Truong My Lan: ಅಬ್ಬಾ, 1 ಲಕ್ಷ ಕೋಟಿ ರೂ. ವಂಚನೆ; ಖ್ಯಾತ ಮಹಿಳಾ ಉದ್ಯಮಿಗೆ ಗಲ್ಲು ಶಿಕ್ಷೆ! - Vistara News

ವಿದೇಶ

Truong My Lan: ಅಬ್ಬಾ, 1 ಲಕ್ಷ ಕೋಟಿ ರೂ. ವಂಚನೆ; ಖ್ಯಾತ ಮಹಿಳಾ ಉದ್ಯಮಿಗೆ ಗಲ್ಲು ಶಿಕ್ಷೆ!

Truong My Lan: ವಿಯೇಟ್ನಾಂ ಸರ್ಕಾರಕ್ಕೆ ಅಂದಾಜು 1.04 ಲಕ್ಷ ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಖ್ಯಾತ ರಿಯಲ್‌ ಎಸ್ಟೇಟ್‌ ಉದ್ಯಮಿ ಟ್ರುವೋಂಗ್‌ ಮೈ ಲ್ಯಾನ್‌ ಅವರಿಗೆ ಅಲ್ಲಿನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಒಂದು ವಾರದ ಹಿಂದಷ್ಟೇ ಕೋರ್ಟ್‌ನಲ್ಲಿ ಕೊನೆಯ ಹೇಳಿಕೆ ನೀಡಿದ್ದ ಟ್ರುವೋಂಗ್‌ ಮೈ ಲ್ಯಾನ್‌ ಅವರು, ನನಗೆ ಬ್ಯಾಂಕಿಂಗ್‌ ವ್ಯವಹಾರವೇ ಗೊತ್ತಿಲ್ಲ. ಪ್ರಕರಣದಲ್ಲಿ ನಾನು ಅಮಾಯಕಳು ಎಂದಿದ್ದರು.

VISTARANEWS.COM


on

Truong My Lan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹನೋಯಿ: ವಿಯೇಟ್ನಾಂ ಇತಿಹಾಸದಲ್ಲಿಯೇ ಕಂಡು ಕೇಳರಿಯದ ಹಣಕಾಸು ವಂಚನೆ (Financial Fraud Case) ಪ್ರಕರಣ ಬಯಲಾಗಿದೆ. ಸುಮಾರು 12.5 ಶತಕೋಟಿ ಡಾಲರ್‌ (ಅಂದಾಜು 1.04 ಲಕ್ಷ ಕೋಟಿ ರೂ.) ವಂಚನೆ ಮಾಡಿದ ಪ್ರಕರಣದಲ್ಲಿ ಖ್ಯಾತ ಉದ್ಯಮಿ ಟ್ರುವೋಂಗ್‌ ಮೈ ಲ್ಯಾನ್‌ (Truong My Lan) ಅವರಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ದಕ್ಷಿಣ ವಿಯೇಟ್ನಾಂನ ಹೋ ಚಿ ಮಿನ್ಹ್‌ ನಗರದಲ್ಲಿರುವ ನ್ಯಾಯಾಲಯವು ಟ್ರುವೋಂಗ್‌ ಮೈ ಲ್ಯಾನ್‌ ಅವರ ವಿರುದ್ಧದ ಆರೋಪಗಳು ಸಾಬೀತಾದ ಕಾರಣ ಗಲ್ಲು ಶಿಕ್ಷೆ ವಿಧಿಸಿದೆ.

ವಿಯೇಟ್ನಾಂನ ಖ್ಯಾತ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ಟ್ರುವೋಂಗ್‌ ಮೈ ಲ್ಯಾನ್‌ ಅವರು ವ್ಯಾನ್‌ ಥಿನ್ಹ್‌ ಫಾಟ್‌ ಎಂಬ ಸಂಸ್ಥೆಯನ್ನು ಕಟ್ಟಿ ದೊಡ್ಡ ಸಾಮ್ರಾಜ್ಯದ ರಾಣಿ ಎನಿಸಿದ್ದರು. ಆದರೆ, ಇವರ ವಿರುದ್ಧ ಹಣದ ದುರ್ಬಳಕೆ, ಬ್ಯಾಂಕಿಂಗ್‌ ನಿಯಮಗಳ ಉಲ್ಲಂಘನೆ ಸೇರಿ ಹಲವು ವಂಚನೆ ಪ್ರಕರಣಗಳು ದಾಖಲಾಗಿದ್ದವು. ಇವರಿಂದ ವಿಯೇಟ್ನಾಂನ ಒಟ್ಟು ಜಿಡಿಪಿಯ ಶೇ.6ರಷ್ಟು ಅಂದರೆ, ಸುಮಾರು 1 ಲಕ್ಷ ಕೋಟಿ ರೂ. ವಂಚನೆ ಮಾಡಲಾಗಿದೆ ಎಂಬುದು ಈಗ ಸಾಬೀತಾಗಿದೆ. ಹಾಗಾಗಿ, ವಿಚಾರಣೆ ನಡೆಸಿದ ಹೋ ಚಿ ಮಿನ್ಹ್‌ ನ್ಯಾಯಾಲಯವು ಕೊನೆಗೆ ಗಲ್ಲು ಶಿಕ್ಷೆ ವಿಧಿಸಿದೆ.

ಯಾವ ರೀತಿಯಲ್ಲಿ ವಂಚನೆ?

67 ವರ್ಷದ ಟ್ರುವೋಂಗ್‌ ಮೈ ಲ್ಯಾನ್‌ ಅವರು 2012ರಿಂದ 2022ರವರೆಗೆ ವಿಯೇಟ್ನಾಂನ ಸೈಗೋನ್‌ ಜಾಯಿಂಟ್‌ ಸ್ಟಾಕ್‌ ಕಮರ್ಷಿಯಲ್‌ ಬ್ಯಾಂಕ್‌ನ ಷೇರುಗಳ ಮೇಲೆ ಕಾನೂನುಬಾಹಿರವಾಗಿ ನಿಯಂತ್ರಣ ಸಾಧಿಸಿದ್ದರು. ಸರ್ಕಾರದ ಅಧಿಕಾರಿಗಳಿಗೆ ಲಂಚ ಕೊಟ್ಟು ಬ್ಯಾಂಕ್‌ನ ಹಣವನ್ನು ನಕಲಿ ಕಂಪನಿಗಳಿಗೆ ವರ್ಗಾವಣೆ ಮಾಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರುವೋಂಗ್‌ ಮೈ ಲ್ಯಾನ್‌ ಅವರಿಗೆ ಸಂಬಂಧಿಸಿದ ಒಂದು ಸಾವಿರಕ್ಕೂ ಅಧಿಕ ಆಸ್ತಿಗಳನ್ನು ಸರ್ಕಾರ ಜಪ್ತಿ ಮಾಡಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ್ದ ಲ್ಯಾನ್‌

ಟ್ರುವೋಂಗ್‌ ಮೈ ಲ್ಯಾನ್‌ ಅವರು ತಮ್ಮ ವಿರುದ್ಧ ಕೇಳಿಬಂದ ಎಲ್ಲ ಆರೋಪಗಳನ್ನು ತಿರಸ್ಕರಿಸಿದ್ದರು. ಕಳೆದ ಒಂದು ವಾರದ ಹಿಂದಷ್ಟೇ ನ್ಯಾಯಾಲಯದಲ್ಲಿ ತಮ್ಮ ಕೊನೆಯ ಹೇಳಿಕೆ ನೀಡಿದ್ದ ಅವರು “ನಾನು ತುಂಬ ಖಿನ್ನತೆಗೆ ಒಳಗಾಗಿದ್ದೇನೆ. ನಾನು ಆತ್ಮಹತ್ಯೆಗೂ ಯತ್ನಿಸಿದ್ದೆ. ನಾನು ತುಂಬ ಅಮಾಯಕಳು. ಬ್ಯಾಂಕ್‌ನಲ್ಲಿ ಹೀಗೆಲ್ಲ ನಡೆಯುತ್ತದೆ, ಬ್ಯಾಂಕ್‌ ವ್ಯವಹಾರ ಹೇಗೆ ಎಂಬುದು ಕೂಡ ನನಗೆ ಗೊತ್ತಿಲ್ಲ. ನಾನು ಕಾನೂನುಬದ್ಧವಾಗಿಯೇ ಉದ್ಯಮ ನಡೆಸಿಕೊಂಡು ಬಂದವಳು” ಎಂದು ಹೇಳಿದ್ದರು.

ಇದನ್ನೂ ಓದಿ: FedEx Scam: ಬೆಂಗಳೂರು ವಕೀಲೆಗೆ 15 ಲಕ್ಷ ರೂ. ವಂಚನೆ; ವೆಬ್‌ಕ್ಯಾಮ್‌ ಎದುರು ಬೆತ್ತಲೆ ನಿಂತಿದ್ದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

United Nations: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ. ಕಾಶ್ಮೀರ ವಿವಾದ, ಪೌರತ್ವ ತಿದ್ದುಪಡಿ ಕಾಯ್ದೆ(CAA) ಮತ್ತು ಅಯೋಧ್ಯೆಯಲ್ಲಿರುವ ರಾಮ ಮಂದಿರ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದ ವಿಶ್ವಸಂಸ್ತೆಯ ಪಾಕಿಸ್ತಾನದ ಪ್ರತಿನಿಧಿ ಮನೀರ್‌ ಅಕ್ರಮ್‌ ಭಾರತದ ವಿರುದ್ಧ ಗುರುತರ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರುಚಿರಾ, ಪಾಕಿಸ್ತಾನ ಸದಾ ಕುಕೃತ್ಯಗಳ ಮೂಲಕವೇ ಕುಖ್ಯಾತಿಯನ್ನು ಪಡೆದಿದೆ ಎಂದು ತಿರುಗೇಟು ಕೊಟ್ಟರು.

VISTARANEWS.COM


on

United Nations
Koo

ಅಮೆರಿಕ: ಪಾಕಿಸ್ತಾನ(Pakistan) ಎಲ್ಲಾ ಆಯಾಮಗಳಲ್ಲಿ ಅತ್ಯಂತ ಸಂಶಯಾತ್ಮಕ ಚಟುವಟಿಕೆ, ದುಷ್ಕೃತ್ಯ(dubious track)ಗಳ ಟ್ರ್ಯಾಕ್‌ ರೆಕಾರ್ಡ್‌ಗಳನ್ನು ಹೊಂದಿದೆ ಎಂದು ವಿಶ್ವಸಂಸ್ಥೆ(United States)ಯಲ್ಲಿ ಭಾರತ ಹೇಳಿದೆ. ವಿಶ್ವಸಂಸ್ಥೆಯ(United Nations) ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ (Ruchira Kamboj)ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ. ಕಾಶ್ಮೀರ ವಿವಾದ, ಪೌರತ್ವ ತಿದ್ದುಪಡಿ ಕಾಯ್ದೆ(CAA) ಮತ್ತು ಅಯೋಧ್ಯೆಯಲ್ಲಿರುವ ರಾಮ ಮಂದಿರ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದ ವಿಶ್ವಸಂಸ್ತೆಯ ಪಾಕಿಸ್ತಾನದ ಪ್ರತಿನಿಧಿ ಮನೀರ್‌ ಅಕ್ರಮ್‌ ಭಾರತದ ವಿರುದ್ಧ ಗುರುತರ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರುಚಿರಾ, ಪಾಕಿಸ್ತಾನ ಸದಾ ಕುಕೃತ್ಯಗಳ ಮೂಲಕವೇ ಕುಖ್ಯಾತಿಯನ್ನು ಪಡೆದಿದೆ ಎಂದು ತಿರುಗೇಟು ಕೊಟ್ಟರು.

ಶಾಂತಿಯ ಸೌದಾರ್ಹತೆಯ ಸಂಸ್ಕೃತಿ ಎಂಬ ವಿಚಾರದ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ರುಚಿರಾ, ಇಂತಹ ಸವಾಲಿನ ಸ್ಥಿತಿಯಲ್ಲೂ ಭಾರತ ಶಾಂತಿ ಕಾಪಾಡಲು ಯತ್ನಿಸುತ್ತಿದೆ. ರಚನಾತ್ಮಕ ಮಾತುಕತೆಗೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದೇವೆ. ನಾವು ಆದಷ್ಟು ಇಂತಹ ಟೀಕೆಗಳಿಗೆ ತಲೆಗೆಡಿಸಿಕೊಳ್ಳದೇ ಧನಾತ್ಮಕವಾಗಿ ಮುಂದುವರೆಯಲು ಇಚ್ಛಿಸುತ್ತೇವೆ. ನಮ್ಮ ಎದುರಿಗಿರುವವರು ನೀಡಿರುವ ಹೇಳಿಕೆ ಅವರ ವಿನಾಶಕಾರಿ ಮನೋಭಾವನ್ನು ತೋರಿಸುತ್ತದೆ. ಗೌರವ ಮತ್ತು ರಾಜತಾಂತ್ರಿಕವಾಗಿ ವಿಷಯಗಳನ್ನು ಚರ್ಚಿಸುವುದಕ್ಕೆ ಭಾರತ ಯಾವಾಗಲೂ ಬೆಂಬಲ ನೀಡುತ್ತದೆ. ಸ್ವತಃ ತನ್ನ ಬಂದರುಗಳಲ್ಲಿ ವಿನಾಶಕಾರಿ ಚಟುವಟಿಕೆಗಳು ನಡೆಯುತ್ತಿರುವ ದೇಶದ ಬಗ್ಗೆ ಕೇಳವಂತಹ ಮತ್ತು ಟೀಕಿಸುವಂತಹ ಉದ್ದೇಶ ನಮಗೂ ಇದೆ ಎಂದು ಖಡಕ್ಕಾಗಿ ಹೇಳಿದ್ದಾರೆ.

ಭಯೋತ್ಪಾದನೆ ಎಂಬುದು ಎಲ್ಲಾ ಧರ್ಮಗಳು ಪ್ರತಿಪಾದಿಸುವ ಶಾಂತಿ ಮತ್ತು ಸೌಹಾರ್ದತೆಗೆ ನೇರ ತದ್ವಿರುದ್ಧವಾದ ವಿಚಾರವಾಗಿದೆ. ಅದು ಒಳ್ಳೆಯ ವಿಚಾರಗಳಿಗೆ ಅಡ್ಡಿಯಾಗಿ ನಿಂತಿದ್ದು, ಹಗೆತನವನ್ನು ಹುಟ್ಟುಹಾಕುತ್ತದೆ ಮತ್ತು ವಿಶ್ವಾದ್ಯಂತ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಪ್ರದಾಯಗಳ ಆಧಾರವಾಗಿರುವ ಗೌರವ ಮತ್ತು ಸಾಮರಸ್ಯದ ಸಾರ್ವತ್ರಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ ವಿಶ್ವಸಂಸ್ಥೆಯ ಸದಸ್ಯರು ಒಟ್ಟಾಗಿ ನಿಂತಿ ಪ್ರಪಂಚಾದ್ಯಂತ ಶಾಂತಿ ಸೌಹಾರ್ದತೆ ಕಾಪಾಡಲು ಪಣತೊಡಬೇಕಿದೆ. ಇಡೀ ಪ್ರಪಂಚವೇ ಒಂದು ಕುಟುಂಬ. ನನ್ನ ದೇಶ ಇದರಲ್ಲಿ ನಂಬಿಕೆಯನ್ನಿಟ್ಟುಕೊಂಡಿದೆ ಎಂದು ರುಚಿಕಾ ಹೇಳಿದರು.

ಇದನ್ನೂ ಓದಿ:Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

ಭೌಗೋಳಿಕ ರಾಜಕೀಯ ಬಿಕ್ಕಟ್ಟು ಮತ್ತು ಅಸಮ ಅಭಿವೃದ್ಧಿಯಿಂದ ಜಗತ್ತು ಗಮನಾರ್ಹ ಸವಾಲುಗಳನ್ನು ಎದುರಿಸುತ್ತಿದೆ. ಧರ್ಮ ಅಥವಾ ನಂಬಿಕೆಯ ಆಧಾರದ ಮೇಲೆ ಹೆಚ್ಚುತ್ತಿರುವ ಅಸಹಿಷ್ಣುತೆ, ತಾರತಮ್ಯ ಮತ್ತು ಹಿಂಸಾಚಾರದ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ. ಚರ್ಚ್‌ಗಳು, ಮಠಗಳು, ಗುರುದ್ವಾರಗಳು, ಮಸೀದಿಗಳು, ದೇವಾಲಯಗಳು ಮತ್ತು ಸಿನಗಾಗ್‌ಗಳು ಸೇರಿದಂತೆ ಪವಿತ್ರ ಸ್ಥಳಗಳ ಮೇಲೆ ಹೆಚ್ಚುತ್ತಿರುವ ದಾಳಿಯಿಂದ ನಾವು ವಿಶೇಷವಾಗಿ ಕಳವಳಗೊಂಡಿದ್ದೇವೆ, ಅಂತಹ ಕೃತ್ಯಗಳಿಗೆ ಜಾಗತಿಕ ಸಮುದಾಯದಿಂದ ತ್ವರಿತ ಮತ್ತು ಒಗ್ಗಟ್ಟಿನ ಪ್ರತಿಕ್ರಿಯೆಯ ಅಗತ್ಯವಿದೆ. ಹೀಗಾಗಿ ರಾಯಕೀಯ ಲಾಭ ಮರೆತು ಸವಾಲುಗಳನ್ನು ಎದುರಿಸುವ ಪ್ರಯತ್ನ ಮಾಡೋಣ ಎಂದು ಅವರು ಹೇಳಿದರು.


Continue Reading

ವಿದೇಶ

Kim Jong Un: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಸುಖಕ್ಕೆ ಬೇಕು ಪ್ರತಿ ವರ್ಷ 25 ಹುಡುಗಿಯರು! ಏನಿದು ಆಹ್ಲಾದ ತಂಡ?

Kim Jong Un: ಸದಾ ವಿವಾದಗಳಿಂದಲೇ ಸುದ್ದಿಯಾಗುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಕುರಿತಾದ ಇನ್ನೊಂದು ಬೆಚ್ಚಿ ಬೀಳಿಸುವ ಸಂಗತಿ ಹೊರ ಬಿದ್ದಿದೆ. ಕಿಮ್‌ ಜಾಂಗ್‌ ಉನ್‌ ಪ್ರತಿ ವರ್ಷ ತನ್ನ ʼಆಹ್ಲಾದ ತಂಡʼಕ್ಕಾಗಿ 25 ಹುಡುಗಿಯರನ್ನು ಆರಿಸಿಕೊಳ್ಳುತ್ತಾನೆ ಎಂದು ಉತ್ತರ ಕೊರಿಯಾದಿಂದ ತಪ್ಪಿಸಿಕೊಂಡಿರುವ ಯುವತಿಯೊಬ್ಬಳು ತಿಳಿಸಿದ್ದಾಳೆ. ಶಾಲೆಯಲ್ಲಿ ಓದುತ್ತಿರುವ ಚಂದದ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿ ಅವರನ್ನು ಸರ್ವಾಧಿಕಾರಿಯ ಲೈಂಗಿಕ ಬಯಕೆಯನ್ನು ತೀರಿಸಲು ಬಳಸಲಾಗುತ್ತದೆ ಎಂದು ಯುವತಿ ವಿವರಿಸಿದ್ದಾಳೆ.

VISTARANEWS.COM


on

Kim Jong Un
Koo

ಫ್ಯೊಂಗ್ಯಾಂಗ್‌: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ (Kim Jong Un) ಬಗ್ಗೆ ವಿವಿಧ ಕಥೆಗಳನ್ನು ಕೇಳಿದ್ದೇವೆ. ಇದೀಗ ಆ ದೇಶದ ಯುವತಿಯೊಬ್ಬಳು ಬೆಚ್ಚಿ ಬೀಳಿಸುವ ಘೋರ ಸಂಗತಿಯೊಂದನ್ನು ಬಹಿರಂಗಪಡಿಸಿದ್ದಾಳೆ. ಕಿಮ್‌ ಜಾಂಗ್‌ ಉನ್‌ ಪ್ರತಿ ವರ್ಷ ತನ್ನ ʼಆಹ್ಲಾದ ತಂಡʼ (Pleasure Squad)ಕ್ಕಾಗಿ 25 ಹುಡುಗಿಯರನ್ನು ಆರಿಸಿಕೊಳ್ಳುತ್ತಾನೆ ಎಂದು ಉತ್ತರ ಕೊರಿಯಾದಿಂದ ತಪ್ಪಿಸಿಕೊಂಡಿರುವ ಈ ಯುವತಿ ಹೇಳಿದ್ದಾಳೆಂದು ವರದಿಯೊಂದು ತಿಳಿಸಿದೆ. ವಿಶೇಷವೆಂದರೆ ಹುಡುಗಿಯರನ್ನು ಅವರ ರೂಪ ಮತ್ತು ರಾಜಕೀಯ ನಿಷ್ಠೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದೂ ಯುವತಿ ವಿವರಿಸಿದ್ದಾಳೆ.

ಕಿಮ್‌ನ ಈ ಆಹ್ಲಾದ ತಂಡಕ್ಕಾಗಿ ಅವರನ್ನು ತನ್ನನ್ನು ಎರಡು ಬಾರಿ ಪರಿಗಣಿಸಿದ್ದರು. ಆದರೆ ತನ್ನ ಕುಟುಂಬದ ಸ್ಥಾನಮಾನದಿಂದಾಗಿ ಆಯ್ಕೆಯಾಗಿರಲಿಲ್ಲ ಎಂಬ ವಿಚಾರವನ್ನೂ ಆಕೆ ತಿಳಿಸಿದ್ದಾಳೆ.

ಆಯ್ಕೆ ಹೇಗೆ?

ಇನ್ನು ಈ ಕರಾಳ ಸಂಗತಿಯನ್ನು ಯುವತಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಕಿಮ್‌ ಜಾಂಗ್‌ ಉನ್‌ ತಂಡದ ಸದಸ್ಯರು ಶಾಲೆಗಳಿಗೆ ತೆರಳಿ ಚಂದದ ಹುಡುಗಿಯರನ್ನು ಹುಡುಕುತ್ತಾರೆ. ಒಂದಷ್ಟು ಜನರನ್ನು ಆಯ್ಕೆ ಮಾಡುವ ಅವರು ಬಳಿಕ ಆ ಹುಡುಗಿಯರ ಕುಟುಂಬದ ಸ್ಥಿತಿ ಮತ್ತು ರಾಜಕೀಯ ನಿಲುವುಗಳನ್ನು ಶೋಧಿಸುತ್ತಾರೆ. ಹೀಗೆ ಪರಿಶೀಲಿಸುವ ವೇಳೆ ಉತ್ತರ ಕೊರಿಯಾದಿಂದ ತಪ್ಪಿಸಿಕೊಂಡು ಬಂದ ಕುಟುಂಬಕ್ಕೆ ಸೇರಿದ ಮತ್ತು ದಕ್ಷಿಣ ಕೊರಿಯಾ ಅಥವಾ ಇತರ ದೇಶಗಳಲ್ಲಿ ಸಂಬಂಧಿಕರು ಹೊಂದಿರುವ ಹುಡುಗಿಯರನ್ನು ಕೈಬಿಡಲಾಗುತ್ತದೆ ಎಂದು ಹೇಳಿದ್ದಾಳೆ.

ಕನ್ಯತ್ವ ಪರೀಕ್ಷೆ

ಎಲ್ಲ ಕೂಲಂಕುಷವಾಗಿ ಪರಿಶೀಲಿಸಿದ ನಂತರ ಉಳಿದುಕೊಳ್ಳುವ ಹುಡುಗಿಯರ ಕನ್ಯತ್ವ ಪರೀಕ್ಷಿಸಲು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಈ ವೇಳೆ ಸಣ್ಣ ಗಾಯ ಕಂಡು ಬಂದರೂ ಆಕೆಯನ್ನು ಕೈ ಬಿಡಲಾಗುತ್ತದೆ. ಹೀಗೆ ಹಲವು ಕಠಿಣ ಹಂತಗಳನ್ನು ದಾಟಿದ ಹುಡುಗಿಯರ ಪೈಕಿ ಕೆಲವರನ್ನು ಫ್ಯೊಂಗ್ಯಾಂಗ್‌ಗೆ ಕಳುಹಿಸಲಾಗುತ್ತದೆ. ಅಲ್ಲಿ ಅವರು ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ನ ಎಲ್ಲ ಆಸೆಗಳನ್ನು ಪೂರೈಸಬೇಕಾಗುತ್ತದೆ ಎಂದು ಯುವತಿ ತಿಳಿಸಿದ್ದಾಳೆ.

ಮೂರು ಗುಂಪು

ಆಯ್ಕೆಯಾದ ಹುಡುಗಿಯರನ್ನು ಮೂರು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಒಂದು ತಂಡಕ್ಕೆ ಮಸಾಜ್‌ ತರಬೇತಿ ನೀಡಿದರೆ ಇನ್ನೊಂದು ಗುಂಪಿಗೆ ಹಾಡು ಮತ್ತು ನೃತ್ಯವನ್ನು ಹೇಳಿಕೊಡಲಾಗುತ್ತದೆ. ಮೂರನೇ ತಂಡ ಸರ್ವಾಧಿಕಾರಿ ಮತ್ತು ಆತನ ಆಪ್ತರಿಗೆ ಲೈಂಗಿಕವಾಗಿ ಸಹಕರಿಸಬೇಕು. ಅವರು ಸರ್ವಾಧಿಕಾರಿ ಮತ್ತು ಇತರ ಪುರುಷರ ಲೈಂಗಿಕ ವಾಂಛೆಗೆ ಸಹಕರಿಸಬೇಕು. ಪುರುಷರನ್ನು ಹೇಗೆ ಮೆಚ್ಚಿಸಬೇಕು ಎನ್ನುವುದನ್ನು ಅವರಿಗೆ ಕಲಿಸಲಾಗುತ್ತದೆ ಎಂದು ಯುವತಿ ವಿವರಿದ್ದಾಳೆ.

ಇದನ್ನೂ ಓದಿ: Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

ಅತ್ಯಂತ ಆಕರ್ಷಕ ಹುಡುಗಿಯರನ್ನು ಸರ್ವಾಧಿಕಾರಿಯ ಸೇವೆ ಮಾಡಲು ಆಯ್ಕೆ ಮಾಡಿದರೆ, ಇತರರನ್ನು ಕೆಳದರ್ಜೆಯ ಜನರಲ್‌ಗಳು ಮತ್ತು ರಾಜಕಾರಣಿಗಳನ್ನು ತೃಪ್ತಿಪಡಿಸಲು ನಿಯೋಜಿಸಲಾಗುತ್ತದೆ. ವಿಶೇಷ ಎಂದರೆ ಹುಡುಗಿಯರ ವಯಸ್ಸು ಇಪ್ಪತ್ತು ದಾಟಿದ ನಂತರ ಅವರನ್ನು ತಂಡದಿಂದ ಕೈ ಬಿಡಲಾಗುತ್ತದೆ. ಆ ಪೈಕಿ ಕೆಲವರು ಬಾಡಿಗಾರ್ಡ್‌ ಅನ್ನು ಮದುವೆಯಾಗುತ್ತಾರೆ. ಈ ʼಆಹ್ಲಾದ ತಂಡʼ ಕಿಮ್ ಜಾಂಗ್ ಉನ್‌ನ ತಂದೆ ಕಿಮ್ ಜಾಂಗ್-2 ಕಾಲದಲ್ಲಿಯೇ ಇತ್ತು. ಅವರು ಹೀಗೆ ಲೈಂಗಿಕ ಸಂಬಂಧ ಹೊಂದುವುದು ಅಮರತ್ವವನ್ನು ನೀಡುತ್ತದೆ ಎಂದು ನಂಬಿದ್ದರು ಎಂದು ಯುವತಿ ಕರಾಳ ದಂಧೆಯ ಮೇಲೆ ಬೆಳಕು ಚೆಲ್ಲಿದ್ದಾಳೆ. ಕಿಮ್ ಜಾಂಗ್-2 2011ರಲ್ಲಿ ತಮ್ಮ 70ನೇ ವಯಸ್ಸಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಅಮೆರಿಕದ ಬುದ್ಧಿಗೇಡಿಗಳ ವರದಿಯಲ್ಲಿ ಭಾರತದ ಬಗ್ಗೆ ಹಸಿ ಸುಳ್ಳುಗಳು

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ.

VISTARANEWS.COM


on

Religious Freedom
Koo

ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಸರ್ಕಾರದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ (USCIRF Report) ವರದಿ ಬಿಡುಗಡೆ ಮಾಡಿದೆ. ಭಾರತ ಸೇರಿ 17 ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ (Religious Freedom) ಕುರಿತು ಕಳವಳ ವ್ಯಕ್ತಪಡಿಸಿದೆ. “ಭಾರತ ಸೇರಿ 17 ದೇಶಗಳಲ್ಲಿ ಜನರು ತಮ್ಮ ಧರ್ಮವನ್ನು ಅನುಸರಿಸುವ, ಧಾರ್ಮಿಕ ವಿಚಾರಗಳ ಮೇಲೆ ನಂಬಿಕೆ ಇರಿಸುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಭಾರತದಲ್ಲಿ ರಾಷ್ಟ್ರೀಯವಾದಿ ನೀತಿಗಳ ಹೇರಿಕೆಯಿಂದಾಗಿ ಇತರ ಧರ್ಮಗಳಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಸಮಸ್ಯೆಯಾಗಿದೆ. ದ್ವೇಷ ಕಾರುವ ವಾಕ್ಚಾತುರ್ಯ, ಕೋಮುವಾದದಿಂದ ಕೂಡಿದ ಹಿಂಸಾಚಾರಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದಕ್ಕೆ ಉದಾಹರಣೆಯಾಗಿದೆ” ಎಂದು ಹೇಳಿದೆ. ಇದಕ್ಕೆ ಭಾರತ ಸರ್ಕಾರ ತಿರುಗೇಟು ನೀಡಿದ್ದು, “ಯುಎಸ್‌ಸಿಐಆರ್‌ಎಫ್‌ ವರದಿಯು ಪಕ್ಷಪಾತ ಹಾಗೂ ರಾಜಕೀಯ ಪ್ರೇರಿತವಾಗಿ ತಯಾರಿಸಿದ್ದಾಗಿದೆ” ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದೆ. “ಇದಕ್ಕೂ ಮೊದಲು ಕೂಡ ಇಂತಹ ವರದಿಗಳನ್ನು ಅದು ಪ್ರಕಟಿಸಿತ್ತು. ಭಾರತದ ಕುರಿತು ಷಡ್ಯಂತ್ರದಿಂದ ಕೂಡಿದ ವರದಿ ಬಿಡುಗಡೆ ಮಾಡುವುದು ಅದಕ್ಕೆ ರೂಢಿಯೇ ಆಗಿದೆ. ಯುಎಸ್‌ಸಿಐಆರ್‌ಎಫ್‌ ವರದಿಯಲ್ಲಿ ಯಾವುದೇ ಹುರುಳಿಲ್ಲ” ಎಂದಿದೆ ಭಾರತ.

ಈ ವರದಿ ಯಾರೋ ಅಡ್ಡಕಸಬಿಗಳು ತಯಾರಿಸಿದ ವರದಿಯಂತೆ ಕಾಣಿಸುತ್ತಿದೆ. ಬಹುಶಃ ಅವರು ಭಾರತಕೆಕ ಬಂದು ಇಲ್ಲಿನ ಧಾರ್ಮಿಕ ಸಹಿಷ್ಣುತೆ, ಸಹಬಾಳ್ವೆ ಇತ್ಯಾದಿಗಳನ್ನು ನೋಡಿದ್ದರೆ ಇಂಥ ವರದಿ ತಯಾರಿಸುತ್ತಿರಲಿಲ್ಲ. ಭಾರತದಿಂದ ಆಚೆಗೆ ಕುಳಿತು ಭಾರತದ ವಿರುದ್ಧವೇ ಯುಟ್ಯೂಬ್‌ ವಿಡಿಯೋ ಮಾಡಿ ಬಿಡುವ ʼಬುದ್ಧಿವಂತʼರ ಮಾತುಗಳನ್ನು ಕೇಳಿಕೊಂಡು ಇದನ್ನು ತಯಾರಿಸಿದಂತೆ ಇದೆ. ಈ ವರದಿಯ ಅಕ್ಷರಕ್ಷರವೂ ಸುಳ್ಳು ಎಂಬುದಕ್ಕೆ ಸಾಕ್ಷಿಗಳನ್ನು ನೀಡಬಹುದು. ಸಿಪಿಎ (ಸೆಂಟರ್ ಫಾರ್ ಪಾಲಿಸಿ ಅನಾಲಿಸಿಸ್) ಎಂಬ ಜಾಗತಿಕ ಸಂಸ್ಥೆ ಕಳೆದ ವರ್ಷ ನೀಡಿರುವ ಜಾಗತಿಕ ವರದಿಯಲ್ಲಿ, ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ, ಅಲ್ಪಸಂಖ್ಯಾತರನ್ನು ಒಳಗೊಳ್ಳುವ ಕ್ರಮಗಳಲ್ಲಿ ಭಾರತ ನಂ.1 ಸ್ಥಾನದಲ್ಲಿದೆ ಎಂದು ಹೇಳಿದೆ. ಇದೊಂದು ಸ್ವತಂತ್ರ ಅಂತಾರಾಷ್ಟ್ರೀಯ ಸಂಸ್ಥೆ. 110 ರಾಷ್ಟ್ರಗಳಲ್ಲಿ ಸಮೀಕ್ಷೆ ನಡೆಸಿ ಆ ವರದಿ ನೀಡಿತ್ತು. ಭಾರತವೇ ಅಲ್ಪಸಂಖ್ಯಾತರಿಗೆ ಹೆಚ್ಚು ಸುರಕ್ಷಿತ ಜಾಗ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಯಾವುದೇ ನಿರ್ಬಂಧ ಇಲ್ಲ. ಭಾರತದ ಸಂವಿಧಾನವು ಸಂಸ್ಕೃತಿ ಮತ್ತು ಶಿಕ್ಷಣ ಎರಡರಲ್ಲೂ ಧಾರ್ಮಿಕ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸುವ ವಿಶಿಷ್ಟ, ವಿಶೇಷ ವಿಧಿಗಳನ್ನು ಹೊಂದಿದೆ ಎಂದೂ ಈ ವರದಿ ಉಲ್ಲೇಖಿಸಿದೆ. ಭಾರತದ ನಂತರದ 4 ಸ್ಥಾನಗಳಲ್ಲಿ ಪನಾಮಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ನಂತರದ ಸ್ಥಾನದಲ್ಲಿ ಅಮೆರಿಕ ದೇಶ ಇದೆ. ಯುಎಸ್‌ಸಿಐಆರ್‌ಎಫ್‌ ಇದನ್ನು ಗಮನಿಸಿದಂತಿಲ್ಲ.

ನಮ್ಮ ದೇಶದಲ್ಲಿ ಆರು ಧರ್ಮಗಳ (ಮುಸ್ಲಿಂ, ಕ್ರೈಸ್ತ, ಸಿಖ್‌, ಜೈನ, ಬೌದ್ಧ, ಪಾರ್ಸಿ) ಅಲ್ಪಸಂಖ್ಯಾತರು ಒಟ್ಟಾಗಿ ಒಟ್ಟಾರೆ ಜನಸಂಖ್ಯೆಯ 19.3%ದಷ್ಟು ಇದ್ದಾರೆ. ಅಲ್ಪಸಂಖ್ಯಾತರ ಹಿತವನ್ನೂ ಬಹುಸಂಖ್ಯಾತರಂತೆಯೇ ಕಾಯಲು ನಮ್ಮ ಸಂವಿಧಾನದಲ್ಲೂ ʼಧರ್ಮನಿರಪೇಕ್ಷತೆʼಯನ್ನು ಸೇರಿಸಲಾಗಿದೆ. ಅಲ್ಪಸಂಖ್ಯಾತ ಹಿತಚಿಂತನೆ ನೋಡಿಕೊಳ್ಳುವುದಕ್ಕಾಗಿಯೇ ಕೇಂದ್ರದಲ್ಲಿ ʼಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯʼ ಇದೆ. ಈ ದೇಶದ ಮುಖ್ಯಮಂತ್ರಿ, ರಾಜ್ಯಪಾಲ, ರಾಷ್ಟ್ರಪತಿ ಹುದ್ದೆಯನ್ನೂ ಭಾರತೀಯ ಅಲ್ಪಸಂಖ್ಯಾತರು ಜನಮತದಿಂದಲೇ ಅಲಂಕರಿಸಿದ್ದಾರೆ. ಭಾರತದ ಜನಸಂಖ್ಯೆಯ ಸುಮಾರು 14%ದಷ್ಟು, ಅಂದರೆ 20 ಕೋಟಿ ಮಂದಿ ಮುಸ್ಲಿಮರು ಇಲ್ಲಿ ಇದ್ದಾರೆ. ಇದು ದೇಶದ ಎರಡನೇ ಅತಿ ದೊಡ್ಡ ಧಾರ್ಮಿಕ ಸಮುದಾಯ. ಇಂಡೋನೇಷ್ಯಾ ಹಾಗೂ ಪಾಕಿಸ್ತಾನದ ಬಳಿಕ ಅತಿ ಹೆಚ್ಚು ಮುಸ್ಲಿಮರು ಇರುವ ದೇಶ ಎಂದರೆ ಭಾರತ. ಇನ್ನುಳಿದ ಇಸ್ಲಾಮಿಕ್‌ ದೇಶಗಳೆನಿಸಿಕೊಂಡವು ಕೂಡ ಭಾರತದಷ್ಟು ಸಂಖ್ಯೆಯ ಮುಸ್ಲಿಮರನ್ನು ಹೊಂದಿಲ್ಲ. ಭಾರತದಲ್ಲಿ ಎರಡೂ ಧರ್ಮಗಳೂ ಸಾಕಷ್ಟು ಸಾಮರಸ್ಯದಿಂದ ಬಾಳುತ್ತಿವೆ. ಪಾಕಿಸ್ತಾನ, ಇರಾನ್ ಮುಂತಾದ ಅಪ್ಪಟ ಮುಸ್ಲಿಂ ದೇಶಗಳಿಗಿಂತ ಭಾರತೀಯ ಮುಸ್ಲಿಮರು ಹೆಚ್ಚು ಸ್ವಾತಂತ್ರ್ಯ ಮತ್ತು ಸೌಕರ್ಯ ಹೊಂದಿದ್ದಾರೆ. ಹಾಗೆ ನೋಡಿದರೆ ಮುಸ್ಲಿಂ ದೇಶಗಳಲ್ಲೇ ಮುಸ್ಲಿಮರು ಸುರಕ್ಷಿತವಾಗಿಲ್ಲ. ಪಾಕಿಸ್ತಾನ, ಆಫ್ಘಾನಿಸ್ತಾನದ ಮಸೀದಿಗಳಲ್ಲೇ ಬಾಂಬ್ ಇಟ್ಟು ಸ್ಫೋಟಿಸಲಾಗುತ್ತಿದೆ. ಅಲ್ಲಿಯ ಅಲ್ಪಸಂಖ್ಯಾತರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಈ ಸೋಗಲಾಡಿ ವರದಿ ಅದನ್ನೇನಾದರೂ ನೆನಪಿಸಿಕೊಂಡಿದೆಯೇ?

ಈ ವರದಿಯನ್ನು ಹೊರಡಿಸಿದ ಅಮೆರಿಕದ ಬುಡದಲ್ಲಿ ಏನಿದೆ ಎಂದು ಸ್ವಲ್ಪ ನೋಡೋಣ. ಅತಿ ಹಳೆಯ ಪ್ರಜಾಪ್ರಭುತ್ವ ದೇಶ ಎನಿಸಿಕೊಂಡ ಆ ದೇಶದಲ್ಲಿ ಇನ್ನೂವರೆಗೂ ಒಬ್ಬ ಮಹಿಳೆಯೂ ಅಧ್ಯಕ್ಷರಾಗಲು ಸಾಧ್ಯವಾಗಲಿಲ್ಲ. ಬರಾಕ್‌ ಒಬಾಮರಂಥ ಅಲ್ಪಸಂಖ್ಯಾತರು ಅಧ್ಯಕ್ಷರಾಗಲು ಹಲವು ಶತಮಾನಗಳೇ ಬೇಕಾಯಿತು. ಮಹಿಳೆಯರೂ ತಮ್ಮ ಮತದಾನದ ಹಕ್ಕನ್ನು ಪಡೆಯಲು ಬಡಿದಾಡಬೇಕಾಯಿತು. ಇನ್ನು ಅಲ್ಲಿನ ಆಫ್ರಿಕನ್‌ ಸಮುದಾಯ ಅನುಭವಿಸುತ್ತಿರುವ ಸಂಕಷ್ಟವನ್ನು ಹೇಳಬೇಕಾಗಿಯೇ ಇಲ್ಲ. ಇವರನ್ನು ಇಲ್ಲಿ ನೂರಾರು ವರ್ಷಗಳ ಕಾಲ ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತ್ತಿತ್ತು. ಇದನ್ನು ಹೋಗಲಾಡಿಸಲು ಲಿಂಕನ್‌ನಂಥ ಮುತ್ಸದ್ಧಿ ಬಲಿದಾನ ಮಾಡಬೇಕಾಯಿತು. ಈಗಲೂ ಅಲ್ಲಿ ಕರಿಯರ ಸಮುದಾಯದ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಇದನ್ನು ವಿರೋಧಿಸಿ ನಡೆಸಲಾಗುತ್ತಿರುವ ʼಬ್ಲ್ಯಾಕ್‌ ಲೈವ್ಸ್‌ ಮ್ಯಾಟರ್ʼ ಚಳವಳಿಯನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು. ಇನ್ನು ಅಲ್ಲಿನ ಮೂಲವಾಸಿ ಅಮೆರಿಕನ್‌ ಸಮುದಾಯದವರನ್ನು ಯಾವ ರೀತಿ ನಿರ್ಮೂಲನ ಮಾಡಲಾಯಿತು ಎಂಬುದು ಚರಿತ್ರೆಯಲ್ಲಿ ಸೇರಿಹೋಗಿರುವ ಕರಾಳ ಅಧ್ಯಾಯಗಳಲ್ಲೊಂದು. ಇಂದು ಹುಡುಕಿದರೂ ಆ ಜನಾಂಗ ಅಲ್ಲಿ ಸಿಗುವುದಿಲ್ಲ. ಇನ್ನು ಮುಸ್ಲಿಮರ ವಿಷಯಕ್ಕೆ ಬಂದರೆ, 9/11 ಘಟನೆಯ ನಂತರ ಅಲ್ಲಿ ಪ್ರತಿಯೊಬ್ಬ ಮುಸ್ಲಿಮನನ್ನೂ ಶಂಕಿತ ಭಯೋತ್ಪಾದಕನಂತೆಯೇ ನೋಡಲಾಗುತ್ತದೆ. ಮುಸ್ಲಿಮರನ್ನು ಈ ಅನುಮಾನದಿಂದಾಗಿಯೇ ಅಲ್ಲಿನ ಸರ್ಕಾರಿ ಆಡಳಿತಾತ್ಮಕ ಹುದ್ದೆಗಳಲ್ಲಿ ಒಳಬಿಟ್ಟುಕೊಳ್ಳಲಾಗುತ್ತಿಲ್ಲ. ಇಂಥ ದೇಶ, ಭಾರತದಂಥ ʼವಸುಧೈವ ಕುಟುಂಬಕಂʼ ಮಂತ್ರವನ್ನು ಸಾರಿದ ಪುರಾತನ ಸಂಸ್ಕೃತಿಯ ದೇಶಕ್ಕೆ ಬುದ್ಧಿವಾದ ಹೇಳುವುದು ಒಂದು ಕೆಟ್ಟ ಜೋಕ್.‌

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ. ಅಮೆರಿಕ ಇಂಥವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಬಾರದು.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Continue Reading

ಪ್ರಮುಖ ಸುದ್ದಿ

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Tax Returns: ಹಣದುಬ್ಬರದಿಂದ ಪಾಕಿಸ್ತಾನವು ತತ್ತರಿಸಿ ಹೋಗಿದೆ. ಒಂದೆಡೆ, ಪಾಕಿಸ್ತಾನಕ್ಕೆ ಬೇರೆ ದೇಶಗಳಿಂದ, ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಹಣಕಾಸು ನೆರವು ಸಿಗುತ್ತಿಲ್ಲ. ಇನ್ನೊಂದೆಡೆ, ಹಣದುಬ್ಬರ ನಿಯಂತ್ರಣ ಮಾಡಲು ಆಗುತ್ತಿಲ್ಲ. ಹಾಗಾಗಿ, ಪಾಕಿಸ್ತಾನದ ನಾಗರಿಕರು ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಪಾವತಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಹಣದುಬ್ಬರ ಏರಿಕೆಯು ಅವರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಇದರ ಬೆನ್ನಲ್ಲೇ, ಸರ್ಕಾರವು ಜನರಿಗೆ ತೆರಿಗೆ ಎಂಬ ಗುರಾಣಿ ಬಳಸಲು ಮುಂದಾಗಿದೆ.

VISTARANEWS.COM


on

Tax Returns
Koo

ಇಸ್ಲಾಮಾಬಾದ್:‌ ಉಗ್ರರ ಪೋಷಣೆ, ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನ (Pakistan) ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಸಾಲ ಪಡೆಯಲು ಹೆಣಗಾಡುತ್ತಿದೆ. ಹಣದುಬ್ಬರದ ಏರಿಕೆಯಿಂದಾಗಿ ಜನರ ಜೀವನವೂ ಸಂಕಷ್ಟಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ, ದೇಶದ ನಾಗರಿಕರ ವಿರುದ್ಧ ಪಾಕಿಸ್ತಾನವು ತೆರಿಗೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಆದಾಯ ತೆರಿಗೆ ರಿಟರ್ನ್ಸ್‌ (Tax Returns) ಸಲ್ಲಿಸದ 5 ಲಕ್ಷ ಜನರ ಸಿಮ್‌ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ತೀರ್ಮಾನಿಸಿದೆ.

ಪಾಕಿಸ್ತಾನದ ಖಜಾನೆಯಲ್ಲಿ ಹಣವಿಲ್ಲ. ಇದರಿಂದ ಸುಗಮವಾಗಿ ಆಡಳಿತ ನಡೆಸುವುದು ಬಿಡಿ ನೌಕರರಿಗೆ ಸಂಬಳ ಕೊಡಲೂ ಆಗುತ್ತಿಲ್ಲ. ಹಾಗಾಗಿ, ಜನರಿಂದ ತೆರಿಗೆ ಸಂಗ್ರಹಿಸಲು ಪಾಕಿಸ್ತಾನವು ಮುಂದಾಗಿದೆ. ಇದರ ಭಾಗವಾಗಿಯೇ, 2023ರಲ್ಲಿ ಐಟಿ ರಿಟರ್ನ್ಸ್‌ ಸಲ್ಲಿಸದ 5,06,671 ಜನರ ಸಿಮ್‌ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ಪಾಕಿಸ್ತಾನದ ಫೆಡರಲ್‌ ಬೋರ್ಡ್‌ ಆಫ್‌ ರೆವೆನ್ಯೂ (FBR) ನಿರ್ಧರಿಸಿದೆ. ಅವರು ಐಟಿ ರಿಟರ್ನ್ಸ್‌ ಸಲ್ಲಿಸಿದ ಬಳಿಕವೇ ಸಿಮ್‌ಕಾರ್ಡ್‌ಗಳನ್ನು ಸಕ್ರಿಯಗೊಳಿಸಲಾಗುವುದು ಎಂದು ಕೂಡ ತಿಳಿಸಿದೆ.

ಸಿಮ್‌ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಕುರಿತು ಪಾಕಿಸ್ತಾನದ ಟೆಲಿಕಮ್ಯುನಿಕೇಷನ್‌ ಅಥಾರಿಟಿಗೆ (PTA) ನಿರ್ದೇಶನ ನೀಡಲಾಗಿದೆ. ಸಿಮ್‌ ಕಾರ್ಡ್‌ ಬಂದ್‌ ಮಾಡಿರುವ ಕುರಿತು ಮೇ 15ರೊಳಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ತೆರಿಗೆ ಪಾವತಿಸದ ಸುಮಾರು 24 ಲಕ್ಷ ತೆರಿಗೆದಾರರನ್ನು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆರಂಭಿಕ ಹಂತದಲ್ಲಿ 5 ಲಕ್ಷ ತೆರಿಗೆದಾರರ ಸಿಮ್‌ ಕಾರ್ಡ್‌ ನಿಷ್ಕ್ರಿಯಗೊಳಿಸಲು ತೀರ್ಮಾನಿಸಲಾಗಿದೆ.

ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ

ಪಾಕಿಸ್ತಾನದಲ್ಲಿ ಹಣದುಬ್ಬರದ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯು ಗಗಣಕ್ಕೇರಿದೆ. ಒಂದು ಲೀಟರ್‌ ಹಾಲಿಗೆ 212 ರೂ., ಕೆ.ಜಿ ಅಕ್ಕಿಗೆ 330 ರೂ., ಒಂದು ಕೆ.ಜಿ ಸೇಬಿಗೆ 300 ರೂ., ಒಂದು ಕೆ.ಜಿ ಟೊಮ್ಯಾಟೊಗೆ 125 ರೂ., ಒಂದು ಕೆ.ಜಿ ಈರುಳ್ಳಿ 125 ರೂ., ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. ಇದೆ. ದಿನೇದಿನೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಪಾಕಿಸ್ತಾನದ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಂತರದ ದುಸ್ಥಿತಿ ಹೀಗೆಯೇ ಮುಂದುವರಿದಿರುವುದು ಅವರನ್ನು ಆತಂಕಕ್ಕೆ ದೂಡಿದೆ.

ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಹೆಣಗಾಡುತ್ತಿದೆ. ಈಗಾಗಲೇ ಐಎಂಎಫ್‌ 1.10 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂಬುದಾಗಿ ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

Continue Reading
Advertisement
Prajwal Revanna Case Another case against Revanna transferred to SIT Notice to Bhavani
ಕ್ರೈಂ45 mins ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 202452 mins ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ1 hour ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Murder case
ಕ್ರೈಂ1 hour ago

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Hockey India
ಕ್ರೀಡೆ1 hour ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Prajwal Revanna Case Revanna withdraws anticipatory bail plea
ಕ್ರೈಂ1 hour ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Kannada Serials TRP puttakkana makkalu top the list
ಕಿರುತೆರೆ2 hours ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

bomber drone
ತಂತ್ರಜ್ಞಾನ2 hours ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್2 hours ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ2 hours ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ20 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌