ಹಿಂದೂಗಳ ಆಸ್ತಿ ಲೂಟಿ ಮಾಡಿ, ದೇವರ ವಿಗ್ರಹ ಕದ್ದು ಪಾಕಿಸ್ತಾನ ಸ್ಥಾಪನೆ; ಪಾಕ್‌ ಪತ್ರಕರ್ತನ ವಿಡಿಯೊ ವೈರಲ್‌ - Vistara News

ವಿದೇಶ

ಹಿಂದೂಗಳ ಆಸ್ತಿ ಲೂಟಿ ಮಾಡಿ, ದೇವರ ವಿಗ್ರಹ ಕದ್ದು ಪಾಕಿಸ್ತಾನ ಸ್ಥಾಪನೆ; ಪಾಕ್‌ ಪತ್ರಕರ್ತನ ವಿಡಿಯೊ ವೈರಲ್‌

ಪಾಕಿಸ್ತಾನದ ಸೃಷ್ಟಿಯ ಮೂಲವನ್ನು ಟೀಕಿಸಿರುವ ಪಾಕಿಸ್ತಾನಿ ಪತ್ರಕರ್ತ ಇಮ್ರಾನ್ ಶಫ್ಕತ್ ಅವರ ಇತ್ತೀಚಿನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ (Viral Video) ವ್ಯಾಪಕ ಚರ್ಚೆಯನ್ನು ಹುಟ್ಟು ಹಾಕಿದೆ. ಅವರು ಈ ವಿಡಿಯೋದಲ್ಲಿ ಇಸ್ಲಾಮಿಕ್ ತತ್ತ್ವಗಳ ಮೇಲೆ ಪಾಕಿಸ್ತಾನವನ್ನು ಸ್ಥಾಪಿಸಲಾಗಿದೆ ಎಂಬುದು ಸುಳ್ಳು ಎಂದ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಕಿಸ್ತಾನದ (pakistan) ಹುಟ್ಟಿನ ಬಗ್ಗೆ ಅಲ್ಲಿನ ಹಿರಿಯ ಪತ್ರಕರ್ತ (journalist) ಇಮ್ರಾನ್ ಶಫ್ಕತ್ (Imran Shafqat ) ಹೇಳಿರುವ ಮಾತುಗಳು ಈಗ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral Video) ಆಗಿದ್ದು, ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಪಾಕಿಸ್ತಾನ ಫಾರ್ ಇಸ್ಲಾಂ (Pakistan for Islam) ಎಂಬುದನ್ನು ಪ್ರಶ್ನಿಸಿರುವ ಅವರು, 1947ರಲ್ಲಿ ಹಿಂದೂಗಳ ದೇವಾಲಯಗಳನ್ನು ಲೂಟಿ ಮಾಡಿ, ಅವರ ಆಸ್ತಿಗಳನ್ನು ವಶಪಡಿಸಿಕೊಂಡು ಪಾಕಿಸ್ತಾನವನ್ನು ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪಾಕಿಸ್ತಾನಿ ಪತ್ರಕರ್ತ ಇಮ್ರಾನ್ ಶಫ್ಕತ್ ಅವರ ಇತ್ತೀಚಿನ ವಿಡಿಯೋ ಇದಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿವಾದ ಮತ್ತು ಚರ್ಚೆಯನ್ನು ಹುಟ್ಟುಹಾಕಿದೆ. ಅವರು ಪಾಕಿಸ್ತಾನದ ಸೃಷ್ಟಿಯ ಮೂಲವನ್ನು ಟೀಕಿಸಿದ್ದಾರೆ.
ಅವರ ಯೂಟ್ಯೂಬ್ ಚಾನೆಲ್ ‘ಟೆಲ್ಲಿಂಗ್ಸ್ ವಿತ್ ಇಮ್ರಾನ್ ಶಫ್ಕತ್’ನ ವಿಡಿಯೋ ಕ್ಲಿಪ್ ಅನ್ನು ಎಕ್ಸ್ ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ವೈರಲ್ ಕ್ಲಿಪ್‌ನಲ್ಲಿ, ಶಫ್ಕತ್ ಗಮನಾರ್ಹ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನವನ್ನು ಸ್ಥಾಪನೆಯ ಐತಿಹಾಸಿಕ ಆಧಾರವನ್ನು ಪ್ರಶ್ನಿಸಿದ್ದಾರೆ.

ಪಾಕಿಸ್ತಾನದ ಆರಂಭದ ಬಗ್ಗೆ ಶಫ್ಕತ್ ಅನೇಕ ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ. ಪಾಕಿಸ್ತಾನವನ್ನು ರಚಿಸಿದ ಮೊದಲ ದಿನ ಅದನ್ನು ಇಸ್ಲಾಂ ಹೆಸರಿನಲ್ಲಿ ಮಾಡಲಾಯಿತು ಎಂಬುದೆಲ್ಲ ಸುಳ್ಳು ಎಂದು ಅವರು ಆರೋಪಿದ್ದಾರೆ. ಪಾಕಿಸ್ತಾನದ ಸ್ಥಾಪಕರು ಸಲ್ಲಿಸಿದ ಆರಂಭಿಕ ದಾಖಲೆಗಳನ್ನು “ದೊಡ್ಡ ಸುಳ್ಳು” ಎಂದಿರುವ ಅವರು, ಕೇವಲ ಇಸ್ಲಾಮಿಕ್ ತತ್ತ್ವಗಳ ಮೇಲೆ ಪಾಕಿಸ್ತಾನವನ್ನು ಸ್ಥಾಪಿಸಲಾಗಿದೆ ಎಂಬ ನಿರೂಪಣೆಯು ತಪ್ಪುದಾರಿಗೆಳೆಯುತ್ತಿದೆ ಎಂದು ಹೇಳಿದ್ದಾರೆ.

ಸುಳ್ಳು ದಾಖಲೆ

ಇಸ್ಲಾಂ ಧರ್ಮದ ಹೆಸರಿನಲ್ಲಿ ಪಾಕಿಸ್ತಾನವನ್ನು ನಿರ್ಮಿಸಲಾಗಿದೆ ಎಂದು ಅವರು ನಮಗೆ ಹೇಳುತ್ತಿದ್ದದ್ದು ಒಂದು ದೊಡ್ಡ ಅಫೀಮ್. ದೇವರಿಗೆ ಗೊತ್ತು ಈ ದೇಶದ ಸೃಷ್ಟಿಕರ್ತರು ಸಲ್ಲಿಸಿದ ಮೊದಲ ದಾಖಲೆ ಒಂದು ದೊಡ್ಡ ಸುಳ್ಳು, ಹಲವಾರು ಸುಳ್ಳು ಹೇಳಿಕೆಗಳಿವೆ ಎಂದು ಅವರು ಹೇಳಿದರು.


ದೇವಸ್ಥಾನ ಲೂಟಿ, ಭೂಮಿ ವಶ

ಇತಿಹಾಸದಿಂದ ನಿರ್ದಿಷ್ಟ ಘಟನೆಗಳನ್ನು ಎತ್ತಿ ತೋರಿಸುತ್ತಾ, ಪಾಕಿಸ್ತಾನದ ರಚನೆಯಾದ ಸ್ವಲ್ಪ ಸಮಯದ ಅನಂತರ ಲಾಹೋರ್‌ನಲ್ಲಿ ಮುಸ್ಲಿಮರು ಬಲವಂತವಾಗಿ ದೇವಸ್ಥಾನವನ್ನು ಪ್ರವೇಶಿಸಿದರು. ವಿಗ್ರಹಗಳನ್ನು ಕದ್ದರು ಮತ್ತು ಹಿಂದೂ ಒಡೆತನದ ಅಂಗಡಿಗಳು ಮತ್ತು ಭೂಮಿಯನ್ನು ವಶಪಡಿಸಿಕೊಂಡರು ಎಂದು ಶಫ್ಕತ್ ಆರೋಪಿಸಿದ್ದಾರೆ.

ದೇವಾಲಯದ ಬೀಗಗಳನ್ನು ಒಡೆದು ವಿಗ್ರಹಗಳನ್ನು ಕದ್ದಿರುವ ಲಾಹೋರ್‌ನ ಮುಸ್ಲಿಮರು ಹಿಂದೂ ಅಂಗಡಿಗಳನ್ನು ಸಹ ವಶಪಡಿಸಿಕೊಂಡರು. ಅದನ್ನು ಮುರಿದು ಅವುಗಳ ಶೆಟರ್‌ಗಳನ್ನು ಎಳೆದಿದ್ದಾರೆ. ಇದು ಪಾಕಿಸ್ತಾನದ ಅಡಿಪಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

ಶಫ್ಕತ್ ಮಾಡಿರುವ ಈ ಟೀಕೆಗಳು ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ. ಒಬ್ಬ ಬಳಕೆದಾರರು, ಸತ್ಯವನ್ನು ಮಾತನಾಡುವ ಧೈರ್ಯ ಮತ್ತು ದೃಢತೆಯನ್ನು ಹೊಂದಿರುವ ನಿಮಗೆ ಹ್ಯಾಟ್ಸ್ ಆಫ್. ಈ ಜಗತ್ತನ್ನು ಉತ್ತಮ ಸ್ಥಳವಾಗಿಸಲು ನಿಮ್ಮಂತಹ ಹೆಚ್ಚು ಜನರು ಇರಬೇಕು ಎಂದು ಹೇಳಿದ್ದಾರೆ.

ಇನ್ನೊಬ್ಬ ಬಳಕೆದಾರ, ಎಚ್ಚರವಾಗಿರಿ. ನಿಮ್ಮನ್ನು ಕೊಲ್ಲಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬರು ಶಫ್ಕತ್ ಅವರ ಸುರಕ್ಷತೆ ಬಗ್ಗೆ ಭಯಪಟ್ಟಿದ್ದಾರೆ. ಇನ್ನೊಬ್ಬರು ಸರಿಯಾಗಿ ಮಾತನಾಡಿದ್ದೀರಿ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಮಾಡಲೆಂದೇ ಆತನು ಅಮೆರಿಕಕ್ಕೆ ತೆರಳಿದ್ದ ಎಂದು ತಿಳಿದುಬಂದಿದೆ.

VISTARANEWS.COM


on

Indian Women
ಜಸ್ವೀನ್‌ ಕೌರ್‌ ಹಾಗೂ ಗಗನ್‌ದೀಪ್‌ ಕೌರ್.‌
Koo

ವಾಷಿಂಗ್ಟನ್‌: ಇತ್ತೀಚಿನ ಯುವಕ-ಯುವತಿಯರಲ್ಲಿ ಸೇಡಿನ ಕೃತ್ಯಗಳು, ಲವ್‌ ಬ್ರೇಕಪ್‌ (Love Breakup) ಆದ ಕೂಡಲೇ ಪ್ರೇಯಸಿಯನ್ನು ಕೊಲ್ಲುವುದು, ಆಸಿಡ್‌ ದಾಳಿ ಮಾಡುವುದು ಸೇರಿ ಹಲವು ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಇನ್ನು ಪಂಜಾಬ್‌ ಯುವಕನೊಬ್ಬ ಭಾರತದಿಂದ ಅಮೆರಿಕಕ್ಕೆ (America) ತೆರಳಿ, ಅಲ್ಲಿ 29 ವರ್ಷದ ಮಹಿಳೆಯ ಮೇಲೆ 7 ಬಾರಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಈ ಭೀಕರ ಹತ್ಯೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತದಿಂದ ಅಮೆರಿಕಕ್ಕೆ ತೆರಳಿ, ಅಲ್ಲಿ ಯುವತಿಯನ್ನು ಹುಡುಕಿ, ಅವರ ಮನೆಗೇ ತೆರಳಿ ಗುಂಡಿನ ದಾಳಿ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ. ಕೃತ್ಯದ ಬಳಿಕ ಪೊಲೀಸರು ಗೌರವ್‌ ಗಿಲ್‌ನನ್ನು ಬಂಧಿಸಿದ್ದಾರೆ.

ಪಂಜಾಬ್‌ನ ಗೌರವ್‌ ಗಿಲ್‌ ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದು, ವಾಷಿಂಗ್ಟನ್‌ ಜಿಲ್ಲೆಯ ಕೆಂಟ್‌ ಪಟ್ಟಣದಲ್ಲಿ ವಾಸಿಸುತ್ತಿದ್ದ. ನ್ಯೂಜೆರ್ಸಿಯ ಕಾರ್ಟರೆಟ್‌ನಲ್ಲಿ ಘಟನೆ ನಡೆದಿದೆ. ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಅವರು ಪಂಜಾಬ್‌ನ ನಾಕೋದರ್‌ನಲ್ಲಿ ಕೋಚಿಂಗ್‌ ಸೆಂಟರ್‌ನಲ್ಲಿ ಅಧ್ಯಯನ ಮಾಡುವಾಗ ಪರಸ್ಪರ ಪರಿಚಯವಾಗಿದ್ದರು ಎಂದು ತಿಳಿದುಬಂದಿದೆ. ಜಸ್ವೀರ್‌ ಅವರು ಗಗನ್‌ದೀಪ್‌ ಕಸಿನ್‌ ಆಗಿದ್ದು, ಗಗನ್‌ದೀಪ್‌ ಅವರು ಜಸ್ವೀರ್‌ ಮನೆಗೆ ಹೋಗಿದ್ದರು. ಆಗ ಗೌರವ್‌ ಗಿಲ್‌ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಜಸ್ವೀರ್‌ ಕೌರ್‌ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಅಮೆಜಾನ್‌ ಫೆಸಿಲಿಟಿಯಲ್ಲಿ ಇದಕ್ಕೂ ಮೊದಲು ಕೆಲಸ ಮಾಡುತ್ತಿದ್ದರು. ಜಸ್ವೀರ್‌ ಕೌರ್‌ ಅವರ ಪತಿಯು ವಾಹನ ಚಾಲಕರಾಗಿದ್ದು, ಘಟನೆ ನಡೆದಾಗ ಅವರು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಜಸ್ವೀರ್‌ ಅವರು ಐದು ವರ್ಷದ ಹಿಂದೆಯೇ ಅಮೆರಿಕಕ್ಕೆ ತೆರಳಿದ್ದಾರೆ. ಇನ್ನು ಗಗನ್‌ದೀಪ್‌ ಅವರು ಅಧ್ಯಯನ ವೀಸಾ ಪಡೆದು ಇತ್ತೀಚೆಗೆ ಅಮೆರಿಕಕ್ಕೆ ಹೋಗಿದ್ದರು ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಪ್ರೀತಿಸುತ್ತಿದ್ದರು. ಇಬ್ಬರ ಮಧ್ಯೆ ಬ್ರೇಕಪ್‌ ಆಗಿತ್ತು. ಇದರಿಂದ ಕುಪಿತಗೊಂಡ ಗೌರವ್‌ ಗಿಲ್‌, ಗಗನ್‌ದೀಪ್‌ ಕೌರ್‌ ಅವರನ್ನು ಕೊಲೆ ಮಾಡಲು ಗುಂಡು ಹಾರಿಸಿದ್ದಾನೆ. ಆಗ ಜಸ್ವೀರ್‌ ಕೌರ್‌ಗೆ ಗುಂಡು ತಗುಲಿ, ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಸ್ವೀರ್‌ ತಂದೆ ಹೇಳುವುದೇನು?

“ನನ್ನ ಪುತ್ರಿ ಜಸ್ವೀರ್‌ ಕೌರ್‌ ಮನೆಯಲ್ಲಿ ಗಗನ್‌ದೀಪ್‌ ಕೌರ್‌ ಇದ್ದಳು. ಘಟನೆ ನಡೆಯುವಾಗ ಜಸ್ವೀರ್‌ ಕೌರ್‌ ಮಲಗಿದ್ದಳು. ಮನೆಯ ಹೊರಗೆ ಗಗನ್‌ದೀಪ್‌ ಕೌರ್‌ ಹಾಗೂ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಮಧ್ಯೆ ವಾಗ್ವಾದ ನಡೆದಿದೆ. ಆಗ ಸಹಾಯಕ್ಕಾಗಿ ಗಗನ್‌ದೀಪ್‌ ಕೌರ್‌ ನನ್ನ ಮಗಳನ್ನು ಕರೆದಿದ್ದಾಳೆ. ಆಗ ಜಸ್ವೀರ್‌ ಕೌರ್‌ ಜಗಳ ಬಿಡಿಸಲು ಹೋಗಿದ್ದು, ಆರೋಪಿಯು ನನ್ನ ಮಗಳ ಮುಖಕ್ಕೆ ಏಳು ಗುಂಡು ಹಾರಿಸಿ ಕೊಂದಿದ್ದಾನೆ” ಎಂದು ಜಸ್ವೀರ್‌ ಕೌರ್‌ ತಂದೆ ಕೇವಾಲ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading

ದೇಶ

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Nuclear Weapon: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ವರದಿಯೊಂದು ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದೂ ವಿವರಿಸಲಾಗಿದೆ.

VISTARANEWS.COM


on

Nuclear Weapon
Koo

ನವದೆಹಲಿ: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರ (Nuclear Weapon)ಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ವೀಡನ್ ಚಿಂತಕರ ಚಾವಡಿ ಥಿಂಕ್‌-ಟ್ಯಾಂಕ್‌ (Swedish think-tank) ಸೋಮವಾರ ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದು ವರದಿ ಹೇಳಿದೆ.

ಜಾಗತಿಕವಾಗಿ ಆವರಿಸಿರುವ ಯುದ್ಧದ ಭೀತಿಯ ನಡುವೆ, ಚೀನಾದ ಪರಮಾಣು ಶಸ್ತ್ರಾಸ್ತ್ರದ ಪ್ರಮಾಣ ಒಂದು ವರ್ಷದಲ್ಲಿ 90ರಷ್ಟು ಏರಿಕೆಯಾಗಿದೆ. 2023ರ ಜನವರಿಯಲ್ಲಿ ಚೀನಾದಲ್ಲಿ 410 ಸಿಡಿತಲೆ (Warheads) ಇದ್ದರೆ 2024ರ ಜನವರಿಯಲ್ಲಿ ಅದರ ಸಂಖ್ಯೆ 500ಕ್ಕೆ ಏರಿದೆ. ಜತೆಗೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಅಲ್ಲದೆ ಚೀನಾ ಕೆಲವು ಸಿಡಿತಲೆಗಳನ್ನು ಸರ್ವ ಸನ್ನದ್ಧ ರೀತಿಯಲ್ಲಿ ಇರಿಸಿಕೊಂಡಿದೆ ಎಂದೂ ಮೂಲಗಳು ತಿಳಿಸಿವೆ.

ಆಧುನೀಕರಣಕ್ಕೆ ಒತ್ತು

ಅಮೆರಿಕ, ರಷ್ಯಾ, ಇಂಗ್ಲೆಂಡ್‌, ಫ್ರಾನ್ಸ್, ಚೀನಾ, ಭಾರತ, ಪಾಕಿಸ್ತಾನ, ಉತ್ತರ ಕೊರಿಯಾ ಮತ್ತು ಇಸ್ರೇಲ್ – ಈ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ಟಾಕ್ಹೋಮ್ ಇಂಟರ್‌ನ್ಯಾಷನಲ್‌ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ (SIPRI) ವರದಿ ಮಾಡಿದೆ.

2024ರ ಜನವರಿಯಿಂದ ಜಾಗತಿಕವಾಗಿ 12,121 ಸಿಡಿತಲೆಗಳಿವೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ ಸುಮಾರು 9,585ರಷ್ಟು ಸಂಭಾವ್ಯ ಬಳಕೆಗಾಗಿ ಮಿಲಿಟರಿ ದಾಸ್ತಾನುಗಳಲ್ಲಿವೆ. ಈ ಪೈಕಿ ಸುಮಾರು 3,904 ಸಿಡಿತಲೆಗಳನ್ನು ಕ್ಷಿಪಣಿಗಳು ಮತ್ತು ವಿಮಾನಗಳೊಂದಿಗೆ ಸಜ್ಜುಗೊಳಿಸಲಾಗಿದೆ ಎನ್ನುವ ಆಘಾತಕಾರಿ ಮಾಹಿತಿಯೂ ಬಹಿರಂಗಗೊಂಡಿದೆ.

ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಅನೇಕ ಸಿಡಿತಲೆಗಳನ್ನು ನಿಯೋಜಿಸುವ ಸಾಮರ್ಥ್ಯವನ್ನು ಈಗಾಗಲೇ ರಷ್ಯಾ, ಫ್ರಾನ್ಸ್, ಇಂಗ್ಲೆಂಡ್‌, ಅಮೆರಿಕ ಮತ್ತು ಚೀನಾ ಹೊಂದಿದ್ದು, ಇದನ್ನು ಅಭಿವೃದ್ಧಿ ಪಡಿಸಲು ಭಾರತ, ಪಾಕಿಸ್ತಾನ ಮತ್ತು ಉತ್ತರ ಕೊರಿಯಾಗಳು ಮುಂದಾಗಿವೆ. ಇದು ನಿಯೋಜಿತ ಸಿಡಿತಲೆಗಳುಗೆ ಮನ್ನಷ್ಟು ಶಕ್ತಿ ತುಂಬುತ್ತದೆ ಮತ್ತು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಎಂದು ಥಿಂಕ್‌-ಟ್ಯಾಂಕ್‌ ಹೇಳಿದೆ. ಜಾಗತಿಕವಾಗಿ ಕಂಡು ಬಂದಿರುವ ಪರಮಾಣು ಶಸ್ತ್ರಾಸ್ತ್ರಗಳ ಪೈಕಿ ರಷ್ಯಾ ಮತ್ತು ಅಮೆರಿಕದಲ್ಲಿ ಸಿಂಹಪಾಲಿದೆ. ಅಂದೆ ಒಟ್ಟು ಶೇ. 90ರಷ್ಟು ಈ ಎರಡು ದೇಶಗಳಲ್ಲಿವೆ.

ಭಾರತ, ಪಾಕಿಸ್ತಾನದಲ್ಲಿ ಎಷ್ಟಿದೆ?

ಈ ವರ್ಷದ ಜನವರಿಯಲ್ಲಿ ಭಾರತದ ‘ಸಂಗ್ರಹಿತ’ ಪರಮಾಣು ಸಿಡಿತಲೆಗಳ ಸಂಖ್ಯೆ 172ರಷ್ಟಿದ್ದರೆ, ಪಾಕಿಸ್ತಾನದ ಸಂಖ್ಯೆ 170 ಎಂದು ವರದಿ ಹೇಳಿದೆ. “ಪಾಕಿಸ್ತಾನವು ಭಾರತದ ಮುಖ್ಯ ಕೇಂದ್ರಬಿಂದುವಾಗಿದ್ದರೂ, ಚೀನಾದಾದ್ಯಂತ ಗುರಿಗಳನ್ನು ತಲುಪುವ ಸಾಮರ್ಥ್ಯ ಸೇರಿದಂತೆ ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳಿಗೆ ಒತ್ತು ನೀಡುತ್ತಿದೆ” ಎಂದು ಮೂಲಗಳು ತಿಳಿಸಿದೆ. ಇನ್ನು ರಷ್ಯಾ ಮತ್ತು ಅಮೆರಿಕಕ್ಕೆ ಹೋಲಿಸಿದರೆ ಚೀನಾದಲ್ಲಿ ಸಿಡಿತಲೆಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಚೀನಾ ತನ್ನ ಪರಮಾಣು ಶಸ್ತ್ರಾಗಾರವನ್ನು ಇತರ ದೇಶಗಳಿಗಿಂತ ವೇಗವಾಗಿ ವಿಸ್ತರಿಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Mission Divyastra: ʼದಿವ್ಯಾಸ್ತ್ರʼಕ್ಕೆ ಜೀವ ತುಂಬಿದ ʼದಿವ್ಯ ಪುತ್ರಿ! ಯಾರಿವರು?

Continue Reading

ಪ್ರಮುಖ ಸುದ್ದಿ

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Narendra Modi: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲಿವನ್‌ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು. ಜೇಕ್‌ ಸುಲಿವನ್‌ ಅವರ ಜತೆಗಿನ ಭೇಟಿಯ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರೇ ಮಾಹಿತಿ ನೀಡಿದ್ದಾರೆ. ಇಬ್ಬರೂ ರಕ್ಷಣೆ, ಭದ್ರತೆ ಸೇರಿ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿಯಲ್ಲಿ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ (US NSA) ಜೇಕ್‌ ಸುಲಿವನ್‌ (Jake Sullivan) ಅವರನ್ನು ಭೇಟಿಯಾಗಿದ್ದಾರೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಭಾರತ ಪ್ರವಾಸ ಕೈಗೊಂಡಿರುವ ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಕ್ಷಣೆ, ಭದ್ರತೆ, ದ್ವಿಪಕ್ಷೀಯ ಸಂಬಂಧ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಜೇಕ್‌ ಸುಲಿವನ್‌ ಅವರನ್ನು ಭೇಟಿಯಾದ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರು ಪೋಸ್ಟ್‌ ಮಾಡಿದ್ದಾರೆ. “ಅಮೆರಿಕ ಎನ್‌ಎಸ್‌ಎ ಜೇಕ್‌ ಸುಲಿವನ್‌ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದೆ. ಜಾಗತಿಕ ಸ್ಥಿರತೆ ಹಾಗೂ ಅಭಿವೃದ್ಧಿಗಾಗಿ ಅಮೆರಿಕದ ಜತೆ ಭಾರತವು ವ್ಯೂಹಾತ್ಮಕ ಪಾಲುದಾರಿಕೆಯನ್ನು ಮುಂದುವರಿಸಲು ಬದ್ಧವಾಗಿದೆ” ಎಂಬುದಾಗಿ ಬರೆದುಕೊಂಡಿದ್ದಾರೆ. ಜೂನ್‌ 18ರಂದು ಕೂಡ ಜೇಕ್‌ ಸುಲಿವನ್‌ ಅವರು ಭಾರತದಲ್ಲಿಯೇ ಇರಲಿದ್ದಾರೆ.

ಇಟಲಿಯಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಭಾರತ ಹಾಗೂ ಅಮೆರಿಕ ಸಂಬಂಧ, ಪರಸ್ಪರ ಸಹಕಾರ, ನೆರವು, ಒಪ್ಪಂದ, ರಕ್ಷಣೆ ಸೇರಿ ಹಲವು ವಿಷಯಗಳ ಕುರಿತು ನರೇಂದ್ರ ಮೋದಿ ಅವರು ಜೋ ಬೈಡೆನ್‌ ಅವರೊಂದಿಗೆ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಜೇಕ್‌ ಸುಲಿವನ್‌ ಅವರು ಭಾರತಕ್ಕೆ ಆಗಮಿಸಿರುವುದು ಮಹತ್ವದ ಸಂಗತಿ ಎಂದೇ ಹೇಳಲಾಗುತ್ತಿದೆ.

ದೋವಲ್-ಜೇಕ್‌ ಭೇಟಿ

ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಮೊದಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರನ್ನು ಭೇಟಿಯಾದರು. ರಕ್ಷಣಾ ಒಪ್ಪಂದಗಳು ಹಾಗೂ ಪ್ರಾದೇಶಿಕ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸುವ ಭಾರತ-ಅಮೆರಿಕ ನಡುವಿನ ಇನಿಶಿಯೇಟಿವ್‌ ಆನ್‌ ಕ್ರಿಟಿಕಲ್‌ ಆ್ಯಂಡ್‌ ಎಮರ್ಜಿಂಗ್‌ ಟೆಕ್ನಾಲಜೀಸ್‌ (iCET) ಯೋಜನೆ ಜಾರಿ ಕುರಿತು ಇಬ್ಬರೂ ಎನ್‌ಎಸ್‌ಗಳು ಚರ್ಚಿಸಿದರು ಎಂಬುದಾಗಿ ಮೂಲಗಳು ತಿಳಿಸಿವೆ. ಇಂಡಿಯಾ-ಮಿಡಲ್‌ ಈಸ್ಟ್-ಯುರೋಪ್‌ ಎಕನಾಮಿಕ್‌ ಕಾರಿಡಾರ್‌ (IMEC) ಕುರಿತು ಕೂಡ ಚರ್ಚೆ ನಡೆಸಿದರು ಎನ್ನಲಾಗಿದೆ.

ಇದನ್ನೂ ಓದಿ: Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Continue Reading

ದೇಶ

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Narendra Modi: ನರೇಂದ್ರ ಮೋದಿ ಅವರು ಕೆಲ ದಿನಗಳ ಹಿಂದಷ್ಟೇ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿಯಾಗಿದ್ದರು. ಇದೇ ಫೋಟೊವನ್ನು ಇಟ್ಟುಕೊಂಡು ಮೋದಿ ಅವರನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ ಈಗ ಸೆಲ್ಫ್‌ಗೋಲ್‌ ಹೊಡೆದುಕೊಂಡಿದೆ. ಮೋದಿ ಕುರಿತ ಲೇವಡಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟ್‌ಅನ್ನು ಕೇರಳ ಕಾಂಗ್ರೆಸ್‌ ಡಿಲೀಟ್‌ ಮಾಡಿದೆ.

VISTARANEWS.COM


on

Narendra Modi
Koo

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡುವ ಭರದಲ್ಲಿ ಕೇರಳ ಕಾಂಗ್ರೆಸ್‌ (Kerala Congress) ಘಟಕವು ಪ್ರಮಾಣದ ಎಸಗಿದ್ದು, ತಪ್ಪಿನ ಅರಿವಾಗಿ ಬಳಿಕ ಕ್ಷಮೆಯಾಚಿಸಿದೆ. ಇತ್ತೀಚೆಗೆ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯ ವೇಳೆ ನರೇಂದ್ರ ಮೋದಿ (Narendra Modi) ಅವರು ಪೋಪ್‌ ಫ್ರಾನ್ಸಿಸ್‌ (Pope Francis) ಅವರನ್ನು ಭೇಟಿಯಾಗಿದ್ದರು. ಇದರ ಕುರಿತು ಲೇವಡಿ ಮಾಡಿದ ಕೇರಳ ಕಾಂಗ್ರೆಸ್‌, “ಕೊನೆಗೂ ಪೋಪ್‌ ಫ್ರಾನ್ಸಿಸ್‌ ಅವರಿಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು” ಎಂಬುದಾಗಿ ಪೋಸ್ಟ್‌ ಮಾಡಿದೆ. ಇದಾದ ನಂತರ ಜನಾಕ್ರೋಶ ವ್ಯಕ್ತವಾಗಿದ್ದು, ಬಳಿಕ ಪೋಸ್ಟ್‌ಅನ್ನು ಡಿಲೀಟ್‌ ಮಾಡಿದೆ.

ಇಟಲಿಯಲ್ಲಿ ನರೇಂದ್ರ ಮೋದಿ ಹಾಗೂ ಪೋಪ್‌ ಫ್ರಾನ್ಸಿಸ್‌ ಅವರು ಭೇಟಿಯಾಗಿರುವ ಫೋಟೊವನ್ನು ಕೇರಳ ಕಾಂಗ್ರೆಸ್‌ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿತ್ತು. ಆ ಮೂಲಕ ನರೇಂದ್ರ ಮೋದಿ ಅವರೇ ದೇವರಾಗಿದ್ದು, ಅವರನ್ನು ಭೇಟಿಯಾಗುವ ಅವಕಾಶವು ಪೋಪ್‌ ಅವರದ್ದಾಗಿದೆ ಎಂಬಂತೆ ಕಾಂಗ್ರೆಸ್‌ ಲೇವಡಿ ಮಾಡಿತ್ತು. ಚುನಾವಣೆ ಪ್ರಚಾರದ ವೇಳೆ, “ನಿಮ್ಮ ಸೇವೆ ಮಾಡಲಿ ಎಂಬುದಾಗಿ ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂಬುದಾಗಿ ಮೋದಿ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್‌ ಲೇವಡಿ ಮಾಡಿತ್ತು.

ಕೇರಳ ಕಾಂಗ್ರೆಸ್‌ ಪೋಸ್ಟ್‌ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. “ಇಸ್ಲಾಮಿಕ್‌ ಮೂಲಭೂತವಾದಿಗಳು ಹಾಗೂ ನಗರ ನಕ್ಸಲರು ಕೇರಳ ಕಾಂಗ್ರೆಸ್‌ನ ಎಕ್ಸ್‌ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ದೇಶದ ನಾಯಕರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದು ಇವರ ಕೆಲಸವೇ ಆಗಿದೆ. ಈಗ ಗೌರವಾನ್ವಿತ ಪೋಪ್‌ ಹಾಗೂ ಕ್ರೈಸ್ತ ಸಮುದಾಯದ ಕುರಿತು ಕೂಡ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದನ್ನು ಇವರು ಬಿಟ್ಟಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ರೈಸ್ತರಿಗೆ ಕಾಂಗ್ರೆಸ್‌ ಅವಮಾನ ಮಾಡಲಾಗಿದೆ ಎಂದೇ ಬಿಜೆಪಿ ನಾಯಕರು ಚಾಟಿ ಬೀಸಿದರು.

ಕೇರಳ ಕಾಂಗ್ರೆಸ್‌ನ ಪೋಸ್ಟ್‌ ವೈರಲ್‌ ಆಗಿ, ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಲೇ ಪೋಸ್ಟ್‌ಅನ್ನು ಡಿಲೀಟ್‌ ಮಾಡಲಾಗಿದೆ. ಅಷ್ಟೇ ಅಲ್ಲ, “ಯಾರ ಭಾವನೆಗಳಿಗೂ ಧಕ್ಕೆ ತರುವುದು ನಮ್ಮ ಉದ್ದೇಶವಾಗಿರಲಿಲ್ಲ. ಪೋಸ್ಟ್‌ನಿಂದ ಬೇಸರ ಆಗಿದ್ದರೆ ಕ್ಷಮೆಯಾಚಿಸುತ್ತೇವೆ” ಎಂಬುದಾಗಿ ಕೇರಳ ಕಾಂಗ್ರೆಸ್‌ ಪ್ರಕಟಣೆ ಹೊರಡಿಸಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ಜನಸಂಖ್ಯೆಯಲ್ಲಿ ಮೂರನೇ ಅತಿದೊಡ್ಡ ಸಮುದಾಯ ಎನಿಸಿದೆ. ಕೆಲವು ಕ್ರೈಸ್ತ ಸಮುದಾಯದ ಮುಖಂಡರು ಕೂಡ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Continue Reading
Advertisement
Karnataka Weather Forecast
ಮಳೆ2 mins ago

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Narendra Modi
ದೇಶ16 mins ago

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Electric Shock
ವಿಜಯಪುರ30 mins ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Woman having headache. stressed, Migraine, World Brain Tumor day
ಆರೋಗ್ಯ36 mins ago

Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

Indian Women
ವಿದೇಶ50 mins ago

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

Pavithra Gowda
ಪ್ರಮುಖ ಸುದ್ದಿ52 mins ago

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

International Yoga Day 2024
ಫ್ಯಾಷನ್1 hour ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು1 hour ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್1 hour ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ2 hours ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌