Viral Video: ಕಪ್ಪು ವರ್ಣದ ಗರ್ಭಿಣಿ ಯುವತಿಗೆ ಗುಂಡು ಹೊಡೆದ ಕೊಂದ ಅಮೆರಿಕ ಪೊಲೀಸ್! ಆಕೆಯ ತಪ್ಪಾದರೂ ಏನು? - Vistara News

ಪ್ರಮುಖ ಸುದ್ದಿ

Viral Video: ಕಪ್ಪು ವರ್ಣದ ಗರ್ಭಿಣಿ ಯುವತಿಗೆ ಗುಂಡು ಹೊಡೆದ ಕೊಂದ ಅಮೆರಿಕ ಪೊಲೀಸ್! ಆಕೆಯ ತಪ್ಪಾದರೂ ಏನು?

Viral Video: ಅಮೆರಿಕದ ಒಹಿಯೋ ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕಪ್ಪು ವರ್ಣದ ಗರ್ಭಿಣಿ ಯುವತಿಗೆ ಪೊಲೀಸರು ಗುಂಡು ಹೊಡೆದು ಕೊಂದು ಹಾಕಿದ್ದಾರೆ.

VISTARANEWS.COM


on

Ohio Police shot at Black woman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾರಿನಿಂದ ಇಳಿಯದ ಕಪ್ಪು ವರ್ಣದ ಗರ್ಭಿಣಿ ಯುವತಿಯನ್ನು (Pregnant Black Woman) ಅಮೆರಿಕದ ಒಹಿಯೋ ಪೊಲೀಸ್ (Ohio police) ಶೂಟ್ ಮಾಡಿ ಹತ್ಯೆ ಮಾಡಿದ ವಿಡಿಯೋ ಭಾರೀ ವೈರಲ್ ಆಗಿದೆ(Viral Video). ಈ ಘಟನೆಯ ಆಗಸ್ಟ್ 24ರಂದು ನಡೆದಿದ್ದು, ಹತ್ಯೆಗೀಡಾದ ಗರ್ಭಿಣಿಯನ್ನು 21 ವರ್ಷದ ತಾ’ಕಿಯಾ ಎಂದು ಗುರುತಿಸಲಾಗಿದೆ. ನ್ಯೂಯಾರ್ಕ್ ಪೋಸ್ಟ್ (New York Post) ಪತ್ರಿಕೆಯ ವರದಿಯ ಪ್ರಕಾರ, ಕಳ್ಳತನಕ್ಕೆ ಸಂಬಂಧಿಸಿದಂತೆ ತರುಣ ಗರ್ಭಿಣಿಯನ್ನು ಒಹಿಯೋ ಪೊಲೀಸರು ಪ್ರಶ್ನಿಸುತ್ತಿರುತ್ತಾರೆ. ಕಾರಿನಿಂದ ಹೊರ ಬರುವಂತೆ ಸೂಚಿಸಲಾಗುತ್ತದೆ. ಆದರೆ, ಯುವತಿ ಹೊರ ಬರಲು ನಿರಾಕರಿಸುತ್ತಾರೆ. ಕಾರ್ ಮುಂದಿನಿಂದ ಪೊಲೀಸ್ ಒಬ್ಬ ಅವಳತ್ತ ಗನ್‌ನಿಂದ ಗುರಿ ಇಡುತ್ತಾರೆ. ಕಾರ್ ಮುಂದೆ ಚಲಿಸುತ್ತಿದ್ದಂತೆ ಪೊಲೀಸ್ ಆಕೆಗೆ ನೇರವಾಗಿ ಶೂಟ್ ಮಾಡುತ್ತಾರೆ. ಈ ಎಲ್ಲ ದೃಶ್ಯಗಳು ಪೊಲೀಸರ ಬಾಡಿಕ್ಯಾಮ್‌ನಲ್ಲಿ (Police Bodycam) ಸೆರೆಯಾಗಿದ್ದು, ಅವುಗಳನ್ನು ಈಗ ಬಹಿರಂಗ ಮಾಡಲಾಗಿದೆ.

ಕಪ್ಪು ವರ್ಣದ ಗರ್ಭಿಣಿಗೆ ಪೊಲೀಸ್ ಶೂಟ್ ಮಾಡಿದ ದೃಶ್ಯಗಳು

ಬ್ಲೆಂಡನ್ ಟೌನ್‌ಶಿಪ್ ಪೋಲೀಸ್ ಡಿಪಾರ್ಟ್‌ಮೆಂಟ್ ಹಂಚಿಕೊಂಡ ವೀಡಿಯೊದಲ್ಲಿ, ಮಹಿಳೆ ತನ್ನ ಕಪ್ಪು ಸೆಡಾನ್‌ನಲ್ಲಿ ಕುಳಿತಿರುವುದನ್ನು ಕಾಣಬಹುದು. ಆದರೆ ಅಧಿಕಾರಿಯೊಬ್ಬರು “ಕಾರಿನಿಂದ ಇಳಿಯಿರಿ” ಎಂದು ಪದೇ ಪದೇ ಕೇಳುತ್ತಾರೆ. ಅವಳು ಅದೇ ರೀತಿ, ಯಾಕೆ ಇಳಿಯಬೇಕು ಎಂದು ಪ್ರಶ್ನಿಸುತ್ತಾಳೆ ಮತ್ತು “ನಾನು ಕಾರಿನಿಂದ ಇಳಿಯುವುದಿಲ್ಲ.” ಆಗ ಪೊಲೀಸರು, “ನೀವು ವಸ್ತುಗಳನ್ನು ಕದ್ದಿದ್ದೀರಿ” ಎನ್ನುತ್ತಾರೆ. ಆಗ, ಇಲ್ಲ ನಾನು ಕದ್ದಿಲ್ಲ. ಬೇರೆ ಹುಡುಗಿಯರು ವಸ್ತುಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಉತ್ತರಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಬಳಿಕ, ಇಬ್ಬರು ಪೊಲೀಸರ ಪೈಕಿ ಒಬ್ಬ ಪೊಲೀಸ್ ಯುವತಿಯ ಕಾರು ಮುಂಭಾಗದಲ್ಲಿ ನಿಲ್ಲುತ್ತಾರೆ. ಕಾರಿನಿಂದ ಹೊರ ಬರುವಂತೆ ಕಿರುಚುತ್ತಾನೆ. ಆತನ ಕರೆಯನ್ನು ನಿರ್ಲಕ್ಷಿಸುವ ಯುವತಿಯು ಕಾರಿನ ವೇಗವನ್ನು ಹೆಚ್ಚಿಸುವ ಪ್ರಯತ್ನ ಮಾಡುತ್ತಾಳೆ. ಆಗ ಪೊಲೀಸ್ ಅಧಿಕಾರಿಯು ಆಕೆಯತ್ತ ಗುಂಡು ಹಾರಿಸುತ್ತಾನೆ. ಯುವತಿ ಗುಂಡು ತಗಲುತ್ತದೆ ಮತ್ತು ಕಾರು ನಿಧಾನವಾಗಿ ಕಿರಾಣಿ ಅಂಗಡಿಯ ಇಟ್ಟಿಗೆ ಗೋಡೆಗೆ ಅಪ್ಪಳಿಸುವ ಮೊದಲು ನಿಧಾನವಾಗಿ ಕಾರು ಚಲಿಸುತ್ತಿರುತ್ತದೆ, ಪೊಲೀಸರು ಕಾರು ನಿಲ್ಲಿಸುವಂತೆ ಕೂಗುತ್ತಾರೆ. ಆದರೆ, ಯಾವುದೇ ಪ್ರಯೋಜನವಾಗುವುದಿಲ್ಲ.

ಈ ಸುದ್ದಿಯನ್ನೂ ಓದಿ: ಗಂಡನ ಕಿರುಕುಳ, ಸೀಮಂತ ಮಾಡಿದ ಮೂರೇ ದಿನಕ್ಕೆ ಗರ್ಭಿಣಿ ಆತ್ಮಹತ್ಯೆ

ಎರಡನೇ ಅಧಿಕಾರಿಯು ಬಾಗಿಲನ್ನು ತೆರೆಯಲು ಪ್ರಯತ್ನಿಸಿದರೂ ವಿಫಲನಾಗುತ್ತಾರೆ. ನಂತರ ಅವರು ಕಾರಿನ ಸೆಂಟರ್ ಕನ್ಸೋಲ್‌ನ ಮೇಲೆ ಬಿದ್ದ ಯವತಿಯನ್ನು ಹೊರ ತೆಗೆಯುವುದಕ್ಕಾಗಿ ಆಕೆಯ ಕಡೆಗಿನ ಗಾಜನ್ನು ಒಡೆದು ಹಾಕುತ್ತಾರೆ. ಇಬ್ಬರು ಮಕ್ಕಳ ತಾಯಿಯಾಗಿರುವ ಮತ್ತು ಮತ್ತೊಂದು ಮಗುವಿಗೆ ಜನ್ಮ ನೀಡಲಿದ್ದ ತಾ’ಕಿಯಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆಯಾದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಆಕೆ, ನವೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ, ತಾ’ಕಿಯಾ ಕುಟುಂಬದ ಸದಸ್ಯರು ಪೊಲೀಸರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆಯನ್ನು ತಪ್ಪಿಸಬಹುದಾಗಿತ್ತು ಮಾತ್ರವಲ್ಲದೇ, ಪೊಲೀಸ್ ಅಧಿಕಾರಿಗಳು ತಮಗೆ ನೀಡಿದ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಒಹಿಯೋ ಕ್ರಿಮಿನಲ್ ತನಿಖಾ ಕೇಂದ್ರ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಯನ್ನು ಆರಂಭಿಸಿದೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

T20 World Cup 2024: ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಇನ್ನು ಕೆಲವೇ ಇಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಇದೇ ಮೊದಲ ಬಾರಿಗೆ ಅಮೆರಿಕ ಐಸಿಸಿ ಪಂದ್ಯಾವಳಿ ಆತಿಥ್ಯ ವಹಿಸಿಕೊಂಡಿದೆ. ಸುಸಜ್ಜಿತ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ಡ್ರಾಪ್ ಇನ್ ಪಿಚ್‌ಗಳನ್ನು(Drop-In Pitches) ತರಿಸಿಕೊಂಡಿದೆ. ವಿಶ್ವಕಪ್​ ಪಂದ್ಯಾವಳಿಗಳು ಜೂನ್​ 1ರಿಂದ 29ರ ತನಕ ಸಾಗಲಿದೆ.

ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ.

ಮೂರು ಪಿಚ್‌ಗಳನ್ನು ಈಗಾಗಲೇ ಫ್ಲೋರಿಡಾ, ಟೆಕ್ಸಾಸ್ ಹಾಗೂ ನ್ಯೂಯಾರ್ಕ್ ಕ್ರೀಡಾಂಗಣಗಳಿಗೆ ಅಡವಡಿಸಲಾಗಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಇದನ್ನೂ ಓದಿ T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ. ಬಹುತೇಕ ಇದರ ಕಾಮಗಾರಿ ಮುಕ್ತಾಯ ಕಂಡಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಘರ್ಷಣೆ ಸೇರಿದಂತೆ ಭಾರತದ ಎಲ್ಲಾ ಗುಂಪು-ಹಂತದ ಪಂದ್ಯಗಳಿಗೆ ಈ ಕ್ರೀಡಾಂಗಣವು ಅಣಿಯಾಗಿದೆ. ಅಚ್ಚರಿ ಎಂದರೆ ಈ ಸ್ಟೇಡಿಯಂ ಅನ್ನು ನಿರ್ಮಾಣ ಮಾಡಿದ್ದೇ ಭಾರತ ಮತ್ತು ಪಾಕಿಸ್ತಾನ ಎದುರಿನ ಪಂದ್ಯಕ್ಕಾಗಿ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ದೇಶ

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Revanth Reddy: ನಕಲಿ ವೀಡಿಯೊಗಳನ್ನು ಹಂಚಿಕೊಂಡ ಕೆಲವು ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನೂ ಐದು ಜನರನ್ನು ದೆಹಲಿ ಪೊಲೀಸರು ಕರೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯ ಮತ್ತು ಬಿಜೆಪಿ ನೀಡಿದ ದೂರುಗಳ ನಂತರ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.

VISTARANEWS.COM


on

Revanth Reddy
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದಾರೆ. ದೆಹಲಿ ಪೊಲೀಸರು ಮೇ 1 ರಂದು ರೇವಂತ್ ರೆಡ್ಡಿ ಮತ್ತು ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್​​ಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಕಲಿ ವೀಡಿಯೊಗಳನ್ನು ಹಂಚಿಕೊಂಡ ಕೆಲವು ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನೂ ಐದು ಜನರನ್ನು ದೆಹಲಿ ಪೊಲೀಸರು ಕರೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯ ಮತ್ತು ಬಿಜೆಪಿ ನೀಡಿದ ದೂರುಗಳ ನಂತರ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿದೆ. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಏನು ಹೇಳಿದ್ದರು

ಮುಸ್ಲಿಮರಿಗೆ ಶೇಕಡಾ 4 ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವೀಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಬದಲಾಯಿಸಲಾಗಿತ್ತು. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಅವರು ಮಾತನಾಡಿದ್ದಾರೆ ಎಂದು ಬಿಂಬಿಸಲಾಗಿತ್ತು.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Hassan Pen Drive Case: ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆಗೆ ಚಾಲನೆ ನೀಡಬೇಕಾಗುತ್ತದೆ. ಮೊದಲು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್‌ ನೀಡಿ ಕಾಲಾವಕಾಶವನ್ನು ನಿಗದಿ ಮಾಡಬಹುದು. ಅದಾದ ಬಳಿಕವೂ ಹಾಜರಾಗದೇ ಇದ್ದರೆ ಪ್ರಕರಣದ ತನಿಖೆಯ ಗತಿ ಕುಂಠಿತವಾಗುತ್ತದೆ. ಆದರೆ, ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಿ ಕರೆತರುವ ಸಾಧ್ಯತೆಯೂ ಇದೆ.

VISTARANEWS.COM


on

Prajwal Revanna Hassan Pen Drive Case What will SIT probe look like
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ರಚನೆಯಾಗಿರುವ ಎಸ್‌ಐಟಿಯಿಂದ ಹೇಗೆ ಸಾಗಲಿದೆ? ಪ್ರಜ್ವಲ್‌ ಮುಂದಿರುವ ಕಾನೂನು ಅವಕಾಶಗಳೇನು ಎಂಬ ಬಗ್ಗೆ ಈಗ ಬಹುವಾಗಿ ಚರ್ಚೆಯಾಗುತ್ತಿದೆ.

ಇದು ಹೈಪ್ರೊಫೈಲ್‌ ಕೇಸ್‌ ಆಗಿದ್ದಲ್ಲದೆ, ಮಹಿಳೆಯರ ಮಾನ, ಮರ್ಯಾದೆಯ ವಿಚಾರವಾಗಿದೆ. ಜತೆಗೆ ದೂರುದಾರರ ರಕ್ಷಣೆಗೂ ಸಂಬಂಧಪಟ್ಟಿದೆ. ಈ ಕಾರಣದಿಂದಾಗಿ ಗೌಪ್ಯತೆಯಿಂದ ಸಂತ್ರಸ್ತೆಯಿಂದ ಸಿಆರ್‌ಪಿಸಿ 164 ಹೇಳಿಕೆಯನ್ನು ದಾಖಲು ಮಾಡಲಾಗುತ್ತದೆ. ಮಹಿಳಾ ಅಧಿಕಾರಿಗಳ ಸಮ್ಮುಖದಲ್ಲಿ ವಿಡಿಯೊ ರೆಕಾರ್ಡ್ ಮಾಡಿಕೊಳ್ಳುವ ಮೂಲಕ ಸಂತ್ರಸ್ತೆಯ ದೂರನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಇನ್ನು ದೂರುದಾರೆ ತನ್ನ ಮೇಲೆ ನಡೆದ ಲೈಂಗಿ ದೌರ್ಜನ್ಯದ ಸ್ಥಳವನ್ನೂ ಮಹಜರು ಮಾಡಲಾಗುತ್ತದೆ. ಹೀಗಾಗಿ ಘಟನೆ ನಡೆದ ಸ್ಥಳಕ್ಕೆ ವಿಶೇಷ ತನಿಖಾ ದಳದ ಅಧಿಕಾರಿಗಳು ಬಂದು ಸಂತ್ರಸ್ತೆ ಹೇಳಿದ ರೀತಿ ಸ್ಥಳ ಇದೆಯೇ ಎಂಬುದನ್ನು ಪರಿಶೀಲನೆ ನಡೆಸುತ್ತಾರೆ.

ಇನ್ನು ಆರೋಪಿತ ಸ್ಥಾನದಲ್ಲಿರುವ ವ್ಯಕ್ತಿಯ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗುತ್ತದೆ. ಅದರಲ್ಲಿ ಇರುವಂಥ ಡಾಟ ರೀಟ್ರೈವ್‌ ಮಾಡಲಾಗುತ್ತದೆ. ಜತೆಗೆ ಕಾಲ್ ಡಿಟೇಲ್ಸ್‌, ವಿಡಿಯೊ ಕಾಲ್ ಮಾಹಿತಿ ಸೇರಿದಂತೆ ಎಲ್ಲವನ್ನೂ ಕಲೆ ಹಾಕಲಾಗುತ್ತದೆ. ನಂತರ ಕಲೆ ಹಾಕಿದ ಟೆಕ್ನಿಕಲ್ ಎವಿಡೆನ್ಸ್‌ಗಳ ಸಹಿತ ಇನ್ನಿತರ ಸಾಕ್ಷ್ಯಗಳನ್ನು ಎಫ್‌ಎಸ್ಎಲ್‌ಗೆ ರವಾನೆ ಮಾಡಲಾಗುತ್ತದೆ. ಎಫ್.ಎಸ್.ಎಲ್ ವರದಿ ಆಧಾರದ ಮೇಲೆ ತನಿಖೆ ಹಾಗೂ ವಿಚಾರಣೆ ಆರಂಭವಾಗುತ್ತದೆ.

ಆದರೆ, ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆಗೆ ಚಾಲನೆ ನೀಡಬೇಕಾಗುತ್ತದೆ. ಮೊದಲು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್‌ ನೀಡಿ ಕಾಲಾವಕಾಶವನ್ನು ನಿಗದಿ ಮಾಡಬಹುದು. ಅದಾದ ಬಳಿಕವೂ ಹಾಜರಾಗದೇ ಇದ್ದರೆ ಪ್ರಕರಣದ ತನಿಖೆಯ ಗತಿ ಕುಂಠಿತವಾಗುತ್ತದೆ. ಆದರೆ, ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಿ ಕರೆತರುವ ಸಾಧ್ಯತೆಯೂ ಇದೆ. ಈ ವಿಚಾರವಾಗಿ ಎಸ್‌ಐಟಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಎಲ್ಲವೂ ನಿರ್ಣಯವಾಗುತ್ತದೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಪ್ರಜ್ವಲ್ ರೇವಣ್ಣಗೆ ಇರುವ ಕಾನೂನು ಅವಕಾಶಗಳು?

ಹಾಗಾದರೆ ಈ ಪ್ರಕರಣದಿಂದ ಪಾರಾಗಲು ಪ್ರಜ್ವಲ್‌ ರೇವಣ್ಣ ಅವರಿಗೆ ಕಾನೂನಿನಲ್ಲಿ ಯಾವ ಅವಕಾಶ ಇದೆ ಎಂಬುದನ್ನು ನೋಡುವುದಾದರೆ, ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಬಹುದು. ಅಥವಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ಏಳು ವರ್ಷದ ಒಳಗೆ ಶಿಕ್ಷೆ ಇರುವಂತಹ ಪ್ರಕರಣಗಳಿಗೆ ನೋಟಿಸ್‌ ನೀಡಬಹುದು. ಬಂಧನ ಮಾಡಿದರೂ ಜಾಮೀನು ಸಿಗುವಂತಹ ಪ್ರಕರಣ ಇದಾಗಿದ್ದರಿಂದ ಸದ್ಯ ನಿರೀಕ್ಷಣಾ ಜಾಮೀನು ಹಾಗೂ ಎಫ್‌ಐಆರ್ ಅನ್ನೇ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.

Continue Reading

ಕರ್ನಾಟಕ

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

Drown in Mekedatu: ಮೇಕೆದಾಟು ಬಳಿ ನೀರಲ್ಲಿ ಈಜಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು, ಇಬ್ಬರು ಯುವತಿಯರು ನೀರುಪಾಲಾಗಿದ್ದಾರೆ.

VISTARANEWS.COM


on

Drown in Mekedatu
Koo

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರು ದಾರುಣವಾಗಿ ಮೃತಪಟ್ಟಿರುವ ಘಟನೆ (Drown in Mekedatu) ಸೋಮವಾರ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

5 ಜನರ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರಕ್ಕೆ ತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಗಳು ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಸಾವು

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಮದ ವೃಷಭಾವತಿ ಕರೆಯಲ್ಲಿ ನಡೆದಿದೆ. ಮಜರಾಗೊಲ್ಲಹಳ್ಳಿ ಗ್ರಾಮದಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ತಂದೆ-ಮಗಳು, ಕೆರೆ ಬಳಿ ಸೆಲ್ಫಿ ತೆಗದುಕೊಳ್ಳಲು ಹೋದಾಗ, ಮಗಳು ಕಾಲು ಜಾರಿ ನೀರಗೆ ಬಿದ್ದಿದ್ದಾಳೆ. ಹೀಗಾಗಿ ಮಗಳನ್ನು ರಕ್ಷಿಸಲು ಹೋದ ತಂದೆಯೂ ಮುಳುಗಿದ್ದಾರೆ

ಬೆಂಗಳೂರು ಮೂಲದ ಸಯ್ಯದ್ ಅಯ್ಯೂಬ್ (35) ಹಾಗೂ ಫಾತಿಮಾ (10) ಮೃತ ತಂದೆ, ಮಗಳು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ | Physical Abuse: ಮದುವೆಗೊಪ್ಪದ ಬಾಲಕಿಯ ಅತ್ಯಾಚಾರ; ಕೆನ್ನೆಯ ಮೇಲೆ ಬಿಸಿ ಕಬ್ಬಿಣದಿಂದ ಪಾಗಲ್‌ ಪ್ರೇಮಿ ಹೆಸರು!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ | Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

ಹುಬ್ಬಳ್ಳಿಯ ಗಬ್ಬೂರನಲ್ಲಿ ಅನ್ಯಕೋಮಿನ ಯುವಕನ ಜತೆ ಬಾಲಕಿ ಇದ್ದಳು. ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಾಲಕಿಯನ್ನು ಯುವಕ ಕರೆತಂದಿದ್ದ. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement
T20 World Cup 2024
ಕ್ರೀಡೆ2 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ10 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ14 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ24 mins ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

T20 World Cup 2024
ಕ್ರೀಡೆ31 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ44 mins ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್48 mins ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

facebook whatsapp instagram
ಪ್ರಮುಖ ಸುದ್ದಿ51 mins ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Dubai Airport
EXPLAINER1 hour ago

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

IPL 2024 Points Table
ಕ್ರೀಡೆ1 hour ago

IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌