Vedant Patel | ಭಾರತೀಯ ಮೂಲದ ವೇದಾಂತ್ ಪಟೇಲ್ ಸಾಧನೆಗೆ ಮತ್ತೊಂದು ಗರಿ! - Vistara News

ಪ್ರಮುಖ ಸುದ್ದಿ

Vedant Patel | ಭಾರತೀಯ ಮೂಲದ ವೇದಾಂತ್ ಪಟೇಲ್ ಸಾಧನೆಗೆ ಮತ್ತೊಂದು ಗರಿ!

ಅಮೆರಿಕದ ವಿದೇಶಾಂಗ ಇಲಾಖೆಯಲ್ಲಿ ನಿತ್ಯ ಮಾಧ್ಯಮಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ವೇದಾಂತ್ ಪಟೇಲ್ (Vedant Patel) ನಿರ್ವಹಿಸಿದರು. ಈ ಕೆಲಸ ಮಾಡಿದ ಮೊದಲ ಇಂಡಿಯನ್ ಅಮೆರಿಕನ್ ವ್ಯಕ್ತಿ ಇವರು.

VISTARANEWS.COM


on

Vedant Patel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಸಚಿವಾಲಯದ ಡೆಪ್ಯುಟಿ ಪ್ರಿನ್ಸಿಪಲ್ ವಕ್ತಾರ ವೇದಾಂತ್ ಪಟೇಲ್ (Vedant Patel) ಅವರಿಗೆ, ಇಲಾಖೆಯಲ್ಲಿ ಹೊಸ ಜವಾಬ್ದಾರಿ ದೊರೆತಿದ್ದು, ಇತಿಹಾಸ ನಿರ್ಮಿಸಿದ್ದಾರೆ. ವೇದಾಂತ್ ಪಟೇಲ್ ಅವರು ಇಲಾಖೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ರೀತಿಯ ಜವಾಬ್ದಾರಿ ಹೊತ್ತ ಮೊದಲ ಇಂಡಿಯನ್ ಅಮೆರಿಕನ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಅವರು ರಜೆ ಮೇಲೆ ತೆರಳಿದ್ದಾರೆ. ಕ್ಯಾಲಿಫೋರ್ನಿಯಾ ಮೂಲದ 33 ವರ್ಷದ ವೇದಾಂತ್ ಪಟೇಲ್ ಅವರು ಮಂಗಳವಾರ ವಿದೇಶಾಂಗ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಮೆರಿಕದ ವಿದೇಶಾಂಗ ನೀತಿಯ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಈ ಜವಾಬ್ದಾರಿಯನ್ನು ನಿರ್ವಹಿಸಿದ ಮೊದಲ ಇಂಡಿಯನ್-ಅಮೆರಿಕನ್ ವ್ಯಕ್ತಿಯಾಗಿದ್ದಾರೆ.

ತಮ್ಮ ಈ ಸುದ್ದಿಗೋಷ್ಠಿಯಲ್ಲಿ ಅವರು, ಉಕ್ರೇನ್ ಮೇಲೆ ರಷ್ಯಾದ ಕಾನೂನುಬಾಹಿರ ದಾಳಿ, ಜೆಸಿಪಿಒಎ ಮಾತುಕತೆಗಳು, ಇಂಗ್ಲೆಂಡ್ ಪ್ರಧಾನಿಯಾಗುತ್ತಿರುವ ಲಿಜ್ ಟ್ರಸ್ ಸೇರಿದಂತೆ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅವರು ಮತ್ತೆ ಬುಧವಾರವೂ ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ.

ಜಾಗತಿಕ ವೇದಿಕೆಗಳಲ್ಲಿ ಅಮೆರಿಕವನ್ನು ಪ್ರತಿನಿಧಿಸುವುದು ಅತಿದೊಡ್ಡ ಜವಾಬ್ದಾರಿಯಾಗಿರುತ್ತದೆ. ವೇದಾಂತ್ ಅವರು ಈ ಕೆಲಸವನ್ನು ವೃತ್ತಿಪರತೆಯಿಂದ ಮಾಡಿದ್ದಾರೆ, ಅವರ ಸಂವಹನವು ಸ್ಪಷ್ಟವಾಗಿತ್ತು ಎಂದು ವೈಟ್ ಹೌಸ್‌ನ ಸೀನಿಯರ್ ಅಸೋಸಿಯೇಟ್ ಕಮ್ಯುನಿಕೇಷನ್ ಡೈರೆಕ್ಟರ್ ಆಗಿರುವ ಮ್ಯಾಟ್ ಹಿಲ್ ಅವರು ಟ್ವೀಟ್ ಮಾಡಿದ್ದಾರೆ. ವೇದಾಂತ್ ಅವರ ಸಹದ್ಯೋಗಿಗಳು ಈ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ವೇದಾಂತ್ ಪಟೇಲ್ ಅವರು ಭಾರತದ ಗುಜರಾತ್‌ನಲ್ಲಿ ಜನಿಸಿದ್ದಾರೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆದುಕೊಂಡಿದ್ದಾರೆ. ಈ ಹಿಂದೆ ಅವರು ವೈಟ್‌ಹೌಸ್‌ನಲ್ಲಿ ಅಧ್ಯಕ್ಷ ಜೋ ಬೈಡೆನ್ ಅವರ ಅಸಿಸ್ಟಂಟ್ ಪ್ರೆಸ್ ಸೆಕ್ರೆಟರಿ ಮತ್ತು ವಕ್ತಾರರಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ | Female pilots | ಅಮೆರಿಕಕ್ಕಿಂತಲೂ ದುಪ್ಪಟ್ಟು ಮಹಿಳಾ ಪೈಲಟ್‌ಗಳು ಭಾರತದಲ್ಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು.

VISTARANEWS.COM


on

Lok sabha Election
Koo

ದೇಶದಲ್ಲಿ ಲೋಕಸಭೆ ಚುನಾವಣೆಯ (lok sabha election) ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ (ಏಪ್ರಿಲ್‌ 26) ಶುಕ್ರವಾರ ನಡೆಯುತ್ತಿದೆ. ಮತದಾನವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಭಾರತದಲ್ಲಿ ಚುನಾವಣೆ ನಡೆಯುತ್ತದೆ ಎಂದರೆ ಜಗತ್ತೇ ಅದನ್ನು ಕುತೂಹಲದಿಂದ ವೀಕ್ಷಿಸುತ್ತದೆ. ಯಾಕೆಂದರೆ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ, 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರದಲ್ಲಿ, ಯಾವುದೇ ಹಿಂಸಾಚಾರವಿಲ್ಲದೆ, ಒಂದೇ ಒಂದು ಜೀವಹಾನಿಯಿಲ್ಲದೆ, ಯಾವ ಲೋಪದೋಷವೂ ಇಲ್ಲದಂತೆ, ಜಗತ್ತಿಗೇ ಮಾದರಿಯಾಗಿ ನಡೆಯುವ ಮತದಾನ ಪ್ರಕ್ರಿಯೆ ಹಲವು ದೇಶಗಳಿಗೆ ಅಧ್ಯಯನ ಯೋಗ್ಯವಾಗಿ ಕಾಣುತ್ತದೆ. ದಾಖಲೆ ಸಂಖ್ಯೆಯ ಜನರು ಮತದಾನ ಮಾಡಲು ಏಳೆಂಟು ಹಂತಗಳನ್ನು ತೆಗೆದುಕೊಂಡರೂ, ಒಂದೇ ದಿನದಲ್ಲಿ ಸಂಶಯಕ್ಕೆಡೆಯಿಲ್ಲದಂತೆ ಫಲಿತಾಂಶವನ್ನು ಪಡೆಯುವುದು ವಿಶೇಷ. ಅಮೆರಿಕದಂಥ ದೇಶದಲ್ಲೇ ಚುನಾವಣೆ ಹಲವು ಸಲ ಗೊಂದಲಮಯವಾಗಿರುತ್ತದೆ ಎಂಬುದನ್ನು ನೋಡಿದರೆ, ನಮ್ಮದು ಅಧ್ಯಯನಯೋಗ್ಯವೇ ಸರಿ.

ಪ್ರಸ್ತುತ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಏರಲು ಜನತೆಯ ಆಶೀರ್ವಾದ ಕೋರಿದೆ. ನರೇಂದ್ರ ಮೋದಿಯವರು ಪಕ್ಷಕ್ಕೆ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೆ ಸಮರ್ಥ ನಾಯಕತ್ವ ನೀಡಿದ್ದಾರೆ. ಹಲವು ದಶಕಗಳ ಕಾಲ ದೇಶವನ್ನು ಆಳಿ ಸದ್ಯ ಅಧಿಕೃತ ವಿಪಕ್ಷ ಸ್ಥಾನಮಾನವನ್ನೂ ಹೊಂದಿಲ್ಲದ ಕಾಂಗ್ರೆಸ್‌, ಮರಳಿ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದೆ. ಕಾಂಗ್ರೆಸ್‌ ಪಕ್ಷ ಹಲವು ಮಿತ್ರಪಕ್ಷಗಳನ್ನು ಸೇರಿಸಿಕೊಂಡು ಇಂಡಿಯಾ ಬ್ಲಾಕ್‌ ರಚಿಸಿಕೊಂಡು ಬಿಜೆಪಿಯ ಅಶ್ವಮೇಧವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ. ಚುನಾವಣೆಯ ಪ್ರಚಾರ ಕಣದಲ್ಲಿ ಹಲವು ವಾದವಿವಾದಗಳು, ವಾಗ್ವಾದಗಳು ನಡೆದುಹೋಗಿವೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದು ಮತದಾರನಿಗೆ ಬಿಟ್ಟ ವಿಷಯ. ಮತದಾರ ಸಾಕಷ್ಟು ಬುದ್ಧಿವಂತನಾಗಿದ್ದು, ತನ್ನ ಆಯ್ಕೆಯನ್ನು ಆತ ಮಾಡಬಲ್ಲ.

ಆದರೆ, ಚಿಂತಿಸಬೇಕಾದ ಒಂದು ವಿಷಯವೆಂದರೆ, ಮತದಾನದ ಪ್ರಮಾಣ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ (2019) ಇಡೀ ರಾಜ್ಯದಲ್ಲೇ ಕನಿಷ್ಠ ಪ್ರಮಾಣ (ಶೇ 53.7) ಮತದಾನವಾಗಿತ್ತು. ಬೆಂಗಳೂರು ಸೆಂಟ್ರಲ್‌ನಲ್ಲಿ ಮತದಾನ ಪ್ರಮಾಣ ಸೇಕಡ 54.3, ಬೆಂಗಳೂರು ಉತ್ತರದಲ್ಲಿ ಮತದಾನ ಪ್ರಮಾಣ ಶೇಕಡ 54.7 ಇತ್ತು. ಇದೇ ವೇಳೆ ಬೆಂಗಳೂರು ಗ್ರಾಮಾಂತರದಲ್ಲಿ ಮತದಾನ ಪ್ರಮಾಣ ಶೇಕಡ 64.9 ಇತ್ತು. ಕರ್ನಾಟಕದ ಒಟ್ಟು ಮತದಾನ ಪ್ರಮಾಣ ಶೇಕಡ 68 ಇತ್ತು. ಆದ್ದರಿಂದ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಬೇಕು ಎಂಬ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ. ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಆಯೋಗ ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದೆ. ಹಾಗೆಯೇ ಈ ದಿನ ಸಾರ್ವತ್ರಿಕ ರಜೆಯನ್ನು ನೀಡಲಾಗಿದೆ. ರಜೆಯೆಂದು ಪ್ರವಾಸ ಹೋಗುವ ನಗರದ ಮತದಾರರ ಚಾಳಿಯನ್ನು ತಪ್ಪಿಸಲು ಹೆಚ್ಚಿನ ಪ್ರವಾಸೀ ತಾಣಗಳನ್ನು ಕ್ಲೋಸ್‌ ಮಾಡಲಾಗುತ್ತಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಂಡಿದ್ದಾರೆ. ಭಾರತೀಯ ಚುನಾವಣಾ ಆಯೋಗವು ನವೀನ ಮತ್ತು ವಿನೂತನ ಮತದಾರರ ಜಾಗೃತಿ ಅಭಿಯಾನಗಳನ್ನು ಆಯೋಜಿಸಿರುವುದರ ಜೊತೆಗೆ ಹೋಟೆಲ್ ಉದ್ಯಮಿಗಳು, ಕಂಪನಿಗಳು ಮತ್ತು ಇತರ ಸಂಸ್ಥೆಗಳು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಮತದಾರರನ್ನು ಓಲೈಸಲು ತಮ್ಮನ್ನು ತಾವು ತೊಡಗಿಸಿಕೊಂಡಿವೆ. ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬುಡಕಟ್ಟು ಸಮುದಾಯಗಳಿಗೆ ವಿಶೇಷ ಮತಗಟ್ಟೆ ರಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.

Continue Reading

ಕರ್ನಾಟಕ

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

Food Poisoning : ಅಸ್ವಸ್ಥಗೊಂಡವರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ.

VISTARANEWS.COM


on

food
Koo

ಪಿರಿಯಾಪಟ್ಟಣ: ಮದುವೆ ಮನೆಯಲ್ಲಿ ಸಿದ್ಧಪಡಿಸಲಾಗಿದ್ದ ಊಟ ಮಾಡಿದ (Food Poisoning) ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಹಾಹಾಕಾರ ಉಂಟಾಯಿತು.

ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಕಷ್ಟವಾದಾಗ ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆ ಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಮದುವೆ ಮನೆಯಲ್ಲಿ ಊಟ ತಿಂದವರೇ ತುಂಬಿಕೊಂಡಿದ್ದರು.

ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಏಕಾಏಕಿ ಹಲವರು ಆಸ್ಪತ್ರೆಗೆ ಬಂದ ಕಾರಣ ಕುಶಾಲನಗರದ ಆಸ್ಪತ್ರೆ ಕ್ಲಿನಿಕ್​ಗಳು ತುಂಬಿಕೊಂಡಿದ್ದವು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಸಾಕಷ್ಟು ಮಂದಿ ದಾಖಲಾಗಿದ್ದಾರೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

ಅವರೆಲ್ಲರೂ ಗುರುವಾರ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ್ದರು. ಸಂಜೆಯ ವೇಳೆಗೆ ಏಕಾಏಕಿ ವಾಂತಿ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Continue Reading

ಪ್ರಮುಖ ಸುದ್ದಿ

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

IPL 2024: ಇಲ್ಲಿನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು.

VISTARANEWS.COM


on

IPL 2024
Koo

ಹೈದರಾಬಾದ್​: ಆರ್​ಸಿಬಿ ತಂಡದ ದುರ್ಬಲ ಬೌಲಿಂಗ್ ವಿಭಾಗ ಕೊನೆಗೂ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ತನ್ನ ಪ್ರತಾಪ ತೋರಿಸಿತು. ಹೀಗಾಗಿ ಬೆಂಗಳೂರು ಮೂಲದ ತಂಡ ಹಾಲಿ ಆವೃತ್ತಿಯ ಐಪಿಎಲ್​ನಲ್ಲಿ 2ನೇ ವಿಜಯಕ್ಕೆ ಪಾತ್ರವಾಯಿತು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 35 ರನ್​ಗಳ ಭರ್ಜರಿ ಅಂತರದ ಗೆಲುವನ್ನು ತನ್ನದಾಗಿಸಿಕೊಂಡಿತು. ಇದು ಆರ್​ಸಿಬಿ ತಂಡಕ್ಕೆ ಸತತ ಆರು ಸೋಲುಗಳ ಬಳಿಕ ಸಿಕ್ಕ ಗೆಲುವಿನ ಓಯಸಿಸ್​. ಗೆದ್ದ ಆರ್​​ಸಿಬಿ ತಂಡದ ಆಟಗಾರರ ಮುಖದಲ್ಲಿ ನಗು ಮೂಡಿರಲಿಲ್ಲ. ಆದರೆ, ಆರ್​​ಸಿಬಿಯನ್ನೇ ನೆಚ್ಚಿನ ತಂಡವಾಗಿ ಆಯ್ಕೆ ಮಾಡಿಕೊಂಡಿದ್ದ ಲಕ್ಷಾಂತರ ಅಭಿಮಾನಿಗಳ ಮುಖಯದಲ್ಲಿ ಖುಷಿಯ ಛಾಯೆ ಕಂಡು ಬಂತು.

ಇಲ್ಲಿನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು. ಆದಾಗ್ಯೂ ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇನ್ನೂ 10ನೇ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಎಸ್​ಆರ್​ಎಚ್​ ಟೂರ್ನಿಯಲ್ಲಿ 3ನೇ ಸೋಲಿಗೆ ಒಳಗಾಯಿತು ಹಾಗೂ ಮೂರನೇ ಸ್ಥಾನದಲ್ಲಿ ಉಳಿಯಿತು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು.

ಇದನ್ನೂ ಓದಿ: World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

ಬ್ಯಾಟಿಂಗ್​ನಲ್ಲಿ ಭರ್ಜರಿ ಶಕ್ತಿ ಹೊಂದಿದ್ದ ಎಸ್​ಆರ್​ಎಚ್​ ತಂಡಕ್ಕೆ ಈ ಮೊತ್ತ ಸವಾಲು ಆಗಿರಲಿಲ್ಲ. ಆದಾಗ್ಯೂ ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಆರ್​ಸಿಬಿ ಬೌಲರ್​ಗಳಾದ ಸ್ವಪ್ನಿಲ್​ ಸಿಂಗ್​, ಕರಣ್​ ಶರ್ಮಾ ಹಾಗೂ ಕ್ಯಾಮೆರಾನ್​ ಗ್ರೀನ್​ ಅವರ ತಲಾ 2 ವಿಕೆಟ್​ಗಳ ಬಲದಿಂದಾಗಿ ಆರ್​​ಸಿಬಿ ಎದುರಾಳಿ ತಂಡದ ಬಲವನ್ನು ಕುಗ್ಗಿಸಿರು. ಶಹಬಾಜ್​ ಅಹಮದ್​ 40 ರನ್ ಬಾರಿಸಿ ಎಸ್ಆರ್​ಎಚ್​ ಪರ ಗರಿಷ್ಠ ಸ್ಕೋರರ್​​ ಎನಿಸಿಕೊಂಡರು.

Continue Reading

ಪ್ರಮುಖ ಸುದ್ದಿ

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

lok sabha election: ಚುನಾವಣಾ ಕಾರ್ಯಕ್ಕಾಗಿ ಮಹಿಳಾ ಪೊಲೀಸ್​ ಚಿತ್ರದುರ್ಗಕ್ಕೆ ಬಂದಿದ್ದರು. ಜತೆಗೆ ಅವರು ಒಂದು ವರ್ಷದ ಮಗುವಿನ ಕರೆತಂದಿದ್ದರು. ಕೋಟೆ ನಾಡಿನ ಬಿಸಿಲಿನ ಬೇಗೆಗೆ ತಾಯಿ, ಮಗು ತತ್ತರಗೊಂಡಿದ್ದರು. ಸುಡು ಬಿಸಿಲು ಹಾಗೂ ಕಾಡುವ ಒಂದು ವರ್ಷದ ಮಗುವಿನಿಂದಾಗಿ ಪರದಾಟ ನಡೆಸಿದ್ದರು.

VISTARANEWS.COM


on

lok sabha Election
Koo

ಚಿತ್ರದುರ್ಗ: ಒಂದು ವರ್ಷದ ಹಸುಗೂಸು ಇರುವ ಮಹಿಳಾ ಪೊಲೀಸ್​ ಪೇದೆಯೊಬ್ಬರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಕಾರಣ, ತಾಯಿ ಮಗು ಬಿಸಿಲಲ್ಲಿ ಪರಿತಪಿಸಿದ ಪ್ರಸಂಗ ನಡೆದಿದೆ. ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಸಂದರ್ಭದಲ್ಲಿ ಕಂಡು ಬಂದ ದೃಶ್ಯ ಕಂಡು ಬಂದಿದೆ.

ಚುನಾವಣಾ ಕಾರ್ಯಕ್ಕಾಗಿ ಮಹಿಳಾ ಪೊಲೀಸ್​ ಚಿತ್ರದುರ್ಗಕ್ಕೆ ಬಂದಿದ್ದರು. ಜತೆಗೆ ಅವರು ಒಂದು ವರ್ಷದ ಮಗುವಿನ ಕರೆತಂದಿದ್ದರು. ಕೋಟೆ ನಾಡಿನ ಬಿಸಿಲಿನ ಬೇಗೆಗೆ ತಾಯಿ, ಮಗು ತತ್ತರಗೊಂಡಿದ್ದರು. ಸುಡು ಬಿಸಿಲು ಹಾಗೂ ಕಾಡುವ ಒಂದು ವರ್ಷದ ಮಗುವಿನಿಂದಾಗಿ ಪರದಾಟ ನಡೆಸಿದ್ದರು.

ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆ ಸಿಬ್ಬಂದಿ ಶರಣಮ್ಮ ರದಾಡಿದ ಪೊಲೀಸ್​ ಪೇದೆ. ತಮ್ಮ ಒಂದು ವರ್ಷದ ಮಗುವಿನ ಜೊತೆ ಚುನವಣಾ ಕಾರ್ಯಕ್ಕೆ ಹಾಜರಾಗಿದ್ದ ಶರಣಮ್ಮ. ಊಟ ಮಾಡಲೂ ಬಿಡದೇ ತಾಯಿಗೆ ಮಗು ತಾಯಿಗೆ ಕಾಡಿಸುತ್ತಿತ್ತು. ತಾಯಿ, ಮಗುವಿನ ಪರದಾಟ ಕಂಡು ಉಳಿದ ಸಿಬ್ಬಂದಿ ಅವರ ನೆರವಿಗೆ ಬಂದಿದ್ದರು.

ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ

ಬೆಂಗಳೂರು: ಸಿಲಿಕಾನ್‌ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲ ಕರೆಯಿಸಿಕೊಳ್ಳುವ ಬೆಂಗಳೂರು ಬಹುತೇಕ ಎಲ್ಲರಿಗೂ ಪ್ರಿಯ. ಹೀಗೆ ಎಲ್ಲರ ನೆಚ್ಚಿನ ನಮ್ಮ ಬೆಂಗಳೂರು ಬಗ್ಗೆ ಹಲವರ ಆಕ್ಷೇಪ ಇರುವುದು ಟ್ರಾಫಿಕ್‌ ವಿಚಾರದಲ್ಲಿ. ಟ್ರಾಫಿಕ್‌ ಸಮಸ್ಯೆ ಬೆಂಗಳೂರಿಗರನ್ನು ಹೆಚ್ಚಿನ ಸಂದರ್ಭಗಳಲ್ಲಿ ಹೈರಾಣಾಗಿಸುತ್ತದೆ (Bengaluru Traffic). ಬೆಂಗಳೂರಿನ ಈ ಟ್ರಾಫಿಕ್‌ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ. ಬೆಂಗಳೂರು ಟ್ರಾಫಿಕ್‌ ಬಗ್ಗೆ ತಹೇವಾರಿ ಕಥೆ ಹುಟ್ಟಿಕೊಳ್ಳುತ್ತದೆ. ಟ್ರಾಫಿಕ್‌ಗೆ ಸಿಲುಕಿ ಅನೇಕ ವಿಶಿಷ್ಟ ಸಂಗತಿ ಜರಗುತ್ತವೆ. ಅದಕ್ಕೆ ತಕ್ಕ ಉದಾಹರಣೆ ಎನ್ನುವಂತಿದೆ ಈ ವೈರಲ್‌ ವಿಡಿಯೊ (Viral Video). ಅಷ್ಟಕ್ಕೂ ಈ ವಿಡಿಯೊದಲ್ಲಿ ಏನಿದೆ? ಇಲ್ಲಿದೆ ವಿವರ.

ಇದನ್ನೂ ಓದಿ: khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

ಟ್ರಾಫಿಕ್‌ನಲ್ಲಿ ಸಿಕ್ಕಿಹಾಕಿಕೊಂಡ ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಅಲ್ಲೇ ಆನ್‌ಲೈನ್‌ ಮೀಟಿಂಗ್‌ನಲ್ಲಿ ಭಾಗಿಯಾಗುತ್ತಾರೆ. ʼವರ್ಕ್‌ ಫ್ರಮ್‌ ಟ್ರಾಫಿಕ್‌ʼ ಎನ್ನುವ ಶೀರ್ಷಿಕೆಯಡಿ ವಿಡಿಯೊವನ್ನು ಶೇರ್‌ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದು ಸಾಮಾನ್ಯ ಎಂದೂ ಬರೆಯಲಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ.

ವಿಡಿಯೊದಲ್ಲಿ ಏನಿದೆ?
ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ಮಹಿಳೆ ಸ್ಕೂಟರ್‌ ಅನ್ನು ಒಂದು ಬದಿಗೆ ನಿಲ್ಲಿಸಿ ಆನ್‌ಲೈನ್‌ ಮೀಟಿಂಗ್‌ಗೆ ಹಾಜರಾಗುತ್ತಾರೆ. ಕ್ಯಾಮೆರಾವನ್ನು ಮಹಿಳೆಯ ಮೊಬೈಲ್‌ಗೆ ಝೂಮ್‌ ಮಾಡಿದಾಗ ಅವರು ಮೀಟಿಂಗ್‌ನಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗುತ್ತದೆ. ಜತೆಗೆ ವಿಡಿಯೊ ಹಲವು ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್‌ ಜಾಮ್‌ ಆಗಿರುವುದನ್ನು ತೋರಿಸುತ್ತದೆ. ಮಹಿಳೆಗೆ ಕರ್ತವ್ಯ ಪ್ರಜ್ಞೆಗೆ ಹಲವರು ಶಬ್ಬಾಶ್‌ಗಿರಿ ತಿಳಿಸಿದ್ದಾರೆ.

ಆಧುನಿಕ ಯುಗದಲ್ಲಿ ವೈಯಕ್ತಿಕ ಬದುಕು ಮತ್ತು ಉದ್ಯೋಗವನ್ನು ಸಮತೋಲನಗೊಳಿಸಲೇಬೇಕಾದ ಅನಿವಾರ್ಯತೆಯನ್ನು ಇದು ಒತ್ತಿ ಹೇಳುತ್ತದೆ. ಜತೆಗೆ ಡಿಜಿಟಲ್‌ ಫ್ಲಾಟ್‌ಫಾರ್ಮ್‌ಗಳ ಮೇಲೆ ಹೆಚ್ಚುತ್ತಿರುವ ಅವಲಂಬನೆಯನ್ನೂ ಇದು ಪ್ರತಿನಿಧಿಸುತ್ತದೆ.

Continue Reading
Advertisement
Lok sabha Election
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

food
ಕರ್ನಾಟಕ3 hours ago

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

PM Narendra Modi will visit Sirsi on April 28
ಉತ್ತರ ಕನ್ನಡ3 hours ago

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Bus Driver attacked
ಕರ್ನಾಟಕ3 hours ago

Bus driver Attacked : ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಠಾಣೆ ಮುಂಭಾಗ ಧರಣಿ

IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

Viral News
ವೈರಲ್ ನ್ಯೂಸ್3 hours ago

Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

lok sabha Election
ಪ್ರಮುಖ ಸುದ್ದಿ3 hours ago

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Car Accident
ಪ್ರಮುಖ ಸುದ್ದಿ4 hours ago

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Narendra Modi
ದೇಶ4 hours ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

khalistan movement
ಪ್ರಮುಖ ಸುದ್ದಿ4 hours ago

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ10 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ11 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ14 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202416 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು4 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌