Banking Jobs: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಅಧಿಕಾರಿಗಳ ಹುದ್ದೆ; ನೀವಿನ್ನೂ ಅರ್ಜಿ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ - Vistara News

ಉದ್ಯೋಗ

Banking Jobs: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಅಧಿಕಾರಿಗಳ ಹುದ್ದೆ; ನೀವಿನ್ನೂ ಅರ್ಜಿ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್- ಐಬಿಪಿಎಸ್) ಸ್ಪೆಶಲಿಸ್ಟ್ ಅಧಿಕಾರಿಗಳ (special officers) ನೇಮಕಾತಿ (Banking Jobs) ಪ್ರಕ್ರಿಯೆಗೆ (ಸಿಆರ್‌ಪಿ) ಅರ್ಜಿ ಆಹ್ವಾನಿಸಿದೆ. ಇದಕ್ಕೆ ಆಗಸ್ಟ್‌ 28 ಕೊನೆಯ ದಿನವಾಗಿದೆ.

VISTARANEWS.COM


on

IBPS Recruitment
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
R K Balachandra

:: ಆರ್. ಕೆ ಬಾಲಚಂದ್ರ

(ಲೇಖಕರು ಅಂಕಣಕಾರರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ʼವಿಸ್ತಾರ ಕಾಯಕ ಯೋಗಿʼ ಪ್ರಶಸ್ತಿ ಪುರಸ್ಕೃತರು)

ಬ್ಯಾಂಕಿಂಗ್ ವಲಯದಲ್ಲಿ ಕೆಲಸಕ್ಕೆ ಸೇರಿಕೊಳ್ಳುವ ಉತ್ಸಾಹ ಹೊಂದಿರುವ ಯುವಕ/ಯುವತಿಯರಿಗೆ ಇಲ್ಲಿದೆ ಹೊಸ ಅವಕಾಶ. ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್- ಐಬಿಪಿಎಸ್) ಸ್ಪೆಶಲಿಸ್ಟ್ ಅಧಿಕಾರಿಗಳ (special officers) ನೇಮಕಾತಿ (Banking Jobs) ಪ್ರಕ್ರಿಯೆಗೆ (ಸಿಆರ್‌ಪಿ) ಅರ್ಜಿ ಆಹ್ವಾನಿಸಿದೆ. ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳು (nationalized banks) ಇದರಲ್ಲಿ ಪಾಲ್ಗೊಳ್ಳುತ್ತಿವೆ. ಅರ್ಜಿ ಸಲ್ಲಿಕೆಗೆ ಆಗಸ್ಟ್‌ 28 ಕೊನೆಯ ದಿನವಾದ ಕಾರಣ ಅಭ್ಯರ್ಥಿಗಳು ತುರ್ತಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ.

ಯಾವ್ಯಾವ ಹುದ್ದೆಗಳು? (ಸ್ಕೇಲ್-1)

⮚ ಐಟಿ ಆಫೀಸರ್ -120
⮚ ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ -500
⮚ ರಾಜ್‌ಭಾಷಾ ಅಧಿಕಾರಿ -41
⮚ ಲಾ ಆಫೀಸರ್ -10
⮚ ಎಚ್ಆರ್/ಪರ್ಸನಲ್ ಆಫೀಸರ್ – 31
⮚ ಮಾರ್ಕೆಟಿಂಗ್ ಆಫೀಸರ್ -700

ಯಾವ್ಯಾವ ಬ್ಯಾಂಕ್‌ಗಳಲ್ಲಿ ಹುದ್ದೆ?

● ಬ್ಯಾಂಕ್ ಆಫ್ ಇಂಡಿಯಾ
● ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
● ಇಂಡಿಯನ್ ಒವರ್‌ಸೀಸ್ ಬ್ಯಾಂಕ್
● ಪಂಜಾಬ್ ನ್ಯಾಷನಲ್ ಬ್ಯಾಂಕ್

ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್-500

BANK SC ST OBC EWS UR TOTAL
CBI 60 30 108 40 162 400
PNB 15 07 27 10 41 100
TOTAL 75 37 135 50 203 500

ಎಚ್ಆರ್/ಪರ್ಸನಲ್ ಆಫೀಸರ್ – 31

BANK SC STOBCEWS URTOTAL
BOI 1031712
CBI 2 1 4 1 7 15
IOB 0 0 1 0 3 4
TOTAL3 1 8 2 1731

ಐಟಿ ಆಫೀಸರ್ -120

BANK SC ST OBC EWS UR TOTAL
IOB 3 15 3 8 20
PNB 15 7 27 10 41 100
TOTAL 18 8 32 13 49 120

ಲಾ ಆಫೀಸರ್ -10

BANK SC ST OBC EWS UR TOTAL
BOI 1 0 2 1 6 10
TOTAL 1 0 2 1 6 1O

ಮಾರ್ಕೆಟಿಂಗ್ ಆಫೀಸರ್ -700

BANK SC ST OBC EWS UR TOTAL
PNB 105 52 189 70 284 700
TOTAL 105 52 189 70 284 700

ರಾಜ್ ಭಾಷಾ ಅಧಿಕಾರಿ -41

BANKSCSTOBCEWSURTOTAL
BOI 2 1 4 1 8 16
CBI 2 1 4 1 7 15
IOB 2 1 3 1 3 10
TOTAL 6 311 3 18 41

ಇದನ್ನೂ ಓದಿ: Guest Lecturers Appointment : ಅತಿಥಿ ಉಪನ್ಯಾಸಕರ ನೇಮಕಕ್ಕೆ ಗೆಜೆಟ್‌ ಅಧಿಸೂಚನೆ; ಆ. 28ರಿಂದ ಅರ್ಜಿ ಆಹ್ವಾನ

ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: 850 ರೂ. (GSTಯೂ ಸೇರಿ)
ಪ.ಜಾ, ಪ.ಪಂ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ 175 ರೂ. (GSTಯೂ ಸೇರಿ)

ಶುಲ್ಕ ಪಾವತಿ
ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ
ಆನ್‌ಲೈನ್‌ನಲ್ಲಿ ಮಾತ್ರ.

ಪ್ರಮುಖ ದಿನಾಂಕಗಳು:

ಆಗಸ್ಟ್ 1ರಿಂದ ಆಗಸ್ಟ್ 28, 2023ರವರೆಗೆ (ಇದಕ್ಕೂ ಮೊದಲು ಅರ್ಜಿ ಸಲ್ಲಿಕೆಗೆ ಆಗಸ್ಟ್‌ 21 ಕೊನೆಯ ದಿನವಾಗಿತ್ತು. ಬಳಿಕ ಇದನ್ನು ಆಗಸ್ಟ್‌ 28ಕ್ಕೆ ವಿಸ್ತರಿಸಲಾಗಿದೆ)

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?

ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್):

ಬೆಂಗಳೂರು, ಬೆಳಗಾವಿ, ಬೀದರ್, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ:

ಬೆಂಗಳೂರು ಮತ್ತು ಹುಬ್ಬಳ್ಳಿ- ಧಾರವಾಡ

ವಯೋಮಿತಿ:

01.08.2023ಕ್ಕೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1993ಕ್ಕಿಂತ ಮುಂಚಿತವಾಗಿ ಮತ್ತು 01.08.2003ರ ನಂತರ ಜನಿಸಿರಬಾರದು. (ಎರಡೂ ದಿನಗಳು ಸೇರಿದಂತೆ)

ವಯೋಮಿತಿ ಸಡಿಲಿಕೆ:

ಸರಕಾರದ ನಿಯಮಾನುಸಾರ ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು, ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು, ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು.

ಪರೀಕ್ಷಾ ಪ್ರಕ್ರಿಯೆ:

ಮೊದಲ ಹಂತ: ಆನ್ಲೈನ್ ಪೂರ್ವಭಾವಿ ಪರೀಕ್ಷೆ – ಡಿಸೆಂಬರ್ 30/ 31, 2023ರಂದು.

ಎರಡನೇ ಹಂತ: ಆನ್ಲೈನ್ ಮುಖ್ಯ ಪರೀಕ್ಷೆ- ಜನವರಿ 28, 2024.

ಮೂರನೇ ಹಂತ: ಸಂದರ್ಶನ
ಫೆಬ್ರವರಿ- ಮಾರ್ಚ್ 2024.

ಪ್ರಾತಿನಿಧಿಕ ಹಂಚಿಕೆ: ಏಪ್ರಿಲ್ 2024

ನೇಮಕಾತಿ ಹೇಗೆ?

ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ, ಪೂರ್ವಭಾವಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರಲಿದೆ.
ಆನ್ಲೈನ್‌ನಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು. ಅವರು ಮುಖ್ಯ ಪರೀಕ್ಷೆಗೆ ಹಾಜರಾಗಬೇಕು, ನಂತರ ಅಲ್ಲಿ ಪಡೆದ ಅಂಕೆಗಳ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನವಿದೆ. ಪರೀಕ್ಷೆಗಳು ಇಂಗ್ಲಿಷ್/ ಹಿಂದಿ ಭಾಷೆಯಲ್ಲಿರಲಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

ಶೈಕ್ಷಣಿಕ ಅರ್ಹತೆಗಳೇನು?

ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.

1) ಐಟಿ ಆಫೀಸರ್ ಹುದ್ದೆಗೆ: ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಎಲೆಕ್ಟ್ರಾನಿಕ್ಸ್/ /ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ ಸ್ಟ್ರುಮೆಂಟೇಷನ್‌ನಲ್ಲಿ ನಾಲ್ಕು ವರ್ಷಗಳ ಎಂಜಿನಿಯರಿಂಗ್ ಅಥವಾ ಟೆಕ್ನಾಲಜಿ ಪದವಿ ಅಥವಾ ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಸ್ಟುಮೆಂಟೇಶನ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅಥವಾ ಪದವಿ ಜೊತೆಯಲ್ಲಿ DOEACC “B” ಲೆವೆಲ್ ಪಾಸಾಗಿರಬೇಕು.

2) ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್: ಕೃಷಿ/ತೋಟಗಾರಿಕೆ / ಪಶುಸಂಗೋಪನೆ/ ಪಶು ವೈದ್ಯಕೀಯ ವಿಜ್ಞಾನ/ ಡೇರಿ ಸೈನ್ಸ್/ ಅಗ್ರಿಎಂಜಿನಿಯರಿಂಗ್ ಮೀನುಗಾರಿಕೆ ವಿಜ್ಞಾನ/ ಮೀನು ಸಾಕಣೆ, ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಕೃಷಿ/ ಮೀನುಗಾರಿಕೆ ಇಂಜಿನಿಯರಿಂಗ್ ನಾಲ್ಕು ವರ್ಷಗಳ ಪದವಿ ಪಡೆದಿರಬೇಕು.

3) ಲಾ ಆಫೀಸರ್ ಹುದ್ದೆಗೆ: ಎಲ್‌ಎಲ್‌ಬಿ ಪದವಿ ಪಡೆದಿರಬೇಕು ಮತ್ತು ಬಾರ್ ಕೌನ್ಸಿಲ್‌ನ ಸದಸ್ಯತ್ವ ಪಡೆದಿರಬೇಕು.

4) ರಾಜ್ಯ ಭಾಷಾ ಅಧಿಕಾರಿ ಹುದ್ದೆಗೆ: ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ – ಪದವಿಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು ಅಥವಾ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪದವಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು.

5) ಎಚ್‌ಆರ್/ ಪರ್ಸನಲ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಪರ್ಸನಲ್ ಮ್ಯಾನೇಜ್ಮೆಂಟ್/ಇಂಡಸ್ಟ್ರಿಯಲ್ ರಿಲೇಷನ್ಸ್ ಎಚ್ಆರ್/ ಎಚ್ಆರ್ಡಿ/ ಸೋಷಿಯಲ್ ವರ್ಕ್/ ಕಾರ್ಮಿಕ ಕಾನೂನು ಇದ್ಯಾವುದಾದರೂ ವಿಷಯದಲ್ಲಿ ಪೂರ್ಣಾವಧಿಯ ಸ್ನಾತಕೋತ್ತರ ಪದವಿ ಅಥವಾ ಪೂರ್ಣಾವಧಿಯ ಸ್ನಾತಕೋತ್ತರ ಅಥವಾ ಡಿಪ್ಲೊಮಾ ಮಾಡಿರಬೇಕು.

6) ಮಾರ್ಕೆಟಿಂಗ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಎರಡು ವರ್ಷಗಳ ಪೂರ್ಣಾವಧಿ ಎಂಎಂಎಸ್ (ಮಾರ್ಕೆಟಿಂಗ್) ಎಂಬಿಎ (ಮಾರ್ಕೆಟಿಂಗ್)/ PGDBA /PGDBM/PGPM/PGDM ಮಾರ್ಕೆಟಿಂಗ್‌ನಲ್ಲಿ ಸ್ಪೆಶಲೈಜನೇಶನ್ ಮಾಡಿರಬೇಕು. ಎರಡು ವಿಷಯಗಳ ಸ್ಪೆಶಲೈಜನೇಶನ್ ಸಂದರ್ಭದಲ್ಲಿ, ಒಂದು ವಿಷಯ ಮೇಲೆ ಸೂಚಿಸಿದ ಕ್ಷೇತ್ರದಲ್ಲಿರಬೇಕು. ಮೇಜರ್/ಮೈನರ್ ವಿಶೇಷತೆಗಳ ಸಂದರ್ಭದಲ್ಲಿ, ಮೇಜರ್ ವಿಷಯ ಸೂಚಿಸಲಾದ ಸ್ಟ್ರೀಮ್‌ನಲ್ಲಿರಬೇಕು. ಎರಡಕ್ಕಿಂತ ಹೆಚ್ಚು ಸ್ಪೆಶಲೈಜನೇಶನ್‌ನಲ್ಲಿ ಪಿಜಿ ಪದವಿ (ಎಂಎಂಎಸ್ ಅಥವಾ ಎಂಬಿಎ)/ಪಿಜಿ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಇದನ್ನೂ ಗಮನಿಸಿ:

IT ಆಫೀಸರ್ ಸ್ಕೇಲ್-I ಹೊರತುಪಡಿಸಿ ಬೇರೆ ಹುದ್ದೆಗಳಿಗೆ: ಅಭ್ಯರ್ಥಿಯು ಕಂಪ್ಯೂಟರ್ ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ. (ಕಂಪ್ಯೂಟರ್‌ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಪ್ರೌಢಶಾಲೆ /ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (Information Technology) ಯನ್ನು ಒಂದು ವಿಷಯವಾಗಿ ಓದಿರಬೇಕು.

ಕ್ರೆಡಿಟ್ ಇತಿಹಾಸ:

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು. ಮತ್ತು ಬ್ಯಾಂಕ್‌ಗಳಿಗೆ ಸೇರುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್ 650 ಅಥವಾ ಅದಕ್ಕಿಂತ ಹೆಚ್ಚಿನದನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್‌ಗಳ ನೀತಿಯ ಪ್ರಕಾರ ಇರುತ್ತದೆ, ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದ ಅಭ್ಯರ್ಥಿಗಳು, CIBIL ಸ್ಥಿತಿಯನ್ನು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಪೇಕ್ಷಣಾ ಪತ್ರ(NOC) ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಸೂಚನೆ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯವಿಲ್ಲ.

ನೇಮಕ ಹೇಗೆ?

ಪೂರ್ವಭಾವಿ ಪರೀಕ್ಷೆ ಒಂದು ಗಂಟೆ ಕಾಲ ನಡೆಯಲಿದ್ದು, (ಪ್ರತಿ ಪತ್ರಿಕೆಗೂ 40 ನಿಮಿಷಗಳಂತೆ ಒಟ್ಟಾರೆ 120 ನಿಮಿಷಗಳು) 125 ಅಂಕಗಳಿಗೆ 150 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಇಂಗ್ಲೀಷ್ ಲಾಂಗ್ವೇಜ್‌ಗೆ 50 ಪ್ರಶ್ನೆ (25 ಅಂಕ), ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್‌ಗೆ 50 ಪ್ರಶ್ನೆ (50 ಅಂಕ) ಹಾಗೂ ರೀಸನಿಂಗ್ ಎಬಿಲಿಟಿಯ 50 ಪ್ರಶ್ನೆ(50 ಅಂಕ)ಗಳಿರಲಿವೆ. (ಇದು ರಾಜ್‌ಭಾಷಾ ಅಧಿಕಾರಿ ಹಾಗೂ ಲಾ ಆಫೀಸರ್ ಹುದ್ದೆಗಳಿಗೆ ಹೊರತಾಗಿ. ಇವೆರಡೂ ಹುದ್ದೆಗಳಿಗೆ ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಪರೀಕ್ಷೆ ಬದಲಾಗಿ General Awareness with Special Reference to Banking Industry 50(50 ಅಂಕ) ಪ್ರಶ್ನೆಗಳಿರಲಿವೆ.)

ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ. (ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ) ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡಗಳಲ್ಲಿ ಮಾತ್ರ ನಡೆಯಲಿದ್ದು, ನಿಗದಿತ ದಿನದಂದು ಆನ್‌ಲೈನ್‌ನಲ್ಲಿಯೇ ಲಿಖಿತ ಪರೀಕ್ಷೆ ನಡೆಯಲಿವೆ. ಮುಖ್ಯ ಪರೀಕ್ಷೆಯು ವೃತ್ತಿಪರ ಜ್ಞಾನಕ್ಕೆ ಸಂಭಂದಿಸಿದ್ದು 45 ನಿಮಿಷಗಳ ಕಾಲ ನಡೆಯಲಿದ್ದು, 60 ಪ್ರಶ್ನೆಗಳನ್ನು 60 ಅಂಕಗಳಿಗೆ ಕೇಳಲಾಗುತ್ತದೆ. (ರಾಜಭಾಷಾ ಅಧಿಕಾರಿಗಳ ಹುದ್ದೆಗಳಿಗೆ ಡಿಸ್ಕೃಪ್ಟಿವ್ ಟೆಸ್ಟ್ ಎರಡು ಹಂತಗಳಲ್ಲಿ ನಡೆಯಲಿದ್ದು ವೃತ್ತಿಪರ ಜ್ಞಾನಕ್ಕೆ ಸಂಬಂಧಿಸಿದ 45 ಪ್ರಶ್ನೆ ಒಬ್ಜೆಕ್ಟಿವ್ ಮಾದರಿಯಲ್ಲಿದ್ದು, ವ್ತತ್ತಿಪರ ಜ್ಞಾನಕ್ಕೆ ಸಂಬಂದಿಸಿದಂತೆ ಇನ್ನೊಂದು ಡಿಸ್ಕ್ರೆಪ್ಟಿವ್ ಪತ್ರಿಕೆಯಲ್ಲಿ ಎರಡು ಪ್ರಶ್ನೆಗಳಿರಲಿದ್ದು ಅವಧಿ ಎರಡೂ ಪರೀಕ್ಷೆಗಳಿಗೆ 30 ನಿಮಿಷಗಳಂತೆ ಒಟ್ಟಾರೆ ಒಂದು ಗಂಟೆಯ ಅವಧಿ ನೀಡಲಾಗಿದ್ದು ಗರಿಷ್ಟ 60 ಅಂಕಗಳಾಗಿದ್ದು, ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿಯೇ ಉತ್ತರವನ್ನು ಬರೆಯಬೇಕು.

ಕನ್ನಡದಲ್ಲಿ ಪರೀಕ್ಷೆ ಇಲ್ಲ

ಈ ಹಿಂದಿನಂತೆ ಇದ್ದ ಮುಖ್ಯ ಪರೀಕ್ಷೆಯಲ್ಲಿ ಬದಲಾವಣೆ ಮಾಡಿದ್ದು ಈ ಸಲ ವೃತ್ತಿಪರ ಜ್ಞಾನದ ಪರೀಕ್ಷೆ ಬರೆಯಬೇಕು. (ಸ್ಪೆಶಲಿಸ್ಟ್ ಹುದ್ದೆಗಳಾಗಿರುವುದರಿಂದ). ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ.

ಮೂರನೇ ಹಂತ ಸಂದರ್ಶನ

ಮುಖ್ಯ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಇವುಗಳಿಗೆ ಬೇಕಾಗುವ ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ. ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಸಂದರ್ಶನ (100 ಅಂಕಗಳು) ಬ್ಯಾಂಕ್‌ಗಳು ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ ‘ಒಬಿಸಿ’ ವರ್ಗದ ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ'(‘Non-Creamy layer’) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. ಒಬಿಸಿ ಎಂದು ನೋಂದಾಯಿಸಿಕೊಂಡಿರುವ ಆದರೆ (‘Non-Creamy layer’)’ಕೆನೆರಹಿತ ಪದರ’ ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. EWS ವರ್ಗದ ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. EWS ಎಂದು ನೋಂದಾಯಿಸಿಕೊಂಡ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅಂತವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.

ಆಯ್ಕೆ ಪಟ್ಟಿ:

ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು (ಹಂತ- 2), ವಸ್ತುನಿಷ್ಠ ಪರೀಕ್ಷೆ ಮತ್ತು ವಿವರಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹಾಗೂ ಹಂತ-3ರಲ್ಲಿ ಪಡೆದ ಅಂಕಗಳಿಗೆ ಸೇರಿಸಲಾಗುತ್ತದೆ. ಅರ್ಹತೆ ಪಟ್ಟಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ (ಹಂತ-1) ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ. ಹಂತ-2ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು (60 ಅಂಕಗಳನ್ನು 100ಕ್ಕೆ ಪರಿವರ್ತನೆ ಮಾಡಿ) ಅದರ 80% ಅಂಕಗಳು ಮತ್ತು ಅಭ್ಯರ್ಥಿಗಳ ಹಂತ-3 ರಲ್ಲಿ ಪಡೆದ ಅಂಕಗಳನ್ನು (100 ಅಂಕಗಳಲ್ಲಿ) ಅದರ 20% ಅಂಕಗಳನ್ನು ಸೇರಿಸಿ (100ರಲ್ಲಿ) ಪರಿವರ್ತಿತ ಅಂಕಗಳನ್ನು ಒಟ್ಟು ಸೇರಿಸಿ ನಂತರ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುತ್ತದೆ. ಹಂತ- 2 ಮತ್ತು ಹಂತ-3ರಲ್ಲಿ ಉನ್ನತ ಶ್ರೇಣಿಯನ್ನು ಪಡೆದ ಪ್ರತಿ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ವೆಬ್ ಲಿಂಕ್: https://ibpsonline.ibps.in/crpsp13jun23/ ಹಾಗೂ ಅಧಿಸೂಚನೆಗೆ: https://www.ibps.in/

ಹೆಚ್ಚಿನ ಉದ್ಯೋಗ ಮಾಹಿತಿಗೆ ಕ್ಲಿಕ್‌ ಮಾಡಿ: ಉದ್ಯೋಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ಹೈದರಾಬಾದ್‌ನಲ್ಲಿ ನಡೆಯಲಿದೆ. ವೇಳಾಪಟ್ಟಿ ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL Recruitment 2024). ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 55, ಫಿಟ್ಟರ್ – 35, ಎಲೆಕ್ಟ್ರಿಷಿಯನ್ – 25, ಮೆಷಿನಿಸ್ಟ್‌ – 8, ಟರ್ನರ್ – 6, ವೆಲ್ಡರ್ – 3, ರೆಫ್ರಿಜರೇಟರ್ & ಎಸಿ – 2, ಕೋಪಾ – 55, ಪ್ಲಂಬರ್ – 2, ಪೈಂಟರ್‌ – 5, ಡೀಸೆಲ್ ಮೆಕ್ಯಾನಿಕ್ – 1, ಮೋಟಾರು ವಾಹನ – 1, ಡ್ರಾಫ್ಟ್‌ಮ್ಯಾನ್‌ – ಸಿವಿಲ್ – 1, ಡ್ರಾಫ್ಟ್‌ಮ್ಯಾನ್‌ – ಮೆಕ್ಯಾನಿಕಲ್ – 1 ಹುದ್ದೆಗಳಿವೆ. ಅಂಗೀಕೃತ ಬೋರ್ಡ್‌ನಿಂದ ಹತ್ತನೇ ತರಗತಿ ತೇರ್ಡೆಯಾದ ಮತ್ತು ಸಂಬಂದಿಸಿದ ಟ್ರೇಟ್‌ನಲ್ಲಿ ಐಟಿಐ ಮುಗಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ನೇರ ಸಂದರ್ಶನ ಎಲ್ಲಿ ಯಾವಾಗ?

ಮೇ 20ರಂದು ಬೆಳಗ್ಗೆ 9 ಗಂಟೆಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್ ಮತ್ತು ಮಧ್ಯಾಹ್ನ 1 ಗಂಟೆಗೆ ಫಿಟ್ಟರ್‌, ಪ್ಲಂಬರ್‌, ಪೈಂಟರ್‌ ಹುದ್ದೆಗಳ ಆಕಾಂಕ್ಷಿಗಳು ಹಾಜರಾಗಬೇಕು. ಮೇ 21ರ ಬೆಳಗ್ಗೆ 9 ಗಂಟೆಗೆ ಕೋಪಾ, ಮೋಟಾರು ವಾಹನ ಮೆಕ್ಯಾನಿಕ್‌ ಮತ್ತು ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರೀಷಿಯನ್‌, ಡ್ರಾಫ್ಟ್‌ಮ್ಯಾನ್‌-ಮೆಕ್ಯಾನಿಕಲ್‌ ಹುದ್ದೆಗಳ ಸಂದರ್ಶನ ನಡೆಯಲಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಮೆಷಿನಿಸ್ಟ್‌, ರೆಫ್ರಿಜರೇಷನ್‌ & ಎಸಿ, ಟರ್ನರ್‌ ಹುದ್ದೆಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಡ್ರಾಫ್ಟ್‌ಮ್ಯಾನ್‌ -ಸಿವಿಲ್‌, ವೆಲ್ಡರ್‌ಗಳ ಸಂದರ್ಶನ ಆಯೋಜಿಸಲಾಗಿದೆ. ಆಯ್ಕೆಯಾದವರಿಗೆ 1 ವರ್ಷಗಳ ತರಬೇತಿ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

Auditorium, Behaind Department of Trainning & Development,
Hindustan Aeronautics Limited, Avionics Division, Balanagar, Hyderabad-500042.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸಂದರ್ಶನಕ್ಕೆ ಹಾಜರಾಗುವ ವೇಳೆ ಬೇಕಾದ ದಾಖಲೆಗಳು

  • ಆಧಾರ್‌ ಕಾರ್ಡ್‌.
  • ಎಸ್ಸೆಸ್ಸೆಲ್ಸಿ ಮತ್ತು ಐಟಿಐಯ ಎಲ್ಲ ಸೆಮಿಸ್ಟರ್‌ನ ಸರ್ಟಿಫಿಕೆಟ್‌.
  • ಮೀಸಲಾತಿಯ ಸರ್ಟಿಫಿಕೆಟ್‌.
  • ಹೆಸರು ನೋಂದಣಿಯ ಮಾಡಿಕೊಂಡಿರುವ ಅಪ್ಲಿಕೇಷನ್‌ ಫಾರಂ.
  • ಎರಡು ಪಾಸ್‌ಪೋರ್ಟ್‌ ಅಳತೆಯ ಫೋಟೊ.

ಹೆಸರು ನೋಂದಾಯಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಎಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Job News: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಸೂಚನೆ ಶೀಘ್ರದಲ್ಲಿಯೇ ಹೊರ ಬೀಳಲಿದೆ.

VISTARANEWS.COM


on

Job News
Koo

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ (Information Technology) ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಅಧ್ಯಕ್ಷ ದಿನೇಶ್‌ ಖರಾ (Dinesh Khara) ಮಾಹಿತಿ ನೀಡಿದ್ದಾರೆ (Job News).

”ಸುಮಾರು 11,000ರಿಂದ 12,000 ಉದ್ಯೋಗಿಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಬ್ಯಾಂಕ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ. ಜತೆಗೆ ಸೇವೆಯ ಗುಣಮಟ್ಟವನ್ನು ವೃದ್ಧಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ. ʼʼನೇಮಕಗೊಂಡವರಿಗೆ ಆರಂಭದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ ಬಳಿಕ ಅವರನ್ನು ಐಟಿ ವಿಭಾಗಕ್ಕೆ ಶಿಫಾರಸ್ಸು ಮಡಲಾಗುವುದುʼʼ ಎಂದು ಅವರು ಹೇಳಿದ್ದಾರೆ. ಈ ಮೂಲಕ ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವವರ ಕನಸು ನನಸಾಗಲಿದೆ.

ಉದ್ಯೋಗಿಗಳ ಸಂಖ್ಯೆಯಲ್ಲಿ ಕುಸಿತ

ಮಾರ್ಚ್‌ ಅಂತ್ಯಕ್ಕೆ ಎಸ್‌ಬಿಐ ಉದ್ಯೋಗಿಗಳ ಸಂಖ್ಯೆ 2,32,296ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 2,35,858 ಉದ್ಯೋಗಿಗಳಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು 2024ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಎಸ್‌ಬಿಐಯ ನಿವ್ವಳ ಲಾಭ ಶೇ. 24ರಷ್ಟು ಏರಿಕೆ ದಾಖಲಿಸಿ 20,698 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಈ ಅವಧಿಯಲ್ಲಿ ಎಸ್‌ಬಿಐ 16,695 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಬಡ್ಡಿಯ ಆದಾಯ ಶೇ. 19ರಷ್ಟು ವೃದ್ಧಿಸಿ 92,951 ಕೋಟಿ ರೂ.ಯಿಂದ 1.11 ಲಕ್ಷ ಕೋಟಿ ರೂ.ಗೆ ತಲುಪಿದೆ. ದೇಶದಲ್ಲಿ ಉದ್ಯಮ ಆಧಾರಿತ ಚಟುವಟಿಕೆ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಎಸ್‌ಬಿಐಯ ಒಟ್ಟು ಆದಾಯವೂ ಏರುಗತಿಯಲ್ಲಿದೆ. 1.06 ಲಕ್ಷ ಕೋಟಿ ರೂ.ಯಿಂದ 1.28 ಲಕ್ಷ ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ನಿರ್ವಹಣಾ ವೆಚ್ಚವೂ ಹಿಂದಿನ ವರ್ಷದ 29,732 ಕೋಟಿ ರೂ.ಗಳಿಂದ 30,276 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

ನಿರೀಕ್ಷೆ ಮೀರಿದ ಲಾಭಾಂಶ

ಆರ್ಥಿಕ ತಜ್ಞರು ಈ ತ್ರೈಮಾಸಿಕದಲ್ಲಿ ಎಸ್‌ಬಿಐ 13,400 ಕೋಟಿ ರೂ. ಲಾಭ ದಾಖಲಿಸಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಫಲಿತಾಂಶ ಈ ಎಲ್ಲ ನಿರೀಕ್ಷೆಗಳನ್ನೂ ಮೀರಿದ್ದು, ಬರೋಬ್ಬರಿ 20,698 ಕೋಟಿ ರೂ. ನಿವ್ವಳ ಲಾಭ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಪ್ರತಿ ಈಕ್ವಿಟಿ ಷೇರಿಗೆ 13.70 ರೂ. ಲಾಭಾಂಶ ಘೋಷಿಸಿದೆ. ತ್ರೈ ಮಾಸಿಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಎಸ್‌ಬಿಐ ಷೇರುಗಳಲ್ಲಿ ಜಿಗಿತ ಕಂಡು ಬಂದಿದೆ. ಮೇ 9ರಂದು ಎಸ್‌ಬಿಐ ಷೇರುಗಳು ಸುಮಾರು ಶೇ. 3ರಷ್ಟು ಹೆಚ್ಚಾಗಿ 834.40 ರೂ.ನಲ್ಲಿ ವಹಿವಾಟು ನಡೆಸುವುದು ಕಂಡುಬಂತು. ಎಸ್‌ಬಿಐನ ಒಟ್ಟು ಅನುತ್ಪಾದಕ ಆಸ್ತಿ (ಜಿಎನ್‌ಪಿಎ) ಪ್ರಮಾಣ ಶೇ.2.24ಕ್ಕೆ ಇಳಿಕೆಯಾಗಿದೆ. ಇದು ಕಳೆದ ವರ್ಷ ಶೇ . 2.78ರಷ್ಟು ಇತ್ತು.

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading
Advertisement
HD Revanna Bail I am not happy that Revanna has been released says HD Kumaraswamy
ರಾಜಕೀಯ2 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ4 mins ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

T20 World Cup 2024
ಕ್ರಿಕೆಟ್8 mins ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Davanagere News Marriage at an early age
ದಾವಣಗೆರೆ8 mins ago

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Ramayana Movie
ಸಿನಿಮಾ10 mins ago

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

gold rate today
ಚಿನ್ನದ ದರ18 mins ago

Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

pm narendra modi nomination varanasi
ಪ್ರಮುಖ ಸುದ್ದಿ58 mins ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

karnataka Rain Effected
ಬೆಂಗಳೂರು1 hour ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್1 hour ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್1 hour ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು1 hour ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ8 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ18 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ18 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ19 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ19 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌