ಸಹಾಯಕ ಪ್ರೊಫೆಸರ್‌ ಆಯ್ಕೆ ಪ್ರಶ್ನೆಪತ್ರಿಕೆ ಸೋರಿಕೆ: ಚಾರ್ಜ್‌ಶೀಟ್‌ ಸಲ್ಲಿಕೆ, ಏನಿದೆ ಅದರಲ್ಲಿ? - Vistara News

ಉದ್ಯೋಗ

ಸಹಾಯಕ ಪ್ರೊಫೆಸರ್‌ ಆಯ್ಕೆ ಪ್ರಶ್ನೆಪತ್ರಿಕೆ ಸೋರಿಕೆ: ಚಾರ್ಜ್‌ಶೀಟ್‌ ಸಲ್ಲಿಕೆ, ಏನಿದೆ ಅದರಲ್ಲಿ?

ಸಹಾಯಕ ಪ್ರಾಧ್ಯಾಪಕರ ಆಯ್ಕೆಗಾಗಿ ನಡೆದ ಪರೀಕ್ಷೆಯ ಭೂಗೋಳ ಶಾಸ್ತ್ರ ಪ್ರಶ್ನೆಪತ್ರಿಕೆ ಲೀಕ್‌ ಆಗಿರುವ ಹಗರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

VISTARANEWS.COM


on

KEA Recruitment 2023 answer key released on kea website
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರ್ಚ್‌ ೧೪ರಂದು ನಡೆದಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಆಯ್ಕೆ ಪರೀಕ್ಷೆಯ ಭೂಗೋಳ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ೧೦ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಏನೇನಿದೆ ಎಂಬ ಬಗ್ಗೆ ವಿಸ್ತಾರ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್‌ ಮಾಹಿತಿಗಳು ಲಭ್ಯವಾಗಿವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿ ಈಗಾಗಲೇ ಕರ್ನಾಟಕ ವಿವಿ ಕುಲಸಚಿವ (ಮೌಲ್ಯಮಾಪನ) ಪ್ರೊ. ಎಚ್‌. ನಾಗರಾಜ್‌ ಮತ್ತು ಅವರ ಪಿಎಚ್‌ಡಿ ವಿದ್ಯಾರ್ಥಿನಿ ಸೌಮ್ಯಾ ಅವರನ್ನು ಪ್ರಧಾನ ಆರೋಪಿಗಳೆಂದು ಗುರುತಿಸಲಾಗಿದೆ. ಮೈಸೂರು ವಿವಿಯಲ್ಲಿ ಭೂಗೋಳ ಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ. ಎಚ್‌. ನಾಗರಾಜ್‌ ಅವರನ್ನು ಕೆಲ ತಿಂಗಳ ಹಿಂದಷ್ಟೇ ಕರ್ನಾಟಕ ವಿವಿ ಕುಲಸಚಿವರಾಗಿ ನೇಮಕಗೊಂಡಿದ್ದರು. ಅವರ ಅನುಭವದ ಆಧಾರದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸುವ ಹೊಣೆಯನ್ನು ಅವರಿಗೆ ವಹಿಸಲಾಗಿತ್ತು.

ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಪ್ರಕರಣದ ಪ್ರಮುಖ ಆರೋಪಿ ಸೌಮ್ಯ, ಡಾಕ್ಟರ್ ನಾಗರಾಜ್, ಸೌಮ್ಯ ಗೆಳತಿ ಕುಸುಮಾ ಮತ್ತು ಕುಸುಮಾನ ಗೆಳೆಯ ಸೇರಿ ನಾಲ್ವರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಹೇಗೆ ಸೋರಿಕೆ ಆಯಿತು ಎನ್ನುವ ಬಗ್ಗೆ ಉಲ್ಲೇಖಿಸಲಾಗಿದೆ.

ಆರೋಪಿ ಸೌಮ್ಯ ಪ್ರಾಧ್ಯಾಪಕ  ಡಾ . ನಾಗರಾಜ್ ಬಳಿ ಪಿಎಚ್ ಡಿ ವಿದ್ಯಾರ್ಥಿಯಾಗಿರುತ್ತಾರೆ. ಡಾ ನಾಗರಾಜ್ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಯಾರಾಗಿದ್ದ ಪ್ರಶ್ನೆ ಪತ್ರಿಕೆಯ ಬಂಡಲ್ ಗಳಲ್ಲಿ ಮನೆಯಲ್ಲಿ ಇಟ್ಟಿದ್ದರು. ಸೌಮ್ಯ ಮನೆಯಲ್ಲಿದ್ದ ಪ್ರಶ್ನೆ ಪತ್ರಿಕೆಗಳ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ತಾನು ಓದಿಕೊಂಡಿದ್ದಲ್ಲದೆ ತನ್ನೊಬ್ಬ ಗೆಳತಿಗೂ ಚಿತ್ರ ತೆಗೆದು ಸೆಂಡ್‌ ಮಾಡಿದ್ದಾರೆ. ಆಕೆ ಅವಳ ಗೆಳೆಯನಿಗೆ ಫಾರ್ವರ್ಡ್‌ ಮಾಡಿದ್ದಳು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ನಿಜವೆಂದರೆ ಆ ಯುವಕ ಈ ಪ್ರಶ್ನೆ ಪತ್ರಿಕೆ ಕಡೆ ಅಷ್ಟೆಲ್ಲ ಗಮನ ಕೊಟ್ಟಿಲ್ಲ. ಆದರೆ, ಪರೀಕ್ಷೆ ಬರೆದು ಹೊರಬಂದ ಅವನಿಗೆ ಶಾಕ್‌ ಕಾದಿರುತ್ತದೆ. ಸೌಮ್ಯಳ ಗೆಳತಿ ಕುಸುಮಾ ಕಳುಹಿಸಿಕೊಟ್ಟಿದ್ದ ಪತ್ರಿಕೆಯಲ್ಲಿ 18 ಪ್ರಶ್ನೆಗಳು ಬಂದಿದ್ದವು. ಇದರಿಂದ ಸಿಟ್ಟಿಗೆದ್ದ ಆತ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತಕರಾರು ಎತ್ತಿದ್ದ. ಈತನಿಂದಲೇ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೆಇಎಗೆ ಗೊತ್ತಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

Labour Day 2024: ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು ಆಚರಿಸಲಾಗುತ್ತದೆ. ಇದು ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

International Labor Day-2024
Koo

ಬದುಕಿನ ಬಹುಪಾಲು ದಿನಗಳನ್ನು ದುಡಿಮೆಯಲ್ಲೇ ಕಳೆಯುವವರು ಕಾರ್ಮಿಕರು (Labour Day 2024). ಇವರಲ್ಲಿ ಕೆಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ಅವರ ಬದುಕು ನಿತ್ಯವೂ ಹೋರಾಟದಲ್ಲೇ ಕಳೆಯುತ್ತದೆ. ನಿತ್ಯದ ಕೆಲಸದ ಕೂಲಿಗಾಗಿ ಯಾವುದೇ ವಿಶೇಷ ಸವಲತ್ತುಗಳಿಲ್ಲದೆ ಹಗಲು, ರಾತ್ರಿ ಎನ್ನದೆ ದುಡಿಯುವ ಜೀವಗಳು ಲಕ್ಷಾಂತರ. ಇವರ ಹೋರಾಟ, ತ್ಯಾಗಗಳನ್ನು ಸ್ಮರಿಸಲು ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು (International Labour Day-2024) ಆಚರಿಸಲಾಗುತ್ತದೆ. ಇದನ್ನು ಮೇ ದಿನ (may day) ಎಂದೂ ಕರೆಯಲಾಗುತ್ತದೆ.

ಕಾರ್ಮಿಕರ ದಿನಾಚರಣೆಯ ಮೂಲ 19ನೇ ಶತಮಾನದ ಉತ್ತರಾರ್ಧ ಎಂದು ಹೇಳಬಹುದು. ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಕಾರ್ಮಿಕರು ಉತ್ತಮ ಕೆಲಸದ ಪರಿಸ್ಥಿತಿಗಳು, ನ್ಯಾಯಯುತ ವೇತನ ಮತ್ತು ಕಡಿಮೆ ಕೆಲಸದ ಸಮಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಿದರು.

ಭಾರತ (india), ಕ್ಯೂಬಾ (cuba) ಮತ್ತು ಚೀನಾ (china) ಸೇರಿದಂತೆ 80ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ದುಡಿಯುವ ವರ್ಗದ ಜನರ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದ ವಿವಿಧ ಭಾಗಗಳಲ್ಲಿನ ಜನರು ಈ ದಿನದಂದು ಮೆರವಣಿಗೆಗಳನ್ನು ನಡೆಸುತ್ತಾರೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ನಿತ್ಯದ ಕೆಲಸದಲ್ಲಿ ಸಾಧನೆ ಮಾಡಿರುವ ಕೆಲವು ಕಾರ್ಮಿಕರನ್ನು ಗುರುತಿಸಿ ಸಮ್ಮಾನವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಇದರ ಇತಿಹಾಸ ಹೀಗಿದೆ

19ನೇ ಶತಮಾನದಲ್ಲಿ ಕಾರ್ಮಿಕ ದಿನಾಚರಣೆಯ ಪ್ರಾರಂಭವಾಯಿತು. ಅಮೆರಿಕದ ಚಿಕಾಗೋದಲ್ಲಿ 1886ರ ಮೇ 1 ರಂದು ಕಾರ್ಮಿಕರು ಕೆಲಸದ ದಿನವನ್ನು ಎಂಟು ಗಂಟೆಗೆ ನಿಗದಿ ಪಡಿಸುವಂತೆ ಒತ್ತಾಯಿಸಿ ಮುಷ್ಕರವನ್ನು ಆಯೋಜಿಸಿದ್ದರು. ಹೇಮಾರ್ಕೆಟ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಮಿಕ ರ್ಯಾಲಿಯ ವೇಳೆ ಬಾಂಬ್ ಸ್ಫೋಟಗೊಂಡ ಅನಂತರ ಅಮೆರಿಕದಾದ್ಯಂತ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗಾಗಿ ಹೋರಾಡಲು ಒಗ್ಗೂಡಿದರು.

1889ರಲ್ಲಿ ಸಮಾಜವಾದಿ ಪಕ್ಷಗಳ ಅಂತಾರಾಷ್ಟ್ರೀಯ ಕಾಂಗ್ರೆಸ್ ಪ್ಯಾರಿಸ್ ನಲ್ಲಿ ಸಭೆ ಸೇರಿತು. ಮೇ 1ರಂದು ಕಾರ್ಮಿಕರ ದಿನ ಅಥವಾ ಕಾರ್ಮಿಕರ ದಿನವನ್ನು ಆಚರಿಸಲು ನಿರ್ಧಾರ ಕೈಗೊಂಡಿತು.


ಚೆನ್ನೈನಲ್ಲಿ ಮೊದಲ ಕಾರ್ಯಕ್ರಮ

ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕ ದಿನವನ್ನು 1923ರ ಮೇ 1ರಂದು ಚೆನ್ನೈನಲ್ಲಿ ಆಚರಿಸಲಾಯಿತು. ಮೊದಲ ಮೇ ದಿನಾಚರಣೆಯನ್ನು ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆಯೋಜಿಸಿತ್ತು. ಪಕ್ಷದ ನಾಯಕ ಕಾಮ್ರೇಡ್ ಸಿಂಗರವೇಲರ್ ಈ ಕಾರ್ಯಕ್ರಮವನ್ನು ಆಚರಿಸಲು ಎರಡು ಸಭೆಗಳನ್ನು ಆಯೋಜಿಸಿದ್ದರು.
ಕಾರ್ಮಿಕರ ದಿನವನ್ನು ವಿವಿಧ ಭಾರತೀಯ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಅತ್ಯಂತ ಜನಪ್ರಿಯ ಹೆಸರು ಮೇ ದಿನವಾಗಿದೆ.

ಕಾರ್ಮಿಕರ ದಿನವನ್ನು ಹಿಂದಿಯಲ್ಲಿ ಕಾಮ್‌ಗರ್ ದಿನ್, ಕನ್ನಡದಲ್ಲಿ ಕಾರ್ಮಿಕ ದಿನಚರಣೆ, ತೆಲುಗಿನಲ್ಲಿ ಕಾರ್ಮಿಕ ದಿನೋತ್ಸವ, ಮರಾಠಿಯಲ್ಲಿ ಕಾಮ್‌ಗರ್ ದಿವಸ್, ತಮಿಳಿನಲ್ಲಿ ಉಜೈಪಾಲರ್ ದೀನಂ, ಮಲಯಾಳಂನಲ್ಲಿ ಥೋಝಿಲಾಲಿ ದಿನಂ ಮತ್ತು ಬಂಗಾಳಿಯಲ್ಲಿ ಶ್ರೋಮಿಕ್ ದಿಬೋಶ್ ಎಂದು ಕರೆಯಲಾಗುತ್ತದೆ.

ಈ ದಿನದ ಉದ್ದೇಶ ಏನು?

ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಕಾರ್ಮಿಕರ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಕಾರ್ಮಿಕರ ಶ್ರಮವನ್ನು ಗೌರವಿಸುವುದು ಮತ್ತು ಅವರ ಘನತೆಯನ್ನು ಎತ್ತಿ ಹಿಡಿಯುವುದು ಈ ದಿನದ ವಿಶೇಷವಾಗಿದೆ.

Continue Reading

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಗಮನಿಸಿ ಮೇ 2ರ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರೆಕ್ಟ್‌ ಲಿಂಕ್‌

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ಉದ್ಯೋಗ

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 10 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Job News: ಇತ್ತೀಚೆಗೆ ಮಾಹಿತಿ ತಂತ್ರಜ್ಞಾನದ ಸೇವೆಗಳ ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾ 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಈ ಮಧ್ಯೆ ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ.

VISTARANEWS.COM


on

Job News
Koo

ನವದೆಹಲಿ: ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ (HCLTech) ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ (Job News).

“24ರ ಹಣಕಾಸು ವರ್ಷದಲ್ಲಿ ನಾವು ಸುಮಾರು 15,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಈಗಾಗಲೇ 12,000ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆʼʼ ಎಂದು ಎಚ್‌ಸಿಎಲ್‌ ಟೆಕ್‌ನ ಮುಖ್ಯ ಪೀಪಲ್ ಆಫೀಸರ್ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈ ಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್‌ 3,096 ಪ್ರೆಶರ್‌ಗಳನ್ನು ನೇಮಿಸಿದೆ. ಜತೆಗೆ ಕಂಪನಿಯು 2024ರ ಸಂಪೂರ್ಣ ಹಣಕಾಸು ವರ್ಷದಲ್ಲಿ 12,141 ಪ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ನಾಲ್ಕನೇ ತ್ರೈಮಾಸಿಕದ ವೇಳೆಗೆ ಅದರ ಒಟ್ಟು ಉದ್ಯೋಗಿಗಳ ಸಂಖ್ಯೆ 2,27,481ಕ್ಕೆ ತಲುಪಿದೆ.

”ಮುಂಬರುವ ವರ್ಷದಲ್ಲಿ ನೇಮಕಾತಿಯು ಇದೇ ರೀತಿಯಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ 10,000ಕ್ಕೂ ಹೆಚ್ಚು ಮಂದಿಯನ್ನು ನಿಯೋಜಿಸಲು ಯೋಜನೆ ಹಾಕಿಕೊಂಡಿದ್ದೇವೆ. ಅಂದರೆ ನಾವು ಕ್ಯಾಂಪಸ್ ಮೂಲಕ ನೇಮಕಾತಿ ಮುಂದುವರಿಸುತ್ತೇವೆ” ಎಂದು ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.

6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. 

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ಮೋಹಿತ್‌ ಜೋಶಿ ತಿಳಿಸಿದ್ದಾರೆ.

Continue Reading
Advertisement
Pakistan Inflation
ವಿದೇಶ40 mins ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ57 mins ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು1 hour ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ2 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ2 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ2 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ2 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ2 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ3 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ3 hours ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202412 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202413 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌