Liz Truss | ಬ್ರಿಟನ್‌ ಪ್ರಧಾನಿ ಲಿಜ್‌ ಟ್ರಸ್‌ ಹಿನ್ನೆಲೆ ಏನು? ಇವರ ಎದುರಿರುವ ಸವಾಲುಗಳು ಯಾವವು? - Vistara News

ಪ್ರಮುಖ ಸುದ್ದಿ

Liz Truss | ಬ್ರಿಟನ್‌ ಪ್ರಧಾನಿ ಲಿಜ್‌ ಟ್ರಸ್‌ ಹಿನ್ನೆಲೆ ಏನು? ಇವರ ಎದುರಿರುವ ಸವಾಲುಗಳು ಯಾವವು?

ಬ್ರಿಟನ್‌ ನೂತನ ಪ್ರಧಾನಿ ಲಿಜ್ ಟ್ರಸ್ (Liz Truss) ಅವರ ಹಿನ್ನೆಲೆ, ರಾಜಕೀಯ ಅನುಭವ, ಆಡಳಿತಾತ್ಮಕ ಚಾಣಾಕ್ಷತನ ಹೇಗಿದೆ? ಅವರ ಮುಂದಿರುವ ಪ್ರಮುಖ ಸವಾಲುಗಳು ಯಾವವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

Liz Truss
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಸುದೀರ್ಘ ಪ್ರಕ್ರಿಯೆಯ ಬಳಿಕ ಬ್ರಿಟನ್‌ ನೂತನ ಪ್ರಧಾನಿಯಾಗಿ ಲಿಜ್‌ ಟ್ರಸ್‌‌ (Liz Truss) ಅವರು ಆಯ್ಕೆಯಾಗಿದ್ದಾರೆ. ರಾಜಕೀಯ ಬಿಕ್ಕಟ್ಟು, ಆರ್ಥಿಕ ಹಿಂಜರಿತ, ಜನರ ಆಕ್ರೋಶದ ಮಧ್ಯೆಯೇ ಟ್ರಸ್ ಪ್ರಧಾನಿ ಹುದ್ದೆಗೇರಿದ್ದಾರೆ. ಹಾಗಾಗಿ, ಟ್ರಸ್‌ ಅವರ ಮೇಲೆ ಬ್ರಿಟನ್‌ ನಾಗರಿಕರ ನಿರೀಕ್ಷೆ ಹೆಚ್ಚಿದೆ. ಹಾಗಾದರೆ ಟ್ರಸ್ ಅವರ ಹಿನ್ನೆಲೆ, ರಾಜಕೀಯ ಅನುಭವ, ಆಡಳಿತಾತ್ಮಕ ಚಾಣಾಕ್ಷತನ ಹೇಗಿದೆ? ಅವರ ಮುಂದಿರುವ ಪ್ರಮುಖ ಸವಾಲುಗಳು ಯಾವವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಲಿಜ್‌ ಟ್ರಸ್‌ ಹಿನ್ನೆಲೆ

ಲಿಜ್‌ ಟ್ರಸ್‌ ಅವರಿಗೆ ಬಾಲ್ಯದಿಂದಲೂ ರಾಜಕೀಯದಲ್ಲಿ ಅತೀವ ಆಸಕ್ತಿ ಇತ್ತು. ಹಾಗಾಗಿಯೇ ಅವರು ಪ್ರಾಥಮಿಕ ಶಾಲೆ ಹಂತದಲ್ಲಿಯೇ ಲಿಬರಲ್‌ ಡೆಮಾಕ್ರಟ್ಸ್‌ ಪಕ್ಷದ ಸದಸ್ಯೆಯಾಗಿದ್ದರು. ಇದಾದ ಬಳಿಕ ಬಲಬಂಥೀಯ ನಿಲುವುಳ್ಳ ಕನ್ಸರ್ವೇಟಿವ್‌ ಪಕ್ಷ ಸೇರಿದ ಅವರು ರಾಜಕೀಯ ದೃಷ್ಟಿಕೋನ, ಚಾಣಾಕ್ಷತನದಿಂದ ಹಲವು ಹುದ್ದೆಗಳನ್ನು ಪಡೆದರು.

2010ರಲ್ಲಿ ಸಂಸತ್‌ ಪ್ರವೇಶಿಸಿದ ಟ್ರಸ್‌ ಹಲವು ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಡೇವಿಡ್‌ ಕ್ಯಾಮರೂನ್‌, ಥೆರೆಸಾ ಮೇ ಹಾಗೂ ಬೋರಿಸ್‌ ಜಾನ್ಸನ್‌ ಸಂಪುಟದಲ್ಲಿ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಅಂತಾರಾಷ್ಟ್ರೀಯ ವ್ಯಾಪಾರ, ವಿದೇಶಾಂಗ ವ್ಯವಹಾರಗಳ ಮೇಲೆ ಹೆಚ್ಚಿನ ಹಿಡಿತ ಇರುವುದರಿಂದ ಇವರು ಸಮರ್ಥವಾಗಿ ದೇಶ ಮುನ್ನಡೆಸಲಿದ್ದಾರೆ ಎಂಬ ನಿರೀಕ್ಷೆ ಇದೆ. ‌ಬೋರಿಸ್‌ ಜಾನ್ಸನ್‌ ಸಂಪುಟದಲ್ಲಿ ಇವರು ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿದ್ದರು.

ನೂತನ ಪ್ರಧಾನಿ ಎದುರಿರುವ ಸವಾಲುಗಳೇನು?

  1. ನಾಗರಿಕರ ಜೀವನ ವೆಚ್ಚವು ಗರಿಷ್ಠವಾಗಿದ್ದು, ಇದು ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುವಂತಾಗಿದೆ. ಕಳೆದ ವರ್ಷ ಮನೆಯೊಂದರ ಸರಾಸರಿ ವಿದ್ಯುತ್‌ ಬಿಲ್‌ 1,200 ಪೌಂಡ್‌ ಇದ್ದರೆ, ಈಗ ಅದು 3 ಸಾವಿರ ಪೌಂಡ್‌ ದಾಟಿದೆ. ಇಂತಹ ಹಲವು ರೀತಿಯ ಬಿಲ್‌ಗಳು ಜನರನ್ನು ಬಾಧಿಸುತ್ತಿವೆ. ಇದನ್ನು ಟ್ರಸ್‌ ಹೇಗೆ ನಿರ್ವಹಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
  2. ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಜನ ಎರಡು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಪ್ರಧಾನಿ ಆಯ್ಕೆಯಾದರೂ ನಮ್ಮ ಜೀವನಮಟ್ಟ ಸುಧಾರಿಸುವುದಿಲ್ಲ ಎಂದು ಈಗಾಗಲೇ ನಾಗರಿಕರು ಹೇಳುತ್ತಿದ್ದಾರೆ. ಹಾಗಾಗಿ, ಟ್ರಸ್‌ ಅವರು ಪ್ರತಿಭಟನೆ, ಜನರ ಆಕ್ರೋಶವನ್ನು ಶಮನ ಮಾಡುವುದು ಸವಾಲಾಗಿದೆ.
  3. ಸಂಸದರೊಬ್ಬರ ಹಗರಣ, ಆ ಸಂಸದರನ್ನು ರಕ್ಷಿಸಿದ ಆರೋಪದಿಂದಲೇ ಬೋರಿಸ್‌ ಜಾನ್ಸನ್‌ ಅಧಿಕಾರ ಕಳೆದುಕೊಳ್ಳುವಂತಾಯಿತು. ಹೀಗೆ, ಹಗರಣಗಳನ್ನು ಮೆಟ್ಟಿ, ಪಾರದರ್ಶಕ ಆಡಳಿತ ನೀಡುವುದು ಲಿಜ್‌ ಟ್ರಸ್‌ ಅವರಿಗೆ ನಿಜವಾಗಿಯೂ ಸವಾಲೆನಿಸಿದೆ. ಸಂಸದರ ವಿಶ್ವಾಸ ಗಳಿಸಿ, ಸಣ್ಣಪುಟ್ಟ ಭಿನ್ನಾಭಿಪ್ರಾಯವನ್ನು ಮೆಟ್ಟಿ, ಉತ್ತಮ ಆಡಳಿತ ನೀಡುವ ಸವಾಲು ಟ್ರಸ್‌ ಎದುರಿಗಿದೆ.
  4. ಬ್ರೆಕ್ಸಿಟ್‌ ವಿಚಾರದಲ್ಲಿ ಈಗಾಗಲೇ ಲಿಜ್‌ ಟ್ರಸ್‌ ಅವರು ಯುಟರ್ನ್‌ ತೆಗೆದುಕೊಂಡಿರುವುದು ಟೀಕೆಗೆ ಕಾರಣವಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಬ್ರೆಕ್ಸಿಟ್‌ ವಿಚಾರದಲ್ಲಿ ಸ್ಪಷ್ಟ ನಿಲುವು, ಉಕ್ರೇನ್‌ ಬಿಕ್ಕಟ್ಟು, ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ ವಿಚಾರದಲ್ಲಿ ಜಾಗತಿಕವಾಗಿ ಸಮನ್ವಯ ಸಾಧಿಸುವುದು ನೂತನ ಪ್ರಧಾನಿ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಇದನ್ನೂ ಓದಿ | Liz Truss | ಇನ್ಫಿ ಮೂರ್ತಿ ಅಳಿಯ ಸುನಕ್‌ಗೆ ಕೈತಪ್ಪಿದ ಬ್ರಿಟನ್‌ ಪ್ರಧಾನಿ ಹುದ್ದೆ, ಲಿಜ್‌ ಟ್ರಸ್‌ಗೆ ಗೆಲುವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Valmiki Corporation Scam: “ಈ ಹಣ ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿದೆ. ಇದನ್ನು ಸಿಬಿಐಗೆ ಒಪ್ಪಿಸಿದರೆ ಸತ್ಯಾಸತ್ಯತೆ ಹೊರಗಡೆಗೆ ಬರುತ್ತೆ. ಮುಖ್ಯಮಂತ್ರಿ ರಾಜೀನಾಮೆ ಕೇಳ್ತೀವಿ. ಮಂತ್ರಿ ರಾಜೀನಾಮೆ ಆಗಲೇಬೇಕು. ಆರನೇ ತಾರೀಖು ಡೆಡ್‌ಲೈನ್ ಕೊಡುತ್ತೇವೆ. ಅದರ ಒಳಗೆ ರಾಜೀನಾಮೆ ಪಡೆಯದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ” ಎಂದು ಅಶೋಕ್‌ ಆಗ್ರಹಿಸಿದರು.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಧೀಕ್ಷಕ (Valmiki development corporation) ಚಂದ್ರಶೇಖರ್‌ ಆತ್ಮಹತ್ಯೆ (Officer self harming) ಮಾಡಿಕೊಂಡಿರುವ (valmiki corporation scam) ಪ್ರಕರಣದಲ್ಲಿ, ನಿಗಮದಿಂದ ವರ್ಗಾವಣೆಯಾಗಿರುವ ಹಣದ ಅಕ್ರಮದಲ್ಲಿ (Illegal money transfer) ಸಚಿವರ ಹಾಗೂ ಅವರ ಆಪ್ತ ನಾಗರಾಜ್‌ ಎಂಬಾತನ ಕೈವಾಡವಿದೆ ಎಂದು ಬಿಜೆಪಿ ಫೋಟೋ ಸಹಿತ ಆರೋಪಿಸಿದೆ. ನಾಗರಾಜ್‌, ಸಚಿವ ನಾಗೇಂದ್ರ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯಗೆ ಆಪ್ತವಾಗಿರುವ ಫೋಟೋಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ (BJP) ಬಿಡುಗಡೆ ಮಾಡಿದೆ.

ಬಿಜೆಪಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಆಶೋಕ್, ಸಿಟಿ ರವಿ, ಗೋವಿಂದ ಕಾರಜೋಳ, ರಾಮಮೂರ್ತಿ, ಲೆಹರ್ ಸಿಂಗ್, ಪದ್ಮನಾಭ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

“ಇದೊಂದು ದೊಡ್ಡ ಹಗರಣ. ನಾಗರಾಜ್ ಅನ್ನುವ ಅಧಿಕಾರಿಯ ಹೆಸರು ಡೆತ್ ನೋಟ್‌ನಲ್ಲಿ ಇದೆ. ಈತ ಬಾರಿ ಪ್ರಭಾವಿ ಅಧಿಕಾರಿ. ಸಚಿವ ನಾಗೇಂದ್ರ ಜತೆ ಬ್ಯುಸಿನೆಸ್ ಪಾರ್ಟನರ್ ಆಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದಾರೆ. ಹಗರಣದಲ್ಲಿ ಈತನ ಕೈವಾಡವಿದೆ. ಈ ದುಡ್ಡು ಬೇರೆ ರಾಜ್ಯಗಳಿಗೆ ಹೋಗಿದೆ. ಎಲೆಕ್ಷನ್ ಫಂಡ್‌ಗೆ ಬಳಸಿರುವ ಸಾಧ್ಯತೆ ಇದೆ. ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ಇದರಲ್ಲಿ ಸಚಿವರ ಪಾತ್ರ ಇರುವುದರಿಂದ ರಾಜ್ಯ ಸರ್ಕಾರದ ವ್ಯಾಪ್ತಿಯ ತನಿಖಾ ಸಂಸ್ಥೆಯಿಂದ ತನಿಖೆ ಆಗಬಾರದು. ಹೀಗಾಗಿ ಇದನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಿಬಿಐಯಿಂದ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ. ದೊಡ್ಡ ದೊಡ್ಡವರು ಸಹ ಇದರಲ್ಲಿ ಪಾತ್ರಧಾರಿಗಳು ಆಗಿರುವುದರಿಂದ ಸಿಬಿಐ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತೆ” ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.

Valmiki Corporation Scam nagaraj with minister nagendra and cm siddaramiah

ಕರ್ನಾಟಕದ ಕಾಂಗ್ರೆಸ್‌ನ ಬ್ರಹ್ಮಾಂಡ ಭ್ರಷ್ಟಾಚಾರದ ಹಗರಣ ಬಯಲಿಗೆ ಬಂದಿದೆ. ಕಾಂಗ್ರೆಸ್‌ನ ಒಂದು ವರ್ಷದ ಸಾಧನೆ ಎಂದರೆ ಎಸ್‌ಟಿ ನಿಗಮದ 180 ಕೋಟಿ ರೂ. ಹಣ ಗುಳುಂ ಮಾಡಿರುವುದು. ಚುನಾವಣೆಗೂ ಮೊದಲು ದಲಿತರ ರಕ್ಷಣೆ ನಮ್ಮ ಹಕ್ಕು ಅಂತ ಹೇಳಿದ್ರು. ಅಧಿಕಾರ ಸಿಕ್ಕ ತಕ್ಷಣ ವಾಲ್ಮೀಕಿ ನಿಗಮದ 187 ಕೋಟಿ ಹಣ ಗುಳುಂ ಮಾಡಿದ್ದಾರೆ. ಒಂದು ವರ್ಷದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದೇ ಸಾಧನೆ ಎಂದು ಅಶೋಕ್‌ ಆರೋಪಿಸಿದರು.

ರಾಜ್ಯದಲ್ಲಿ ಹೆಣ್ಣು ಮಕ್ಕಳು ಹೊರಗಡೆ ಹೋದ್ರೆ ಗ್ಯಾರಂಟಿ ಇಲ್ಲ. ಈಗ ಸರ್ಕಾರಿ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ. ಚಂದ್ರಶೇಖರ್‌ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ 25 ವರ್ಷದ ರಾಜಕೀಯ ಜೀವನದಲ್ಲಿ ಡಿಟೈಲ್ ಆಗಿ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿಲ್ಲ. ಕಾಂಗ್ರೆಸ್‌ನವರು ಲೂಟಿ ಮಾಡಿರುವುದು ಸ್ಪಷ್ಟವಾಗಿ ಕಾಣ್ತಿದೆ. 187 ಕೋಟಿ ರೂ. ಹಗರಣದಲ್ಲಿ ಇಡೀ ಸರ್ಕಾರ ಭಾಗಿಯಾಗಿದೆ ಎಂದು ಅವರು ಆರೋಪಿಸಿದರು.

ಮಹಿಳೆಯರ ಬ್ಯಾಂಕ್ ಅಕೌಂಟ್‌ಗೆ ಟಕಾಟಕ್‌ ಹಣ ಹಾಕ್ತೀವಿ ಅಂತ ರಾಹುಲ್ ಹೇಳಿದ್ರು. 4, 6, 21, 25 ದಿನಾಂಕಗಳಂದು ಟಕಾಟಕ್‌ ಟ್ರಾನ್ಸ್‌ಫರ್ ಮಾಡಿದ್ದಾರೆ. ಕಾಂಗ್ರೆಸ್‌ನ ಲೂಟಿ ಅಕೌಂಟ್‌ಗೆ ಹಾಕಿದ್ದಾರೆ. ಇದು ಬ್ರಹ್ಮಾಂಡ ಭ್ರಷ್ಟಾಚಾರ. ದಲಿತರ ಹಣ ಮಾಯವಾಗಿದೆ. ಅಧಿಕಾರಿಗಳು ಸತ್ತು ಹೋಗ್ತಿದ್ದಾರೆ. ಕ್ರೈಮ್ ರೇಟ್, ಕೋಮುವಾದ ಮತ್ತು ಭಯೋತ್ಪಾದನೆ ಟಕಾಟಕ್‌ ಜಾಸ್ತಿ ಆಗಿದೆ ಎಂದು ಅವರು ಕಿಡಿ ಕಾರಿದರು.

ಸರ್ಕಾರಕ್ಕೆ ಆರ್ ಆಶೋಕ್ ಆರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ:
1) ಚಂದ್ರಶೇಖರ್‌ ಡೆತ್ ನೋಟ್‌ನಲ್ಲಿ ಮಂತ್ರಿ ಹೆಸರಿದೆ. ಆದರೆ ಎಫ್ಐಆರ್‌ನಲ್ಲಿ ಯಾಕೆ ಇಲ್ಲ?
2) ಎಫ್ಐಆರ್‌ನಲ್ಲಿ ಹೆಸರಿರುವ ಅಧಿಕಾರಿಗಳನ್ನು ಯಾಕೆ ಬಂಧಿಸಿಲ್ಲ?
3) ಬಂಧಿಸಿದ್ರೆ ನಿಮ್ಮ ಬಂಡವಾಳ ಬಯಲಾಗುತ್ತಾ?
4) ಸಿಐಡಿ ಕೊಟ್ಟು ಮುಚ್ಚಿ ಹಾಕುವ ಪ್ಲಾನ್ ಮಾಡಿದ್ರಾ?
5) ಕಮಿಷನ್ ಪಡೆದಿದ್ದರೆ ರಾಜೀನಾಮೆ ಕೊಡ್ತೀನಿ ಅಂದ್ರಿ. ರಾಜೀನಾಮೆ ಯಾವಾಗ ಕೊಡ್ತೀರಾ ಸಿದ್ದರಾಮಯ್ಯ ಅವರೇ?
6) ಲ್ಯಾಪ್ ಟಾಪ್ ಕದ್ದು ಮುಚ್ಚಿ ತೆಗೆದುಕೊಂಡು ಹೋಗಿದ್ದು ಯಾಕೆ?

“ಈಶ್ವರಪ್ಪ ಪ್ರಕರಣದಲ್ಲಿ ಮೌಖಿಕ ಆದೇಶ ಅಷ್ಟೇ ಮಾಡಿದ್ದರು. ಅವರು ನೈತಿಕ ಹೊಣೆಗಾರಿಕೆ ಮೇಲೆ ರಾಜೀನಾಮೆ ಕೊಟ್ಟರು. ಈಶ್ವರಪ್ಪ ಅವರನ್ನ ಕೂಡಲೇ ಬಂಧಿಸಿ ಅಂತ ಸಿದ್ದರಾಮಯ್ಯ ಒತ್ತಾಯ ಮಾಡಿದ್ರು. ಈಗ ನೀವ್ಯಾರನ್ನು ಬಂಧಿಸಿದ್ದೀರಿ? ಇದು ಹಾದಿ ಬೀದಿಯಲ್ಲಿ ಮಾತನಾಡಿದ್ದು ಅಲ್ಲ, ಸದನದಲ್ಲಿ ಸಿದ್ದರಾಮಯ್ಯ ಹೇಳಿದ್ದು” ಎಂದು ಅಶೋಕ್ ಪ್ರಶ್ನಿಸಿದ್ದಾರೆ. “ಏನೂ ಆಗಿಲ್ಲ ಅಂತ ಪರಮೇಶ್ವರ್ ಹೇಳಿದ್ದಾರೆ. 20 ಕೋಟಿ ವಾಪಸು ಕೊಟ್ಟಿದ್ದಾರೆ ಅಂತ ಹೇಳಿದ್ದಾರೆ. ಹಣ ವಾಪಸು ತಂದಿದ್ದೀರಿ. ಅವನ ಪ್ರಾಣ ಸಹ ವಾಪಸು ತನ್ನಿ” ಎಂದರು.

“ಈ ಹಣ ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿದೆ. ಇದನ್ನು ಸಿಬಿಐಗೆ ಒಪ್ಪಿಸಿದರೆ ಸತ್ಯಾಸತ್ಯತೆ ಹೊರಗಡೆಗೆ ಬರುತ್ತೆ. ಮುಖ್ಯಮಂತ್ರಿ ರಾಜೀನಾಮೆ ಕೇಳ್ತೀವಿ. ಮಂತ್ರಿ ರಾಜೀನಾಮೆ ಆಗಲೇಬೇಕು. ಆರನೇ ತಾರೀಖು ಡೆಡ್‌ಲೈನ್ ಕೊಡುತ್ತೇವೆ. ಅದರ ಒಳಗೆ ರಾಜೀನಾಮೆ ಪಡೆಯದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ” ಎಂದು ಅಶೋಕ್‌ ಆಗ್ರಹಿಸಿದರು.

“ಡೆತ್‌ ನೋಟ್‌ ಬಗ್ಗೆ ಪರಮೇಶ್ವರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ಪರಮೇಶ್ವರ್ ಹೇಳಿಕೆಯೇ ತನಿಖೆ ಯಾವ ರೀತಿಯಲ್ಲಿ ನಡೆಯುತ್ತಿದೆ ಅಂತ ತಿಳಿಸುತ್ತಿದೆ. ಸಿಐಡಿ ತನಿಖೆಗೆ ಯಾರು ಒತ್ತಾಯ ಮಾಡಿದರು? ಇವರು ಈ ಕೇಸ್ ಮುಚ್ಚಿ ಹಾಕಲು ಸಿಐಡಿಗೆ ನೀಡಿದ್ದಾರೆ” ಎಂದು ಅಶೋಕ್ ಹೇಳಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Continue Reading

ಕ್ರಿಕೆಟ್

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

T20 World Cup 2007: ಭಾರತ ಪರ ಬೌಲಿಂಗ್​ನಲ್ಲಿ ಇರ್ಫಾನ್​ ಪಠಾಣ್​ (16 ಕ್ಕೆ 3), ಆರ್​.ಪಿ ಸಿಂಗ್​(24ಕ್ಕೆ 3), ಜೋಗಿಂದರ್ ಶರ್ಮಾ(20ಕ್ಕೆ 2) ವಿಕೆಟ್​ ಕಿತ್ತು ಮಿಂಚಿದ್ದರು.

VISTARANEWS.COM


on

T20 World Cup 2007
Koo

ಬೆಂಗಳೂರು: ಟಿ20 ಎಂಬ ಚುಟುಕು ಮಾದರಿಯ ಮೊದಲ ವಿಶ್ವಕಪ್(ICC World T20 2007) ಗೆದ್ದ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. 2007 ಸೆ. 24ರಂದು(T20 World Cup 2007) ಮಹೇಂದ್ರ ಸಿಂಗ್ ಧೋನಿ(ms dhoni) ನೇತೃತ್ವದ ಯುವ ಭಾರತ ತಂಡ ವಿಶ್ವಕಪ್ ಗೆದ್ದು ಬೀಗಿತ್ತು. ದುರಾದೃಷ್ಟವೆಂದರೆ ಆ ಬಳಿಕ ಭಾರತ ಇದುವರೆಗೂ ಒಂದೂ ಟ್ರೋಫಿ ಗೆದ್ದಿಲ್ಲ. ಇದೀಗ 17 ವರ್ಷಗಳ ಬಳಿಕ ಭಾರತ ಕಪ್​ ಗೆದ್ದು ಬೀಗೀತೇ ಎಂದು ಕಾದು ನೋಡಬೇಕಿದೆ. ಚೊಚ್ಚಲ ಟಿ20 ವಿಶ್ವಕಪ್​ ಫೈನಲ್​ನ ಮೆಲುಕು ನೋಟ ಇಂತಿದೆ.

ಅದು, ವೆಸ್ಟ್‌ ಇಂಡೀಸ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವು ಹೀನಾಯವಾಗಿ ಸೋಲು ಕಂಡ ವರ್ಷವಾಗಿತ್ತು. ಈ ಸೋಲಿನಿಂದ ಕಂಗೆಟ್ಟಿದ್ದ ಸಚಿನ್​ ತೆಂಡೂಲ್ಕರ್​, ರಾಹುಲ್​ ದ್ರಾವಿಡ್​, ಸೌರವ್​ ಗಂಗೂಲಿ ಸೇರಿ ಖ್ಯಾತನಾಮ ಆಟಗಾರರು ಈ ಟೂರ್ನಿಯಲ್ಲಿ ಆಡಲು ಹಿಂದೇಟು ಹಾಕಿದರು. ಎಲ್ಲರು ವಿಶ್ರಾಂತಿ ಬಯಸಿದರು. ದಿಕ್ಕು ತೋಚದೆ ಬಿಸಿಸಿಐ ಆಗಿದ್ದಾಗಲಿ ಎಂದು ವಿಕೆಟ್‌ಕೀಪರ್ ಧೋನಿಗೆ ನಾಯಕತ್ವ ನೀಡಿ ಯುವ ಪಡೆಯನ್ನು ಕಣಕ್ಕಿಳಿಸಿತು. ಧೋನಿ ನೇತೃತ್ವದ ಯುವಪಡೆ ತಮ್ಮ ಮೊದಲ ಪ್ರಯತ್ನದಲೇ ಕಪ್​ ಗೆದ್ದು ಇತಿಹಾಸ ಸೃಷ್ಟಿಸಿತ್ತು.

ಹಲವು ಅಚ್ಚರಿ


ಕೂಟದಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗಿ ಭಾರತ ತಂಡ ಫೈನಲ್ ಪ್ರವೇಶ ಪಡೆದಿತ್ತು. ಲೀಗ್ ಹಂತದಲ್ಲಿ ಪಾಕಿಸ್ತಾನ ವಿರುದ್ಧ ಬಾಲ್ ಔಟ್ ಮುಖಾಂತರ ಜಯ ಸಾಧಿಸಿದ್ದ ಭಾರತ ಮತ್ತೊಂದು ಹೈ ವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿತ್ತು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 157 ರನ್ ಗಳಿಸಿತು. ಗೌತಮ್ ಗಂಭೀರ್ 75 ರನ್ ಗಳಿಸಿದ್ದರೆ, ರೋಹಿತ್ ಶರ್ಮಾ 30 ರನ್ ಕೊಡುಗೆ ನೀಡಿದ್ದರು. ಉಳಿದ ಯಾರಿಂದಲೂ ಹೇಳಿಕೊಳ್ಳುವ ಪ್ರದರ್ಶನ ತಂಡಕ್ಕೆ ಸಿಗಲಿಲ್ಲ. ಪಾಕ್ ಪರ ಉಮರ್ ಗುಲ್ ಮೂರು ವಿಕೆಟ್ ಕಿತ್ತಿದ್ದರು.

ಇದನ್ನೂ ಓದಿ T20 World Cup 2024: ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರು?

ಸಾಧಾರಣ ಗುರಿ ಬೆನ್ನತ್ತಿದ್ದ ಪಾಕ್​ ಓಂದೆಡೆ ವಿಕೆಟ್ ಬೀಳುತ್ತಿದ್ದರೂ ಮಿಸ್ಬಾ ಉಲ್ ಹಕ್ ನಿಂತು ಆಡುತ್ತಿದ್ದರು. ಕೊನೆಯ ಓವರ್ ನಲ್ಲಿ 13 ರನ್ ಬೇಕಾಗಿತ್ತು. ಕೈಯಲ್ಲಿ ಇದ್ದಿದ್ದು ಒಂದು ವಿಕೆಟ್. ಜೋಗಿಂದರ್ ಶರ್ಮಾರ ಎರಡನೇ ಎಸೆತವನ್ನು ಸಿಕ್ಸರ್​ಗೆ ಅಟ್ಟಿದ ಮಿಸ್ಬಾ ಮೂರನೇ ಎಸೆತವನ್ನು ಫೈನ್ ಲೆಗ್​ಗೆ ಸ್ಕೂಪ್ ಮಾಡಿದ್ದರು. ಆದರೆ ಚೆಂಡು ಶ್ರೀಶಾಂತ್ ಕೈ ಸೇರಿತ್ತು. ಪಾಕಿಸ್ತಾನ ಆಲ್​ಔಟ್​ ಆಯಿತು. ಭಾರತ ಕೇವಲ 5 ರನ್​ ಅಂತರದಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಇಲ್ಲಿದ ಧೋನಿ ಯುವ ಕೂಡ ಆರಂಭವಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಇರ್ಫಾನ್​ ಪಠಾಣ್​ (16 ಕ್ಕೆ 3), ಆರ್​.ಪಿ ಸಿಂಗ್​(24ಕ್ಕೆ 3), ಜೋಗಿಂದರ್ ಶರ್ಮಾ(20ಕ್ಕೆ 2) ವಿಕೆಟ್​ ಕಿತ್ತು ಮಿಂಚಿದ್ದರು.

Continue Reading

ಪ್ರಮುಖ ಸುದ್ದಿ

Prajwal Revanna Case: ಹೇಗಿರುತ್ತೆ ಇಂದು ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ʼಸ್ವಾಗತʼ?

Prajwal Revanna Case: ಪ್ರಜ್ವಲ್ ರೇವಣ್ಣ ಬೋರ್ಡಿಂಗ್ ಖಚಿತ ನಂತರ ಎಸ್ಐಟಿಗೆ ಅಲರ್ಟ್ ಬರಲಿದೆ. ಇಮಿಗ್ರೇಶನ್ ತಂಡದೊಂದಿಗೆ ಎಸ್ಐಟಿ ಸಜ್ಜಾಗಲಿದೆ. ಟರ್ಮಿನಲ್ 2ಗೆ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬಂದ ಕೂಡಲೇ ವಿಮಾನದ ಬಳಿ ತೆರಳಲಿರುವ ಎಸ್ಐಟಿ ಹಾಗೂ ಸಿಐಎಸ್ಎಫ್ ಅಧಿಕಾರಿಗಳು, ಮೊದಲು ವಿಮಾನದಿಂದ ಪ್ರಜ್ವಲ್‌ನನ್ನು ಮಾತ್ರ ಡಿಬೋರ್ಡಿಂಗ್ ಮಾಡಿಸಲಿದ್ದಾರೆ.

VISTARANEWS.COM


on

prajwal revanna case airport
Koo

ಬೆಂಗಳೂರು: ಇಂದು ಮಧ್ಯರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda international Airport) ಅಶ್ಲೀಲ ವಿಡಿಯೋ (Obscene video) ಹಗರಣದ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ, ಅವರನ್ನು ʼಸ್ವಾಗತಿಸಲುʼ ಎಸ್‌ಐಟಿ (SIT) ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.

ಇಮಿಗ್ರೇಶನ್ ಡೆಸ್ಕ್‌ನಲ್ಲಿ (Immigration desk) ಸಿಐಎಸ್ಎಫ್ (CISF) ಹಾಗೂ ಎಸ್ಐಟಿ ತಂಡದ ತಲಾ ಓರ್ವ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ವಿಮಾನ ಆಗಮಿಸುವ ಮೂರು ಗಂಟೆ ಮುಂಚಿತವಾಗಿ ಇಮಿಗ್ರೇಶನ್ ಡೆಸ್ಕ್‌ಗೆ ಪ್ರಯಾಣಿಕರ ಪಟ್ಟಿ ಬರಲಿದೆ. Lufthansa ವಿಮಾನ ಕಂಪನಿಗೆ ಸೂಚನೆ ನೀಡಲಾಗಿದ್ದು, ಪ್ರಜ್ವಲ್ ರೇವಣ್ಣ ಮ್ಯೂನಿಚ್‌ನಲ್ಲಿ ಬೋರ್ಡಿಂಗ್ ಆಗುವ ಮಾಹಿತಿ ನೀಡಲು ಸೂಚನೆ ಕೊಡಲಾಗಿದೆ.

ಪ್ರಜ್ವಲ್ ರೇವಣ್ಣ ಬೋರ್ಡಿಂಗ್ ಖಚಿತ ನಂತರ ಎಸ್ಐಟಿಗೆ ಅಲರ್ಟ್ ಬರಲಿದೆ. ಇಮಿಗ್ರೇಶನ್ ತಂಡದೊಂದಿಗೆ ಎಸ್ಐಟಿ ಸಜ್ಜಾಗಲಿದೆ. ಟರ್ಮಿನಲ್ 2ಗೆ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬಂದ ಕೂಡಲೇ ವಿಮಾನದ ಬಳಿ ತೆರಳಲಿರುವ ಎಸ್ಐಟಿ ಹಾಗೂ ಸಿಐಎಸ್ಎಫ್ ಅಧಿಕಾರಿಗಳು, ಮೊದಲು ವಿಮಾನದಿಂದ ಪ್ರಜ್ವಲ್‌ನನ್ನು ಮಾತ್ರ ಡಿಬೋರ್ಡಿಂಗ್ ಮಾಡಿಸಲಿದ್ದಾರೆ.

ಪ್ರಜ್ವಲ್‌ಗೆ ಸಂಬಂಧಿಸಿದ ಲಗೇಜ್ ಹಾಗೂ ಬ್ಯಾಗ್ ನೇರವಾಗಿ ಇಮಿಗ್ರೇಶನ್ ಡೆಸ್ಕ್‌ಗೆ ತರಲು ಸೂಚಿಸಲಾಗುತ್ತದೆ. ಇಮಿಗ್ರೇಶನ್ ಡೆಸ್ಕ್ ಬಳಿ ಪ್ರಜ್ವಲ್ ಡಿಪ್ಲೋಮ್ಯಾಟಿಕ್ ಪಾಸ್‌ಪೋರ್ಟ್‌ಗೆ ಸ್ಟಾಂಪ್ ಹಾಕಿಸಿಕೊಂಡು, ಸ್ಟಾಂಪ್ ಆದ ಕೂಡಲೇ ನೇರವಾಗಿ ಎಸ್ಐಟಿ ವಶಕ್ಕೆ ಪಡೆಯಲಾಗುತ್ತದೆ. ಪಾಸ್‌ಪೋರ್ಟ್‌, ವೀಸಾ ಇತ್ಯಾದಿಗಳನ್ನು ಜಪ್ತಿ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಯಾವುದೇ ವಿಮಾನದಲ್ಲಿ ಬಂದರೂ ಇದೇ ಪ್ರಕ್ರಿಯೆ ನಡೆಯಲಿದೆ.

ಫ್ಲೈಟ್ ಟಿಕೆಟ್ ಬುಕ್‌ ಮಾಡಿರುವ ಆಧಾರದಂತೆ ಇಂದು ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯರಾತ್ರಿ 12.35ಕ್ಕೆ ಟರ್ಮಿನಲ್ 2ಗೆ ಆಗಮಿಸಲಿರುವ ಪ್ರಜ್ವಲ್ ಅನ್ನು ʼಸ್ವಾಗತಿಸಲುʼ ಟರ್ಮಿನಲ್ 2ನಲ್ಲಿ ಎಸ್ಐಟಿ ತಂಡ ಬೀಡು ಬಿಟ್ಟಿದೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ವಿಮಾನ ಹತ್ತಿದ್ದಾರೆಯೇ ಇಲ್ಲವೇ ಎಂಬುದು ಖಚಿತವಾಗಲಿದೆ.

ಪ್ರಜ್ವಲ್ ವಿಡಿಯೋ ಮಾಡಿ ಕಳಿಸಿರುವುದು ಎಲ್ಲಿಂದ ಎಂಬುದನ್ನು ನಿನ್ನೆಯೇ ಎಸ್‌ಐಟಿ ಪತ್ತೆ ಹಚ್ಚಿದೆ. ಯುರೋಪ್‌ನ ಹಂಗೇರಿನಿಂದ ಈ ವಿಡಿಯೋ ಬಿಡುಗಡೆಯಾಗಿದೆ. ಅಲ್ಲಿಂದ ಮ್ಯೂನಿಚ್‌ಗೆ ಬಂದು ಪ್ರಜ್ವಲ್‌ ವಿಮಾನ ಹಿಡಿಯಬೇಕಿದೆ. ಹಂಗೇರಿ, ಬುಡಾಪೆಸ್ಟ್‌, ಜರ್ಮನಿ ಎಂದು ಕಳೆದ ಒಂದು ತಿಂಗಳಿನಿಂದ ಪ್ರಜ್ವಲ್‌ ಓಡಾಡುತ್ತಿದ್ದಾರೆ. ಅವರು ಇಲ್ಲೆಲ್ಲಾ ತಮ್ಮ ಗೆಳೆಯರ ಆಶ್ರಯ ಪಡೆದಿದ್ದರೇ, ಎಲ್ಲಿ ತಂಗಿದ್ದರು ಎಂಬ ಮಾಹಿತಿ ದೊರೆಯಬೇಕಿದೆ.

ನಿಜಕ್ಕೂ ವಾಪಸಾಗ್ತಾರಾ ಪ್ರಜ್ವಲ್?‌

ಪ್ರಜ್ವಲ್ ರೇವಣ್ಣ ಕುಟುಂಬ ಸಲ್ಲಿಸಿದ ಜಾಮೀನು ಅರ್ಜಿಗಳೆಲ್ಲವೂ ಕೂಡ ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಮುಂದೂಡಿಕೆ ಆಗುತ್ತಲೇ ಇವೆ. ಹೀಗಾಗಿ ಪ್ರತಿ ದಿನ ರೇವಣ್ಣ ಕುಟುಂಬ ಟೆನ್ಷನ್‌ನಲ್ಲಿರಬೇಕಾಗಿದೆ. ನಿನ್ನೆ ನಡೆದ ಭವಾನಿ ರೇವಣ್ಣ ಅವರ ಸುದೀರ್ಘ ವಿಚಾರಣೆ ಬಳಿಕವೂ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಬೆಳವಣಿಗಯಿಂದ ಪ್ರಜ್ವಲ್ ವಾಪಾಸಾಗ್ತಾರಾ ಎಂಬುದೇ ಅನುಮಾನಕ್ಕೀಡು ಮಾಡಿದೆ.‌

ಪ್ರಜ್ವಲ್ ಬರುತ್ತಿದ್ದಂತೆ SIT ಅಧಿಕಾರಿಗಳು ಪ್ರಜ್ವಲ್‌ರನ್ನು ಬಂಧಿಸಲು ಸಿದ್ಧರಾಗಿದ್ದಾರೆ. ಅದಕ್ಕೂ ಮುನ್ನ ಹೈ ಅಲಟ್೯ ಆದ ಪ್ರಜ್ವಲ್ ರೇವಣ್ಣ, ಇದೇ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಅವಕಾಶ ನೀಡದ ನ್ಯಾಯಾಲಯ, ಮೊದಲು ಅವರು ಬರಲಿ ಆಮೇಲೆ ನೋಡೋಣ, ಮೇ 31ಕ್ಕೆ ಅರ್ಜಿ ವಿಚಾರಣೆ ಮಾಡೋಣ ಅಂತ ಹೇಳಿ SIT ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಸದ್ಯ 3 ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್‌ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಪೊಲೀಸ್ ಠಾಣೆ, ಸೈಬರ್ ಕ್ರೈಂ ಠಾಣೆ, ಹೊಳೆನರಸೀಪುರ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ.

ಮೈಸೂರಿನ ಕೆ.ಆರ್. ನಗರ ಠಾಣೆಯ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ವಿಚಾರದಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿದೆ. ಇದೇ ವಿಚಾರಕ್ಕೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, SIT ಕೂಡಾ ಆಕ್ಷೇಪಣಾ ಅರ್ಜಿ ಸಲ್ಲಿಸಿ ಯಾವುದೇ ಕಾರಣಕ್ಕೂ ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ವಿಚಾರದ ಆದೇಶವನ್ನು ಮೇ 31ಕ್ಕೆ ಮುಂದೂಡಿದ್ದಾರೆ.

ತನಿಖೆಗೆ ಸಹಕರಿಸುವುದಾಗಿ ಪ್ರಜ್ವಲ್‌ ಹೇಳಿದ್ದಾರೆ. ಆದರೆ ನಿರೀಕ್ಷಣಾ ಜಾಮೀನು ಸಿಗದ ಹಿನ್ನೆಲೆಯಲ್ಲಿ, ಬಂಧನ ತಪ್ಪಿಸಿಕೊಳ್ಳಲು ಅಲ್ಲೇ ಉಳಿಯುವ ಚಿಂತನೆ ಮಾಡುವ ಸಾಧ್ಯತೆಯೂ ಇದೆ. ಕಳೆದ ಬಾರಿಯೂ SIT ವಿಚಾರಣೆಗೆ ಬರಲು ಪ್ರಜ್ವಲ್‌ ಒಂದು ವಾರ ಕಾಲಾವಕಾಶ ಕೇಳಿದ್ದರು. ಆದರೆ ಒಂದು ತಿಂಗಳ ನಂತರವೂ SIT ವಿಚಾರಣೆಗೆ ಬಂದಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್‌ 2.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ (Bhartiya Pashupalan Nigam Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BPNL Recruitment 2024). ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೃಷಿ ನಿರ್ವಹಣಾ ಅಧಿಕಾರಿ (Farming Management Officer) – 250, ಕೃಷಿ ಅಭಿವೃದ್ಧಿ ಅಧಿಕಾರಿ (Farming Development Officer) – 1,250 ಮತ್ತು ಕೃಷಿ ಸ್ಫೂರ್ತಿ (Farming Inspiration) – 3,750 ಹುದ್ದೆಗಳು ಖಾಲಿ ಇವೆ. ಅಂಗೀಕೃತ ವಿಶ್ವ ವಿದ್ಯನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ. ಇನ್ನು ಕೃಷಿ ಸ್ಫೂರ್ತಿ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಕೃಷಿ ನಿರ್ವಹಣಾ ಅಧಿಕಾರಿ – 25-45 ವರ್ಷ, ಕೃಷಿ ಅಭಿವೃದ್ಧಿ ಅಧಿಕಾರಿ – 21-40 ವರ್ಷ ಮತ್ತು ಕೃಷಿ ಸ್ಫೂರ್ತಿ – 18-40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಕೃಷಿ ನಿರ್ವಹಣಾ ಅಧಿಕಾರಿ – 944 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 826 ರೂ. ಮತ್ತು ಕೃಷಿ ಸ್ಫೂರ್ತಿ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಕೃಷಿ ನಿರ್ವಹಣಾ ಅಧಿಕಾರಿ – 50,000 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 40,000 ರೂ. ಮತ್ತು ಕೃಷಿ ಸ್ಫೂರ್ತಿ – 25,000 ರೂ. ಮಾಸಿಕ ವೇತನ ಲಭ್ಯ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿಗಳನ್ನು ತುಂಬಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ

Continue Reading
Advertisement
Assault Case in Shivamogga
ಕ್ರೈಂ6 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್7 mins ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Shiva Rajkumar support Tamil Movie Non Voilance Cinema
ಸ್ಯಾಂಡಲ್ ವುಡ್13 mins ago

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Narendra Modi
Lok Sabha Election 202413 mins ago

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

Valmiki Corporation Scam
ಪ್ರಮುಖ ಸುದ್ದಿ16 mins ago

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Mansoon
ದೇಶ25 mins ago

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Ravichandran Birthday Premaloka 2 update
ಸ್ಯಾಂಡಲ್ ವುಡ್37 mins ago

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

cylinder blast in Bengaluru
ಕ್ರೈಂ56 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್1 hour ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ1 hour ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ6 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌