US Air Strikes: ಯೋಧರ ಹತ್ಯೆಗೆ ಅಮೆರಿಕ ಪ್ರತೀಕಾರ; ಸಿರಿಯಾ, ಇರಾಕ್‌ನಲ್ಲಿ 85ಕ್ಕೂ ಹೆಚ್ಚು ಕಡೆ ವಾಯುದಾಳಿ - Vistara News

ವಿದೇಶ

US Air Strikes: ಯೋಧರ ಹತ್ಯೆಗೆ ಅಮೆರಿಕ ಪ್ರತೀಕಾರ; ಸಿರಿಯಾ, ಇರಾಕ್‌ನಲ್ಲಿ 85ಕ್ಕೂ ಹೆಚ್ಚು ಕಡೆ ವಾಯುದಾಳಿ

ಜೋರ್ಡಾನ್‌ನಲ್ಲಿ ಮೂವರು ಅಮೆರಿಕನ್ ಸೈನಿಕರನ್ನು ಕೊಂದುಹಾಕಿದ ಭಯೋತ್ಪಾದಕರ (terrorist attacks) ಡ್ರೋನ್ ದಾಳಿಗೆ (drone strike) ಪ್ರತೀಕಾರವಾಗಿ ಈ ದಾಳಿಗಳು ನಡೆದಿವೆ.

VISTARANEWS.COM


on

us air strikes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ಇರಾನ್‌ ಬೆಂಬಲಿತ ಭಯೋತ್ಪಾದಕರ (Iran militia) 85ಕ್ಕೂ ಹೆಚ್ಚು ನೆಲೆಗಳ ಮೇಲೆ ಅಮೆರಿಕ ಶುಕ್ರವಾರ ರಾತ್ರಿ ವಾಯುದಾಳಿ (US Air Strikes) ನಡೆಸಿದೆ. ಜೋರ್ಡಾನ್‌ನಲ್ಲಿ ಮೂವರು ಅಮೆರಿಕನ್ ಸೈನಿಕರನ್ನು ಕೊಂದುಹಾಕಿದ ಭಯೋತ್ಪಾದಕರ (terrorist attacks) ಡ್ರೋನ್ ದಾಳಿಗೆ (drone strike) ಪ್ರತೀಕಾರವಾಗಿ ಈ ದಾಳಿಗಳು ನಡೆದಿವೆ.

ಇರಾಕ್ ಮತ್ತು ಸಿರಿಯಾ ಎರಡೂ ಕಡೆ ಇರಾನ್ ಪಡೆಗಳು ಮತ್ತು ಟೆಹ್ರಾನ್ ಬೆಂಬಲಿತ ಉಗ್ರರ ಗುಂಪುಗಳ ನೆಲೆಗಳ ಮೇಲೆ ಯುಎಸ್ ಮಿಲಿಟರಿ ಪ್ರತೀಕಾರದ ವೈಮಾನಿಕ ದಾಳಿಯನ್ನು ಶುಕ್ರವಾರ ಪ್ರಾರಂಭಿಸಿತು. ಡ್ರೋನ್‌ ದಾಳಿಯನ್ನು ಇರಾನ್ ಬೆಂಬಲಿತ ಉಗ್ರ ಪಡೆಗಳು ನಡೆಸಿವೆ ಎಂದು ಅಮೆರಿಕದ ದೂಷಿಸಿದ್ದರೂ, ಇರಾನ್‌ ಭೂಪ್ರದೇಶದ ಮೇಲೆ ಪ್ರತಿದಾಳಿ ಮಾಡಿಲ್ಲ. ಸಂಭಾವ್ಯ ಪೂರ್ಣ ಯುದ್ಧ ಪರಿಸ್ಥಿತಯನ್ನು ತಡೆಗಟ್ಟುವ ದೃಷ್ಟಿಯಿಂದ ಆ ದಾಳಿಯನ್ನು ತಡೆಯಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

“ಜೋರ್ಡಾನ್‌ ದಾಳಿಗೆ ನಮ್ಮ ಪ್ರತಿದಾಳಿ ಇಂದು ಪ್ರಾರಂಭವಾಯಿತು. ದಾಳಿ ನಮ್ಮ ಆಯ್ಕೆಯ ಸಮಯ ಮತ್ತು ಸ್ಥಳಗಳಲ್ಲಿ ಮುಂದುವರಿಯುತ್ತದೆ” ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಧ್ಯಪ್ರಾಚ್ಯದಲ್ಲಿ ಅಥವಾ ಪ್ರಪಂಚದ ಬೇರೆಲ್ಲಿಯೂ ಸಂಘರ್ಷವನ್ನು ಅಮೆರಿಕ ಬಯಸುವುದಿಲ್ಲ. ಆದರೆ ನಮಗೆ ಹಾನಿ ಮಾಡಲು ಬಯಸುವ ಎಲ್ಲರಿಗೂ ಇದನ್ನು ತಿಳಿದಿರಲಿ: ನೀವು ಅಮೆರಿಕನ್ನರಿಗೆ ಹಾನಿ ಮಾಡಿದರೆ, ನಾವು ಪ್ರತಿಕ್ರಿಯಿಸುತ್ತೇವೆ” ಎಂದು ಅವರು ಹೇಳಿದರು.

ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕ್ಯುಡ್ಸ್ ಫೋರ್ಸ್ ಮತ್ತು ಸಂಯೋಜಿತ ಭಯೋತ್ಪಾದಕ ಗುಂಪುಗಳನ್ನು ಪ್ರಸ್ತುತ ದಾಳಿಗಳು ಗುರಿಯಾಗಿಸಿಕೊಂಡಿವೆ. ಅಮೇರಿಕನ್ ಪಡೆಗಳು 85ಕ್ಕೂ ಹೆಚ್ಚು ಗುರಿಗಳನ್ನು ಘಾತಿಸಿದವು. ಅಮೆರಿಕದಿಂದಲೇ ಹಾರಿಸಲಾದ ದೀರ್ಘ-ಶ್ರೇಣಿಯ ಬಾಂಬರ್‌ ವಿಮಾನಗಳು ಈ ಕಾರ್ಯಾಚರಣೆ ನಡೆಸಿವೆ.

ವೈಮಾನಿಕ ದಾಳಿಗಳು 125ಕ್ಕೂ ಹೆಚ್ಚು ನಿಖರವಾದ ಯುದ್ಧಸಾಮಗ್ರಿಗಳನ್ನು ಬಳಸಿಕೊಂಡಿವೆ. ಇರಾನಿ ಮಿಲಿಟರಿ ಹಾಗೂ ಉಗ್ರರ ಗುಂಪುಗಳ ಕಮಾಂಡ್ ಮತ್ತು ಕಂಟ್ರೋಲ್, ಗುಪ್ತಚರ ಕೇಂದ್ರಗಳು, ರಾಕೆಟ್, ಕ್ಷಿಪಣಿ ಮತ್ತು ಡ್ರೋನ್ ಶೇಖರಣಾ ಸೌಲಭ್ಯಗಳು ಈ ದಾಳಿಗಳಿಗೆ ಗುರಿಯಾಗಿವೆ. ಅಮೆರಿಕದಿಂದ ಹಾರಿದ B-1 ಬಾಂಬರ್‌ಗಳು ಸುಮಾರು 30 ನಿಮಿಷಗಳ ಕಾಲ ಗುರಿಗಳನ್ನು ಘಾತಿಸಿದವು. ರಕ್ಷಣಾ ಇಲಾಖೆಯು ಇನ್ನೂ ದಾಳಿಗಳಿಂದಾದ ಹಾನಿಯನ್ನು ಅಂದಾಜಿಸುಸುತ್ತಿದೆ. ಏಳು ಪ್ರತ್ಯೇಕ ಕಡೆಗಳಲ್ಲಿ ಡಜನ್‌ಗಟ್ಟಲೆ ಗುರಿಗಳನ್ನು ನಾಶ ಮಾಡಿದೆ.

ಬಾಗ್ದಾದ್‌ನಲ್ಲಿ ಹಿಂದಿನ ಅಮೆರಿಕ ದಾಳಿಯ ನಂತರ ಅಂತಾರಾಷ್ಟ್ರೀಯ ಪಡೆಗಳ ನಿರ್ಗಮನಕ್ಕೆ ಇರಾಕ್ ಕರೆ ನೀಡಿತ್ತು. ಈಗಿನ ಮಿಲಿಟರಿ ಕ್ರಮವನ್ನು, ʼಇದು ತನ್ನ ಸಾರ್ವಭೌಮತ್ವದ ಉಲ್ಲಂಘನೆʼ ಎಂದು ಖಂಡಿಸಿದೆ. ಆದರೆ ದಾಳಿಯ ಕುರಿತು ಇರಾಕ್‌ಗೆ ಈ ಮೊದಲೇ ತಿಳಿಸಲಾಗಿದೆ ಎಂದು ಅಮೆರಿಕದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಭಾನುವಾರ ಜೋರ್ಡಾನ್‌ನಲ್ಲಿ ಡ್ರೋನ್‌ ದಾಳಿಯಲ್ಲಿ ಮೂವರು ಅಮೆರಿಕನ್‌ ಸೈನಿಕರು ಕೊಲ್ಲಲ್ಪಟ್ಟಿದ್ದರು. ಇದು ಇಸ್ರೇಲ್ ಮೇಲೆ ಅಕ್ಟೋಬರ್ 7ರಂದು ಹಮಾಸ್ ದಾಳಿಯ ನಂತರ ಮಧ್ಯಪ್ರಾಚ್ಯದಲ್ಲಿ ನಡೆದ ಮೊದಲ ಯುಎಸ್ ಮಿಲಿಟರಿ ಸಾವುಗಳು. ಅಕ್ಟೋಬರ್ ತಿಂಗಳಿನಿಂದ ಈಚೆಗೆ ಇರಾಕ್, ಸಿರಿಯಾ ಮತ್ತು ಜೋರ್ಡಾನ್‌ನಲ್ಲಿ US ಮತ್ತು ಸಮ್ಮಿಶ್ರ ಪಡೆಗಳ ಮೇಲೆ 165ಕ್ಕೂ ಹೆಚ್ಚು ಬಾರಿ ಡ್ರೋನ್‌ಗಳು, ರಾಕೆಟ್‌ಗಳು ಮತ್ತು ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಮೂಲಕ ಉಗ್ರರು ದಾಳಿ ನಡೆಸಿದ್ದಾರೆ.

ಹಿಂದಿನ ದಾಳಿಗಳಲ್ಲಿ ಡಜನ್‌ಗಟ್ಟಲೆ ಅಮೆರಿಕದ ಸಿಬ್ಬಂದಿ ಗಾಯಗೊಂಡಿದ್ದರು. ಈ ದಾಳಿಗಳನ್ನು ನಡೆಸಿದ ಹೌತಿ ಮುಂತಾದ ಉಗ್ರರು, ಪ್ಯಾಲೆಸ್ತೀನ್‌ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ಗೆ ಅಮೆರಿಕದ ಬೆಂಬಲವನ್ನು ಖಂಡಿಸಿ ಈ ಕೃತ್ಯಗಳನ್ನು ಎಸಗಿದ್ದಾರೆ. ಯೆಮೆನ್‌ನ ಇರಾನ್ ಬೆಂಬಲಿತ ಹುತಿ ಬಂಡುಕೋರರು ನವೆಂಬರ್‌ನಲ್ಲಿ ಅಂತಾರಾಷ್ಟ್ರೀಯ ಹಡಗು ಸಾಗಣೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Armed Drones: ಅಮೆರಿಕದಿಂದ ಭಾರತಕ್ಕೆ 31 ಎಂಕ್ಯೂ-9ಬಿ ಸಶಸ್ತ್ರ ಡ್ರೋನ್‌; ಇದು 4 ಶತಕೋಟಿ ಡಾಲರ್ ಡೀಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Narendra Modi
Koo

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

ರಷ್ಯಾ ಭೇಟಿ

ಈ ತಿಂಗಳ ಆರಂಭದಲ್ಲಿ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದರು. ರಷ್ಯಾ ಮತ್ತು ಭಾರತದ ನಡುವಿನ ಸಹಕಾರಕ್ಕಾಗಿ ಸ್ಪಷ್ಟ ಚೌಕಟ್ಟನ್ನು ನಿರ್ಮಿಸುವಲ್ಲಿ ಮೋದಿಯವರ ಕೊಡುಗೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘಿಸಿದ್ದರು.

ಇದೇ ವೇಳೆ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ ನೀಡಲಾಯಿತು ಎಂದು ರಷ್ಯಾ ಹೇಳಿತ್ತು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

ದೇಶ

Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Narendra Modi: ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು.

VISTARANEWS.COM


on

Narendra Modi
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನೀಡದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) ಎಚ್ಚರಿಕೆ ನೀಡಿದ ಬೆನ್ನಲ್ಲೇ ನೆರೆ ರಾಷ್ಟ್ರವು ಥಂಡಾ ಹೊಡೆದಿದೆ. ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ ಬಳಿಕ ಪಾಕಿಸ್ತಾನ ಸೇನೆಯು ಗಲಿಬಿಲಿಗೊಂಡಿದ್ದು, ಗಡಿಯಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದೆ.

ಹೌದು, ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರ (Paris Olympics 2024) ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​​ನ ಹೈಸ್ಪೀಡ್ ಟಿಜಿವಿ ರೈಲು ಜಾಲದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿದೆ. ಶುಕ್ರವಾರ ರೈಲಿನ ತಾಂತ್ರಿಕ ನಿರ್ವಹಣಾ ಕೇಂದ್ರಗಳಿಗೆ ಬೆಂಕಿ ಹಚ್ಚವಲಾಗಿದೆ. ದುರುದ್ದೇಶದ ಕೃತ್ಯಗಳಿಂದಾಗಿ ರೈಲು ಸಂಪರ್ಕ ಜಾಲಕ್ಕೆ ಹಾನಿಯಾಗಿದೆ. ಇದು ದೇಶದ ಜನನಿಬಿಡ ರೈಲು ಮಾರ್ಗಗಳಿಗೆ ಅಡ್ಡಿಯಾಗಿದ್ದು, ಪ್ರಯಾಣಿಕರು ಅರ್ಧ ದಾರಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಕ್ರೀಡಾಕೂಟಕ್ಕೆ ಮುಂಚಿತವಾಗಿ ಪ್ರಯಾಣಕ್ಕೆ ಅಡ್ಡಿಪಡಿಸಲು ಈ ದಾಳಿ ನಡೆಸಲಾಗಿದ್ದು ಇದು ಸಂಘಟಿತ ವಿಧ್ವಂಸಕ ಕೃತ್ಯ ಎಂದು ಹೇಳಲಾಗಿದೆ.

ಪ್ಯಾರಿಸ್ ಅನ್ನು ಪಶ್ಚಿಮ, ಉತ್ತರ ಮತ್ತು ಪೂರ್ವ ಪ್ರದೇಶಗಳೊಂದಿಗೆ ಸಂಪರ್ಕಿಸುವ ಮಾರ್ಗಗಳಲ್ಲಿನ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಎಸ್ಎನ್​ಸಿಎಫ್ ತಿಳಿಸಿದೆ. ಇಂಗ್ಲಿಷ್ ಕಾಲುವೆಯ ಕೆಳಗಿರುವ ಲಂಡನ್ ಮತ್ತು ನೆರೆಯ ಬೆಲ್ಜಿಯಂಗೆ ಪ್ರಯಾಣದ ಮೇಲೂ ಇದು ಪರಿಣಾಮ ಬೀರಿದೆ ಎಂದು ವರದಿಗಳು ತಿಳಿಸಿವೆ.

ಅಲ್ಲಿ ರೈಲು ವಿಭಾಗ ಹಲವಾರು ರೈಲುಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಯಿತು ಮತ್ತು ರದ್ದುಗೊಳಿಸಬೇಕಾಯಿತು ಎಂದು ಹೇಳಲಾಗಿದೆ. ದುರಸ್ತಿಯ ಮೇಲ್ವಿಚಾರಣೆಗಾಗಿ ಸುರಕ್ಷತಾ ತಂಡ ಸ್ಥಳದಲ್ಲಿದೆ ಎಂದು ಹೇಳಿದ್ದಾರೆ. ವಾರಾಂತ್ಯದಲ್ಲಿ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ.

“ಅಟ್ಲಾಂಟಿಕ್, ಉತ್ತರ ಮತ್ತು ಪೂರ್ವ ಹೈಸ್ಪೀಡ್ ಮಾರ್ಗಗಳಲ್ಲಿ ಹಲವೆಡೆ ಬೆಂಕಿ ಹಚ್ಚಲಾಗಿದೆ. ನಮ್ಮ ರೈಲ್ವೆ ವ್ಯವಸ್ಥೆಗಳನ್ನು ಹಾನಿಗೊಳಿಸಲು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ನಡೆದ ದಾಳಿಗಳನ್ನು ಸರ್ಕಾರಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ, ಈ ಘಟನೆಗಳಿಂದ ಕ್ರೀಡಾಕೂಟಗಳ ತಾಣಕ್ಕೆ ಯಾವುದೇ ಸಂಪರ್ಕ ಕಡಿತಗೊಂಡಿಲ್ಲ.

ಸಾರಿಗೆ ಸಚಿವ ಪ್ಯಾಟ್ರಿಸ್ ವೆರ್ಗ್ರೀಟ್ ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ “ಕ್ರಿಮಿನಲ್ ಘಟನೆಗಳನ್ನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ರೈಲ್ವೆ ಸಂಚಾರವನ್ನು ಪುನಃಸ್ಥಾಪಿಸಲು ಎಸ್ ಎನ್ ಸಿಎಫ್ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.ದುರಸ್ತಿ ಕಾರ್ಯಗಳು ನಡೆಯುತ್ತಿದೆ. ರೈಲುಗಳನ್ನು ತಮ್ಮ ನಿರ್ಗಮನ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಆದಾಗ್ಯೂ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಪ್ರಯಾಣಿಕರಿಗೆ ಕೋಲಾಗಿದೆ.

ಇಷ್ಟು ದೊಡ್ಡ ಪ್ರಮಾಣದ ದಾಳಿಯು “ಟಿಜಿವಿ ನೆಟ್ವರ್ಕ್ ಅನ್ನು ನಿಷ್ಕ್ರಿಯಗೊಳಿಸುವ” ಗುರಿ ಹೊಂದಿತ್ತು ರೈಲ್ವೆ ಕಂಪನಿ ಹೇಳಿದೆ. ಸುಮಾರು 800,000 ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ ಎಂದು ಅದು ಹೇಳಿದೆ.

ವಿಧ್ವಂಸಕ ಕೃತ್ಯದಿಂದ ಲಂಡನ್ ಮತ್ತು ಪ್ಯಾರಿಸ್ ನಡುವಿನ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.

Continue Reading
Advertisement
illicit relationship raichur siravara
ಕ್ರೈಂ7 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ7 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ27 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ54 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ57 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ2 hours ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್2 hours ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌