Site icon Vistara News

Job Fair: ಚಾರಿತ್ರಿಕ ಉದ್ಯೋಗ ಮೇಳ ಉದ್ಘಾಟನೆ; ಹೊಸದಾಗಿ GTTC ಸ್ಥಾಪನೆ: ಸಿಎಂ ಮಹತ್ವದ ಘೋಷಣೆ

CM Siddaramaiah Inauguration of job fair and announces setting up of new GTTC

ಬೆಂಗಳೂರು: ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು. ಪ್ರತಿ ವರ್ಷ ಉದ್ಯೋಗ ಮೇಳ (Job Fair) ನಡೆಸಲಾಗುವುದು. ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ ಜಿಟಿಟಿಸಿ (GTTC – Government Tool Room & Training Centre) ಗಳ ಸಂಖ್ಯೆಯನ್ನು ಇನ್ನಷ್ಟು ಜಿಟಿಟಿಸಿಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅರಮನೆ ಮೈದಾನದಲ್ಲಿ ನಡೆದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತಿ ವರ್ಷ ನಿರುದ್ಯೋಗ ಪ್ರಮಾಣವು ಬೃಹತ್ತಾಗಿ ಬೆಳೆಯುತ್ತಾ ಶೇ. 8.40 ಏರಿಕೆಯಾಗಿದೆ ಎಂದು ವಿವರಿಸಿದರು.

ನಾವು ಯುವ ನಿಧಿಯನ್ನೂ ಕೊಡ್ತೀವಿ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Rajya Sabha Election: ಕೆಆರ್‌ಪಿಪಿ ಏಜೆಂಟ್‌ ಆಗಿ ಡಿಕೆಶಿ ಆಪ್ತ ಯೋಗೇಂದ್ರ ನೇಮಕ; ರಾಜ್ಯಸಭೆಯಲ್ಲಿ ಕಾಂಗ್ರೆಸ್‌ಗೆ ರೆಡ್ಡಿ ಬೆಂಬಲ

ಕಾರ್ಯಕ್ರಮದ ಗುರಿ, ಕಾರ್ಯಯೋಜನೆ ಏನು?

Exit mobile version