60 ವರ್ಷಗಳಿಂದ ಒಂದಿನವೂ ನಿದ್ದೆ ಮಾಡದ ಈ ಅಜ್ಜ ಬಲು ಗಟ್ಟಿ; ಯಾಕೆ ಹೀಗೆ? ಏನು ಕುಡೀತಾರೆ ಇವರು! - Vistara News

ವಿದೇಶ

60 ವರ್ಷಗಳಿಂದ ಒಂದಿನವೂ ನಿದ್ದೆ ಮಾಡದ ಈ ಅಜ್ಜ ಬಲು ಗಟ್ಟಿ; ಯಾಕೆ ಹೀಗೆ? ಏನು ಕುಡೀತಾರೆ ಇವರು!

ನಿದ್ರಾಹೀನ ಅಜ್ಜನ ಪರಿಚಯವನ್ನು ಈಗ ಯೂಟ್ಯೂಬರ್​ ಡ್ರೂ ಬಿನ್ಸ್ಕಿ ಎಂಬುವರು ತಮ್ಮ ಚಾನೆಲ್​​ನಲ್ಲಿ ಮಾಡಿಸಿದ್ದಾರೆ. ತಾವ್ಯಾಕೆ ನಿದ್ದೆ ಮಾಡಲು ಸಾಧ್ಯವಿಲ್ಲ ಎಂಬುದನ್ನು ಅಜ್ಜ ನಾಕ್​ ಹೇಳಿಕೊಂಡಿದ್ದಾರೆ.

VISTARANEWS.COM


on

Thai Ngoc
ಥಾಯ್​ ನಾಕ್​​​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮಗೆಲ್ಲ ಒಂದು ದಿನ ನಿದ್ದೆ ಆಗಿಲ್ಲವೆಂದರೆ ಮರುದಿನ ಸುಸ್ತು ಅಂತೀವಿ. ಅದರಲ್ಲೂ ಮೂರ್ನಾಲ್ಕು ದಿನ ನೇರವಾಗಿ ನಿದ್ದೆಗೆಟ್ಟರೆ (Insomnia) ಮುಗಿದೇ ಹೋಯಿತು, ಅನಾರೋಗ್ಯಕ್ಕೀಡಾಗೇಬಿಡುತ್ತೇವೆ. ಆದರೆ ಈ ಅಜ್ಜನನ್ನು ನೋಡಿ, ಬರೋಬ್ಬರಿ 60ವರ್ಷಗಳಿಂದ ನಿದ್ದೆಯನ್ನೇ ಮಾಡಿಲ್ಲವಂತೆ. ಹಾಗಂತ, ಅದರಿಂದ ಅಡ್ಡಪರಿಣಾಮವೇನೂ ಆಗಿಲ್ಲ. ಇವರು ಕಾಯಿಲೆ ಬಿದ್ದು ಆಸ್ಪತ್ರೆಯನ್ನೂ ಸೇರಿಲ್ಲ. ದೈಹಿಕವಾಗಿ-ಮಾನಸಿಕವಾಗಿ ಫುಲ್ ಫಿಟ್ ಆಗಿದ್ದಾರೆ. ಅಂದಹಾಗೇ, ಈ ಅಜ್ಜನ ಹೆಸರು ಥಾಯ್​ ನಾಕ್​​​ (Thai Ngoc). ವಿಯೆಟ್ನಾಂನವರು. ಇವರಿಗೆ ಈಗ 80ವರ್ಷ. 1962ರಿಂದಲೂ ಅಜ್ಜ ನಿದ್ದೆಯಿಲ್ಲದೆ ಕಳೆಯುತ್ತಿದ್ದಾರೆ. ಇವರ ಸುದ್ದಿಯೀಗ ಭರ್ಜರಿ ವೈರಲ್ (Viral News) ಆಗುತ್ತಿದೆ.

ಹೀಗೆ ನಿದ್ರಾಹೀನ ಅಜ್ಜನ ಪರಿಚಯವನ್ನು ಈಗ ಯೂಟ್ಯೂಬರ್​ ಡ್ರೂ ಬಿನ್ಸ್ಕಿ ಎಂಬುವರು ತಮ್ಮ ಚಾನೆಲ್​​ನಲ್ಲಿ ಮಾಡಿಸಿದ್ದಾರೆ. ತಾವ್ಯಾಕೆ ನಿದ್ದೆ ಮಾಡಲು ಸಾಧ್ಯವಿಲ್ಲ ಎಂಬುದನ್ನು ಅಜ್ಜ ನಾಕ್​ ಹೇಳಿಕೊಂಡಿದ್ದಾರೆ. ಬಾಲ್ಯದಲ್ಲಿ ಒಂದು ಜ್ವರ ಬಂದಿತ್ತು. ಆ ಜ್ವರದ ಕಾರಣಕ್ಕೇ ನಿದ್ದೆ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಅವರ ಪತ್ನಿಯಾಗಲಿ, ಮಕ್ಕಳಾಗಲೀ, ನೆರೆಹೊರೆಯವರಾಗಲೀ ನಾಕ್ ನಿದ್ದೆ ಮಾಡಿದ್ದನ್ನು ಒಂದಿನವೂ ನೋಡಿಲ್ಲ. ಇನ್ನು ಯೂಟ್ಯೂಬರ್​ ಡ್ರೂ ಬಿನ್ಸ್ಕಿ ಕೂಡ ಒಂದು ರಾತ್ರಿ ಥಾಯ್​ ನಾಕ್ ಜತೆ ಕಳೆದಿದ್ದಾರೆ. ರಾತ್ರಿಯೆಲ್ಲ ಇವರು ಮಾತಾಡುತ್ತ, ಸಿಗರೇಟ್ ಕತ್ತಿಸುತ್ತ ಕುಳಿತಿದ್ದರು. ಮುಂಜಾನೆ ನಾಲ್ಕು ಗಂಟೆಹೊತ್ತಿಗೆ ಒಮ್ಮೆ ಮಲಗಿದರು. ಆದರೆ ಅವರ ಕಣ್ಣಿಗೆ ನಿದ್ದೆ ಹತ್ತಲಿಲ್ಲ ಎಂದು ಯೂಟ್ಯೂಬರ್ ಹೇಳಿಕೊಂಡಿದ್ದಾರೆ. ‘ಅಜ್ಜ ನಾಕ್​ಗೆ ನಿದ್ದೆ ಮಾಡಬೇಕು ಅನ್ನಿಸುತ್ತದೆ. ಆದರೆ ಅವರು ಶಾಶ್ವತವಾಗಿ ನಿದ್ರಾಹೀನತೆ ಸ್ಥಿತಿ ತಲುಪಿದ್ದಾರೆ’ ಎಂದು ತಿಳಿಸಿದ್ದಾರೆ. ಅಂದ ಹಾಗೇ, ಈ ಅಜ್ಜ ಸದಾ ಗ್ರೀನ್ ಟೀ ಮತ್ತು ರೈಸ್ ವೈನ್​ ಕುಡಿಯುತ್ತಾರಂತೆ.

ಇದನ್ನೂ ಓದಿ: Viral Video: ಏಕಾಏಕಿ ಕೆಂಪು ಬಣ್ಣಕ್ಕೆ ತಿರುಗಿದ ನದಿ; ಆತಂಕದ ಮಧ್ಯೆಯೇ ಕಾರಣ ಹೇಳಿದ ಬಿಯರ್​ ಫ್ಯಾಕ್ಟರಿ

ಇನ್ನು ನಾಕ್ ಬಗ್ಗೆ ವಿಡಿಯೊ ನೋಡಿದ ಹಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. 1955ರಿಂದ ವಿಯೆಟ್ನಾಂನಲ್ಲಿ ಯುದ್ಧ ಶುರವಾಗಿ 1975ರವರೆಗೂ ನಡೆದಿತ್ತು. ಈ ಯುದ್ಧದಲ್ಲಿ ನಾಕ್​ ಕೈಗಳಿಗೆ ಹಾನಿಯಾಗಿದೆ. ಈ ಯುದ್ಧದ ಸಂದರ್ಭದಲ್ಲಿ ಅನೇಕಾನೇಕರು ಮಾನಸಿಕ ಮತ್ತು ದೈಹಿಕ ಅಸ್ವಸ್ಥತೆಗೆ ಒಳಗಾಗಿದ್ದಾರೆ. ಅದರಲ್ಲೂ ಅಂದಿನ ಯುದ್ಧ ಕಣ್ಣಾರೆ ಕಂಡವರು ಹಲವರು ಆಘಾತಕಾರಿ ಮಾನಸಿಕ ಒತ್ತಡ (PTSD)ಕ್ಕೆ ಒಳಗಾಗಿದ್ದಾರೆ. ಅಂದರೆ ಯಾವುದಾದರೂ ಶಾಕಿಂಗ್, ಆಘಾತಕಾರಿ ಘಟನೆಯನ್ನು, ಸಂದರ್ಭವನ್ನು ನೋಡಿದಾಗ ಉಂಟಾಗುವ ಅಸ್ವಸ್ಥತೆ. ನಾಕ್ ಕೂಡ ಅಂಥ ಪಿಟಿಎಸ್​ಡಿ ಸಮಸ್ಯೆಯಿಂದಲೇ ಹೀಗೆ ನಿದ್ರಾಹೀನತೆಯಿಂದ ಬಳಲುತ್ತಿರಬಹುದು ಎಂದು ಹೇಳಲಾಗಿದೆ. ಹಲವು ವೈದ್ಯರು ನಾಕ್​ರನ್ನು ತಪಾಸಣೆ, ವಿವಿಧ ಪರೀಕ್ಷೆಗೆ ಒಳಪಡಿಸಿದ್ದಾರೆ. ಆದರೆ ಅವರಿಗೂ ನೈಜ ಕಾರಣ ಗೊತ್ತಾಗಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Landslide: ಪಪುವಾ ನ್ಯೂಗಿನಿಯಾದಲ್ಲಿ ಯಮರೂಪಿ ಭೂಕುಸಿತಕ್ಕೆ 670 ಜನ ಬಲಿ; ಊರಿಗೂರೇ ಮಸಣ!

Landslide: ಶುಕ್ರವಾರದಿಂದಲೂ ಸಾಲು ಸಾಲು ಭೂಕುಸಿತ ಸಂಭವಿಸಿವೆ. ಶುಕ್ರವಾರವೇ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಇದಾದ ಬಳಿಕ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಸಂಬಂಧಿಕರನ್ನು ಕಳೆದುಕೊಂಡವರ ದುಃಖವು ಮುಗಿಲುಮುಟ್ಟಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮೃತರ ಸಂಬಂಧಿಕರು ಶವಗಳನ್ನು ಹೊರತೆಗೆಯಲು ಭೂಮಿ ಅಗೆಯುತ್ತಿದ್ದಾರೆ. ಇದರಿಂದಾಗಿ ಜನರನ್ನು ನಿಯಂತ್ರಿಸುವುದು ಕೂಡ ಸಿಬ್ಬಂದಿಗೆ ಕಷ್ಟವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Landslide
Koo

ಪೋರ್ಟ್‌ ಮೋರ್‌ಸ್ಬಿ: ಪಪುವಾ ನ್ಯೂಗಿನಿಯಾದಲ್ಲಿ (Papua New Guinea) ಕಂಡು ಕೇಳರಿಯದ ಭೂಕುಸಿತ (Landslide) ಸಂಭವಿಸಿದ್ದು, ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ. ಸಾವಿರಾರು ಜನ ಗಾಯಗೊಂಡಿದ್ದು, ನೂರಾರು ಜನ ಭೂಮಿ ಅವಶೇಷಗಳ ಅಡಿಯಲ್ಲಿ ಹುದುಗಿಹೋಗಿವೆ. ಸಾವಿರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ. ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ. ಪಪುವಾ ನ್ಯೂಗಿನಿಯಾದಲ್ಲಿ ಇತ್ತೀಚಿನ ದಶಕಗಳಲ್ಲಿ ಸಂಭವಿಸಿದ ಭೀಕರ ದುರಂತ ಇದಾಗಿದೆ ಎಂದು ಹೇಳಲಾಗುತ್ತಿದೆ.

ಎಂಗಾ ಪ್ರಾಂತ್ಯದ ಯಂಬಾಳಿ ಗ್ರಾಮದ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಭಾರಿ ಪ್ರಮಾಣದ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. “ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ. 150 ಮನೆಗಳು ಭೂಮಿಯಲ್ಲಿ ಹುದುಗಿಹೋಗಿವೆ. ಮಳೆಯ ನೀರು ಇನ್ನೂ ಹರಿಯುತ್ತಿರುವ ಕಾರಣ ಜನರ ರಕ್ಷಣೆಯು ಕಷ್ಟವಾಗುತ್ತಿದೆ. ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಶ್ವಸಂಸ್ಥೆಯು ಮಾಹಿತಿ ನೀಡಿದೆ.

ಶುಕ್ರವಾರದಿಂದಲೂ ಸಾಲು ಸಾಲು ಭೂಕುಸಿತ ಸಂಭವಿಸಿವೆ. ಶುಕ್ರವಾರವೇ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಇದಾದ ಬಳಿಕ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಸಂಬಂಧಿಕರನ್ನು ಕಳೆದುಕೊಂಡವರ ದುಃಖವು ಮುಗಿಲುಮುಟ್ಟಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮೃತರ ಸಂಬಂಧಿಕರು ಶವಗಳನ್ನು ಹೊರತೆಗೆಯಲು ಭೂಮಿ ಅಗೆಯುತ್ತಿದ್ದಾರೆ. ಇದರಿಂದಾಗಿ ಜನರನ್ನು ನಿಯಂತ್ರಿಸುವುದು ಕೂಡ ಸಿಬ್ಬಂದಿಗೆ ಕಷ್ಟವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅವಶೇಷಗಳ ಅಡಿಯಲ್ಲಿ ಯಾರಾದರೂ ಬದುಕಿದ್ದಾರೇನೋ ಎಂಬ ವಿಶ್ವಾಸದಿಂದ ಭೂಮಿಯನ್ನು ಅಗೆಯಲಾಗುತ್ತಿದೆ. ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಜನರು ಕೂಡ ಇದಕ್ಕೆ ಸಾಥ್‌ ನೀಡುತ್ತಿದ್ದಾರೆ. ಆದರೆ, ಗಾಯಾಳುಗಳ ಬದಲು ಶವಗಳನ್ನೇ ಹೊರ ತೆಗೆಯುವಂತಾಗಿದೆ. ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನಲ್ಲಿ 4 ಸಾವಿರ ಜನ ವಾಸವಿದ್ದರು. ದಿಢೀರನೆ ಭೂಕುಸಿತ ಉಂಟಾದ ಕಾರಣ ಇಡೀ ಗ್ರಾಮವೇ ನರಕಸದೃಶವಾಗಿದೆ ಎಂಬುದಾಗಿ ಮಾಧ್ಯಮಗಳ ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: LandSlide: ಫಿಲಿಪ್ಪೀನ್ಸ್‌ನ ಚಿನ್ನದ ಗಣಿಯಲ್ಲಿ ಭೂಕುಸಿತ, 54 ಮಂದಿ ಸಮಾಧಿ

Continue Reading

ವಿದೇಶ

Iran-Israel Conflict: “ಅಚ್ಚರಿಯ ದಾಳಿ ನಿರೀಕ್ಷಿಸಿ”- ಇಸ್ರೇಲ್‌ಗೆ ಇರಾನ್‌ನಿಂದ ವಾರ್ನಿಂಗ್‌

Iran-Israel Conflict: ಹಿಜ್ಬುಲ್ಲಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹಸನ್‌ ನಸ್ರಲ್ಲಾ ಸ್ಥಳೀಯ ಮಾಧ್ಯಮಕ್ಕೆ ನೀಡಿದ ಭಾಷಣದಲ್ಲಿ ಇಸ್ರೇಲ್‌ಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. “ಪ್ಯಾಲೇಸ್ಟಿನಿಯನ್ ಹಮಾಸ್ ಗುಂಪು ಅಕ್ಟೋಬರ್ 7 ರಂದು ನಡೆಸಿದ ದಾಳಿಯ ನಂತರ ಇಸ್ರೇಲ್ ಗಾಜಾದಲ್ಲಿ ಮಿಲಿಟರಿ ಆಕ್ರಮಣವನ್ನು ನಡೆಸುತ್ತಿದ್ದು, ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸದ್ಯದಲ್ಲೇ ನಮ್ಮಿಂದ ಇಸ್ರೇಲ್‌ ಒಂದು ಅಚ್ಚರಿ ದಾಳಿಯನ್ನು ನಿರೀಕ್ಷಿಸಬಹುದು ಎಂದು ಎಚ್ಚರಿಸಿದ್ದಾರೆ.

VISTARANEWS.COM


on

Iran-Israel Conflict
Koo

ಇರಾನ್‌: ಇಸ್ರೇಲ್‌-ಗಾಜಾ(Israel-Gaza) ಪಟ್ಟಣದ ನಡುವಿನ ಸಂಘರ್ಷ ಎಂಟು ತಿಂಗಳು ಕಳೆದರೂ ಬೂದಿ ಮುಚ್ಚಿದ ಕೆಂಡದಂತಿದೆ. ಇದೀಗ ಇರಾನ್‌ ಬೆಂಬಲಿತ ಸಂಘಟನೆಯಾಗಿರುವ ಹಿಜ್ಬೊಲ್ಲಾ(Hezbollah), ಇಸ್ರೇಲ್‌ಗೆ ಬಿಗ್‌ ವಾರ್ನಿಂಗ್‌ ಒಂದನ್ನು ಕೊಟ್ಟಿದೆ. ತನ್ನ ಕಡೆಯಿಂದ ಇಸ್ರೇಲ್‌ ಒಂದು ಅಚ್ಚರಿಯ ದಾಳಿಯನ್ನು ನಿರೀಕ್ಷಿಸಬಹುದು ಎಂಬ ಎಚ್ಚರಿಕೆ ಸಂದೇಶವನ್ನು ಹಿಜ್ಬೊಲ್ಲಾ ರವಾನಿಸಿದೆ. ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ದುರಂತ ಸಾವಿನ ಬೆನ್ನಲ್ಲೇ ಈ ಸಂದೇಶ ಇರಾನ್‌ನಿಂದ ಇಸ್ರೇಲ್‌ಗೆ ರವಾನೆ ಆಗಿದ್ದು(Iran-Israel Conflict), ಮಹಾಯುದ್ಧದ ಮುನ್ಸೂಚನೆಯಂತೆ ಕಾಣುತ್ತಿದೆ.

ಹಿಜ್ಬುಲ್ಲಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹಸನ್‌ ನಸ್ರಲ್ಲಾ ಸ್ಥಳೀಯ ಮಾಧ್ಯಮಕ್ಕೆ ನೀಡಿದ ಭಾಷಣದಲ್ಲಿ ಇಸ್ರೇಲ್‌ಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. “ಪ್ಯಾಲೇಸ್ಟಿನಿಯನ್ ಹಮಾಸ್ ಗುಂಪು ಅಕ್ಟೋಬರ್ 7 ರಂದು ನಡೆಸಿದ ದಾಳಿಯ ನಂತರ ಇಸ್ರೇಲ್ ಗಾಜಾದಲ್ಲಿ ಮಿಲಿಟರಿ ಆಕ್ರಮಣವನ್ನು ನಡೆಸುತ್ತಿದ್ದು, ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ನಮ್ಮ ಗುರಿ ಇನ್ನೂ ತಲುಪಿಲ್ಲ. ಅದನ್ನು ತಲುಪಲು ಇನ್ನೂ ಐದು ವರ್ಷಗಳು ಬೇಕಾಗಬಹುದು ಎಂದು ಸ್ವತಃ ಇಸ್ರೇಲ್‌ನ ಭದ್ರತಾ ಮಂಡಳಿ ಮುಖ್ಯಸ್ಥ ಹೇಳಿದ್ದಾರೆ. ಅದೂ ಅಲ್ಲದೇ ಇಸ್ರೇಲ್ ತನ್ನ ಮಿಲಿಟರಿ ಆಕ್ರಮಣವನ್ನು ತಕ್ಷಣವೇ ನಿಲ್ಲಿಸಲು ಅಂತರಾಷ್ಟ್ರೀಯ ನ್ಯಾಯಾಲಯದ (ICJ) ಆದೇಶ ಇದ್ದರೂ ರಫಾದ ಮೇಲೆ ಹಿಂಸಾತ್ಮಕ ದಾಳಿಗಳನ್ನು ನಡೆಸುತ್ತಿದೆ ಮತ್ತು ಅಂತರರಾಷ್ಟ್ರೀಯ ನಿರ್ಣಯಗಳನ್ನು ಗೌರವಿಸುತ್ತಿಲ್ಲ ಎಂದು ನಸ್ರಲ್ಲಾ ಆರೋಪಿಸಿದರು. ಹೀಗಾಗಿ ಸದ್ಯದಲ್ಲೇ ನಮ್ಮಿಂದ ಇಸ್ರೇಲ್‌ ಒಂದು ಅಚ್ಚರಿ ದಾಳಿಯನ್ನು ನಿರೀಕ್ಷಿಸಬಹುದು ಎಂದು ಎಚ್ಚರಿಸಿದ್ದಾರೆ.

ಅಫಘಾನಿಸ್ತಾನದಲ್ಲಿ ಉಗ್ರರ ಆಡಳಿತ, ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ, ಹಮಾಸ್‌ ಉಗ್ರರು ಹಾಗೂ ಇಸ್ರೇಲ್‌ ನಡುವಿನ ಸಮರವು ಜಾಗತಿಕ ಅಸ್ಥಿರತೆ ಉಂಟಾಗಿರುವ ಬೆನ್ನಲ್ಲೇ ಇಸ್ರೇಲ್‌ ಮೇಲೆ ಇರಾನ್‌ ದಾಳಿ ಮಾಡಿತ್ತು ಇಸ್ರೇಲ್‌ನ ಟೆಲ್‌ಅವಿವ್‌ ಮೇಲೆ ಇರಾನ್‌ 200ಕ್ಕೂ ಅಧಿಕ ಡ್ರೋನ್‌ ಹಾಗೂ ಕ್ಷಿಪಣಿಗಳ ಮೂಲಕ ದಾಳಿ (Israel Iran War) ಮಾಡಿತ್ತು. ಸುತ್ತಲೂ ಇಸ್ಲಾಮಿಕ್‌ ದೇಶಗಳನ್ನೇ ಒಳಗೊಂಡಿರುವ, ಶತ್ರುರಾಷ್ಟ್ರಗಳ ಭೀತಿ ಇದ್ದರೂ ಪ್ರತಿದಾಳಿ ಮೂಲಕ ಸೆಟೆದು ನಿಲ್ಲುವ ಇಸ್ರೇಲ್‌ ಇರಾನ್‌ ದಾಳಿಯಿಂದ ತತ್ತರಿಸಿತ್ತು.

ಇದನ್ನೂ ಓದಿ:Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

ಇನ್ನು ಕಳೆದ ವಾರ ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ಅವರ ಜೊತೆಗಿದ್ದ ಎಂಟು ಮಂದಿ ದುರ್ಮರಣಕ್ಕೀಡಾಗಿದ್ದರು. ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಮತ್ತು ಇತರ ಗಣ್ಯರು ಅಜರ್‌ಬೈಜಾನ್‌ಗೆ ತೆರಳಿದ್ದರು.
ದುರಂತ ಸಾವನ್ನಪ್ಪಿದ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವಿನ ಬೆನ್ನಲ್ಲೇ ಇದೊಂದು ಆಕಸ್ಮಿಕ ಘಟನೆ ಅಲ್ಲ ವಿಧ್ವಂಸಕ ಕೃತ್ಯ ಎಂಬ ಶಂಕೆ ವ್ಯಕ್ತವಾಗಿತ್ತು. ಪ್ರಪಂಚಾದ್ಯಂತ ಇರಾನ್‌ನ ಬದ್ಧ ವೈರಿ ರಾಷ್ಟ್ರವಾಗಿರುವ ಇಸ್ರೇಲ್‌(Israel)ನ ಕುಕೃತ್ಯ ಎಂಬ ಅನುಮಾನವೂ ವ್ಯಕ್ತವಾಗಿತ್ತು. ಆದರೆ ಈ ಎಲ್ಲಾ ಅನುಮಾನಗಳಿಗೆ ಇಸ್ರೇಲ್‌ ತೆರೆ ಎಳೆಯುವ ಪ್ರಯತ್ನ ಮಾಡಿತ್ತು. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್‌ ಈ ದುರಂತಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿತ್ತು. ರೂಟರ್ಸ್‌ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್‌ ಅಧಿಕಾರಿಗಳು, ರೈಸಿ ಸಾವಿಗೂ ಇಸ್ರೇಲ್‌ಗೂ ಯಾವುದೇ ಸಂಬಂಧ ಇಲ್ಲ. ಹೆಲಿಕಾಪ್ಟರ್‌ ದುರಂತದಲ್ಲಿ ಇಸ್ರೇಲ್‌ ಕೈವಾಡ ಇದೆ ಎಂಬ ಆರೋಪ ನಿರಾಧಾರ. ಈ ದುರ್ಘಟನೆಗೂ ಇಸ್ರೇಲ್ಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದೆ.

Continue Reading

ವಿದೇಶ

Mob Attacks: ಕುರಾನ್ ಅಪವಿತ್ರ ನೆಪ; ಪಾಕಿಸ್ತಾನದಲ್ಲಿ ಕ್ರಿಶ್ಚಿಯನ್ನರ ಮೇಲೆ ಮುಸ್ಲಿಮರ ದಾಳಿ

ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ನೂರಾರು ಜನರು ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಸಮುದಾಯದ ಮೇಲೆ ದಾಳಿ (Mob Attacks) ನಡೆಸಿದರು.

VISTARANEWS.COM


on

By

Mob Attacks
Koo

ಪಾಕಿಸ್ತಾನ: ಕ್ರಿಶ್ಚಿಯನ್ (Christian) ವ್ಯಕ್ತಿಯೊಬ್ಬರು ಕುರಾನ್ (Quran) ಅನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನದ (Pakistan) ಸರಗೋಧದಲ್ಲಿ (Sargodha) ಅವರ ಶೂ ತಯಾರಿಸುವ ಕಾರ್ಖಾನೆಯನ್ನು ನೂರಾರು ಜನರು ಸುಟ್ಟು ಹಾಕಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಸ್ಲಾಂ (Islam) ಧರ್ಮವು ಪಾಕಿಸ್ತಾನದ ಅಧಿಕೃತ ಧರ್ಮವಾಗಿದ್ದರೂ ಇಲ್ಲಿ ಇತರ ಅಲ್ಪಸಂಖ್ಯಾತರೂ ಇದ್ದಾರೆ. ಪಾಕಿಸ್ತಾನದ ಪೂರ್ವ ಪಂಜಾಬ್ (eastern Punjab) ಪ್ರಾಂತ್ಯದಲ್ಲಿ ನೂರಾರು ಜನರು ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಸಮುದಾಯದ ಮೇಲೆ ದಾಳಿ ನಡೆಸಿದರು.

ಸರಗೋಧ ನಗರದ ಮುಜಾಹಿದ್ ಕಾಲೋನಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ.

ಕ್ರಿಶ್ಚಿಯನ್ ವ್ಯಕ್ತಿಯೊಬ್ಬ ಇಸ್ಲಾಂ ಧರ್ಮದ ಪವಿತ್ರ ಗ್ರಂಥವಾದ ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾನೆ ಎಂದು ಕೆಲವರು ಆರೋಪಿಸಿದ್ದಾರೆ. ಈ ಗಲಾಟೆಯಲ್ಲಿ ಕ್ರಿಶ್ಚಿಯನ್ ವ್ಯಕ್ತಿಯ ಸಣ್ಣ ಶೂ ತಯಾರಿಸುವ ಕಾರ್ಖಾನೆ ಸುಟ್ಟು ಭಸ್ಮವಾಗಿದೆ.

ಗಲಭೆಕೋರರು ಪೊಲೀಸರ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದಿದ್ದಾರೆ. ಹಿಂಸಾಚಾರದ ವೇಳೆ ಕನಿಷ್ಠ ಐವರನ್ನು ಅಧಿಕಾರಿಗಳು ರಕ್ಷಿಸಿ, ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಸರಗೋಧ ಪೊಲೀಸ್ ಮುಖ್ಯಸ್ಥ ಸಾರಿಕ್ ಖಾನ್ ತಿಳಿಸಿದ್ದಾರೆ.


ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಇಜಾಜ್ ಮಾಲ್ಹಿ ತಿಳಿಸಿದ್ದು, ಧರ್ಮನಿಂದೆಯ ಆರೋಪಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ಅಧಿಕಾರಿಗಳು ಗುಂಪನ್ನು ಚದುರಿಸಿದರು ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸಲು ಧಾರ್ಮಿಕ ವಿದ್ವಾಂಸರಿಂದ ಸಹಾಯ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಪಾಕಿಸ್ತಾನದಲ್ಲಿ ಹಿಂಸಾಚಾರ

ಇಸ್ಲಾಂ ಪಾಕಿಸ್ತಾನದ ಅಧಿಕೃತ ಧರ್ಮವಾಗಿದೆ ಮತ್ತು ದಕ್ಷಿಣ ಏಷ್ಯಾದ ದೇಶದ ನಿವಾಸಿಗಳಲ್ಲಿ ಶೇ. 96ಕ್ಕಿಂತ ಹೆಚ್ಚು ಜನರು ಇದನ್ನು ಪ್ರತಿಪಾದಿಸುತ್ತಾರೆ. ಕ್ರಿಶ್ಚಿಯನ್ನರು ಪಾಕಿಸ್ತಾನದ ಎರಡನೇ ಅತಿ ದೊಡ್ಡ ಅಲ್ಪಸಂಖ್ಯಾತ ಗುಂಪಾಗಿದ್ದು, ಜನಸಂಖ್ಯೆಯ ಸುಮಾರು ಶೇ. 1.3 ರಷ್ಟಿದ್ದಾರೆ.

ಪಾಕಿಸ್ತಾನದ ಧರ್ಮನಿಂದೆಯ ಕಾನೂನಿನ ಅಡಿಯಲ್ಲಿ, ಇಸ್ಲಾಂ ಧರ್ಮವನ್ನು ಅವಮಾನಿಸಿದ ಯಾರಿಗಾದರೂ ಮರಣದಂಡನೆಯನ್ನು ನೀಡಬಹುದು. ಆದರೆ ಈವರೆಗೆ ಧರ್ಮನಿಂದನೆಗಾಗಿ ಯಾರನ್ನೂ ಗಲ್ಲಿಗೇರಿಸಲಾಗಿಲ್ಲ, ಆರೋಪಗಳು ಗಲಭೆಗಳು ಮತ್ತು ಗುಂಪು ಹಿಂಸಾಚಾರಕ್ಕೆ ಕಾರಣವಾಗಿವೆ.

ಇದನ್ನೂ ಓದಿ: ಹನಿ ಟ್ರ್ಯಾಪ್‌ ಮಾಡಿ ಕೋಲ್ಕತಾಗೆ ಕರೆಸಿಕೊಂಡು ಬಾಂಗ್ಲಾದೇಶ ಸಂಸದನ ಕೊಲೆ; ಚರ್ಮ ಸುಲಿದು, ದೇಹ ಪೀಸ್‌ ಪೀಸ್‌

ಕಳೆದ ವರ್ಷದ ಆಗಸ್ಟ್‌ನಲ್ಲಿ ಪಂಜಾಬ್ ಪ್ರಾಂತ್ಯದ ಜರನ್‌ವಾಲಾ ಪ್ರದೇಶದಲ್ಲಿ ಕ್ರೈಸ್ತರು ಕುರಾನ್‌ನ ಪುಟಗಳನ್ನು ಹರಿದು ಹಾಕುತ್ತಿದ್ದಾರೆ ಎಂದು ವದಂತಿ ಹಬ್ಬಿಸಿ ಮುಸ್ಲಿಂ ನಿವಾಸಿಗಳು ಚರ್ಚ್‌ಗಳ ಮೇಲೆ ದಾಳಿ ನಡೆಸಿದ್ದರು.

2009ರಲ್ಲಿ ಮಧ್ಯ ಪಂಜಾಬ್‌ನ ಗೊಜ್ರಾ ಜಿಲ್ಲೆಯಲ್ಲಿ ಆರು ಕ್ರಿಶ್ಚಿಯನ್ನರು ಕೊಲ್ಲಲ್ಪಟ್ಟರು ಮತ್ತು ಹಲವಾರು ಮನೆಗಳನ್ನು ಸುಟ್ಟುಹಾಕಲಾಯಿತು.

Continue Reading

ಆರೋಗ್ಯ

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Life Expectancy: ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆಯು ವರದಿ ನೀಡಿದೆ.

VISTARANEWS.COM


on

Life Expectancy
Koo

ನ್ಯೂಯಾರ್ಕ್‌: ಚೀನಾದಲ್ಲಿ ಹರಡಿ, ಜಗತ್ತಿನಾದ್ಯಂತ ಪಸರಿಸಿ, ಕೋಟ್ಯಂತರ ಜನರ ಸಾವಿಗೆ ಕಾರಣವಾದ ಕೊರೊನಾ (Covid 19) ಮಹಾಮಾರಿಯ ಹಾವಳಿ ಕಡಿಮೆಯಾದರೂ ಅದು ಜನರ ಜೀವನದ ಮೇಲೆ ಬೀರುವ ಪರಿಣಾಮವು ಇನ್ನೂ ನಿಂತಿಲ್ಲ. ಕೊರೊನಾ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ, ರೆಮ್ಡಿಸಿವಿರ್‌ ಪಡೆದವರು, ಐಸಿಯುಗೆ ದಾಖಲಾಗಿ ಜೀವಂತವಾಗಿ ಹೊರಬಂದವರು ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯು (WHO) ಭೀಕರ ವರದಿ ಬಿಡುಗಡೆ ಮಾಡಿದ್ದು, ಕೊರೊನಾದಿಂದ ಜಾಗತಿಕವಾಗಿ ಜನರ ಜೀವಿತಾವಧಿಯು (Life Expectancy) 2 ವರ್ಷ ಕಡಿಮೆಯಾಗಿದೆ ಎಂದು ತಿಳಿಸಿದೆ.

“2019ರಿಂದ 2021ರ ಅವಧಿಯಲ್ಲಿ ಕೊರೊನಾ ಮಹಾಮಾರಿಯು ಜಗತ್ತಿನಾದ್ಯಂತ ಭೀಕರ ಪರಿಣಾಮ ಉಂಟುಮಾಡಿತು. ಇದರಿಂದಾಗಿ 2019-21ರ ಅವಧಿಯಲ್ಲಿ ಜಗತ್ತಿನಾದ್ಯಂತ ಮನುಷ್ಯರ ಸರಾಸರಿ ಜೀವಿತಾವಧಿಯು 71.4 ವರ್ಷಕ್ಕೆ ಇಳಿದಿದೆ. ಜನರ ಸರಾಸರಿ ಜೀವಿತಾವಧಿಯು 1.8 ವರ್ಷ ಕಡಿಮೆಯಾಗಿದೆ. ಅಷ್ಟೇ ಅಲ್ಲ, ಇದೇ ಅವಧಿಯಲ್ಲಿ ಜನರ ಆರೋಗ್ಯಯುತ ಜೀವನ ಪ್ರಮಾಣದಲ್ಲೂ 1.5 ವರ್ಷ ಕಡಿಮೆಯಾಗಿದ್ದು, 61.9 ವರ್ಷಕ್ಕೆ ಕುಸಿದಿದೆ” ಎಂಬುದಾಗಿ ಡಬ್ಲ್ಯೂಎಚ್‌ಒ ವರದಿಯಿಂದ ತಿಳಿದುಬಂದಿದೆ.

ಏಷ್ಯಾ ಭಾಗಕ್ಕೇ ತೀವ್ರ ಪರಿಣಾಮ

“ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ. ಇದು ಜಗತ್ತಿನಲ್ಲೇ ಕೊರೊನಾದಿಂದ ಅತಿ ಹೆಚ್ಚು ಪರಿಣಾಮ ಬೀರಿದ ಭಾಗಗಳಾಗಿವೆ. ವೆಸ್ಟರ್ನ್‌ ಪೆಸಿಫಿಕ್‌ ರೀಜನ್‌ನಲ್ಲಿ ಅತಿ ಕಡಿಮೆ ಪರಿಣಾಮ ಬೀರಿದೆ. ಈ ಭಾಗದಲ್ಲಿ ಜನರ ಸರಾಸರಿ ಜೀವಿತಾವಧಿಯು ಶೇ.0.1ರಷ್ಟು ಕಡಿಮೆಯಾಗಿದೆ” ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

ಮತ್ತೊಂದು ಸೋಂಕು ಸೃಷ್ಟಿಸಿದ ಚೀನಾ

ಕೊರೊನಾ ಮೂಲಕ ಕೋಟ್ಯಂತರ ಜನರ ಪ್ರಾಣಕ್ಕೆ ಕುತ್ತು ತಂದ ಚೀನಾ ಈಗ ಮತ್ತೊಂದು ಜೈವಿಕ ಯುದ್ಧಕ್ಕೆ ಮುಂದಾಗಿದೆ. ಮಾರಣಾಂತಿಕ ಎಬೋಲಾ ರೂಪಾಂತರಿ ಸೋಂಕನ್ನು (Ebola Mutant Virus) ಚೀನಾದ ವಿಜ್ಞಾನಿಗಳು ಸೃಷ್ಟಿಸಿದ್ದು, ಇದರಿಂದ ಜಗತ್ತಿಗೇ ಆತಂಕ ಎದುರಾಗಿದೆ. ಹೆಬೈ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ವಿಜ್ಞಾನಿಗಳು ಎಬೋಲಾ ರೂಪಾಂತರಿ ವೈರಸ್‌ಅನ್ನು ಸೃಷ್ಟಿಸಿದ್ದಾರೆ. ಹ್ಯಾಮ್‌ಸ್ಟರ್‌ಗಳಿಗೆ (ಕಿರುಕಡಿಗ-ಇಲಿಯಂತ ಚಿಕ್ಕ ಪ್ರಾಣಿ) ವೈರಸ್‌ ಇಂಜೆಕ್ಟ್‌ ಮಾಡಿದರೆ, ಮೂರೇ ದಿನಗಳಲ್ಲಿ ಅವರು ಸಾಯುತ್ತವೆ ಎಂದು ಸೈನ್ಸ್‌ ಡೈರೆಕ್ಟ್‌ ಜರ್ನಲ್‌ನಲ್ಲಿ ವರದಿ ಪ್ರಕಟವಾಗಿದೆ.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Continue Reading
Advertisement
Road Accident
ಕರ್ನಾಟಕ6 mins ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Porsche Car Crash
ದೇಶ7 mins ago

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Electric Scooters
ಪ್ರಮುಖ ಸುದ್ದಿ7 mins ago

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Shreyanka Patil
ಕ್ರೀಡೆ14 mins ago

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Kendall Jenner American model flaunted
ಬಾಲಿವುಡ್37 mins ago

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

How To Get Rid Of Cockroaches
ಲೈಫ್‌ಸ್ಟೈಲ್41 mins ago

How To Get Rid Of Cockroaches: ಜಿರಳೆಗಳು ಮನೆಯೊಳಗೆ ಬರದಂತೆ ಮಾಡುವ ಈ ಉಪಾಯಗಳು ನಿಮಗೆ ತಿಳಿದಿದೆಯೆ?

Lockup Death
ಕರ್ನಾಟಕ43 mins ago

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

theft Case in Raichur
ರಾಯಚೂರು43 mins ago

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Swati Maliwal
ದೇಶ50 mins ago

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

India Head Coach
ಕ್ರಿಕೆಟ್60 mins ago

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌