ವಿಸ್ತಾರ Explainer | ತೈವಾನ್‌ ದ್ವೀಪದೇಶದಲ್ಲಿ ಚೀನಾ- ಅಮೆರಿಕ ತಿಕ್ಕಾಟದ ಹಕೀಕತ್ತು - Vistara News

EXPLAINER

ವಿಸ್ತಾರ Explainer | ತೈವಾನ್‌ ದ್ವೀಪದೇಶದಲ್ಲಿ ಚೀನಾ- ಅಮೆರಿಕ ತಿಕ್ಕಾಟದ ಹಕೀಕತ್ತು

ತಂತ್ರಾಜ್ಞನದಲ್ಲಿ ತುಂಬಾ ಮುಂದುವರಿದಿರುವ ತೈವಾನ್‌ ದ್ವೀಪರಾಷ್ಟ್ರದ ಜನ ಈಗ ದೊಡ್ಡ ದೇಶಗಳ ನಡುವಿನ ತಿಕ್ಕಾಟದ ಬಲಿಪಶು ಆಗಬೇಕಿದೆ. ಯಾಕೆ ತೈವಾನ್‌ ಬೃಹತ್‌ ದೇಶಗಳ ಕದನ ಕಣ ಆಗುತ್ತಿದೆ. ವಿಸ್ತಾರವಾದ ನೋಟ ಇಲ್ಲಿದೆ.

VISTARANEWS.COM


on

taiwan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಮೆರಿಕದ ಜನಪ್ರತಿನಿಧಿ ಸಭೆಯ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಅವರು ಚೀನಾದ ಕಟು ಎಚ್ಚರಿಕೆಯ ನಡುವೆಯೂ ತೈವಾನ್‌ಗೆ ಭೇಟಿ ನೀಡಿರುವುದು ಈಗ ಚೀನಾ- ಅಮೆರಿಕ ಸಂಬಂಧದ ನಡುವೆ ಇನ್ನಷ್ಟು ಕಿಡಿ ಕೆದರಿಸಿದೆ. ಅಲ್ಲಿ ಹೋದ ನ್ಯಾನ್ಸಿ ಅವರು ಸುಮ್ಮನಿರದೆ, ʼʼತೈವಾನ್‌ ವಿಚಾರದಲ್ಲಿ ನಮಗೆ ಇರುವ ಬದ್ಧತೆಯನ್ನು ನಾವೆಂದಿಗೂ ತೊರೆಯುವುದಿಲ್ಲʼʼ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಎಂದರೆ, ಸ್ವಾತಂತ್ರ್ಯಕ್ಕಾಗಿ ತೈವಾನ್‌ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸುವ, ಅಲ್ಲಿ ಚೀನಾದ ಆಡಳಿತವನ್ನು ನಿರಾಕರಿಸುವ ಕೆಲಸವನ್ನು ಸ್ಪಷ್ಟವಾಗಿಯೇ ಮಾಡಿದ್ದಾರೆ. ಕಳೆದ 25 ವರ್ಷಗಳಿಂದ ಇಲ್ಲಿಗೆ ಅಮೆರಿಕದ ಯಾವುದೇ ಜನಪ್ರತಿನಿಧಿ ಭೇಟಿ ನೀಡಿಲ್ಲ. ಇದೇ ಮೊದಲ ನ್ಯಾನ್ಸಿ ಪೆಲೋಸಿ ಅಲ್ಲಿಗೆ ಹೋಗುತ್ತಿದ್ದಾರೆ. ಮೇಲಾಗಿ, ನ್ಯಾನ್ಸಿ ಅವರು ಮೊದಲಿನಿಂದಲೂ ಚೀನಾದ ಕಟು ಟೀಕಾಕಾರರು.

ಇದು ಚೀನಾಕ್ಕೆ ಸಿಟ್ಟು ತರಿಸದೇ ಇದ್ದೀತೆ? ಅಮೆರಿಕದ ಒಡನಾಟ ತೈವಾನ್‌ಗೆ ಹೆಚ್ಚಾಗಿಬಿಟ್ಟರೆ ತನಗೆ ಕಷ್ಟ ಎಂಬುದು ಚೀನಾಗೆ ಗೊತ್ತು. ಯಾಕೆಂದರೆ ತಾನು ಸ್ವತಂತ್ರ ರಾಷ್ಟ್ರ ಎಂದೇ ತೈವಾನ್‌ ವಾದಿಸುತ್ತಿದೆ. ಆದರೆ ತೈವಾನ್‌ ತನ್ನ ಭೂಭಾಗ ಎಂದು ಚೀನಾ ವಾದಿಸುತ್ತದೆ. ಇತ್ತೀಚೆಗೆ ತೈವಾನ್‌ನಲ್ಲಿ ಸ್ವಾತಂತ್ರ್ಯವಾದ ಹೆಚ್ಚಾಗುತ್ತಿರುವಂತೆ, ತೈವಾನ್‌ ಸುತ್ತಮುತ್ತ ತನ್ನ ಮಿಲಿಟರಿ ಹಿಡಿತವನ್ನೂ ಚೀನಾ ಬಿಗಿ ಮಾಡಲು ಯತ್ನಿಸುತ್ತಿದೆ. ತೈವಾನ್‌ನ ಮೇಲೆ ಚೀನಾ ದಾಳಿ ನಡೆಸದಂತೆ ನೋಡಿಕೊಳ್ಳಲೆಂದು ಈ ಸಮುದ್ರ ಪ್ರದೇಶದಲ್ಲಿ ಅಮೆರಿಕ ಕೂಡ ತನ್ನ ಯುದ್ಧನೌಕೆಗಳನ್ನು ಕಾವಲಿಗಿಟ್ಟಿದೆ. ಇದೆಲ್ಲವೂ ಅಮೆರಿಕ- ಚೀನಾ ನಡುವಿನ ಸಂಬಂಧವನ್ನು ಇನ್ನಷ್ಟು ಆಳವಾಗಿ ಕದಡಿದ್ದು, ಈಗ ನ್ಯಾನ್ಸಿ ಭೇಟಿಯಿಂದ ಇದು ಇನ್ನಷ್ಟು ಕೆರಳಿದೆ.

taiwan

ಹಾಗಿದ್ದರೆ ತೈವಾನ್‌ ಎಲ್ಲಿದೆ? ಅದರ ವಿಚಾರದಲ್ಲಿ ಚೀನಾದ ಹಿತಾಸಕ್ತಿ ಏನು? ಅಮೆರಿಕಕ್ಕೆ ಇಲ್ಲಿ ಏನು ಕೆಲಸ? ಅಮೆರಿಕ ಇಲ್ಲಿಗೆ ಬಂದರೆ ಚೀನಾ ಸಿಟ್ಟಾಗುವುದು ಏಕೆ? ತಿಳಿಯೋಣ.

ಏಳು ದಶಕಗಳ ಹಿಂದಿನ ಒಡಕು

ಆರೇಳು ದಶಕಗಳ ಹಿಂದಿನಿಂದಲೂ ತೈವಾನ್‌ನ ಆಡಳಿತದ ವಿಷಯದಲ್ಲಿ ಚೀನಾ ತಲೆ ಹಾಕುತ್ತಾ ಬಂದಿದೆ. 1949ರಲ್ಲಿ ಮಾವೋ ಝೆಡಾಂಗ್ ನೇತೃತ್ವದಲ್ಲಿ ಕಮ್ಯುನಿಸ್ಟರು ಬೀಜಿಂಗ್‌ನಲ್ಲಿ ಅಧಿಕಾರವನ್ನು ಪಡೆದರು. ಚಿಯಾಂಗ್ ಕೈ ಶೇಕ್‌ ನೇತೃತ್ವದ ಕೌಮಿಂಟಾಂಗ್ (KMT) ದಳವನ್ನು ಸೋಲಿಸಿದರು. ಆಗ ನಡೆದ ಅಂತರ್ಯುದ್ಧದಲ್ಲಿ ಕೌಮಿಂಟಾಂಗ್‌ಗಳು ಚೀನಾದ ಪಕ್ಕದ ದ್ವೀಪ ತೈವಾನ್‌ಗೆ ಪಲಾಯನ ಮಾಡಿದರು. ಅಲ್ಲಿ ತಮ್ಮದೇ ಆಡಳಿತ ಸ್ಥಾಪಿಸಿಕೊಂಡರು. ಚೀನಾದ ಜತೆಗೆ ಸಂಪರ್ಕ ಕಡಿದುಕೊಂಡರು. ಚೀನಾದ ರಾಜಧಾನಿ ಬೀಜಿಂಗಾ ಅಥವಾ ತೈವಾನ್‌ನ ಮುಖ್ಯಪಟ್ಟಣ ತೈಪೆಯಾ ಎಂಬ ಗೊಂದಲ ಮುಂದಿನ ಹಲವು ವರ್ಷಗಳ ಕಾಲ ಮುಂದುವರಿಯಿತು. ಹೀಗಾಗಿ ವಿಶ್ವಸಂಸ್ಥೆಯಲ್ಲಿ ಬೀಜಿಂಗ್‌ನ ಬದಲು ತೈಪೆಗೆ ಹೆಚ್ಚಿನ ಮಾನ್ಯತೆ ದೊರೆಯಿತು. 1950ರಲ್ಲಿ ತೈವಾನ್, ಅಮೆರಿಕದ ಜತೆಗೆ ಸ್ನೇಹ ಬೆಳೆಸಿತು. ಕೊರಿಯಾ ವಿರುದ್ಧದ ಯುದ್ಧದಲ್ಲಿ ಅಮೆರಿಕಕ್ಕೆ ಸಹಾಯ ಮಾಡಿತು. ತೈವಾನ್‌ನ ರಕ್ಷಣೆಗೆ ಅಮೆರಿಕವು ತೈವಾನ್ ಜಲಸಂಧಿಯಲ್ಲಿ ತನ್ನ ಯುದ್ಧನೌಕೆಯನ್ನು ನಿಯೋಜಿಸಿತು.

1971ರಲ್ಲಿ ವಿಶ್ವಸಂಸ್ಥೆಯು ಬೀಜಿಂಗ್‌ ಅನ್ನು ಚೀನಾದ ರಾಜಧಾನಿಯಾಗಿ ಗುರುತಿಸಿತು. ಹಾಗೂ ಅಮೆರಿಕ ಕೂಡ ಅದನ್ನು ಮಾನ್ಯ ಮಾಡಿ, ಬೀಜಿಂಗ್‌ ಜತೆಗೆ ರಾಯಭಾರ ಸಂಬಂಧಗಳನ್ನು ಶುರುಮಾಡಿತು. 1987ರಲ್ಲಿ ತೈವಾನ್‌ ನಿವಾಸಿಗಳಿಗೆ ಚೀನಾಗೆ ಬಂದುಹೋಗಲು ಅನುಮತಿ ದೊರೆಯಿತು. 1991ರಲ್ಲಿ ಎಮೆರ್ಜೆನ್ಸಿ ತೆಗೆದುಹಾಕಿದ ತೈವಾನ್‌, ಚೀನಾದ ಜತೆಗಿನ ಯುದ್ಧ ಕೊನೆಗೊಳಿಸಿತು. ಆದರೆ ಅಮೆರಿಕದವರು ತೈವಾನ್‌ಗೆ ಬಂದುಹೋಗುವುದನ್ನು ಚೀನಾ ಒಪ್ಪಲಿಲ್ಲ. 1995ರಲ್ಲಿ ತೈವಾನ್‌ ಪ್ರೆಸಿಡೆಂಟ್‌ ಲೀ ತೆಂಗ್ ಹುಯಿ ಅಮೆರಿಕೆಗೆ ಭೇಟಿ ನೀಡಿದ್ದನ್ನೂ ಚೀನಾ ಮಾನ್ಯ ಮಾಡಲಿಲ್ಲ. 1996ರಲ್ಲಿ ತೈವಾನ್‌ ಮೊತ್ತಮೊದಲ ಅಧ್ಯಕ್ಷೀಯ ಚುನಾವಣೆ ನಡೆಸಿದಾಗ, ಅದನ್ನು ಬೆದರಿಸಲು ಎಂಬಂತೆ ಚೀನಾ ಅದರ ಪಕ್ಕದಲ್ಲೇ ಕ್ಷಿಪಣಿ ಪ್ರಯೋಗ ಮಾಡಿತು. 2000ದ ತೈವಾನ್‌ ಚುನಾವಣೆಯಲ್ಲಿ ಕೆಎಂಟಿ ಸೋತು, ಕಮ್ಯುನಿಸ್ಟರು ಗೆದ್ದ ಕಾರಣ, ಚೀನಾ ಮುಂದಿನ ಹಕವು ವರ್ಷ ಹೆಚ್ಚು ತಗಾದೆ ತೆಗೆಯದೆ ಸುಮ್ಮನಿತ್ತು.

ಚೀನಾ ಒಂದು ಪಾಲಿಸಿಯನ್ನು ರೂಪಿಸಿ ಅದನ್ನು ಸುತ್ತಮುತ್ತಲಿನ ದೇಶಗಳ ಒಪ್ಪಿಕೊಳ್ಳುವಂತೆ ಮಾಡಿದೆ. ಅದೇ ʻಒನ್‌ ಚೀನಾ ಪಾಲಿಸಿʼ. ಅದರ ಪ್ರಕಾರ, ಚೀನಾದ ಸುತ್ತಮುತ್ತಲಿನ ಟಿಬೆಟ್‌, ತೈವಾನ್‌, ಹಾಂಕಾಂಗ್‌ ಕೂಡ ಚೀನಾದ ಭಾಗವೇ ಆಗಿವೆ. ಇದನ್ನು ಭಾರತವೂ ಒಪ್ಪಿದೆ. ಅಮೆರಿಕವೂ ಆರಂಭದ ದಿನಗಳಲ್ಲಿ ಒಪ್ಪಿಕೊಂಡಿತ್ತು. ಆದರೆ ಈಗ ಅದನ್ನು ಒಪ್ಪುವುದಿಲ್ಲ ಎಂದಿದೆ. ತೈವಾನ್‌ ಹಾಗೂ ಹಾಂಕಾಂಗ್‌ಗಳಿಗೆ ಸ್ವತಂತ್ರ ಅಸ್ತಿತ್ವವಿದೆ ಎನ್ನುತ್ತಿದೆ. ಇದು ಚೀನಾಗೆ ನುಂಗಲಾರದ ತುತ್ತು. ಚೀನಾದ ಕಿರುಕುಳ ಅತಿಯಾದರೆ ಭಾರತ ಕೂಡ ತಾನು ಒಪ್ಪಿಕೊಂಡ ʻಒನ್‌ ಚೀನಾ ನೀತಿʼಯನ್ನು ನಿರಾಕರಿಸಿ ಚೀನಾಗೆ ತುಸು ಕಿರಿಕಿರಿ ಉಂಟುಮಾಡಬಹುದು.

ಅಲ್ಪಕಾಲದ ಮಧುಚಂದ್ರ

2005ರಲ್ಲಿ, ತೈವಾನ್‌ ಸ್ವಾತಂತ್ರ್ಯ ಘೋಷಿಸಿಕೊಂಡರೆ ತಾನು ಬಲಪ್ರಯೋಗ ಮಾಡುವುದಾಗಿ ಚೀನಾ ಒಂದು ನೀತಿಯನ್ನು ಮಾಡಿಕೊಂಡಿತು. ಇದಾಗಿ, 2015ರವರೆಗೂ ಚೀನಾ- ತೈವಾನ್‌ ನಡುವೆ ಹೆಚ್ಚೇನೂ ತಗಾದೆಗಳಿರಲಿಲ್ಲ. ಎರಡೂ ದೇಶಗಳ ನಡುವೆ ಮುಕ್ತ ವ್ಯಾಪಾರ ವ್ಯವಹಾರ ಸಂಬಂಧ ಮುಂದುವರಿಯಿತು. ಈ ನಡುವೆ ಅಮೆರಿಕ ಕೂಡ ತೈವಾನ್‌ನ ಮೈಕ್ರೋಚಿಪ್‌ ಟೆಕ್ನಾಲಜಿ ಸಂಸ್ಥೆಗಳಲ್ಲಿ ಸಾಕಷ್ಟು ಹಣ ಹೂಡಿಕೆ ಮಾಡಿತು. ಅತ್ತ ಚೀನಾ ಕೂಡ ತೈವಾನ್‌ನಲ್ಲಿ ಮುಖ್ಯನೆಲದ ಸಾಂಸ್ಕೃತಿಕ ಪ್ರಭಾವವನ್ನು ಸಾಕಷ್ಟು ಹಬ್ಬಿಸಲು ಯತ್ನಿಸಿತು. ಇದರಿಂದಾಗಿ ಈ ಅವಧಿಯಲ್ಲಿ ಚೀನಾ- ಅಮೆರಿಕ ಎರಡೂ ವಿಭಿನ್ನ- ವಿರುದ್ಧ ಸಂಸ್ಕೃತಿಗಳ ಮಿಶ್ರಣದ ನೆಲವಾಗಿ ತೈವಾನ್‌ ರೂಪುಗೊಂಡಿತು.‌

ಇದನ್ನೂ ಓದಿ: ತೈವಾನ್ ಅಧ್ಯಕ್ಷೆ ಪಕ್ಕ ನಿಂತು ಚೀನಾಕ್ಕೊಂದು ಖಡಕ್​ ಸಂದೇಶ ಕೊಟ್ಟ ನ್ಯಾನ್ಸಿ; ಎಚ್ಚರಿಕೆಗೆ ಡೋಂಟ್​​ ಕೇರ್​ !

ಸಮರದ ಕಾರ್ಮೋಡ

2016ರಲ್ಲಿ, ಸ್ವಾತಂತ್ರ್ಯದ ಪರವಾಗಿರುವ ಡೆಮೊಕ್ರಟಿಕ್‌ ಪ್ರೊಗ್ರೆಸಿವ್‌ ಪಾರ್ಟಿ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದಿತು. ಸಿಟ್ಟಿಗೆದ್ದ ಚೀನಾ, ತೈವಾನ್‌ ಜತೆಗಿನ ಎಲ್ಲ ಸಂವಹನಗಳನ್ನು ಕಡಿದುಕೊಂಡಿತು. ಅದೇ ವರ್ಷ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ತೈವಾನ್‌ ಅಧ್ಯಕ್ಷ ತ್ಸೈ ಇಂಗ್‌ ವೆನ್‌ ಜತೆ ದೂರವಾಣಿಯಲ್ಲಿ ಮಾತನಾಡಿ, ಚೀನಾ ವಿಧಿಸಿದ್ದ ಎಲ್ಲ ಗಡಿಗೆರೆಗಳನ್ನು ಉಲ್ಲಂಘಿಸಿದರು. 2019ರಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್‌, ʼʼಚೀನಾದೊಂದಿಗೆ ತೈವಾನ್‌ನ ಒಂದಾಗುವಿಕೆ ತಡೆಗಟ್ಟಲಾಗದುʼʼ ಎಂದರು.

taiwan
ತೈವಾನ್‌ನ ಯುವಜನತೆ ಅಮೆರಿಕದಿಂದ ಮಿಲಿಟರಿ ತರಬೇತಿ ಪಡೆಯುತ್ತಿದ್ದಾರೆ.

2021ರಲ್ಲಿ ಚೀನಾದ ಮಿಲಿಟರಿ ಜೆಟ್‌ಗಳು ತೈವಾನ್‌ನ ವಾಯುನೆಲೆಯ ಮೇಲೆ ಹಾರಾಡಿದವು. ʼʼತೈವಾನ್‌ ಮೇಲೆ ಚೀನಾ ದಾಳಿ ಮಾಡಿದರೆ ಅಮೆರಿಕ ತೈವಾನ್‌ನ ರಕ್ಷಣೆಗೆ ನಿಲ್ಲುವುʼʼದಾಗಿ ಅಧ್ಯಕ್ಷ ಜೋ ಬೈಡೆನ್‌ ಹೇಳಿಕೆ ನೀಡಿದರು. ತೈವಾನ್‌ನ ರಕ್ಷಣಾಪಡೆಗಳಿಎಗ ಅಮೆರಿಕದ ಯೋಧರಿಂದ ತರಬೇತಿಯೂ ದೊರೆಯುತ್ತಿದೆ ಎಂದು ತೈವಾನ್‌ನ ಅಧ್ಯಕ್ಷರೇ ಒಪ್ಪಿಕೊಂಡಿದ್ದಾರೆ. ಅಲ್ಲಿಂದೀಚೆಗೆ ತೈವಾನ್‌ನ ಸಮುದ್ರದಲ್ಲಿ ಅಮೆರಿಕದ ಪಡೆಗಳು ಗಸ್ತು ತಿರುಗುತ್ತಿವೆ. ಚೀನಾದ ಜೆಟ್‌ಗಳೂ ತೈವಾನ್‌ ಮೇಲೆ ಹಾರಾಡುತ್ತಿವೆ. ಈಗ ನ್ಯಾನ್ಸಿ ಪೆಲೋಸಿ ಭೇಟಿಯಿಂದ ಈ ತಿಕ್ಕಾಟ ಇನ್ನಷ್ಟು ಉಲ್ಬಣಗೊಂಡಿದೆ.

ತೈವಾನ್‌ಗೆ ಸ್ವತಂತ್ರ ಅಸ್ತಿತ್ವ ಇದೆಯೇ?

ರಷ್ಯಾದ ಮುಂದೆ ಉಕ್ರೇನ್ ಇರುವಂತೆಯೇ ಚೀನಾದ ಮುಂದೆ ತೈವಾನ್ ಕೂಡ ಇದೆ. ಚೀನಾದ ಪೂರ್ವ ಕರಾವಳಿಯಲ್ಲಿರುವ ಸಣ್ಣ ದ್ವೀಪ ತೈವಾನ್. ಅದನ್ನು ಕೇವಲ 13 ದೇಶಗಳು ಮಾತ್ರ ಸ್ವತಂತ್ರ ದೇಶವೆಂದು ಗುರುತಿಸಿವೆ. ಅದಕ್ಕೆ ಸ್ವಾಯತ್ತ ಸ್ಥಾನಮಾನ ದೊರೆಯದಂತೆ ಚೀನಾ ಪ್ರಯತ್ನಿಸುತ್ತಲೇ ಇದೆ. ಪೆಸಿಫಿಕ್‌ ಸಮುದ್ರದಲ್ಲಿ ಶಾಂತಿ ಕಾಪಾಡುವ, ವಾಣಿಜ್ಯ ಚಟುವಟಿಕೆಗೆ ತೊಡಕಾಗದಂತೆ ನೋಡಿಕೊಳ್ಳುವ ಹೊಣೆ ಹೊತ್ತಿರುವ ಕ್ವಾಡ್‌ ಸಂಘಟನೆ ಕೂಡ ತೈವಾನ್‌ ವಿಷಯದಲ್ಲಿ ಮಧ್ಯ ಪ್ರವೇಶಿಸುವ ಇರಾದೆ ಹೊಂದಿದೆ. ಕ್ವಾಡ್‌ ಸದಸ್ಯ ದೇಶವಾದ ಆಸ್ಟ್ರೇಲಿಯಾ ಕೂಡ ತನ್ನ ಜಲಾಂತರ್ಗಾಮಿಯನ್ನು ಈ ಪ್ರದೇಶದಲ್ಲಿ ನಿಯೋಜಿಸಿದೆ.

ಅಮೆರಿಕಕ್ಕೆ ಇಲ್ಲೇನು ಹಿತಾಸಕ್ತಿ?

ತೈವಾನ್‌ನಲ್ಲಿ ಅಮೆರಿಕದ ಭಾರಿ ಹೂಡಿಕೆಗಳು ಇವೆ. ಅಮೆರಿಕ ಸೇರಿದಂತೆ ಜಗತ್ತು ಬಳಸುವ ಶೇ.60 ಭಾಗ ಸೆಮಿಕಂಡಕ್ಟರ್ ಚಿಪ್‌ಗಳು ತೈವಾನ್‌ನಲ್ಲಿ ತಯಾರಾಗುತ್ತಿವೆ. ಒಂದು ವೇಳೆ ತೈವಾನ್‌ ಕೈತಪ್ಪಿದರೆ ಇದು ಟೆಲಿಕಾಂ, ಎಲೆಕ್ಟ್ರಾನಿಕ್ಸ್‌ ಹಾಗೂ ಐಟಿ ವಲಯಕ್ಕೆ ದೊಡ್ಡ ಏಟು ನೀಡಬಹುದು. ಚೀನಾದ ಕುತ್ಸಿತ ವಾಣಿಜ್ಯ ಪಾಲಿಸಿಯ ಬಗ್ಗೆ ಅಮೆರಿಕನ್ನರಲ್ಲಿ ಸಾಮೂಹಿಕ ಸಿಟ್ಟು ಇದೆ. ತೈವಾನ್ ಅನ್ನು ಚೀನಾ ವಶಪಡಿಸಿಕೊಂಡರೆ ಪೂರ್ವ ಮತ್ತು ದಕ್ಷಿಣ ಪೆಸಿಫಿಕ್ ಸಮುದ್ರದಲ್ಲಿ ಅಮೆರಿಕದ ಹಿತಾಸಕ್ತಿಗಳು ಧಕ್ಕೆಗೊಳಗಾಗಲಿವೆ. ದಕ್ಷಿಣ ಕೊರಿಯ, ಜಪಾನ್, ಫಿಲಿಪ್ಪೀನ್ಸ್‌ಗಳ ಹಿತಾಸಕ್ತಿಗಳೂ ಕೆಡಲಿವೆ. ಜತೆಗೆ, ತೈವಾನ್‌ ತುಂಬ ಅಯಕಟ್ಟಿನ ಜಾಗದಲ್ಲಿದ್ದು, ಇಲ್ಲಿಂದ ಚೀನಾದ ಚಟುವಟಿಕೆಗಳ ಮೇಲೆ ಕಣ್ಣಿಡುವುದು ತುಂಬ ಸುಲಭ. ಹೀಗಾಗಿ ಅಮೆರಿಕ ಥಟ್ಟನೆ ಮಿಲಿಟರಿ ಪ್ರತಿಕ್ರಿಯೆ ತೋರುವ ಸಾಧ್ಯತೆಗಳಿವೆ. ಹೀಗಾಗಿ ತೈವಾನನ್ನು ಚೀನಾ ವಶಪಡಿಸಿಕೊಳ್ಳಲು ಮುಂದಾದರೆ ಅದು ಜಾಗತಿಕ ಸಮಸ್ಯೆಯಾಗುವ ಎಲ್ಲ ಸಾಧ್ಯತೆಗಳಿವೆ.

ಇದನ್ನೂ ಓದಿ: ತೈವಾನ್​ ರಕ್ಷಣಾ ವಲಯದಲ್ಲಿ ಚೀನಾ ಸೇನಾ ತಾಲೀಮು ಇನ್ನಷ್ಟು ತೀವ್ರ; ಹಾರಾಡುತ್ತಿವೆ ಯುದ್ಧ ವಿಮಾನಗಳು !

ಭಾರತಕ್ಕೆ ಏನು ತೊಂದರೆ?

ತೈವಾನ್‌ನ ವಿಷಯದಲ್ಲಿ ಚೀನಾ ಹೆಚ್ಚು ತೊಡಗಿಕೊಂಡರೆ ಭಾರತಕ್ಕೆ ಒಂದು ರೀತಿಯಿಂದ ಸಮಾಧಾನ. ಯಾಕೆಂದರೆ ಏಕಕಾಲಕ್ಕೆ ಹಲವು ಶತ್ರುಗಳನ್ನು ತಡವಿಕೊಳ್ಳಲು ಚೀನಾ ಮುಂದಾಗಲಾರದು. ಇದೇ ವೇಳೆಗೆ ಚೀನಾ ಮಾರುಕಟ್ಟೆಗೆ ನಿರ್ಬಂಧ ಬೀಳುವುದರಿಂದ, ಭಾರತದ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ದೊರೆಯಬಹುದು. ಆದರೆ ಜಾಗತಿಕವಾಗಿ ಸೆಮಿಕಂಡಕ್ಟರ್‌ ಚಿಪ್‌ಗಳ ಕೊರತೆಯಾದರೆ ಅದು ಭಾರತವನ್ನೂ ಕಾಡಲಿದೆ. ಚೀನಾದ ಉತ್ಪನ್ನಗಳನ್ನು ಇನ್ನೂ ಭಾರತ ದೊಡ್ಡ ಸಂಖ್ಯೆಯಲ್ಲಿ ನಂಬಿಕೊಂಡಿದೆ. ಚೀನಾದದೊಂದಿಗೆ ರಫ್ತು- ಆಮದು ಕೂಡ ದೊಡ್ಡ ಪ್ರಮಾಣದಲ್ಲಿಯೇ ಇದೆ. ಹೀಗಾಗಿ ದಿಡೀರನೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದು. ಮೇಲಾಗಿ, ಭಾರತ ಕೂಡ ʼಒನ್‌ ಚೀನಾ ಪಾಲಿಸಿʼಯನ್ನು ಮೊದಲಿನಿಂದ ಅಂಗೀಕರಿಸಿಕೊಂಡು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

VVPAT Verification: ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ.

VISTARANEWS.COM


on

evm vvpat verification lok sbha election 2024
Koo

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

Continue Reading

Latest

Lok sabha Election‌ 2024: ಲೋಕಸಭೆ ಚುನಾವಣೆಯಲ್ಲಿ ಈ 10 ವಿಷಯಗಳೇ ನಿರ್ಣಾಯಕ

Lok sabha Election 2024: ಕಳೆದ ಒಂದು ದಶಕದಿಂದ ಕೇಂದ್ರದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಆದರೆ ಈ ಸಂದರ್ಭದಲ್ಲಿ ಅದು ಹಲವು ಬಾರಿ ಎಡವಿದ್ದರೂ ಮತ್ತೆ ಹಲವು ಬಾರಿ ಪುಟಿದು ಎದ್ದೇಳುವ ಪ್ರಯತ್ನದಲ್ಲಿ ಯುಶಸ್ವಿಯಾಗಿದೆ. ಇದರಲ್ಲಿ ಈ ಬಾರಿ ಚುನಾವಣೆ ಮೇಲೆ ಪ್ರಭಾವ ಬೀರಬಹುದಾದ ಹಲವಾರು ಅಂಶಗಳಿವೆ ಅವು ಯಾವುದು ಗೊತ್ತೇ? ಇಲ್ಲಿದೆ ವಿಸ್ತೃತ ವಿಶ್ಲೇಷಣೆ.

VISTARANEWS.COM


on

By

Lok sabha election-2024
Koo

ದೇಶಾದ್ಯಂತ ಏಳು ಹಂತದಲ್ಲಿ ನಡೆಯಲಿರುವ 2024ರ ಲೋಕಸಭಾ ಚುನಾವಣೆಯ (Lok sabha election-2024) ಮೊದಲ ಹಂತದ ಮತದಾನ (voting) ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿದೆ. ವಿಶ್ವದ ಅತಿ ದೊಡ್ಡ ಚುನಾವಣೆಯಲ್ಲಿ ಸುಮಾರು 100 ಕೋಟಿ ಭಾರತೀಯರು (indians) ಮತ ಚಲಾಯಿಸಲಿದ್ದಾರೆ.

ಚುನಾವಣೆ ಪೂರ್ವದಲ್ಲೇ ಸಾಕಷ್ಟು ಸಮೀಕ್ಷೆಗಳನ್ನು ನಡೆಸಲಾಗಿದ್ದು, ಈ ಬಾರಿಯೂ ಪ್ರಧಾನಿ (PM) ನರೇಂದ್ರ ಮೋದಿ (narendra modi) ನೇತೃತ್ವದ ಭಾರತೀಯ ಜನತಾ ಪಕ್ಷ (BJP) ಸುಲಭವಾಗಿ ಗೆಲುವು ಸಾಧಿಸುತ್ತದೆ ಎಂಬುದು ತಿಳಿದು ಬಂದಿದೆ. ಒಂದು ವೇಳೆ ಈ ಬಾರಿಯೂ ಬಿಜೆಪಿ ಗೆಲುವು ದಾಖಲಿಸಿದರೆ ಸತತ ಮೂರನೇ ಅವಧಿಗೆ ಅಧಿಕಾರ ಬಿಜೆಪಿ ಪಾಲಾದಂತಾಗುತ್ತದೆ.

ಏಪ್ರಿಲ್ 19ರಿಂದ ಜೂನ್ 1ರವರೆಗೆ ನಡೆಯಲಿರುವ ಏಳು ಹಂತಗಳಲ್ಲಿಮತದಾನದ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಸಂಸತ್ತಿನ ಕೆಳಮನೆಯಾದ ಲೋಕಸಭೆಯ 543 ಸ್ಥಾನಗಳಿಗೆ ನಡೆಯುವ ಚುನಾವಣೆಯ ಮೇಲೆ ಪ್ರಭಾವ ಬೀರುವ ಹಲವಾರು ಅಂಶಗಳಿವೆ.

ಇದನ್ನೂ ಓದಿ: Lok Sabha Election 2024: ಮೊದಲ ಹಂತದ ಮತದಾನ ಆರಂಭ; 102 ಲೋಕಸಭಾ ಕ್ಷೇತ್ರಗಳ ಭವಿಷ್ಯ ಇಂದು ನಿರ್ಣಯ

1. ಆರ್ಥಿಕತೆಯ ಪ್ರಗತಿ

ಮಾರ್ಚ್ 31ರಂದು ಆರ್ಥಿಕ ವರ್ಷ ಕೊನೆಯಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯು ಸುಮಾರು ಶೇ. 8ರಷ್ಟು ಬೆಳವಣಿಗೆಯಾಗಿದೆ. ಇದು ಅತ್ಯಂತ ವೇಗವಾದ ಬೆಳವಣಿಗೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಕಳೆದ ಒಂದು ದಶಕದಲ್ಲಿ ಭಾರತದ ಆರ್ಥಿಕತೆಯು ಮೊದಲಿಗಿಂತ ಐದು ಸ್ಥಾನಗಳನ್ನು ಜಿಗಿದು ವಿಶ್ವದಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಈ ಬಾರಿ ಚುನಾವಣೆಯಲ್ಲಿ ತಾವು ಗೆದ್ದರೆ ಅದನ್ನು ಮೂರನೇ ಸ್ಥಾನಕ್ಕೆ ಏರಿಸುವ ಭರವಸೆ ನೀಡಿದ್ದಾರೆ.

2. ಅಭಿವೃದ್ಧಿಯ ತೀವ್ರಗತಿ

ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಪ್ರಮುಖ ನಗರಗಳಾದ ನವದೆಹಲಿ ಮತ್ತು ಮುಂಬಯಿ ಸೇರಿದಂತೆ ದೇಶದಾದ್ಯಂತ ಇರುವ ರಸ್ತೆಗಳು ಮತ್ತು ಸೇತುವೆಗಳು ಸಾಕಷ್ಟು ಅಭಿವೃದ್ಧಿಯಾಗಿದೆ. ಆದರೂ ಅಭಿವೃದ್ಧಿ ಕಾರ್ಯಗಳು ಗ್ರಾಮಾಂತರಕ್ಕಿಂತ ನಗರಗಳಲ್ಲೇ ಹೆಚ್ಚು ಕೇಂದ್ರಿತವಾಗಿವೆ ಎಂಬ ಆರೋಪವೂ ಇದೆ.


3. ಹಣದುಬ್ಬರ, ಬೆಲೆ ಏರಿಕೆ

2021-22 ರಲ್ಲಿ ಶೇ.5.5ರಷ್ಟು ಇದ್ದ ಹಣದುಬ್ಬರ 2022- 23ರಲ್ಲಿ ಶೇ. 6.7ಕ್ಕೆ ಏರಿದೆ. ಕೇವಲ ಫೆಬ್ರವರಿಯಲ್ಲಿ ಹಣದುಬ್ಬರ ಶೇ. 5.09 ರಷ್ಟು ಆಗಿತ್ತು. ಬೆಲೆ ಏರಿಕೆ ವಿಷಯ ಕೂಡ ಈ ಬಾರಿಯ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿದೆ.

4. ಮೋದಿ ಕಲ್ಯಾಣ ನೀತಿಗಳು

ಕೋವಿಡ್ ಸಾಂಕ್ರಾಮಿಕದ ಬಳಿಕ ಸರ್ಕಾರವು ಭಾರತದ 1.42 ಶತಕೋಟಿ ಜನರಲ್ಲಿ 814 ಮಿಲಿಯನ್ ಜನರಿಗೆ ಉಚಿತ ಆಹಾರ ಪಡಿತರವನ್ನು ನೀಡುತ್ತಿದೆ. ಭಾರತದ ಜನಸಂಖ್ಯೆಯ ಸುಮಾರು ಶೇ.60ರಷ್ಟು ಜನರಿಗೆ ಉಚಿತ ಸಿರಿಧಾನ್ಯಗಳನ್ನು ಸರ್ಕಾರ ಒದಗಿಸುತ್ತಿರುವುದು ದೇಶದ ಅಸಮ ಆರ್ಥಿಕ ಬೆಳವಣಿಗೆಯ ಸಂಕೇತ ಎನ್ನಲಾಗುತ್ತದೆ.
ಕಳೆದ ವರ್ಷದ ಅಂತ್ಯದ ವೇಳೆಗೆ ಭಾರತದ ಶ್ರೀಮಂತ ನಾಗರಿಕರು ಶೇ.40.1ರಷ್ಟು ಸಂಪತ್ತು ಹೊಂದಿದ್ದರು. ಇದು 1961ರ ಬಳಿಕ ಅತ್ಯಧಿಕವಾಗಿದೆ.

5. ಮಹಿಳೆಯರ ಪ್ರಭಾವ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮಹಿಳಾ ಮತದಾರರನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ಹಣ ಹಂಚಿಕೆ, ಪೈಪ್‌ಲೈನ್ ಮೂಲಕ ಮನೆಮನೆಗೆ ನೀರು, 24/7 ವಿದ್ಯುತ್ ಮತ್ತು ಅಡುಗೆ ಅನಿಲ ಸಂಪರ್ಕಗಳಂತಹ ಗೃಹೋಪಯೋಗಿ ಸೌಲಭ್ಯಗಳ ಮೂಲಕ ಅವರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಕ್ರಮ ಕೈಗೊಳ್ಳುತ್ತಿದೆ. ಇವು ದೇಶದ ಮಹಿಳೆಯರು ಮೋದಿ ಆಡಳಿತ ಕುರಿತು ಸಕಾರಾತ್ಮಕ ಅಭಿಪ್ರಾಯ ಹೊಂದಲು ಕಾರಣವಾಗಿದೆ.


6. ಧಾರ್ಮಿಕ ಪ್ರಭಾವ

ಬಿಜೆಪಿ ಸುಮಾರು 35 ವರ್ಷಗಳ ಹಿಂದೆ ನೀಡಿದ ಭರವಸೆಯನ್ನು ಈಗ ಈಡೇರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರಾಮನ ಜನ್ಮ ಸ್ಥಳ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ಮೊಘಲ್ ದೊರೆ ಬಾಬರ್ ನಿಂದ ಕೆಡವಲ್ಪಟ್ಟ ದೇವಾಲಯ ಈಗ ಪುನರ್ ನಿರ್ಮಾಣಗೊಂಡಿದೆ.

ಅಲ್ಲದೇ ಪ್ರಧಾನಿಯವರು ದೇಶಾದ್ಯಂತ ಇರುವ ಹಿಂದೂ ದೇವಾಲಯಗಳಿಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ಇದು ಬಿಜೆಪಿಗೆ ಹೆಚ್ಚು ಜನ ಬೆಂಬಲವನ್ನು ನೀಡಬಲ್ಲದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೋದಿಯವರ ಸರ್ಕಾರವು ಮುಸ್ಲಿಂ ಶಾಲೆಗಳು ಅಥವಾ ಮದರಸಾಗಳಿಗೆ ಬೆಂಬಲವನ್ನು ಕೊನೆಗೊಳಿಸಿದೆ ಮತ್ತು ಕೆಲವು ಬಿಜೆಪಿ ರಾಜ್ಯಗಳು ಅವುಗಳಲ್ಲಿ ಹಲವನ್ನು ಮುಚ್ಚಿವೆ. ಆದರೆ ಮೋದಿ ಅವರು ಪೌರತ್ವ ಕಾನೂನನ್ನು ಜಾರಿಗೆ ತಂದು ಹೊರದೇಶಗಳಿಂದ ವಲಸೆ ಬಂದಿರುವ ಅನೇಕರಿಗೆ ಸಹಾಯ ಮಾಡಿದೆ.

7. ಭ್ರಷ್ಟಾಚಾರ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಕಳೆದ ಒಂದು ದಶಕದಲ್ಲಿ ವಿರೋಧ ಪಕ್ಷದ ಸುಮಾರು 150 ರಾಜಕಾರಣಿಗಳನ್ನು ಕರೆಸಿ, ಪ್ರಶ್ನಿಸಿದೆ. ಹಲವಾರು ಅಧಿಕಾರಿಗಳು, ರಾಜಕಾರಣಿಗಳ ಆಸ್ತಿ ಮೇಲೆ ದಾಳಿ ನಡೆಸಿ ಬಂಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ರಾಜಕೀಯ ಲಾಭಕ್ಕಾಗಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವೂ ವಿರೋಧ ಪಕ್ಷಗಳಿಂದ ಕೇಳಿ ಬರುತ್ತಿದೆ. ಆದರೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಳೆದ 10 ವರ್ಷಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಹೀಗಾಗಿ ಈ ಅಂಶವೂ ಈ ಬಾರಿಯ ಚುನಾವಣೆ ಮೇಲೆ ಮಹತ್ವದ ಪ್ರಭಾವ ಬೀರಬಲ್ಲದು.

8. ನಿರುದ್ಯೋಗ

2014ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಜನರಿಗೆ ಹತ್ತಾರು ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿದ್ದು, ಇದರಲ್ಲಿ ಅರ್ಧದಷ್ಟು ಪೂರೈಕೆ ಮಾಡಲೂ ಸಾಧ್ಯವಾಗಿಲ್ಲ ಎಂಬ ಆರೋಪ ಇದೆ. ನಿರುದ್ಯೋಗ ದರವು ಫೆಬ್ರವರಿಯಲ್ಲಿ ಶೇ. 8ಕ್ಕೆ ಏರಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ತಿಳಿಸಿದೆ.

ಸರ್ಕಾರದ ಅಂಕಿ ಅಂಶಗಳ ಪ್ರಕಾರ 2023ರ ಮಾರ್ಚ್ ನಿಂದ ನಿರುದ್ಯೋಗ ದರವು ಶೇ.5.4ಕ್ಕೆ ಏರಿದೆ. ಮೋದಿ ಅಧಿಕಾರ ವಹಿಸಿಕೊಳ್ಳುವ ಮೊದಲು 2013-14 ರಲ್ಲಿ ಇದು ಶೇ. 4.9ರಷ್ಟಿತ್ತು.

15- 29 ವರ್ಷದ ಸುಮಾರು ಶೇ. 16ರಷ್ಟು ನಗರ ಯುವಕರು 2022-23 ರಲ್ಲಿ ಕಳಪೆ ಕೌಶಲ್ಯ ಮತ್ತು ಗುಣಮಟ್ಟದ ಉದ್ಯೋಗಗಳ ಕೊರತೆಯಿಂದಾಗಿ ನಿರುದ್ಯೋಗಿಗಳಾಗಿದ್ದಾರೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿದೆ. ಈ ವಿಷಯ ಮೋದಿ ಆಡಳಿತಕ್ಕೆ ನಕಾರಾತ್ಮಕವಾಗಿದೆ. ಪ್ರತಿಪಕ್ಷಗಳ ಪ್ರಬಲ ಅಸ್ತ್ರವಾಗಿದೆ.


9. ರೈತರ ಪ್ರತಿಭಟನೆ

ಕಳೆದ ಚುನಾವಣೆಯ ಪ್ರಣಾಳಿಕೆಯಲ್ಲಿ 2022ರ ವೇಳೆಗೆ ಕೃಷಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಆದರೆ ಅದರ ಲಕ್ಷಣ ಕಾಣುತ್ತಿಲ್ಲ. ವಿಶೇಷವಾಗಿ ರೈತರು ಪ್ರತಿಭಟನೆ ಇದಕ್ಕೆ ಸಾಕ್ಷಿಯಾಗಿದೆ. ದೇಶದ ರೈತರ ವಿಶ್ವಾಸವನ್ನು ಸಂಪೂರ್ಣವಾಗಿ ಗಳಿಸಲು ಮೋದಿಗಿನ್ನೂ ಸಾಧ್ಯವಾಗಿಲ್ಲ.

10. ಜಾಗತಿಕ ಸ್ಥಾನಮಾನ

ಕಳೆದ ವರ್ಷ ಜಿ 20 ಶೃಂಗಸಭೆಯನ್ನು ಆಯೋಜಿಸಿರುವುದು, ರಷ್ಯಾದ ದಾಳಿಯ ವೇಳೆ ಉಕ್ರೇನ್‌ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿರುವುದು ಪ್ರಧಾನಿ ನರೇಂದ್ರ ಮೋದಿಯ ಪ್ರಮುಖ ಸಾಧನೆಯಾಗಿದೆ. ಇದರಿಂದ ದೇಶಕ್ಕೆ ಸಿಗುತ್ತಿರುವ ಆರ್ಥಿಕತೆ ಬೆಂಬಲದೊಂದಿಗೆ ಭಾರತದ ಏರುತ್ತಿರುವ ಜಾಗತಿಕ ಸ್ಥಾನಮಾನ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ.

Continue Reading

ಚಿನ್ನದ ದರ

Gold Price Explainer: ಚಿನ್ನದ ದರ ಇಷ್ಟೊಂದು ಏರಲು ಏನು ಕಾರಣ? ಬಂಗಾರದ ಮೇಲೆ ಹೂಡಿಕೆಗಿದು ಸಕಾಲವೇ?

Gold Price Explainer: ಚಿನ್ನದ ಬೆಲೆ ಇತ್ತೀಚಿನ ದಿನಗಳಲ್ಲಿ ಗಗನಕ್ಕೇರುತ್ತಿದೆ. ಆದರೂ ಶುಭ ಸಮಾರಂಭಗಳ ಸೀಸನ್ ಗಳಲ್ಲಿ ಎಲ್ಲರೂ ಚಿನ್ನ ಖರೀದಿಗೆ ಮುಗಿ ಬೀಳುತ್ತಾರೆ. ಚಿನ್ನದ ದರ ನಿರಂತರ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಈ ಕುರಿತ ವಿಸ್ತೃತ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

By

Gold price
Koo

ನವದೆಹಲಿ: ಚಿನ್ನ (gold) ಯಾರಿಗೆ ಪ್ರಿಯವಿಲ್ಲ ಹೇಳಿ? ಆದರೆ ಇತ್ತೀಚೆಗೆ ವಿಪರೀತ ಏರುತ್ತಿರುವ ಚಿನ್ನದ ದರ ಶೀಘ್ರದಲ್ಲೇ ಲಕ್ಷದ ಗಡಿ ದಾಟುವ ಹಾಗೆ ತೋರುತ್ತಿದೆ. ಚಿನ್ನ ಎಷ್ಟೇ ದುಬಾರಿಯಾದರೂ ಮದುವೆ ಇತ್ಯಾದಿ ಶುಭ ಸಂದರ್ಭಗಳಲ್ಲಿ ಇದರ ಖರೀದಿಗೆ (shopping) ಜನ ಮುಗಿಬೀಳುತ್ತಾರೆ. ಜಾಗತಿಕ ಅನಿಶ್ಚಿತತೆ ಪರಿಣಾಮವಾಗಿ ಶೀಘ್ರದಲ್ಲೇ ಫೆಡರಲ್ ರಿಸರ್ವ್ (Federal Reserve) ದರ ಇಳಿಸುವ ನಿರೀಕ್ಷೆ, ಮದುವೆ ಸೀಸನ್ (Wedding season) ಪ್ರಾರಂಭ ಇತ್ಯಾದಿ ಕಾರಣಗಳಿಂದ ಈ ಬಾರಿ ಚಿನ್ನದ ದರ (Gold Price Explainer) ಮಾತ್ರ ಸಾರ್ವಕಾಲಿಕ ದಾಖಲೆ ಬರೆದಿದೆ. 24 ಕ್ಯಾರೆಟ್‌ನ ಪ್ರತಿ ಹತ್ತು ಗ್ರಾಮ್‌ ಚಿನ್ನದ ದರ 71,652 ರೂ. ಗರಿಷ್ಠ ಮಟ್ಟವನ್ನು ತಲುಪಿದೆ.

ಚಿನ್ನ ಎಷ್ಟೇ ದುಬಾರಿಯಾದರೂ ಖರೀದಿ ಮಾಡುವವರು ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿಯೇ ಇದು ಹೂಡಿಕೆ ದಾರರನ್ನು ಸದಾ ಆಕರ್ಷಿಸುತ್ತಿದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ದಾಖಲೆ ಏರಿಕೆ; 10 ಗ್ರಾಂಗೆ 73,000 ಮೀರಿಸಿದ ಬೆಲೆ

1. ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೆಡ್ಜ್ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.


2. ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

3. ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

4. ಕಡಿಮೆ ಬಡ್ಡಿ ದರಗಳು

ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.


5. ಹೂಡಿಕೆ ಮಾಡಬಹುದೆ?

ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

6. ದರ ಹೆಚ್ಚಳದ ಪರಿಣಾಮ ಏನು?

ಈ ವರ್ಷದ ಆರಂಭದಿಂದಲೂ ಮಾರುಕಟ್ಟೆ ಹೆಚ್ಚು ಸಕ್ರಿಯವಾಗಿದೆ. ಭೌಗೋಳಿಕ-ರಾಜಕೀಯ ಉದ್ವಿಗ್ನತೆಗಳು ಮಾರುಕಟ್ಟೆ ಮೇಲೆ ಪರಿಣಾಮ ಬಿರುತ್ತಿದೆ. ಇದೇ ಬೆಳವಣಿಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಎರಡಕ್ಕೂ ಹೆಚ್ಚಿನ ಲಾಭವಿದೆ. ದರ ಕಡಿತದ ನಿರೀಕ್ಷೆಗಳು ಡಾಲರ್ ಸೂಚ್ಯಂಕ ಮತ್ತು ಯುಎಸ್ ಉತ್ಪಾದನೆಯ ಮೇಲೆ ಚಂಚಲತೆಯನ್ನು ಹೆಚ್ಚಿಸಿದೆ. ಚಿನ್ನದ ಟ್ರೆಂಡ್ ಇನ್ನೂ ಸಕಾರಾತ್ಮಕವಾಗಿದೆ. ಇದು ಮುಂದಿನ ಅವಧಿಯಲ್ಲಿ 72,800 ತಲುಪುವ ನಿರೀಕ್ಷೆ ಇದ್ದು, 70,000 ರೂ. ಗಿಂತ ಕಡಿಮೆ ಕುಸಿಯುವುದಿಲ್ಲ ಎಂದು ನಿರೀಕ್ಷಿಸಲಾಗಿದೆ. ಹಾಗಾಗಿ ಚಿನ್ನದ ಮೇಲೆ ಹಣ ಹೂಡಿದರೆ ನಷ್ಟವಿಲ್ಲ ಎಂಬುದು ಆರ್ಥಿಕ ಪರಿಣತರ ಅಭಿಮತವಾಗಿದೆ.

Continue Reading

ವಿದೇಶ

Iran-Israel War Explainer: ಇಸ್ರೇಲ್ ಮೇಲೆ ಇರಾನ್ ದಾಳಿಗೆ ಕ್ಷಣಗಣನೆ; ಮುಂದೇನಾಗಬಹುದು?

Iran-israel War Explainer: ಇಸ್ರೇಲ್ ವಿರುದ್ಧ ಯುದ್ಧ ಸನ್ನದ್ಧವಾಗಿ ನಿಂತಿರುವ ಇರಾನ್ ಅದರ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಈ ನಡುವೆ ದೇಶಾದ್ಯಂತ ಯುದ್ಧದ ಸನ್ನಿವೇಶ ಉದ್ಭವವಾಗಿದ್ದು, ಇರಾನ್ ಗೆ ಯುದ್ಧ ನಡೆಸದಂತೆ ತಡೆಯುವ ಪ್ರಯತ್ನವನ್ನು ಯುಎಸ್ ಮಾಡುತ್ತಿದೆ.

VISTARANEWS.COM


on

By

Iran-israel War fear
Koo

ಇರಾನ್: ಇಸ್ರೇಲ್ (israel) ಮೇಲೆ ದಾಳಿ ನಡೆಸಲು ಇರಾನ್ (iran) ಸಜ್ಜಾಗಿದ್ದು, ಯಹೂದಿ ಬಹುಸಂಖ್ಯಾತರಿರುವ ರಾಷ್ಟ್ರವು ಇದಕ್ಕೆ ಪ್ರತಿ ದಾಳಿ ನಡೆಸಲು ಸಿದ್ಧವಾಗಿದೆ. ಇಸ್ರೇಲ್ ಈಗಾಗಲೇ ತನ್ನ ರಾಜಧಾನಿ ಟೆಲ್ ಅವಿವ್‌ನಲ್ಲಿ (tel aviv) ಮಿಲಿಟರಿ ನೆಲೆಗಳನ್ನು ಸ್ಥಾಪನೆ ಮಾಡಿರುವ ಹಿನ್ನೆಲೆಯಲ್ಲಿ ಮತ್ತೊಂದು ಯುದ್ಧದ ಭೀತಿ (Iran-israel War Explainer) ವಿಶ್ವದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ.

ಇರಾನ್ ದಾಳಿ ಭೀತಿಯ ಹಿನ್ನೆಲೆಯಲ್ಲಿ ಅಮೆರಿಕ (US) ತನ್ನ ರಾಷ್ಟ್ರದ ಪ್ರಜೆಗಳಿಗೆ ಪ್ರಯಾಣವನ್ನು ನಿರ್ಬಂಧಿಸಿದ್ದು, ಜೆರುಸಲೆಮ್‌ನಿಂದ (jerusalem) ಹೊರಗೆ ಹೋಗದಂತೆ ಸೂಚಿಸಿದೆ.

ಯಾಕೆ ಯುದ್ಧ ಪ್ರಾರಂಭ?

11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್‌ನ ದೂತಾವಾಸ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್ ಕ್ರಮವನ್ನು ಖಂಡಿಸಿ ಇರಾನ್ ಯುದ್ಧ ಪ್ರಾರಂಭಿಸಲು ಮುಂದಾಗಿದೆ. ಈಗಾಗಲೇ ಇರಾನ್‌ ಪ್ರೇರಿತ ಹೆಜ್ಬೊಲ್ಲಾ ಉಗ್ರರು ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ಶುರು ಮಾಡಿದ್ದಾರೆ. ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ 13 ಮಂದಿ ಮೃತಪಟ್ಟಿದ್ದರು.
ಇಸ್ರೇಲ್ ನ ಕ್ರಮಕ್ಕೆ ಪ್ರತೀಕಾರವಾಗಿ ಶೀಘ್ರದಲ್ಲೇ ಇರಾನ್ ಇಸ್ರೇಲ್ ನ ಟೆಹ್ರಾನ್ ಮೇಲೆ ದಾಳಿ ಇರಾನ್‌ ಅಧಿಕೃತವಾಗಿ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Iran- Israel War : ಮುಂದಿನ 48 ಗಂಟೆಗಳೊಳಗೆ ಇರಾನ್-ಇಸ್ರೇಲ್ ಭೀಕರ ಯುದ್ಧ ಶುರು!

ಯುದ್ಧ ತಡೆಗೆ ಅಮೆರಿಕ ಪ್ರಯತ್ನ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವನ್ನು ತಡೆಯಲು ಅಮೆರಿಕ ಪ್ರಯತ್ನಿಸುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಚೀನಾ, ಟರ್ಕಿ, ಸೌದಿ ಅರೇಬಿಯಾ ಮತ್ತು ಯುರೋಪಿಯನ್ ರಾಷ್ಟ್ರಗಳಲ್ಲಿರುವ ತಮ್ಮ ಸಹವರ್ತಿಗಳೊಂದಿಗೆ ಇರಾನ್ ಗೆ ಇಸ್ರೇಲ್ ಮೇಲೆ ದಾಳಿ ನಡೆಸದಂತೆ ಪ್ರಯತ್ನಿಸಲು ಹೇಳಿದ್ದಾರೆ. ಯುದ್ಧ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಯಾವ ದೇಶದ ಹಿತಾಸಕ್ತಿಗೂ ಇದು ಸರಿಯಲ್ಲ. ಹೀಗಾಗಿ ಇರಾನ್‌ನ ಮಿತ್ರ ರಾಷ್ಟ್ರಗಳು ಯುದ್ಧದ ಸನ್ನಿವೇಶವನ್ನು ತಡೆಯಲು ಒತ್ತಾಯಿಸಬೇಕು ಎಂದು ಹೇಳಿದರು.

Iran-israel War fear


ಅಮೆರಿಕವೇ ಹೊಣೆ ಎಂದ ಇರಾನ್

ಏಪ್ರಿಲ್ 1ರಂದು ಇರಾನ್ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಸಿರಿಯಾದ ಡಮಾಸ್ಕಸ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್‌ನ ಕುಡ್ಸ್ ಫೋರ್ಸ್‌ನಲ್ಲಿ ಇಬ್ಬರು ಜನರಲ್‌ಗಳು ಮತ್ತು ಐದು ಇತರ ಅಧಿಕಾರಿಗಳನ್ನು ಕೊಲ್ಲಲಾಗಿತ್ತು.
ಈ ದಾಳಿಯ ಬಳಿಕ ಪ್ರತಿಕ್ರಿಯಿಸಿದ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮಿರಬ್ದೊಲ್ಲಾಹಿಯಾನ್ ಅವರು, ಇಸ್ರೇಲ್ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇರಾನ್ ರಾಯಭಾರ ಕಚೇರಿಯ ಮೇಲಿನ ಇಸ್ರೇಲ್ ದಾಳಿಗೆ ಅಮೆರಿಕ ಹೊಣೆಯಾಗಿದೆ ಮತ್ತು ಜವಾಬ್ದಾರರಾಗಿರಬೇಕು ಎಂದು ಹೇಳಿದ್ದರು.

ಇರಾನ್‌ನ ರಾಯಭಾರ ಕಚೇರಿ ಮೇಲಿನ ಇಸ್ರೇಲ್ ದಾಳಿಯನ್ನು ಯುಎನ್ ಭದ್ರತಾ ಮಂಡಳಿಯು ಖಂಡಿಸಿದ್ದರೆ ಈ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಅವರು ಹೇಳಿದ್ದರು.

ದಾಳಿ ಎಲ್ಲಿ ನಡೆಯಬಹುದು?

ಇಸ್ರೇಲ್‌ನ ವೈಮಾನಿಕ ದಾಳಿಯ ಅನಂತರ ಇರಾನ್ ಇಸ್ರೇಲ್‌ನೊಳಗಿನ ಕೆಲವು ನಿರ್ದಿಷ್ಟ ಸ್ಥಳಗಳ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ಅಥವಾ ಡ್ರೋನ್‌ಗಳನ್ನು ಬಳಸಿಕೊಂಡು ದಾಳಿಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಯುಎಸ್ ಗುಪ್ತಚರ ವಿಭಾಗ ಬಹಿರಂಗಪಡಿಸಿದೆ.

ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಸೇನಾ ಪ್ರಧಾನ ಕಚೇರಿ ಕಿರಿಯಾವನ್ನು ಗುರಿಯಾಗಿಸಲು ಇರಾನ್ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಯುಎಸ್ ಗುಪ್ತಚರ ಮಾಹಿತಿ ತಿಳಿಸಿದೆ. ಇದಲ್ಲದೇ ಮಧ್ಯ ಇಸ್ರೇಲ್‌ನ ಪಾಲ್ಮಾಚಿಮ್ ಅಥವಾ ಉತ್ತರದ ಮೆರಾನ್‌ನಲ್ಲಿರುವ ವಾಯು ನೆಲೆಗಳು, ನೆಸೆಟ್ (ಸಂಸತ್ತು೦ ಮತ್ತು ಜೆರುಸಲೆಮ್‌ನಲ್ಲಿರುವ ಪ್ರಧಾನ ಮಂತ್ರಿ ಕಚೇರಿ ಮೇಲೆ ದಾಳಿಯಾಗುವ ಸಾಧ್ಯತೆ ಇದೆ.

ದಕ್ಷಿಣ ಅಥವಾ ಉತ್ತರ ಇಸ್ರೇಲ್ ಮೇಲೆ ಇರಾನ್‌ನಿಂದ ನೇರ ದಾಳಿ ನಡೆಸಬಹುದು ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಸಿರಿಯಾದಿಂದ ಇಸ್ರೇಲ್ ಸ್ವಾಧೀನಪಡಿಸಿಕೊಂಡ ವಿವಾದಿತ ಪ್ರದೇಶವಾದ ಗೋಲಾನ್‌ನಲ್ಲಿ ಅಥವಾ ಗಾಜಾದಲ್ಲಿ ಇರಾನ್ ದಾಳಿಯನ್ನು ಸಿದ್ಧಪಡಿಸುತ್ತಿದೆ ಎಂದು ಅಮೆರಿಕದ ಪತ್ರಿಕೆಯೊಂದು ವರದಿ ಮಾಡಿದೆ.

ಇರಾನ್ ಯುದ್ಧ ತಯಾರಿ ನಡೆಸುತ್ತಿರುವ ಬಗ್ಗೆ ಇಸ್ರೇಲ್ ಪ್ರತಿಕ್ರಿಯೆಯನ್ನು ಆಧರಿಸಿ ದಾಳಿ ಆರಂಭಿಸುವ ಸಾಧ್ಯತೆ ಹೆಚ್ಚಾಗಿದೆ ಇದೆ ಎಂದು ಗುಪ್ತಚರ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇರಾನ್ ಹಮಾಸ್, ಹೆಜ್ಬುಲ್ಲಾ, ಕತೀಬ್ ಹೆಜ್ಬುಲ್ಲಾ, ಹೌತಿಗಳು ಅಥವಾ ಬದ್ರ್ ಸಂಘಟನೆಗಳು ಗಡಿಯಲ್ಲಿ ದಾಳಿ ನಡೆಸಬಹುದು. ದಕ್ಷಿಣ ಲೆಬನಾನ್‌ನಲ್ಲಿರುವ ಹೆಜ್ಬೊಲ್ಲಾ ಇಸ್ರೇಲ್ ಅನ್ನು ಗುರಿಯಾಗಿಸಲು ಬಳಸಬಹುದಾದ ಕ್ಷಿಪಣಿಗಳ ದೊಡ್ಡ ಸಂಗ್ರಹವನ್ನು ಹೊಂದಿದೆ. ಆದರೂ ಇಸ್ರೇಲ್‌ನೊಂದಿಗೆ ಪೂರ್ಣ ಪ್ರಮಾಣದ ಯುದ್ಧವನ್ನು ಮಾಡಲು ಹಿಜ್ಬುಲ್ಲಾ ಹಿಂಜರಿಯುತ್ತಿದೆ ಎನ್ನಲಾಗಿದೆ.


ಇಸ್ರೇಲ್‌ಗೆ ಅಮೆರಿಕ ಬೆಂಬಲ

ಇಸ್ರೇಲ್ ವಿರುದ್ಧ ಇರಾನ್ ದಾಳಿಯ ಸಾಧ್ಯತೆಯು ಬಗ್ಗೆ ವಿಶ್ವವೇ ಎಚ್ಚೆತ್ತುಕೊಂಡಿದೆ. ಯುನೈಟೆಡ್ ಸ್ಟೇಟ್ಸ್ ಯುದ್ಧ ತಡೆಯಲು ಇತರ ದೇಶಗಳಿಂದ ಸಹಾಯವನ್ನು ಕೋರುತ್ತಿದೆ ಮತ್ತು ಇಸ್ರೇಲ್ ಗೆ ಬೆಂಬಲ ನೀಡುವ ಪ್ರತಿಜ್ಞೆಯನ್ನೂ ಮಾಡಿದೆ.

ಈ ಕುರಿತು ಮಾತನಾಡಿರುವ ಯುಎಸ್ ಅಧ್ಯಕ್ಷ ಜೋ ಬಿಡೆನ್, ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕುತ್ತಿದೆ. ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಹೇಳಿದಂತೆ, ಇರಾನ್ ಮತ್ತು ಅದರ ಪ್ರಾಕ್ಸಿಗಳಿಂದ ಈ ಬೆದರಿಕೆಗಳ ವಿರುದ್ಧ ಇಸ್ರೇಲ್‌ನ ಭದ್ರತೆಗೆ ನಮ್ಮ ಬದ್ಧತೆ ಇದೆ. ಇಸ್ರೇಲ್‌ ಅನ್ನು ರಕ್ಷಿಸಲು ನಾವು ನಮ್ಮ ಕೈಲಾದಷ್ಟು ಸಹಾಯ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಯುದ್ಧ ಸನ್ನಿವೇಶದ ಕುರಿತು ಪ್ರತಿಕ್ರಿಯಿಸಿ, ಇರಾನ್ ತನ್ನ ಪ್ರದೇಶದಿಂದ ದಾಳಿ ಮಾಡಿದರೆ, ಇಸ್ರೇಲ್ ಪ್ರತಿಕ್ರಿಯಿಸುತ್ತದೆ ಮತ್ತು ಇರಾನ್‌ ಮೇಲೆ ದಾಳಿ ನಡೆಸುತ್ತದೆ ಎಂದು ಹೇಳಿದ್ದಾರೆ.

ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಚೀನಾದ ವಾಂಗ್ ಯಿ ಅವರೊಂದಿಗೆ ಮಾತನಾಡಿದ್ದು, ಇರಾನ್‌ ಗೆ ಯುದ್ಧ ಮಾಡದಂತೆ ಸೂಚಿಸಲು ಒತ್ತಾಯಿಸಿದ್ದಾರೆ. ರಷ್ಯಾ, ಜರ್ಮನಿ ಮತ್ತು ಬ್ರಿಟನ್ ಕೂಡ ಇರಾನ್ ಮತ್ತು ಇಸ್ರೇಲ್ ಸಂಯಮ ತೋರಿಸುವಂತೆ ಒತ್ತಾಯಿಸಿದೆ.

ಪ್ರಜೆಗಳಿಗೆ ನಾನಾ ದೇಶಗಳ ಎಚ್ಚರಿಕೆ

ಇಸ್ರೇಲ್‌ನಲ್ಲಿನ ತನ್ನ ಉದ್ಯೋಗಿಗಳಿಗೆ ಅಮೆರಿಕ ಪ್ರಯಾಣವನ್ನು ನಿರ್ಬಂಧಿಸಿದೆ. ಜೆರುಸಲೆಮ್, ಟೆಲ್ ಅವಿವ್ ಅಥವಾ ಬೀರ್ ಶೆವಾ ಪ್ರದೇಶಗಳ ಹೊರಗೆ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದೆ.
ಯುಕೆ ವಿದೇಶಾಂಗ ಕಚೇರಿಯು ಇಸ್ರೇಲ್‌ಗೆ ಪ್ರಯಾಣ ನಡೆಸದಂತೆ ನಾಗರಿಕರಿಗೆ ಸೂಚಿಸಿದೆ. ಇಸ್ರೇಲ್ ಮೇಲಿನ ದಾಳಿ ಸಾಧ್ಯತೆಯನ್ನು ಇರಾನ್‌ ಹೆಚ್ಚಿಸಿದೆ ಎಂದು ಹೇಳಿದೆ.

ಯುದ್ಧದ ತಯಾರಿಯಲ್ಲಿ ಇದ್ದರೂ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸುವುದಿಲ್ಲ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಸ್ರೇಲ್‌ ಗೆ ಎಚ್ಚರಿಕೆ ನೀಡಲು ಯುದ್ಧದ ತಯಾರಿ ನಡೆಸುತ್ತಿದೆ. ಇಸ್ರೇಲ್‌ನ ಮಿಲಿಟರಿಯನ್ನು ನಿರಂತರ ಎಚ್ಚರಿಕೆಯ ಸ್ಥಿತಿಯಲ್ಲಿ ಇರಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಅದರ ದೌರ್ಬಲ್ಯಗಳನ್ನು ಪರಿಶೀಲಿಸುತ್ತಿದೆ ಎಂಬ ವಿಶ್ಲೇಷಣೆಯೂ ಕೇಳಿ ಬಂದಿದೆ.

ಭಾರತದ ಪಾತ್ರ ಏನು?

ಭಾರತದ ಬೆಂಬಲ ಯಾವಾಗಲೂ ಇಸ್ರೇಲ್‌ ಕಡೆಗೇ ಇರುತ್ತದೆ. ಹಾಗಂತ ಇರಾನ್‌ ಕೂಡ ಭಾರತದ ವೈರಿ ದೇಶ ಏನಲ್ಲ. ಹಾಗಾಗಿ ಭಾರತ ಎಚ್ಚರಿಕೆಯ ಹೆಜ್ಜೆ ಇಡಲಿದೆ. ಇಸ್ರೇಲ್‌-ಇರಾನ್‌ ಯುದ್ಧ ತಡೆಯಲು ಭಾರತ ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಲಿದೆ. ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ತೈಲ ದರದ ಮೇಲ ಪರಿಣಾಮ ಏನು?

ಒಂದೊಮ್ಮೆ ಇಸ್ರೇಲ್‌-ಇರಾನ್‌ ನಡುವೆ ಯುದ್ಧ ಸ್ಫೋಟಗೊಂಡರೆ ಇದರ ಮೊದಲ ಪರಿಣಾಮ ಬೀರುವುದು ತೈಲ ದರದ ಮೇಲೆ. ವಿಶ್ವದಲ್ಲಿ ಯಾವುದೇ ಭಾಗದಲ್ಲಿ ಯುದ್ಧ ನಡೆದರೂ ತೈಲ ಪೂರೈಕೆ ಜಾಲ ಏರುಪೇರಾಗುತ್ತದೆ. ಅದರಲ್ಲೂ ಇರಾನ್‌ ತೈಲ ಪೂರೈಸುವ ಪ್ರಮುಖ ರಾಷ್ಟ್ರ ಆಗಿರುವುದರಿಂದ, ಯುದ್ಧ ಸಂಭವಿಸಿದರೆ ತೈಲ ದರ ಏರಿಕೆ ಆಗುವ ಅಪಾಯವಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ4 mins ago

IPL 2024 : ಆರ್​ಸಿಬಿ, ಕೊಹ್ಲಿಯ ನೆರವು ಸ್ಮರಿಸಿದ ಕೆ. ಎಲ್ ರಾಹುಲ್​

Lok Sabha Election 2024
ಕರ್ನಾಟಕ16 mins ago

Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

Summer Fashion
ಫ್ಯಾಷನ್21 mins ago

Summer Fashion: ಬದಲಾಯ್ತು ಜೆನ್‌ ಜಿ ಹುಡುಗರ ಸಮ್ಮರ್‌ ಫ್ಯಾಷನ್‌ ಸ್ಟೇಟ್‌ಮೆಂಟ್ಸ್‌

Instagram Reel
ದೇಶ32 mins ago

Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

IPL 2024
ಕ್ರೀಡೆ47 mins ago

IPL 2024 : ಪಾಂಡ್ಯನನ್ನು ವಿಚಿತ್ರ ನಾಯಕ ಎಂದ ಮುಂಬೈ ಇಂಡಿಯನ್ಸ್​ ಆಲ್​ರೌಂಡರ್​​

Karnataka Weather Forecast
ಮಳೆ53 mins ago

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

lok sabha Election
ಪ್ರಮುಖ ಸುದ್ದಿ1 hour ago

Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಪಿಯಿಂದ ಆಕ್ಷೇಪ!; ವಿಡಿಯೊ ಇದೆ

Road accident between bike and Bolero near Mudgal Two dead
ಕರ್ನಾಟಕ1 hour ago

Road Accident: ಮುದ್ಗಲ್‌ ಬಳಿ ಬೈಕ್‌ – ಬುಲೇರೋ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Wedding Saree Selection
ಫ್ಯಾಷನ್1 hour ago

Wedding Saree Selection: ಮದುವೆ ಸೀರೆಗಳನ್ನು ಆಯ್ಕೆ ಮಾಡುವುದು ಹೇಗೆ? ಇಲ್ಲಿದೆ ಸೀರೆ ಎಕ್ಸ್‌ಫರ್ಟ್‌ಗಳ ಟಿಪ್ಸ್

ಶಿವಮೊಗ್ಗ2 hours ago

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ3 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ14 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌