂನ್‍ನಲ್ಲಿ ಅವರು ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಪತಿಯಿಲ್ಲದೆ ತಮ್ಮ ಮಗುವಿನೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ “ನಾವಿಬ್ಬರೇ” ಎಂದು ಶೇಖಾ ಮಹ್ರಾ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

ಶೇಖಾ ಮಹ್ರಾ ಅವರ ತಂದೆ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಯುಎಇಯ ಉಪಾಧ್ಯಕ್ಷ, ಪ್ರಧಾನಿ ಮತ್ತು ರಕ್ಷಣಾ ಸಚಿವರಾಗಿದ್ದಾರೆ. ಇವರಿಗೆ 26 ಮಂದಿ ಮಕ್ಕಳಿದ್ದು, ಅವರಲ್ಲಿ ಶೇಖಾ ಮಹ್ರಾ ಕೂಡ ಒಬ್ಬರು. ಆಕೆಯ ತಾಯಿ ಜೊಯಿ ಗ್ರಿಗೊರಾಕೋಸ್ ಗ್ರೀಸ್ ಮೂಲದವರಾಗಿದ್ದಾರೆ. ಆದರೆ ಶೇಖಾ ಮಹ್ರಾ ತಂದೆ, ಆಕೆಯ ತಾಯಿಗೆ ವಿಚ್ಛೇದನ ನೀಡಿದ್ದರು..

Continue Reading

ವಿದೇಶ

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಸೋಂಕು; ಪ್ರಚಾರಕ್ಕೆ ಬ್ರೇಕ್‌

Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿವೆ. ಹೀಗಾಗಿ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಈ ಮಧ್ಯೆ ಮತ್ತೊಮ್ಮೆ ಕಣಕ್ಕಿಳಿದಿರುವ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್‌ ಬಾಧಿಸಿದೆ. ಅವರಿಗೆ ಕೊರೊನಾದ ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಸದ್ಯ ಪ್ರಚಾರ ಕಾರ್ಯಕ್ಕೆ ಸ್ವಲ್ಪ ವಿರಾಮ ನೀಡಿ ಅವರು ಪ್ರತ್ಯೇಕವಾಗಿರಲು ಅವರು ಡೆಲಾವೇರ್‌ಗೆ ಮರಳಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

VISTARANEWS.COM


on

Joe Biden
Koo

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ತಿಂಗಳು ಬಾಕಿ ಉಳಿದಿವೆ. ಹೀಗಾಗಿ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಈ ಮಧ್ಯೆ ಮತ್ತೊಮ್ಮೆ ಕಣಕ್ಕಿಳಿದಿರುವ ಅಧ್ಯಕ್ಷ ಜೋ ಬೈಡನ್ (Joe Biden) ಅವರಿಗೆ ಕೋವಿಡ್‌ (Covid-19) ಬಾಧಿಸಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರಿನ್ ಜೀನ್-ಪಿಯರೆ ಬುಧವಾರ ತಿಳಿಸಿದ್ದಾರೆ.

ಲಾಸ್ ವೇಗಾಸ್‌ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಜೋ ಬೈಡನ್ ಅವರಿಗೆ ಕೋವಿಡ್ ಬಾಧಿಸಿದೆ. ಅವರಿಗೆ ಕೊರೊನಾದ ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಸದ್ಯ ಪ್ರಚಾರ ಕಾರ್ಯಕ್ಕೆ ಸ್ವಲ್ಪ ವಿರಾಮ ನೀಡಿ ಅವರು ಪ್ರತ್ಯೇಕವಾಗಿರಲು ಅವರು ಡೆಲಾವೇರ್‌ಗೆ ಮರಳಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ʼʼಸೌಮ್ಯ ರೋಗಲಕ್ಷಣಗಳ ಹೊರತಾಗಿಯೂ 81 ವರ್ಷದ ಜೋ ಬೈಡನ್ ಆರೋಗ್ಯವಂತರಾಗಿದ್ದಾರೆ. ಭಯ ಪಡುವ ಅಗತ್ಯವಿಲ್ಲʼʼ ಎಂದು ಜೀನ್-ಪಿಯರೆ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ. ಜೋ ಬೈಡನ್‌ ಅವರಿಗೆ ಹಿಂದೆಯೂ ಕೋವಿಡ್‌ ಬಾಧಿಸಿತ್ತು. 2022ರ ಜುಲೈಯಲ್ಲಿ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದರು.

ಜೋ ಬೈಡನ್ ಅವರುಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಕೆವಿನ್ ಒ’ಕಾನರ್ ಈ ಬಗ್ಗೆ ಮಾಹಿತಿ ನೀಡಿ, ʼʼಬೈಡನ್ ಅವರಲ್ಲಿ ಕೊರೊನಾದ ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಮೂಗು ಸೋರುತ್ತಿದೆ ಮತ್ತು ಸ್ವಲ್ಪ ಪ್ರಮಾಣ ಕೆಮ್ಮು ಕಂಡು ಬಂದಿದೆʼʼ ಎಂದು ತಿಳಿಸಿದ್ದಾರೆ. ಬೈಡನ್ ಡೆಲಾವೇತ್‌ನ ರೆಹೋಬೋತ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸ್ವಯಂ ಪ್ರತ್ಯೇಕಗೊಳ್ಳಲಿದ್ದಾರೆ. ಪಿಸಿಆರ್ ದೃಢೀಕರಣ ಪರೀಕ್ಷೆ ಬಾಕಿ ಇದೆ.

ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ?

ಕೆಲವು ದಿನಗಳ ಹಿಂದೆ ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ ಮಾಡಿದ್ದಾರೆ ಎನ್ನುವ ವಿಚಾರ ಭಾರಿ ಸುದ್ದಿಯಾಗಿತ್ತು. ವಿಸ್ಕಾನ್ಸಿನ್‍ನ ಮ್ಯಾಡಿಸನ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಜೋ ಬೈಡನ್ ಜನರನ್ನು ಭೇಟಿ ಮಾಡಲು ಮುಂದಾಗಿದ್ದರು. ಆ ವೇಳೆ ಅಲ್ಲಿ ಇವರಿಗಾಗಿ ಕಾತುರದಿಂದ ಕಾಯುತ್ತಿದ್ದ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ಅವರು ನಿರ್ಲಕ್ಷ್ಯ ಮಾಡಿದ್ದರು ಎನ್ನಲಾಗಿದೆ. ಈ ಘಟನೆಯ ವಿಡಯೊ ವೈರಲ್‌ ಅಗಿದೆ.

ಈ ವಿಡಿಯೊದಲ್ಲಿ, ಕಪ್ಪು ಅಮೆರಿಕನ್ ಮಹಿಳೆ ಕೈಯಲ್ಲಿ ಬೈಡನ್‌-ಹ್ಯಾರಿಸ್ ಬೋರ್ಡ್‌ ಹಿಡಿದು ಕಾಯುತ್ತಿದ್ದಳು. ಆದರೆ ಬೈಡನ್ ಆಕೆಯನ್ನು ಕಡೆಗಣಿಸಿದ್ದರು. ಆಕೆಯ ಮೊದಲು ನಿಂತಿದ್ದ ಬಿಳಿ ವರ್ಣದ ಮಹಿಳೆಯರನ್ನು ತಬ್ಬಿಕೊಂಡ ಅವರು ಆಕೆಯನ್ನು ಬಿಟ್ಟು ಆಕೆಯ ನಂತರ ನಿಂತ ಬಿಳಿ ವರ್ಣದ ಮತ್ತೊಬ್ಬ ಮಹಿಳೆಯನ್ನು ಹಗ್ ಮಾಡಿದ್ದರು. ಕಪ್ಪು ಅಮೆರಿಕನ್ ಮಹಿಳೆಯತ್ತ ಕಣ್ಣೆತ್ತಿ ನೋಡದ ಅಧ್ಯಕ್ಷರನ್ನು ಕಂಡು ಬೇಸರಗೊಂಡಿದ್ದು ಆಕೆಯ ಮುಖದಲ್ಲಿ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬೈಡನ್ ಪ್ರಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ. ಯಾಕೆಂದರೆ ಬೈಡನ್ ಅವರನ್ನು ಶ್ವೇತಭವನಕ್ಕೆ ಕರೆದೊಯ್ದ ಕಪ್ಪು ವರ್ಣದ ಮತದಾರ ಬೆಂಬಲ ಕಳೆದುಕೊಳ್ಳುತ್ತಿದ್ದಾರೆ ಎಂದು ಹಲವಾರು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ. ಅಲ್ಲದೇ ಯುವಕರ ಆರ್ಥಿಕತೆ ಮತ್ತು ಮತದಾರರ ಹಕ್ಕುಗಳ ಆದ್ಯತೆಗಳನ್ನು ನಿಭಾಯಿಸುವಲ್ಲಿ ಬೈಡನ್ ವಿಫಲರಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

Continue Reading

ವಿದೇಶ

Oil Tanker Capsizes:ತೈಲ ತುಂಬಿದ್ದ ಹಡಗು ಮುಳುಗಡೆ; ಕಣ್ಮರೆಯಾಗಿದ್ದ 8 ಭಾರತೀಯರು ಸೇರಿ ಒಟ್ಟು 9 ನಾವಿಕರ ರಕ್ಷಣೆ

Oil Tanker Capsizes:ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿತ್ತು. ಈ ಬಗ್ಗೆ ಎಂದು ಸಾಗರ ಭದ್ರತಾ ಕೇಂದ್ರ(MSC) X ನಲ್ಲಿನ ಪೋಸ್ಟ್‌ ಮಾಡಿ ತಿಳಿಸಿತ್ತು

VISTARANEWS.COM


on

Oil Tanker Capsizes
Koo

ಒಮನ್‌: ಒಮನ್‌(Oman) ಸಮುದ್ರದಲ್ಲಿ ತೈಲ ತುಂಬಿದ್ದ ಹಡಗು ಮುಳುಗಿದ(Oil Tanker Capsizes) ಕಾರಣ ಕಣ್ಮರೆಯಾಗಿದ್ದ ನಾವಿಕರಲ್ಲಿ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ. ಕಣ್ಮರೆಯಾಗಿದ್ದ 13 ಜನರಲ್ಲಿ ಎಂಟು ಮಂದಿ ಭಾರತೀಯರು ಸೇರಿದಂತೆ ಒಟ್ಟು ಒಂಬತ್ತು ಮಂದಿ ನಾವಿಕರು ರಕ್ಷಿಸಲ್ಪಟ್ಟಿದ್ದಾರೆ.

ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿತ್ತು. ಈ ಬಗ್ಗೆ ಎಂದು ಸಾಗರ ಭದ್ರತಾ ಕೇಂದ್ರ(MSC) X ನಲ್ಲಿನ ಪೋಸ್ಟ್‌ ಮಾಡಿ ತಿಳಿಸಿತ್ತು. ಇನ್ನು ದುಕ್ಮ್‌ ಪಟ್ಟಣ ಒಮನ್‌ ಆಗ್ನೇಯ ಭಾಗದಲ್ಲಿದೆ. ಇನ್ನು ಮುಳುಗಡೆಯಾಗಿರುವ ಹಡಗನ್ನು ಪ್ರೆಸ್ಟೀಜ್ ಫಾಲ್ಕನ್ ಎಂದು ಗುರುತಿಸಲಾಗಿದ್ದು, ಅದರಲ್ಲಿದ್ದ 16ಜನ ನಾವಿಕರನ್ನು 13 ನಾವಿಕರು ಕಣ್ಮರೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆದಿತ್ತು. ನೌಕೆಯಲ್ಲಿ ಒಟ್ಟು 13 ಭಾರತೀಯರು ಹಾಗೂ 3 ಶ್ರೀಲಂಕಾ ಮೂಲದ ನಾವಿಕರಿದ್ದರು ಎನ್ನಲಾಗಿದೆ.

ಇದೀಗ ರಕ್ಷಣಾ ಕಾರ್ಯಾಚರಣೆಯಲ್ಲಿ 9 ನಾವಿಕರನ್ನು ರಕ್ಷಿಸಲಾಗಿದೆ. ಈ ಬಗ್ಗೆ ಒಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್‌ ಮಾಡಿದೆ. ಜುಲೈ 15 ರಂದು ಒಮಾನ್ ಕರಾವಳಿಯಲ್ಲಿ ಮುಳುಗಿದ ಕೊಮೊರೊಸ್ ಫ್ಲ್ಯಾಗ್ಡ್ ಹಡಗಿನ ಎಂಟಿ ಪ್ರೆಸ್ಟೀಜ್ ಫಾಲ್ಕನ್‌ನಲ್ಲಿದ್ದ ನಾವಿಕರಿಗಾಗಿ ರಾಯಭಾರ ಕಚೇರಿಯು ಒಮಾನಿ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಭಾರತೀಯ ನೌಕಾಪಡೆ ಮತ್ತು ಒಮನ್‌ SAR ಜಂಟೀ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದೆ. ಐಎನ್‌ಎಸ್ ಟೆಗ್ ಮೂಲಕ 8 ಭಾರತೀಯರು ಸೇರಿದಂತೆ 9 ಸಿಬ್ಬಂದಿಯನ್ನು ಇಂದು ರಕ್ಷಿಸಲಾಗಿದೆ. ಉಳಿದಿರುವವರಿಗಾಗಿ ಶೋಧ ಮುಂದುವರಿದಿದೆ” ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Continue Reading
Advertisement
Olympic Medals
ಕ್ರೀಡೆ4 mins ago

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Jaahnavi Kandula
ವಿದೇಶ4 mins ago

Jaahnavi Kandula: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್ ವಜಾ

Illicit relationship
ತುಮಕೂರು6 mins ago

Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

Bigg Boss Kannada 11 Starting Date And Contestants List
ಬಿಗ್ ಬಾಸ್15 mins ago

Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

Pralhad Joshi
ದೇಶ35 mins ago

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Kannada New Movie life of mradula song out
ಸ್ಯಾಂಡಲ್ ವುಡ್47 mins ago

Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

road Accident
ರಾಯಚೂರು52 mins ago

Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

Paris Olympics 2024
ಕ್ರೀಡೆ53 mins ago

Paris Olympics 2024: ಈ ಬಾರಿ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ 117 ಕ್ರೀಡಾಳುಗಳು; ಅಥ್ಲೆಟಿಕ್ಸ್​ ದೊಡ್ಡ ತಂಡ

Urvashi Rautela bathroom video leak on social media
ಸಿನಿಮಾ1 hour ago

Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

United Nations
ವಿದೇಶ1 hour ago

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌