IBPS Result: ಐಬಿಪಿಎಸ್ ಕ್ಲರ್ಕ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ - Vistara News

ಉದ್ಯೋಗ

IBPS Result: ಐಬಿಪಿಎಸ್ ಕ್ಲರ್ಕ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

IBPS Result: ಬ್ಯಾಂಕ್‌ ಉದ್ಯೋಗ (Bank job) ಆಕಾಂಕ್ಷಿಗಳು ಬಹು ಸಮಯಗಳಿಂದ ನಿರೀಕ್ಷಿಸುತ್ತಿದ್ದ ದಿನ ಬಂದೇ ಬಿಟ್ಟಿದೆ. ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್‌ (Institute of Banking Personnel Selection) ಕ್ಲರ್ಕ್ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇಂದು (ಏಪ್ರಿಲ್ 1) ಬಿಡುಗಡೆ ಮಾಡಿದೆ (IBPS Result). ಈ ಐಬಿಪಿಎಸ್ ಕ್ಲರ್ಕ್ ಮುಖ್ಯ ಪರೀಕ್ಷೆ (Main examination) 2024ರ ಫಲಿತಾಂಶವನ್ನು ಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ಮೂಲಕ ಪರಿಶೀಲಿಸಬಹುದು. ಫಲಿತಾಂಶವು ಏಪ್ರಿಲ್ 1ರಿಂದ ಏಪ್ರಿಲ್ 30ರವರೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯ. ಫಲಿತಾಂಶ ವೀಕ್ಷಿಸುವ ಸುಲಭ ವಿಧಾನ ಇಲ್ಲಿದೆ.

VISTARANEWS.COM


on

IBPS Result
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗ (Bank job) ಆಕಾಂಕ್ಷಿಗಳು ಬಹು ಸಮಯಗಳಿಂದ ನಿರೀಕ್ಷಿಸುತ್ತಿದ್ದ ದಿನ ಬಂದೇ ಬಿಟ್ಟಿದೆ. ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್‌ (Institute of Banking Personnel Selection) ಕ್ಲರ್ಕ್ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇಂದು (ಏಪ್ರಿಲ್ 1) ಬಿಡುಗಡೆ ಮಾಡಿದೆ (IBPS Result). ಈ ಐಬಿಪಿಎಸ್ ಕ್ಲರ್ಕ್ ಮುಖ್ಯ ಪರೀಕ್ಷೆ (Main examination) 2024ರ ಫಲಿತಾಂಶವನ್ನು ಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ಮೂಲಕ ಪರಿಶೀಲಿಸಬಹುದು. ಫಲಿತಾಂಶವು ಏಪ್ರಿಲ್ 1ರಿಂದ ಏಪ್ರಿಲ್ 30ರವರೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯ ಎಂದು ಪ್ರಕಟಣೆ ತಿಳಿಸಿದೆ.

ಐಬಿಪಿಎಸ್ ಕ್ಲರ್ಕ್ ಪರೀಕ್ಷೆಯ ಮೂಲಕ ಸುಮಾರು 4,045 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳ ನೇಮಕಾತಿಗಾಗಿ, 2023ರ ಜುಲೈ 1ರಿಂದ ಜುಲೈ 28ರವರೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಕೋರಲಾಗಿತ್ತು. ಐಬಿಪಿಎಸ್ ಕ್ಲರ್ಕ್ ಮುಖ್ಯ ಪರೀಕ್ಷೆಯನ್ನು ದೇಶಾದ್ಯಂತ 2023ರ ಅಕ್ಟೋಬರ್ 7ರಂದು ನಡೆಸಲಾಗಿತ್ತು.

ಐಬಿಪಿಎಸ್ ಕ್ಲರ್ಕ್ ಮುಖ್ಯ ಪರೀಕ್ಷೆ ಫಲಿತಾಂಶ ಹೀಗೆ ವೀಕ್ಷಿಸಿ

  • ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in.ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಹೋಮ್‌ಪೇಜ್‌ನಲ್ಲಿರುವ IBPS Clerk Mains Result 2024 ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ತೆರೆದುಕೊಳ್ಳುವ ಹೊಸ ಪೇಜ್‌ನಲ್ಲಿ ಅಭ್ಯರ್ಥಿಗಳು ತಮ್ಮ ವಿವರಗಳನ್ನು ನಮೂದಿಸಿ ಲಾಗಿನ್‌ ಆಗಿ.
  • Submit ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಮೂಡುತ್ತದೆ.
  • ಫಲಿತಾಂಶ ಪರಿಶೀಲಿಸಿ ಡೌನ್‌ಲೋಡ್‌ ಮಾಡಿ.
  • ಪ್ರಿಂಟ್‌ ಔಟ್‌ ತೆಗೆದಿಡಿ.

ಐಬಿಪಿಎಸ್‌ ಪಿಒ, ಎಸ್‌ಒ ಹುದ್ದೆಗಳ ಪರೀಕ್ಷೆಯ ಫಲಿತಾಂಶವೂ ಪ್ರಕಟ

ಐಬಿಪಿಎಸ್‌ ಪಿಒ (Probationary Officer) ಮತ್ತು ಎಸ್‌ಒ (Specialist Officer) ಪರೀಕ್ಷೆ, ಸಂದರ್ಶನದ ಫಲಿತಾಂಶವನ್ನೂ ಏಪ್ರಿಲ್‌ 1ರಂದು ಪ್ರಕಟಿಸಲಾಗಿದೆ. ಸ್ಪೆಷಲಿಸ್ಟ್ ಆಫೀಸರ್ ಮತ್ತು ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಆನ್‌ಲೈನ್‌ ಮುಖ್ಯ ಪರೀಕ್ಷೆ ಬರೆದವರು ಮತ್ತು ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳು ibps.in. ವೆಬ್‌ಸೈಟ್‌ನಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.

ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

  • ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in.ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಹೋಮ್‌ ಪೇಜ್‌ನಲ್ಲಿರುವ IBPS Final Result 2024 for PO, SO ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ತೆರೆದುಕೊಳ್ಳುವ ಹೊಸ ಪೇಜ್‌ನಲ್ಲಿ ಅಭ್ಯರ್ಥಿಗಳು ತಮ್ಮ ವಿವರಗಳನ್ನು ನಮೂದಿಸಿ ಲಾಗಿನ್‌ ಆಗಿ.
  • Submit ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಮೂಡುತ್ತದೆ.
  • ಫಲಿತಾಂಶ ಪರಿಶೀಲಿಸಿ ಡೌನ್‌ಲೋಡ್‌ ಮಾಡಿ.
  • ಪ್ರಿಂಟ್‌ ಔಟ್‌ ತೆಗೆದಿಡಿ.

ಐಬಿಪಿಎಸ್‌ ಪಿಒ ಪರೀಕ್ಷೆಯನ್ನು 2023ರ ನವೆಂಬರ್‌ 3ರಂದು ದೇಶಾದ್ಯಂತ ಇರುವ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸಂದರ್ಶನವನ್ನು ಜನವರಿ / ಫೆಬ್ರವರಿಯಲ್ಲಿ ಆಯೋಜಿಸಲಾಗಿತ್ತು. ಐಬಿಪಿಎಸ್‌ ಎಸ್‌ಒ ಲಿಖಿತ ಪರೀಕ್ಷೆಯನ್ನು ಜನವರಿ 28ರಂದು ನಡೆಸಲಾಗಿತ್ತು. ಫೆಬ್ರವರಿ / ಮಾರ್ಚ್‌ನಲ್ಲಿ ಸಂದರ್ಶನ ಆಯೋಜಿಸಲಾಗಿತ್ತು.

ಇದನ್ನೂ ಓದಿ: Prelims Result: ಎಸ್‌ಬಿಐ ನೇಮಕ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ 36 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 20. ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 20 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.

ಅಪೂರ್ಣ ಅಪ್ಲಿಕೇಷನ್‌ ತಿರಸ್ಕೃರಿಸಲಾಗುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Labour Day: ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.

VISTARANEWS.COM


on

labour Day
Koo

ಬೆಂಗಳೂರು: ಕಾರ್ಮಿಕರು ಯಾವುದೇ ಸಮಾಜ ಅಥವಾ ದೇಶದ ಶಕ್ತಿ. ಅವರಿಂದಲೇ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಕಾರ್ಮಿಕರು ರಾಷ್ಟ್ರೀಯ ಸಂಪತ್ತು. ಹೀಗೆ ಹಲವು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನೆರವಾ ಗುವ ಕಾರ್ಮಿಕರಿಗಾಗಿಯೇ ಒಂದು ದಿನವಿದೆ. ಅದುವೇ ಕಾರ್ಮಿಕರ ದಿನ. ಅಂದರೆ ಮೇ1. ಜಗತ್ತಿನ ಹಲವಾರು ದೇಶಗಳಲ್ಲಿ ಕಾರ್ಮಿಕ ದಿನವನ್ನು (Labour Day ) ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ಸಂದರ್ಭವನ್ನು ‘ಮೇ ದಿನ’ ಅಥವಾ ಕಾರ್ಮಿಕರ ದಿನ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಕೆಲಸ ಮಾಡುವವರಿಗೆ ವಿಶ್ರಾಂತಿ ದಿನವಾಗಿ ಆಚರಿಸಲಾಗುತ್ತದೆ

ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ಕಾರ್ಮಿಕ ದಿನವನ್ನು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದ ಇತಿಹಾಸ, ಮಹತ್ವ ಅರಿಯೋಣ.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಇತಿಹಾಸ

ಅಂತಾರರಾಷ್ಟ್ರೀಯ ಕಾರ್ಮಿಕ ದಿನದ ಇತಿಹಾಸವು 1889 ರಲ್ಲಿ ಯುರೋಪ್, ಪ್ಯಾರಿಸ್​​ನಲ್ಲಿ ನಡೆದ ಸೋಶಿಯಲಿಸ್ಟ್​ ಪಾರ್ಟಿಗಳ ಮೊದಲ ಸಭೆ (ಇಂಟರ್​ನ್ಯಾಷನಲ್​ ಕಾಂಗ್ರೆಸ್​​) ಮೇ 1 ರಂದು ನಡೆಯಿತು. ಅದನ್ನು ಕಾರ್ಮಿಕರಿಗೆ ಸಮರ್ಪಿಸಲು ಮತ್ತು ಅದನ್ನು ಅಂತರರಾಷ್ಟ್ರೀಯ ಕಾರ್ಮಿಕ ದಿನ ಎಂದು ಘೋಷಣೆ ಮಾಡಲಾಯಿತು. 1886 ರಲ್ಲಿ, ಅಮೆರಿಕದ ಕೆಲವು ಭಾಗಗಳಲ್ಲಿ ಕಾರ್ಮಿಕರು ಗರಿಷ್ಠ ಎಂಟು ಗಂಟೆಗಳ ಕೆಲಸದ ದಿನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಮುಷ್ಕರದ ಮೂರನೇ ದಿನ ಚಿಕಾಗೋದಲ್ಲಿ ಹಿಂಸಾಚಾರ ಉಂಟಾಯಿತು. ಈ ಘಟನೆಯನ್ನು ‘ದಿ ಹೇಮಾರ್ಕೆಟ್ ಅಫೇರ್’ ಎಂದು ಕರೆಯಲಾಯಿತು. ಇದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಸ್ಥಾಪನೆಗೆ ಕಾರಣವಾಯಿತು.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಮಹತ್ವ

ಕಾರ್ಮಿಕರ ಹೋರಾಟ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸುವುದು, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಅವರನ್ನು ಶೋಷಣೆಗೆ ಒಳಗಾಗದಂತೆ ತಡೆಯುವುದು ಕಾರ್ಮಿಕ ದಿನಾಚರಣೆಯ ಉದ್ದೇಶ. ಈ ಸಂದರ್ಭದಲ್ಲಿ, ಕಾರ್ಮಿಕರು ನ್ಯಾಯಯುತ ವೇತನ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗೆ ಒತ್ತಾಯಿಸಿ ಬೀದಿಗಳಲ್ಲಿ ಜಾಥಾ ನಡೆಸುತ್ತಾರೆ. ಮೇ ದಿನದಿಂದ ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಯು ಮಾಡಿದ ಐತಿಹಾಸಿಕ ಹೋರಾಟಗಳು ಮತ್ತು ಲಾಭಗಳನ್ನು ಸ್ಮರಿಸಲಾಗುತ್ತದೆ.

ಇದನ್ನೂ ಓದಿ: Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಧ್ಯೇಯ

ಪ್ರತಿ ವರ್ಷ, ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಆಚರಣೆಗಾಗಿ ಹೊಸ ಥೀಮ್ ಅನ್ನು ಘೋಷಿಸಲಾಗುತ್ತದೆ. ಬದಲಾಗುತ್ತಿರುವ ಹವಾಮಾನದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ಈ ವರ್ಷದ ಧ್ಯೇಯ.

ಕಾರ್ಮಿಕರ ದಿನದ ಬಗ್ಗೆ ವಾಸ್ತವಾಂಶಗಳು

ಮೊದಲ ಬಾರಿಗೆ ಯುಎಸ್ ಕಾರ್ಮಿಕ ದಿನವನ್ನು ಸೆಪ್ಟೆಂಬರ್ 5, 1882ರ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ಕೇಂದ್ರ ಕಾರ್ಮಿಕ ಒಕ್ಕೂಟವು ಯೋಜಿಸಿತು. ಕಾರ್ಮಿಕ ಚಳುವಳಿಯನ್ನು ಗೌರವಿಸುವ ದಿನವನ್ನು ಆಯೋಜಿಸುವ ಕಲ್ಪನೆ ಕೆನಡಾದಲ್ಲಿ ಹುಟ್ಟಿತು. 1872 ರಲ್ಲಿ ಮುಷ್ಕರ ನಿರತ ಕಾರ್ಮಿಕರಿಗೆ ಬೆಂಬಲವನ್ನು ತೋರಿಸಲು ಅವರು ‘ಒಂಬತ್ತು ಗಂಟೆಗಳ ಚಳುವಳಿ’ ನಡೆಸಿದರು.

ಒರೆಗಾನ್ 1887 ರಲ್ಲಿ ಕಾರ್ಮಿಕ ದಿನವನ್ನು ಕಾನೂನುಬದ್ಧ ರಜಾದಿನವಾಗಿ ಆಚರಿಸಿದ ಮೊದಲ ದೇಶ . 19ನೇ ಶತಮಾನದಲ್ಲಿ ಅಮೆರಿಕನ್ನರು ವಾರದಲ್ಲಿ ಏಳು ದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿ ಮೆರವಣಿಗೆ ನಡೆಸಿದ ಜಾಗದಲ್ಲಿ ಇನ್ನೂ ಕಾರ್ಮಿಕ ದಿನದ ಮೆರವಣಿಗೆ ಮಾಡಲಾಗುತ್ತದೆ. 1882 ರ ಕಾರ್ಮಿಕ ಮೆರವಣಿಗೆಯ ಉತ್ತರದ 20 ಬ್ಲಾಕ್​​ಗಳಲ್ಲಿನಡೆಯುತ್ತದೆ.

Continue Reading

ದೇಶ

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

Labour Day 2024: ದೇಶದಲ್ಲಿ ಬಡ ವರ್ಗದ ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹರು ಇದರ ಪ್ರಯೋಜನವನ್ನು ಪಡೆಯಬಹುದು. ಸರ್ಕಾರ ಕಾರ್ಮಿಕರಿಗಾಗಿ ಒದಗಿಸಿರುವ ವಿವಿಧ ಯೋಜನೆಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Labour Day 2024
Koo

ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು (Labour Day 2024) ಆಚರಿಸಲಾಗುತ್ತಿದೆ. ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಪಣ ತೊಡುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಭಾರತದಲ್ಲೂ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ (Labour and Employment) ನೀಡಿರುವ ಮಾಹಿತಿ ಪ್ರಕಾರ ದೇಶದ ಕಾರ್ಮಿಕರಿಗೆ ಇರುವ ಯೋಜನೆಗಳು ಹೀಗಿವೆ.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಪಿಎಂಜೆಜೆಬಿವೈ ಯೋಜನೆ (PMJJBY)

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಜೀವನ ಮತ್ತು ಅಂಗವೈಕಲ್ಯದಿಂದ ಕುಟುಂಬಕ್ಕೆ ರಕ್ಷಣೆಯನ್ನು ಒದಗಿಸಲು ರೂಪಿಸಲಾಗಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಗೆ 18 ರಿಂದ 50 ವರ್ಷಗಳ ಒಳಗಿನ ಜನರು ಪಡೆಯಬಹುದು. ಇದಕ್ಕಾಗಿ ಬ್ಯಾಂಕ್/ ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರಬೇಕು. ಖಾತೆಯಿಂದ ಹಣ ಸ್ವಯಂ ಡೆಬಿಟ್ ಆಗಲು ಅಥವಾ ಸಕ್ರಿಯಗೊಳಿಸಲು ಖಾತೆ ಹೊಂದಿರುವವರು ತಮ್ಮ ಒಪ್ಪಿಗೆಯನ್ನು ನೀಡಬೇಕು. ವಿಮಾದಾರನ ಮರಣವಾದರೆ ಆತನ ಕುಟುಂಬಕ್ಕೆ ಈ ಯೋಜನೆಯಡಿಯಲ್ಲಿ 2 ಲಕ್ಷ ರೂ. ವರೆಗೆ ವಿಮೆ ಪಾವತಿಸಲಾಗುವುದು. ಇದರ ವಾರ್ಷಿಕ ಪ್ರೀಮಿಯಂ 436 ರೂ. ಇದು ವಿಮಾದಾರರ ಖಾತೆಯಿಂದ ನೇರವಾಗಿ ಕಡಿತಗೊಳ್ಳುವುದು.


ಪಿ ಎಂ ಎಸ್ ಬಿ ವೈ ಯೋಜನೆ (PMSBY)

ಜೀವನ ಮತ್ತು ಅಂಗವೈಕಲ್ಯದಿಂದ ರಕ್ಷಣೆಯನ್ನು ಒದಗಿಸಲು ರೂಪಿಸಿರುವ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ (PMSBY) ಸಹ 18 ರಿಂದ 70 ವರ್ಷಗಳ ವಯೋಮಾನದ ಜನರಿಗೆ ನೀಡಲಾಗುತ್ತದೆ. ಬ್ಯಾಂಕ್, ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರುವವರು ಸ್ವಯಂ ಡೆಬಿಟ್‌ಗೆ ಸೇರಲು ಅಥವಾ ಸಕ್ರಿಯಗೊಳಿಸಲು ಒಪ್ಪಿಗೆಯನ್ನು ನೀಡಬೇಕು. ಈ ಯೋಜನೆಯಡಿಯಲ್ಲಿ ಅಪಾಯದ ಕವರೇಜ್ ವಿಮಾದಾರನ ಮರಣ ಅಥವಾ ಸಂಪೂರ್ಣ ಶಾಶ್ವತ ಅಂಗವೈಕಲ್ಯ ಸಂದರ್ಭದಲ್ಲಿ 2 ಲಕ್ಷ ರೂ. ಮತ್ತು ಭಾಗಶಃ ಶಾಶ್ವತ ಅಂಗವೈಕಲ್ಯಕ್ಕೆ 1 ಲಕ್ಷ ರೂ. ನೀಡಲಾಗುತ್ತದೆ. ಅಪಘಾತದ ಕಾರಣ ಪ್ರೀಮಿಯಂ ಮೊತ್ತ ವರ್ಷಕ್ಕೆ 20 ರೂ. ಇದಕ್ಕಾಗಿ ಖಾತೆದಾರರ ಬ್ಯಾಂಕ್, ಪೋಸ್ಟ್ ಆಫೀಸ್ ಖಾತೆಯಿಂದ ‘ಆಟೋ-ಡೆಬಿಟ್’ ಮೂಲಕ ಕಡಿತಗೊಳಿಸಬೇಕು.

ಎಬಿಪಿಎಂಜೆಎವೈ (ABPMJAY)

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ (ABPMJAY) ವಾರ್ಷಿಕ ಆರೋಗ್ಯ ರಕ್ಷಣೆಗಾಗಿ 27 ರೂ. ಪಾವತಿಸಬೇಕು. ಇದರ ವಿಶೇಷತೆ ಎಂದರೆ 1949 ರ ಚಿಕಿತ್ಸಾ ವಿಧಾನಗಳಿಗೆ ಅನುಗುಣವಾಗಿ ದ್ವಿತೀಯ ಮತ್ತು ತೃತೀಯ ಆರೈಕೆ ಆಸ್ಪತ್ರೆಗೆ ಅರ್ಹ ಕುಟುಂಬಕ್ಕೆ 5 ಲಕ್ಷ ರೂ. ವರೆಗೆ ವಿಮೆ ನೀಡಲಾಗುತ್ತದೆ.

ಶ್ರಮ ಯೋಗಿ ಮಾನ್-ಧನ್ (PM-SYM)

ವೃದ್ಧಾಪ್ಯ ರಕ್ಷಣೆಯನ್ನು ಒದಗಿಸುವ ಸಲುವಾಗಿ ಭಾರತ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿತು. ಇದು 60 ವರ್ಷ ವಯಸ್ಸನ್ನು ತಲುಪಿದ ಅನಂತರ 3000 ರೂ. ಮಾಸಿಕ ಪಿಂಚಣಿ ನೀಡುತ್ತದೆ. 18-40 ವರ್ಷ ವಯಸ್ಸಿನ ಕಾರ್ಮಿಕರ ಮಾಸಿಕ ಆದಾಯ ರೂ. 15,000 ಅಥವಾ ಅದಕ್ಕಿಂತ ಕಡಿಮೆ ಮತ್ತು ಇಪಿಎಫ್‌ಒ/ಇಎಸ್‌ಐಸಿ/ಎನ್‌ಪಿಎಸ್ (ಸರ್ಕಾರಿ ನಿಧಿ) ಸದಸ್ಯರಲ್ಲದವರು PM-SYM ಯೋಜನೆಗೆ ಸೇರಬಹುದು. ಈ ಯೋಜನೆಯಡಿಯಲ್ಲಿ ಫಲಾನುಭವಿಯು ಶೇ. 50 ಮಾಸಿಕ ಕೊಡುಗೆಯನ್ನು ಪಾವತಿಸಬೇಕು ಮತ್ತು ಸಮಾನ ಹೊಂದಾಣಿಕೆಯ ಕೊಡುಗೆಯನ್ನು ಕೇಂದ್ರ ಸರ್ಕಾರವು ಪಾವತಿಸುತ್ತದೆ. ಯೋಜನೆಯ ಅಡಿಯಲ್ಲಿ ಸರ್ಕಾರದ ಕೊಡುಗೆಗಾಗಿ ಹಣವನ್ನು ಎಲ್ಐಸಿ ನಿಧಿ ವ್ಯವಸ್ಥಾಪಕರಿಗೆ ಒದಗಿಸಲಾಗುತ್ತದೆ.


ಇವುಗಳು ಮಾತ್ರವಲ್ಲದೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಮೂಲಕ ಸಾರ್ವಜನಿಕ ವಿತರಣಾ ವ್ಯವಸ್ಥೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಗರೀಬ್ ಕಲ್ಯಾಣ್ ರೋಜ್ ಗಾರ್ ಅಭಿಯಾನ, ಮಹಾತ್ಮ ಗಾಂಧಿ ಬಂಕರ್ ಬಿಮಾ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪಿಎಂಎಸ್‌ವನಿಧಿ, ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಇತ್ಯಾದಿಗಳು ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಅವರ ಅರ್ಹತೆಯ ಮಾನದಂಡಗಳಿಗೆ ಅನುಗುಣವಾಗಿ ಲಭ್ಯವಿದೆ.

ಸಾಮಾಜಿಕ ಭದ್ರತಾ ಯೋಜನೆಗಳು, ಕಲ್ಯಾಣ ಯೋಜನೆಗಳ ಬಗ್ಗೆ 16- 59 ವರ್ಷ ವಯಸ್ಸಿನ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ (NDUW) ಅನ್ನು ರಚಿಸುವ ಉದ್ದೇಶದಿಂದ ಇ-ಶ್ರಾಮ್ ಪೋರ್ಟಲ್ ಅನ್ನು 2021ರ ಆಗಸ್ಟ್, ನಲ್ಲಿ ಪ್ರಾರಂಭಿಸಲಾಗಿದೆ.

Continue Reading

ದೇಶ

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

ಇ-ಶ್ರಮ ಕಾರ್ಡ್ ಮೂಲಕ ಅವರಿಗೆ (Labour Day 2024) ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಕಾರ್ಮಿಕ ದಿನಾಚರಣೆ (ಮೇ 1) ಹಿನ್ನೆಲೆಯಲ್ಲಿ ಈ ಯೋಜನೆಯ ವಿವರ ಇಲ್ಲಿ ನೀಡಲಾಗಿದೆ.

VISTARANEWS.COM


on

Labour Day 2024
Koo

ಅಸಂಘಟಿತ ವಲಯ(Unorganised sectors)ದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ (Labour Day 2024) ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ (e-Shram) ಯೋಜನೆ ಜಾರಿಗೆ ತಂದಿದೆ. ಇ-ಶ್ರಮ ಕಾರ್ಡ್ ಮೂಲಕ ಅವರಿಗೆ ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಹಾಗಾದರೆ ಇ-ಶ್ರಮ ಕಾರ್ಡ್‌ ಎಂದರೇನು? ಹೆಸರು ನೋಂದಾಯಿಸುವುದು ಹೇಗೆ? ಯಾರೆಲ್ಲ ಅರ್ಹರು? ಮುಂತಾದ ವಿವರ ಇಲ್ಲಿದೆ.

ಏನಿದು ಇ-ಶ್ರಮ ಕಾರ್ಡ್‌?

ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶವೇ ಈ ಇ-ಶ್ರಮ ಕಾರ್ಡ್. ಅಂದರೆ ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಪ್ರಯೋಜನಗಳನ್ನು ಒದಗಿಸಲು ಕೇಂದ್ರ ಸರ್ಕಾರ ಪ್ರಾರಂಭಿಸಿದ ಡಿಜಿಟಲ್ ವೇದಿಕೆ ಇದಾಗಿದೆ. ಇದು ವಿಶಿಷ್ಟ 12-ಅಂಕಿಯ ಗುರುತಿನ ಸಂಖ್ಯೆಯನ್ನು ಒಳಗೊಂಡಿದೆ. ಇದರಲ್ಲಿ ಹೆಸರು, ವಯಸ್ಸು, ಲಿಂಗ, ಉದ್ಯೋಗ ಮತ್ತು ಕೆಲಸಗಾರನ ಕುರಿತು ಇತರ ಅಗತ್ಯ ಮಾಹಿತಿ ಇರುತ್ತದೆ.

ಯಾರೆಲ್ಲ ಅರ್ಹರು?

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ಬೀದಿಬದಿ ವ್ಯಾಪಾರಿಗಳು, ಪತ್ರಿಕೆ ಮಾರಾಟಗಾರರು, ಇಟ್ಟಿಗೆ ಗೂಡು ಕೆಲಸಗಾರರು, ವಲಸೆ ಕಾರ್ಮಿಕರು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ತಮ್ಮ ಹೆಸರನ್ನು ಇದರಲ್ಲಿ ನೋಂದಾಯಿಸಬಹುದು. ಜತೆಗೆ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು ʼಇತರೆ ವರ್ಗʼಗಳಡಿ ನೋಂದಾಯಿಸಬಹುದು. 16ರಿಂದ 59 ವಯೋಮಾನದವರು, ಆದಾಯ ತೆರಿಗೆ ಪಾವತಿಸದವರು, ಭವಿಷ್ಯನಿಧಿ ಹಾಗೂ ಇಎಸ್​ಐ ಫಲಾನುಭವಿಯಾಗಿರದವರು ಇದಕ್ಕೆ ಅರ್ಹರು.

ಪ್ರಯೋಜನಗಳೇನು?

  • ನೋಂದಾಯಿಸಿಕೊಂಡ ಕಾರ್ಮಿಕರು ಭಾಗಶಃ ಅಂಗವೈಕಲ್ಯಕ್ಕೆ ಒಳಗಾದರೆ 1 ಲಕ್ಷ ರೂ.ಗಿಂತ ಪರಿಹಾರ ಲಭ್ಯ.
    ಆಕಸ್ಮಿಕವಾಗಿ ಮೃತಪಟ್ಟರೆ 2 ಲಕ್ಷ ರೂ. ಪರಿಹಾರ ಲಭ್ಯ.
  • ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿದರೆ ಸಾಮಾಜಿಕ ಭದ್ರತಾ ಯೋಜನೆಯ ಲಾಭ ದೊರೆಯುತ್ತದೆ.
    ಪಿಂಚಣಿ ವ್ಯವಸ್ಥೆಯೂ ಲಭ್ಯವಿದ್ದು, ತಿಂಗಳಿಗೆ 3,000 ರೂ. ಸಿಗುತ್ತದೆ.

ಆನ್‌ಲೈನ್‌ ಮೂಲಕ ಮಾಡುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://register.eshram.gov.in/#/user/selfಗೆ ಭೇಟಿ ನೀಡಿ.
  • ಮುಖಪುಟದ ವಿವರಗಳನ್ನು ಪರಿಶೀಲಿಸಿ ಮತ್ತು ಸ್ವಯಂ ನೋಂದಣಿ (Self Registration) ಆಯ್ಕೆ ಕ್ಲಿಕ್‌ ಮಾಡಿ.
  • ಆಧಾರ್‌ ಲಿಂಕ್‌ ಮಾಡಲಾದ ಮೊಬೈಲ್‌ ಸಂಖ್ಯೆ ನಮೂದಿಸಿ.
  • ಕ್ಯಾಪ್ಚಾ ಕೋಡ್‌ ನಮೂದಿಸಿ.
  • ಇಪಿಎಫ್‌ಒ ಮತ್ತು ಇಎಸ್ಐಸಿ ಹೌದು ಅಥವಾ ಇಲ್ಲ ಆಯ್ಕೆಯನ್ನು ಆರಿಸಿ.
  • Send OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ತೆರೆದು ಅಗತ್ಯ ವಿವರಗಳನ್ನು ನೀಡಿ ಭರ್ತಿ ಮಾಡಿ.
  • ಕೇಳಿರುವ ಎಲ್ಲ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • Submit ಬಟನ್‌ ಕ್ಲಿಕ್‌ ಮಾಡಿ. ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಆಫ್‌ಲೈನ್‌ನಲ್ಲಿ ನೋಂದಣಿ ಮಾಡುವ ವಿಧಾನ

ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಕ್ಕೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಯಶಸ್ವಿ ನೋಂದಣಿಯ ಬಳಿಕ ಫಲಾನುಭವಿಗೆ ಸ್ಥಳದಲ್ಲಿಯೇ ಗುರುತಿನ ಚೀಟಿ ವಿತರಿಸಲಾಗುತ್ತದೆ. ಗಮನಿಸಿ ನೋಂದಣಿಗೆ ಹೆಸರು, ವಿಳಾಸ ಪುರಾವೆ, ವೃತ್ತಿ, ಶೈಕ್ಷಣಿಕ ಮಾಹಿತಿ, ಕುಟುಂಬದ ವಿವರ, ಆಧಾರ್‌ ಕಾರ್ಡ್‌, ವಿದ್ಯುತ್‌ ಬಿಲ್‌, ಜನನ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್‌ ಪಾಸ್‌ಬುಕ್‌ ಮಾಹಿತಿ, ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡಿದ ಮೊಬೈಲ್‌ ಸಂಖ್ಯೆ ಇದ್ಯಾದಿ ದಾಖಲೆ ಒದಗಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌-14434ಕ್ಕೆ ಕರೆ ಮಾಡಿ. ಇಮೇಲ್‌ ಐಡಿ- eshramcare-mole@gov.in ಸಂಪರ್ಕಿಸಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading
Advertisement
Shata Chandika Yaga
ಚಿಕ್ಕಬಳ್ಳಾಪುರ45 mins ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ1 hour ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ2 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ2 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ2 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ2 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ2 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ3 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ3 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Ikbal hussain
ಕರ್ನಾಟಕ3 hours ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌