ವಿಸ್ತಾರ ಸಂಪಾದಕೀಯ: ‌ಪಾಕ್ ಕ್ರೂರ ನಡೆ, ಆಫ್ಘನ್ ನಿರಾಶ್ರಿತರು ಅತಂತ್ರ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ‌ಪಾಕ್ ಕ್ರೂರ ನಡೆ, ಆಫ್ಘನ್ ನಿರಾಶ್ರಿತರು ಅತಂತ್ರ

ಇಲ್ಲಿ ಈಗ ಯಾರು ಯಾರನ್ನು ದೂರಬೇಕು, ಯಾರು ಯಾರಿಗೆ ಮಾನವೀಯತೆಯ ಪಾಠ ಮಾಡಬೇಕು? ಎರಡೂ ʼಮುಸ್ಲಿಂ ರಾಷ್ಟ್ರʼಗಳೇ ಆಗಿವೆ. ಮಾತೆತ್ತಿದರೆ ʼಇಸ್ಲಾಮಿಕ್‌ ಭ್ರಾತೃತ್ವʼದ ಬಗ್ಗೆ ಮಾತನಾಡುವವರು ಇದನ್ನು ನೋಡಿ ತುಸು ಪಾಠ ಕಲಿಯುವುದು ಒಳಿತು.

VISTARANEWS.COM


on

Afghan Refugees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಂದು ಕಡೆ ಗಾಜಾದಲ್ಲಿ ಪ್ಯಾಲೆಸ್ತೀನ್‌ ನಿರಾಶ್ರಿತರ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಿದೆ ಎಂದು ಮಾನವ ಹಕ್ಕು ಸಂಘಟನೆಗಳು ಹುಯಿಲಿಡುತ್ತಿದ್ದರೆ, ಇತ್ತ ಪಾಕ್‌ ಹಾಗೂ ಅಫಘಾನಿಸ್ತಾನದ ನಡುವೆ ಸದ್ದಿಲ್ಲದೇ ಇನ್ನೊಂದು ಮೆಗಾ ದೌರ್ಜನ್ಯ ನಡೆದಿದೆ. ಪಾಕಿಸ್ತಾನ ಏಕಾಏಕಿ 17 ಲಕ್ಷ ಆಫ್ಘನ್‌ ನಿರಾಶ್ರಿತರನ್ನು (Afghanistan Refugees) ಗಡಿಪಾರು ಮಾಡಲು ಮುಂದಾಗಿದೆ. ಇದರಿಂದಾಗಿ ಲಕ್ಷಾಂತರ ಆಫ್ಘನ್‌ ನಿರಾಶ್ರಿತರು ಈಗ ಪಾಕ್‌ ತೊರೆದು, ಆಫ್ಘನ್‌ಗೆ ಮರಳುವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಟ್ರಂಕ್‌ ಹೊತ್ತುಕೊಂಡು, ವಾಹನಗಳಲ್ಲಿ ಬ್ಯಾಗ್‌ಗಳನ್ನು ತುಂಬಿಕೊಂಡು, ಮಹಿಳೆಯರು, ಮಕ್ಕಳು ಸೇರಿ ಎಲ್ಲರೂ ಗುಳೆ ಹೊರಟಿರುವ ದೃಶ್ಯಗಳು ಮನಕಲಕುತ್ತಿವೆ. ಆದರೆ ತಾಲಿಬಾನ್‌ ಇವರನ್ನು ಸ್ವೀಕರಿಸುವ ಔದಾರ್ಯ ತೋರಿಸುವ ಸಾಧ್ಯತೆಯಿಲ್ಲ. ಅತ್ತ ತಾಲಿಬಾನ್ ಕ್ರೌರ್ಯ, ಇತ್ತ ದಿವಾಳಿಯಾದ ಪಾಕಿಸ್ತಾನದ ದೌರ್ಜನ್ಯದ ನಡುವೆ ಈ ನಿರಾಶ್ರಿತರು ಸಿಲುಕಿ ಯಾರಿಗೂ ಬೇಡವಾಗಿದ್ದಾರೆ.

ಅಫಘಾನಿಸ್ತಾನದ ಸುಮಾರು 20 ಲಕ್ಷಕ್ಕೂ ಅಧಿಕ ನಿರಾಶ್ರಿತರು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ. 2021ರಲ್ಲಿ ತಾಲಿಬಾನ್‌ ಉಗ್ರರು ಅಫಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಒಂದಷ್ಟು ನಿರಾಶ್ರಿತರು ಅಫಘಾನಿಸ್ತಾನಕ್ಕೆ ಹೋಗಿದ್ದಾರೆ. ಈಗ ಪಾಕಿಸ್ತಾನವು 17 ಲಕ್ಷ ಆಫ್ಘನ್‌ ನಿರಾಶ್ರಿತರು ನವೆಂಬರ್‌ 1ರ ರಾತ್ರಿಯೊಳಗೆ ಪಾಕಿಸ್ತಾನ ತೊರೆಯಬೇಕು. ಇಲ್ಲದಿದ್ದರೆ, ಬಂಧಿಸಿ, ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಸಿದೆ. ಈ ಗಡುವಿನಿಂದಾಗಿ ಲಕ್ಷಾಂತರ ಆಫ್ಘನ್ನರು ಕಷ್ಟಪಟ್ಟು ಗಡಿ ದಾಟುತ್ತಿದ್ದಾರೆ. ಪಾಕಿಸ್ತಾನ ಈ ವಾಪಸಾತಿ ತಾಕೀತಿಗೆ ಭದ್ರತೆಯ ಕಾರಣಗಳನ್ನು ನೀಡಿದೆ. ಆಫ್ಘನ್ನರು ಅಕ್ರಮವಾಗಿ ನೆಲೆಸಿದ್ದು, ಇವರು ದೇಶದ ಭದ್ರತೆಗೆ ಅಪಾಯ ತಂದೊಡ್ಡಿದ್ದಾರೆ. ಹಾಗಾಗಿ, ಇವರನ್ನು ವಾಪಸ್‌ ಕಳುಹಿಸಲಾಗುತ್ತಿದೆ ಎಂದು ಪಾಕ್‌ ತಿಳಿಸಿದೆ. ಇತ್ತೀಚೆಗೆ ಪಾಕ್‌ ಗಡಿಯಲ್ಲಿ ಪಾಕಿಸ್ತಾನಿಯರು ಹಾಗೂ ಆಫ್ಘನ್‌ ನಿರಾಶ್ರಿತರ ಮಧ್ಯೆ ಸಂಘರ್ಷಗಳು ನಡೆಯುತ್ತಿವೆ. ಪಾಕಿಸ್ತಾನವು ಆಫ್ಘನ್‌ ಜತೆ ಸುಮಾರು 2,611 ಕಿಲೋಮೀಟರ್‌ ಗಡಿ ಹೊಂದಿದೆ. ಪಾಕಿಸ್ತಾನದ ಮೇಲೆ ತಾಲಿಬಾನ್‌ ಉಗ್ರರು ಸಿಟ್ಟು ಮಾಡಿಕೊಂಡಿದ್ದಾರೆ. ತಾಲಿಬಾನಿಗಳು ಗಡಿಯಲ್ಲಿ ಉಗ್ರರನ್ನು ಕಳುಹಿಸಿ ಪಾಕ್‌ ನಾಗರಿಕರಿಗೆ ತೊಂದರೆ, ಕಿರುಕುಳ ಕೊಡತ್ತಿದ್ದಾರೆ. ಪಾಕಿಸ್ತಾನದಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಇದುವರೆಗೆ 24 ಆತ್ಮಾಹುತಿ ದಾಳಿಗಳು ನಡೆದಿದ್ದು, ಇವುಗಳಲ್ಲಿ 14 ದಾಳಿಗಳನ್ನು ಆಫ್ಘನ್‌ ನಾಗರಿಕರೇ ಮಾಡಿದ್ದಾರೆ ಎಂದು ಪಾಕಿಸ್ತಾನ ತಿಳಿಸಿದೆ.

ಪಾಕಿಸ್ತಾನವು ಆರ್ಥಿಕವಾಗಿ ದಿವಾಳಿಯಾಗಿರುವುದು ಆಫ್ಘನ್‌ನ ಲಕ್ಷಾಂತರ ನಾಗರಿಕರನ್ನು ವಾಪಸ್‌ ಕಳುಹಿಸಲು ಇನ್ನೊಂದು ಕಾರಣ. ಪಾಕಿಸ್ತಾನವು ಆರ್ಥಿಕವಾಗಿ ಸಂಪೂರ್ಣವಾಗಿ ದಿವಾಳಿಯಾಗಿರುವ ಕಾರಣ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದೇ ಸರ್ಕಾರಕ್ಕೆ ಕಷ್ಟವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ರಾಜಕೀಯವಾಗಿ, ಆಡಳಿತಾತ್ಮಕವಾಗಿಯೂ ಪಾಕ್‌ ಕುಸಿದುಹೋಗಿದೆ. ಹಣಕ್ಕಾಗಿ ಅಂತಾರಾಷ್ಟ್ರೀಯ ಸಂಸ್ಥೆಗಳ ಎದುರು ಪಾಕ್‌ ಭಿಕ್ಷಾಪಾತ್ರೆ ಹಿಡಿದು ನಿಂತಿದೆ. ಹಾಗಾಗಿ, ಅಫಘಾನಿಸ್ತಾನಿಯರನ್ನು ಹೊರದಬ್ಬುತ್ತಿದೆ. ಪಾಕಿಸ್ತಾನದಿಂದ ಏಕಾಏಕಿ ಲಕ್ಷಾಂತರ ಆಫ್ಘನ್‌ ನಿರಾಶ್ರಿತರು ದೇಶಕ್ಕೆ ಆಗಮಿಸುತ್ತಿರುವುದು ತಾಲಿಬಾನ್‌ ಆಡಳಿತಕ್ಕೂ ತಲೆನೋವಾಗಿದೆ. ತೋರ್ಖಾಮ್‌ ಗಡಿಯಲ್ಲಿಯೇ ಒಂದು ಲಕ್ಷ ನಿರಾಶ್ರಿತರು ಆಫ್ಘನ್‌ ತಲುಪಿದ್ದಾರೆ. ಇದುವರೆಗೆ ಎರಡು ಲಕ್ಷ ನಿರಾಶ್ರಿತರು ಅಫಘಾನಿಸ್ತಾನವನ್ನು ತಲುಪಿದ್ದಾರೆ. ಇವರಿಗೆ ಆಶ್ರಯ, ಅನ್ನ, ನೀರು ಸೇರಿ ಮೂಲ ಸೌಕರ್ಯಗಳನ್ನು ಒದಗಿಸುವುದು ತಾಲಿಬಾನ್‌ ಆಡಳಿತಕ್ಕೆ ಕಷ್ಟವಾಗಿದೆ. “ಪಾಕಿಸ್ತಾನವು ಕ್ರೂರ ಹಾಗೂ ನಿರ್ದಯಿಯಾಗಿ ವರ್ತಿಸುತ್ತಿದೆ” ಎಂದು ಆಫ್ಘನ್‌ ಆಡಳಿತ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ವಿಸ್ತಾರ Explainer: 17 ಲಕ್ಷ ಆಫ್ಘನ್ನರನ್ನು ಪಾಕಿಸ್ತಾನ ಕ್ರೂರವಾಗಿ ಓಡಿಸುತ್ತಿರುವುದೇಕೆ?

ಇಲ್ಲಿ ಈಗ ಯಾರು ಯಾರನ್ನು ದೂರಬೇಕು, ಯಾರು ಯಾರಿಗೆ ಮಾನವೀಯತೆಯ ಪಾಠ ಮಾಡಬೇಕು? ಎರಡೂ ʼಮುಸ್ಲಿಂ ರಾಷ್ಟ್ರʼಗಳೇ ಆಗಿವೆ. ಮಾತೆತ್ತಿದರೆ ʼಇಸ್ಲಾಮಿಕ್‌ ಭ್ರಾತೃತ್ವʼದ ಬಗ್ಗೆ ಮಾತನಾಡುವವರು ಇದನ್ನು ನೋಡಿ ತುಸು ಪಾಠ ಕಲಿಯುವುದು ಒಳಿತು. ಎರಡೂ ದೇಶಗಳೂ ಮತಾಂಧತೆಯ ಸುಳಿಯಲ್ಲಿ ಸಿಲುಕಿ ಅಭಿವೃದ್ಧಿಯ ದಾರಿಗಳನ್ನು ತೊರೆದಿವೆ. ಪಾಕಿಸ್ತಾನದ ಪ್ರಜಾಪ್ರಭುತ್ವವನ್ನು ಮಿಲಿಟರಿ ಹಿಡಿದು ಅಲ್ಲಾಡಿಸುತ್ತಿದ್ದರೆ, ಅಫಘಾನಿಸ್ತಾನದಲ್ಲಿ ಭಯೋತ್ಪಾದಕರೇ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಒಂದು ಕಾಲದಲ್ಲಿ ಆಫ್ಘನ್‌ ಉಗ್ರರಿಗೆ ತರಬೇತಿ, ಹಣ ನೀಡಿದ ಪಾಕಿಸ್ತಾನಕ್ಕೇ ಈಗ ಅವರ ಸಹವಾಸ ಸಾಕಾಗಿದೆ. ಅದಕ್ಕೆ ಆಫ್ಘನ್‌ ದೇಶ ಭಸ್ಮಾಸುರನಂತಾಗಿದ್ದು, ಆ ಉಗ್ರರೇ ಪಾಕ್‌ನ ನೆತ್ತಿಗೆ ಉರಿಹಸ್ತವಿಡಲು ಮುಂದಾಗಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ಪೋಷಣೆ ಮಾಡುತ್ತಿದ್ದ ಪಾಕಿಸ್ತಾನ ಇದರಿಂದ ಸ್ವಲ್ಪವಾದರೂ ಪಾಠ ಕಲಿಯುವಂತಾಗುತ್ತದೆಯೇ ನೋಡಬೇಕು. ಎರಡೂ ದೇಶಗಳೂ ಇಂಥ ಶೋಚನೀಯ ಸ್ಥಿತಿಯಲ್ಲಿದ್ದಾಗಲೂ ಇವರ ʼಆಪ್ತ ಮಿತ್ರʼ ಚೀನಾ ತನ್ನ ಪಾಡಿಗೆ ಇದೆ. ಸದ್ಯ ಎರಡೂ ದೇಶಗಳೂ ಅಂತಾರಾಷ್ಟ್ರೀಯ ನೆರವಿನ ನಿರೀಕ್ಷೆಯಲ್ಲಿ ಇವೆ. ಆದರೆ ಸಾಕಿದವರ ಮನೆಗೇ ಕನ್ನವಿಕ್ಕುವ ಬುದ್ಧಿಯನ್ನೂ ಮತಾಂಧತೆಯನ್ನೂ ತೊರೆದು, ಸರಿಯಾದ ಪ್ರಜಾಪ್ರಭುತ್ವ ದೇಶಗಳಾಗುವವರೆಗೂ ಇವರಿಗೆ ದುಃಸ್ಥಿತಿ ಕಟ್ಟಿಟ್ಟ ಬುತ್ತಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ನಡೆದಿದೆ. ಇದರಲ್ಲಿ ಲೇಡಿ ಕಾನ್‌ಸ್ಟೆಬಲ್‌ ಕೂಡ ಭಾಗಿಯಾಗಿದ್ದರು. ಗಾಯಕ ಮನಮೋಹಕವಾಗಿ ಹಾಡಿದ್ದಕ್ಕೆ ಮಹಿಳಾ ಪೇದೆಯು ಮನದುಂಬಿ ಅವರಿಗೆ ಮುತ್ತು ಕೊಟ್ಟರು. ತಬ್ಬಿಕೊಂಡು ಅಭಿಮಾನ ವ್ಯಕ್ತಪಡಿಸಿದರು. ಈಗ ಇದೇ ಅವರಿಗೆ ಮುಳುವಾಗಿದೆ.

VISTARANEWS.COM


on

Lady Constable
Koo

ದಿಸ್ಪುರ: ನೆಚ್ಚಿನ ನಟ-ನಟಿ, ಗಾಯಕ-ಗಾಯಕಿ ಸೇರಿ ಯಾವುದೇ ಸೆಲೆಬ್ರಿಟಿ (Celebrity) ಸಿಕ್ಕರೆ ಹೇಗೆ ವರ್ತಿಸುತ್ತೇವೆ? ಅವರ ಜತೆ ಒಂದು ಸೆಲ್ಫಿ ತೆಗೆದುಕೊಳ್ಳುತ್ತೇವೆ. ತುಸು ಸಮಯ ಸಿಕ್ಕರೂ ಆಟೋಗ್ರಾಫ್‌ ಹಾಕಿಸಿಕೊಳ್ಳುತ್ತೇವೆ. ಆದರೆ, ಅಸ್ಸಾಂನಲ್ಲಿ (Assam) ಲೇಡಿ ಕಾನ್‌ಸ್ಟೆಬಲ್‌ ಒಬ್ಬರು (Lady Constable) ಮೆಚ್ಚಿದ ಗಾಯಕನನ್ನು ವೇದಿಕೆ ಮೇಲೆಯೇ ತಬ್ಬಿಕೊಂಡು, ಗಾಯಕನ ಕೆನ್ನೆಗೊಂದು ಮುತ್ತು ಕೊಟ್ಟು ಅಭಿಮಾನ ಮೆರೆದಿದ್ದಾರೆ. ಆದರೆ, ಗಾಯಕನಿಗೆ ವೇದಿಕೆ ಮೇಲೆಯೇ ಮುತ್ತುಕೊಟ್ಟ ಮಹಿಳಾ ಪೇದೆಯನ್ನು ಈಗ ಅಮಾನತು ಮಾಡಲಾಗಿದೆ.

ಹೌದು, ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ಆಯೋಜಿಸಲಾಗಿತ್ತು. ಗ್ಯಾಂಗ್‌ಸ್ಟರ್‌ ಬಾಲಿವುಡ್‌ ಸಿನಿಮಾದ ಯಾ ಅಲಿ ಎಂಬ ಹಾಡು ಹಾಡಿದ ಖ್ಯಾತ ಜುಬೀನ್‌ ಗರ್ಗ್‌ ಅವರು ಮ್ಯೂಸಿಕ್‌ ಕನ್ಸರ್ಟ್‌ ನಡೆಸಿಕೊಟ್ಟರು. ಅವರ ಮನಮೋಹಕ ಹಾಡಿಗೆ ಅಲ್ಲಿ ನೆರೆದಿದ್ದ ಎಲ್ಲರೂ ಚಪ್ಪಾಳೆ, ಕೇಕೆ ಮೂಲಕ ಪ್ರೋತ್ಸಾಹ ನೀಡಿದರು. ಆದರೆ, ಅಲ್ಲಿಯೇ ಇದ್ದ ಮಹಿಳಾ ಪೇದೆ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರಿಗೆ ಮುತ್ತು ಕೊಟ್ಟರು. ಈ ವಿಡಿಯೊ ಭಾರಿ ವೈರಲ್‌ ಕೂಡ ಆಯಿತು.

ನೆಚ್ಚಿನ ಗಾಯಕನ ಹಾಡಿಗೆ ಫಿದಾ ಆದ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರನ್ನು ಗಟ್ಟಿಯಾಗಿ ತಬ್ಬಿಕೊಂಡರು. ಅವರನ್ನು ಮನಸಾರೆ ಹೊಗಳಿದರು. ಗಾಯಕನ ಮೇಲೆ ಎಷ್ಟು ಅಭಿಮಾನ ಹೊಂದಿದ್ದೇನೆ ಎಂಬುದನ್ನು ಭಾವುಕರಾಗಿ ತಿಳಿಸಿದರು. ಇದೇ ವೇಳೆ ಅವರು ಜುಬೀನ್‌ ಗರ್ಗ್‌ ಅವರ ಕೆನ್ನೆಗೆ ಪದೇಪದೆ ಮುತ್ತು ಕೊಟ್ಟರು. ಅಷ್ಟೇ ಅಲ್ಲ, ಗಾಯಕನ ಪಾದ ಮುಟ್ಟಿ ನಮಸ್ಕಾರ ಮಾಡಿದರು. ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಯಿತು.

ವಿಡಿಯೊ ವೈರಲ್‌ ಆಗುತ್ತಲೇ ಮಿಲಿಪ್ರಭಾ ಚುಟಿಯಾ ಅವರನ್ನು ಅಸ್ಸಾಂ ಪೊಲೀಸ್‌ ಇಲಾಖೆಯು ಅಮಾನತುಗೊಳಿಸಿದೆ. ಪೊಲೀಸ್‌ ಇಲಾಖೆಯ ಶಿಸ್ತು ಹಾಗೂ ಸಾರ್ವಜನಿಕ ವರ್ತನೆಯ ನಿಯಮಗಳನ್ನು ಮೀರಿದ ಆರೋಪದಲ್ಲಿ ಅವರನ್ನು ಅಮಾನತುಗೊಳಿಸಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೇದೆ ವರ್ತನೆ ಬಗ್ಗೆ ಪರ-ವಿರೋಧ ಚರ್ಚೆಯಾಗಿದೆ. ನೆಚ್ಚಿನ ಗಾಯಕನನ್ನು ತಬ್ಬಿಕೊಂಡು, ಮುತ್ತು ಕೊಡುವುದರಲ್ಲಿ ಅಶ್ಲೀಲತೆ ಏನಿದೆ ಎಂದು ಒಂದಷ್ಟು ಜನ ಹೇಳಿದರೆ, ಪೊಲೀಸ್‌ ಅಧಿಕಾರಿಯಾದವರು ಸಾರ್ವಜನಿಕವಾಗಿ ಹೇಗಿರಬೇಕು ಎಂಬುದು ಗೊತ್ತಿರಬೇಕು ಎಂದು ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Continue Reading

Lok Sabha Election 2024

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

VISTARANEWS.COM


on

DK Shivakumar in Uttar Pradesh and Strategy in Amethi and Rae Bareli
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

ಅಮೇಥಿ ವಾಪಸ್‌ಗೆ ತಂತ್ರ

ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

Continue Reading

ಪ್ರಮುಖ ಸುದ್ದಿ

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

IPL 2024 : ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಇಶಾನ್ ಮತ್ತು ಡೇವಿಡ್ ಸ್ನೇಹಪರ ಕುಸ್ತಿ ಪ್ರದರ್ಶನದೊಂದಿಗೆ ತಮ್ಮ ತರಬೇತಿ ಸಮಯವನ್ನು ಸವಿಯುತ್ತಿರುವುದನ್ನು ಕಾಣಬಹುದು. ಕ್ರಿಕೆಟ್​ ನ ಅತ್ಯಂತ ರೋಚಕ ಸ್ಟೇಡಿಯಮ್​ ವಾಂಖೆಡೆ ಸ್ವಲ್ಪ ಸಮಯದವರೆಗೆ ಡಬ್ಲ್ಯುಡಬ್ಲ್ಯುಇ ರಿಂಗ್ ಆಗಿ ಮಾರ್ಪಟ್ಟಿತು.

VISTARANEWS.COM


on

IPL 2024
Koo

ಬೆಂಗಳೂರು: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2024ರ (IPL 2024 ) ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿರುವ ಮುಂಬೈ ಇಂಡಿಯನ್ಸ್​ ತಂಡದ ಆಟಗಾರರಾದ ಟಿಮ್ ಡೇವಿಡ್ (Tim David) ಹಾಗೂ ಇಶಾನ್ ಕಿಶನ್ (Ishan Kishan)​ ತಮಾಷೆಗೆ ಕುಸ್ತಿಯಾಡಿದ ವಿಡಿಯೊಗಳು ವೈರಲ್ ಆಗಿವೆ. ಗ್ರೂಪ್ ಹಂತದ ತಮ್ಮ ಕೊನೇ ಪಂದ್ಯಕ್ಕೆ ಮೊದಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು ಅಭ್ಯಾಸ ನಡೆಸುತ್ತಿದ್ದಾರೆ. ಈ ವೇಳೆ ಅವರು ತಮಾಷೆಗೆ ಕುಸ್ತಿಯಾಡಿದ್ದಾರೆ. ಅದಕ್ಕೆ ಕೀರನ್ ಪೊಲಾರ್ಡ್​ ಸಾಕ್ಷಿಯಅಗಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಇಶಾನ್ ಮತ್ತು ಡೇವಿಡ್ ಸ್ನೇಹಪರ ಕುಸ್ತಿ ಪ್ರದರ್ಶನದೊಂದಿಗೆ ತಮ್ಮ ತರಬೇತಿ ಸಮಯವನ್ನು ಸವಿಯುತ್ತಿರುವುದನ್ನು ಕಾಣಬಹುದು. ಕ್ರಿಕೆಟ್​ ನ ಅತ್ಯಂತ ರೋಚಕ ಸ್ಟೇಡಿಯಮ್​ ವಾಂಖೆಡೆ ಸ್ವಲ್ಪ ಸಮಯದವರೆಗೆ ಡಬ್ಲ್ಯುಡಬ್ಲ್ಯುಇ ರಿಂಗ್ ಆಗಿ ಮಾರ್ಪಟ್ಟಿತು.

ವಿಡಿಯೊದಲ್ಲಿ ಕಾಣುತ್ತಿರುವಂತೆ ಕುಸ್ತಿಯನ್ನು ಇಶಾನ್ ಕಿಶನ್​ ಪ್ರಾರಂಭಿಸಿದ ಹಾಗಿದೆ. ಅವರು ತಮಾಷೆಯಾಗಿ ಡೇವಿಡ್ ಗೆ ತನ್ನ ತಲೆಯಿಂದ ಗುದ್ದಲು ಪ್ರಯತ್ನಿಸಿದ್ದರು. ಆದಾಗ್ಯೂ, ಆಸ್ಟ್ರೇಲಿಯಾದ ಆಟಗಾರ ಇಶಾನ್ ಅವರ ತಲೆಯನ್ನು ತನ್ನ ದೈತ್ಯ ತೋಳುಗಳಿಂದ ಲಾಕ್ ಮಾಡುವ ಮೂಲಕ ಅದರಿಂದ ತಪ್ಪಿಸಿಕೊಳ್ಳುತ್ತಾರೆ.

ಕುಸ್ತಿ ಇನ್ನೂ ಕೆಲವು ನಿಮಿಷಗಳ ಕಾಲ ಮುಂದುವರಿಯುತ್ತದೆ. ಇಬ್ಬರೂ ಆಟಗಾರರು ಅಂತಿಮವಾಗಿ ಪರಸ್ಪರರನ್ನು ನೆಲಕ್ಕೆ ಬೀಳಿಸುತ್ತಾರೆ. ಇದು ಎಂಐ ಶಿಬಿರದಲ್ಲಿ ಮೋಜಿನ ವಾತಾವರಣವನ್ನು ಸೃಷ್ಟಿಸಿತು. ಕೀರನ್ ಪೊಲಾರ್ಡ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರು ಅವರಿಬ್ಬರ ಕುಸ್ತಿ ಚಲನೆಗಳನ್ನು ನೋಡಿ ಖುಷಿಪಟ್ಟರು.

ಇದನ್ನೂ ಓದಿ: Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ 2024ರ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದೆ. ಸತತ ಮೂರು ಸೋಲುಗಳೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಿದ ನಂತರ ಅವರು ಪುನರಾಗಮನ ಮಾಡಿದರೂ ಬಳಿಕ ಕೊಟ್ಟ ಕಳಪೆ ಫಾರ್ಮ್ ಅಂತಿಮವಾಗಿ ಪಂದ್ಯಾವಳಿಯಿಂದ ಗುಂಪು ಹಂತದ ಹೊರಗುಳಿಯಲು ಕಾರಣವಾಯಿತು.

ಅಂತಿಮ ಪಂದ್ಯಕ್ಕೆ ತೆರಳುತ್ತಿರುವ ಎಂಐ ತಮ್ಮ ಹೆಮ್ಮೆಗಾಗಿ ಆಡಲು ಬಯಸುತ್ತದೆ. ಗೆಲುವಿನೊಂದಿಗೆ ತಮ್ಮ ಅಭಿಯಾನವನ್ನು ಉನ್ನತ ಮಟ್ಟದಲ್ಲಿ ಮುಗಿಸಲು ಬಯಸುತ್ತದೆ.

Continue Reading

ಪ್ರಮುಖ ಸುದ್ದಿ

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

VISTARANEWS.COM


on

Virat kohli
Koo

ನವದೆಹಲಿ: ಮಾಜಿ ಸ್ಪ್ರಿಂಟಿಂಗ್ ವಿಶ್ವ ಚಾಂಪಿಯನ್ ಉಸೇನ್ ಬೋಲ್ಟ್ (Usain Bolt) ಇತ್ತೀಚಿನ ತಾವು ನೀಡಿದ ಸಂದರ್ಶನವೊಂದರಲ್ಲಿ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿಯನ್ನು (Virat kohli ) ವಿಶೇಷವಾಗಿ ಹೊಗಳಿದ್ದಾರೆ. ಜಮೈಕಾ ಮೂಲದ ಉಸೇನ್ ಬೋಲ್ಟ್, ಕ್ರಿಸ್ ಗೇಲ್ ಮತ್ತು ಯುವರಾಜ್ ಸಿಂಗ್ ಅವರೊಂದಿಗೆ ಐಸಿಸಿ ಟಿ 20 ವಿಶ್ವಕಪ್ 2024 ರ (T20 World Cup) ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಅವರಿಗೆ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ತಿಳಿದಿರುವುದು ವಿರಾಟ್ ಕೊಹ್ಲಿ ಬಗ್ಗೆ. ಹೀಗೆ ಕೊಹ್ಲಿ ಕ್ರೀಡಾ ಜಗತ್ತಿನಲ್ಲಿ ಪ್ರಭಾವಶಾಲಿ ಎಂದು ಬೋಲ್ಟ್​ ಉಲ್ಲೇಖಿಸಿದ್ದಾರೆ. ವಿಶ್ವಕಪ್​ಗೆ ಮುಂಚಿತವಾಗಿ ಅವರು ಭಾರತದ ಮಾಜಿ ನಾಯಕನ ಬಗ್ಗೆ ಇನ್ನೂ ಕೆಲವು ವಿಷಯಗಳನ್ನು ಹೇಳಿದ್ದಾರೆ.

ಇತ್ತೀಚೆಗೆ ಸುದ್ದಿಸಂಸ್ಥೆಯೊಂದರ ಜತೆ ಮಾತನಾಡಿದ ಉಸೇನ್ ಬೋಲ್ಟ್, ಕೆಲವು ವಿಶ್ವ ದರ್ಜೆಯ ಕ್ರಿಕೆಟಿಗರ ಹೊರತಾಗಿಯೂ ವಿರಾಟ್ ಕೊಹ್ಲಿ ಅವರೆಲ್ಲರಿಗಿಂತ ಅತ್ಯುತ್ತಮ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಆಧುನಿಕ ಕಾಲದ ಶ್ರೇಷ್ಠ ಆಟಗಾರ ಬಹುಶಃ ಈ ಸಮಯದಲ್ಲಿ ಅತ್ಯಂತ ಪ್ರಸಿದ್ಧ ಕ್ರಿಕೆಟಿಗ ಮತ್ತು ಅವರು ಬಹುಶಃ ಜೀವಿಸಿದ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಆಟಗಾರ ಎಂದು ಹೇಳಿದ್ದಾರೆ.

ವಿಶ್ವಕಪ್​​ಗಾಗಿ ಜನರು ಯುಎಸ್ಎ ಮತ್ತು ವೆಸ್ಟ್ ಇಂಡೀಸ್​ನ ಕ್ರೀಡಾಂಗಣಗಳ ಕಡೆಗೆ ಗಮನ ಹರಿಸಿದ್ದಾರೆ. ಅದಕ್ಕೆ ಅರ್ಧದಷ್ಟು ಕಾರಣ ವಿರಾಟ್ ಕೊಹ್ಲಿ. ಅವರ ಉಪಸ್ಥಿತಿಯೇ ಇಲ್ಲಿ ದೊಡ್ಡದಾಗಿದೆ ಮತ್ತು ಕ್ರಿಕೆಟ್ ಕ್ಷೇತ್ರವಲ್ಲದ ಕ್ರೀಡಾಪಟುಗಳು ಅವರು ಮಾಡಿದ ಕಾರ್ಯಕ್ಕಾಗಿ ಅವರನ್ನು ಶ್ಲಾಘಿಸುತ್ತಿದ್ದಾರೆ. ಕೊಹ್ಲಿ ನಿಜವಾಗಿಯೂ ಅಂತಾರಾಷ್ಟ್ರೀಯ ಐಕಾನ್ ಎಂದು ಹೇಳುತ್ತಾರೆ. ಆ ಸಾಲಿನಲ್ಲಿ ಬೋಲ್ಟ್ ಕೂಡ ಇದ್ದಾರೆ.

ನಿವೃತ್ತರಾಗಲಿದ್ದರಾ ಕೊಹ್ಲಿ, ರೋಹಿತ್​

ವಿರಾಟ್ ಕೊಹ್ಲಿಗೆ ಈ ಟಿ 20 ವಿಶ್ವಕಪ್ ಹಿಂದೆಂದಿಗಿಂತಲೂ ಹೆಚ್ಚು ಮಹತ್ವದ್ದಾಗಿದೆ. ವಿಶ್ವಕಪ್ ಮುಗಿದ ನಂತರ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಕಿರು ಸ್ವರೂಪದಿಂದ ನಿವೃತ್ತರಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ತಂಡದ ಹಿರಿಯ ಆಟಗಾರನಾಗಿ ಐಸಿಸಿ ಪಂದ್ಯಾವಳಿಯನ್ನು ಗೆಲ್ಲುವ ಭರವಸೆಯನ್ನು ಕೊಹ್ಲಿ ಇನ್ನೂ ಹೊಂದಿರುವುದರಿಂದ ಇದು ಈ ನಿರ್ದಿಷ್ಟ ಆವೃತ್ತಿಯನ್ನು ಇನ್ನಷ್ಟು ಮಹತ್ವದ್ದಾಗಿದೆ.

ಉಸೇನ್ ಬೋಲ್ಟ್ ತಮ್ಮ ಬಾಲ್ಯದ ಕ್ರಿಕೆಟ್ ಐಕಾನ್ ಗಳು ಇವರು

ವಿರಾಟ್ ಕೊಹ್ಲಿಯನ್ನು ಸ್ಟ್ಯಾಂಡ್ ಔಟ್ ಆಟಗಾರ ಎಂದು ಉಲ್ಲೇಖಿಸುವ ಮೊದಲು, ಉಸೇನ್ ಬೋಲ್ಟ್ ತಮ್ಮ ಬಾಲ್ಯದ ದಿನಗಳಲ್ಲಿ ಅವರು ನೋಡುತ್ತಿದ್ದ ಕ್ರಿಕೆಟಿಗರನ್ನು ಬಹಿರಂಗಪಡಿಸಿದ್ದಾರೆ. 8 ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತರಾದ ಅವರು ಬಾಲ್ಯದಲ್ಲಿ ವಾಸಿಮ್ ಅಕ್ರಮ್ ಅವರನ್ನು ಇಷ್ಟಪಟ್ಟಿದ್ದರು ಎಂದು ಒಪ್ಪಿಕೊಂಡರು. ಇದಕ್ಕೆ ಕಾರಣ ಎಡಗೈ ವೇಗದ ಬೌಲರ್ ಸ್ವಿಂಗ್ ಯಾರ್ಕರ್​ಗಳನ್ನು ಬೌಲಿಂಗ್ ಮಾಡುವ ಸಾಮರ್ಥ್ಯದಿಂದಾಗಿ.

ಬೋಲ್ಟ್ ನಂತರ ವೆಸ್ಟ್ ಇಂಡೀಸ್​ನ ಐಕಾನ್​ಗಳಾದ ಕರ್ಟ್ನಿ ವಾಲ್ಷ್ ಮತ್ತು ಕರ್ಟ್ಲಿ ಆಂಬ್ರೋಸ್ ಅವರನ್ನು ಅವರು ಮೆಚ್ಚಿದ ಇತರ ಇಬ್ಬರು ಬೌಲರ್​ಗಳು ಎಂದು ಹೆಸರಿಸಿದರು. ಸಚಿನ್ ತೆಂಡೂಲ್ಕರ್ ಮತ್ತು ಬ್ರಿಯಾನ್ ಲಾರಾ ನಡುವಿನ ಬ್ಯಾಟಿಂಗ್ ಪೈಪೋಟಿಯು ಅವರ ನೆಚ್ಚಿನ ಬೆಳವಣಿಗೆಗಳಲ್ಲಿ ಒಂದಾಗಿದೆ. ಅವರ ತಂದೆಯ ಕಾರಣದಿಂದಾಗಿ ವೆಸ್ಟ್ ಇಂಡೀಸ್ ತಂಡವನ್ನು ಅವರು ಬೆಂಬಲಿಸಿದ್ದರು.

“ನನ್ನ ತಂದೆಯಂತೆ ನಾನು ಯಾವಾಗಲೂ ವೆಸ್ಟ್ ಇಂಡೀಸ್ ತಂಡವನ್ನು ಬೆಂಬಲಿಸುತ್ತೇನೆ. ಆದರೆ ಹೌದು, ನಾನು ಸಚಿನ್ ತೆಂಡೂಲ್ಕರ್ ಅಭಿಮಾನಿಯೂ ಆಗಿದ್ದೇನೆ. ಅವರು ಮತ್ತು ಬ್ರಿಯಾನ್ ಲಾರಾ ಬೆಳೆಯುತ್ತಿರುವ ನನ್ನ ಜೀವನದ ಭಾಗವಾಗಿದ್ದರು. ಇದು ಒಂದು ದೊಡ್ಡ ಪೈಪೋಟಿಯಾಗಿತ್ತು.” – ಉಸೇನ್ ಬೋಲ್ಟ್ ಮುಕ್ತಾಯಗೊಳಿಸಿದರು.

Continue Reading
Advertisement
Lady Constable
ದೇಶ1 hour ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

DK Shivakumar in Uttar Pradesh and Strategy in Amethi and Rae Bareli
Lok Sabha Election 20241 hour ago

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

IPL 2024
ಪ್ರಮುಖ ಸುದ್ದಿ1 hour ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Virat kohli
ಪ್ರಮುಖ ಸುದ್ದಿ2 hours ago

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

Shah Rukh Khan
ದೇಶ2 hours ago

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Rajat Patidar
ಪ್ರಮುಖ ಸುದ್ದಿ2 hours ago

Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

ASI who was injured in a road accident died in kunigal
ಕರ್ನಾಟಕ2 hours ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್3 hours ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ3 hours ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ3 hours ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ9 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು12 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌