ವಿಸ್ತಾರ Explainer | Srilanka crisis: ಶ್ರೀಲಂಕೆಗೆ ಈಗ ಭಾರತ ಒಂದೇ ಆಸರೆಯಾ? - Vistara News

EXPLAINER

ವಿಸ್ತಾರ Explainer | Srilanka crisis: ಶ್ರೀಲಂಕೆಗೆ ಈಗ ಭಾರತ ಒಂದೇ ಆಸರೆಯಾ?

ರನಿಲ್‌ ಹೊಸ ಅಧ್ಯಕ್ಷರಾದರೂ Srilanka crisis ಮುಂದುವರಿದಿದೆ. ಈ ದುಃಸ್ಥಿತಿಯಿಂದ ಮೇಲೆತ್ತಲು ಭಾರತ ಒಂದೇ ಗತಿ ಎಂದು ಅಲ್ಲಿನ ಜನ ಮೊರೆ ಇಡುತ್ತಿದ್ದಾರೆ. ಭಾರತವೆಷ್ಟು ನೆರವಾಗಿದೆ?

VISTARANEWS.COM


on

sri lanka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಕ್ಕದ ದ್ವೀಪದೇಶ ಶ್ರೀಲಂಕೆ ಆರ್ಥಿಕ ಕುಸಿತದಿಂದ ತತ್ತರಿಸುತ್ತಿದೆ. ಹಿಂದಿನ ಅಧ್ಯಕ್ಷ, ಪ್ರಧಾನಿಗಳು ಮಾಡಿದ ಕರ್ಮಕಾಂಡಗಳು, ಭ್ರಷ್ಟಾಚಾರಗಳ ಪರಿಣಾಮ ಈಗ ಅಲ್ಲಿನ ಜನತೆಯ ಮೇಲೆ ಆಗಿದೆ. ಅಲ್ಲಿನ ರೂಪಾಯಿ ಮಹಾ ಕುಸಿತ ಕಂಡಿದೆ. ಬಂಕ್‌ಗಳ ಮುಂದೆ ದಿನಗಟ್ಟಲೆ ಕ್ಯೂ ನಿಂತರೂ ಪೆಟ್ರೋಲ್‌ ಸಿಗುತ್ತಿಲ್ಲ. ದಿನವಹಿ ಕೆಲಸಕ್ಕೆ ಬೇಕಾದ ವಿದ್ಯುತ್‌ ದೊರೆಯುತ್ತಿಲ್ಲ. ಕೈಗಾರಿಕೆ ನಿಂತೇಹೋಗಿದೆ. ಪ್ರವಾಸೋದ್ಯಮದಲ್ಲಿ ಚೈತನ್ಯವೇ ಇಲ್ಲ. ಬ್ರೆಡ್‌ ಪೀಸ್‌ಗಳಿಗಾಗಿ ಅಂಗಲಾಚುತ್ತಿದೆ. ಹೊಸದಾಗಿ ಚುನಾಯಿತರಾದ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಅವರು ದೇಶವನ್ನು ಪಾರು ಮಾಡಲು ದಾರಿಗಳನ್ನು ಹುಡುಕುತ್ತಿದ್ದಾರೆ.

ranil
ರನಿಲ್‌ ವಿಕ್ರಮಸಿಂಘೆ

ಲಂಕೆಗೆ ಯಾಕೆ ಇಂಥ ಗತಿ ಬಂತು ಎಂದು ಹಲವು ಸಲ ನೋಡಲಾಗಿದೆ. ಈಗ ನೆರೆಮನೆಗೆ ಸಹಾಯ ಮಾಡುವ ಸಮಯ. ಹೌದೇ? ಲಂಕೆಗೆ ನಾವು ಸಹಾಯ ಮಾಡಬೇಕೆ? ಯಾಕೆ ಮಾಡಬೇಕು? ಪಕ್ಕದಲ್ಲಿರುವ ನಮ್ಮನ್ನು ಬಿಟ್ಟು ಚೀನಾದ ತಾಳಕ್ಕೆ ತಕ್ಕಂತೆ ಕುಣಿದ, ಅಲ್ಲಿಂದ ಕೋಟಿಗಟ್ಟಲೆ ಡಾಲರ್‌ ಪಡೆದುಕೊಂಡು ಬಂದರು ಸೇರಿದಂತೆ ಮೂಲಸೌಕರ್ಯಗಳನ್ನೆಲ್ಲ ಶತಮಾನಗಳ ಲೆಕ್ಕದಲ್ಲಿ ಮಾರಿದ, ಚೀನಾಗೆ ಸೇನಾ ನೆಲೆಯನ್ನೂ ಸೃಷ್ಟಿಸಿಕೊಳ್ಳಲು ನೆರವಾದ ಲಂಕೆಗೆ ನಾವು ಯಾಕೆ ಸಹಾಯ ಮಾಡಬೇಕು? ಈ ಪ್ರಶ್ನೆ ಎದ್ದರೆ ಅದು ಸಹಜವೇ.

ಆದರೆ ಚೀನಾದ ಜೊತೆ ಕೈ ಜೋಡಿಸಿದವರು ಶ್ರೀಲಂಕೆಯ ಸಾಮಾನ್ಯ ಜನರಲ್ಲ. ರಾಜಪಕ್ಸ ಕುಟುಂಬ. ಈ ಕುಟುಂಬದ ಬಲವಾದ ಹಿಡಿತದಲ್ಲಿರುವ, ಶ್ರೀಲಂಕಾ ಪೊದುಜನ ಪೆರಮುನ ಎಂಬ ಹೆಸರಿನ ರಾಜಕೀಯ ಪಕ್ಷ ಈಗ ಆಡಳಿತದಲ್ಲಿದೆ. ರಾಜಪಕ್ಸ ಕುಟುಂಬ ಮೊದಲಿನಿಂದಲೂ ಭಾರತದ ಬಗ್ಗೆ ಅಷ್ಟೇನೂ ಒಲವನ್ನು ಇಟ್ಟುಕೊಂಡಿಲ್ಲ. ಶ್ರೀಲಂಕಾ ತಮಿಳರು ಸ್ವಾತಂತ್ರ್ಯಕ್ಕಾಗಿ ಉಗ್ರವಾದ ಹೋರಾಟ ನಡೆಸಿದಾಗ, ಅದನ್ನು ನಿರ್ದಾಕ್ಷಿಣ್ಯವಾಗಿ ಅದುಮಿಹಾಕಿದವರು ಇದೇ ರಾಜಪಕ್ಸ ಕುಟುಂಬ. ರಾಜಪಕ್ಸ ರಾಜಕಾರಣಿಗಳ ಪ್ರಕಾರ ಎಲ್‌ಟಿಟಿಇ ಹೋರಾಟದ ಹಿಂದೆ ಭಾರತದ ಪ್ರೇರಣೆಯೂ ಇದೆ. ಇಂಥ ಭಾರತದತ್ತ ಕೈ ಚಾಚುವುದು ಸರಿಯಲ್ಲ ಎಂಬುದು ರಾಜಪಕ್ಸ ಕುಟುಂಬದ ದುರಭಿಮಾನ. ಆದರೆ ಈ ದುರಭಿಮಾನಕ್ಕೆ ಅಲ್ಲಿನ ಸ್ಥಿತಿಗತಿಯೇ ಅಂತ್ಯ ಹಾಡಿದೆ. ಇಂಥ ಸನ್ನಿವೇಶದಲ್ಲಿ ಚೀನಾ ಕೂಡ ಅದಕ್ಕೆ ನೆರವಾಗಿಲ್ಲ. ಭಾರತವೇ ಬರಬೇಕಿದೆ.

ʻʻಶ್ರೀಲಂಕಾದ ದುರ್ಭರ ಸನ್ನಿವೇಶ ಪಕ್ಕದಲ್ಲಿರುವ ನಮಗೂ ಅಪಾಯಕಾರಿʼʼ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಹೇಳಿದ್ದಾರೆ. ʻʻನಾವು ಲಂಕೆಗೆ ಸಾಧ್ಯವಾದ ರೀತಿಯಲ್ಲೆಲ್ಲಾ ನೆರವಾಗುತ್ತಿದ್ದೇವೆʼʼ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಭಾರತ ಲಂಕೆಗೆ ಹೇಗೆ ನೆರವಾಗುತ್ತಿದೆ? ಈ ಹಿಂದೆ ನೆರವಾದ ಉದಾಹರಣೆಗಳು ಇವೆಯೇ? ನೋಡೋಣ.

ನೆರವು ನೀಡಿ ಬಲಿಯಾದ ರಾಜೀವ್‌ ಗಾಂಧಿ

ಶ್ರೀಲಂಕೆಗೆ ಈ ಹಿಂದೆ ನೆರವು ನೀಡಲು ಹೋಗಿ ಭಾರತ ತನ್ನ ಒಬ್ಬ ಪ್ರಧಾನಿಯನ್ನೇ ಕಳೆದುಕೊಂಡಿದೆ. 90ರ ದಶಕದಲ್ಲಿ ಶ್ರೀಲಂಕೆಯಲ್ಲಿ ತಮಿಳು ಪ್ರತ್ಯೇಕತಾವಾದ ಭಯೋತ್ಪಾದನೆ ಎಲ್‌ಟಿಟಿಇ ಸಂಘಟನೆಯ ಮೂಲಕ ಜಾರಿಯಲ್ಲಿತ್ತು. ಈ ಸಂದರ್ಭದಲ್ಲಿ ಶ್ರೀಲಂಕೆಯ ಜತೆ ಮಾಡಿಕೊಂಡ ಒಪ್ಪಂದದಂತೆ ಪ್ರಧಾನಿ ರಾಜೀವ್‌ ಗಾಂಧಿ ಅವರು ನಮ್ಮ ಶಾಂತಿಪಾಲನಾ ಪಡೆಯನ್ನು ಅಲ್ಲಿಗೆ ಕಳಿಸಿದರು. ಇದು ತಮಿಳು ಉಗ್ರರಲ್ಲಿ ರಾಜೀವ್‌ ವಿರುದ್ಧ ದ್ವೇಷವನ್ನು ತುಂಬಿತು. ಮುಂದೇ ಇದೇ ಎಲ್‌ಟಿಟಿಇ ಉಗ್ರರು ಆತ್ಮಹತ್ಯಾ ದಾಳಿ ಮೂಲಕ ರಾಜೀವ್‌ ಅವರನ್ನು ಬಲಿ ಪಡೆದರು. ಇದೊಂದು ಕರಾಳ ನೆನಪು. ಪ್ರಸ್ತುತ ಸನ್ನಿವೇಶಕ್ಕೂ ಆಗಿನ ಸಂದರ್ಭಕ್ಕೂ ಹೋಲಿಕೆಯಿಲ್ಲ. ಆದರೆ ಭಾರತ ಈ ದಿಸೆಯಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಡುವುದೂ ಅಗತ್ಯ.

ಭಾರತವೇ ನೆರವಿನ ಮೂಲ

india help lanka

ಭಾರತ ಈ ವರ್ಷ ಶ್ರೀಲಂಕಾಕ್ಕೆ ನೆರವಾದ ಪ್ರಮುಖ ವಿದೇಶಿ ಸಹಾಯ ಮೂಲ. ನಗದು ಮತ್ತು ವಸ್ತು ಎರಡೂ ರೂಪದಲ್ಲಿ. ಶ್ರೀಲಂಕಾದ ಆರ್ಥಿಕ ಸುಳಿಯಿಂದ ಹೊರಬರಲು ಸಹಾಯ ಮಾಡುವಲ್ಲಿ ಭಾರತ ಇತರರಿಗಿಂತ ಮುಂದಿದೆ. ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಶ್ರೀಲಂಕಾ ಸ್ವೀಕರಿಸಿದ ವಿದೇಶಿ ನೆರವಿನ ಪ್ರಮಾಣ $ 968.8 ದಶಲಕ್ಷ, ಅದರಲ್ಲಿ ಭಾರತದ ಪಾಲು ಶ್ರೀಲಂಕಾದ ಹಣಕಾಸು ಸಚಿವಾಲಯದ ಪ್ರಕಾರವೇ $ 376.9 ದಶಲಕ್ಷ (₹ 3016 ಕೋಟಿ) ಇದು ಸುಮಾರು 39%. ಮತ್ತೊಂದೆಡೆ ಚೀನಾ ನೀಡಿದ್ದು ಕೇವಲ $67.9 ದಶಲಕ್ಷ ಅಥವಾ ಸಾಲದ ಕೇವಲ 7%.

ಭಾರತ ನೀಡಿದ ಹಣಕಾಸು ನೆರವು ಕೂಡ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಗಿಂತಲೂ ಹೆಚ್ಚು. ಭಾರತ ನೀಡಿದ್ದು $ 359.6 ದಶಲಕ್ಷ (₹ 2878 ಕೋಟಿ) ಹಾಗೂ ವಿಶ್ವ ಬ್ಯಾಂಕ್‌ ನೀಡಿರುವುದು $ 67.3 ದಶಲಕ್ಷ. ಲಂಕೆಗೆ ನೆರವು ನೀಡುವುದರಲ್ಲಿ ವಿಶ್ವ ಬ್ಯಾಂಕ್‌ಗಿಂತಲೂ ಭಾರತವೇ ಮುಂದಿದೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ $ 3-4 ದಶಲಕ್ಷ ಬೇಲೌಟ್‌ ಪ್ಯಾಕೇಜ್‌ಗಾಗಿ ಶ್ರೀಲಂಕಾ ನಿರೀಕ್ಷಿಸುತ್ತಿದೆ. ದೇಶದ 2.2 ಕೋಟಿ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಮುಂದಿನ ಆರು ತಿಂಗಳಲ್ಲಿ ಸುಮಾರು $ 5 ಶತಕೋಟಿ (₹ 40,000 ಕೋಟಿ) ಅಗತ್ಯವಿದೆ ಎನ್ನಲಾಗಿದೆ.

ಅಗತ್ಯ ವಸ್ತುಗಳು, ಪೆಟ್ರೋಲ್‌

ಶ್ರೀಲಂಕೆಗೆ ಅಗತ್ಯ ಬಿದ್ದಾಗಲೆಲ್ಲ ಭಾರತ ಹಣಕಾಸು, ಸಾಲದ ನೆರವು ನೀಡುತ್ತ ಬಂದಿದೆ. ಬಡ್ಡಿಯಲ್ಲಿ ವಿನಾಯಿತಿ ನೀಡಿದೆ. ಬಡ್ಡಿಯೇ ಇಲ್ಲದೆಯೂ ಕೊಟ್ಟಿದೆ. ಈ ವರ್ಷ ಭಾರತದಿಂದ ಅಗತ್ಯ ಆಮದು, ಪೆಟ್ರೋಲ್‌ ಆಮದುಗಳಿಗಾಗಿ ನೂರು ಕೋಟಿ ಡಾಲರ್‌ (₹ 800 ಕೋಟಿ) ಪಡೆದಿದೆ. ಭಾರತವೊಂದೇ ಶ್ರೀಲಂಕೆಯ ಈ ದುಃಸ್ಥಿತಿಯ ಸನ್ನಿವೇಶದಲ್ಲೂ ನೆರವಿಗೆ ನಿಂತಿರುವ ದೇಶ ಎಂದು ಅಲ್ಲಿನ ಇಂಧನ, ವಿದ್ಯುತ್‌ ಸಚಿವ ಕಾಂಚನ ವಿಜೆಸೇಕರ ಅವರು ಕೃತಜ್ಞತೆಯಿಂದ ಸ್ಮರಿಸಿದ್ದಾರೆ.

ಅಗತ್ಯ ವಸ್ತುಗಳನ್ನು ಲಂಕೆಗೆ ಒದಗಿಸಿಕೊಡುವುದರಲ್ಲಿ ಭಾರತ ಎಂದೂ ಹಿಂದೆ ಬಿದ್ದಿಲ್ಲ. ₹ 260 ದಶಲಕ್ಷd ಕಚ್ಚಾ ವಸ್ತುಗಳು, ₹ 200 ದಶಲಕ್ಷದ ವೈದ್ಯಕೀಯ ಸಾಮಗ್ರಿಗಳು, ₹ 180 ದಶಲಕ್ಷದ ದಿನವಹಿ ವಸ್ತುಗಳು, ₹200 ದಶಲಕ್ಷದ ಇಂಧನ, ₹ 160 ದಶಲಕ್ಷ ಮೌಲ್ಯದ ಎಲ್‌ಪಿಜಿ ಒದಗಿಸಿದೆ.

ಜನವರಿಯಲ್ಲಿ ಏಷ್ಯನ್‌ ಕ್ಲಿಯರಿಂಗ್‌ ಯೂನಿಯನ್‌ಗೆ ನೀಡಬೇಕಿದ್ದ 500 ದಶಲಕ್ಷ ಡಾಲರ್‌ಗಳನ್ನು ಕೊಡಲಾಗದು ಎಂದಾಗ ಭಾರತ ಅದನ್ನು ಅಂಗೀಕರಿಸಿತ್ತು. ಏಷ್ಯನ್‌ ಕ್ಲಿಯರಿಂಗ್‌ ಯೂನಿಯನ್‌ ಎಂಬುದು ಬಾಂಗ್ಲಾ, ಭೂತಾನ್‌, ಲಂಕಾ, ಭಾರತ, ಮ್ಯಾನ್ಮಾರ್‌, ಇರಾನ್‌, ಮಾಲ್ದೀವ್ಸ್‌, ನೇಪಾಳ, ಪಾಕಿಸ್ತಾನಗಳ ಸೆಂಟ್ರಲ್‌ ಬ್ಯಾಂಕ್‌ಗಳನ್ನು ಒಳಗೊಂಡ ಹಣಕಾಸು ಪ್ರಾಧಿಕಾರ. 2022ರಲ್ಲಿ ಲಂಕೆ ಒಟ್ಟಾರೆಯಾಗಿ 700 ಶತಕೋಟಿ ಡಾಲರ್‌ ಹಣವನ್ನು ಮರುಪಾವತಿಸಬೇಕಿದೆ. ವಿದೇಶಾಂಗ ವಿನಿಮಯ ನಿಧಿಯಲ್ಲಿ ಹಣವೇ ಇಲ್ಲ.

ಏಪ್ರಿಲ್‌ನಲ್ಲಿ ʻಕರೆನ್ಸಿ ಬದಲಿಸಿಕೊಳ್ಳುವ ವ್ಯವಸ್ಥೆʼಯನ್ನು ಲಂಕೆಗೆ ಭಾರತ ನೀಡಿತು. ಇದು ಡಾಲರ್‌ನ ಎದುರು ಸಂಪೂರ್ಣ ಮಂಡಿಯೂರಿರುವ ಶ್ರೀಲಂಕಾದ ಹಣವನ್ನು ಭಾರತದ ಹಣದೊಂದಿಗೆ ಬದಲಿಸಿಕೊಳ್ಳುವ ವ್ಯವಸ್ಥೆ. ಇದರ ಮೂಲಕ ಲಂಕೆಯ ಸೆಂಟರಲ್‌ ಬ್ಯಾಂಕ್‌ 400 ದಶಲಕ್ಷ ಡಾಲರ್‌ ಮೌಲ್ಯದ ಡಾಲರ್‌, ಯೂರೋ, ಭಾರತೀಯ ರೂಪಾಯಿ ಪಡೆಯಬಹುದು.

ಇದನ್ನೂ ಓದಿ: Lanka on fire: ಸಂಕಷ್ಟದಲ್ಲಿರುವ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್‌ ವಿಕ್ರಮಸಿಂಘೆ ಆಯ್ಕೆ

ಫೆಬ್ರವರಿಯಲ್ಲಿ ಲಂಕೆಗೆ ಭಾರತ ಪೆಟ್ರೋಲ್‌ನ ಸಹಾಯವನ್ನು ಒದಗಿಸಿತು. ಇಂಡಿಯನ್‌ ಆಯಿಲ್‌ ಕಂಪನಿಯ ಮೂಲಕ 500 ದಶಲಕ್ಷ ಡಾಲರ್‌ನ ಪೆಟ್ರೋಲಿಯಂ ಉತ್ಪನ್ನಗಳನ್ನು ಒದಗಿಸುವ ಒಪ್ಪಂದ ಮಾಡಿಕೊಂಡಿತು. ಏಪ್ರಿಲ್‌ನಲ್ಲಿ ಅದನ್ನು ಇನ್ನೂ 200 ದಶಲಕ್ಷ ಡಾಲರ್‌ಗಳಷ್ಟು ಹೆಚ್ಚಿಸಲಾಯಿತು. ಮಾರ್ಚ್‌ ಹಾಗೂ ಜೂನ್‌ ನಡುವೆ ಇಂಡಿಯನ್‌ ಆಯಿಲ್‌ ಲಂಕೆಗೆ 4.5 ಲಕ್ಷ ಟನ್‌ ಪೆಟ್ರೋಲ್‌, ಡೀಸೆಲ್ ಸರಬರಾಜು ಮಾಡಿತು. ಮೇ ತಿಂಗಳಲ್ಲಿ, ಜಾಫ್ನಾ ನಗರದಲ್ಲಿರುವ ಮೀನುಗಾರ ಕುಟುಂಬಗಳಿಗೆ ನೆರವಾಗಲು 15,000 ಲೀಟರ್‌ಗಳಷ್ಟು ಸೀಮೆಎಣ್ಣೆಯನ್ನು ರವಾನಿಸಿತು.

ಭತ್ತ ಬೆಳೆಯಲು ರಸಗೊಬ್ಬರ

ಈ ಬಾರಿ ಸಾವಯವ ಕೃಷಿಯ ಹಿಂದೆ ಬಿದ್ದು, ರಸಗೊಬ್ಬರವನ್ನು ಸಂಪೂರ್ಣ ತ್ಯಜಿಸಿದ್ದ ಶ್ರೀಲಂಕೆ ಎರಡು ಹೊತ್ತಿನ ಊಟಕ್ಕೆ ಅಕ್ಕಿಯಿಲ್ಲದೆ ತತ್ತರಿಸುವಂತಾಗಿತ್ತು. ಈ ಸನ್ನಿವೇಶ ಮರುಕಳಿಸದಂತಿರಲು ಭಾರತ ಈ ತಿಂಗಳಲ್ಲಿ 44,000 ಟನ್‌ಗಳಷ್ಟು ಯೂರಿಯಾ ರಸಗೊಬ್ಬರವನ್ನು ಅಲ್ಲಿಗೆ ಕಳಿಸಿದೆ. ಇದು ಅಲ್ಲಿನ ಯಾಲ ಹಂಗಾಮದ ಭತ್ತ ಕೃಷಿಗೆ ನೆರವಾಗಲಿದೆ. ಭಾರತ ಸರ್ಕಾರ ಹಾಗೂ ಜನತೆ ಅಲ್ಲಿಗೆ 25 ಟನ್‌ನಷ್ಟು ವೈದ್ಯಕೀಯ ಸಾಮಗ್ರಿಗಳನ್ನು ಮಾನವೀಯ ನೆಲೆಯಲ್ಲಿ ದಾನ ನೀಡಿದೆ. ಮೇ ತಿಂಗಳ ಆರಂಭದಲ್ಲಿ ಭಾರತೀಯ ಅಧಿಕಾರಿಗಳು ಅಲ್ಲಿನ ಬಡ ಕುಟುಂಬಗಳಿಗೆ ಈದ್‌ ಹಬ್ಬದ ಅಂಗವಾಗಿ ಒಣ ಆಹಾರದ ಪೊಟ್ಟಣಗಳನ್ನು ವಿತರಿಸಿದರು.

ವಲಸಿಗರಿಗೆ ಆಶ್ರಯ

sri lanka migrants

ನೂರಕ್ಕೂ ಹೆಚ್ಚು ಮಂದಿ ಶ್ರೀಲಂಕಾ ಪ್ರಜೆಗಳು ದ್ವೀಪರಾಷ್ಟ್ರ ತೊರೆದು ಭಾರತಕ್ಕೆ ಓಡಿಬಂದಿದ್ದಾರೆ. ಅವರಿಗೆ ಭಾರತ ಆಶ್ರಯ ಕೊಟ್ಟಿದೆ. ಇವರ ಬಳಿ ವಲಸೆಗೆ ಯಾವುದೇ ದಾಖಲೆಗಳಿಲ್ಲ. ಇಂಥವರನ್ನು ಸಾಮಾನ್ಯವಾಗಿ ವಿಚಾರಣೆಗೆ ಒಳಪಡಿಸಲಾಗುತ್ತದೆ. ಆದರೆ ತಮಿಳುನಾಡು ಸರ್ಕಾರ ಇವರಿಗೆ ರಾಮೇಶ್ವರದ ನಿರಾಶ್ರಿತ ಶಿಬಿರಗಳಲ್ಲಿ ನೆಲೆ ನೀಡಿದೆ. 90ರ ದಶಕದಲ್ಲಿ ಶ್ರೀಲಂಕಾ ಸರ್ಕಾರ ತಮಿಳು ಉಗ್ರರನ್ನೂ ಉಗ್ರವಾಗಿ ದಮನಿಸಿ, ತಮಿಳು ಪ್ರಜೆಗಳ ಮೇಲೆ ದೌರ್ಜನ್ಯ ಎಸಗಿದಾಗ ಅಲ್ಲಿಂದ ಓಡಿಬಂದ ತಮಿಳರು ಕೂಡ ಇಲ್ಲಿಯೇ ಆಶ್ರಯ ಪಡೆದಿದ್ದಾರೆ.

ಭಾರತ ಇನ್ನೂ ಶ್ರೀಲಂಕೆಗೆ ನೆರವಾಗಬಹುದು. ಅದು ಕೇವಲ ಹಣದ ರೂಪದಲ್ಲಲ್ಲ. ಲಂಕೆಯನ್ನು ಈಗಿನ ದುಃಸ್ಥಿತಿಯಿಂದ ಮೇಲೆತ್ತಲು ಇನ್ನಷ್ಟು ಹಣಕಾಸು ಬೇಕು, ಅದೆಲ್ಲವನ್ನೂ ಒದಗಿಸಲು ಭಾರತದಿಂದಷ್ಟೇ ಸಾಧ್ಯವಾಗದು. ಆದರೆ ಭಾರತ ಮುಂದಾಳುತ್ವ ವಹಿಸಿ ಇತರ ದೇಶಗಳನ್ನೂ ಈ ನೆಲೆಯಲ್ಲಿ ತೊಡಗಿಸಿಕೊಂಡರೆ ಇದು ಸಾಧ್ಯವಾಗಲಿದೆ. ಇದರಿಂದ ಏಷ್ಯಾದಲ್ಲಿ ಭಾರತದ ಸ್ಥಾನಮಾನವೂ ಹೆಚ್ಚಲಿದೆ. “ನೇಬರ್‌ಹುಡ್‌ ಫಸ್ಟ್‌ʼ ಎಂಬ ಭಾರತದ ವಿದೇಶಾಂಗ ಪಾಲಿಸಿಗೆ ಇನ್ನಷ್ಟು ಬಲ ಬರಲಿದೆ.

ಇದನ್ನೂ ಓದಿ: ವಿಸ್ತಾರ Explainer | ಶ್ರೀಲಂಕಾ ಮಾತ್ರವಲ್ಲ, ದಿವಾಳಿಯಂಚಿಗೆ ಡಜನ್‌ಗಟ್ಟಲೆ ರಾಷ್ಟ್ರಗಳ ಪತನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading

ದೇಶ

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

ವಿಶಾಖಪಟ್ಟಣದ ಋಷಿಕೊಂಡ ಬೆಟ್ಟದ ಬಳಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 500 ಕೋಟಿ ರೂ. ವೆಚ್ಚದಲ್ಲಿ ಅರಮನೆಯನ್ನು (Rushikonda Palace Issue) ನಿರ್ಮಿಸಿರುವುದು ಭಾರೀ ಟೀಕೆಗೆ ಗುರಿಯಾಗಿದೆ. ವೈಎಸ್‌ಆರ್‌ಸಿ ಆಡಳಿತದಲ್ಲಿ ನಿರ್ಮಿಸಿರುವ ಈ ಯೋಜನೆಯ ಬಗ್ಗೆ ತನಿಖೆ ನಡೆಸುವುದಾಗಿ ಈಗಿನ ಸರ್ಕಾರ ಹೇಳಿದೆ. ಏನಿದು ವಿವಾದ? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

By

Rushikonda Palace Issue
Koo

ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದ ಬಳಿ (andrapradesh) ಈ ಹಿಂದೆ ಮುಖ್ಯಮಂತ್ರಿಯಾಗಿದ್ದ (former CM) ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) 500 ಕೋಟಿ ರೂ. ವೆಚ್ಚದಲ್ಲಿ ʼರಾಜಾ ಮಹಲ್‌ʼ ಹೆಸರಿನಲ್ಲಿ ಅರಮನೆಯನ್ನು (Rushikonda Palace) ನಿರ್ಮಿಸಿದ್ದರು. ಈಗ ಜಗನ್‌ ಸರ್ಕಾರ ಅಧಿಕಾರ ಕಳೆದುಕೊಂಡು ಟಿಡಿಪಿಯ ಎನ್‌ ಚಂದ್ರಬಾಬು ನಾಯ್ಡು ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೀಗ ಈ ಅರಮನೆ ಭಾರೀ ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿದೆ.

ಭಾರಿ ಭ್ರಷ್ಟಾಚಾರದ ಮೂಲಕ ರಾಜ್ಯ ಸರ್ಕಾರದ ಹಣವನ್ನು ಈ ಹಿಂದಿನ ಮುಖ್ಯಮಂತ್ರಿ ಜಗನ್‌ ರೆಡ್ಡಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ತೆಲುಗು ದೇಶಂ ಪಕ್ಷ (TDP), ವಿಶಾಖಪಟ್ಟಣಂನ (Vishakhapatnam) ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳ ಡ್ರೋನ್ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ಮೂಲಕ ಇದನ್ನು ಸಾರ್ವಜನಿಕರ ಗಮನಕ್ಕೆ ತಂದಿದೆ.

ಹಿಂದಿನ ವೈಎಸ್‌ಆರ್‌ಸಿ ಆಡಳಿತದಲ್ಲಿ ಋಷಿಕೊಂಡ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಭೇಟಿ ನೀಡಿದಾಗ ಋಷಿಕೊಂಡ ಅರಮನೆ ವಿವಾದ ಭುಗಿಲೆದ್ದಿತು. ಟಿಡಿಪಿ ನಾಯಕರು ಈ ಯೋಜನೆಯ ಸ್ವರೂಪ ಮತ್ತು ಪ್ರಕೃತಿಯ ಮೇಲೆ ಇದರ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಟಿಡಿಪಿ ನಾಯಕರು, ‘ಋಷಿಕೊಂಡ ಅರಮನೆ’ ಎಂದು ಕರೆಯಲ್ಪಡುವ ಈ ಅರಮನೆಯನ್ನು ಅಕ್ರಮವಾಗಿ ಮತ್ತು ರಹಸ್ಯವಾಗಿ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಅವರು ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿ) ಆಡಳಿತದಿಂದ ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೇಟಿ ನೀಡಿದ ಈ ವಿಷಯ ಹೆಚ್ಚು ಚರ್ಚೆಗೆ ಕಾರಣವಾಯಿತು. ಈ ಕಟ್ಟಡಗಳನ್ನು ‘ರಾಜ ಮಹಲ್’ ಎಂದು ಬಣ್ಣಿಸಿರುವ ಟಿಡಿಪಿ ನಾಯಕ ನಾರಾ ಲೋಕೇಶ್, ಸಾರ್ವಜನಿಕ ನಿಧಿಯ ದುರುಪಯೋಗದ ಬಗ್ಗೆ ದನಿ ಎತ್ತಿದ್ದಾರೆ.

ಋಷಿಕೊಂಡ ನಿರ್ಮಾಣ

ಸಚಿವ ನಾರಾ ಲೋಕೇಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ತಮ್ಮ ಕಳವಳವನ್ನು ವ್ಯಕ್ತಪಡಿಸಿ, “ಬಡವರು ತಮ್ಮ ಮಕ್ಕಳ ತಲೆಯ ಮೇಲೆ ಸೂರು ನಿರ್ಮಿಸಲು ಹೆಣಗಾಡುತ್ತಿದ್ದರೆ, ಅವರ ಹಣದಲ್ಲಿ ಜಗನ್‌ ಅರಮನೆಯನ್ನು ನಿರ್ಮಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡಲಾಗುವುದುʼʼ ಎಂದಿದ್ದಾರೆ. 9.88 ಎಕರೆ ಜಮೀನಿನಲ್ಲಿ ಕಟ್ಟಡವು 5 ಎಕರೆಯಲ್ಲಿ ಇರಬೇಕು, ಉಳಿದ ಪ್ರದೇಶವು ಭೂದೃಶ್ಯ ಮತ್ತು ಪಾರ್ಕಿಂಗ್ ಪ್ರದೇಶವಾಗಿರಬೇಕು ಎಂದು ಹೇಳಲಾಗಿತ್ತು. ಆದರೆ ಬೆಟ್ಟವನ್ನು 15 ಎಕರೆ ಹೆಚ್ಚುವರಿಯಾಗಿ ಅಗೆದಿರುವುದು ದೊಡ್ಡ ಉಲ್ಲಂಘನೆಯಾಗಿದೆ ಎಂದವರು ತಿಳಿಸಿದ್ದಾರೆ.


ಇದನ್ನೂ ಓದಿ: UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

ಜಗನ್‌ ಪಕ್ಷದ ಪ್ರತಿಪಾದನೆ ಏನು?

ವಿಶಾಖಪಟ್ಟಣಂನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶವನ್ನು ಈ ಪುನರಾಭಿವೃದ್ಧಿ ಯೋಜನೆ ಹೊಂದಿದೆ ಎಂದು ಜಗನ್ ನೇತೃತ್ವದ ಪಕ್ಷವು ಪ್ರತಿಪಾದಿಸಿದೆ. ಈ ಆಸ್ತಿ ಸರ್ಕಾರಿ ಸ್ವಾಮ್ಯದಲ್ಲಿದೆ, ಖಾಸಗಿಯಲ್ಲ ಎಂದು ಹೇಳಿರುವ ಪಕ್ಷದ ಪ್ರಮುಖರು, ರಾಷ್ಟ್ರಪತಿ ಅಥವಾ ಪ್ರಧಾನಮಂತ್ರಿ ವಿಶಾಖಪಟ್ಟಣಕ್ಕೆ ಭೇಟಿ ನೀಡಿದಾಗ ಇದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ನಡುವೆಯೇ ಯೋಜನೆಯು ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದ ಪರಿಸರವಾದಿಗಳಿಂದಲೂ ವ್ಯಾಪಕ ವಿರೋಧವನ್ನು ಎದುರಿಸುತ್ತಿದೆ.

ಹೇಗಿದೆ ಈ ಅರಮನೆ?

9.88 ಎಕರೆ ಸಮುದ್ರಾಭಿಮುಖ ಸೈಟ್‌ನಲ್ಲಿ ಹರಡಿರುವ ಋಷಿಕೊಂಡ ಅರಮನೆಯು ಒಟ್ಟು 1,41,433 ಚದರ ಮೀಟರ್‌ಗಳ ನಿರ್ಮಾಣ ಪ್ರದೇಶದೊಂದಿಗೆ 12 ಬೆಡ್‌ ರೂಮ್‌ಗಳನ್ನು ಹೊಂದಿದೆ. ಮೂರು ಮಹಲುಗಳನ್ನು ರಚಿಸಲು ರಮಣೀಯವಾದ ಋಶಿಕೊಂಡ ಬೆಟ್ಟಗಳನ್ನು ಧ್ವಂಸಪಡಿಸಲಾಗಿದೆ. ಕೆಲವು ವಾಶ್‌ರೂಮ್‌ಗಳಂತೂ 480 ಚದರ ಅಡಿ ದೊಡ್ಡದಾಗಿದೆ. ಮೀಟಿಂಗ್ ಹಾಲ್‌ಗಳು 7,266 ಚದರ ಮೀಟರ್‌ ವ್ಯಾಪಿಸಿದೆ!

ಆಮದು ಮಾಡಿದ ದುಬಾರಿ ಮಾರ್ಬಲ್‌ಗಳನ್ನು ಬಳಸಿದ್ದು, ವಿಶಾಲವಾದ ಕಾರಿಡಾರ್‌ಗಳನ್ನು ಒಳಗೊಂಡಿದೆ. ವಾಲ್-ಟು-ವಾಲ್ ಸ್ಕ್ರೀನ್ ಹೊಂದಿರುವ ಹೋಮ್ ಥಿಯೇಟರ್ ಬ್ಲಾಕ್‌ ಇದರ ಮತ್ತೊಂದು ಪ್ರಮುಖ ಅಂಶವಾಗಿದೆ. ಸರ್ಕಾರವು ಲ್ಯಾಂಡ್‌ಸ್ಕೇಪಿಂಗ್‌ನಲ್ಲಿ 50 ಕೋಟಿ ರೂ. ಮತ್ತು ಒಳಾಂಗಣ ಅಲಂಕಾರಕ್ಕಾಗಿ 33 ಕೋಟಿ ರೂ. ವೆಚ್ಚ ಮಾಡಿದೆ ಎನ್ನಲಾಗಿದೆ. ರೆಸ್ಟ್ ರೂಮ್ಗ‌ಳನ್ನು ಒಳಗೊಂಡಂತೆ ಸಂಪೂರ್ಣ ಸಂಕೀರ್ಣದ ಉದ್ದಕ್ಕೂ ಸೆಂಟ್ರಲ್‌ ಹವಾನಿಯಂತ್ರಣವಿದೆ. ಸಮುದ್ರದ ನೋಟವನ್ನು ಹೊಂದಿರುವ ಡೈನಿಂಗ್ ಹಾಲ್, ಪ್ರತಿ ಮಲಗುವ ಕೋಣೆಯಲ್ಲಿ 12 ಹಾಸಿಗೆಗಳಿವೆ. ಸ್ಪಾ ಸೇವೆಗಳೊಂದಿಗೆ ಸ್ನಾನಗೃಹಗಳು ವಿಶೇಷ ವೈಶಿಷ್ಟ್ಯಗಳಿಂದ ಕೂಡಿದೆ.

Continue Reading

ದೇಶ

New Criminal Laws: ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ? Complete Details!

New criminal laws: ಕಳೆದ ಡಿಸೆಂಬರ್‌ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟು ರಾಷ್ಟ್ರಪತಿಗಳಿಂದ ಒಪ್ಪಿಗೆಯನ್ನು ಪಡೆದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ ಒಂದರಿಂದ ಜಾರಿಗೆ ಬರಲಿವೆ. ಅವುಗಳ ಅನುಷ್ಠಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳು ನಡೆಯುತ್ತಿದೆ. ಮೂರು ಹೊಸ ಕಾನೂನುಗಳ ರೂಪುರೇಷೆಗಳೇನು? ಬದಲಾವಣೆಗಳು ಏನೇನು? ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

New criminal laws
Koo

ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು (New criminal laws) ಜುಲೈ 1ರಿಂದ ಜಾರಿಗೆ ಬರಲಿವೆ. ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ (Union law and justice ministe) ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಈ ಬಗ್ಗೆ ವಿವರ ನೀಡಿದ್ದಾರೆ.

ಕೋಲ್ಕತ್ತಾದಲ್ಲಿ (Kolkata) “ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ” ಎಂಬ ಸಮ್ಮೇಳನದಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆಯ (UCC) ರಾಷ್ಟ್ರವ್ಯಾಪಿ ಅನುಷ್ಠಾನದ ಬಗ್ಗೆಯೂ ಭರವಸೆ ವ್ಯಕ್ತಪಡಿಸಿದ್ದಾರೆ.

ಜುಲೈ 1ರಿಂದ ಎಲ್ಲಾ ಮೂರು ಕಾನೂನುಗಳು – ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಗಳು ಈ ಹಿಂದಿನ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸುತ್ತವೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತನ ಉದ್ದೇಶಗಳಿವೆ.

ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು. ಆದರೆ, ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿಪಿಆರ್‌ಡಿ) ಈ ಹೊಸ ಕಾನೂನುಗಳಿಗೆ ತರಬೇತಿಯನ್ನು ನೀಡುತ್ತಿದೆ. ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯಗಳು ಸಹ ತರಬೇತಿಯನ್ನು ನೀಡುತ್ತಿವೆ. ನ್ಯಾಯಾಧೀಶರಿಗೂ ನ್ಯಾಯಾಂಗ ಇಲಾಖೆಯಿಂದ ತರಬೇತಿ ನೀಡಲಾಗುತ್ತಿದೆ.

ಇದನ್ನೂ ಓದಿ: Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

ಹೊಸ ಕ್ರಿಮಿನಲ್ ಕಾನೂನುಗಳು ಯಾವವು?

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ.


ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ. ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.

ದೇಶದ್ರೋಹ ಎಂಬುದು ರದ್ದು

ಭಾರತೀಯ ದಂಡ ಸಂಹಿತೆ1860ರ ದೇಶದ್ರೋಹದ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ಕ್ಕೆ ಬದಲಾಯಿಸಲಾಗಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾರ್ಯಗಳ ಮೇಲೆ ಕೇಂದ್ರೀಕರಿಸುವ ವಿಭಾಗಗಳನ್ನು ಪರಿಚಯಿಸಲಾಗಿದೆ.

ಅತ್ಯಾಚಾರ ಮಾಡಿದರೆ ಮರಣ ದಂಡನೆ

ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಿದೆ.

ಅಪ್ರಾಪ್ತ ವಯಸ್ಸಿನ ಮಹಿಳೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 18 ವರ್ಷದೊಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಗೆ ಅವಕಾಶ ಕಲ್ಪಿಸಲಾಗಿದೆ.

ಅತ್ಯಾಚಾರ ಎಸಗುವವರಿಗೆ ಕಾನೂನಿನ ಪ್ರಕಾರ 10 ವರ್ಷಗಳಿಗಿಂತ ಕಡಿಮೆಯಿಲ್ಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದು ಜೀವಾವಧಿಯವರೆಗೆ ಜೈಲು ಶಿಕ್ಷೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಬೇಕಾಗುತ್ತದೆ.

ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಮೊದಲ ಬಾರಿಗೆ ಸಂಘಟಿತ ಅಪರಾಧದ ವ್ಯಾಖ್ಯಾನ

ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ 111 (1) ಅಡಿಯಲ್ಲಿ ಪದವನ್ನು ಮೊದಲ ಬಾರಿಗೆ ವ್ಯಾಖ್ಯಾನಿಸಲಾಗಿದೆ. ಈ ವ್ಯಾಖ್ಯಾನವು ಸಶಸ್ತ್ರ ದಂಗೆ, ವಿಧ್ವಂಸಕ ಕಾರ್ಯಾಚರಣೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಒಳಗೊಂಡಿದೆ. ಶಿಕ್ಷೆಯು ವಿವಿಧ ಅಪರಾಧಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ, ದಂಡ ಅಥವಾ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಒಳಗೊಂಡಿರುತ್ತದೆ.

ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ

ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯಿದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆಯನ್ನು ನೀಡಲು ಬಯಸುತ್ತದೆ.

ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ

“ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ” ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ.

ಯಾರಾದರೂ ಉದ್ದೇಶಪೂರ್ವಕವಾಗಿ ಪದಗಳಲ್ಲಿ ಮಾತನಾಡುವ ಅಥವಾ ಬರೆಯುವ ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದ ಮೂಲಕ ಅಥವಾ ಹಣಕಾಸಿನ ಅರ್ಥದ ಬಳಕೆಯಿಂದ ಅಥವಾ ಬೇರೆ ಬೇರೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕವನ್ನು ಪ್ರಚೋದಿಸಲು ಪ್ರಯತ್ನಿಸಿದರೆ ಕಠಿಣ ಶಿಕ್ಷೆ ಕಾದಿದೆ. ಅಕ್ರಮ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಗುರಿಯಾಗಬಹುದು.

ತ್ವರಿತ ವಿಚಾರಣೆ ಮತ್ತು ನ್ಯಾಯ

ಹೊಸ ಕಾನೂನುಗಳ ಪ್ರಕಾರ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗುತ್ತದೆ ಮತ್ತು ಪರಿಸ್ಥಿತಿಯನ್ನು ನೋಡಿ ನ್ಯಾಯಾಲಯವು ಇನ್ನೂ 90 ದಿನಗಳವರೆಗೆ ಅನುಮತಿ ನೀಡಬಹುದು. ತನಿಖೆಯನ್ನು 180 ದಿನಗಳಲ್ಲಿ ಮುಗಿಸಿ ವಿಚಾರಣೆಗೆ ಕಳುಹಿಸಬೇಕು.

ಇದಲ್ಲದೆ, ಪೊಲೀಸರು 90 ದಿನಗಳಲ್ಲಿ ಪ್ರಕರಣದ ಸ್ಥಿತಿಯನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ವಿಚಾರಣೆಯ ಅನಂತರ 30 ದಿನಗಳಲ್ಲಿ ತೀರ್ಪು ನೀಡಬೇಕಾಗುತ್ತದೆ. ಒಂದು ವಾರದೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.
ಮೂರು ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದು.

ಸಂತ್ರಸ್ತರ ಮಾಹಿತಿ ಹಕ್ಕನ್ನು ಬಲಪಡಿಸಲಾಗಿದೆ. ಎಫ್‌ಐಆರ್‌ನ ಉಚಿತ ಪ್ರತಿಯನ್ನು ಪಡೆಯುವ ಹಕ್ಕು ಬಲಿಪಶುವಿಗೆ ಇದೆ. 90 ದಿನಗಳಲ್ಲಿ ತನಿಖೆಯ ಸ್ಥಿತಿಯನ್ನು ಸಂತ್ರಸ್ತರಿಗೆ ತಿಳಿಸಲು ಅವಕಾಶವಿದೆ. ಹೊಸ ಸಂಹಿತೆಯು ಕ್ರಿಮಿನಲ್ ಪ್ರಕರಣಗಳಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುತ್ತದೆ.

ಇತರ ನಿಬಂಧನೆಗಳು

ಹೊಸ ಕಾನೂನಿನ ಪ್ರಕಾರ ‘ಆರ್ಥಿಕ ಅಪರಾಧಗಳನ್ನು’ ಹೊರತುಪಡಿಸಿ ಘೋರ ಅಪರಾಧಿಗಳಿಗೆ ಮಾತ್ರ ಕೈಕೋಳವನ್ನು ಬಳಸಲಾಗುವುದು. ಅಂಗವೈಕಲ್ಯ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಅಪರಾಧ ಕಾರ್ಯಗಳಿಗೆ ಕಠಿಣ ದಂಡವನ್ನು ಪರಿಚಯಿಸಲಾಗಿದೆ.

ಶಿಕ್ಷೆ ಮನ್ನಾಗೊಳಿಸಲು ಕಾನೂನುಗಳಲ್ಲಿ ಹೊಸ ನಿಬಂಧನೆಯನ್ನು ಮಾಡಲಾಗಿದೆ. ಮರಣದಂಡನೆಗಳನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬಹುದು. ಏಳು ವರ್ಷಗಳ ಒಳಗಿನ ಸೆರೆವಾಸ ಮತ್ತು ಜೀವಾವಧಿ ಶಿಕ್ಷೆಯನ್ನು ಮಾತ್ರ ಕ್ಷಮಿಸಬಹುದು.

Continue Reading

EXPLAINER

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಮಾರ್ಗದಲ್ಲಿ ಕವಚ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕೊತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) 15 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದರಲ್ಲೂ, ಈ ಮಾರ್ಗದಲ್ಲಿ ರೈಲುಗಳ ಸುರಕ್ಷತೆಗಾಗಿ ಅಳವಡಿಸಿಕೊಳ್ಳಲಾಗಿರುವ ಕವಚ (Kavach) ಸುರಕ್ಷಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಹಾಗಾದರೆ, ಏನಿದು ಕವಚ ಸುರಕ್ಷಾ ವ್ಯವಸ್ಥೆ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಏನಿದು ಕವಚ?

ಆತ್ಮನಿರ್ಭರ ಭಾರತದ ಭಾಗವಾಗಿ 2022-23ರಲ್ಲಿ ರೈಲುಗಳ ಸುರಕ್ಷತೆ ಮತ್ತು ಸಾಮರ್ಥ್ಯ ಹೆಚ್ಚಳಕ್ಕಾಗಿ ಸುಮಾರು 2,000 ಕಿ.ಮೀ. ಮಾರ್ಗವನ್ನು ಕವಚ ಸುರಕ್ಷತಾ ವಿಧಾನದ ಅಡಿಯಲ್ಲಿ ತರಲಾಗುವುದು ಎಂದು ಸಚಿವಾಲಯ ಹೇಳಿತ್ತು. ಕವಚ ಎಂಬುದು ಸೇಫ್ಟಿ ಇಂಟೆಗ್ರಿಟಿ ಲೆವೆಲ್ 4 ಮಾನದಂಡಗಳಾಗಿವೆ. ಇದನ್ನು ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್​​ಡಿಎಸ್​​ಒ) ಅಭಿವೃದ್ಧಿಪಡಿಸಿದೆ. ಕವಚ​ ವ್ಯವಸ್ಥೆಯು ರೈಲುಗಳು ಕೆಂಪು ಸಿಗ್ನಲ್​ ದಾಟಿ ಮುಂದಕ್ಕೆ ಹೋಗುವುದನ್ನು ತಡೆಯುತ್ತದೆ. ಒಂದು ವೇಳೆ ದಾಟಿದರೆ ಸ್ವಯಂಚಾಲಿತ ಬ್ರೇಕಿಂಗ್ ವ್ಯವಸ್ಥೆ ಆ್ಯಕ್ವಿವೇಟ್​ ಆಗುತ್ತದೆ. ಹೀಗಾಗಿ ಎರಡು ರೈಲುಗಳ ನಡುವಿನ ಮುಖಾಮುಖಿ ಡಿಕ್ಕಿಯ ಸಂಭವ ಕಡಿಮೆ.

ಕವಚ ಕಾರ್ಯನಿರ್ವಹಿಸುವುದು ಹೇಗೆ?

ಯಾವುದೇ ತುರ್ತು ಸಂದರ್ಭದಲ್ಲಿ ರೈಲು ಅಪಘಾತ ತಡೆಯುವುದೇ ಕವಚದ ಉದ್ದೇಶವಾಗಿದೆ. ರೈಲು ಹಳಿಗಳು, ಸ್ಟೇಷನ್‌ ಯಾರ್ಡ್‌ ಹಾಗೂ ಸಿಗ್ನಲ್‌ಗಳಿಗೆ ಆರ್‌ಎಫ್‌ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್)‌ ಟ್ಯಾಗ್‌ಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ರೈಲುಗಳು ಎದುರು ಬದಿರಾಗಿ ಒಂದೇ ಹಳಿಯ ಮೇಲೆ ಚಲಿಸಿದರೂ ಎರಡೂ ಡಿಕ್ಕಿಯಾಗುವ ಮುನ್ನ ಸ್ವಯಂಚಾಲಿತವಾಗಿಯೇ ರೈಲುಗಳು ಬ್ರೇಕ್‌ ಹಾಕಿಕೊಳ್ಳುತ್ತವೆ. ಲೋಕೊ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸಿಗ್ನಲ್‌ನಿಂದಾಗಿಯೇ ಸ್ವಯಂಚಾಲಿತವಾಗಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ಅಷ್ಟೇ ಅಲ್ಲ, ಒಂದು ರೈಲಿನ ಹಿಂದೆ ಮತ್ತೊಂದು ರೈಲು ಚಲಿಸುವಾಗ ಹಿಂದಿನ ರೈಲು ನಿಧಾನಗತಿಯಲ್ಲಿ ಸಾಗುವುದು, ರೈಲಿನ ಸಮೀಪ ಹೋದಾಗ ಬ್ರೇಕ್‌ ಹಾಕುವುದು, ಹವಾಮಾನ ವೈಪರೀತ್ಯದಿಂದ ಮಂದ ಬೆಳಕು ಇದ್ದಾಗ ಬ್ರೇಕ್‌ ಹಾಕುವುದು, ಗೇಟ್‌ಗಳು ಅಡ್ಡ ಬಂದಾಗ ಬ್ರೇಕ್‌ ಹಾಕುವುದು ಸೇರಿ ಯಾವುದೇ ತುರ್ತು ಸಂದರ್ಭದಲ್ಲಿ ಲೋಕೊಮೋಟಿವ್‌ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸ್ವಯಂಚಾಲಿತವಾಗಿ ಕವಚ ವ್ಯವಸ್ಥೆಯ ಅಡಿಯಲ್ಲಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ದೇಶಾದ್ಯಂತ ವಿಸ್ತರಣೆ ಯಾವಾಗ?

ಕವಚ ಸುರಕ್ಷಾ ವಿಧಾನದ ಅಳವಡಿಕೆಯಿಂದ ರೈಲುಗಳ ಅಪಘಾತವು ಗಣನೀಯವಾಗಿ ಕುಸಿದಿದೆ. ಆದರೆ, ಇದುವರೆಗೆ 1,500 ಕಿಲೋಮೀಟರ್‌ ರೈಲು ಮಾರ್ಗಕ್ಕೆ ಮಾತ್ರ ಕವಚ ಅಳವಡಿಸಲಾಗಿದೆ. ಆರಂಭಿಕ ಹಂತದಲ್ಲಿ 2 ಸಾವಿರ ಕಿಲೋಮೀಟರ್‌ ಹಾಗೂ ಹಂತ ಹಂತವಾಗಿ 34 ಸಾವಿರ ಕಿಲೋಮೀಟರ್‌ ಉದ್ದದ ರೈಲು ಮಾರ್ಗಕ್ಕೆ ಕವಚ ಅಳವಡಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಭಾರತೀಯ ರೈಲ್ವೆಯು ಸುಮಾರು 1 ಲಕ್ಷ ಕಿಲೋಮೀಟರ್‌ ಮಾರ್ಗವನ್ನು ಹೊಂದಿರುವ ಕಾರಣ ಎಲ್ಲ ಮಾರ್ಗಗಳಲ್ಲೂ ಕವಚ ಅಳವಡಿಸಲು ಸಮಯ ಬೇಕಾಗುತ್ತದೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Continue Reading
Advertisement
ECE V/S CSE
ಶಿಕ್ಷಣ3 mins ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ28 mins ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Monsoon Rain Boots Fashion
ಫ್ಯಾಷನ್49 mins ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ1 hour ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ1 hour ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು1 hour ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ2 hours ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್2 hours ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ2 hours ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest3 hours ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌